Tag: russia

  • ‘ಮೇಡ್ ಇನ್ ಅಮೇಥಿ’ ಎಕೆ203 ರೈಫಲ್ – ಉಗ್ರ ವಿರುದ್ಧ ಹೋರಾಟಕ್ಕೆ ಮತ್ತಷ್ಟು ಬಲ: ಪ್ರಧಾನಿ ಮೋದಿ

    ‘ಮೇಡ್ ಇನ್ ಅಮೇಥಿ’ ಎಕೆ203 ರೈಫಲ್ – ಉಗ್ರ ವಿರುದ್ಧ ಹೋರಾಟಕ್ಕೆ ಮತ್ತಷ್ಟು ಬಲ: ಪ್ರಧಾನಿ ಮೋದಿ

    ಅಮೇಥಿ: ರಾಹುಲ್ ಗಾಂಧಿ ಸ್ವಕ್ಷೇತ್ರ ಅಮೇಥಿಯ ಸಮಾವೇಶದಲ್ಲಿ ಪ್ರಧಾನಿ ಮೋದಿ ಘರ್ಜಿಸಿದ್ದು, ಇನ್ನು ಮುಂದೇ ಅಮೇಥಿ ಒಂದು ಕುಟುಂಬ ಬದಲು ‘ಮೇಡ್ ಇನ್ ಅಮೇಥಿ ಎಕೆ-203’ ಹೆಸರನಿಂದ ಗುರುತಿಸಲಾಗುತ್ತದೆ ಎಂದು ಹೇಳಿದ್ದಾರೆ.

    ಅಮೇಥಿಯ ಸಮಾವೇಶದಲ್ಲಿ ಮಾತನಾಡಿದ ಅವರು, ರಷ್ಯಾದ ಸಹಭಾಗಿತ್ವದಲ್ಲಿ ಸ್ಥಾಪಿಸಲಾದ ಕಲಾಶ್ನಿಕೋವ್ ರೈಫಲ್ಸ್ ಘಟಕದಲ್ಲಿ ಅತ್ಯಾಧುನಿಕ ಎಕೆ-203 ರೈಫಲ್‍ಗಳನ್ನು ಉತ್ಪಾದಿಸಲಾಗುತ್ತಿದೆ. ಈ ಘಟಕ ಭಯೋತ್ಪಾದಕರು ಮತ್ತು ಮಾವೋವಾದಿಗಳ ವಿರುದ್ಧ ಹೋರಾಡಲು ನಮ್ಮ ಯೋಧರಿಗೆ ಹೊಸ ಶಕ್ತಿ ನೀಡುತ್ತದೆ ಎಂದು ಹೇಳಿದರು.

    ಇತ್ತ ಇಂದು ಕೂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನಿ ಮೋದಿ ನಡುವಿನ ರಫೇಲ್ ವಾರ್ ಮುಂದುವರಿಯಿತು. ಉತ್ತರ ಪ್ರದೇಶದ ರಾಹುಲ್ ಸ್ವಕ್ಷೇತ್ರ ಅಮೇಥಿಯ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಸಿದರು. ಅಲ್ಲದೇ ಉಗ್ರರ ಧಮನಕ್ಕೆ ಮೇಡ್ ಇನ್ ಅಮೇಥಿ ನಮ್ಮ ಯೋಧರಿಗೆ ಬಲ ನೀಡಲಿದೆ ಎಂದು ಟಾಂಗ್ ಕೊಟ್ಟರು.

    ಅಮೇಥಿಯಲ್ಲಿ ಕಾರ್ಖಾನೆ ಸ್ಥಾಪನೆ ಮಾಡಲು 2007ರಲ್ಲೆ ಶಂಕು ಸ್ಥಾಪನೆ ಮಾಡಿ 2010 ರಲ್ಲಿ ಕಾರ್ಯಾಣೆಯ ಕಾಮಗಾರಿ ಆರಂಭವಾಗಲಿದೆ ಎಂದಿದ್ದರು. ಆದರೆ ಅಂದು ಇಲ್ಲಿ ಯಾವ ಶಸ್ತ್ರಸ್ತ್ರಗಳನ್ನು ಉತ್ಪಾದನೆ ಮಾಡಬೇಕೆಂದು ಅಂದಿನ ಸರ್ಕಾರ ನಿರ್ಧಾರ ಮಾಡಿಯೇ ಇರಲಿಲ್ಲ ಎಂದು ಮೋದಿ ಆರೋಪಿಸಿದರು. ಇದೇ ವೇಳೆ ಕಾರ್ಖಾನೆ ಸ್ಥಾಪನೆ ಮಾಡಲು ಸಹಕಾರ ನೀಡಿದ್ದ ರಷ್ಯಾ ಅಧ್ಯಕ್ಷ ಪುಟಿನ್ ಅವರ ಕಾರ್ಯವನ್ನು ಮೆಚ್ಚಿ ಕೃತಜ್ಞನೆ ಸಲ್ಲಿಸಿದರು.

    7.62-39 ಎಂಎಂ ಕ್ಯಾಲಿಬರ್ ಎಕೆ-204 ಗನ್ ಗಳು ಎಕೆ-47 ಸರಣಿಯ ಅತ್ಯಾಧುನಿಕ ತಲೆಮಾರಿನ ಅಸ್ತ್ರಗಳಾಗಿವೆ. 7.50 ಲಕ್ಷ ಎಕೆ-203 ರೈಫಲ್ ಗಳ ಉತ್ಪಾದನೆಗೆ ರಷ್ಯಾ ಜತೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಬಂದೂಕುಗಳನ್ನು ಭೂ ಸೇನೆ ಯೋಧರಿಗೆ ನೀಡಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪಾಕಿಸ್ತಾನ ಭಯೋತ್ಪಾದನೆಯ ವಿರೋಧಿ ದೇಶ: ಚೀನಾ

    ಪಾಕಿಸ್ತಾನ ಭಯೋತ್ಪಾದನೆಯ ವಿರೋಧಿ ದೇಶ: ಚೀನಾ

    ಬೀಜಿಂಗ್: ಪಾಕಿಸ್ತಾನ ಯಾವತ್ತೂ ಭಯೋತ್ಪಾದನ ವಿರೋಧಿ ದೇಶವಾಗಿದೆ ಎನ್ನುವ ನಂಬಿಕೆ ನಮ್ಮಲ್ಲಿದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.

    ಚೀನಾದ ವೂಹನ್‍ನಲ್ಲಿ ನಡೆದ 16ನೇ ರಷ್ಯಾ-ಭಾರತ-ಚೀನಾ (ಆರ್‍ಐಸಿ) ಸಭೆ ಬಳಿಕ ಮಾತನಾಡಿ ಅವರು, ಪಾಕಿಸ್ತಾನ ಹಾಗೂ ಭಾರತ ನಮಗೆ ಆತ್ಮೀಯ ದೇಶಗಳು. ಪರಸ್ಪರ ಮಾತುಕತೆಯಿಂದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಜೊತೆಗೆ ಪುಲ್ವಾಮಾ ದಾಳಿಯ ತನಿಖೆಗೆ ಉಭಯ ದೇಶಗಳು ಸಹಕಾರ ನೀಡುವ ಮೂಲಕ ಶಾಂತಿ ಹಾಗೂ ಸ್ಥಿರತೆ ಕಾಯ್ದುಕೊಳ್ಳಬೇಕು ಎಂದು ವಾಂಗ್ ಯಿ ತಿಳಿಸಿದ್ದಾರೆ.

    ಪಾಕಿಸ್ತಾನ ಹಾಗೂ ಭಾರತದ ನಡುವಿನ ದಾಳಿ, ಪ್ರತಿ ದಾಳಿಯಲ್ಲಿ ಚೀನಾ ಸ್ಥಿರತೆ ಕಾಯ್ದುಕೊಂಡಿದೆ. ಉಭಯ ದೇಶಗಳಲ್ಲಿ ಯಾರ ವಿರುದ್ಧವು ನಾವು ಧ್ವನಿ ಎತ್ತಿಲ್ಲ ಎನ್ನುವ ಮೂಲಕ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿಲ್ಲ ಎಂದು ಪರೋಕ್ಷವಾಗಿ ಸ್ಪಷ್ಟನೆ ನೀಡಿದರು.

    ರಷ್ಯಾ-ಚೀನಾ-ಭಾರತ ಭಯೋತ್ಪಾದನೆ ವಿರುದ್ಧ ನಿಂತಿವೆ ಎನ್ನುವುದನ್ನು ಪುನಃ ದೃಢೀಕರಿಸಲಾಗಿದೆ. ಸಂಯಮ ಕಾಯ್ದುಕೊಳ್ಳುತ್ತೇವೆ ಹಾಗೂ ಪರಿಸ್ಥಿತಿಯನ್ನು ಉಲ್ಬಣಗೊಳ್ಳಲು ಬಿಡುವುದಿಲ್ಲವೆಂದು ಭಾರತ-ಪಾಕಿಸ್ತಾನ ಹೇಳಿಕೆ ನೀಡಿರುವುದನ್ನು ಚೀನಾ ಮೆಚ್ಚಿಕೊಳ್ಳುತ್ತದೆ ಎಂದು ತಿಳಿಸಿದರು.

    ಇದಕ್ಕೂ ಮುನ್ನ ಮಾತನಾಡಿದ್ದ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಮಂಗಳವಾರ ನಡೆದ ಏರ್ ಸ್ಟ್ರೈಕ್ ಯಾವುದೇ ಮಿಲಿಟರಿ ಕಾರ್ಯಾಚರಣೆಯಲ್ಲ. ಭಾರತದ ಮೇಲೆ ಜೈಶ್ ಉಗ್ರ ಸಂಘಟನೆ ಮತ್ತೊಂದು ದಾಳಿ ಮಾಡದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ. ಈ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳಬೇಕು ಎಂದು ನಾವು ಬಯಸುವುದಿಲ್ಲ. ಜವಾಬ್ದಾರಿಯುತವಾಗಿ ಉಗ್ರರನ್ನು ಮಟ್ಟ ಹಾಕಲಾಗುತ್ತದೆ. ಉಗ್ರರ ವಿರುದ್ಧ ಹೋರಾಡಲು ನಮ್ಮ ಜೊತೆ ಅನೇಕ ರಾಷ್ಟ್ರಗಳು ನಿಂತಿವೆ. ಇದು ನನಗೆ ತುಂಬಾ ಖುಷಿ ತಂದುಕೊಟ್ಟಿದೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಗ್ರರಿಂದ ಮಾನವೀಯತೆ ನಿರೀಕ್ಷೆ ಸಾಧ್ಯವಿಲ್ಲ: ಸುಷ್ಮಾ ಸ್ವರಾಜ್

    ಉಗ್ರರಿಂದ ಮಾನವೀಯತೆ ನಿರೀಕ್ಷೆ ಸಾಧ್ಯವಿಲ್ಲ: ಸುಷ್ಮಾ ಸ್ವರಾಜ್

    – ಚೀನಾಕ್ಕೆ ಭಾರತದ ಸಂಬಂಧ ಮನವರಿಕೆ ಮಾಡಿಕೊಟ್ಟ ಸಚಿವೆ

    ಬೀಜಿಂಗ್: ಭಯೋತ್ಪಾದಕರಿಂದ ನಾವು ಎಂದಿಗೂ ಮಾನವೀಯತೆಯನ್ನು ನಿರೀಕ್ಷೆ ಮಾಡುವುದಕ್ಕೆ ಸಾಧ್ಯವಿಲ್ಲ. ಉಗ್ರರನ್ನು ಸೆದೆ ಬಡಿಯಲು ವಿಶ್ವದ ರಾಷ್ಟ್ರಗಳು ಒಂದಾಗಿ ಹೋರಾಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

    ಚೀನಾದ ವೂಹನ್‍ನಲ್ಲಿ ನಡೆದ 16ನೇ ರಷ್ಯಾ-ಭಾರತ-ಚೀನಾ (ಆರ್‌ಐಸಿ) ವಿದೇಶಾಂಗ ವ್ಯವಹಾರಗಳ ಸಚಿವರ ಸಭೆಯಲ್ಲಿ ಸುಷ್ಮಾ ಸ್ವರಾಜ್ ಭಾಗವಹಿಸಿದ್ದರು. ಈ ವೇಳೆ ಮಂಗಳವಾರ ನಡೆದ ಏರ್ ಸ್ಟ್ರೈಕ್ ವಿಚಾರವಾಗಿ ಚೀನಾ ಹಾಗೂ ರಷ್ಯಾ ವಿದೇಶಾಂಗ ಸಚಿವರಿಗೆ ಮಾಹಿತಿ ನೀಡಿದ ಅವರು, ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದನೆಗೆ ಅವಕಾಶ ನೀಡುತ್ತಿದ್ದು, ಭಾರತದ ಮೇಲೆ ದಾಳಿ ಮಾಡಲು ಉಗ್ರರು ಪ್ಲಾನ್ ರೂಪಿಸಿದ್ದರು. ಹೀಗಾಗಿ ಸ್ವಯಂ ರಕ್ಷಣೆಗಾಗಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂರು ಕ್ಯಾಂಪ್‍ಗಳ ಮೇಲೆ ದಾಳಿ ಮಾಡಿದ್ದೇವೆ. ನಾಗರಿಕರ ಸಾವು ನೋವು ತಪ್ಪಿಸಲು ದಾಳಿ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಇದು ಯಾವುದೇ ಮಿಲಿಟರಿ ಕಾರ್ಯಾಚರಣೆಯಲ್ಲ. ಭಾರತದ ಮೇಲೆ ಜೈಶ್ ಉಗ್ರ ಸಂಘಟನೆ ಮತ್ತೊಂದು ದಾಳಿ ಮಾಡದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ. ಈ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳಬೇಕು ಎಂದು ನಾವು ಬಯಸುವುದಿಲ್ಲ. ಜವಾಬ್ದಾರಿಯುತವಾಗಿ ಉಗ್ರರನ್ನು ಮಟ್ಟ ಹಾಕಲಾಗುತ್ತದೆ ಎಂದು ಸುಷ್ಮಾ ಸ್ವರಾಜ್ ತಿಳಿದರು.

    ಉಗ್ರರ ವಿರುದ್ಧ ಹೋರಾಡಲು ನಮ್ಮ ಜೊತೆ ಅನೇಕ ರಾಷ್ಟ್ರಗಳು ನಿಂತಿವೆ. ಇದು ನನಗೆ ತುಂಬಾ ಖುಷಿ ತಂದುಕೊಟ್ಟಿದೆ. ಭಾರತ ಉಗ್ರರ ವಿರುದ್ಧ ಕ್ರಮಕೈಗೊಂಡಿದೆ. ನಮ್ಮ ಗುರಿ ಭಯೋತ್ಪಾದನೆಯನ್ನ ನಿಲ್ಲಿಸುವುದು. ಪಾಕಿಸ್ತಾನ ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ಬಿಡಬೇಕು. ಭಾರತೀಯ ವಾಯು ಪಡೆ ಉಗ್ರರ ನೆಲೆಗಳ ಮೇಲೆ ಮಾತ್ರ ದಾಳಿ ಮಾಡಿದೆ. ಅಲ್ಲಿನ ನಿವಾಸಿಗಳ ವಿರುದ್ಧ ಯುದ್ಧ ಸಾರಿಲ್ಲ ಎಂದು ಹೇಳಿದರು.

    ಭಾರತ-ಚೀನಾ ಸಂಬಂಧ ಉಭಯ ರಾಷ್ಟ್ರಗಳಿಗೆ ಮುಖ್ಯವಾಗಿದೆ. ವೂಹನ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ರಾಷ್ಟ್ರಪತಿ ಕ್ಸಿ ಜಿನ್‍ಪಿಂಗ್ ಅವರ ನಡುವೆ 2018 ಏಪ್ರಿಲ್‍ನಲ್ಲಿ ನಡೆದ ಸಭೆಯಿಂದ ಉಭಯ ದೇಶಗಳ ಸಂಬಂಧ ಮತ್ತಷ್ಟು ವೃದ್ಧಿಯಾಗಿದೆ ಎಂದು ಚೀನಾಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

    ಭಯೋತ್ಪಾದನೆಯನ್ನು ಹತ್ತಿಕ್ಕಲು ನಮಗೆ ಜಗತ್ತಿನ ಸಹಾಯ ಬೇಕಿದೆ. ಪುಲ್ವಾಮಾ ದಾಳಿಯಲ್ಲಿ 40 ವೀರ ಯೋಧರು ಹುತಾತ್ಮರಾಗಿದ್ದಾರೆ. ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಪಾಕಿಸ್ತಾನದ ಕುಮ್ಮಕ್ಕಿನಿಂದ ದಾಳಿ ಮಾಡಿಸಿದೆ ಎಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 2 ಹಡಗಿನಲ್ಲಿ ಆಕಸ್ಮಿಕ ಬೆಂಕಿ ಅವಘಡ – 11 ಮಂದಿ ದುರ್ಮರಣ

    2 ಹಡಗಿನಲ್ಲಿ ಆಕಸ್ಮಿಕ ಬೆಂಕಿ ಅವಘಡ – 11 ಮಂದಿ ದುರ್ಮರಣ

    ಮಾಸ್ಕೋ: ಟರ್ಕಿಷ್, ಲಿಬಿಯನ್ ಹಾಗೂ ಭಾರತೀಯ ನಾವಿಕರು ಕಾರ್ಯ ನಿರ್ವಹಿಸುತ್ತಿದ್ದ 2 ಹಡಗಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ರಷ್ಯಾದ ಕೆರ್ಚ್ ಜಲಸಂಧಿ ಬಳಿ ಸೋಮವಾರದಂದು ನಡೆದಿದೆ.

    ಸೋಮವಾರದಂದು ರಷ್ಯಾದ ಪ್ರಾದೇಶಿಕ ಜಲಮಾರ್ಗದಲ್ಲಿ ಈ ದುರಂತ ಸಂಭವಿಸಿದೆ. ದುರಂತಕ್ಕೆ ಒಳಗಾದ 2 ಹಡಗುಗಳ ಮೇಲೆ ಕೂಡ ತಾಂಜಾನಿಯನ್ ಭಾವುಟವನ್ನು ಅಳವಡಿಸಲಾಗಿತ್ತು. 2 ಹಡಗುಗಳ ಪೈಕಿ ಒಂದು ಲಿಕ್ವಿಫಾಯ್ದ್ ನ್ಯಾಚುರಲ್ ಗಾಸ್(ಎಲ್‍ಎನ್‍ಜಿ) ಸಾಗಿಸುತ್ತಿದ್ದರೆ, ಇನ್ನೊಂದು ಹಡಗು ಟ್ಯಾಂಕರ್ ಗಳನ್ನು ಸಾಗಿಸುತ್ತಿತ್ತು. ಒಂದು ಎಲ್‍ಎನ್‍ಜಿ ತುಂಬಿದ್ದ ಹಡಗಿನಿಂದ ಟ್ಯಾಕರ್ ಹಡಗಿಗೆ ಇಂಧನವನ್ನು ವರ್ಗಾವಣೆ ಮಾಡುತ್ತಿದ್ದಾಗ ಈ ಅಗ್ನಿ ಅವಘಡ ಸಂಭವಿಸಿದೆ. ಇದನ್ನೂ ಓದಿ:ಕೂರ್ಮಗಡ ಬೋಟ್ ದುರಂತ- ಸಾವಿನ ಸಂಖ್ಯೆ 13ಕ್ಕೆ ಏರಿಕೆ

    ಒಂದು ಹಡಗಿನಲ್ಲಿ 8 ಮಂದಿ ಭಾರತೀಯರು ಹಾಗೂ 9 ಮಂದಿ ಟರ್ಕಿ ನಾವಿಕರು ಸೇರಿ ಒಟ್ಟು 17 ಮಂದಿ ಇದ್ದರು. ಇನ್ನೊಂದರಲ್ಲಿ 7 ಮಂದಿ ಭಾರತೀಯರು, 7 ಮಂದಿ ಟರ್ಕಿ ನಾವಿಕರು ಹಾಗೂ ಓರ್ವ ಲಿಬಿಯಾದ ನಾವಿಕ ಸೇರಿ ಒಟ್ಟು 15 ಮಂದಿ ಕಾರ್ಯ ನಿರ್ವಹಿಸುತ್ತಿದ್ದರು.

    ಈ ದುರ್ಘಟನೆಯಿಂದ ಭಾರತೀಯರು ಸೇರಿದಂತೆ ಒಟ್ಟು 11 ಮಂದಿ ಮೃತಪಟ್ಟಿದ್ದು, 9 ಮಂದಿ ಕಾಣೆಯಾಗಿದ್ದಾರೆ. ಅಲ್ಲದೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಲವು ನಾವಿಕರು ಪ್ರಾಣ ಉಳಿಸಿಕೊಳ್ಳಲು ಸಮುದ್ರಕ್ಕೆ ಹಾರಿದ್ದು ಇವರೆಗೆ 12 ಮಂದಿಯನ್ನು ರಕ್ಷಣಾ ಕಾರ್ಯಚರಣೆ ನಡೆಸಿ ರಕ್ಷಣೆ ಮಾಡಲಾಗಿದೆ. ಹಾಗೆಯೇ ಕಾಣೆಯಾದವರನ್ನು ಹುಡುಕುವ ಕೆಲಸವನ್ನು ರಕ್ಷಣಾ ಪಡೆ ಮುಂದುವರಿಸಿದೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎರಡು ದಿನ ವಿಶ್ವಾದ್ಯಂತ ಇಂಟರ್‌ನೆಟ್ ಸೇವೆಯಲ್ಲಿ ವ್ಯತ್ಯಯ

    ಎರಡು ದಿನ ವಿಶ್ವಾದ್ಯಂತ ಇಂಟರ್‌ನೆಟ್ ಸೇವೆಯಲ್ಲಿ ವ್ಯತ್ಯಯ

    ನವದೆಹಲಿ: ಮುಂದಿನ 48 ಗಂಟೆಗಳ ಕಾಲ ವಿಶ್ವಾದ್ಯಂತ ಇಂಟರ್‌ನೆಟ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ರಷ್ಯಾ ಟುಡೇ ವರದಿ ಮಾಡಿದೆ.

    ದಿ ಇಂಟರ್‍ನೆಟ್ ಕಾರ್ಪೋರೇಷನ್ ಆಫ್ ಅಸೈನ್ಡ್ ನೇಮ್ಸ್ ಆಂಡ್ ನಂಬರ್ಸ್ (ಐಸಿಎಎನ್‍ಎನ್) ಮುಂದಿನ 48 ಗಂಟೆಗಳ ಕಾಲ ಇಂಟರ್‍ನೆಟ್ ಅಡ್ರೆಸ್ ಬುಕ್ ಅಥವಾ ಡೊಮೈನ್ ನೇಮ್ ಸಿಸ್ಟಮ್ (ಡಿಎನ್‍ಎಸ್) ಅನ್ನು ಕಾಪಾಡುವ ಕ್ರಿಪ್ಟೋಗ್ರಾಫಿಕ್ ಕೀಯನ್ನು ಬದಲಾಯಿಸುತ್ತಿದೆ. ಈ ಸಂದರ್ಭದಲ್ಲಿ ಸರ್ವರ್ ಡೌನ್ ಆಗಿ ನೆಟ್‍ವರ್ಕ್ ಸಮಸ್ಯೆ ಎದುರಾಗಲಿದೆ ಎಂದು ಹೇಳಿದೆ.

    ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಸೈಬರ್ ದಾಳಿಗೆ ಕಡಿವಾಣ ಹಾಕಿ ಹೆಚ್ಚಿನ ಭದ್ರತೆ ನೀಡಲು ಈ ಬದಲಾವಣೆ ಮಾಡಲಾಗುತ್ತಿದೆ.

    ದಿ ಕಮ್ಯುನಿಕೇಷನ್ಸ್ ರೆಗ್ಯೂಲೇಟರಿ ಅಥಾರಿಟಿ (ಸಿಆರ್‌ಎ) ಪ್ರಕಾರ, ವಿಶ್ವಾದ್ಯಂತ ಇಂಟರ್‍ನೆಟ್ ವ್ಯತ್ಯಯವು ಡಿಎನ್‍ಎಸ್ ನ ಭದ್ರತೆ ಮತ್ತು ಬದ್ಧತೆಯನ್ನ ಕಾಪಾಡಲು ಅವಶ್ಯವಾಗಿದೆ. ಇದರಿಂದ ಮುಂದಿನ 48 ಗಂಟೆಗಳ ಇಂಟರ್‌ನೆಟ್ ಬಳಕೆದಾರಿಗೆ ಸಮಸ್ಯೆಯಗಲಿದೆ ಎಂದು ತಿಳಿಸಿದೆ.

    ಇಂಟರ್‌ನೆಟ್ ವ್ಯವಹಾರ ಮಾಡುವವರು ಔಟ್ ಡೇಟೆಡ್ ಇಂಟರ್‍ನೆಟ್ ಸರ್ವೀಸ್ ಪ್ರೊವೈಡರ್ (ಐಎಸ್‍ಪಿ) ಬಳಸುತ್ತಿದ್ದರೆ ಅವರಿಗೆ ಮತ್ತಷ್ಟು ಸಮಸ್ಯೆಯಾಗಲಿದೆ ಎಂದು ಹೇಳಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

    ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

    ನವದೆಹಲಿ: ರಷ್ಯಾ ಜೊತೆಗಿನ ಮಾತುಕತೆಯ ವೇಳೆ ಭಾರತ ಎಸ್ – 400 ವಾಯು ರಕ್ಷಣಾ ವ್ಯವಸ್ಥೆ ಕ್ಷಿಪಣಿ ಖರೀದಿ ಸೇರಿ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ.

    ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ದ್ವಿಪಕ್ಷೀಯ ಸಭೆ ನಡೆಸಿದರು. ಮಾತುಕತೆಯ ವೇಳೆ ಎಸ್ – 400 ವಾಯು ರಕ್ಷಣಾ ವ್ಯವಸ್ಥೆ, ಬಾಹ್ಯಾಕಾಶ ಸಹಕಾರ ಸೇರಿದಂತೆ ಒಟ್ಟು 8 ಒಪ್ಪಂದಗಳಿಗೆ ಸಹಿ ಹಾಕಲಾಯಿತು.

    ಭಾರತ 5.43 ಶತಕೋಟಿ ಡಾಲರ್(ಅಂದಾಜು 40 ಸಾವಿರ ಕೋಟಿ ರೂ.) ವೆಚ್ಚದಲ್ಲಿ 5 ಎಸ್-400 ಟ್ರಯಂಫ್ ಖರೀದಿಸಲು ಒಪ್ಪಂದಕ್ಕೆ ಸಹಿ ಹಾಕಿದೆ. ಹೀಗಾಗಿ ಏನಿದು ವಿಶೇಷ ವಾಯು ರಕ್ಷಣಾ ವ್ಯವಸ್ಥೆ? ಹೇಗೆ ಕೆಲಸ ಮಾಡುತ್ತದೆ ಇತ್ಯಾದಿ ವಿವರಗಳನ್ನು ಇಲ್ಲಿ ನೀಡಲಾಗಿದೆ.

    ಏನಿದು ಎಸ್-400 ಏರ್ ಟ್ರಯಂಫ್?
    ಸುಲಭವಾಗಿ ಒಂದು ವಾಕ್ಯದಲ್ಲೇ ಹೇಳುವುದಾದರೆ ಆಕಾಶದಲ್ಲೇ ಶತ್ರುಗಳನ್ನು ನಿರ್ನಾಮ ಮಾಡುವ ಸಾಮರ್ಥ್ಯ ಇರುವ ವಿಶೇಷ ವಾಯು ರಕ್ಷಣಾ ವ್ಯವಸ್ಥೆ. ಶತ್ರು ರಾಷ್ಟ್ರಗಳು ಕ್ಷಿಪಣಿಗಳು ಉಡಾಯಿಸಿದರೆ ಅದನ್ನು ಹೊಡೆದು ಉರುಳಿಸುವುದು ಸುಲಭದ ಮಾತಲ್ಲ. ಆದರೆ ವೇಗವಾಗಿ ಬರುವ ಕ್ಷಿಪಣಿಯನ್ನು ಆಕಾಶದಲ್ಲಿ ಹೊಡೆದು ಉರುಳಿಸುವ ಸಾಮರ್ಥ್ಯ ಈ ಎಸ್-400 ಟ್ರಯಂಫ್ ಗೆ ಇದೆ. ರಷ್ಯಾ 2007ರಲ್ಲಿ ಮೊದಲ ಬಾರಿಗೆ ಈ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿತ್ತು.

    ಹೇಗೆ ಕೆಲಸ ಮಾಡುತ್ತೆ?
    ನೆಲದಲ್ಲೇ ಎಸ್-400 ವಾಯು ರಕ್ಷಣಾ ವ್ಯವಸ್ಥೆ ಶತ್ರು ಪಡೆಗಳ ಯುದ್ಧ ವಿಮಾನ ಹಾಗೂ ಕ್ಷಿಪಣಿ ದಾಳಿಯನ್ನು ದಿಟ್ಟವಾಗಿ ಎದುರಿಸುವ ಸಾಮರ್ಥ್ಯ ಹೊಂದಿದೆ. ದೀರ್ಘ ದೂರ ಕ್ರಮಿಸಬಲ್ಲ ನೆಲದಿಂದ ಆಗಸಕ್ಕೆ ಉಡಾಯಿಸಬಹುದಾದ ಕ್ಷಿಪಣಿ ನಿರೋಧಕ ವ್ಯವಸ್ಥೆ ಇದ್ದು, 2007 ರಲ್ಲಿ ನಿರ್ಮಾಣಗೊಂಡಿದ್ದ ಎಸ್-300 ಶ್ರೇಣಿಯ ಹೊಸ ಆವೃತ್ತಿ ಇದಾಗಿದೆ.

    380 ಕಿ.ಮೀ ವ್ಯಾಪ್ತಿ ಒಳಗಡೆ ಬರುವ ಹಲವು ಕ್ಷಿಪಣಿ ಹಾಗೂ ವಿಮಾನಗಳನ್ನು ಏಕಕಾಲಕ್ಕೆ ಗುರುತಿಸಿ ಹೊಡೆದುರುಳಿಸುವ ಸೆಲ್ಫ್ ಸಿಸ್ಟಂ ವ್ಯವಸ್ಥೆ, ಬಹುಬಳಕೆಯ ರೇಡಾರ್ ಮತ್ತು ಗುರಿ ನಿಗದಿ ಉಡಾವಣೆ ವ್ಯವಸ್ಥೆ, ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳನ್ನು ಇದು ಒಳಗೊಂಡಿದೆ. ಲಾರಿಯ ಹಿಂಭಾಗದಲ್ಲಿ ವಾಯು ರಕ್ಷಣಾ ವ್ಯವಸ್ಥೆ ಇರುವ ಕಾರಣ ಯಾವ ಪ್ರದೇಶಕ್ಕೂ ಬೇಕಾದರೂ ಸುಲಭವಾಗಿ ತೆಗೆದುಕೊಂಡು ಹೋಗಬಹುದು. ಅಷ್ಟೇ ಅಲ್ಲದೇ ಕೆಲವೇ ನಿಮಿಷಗಳಲ್ಲಿ ಸಿದ್ಧಪಡಿಸಿ ಕಾರ್ಯಾಚರಣೆ ನಡೆಸಬಹುದಾಗಿದೆ. ಶತ್ರುಗಳ ದಾಳಿಯ ದಿಕ್ಕು ತಪ್ಪಿಸಲು ಏಕಕಾಲದಲ್ಲಿ 4 ಭಾಗಗಳಲ್ಲಿ ಕ್ಷಿಪಣಿಗಳನ್ನು ಗಗನಕ್ಕೆ ಚಿಮ್ಮಿಸಿ ರಕ್ಷಣಾ ಕವಚ ನಿರ್ಮಿಸಬಹುದಾಗಿದೆ. ಅಲ್ಲದೇ ಶತ್ರುನೆಲೆಯಿಂದ ತೂರಿ ಬರುವ ಮಾನವ ರಹಿತ ವಿಮಾನ, ಖಂಡಾಂತರ ಮತ್ತು ಕ್ರೂಸ್ ಕ್ಷಿಪಣಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ.

    ಭಾರತಕ್ಕೆ ಅಗತ್ಯ ಏಕೆ?
    ಪಾಕ್ ಬಳಿ ಇರುವ 20 ಫೈಟರ್ ಸ್ಕ್ವಾಡ್ ಡ್ರೋನ್ಸ್ ಹಾಗೂ ಚೀನಾ ಬಳಿ ಇರುವ ಎಫ್-16, ಜೆ-17 ಆವೃತ್ತಿಯ ಫೈಟರ್ ಡ್ರೋನ್ ಹಾಗೂ 800 4-ಜೆನ್ ಫೈಟರ್ ವಿಮಾನಗಳಿಗೆ ಎಸ್-400 ವಾಯು ರಕ್ಷಣಾ ವ್ಯವಸ್ಥೆ ದಿಟ್ಟ ಉತ್ತರ ನೀಡಲಿದೆ. ಭಾರತ ಈ ವ್ಯವಸ್ಥೆಯನ್ನು ಚೀನಾ ಗಡಿಯಲ್ಲಿ ನಿಯೋಜಿಸಲು ಸಿದ್ಧತೆ ನಡೆಸಿದೆ. ಭಾರತಕ್ಕೆ ಈ ವ್ಯವಸ್ಥೆ ಬಂದರೆ ವಾಯು ಪಡೆಯ ಸಾಮರ್ಥ್ಯ ಹೆಚ್ಚಾಗಲಿದೆ.

    ಯಾವೆಲ್ಲ ದೇಶಗಳಲ್ಲಿ ಈ ವ್ಯವಸ್ಥೆ ಇದೆ?
    ರಷ್ಯಾದಿಂದ ಈ ವ್ಯವಸ್ಥೆಯನ್ನು ಮೊದಲು ಚೀನಾ ಖರೀದಿ ಮಾಡಿದೆ. 2014ರಲ್ಲಿ ಚೀನಾ ಒಪ್ಪಂದ ಮಾಡಿಕೊಂಡಿದ್ದು ಈಗಾಗಲೇ ಎಸ್-400 ಕ್ಷಿಪಣಿ ವ್ಯವಸ್ಥೆ ಚೀನಾಗೆ ತಲುಪಿದೆ. ಎಷ್ಟು ಪ್ರಮಾಣದಲ್ಲಿ ರಷ್ಯಾ ವಿತರಣೆ ಮಾಡಿದೆ ಎನ್ನುವುದು ತಿಳಿದು ಬಂದಿಲ್ಲ. ಕಳೆದ ವರ್ಷ ಟರ್ಕಿ ಜೊತೆ ಒಪ್ಪಂದ ನಡೆದಿದೆ. ಭಾರತ ಅಷ್ಟೇ ಅಲ್ಲದೇ ಕತಾರ್ ಎಸ್-400 ಖರೀದಿಸಲು ಆಸಕ್ತಿ ತೋರಿಸಿದೆ.

    ಒಪ್ಪಂದದ ಉದ್ದೇಶ ಏನು?
    ರಷ್ಯಾದೊಂದಿಗೆ ಚೀನಾ ಉತ್ತಮ ಬಾಂಧವ್ಯ ಹೊಂದಿದರೆ ಭವಿಷ್ಯದಲ್ಲಿ ಭಾರತಕ್ಕೆ ಸಮಸ್ಯೆ ಉಂಟಾಗಬಹುದು ಎನ್ನುವ ಕಾರಣ ಮೋದಿ ವ್ಲಾದಿಮಿರ್ ಪುಟಿನ್ ಜೊತೆ ಉತ್ತಮ ಸಂಪರ್ಕ ಬೆಳೆಸಿದ್ದರು. ಇದಕ್ಕಾಗಿ ಕಳೆದ ಮೇನಲ್ಲಿ ರಷ್ಯಾಗೆ ಭೇಟಿ ನೀಡಿ ಮಾತುಕತೆ ಕೂಡ ನಡೆಸಿದ್ದರು. ಈ ವೇಳೆಯೇ ಎಸ್-400 ವಾಯು ರಕ್ಷಣಾ ವ್ಯವಸ್ಥೆ ಖರೀದಿಸುವ ಒಪ್ಪಂದದ ಬಗ್ಗೆಯೂ ಚರ್ಚೆ ನಡೆಸಲಾಗಿತ್ತು. ಅಷ್ಟೇ ಅಲ್ಲದೇ ವಿಶ್ವದ ಮಿಲಿಟರಿ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಲು ಭಾರತಕ್ಕೆ ಎಸ್-400 ಸಹಕಾರಿಯಾಗಲಿದೆ.

    ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ  ಆತಂಕ ಯಾಕೆ?
    ರಷ್ಯಾದೊಂದಿಗಿನ ಭಾರತದ ಉತ್ತಮ ಸಂಬಂಧ ಹೊಂದಿರುವುದು ಅಮೆರಿಕ ಹಾಗೂ ಚೀನಾ, ಪಾಕಿಸ್ತಾನದ ನಿದ್ದೆಗೆಡಿಸಿದೆ. ಈಗಾಗಲೇ ಅಮೆರಿಕವೂ ರಷ್ಯಾ ಯುದ್ಧ ಸಾಮಾಗ್ರಿ ಖರೀದಿ ಮೇಲೆ ನಿರ್ಬಂಧ ವಿಧಿಸಿದೆ. ಇದರ ನಡುವೆಯೂ ಭಾರತ ದಿಟ್ಟ ನಿರ್ಧಾರ ಮಾಡಿ ಒಪ್ಪಂದಕ್ಕೆ ಸಹಿ ಹಾಕಲು ಮುಂದಾಗಿದೆ. ಭಾರತದ ನೆರೆ ದೇಶಗಳ ಪೈಕಿ ಚೀನಾ ಮತ್ತು ಪಾಕಿಸ್ತಾನದಿಂದಲೇ ಕಿರಿಕ್ ಜಾಸ್ತಿ. ಆಗಾಗ ಖಂಡಾಂತರ ಕ್ಷಿಪಣಿಗಳನ್ನು ಚೀನಾ, ಪಾಕಿಸ್ತಾನ ಪರೀಕ್ಷೆ ಮಾಡುತ್ತಲೇ ಇರುತ್ತದೆ. ಹೀಗಾಗಿ ಯಾವುದೇ ಸಮಯದಲ್ಲಿ ಆಗಬಹುದಾದ ದಾಳಿಯನ್ನು ಹಿಮ್ಮೆಟ್ಟಿಸುವ ಸಾಮರ್ಥ್ಯ ಭಾರತಕ್ಕೆ ಸಿಗಲಿದೆ.

    ಅಮೆರಿಕ ಎಚ್ಚರಿಕೆ:
    ಅಮೆರಿಕ ಯಾವಾಗಲೂ ತನ್ನ ಆರ್ಥಿಕ ಪ್ರಭಾವ ಬಳಸಿ ಇತರ ರಾಷ್ಟ್ರಗಳ ಆಂತರಿಕ ವಿಚಾರಕ್ಕೆ ತಲೆ ಹಾಕುತ್ತಿರುತ್ತದೆ. ರಷ್ಯಾ, ಇರಾನ್, ದಕ್ಷಿಣ ಕೊರಿಯಾ ದೇಶಗಳಿಗೆ ಆರ್ಥಿಕ ವ್ಯವಹಾರ ನಡೆಸುವ ಕುರಿತು ದಿಗ್ಬಂಧನ ವಿಧಿಸಿರುವ ಅಮೆರಿಕ ವಿಶ್ವದ ಇತರೆ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿತ್ತು. ಒಂದೊಮ್ಮೆ ಇದನ್ನು ಮೀರಿ ಇತರ ದೇಶಗಳು ಈ ರಾಷ್ಟ್ರಗಳೊಂದಿಗೆ ಹೆಚ್ಚಿನ ಆರ್ಥಿಕ ಒಪ್ಪಂದ ಮಾಡಿಕೊಂಡರೆ ಆ ದೇಶಗಳ ಮೇಲೂ ದಿಗ್ಬಂಧನ ವಿಧಿಸುವ ಅವಕಾಶವನ್ನು `ಕಾಟ್ಸಾ’ ಒಪ್ಪಂದ ಮೂಲಕ ಅಮೆರಿಕ ಹೊಂದಿದೆ. ಭಾರತ ಅಮೆರಿಕದಿಂದ ಸಾಕಷ್ಟು ಪ್ರಮಣದಲ್ಲಿ ರಕ್ಷಣಾ ಸಾಮಾಗ್ರಿಗಳನ್ನು ಖರೀದಿಸುತ್ತಿರುವ ಕಾರಣ ಭಾರತದ ಮೇಲೆ ನಿರ್ಬಂಧ ಹೇರಲಿಕ್ಕಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

    ಏನಿದು ಕಾಟ್ಸಾ?
    ರಕ್ಷಣಾ ಹಾಗೂ ಆರ್ಥಿಕ ಒಪ್ಪಂದಗಳನ್ನು ಭದ್ರಪಡಿಸಲು ಅಮೆರಿಕ ಕಾಟ್ಸಾ(ಕೌಂಟರಿಂಗ್ ಅಮೆರಿಕಾಸ್ ಅಡ್ವರ್ಸರೀಸ್ ಥ್ರೂ ಸ್ಯಾಂಕ್ಷನ್ಸ್ ಆಕ್ಟ್) ಕಾಯ್ದೆಯನ್ನು ತಂದಿದೆ. ವಿಶ್ವದ ದೊಡ್ಡಣ್ಣನಾಗಿರುವ ಅಮೆರಿಕ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಜೊತೆ ಉತ್ತಮ ಬಾಂಧವ್ಯಕ್ಕಾಗಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತದೆ. ದ್ವಿಪಕ್ಷೀಯ ಸಂಬಂಧ ಹೊಂದಿರುವ ದೇಶಗಳು ಅಮೆರಿಕ ನಿರ್ಬಂಧ ಹೇರಿದ ದೇಶಗಳೊಂದಿಗೆ ರಕ್ಷಣಾ ವ್ಯವಹಾರ ನಡೆಸಿದರೆ ಆ ದೇಶಗಳ ಮೇಲೆ ನಿರ್ಬಂಧ ಹೇರುವ ಅಧಿಕಾರ ಈ ಕಾಯ್ದೆಯಲ್ಲಿದೆ.

    ವಿಶ್ವಸಂಸ್ಥೆಯ ಕಾಯ್ದೆಯಲ್ಲ:
    ರಷ್ಯಾದಿಂದ ಟ್ರಯಂಫ್ ಖರೀದಿಗೆ ಅಮೆರಿಕದಿಂದ ವಿರೋಧ ವ್ಯಕ್ತವಾಗುತ್ತಿದ್ದ ಬೆನ್ನಲ್ಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿ, ಕಾಟ್ಸಾ ಕಾಯ್ದೆ ಅಮೆರಿಕದ್ದು ಹೊರತು ವಿಶ್ವಸಂಸ್ಥೆಯದ್ದಲ್ಲ. ಇದು ಭಾರತ ಮತ್ತು ರಷ್ಯಾದ ಆಂತರಿಕ ವಿಚಾರ ಎಂದು ಹೇಳಿ ತಿರುಗೇಟು ನೀಡಿದ್ದರು.

     

  • ಪ್ರೇಯಸಿಯ ಕೊಚ್ಚಿ ಕೊಚ್ಚಿ ಕೊಂದು ಮಾಂಸವನ್ನು ಟಾಯ್ಲೆಟಲ್ಲಿ ಫ್ಲಷ್ ಮಾಡ್ದ!

    ಪ್ರೇಯಸಿಯ ಕೊಚ್ಚಿ ಕೊಚ್ಚಿ ಕೊಂದು ಮಾಂಸವನ್ನು ಟಾಯ್ಲೆಟಲ್ಲಿ ಫ್ಲಷ್ ಮಾಡ್ದ!

    ಮಾಸ್ಕೋ: ಪ್ರಿಯತಮೆ ತನ್ನ ಜೊತೆ ಬಂದು ವಾಸಿಸಲು ತಯಾರಾಗಿಲ್ಲ ಎಂದು ಸಿಟ್ಟಿಗೆದ್ದ ಕಾಮುಕನೊಬ್ಬ ತನ್ನ ಪ್ರೇಯಸಿಯನ್ನು ಕೊಂದಿದ್ದಾನೆ. ಕೊಂದ ಬಳಿಕ ಆತ ಮಾಡಿದ ಕೆಲಸಕ್ಕೆ ಆತನ ಸಂಬಂಧಿಕರೇ ಬೆಚ್ಚಿ ಬಿದ್ದಿದ್ದು, ಆತ ಇಷ್ಟು ಕ್ರೂರನಾಗಿದ್ದು ಹೇಗೆ ಎಂದು ಕೇಳುತ್ತಿದ್ದಾರೆ. ಇನ್ನೂ ವಿಶೇಷ ಎಂದರೆ ಈತನಿಗೆ ಈ ಹಿಂದೆಯೇ ಮದುವೆಯಾಗಿ ಮಕ್ಕಳೂ ಇದ್ದಾರೆ. ಈ ಎಲ್ಲಾ ವಿಚಾರ ಮುಚ್ಚಿಟ್ಟು ಆತ ಇನ್ನೊಬ್ಬಳ ಜೊತೆ ಪ್ರೇಮದಾಟ ಶುರು ಮಾಡಿದ್ದನಂತೆ.

    ಕೊಂದಿದ್ದು ಯಾಕೆ..?
    ರಷ್ಯಾದ 36 ವರ್ಷದ ಡಿಮಿಟ್ರಿ ಝೆಲೆನ್ಸ್ಕಿ 27 ವರ್ಷನ ಟಾಟಿಯಾನಾ ಮೆಲೆಖಿನಾ ಎಂಬಾಕೆಯನ್ನು ಲವ್ ಮಾಡ್ತಿದ್ದ. ಅಲ್ಲದೆ ಆಕೆಯ ಜೊತೆ ಒಂದಾಗಿ ಬಾಳುವ ಕನಸನ್ನೂ ಬಿತ್ತಿದ್ದ. ಟಾಟಿಯಾನ ವಿದ್ಯಾಭ್ಯಾಸ ಮುಗಿದ ಬಳಿಕ ರಷ್ಯಾದ ಪೇಮ್ ನಗರದಲ್ಲಿ ನವ ಜೀವನ ಶುರು ಮಾಡಲು ಯೋಚಿಸಿದ್ದರು. ಹೀಗಾಗಿ ತನ್ನ ವಿದ್ಯಾಭ್ಯಾಸ ಮುಗಿಸಿದ ಬಳಿಕ ಟಾಟಿಯಾನಾ ಪೇಮ್ ನಗರಕ್ಕೆ ಬಂದಿದ್ದಾಳೆ. ಆದರೆ ಈ ಊರಿಗೆ ಬಂದಾಗ ಆಕೆಗೆ ಡಿಮಿಟ್ರಿಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದಾರೆ ಎಂಬ ವಿಚಾರ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳ ಶುರುವಾಗಿದೆ. ನಾನು ಯಾವುದೇ ಕಾರಣಕ್ಕೂ ಪೇಮ್ ನಲ್ಲಿ ವಾಸ ಮಾಡಲ್ಲ ಎಂದು ಟಾಟಿಯಾನಾ ಹೇಳಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಡಿಮಿಟ್ರಿ ಆಕೆಯನ್ನು ಕೊಂದಿದ್ದಾನೆ.

    ಮಾಂಸ, ಮೂಳೆ ಬೇರ್ಪಡಿಸಿ ಪುಡಿ ಪುಡಿ ಮಾಡ್ದ!
    ಪ್ರಿಯತಮೆಯ ವರ್ತನೆಯಿಂದ ಸಿಟ್ಟಿಗೆದ್ದ ಈತ ಪ್ರಿಯತಮೆಯನ್ನು ಕೊಂದಿದ್ದೇನೋ ಆಯ್ತು. ಆದರೆ ಕೊಲೆ ಮಾಡಿದ ವಿಚಾರ ಹೊರಜಗತ್ತಿಗೆ ಗೊತ್ತಾಗಬಾರದಲ್ಲ. ಅದಕ್ಕಾಗಿ ಹೊಸ ಪ್ಲ್ಯಾನ್ ಮಾಡ್ದ. ಪ್ರಿಯತಮೆಯ ಅಂಗಾಂಗಗಳನ್ನು ಕೊಚ್ಚಿ ಕೊಚ್ಚಿ ಕಟ್ ಮಾಡಿದ ಆತ ಅದರಿಂದ ಮೂಳೆ ಹಾಗೂ ಮಾಂಸವನ್ನು ಬೇರ್ಪಡಿಸಿದ. ಇಲ್ಲಿಗೇ ಈತನ ವಿಕೃತಿ ಮುಗಿಯಲಿಲ್ಲ. ಹೇಗಿದ್ದರೂ ತಾನವಳ ಮೃತದೇಹ ಹೊರಗಡೆ ಸಾಗಿಸಲು ಸಾಧ್ಯವಿಲ್ಲ ಎಂದು ಅರಿತಿದ್ದ ಆತ ಆ ಮಾಂಸಗಳನ್ನು ಮತ್ತೆ ಕೊಚ್ಚಿ ಪುಡಿ ಪುಡಿ ಮಾಡಿದ. ಬಳಿಕ ಆ ಮಾಂಸದ ಮುದ್ದೆಯನ್ನು ಟಾಯ್ಲೆಟ್ ನ ಕಮೋಡ್ ಗೆ ಹಾಕಿ ಫ್ಲಷ್ ಮಾಡಿದ್ದಾನೆ. ಬಳಿಕ ಆಕೆಯ ಎಲುಬನ್ನು ಚೂರು ಚೂರು ಮಾಡಿ ಮೀನುಗಳಿಗೆ ಆಹಾರವಾಗಲಿ ಎಂದು ನದಿಗೆಸೆದಿದ್ದಾನೆ. ಆದರೆ ಯಾವಾಗ ಟಾಟಿಯಾನಾಳ ತಂದೆ ಪೊಲೀಸರಿಗೆ ದೂರು ನೀಡಿದರೋ ತನಿಖೆ ಶುರುವಾಗಿದೆ. ಇದರ ವಿಚಾರಣೆ ಆರಂಭಿಸಿದ ಪೊಲೀಸರು ನೇರವಾಗಿ ಬಂದು ಡಿಮಿಟ್ರಿ ಮನೆ ಬಾಗಿಲು ಬಡಿದಿದ್ದಾರೆ.

    ಬರಲಿಲ್ಲ ಫೋನು, ಮಾಡಿದ್ರು ಕಂಪ್ಲೇಂಟು!
    ಯಾವಾಗ ಪೊಲೀಸರು ಈತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಶುರು ಮಾಡಿದರೋ ಡಿಮಿಟ್ರಿ ತಪ್ಪೊಪ್ಪಿಕೊಂಡಿದ್ದಾನೆ. ಕೊಲೆ ಮಾಡಿದ್ದು ಯಾರಿಗೂ ಗೊತ್ತಾಗದೇ ಇರಲಿ ಎಂದು ಮಾಂಸವನ್ನು ಪುಡಿ ಪುಡಿ ಮಾಡಿ ಟಾಯ್ಲೆಟ್ ಗೆ ಹಾಕಿದ್ದೇನೆ. ಮೂಳೆಗಳನ್ನು ನದಿಗೆ ಎಸೆದಿದ್ದೇನೆ ಎಂದು ಹೇಳಿದ್ದಾನೆ. ಮನೆಯಿಂದ ಹೊರಟಿದ್ದ ಟಾಟಿಯಾನಾ ನಾನು ಪೇಮ್ ತಲುಪುತ್ತಿದ್ದಂತೆ ಫೋನ್ ಮಾಡುತ್ತೇನೆ ಎಂದು ಅಪ್ಪನಿಗೆ ಮಾತು ಕೊಟ್ಟಿದ್ದಾಳೆ. ಆದರೆ ಮಗಳ ಫೋನ್ ಕಾಲ್ ಬಾರದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾದ ಅಪ್ಪ ಪೊಲೀಸರಿಗೆ ಕಂಪ್ಲೇಂಟ್ ನೀಡಿದ್ದಾರೆ.

    ಡಿಮಿಟ್ರಿ ಈಗಾಗಲೇ ಮದುವೆಯಾಗಿದ್ದವಳ ಹೆಸರೂ ಟಾಟಿಯಾನಾ. ಸ್ಥಳೀಐ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಏನು ಹೇಳಬೇಕು ಅಂತಾ ಗೊತ್ತಾಗುತ್ತಿಲ್ಲ. ನಾವಿಬ್ಬರೂ ಬೇರೆ ಬೇರೆಯಾಗೇ ವಾಸ ಮಾಡುತ್ತಿದ್ದೆವು. ಆದರೆ ಡೈವೋರ್ಸ್ ಆಗಿರಲಿಲ್ಲ. ಆತ ಇಷ್ಟೊಂದು ಕ್ರೂರಿ ಎಂದು ನನಗೆ ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ. ಸದ್ಯ ಡಿಮಿಟ್ರಿ ಪೊಲೀಸರ ವಶದಲ್ಲಿದ್ದು ವಿಚಾರಣೆ ಮುಂದುವರಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಸೂಪರ್ ಮಾರ್ಕೆಟ್ ನಲ್ಲೇ ಸೆಕ್ಸ್ – ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ!

    ಸೂಪರ್ ಮಾರ್ಕೆಟ್ ನಲ್ಲೇ ಸೆಕ್ಸ್ – ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ!

    ಮಾಸ್ಕೋ: ಜನಸಂದಣಿಯಿಂದ ಇದ್ದ ಸೂಪರ್ ಮಾರ್ಕೆಟ್ ನಲ್ಲಿಯೇ ಜೋಡಿಯೊಂದು ಅಸಭ್ಯವಾಗಿ ಸೆಕ್ಸ್ ಮಾಡಲು ಮುಂದಾಗಿದ್ದ ಘಟನೆ ರಷ್ಯಾದಲ್ಲಿ ನಡೆದಿದೆ.

    ನೈಋತ್ಯ ರಷ್ಯಾದ ಕ್ರಾಸ್ನೋಡರ್ ಕ್ರೈ ಪ್ರದೇಶದಲ್ಲಿನ ಉಡಾಚಾ ಸೂಪರ್ ಮಾರುಕಟ್ಟೆ ಜೋಡಿಯೊಂದು ಜನರು ಇದ್ದ ಸ್ಥಳದಲ್ಲಿಯೇ ಅಸಭ್ಯವಾಗಿ ಸೆಕ್ಸ್ ಮಾಡಲು ಮುಂದಾಗಿದ್ದರು. ಇವರಿಬ್ಬರ ರಾಸಲೀಲೆ ಮಾರ್ಕೆಟ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಕ್ಯಾಶ್ ಕೌಂಟರ್ ಬಳಿ ಮಹಿಳೆಯೊಬ್ಬಳು ನಿಂತಿದ್ದು, ಆಕೆಯ ಹಿಂದೆ ವ್ಯಕ್ತಿಯೊಬ್ಬ ನಿಂತುಕೊಂಡಿದ್ದನು. ಯಾರು ಇಲ್ಲದೇ ಇರುವುದನ್ನ ಗಮನಿಸಿ ಆಕೆಯ ಜೊತೆ ಸೆಕ್ಸ್ ಮಾಡಲು ಮುಂದಾಗಿದ್ದನು. ಈ ವೇಳೆ ಯಾರೋ ಕ್ಯಾಶ್ ಕೌಂಟರ್ ಬಳಿ ಬಂದಿದ್ದಾರೆ. ಆಗ ಮಹಿಳೆ ತನ್ನ ಬಟ್ಟೆಯನ್ನು ಸರಿ ಮಾಡಿಕೊಂಡಿದ್ದಾಳೆ. ಬಳಿಕ ಇಬ್ಬರು ಶಾಪ್ ನಲ್ಲಿದ್ದ ಪ್ರೀಡ್ಜ್ ಬಳಿ ಹೋಗಿ ಅಲ್ಲಿ ತಮ್ಮ ರಾಸಲೀಲೆಯನ್ನು ಮುಂದುವರಿಸಿದ್ದಾರೆ.

    ಈ ಎಲ್ಲ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಅನೇಕರು ಈ ವಿಡಿಯೋ ಬಗ್ಗೆ ವ್ಯಂಗ್ಯವಾಗಿ ಕಮೆಂಟ್ ಮಾಡಿದ್ದಾರೆ. ಈ ಕುರಿತು ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ ಎಂದು ಸೂಪರ್ ಮಾರುಕಟ್ಟೆ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

  • ಎಟಿಎಂ ನಲ್ಲಿಯೇ ಯುವಕ-ಯುವತಿ ರಾಸಲೀಲೆ!

    ಎಟಿಎಂ ನಲ್ಲಿಯೇ ಯುವಕ-ಯುವತಿ ರಾಸಲೀಲೆ!

    ಮಾಸ್ಕೋ: ಜೋಡಿಯೊಂದು ಅಸಭ್ಯವಾಗಿ ಎಟಿಎಂನಲ್ಲಿ ರಾಸಲೀಲೆ ನಡೆಸಿದ್ದು, ಈಗ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಈ ಘಟನೆ ರಷ್ಯಾದಲ್ಲಿನ ಸಮರ ನಗರದಲ್ಲಿ ನಡೆದಿದ್ದು, ನಗರದಲ್ಲಿರುವ ಬ್ಯಾಂಕಿನ ಎಟಿಎಂನಲ್ಲಿ ಈ ರೀತಿ ಅಸಭ್ಯವಾಗಿ ವರ್ತಿಸಿದ್ದಾರೆ. ಈ ದೃಶ್ಯವನ್ನು ದಾರಿಯಲ್ಲಿ ಹೋಗುತ್ತಿದ್ದ ಸಾರ್ವಜನಿಕರು ವಿಡಿಯೋ ಮಾಡಿದ್ದಾರೆ.

    ವಿಡಿಯೋದಲ್ಲಿ ರಸ್ತೆ ಪಕ್ಕದಲ್ಲಿದ್ದ ಬ್ಯಾಂಕೊಂದರಲ್ಲಿ ಎಟಿಎಂ ಮಷೀನ್ ಇರಿಸಲಾಗಿತ್ತು. ಆ ಬ್ಯಾಂಕಿನ ಸುತ್ತಾ ಗ್ಲಾಸಿನಿಂದ ಮುಚ್ಚಲಾಗಿದೆ. ಯುವಕ-ಯುವತಿ ಎಟಿಎಂ ಒಳ ಹೋಗಿ ಇಬ್ಬರು ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಈ ಎಲ್ಲ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ರಸ್ತೆಯ ಪಕ್ಕದಲ್ಲಿಯೇ ಎಟಿಎಂ ಇದ್ದುದ್ದರಿಂದ ದಾರಿಯಲ್ಲಿ ಹೋಗುವವರೆಲ್ಲರೂ ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

    ಈ ವಿಡಿಯೋ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆದ ಮೇಲೆ ಅನೇಕರು ಯುವಕ-ಯುವತಿಯ ಬಗ್ಗೆ ಅನೇಕ ಕಮೆಂಟ್ ಮಾಡಿದ್ದಾರೆ. ಎಟಿಎಂನಲ್ಲಿದ್ದ ಜೋಡಿ ಕಂಠಪೂರ್ತಿ ಕುಡಿದಿದ್ದು, ಅವರ ಪಕ್ಕದಲ್ಲಿ ಬಿಯರ್ ಬಾಟಲ್ ಗಳಿವೆ ಎಂದು ಕಮೆಂಟ್ ಮಾಡಿದ್ದಾರೆ.

    ಮತ್ತೊಬ್ಬರು ಯುವತಿ ಬ್ಯಾಂಕಿನಲ್ಲಿ ಸಾಲ ಪಡೆದುಕೊಂಡಿದ್ದು, ಅದನ್ನು ತೀರಿಸಲು ಎಟಿಎಂ ಒಳಗೆ ಇದ್ದಾಳೆ ಎಂದು ವ್ಯಂಗ್ಯವಾಗಿ ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಅದನ್ನು ವಿಡಿಯೋ ಮಾಡುವ ಬದಲು ಪೊಲೀಸರಿಗೆ ಕರೆ ಮಾಡಿ ತಿಳಿಸಿಬೇಕಿತ್ತು ಎಂದು ಹೇಳಿದ್ದಾರೆ.

    ಸದ್ಯಕ್ಕೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವ-ಯುವತಿಯ ವಿಡಿಯೋ ಬಗ್ಗೆ ವ್ಯಂಗ್ಯವಾಗಿ ಕಮೆಂಟ್ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಇಂಗ್ಲೆಂಡಿನ ಹ್ಯಾರಿ ಕೇನ್‍ಗೆ ಗೋಲ್ಡನ್ ಬೂಟ್: ಯಾವ ತಂಡಗಳಿಗೆ ಎಷ್ಟು ಕೋಟಿ ನಗದು ಬಹುಮಾನ ಸಿಕ್ಕಿದೆ?

    ಇಂಗ್ಲೆಂಡಿನ ಹ್ಯಾರಿ ಕೇನ್‍ಗೆ ಗೋಲ್ಡನ್ ಬೂಟ್: ಯಾವ ತಂಡಗಳಿಗೆ ಎಷ್ಟು ಕೋಟಿ ನಗದು ಬಹುಮಾನ ಸಿಕ್ಕಿದೆ?

    ಮಾಸ್ಕೋ: ತೀವ್ರ ಹಣಾಹಣಿ ಮೂಲಕ ಒಂದು ತಿಂಗಳ ಕಾಲ ನಡೆದ ಫಿಫಾ ವಿಶ್ವಕಪ್‍ಗೆ ತೆರೆಕಂಡಿದ್ದು, ಫೈನಲ್‍ನಲ್ಲಿ ಫ್ರಾನ್ಸ್ ತಂಡ ಪ್ರಶಸ್ತಿ ಗೆದ್ದು ಬೀಗಿದೆ. ಇತ್ತ ಟೂರ್ನಿಯಲ್ಲಿ ನೀಡಲಾಗುವ ಪ್ರತಿಷ್ಠಿತ ಗೋಲ್ಡನ್ ಬೂಟ್ ಪ್ರಶಸ್ತಿಯನ್ನು 6 ಗೋಲು ಹೊಡೆದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಕೇನ್ ಪಡೆದಿದ್ದು, ಗೋಲ್ಡನ್ ಬಾಲ್ ಪ್ರಶಸ್ತಿಯನ್ನು ಕ್ರೊವೇಷಿಯಾದ ಲೂಕ ಮೋಡ್ರಿಚ್ ಪಡೆದಿದ್ದಾರೆ.

    ಟೂರ್ನಿಯ ಉತ್ತಮ ಆಟಗಾರರ ಪಟ್ಟಿಯಲ್ಲಿ ಬೆಲ್ಜಿಯಂ ಆಟಗಾರ ಈಡನ್ ಹರ್ಝಡ್, ಫ್ರಾನ್ಸ್ ನ ಆಂಟೊನಿ ಗ್ರಿಯೇಜ್ಮನ್ ಕ್ರಮವಾಗಿ 2ನೇ ಮತ್ತು 3ನೇ ಸ್ಥಾನವನ್ನು ಪಡೆದಿದ್ದಾರೆ. ಉಳಿದಂತೆ ಯುವ ಉದಯೋನ್ಮುಕ ಆಟಗಾರ ಪ್ರಶಸ್ತಿಗೆ ಫ್ರಾನ್ಸ್ ಆಟಗಾರ ಕೈಲ್ಯಾನ್ ಪಾತ್ರರಾಗಿದ್ದಾರೆ.

    ಟೂರ್ನಿಯ ಉತ್ತಮ ಗೋಲ್ ಕೀಪರ್ ಗೆ ನೀಡುವ ಗೋಲ್ಡನ್ ಗ್ಲೌಸ್ ಪ್ರಶಸ್ತಿಯನ್ನು ಬೆಲ್ಜಿಯಂ ಆಟಗಾರ ಥೈಬೌಟ್ ಕೋರ್ಟಿಸ್ ಪಡೆದಿದ್ದಾರೆ. ಇನ್ನು ಈ ಬಾರಿಯ ಟೂರ್ನಿಯಲ್ಲಿ ಒಟ್ಟಾರೆ 169 ಗೋಲು ದಾಖಲಾಗಿದ್ದು, ವಿಶೇಷವಾಗಿ ಪೆನಾಲ್ಟಿ ಕಿಕ್ ಮೂಲಕ 21 ಗೋಲು ಬಾರಿಸಲಾಗಿದೆ.

    ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಕೇನ್ ಗೋಲ್ಡನ್ ಬೂಟ್ ಪ್ರಶಸ್ತಿ ಪಡೆದ ಎರಡನೇ ಇಂಗ್ಲೆಂಡ್ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದು, ಈ ಹಿಂದೆ 1986 ರಲ್ಲಿ ಗ್ಯಾರಿ ಲೈಕರ್ 6 ಗೋಲ್ ಬಾರಿಸಿ ಮೊದಲಿಗಾರಾಗಿ ಹೊರ ಹೊಮ್ಮಿದ್ದರು. ಗೋಲ್ಡನ್ ಬೂಟ್ ಪ್ರಶಸ್ತಿಯನ್ನು 2010 ರ ವಿಶ್ವಕಪ್ ಬಳಿಕ ನೀಡಲಾಗುತ್ತಿದ್ದು, ಇದಕ್ಕೂ ಮುನ್ನ ಟೂರ್ನಿಯ ಅತೀ ಹೆಚ್ಚು ಗೋಲ್ ಗಳಿಸಿದ ಆಟಗಾರ ಎಂದು ಪ್ರಕಟಿಸಲಾಗುತ್ತಿತ್ತು. ವಿಶೇಷವಾಗಿ ಗೋಲ್ಡನ್ ಬೂಟ್ ಪ್ರಶಸ್ತಿ ಪಡೆದ ಹಲವು ಆಟಗಾರರು ಟೂರ್ನಿಯಲ್ಲಿ 6 ಗೋಲ್ ಗಳಿಸಿ ಅಚ್ಚರಿ ಮೂಡಿಸಿದ್ದಾರೆ.

    ಪ್ರಶಸ್ತಿಯ ಮೊತ್ತ:
    ಚಾಂಪಿಯನ್ ತಂಡ – 260 ಕೋಟಿ ರೂ.
    ರನ್ನರ್-ಅಪ್ ತಂಡ – 191 ಕೋಟಿ ರೂ.
    ಮೂರನೇ ರನ್ನರ್ ಅಪ್ – 164 ಕೋಟಿ ರೂ.
    ನಾಲ್ಕನೇ ರನ್ನರ್ ಅಪ್ _ 150 ಕೋಟಿ ರೂ.
    ಕ್ವಾಟರ್ ಫೈನಲ್ 01 – 109 ಕೋಟಿ ರೂ.
    ಗ್ರೂಪ್ 16 ತಂಡ – 82 ಕೋಟಿ ರೂ.
    ಆರಂಭಿಕ ಲೀಗ್ – 54 ಕೋಟಿ ರೂ.