ವಿಶ್ವಸಂಸ್ಥೆ: ರಷ್ಯಾ (Russia) ಉಕ್ರೇನ್ (Ukraine) ಮೇಲೆ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ತಕ್ಷಣವೇ ಕೊನೆಗೊಳಿಸಿ ಶಾಂತಿಯುತ ಮಾತುಕತೆಗೆ ಮರಳುವುದು ಇದೀಗ ಅಗತ್ಯವಾಗಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ (UN) ತಿಳಿಸಿದೆ.
ರಷ್ಯಾ ಉಕ್ರೇನ್ ಮೇಲೆ ಪರಮಾಣು ಶಸ್ತ್ರಾಸ್ತ್ರವನ್ನು ಬಳಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ, ಈಗಾಗಲೇ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಇದು ಯುದ್ಧದ ಸಮಯವಲ್ಲ ಎಂದು ಹೇಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S Jaishankar) ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ದೇಶದ ಹೊರಗೆ ಎಷ್ಟು ಆಸ್ತಿ ಮಾಡಿದ್ದಾರೆ?: ಪಾಕ್ ಮಾಜಿ ಪ್ರಧಾನಿ
ರಷ್ಯಾ ಉಕ್ರೇನ್ನ ಸಂಘರ್ಷ ಇಡೀ ವಿಶ್ವಕ್ಕೆ ಆಳವಾದ ಕಾಳಜಿಯ ವಿಷಯವಾಗಿದೆ. ಮುಖ್ಯವಾಗಿ ಪರಮಾಣು ದಾಳಿಯ ಸಾಧ್ಯತೆ ಭವಿಷ್ಯದ ದೃಷ್ಟಿಕೋನಕ್ಕೆ ಇನ್ನಷ್ಟು ಭೀತಿಯ ಸಂಗತಿಯಾಗಿದೆ. ಆದರೆ ಭಾರತ ಇದನ್ನು ಖಂಡಿಸಿಲ್ಲ. ಇದನ್ನು ಈ ಕೂಡಲೇ ರಾಜತಾಂತ್ರಿಕತೆ ಹಾಗೂ ಮಾತುಕತೆಯ ಮೂಲಕ ಪರಿಹರಿಸಬೇಕು ಎಂಬುದೇ ಭಾರತದ ಉದ್ದೇಶ ಎಂದು ತಿಳಿಸಿದರು. ಇದನ್ನೂ ಓದಿ: 18-65 ವಯಸ್ಸಿನ ಪುರುಷರಿಗೆ ಟಿಕೆಟ್ ಮಾರಾಟ ನಿಲ್ಲಿಸಲು ರಷ್ಯಾದ ಏರ್ಲೈನ್ಸ್ ಆದೇಶ
Live Tv
[brid partner=56869869 player=32851 video=960834 autoplay=true]
ಅಬುಧಾಬಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯ ಸ್ಥಳಕ್ಕೆ ಭೇಟಿ ನೀಡಿದರು. ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಹಿಂದೂ ದೇವಾಲಯ ಇದಾಗಿದೆ.
ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗೆ ಅರಬ್ ಸಂಯುಕ್ತ ಸಂಸ್ಥಾನ (ಯುಎಇ)ಕ್ಕೆ ಆಗಿಸಿರುವ ಎಸ್.ಜೈಶಂಕರ್ ಅವರು ದೇವಾಲಯ ನಿರ್ಮಾಣದಲ್ಲಿ ಭಾರತೀಯರ ಶ್ರಮವನ್ನು ಶ್ಲಾಘಿಸಿದರು. ʼಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ ಇದುʼ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ದಾವೂದ್ ಇಬ್ರಾಹಿಂನ ತಲೆಗೆ 25 ಲಕ್ಷ ನಗದನ್ನು ಘೋಷಿಸಿದ ಎನ್ಐಎ
On Ganesh Chaturthi, blessed to visit the @BAPS Hindu temple under construction in Abu Dhabi.
Glad to see the rapid progress and deeply appreciate the devotion of all involved. Met the BAPS team, community supporters and devotees and workers at the site. pic.twitter.com/7ZezrfvkuR
ಈ ಕುರಿತು ಟ್ವೀಟ್ ಮಾಡಿರುವ ಜೈಶಂಕರ್, ಗಣೇಶ ಚತುರ್ಥಿಯಂದು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದೆ. ತ್ವರಿತ ಪ್ರಗತಿಯನ್ನು ನೋಡಲು ಸಂತೋಷವಾಗಿದೆ. ದೇವಾಲಯ ನಿರ್ಮಾಣ ಜವಾಬ್ದಾರಿ ಹೊತ್ತಿರುವ BAPS ತಂಡ, ಭಕ್ತರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಸಂತೋಷವಾಯಿತು ಎಂದು ಟ್ವೀಟ್ ಮಾಡಿದ್ದಾರೆ.
Delighted to meet HH Sheikh Nahyan bin Mabarak Al Nahyan, Minister of Tolerance and Co-existence.
Appreciated his strong support for the Indian community, our yoga activities, cricket and cultural cooperation. pic.twitter.com/xmjdTG1mxs
ಸಚಿವ ಶೇಖ್ ನಹ್ಯಾನ್ ಬಿನ್ ಮಬಾರಕ್ ಅಲ್ ನಹ್ಯಾನ್ ಅವರನ್ನು ಜೈಶಂಕರ್ ಭೇಟಿ ಮಾಡಿದರು. ಅಲ್ಲಿರುವ ಭಾರತೀಯ ಸಮುದಾಯದ ಯೋಗ ಚಟುವಟಿಕೆಗಳು, ಕ್ರಿಕೆಟ್ ಮತ್ತು ಸಾಂಸ್ಕೃತಿಕ ಸಹಕಾರಕ್ಕಾಗಿ ಅಪಾರ ಬೆಂಬಲ ನೀಡುತ್ತಿರುವುದನ್ನು ಶ್ಲಾಘಿಸಿದರು. ಇದನ್ನೂ ಓದಿ: ಜನಮನ ಸೆಳೆಯುತ್ತಿದೆ 60 ಸಾವಿರ ಗೋಲಿಗಳಿಂದ ಮಾಡಿದ ಗಣೇಶ ಮೂರ್ತಿ!
55,000 ಚದರ ಮೀಟರ್ ಜಾಗದಲ್ಲಿ ದೇವಾಲಯ ನಿರ್ಮಾಣವಾಗಲಿದೆ. ಈ ರಚನೆಯನ್ನು ಭಾರತೀಯ ದೇವಾಲಯದ ಕುಶಲಕರ್ಮಿಗಳ ಕೈಯಿಂದ ಕೆತ್ತನೆಯಾಗುತ್ತಿದೆ. ಇದು ಮಧ್ಯಪ್ರಾಚ್ಯದಲ್ಲಿ ಮೊದಲ ಸಾಂಪ್ರದಾಯಿಕ ಹಿಂದೂ ಕಲ್ಲಿನ ದೇವಾಲಯವಾಗಲಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಇಂದಿಗೆ 100 ದಿನಗಳನ್ನು ಪೂರೈಸಿರುವ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಮಂಗಳವಾರ (ಜುಲೈ 21ರಂದು) ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಂಸತ್ತಿನ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಸರ್ಕಾರವು ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ.
ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ಈಚೆಗೆ ರಾಜೀನಾಮೆ ನೀಡಿದರು. ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಶ್ರೀಲಂಕಾ ತೊರೆದು ಪಲಾಯನಗೈದಿರುವ ಹಿನ್ನೆಲೆ ಕಳೆದ ಗುರುವಾರ ಸಂಸತ್ತಿನ ಸ್ಪೀಕರ್ಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದರು.
ಇದಕ್ಕೂ ಮುನ್ನ ಲಂಕಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜಪಕ್ಸೆ ಹಾಗೂ ಪ್ರಧಾನಿ ವಿಕ್ರಮಸಿಂಘೆ ತಮ್ಮ ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇದನ್ನೂ ಓದಿ: 18 ತಿಂಗಳಲ್ಲಿ 200 ಕೋಟಿ ಡೋಸ್ ಕೊರೊನಾ ಲಸಿಕೆ- ದಾಖಲೆ ಸೃಷ್ಟಿಸಿದ ಭಾರತ
ಆ ನಂತರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದ್ದು, ಹೊಸ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ 7 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದರು. ಸದ್ಯ ಮುಂದಿನ ವಾರ ನಡೆಯುವ ಮತದಾನದಲ್ಲಿ ಅವರು ಶಾಶ್ವತವಾಗಿ ಉತ್ತರಾಧಿಕಾರಿಯಾಗುವ ಪ್ರಮುಖ ಅಭ್ಯರ್ಥಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Live Tv
[brid partner=56869869 player=32851 video=960834 autoplay=true]
ಕೊಲಂಬೊ: ಸತತ ಆರ್ಥಿಕ ದಿವಾಳಿತನದಿಂದ ಔಷಧಗಳ ಕೊರತೆ ಎದುರಿಸುತ್ತಿರುವ ಶ್ರೀಲಂಕಾಗೆ ಭಾರತ ತನ್ನ ನೆರವನ್ನು ಮುಂದುವರಿಸಿದೆ.
ಆರ್ಥಿಕ ಬಿಕ್ಕಟ್ಟಿನಿಂದಾಗಿ ಔಷಧಗಳ ಕೊರತೆ ಎದುರಿಸುತ್ತಿದ್ದ ಶ್ರೀಲಂಕಾ, ತುರ್ತು ಚಿಕಿತ್ಸೆಗಳಿಗೆ ಮಾತ್ರವೇ ಆದ್ಯತೆ ನೀಡಿತ್ತು. ಪ್ರಮುಖ ಶಸ್ತ್ರ ಚಿಕಿತ್ಸೆಗಳನ್ನು ನಿಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸತತವಾಗಿ ಶ್ರೀಲಂಕಾದ ನೆರವಿಗೆ ನಿಂತಿರುವ ಭಾರತ ಸರ್ಕಾರ ಸರಿ ಸುಮಾರು 3.3 ಟನ್ಗಳಷ್ಟು ಅಗತ್ಯ ಔಷಧಗಳನ್ನು ಸರಬರಾಜು ಮಾಡಿದೆ. ಇದನ್ನೂ ಓದಿ: ʻಒಂದು ಕುಟುಂಬ, ಒಂದು ಸರ್ಕಾರಿ ಕೆಲಸʼ – ನೀತಿಯನ್ನು ಎತ್ತಿ ಹಿಡಿದ ಹೈಕೋರ್ಟ್
ಜಾಫ್ನಾ ಟೀಚಿಂಗ್ ಆಸ್ಪತ್ರೆ (ಜೆಟಿಎಚ್)ಗೆ 2 ಟ್ರಕ್ ಲೋಡ್ಗಳಲ್ಲಿ 3.3 ಟನ್ಗಳಷ್ಟು ಜೀವ ರಕ್ಷಕ ಔಷಧಿ ಹಾಗೂ ವೈದ್ಯಕೀಯ ಸಾಧನಗಳನ್ನು ಸರಬರಾಜು ಮಾಡಿದೆ. ಭಾರತದ ಕನ್ಸೊಲೆಟ್ ಜನರಲ್ ಜಾಫ್ನಾ ರಾಕೇಶ್ ನಟರಾಜ್ ಅವರು ಜಾಫ್ನಾ ಆಸ್ಪತ್ರೆ ನಿರ್ದೇಶಕ ಡಾ.ನಂತಕುಮಾರ್ ಅವರಿಗೆ ಔಷಧಗಳನ್ನು ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ 50ನೇ ಹುಟ್ಟುಹಬ್ಬಕ್ಕೆ 111 ಅಡಿ ಎತ್ತರ ಕೇಕ್ ಸಿದ್ಧ
Another promise to the people of #SriLanka delivered!!! During his visit in March, EAM @DrSJaishankar was apprised of shortages of medicines faced by @1990SuwaSeriya. High Commissioner handed over 3.3 tons of medical supplies today to help the vital lifeline run smoothly. (1/2) pic.twitter.com/JeSNlzMmto
ಮಾರ್ಚ್ 2022 ರಲ್ಲಿ ಕೊಲಂಬೊದಲ್ಲಿರುವ ಸುವಾಸೇರಿಯಾ ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈ ಶಂಕರ್ ಅವರಿಗೆ ಫೌಂಡೇಶನ್ ಎದುರಿಸುತ್ತಿರುವ ಔಷಧಗಳ ಕೊರತೆಯ ಬಗ್ಗೆ ಲಂಕಾದ ಅಧಿಕಾರಿ ಬಾಗ್ಲೇ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಶ್ರೀಲಂಕಾದ ನೆರವಿಗೆ ಮುಂದಾಗಿದೆ.
ಮೇ 27 ರಂದು, ಶ್ರೀಲಂಕಾದಲ್ಲಿ ಭಾರತದ ಹಂಗಾಮಿ ಹೈ ಕಮಿಷನರ್ ವಿನೋದ್ ಕೆ. ಜೇಕಬ್ ಅವರು ಕೊಲಂಬೊದಲ್ಲಿ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಅವರಿಗೆ 25 ಟನ್ಗಳಷ್ಟು ವೈದ್ಯಕೀಯ ಸಾಮಗ್ರಿಗಳನ್ನು ಹಸ್ತಾಂತರಿಸಿದ್ದರು. ಇದೀಗ ಮತ್ತೆ ವೈದ್ಯಕೀಯ ಸಾಮಗ್ರಿಗಳನ್ನು ಹಸ್ತಾಂತರಿಸಲಾಗಿದೆ.
ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರದೇಶದ ಉಪನಗರವಾದ ಪೇಶಾವರದ ಸರ್ಬಂದ್ ಪ್ರದೇಶದಲ್ಲಿ ಸಿಖ್ ಸಮುದಾಯಕ್ಕೆ ಸೇರಿದ ಇಬ್ಬರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ.
ಗುಂಡಿನ ದಾಳಿಗೆ ಬಲಿಯಾದವರನ್ನು ಸಲ್ಜೀತ್ ಸಿಂಗ್ (42) ಹಾಗೂ ರಂಜೀತ್ಸಿಂಗ್ (38) ಎಂದು ಗುರುತಿಸಲಾಗಿದೆ. ಈ ಇಬ್ಬರೂ ತಮ್ಮ ಅಂಗಡಿಯಲ್ಲಿ ಕುಳಿತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿಗಳನ್ನು ಬಂಧಿಸಲು ಪ್ರದೇಶವನ್ನು ಸುತ್ತುವರಿದಿದ್ದಾರೆ ಎಂದು ಸ್ಥಳೀಯ ಸುದ್ದಿಸಂಸ್ಥೆ ವರದಿ ಮಾಡಿದೆ.
Strongly condemn the killing of our Sikh citizens in Peshawar, KP. Pakistan belongs to all its people. Have ordered a high level inquiry to ascertain facts. The killers will be arrested & meted out exemplary punishment. My most sincere sympathies to the bereaved families.
ಭಾರತ ತೀವ್ರ ಖಂಡನೆ: ಸಿಖ್ ಸಮುದಾಯದ ವ್ಯಾಪಾರಿಗಳ ಹತ್ಯೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಪ್ರತಿಭಟನೆಯನ್ನೂ ದಾಖಲಿಸಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ಮಾನ್, ಮಾಜಿ ಸಿಎಂ ಅಮರಿಂದರ್ ಸಿಂಗ್ ಹಾಗೂ ಭಾರತದ ವಿದೇಶಾಂಗ ಸಚಿವಾಲಯವೂ ತೀವ್ರವಾಗಿ ಖಂಡಿಸಿದೆ. ಇದನ್ನೂ ಓದಿ: ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ
ಘಟನೆ ಕುರಿತು ಮಾತನಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರರು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ಸರಣಿ ಹತ್ಯೆ ಮುಂದುವರಿದಿದೆ. ಈ ಹತ್ಯೆ ಬಗ್ಗೆ ಪಾಕಿಸ್ತಾನ ಸರ್ಕಾರದ ವಿರುದ್ಧ ಬಲವಾದ ಪ್ರತಿಭಟನೆ ದಾಖಲಿಸಿದ್ದೇವೆ. ಈ ವಿಷಯವನ್ನು ಪ್ರಾಮಾಣಿಕವಾಗಿ ತನಿಖೆ ಮಾಡಲು ಹಾಗೂ ಕೃತ್ಯ ಎಸಗಿದ ನೀಚರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಾವು ಕರೆ ನೀಡುತ್ತೇವೆ ಎಂದು ಹೇಳಿದ್ದಾರೆ.
I Strongly condemn the gruesome killing of two Sikh youths in Peshawar Pakistan. I also request our Foreign Minister @DrSJaishankar ji to speak to Pakistan to raise the concern and ensure safety of Hindu and Sikh minorities residing in Pakistan. pic.twitter.com/cEMw5h3PuY
ಪಾಕಿಸ್ತಾನ ಸರ್ಕಾರವು ತನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ. ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ನೋಡಿಕೊಳ್ಳುತ್ತದೆ ಎಂದು ನಾವು ನಿರೀಕ್ಷಿಸಿದ್ದೇವೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಥಾಮಸ್ ಕಪ್ ಬ್ಯಾಡ್ಮಿಂಟನ್ – ಭಾರತ ಚಾಂಪಿಯನ್, ಇತಿಹಾಸ ಸೃಷ್ಟಿ
ಪಾಕ್ ಪ್ರಧಾನಿ ಶೆಹಬಾಜ್ ಸಹ ಇದಕ್ಕೆ ಪ್ರತಿಕ್ರಿಯಿಸಿದ್ದು, ಹತ್ಯೆಯ ಹಿಂದಿನ ಸತ್ಯಾಂಶಗಳನ್ನು ತಿಳಿಯಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಹಂತಕರನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
Another killing of Sikhs in Pakistan. 2 shopkeepers, Ranjeet Singh & Saljeet Singh shot dead in Peshawar. This is highly condemnable. I've always said, @GovtofPakistan only does lip services for Sikhs without ensuring their security. Request @PMOIndia to take serious note.
— Capt.Amarinder Singh (@capt_amarinder) May 15, 2022
ಸಿಖ್ಖರ ಸುರಕ್ಷತೆ ಖಚಿತಪಡಿಸಿಕೊಳ್ಳಿ: ಪಂಜಾಬ್ ಸಿಎಂ ಭಗವಂತ್ ಮಾನ್, ಪಾಕಿಸ್ತಾನದ ಪೇಶಾವರದಲ್ಲಿ ಇಬ್ಬರು ಸಿಖ್ಖರ ಭೀಕರ ಹತ್ಯೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ನಮ್ಮ ವಿದೇಶಾಂಗ ಸಚಿವರಿಗೂ ನಾನು ವಿನಂತಿಸುತ್ತೇನೆ. ಪಾಕಿಸ್ತಾನದಲ್ಲಿ ನೆಲೆಸಿರುವ ಹಿಂದೂ ಮತ್ತು ಸಿಖ್ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪಾಕಿಸ್ತಾನದೊಂದಿಗೆ ಮಾತನಾಡಬೇಕು ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಸಹ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಪಾಕಿಸ್ತಾನದಲ್ಲಿ ಮತ್ತೆ ಸಿಖ್ಖರ ಹತ್ಯೆಯಾಗಿದೆ. ಇದು ಅತ್ಯಂತ ಖಂಡನೀಯ. ನಾನು ಯಾವಾಗಲೂ ಹೇಳುತ್ತಿದ್ದೆ, ಪಾಕಿಸ್ತಾನ ಸರ್ಕಾರ ಸಿಖ್ಖರ ಭದ್ರತೆಯನ್ನು ಖಾತ್ರಿಪಡಿಸದೇ ಅವರಿಗೆ ಕೇವಲ ಆಶ್ವಾಸನೆ ನೀಡುತ್ತಿದೆ ಎಂಬುದನ್ನು ಪುನರುಚ್ಛರಿಸಿದ್ದಾರೆ.
ನವದೆಹಲಿ: ಬೀಜಿಂಗ್ ಗಡಿ ಒಪ್ಪಂದ ಉಲ್ಲಂಘಿಸಿದ ಬಳಿಕ ಚೀನಾದೊಂದಿಗಿನ ಭಾರತದ ಸಂಬಂಧ ಹದಗೆಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.
ಮ್ಯೂನಿಚ್ ಸೆಕ್ಯೂರಿಟಿ ಕಾನ್ಫರೆನ್ಸ್ (ಎಂಎಸ್ಸಿ) 2022 ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಜೈಶಂಕರ್, ಕಳೆದ 45 ವರ್ಷಗಳಿಂದ ಚೀನಾ-ಭಾರತದ ಗಡಿಯಲ್ಲಿ ಶಾಂತಿ ಇತ್ತು. 1975ರಿಂದ ಗಡಿಯಲ್ಲಿ ಯಾವುದೇ ಮಿಲಿಟರಿ ಸಾವು-ನೋವುಗಳು ಸಂಭವಿಸುತ್ತಿರಲಿಲ್ಲ. ಆದರೆ ಇದೀಗ ಚೀನಾದಿಂದ ಭಾರತಕ್ಕೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ
ಜೂನ್ 2020ರ ವರೆಗೆ ಚೀನಾದೊಂದಿಗಿನ ಭಾರತದ ಸಂಬಂಧ ಉತ್ತಮವಾಗಿತ್ತು. ಯಾವಾಗ ಪಾಂಗಾಂಗ್ ಸರೋವರ ಪ್ರದೇಶದಲ್ಲಿ ಭಾರತ-ಚೀನಾ ಮಿಲಿಟರಿ ನಡುವೆ ಹಿಂಸಾತ್ಮಕ ಘರ್ಷಣೆ ನಡೆಯಿತೋ ಅಂದಿನಿಂದ ಗಡಿ ಸಂಬಂಧ ಹದಗೆಡುತ್ತ ಬಂದಿದೆ ಎಂದು ಜೈಶಂಕರ್ ಹೇಳಿದ್ದಾರೆ.
ಮೆಲ್ಬರ್ನ್: ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ. ಮೆಲ್ಬರ್ನ್ನಲ್ಲಿರುವ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆಸ್ಟ್ರೇಲಿಯಾ ವಿದೇಶಾಂಗ ಸಚಿವೆ ಮೇರಿಸ್ ಪೇನ್ ಅವರಿಗೆ ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹಿ ಇರುವ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಆಯೋಜಿಸಿದ್ದ ಕ್ವಾಡ್ ವಿದೇಶಾಂಗ ಮಂತ್ರಿಗಳ ಸಭೆಯಲ್ಲಿ ಭಾರತದ ಜೈಶಂಕರ್ ಪಾಲ್ಗೊಂಡಿದ್ದರು. ಸಭೆ ಬಳಿಕ ಮೇರಿಸ್ ಪೇನ್, ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್, ಜಪಾನ್ ವಿದೇಶಾಂಗ ಸಚಿವ ಹಯಾಶಿ ಯೇಶಿಮಾಸಾ ಅವರೊಂದಿಗೆ ಆಸ್ಟ್ರೇಲಿಯಾದ ಅತಿದೊಡ್ಡ ಕ್ರೀಡಾಂಗಕ್ಕೆ ಭೇಟಿ ಕೊಟ್ಟಿದ್ದರು. ಇದನ್ನೂ ಓದಿ: 6 ವರ್ಷಗಳ ಕಾಲ ಕುತ್ತಿಗೆಯಲ್ಲಿ ಟೈರ್ ಸಿಕ್ಕಿಸಿಕೊಂಡಿದ್ದ ಮೊಸಳೆಗೆ ಕೊನೆಗೂ ಸಿಕ್ತು ಮುಕ್ತಿ!
A fitting end to a busy day. Quad FMs visit the @MCG. Presented @MarisePayne with a bat signed by @imVkohli.
ಆಸ್ಟ್ರೇಲಿಯಾ ವಿದೇಶಾಂಗ ಸಚಿವರಿಗೆ ಬ್ಯಾಟ್ ನೀಡುತ್ತಿರುವ ಫೋಟೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಜೈಶಂಕರ್, ನ್ಯಾಯಯುತ ಆಟ ಮತ್ತು ಆಟದ ನಿಯಮಗಳ ಸಂದೇಶ ಎಂಬ ಸಾಲನ್ನು ಬರೆದಿದ್ದಾರೆ. ಆ ಮೂಲಕ ಜಾಗತಿಕ ವಿರೋಧದ ಮಧ್ಯೆಯೂ ಚಳಿಗಾಲದ ಒಲಿಂಪಿಕ್ಸ್ ನಡೆಸುತ್ತಿರುವ ಚೀನಾಕ್ಕೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
33 ವರ್ಷ ವಯಸ್ಸಿನ ವಿರಾಟ್ ಕೊಹ್ಲಿ ಈಚೆಗಷ್ಟೇ ಭಾರತದ ಕ್ರಿಕೆಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೊಹ್ಲಿ ತನ್ನ ನಾಯಕತ್ವದಲ್ಲಿ ನಡೆದ 68 ಪಂದ್ಯಗಳಲ್ಲಿ 40 ಪಂದ್ಯಗಳ ಗೆಲುವಿನೊಂದಿಗೆ ಅತ್ಯಂತ ಯಶಸ್ವಿ ಭಾರತೀಯ ಟೆಸ್ಟ್ ನಾಯಕರೆನಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ರಾಜಕೀಯ ವಲಯದಲ್ಲಿ ಈ ಹಿಂದೂ ಕುಟುಂಬ ಫೇಮಸ್..!