Tag: Ruturaj Gaikwad

  • ಮೊದಲ ಓವರ್‌ನಲ್ಲೇ 2 ವಿಕೆಟ್‌ ಉಡೀಸ್‌ – 11 ತಿಂಗಳ ಬಳಿಕ ಎಂಟ್ರಿ ಕೊಟ್ಟು ​ಭಾರತಕ್ಕೆ ಜಯ ತಂದ ಬುಮ್ರಾ

    ಮೊದಲ ಓವರ್‌ನಲ್ಲೇ 2 ವಿಕೆಟ್‌ ಉಡೀಸ್‌ – 11 ತಿಂಗಳ ಬಳಿಕ ಎಂಟ್ರಿ ಕೊಟ್ಟು ​ಭಾರತಕ್ಕೆ ಜಯ ತಂದ ಬುಮ್ರಾ

    ಡಬ್ಲಿನ್‌: ಬರೋಬ್ಬರಿ 11 ತಿಂಗಳ ಬಳಿಕ ಟೀಂ ಇಂಡಿಯಾಕ್ಕೆ ಉತ್ತಮ ಕಂಬ್ಯಾಕ್‌ ಮಾಡಿರುವ ಸ್ಟಾರ್‌ ವೇಗಿ ಜಸ್ಪ್ರೀತ್‌ ಬುಮ್ರಾ (Jasprit Bumrah) ಐರ್ಲೆಂಡ್‌ ವಿರುದ್ಧ ನಾಯಕನಾಗಿ ಕಣಕ್ಕಿಳಿದು ಟೀಂ ಇಂಡಿಯಾಕ್ಕೆ (Team India) ಜಯ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಮೊದಲ ಓವರ್‌ನ 4 ಎಸೆತಗಳಲ್ಲೇ 2 ವಿಕೆಟ್‌ ಪಡೆಯುವ ಮೂಲಕ ಮತ್ತೆ ಫಾರ್ಮ್‌ ಸಾಬೀತುಪಡಿಸಿದ್ದಾರೆ.

    ಐರ್ಲೆಂಡ್‌ (Ireland) ವಿರುದ್ಧ ಆರಂಭಗೊಂಡಿರುವ 3 ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯದಲ್ಲೇ 2 ರನ್‌ಗಳ ರೋಚಕ ಜಯ ಸಾಧಿಸಿದೆ. ಮಲಾಹೈಡ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್‌ 7 ವಿಕೆಟ್‌ ನಷ್ಟಕ್ಕೆ 139 ರನ್‌ ಕಲೆಹಾಕಿತ್ತು. 140 ರನ್‌ಗಳ ಗುರಿ ಪಡೆದ ಟೀಂ ಇಂಡಿಯಾ 6.5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 47 ರನ್‌ ಗಳಿಸಿತ್ತು. ಈ ನಡುವೆ ಮಳೆ ಅಡ್ಡಿಯಾಗಿದ್ದರಿಂದ ಡಕ್ವರ್ತ್‌ ಲೂಯಿಸ್‌ ನಿಯಮ ಅನ್ವಯಿಸಲಾಯಿತು. ಇದರಿಂದ ಭಾರತ 2 ರನ್‌ಗಳ ರೋಚಕ ಜಯ ಸಾಧಿಸಿತು.

    ಟಾಸ್‌ ಸೋತು ಕ್ರೀಸ್‌ಗಿಳಿದ ಐರ್ಲೆಂಡ್‌, ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿತು. ಪವರ್‌ ಪ್ಲೇ ಮುಗಿಯುವ ವೇಳೆಗೆ 30 ರನ್‌ ಗಳಿಗೆ ಪ್ರಮುಖ 4 ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ ಕೊನೆಯಲ್ಲಿ ಆಲ್‌ರೌಂಡರ್‌ ಬ್ಯಾರಿ ಜಾನ್ ಮೆಕಾರ್ಥಿ (Barry John McCarthy) 33 ಎಸೆತಗಳಲ್ಲಿ ಅಜೇಯ 51 ರನ್‌ (4 ಬೌಂಡರಿ, 4 ಸಿಕ್ಸರ್‌) ಹಾಗೂ ಕರ್ಟಿಸ್ ಕ್ಯಾಂಫರ್ 33 ಎಸೆತಗಳಲ್ಲಿ 33 ರನ್‌ ಗಳಿಸುವ ಮೂಲಕ ತಂಡದ ಮೊತ್ತವನ್ನು 130ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಪರಿಣಾಮ ಐರ್ಲೆಂಡ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 139 ರನ್‌ ಗಳಿಸಿತ್ತು. ಇದನ್ನೂಓದಿ: ಇಂದಿನಿಂದ IND vs IRE ಟಿ20 ಸರಣಿ ಆರಂಭ – 11 ತಿಂಗಳ ಬಳಿಕ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಬುಮ್ರಾ

    ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ನಾಯಕ ಬುಮ್ರಾ 4 ಓವರ್‌ಗಳಲ್ಲಿ 24 ರನ್‌ ಬಿಟ್ಟುಕೊಟ್ಟು 2 ವಿಕೆಟ್‌ ಪಡೆದರೆ, ಪ್ರಸಿದ್ಧ್‌ ಕೃಷ್ಣ 4 ಓವರ್‌ಗಳಲ್ಲಿ 2 ವಿಕೆಟ್‌ ಪಡೆದು ಫಾರ್ಮ್‌ ಸಾಬೀತು ಮಾಡಿದರು. ಇದರೊಂದಿಗೆ ರವಿ ಬಿಷ್ಣೋಯಿ 2 ವಿಕೆಟ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ 1 ವಿಕೆಟ್‌ ಪಡೆದರು. ಇದನ್ನೂಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ವಿರಾಟ್‌ – ಕಿಂಗ್‌ ಆದ ಕೊಹ್ಲಿಯ ರೋಚಕ ಜರ್ನಿ

    140 ರನ್‌ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್‌ (Yashasvi Jaiswal) 23 ಎಸೆತಗಳಲ್ಲಿ 24 ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೇ ತಿಲಕ್‌ ವರ್ಮಾ ಕೋಡ ಸುಲಭ ಕ್ಯಾಚ್‌ಗೆ ತುತ್ತಾದರು. ಆರಂಭಿಕ ಋತುರಾಜ್‌ ಗಾಯಕ್ವಾಡ್‌ 19 ರನ್‌ ಹಾಗೂ ಸಂಜು ಸ್ಯಾಮ್ಸನ್‌ 1 ರನ್‌ ಗಳಿಸಿ ಕ್ರೀಸ್‌ನಲ್ಲಿದರು. ಈ ವೇಳೆ ಮಳೆ ಅಡ್ಡಿಯಾಯಿತು, ಮಳೆ ನಿಲ್ಲದ ಕಾರಣ ಡಕ್ವರ್ತ್‌ ಲೂಯಿಸ್‌ ನಿಯಮದ ಅನ್ವಯ ಜಯದ ತಂಡವನ್ನ ಘೋಷಿಸಲಾಯಿತು. ಭಾರತ 2 ರನ್‌ಗಳ ರೋಚಕ ಜಯ ಸಾಧಿಸಿತು. ಐರ್ಲೆಂಡ್‌ ಪರ ಕ್ರೇಗ್ ಯಂಗ್ 5 ಎಸೆತಗಳಲ್ಲಿ 2 ರನ್‌ ನೀಡಿ 2 ವಿಕೆಟ್‌ ಕಿತ್ತರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದಿನಿಂದ IND vs IRE ಟಿ20 ಸರಣಿ ಆರಂಭ – 11 ತಿಂಗಳ ಬಳಿಕ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಬುಮ್ರಾ

    ಇಂದಿನಿಂದ IND vs IRE ಟಿ20 ಸರಣಿ ಆರಂಭ – 11 ತಿಂಗಳ ಬಳಿಕ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಬುಮ್ರಾ

    ಡಬ್ಲಿನ್: ಏಕದಿನ ಏಷ್ಯಾಕಪ್‌ (AsiaCup 2023) ಹಾಗೂ ವಿಶ್ವಕಪ್‌ (WorldCup 2023) ಟೂರ್ನಿಗೆ ಬಲಿಷ್ಠ ತಂಡ ಆಯ್ಕೆ ಮಾಡಲು ಕಸರತ್ತು ನಡೆಸುತ್ತಿರುವ ಬಿಸಿಸಿಐ ಶುಕ್ರವಾರದಿಂದ ಆರಂಭಗೊಳ್ಳಲಿರುವ ಐರ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನೂ ಲಘುವಾಗಿ ಪರಿಗಣಿಸುವಂತಿಲ್ಲ.

    ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್ಪ್ರೀತ್‌ ಬುಮ್ರಾ (Jasprit Bumrah) ಬರೋಬ್ಬರಿ 11 ತಿಂಗಳ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಾಪಸಾಗುತ್ತಿದ್ದು, ಐರ್ಲೆಂಡ್‌ ಸರಣಿಯಲ್ಲಿ ಟೀಂ ಇಂಡಿಯಾವನ್ನ ಮುನ್ನಡೆಸಲಿದ್ದಾರೆ. ಈ ಸರಣಿಯು ಹಲವು ಯುವ ಆಟಗಾರರಿಗೆ 2024ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನಕ್ಕಾಗಿ ಆಯ್ಕೆಗಾರರ ಗಮನ ಸೆಳೆಯಲು ಅವಕಾಶ ನೀಡಲಿದೆ. ವಿಂಡೀಸ್‌ ಸರಣಿಯಲ್ಲಿ ಅನುಭವಿ ಆಟಗಾರರೊಂದಿಗೆ ಹೊಸಬರನ್ನ ಕಣಕ್ಕಿಳಿಸುವ ಪ್ರಯೋಗ ಮಾಡಿದ್ದ ಟೀಂ ಇಂಡಿಯಾ (Team India) ಸರಣಿ ಸೋತು ನಿರಾಸೆ ಅನುಭವಿಸಿತ್ತು. ಇದೀಗ ಐರ್ಲೆಂಡ್‌ ಸರಣಿಯಲ್ಲಿ ಬಹುತೇಕ ಹೊಸ ಮುಖಗಳಿಗೆ ಮಣೆಹಾಕಿರುವುದು ಕುತೂಹಲ. ಇದನ್ನೂ ಓದಿ: ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುವುದು ಮುಖ್ಯ, ನನ್ನ ಆಯ್ಕೆಯಲ್ಲ: ಮೌನ ಮುರಿದ ಅಶ್ವಿನ್

    ಬೂಮ್ರಾ ಜೊತೆ ಮತ್ತೊಬ್ಬ ವೇಗಿ ಪ್ರಸಿದ್ಧ ಕೃಷ್ಣ ಸಹ ಹಲವು ತಿಂಗಳ ಬಳಿಕ ಕ್ರಿಕೆಟ್‌ಗೆ ವಾಪಾಸಾಗಿದ್ದು, ಕಣಕ್ಕಿಳಿಯಲು ಕಾತರಿಸುತ್ತಿದ್ದಾರೆ. ಏಷ್ಯಾಕಪ್ ಹಾಗೂ ವಿಶ್ವಕಪ್ ತಂಡಕ್ಕೆ ಆಯ್ಕೆ ನಿರೀಕ್ಷೆಯಲ್ಲಿರುವ ಈ ಇಬ್ಬರು, ಫಿಟ್‌ನೆಸ್‌ ಸಾಬೀತುಪಡಿಸಲು ಎದುರು ನೋಡುತ್ತಿದ್ದಾರೆ. 2024ರ ಟಿ20 ವಿಶ್ವಕಪ್‌ಗೂ ಯುವ ಆಟಗಾರರ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ 2023ರ ಐಪಿಎಲ್‌ನಲ್ಲಿ ಮಿಂಚಿದ ಜಿತೇಶ್‌ ಶರ್ಮಾ, ರಿಂಕು ಸಿಂಗ್, ಋತುರಾಜ್ ಗಾಯಕ್ವಾಡ್ ಜೊತೆಗೆ ವಿಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿ ಮೂಲಕ ಟೀಂ ಇಂಡಿಯಾಕ್ಕೆ ಆರಂಭಿಕನಾಗಿ ಎಂಟ್ರಿ ಕೊಟ್ಟ ಯಶಸ್ವಿ ಜೈಸ್ವಾಲ್‌ ಮೇಲೂ ನಿರೀಕ್ಷೆ ಇಡಲಾಗಿದೆ.

    ಟಿ20ಗೆ ಭಾರತ ತಂಡ ಹೀಗಿದೆ:
    ಜಸ್ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಶಿವಂ ದುಬೆ, ವಾಷಿಂಗ್ಟನ್‌ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷ್‌ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್. ಇದನ್ನೂ ಓದಿ: ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್‌ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ

    ಪಂದ್ಯ ಎಲ್ಲಿ ಯಾವಾಗ? 
    ಮೊದಲ ಟಿ20 – ಆಗಸ್ಟ್‌ 18
    2ನೇ ಟಿ20 – ಆಗಸ್ಟ್‌ 20
    3ನೇ ಟಿ20 – ಆಗಸ್ಟ್‌ 23

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್‌ – ಐರ್ಲೆಂಡ್‌ T20 ಸರಣಿಗೆ ಬುಮ್ರಾ ನಾಯಕ, ರಿಂಕು ಸಿಂಗ್‌ಗೆ ಚಾನ್ಸ್‌

    ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್‌ – ಐರ್ಲೆಂಡ್‌ T20 ಸರಣಿಗೆ ಬುಮ್ರಾ ನಾಯಕ, ರಿಂಕು ಸಿಂಗ್‌ಗೆ ಚಾನ್ಸ್‌

    ಮುಂಬೈ: ಐರ್ಲೆಂಡ್‌ (Ireland) ವಿರುದ್ಧದ ಅಂತಾರಾಷ್ಟ್ರೀಯ ಟಿ20 ಸರಣಿಗೆ 15 ಸದಸ್ಯರ ಭಾರತ ತಂಡವನ್ನ ಬಿಸಿಸಿಐ ಸೋಮವಾರ ಪ್ರಕಟಿಸಿದ್ದು, ಗಾಯದಿಂದ ಸಂಪೂರ್ಣ ಗುಣಮುಖರಾಗಿರುವ ಸ್ಟಾರ್‌ ವೇಗಿ ಜಸ್ಪ್ರೀತ್‌ ಬುಮ್ರಾ (Jasprit Bumrah) ಅವರು ಸ್ಥಾನ ಪಡದಿದ್ದಾರೆ.

    ಹಾರ್ದಿಕ್‌ ಪಾಂಡ್ಯ (Hardik Pandya) ಅನುಪಸ್ಥಿತಿಯಿಂದಾಗಿ ಬುಮ್ರಾ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಆರಂಭಿಕ ಬ್ಯಾಟ್ಸ್‌ಮ್ಯಾನ್‌ ಋತುರಾಜ್‌ ಗಾಯಕ್ವಾಡ್‌ಗೆ (Ruturaj Gaikwad) ಉಪ ನಾಯಕನ ಜವಾಬ್ದಾರಿ ನೀಡಲಾಗಿದೆ. ಈ ಮೂಲಕ ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳ ಬಳಿಕ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್‌ ಬುಮ್ರಾ ಕೊನೆಗೂ ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್‌ ಮಾಡಿದ್ದಾರೆ.

    ಆಗಸ್ಟ್‌ 18 ರಿಂದ 23ರ ವರೆಗೆ ನಡೆಯಲಿರುವ ಐರ್ಲೆಂಡ್‌ ಟಿ20 ಸರಣಿಗೆ (Ireland T20I Series) ಸೋಮವಾರ ಭಾರತ ತಂಡ ಪ್ರಕಟವಾಗಿದ್ದು ಬುಮ್ರಾಗೆ ನಾಯಕತ್ವದ ಹೊಣೆ ನೀಡಲಾಗಿದೆ. ಅಲ್ಲದೇ ಐರ್ಲೆಂಡ್‌ ಸರಣಿಗೆ ಬಹುತೇಕ ಹೊಸ ಯುವ ಆಟಗಾರರಿಗೆ ಟೀಂ ಇಂಡಿಯಾ ಮಣೆಹಾಕಿದೆ.

    2023ರ ಐಪಿಎಲ್‌ ಟೂರ್ನಿಯಲ್ಲಿ ಗುರುತಿಸಿಕೊಂಡ ರಿಂಕು ಸಿಂಗ್‌, ತಿಲಕ್‌ ವರ್ಮಾ, ಯಶಸ್ವಿ ಜೈಸ್ವಾಲ್‌, ಜಿತೇಶ್‌ ಶರ್ಮಾ ಮೊದಲಾದವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ನೀಡಲಾಗಿದೆ. ಪ್ರಸಿದ್ಧ್‌ ಕೃಷ್ಣ ಕೂಡ ಕಂಬ್ಯಾಕ್‌ ಮಾಡಿದ್ದಾರೆ. ಇದನ್ನೂ ಓದಿ: ಧೋನಿ ವಿಮಾನದಲ್ಲಿ ಮಲಗಿದ್ದಾಗ ಕದ್ದು ಫೋಟೋ ಕ್ಲಿಕ್ – ಗಗನಸಖಿ ನಿರ್ಧಾರ ಸರಿಯೇ?

    ಈ ಕುರಿತು ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಬುಬ್ರಾ ಸಂಪೂರ್ಣ ಫಿಟ್‌ ಆಗಿದ್ದಾರೆ. ಅವರು ಮತ್ತೆ ಟೀಂ ಇಂಡಿಯಾಕ್ಕೆ ಮರಳುತ್ತಿರುವುದು ಖುಷಿ ತಂದಿದೆ. ಮುಂದಿನ ವಿಶ್ವಕಪ್‌ ತಂಡದಲ್ಲಿ ಖಂಡಿತ ಅವರಿಗೆ ಸ್ಥಾನವಿದೆ. ಏಕದಿನ ಏಷ್ಯಾಕಪ್‌ ಟೂರ್ನಿಯಲ್ಲೂ ಬುಮ್ರಾ ಪಾಲ್ಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

    ಬೆನ್ನಿನ ಗಾಯದ ಸಮಸ್ಯೆಯಿಂದ ಜಸ್ಪ್ರೀತ್‌ ಬುಮ್ರಾ ಅವರು 2022ರ ಸೆಪ್ಟಂಬರ್‌ ತಿಂಗಳಿನಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ತವರು ಟಿ20 ಸರಣಿಯಲ್ಲಿ ಕೊನೆಯ ಬಾರಿ ಬುಮ್ರಾ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು. ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದ ಅವರು, ಬೆಂಗಳೂರಿನ ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದರು. ಮುಂದಿನ ತಿಂಗಳಲ್ಲಿ ಏಷ್ಯಾಕಪ್‌ ಹಾಗೂ ಇದಾದ ಬಳಿಕ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ನಡೆಯುವ ಹಿನ್ನೆಲೆಯಲ್ಲಿ ಬುಮ್ರಾ ಅವರಿಗೆ ತಮ್ಮದೇ ಆಟದ ಸಮಯ ಕಲ್ಪಿಸಲು ಬಿಸಿಸಿಐ ಐರ್ಲೆಂಡ್‌ ಪ್ರವಾಸಕ್ಕೆ ಕಳುಹಿಸುತ್ತಿದೆ.

    ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಳೆದ ವರ್ಷದ ಸಪ್ಟೆಂಬರ್ ತಿಂಗಳ ಬಳಿಕ ಗಾಯದ ಸಮಸ್ಯೆಯಿಂದಾಗಿ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. 2022ರ T20 ಏಷ್ಯಾಕಪ್‌, T20 ವಿಶ್ವಕಪ್‌ ಹಾಗೂ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯ ಸೇರಿದಂತೆ ಪ್ರಮುಖ ಟೂರ್ನಿಗಳಲ್ಲಿ ಪಾಲ್ಗೊಳ್ಳುವ ಅವಕಾಶದಿಂದ ವಂಚಿತರಾಗಿದ್ದರು. ಇದನ್ನೂ ಓದಿ: 10 ಬೌಂಡರಿ, 13 ಸಿಕ್ಸರ್ – ನಿಕೋಲಸ್ ಪೂರನ್ ಸ್ಫೋಟಕ ಶತಕ; ವಿದೇಶದಲ್ಲೂ ಮುಂಬೈ ಚಾಂಪಿಯನ್

    ಟಿ20ಗೆ ಭಾರತ ತಂಡ:
    ಜಸ್ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಶಿವಂ ದುಬೆ, ವಾಷಿಂಗ್ಟನ್‌ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷ್‌ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.

    ಪಂದ್ಯ ಎಲ್ಲಿ ಯಾವಾಗ?
    ಮೊದಲ ಟಿ20 – ಆಗಸ್ಟ್‌ 18
    2ನೇ ಟಿ20 – ಆಗಸ್ಟ್‌ 20
    3ನೇ ಟಿ20 – ಆಗಸ್ಟ್‌ 23

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೊಚ್ಚಲ ಏಷ್ಯನ್‌ ಗೇಮ್ಸ್‌ಗೆ ಟೀಂ ಇಂಡಿಯಾ ರೆಡಿ

    ಚೊಚ್ಚಲ ಏಷ್ಯನ್‌ ಗೇಮ್ಸ್‌ಗೆ ಟೀಂ ಇಂಡಿಯಾ ರೆಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asian Games 2023ಗೆ ಟೀಂ ಇಂಡಿಯಾ ರೆಡಿ – ರಿಂಕುಗೆ ಕೊನೆಗೂ ಸಿಕ್ತು ಚಾನ್ಸ್, ಫಸ್ಟ್ ರಿಯಾಕ್ಷನ್ ಏನು?

    Asian Games 2023ಗೆ ಟೀಂ ಇಂಡಿಯಾ ರೆಡಿ – ರಿಂಕುಗೆ ಕೊನೆಗೂ ಸಿಕ್ತು ಚಾನ್ಸ್, ಫಸ್ಟ್ ರಿಯಾಕ್ಷನ್ ಏನು?

    ಮುಂಬೈ: ಮುಂದಿನ ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಚೀನಾದ ಹ್ಯಾಂಗ್‌ಜೂನಲ್ಲಿ ನಡೆಯುವ ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) ಪಾಲ್ಗೊಳ್ಳಲು ಭಾರತ ತಂಡ ಸಜ್ಜಾಗಿದ್ದು, ಬಿಸಿಸಿಐ ತಂಡದ ಪಟ್ಟಿ ಪ್ರಕಟಿಸಿದೆ. ಏಷ್ಯನ್ ಗೇಮ್ಸ್‌ನಲ್ಲಿ ಮಹಾರಾಷ್ಟ್ರ ಮೂಲದ ಬ್ಯಾಟರ್ ಋತುರಾಜ್ ಗಾಯಕ್ವಾಡ್ (Ruturaj Gaikwad ಟೀಂ ಇಂಡಿಯಾ (Team India) ನಾಯಕತ್ವ ವಹಿಸುತ್ತಿದ್ದಾರೆ.

    ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಕ್ರಿಕೆಟ್ ಕೂಡ ಸ್ಪರ್ಧೆಯ ಭಾಗವಾಗಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 8ರ ವರೆಗೆ ಟಿ20 ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತದ ಮಹಿಳಾ ಹಾಗೂ ಪುರುಷರ ತಂಡವನ್ನ ಕಣಕ್ಕಿಳಿಸಲು ಬಿಸಿಸಿಐನ (BCCI) ಅಪೆಕ್ಸ್ ಕೌನ್ಸಿಲ್ ಒಪ್ಪಿಗೆ ಸೂಚಿಸಿದ ನಂತರ ತಂಡದ ಪಟ್ಟಿ ಪ್ರಕಟಿಸಲಾಗಿದೆ.

    2010 ಮತ್ತು 2014ರ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಭಾರತ ಭಾಗವಹಿಸಲು ನಿರಾಕರಿಸಿತ್ತು. ಆದ್ರೆ 2028ಕ್ಕೆ ಅಮೆರಿಕದ (USA) ಲಾಸ್ ಏಂಜಲೀಸ್‌ನಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ (Olympics) ಕ್ರಿಕೆಟ್ ಸೇರ್ಪಡೆಗೊಳಿಸಲು ಬಿಸಿಸಿಐ, ಐಸಿಸಿ ಒತ್ತಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲು ಅನುಮತಿಸಿದೆ.

    2010ರ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಬಾಂಗ್ಲಾದೇಶ, 2014ರ ಆವೃತ್ತಿಯಲ್ಲಿ ಶ್ರೀಲಂಕಾ ಪುರುಷರ ತಂಡ ಚಿನ್ನದ ಪದಕಗಳನ್ನ ಗೆದ್ದಿತ್ತು. ಮಹಿಳಾ ವಿಭಾಗದಲ್ಲಿ ಪಾಕಿಸ್ತಾನ (Pakistana) ತಂಡ 2 ಬಾರಿ ಚಿನ್ನದ ಪದಕ ಬಾಚಿಕೊಂಡಿದೆ. ಇದನ್ನೂ ಓದಿ: ICC WorldCup 2023: ಈಡನ್‌ ಗಾರ್ಡನ್ಸ್‌ನ ಲೀಗ್‌, ಸೆಮಿಫೈನಲ್‌ ಪಂದ್ಯಗಳಿಗೆ ಟಿಕೆಟ್‌‌ ದರ ನಿಗದಿ

    ಟೀಂ ಇಂಡಿಯಾದಲ್ಲಿ ರಿಂಕುಗೆ ಚಾನ್ಸ್:
    ಇದೇ ಮೊದಲಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವ ಟೀಂ ಇಂಡಿಯಾ ಕ್ರಿಕೆಟ್ ತಂಡದಲ್ಲಿ ಹೊಸಬರಿಗೆ ಅವಕಾಶ ನೀಡಲಾಗಿದೆ. 2023ರ ಐಪಿಎಲ್ ಆವೃತ್ತಿಯಲ್ಲಿ ಮಿಂಚಿದ ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್, ಜಿತೇಶ್ ಶರ್ಮಾ, ತಿಲಕ್ ವರ್ಮಾ ಮೊದಲಾದವರಿಗೆ ಚಾನ್ಸ್ ನೀಡಲಾಗಿದೆ. ಅಲ್ಲದೇ ಐಪಿಎಲ್ ವೇಳೆ ಕೆಕೆಆರ್ ತಂಡದಲ್ಲಿ ಫಿನಿಶರ್ ಖ್ಯಾತಿ ಪಡೆದಿದ್ದ ರಿಂಕು ಸಿಂಗ್‌ಗೂ ಟೀಂ ಇಂಡಿಯಾದಲ್ಲಿ ಸ್ಥಾನ ನೀಡಲಾಗಿದೆ. ಈ ಸಂತಸವನ್ನ ರಿಂಕು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2028ರ ಒಲಿಂಪಿಕ್ಸ್‌ನಲ್ಲಿ T20 ಕ್ರಿಕೆಟ್‌ ಸೇರ್ಪಡೆ – ಐಸಿಸಿ ವಿಶ್ವಾಸ

    ಭಾರತ ಪುರುಷರ ತಂಡ:
    ಋತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮದ್, ರವಿ ಬಿಷ್ಣೋಯಿ, ಅವೇಶ್ ಖಾನ್, ಅರ್ಷ್ದೀಪ್ ಸಿಂಗ್, ಮುಕೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಭಸಿಮ್ರನ್ ಸಿಂಗ್ (ವಿಕೆಟ್ ಕೀಪರ್). ಎಕ್ಸ್ಟ್ರಾ ಪ್ಲೇಯರ್: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್.

    ಭಾರತ ಮಹಿಳಾ ತಂಡ:
    ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್, ಅಮನ್‌ಜೋತ್ ಕೌರ್, ದೇವಿಕಾ ವೈದ್ಯ, ಅಂಜಲಿ ಸರವಣಿ, ಟೈಟಸ್ ಸಾಧು, ರಾಜೇಶ್ವರಿ ಗಾಯಕವಾಡ್, ಮಿನ್ನು ಮಣಿ, ಕನಿಕಾ ಅಹುಜಾ, ಉಮಾ ಚೆಟ್ರಿ (ವಿಕೆಟ್ ಕೀಪರ್), ಅನುಷಾ ಬಾರೆಡ್ಡಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • IPLನಲ್ಲಿ ದುಡ್ಡೋ ದುಡ್ಡು; ಚಾಂಪಿಯನ್ಸ್‌ ತಂಡಕ್ಕೆ 20 ಕೋಟಿ, ಲಕ್ಷ ಲಕ್ಷ ಬಾಚಿಕೊಂಡ ಗಿಲ್‌ – ಯಾರಿಗೆ ಎಷ್ಟೆಷ್ಟು ಲಕ್ಷ?

    IPLನಲ್ಲಿ ದುಡ್ಡೋ ದುಡ್ಡು; ಚಾಂಪಿಯನ್ಸ್‌ ತಂಡಕ್ಕೆ 20 ಕೋಟಿ, ಲಕ್ಷ ಲಕ್ಷ ಬಾಚಿಕೊಂಡ ಗಿಲ್‌ – ಯಾರಿಗೆ ಎಷ್ಟೆಷ್ಟು ಲಕ್ಷ?

    ಅಹಮದಾಬಾದ್‌: 16ನೇ ಐಪಿಎಲ್‌ ಆವೃತ್ತಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಐಪಿಎಲ್‌ (IPL) ಆವೃತ್ತಿಯಲ್ಲಿ ಉದಯೋನ್ಮುಖ ಪ್ರತಿಭೆಗಳು ಬೆಳಕಿಗೆ ಬಂದಿದ್ದಾರೆ. ಆಟಗಾರರ ಅತ್ಯದ್ಭುತ ಪ್ರದರ್ಶನದಿಂದ ಅತಿಹೆಚ್ಚು ಬಾರಿ 200ಕ್ಕೂ ಹೆಚ್ಚು ರನ್‌ ದಾಖಲಾಗಿದೆ. ಅದಕ್ಕಾಗಿ ಲಕ್ಷ ಲಕ್ಷ ಹಣವನ್ನ ಬಾಚಿಕೊಂಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

    ಈ ಬಾರಿ ಐಪಿಎಲ್‌ ಆವೃತ್ತಿಯಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡ 257 ರನ್‌ ಗಳಿಸಿದ್ದು ಈ ಬಾರಿ ಅತಿಹೆಚ್ಚಿನ ರನ್‌ ಹಾಗೂ ಐಪಿಎಲ್‌ ಇತಿಹಾಸದಲ್ಲೇ 2ನೇ ದೊಡ್ಡಮೊತ್ತ ಎನಿಸಿಕೊಂಡರೆ ಈ ಸೀಸನ್‌ನಲ್ಲಿ ಆರ್‌ಸಿಬಿ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ (RR) 59 ರನ್‌ಗಳಿಗೆ ಆಲೌಟ್‌ ಆಗಿದ್ದು, ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪಂದ್ಯವಾಗಿತ್ತು.

    2023ರ ಐಪಿಎಲ್‌ ಪ್ರಶಸ್ತಿ ವಿಜೇತರ ಪಟ್ಟಿ:

    ಚಾಂಪಿಯನ್ಸ್‌: ಸಿಎಸ್‌ಕೆ-20 ಕೋಟಿ ರೂ.
    ರನ್ನರ್‌ ಅಪ್: ಗುಜರಾತ್ ಟೈಟಾನ್ಸ್-12.5 ಕೋಟಿ ರೂ.

    ಆರೆಂಜ್ ಕ್ಯಾಪ್: ಶುಭಮನ್ ಗಿಲ್- 890 ರನ್ -10 ಲಕ್ಷ ರೂ.
    ಪರ್ಪಲ್ ಕ್ಯಾಪ್: ಮೊಹಮ್ಮದ್ ಶಮಿ- 28 ವಿಕೆಟ್- 10 ಲಕ್ಷ ರೂ.

    ಸೀಸನ್‌ನ ಉದಯೋನ್ಮುಖ ಆಟಗಾರ: ಯಶಸ್ವಿ ಜೈಸ್ವಾಲ್- ಆರ್‌ಆರ್-10 ಲಕ್ಷ ರೂ.
    ಸೂಪರ್ ಸ್ಟ್ರೆಕರ್- ಗ್ಲೆನ್ ಮ್ಯಾಕ್ಸ್‌ವೆಲ್: ಆರ್‌ಸಿಬಿ-183.48 ಸ್ಟ್ರೈಕ್‌ರೇಟ್‌ -10 ಲಕ್ಷ ರೂ.

    ಮೋಸ್ಟ್‌ ವ್ಯಾಲ್ಯುಯೆಬಲ್ ಪ್ಲೇಯರ್‌: ಶುಭಮನ್ ಗಿಲ್ – 10 ಲಕ್ಷ ರೂ.
    ಗೇಮ್ ಚೇಂಜರ್- ಶುಭಮನ್ ಗಿಲ್- 10 ಲಕ್ಷ ರೂ.

    ಅತಿ ಹೆಚ್ಚು ಬೌಂಡರಿ: ಶುಭಮನ್ ಗಿಲ್- 85- 10 ಲಕ್ಷ ರೂ.
    ಅತಿ ಉದ್ದದ ಸಿಕ್ಸರ್- ಫಾಫ್ ಡು ಪ್ಲೆಸಿಸ್: ಆರ್‌ಸಿಬಿ- 115 ಮೀಟರ್-10 ಲಕ್ಷ ರೂ.
    ಸೀಸನ್‌ನ ಅದ್ಭುತ ಕ್ಯಾಚ್: ರಶೀದ್ ಖಾನ್- ಗುಜರಾತ್ ಟೈಟಾನ್ಸ್- 10 ಲಕ್ಷ ರೂ.
    ಮನರಂಜಿಸಿದ ತಂಡ- ಡೆಲ್ಲಿ ಕ್ಯಾಪಿಟಲ್ಸ್

    ಫೈನಲ್ ಪಂದ್ಯದ ಪ್ರಶಸ್ತಿಗಳ ವಿವರ:

    ಸೂಪರ್‌ ಸ್ಟ್ರೆಕರ್: ಅಜಿಂಕ್ಯ ರಹಾನೆ- 1 ಲಕ್ಷ ರೂ.
    ಗೇಮ್ ಚೇಂಜರ್: ಸಾಯಿ ಸುದರ್ಶನ್- 1 ಲಕ್ಷ ರೂ.
    ವ್ಯಾಲ್ಯುಯೆಬಲ್ ಪ್ಲೇಯರ್‌: ಸಾಯಿ ಸುದರ್ಶನ್- 1 ಲಕ್ಷ ರೂ.

    ಅತಿ ಉದ್ದದ ಸಿಕ್ಸರ್: ಸಾಯಿ ಸುದರ್ಶನ್- 1 ಲಕ್ಷ ರೂ.
    ಅದ್ಭುತ ಕ್ಯಾಚ್: ಎಂ.ಎಸ್ ಧೋನಿ- 1 ಲಕ್ಷ ರೂ.
    ಪಂದ್ಯ ಶ್ರೇಷ್ಠ: ಡೆವೋನ್ ಕಾನ್ವೇ – 1 ಲಕ್ಷ ರೂ

  • Record… Record… Record: ಫೈನಲ್‌ ಮ್ಯಾಚ್‌ನಲ್ಲಿ ಎಲ್ಲಾ ದಾಖಲೆ ಉಡೀಸ್‌ – ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 3.2 ಕೋಟಿ ಜನ ವೀಕ್ಷಣೆ

    Record… Record… Record: ಫೈನಲ್‌ ಮ್ಯಾಚ್‌ನಲ್ಲಿ ಎಲ್ಲಾ ದಾಖಲೆ ಉಡೀಸ್‌ – ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 3.2 ಕೋಟಿ ಜನ ವೀಕ್ಷಣೆ

    ಮುಂಬೈ: ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಟಾಟಾ ಐಪಿಎಲ್ 2023ರ ಫೈನಲ್‌ ಪಂದ್ಯ ಜಿಯೋಸಿನಿಮಾದಲ್ಲಿ‌ ಏಕಕಾಲಕ್ಕೆ 3.2 ಕೋಟಿ ಜನರಿಂದ ವೀಕ್ಷಣೆ ಕಂಡಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನ ಪುಡಿಪುಡಿ ಮಾಡಿದೆ.

    ಸೋಮವಾರ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟಾನ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಪಂದ್ಯವು ರೋಚಕತೆಯಿಂದ ಕೂಡಿತ್ತು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಗುಜರಾತ್‌ ಟೈಟಾನ್ಸ್‌ ಭರ್ಜರಿ ಪ್ರದರ್ಶನ ನೀಡಿತು. ಸಾಯಿ ಸುದರ್ಶನ್‌ 18.3ನೇ ಓವರ್‌ನಲ್ಲಿ ಬ್ಯಾಟಿಂಗ್‌ ಮಾಡುತ್ತಿದ್ದ ವೇಳೆ ಪಂದ್ಯದ ವೀಕ್ಷಕರ ಸಂಖ್ಯೆ 3 ಕೋಟಿಗೆ ತಲುಪಿತ್ತು. 19.1ನೇ ಓವರ್‌ನಲ್ಲಿದ್ದಾಗ 3.1 ಕೋಟಿ ಇದ್ದ ವೀಕ್ಷಕರ ಸಂಖ್ಯೆ ಕೊನೆಯ 3 ಎಸೆತಗಳು ಬಾಕಿಯಿರುವಂತೆ 3.2 ಕೋಟಿಗೆ ತಲುಪಿತ್ತು. ಇದು ಈ ಹಿಂದಿನ ಎಲ್ಲ ದಾಖಲೆಗಳನ್ನ ಉಡೀಸ್‌ ಮಾಡಿದೆ.

    ಜಿಯೋಸಿನಿಮಾ ಹಾಲಿ ಐಪಿಎಲ್ ಆವೃತ್ತಿಯಲ್ಲಿ ಸತತ 4ನೇ ಬಾರಿಗೆ ತನ್ನದೇ ವೀಕ್ಷಕರ ದಾಖಲೆಯನ್ನ ಮುರಿದಿದೆ. ಜೊತೆಗೆ 2019ರ ಐಸಿಸಿ ಏಕದಿನ ವಿಶ್ವಕಪ್ ವೇಳೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ನಿರ್ಮಿಸಲ್ಪಟ್ಟಿದ್ದ ವಿಶ್ವದಾಖಲೆಗಳೆಲ್ಲವನ್ನೂ ನುಚ್ಚುನೂರು ಮಾಡಿದೆ. 2013ರ ವಿಶ್ವಕಪ್‌ ಪಂದ್ಯವನ್ನು 2.53 ಕೋಟಿ ಮಂದಿ ವೀಕ್ಷಣೆ ಮಾಡಿದ್ದರು. ಇದನ್ನೂ ಓದಿ: IPL Champions 2023: ಕೊನೆಯಲ್ಲಿ ಜಡೇಜಾ ಜಾದು, 5ನೇ ಬಾರಿಗೆ ಚೆನ್ನೈಗೆ ಚಾಂಪಿಯನ್‌ ಕಿರೀಟ

    ಏಪ್ರಿಲ್ 17ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಪಂದ್ಯದ ವೇಳೆ ಎಂ.ಎಸ್ ಧೋನಿ ಅವರ ಆಟ ವೀಕ್ಷಿಸಲು 2.4 ಕೋಟಿ ವೀಕ್ಷಕರು ಜಿಯೋಸಿನಿಮಾದಲ್ಲಿ ಒಟ್ಟಾಗಿ ಸೇರಿದ್ದು ಹಿಂದಿನ ದಾಖಲೆ ಎನಿಸಿತ್ತು. ಅದಕ್ಕೂ ಮುನ್ನ ಏಪ್ರಿಲ್ 12ರಂದು ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಗತವೈಭವ ನೆನಪಿಸುವಂಥ ಬ್ಯಾಟಿಂಗ್ ಪ್ರದರ್ಶಿಸಿದಾಗ ಗರಿಷ್ಠ 2.2 ಕೋಟಿ ವೀಕ್ಷಕರ ದಾಖಲೆ ಕಂಡಿತ್ತು. ಇದನ್ನೂ ಓದಿ: IPL 2023 Finals: ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು, ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್ – CSK ರನ್ನರ್ ಅಪ್?

    ಟಾಟಾ ಐಪಿಎಲ್ 2023ರ ಪಂದ್ಯಗಳನ್ನು ವೀಕ್ಷಿಸಲು ಜಿಯೋಸಿನಿಮಾ, ಕ್ರಿಕೆಟ್ ಅಭಿಮಾನಿಗಳ ಪ್ರಮುಖ ಆದ್ಯತೆ ಆಗಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿಯಾಗಿವೆ. ರೋಚಕ ಪಂದ್ಯಗಳನ್ನು ವೀಕ್ಷಿಸುವ ವೇಳೆ ಜಿಯೋಸಿನಿಮಾದಲ್ಲಿ ಅಭಿಮಾನಿ ಕೇಂದ್ರಿತವಾದ ಹಲವಾರು ಕೊಡುಗೆಗಳನ್ನು ನೀಡಲಾಗುತ್ತಿತ್ತು. ಉದಾಹರಣೆಗೆ ಎಲ್ಲಾ ನೆಟ್ವರ್ಕ್ ಚಂದಾದಾರರಿಗೆ ಉಚಿತ ಸ್ಟ್ರೀಮಿಂಗ್ ನೀಡಲಾಗಿತ್ತು. 4K ಸ್ಟ್ರೀಮಿಂಗ್ ಜೊತೆಗೆ 12 ಭಾಷೆಗಳಲ್ಲಿ ವೀಕ್ಷಕ ವಿವರಣೆ ನೀಡಲಾಗುತ್ತಿದೆ. ಜೀತೋ ಧನ್ ಧನಾ ಧನ್ ಸ್ಪರ್ಧೆಯ ಮೂಲಕ ಪ್ರತೀ ಪಂದ್ಯದ ವೀಕ್ಷಣೆಯ ವೇಳೆ ಕಾರು ಗೆಲ್ಲುವ ಜೊತೆ ಅತ್ಯಾಕರ್ಷಕ ಬಹುಮಾನಗಳನ್ನೂ ವಿತರಿಸಲಾಗುತ್ತಿತ್ತು.

    ಟಾಟಾ ಐಪಿಎಲ್ 2023ರ ಡಿಜಿಟಲ್ ಸ್ಟ್ರೀಮಿಂಗ್‌ಗಾಗಿ ಜಿಯೋಸಿನಿಮಾ 26 ಅಗ್ರ ಬ್ರ್ಯಾಂಡ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿತ್ತು. ಅವುಗಳಲ್ಲಿ (ಸಹ-ಪ್ರಸ್ತುತ ಪ್ರಾಯೋಜಕ) ಡ್ರೀಮ್11, (ಕೋ-ಪವರ್ಡ್) ಜಿಯೋಮಾರ್ಟ್, ಫೋನ್‌ಪೇ, ಟಿಯಾಗೋ ಇವಿ, ಜಿಯೋ (ಸಹ ಪ್ರಾಯೋಜಕ) ಆ್ಯಪ್ಪಿ ಫಿಜ್, ಇಟಿಮನೀ, ಕ್ಯಾಸ್ಟ್ರಾಲ್, ಟಿವಿಎಸ್, ಓರಿಯೊ, ಬಿಂಗೋ, ಸ್ಟಿಂಗ್, ಅಜಿಯೋ, ಹೈಯರ್, ರುಪೇ, ಲೂಯಿಸ್ ಜೀನ್ಸ್, ಅಮೆಜಾನ್, ರಾಪಿಡೊ, ಅಲ್ಟ್ರಾ ಟೆಕ್ ಸಿಮೆಂಟ್, ಪೂಮಾ, ಕಮಲಾ ಪಸಂದ್, ಕಿಂಗ್‌ಫಿಶರ್ ಪವರ್ ಸೋಡಾ, ಜಿಂದಾಲ್ ಪ್ಯಾಂಥರ್ ಟಿಎಂಟಿ ರೆಬಾರ್, ಸೌದಿ ಪ್ರವಾಸೋದ್ಯಮ, ಸ್ಪಾಟಿಫೈ ಮತ್ತು ಎಎಂಎಫ್ಐ ಸೇರಿವೆ.

  • IPL Champions 2023: ಕೊನೆಯಲ್ಲಿ ಜಡೇಜಾ ಜಾದು, 5ನೇ ಬಾರಿಗೆ ಚೆನ್ನೈಗೆ ಚಾಂಪಿಯನ್‌ ಕಿರೀಟ

    IPL Champions 2023: ಕೊನೆಯಲ್ಲಿ ಜಡೇಜಾ ಜಾದು, 5ನೇ ಬಾರಿಗೆ ಚೆನ್ನೈಗೆ ಚಾಂಪಿಯನ್‌ ಕಿರೀಟ

    ಅಹಮದಾಬಾದ್‌: ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾ (Ravindra Jadeja) ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ರೋಚಕ ಜಯ ಸಾಧಿಸಿ 2023ರ ಟಾಟಾ ಐಪಿಎಲ್‌ (TaTa IPL) ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದೆ.

    ಐಪಿಎಲ್‌ ಆವೃತ್ತಿಯಲ್ಲಿ 4 ಬಾರಿ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದ್ದ ಎಂ.ಎಸ್‌. ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಬಲಿಷ್ಠ ಗುಜರಾತ್‌ ಟೈಟಾನ್ಸ್‌ಗೆ (GT) ಮಣ್ಣುಮುಕ್ಕಿಸಿ 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಇದರೊಂದಿಗೆ 5 ಬಾರಿ ಐಪಿಎಲ್‌ ಕಪ್‌ ಗೆದ್ದ ಮುಂಬೈ ಇಂಡಿಯನ್ಸ್‌ ದಾಖಲೆಯನ್ನ ಸರಿಗಟ್ಟಿದೆ. ಗುಜರಾತ್‌ ಟೈಟಾನ್ಸ್‌ ತಾನು ಆಡಿದ 2ನೇ ಆವೃತ್ತಿಯಲ್ಲಿ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ವಿಶೇಷವೆಂದರೆ ಚೆನ್ನೈ ತಂಡದಲ್ಲಿ ಸ್ಟಾರ್‌ ಆಟಗಾರನಾಗಿ ಮಿಂಚಿದ್ದ ಅಂಬಾಟಿ ರಾಯುಡು (Ambati Rayudu) ಗೆಲುವಿನೊಂದಿಗೆ ಐಪಿಎಲ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. 250 ಪಂದ್ಯವನ್ನಾಡಿದ ಸಾಧನೆ ಮಾಡಿದ ಎಂ.ಎಸ್‌ ಧೋನಿ ಸಹ ಇದೇ ಗೆಲುವಿನೊಂದಿಗೆ ವಿದಾಯ ಹೇಳುವ ಸಾಧ್ಯತೆಗಳಿವೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 214 ರನ್‌ ಗಳಿಸಿತ್ತು. ಚೇಸಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಮೂರು ಎಸೆತಗಳನ್ನು ಎದುರಿಸುತ್ತಿದ್ದಂತೆ ಮಳೆ ಒಕ್ಕರಿಸಿತು. ಇದರಿಂದ ಸಿಎಸ್‌ಕೆ ಇನ್ನಿಂಗ್ಸ್‌ ಆರಂಭಗೊಳ್ಳುವುದು 1:30 ಗಂಟೆಗೂ ಅಧಿಕ ಕಾಲ ತಡವಾಯಿತು. 10:30ರ ವೇಳೆಗೆಲ್ಲಾ ಮಳೆ ಬಿಡುವುಕೊಟ್ಟರೂ ಮೈದಾನ ಹದಗೊಳಿಸುವುದಕ್ಕೆ 1 ಗಂಟೆಗೂ ಅಧಿಕ ಸಮಯ ತೆಗೆದುಕೊಳ್ಳಲಾಯಿತು. ಹಾಗಾಗಿ ತಡವಾಗಿದ್ದರಿಂದ ಡಕ್ವರ್ತ್‌ ಲೂಯಿಸ್ ನಿಯಮ ಅನ್ವಯಿಸಿ, ಓವರ್‌ಗಳನ್ನ ಕಡಿತಗೊಳಿಸಲಾಯಿತು. ಡಕ್ವರ್ತ್‌ ಲೂಯಿಸ್‌ (DSL) ನಿಯಮದ ಪ್ರಕಾರ 15 ಓವರ್‌ಗಳಲ್ಲಿ 171 ರನ್‌ ಟಾರ್ಗೆಟ್‌ ಪಡೆದು ಇನ್ನಿಂಗ್ಸ್‌ ಆರಂಭಿಸಿದ ಸಿಎಸ್‌ಕೆ 15 ಓವರ್‌ಗಳಲ್ಲಿ 171 ರನ್‌ ಚಚ್ಚುವ ಮೂಲಕ ಗೆಲುವು ಸಾಧಿಸಿತು.

    ಕೊನೆಯ 20 ಎಸೆತಗಳಲ್ಲಿ 50 ರನ್‌ಗಳ ಅಗತ್ಯವಿತ್ತು. ಈ ವೇಳೆ ರಶೀದ್‌ ಖಾನ್‌ ಬೌಲಿಂಗ್‌ನ ಕೊನೆಯ ಎರಡು ಎಸೆತಗಳನ್ನು ಶಿವಂ ದುಬೆ (Shivam Dube) ಭರ್ಜರಿ ಸಿಕ್ಸರ್‌ ಬಾರಿಸಿದರು. ಇನ್ನೂ ಕೊನೆಯ 18 ಎಸೆತಗಳಲ್ಲಿ 38 ರನ್‌ಗಳು ಬೇಕಾಗಿದ್ದಾಗ ಕೊನೆಯ ಐಪಿಎಲ್‌ ಪಂದ್ಯವಾಡಿದ ಅಂಬಾಟಿ ರಾಯುಡು, ಮೋಹಿತ್‌ ಶರ್ಮಾ ಬೌಲಿಂಗ್‌ನ ಮೊದಲ ಮೂರು ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿ ಬಾರಿಸಿದರು. ಇದರಿಂದ ಕಠಿಣ ಪರಿಸ್ಥಿತಿಯಲ್ಲಿದ್ದ ಚೆನ್ನೈಗೆ ಸಂಜೀವಿನಿ ಸಿಕ್ಕಂತಾಯಿತು. ಕೊನೆಯ 6 ಎಸೆತಗಳಲ್ಲಿ 13 ರನ್‌ ಅಗತ್ಯವಿದ್ದಾಗ ಮತ್ತೆ ಮೋಹಿತ್‌ ಶರ್ಮಾ ಬೌಲಿಂಗ್‌ನಲ್ಲಿದ್ದರು. ಮೊದಲ 4 ಎಸೆತಗಳಲ್ಲಿ ಕೇವಲ 3 ರನ್‌ ಸೇರ್ಪಡೆಯಾಯಿತು. 5ನೇ ಎಸೆತದಲ್ಲಿ ಸಿಕ್ಸ್‌ ಬಾರಿಸಿದ ಜಡೇಜಾ 6ನೇ ಎಸೆತದಲ್ಲಿ ಬೌಂಡರಿ ಚಚ್ಚುವ ಮೂಲ ಗೆಲುವು ತಂದುಕೊಟ್ಟರು.

    ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್‌ ಗಾಯಕ್ವಾಡ್‌ ಹಾಗೂ ಡಿವೋನ್‌ ಕಾನ್ವೆ ಆರಂಭದಿಂದಲೇ ಗುಜರಾತ್‌ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿತು. ಮೊದಲ ವಿಕೆಟ್‌ಕೆ ಈ ಜೋಡಿ 6.3 ಓವರ್‌ಗಳಲ್ಲಿ ಭರ್ಜರಿ 74 ರನ್‌ ಸಿಡಿಸಿತ್ತು. ಈ ವೇಳೆ ಋತುರಾಜ್‌ ಗಾಯಕ್ವಾಡ್‌ ದೊಡ್ಡ ಹೊಡೆತ ಹೊಡೆಯಲು ಯತ್ನಿಸಿ ಕ್ಯಾಚ್‌ ನೀಡಿ ಔಟಾದರು. ಋತುರಾಜ್‌ 16 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್‌ನೊಂದಿಗೆ 26 ರನ್‌ ಗಳಿಸಿ ಪೆವಿಲಿಯನ್‌ ಸೇರುತ್ತಿದ್ದಂತೆ ಡಿವೋನ್‌ ಕಾನ್ವೆ ಸಹ 47 ರನ್‌ (25 ಎಸೆತ, 4 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾದರು. ನಂತರದಲ್ಲಿ ಕಣಕ್ಕಿಳಿದ ಅಜಿಂಕ್ಯಾ ರಹಾನೆ 13 ಎಸೆತಗಳಲ್ಲಿ ಸ್ಫೋಟಕ 27 ರನ್‌ (2 ಸಿಕ್ಸರ್‌, 2 ಬೌಂಡರಿ) ಚಚ್ಚಿ ಔಟಾದರು. ಅಂಬಾಟಿ ರಾಯುಡು 19 ರನ್‌ (8 ಎಸೆತ, 2 ಸಿಕ್ಸರ್‌, 1 ಬೌಂಡರಿ) ಚಚ್ಚಿದರು.‌ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿವಂ ದುಬೆ ಅಜೇಯ 32 ರನ್‌ (21 ಎಸೆತ, 2 ಸಿಕ್ಸ್‌), ರವೀಂದ್ರ ಜಡೇಜಾ 15 ರನ್‌ (6‌ ಎಸೆತ, 1 ಸಿಕ್ಸ್‌, 1 ಬೌಂಡರಿ) ಗಳಿಸಿ ಕ್ರೀಸ್‌ನಲ್ಲಿ ಉಳಿದರು.

    ಆರಂಭಿಕರಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ ಉತ್ತಮ ಆರಂಭ ನೀಡಿತ್ತು. ಮೊದಲ ವಿಕೆಟ್‌ ಜೊತೆಯಾಟಕ್ಕೆ 42 ಎಸೆತಗಳಲ್ಲಿ 67 ರನ್‌ ಗಳಿಸಿತ್ತು. 2ನೇ ಓವರ್‌ನಲ್ಲೇ ಕ್ಯಾಚ್‌ ನಿಂದ ತಪ್ಪಿಸಿಕೊಂಡಿದ್ದ ಗಿಲ್‌ ಧೋನಿ ಮ್ಯಾಜಿಕ್‌ ಸ್ಟಂಪ್‌ಗೆ ವಿಕೆಟ್‌ ಒಪ್ಪಿಸಲೇಬೇಕಾಯಿತು. ನಂತರ ಕಣಕ್ಕಿಳಿದ ಆಟಗಾರರು ಚೆನ್ನೈ ಬೌಲರ್‌ಗಳನ್ನ ಹಿಗ್ಗಾಮುಗ್ಗಾ ಚೆಂಡಾಡಿದರು.

    ಬಳಿಕ ಸಾಹಿ ಸುದರ್ಶನ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ 42 ಎಸೆತಗಳಲ್ಲಿ 64 ರನ್‌ ಜೊತೆಯಾಟ ನೀಡಿದರೆ, ಸುದರ್ಶನ್‌ ಹಾಗೂ ಹಾರ್ದಿಕ್‌ ಪಾಂಡ್ಯ ಜೋಡಿ 33 ಎಸೆತಗಳಲ್ಲೇ ಸ್ಫೋಟಕ 81 ರನ್‌ ಚಚ್ಚಿತ್ತು. ಇದರ ಪರಿಣಾಮ ಮೊದಲ 10 ಓವರ್‌ನಲ್ಲಿ ಒಂದು ವಿಕೆಟ್‌ ಕಳೆದುಕೊಂಡು ಕೇವಲ 86 ರನ್‌ ಕಲೆಹಾಕಿದ್ದ ಟೈಟಾನ್ಸ್‌ ಮುಂದಿನ 10 ಓವರ್‌ಗಳಲ್ಲಿ 128 ರನ್‌ ಗಳಿಸುವ ಮೂಲಕ ತಂಡದ ಮೊತ್ತ 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು. ಸಾಯಿ ಸುದರ್ಶನ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಕೊನೆಯ ೫ ಓವರ್‌ಗಳಲ್ಲಿ 71 ರನ್‌ ಸೇರ್ಪಡೆಯಾಯಿತು.

    ಗುಜರಾತ್‌ ಟೈಟಾನ್ಸ್‌ ಪರ ವೃದ್ಧಿಮಾನ್‌ ಸಾಹಾ 54 ರನ್‌ (39 ಎಸೆತ, 5 ಬೌಂಡರಿ, 1 ಸಿಕ್ಸರ್‌), ಶುಭಮನ್‌ ಗಿಲ್‌ 39 ರನ್‌ (20 ಎಸೆತ, 7 ಬೌಂಡರಿ), ಹಾರ್ದಿಕ್‌ ಪಾಂಡ್ಯ 21 ರನ್‌ ಗಳಿಸಿದರು. ಇನ್ನೂ 204.25 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸಾಯಿ ಸುದರ್ಶನ್‌ 47 ಎಸೆತಗಳಲ್ಲಿ 96 ರನ್‌ (6 ಸಿಕ್ಸರ್‌, 8 ಬೌಂಡರಿ) ಸಿಡಿಸಿ ಶತಕ ವಂಚಿತರಾದರು.

    ಸಿಎಸ್‌ಕೆ ಪರ ಮಹೇಶ್‌ ಪತಿರಣ 2 ವಿಕೆಟ್‌ ಪಡೆದರೆ, ರವೀಂದ್ರ ಜಡೇಜಾ ಹಾಗೂ ದೀಪಕ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • IPL 2023 Final: ಗುಜರಾತ್‌ಗೆ ಗುನ್ನ ಕೊಟ್ಟ ಚೆನ್ನೈ – 10ನೇ ಬಾರಿಗೆ ಫೈನಲ್‌ಗೆ CSK ಎಂಟ್ರಿ

    IPL 2023 Final: ಗುಜರಾತ್‌ಗೆ ಗುನ್ನ ಕೊಟ್ಟ ಚೆನ್ನೈ – 10ನೇ ಬಾರಿಗೆ ಫೈನಲ್‌ಗೆ CSK ಎಂಟ್ರಿ

    – ಟೈಟಾನ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ಗೆ 15 ರನ್‌ಗಳ ಭರ್ಜರಿ ಜಯ

    ಚೆನ್ನೈ: ಸಂಘಟಿತ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಪ್ರದರ್ಶನದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings), ಹಾಲಿ ಚಾಂಪಿಯನ್ಸ್‌ ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 15 ರನ್‌ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 10ನೇ ಬಾರಿಗೆ ಐಪಿಎಲ್‌ ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ.

    ಈವರೆಗೆ ಐಪಿಎಲ್‌ನಲ್ಲಿ (IPL 2023) 4 ಬಾರಿ ಚಾಂಪಿಯನ್ಸ್‌ ಕಿರೀಟ ಧರಿಸಿರುವ ಚೆನ್ನೈ 10ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಇನ್ನೂ ಮೊದಲ ಆವೃತ್ತಿಯಲ್ಲೇ ಚಾಂಪಿಯನ್‌ ಆದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್‌ ಸೋತು 2ನೇ ಎಲಿಮಿನೇಟರ್‌ ಹಂತ ತಲುಪಿದೆ.

    ಮೇ 24 ರಂದು ಮುಂಬೈ ಇಂಡಿಯನ್ಸ್‌ (Mumbai Indians) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (LSG) ವಿರುದ್ಧ ಮೊದಲ ಎಲಿಮಿನೇಟರ್‌ ಪಂದ್ಯ ನಡೆಯಲಿದ್ದು, ಗೆದ್ದ ತಂಡದೊಂದಿಗೆ 2ನೇ ಎಲಿಮಿನೇಟರ್‌ ಪಂದ್ಯದಲ್ಲಿ ಟೈಟಾನ್ಸ್‌ ಸೆಣಸಲಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಹಾಲಿ ಚಾಂಪಿಯನ್ಸ್‌ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 157 ರನ್‌ಗಳಿಗೆ ಸರ್ವಪತನಕಂಡಿತು.

    ಚೇಸಿಂಗ್‌ ಆರಂಭಿಸಿದ ಟೈಟಾನ್ಸ್‌ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. 22 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡಿತು. ಬಳಿಕ ನಿಧಾನಗತಿ ಬ್ಯಾಟಿಂಗ್‌ನೊಂದಿಗೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ಮಹಿ ಮ್ಯಾಜಿಕ್‌ ನೊಂದಿಗೆ ಬೌಲಿಂಗ್‌ನಲ್ಲಿ ಉತ್ತಮ ಹಿಡಿತ ಸಾಧಿಸಿದ ಚೆನ್ನೈ ತಂಡ ಗುಜರಾತ್‌ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳನ್ನ ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.

    ಗುಜರಾತ್‌ ಟೈಟಾನ್ಸ್‌ ಪರ ಶುಭಮನ್‌ ಗಿಲ್‌ (Shubman Gill) 42 ರನ್‌ (38 ರನ್‌, 4 ಬೌಂಡರಿ, 1 ಸಿಕ್ಸ್‌), ವೃದ್ಧಿಮಾನ್‌ ಸಾಹಾ 12 ರನ್‌, ದಸುನ್‌ ಶನಾಕ 17 ರನ್‌, ವಿಜಯ್‌ ಶಂಕರ್‌ 14 ರನ್‌ ಗಳಿಸಿದ್ರೆ, ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ರಶೀದ್‌ ಖಾನ್‌ 16 ಎಸೆತಗಳಲ್ಲಿ ಬರೋಬ್ಬರಿ 30 ರನ್‌ ಚಚ್ಚಿ ವಿಕೆಟ್‌ ಕೈಚೆಲ್ಲಿದರು. ಬಳಿಕ ತಂಡ ಸೋಲುವುದು ಖಚಿತವಾಯಿತು.

    ಸಿಎಸ್‌ಕೆ ಪರ ದೀಪಕ್‌ ಚಹಾರ್‌, ಮಹೀಶ್‌ ತೀಕ್ಷಣ ಹಾಗೂ ರವೀಂದ್ರ ಜಡೇಜಾ, ಮಥೀಶ ಪತಿರಣ ತಲಾ 2 ವಿಕೆಟ್‌ ಕಿತ್ತರೆ ತುಷಾರ್‌ ದೇಶ್‌ಪಾಂಡೆ ಒಂದು ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್‌ಕೆ ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ಹಾಗೂ ಡಿವೋನ್‌ ಕಾನ್ವೆ (Devon Conway) ಜೋಡಿ ಉತ್ತಮ ಆರಂಭ ನೀಡಿತು. ಮೊದಲ ವಿಕೆಟ್‌ಗೆ ಈ ಜೋಡಿ 10.3 ಓವರ್‌ಗಳಲ್ಲಿ 87 ರನ್‌ ಗಳಿಸಿತ್ತು. ಋತುರಾಜ್‌ 44 ಎಸೆತಗಳಲ್ಲಿ ಭರ್ಜರಿ 66 ರನ್‌ (7 ಬೌಂಡರಿ, 1 ಸಿಕ್ಸರ್)‌ ಔಟಾದರು. ಈ ಬೆನ್ನಲ್ಲೇ 40 ರನ್‌ (34 ಎಸೆತ, 4 ಬೌಂಡರಿ) ಗಳಿಸಿ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು.

    ಇನ್ನೂ ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ 17 ರನ್‌, ಅಂಬಟಿ ರಾಯುಡು 17 ರನ್‌ ಹಾಗೂ ರವೀಂದ್ರ ಜಡೇಜಾ 22 ರನ್‌, ಮೊಯಿನ್‌ ಅಲಿ 9 ರನ್‌ ಗಳಿಸಿ ತಂಡ ಮೊತ್ತ 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಆರಂಭದಿಂದಲೂ ಸಾಧಾರಣ ಬ್ಯಾಟಿಂಗ್‌ ನಡೆಸಿದ ಸಿಎಸ್‌ಕೆ ಕೊನೆಯ 3 ಓವರ್‌ಗಳಲ್ಲಿ ಸ್ಫೋಟಕ 35 ರನ್‌ ಬಾರಿಸಿ ತಂಡದ ಮೊತ್ತ ಹೆಚ್ಚಿಸಿಕೊಂಡಿತು.

    ಗುಜರಾತ್‌ ಟೈಟಾನ್ಸ್‌ ಪರ ಮೊಹಮ್ಮದ್‌ ಶಮಿ ಹಾಗೂ ಮೋಹಿತ್‌ ಶರ್ಮಾ ತಲಾ 2 ವಿಕೆಟ್‌ ಕಿತ್ತರೆ, ದರ್ಶನ್‌ ನಾಲ್ಕಂಡೆ, ರಶೀದ್‌ ಖಾನ್‌ ಹಾಗೂ ನೂರ್‌ ಅಹ್ಮದ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಮಹಿ ನೋಡಲು 2,185 Km ನಿಂದ ಬಂದ ಯುವಕ, ಟ್ರಿಪ್‌ ಮಿಸ್‌ ಮಾಡಿಕೊಂಡ ಯುವತಿ

    ಮಹಿ ನೋಡಲು 2,185 Km ನಿಂದ ಬಂದ ಯುವಕ, ಟ್ರಿಪ್‌ ಮಿಸ್‌ ಮಾಡಿಕೊಂಡ ಯುವತಿ

    ನವದೆಹಲಿ: ಶನಿವಾರ ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡಗಳ ನಡುವಿನ ಪಂದ್ಯ ರೋಚಕತೆಯಿಂದ ಕೂಡಿತ್ತು. ಕ್ರೀಡಾಂಗಣದ ತುಂಬಾ ಸಿಎಸ್‌ಕೆ ಅಭಿಮಾನಿಗಳೇ (CSK Fans) ಹೆಚ್ಚಿನ ಸಂಖ್ಯೆಯಲ್ಲಿದ್ದರು. ಶಿಳ್ಳೆ, ಚಪ್ಪಾಳೆ ಮಳೆಗರೆಯುತ್ತಾ ಆಟಗಾರರನ್ನ ಹುರಿದುಂಬಿಸಿದರು.

    ಕೊನೆಯ ಲೀಗ್‌ ಪಂದ್ಯವನ್ನಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ರನ್‌ ಹೊಳೆಯಲ್ಲಿ ತೇಲಾಡಿತು. ಕೊನೆಯವೆರೆಗೂ ಸಿಕ್ಸರ್‌, ಬೌಂಡರಿ ಅಬ್ಬರಿಸುತ್ತಾ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಿತು. ಈ ವೇಳೆ ಸಿಎಸ್‌ಕೆ ಅಭಿಮಾನಿಗಳು ವಿಶೇಷ ಪೋಸ್ಟರ್‌ಗಳನ್ನು ಹಿಡಿದು ಗಮನ ಸೆಳೆದರು. ಇದನ್ನೂ ಓದಿ: ಧೋನಿ ಕ್ಯಾಪ್ಟನ್‌ ಆಗಿದ್ದಿದ್ದರೆ RCB ಮೂರು ಬಾರಿ ಕಪ್‌ ಗೆಲ್ಲುತ್ತಿತ್ತು ಎಂದ ಪಾಕ್‌ ಮಾಜಿ ಕ್ರಿಕೆಟಿಗ

    ಅಭಿಮಾನಿಯೊಬ್ಬರು ʻಮಹಿ (MS Dhoni) ನೋಡಲು 2,185 ಕಿಮೀ ಟ್ರಾವೆಲ್‌ ಮಾಡಿ ಬಂದಿದ್ದೇನೆʼ ಎಂದು ಹಿಡಿದುಕೊಂಡಿದ್ದರೆ, ಮತ್ತೊಬ್ಬಳು ಯುವತಿ ʻಮಹಿ ನೋಡೋದಕ್ಕಾಗಿ ನನ್ನ ಟ್ರಿಪ್‌ ಮಿಸ್‌ ಮಾಡಿಕೊಂಡೆʼ ಅಂತಾ ಪೋಸ್ಟರ್‌ ಹಿಡಿದುಕೊಂಡಿದ್ದು ಕ್ಯಾಮೆರಾದಲ್ಲಿ ಸೆರೆಯಾಯಿತು. ಇಷ್ಟು ದಿನ 6 ಅಥವಾ 7ನೇ ವಿಕೆಟ್‌ಗೆ ಕ್ರೀಸ್‌ಗೆ ಬರುತ್ತಿದ್ದ ಮಹಿ, ಶನಿವಾರ ಅಭಿಮಾನಿಗಳಿಗೆ ನಿರಾಸೆಯುಂಟಾಗದಿರಲೆಂದು 4ನೇ ವಿಕೆಟ್‌ಗೆ ಕಣಕ್ಕಿಳಿದಿದ್ದರು. ಆದ್ರೆ ಸಿಕ್ಸರ್‌, ಬೌಂಡರಿ ಸಿಡಿಸದೇ ಒಂದು, 2 ರನ್‌ ಕದಿಯುವಷ್ಟರಲ್ಲೇ ಯಶಸ್ವಿಯಾದರು.

    ಈ ಹಿಂದೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ‌ ಗೋವಾ ಮೂಲದ ಧೋನಿ ಅಭಿಮಾನಿಯೊಬ್ಬ, ತನ್ನ ಬೈಕ್‌ ಮಾರಿ ಐಪಿಎಲ್‌ ಟಿಕೆಟ್‌ ಖರೀದಿಸಿದ್ದ. ಮತ್ತೊಬ್ಬ ಅಭಿಮಾನಿ 1,700 ಕಿಮೀ ನಿಂದ ಟ್ರಾವೆಲ್‌ ಮಾಡಿ ಬಂದಿರುವುದಾಗಿ ಹೇಳಿಕೊಂಡಿದ್ದ. ಪೋಸ್ಟರ್‌ ವೈರಲ್‌ ಆಗುತ್ತಿದ್ದಂತೆ ಸಿಎಸ್‌ಕೆ ಅಭಿಮಾನಿಗಳು ನೀನು ಪಕ್ಕಾ ಫ್ಯಾನ್‌ ಬಿಡು ಗುರು ಅಂತಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಧೋನಿ ನೋಡಲು ಬೈಕ್‌ ಮಾರಿ IPL ಟಿಕೆಟ್‌ ಖರೀದಿಸಿದ ಅಭಿಮಾನಿ

    2023ರ 16ನೇ ಐಪಿಎಲ್‌ ಆವೃತ್ತಿ ಮಹೇಂದ್ರ ಸಿಂಗ್‌ ಧೋನಿ ಅವರ ಕೊನೆಯ ಐಪಿಎಲ್‌ ಆಗಿದೆ. ಆದ್ದರಿಂದ ಪ್ರತಿ ಪಂದ್ಯದಲ್ಲೂ ಧೋನಿ ಆಟವನ್ನ ನೋಡಲು ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ.

    ಶನಿವಾರ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್‌ಕೆ 3 ವಿಕೆಟ್‌ ನಷ್ಟಕ್ಕೆ 223 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 146 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.