Government of India, Ministry of Civil Aviation has allowed passengers traveling from Ukraine to travel by transit under India- Qatar bilateral air bubble arrangement.
ಉಕ್ರೇನ್ ಮೇಲೆ ರಷ್ಯಾ ದಾಳಿ ಪ್ರಾರಂಭಿಸಿದ ಬಳಿಕ ಉಕ್ರೇನ್ನ ವಾಯುಪ್ರದೇಶ ಮುಚ್ಚಿಹೋಗಿದೆ. ಇದೀಗ ಭಾರತೀಯರು ಕತಾರ್ನಿಂದ ಭಾರತಕ್ಕೆ ಮರಳಲು ಮೊದಲು ಕತಾರ್ ತಲುಪಬೇಕಾಗಿದೆ. ಆದರೆ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರು ಹೇಗೆ ಕತಾರ್ ಪ್ರವೇಶಿಸಬೇಕೆಂಬ ವಿಷಯವನ್ನು ಸ್ಪಷ್ಟಪಡಿಸಿಲ್ಲ. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!
ಈ ಬಗ್ಗೆ ಕತಾರ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವಿಟ್ಟರ್ನಲ್ಲಿ ಭಾರತೀಯ ಸರ್ಕಾರ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯ ಉಕ್ರೇನ್ನಲ್ಲಿರುವ ಭಾರತದ ಪ್ರಯಾಣಿಕರಿಗೆ ಕತಾರ್ನಿಂದ ಭಾರತಕ್ಕೆ ಹಿಂದಿರುಗಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕೆ ಉಕ್ರೇನ್ನಿಂದ ಭಾರತೀಯರು ಏರ್ ಬಬಲ್ ವ್ಯವಸ್ಥೆಯ ಅಡಿಯಲ್ಲಿ ಸಾರಿಗೆ ಮುಖಾಂತರ ಕತಾರ್ ಪ್ರವೇಶಿಸಬಹುದು ಎಂದು ತಿಳಿಸಿದೆ.
ಎರಡನೇ ಜಾಗತಿಕ ಯುದ್ಧದ ಬಳಿಕ ನಡೆದ ಶೀತಲ ಸಮರದಲ್ಲಿ ಜಗತ್ತು ಎರಡು ಭಾಗಗಳಾಗಿ ವಿಭಜನೆಗೊಂಡಿತ್ತು. ಒಂದು ಗುಂಪಿಗೆ ಅಮೆರಿಕ ನಾಯಕತ್ವ ವಹಿಸಿದರೆ ಮತ್ತೊಂದಕ್ಕೆ ಸೋವಿಯತ್ ಯೂನಿಯನ್ ನಾಯಕತ್ವ ವಹಿಸಿತ್ತು. ಯುಎಸ್ಎಸ್ಆರ್ನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು 1949ರಲ್ಲಿ ಅಮೆರಿಕ, ಕೆನಡಾ ಸೇರಿ 12 ದೇಶಗಳು ನಾರ್ತ್ ಅಟ್ಲಾಂಟಿಕ್ ಟ್ರೀಟಿ(ನ್ಯಾಟೋ) ಆರಂಭಿಸಿದವು. ಸದ್ಯ ನ್ಯಾಟೋ ಸದಸ್ಯ ರಾಷ್ಟ್ರಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಈ ಪೈಕಿ ಯಾವುದೇ ದೇಶದ ಮೇಲೆ ದಾಳಿ ನಡೆದರೂ ಅದು ನನ್ನ ಸಂಸ್ಥೆ ಮೇಲಿನ ದಾಳಿ ಎಂದು ಭಾವಿಸಲಾಗುತ್ತದೆ ಎಂದು ಆರಂಭದಲ್ಲಿಯೇ ನ್ಯಾಟೋ ಘೋಷಿಸಿತ್ತು. ಆದರೆ 1991ರ ಡಿಸೆಂಬರ್ನಲ್ಲಿ ಯುಎಸ್ಎಸ್ಆರ್ ಛಿದ್ರವಾದಾಗ ಪರಿಸ್ಥಿತಿ ಬದಲಾಯಿತು. ಅಮೆರಿಕ ವಿಶ್ವದ ದೊಡ್ಡಣ್ಣನಾಗಿ ಅವತರಿಸಿತು.
ರಷ್ಯಾ ಪರ ದೇಶಗಳು ಭಾರತ
ರಷ್ಯಾಗೆ ಬಹಿರಂಗವಾಗಿ ಬೆಂಬಲ ಘೋಷಿಸಿಲ್ಲ. ಆದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಷ್ಯಾದ ನಿಲುವನ್ನು ಖಂಡಿಸಿಲ್ಲ. ಉಕ್ರೇನ್ ಸಾರ್ವಭೌಮತ್ವದ ಬಗ್ಗೆ ಮಾತನಾಡಿಲ್ಲ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎನ್ನುತ್ತಿದೆ. 2014ರಲ್ಲಿ ರಷ್ಯಾ ಕ್ರಿಮಿಯಾವನ್ನು ವಶಕ್ಕೆ ಪಡೆದಾಗಲೂ ಭಾರತ ವಿರೋಧಿಸಿರಲಿಲ್ಲ. ಭಾರತದ ಸ್ಥಿತಿ ಹೇಗಿದೆ ಎಂದರೆ ಅಮೆರಿಕ ಜೊತೆ ನಿಲ್ಲುತ್ತಿಲ್ಲ. ರಷ್ಯಾ ಜೊತೆಗೂ ಬಹಿರಂಗವಾಗಿ ಕೈಜೋಡಿಸುತ್ತಿಲ್ಲ. ಯಾರನ್ನು ಬಿಟ್ಟುಕೊಡುವ ಸ್ಥಿತಿಯಲ್ಲಿ ಭಾರತ ಇಲ್ಲ. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!
ಚೀನಾ
ನ್ಯಾಟೋ ವಿಸ್ತರಣೆ ಚೀನಾಗೂ ಇಷ್ಟವಿಲ್ಲ. ಇದನ್ನು ಬಹಿರಂಗವಾಗಿ ರಷ್ಯಾ ಜೊತೆ ಸೇರಿ ಘೋಷಿಸಿದೆ. ಈಗ ನಡೆಯುತ್ತಿರುವ ಯುದ್ಧವನ್ನು ಯುದ್ಧ ಎಂದೇ ಚೀನಾ ಪರಿಗಣಿಸಿಲ್ಲ.
ಪಾಕಿಸ್ತಾನ
ರಷ್ಯಾ ಪ್ರವಾಸದಲ್ಲಿ ಇಮ್ರಾನ್ ಇದ್ದಾರೆ. ಯುದ್ಧ ಶುರುವಾಗಿದ್ದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ. ಎಂಥಾ ಟೈಮಲ್ಲಿ ಬಂದಿದ್ದೇನೆ.. ಸಿಕ್ಕಾಪಟ್ಟೆ ಎಕ್ಸೈಟ್ ಆಗ್ತಿದೆ ಎಂದು ಇಮ್ರಾನ್ ಹೇಳಿದ್ದಾರೆ.
ಕ್ರೊವೇಷಿಯಾ
2009ರಲ್ಲಿಯೇ ನ್ಯಾಟೋವನ್ನು ಸೇರಿದೆ. ಆದರೆ ಗಡಿ ಭದ್ರತೆ ವಿಚಾರದಲ್ಲಿ ಕ್ರೊವೇಷಿಯಾ ರಷ್ಯಾ ಪರವಾಗಿದೆ. ಜೊತೆಗೆ ಮೊನ್ನೆ ವಿಶ್ವಸಂಸ್ಥೆಯಲ್ಲಿ, ಉಕ್ರೇನ್ ದೇಶವನ್ನು ಮೂರು ಭಾಗ ಮಾಡಿದ ರಷ್ಯಾ ನಿಲುವನ್ನು ಖಂಡಿಸಿದೆ.
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿರುವುದರಿಂದ ಇದರ ಪ್ರಭಾವ ನೇರವಾಗಿ ಜಾಗತಿಕ ಮಾರುಕಟ್ಟೆ ಮೇಲೆ ಬಿದ್ದಿದೆ. ಇದರಲ್ಲಿ ಭಾರತೀಯ ಷೇರು ಮಾರುಕಟ್ಟೆ ಕೂಡಾ ಹೊರತಾಗಿಲ್ಲ.
ಇಂದು ಮುಂಬೈ ಷೇರುಪೇಟೆ ಹಾಗೂ ರಾಷ್ಟ್ರೀಯ ಷೇರುಪೇಟೆಗಳಲ್ಲಿ ಭಾರೀ ನಷ್ಟ ಉಂಟಾಗಿದೆ. ಒಂದೇ ದಿನ 13 ಲಕ್ಷ ಕೋಟಿ ರೂ. ನಷ್ಟವಾಗಿದೆ. ಬಿಎಸ್ಇ ಸೂಚ್ಯಂಕದಲ್ಲಿ 2,702 ಅಂಶ, ಎನ್ಎಸ್ಇ ಸೂಚ್ಯಂಕದಲ್ಲಿ 815.30 ಅಂಶ ನಷ್ಟವಾಗಿದೆ. ಈ ವರ್ಷದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಷೇರುಪೇಟೆ ನಷ್ಟಹೋಗಿರುವುದು ಇದೇ ಮೊದಲು.
ವಿದೇಶಿ ಹೂಡಿಕೆದಾರರ ಜೊತೆ ದೇಶಿಯ ಇನ್ವೆಸ್ಟರ್ಗಳು ಕೂಡ ಷೇರುಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಷೇರುಪೇಟೆಗೆ ಭಾರೀ ನಷ್ಟವಾಗಿದೆ. ಡಾಲರ್ ಎದುರು ರೂ. ಮೌಲ್ಯ 75.61 ರೂ.ಗೆ ಕುಸಿದಿದೆ. ಇನ್ನೂ ಉಕ್ರೇನ್ ಮೇಲಿನ ದಾಳಿಯಿಂದ ದೇಶದ ಮೇಲೆ ಏನೇನು ಪರಿಣಾಮ ಆಗಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!
100 ಡಾಲರ್ ದಾಟಿದ ಕಚ್ಛಾ ತೈಲ ಬೆಲೆ:
ಕಳೆದ 2-3 ದಿನಗಳಿಂದ 97.98 ಡಾಲರ್(7,429 ರೂ.) ಆಚೆ ಈಚೆ ಇದ್ದ 1 ಬ್ಯಾರಲ್ ಕಚ್ಛಾ ತೈಲದ ಬೆಲೆ ಯುದ್ಧ ಪ್ರಾರಂಭವಾಗುತ್ತಿದ್ದಂತೆ 105 ಡಾಲರ್(7,961 ರೂ.) ದಾಟಿದೆ. ಇದು 2014ರ ಬಳಿಕದ ಗರಿಷ್ಠ ಮಟ್ಟವಾಗಿದೆ.
ತೈಲ ಉತ್ಪಾದನೆಯಲ್ಲಿ ಜಗತ್ತಿನಲ್ಲಿಯೇ ಎರಡನೇ ಅತೀದೊಡ್ಡ ದೇಶ ರಷ್ಯಾ. ಯುರೋಪ್ ರಾಷ್ಟ್ರಗಳಿಗೆ ಶೇ.35 ರಷ್ಟು ಕಚ್ಚಾ ತೈಲ ರಷ್ಯಾದಿಂದಲೇ ಪೂರೈಕೆಯಾಗುತ್ತದೆ. ಯುದ್ಧ ನಿಲ್ಲದೇ ಹೀಗೆ ಮುಂದುವರೆದಲ್ಲಿ, ಆರ್ಥಿಕ ನಿರ್ಬಂಧಗಳ ಹೇರಿಕೆ ಹೆಚ್ಚಳವಾದಲ್ಲಿ ತೈಲ ಬೆಲೆ ಏರಿಕೆಗೆ ಕಡಿವಾಣ ಹಾಕಲಾಗದ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ.
ಪಂಚರಾಜ್ಯ ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಕನಿಷ್ಟ 7-8 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ.
ಚಿನ್ನದ ಬೆಲೆ ಶೇ.30 ರಷ್ಟು ಹೆಚ್ಚಳ:
ಯುದ್ಧದ ಪ್ರಭಾವ ನೇರವಾಗಿ ಬಂಗಾರದ ಮೇಲೆ ಬಿದ್ದಿದೆ. ಕೇವಲ ಒಂದೇ ದಿನದಲ್ಲಿ ಬಂಗಾರದ ಬೆಲೆ ಶೇ.30 ರಷ್ಟು ಹೆಚ್ಚಿದೆ. ಇಂದು 10 ಗ್ರಾಂ. 24 ಕ್ಯಾರೆಟ್ ಚಿನ್ನದ ಬೆಲೆ 2,500 ರೂ. ಹೆಚ್ಚಿದ್ದು, 54 ಸಾವಿರದ ಗಡಿದಾಟಿದೆ. ಆಭರಣದ ಚಿನ್ನದ ಬೆಲೆ 1,000 ರೂ. ಹೆಚ್ಚಿದ್ದು, 47ಸಾವಿರದ ಅಂಚಿನಲ್ಲಿದೆ. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್
ರಸಗೊಬ್ಬರ ಪೂರೈಕೆ ವ್ಯತ್ಯಯ/ಬೆಲೆ ಹೆಚ್ಚಳ ಸಾಧ್ಯತೆ:
ಭಾರತಕ್ಕೆ ಡಿಎಪಿ ಸೇರಿ ಮೂರು ಬಗೆಯ ರಸಗೊಬ್ಬರವನ್ನು ಪೂರೈಸುವ ದೇಶಗಳಲ್ಲಿ ರಷ್ಯಾ ಪ್ರಮುಖ. ಯುದ್ಧದಿಂದ ಭಾರತಕ್ಕೆ ರಸಗೊಬ್ಬರ ಆಮದು ಕಷ್ಟಕರವಾಗಿದ್ದು, ಮುಂಗಾರು ಬೆಳೆಯ ಸಿದ್ಧತೆಯಲ್ಲಿರುವ ರೈತರಿಗೆ ಸಮಸ್ಯೆಯಾಗಲಿದೆ ಜೊತೆಗೆ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆ ಇದೆ.
ಸೂರ್ಯಕಾಂತಿ ಎಣ್ಣೆ ದರ ಹೆಚ್ಚಳ:
ಉಕ್ರೇನ್ನಿಂದ ಭಾರತಕ್ಕೆ ಸೂರ್ಯಕಾಂತಿ ಎಣ್ಣೆ ಹೆಚ್ಚಿನ ಮಟ್ಟದಲ್ಲಿ ಆಮದು ಆಗುತ್ತದೆ. ಯುದ್ಧದಿಂದ ಆಮದು ಕಷ್ಟಸಾಧ್ಯವಾಗುವುದರಿಂದ ಸೂರ್ಯಕಾಂತಿ ಎಣ್ಣೆ ದುಬಾರಿಯಾಗುವ ಸಾಧ್ಯತೆ ಇದೆ.
ಮದ್ಯ ಪ್ರಿಯರಿಗೆ ಶಾಕ್:
ಯುದ್ಧದಿಂದ ಮದ್ಯದ ಬೆಲೆಯೂ ಹೆಚ್ಚಾಗುವ ಸಾಧ್ಯತೆ ಇದೆ. ಉಕ್ರೇನ್ ವಿಶ್ವದಲ್ಲೇ ಅತೀ ಹೆಚ್ಚು ಬಾರ್ಲಿ ಪೂರೈಸುವ 5 ಪ್ರಮುಖ ದೇಶಗಳಲ್ಲಿ ಒಂದು. ಮದ್ಯ ತಯಾರಿಕೆಗೆ ಬಾರ್ಲಿ ಅಗತ್ಯ. ಯುದ್ಧದಿಂದಾಗಿ ಬಾರ್ಲಿ ಪೂರೈಕೆ ಏರುಪೇರಾಗುವುದರಿಂದ ಮದ್ಯದ ಬೆಲೆಯೂ ಹೊರೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಯುದ್ಧ ವಿಚಾರದಲ್ಲಿ ಇತರ ರಾಷ್ಟ್ರಗಳು ಮೂಗು ತೂರಿಸಬೇಡಿ – ಪುಟಿನ್ ನೇರ ಎಚ್ಚರಿಕೆ
ಮೊಬೈಲ್ ಉದ್ಯಮಕ್ಕೆ ಆಘಾತ:
ಮೊಬೈಲ್ ಬಿಡಿಭಾಗಗಳ ಪೂರೈಕೆಯಲ್ಲಿ ರಷ್ಯಾ ಮುಂದಿದೆ. ಯುದ್ಧದಿಂದ ಆಮದು-ರಫ್ತಿಗೆ ತೊಡಕಾಗುವ ಸಾಧ್ಯತೆ ಇರುವುದರಿಂದ ಮೊಬೈಲ್ ಉದ್ಯಮಕ್ಕೆ ಕಷ್ಟವಾಗಲಿದೆ.
ವಾಹನ ಉದ್ಯಮಕ್ಕೆ ಪೆಟ್ಟು:
ವಾಹನ ಎಕ್ಸಾಸ್ಟ್ ವ್ಯವಸ್ಥೆಗೆ ಪಲಾಡಿಯಂ ಲೋಹ ಅಗತ್ಯ. ಪಲಾಡಿಯಂ ಲೋಹವನ್ನು ಹೆಚ್ಚು ರಫ್ತು ಮಾಡುವ ದೇಶ ರಷ್ಯಾ. ಯುದ್ಧ ಬಿಕ್ಕಟ್ಟಿನ ಬಳಿಕ ಪಲಾಡಿಯಂ ಲೋಹದ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಕೆಮಿಕಲ್ಸ್, ಕಬ್ಬಿಣ, ಉಕ್ಕು, ಪ್ಲಾಸ್ಟಿಕ್ಗಳೊಂದಿಗೆ ಕೈಗಾರಿಕೆಯಲ್ಲಿ ಬಳಕೆಯಾಗುವ ರಿಯಾಕ್ಟರ್ಸ್, ಬಾಯ್ಲರ್ ಯಂತ್ರ, ಮೆಕಾನಿಕಲ್ ವಸ್ತು, ಎಣ್ಣೆ ಬೀಜ ಕೂಡಾ ದುಬಾರಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಉಕ್ರೇನ್ ಮೇಲೆ ಕಣ್ಣು ಯಾಕೆ? ರಷ್ಯಾಗೆ ಯಾಕೆ ಯಾರ ಭಯವಿಲ್ಲ?
ಕೇವಲ ರಷ್ಯಾ ಹಾಗೂ ಉಕ್ರೇನ್ನಿಂದ ಆಮದು ಆಗುವ ವಸ್ತುಗಳಿಗಷ್ಟೇ ಭಾರತದಲ್ಲಿ ಪೆಟ್ಟು ಬೀಳದೇ ರಫ್ತಿನಿಂದಲೂ ನಷ್ಟವಾಗುವ ಸಾಧ್ಯತೆ ಇದೆ. ಭಾರತದಿಂದ ಉಕ್ರೇನ್ಗೆ ರಫ್ತಾಗುವ ವಸ್ತುಗಳ ಪೈಕಿ ಸಿಂಹಭಾಗ ಔಷಧಿಗಳದ್ದಾಗಿದೆ. ಮೌಲ್ಯದ ಲೆಕ್ಕದಲ್ಲಿ ಉಕ್ರೇನ್ಗೆ ಔಷಧಿ ರಫ್ತು ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಅತೀದೊಡ್ಡ ದೇಶವಾಗಿದೆ.
ಹಣ್ಣು, ಕಾಫಿ, ಟೀ ಪುಡಿ ಉದ್ಯಮಕ್ಕೂ ಯುದ್ಧದಿಂದ ಹೊಡೆತ ಬೀಳಲಿದ್ದು, ಇವುಗಳ್ನು ಉಕ್ರೇನ್ಗೆ ಭಾರತ ರಫ್ತು ಮಾಡುತ್ತದೆ.
ನವದೆಹಲಿ: ರಷ್ಯಾ-ಉಕ್ರೇನ್ ಮೇಲೆ ಯುದ್ಧ ಆರಂಭಿಸುತ್ತಿದ್ದಂತೆ ಭಾರತ ಮಧ್ಯಪ್ರವೇಶಿಸಬೇಕೆಂಬ ಮಾತು ಕೇಳಿಬರುತ್ತಿತ್ತು. ಇದೀಗ ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಇಂದು ರಾತ್ರಿ ಮಾತುಕತೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಅರಂಭಿಸುತ್ತಿದ್ದಂತೆ ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ. ಇದರಿಂದ ಉಕ್ರೇನ್ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: Russia-Ukraine crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ
ರಷ್ಯಾದ 5 ಯುದ್ಧ ವಿಮಾನ, 2 ಹೆಲಿಕಾಪ್ಟರ್, ಟ್ಯಾಂಕ್ ಮತ್ತು ಟ್ರಕ್ಗಳನ್ನು ಈಗಾಗಲೇ ಉಕ್ರೇನ್ ಮಿಲಿಟರಿ ಪಡೆ ಹೊಡೆದುರುಳಿಸಿದೆ. ನಾವು ಈ ಮೊದಲು ರಷ್ಯಾದ ಮಿಲಿಟರಿ ಪಡೆ ನಮ್ಮ ಗಡಿ ಪ್ರದೇಶದಿಂದ ಒಳಬರದಂತೆ ತಿಳಿಸಿದ್ದೇವು ಆದರೂ ಬಂದಿದ್ದಾರೆ ಹಾಗಾಗಿ ಉಕ್ರೇನ್, ರಷ್ಯಾದ ಮಿಲಿಟರಿ ಪಡೆಗಳನ್ನು ಹೊಡೆದುರುಳಿಸಿದೆ. ಈಗಾಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಭಾರತ ಕೂಡಲೇ ಮಧ್ಯಪ್ರವೇಶಿಸಿ ಮಾತುಕತೆಗೆ ಮುಂದಾಗಿ ಎಂದು ಕೇಳಿಕೊಂಡಿದ್ದರು. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್
ಇದಲ್ಲದೇ ವಿಶ್ವದ ಹಲವು ದೇಶಗಳೂ ಕೂಡ ಭಾರತ ಮಧ್ಯಪ್ರವೇಶಿಸಬೇಕೆಂದು ಅಭಿಪ್ರಾಯಪಟ್ಟಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಭಾರತದ ಪ್ರಧಾನಿ ಮೋದಿ ಮಾತುಕತೆ ನಡೆಸಿದರೆ ಯುದ್ಧ ನಿಲ್ಲಿಸಬಹುದೆಂಬ ಅಭಿಪ್ರಾಯ ಕೇಳಿಬರುತ್ತಿದೆ. ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಆರಂಭಿಸಿದ್ದು, ಈಗಾಗಲೇ 50ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಕಿವ್: ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವುದನ್ನು ಇಡೀ ವಿಶ್ವ ನೋಡುತ್ತಿದೆ. ಆದರೆ ಅಲ್ಲಿನ ಜನರು ಹೊರಗೆ ಏನು ನಡೆಯುತ್ತಿದೆ ಎಂಬುದೇ ತಿಳಿಯದೆ ಉಸಿರು ಬಿಗಿಯಾಗಿಸಿ ಒದ್ದಾಡುವಂತಹ ಪರಿಸ್ಥಿತಿಗೆ ಬಂದಿದ್ದಾರೆ.
ರಷ್ಯಾ ಉಕ್ರೇನ್ ಮೇಲೆ ಬಾಂಬುಗಳ ದಾಳಿ ನಡೆಸುತ್ತಿದ್ದು, ಉಕ್ರೇನ್ ನಿವಾಸಿಗಳಿಗೆ ಸರ್ಕಾರ ತಮ್ಮ ಜೀವ ಉಳಿಸಿಕೊಳ್ಳಲು ಬಂಕರ್ ಹಾಗೂ ಮೆಟ್ರೋ ಸುರಂಗಗಳಿಗೆ ತೆರಳುವಂತೆ ಸೂಚನೆ ನೀಡಿದೆ. ಇದರಂತೆ ಸಾವಿರಾರು ಜನರು ದಿಕ್ಕು ತೋಚದೇ ಸುರಂಗ ಮಾರ್ಗ ಹಾಗೂ ಬಂಕರ್ಗಳಿಗೆ ತೆರಳಿ ಬೀಡು ಬಿಟ್ಟಿದ್ದಾರೆ. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು, ಇಲ್ಲಿ ಏನು ನಡೆಯುತ್ತಿದೆ ಎಂಬುದೇ ತಿಳಿಯುತ್ತಿಲ್ಲ. ನಮಗೆ ಬಂಕರ್ ಇಲ್ಲವೇ ಮೆಟ್ರೋ ಸುರಂಗಗಳಿಗೆ ಹೋಗಿ ಜೀವ ಉಳಿಸಿಕೊಳ್ಳು ಸಲಹೆ ನೀಡಲಾಗಿದೆ. ಹೀಗಾಗಿ ನಾವು ಮೆಟ್ರೋ ಸುರಂಗಗಳಲ್ಲಿ ಆಶ್ರಯ ಪಡೆದಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ನಾವೆಲ್ಲರೂ ಸುರಕ್ಷಿತವಾಗಿದ್ದೇವೆ: ಉಕ್ರೇನ್ನಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳು
ಮೆಟ್ರೋ ಸುರಂಗಗಳಲ್ಲಿ ಸಾವಿರಾರು ಜನರು ಜೀವ ಉಳಿಸಿಕೊಳ್ಳಲು ತೆರಳಿದ್ದು, ಇದರಲ್ಲಿ ಕರ್ನಾಟಕದ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಸದ್ಯ ಯಾರಿಗೂ ತೊಂದರೆಯಾಗಿಲ್ಲ. ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಕರ್ನಾಟಕ ಮೂಲದ ವಿದ್ಯಾರ್ಥಿ ಉಕ್ರೇನ್ನಿಂದ ಸಂದೇಶವನ್ನು ತಲುಪಿಸಿದ್ದಾರೆ.
ಕಿವ್: ರಷ್ಯಾ ದಾಳಿಯ ವಿರುದ್ಧ ತಮ್ಮ ದೇಶವನ್ನು ರಕ್ಷಿಸಲು ಬಯಸುವ ಎಲ್ಲಾ ನಾಗರಿಕರಿಗೆ ಸರ್ಕಾರ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ರಷ್ಯಾ ದಾಳಿ ಬಗ್ಗೆ ಇನ್ನೂ ತಮ್ಮ ಆತ್ಮ ಸಾಕ್ಷಿಯನ್ನು ಕಳೆದುಕೊಳ್ಳದ ಎಲ್ಲರಿಗೂ ರಷ್ಯಾ ವಿರುದ್ಧ ಪ್ರತಿಭಟಿಸುವ ಸಮಯ ಬಂದಿದೆ. ದೇಶವನ್ನು ರಕ್ಷಿಸಲು ಸಿದ್ಧರಾಗಿರುವ ಉಕ್ರೇನ್ನ ಎಲ್ಲಾ ನಾಗರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದೇವೆ ಹಾಗೂ ಎಲ್ಲಾ ನಿರ್ಬಂಧವನ್ನು ತೆಗೆದು ಹಾಕುತ್ತಿದ್ದೇವೆ ಎಂದು ಉಕ್ರೇನ್ ಅಧ್ಯಕ್ಷ ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧ ವಿಚಾರದಲ್ಲಿ ಇತರ ರಾಷ್ಟ್ರಗಳು ಮೂಗು ತೂರಿಸಬೇಡಿ – ಪುಟಿನ್ ನೇರ ಎಚ್ಚರಿಕೆ
ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ ಉಕ್ರೇನ್ ವಿರುದ್ಧ ಈಗಾಗಲೇ ಯುದ್ಧ ಸಾರಿದ್ದು, ಭಾರತೀಯ ಕಾಲಮಾನ ಇಂದು ಬೆಳಗ್ಗೆ 6 ಗಂಟೆಗೆ ಉಕ್ರೇನ್ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವಿಚಾರವಾಗಿ ಇತರ ಯಾವುದೇ ರಾಷ್ಟ್ರಗಳು ಮೂಗು ತೂರಿಸದಂತೆ ಪುಟಿನ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ಕಣ್ಣು ಯಾಕೆ? ರಷ್ಯಾಗೆ ಯಾಕೆ ಯಾರ ಭಯವಿಲ್ಲ?
ಉಕ್ರೇನ್ನಲ್ಲಿ ಇದೀಗ ರಷ್ಯಾ ದಾಳಿಗೆ ಜನರು ಬಲಿಯಾಗುತ್ತಿದ್ದು, ಕಾರ್ನಾಟಕ-ಭಾರತ ಸೇರಿದಂತೆ ಇತರ ದೇಶದ ವಿದ್ಯಾರ್ಥಿಗಳೂ ಸಿಲುಕಿಕೊಂಡಿದ್ದಾರೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ದೇಶದ ನಾನಾ ಭಾಗಗಳ ತಲ್ಲಣಕ್ಕೆ ಕಾರಣವಾಗಿದೆ. ಉಕ್ರೇನ್ ನಲ್ಲಿ ವಾಸವಿರುವ ಭಾರತೀಯರೂ ಸೇರಿದಂತೆ ಅನೇಕ ರಾಷ್ಟ್ರಗಳ ಜನರು ಜೀವ ಹಿಡಿದುಕೊಂಡು ತವರಿಗೆ ಮರಳಲು ಕಾಯುತ್ತಿದ್ದಾರೆ. ತಮ್ಮವರು ಸುರಕ್ಷಿತವಾಗಿ ಮನೆಗೆ ವಾಪಸ್ಸಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಇಂಥದ್ದೊಂದು ಪ್ರಾರ್ಥನೆಯನ್ನು ಬಿಗ್ ಬಾಸ್ ಖ್ಯಾತಿಯ, ಕಿರುತೆರೆ ನಟಿ ಶ್ವೇತಾ ಚೆಂಗಪ್ಪ ಕೂಡ ಮಾಡಿದ್ದಾರೆ. ಇದನ್ನೂ ಓದಿ : ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್
ಕನ್ನಡ ಕಿರುತೆರೆ ನಟಿ ಶ್ವೇತಾ ಚೆಂಗಪ್ಪ ಸ್ನೇಹಿತೆ ಸುಹಾನಿ ದಿವ್ಯ ಗಿರೀಶ್ ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಉಕ್ರೇನ್ ಗೆ ಹೋದವರು ಯುದ್ಧದ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದಾರಂತೆ. ಉಕ್ರೇನ್ ನಲ್ಲಿ ತಮ್ಮ ಗೆಳತಿ ಹೇಗಿದ್ದಾರೋ ಏನೋ ಎನ್ನುವ ಆತಂಕವನ್ನು ಶ್ವೇತಾ, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಖ್ಯಾತ ಗಾಯಕ ರಘು ದೀಕ್ಷಿತ್ ತಾಯಿ ನಿಧನ : ದುಬೈನಲ್ಲಿದ್ದಾರೆ ರಘು
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶುರುವಾದಾಗ ನನಗೆ ತಕ್ಷಣವೇ ನೆನಪಾಗಿದ್ದು, ಗೆಳತಿ ಸುಹಾನಿ ಮತ್ತು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು. ಅವರ ರಕ್ಷಣೆಗೆ ಕೂಡಲೇ ಭಾರತ ಸರ್ಕಾರ ಕ್ರಮ ತಗೆದುಕೊಳ್ಳಬೇಕು. ಎಲ್ಲ ವಿಮಾನಗಳನ್ನು ರದ್ದುಗೊಳಿಸಿದ್ದರಿಂದ, ಅಲ್ಲಿರುವ ಭಾರತೀಯರಿಗೆ ಧೈರ್ಯ ಹೇಳುವ ಕೆಲಸ ಆಗಬೇಕು ಎಂದಿದ್ದಾರೆ ಶ್ವೇತಾ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ
ಯುದ್ಧ ಶುರುವಾದಾಗಿನಿಂದ ತಮಗೆ ಯಾವ ಕೆಲಸದಲ್ಲೂ ಆಸಕ್ತಿ ಕಾಣುತ್ತಿಲ್ಲ ಎಂದಿರುವ ಅವರು, ಎಲ್ಲರೂ ನನ್ನ ಗೆಳತಿಯ ಸುರಕ್ಷತೆಗಾಗಿ ಪ್ರಾರ್ಥಿಸಿ ಅಂದಿದ್ದಾರೆ. ಅವರ ಕುಟುಂಬಕ್ಕೂ ಕೂಡ ಧೈರ್ಯ ತುಂಬುವ ಕೆಲಸ ಆಗಲಿ ಎಂದು ಶ್ವೇತಾ ಬರೆದುಕೊಂಡಿದ್ದಾರೆ.
ಮಾಸ್ಕೋ: ರಷ್ಯಾ – ಉಕ್ರೇನ್ ಮೇಲೆ ಯುದ್ಧ ಘೋಷಿಸುತ್ತಿದ್ದಂತೆ ಮಾಸ್ಕೋ ಮತ್ತು ಉಕ್ರೇನ್ ನಡುವಿನ ರಾಜತಾಂತ್ರಿಕ ಸಂಬಂಧ ಮುರಿದು ಬಿದ್ದಿದೆ. ಇತ್ತ ರಷ್ಯಾ- ಉಕ್ರೇನ್ ಯುದ್ಧ ವಿಚಾರವಾಗಿ ಇತರ ರಾಷ್ಟ್ರಗಳು ಮೂಗುತೂರಿಸಬೇಡಿ ಎಂದು ಪುಟಿನ್ ನೇರವಾಗಿ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ದಾಳಿ ಆರಂಭಿಸಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಉಕ್ರೇನ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಉಕ್ರೇನ್ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದೆ. ಈ ವಿಚಾರದಲ್ಲಿ ಯಾವುದೇ ರಾಷ್ಟ್ರಗಳು ಮೂಗುತೂರಿಸದಂತೆ ಇತರ ರಾಷ್ಟ್ರಗಳಿಗೆ ವಾಡ್ಲಿಮಿರ್ ಪುಟೀನ್ ಎಚ್ಚರಿಕೆ ನೀಡಿದ್ದಾರೆ. ರಷ್ಯಾದ ಇತ್ತೀಚಿನ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ್ದು, ಹಸ್ತಕ್ಷೇಪ ಮಾಡುವ ಇತರ ರಾಷ್ಟ್ರಗಳು ಪರಿಣಾಮ ಎದುರಿಸಬೇಕಾದಿತು. ಈ ಹಿಂದೆ ಎಂದೂ ನೋಡಿರದ ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಪುಟೀನ್ ವಾರ್ನಿಂಗ್ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾದ 6 ಮಿಲಿಟರಿ ವಿಮಾನ ಪತನ – 50 ಸೈನಿಕರನ್ನು ಹತ್ಯೆಗೈದ ಉಕ್ರೇನ್
ಈ ಬಗ್ಗೆ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಪ್ರತಿಕ್ರಿಯಿಸಿ, ಪುಟಿನ್ ಉಕ್ರೇನ್ ವಿರುದ್ಧ ಪೂರ್ಣ ಪ್ರಮಾಣದ ಆಕ್ರಮಣವನ್ನು ಪ್ರಾರಂಭಿಸಿದ್ದಾರೆ. ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತದೆ ಮತ್ತು ಗೆಲ್ಲುತ್ತದೆ. ಇದೊಂದು ಆಕ್ರಮಣಕಾರಿ ಯುದ್ಧ ಜಗತ್ತು ಪುಟೀನ್ ಅವರನ್ನು ತಡೆಯಬಹುದು ಮತ್ತು ತಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: Russia-Ukraine crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ
ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ಯುದ್ಧ ಸಾರಿದ್ದು, ಉಕ್ರೇನ್ನಿಂದ ಜನ ಮಹಾವಲಸೆ ಆರಂಭಿಸಿದ್ದಾರೆ. ರಷ್ಯಾ ಮತ್ತು ಭಾರತದ ನಡುವೆ ಉತ್ತಮ ಸಂಬಂಧವಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅಧ್ಯಕ್ಷರಾದ ವಾಡ್ಲಿಮಿರ್ ಪುಟೀನ್ ಜೊತೆ ಮಾತುಕತೆ ನಡೆಸಬೇಕಾಗಿದೆ ಎಂದು ಉಕ್ರೇನ್ ರಾಯಭಾರಿ ಕೇಳಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟೀನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ. ಇದರಿಂದ ಉಕ್ರೇನ್ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ.
ರಷ್ಯಾದ 5 ಯುದ್ಧ ವಿಮಾನ, 2 ಹೆಲಿಕಾಪ್ಟರ್, ಟ್ಯಾಂಕ್ ಮತ್ತು ಟ್ರಕ್ಗಳನ್ನು ಈಗಾಗಲೇ ಉಕ್ರೇನ್ ಮಿಲಿಟರಿ ಪಡೆ ಹೊಡೆದುರುಳಿಸಿದೆ. ನಾವು ಈ ಮೊದಲು ರಷ್ಯಾದ ಮಿಲಿಟರಿ ಪಡೆ ನಮ್ಮ ಗಡಿ ಪ್ರದೇಶದಿಂದ ಒಳಬರದಂತೆ ತಿಳಿಸಿದ್ದೇವು ಆದರೂ ಬಂದಿದ್ದಾರೆ ಹಾಗಾಗಿ ಉಕ್ರೇನ್, ರಷ್ಯಾದ ಮಿಲಿಟರಿ ಪಡೆಗಳನ್ನು ಹೊಡೆದುರುಳಿಸಿದೆ. ಈಗಾಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಭಾರತ ಕೂಡಲೇ ಮಧ್ಯಪ್ರವೇಶಿಸಿ ಮಾತುಕತೆಗೆ ಮುಂದಾಗಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ
ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಿಸಿದ ಹಿನ್ನೆಲೆ ರಷ್ಯಾ ದೇಶದ ನಡೆಯನ್ನು ಬ್ರಿಟನ್ ಮತ್ತು ಮಿತ್ರರಾಷ್ಟ್ರಗಳು ನಿರ್ಣಾಯಕವಾಗಿ ಪ್ರತಿಕ್ರಿಯಿಸಲಿವೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೆ ನಿಡಿದ್ದಾರೆ. ಇತ್ತ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ನಾಳೆ ಜಿ 7 ರಾಷ್ಟ್ರಗಳ ಸಭೆ ಕರೆದಿದ್ದಾರೆ. ಅಮೇರಿಕಾ, ಕೆನಡಾ, ಫ್ರಾನ್ಸ್, ಜರ್ಮನಿ, ಯುಕೆ, ಜಪಾನ್, ಇಟಲಿ ನಡುವೆ ನಾಳೆ ಜಿ7 ಸಭೆ ನಡೆಯಲಿದೆ.
ಬೆಳಗಾವಿ: ಉಕ್ರೇನ್ನಲ್ಲಿ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು ಯುದ್ಧ ಆರಂಭವಾದ ಹಿನ್ನೆಲೆ ಇಬ್ಬರು ಕುಟುಂಬಸ್ಥರ ಮನೆಯಲ್ಲಿ ಆತಂಕ ಮನೆಮಾಡಿದೆ. ಇಬ್ಬರು ವಿದ್ಯಾರ್ಥಿಗಳು ಕೂಡ ಸುರಕ್ಷಿತವಾಗಿದ್ದಾರೆ.
ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ನಿವಾಸಿ ಪ್ರಿಯಾ ನಿಡಗುಂದಿ ಹಾಗೂ ಗೋಕಾಕ್ ತಾಲೂಕಿನ ಘಟಪ್ರಭಾದ ನಿವಾಸಿ ಅಮೋಘಾ ಚೌಗಲಾ ಎಂಬ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ಅಗ್ನಿ ಅವಘಡ – ಕಟ್ಟಡದಿಂದ ಹಾರಿ ಜೀವ ಉಳಿಸಿಕೊಂಡ ತಾಯಿ, ಮಗಳು
ಸದ್ಯ ಉಕ್ರೇನ್ನಲ್ಲಿ ಯದ್ಧ ಆರಂಭವಾದ ಹಿನ್ನೆಲೆ ಕಾಲೇಜಿನ ವಸತಿ ನಿಲಯದಲ್ಲೇ ಇಬ್ಬರು ವಿದ್ಯಾರ್ಥಿಗಳು ಉಳಿದುಕೊಂಡಿದ್ದಾರೆ. ಉಕ್ರೇನ್ನಲ್ಲಿ ಯುದ್ಧ ಆರಂಭವಾಗಿದ್ದರಿಂದ ಇಬ್ಬರು ವಿದ್ಯಾರ್ಥಿಗಳ ಕುಟುಂಬಸ್ಥರ ಮನೆಯಲ್ಲಿ ಆತಂಕ ಮನೆಮಾಡಿದೆ. ಇದನ್ನೂ ಓದಿ:ಹರ್ಷನ ಹತ್ಯೆ- ಡೀಟೈಲ್ಸ್ ಎಲ್ಲ ಹೇಳೋಕೆ ಆಗಲ್ಲ: ಆರಗ ಜ್ಞಾನೇಂದ್ರ
ಬೆಂಗಳೂರು: ಉಕ್ರೇನ್ನಲ್ಲಿ ಸಿಲುಕಿರುವ ಕರ್ನಾಟಕದ ಮೆಡಿಕಲ್ ವಿದ್ಯಾರ್ಥಿಗಳು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಿಯಾಂಕ ವಿದ್ಯಾರ್ಥಿನಿ(ಬೆಂಗಳೂರು):
ನಾವು ಉಕ್ರೇನ್ನಲ್ಲಿ ಇದ್ದೇವೆ. ಇಲ್ಲಿ ಭಯ ಇದ್ದರೂ, ಎಲ್ಲರೂ ಸುರಕ್ಷಿತವಾಗಿ ಇದ್ದಾರೆ. ಇಲ್ಲಿ ಊಟ ಮತ್ತು ನೀರಿಗೆ ಜನರ ಬೇಡಿಕೆ ಹೆಚ್ಚಾಗಿದೆ. ಅಲ್ಲದೆ ದಿನಸಿ ಅಂಗಡಿ ಮುಂದೆ ತುಂಬಾ ಜನರು ನಿಂತಿದ್ದಾರೆ ಎಂದು ಅಲ್ಲಿನ ಪರಿಸ್ಥಿತಿಯನ್ನು ವಿವರಿಸಿದರು.
ಎಲ್ಲರೂ ಸುರಕ್ಷಿತವಾಗಿದ್ದೇವೆ. ನಾವು ಮಾರುಕಟ್ಟೆ ಮುಂದೆ ಇದ್ದೇವೆ. ಇಲ್ಲಿ ತುಂಬಾ ಜನರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಸಾಲಾಗಿ ನಿಂತಿದ್ದಾರೆ. ಅಲ್ಲದೆ ನೀರಿಗೆ ಇಲ್ಲಿ ತುಂಬಾ ಸಮಸ್ಯೆಯಾಗಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ
ನಾವು ಇರುವ ಜಾಗದಲ್ಲಿ 200ಕ್ಕೂ ಹೆಚ್ಚು ಕರ್ನಾಟಕದವರು ಇದ್ದಾರೆ. ಬೇರೆ ಕಡೆಯೂ ತುಂಬಾ ಜನರಿದ್ದಾರೆ. ಇಲ್ಲಿರುವ ಹಲವು ವಿದ್ಯಾರ್ಥಿಗಳು ಮೆಡಿಕಲ್ ಓದುತ್ತಿದ್ದಾರೆ. ಒಂದು ವಾರದಿಂದಲೂ ಇಲ್ಲಿಂದ ಹೋಗಿ ಎಂದು ತಿಳಿಸಲಾಗಿತ್ತು. ಸೂಚನೆ ಕೊಟ್ಟ ಕೆಲವು ದಿನಗಳಲ್ಲಿ ಹಲವು ಮಂದಿ ತಮ್ಮ ದೇಶಕ್ಕೆ ಹೋಗಿದ್ದಾರೆ. ಆದರೆ ಈ ವಾರ ಹೋಗಬೇಕು ಎಂದುಕೊಂಡವರು ಇಲ್ಲೇ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದರು.
ವಿಮಾನದ ಟಿಕೆಟ್ ಬುಕ್ ಮಾಡಿಕೊಂಡಿದ್ದು, ಈಗ ರದ್ದಾಗಿದೆ. ಕಳೆದ ವಾರ ಹೇಳಿದ್ರಿಂದ ಎಷ್ಟೋ ಜನರಿಗೆ ಇವತ್ತು ಟಿಕೆಟ್ ಸಿಕ್ಕಿತ್ತು. ಕಳೆದ ವಾರ ಟಿಕೆಟ್ ಸಿಕ್ಕಿರಲಿಲ್ಲ. ಅಲ್ಲದೆ ದುಡ್ಡು ಸಹ ಹೆಚ್ಚಿತ್ತು ಎಂದು ತಿಳಿಸಿದರು.
ಕರ್ನಾಟಕದಲ್ಲಿ ನಾನು ಬೆಂಗಳೂರುನಲ್ಲಿ ಇದ್ದೇನೆ. ಪ್ರಸ್ತುತ ನಾವು ಇರುವ ಜಾಗದಲ್ಲಿ ಯಾವುದೇ ರೀತಿಯ ತೊಂದರೆ ಆಗಿಲ್ಲ. ದಾಳಿಯು ಗಡಿ ಪ್ರದೇಶದಲ್ಲಿ ನಡೆಯುತ್ತಿದೆ. ನಮಗೂ ದಾಳಿ ನಡೆಯುತ್ತಿರುವ ಜಾಗಕ್ಕೂ 300 ಕಿ.ಮೀ ದೂರ ಇದೆ ಎಂದರು.
ನಾವಿರುವ ಪ್ರದೇಶದ ಗಡಿ ರಷ್ಯಾ ಗಡಿಗೆ ಹತ್ತಿರವಿದೆ. ಇದು ಉತ್ತರದಲ್ಲಿ ಬರುತ್ತೆ. ನಮ್ಮ ಸ್ನೇಹಿತರೆಲ್ಲ ಒಂದೇ ಕಡೆ ಇದ್ದೇವೆ. ಇಲ್ಲಿನ ಸರ್ಕಾರ ಹೆಚ್ಚು ಹೊರಗಡೆ ಓಡಾಡಬೇಡಿ. ನಿಮಗೆ ಬೇಕಿರುವ ವಸ್ತುಗಳನ್ನು ತೆಗೆದುಕೊಳ್ಳಿ ಎಂದು ತಿಳಿಸಿದೆ ಎಂದು ವಿವರಿಸಿದರು.
ನಮ್ಮ ಸ್ನೇಹಿತರ ಜೊತೆ ಸೋಶಿಯಲ್ ಮೀಡಿಯಾ ಮೂಲಕ ಸಂಪರ್ಕದಲ್ಲಿ ಇದ್ದೇವೆ. ಗುಂಪಿನಲ್ಲಿ ಇರಬೇಕು ಎಂದು ಹೇಳುತ್ತಿಲ್ಲ. ಬದಲಿಗೆ ಎಲ್ಲೇ ಇದ್ರೂ ಸುರಕ್ಷಿತವಾಗಿ ಇರಬೇಕೆಂದು ಹೇಳುತ್ತಿದ್ದಾರೆ. ಹೊರಗೆ ಹೆಚ್ಚು ಬರಬಾರದು ಎಂದು ಹೇಳಿದ್ದಾರೆ. ಭಯಪಡಬೇಡಿ ಎಂದು ಹೇಳಿದ್ದಾರೆ ಎಂದರು.
ಇಲ್ಲಿ ಇರುವ ಎಷ್ಟೋ ಪ್ರಜೆಗಳು ಬೇರೆ ಕಡೆ ಹೋಗಲು ಸಿದ್ಧರಾಗಿ ನಿಂತಿದ್ದಾರೆ. ಅಲ್ಲದೆ ತಮ್ಮ ಬಟ್ಟೆಗಳನ್ನು ತುಂಬಿಕೊಂಡು ಬಂದು ಬೇರೆ ಕಡೆ ಹೋಗಲು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾರೆ ಎಂದು ಹೇಳಿದರು.
ನಾಗೇಶ್ ಪೂಜಾರಿ ವಿದ್ಯಾರ್ಥಿ(ಬೆಳಗಾವಿ)
ನಾವು ಎಲ್ಲರೂ ಸುರಕ್ಷಿರವಾಗಿ ಇದ್ದೇವೆ. 4 ವರ್ಷದಿಂದ ಇಲ್ಲೇ ಓಡುತ್ತಿದ್ದೇನೆ. ನಾನು ಮೆಡಿಕಲ್ ಓದುತ್ತಿದ್ದೇನೆ. ಇಲ್ಲಿ ಯಾವುದೇ ರೀತಿಯ ತೊಂದರೆ ಇಲ್ಲ. ನಾವು ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದರು.
ನಾವು ಭಯ ಪಡುವುದಿಲ್ಲ. ಅಲ್ಲದೆ ನಾವೆಲ್ಲ ಸುರಕ್ಷಿತವಾಗಿ ಇದ್ದೇವೆ. ನಮಗೆ ಬೇಕಾಗಿರುವ ಎಲ್ಲ ರೀತಿಯ ವಸ್ತುಗಳು ಸಿಗುತ್ತಿದೆ. ನನ್ನ ಜೊತೆ ಈಗ 250 ಜನಕ್ಕೂ ಹೆಚ್ಚು ಜನರು ಇದ್ದಾರೆ. 200ಕ್ಕೂ ಹೆಚ್ಚು ಕರ್ನಾಟಕದವರು ಇದ್ದಾರೆ ಎಂದು ವಿವರಿಸಿದರು.
ನಾವು ಸಹ ವಿಮಾನವನ್ನು ಬುಕ್ ಮಾಡಿದ್ದೆವು. ಆದರೆ ಟಿಕೆಟ್ ಸಿಗಲಿಲ್ಲ. ಈಗ ನಮಗೆ ಬೇಕಾದ ವಸ್ತುಗಳನ್ನು ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದೇವೆ. ದಿನಸಿ ಸಿಗುತ್ತಿದೆ. ಅದಕ್ಕೆಲ್ಲ ತೊಂದರೆ ಇಲ್ಲ ಎಂದರು. ಇದನ್ನೂ ಓದಿ: ಉಕ್ರೇನ್ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!
ಉಕ್ರೇನ್ ವಿದ್ಯಾರ್ಥಿ:
ವಾತಾವರಣ ಶಾಂತಿಯಿಂದ ಇದೆ. ಈಗ ನಮ್ಮನ್ನು ರೂಮ್ ಒಳಗೆ ಬಿಟ್ಟು ಊಟಕ್ಕೆ ತಯಾರಿ ಮಾಡುತ್ತಿದ್ದಾರೆ. ಇವತ್ತೆ ದಾಳಿ ನಡೆಯುತ್ತೆ ಎಂದು ನಮಗೆ ತಿಳಿದಿರಲಿಲ್ಲ. ಬೆಳಗ್ಗೆ 8 ಗಂಟೆಗೆ ದಾಳಿ ಮಾಡುವ ಶಬ್ದ ಕೇಳಿಸಿತು. ನಾವು ಇದ್ದ ಸ್ವಲ್ಪ ದೂರದಲ್ಲಿ ಶಬ್ದ ಕೇಳಿಸಿತು. ಸುದ್ದಿ ತಿಳಿದ ತಕ್ಷಣ ನಾವು ನಮ್ಮ ಕುಟುಂಬದ ಜೊತೆ ಮಾತನಾಡಿ ವಿಷಯ ತಿಳಿಸಿದ್ದೆವು ಎಂದರು.
ನಮ್ಮ ವಿಮಾನವು ಮೊದಲೇ ಬುಕ್ ಆಗಿತ್ತು. ಆದರೆ ನಾವು ಹೋಗ ಕೊನೆ ಕ್ಷಣದಲ್ಲಿ ವಿಮಾನ ರದ್ದಾಯಿತು. ಈ ಹಿನ್ನೆಲೆ ನಾವು ಮತ್ತೆ ವಾಪಸ್ ಬಂದೆವು. ಈಗ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ನಾವೆಲ್ಲರೂ ರೂಂಗೆ ಬಂದಿದ್ದೇನೆ. ಭಾರತೀಯರು ತುಂಬಾ ಜನ ಇದ್ದಾರೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು