Tag: s.jaishankar

  • ಲಂಡನ್‌ನಲ್ಲಿ ಖಲಿಸ್ತಾನಿ ಉಗ್ರರಿಂದ ವಿದೇಶಾಂಗ ಸಚಿವ ಜೈಶಂಕರ್‌ ಮೇಲೆ ದಾಳಿಗೆ ಯತ್ನ

    ಲಂಡನ್‌ನಲ್ಲಿ ಖಲಿಸ್ತಾನಿ ಉಗ್ರರಿಂದ ವಿದೇಶಾಂಗ ಸಚಿವ ಜೈಶಂಕರ್‌ ಮೇಲೆ ದಾಳಿಗೆ ಯತ್ನ

    – ಭಾರತದ ಧ್ವಜವನ್ನು ಹರಿದು ಹಾಕಿದ ಖಲಿಸ್ತಾನಿ ಉಗ್ರ

    ಲಂಡನ್‌: ಲಂಡನ್‌ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ.

    ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

    ಚಾಥಮ್ ಹೌಸ್ ನಡೆಸಿದ ಚರ್ಚೆಯಲ್ಲಿ ವಿದೇಶಾಂಗ ಸಚಿವರು ಭಾಗವಹಿಸಿದ್ದ ಸ್ಥಳದ ಹೊರಗೆ ಖಲಿಸ್ತಾನ್ ಪರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿರುವ ವೀಡಿಯೊದಲ್ಲಿ, ಲಂಡನ್ ಪೊಲೀಸ್ ಅಧಿಕಾರಿಗಳ ಮುಂದೆಯೇ ವ್ಯಕ್ತಿಯೊಬ್ಬ ಜೈಶಂಕರ್ ಅವರ ವಾಹನದ ಕಡೆಗೆ ನುಗ್ಗಿ ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದು ಕಂಡುಬಂದಿದೆ. ವಿಧ್ವಂಸಕ ಕೃತ್ಯಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ.

    ವಿದೇಶಾಂಗ ಸಚಿವ ಜೈಶಂಕರ್ ಚರ್ಚೆಯಲ್ಲಿ ಭಾಗವಹಿಸಿದ್ದ ಸ್ಥಳದ ಹೊರಗೆ ಹಲವಾರು ಖಲಿಸ್ತಾನಿ ಪರ ಬೆಂಬಲಿಗರು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ ಖಲಿಸ್ತಾನಿಗಳನ್ನು ಪೊಲೀಸರು ವಶಕ್ಕೆ ಪಡೆದರು.

    ಆಸ್ಟ್ರೇಲಿಯಾ, ಕೆನಡಾ ಮತ್ತು ಯುನೈಟೆಡ್ ಕಿಂಗ್‌ಡಮ್‌ನಂತಹ ದೇಶಗಳು ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಲವು ವರ್ಷಗಳಿಂದ ಭಾರತ ಒತ್ತಾಯಿಸಿದೆ. ಪ್ರಧಾನಿ ಮೋದಿ ಈ ರಾಷ್ಟ್ರಗಳ ನಾಯಕರೊಂದಿಗೆ, ವಿಶೇಷವಾಗಿ ಕೆನಡಾದಲ್ಲಿ ಸಿಖ್ಖರು ಸುಮಾರು 2% ರಷ್ಟಿದ್ದಾರೆ, ಈ ವಿಷಯವನ್ನು ವೈಯಕ್ತಿಕವಾಗಿ ಎತ್ತಿದ್ದಾರೆ.

  • US Deportation| 2009ರಿಂದ 15,000 ಭಾರತೀಯರ ಗಡಿಪಾರು – ಯಾವ ವರ್ಷ ಎಷ್ಟು ಮಂದಿ?

    US Deportation| 2009ರಿಂದ 15,000 ಭಾರತೀಯರ ಗಡಿಪಾರು – ಯಾವ ವರ್ಷ ಎಷ್ಟು ಮಂದಿ?

    ನವದೆಹಲಿ: 2009ರಿಂದ ಇಲ್ಲಿಯವರೆಗೆ ಅಮೆರಿಕದಿಂದ ಒಟ್ಟು 15,000 ಭಾರತೀಯರನ್ನು ಗಡಿಪಾರು ಮಾಡಲಾಗಿದೆ. ಗಡಿಪಾರುಗೊಂಡು (Deportation) ಭಾರತಕ್ಕೆ ಮರಳುತ್ತಿರುವ ಭಾರತೀಯರ (Indians) ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆಯದಂತೆ ನೋಡಿಕೊಳ್ಳಲು ನಾವು ಅಮೆರಿಕ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಹೇಳಿಕೆ ನೀಡಿದ್ದಾರೆ.

    ಅಮೆರಿಕದಿಂದ ಗಡಿಪಾರು ಮಾಡಲಾದ ಭಾರತೀಯ ನಾಗರಿಕರ ಕುರಿತು ಮಾತನಾಡಿದ ಅವರು, ತಮ್ಮ ನಾಗರಿಕರು ವಿದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ ಅವರನ್ನು ವಾಪಸ್ ಕರೆದುಕೊಂಡು ಹೋಗುವುದು ಎಲ್ಲಾ ದೇಶಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ತರಬೇತಿ‌ ವೇಳೆ IAFನ ಮಿರಾಜ್-2000 ಯುದ್ಧ ವಿಮಾನ ಪತನ – ಇಬ್ಬರು ಪೈಲಟ್‌ ಸೇಫ್‌

    ಅಕ್ರಮ ವಲಸೆ ಉದ್ಯಮದ ವಿರುದ್ಧ ಬಲವಾದ ಕ್ರಮ ಕೈಗೊಳ್ಳುವತ್ತ ನಮ್ಮ ಗಮನ ಕೇಂದ್ರೀಕರಿಸಿರುವುದನ್ನು ಸದನವು ಪ್ರಶಂಸಿಸುತ್ತದೆ. ಗಡಿಪಾರು ಮಾಡಿದವರು ಒದಗಿಸಿದ ಮಾಹಿತಿಯ ಆಧಾರದ ಮೇಲೆ ಕಾನೂನು ಜಾರಿ ಸಂಸ್ಥೆಗಳು ಏಜೆಂಟರು ಮತ್ತು ಅಂತಹ ಏಜೆನ್ಸಿಗಳ ವಿರುದ್ಧ ಅಗತ್ಯ, ತಡೆಗಟ್ಟುವ ಮತ್ತು ಅನುಕರಣೀಯ ಕ್ರಮಗಳನ್ನು ತೆಗೆದುಕೊಳ್ಳುತ್ತವೆ ಎಂದರು. ಇದನ್ನೂ ಓದಿ: ಹಿಂದೂ ಪದ ತಂದಿದ್ದೇ ಕಾಂಗ್ರೆಸ್: ಸಂತೋಷ್ ಲಾಡ್

    ಅಮೆರಿಕದಿಂದ ಹಿಂದಿರುಗುವ ಪ್ರತಿಯೊಬ್ಬ ವ್ಯಕ್ತಿಯೊಂದಿಗೆ ಅಧಿಕಾರಿಗಳು ಕುಳಿತು ಚರ್ಚಿಸಲು ಸೂಚಿಸಿದೆ. ಅವರು ಅಮೆರಿಕಕ್ಕೆ ಹೇಗೆ ಹೋದರು, ಯಾರು ಏಜೆಂಟ್ ಮತ್ತು ಇದು ಮತ್ತೆ ಸಂಭವಿಸದಂತೆ ನಾವು ಹೇಗೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಕಂಡುಹಿಡಿಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೇವೇಗೌಡರು ಕರ್ನಾಟಕಕ್ಕೆ ಕೇಂದ್ರ ಮಾಡಿರೋ ಅನ್ಯಾಯದ ಬಗ್ಗೆ ಮಾತಾಡಲಿ: ಕೃಷ್ಣ ಬೈರೇಗೌಡ

    ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಪ್ರಶ್ನೆಗೆ ಉತ್ತರಿಸಿ, ಬುಧವಾರ 104 ಜನರು ಹಿಂತಿರುಗಿದ್ದಾರೆಂದು ನಮಗೆ ತಿಳಿದಿದೆ. ನಾವು ಅವರ ರಾಷ್ಟ್ರೀಯತೆಯನ್ನು ದೃಢಪಡಿಸಿದ್ದೇವೆ. ಇದು ಹೊಸ ಸಮಸ್ಯೆ ಎಂದು ನಾವು ಭಾವಿಸಬಾರದು. ಇದು ಈ ಹಿಂದೆಯೂ ನಡೆದಿರುವ ಸಮಸ್ಯೆ. ಕಾನೂನು ಚಲನಶೀಲತೆಯನ್ನು ಉತ್ತೇಜಿಸುವುದು ಮತ್ತು ಅಕ್ರಮ ಸಂಚಾರವನ್ನು ನಿರುತ್ಸಾಹಗೊಳಿಸುವುದು ನಮ್ಮ ಸಾಮೂಹಿಕ ಹಿತಾಸಕ್ತಿಯಾಗಿದೆ. ಎಲ್ಲಾ ದೇಶಗಳು ತಮ್ಮ ನಾಗರಿಕರು ವಿದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ ಅವರನ್ನು ವಾಪಸ್ ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ಹೊಂದಿವೆ. ಗಡಿಪಾರು ಪ್ರಕ್ರಿಯೆ ಹೊಸದೇನಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ರಾಜ್ಯದಲ್ಲಿರೋದು ದಪ್ಪ ಎಮ್ಮೆ ಚರ್ಮದ ಸರ್ಕಾರ: ಸುನೀಲ್ ಕುಮಾರ್

    ಅಮೆರಿಕದಿಂದ ಭಾರತಕ್ಕೆ ಇಲ್ಲಿಯವರೆಗೆ ಗಡಿಪಾರು ಮಾಡಲಾದ ಜನರ ಅಂಕಿಅಂಶಗಳನ್ನು ಜೈಶಂಕರ್ ಸದನದ ಮುಂದೆ ಮಂಡಿಸಿದರು. 2009 ರಲ್ಲಿ 734 ಭಾರತೀಯರನ್ನು, 2010ರಲ್ಲಿ 799 ಭಾರತೀಯರನ್ನು, 2011ರಲ್ಲಿ 597 ಭಾರತೀಯರನ್ನು ಮತ್ತು 2012ರಲ್ಲಿ 530 ಭಾರತೀಯರನ್ನು ಗಡಿಪಾರು ಮಾಡಲಾಗಿದೆ ಎಂದು ಹೇಳಿ 2024ರವರೆಗಿನ ಮಾಹಿತಿಯನ್ನು ಹಂಚಿಕೊಂಡರು.

    ಯಾವ ವರ್ಷದಲ್ಲಿ ಎಷ್ಟು ಭಾರತೀಯರ ಗಡಿಪಾರು?
    2009-734
    2010-799
    2011-597
    2012-530
    2013-550
    2014-591
    2015-708
    2016-1303
    2017-1024
    2018-1180
    2019-2042
    2020-1889
    2021-805
    2022-862
    2023-617
    2024-1368
    2025-104

  • ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ದೆಹಲಿ ಮುಕ್ತ – ಜೈಶಂಕರ್‌

    ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ದೆಹಲಿ ಮುಕ್ತ – ಜೈಶಂಕರ್‌

    ವಾಷಿಂಗ್ಟನ್‌: ಅಮೆರಿಕ (USA) ಸೇರಿದಂತೆ ವಿದೇಶಗಳಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿರುವ ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ನವದೆಹಲಿ ಮುಕ್ತವಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ (S Jaishankar) ಹೇಳಿದ್ದಾರೆ.

    ಈ ಕುರಿತು ವಾಷಿಂಗ್ಟನ್‌ (Washington) ಡಿಸಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜೈಶಂಕರ್‌, ಕಾನೂನು ಬಾಹಿರವಾಗಿ ಯಾರಾದ್ರೂ ಇದ್ದರೆ, ಅವರು ನಮ್ಮ ದೇಶದ ಪ್ರಜೆಗಳೆಂದು ಖಚಿತವಾಗಿದ್ದರೆ, ಭಾರತಕ್ಕೆ ಮರಳಬಹುದು. ಅದಕ್ಕೆ ದೆಹಲಿ ಮುಕ್ತವಾಗಿರುತ್ತದೆ. ಈ ಬಗ್ಗೆ ಭಾರತದ ನಿಲುವು ಸ್ಪಷ್ಟ ಎಂದಿದ್ದಾರೆ. ಈ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧವನ್ನು ಕೊನೆಗೊಳಿಸದಿದ್ದರೆ ಮತ್ತಷ್ಟು ನಿರ್ಬಂಧ, ಸುಂಕ – ಪುಟಿನ್‌ಗೆ ಟ್ರಂಪ್‌ ಬೆದರಿಕೆ

    ಭಾರತವು ತನ್ನ ದೇಶದ ಪ್ರತಿಭೆಗಳು ಜಾಗತಿಕ ಮಟ್ಟದಲ್ಲಿ ಹೆಚ್ಚು ಅವಕಾಶ ಹೊಂದಬೇಕೆಂದು ಬಯಸುತ್ತದೆ. ಅದೇ ಸಮಯದಲ್ಲಿ ಅಕ್ರಮ ವಲಸೆಯನ್ನು ದೃಢವಾಗಿ ವಿರೋಧಿಸುತ್ತದೆ. ಏಕೆಂದರೆ ಅಕ್ರಮ ವಲಸೆಯು ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗುವ ಸಾಧ್ಯತೆಗಳೂ ಇರುತ್ತವೆ ಎಂದು ಜೈಶಂಕರ್‌ ಹೇಳಿದ್ದಾರೆ. ಇದನ್ನೂ ಓದಿ: ಜನ್ಮತಃ ಪೌರತ್ವ ಕಾಯ್ದೆ ರದ್ದತಿಗೆ ಅಮೆರಿಕದಲ್ಲೇ ಆಕ್ರೋಶ – 18,000 ಭಾರತೀಯರು ಗಡಿಪಾರಾಗ್ತಾರಾ?

    ಸಚಿವ ಜೈಶಂಕರ್‌ ಅವರು ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಅ ಬಳಿಕ ಮೊದಲ ಕ್ವಾಡ್‌ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಮೌಂಟ್‌ ಎವರೆಸ್ಟ್‌ ಇನ್ನು ಮುಂದೆ ದುಬಾರಿ| ಶುಲ್ಕ ಭಾರೀ ಏರಿಕೆ – ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆ? 

  • ಟ್ರಂಪ್‌ ಆಡಳಿತದ ಮೊದಲ ಕ್ವಾಡ್‌ ಸಭೆಯಲ್ಲಿ ಸಚಿವ ಎಸ್.‌ ಜೈಶಂಕರ್‌ ಭಾಗಿ

    ಟ್ರಂಪ್‌ ಆಡಳಿತದ ಮೊದಲ ಕ್ವಾಡ್‌ ಸಭೆಯಲ್ಲಿ ಸಚಿವ ಎಸ್.‌ ಜೈಶಂಕರ್‌ ಭಾಗಿ

    ವಾಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ವಾಷಿಂಗ್ಟನ್‌ ಡಿಸಿಯಲ್ಲಿ ನಡೆದ ʻಕ್ವಾಡ್‌ʼ ವಿದೇಶಾಂಗ ಸಚಿವರ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ (S. Jaishankar) ಭಾಗವಹಿಸಿದ್ದರು.

    ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕದ ವಿದೇಶಾಂಗ ಸಚಿವರೊಂದಿಗೆ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ವಾಡ್‌ ಸಭೆ (Quad meet) ಇದಾಗಿದೆ. ಇದನ್ನೂ ಓದಿ: ಬ್ರಹ್ಮಪುತ್ರದ ನದಿಗೆ ಬೃಹತ್ ಡ್ಯಾಮ್‌ ಕಟ್ಟಲು ಮುಂದಾದ ಚೀನಾ – ಭಾರತದ ಆತಂಕವೇನು?

    ಇದೇ ವೇಳೆ ಟ್ರಂಪ್‌ ಆಡಳಿತದಲ್ಲಿ ಹೊಸದಾಗಿ ನೇಮಕಗೊಂಡ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕ್ ವಾಲ್ಟ್ ಅವರೊಂದಿಗೆ ಸಭೆ ನಡೆಸಿದರು. ಜೊತೆಗೆ ಕ್ವಾಡ್‌ ಸಭೆ ಆಯೋಜಿಸಿದ್ದಕ್ಕಾಗಿ ರೂಬಿಯೊ ಅವರಿಗೆ ಧನ್ಯವಾದ ತಿಳಿಸಿದರು.

    ಕ್ವಾಡ್ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಗುರಿ ಹೊಂದಿರುವ ನಾಲ್ಕು (ಭಾರತ, ಅಮೆರಿಕ. ಜಪಾನ್, ಆಸ್ಟ್ರೇಲಿಯಾ) ದೇಶಗಳ ಗುಂಪಾಗಿದೆ. ಇದನ್ನೂ ಓದಿ: ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು ನಂದಿಸಲು‌ ಪಿಂಕ್‌ ಪೌಡರ್, ಸೂಪರ್‌ ಸ್ಕೂಪರ್ಸ್‌ ವಿಮಾನಗಳ ಬಳಕೆ- ವಿಶೇಷತೆ ಏನು?

    ಸ್ಥಿರ ಮತ್ತು ಸಮೃದ್ದ ಇಂಡೊ-ಫೆಸಿಫಿಕ್ ರಾಷ್ಟ್ರಗಳ ನಿರ್ಮಾಣ, ಮಿತ್ರ ರಾಷ್ಟ್ರಗಳೊಂದಿಗೆ ಕೆಲಸ ಮಾಡುವ ಕುರಿತು ಚರ್ಚಿಸಲಾಯಿತು. ಕ್ವಾಡ್ ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯಾಗಿ ಮುಂದುವರಿಯಲಿದೆ ಎನ್ನುವ ಸಂದೇಶವನ್ನು ಈ ಸಭೆ ನೀಡಲಿದೆ ಎಂದು ರೂಬಿಯೊ ವಾಹಿನಿಯೊಂದಕ್ಕೆ ತಿಳಿಸಿದರು.

  • ಭಯೋತ್ಪಾದನೆ ಜಾಗತಿಕ ಶಾಂತಿಗೆ ದೊಡ್ಡ ಬೆದರಿಕೆಯಾಗಿದೆ – ವಿದೇಶಾಂಗ ಸಚಿವ ಜೈಶಂಕರ್

    ಭಯೋತ್ಪಾದನೆ ಜಾಗತಿಕ ಶಾಂತಿಗೆ ದೊಡ್ಡ ಬೆದರಿಕೆಯಾಗಿದೆ – ವಿದೇಶಾಂಗ ಸಚಿವ ಜೈಶಂಕರ್

    ನವದೆಹಲಿ: ಭಯೋತ್ಪಾದನೆ (Terrorism) ಜಾಗತಿಕ ಶಾಂತಿಗೆ ದೊಡ್ಡ ಬೆದರಿಕೆಯಾಗಿದೆ. ಭಯೋತ್ಪಾದನೆಯನ್ನು ಉತ್ತೇಜಿಸುವ ಪ್ರಾಯೋಜಕರು ಮತ್ತು ಹಣಕಾಸುದಾರರನ್ನು ಪತ್ತೆ ಹಚ್ಚುವುದು ಹಾಗೂ ಅವರಿಗೆ ಕಠಿಣ ಶಿಕ್ಷೆ ನೀಡುವುದು ಬಹಳ ಮುಖ್ಯ ಎಂದು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ (S Jaishankar) ಹೇಳಿದ್ದಾರೆ.

    ಕಝಕಿಸ್ತಾನದ (Kazakhstan) ಅಸ್ತಾನಾದಲ್ಲಿ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ಉಗ್ರವಾದ ತ್ರಿಭೂತಗಳು, ಇದರ ವಿರುದ್ಧ ಹೋರಾಡುವ ತುರ್ತು ಅಗತ್ಯವಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬಾಲಿವುಡ್ ನಟಿ ಪೂನಂ ಧಿಲ್ಲೋನ್ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಡೈಮಂಡ್‌ ನೆಕ್ಲೇಸ್‌ ಕಳ್ಳತನ

    ಭಯೋತ್ಪಾದನೆ ಇಂದು ಜಗತ್ತಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಇದು ಜಾಗತಿಕ ಮತ್ತು ರಾಷ್ಟ್ರೀಯ ಶಾಂತಿಗೆ ಬೆದರಿಕೆಯಾಗಿ ಪರಿಣಮಿಸಿದೆ. ಭಯೋತ್ಪಾದನೆ ವಿರುದ್ಧ ನಾವೆಲ್ಲರೂ ತಕ್ಷಣ ಕ್ರಮ ಕೈಗೊಳ್ಳಬೇಕು. ಭಯೋತ್ಪಾದನೆ ವಿರುದ್ಧ ಹೋರಾಡಲು ಸಮಗ್ರ ವಿಧಾನದ ಅಗತ್ಯವಿದೆ. ಭಯೋತ್ಪಾದಕರು ಮಾತ್ರ ದುಷ್ಕರ್ಮಿಗಳಲ್ಲ, ಅವರಿಗೆ ಸಹಾಯ ಮಾಡುವ ಸಂಚಾಲಕರು, ಹಣಕಾಸುದಾರರು ಮತ್ತು ಪ್ರಾಯೋಜಕರ ವಿರುದ್ಧ ಜಂಟಿ ಕ್ರಮವಿರಬೇಕು. ಇವರನೆಲ್ಲವನ್ನೂ ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡುವ ಅಗತ್ಯವಿದೆ ಎಂದಿದ್ದಾರೆ. ಇದನ್ನೂ ಓದಿ:  ದೆಹಲಿ ನಾಗರಿಕರಿಗೆ 25 ಲಕ್ಷ ಆರೋಗ್ಯ ವಿಮೆ: ಪ್ಯಾರಿದೀದಿ ಬಳಿಕ ಕಾಂಗ್ರೆಸ್‌ನಿಂದ ಎರಡನೇ ಗ್ಯಾರಂಟಿ

    ಪ್ರಾದೇಶಿಕ ಭಯೋತ್ಪಾದನಾ ವಿರೋಧಿ ಚೌಕಟ್ಟಿನ (RATS) ಸಹಾಯದಿಂದ ಭಯೋತ್ಪಾದನೆಯ ವಿರುದ್ಧ ಬಲವಾದ ಕ್ರಮವನ್ನು SCO ತೆಗೆದುಕೊಳ್ಳಬಹುದು ಎಂಬ ವಿಶ್ವಾಸವಿದೆ. ಅಸ್ತಾನಾದಲ್ಲಿ ನಡೆದ ಶೃಂಗಸಭೆಯಲ್ಲಿ ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ಉಗ್ರವಾದದ ವಿರುದ್ಧ ಜಂಟಿ ಕ್ರಮದ ಕುರಿತು ಚರ್ಚಿಸಲಾಗಿದ್ದು, ಈ ಬಗ್ಗೆ ತುಂಬಾ ಸಂತೋಷವಾಗಿದೆ ಎಂದು ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಇದನ್ನೂ ಓದಿ: ಖನಿಜಗಳಿಗಾಗಿ ಚೀನಾದ ಮೇಲೆ ಅವಲಂಬನೆ – ಕಾಶ್ಮೀರದಲ್ಲಿ ನಿಕ್ಷೇಪ ಇದ್ರೂ ಯಾಕೆ ಗಣಿ ಸಾಧ್ಯವಾಗಿಲ್ಲ?

  • ಡಾಲರ್‌ಗೆ ಪೈಪೋಟಿ ನೀಡಲು ಹೊಸ ಕರೆನ್ಸಿ ಆರಂಭಿಸುವ ನಿರ್ಧಾರ ಕೈಗೊಂಡಿಲ್ಲ: ಜೈಶಂಕರ್‌

    ಡಾಲರ್‌ಗೆ ಪೈಪೋಟಿ ನೀಡಲು ಹೊಸ ಕರೆನ್ಸಿ ಆರಂಭಿಸುವ ನಿರ್ಧಾರ ಕೈಗೊಂಡಿಲ್ಲ: ಜೈಶಂಕರ್‌

    ದೋಹಾ: ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಅಮೆರಿಕ ಡಾಲರ್‌ಗೆ ಪೈಪೋಟಿ ನೀಡಲು ಹೊಸ ಕರೆನ್ಸಿ (New Currency) ಆರಂಭಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಭಾರತದ ವಿದೇಶಾಂಗ ಸಚಿವ ಜೈಶಂಕರ್‌ (S Jaishankar) ಕತಾರ್‌ನಲ್ಲಿ ಮಾತನಾಡಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತ ಸೇರಿದಂತೆ ಬ್ರಿಕ್ಸ್ (BRICS) ರಾಷ್ಟ್ರಗಳಿಗೆ 100 ಪ್ರತಿಶತ ಸುಂಕ ವಿಧಿಸುವ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: 16ನೇ ವರ್ಷಕ್ಕೆ ಸ್ಕೂಲ್‌ ಡ್ರಾಪ್‌ಔಟ್‌ – ಬಿಲಿಯನೇರ್‌, ಗಗನಯಾತ್ರಿ ಈಗ ನಾಸಾ ಮುಖ್ಯಸ್ಥ!

    ಅಕ್ಟೋಬರ್‌ನಲ್ಲಿ ನಡೆದ ಬ್ರಿಕ್ಸ್ ಸಭೆಯಲ್ಲಿ ಡಾಲರ್ ಹೊರತಾದ ವಹಿವಾಟುಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲಾಗಿತ್ತು. BRICS ಗುಂಪು ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ಮತ್ತು ಇತರ ದೇಶಗಳನ್ನು ಒಳಗೊಂಡಿದೆ. ಅವರು ಹೊಸ ಬ್ರಿಕ್ಸ್ ಕರೆನ್ಸಿಯನ್ನು ರಚಿಸುವುದಿಲ್ಲ ಅಥವಾ ಪ್ರಬಲವಾದ ಯುಎಸ್ ಡಾಲರ್ ಬದಲಿಗೆ ಯಾವುದೇ ಇತರ ಕರೆನ್ಸಿಗೆ ಬೆಂಬಲಿಸುವುದಿಲ್ಲ ಎನ್ನುವ ಬಗ್ಗೆ ಈ ದೇಶಗಳಿಂದ ನಮಗೆ ಬದ್ಧತೆಯ ಅಗತ್ಯವಿದೆ. ಇಲ್ಲದಿದ್ದರೆ ಅವರು 100% ಟ್ಯಾಕ್ಸ್ ಎದುರಿಸುತ್ತಾರೆ ಎಂದು ಟ್ರಂಪ್‌ ಹೇಳಿದ್ದರು.

    ಈ ಕುರಿತು ಮಾತನಾಡಿರುವ ಜೈ ಶಂಕರ್‌, ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದಿದ್ದಾರೆ. ಭಾರತ – ಅಮೆರಿಕದೊಂದಿಗೆ ಉತ್ತಮ ಮತ್ತು ಬಹಳ ಗಟ್ಟಿಯಾದ ಸಂಬಂಧ ಹೊಂದಿದೆ. ಕೆಲವು ಸಮಸ್ಯೆಗಳಾಗಿ ವ್ಯಾಪಾರ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು. ಆದ್ರೆ ಟ್ರಂಪ್ ಅಡಿಯಲ್ಲಿ QUAD ಅನ್ನು ಮರುಪ್ರಾರಂಭಿಸಲಾಗಿದೆ ಎಂದು ಜೈಶಂಕರ್‌ ಹೇಳಿದ್ದಾರೆ. ಇದನ್ನೂ ಓದಿ: ಸಿರಿಯಾದಲ್ಲಿ ಹೆಚ್ಚಿದ ಹಿಂಸಾಚಾರ – ಕೂಡಲೇ ದೇಶವನ್ನು ತೊರೆಯಿರಿ; ಭಾರತೀಯರಿಗೆ ಸೂಚನೆ

    ಪ್ರಧಾನಿ ಮೋದಿ ಮತ್ತು ಟ್ರಂಪ್ ನಡುವೆ ವೈಯಕ್ತಿಕ ಸಂಬಂಧವಿದೆ. ಇದು ಉಭಯ ದೇಶಗಳ ನಡುವಿನ ಬಲವಾದ ದ್ವಿಪಕ್ಷೀಯ ಬಾಂಧವ್ಯಕ್ಕೆ ಕೊಡುಗೆ ನೀಡಿದೆ. ಭಾರತವು ಡಾಲರೀಕರಣಕ್ಕೆ ಎಂದಿಗೂ ಮುಂದಾಗಿಲ್ಲ. ಏಕೆಂದರೆ ಅಮೆರಿಕ ನಮ್ಮ ಅತಿದೊಡ್ಡ ವ್ಯಾಪಾರ ಪಾಲುದಾರ. ಡಾಲರ್‌ ದುರ್ಬಲಗೊಳಿಸುವ ಆಸಕ್ತಿ ನಮಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿಯೆಟ್ನಾಂ ಯುವತಿಯರಿಗೆ ಬಾಡಿಗೆಗೆ ಬಾಯ್‌ಫ್ರೆಂಡ್‌ ಬೇಕಂತೆ..; ಸೃಷ್ಟಿಯಾಗಿದೆ ಹೊಸ ಟ್ರೆಂಡ್‌ – ಯಾಕೆ ಗೊತ್ತಾ?

  • ‌ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪುವಿನದ್ದು: ವಿದೇಶಾಂಗ ಸಚಿವ ಜೈಶಂಕರ್

    ‌ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪುವಿನದ್ದು: ವಿದೇಶಾಂಗ ಸಚಿವ ಜೈಶಂಕರ್

    – ಟಿಪ್ಪು ಆಡಳಿತದ ದುಷ್ಪರಿಣಾಮ ಮೈಸೂರು ಭಾಗದಲ್ಲಿಯೂ ಕಾಣ್ತಿದೆ ಎಂದ ಸಚಿವ

    ನವದೆಹಲಿ: ಭಾರತೀಯ ಇತಿಹಾಸದಲ್ಲಿ ಟಿಪ್ಪು ಸುಲ್ತಾನ್ (Tipu Sultan) ಅತ್ಯಂತ ಸಂಕೀರ್ಣ ವ್ಯಕ್ತಿ. ದೇಶದಲ್ಲಿ ಬ್ರಿಟಿಷರ ಆಡಳಿತವನ್ನು ವಿರೋಧಿಸಿದ ಕೀರ್ತಿ ಅವರದ್ದು ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ (S Jaishankar) ಬಣ್ಣಿಸಿದ್ದಾರೆ.

    ಇತಿಹಾರಕಾರ ವಿಕ್ರಂ ಸಂಪತ್‌ ರಚಿತ ʻTipu Sultan: The Saga of the Mysore Interregnumʼ (ಟಿಪ್ಪು ಸುಲ್ತಾನ್‌: ‘ದಿ ಸಗಾ ಆಫ್ ದಿ ಮೈಸೂರು ಇಂಟರ್‌ರೆಗ್ನಮ್) ಪುಸ್ತಕವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ಇದೇ ವೇಳೆ ಟಿಪ್ಪು ಸುಲ್ತಾನ್‌ ವಿವಾದಾತ್ಮಕ ಅಂಶಗಳ ಮೇಲೂ ಬೆಳಕು ಚೆಲ್ಲುವ ಕೆಲಸ ಮಾಡಿದರು. ಇದನ್ನೂ ಓದಿ: QR ಕೋಡ್‌ ಇಲ್ಲದ ಪಾನ್‌ ಕಾರ್ಡ್‌ ಮಾನ್ಯವೇ? ಪಾನ್‌ 2.0 ಯೋಜನೆ ಏನು? ಹೊಸ ಪಾನ್‌ ಪಡೆಯುವುದು ಹೇಗೆ?

    ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪು ಸುಲ್ತಾನ್‌ ಅವರದ್ದು. ಆದ್ರೆ ಭಾರತದ ಭವಿಷ್ಯಕ್ಕೆ ಬಂದಾಗ ಅವರ ಸೋಲು ಮತ್ತು ಸಾವು ಒಂದು ಮಹತ್ವದ ತಿರುವು ಎಂದು ಪರಿಗಣಿಸಬಹುದು. ಟಿಪ್ಪು ಸುಲ್ತಾನ್ ಆಡಳಿತದ ದುಷ್ಪರಿಣಾಮ ಮೈಸೂರು ಭಾಗದಲ್ಲಿಯೂ ಕಾಣುತ್ತಿದೆ ಎಂದರು. ಇದನ್ನೂ ಓದಿ: ನ್ಯೂಇಯರ್‌ಗೆ ಪೊಲೀಸರು ಅಲರ್ಟ್; ರೆಸಾರ್ಟ್‌, ಏರ್ಪೋರ್ಟ್‌, ರೈಲ್ವೆ ನಿಲ್ದಾಣಗಳ ಮೇಲೆ ಹದ್ದಿನ ಕಣ್ಣು

    ಇಂದಿಗೂ ಮೈಸೂರಿನ ಹಲವು ಪ್ರದೇಶಗಳಲ್ಲಿ ಅವರ ಬಗ್ಗೆ ಉತ್ತಮ ಗ್ರಹಿಕೆ ಅಥವಾ ಭಾವನೆ ಇಲ್ಲ. ಭಾರತೀಯ ಇತಿಹಾಸದಲ್ಲಿ ಬ್ರಿಟಿಷರೊಂದಿಗಿನ ಅವರ ಹೋರಾಟಕ್ಕೆ ಹೆಚ್ಚಿನ ಗಮನ ನೀಡಲಾಯಿತು. ಹಾಗಾಗಿ ಅವರ ಆಳ್ವಿಕೆಯ ಇತರ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ

    ಇಂದು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಭಾರತವು ಪರ್ಯಾಯ ದೃಷ್ಟಿಕೋನಗಳನ್ನ ಹೊಂದಿದೆ. ಕಳೆದ 10 ವರ್ಷಗಳಲ್ಲಿ ನಮ್ಮ ರಾಜಕೀಯ ವ್ಯವಸ್ಥೆಯು ಬದಲಾವಣೆಯ ದೃಷ್ಟಿಕೋನಗಳಿಗೆ ಸಾಕ್ಷಿಯಾಗಿದೆ. ನಾವು ಇನ್ಮುಂದೆ ಮತಬ್ಯಾಂಕ್‌ನ ಕೈದಿಗಳಲ್ಲ ಮತ್ತು ಅನಾನುಕೂಲ ಸತ್ಯಗಳನ್ನು ಬಹಿರಂಗಪಡಿಸುವುದು ರಾಜಕೀಯವಾಗಿ ಸರಿಯಲ್ಲ ಎಂದು ಹೇಳಿದ್ದಾರೆ.

  • ರಷ್ಯಾವನ್ನು ಹಾಡಿ ಹೊಗಳಿ ಪಾಶ್ಚಿಮಾತ್ಯ ದೇಶಗಳಿಗೆ ಮಾತಿನಲ್ಲೇ ತಿವಿದ ಜೈಶಂಕರ್‌

    ರಷ್ಯಾವನ್ನು ಹಾಡಿ ಹೊಗಳಿ ಪಾಶ್ಚಿಮಾತ್ಯ ದೇಶಗಳಿಗೆ ಮಾತಿನಲ್ಲೇ ತಿವಿದ ಜೈಶಂಕರ್‌

    – ಹಿಂದೆ ವಿಶ್ವದಲ್ಲಿ ಪಾಶ್ಚಿಮಾತ್ಯ ದೇಶಗಳು ಪ್ರಾಬಲ್ಯ ಹೊಂದಿದ್ದವು
    – ಇಂದು ಪಾಶ್ಚಿಮೇತರ ದೇಶಗಳು ನಿಲುವು ತೆಗೆದುಕೊಳ್ಳುತ್ತಿವೆ

    ನವದೆಹಲಿ: ಸ್ವಾತಂತ್ರ್ಯದ ನಂತರ ರಷ್ಯಾದೊಂದಿಗಿನ (Russia) ನಮ್ಮ ಇತಿಹಾಸವನ್ನು ನೋಡಿದರೆ ನಮ್ಮ ಹಿತಾಸಕ್ತಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲು ರಷ್ಯಾ ಎಂದಿಗೂ ಏನನ್ನೂ ಮಾಡಿಲ್ಲ ಎಂದು ನಾನು ಹೇಳಬಲ್ಲೆ ಎಂದು ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ (S Jaishankar) ಹೇಳಿದ್ದಾರೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ರಷ್ಯಾಕ್ಕೆ ಹೋಗುತ್ತಿದ್ದಾರೆ. ಇಂದು ರಷ್ಯಾದ ಪರಿಸ್ಥಿತಿಯು ವಿಭಿನ್ನವಾಗಿದೆ ಎಂದು ನಾನು ಭಾವಿಸುತ್ತೇನೆ. ಪಾಶ್ಚಿಮಾತ್ಯ ದೇಶಗಳ ಜೊತೆ ಬಹುತೇಕ ರಷ್ಯಾದ ಸಂಬಂಧ ಮುರಿದು ಬಿದ್ದಿದೆ. ರಷ್ಯಾ ಈಗ ಏಷ್ಯಾದ ದೇಶಗಳತ್ತ ಹೆಚ್ಚು ವಾಲುತ್ತಿದೆ. ಏಷ್ಯಾದ ದೇಶವಾಗಿರುವ ನಾವು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನಮಗೆ ಇಂದು ಒಳ್ಳೆಯದಾಗುತ್ತಿದೆ. ರಷ್ಯಾವು ಪ್ರಮುಖ ನೈಸರ್ಗಿಕ ಸಂಪನ್ಮೂಲ ಶಕ್ತಿಯಾಗಿದ್ದು ನಾವು ದೊಡ್ಡ ಗ್ರಾಹಕರಾಗಿದ್ದೇವೆ ಎಂದು ಹೇಳಿದರು.

    ಹಿಂದೆ ಪಶ್ಚಿಮದ ರಾಷ್ಟ್ರಗಳು (Western Countries) ವಿಶ್ವದಲ್ಲಿ ಪ್ರಾಬಲ್ಯವನ್ನು ಹೊಂದಿದ್ದವು. ಆದರೆ ಕಳೆದ 20-25 ವರ್ಷಗಳಲ್ಲಿ ಪಾಶ್ಚಿಮಾತ್ಯೇತರ ದೇಶಗಳು ವಿಶ್ವಕ್ಕೆ ಕೊಡುಗೆ ನೀಡುತ್ತಿವೆ. ಇದರಿಂದಾಗಿ ಮರು ಸಮತೋಲನ, ಬಹುಧ್ರುವೀಯತೆ ಆರಂಭವಾಗಿದೆ ಎಂದರು. ಇದನ್ನೂ ಓದಿ: 16 ಮಕ್ಕಳನ್ನು ಹೊಂದುವ ಬಗ್ಗೆ ಯೋಚಿಸಿ – ತಮಿಳುನಾಡು ಸಿಎಂ ಸ್ಟಾಲಿನ್‌ ಕರೆ ಕೊಟ್ಟಿದ್ದೇಕೆ?

     

     

    ಸ್ವಲ್ಪ ಮಟ್ಟಿಗೆ ಸಾಮಾನ್ಯ ಪಾಶ್ಚಾತ್ಯ ದೇಶಗಳಿಗೆ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ 1945 ರ ಮೊದಲು ಮತ್ತು ನಂತರದ ವಿಶ್ವ ಕ್ರಮವು ಪಾಶ್ಚಾತ್ಯವಾಗಿತ್ತು. ಹಿಂದೆ ನೀವು ಮೇಲಕ್ಕೆ ನೋಡುತ್ತಿದ್ದಾಗ ನಾನು ಕೆಳಗೆ ನೋಡುತ್ತಿದ್ದೆ. ಆದರೆ ಇನ್ನು ಮುಂದೆ ಹಾಗೆ ಇರುವುದಿಲ್ಲ. ಭಾರತ, ಚೀನಾದಂತಹ ದೊಡ್ಡ ರಾಷ್ಟ್ರಗಳು ತಮ್ಮದೇ ನಿಲುವುಗಳನ್ನು ತಗೆದುಕೊಳ್ಳುತ್ತದೆ. ಹೀಗಾಗಿ ಪಶ್ಚಿಮದ ದೇಶಗಳಿಗೆ ಹೊಂದಿಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಪಾಶ್ಚಿಮಾತ್ಯ ಮತ್ತು ಪಾಶ್ಚಿಮಾತ್ಯೇತರ ದೇಶಗಳ ನಡುವಿನ ಸಮೀಕರಣಗಳು ವೇಗವಾಗಿ ಬದಲಾಗುತ್ತಿವೆ. ಇದು ವಿಶ್ವ ಕ್ರಮ ಬದಲಾಗುತ್ತಿದ್ದು ಪಾಶ್ಚಿಮಾತ್ಯೇತರ ದೇಶಗಳು ತಮ್ಮದೇ ದೃಷ್ಟಿಕೋನಗಳನ್ನು ತೆಗೆದುಕೊಳ್ಳಲು ಬಯಸಿದಾಗ ಘರ್ಷಣೆ, ವಾದಗಳು ಇರುತ್ತದೆ ಎಂದರು.

     

    ಪಾಶ್ಚಿಮಾತ್ಯೇತರ ದೇಶಗಳು ವಿಶ್ವಕ್ಕೆ ದೊಡ್ಡ ಕೊಡುಗೆ ನೀಡಿದ್ದರಿಂದ ಹೆಚ್ಚು ಪ್ರಭಾವವನ್ನು ಹೊಂದಿರುತ್ತದೆ ಮತ್ತು ಸ್ವಾಭಾವಿಕವಾಗಿ ಇದು ಬರುತ್ತದೆ. ಆದರೆ ಕಳೆದ 20-25 ವರ್ಷಗಳಲ್ಲಿ ಏನಾಯಿತು ಎಂದರೆ ಮರುಸಮತೋಲನ, ಬಹುಧ್ರುವೀಯತೆ ಆರಂಭವಾಯಿತು. ಭಾರತ ಮತ್ತು ಚೀನಾದಂತಹ (China) ದೊಡ್ಡ ದೇಶಗಳು ತೆಗೆದುಕೊಂಡಿರುವ ಸ್ವತಂತ್ರ ದೃಷ್ಟಿಕೋನಗಳು ಮತ್ತು ನಿಲುವುಗಳು ಪಾಶ್ಚಿಮಾತ್ಯರೊಂದಿಗೆ ವಾದಗಳು ಮತ್ತು ಘರ್ಷಣೆಗಳಿಗೆ ಕಾರಣವಾಗುತ್ತದೆ ಎಂದು ಹೇಳಿದರು.

    ಭಾರತೀಯ ಪತ್ರಕರ್ತರು ಕೆನಡಾದ ಹೈಕಮಿಷನರ್ ಬಗ್ಗೆ ವರದಿ ಮಾಡುವಾಗ ಕೆನಡಾ ವಿದೇಶಿ ಹಸ್ತಕ್ಷೇಪ ಎಂದು ಆರೋಪಿಸುತ್ತದೆ. ಆದರೆ ಅವರ ರಾಜತಾಂತ್ರಿಕರು ಕೆನಡಾದ ರಾಜತಾಂತ್ರಿಕರು ನಮ್ಮ ಮಿಲಿಟರಿ, ಪೋಲೀಸ್, ಜನರನ್ನು ಗುರಿಯಾಗಿಸುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲು ಯಾವುದೇ ಸಮಸ್ಯೆ ಇಲ್ಲ ತಿರುಗೇಟು ನೀಡಿದರು.

  • SCO Summit 2024: ಪಾಕ್‌ ನೆಲದಲ್ಲಿ ಜೈಶಂಕರ್‌ಗೆ ಆತ್ಮೀಯ ಸ್ವಾಗತ

    SCO Summit 2024: ಪಾಕ್‌ ನೆಲದಲ್ಲಿ ಜೈಶಂಕರ್‌ಗೆ ಆತ್ಮೀಯ ಸ್ವಾಗತ

    ಇಸ್ಲಾಮಾಬಾದ್‌: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S Jaishankar) ಅವರು ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಭಾಗವಹಿಸಲು ಇಸ್ಲಾಮಾಬಾದ್‌ಗೆ (Islamabad) ಮಂಗಳವಾರ ಸಂಜೆ ಆಗಮಿಸಿದರು.

    ಕಾಶ್ಮೀರ ಸಮಸ್ಯೆ ಮತ್ತು ಭಯೋತ್ಪಾದನೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ದೇಶಗಳ ಮಧ್ಯೆ ದ್ವೇಷಮಯ ವಾತಾವರಣ ಇರುವಾಗ ಸುಮಾರು 9 ವರ್ಷದ ನಂತರ ಭಾರತದ ಮಂತ್ರಿ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮೊದಲು ವಿದೇಶಾಂಗ ಸಚಿವೆಯಾಗಿದ್ದ ದಿ. ಸುಷ್ಮಾ ಸ್ವರಾಜ್‌ ಅವರು ಪಾಕಿಸ್ತಾನಕ್ಕೆ 2015ರ ಡಿಸೆಂಬರ್‌ನಲ್ಲಿ ಭೇಟಿ ನೀಡಿದ್ದರು.

    ವಿದೇಶಾಂಗ ವ್ಯವಹಾರಗಳ ಸಚಿವಾಲಯದ ದಕ್ಷಿಣ ಏಷ್ಯಾದ ಮಹಾನಿರ್ದೇಶಕ ಇಲ್ಯಾಸ್ ಮೆಹಮೂದ್ ನಿಜಾಮಿ ಅವರು ಇಸ್ಲಾಮಾಬಾದ್‌ನ ನೂರ್ ಖಾನ್ ವಾಯುನೆಲೆಯಲ್ಲಿ ಜೈಶಂಕರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟ ಮಕ್ಕಳು ಹೂಗುಚ್ಛಗಳನ್ನು ಅರ್ಪಿಸಿದರು.

     

    ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (shehbaz sharif) ಅವರು ರಾತ್ರಿ ಭೋಜನ ಕೂಟವನ್ನು ಆಯೋಜಿಸಿದ್ದರು. ಈ ಕೂಟಕ್ಕೆ ಆಗಮಿಸಿದ್ದ ಜೈಶಂಕರ್‌ ಅವರನ್ನು ಶೆಹಬಾಜ್ ಷರೀಫ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

    ಪಾಕ್‌ ಜೊತೆ ಮಾತುಕತೆ ಇಲ್ಲ
    ಇತ್ತೀಚಿನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಜೈಶಂಕರ್‌ , ಯಾವುದೇ ನೆರೆಹೊರೆಯವರಂತೆ, ಭಾರತವು ಖಂಡಿತವಾಗಿಯೂ ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಬಯಸುತ್ತದೆ. ಆದರೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸದ ಹೊರತು ಯಾವುದೇ ಮಾತುಕತೆ ಇಲ್ಲ ಎಂದು ಹೇಳಿದ್ದರು.

    SCO ಸದಸ್ಯನಾಗಿ ಈ ಕಾರ್ಯಕ್ರಮಕ್ಕೆ ತೆರಳುತ್ತಿದ್ದೆನೆಯೇ ಹೊರತು ಭಾರತ ಪಾಕಿಸ್ತಾನ ಸಂಬಂಧಗಳನ್ನು ಚರ್ಚಿಸಲು ಅಲ್ಲ ಎಂದು ತಿಳಿಸಿದ್ದರು.

     

    ಭಾರತ, ಪಾಕಿಸ್ತಾನ, ರಷ್ಯಾ, ಚೀನಾ, ಇರಾನ್ ಮತ್ತು ಮಧ್ಯ ಏಷ್ಯಾದ 4 ದೇಶಗಳು ಸದಸ್ಯ ಆಗಿರುವ ಈ ಒಕ್ಕೂಟಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ ಮಾತ್ರ ಪಾಕ್‌ಗೆ ತೆರಳಿರುವ ಜೈಶಂಕರ್ ಅವರು ಇಸ್ಲಾಮಾಬಾದ್‌ನಲ್ಲಿ ಕೇವಲ 24 ಗಂಟೆಗಳ ಕಾಲ ಇರುತ್ತಾರೆ. ಸಭೆ ಮುಗಿದ ನಂತರ ಬುಧವಾರ ಅವರು ಭಾರತಕ್ಕೆ ಮರಳಲಿದ್ದಾರೆ.

     

  • ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

    ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

    – ಪಾಕ್‌ ಪ್ರಧಾನಿಯೊಂದಿಗೆ ಭೋಜನಕೂಟದಲ್ಲಿ ಭಾಗಿ

    ನವದೆಹಲಿ: ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ( S Jaishankar) ಮಂಗಳವಾರ (ಅ.15) ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಕಳೆದ 9 ವರ್ಷಗಳಲ್ಲಿ ಅಂದ್ರೆ 2015ರಿಂದ ಇದೇ ಮೊದಲಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು ಪಾಕ್‌ಗೆ ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ.

    ಚೀನಾದ ಪ್ರಧಾನಿ ಲಿ ಕ್ವಿಯಾಂಗ್, ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಮತ್ತು ಜೈಶಂಕರ್ ಭಾಗಿಯಾಗಲಿದ್ದಾರೆ. ಬುಧವಾರದ ಮುಖ್ಯ ಶೃಂಗಸಭೆಯ ಮೊದಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಆಯೋಜಿಸುವ ಸ್ವಾಗತ ಭೋಜನ ಕೂಟದಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – ಮೂರನೇ ಆರೋಪಿ ಅರೆಸ್ಟ್‌

    ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೂಚ್ ಮಾತನಾಡಿ, ಜೈಶಂಕರ್ ಅವರ ಪಾಕಿಸ್ತಾನ ಭೇಟಿಯು ಮಹತ್ವ ಪಡೆದುಕೊಳ್ಳುತ್ತದೆ. ಏಕೆಂದರೆ ಇದು ನವದೆಹಲಿಯ ಕಡೆಯಿಂದ ಪ್ರಮುಖ ನಿರ್ಧಾರವಾಗಿದೆ. ಪುಲ್ವಾಮಾ ದಾಳಿ, ಬಾಲಾಕೋಟ್‌ ಏರ್‌ಸ್ಟ್ರೈಕ್‌ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟವು. ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ನೆರೆಯ ಸಂಬಂಧವನ್ನು ಬಯಸುತ್ತದೆ ಎಂದು ಹೇಳುತ್ತಾ ಬಂದಿದೆ. ಆದ್ದರಿಂದ ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಇಸ್ಲಾಮಾಬಾದ್‌ಗೆ ಇದೆ ಎಂದರು. ಇದನ್ನೂ ಓದಿ: ಟ್ರಂಪ್‌ಗಿಂತಲೂ ಕಮಲಾ ಹ್ಯಾರಿಸ್‌ಗೆ ಹೆಚ್ಚಿನ ಕೋಟ್ಯಧಿಪತಿಗಳ ಬೆಂಬಲ – ಇಲ್ಲಿದೆ ಬಿಲಿಯನೇರ್ಸ್‌ ಲಿಸ್ಟ್‌

    ಎಸ್‌ಸಿಒ ಸದಸ್ಯ ರಾಷ್ಟ್ರಗಳ ಸರ್ಕಾರದ ಮುಖ್ಯಸ್ಥರ 23 ನೇ ಸಭೆಯು ಇಸ್ಲಾಮಾಬಾದ್‌ನಲ್ಲಿ ಅಕ್ಟೋಬರ್ 15 ಮತ್ತು 16 ರಂದು ನಡೆಯಲಿದ್ದು, ಅಧಿಕಾರಿಗಳು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ಭಾರತದ ನಾಲ್ಕು ಸದಸ್ಯರ ಅಧಿಕೃತ ನಿಯೋಗವೂ ಪಾಕಿಸ್ತಾನಕ್ಕೆ ಆಗಮಿಸಿದೆ ಎಂದು ಮೂಲಗಳು ವರದಿ ಮಾಡಿದೆ. ಚೀನಾದ 15 ಸದಸ್ಯರು, ಕಿರ್ಗಿಸ್ತಾನದ 4 ಸದಸ್ಯರು ಮತ್ತು ಇರಾನ್‌ನ ಇಬ್ಬರು ಸದಸ್ಯರ ನಿಯೋಗವೂ ಇಸ್ಲಾಮಾಬಾದ್ ತಲುಪಿದೆ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – ಕೃತ್ಯದ ಬಳಿಕ ಭದ್ರತಾ ಸಿಬ್ಬಂದಿ ಮೇಲೆ ಖಾರದ ಪುಡಿ ಎರಚಿ ಪರಾರಿಯಾಗಿದ್ದ ಆರೋಪಿಗಳು

    ಇಸ್ಲಾಮಾಬಾದ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲೀಸ್ (ಐಜಿಪಿ) ನಾಸಿರ್ ಅಲಿ ರಿಜ್ವಿ ಅವರು ಮಾತನಾಡಿ, ಫೆಡರಲ್ ರಾಜಧಾನಿಯಲ್ಲಿ ಶೃಂಗ ಸಭೆಗಾಗಿ ಭಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ. ಪಾಕಿಸ್ತಾನ ಸೇನೆ, ಗುಪ್ತಚರ ಸಂಸ್ಥೆಗಳು, ಫ್ರಾಂಟಿಯರ್ ಕಾರ್ಪ್ಸ್ (ಎಫ್‌ಸಿ) ಮತ್ತು ರೇಂಜರ್‌ಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವುದರೊಂದಿಗೆ ಶೋಧ ಮತ್ತು ಮಾಹಿತಿ ಆಧಾರಿತ ಕಾರ್ಯಾಚರಣೆಗಳು ನಡೆಯುತ್ತಿವೆ. ಭದ್ರತೆಗಾಗಿ 9 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿ – ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

    9 ವರ್ಷಗಳಲ್ಲಿ ಇದೇ ಮೊದಲು:
    ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಎಸ್‌ಸಿಒ ಶೃಂಗಸಭೆಗೆ ಆಹ್ವಾನಿಸಿತ್ತು. ಆದರೆ ಡಿಸೆಂಬರ್ 2015 ರಿಂದ ಯಾವುದೇ ಭಾರತೀಯ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ. ದಿವಂಗತ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 2015 ರಲ್ಲಿ ಅಫ್ಘಾನಿಸ್ತಾನದ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲು ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದರು. ಇದನ್ನೂ ಓದಿ: ಗುಜರಾತ್‌ನಲ್ಲಿ 5,000 ಕೋಟಿ ಮೌಲ್ಯದ ಕೊಕೇನ್ ಸೀಜ್