Tag: s mahesh kumar

  • ಮಗನನ್ನು ಹೀರೋ ಆಗಿ ನೋಡೋದು ಸ್ಪಂದನಾ ಕನಸಾಗಿತ್ತು- ನಿರ್ದೇಶಕ ಮಹೇಶ್

    ಮಗನನ್ನು ಹೀರೋ ಆಗಿ ನೋಡೋದು ಸ್ಪಂದನಾ ಕನಸಾಗಿತ್ತು- ನಿರ್ದೇಶಕ ಮಹೇಶ್

    ಸ್ಯಾಂಡಲ್‌ವುಡ್‌ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾಗೆ ಎಲ್ಲಾ ಪೋಷಕರಂತೆಯೇ ತನ್ನ ಮಗನ ಮೇಲೆ ಸಾವಿರಾರು ಕನಸನ್ನು ಕಟ್ಟಿಕೊಂಡಿದ್ದರು. ವಿಜಯ ಅವರಂತೆಯೇ ಮಗ ಶೌರ್ಯ ಹೀರೋ ಆಗಬೇಕು ಎಂಬುದು ಸ್ಪಂದನಾ ಕನಸಾಗಿತ್ತು ಎಂದು  ‘ಮದಗಜ’ ಚಿತ್ರದ ನಿರ್ದೇಶಕ ಮಹೇಶ್ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:ಕುಟುಂಬಕ್ಕೆ ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ

    ನಿರ್ದೇಶಕ ಮಹೇಶ್ ಈ ಬಗ್ಗೆ ಮಾತನಾಡಿದ್ದು, ಸ್ಪಂದನಾಗೆ ತಮ್ಮ ಮಗನನ್ನ ಹೀರೋ ಮಾಡಬೇಕು ಅನ್ನೋ ದೊಡ್ಡ ಕನಸಿತ್ತು. ಮಗನ ಮೊದಲ ಸಿನಿಮಾವನ್ನ ವಿಜಯ ರಾಘವೇಂದ್ರ ಅವರೇ ಡೈರೆಕ್ಷನ್ ಮಾಡುವ ಯೋಚನೆಯಿತ್ತು. ಶ್ರೀಮುರಳಿ ಮತ್ತು ವಿಜಯ್ ಪುತ್ರರನ್ನು ಅವರ ವಿದ್ಯಾಭ್ಯಾಸದ ನಂತರ ಮುಂದಿನ ವರ್ಷಗಳಲ್ಲಿ ನಾಯಕ ನಟನಾಗಿ ಪರಿಚಯಿಸೋ ಆಸೆ ಸ್ಪಂದನಾದಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ:ರಾಹುಲ್ ಮದ್ವೆಯಾಗ್ತೀನಿ – ಒಂದು ಷರತ್ತು ಪಾಲಿಸಬೇಕು ಎಂದ ಶೆರ್ಲಿನ್ ಚೋಪ್ರಾ

    ಸ್ಪಂದನಾ ಸಾವು ಸಹಿಸಿಕೊಳ್ಳುವ ಶಕ್ತಿ ಶ್ರೀಮುರಳಿ ಅವರಿಗಿಲ್ಲ. ನನ್ನ ಕುಟುಂಬಕ್ಕೆ ಯಾಕೆ ಪದೇ ಪದೇ ಹೀಗೆ ಆಗುತ್ತಿದೆ. ನಾನು ಎಂದಿಗೂ ಯಾರಿಗೂ ದ್ರೋಹ ಮಾಡಿಲ್ಲ. ದೇವರು ಯಾಕೆ ಪದೇ ಪದೇ ನೋವು ಕೊಡ್ತಾ ಇದ್ದಾನೆ ಅಂತಾ ಮುರಳಿ ಬೇಸರ ವ್ಯಕ್ತಪಡಿಸಿದ್ದಾರೆ. ಅಪ್ಪು ಅಗಲಿಕೆಯನ್ನು ಅವ್ರು ಅರಗಿಸಿಕೊಂಡಿಲ್ಲ. ಅಷ್ಟರಲ್ಲಿ ಸೂರಜ್‌ಗೆ ಆಕ್ಸಿಡೆಂಟ್ ಆಗಿ ಕಾಲು ಕಟ್ ಆಗಿತ್ತು. ಸೂರಜ್‌ಗೆ ನೆರವಾಗಬೇಕು ಅಂತೆಲ್ಲ ಶ್ರೀಮುರಳಿ- ವಿಜಯ್ ಪ್ಲ್ಯಾನ್ ಹಾಕಿಕೊಂಡಿದ್ರು. ಅಷ್ಟರಲ್ಲಿ  ಸ್ಪಂದನಾ ಅವರಿಗೆ ಈಗಾಗಿದೆ. ನಿಜವಾಗ್ಲೂ ಇದನ್ನು ತಡೆದುಕೊಳ್ಳುವ ಶಕ್ತಿ ಮುರಳಿಗೂ ಇಲ್ಲ ವಿಜಯ್‌ಗೂ ಇಲ್ಲಾ ಎಂದು ಮಹೇಶ್ ಮಾತನಾಡಿದ್ದಾರೆ.

    ಚಿನ್ನೇಗೌಡ್ರನ್ನು ತಂದೆಯಂತೆ ಪ್ರೀತಿಯಿಂದ ಕಾಣುತ್ತಿದ್ದರು ಸ್ಪಂದನಾ. ಮನೆಯಲ್ಲಿದ್ದಾಗ ಅವರೇ ಮಾವನಿಗೆ ಊಟ ಬಡಿಸುತ್ತಿದ್ರು. ತುಂಬಾ ಒಳ್ಳೆಯ ಬಾಂದವ್ಯ ಇತ್ತು. ಚಿನ್ನೇಗೌಡ್ರಿಗೆ ಈ ನೋವು ಸಹಿಸೋ ಶಕ್ತಿ ಇರಲ್ಲ. ಸೊಸೆ ಮನೆ ಮಗಳಂತೆ ಕಾಣುತ್ತಿದ್ದರು. ಸ್ಪಂದನಾ ಅತ್ತಿಗೆ ಮನೆಗೆ ಬಂದಾಗೆಲ್ಲ ಮುರಳಿ ರೇಗಿಸುತ್ತಿದ್ದರು. ಈಗ ಎಲ್ಲರನ್ನು ಶಾಪಿಂಗ್‌ಗೆ ಕರೆಕೊಂಡು ಅಂಗಡಿಗಳನ್ನು ಮನೆಬಾಗಿಲಿಗೆ ತೆಗೆದುಕೊಂಡು ಬರುತ್ತಾರೆ ಅಂತಾ ರೇಗಿಸುತ್ತಿದ್ದರು. ಸ್ಪಂದನಾ ಮನೆಗೆ ಬಂದಾಗಲೆಲ್ಲ ಮುರುಳಿ ಮಕ್ಕಳ ಜೊತೆಗೂಡಿ ಶಾಪಿಂಗ್‌ಗೆ ಹೋಗುತ್ತಿದ್ರು. ಮಕ್ಕಳಿಗೆ ಬಟ್ಟೆ, ಫುಡ್ ಕೊಡಿಸೋದು ಅವರಿಗೆ ಇಷ್ಟ. ಅವರ ಚಂದದ ಕುಟುಂಬದ ಮೇಲೆ ಯಾರ ಕೆಟ್ಟ ಕಣ್ಣು ಬಿತ್ತು ಗೊತ್ತಿಲ್ಲ ಎಂದು ಎಸ್. ಮಹೇಶ್ ವಿಷಾದ ವ್ಯಕ್ತಪಡಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಭಿಷೇಕ್ ಅಂಬರೀಶ್ ಚಿತ್ರದಲ್ಲಿ ಅಬ್ಬರಿಸಲಿದ್ದಾರಾ ರಾಣಾ ದಗ್ಗುಭಾಟಿ?

    ಅಭಿಷೇಕ್ ಅಂಬರೀಶ್ ಚಿತ್ರದಲ್ಲಿ ಅಬ್ಬರಿಸಲಿದ್ದಾರಾ ರಾಣಾ ದಗ್ಗುಭಾಟಿ?

    ಯೋಗ್ಯ, ಮದಗಜ ಸಿನಿಮಾದ ಪ್ರತಿಭಾನ್ವಿತ ನಿರ್ದೇಶಕ ಎಸ್.ಮಹೇಶ್ ಕುಮಾರ್ (S. Mahesh Kumar) ಇದೀಗ ಜ್ಯೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್‌ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದೀಗ ಹೊಸ ವಿಚಾರವೊಂದು ಗಾಂಧಿನಗರದಲ್ಲಿ ಸದ್ದು ಮಾಡ್ತಿದೆ. ಅಭಿಷೇಕ್ ಮುಂಬರುವ ಸಿನಿಮಾಗೆ ರಾಣಾ ದಗ್ಗುಭಾಟಿ(Rana Daggubati) ಎಂಟ್ರಿ ಕೊಡ್ತಿದ್ದಾರೆ ಎನ್ನಲಾಗುತ್ತಿದೆ.

    ಅಭಿಷೇಕ್ (Abhishek Ambareesh) ಮತ್ತು ಮಹೇಶ್ ಕುಮಾರ್ ಕಾಂಬಿನೇಷನ್ ಹೊಸ ಸಿನಿಮಾಗೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿರುವ ಬೆನ್ನಲ್ಲೇ ಇತ್ತೀಚೆಗೆ ಅಭಿಷೇಕ್, ಮಹೇಶ್ ಜೊತೆಗಿನ ರಾಣಾ ದಗ್ಗುಭಾಟಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ಅಭಿಷೇಕ್‌ ಮುಂದಿನ ಸಿನಿಮಾಗೆ ರಾಣಾ ಬರುತ್ತಾರೆ ಎಂಬ ಸುದ್ದಿ ಸದ್ದು ಮಾಡ್ತಿದೆ. ಇದನ್ನೂ ಓದಿ: ಸ್ಟಾರ್ ನಟನ ಮಗಳ ಜೊತೆ ಸಮಂತಾ ಮಾಜಿ ಪತಿ ನಾಗಚೈತನ್ಯ

     

    View this post on Instagram

     

    A post shared by S Mahesh Kumar (@mahesh_director)

    `ಕೆಜಿಎಫ್ 2′, ಕಾಂತಾರ ಸಿನಿಮಾದ ನಂತರ ಕನ್ನಡದ ಮಾರುಕಟ್ಟೆ ದೊಡ್ಡದಾಗಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಪರಭಾಷೆಯ ಸ್ಟಾರ್ಸ್ ಸ್ಯಾಂಡಲ್‌ವುಡ್‌ನತ್ತ ಮುಖ ಮಾಡ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇ ರಾಣಾ ಎಂಟ್ರಿ ನೆಟ್ಟಿಗರಿಗೆ ಕುತೂಹಲ ಮೂಡಿಸಿದೆ.

    ಇತ್ತೀಚೆಗೆ ರಾಣಾ ದಗ್ಗುಭಾಟಿ ಅಂಬರೀಶ್ ಮನೆಗೆ ಭೇಟಿ ನೀಡಿದ್ದರು. ಈಗ ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ, ಅಭಿಷೇಕ್ ನಟನೆಯ ಐತಿಹಾಸಿಕ ಸಿನಿಮಾಗೆ ರಾಣಾ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾ ಶೂಟಿಂಗ್ ಏಪ್ರಿಲ್‌ನಿಂದ ಶುರುವಾಗಲಿದೆ. ಅಷ್ಟಕ್ಕೂ ಈ ಚಿತ್ರಕ್ಕೆ ರಾಣಾ ಎಂಟ್ರಿಯ ಸುದ್ದಿ ನಿಜಾನಾ, ಅಥವಾ ಇದು ಜಸ್ಟ್ ಭೇಟಿಗಷ್ಟೇ ಸೀಮಿತನಾ ಎಂಬುದನ್ನ ಮುಂದಿನ ದಿನಗಳವೆರೆಗೂ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]