Tag: S. P. Balasubrahmanyam

  • ಸೆ.4ರಂದೇ ಎಸ್‍ಪಿಬಿ ಕೊರೊನಾ ನೆಗೆಟಿವ್- ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಸೆ.4ರಂದೇ ಎಸ್‍ಪಿಬಿ ಕೊರೊನಾ ನೆಗೆಟಿವ್- ಅಂತಿಮ ದರ್ಶನಕ್ಕೆ ವ್ಯವಸ್ಥೆ

    – ಕೇವಲ ಗಣ್ಯರಿಗೆ ಮಾತ್ರ ಅವಕಾಶ

    ಚೆನ್ನೈ: ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಕುರಿತು ನಗರದ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್ 4ರಂದೇ ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು ಎಂದು ಸ್ಪಷ್ಟಪಡಿಸಿದೆ.

    ಎಸ್‍ಪಿಬಿ ಅವರ ಮರಣದ ಬಳಿಕ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಆಗಸ್ಟ್ 5ರಂದು ಬಾಲಸುಬ್ರಹ್ಮಣ್ಯಂ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಹಿನ್ನೆಲೆ ಆಗಸ್ಟ್ 14ರಂದು ಅವರ ಸ್ಥಿತಿ ಗಂಭೀರವಾಯಿತು. ಅವರ ಆರೋಗ್ಯವನ್ನು ನುರಿತ ತಜ್ಞ ವೈದ್ಯರು ನೋಡಿಕೊಳ್ಳುತ್ತಿದ್ದರು. ಅಲ್ಲದೆ ತರ್ತು ನಿರ್ವಹಣಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಸೆಪ್ಟೆಂಬರ್ 4ರಂದು ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು ಎಂದು ಆಸ್ಪತ್ರೆ ತಿಳಿಸಿದೆ.

    ಇಂದು ಬೆಳಗ್ಗೆ ಸಹ ತಜ್ಞ ವೈದ್ಯರು ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದರು. ಅವರ ಆರೋಗ್ಯವನ್ನು ಹತೋಟಿಗೆ ತರಲು ತಜ್ಞ ವೈದ್ಯರು ಬಹಳಷ್ಟು ಪ್ರಯತ್ನಿಸಿದರು. ಆದರೆ ಕಾರ್ಡಿಯೋ ರೆಸ್ಪಿರೇಟರಿ(ಹೃದಯ ರಕ್ತನಾಳ) ಅರೆಸ್ಟ್ ನಿಂದಾಗಿ ಇಂದು(ಸೆಪ್ಟೆಂಬರ್ 25) ಮಧ್ಯಾಹ್ನ 1.04ಕ್ಕೆ ಅವರು ಸಾವನ್ನಪ್ಪಿದರು ಎಂದು ತಿಳಿಸಲು ವಿಷಾಧಿಸುತ್ತೇವೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ.

    ಅವರು ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ಆಸ್ಪತ್ರೆ ವಿಷಾದ ವ್ಯಕ್ತಪಡಿಸಿದೆ. ಸುದ್ದಿ ಹೊರ ಬೀಳುವುದಕ್ಕೂ ಮುನ್ನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿತ್ತು. ಆಸ್ಪತ್ರೆ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿದ್ದು, ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. 11-30ಕ್ಕೆ ಖ್ಯಾತ ನಿರ್ದೇಶಕ ಭಾರತಿ ರಾಜ ಮತ್ತು ಸಂಗೀತ ನಿರ್ದೇಶಕ ಇಳಯರಾಜ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಇದೆ.

    ಎಸ್‍ಪಿಬಿ ಪುತ್ರಿ ಪಲ್ಲವಿ ಹಾಗೂ ನಿರ್ದೇಶಕ ಭಾರತಿ ರಾಜ ಅವರು ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ. ಕೊರೊನಾ ನೆಗೆಟಿವ್ ಹಿನ್ನೆಲೆ ಇಂದು ಸಂಜೆ ಅವರ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಆದರೆ ಕೇವಲ ಗಣ್ಯರಿಗಷ್ಟೇ ದರ್ಶನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಂಜಿಎಂ ಆಸ್ಪತ್ರೆ ಮುಂಭಾಗ ಭದ್ರತೆಗಾಗಿ ಬ್ಯಾರಿಕೇಡ್‍ಗಳನ್ನು ಹಾಕಲಾಗಿದೆ.

  • ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿ ಕಳಚಿದಂತಾಗಿದೆ – ಎಸ್‍ಪಿಬಿ ನಿಧನಕ್ಕೆ ಸಿಎಂ ಸಂತಾಪ

    ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿ ಕಳಚಿದಂತಾಗಿದೆ – ಎಸ್‍ಪಿಬಿ ನಿಧನಕ್ಕೆ ಸಿಎಂ ಸಂತಾಪ

    ಬೆಂಗಳೂರು: ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗಾಯನ ನಿಲ್ಲಿಸಿದ ಎಸ್‌ಪಿ ಬಾಲಸುಬ್ರಹ್ಮಣ್ಯಂ

    ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು. ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು ಎಂದು ಎಸ್‍ಪಿಬಿ ಸಾಧನೆಯ ಬಗ್ಗೆ ಹೇಳಿದ್ದಾರೆ.

    ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಆದರೆ ಇದೀಗ ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದಿದ್ದಾರೆ.

    ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‍ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಸುಮಾರು 1.4 ನಿಮಿಷಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಅವರ ಮಗ ಚರಣ್ ಅಧಿಕೃತವಾಗಿ ತಿಳಿಸಿದ್ದರು.

  • ಕಷ್ಟದಲ್ಲಿದ್ದ ಕಲಾವಿದನ ಸಹಾಯಕ್ಕೆ ಬಂದ ಎಸ್‍ಪಿ ಬಾಲಸುಬ್ರಹ್ಮಣ್ಯಂ

    ಕಷ್ಟದಲ್ಲಿದ್ದ ಕಲಾವಿದನ ಸಹಾಯಕ್ಕೆ ಬಂದ ಎಸ್‍ಪಿ ಬಾಲಸುಬ್ರಹ್ಮಣ್ಯಂ

    ರಾಯಚೂರು: ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಕಷ್ಟದಲ್ಲಿದ್ದ ರಾಯಚೂರಿನ ಸಂಗೀತ ಕಲಾವಿದನಿಗೆ ಸಹಾಯ ಮಾಡಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಯಚೂರಿನ ತತ್ವಪದ ಗಾಯಕ ದಾದಪೀರ್ ಮಂಜರ್ಲಾಗೆ ಅಗತ್ಯ ವಸ್ತುಗಳ ಕಿಟ್ ನೀಡಿ ಸಹಾಯ ಹಸ್ತ ಚಾಚಿದ್ದಾರೆ. ಈ ಹಿಂದೆ ಕಲಾವಿನೊಂದಿಗೆ ಸಂಪರ್ಕದಲ್ಲಿದ್ದ ಎಸ್.ಪಿ.ಬಾಲಸುಬ್ರಮಣ್ಯಂ ಕಲಾವಿದ ದಾದಪೀರ್ ಕಷ್ಟದಲ್ಲಿದ್ದಾರೆ ಎಂದು ತಿಳಿದು ತಾವೇ ಕಿಟ್ ಕಳುಹಿಸಿಕೊಟ್ಟಿದ್ದಾರೆ.

    ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ದಾದಾಪೀರ್ ಮಂಜರ್ಲಾಗೆ ಸ್ಥಳೀಯ ಕಲಾವಿದರು, ಅಭಿಮಾನಿಗಳು ಧನಸಹಾಯ ಮಾಡಿ ಚಿಕಿತ್ಸೆಗೆ ಸಹಕಾರಿಯಾಗಿದ್ದಾರೆ. ಈಗ ಸಂಪೂರ್ಣ ಗುಣಮುಖರಾಗಿರುವ ದಾದಾಪೀರ್ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ಅರ್ಪಿಸಿದ್ದಾರೆ.

  • ಜಯಂತ್ ಕಾಯ್ಕಿಣಿ ವಿರಚಿತ ಕೊರೊನಾ ಜಾಗೃತಿ ಗೀತೆಗೆ ಎಸ್‍ಪಿಬಿ ಧ್ವನಿ

    ಜಯಂತ್ ಕಾಯ್ಕಿಣಿ ವಿರಚಿತ ಕೊರೊನಾ ಜಾಗೃತಿ ಗೀತೆಗೆ ಎಸ್‍ಪಿಬಿ ಧ್ವನಿ

    ಬೆಂಗಳೂರು: ಮಹಾಮಾರಿ ಕೊರೊನಾ ಓಡಿಸಲು ದೇಶಾದ್ಯಂತ ಶತ ಪ್ರಯತ್ನ ನಡೆಯುತ್ತಿದ್ದು, ಚಿತ್ರರಂಗದ ಹಲವರು ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಾತ್ರವಲ್ಲದೆ ಸಿನಿಮಾ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಸಿನಿಮಾ ಗೀತೆ ರಚನೆಕಾರರು ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ.

    ಹಲವು ನಟ, ನಟಿಯರು ವಿವಿಧ ಬಗೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅದರಂತೆ ಜಯಂತ್ ಕಾಯ್ಕಿಣಿ ಸಹ ಗೀತೆ ರಚಿಸುವ ಮೂಲಕ ವಿಭಿನ್ನವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ಗೀತೆಯನ್ನು ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಹಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ.

    ಜಯಂತ್ ಕಾಯ್ಕಿಣಿಯವರು ಕೇವಲ ಸಾಹಿತ್ಯ, ಸಿನಿಮಾ ಗೀತೆ ರಚಿಸುವುದು ಮಾತ್ರವಲ್ಲ, ಸಮಾಜದ ಆಗುಹೋಗಗಳ ಕುರಿತು ಸಹ ಆಗಾಗ ಪ್ರತಿಕ್ರಿಯಸುತ್ತಿರುತಾರೆ. ಹಲವು ಸಂದರ್ಭಗಳಲ್ಲಿ ವಿವಿಧ ಸಲಹೆಗಳನ್ನು ಸಹ ನೀಡುತ್ತಾರೆ. ಇನ್ನೂ ಹಲವು ಬಾರಿ ಅವರ ಗೀತೆಗಳ ಮೂಲಕವೇ ಜನರಲ್ಲಿ ಅರಿವು ಮೂಡಿಸುತ್ತಾರೆ. ಅದರಂತೆ ಇದೀಗ ಕೊರೊನಾ ಬಗ್ಗೆ ಜಾಗೃತಿ ಗೀತೆಯನ್ನು ರಚಿಸಿ, ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಂದ ಹಾಡಿಸಿದ್ದಾರೆ. ಹೀಗಾಗಿ ಈ ಹಾಡಿಗೆ ಮಹತ್ವ ಇನ್ನೂ ಹೆಚ್ಚಾಗಿದೆ.

    ಸಾಮಾಜಿಕ ಜಾಲತಾಣ ಫೆಸ್ಬುಕ್‍ನಲ್ಲಿ ಹಲವರು ಈ ಕುರಿತು ಕಮೆಂಟ್ ಮಾಡಿದ್ದು, ತುಂಬಾ ಚೆನ್ನಾಗಿ ಹಾಡಿದ್ದೀರಿ ಸರ್, ಜಯಂತ್ ಕಾಯ್ಕಿಣಿಯವರು ಅರ್ಥಗರ್ಭಿತವಾಗಿ ಸಾಹಿತ್ಯ ಬರೆದಿದ್ದಾರೆ. ನೀವೂ ಅದಕ್ಕೆ ನ್ಯಾಯ ಒದಗಿಸಿದ್ದೀರಿ. ಕೇಳಲು ತುಂಬಾ ಚೆನ್ನಾಗಿದೆ ಎಂದು ಕಮೆಂಟ್ ಮಾಡಿದ್ದಾರೆ.

    ಮತ್ತೊಬ್ಬರು ಕಮೆಂಟ್ ಮಾಡಿ ಜಯಂತ್ ಕಾಯ್ಕಿಣಿಯವರು ತುಂಬಾ ಚೆನ್ನಾಗಿ ಹಾಡು ಬರೆದಿದ್ದಾರೆ. ನೀವು ಸಹ ಅಚ್ಚುಕಟ್ಟಾಗಿ ಹಾಡಿದ್ದೀರಿ. ನೀವು ಹಾಡಿದ ಪವನಿಸು ಪರಮಾತ್ಮ ಶ್ರೀ ವೆಂಕಟೇಶ ನನ್ನ ನೆಚ್ಚಿನ ಗೀತೆ ಎಂದಿದ್ದಾರೆ.

    ಇನ್ನೊಬ್ಬರು ಕಮೆಂಟ್ ಮಾಡಿ, ಅರ್ಥಗರ್ಭಿತ ಸಾಹಿತ್ಯ, ನೀವೂ ತುಂಬಾ ಚೆನ್ನಾಗಿ ಹಾಡಿದ್ದೀರಿ. ಒಳ್ಳೆಯ ಸಂದೇಶವಿದೆ. ನಿಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಎಸ್‍ಪಿಬಿ ಸರ್ ಎಂದು ಕಮೆಂಟ್ ಮಾಡಿದ್ದಾರೆ.

  • ಫೋನ್‌ಗಳನ್ನು ಹೊರಗಿಟ್ಟರೂ, ತಾರೆಯರು ಮೋದಿ ಜೊತೆ ಹೇಗೆ ಸೆಲ್ಫಿ ಕ್ಲಿಕ್ಕಿಸಿದ್ರು: ಎಸ್‌ಪಿಬಿ ಪ್ರಶ್ನೆ

    ಫೋನ್‌ಗಳನ್ನು ಹೊರಗಿಟ್ಟರೂ, ತಾರೆಯರು ಮೋದಿ ಜೊತೆ ಹೇಗೆ ಸೆಲ್ಫಿ ಕ್ಲಿಕ್ಕಿಸಿದ್ರು: ಎಸ್‌ಪಿಬಿ ಪ್ರಶ್ನೆ

    ನವದೆಹಲಿ: ತಮ್ಮ ಭಾವನೆಗಳನ್ನು ಬಹಿರಂಗಪಡಿಸುವ ಮೂಲಕ ಆಗಾಗ ಸುದ್ದಿಯಾಗುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ, ಇದೀಗ ಫೇಸ್‌ಬುಕ್ ಪೋಸ್ಟ್ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಬಾಲಿವುಟ್ ನಟ, ನಟಿಯರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಕುರಿತು ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನಟ, ನಟಿಯರೊಂದಿಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಸಹ ಪ್ರಧಾನಿ ಮೋದಿಯವರ ಮನೆಗೆ ತೆರಳಿದ್ದರು. ಆಗ ತಮ್ಮನ್ನು ಇತರ ನಟರಂತೆ ಆಧರಿಸಿಲ್ಲ, ತಾರತಮ್ಯ ಎಸಗಲಾಗಿದೆ ಎಂದು ಪರೋಕ್ಷವಾಗಿ ಎಸ್‌ಪಿಬಿ ಅಸಮಾಧಾನ ಹೊರ ಹಾಕಿದ್ದಾರೆ.

    https://www.facebook.com/SPB/posts/2672550912802732

    ಎಲ್ಲರ ಫೋನ್‌ಗಳನ್ನು ಭದ್ರತಾ ಸಿಬ್ಬಂದಿ ಹೊರಗೆ ತೆಗೆದುಕೊಂಡು, ಟೋಕನ್ ನೀಡಿ ಕಳುಹಿಸಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಬಾಲಿವುಡ್ ತಾರೆಯರಿಗೆ ಮಾತ್ರ ಹೇಗೆ ಮತ್ತು ಏಕೆ ಮೊಬೈಲ್ ಒಳಗೆ ಕೊಂಡೊಯ್ದು, ಸೆಲ್ಫಿ ತೆಗೆಯಲು ಅನುಮತಿ ನೀಡಲಾಯಿತು ಎಂದು ಪ್ರಶ್ನಿಸಿದ್ದಾರೆ. ಎಸ್‌ಪಿಬಿಯವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ.

    ರಾಮೋಜಿ ರಾವ್ ಅವರಿಗೆ ನಾನು ಆಭಾರಿಯಾಗಿದ್ದೇನೆ. ಏಕೆಂದರೆ ಇವರಿಂದಲೇ ನಾನು ಅಕ್ಟೋಬರ್ 29ರಂದು ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿಯವರ ಮನೆಯಲ್ಲಿ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮಕ್ಕೆ ನಾನು ಹಾಜರಾಗಲು ಸಾಧ್ಯವಾಯಿತು. ಮನೆಯ ಆವರಣದೊಳಗೆ ಪ್ರವೇಶಿಸುವುದಕ್ಕೂ ಮುನ್ನ ನಮ್ಮ ಸೆಲ್‌ಫೋನ್‌ಗಳನ್ನು ಭದ್ರತಾ ಸಿಬ್ಬಂದಿ ಬಳಿ ನೀಡಲಾಯಿತು. ಇದಕ್ಕೆ ಪ್ರತಿಯಾಗಿ ಟೋಕನ್‌ಗಳನ್ನು ನೀಡಲಾಯಿತು. ಆದರೆ ಆ ದಿನ ಪ್ರಧಾನ ಮಂತ್ರಿಯೊಂದಿಗೆ ನಟ, ನಟಿಯರು ಸೆಲ್ಫಿ ತೆಗೆದುಕೊಳ್ಳುತ್ತಿದ್ದುದನ್ನು ನೋಡಿ ದಿಗ್ಬ್ರಾಂತನಾದೆ. ಥಿಂಗ್ಸ್ ದ್ಯಾಟ್ ಮೇಕ್ ಯು ಗೋ ಹೂಂ????? ಎಂಬ ಸಾಲುಗಳನ್ನು ಬರೆದು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

    ಮಹಾತ್ಮಾ ಗಾಂಧೀಜಿಯ 150ನೇ ಜನ್ಮ ದಿನಾಚರಣೆ ಅಂಗವಾಗಿ ಅವರ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸಲು ಹಾಗೂ ಅಭಿಯಾನವನ್ನು ಉತ್ತೇಜಿಸಲು ‘ಚೇಂಜ್ ವಿಥಿನ್’ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಏರ್ಪಡಿಸಿದ್ದರು. ಇದರಲ್ಲಿ ಶಾರುಖ್ ಖಾನ್, ಅಮಿರ್ ಖಾನ್ ಹಾಗೂ ಚಿತ್ರೋದ್ಯಮದ ಹಲವು ಗಣ್ಯರು ಸೇರಿದಂತೆ ತಾರೆಯರು ಭಾಗವಹಿಸಿದ್ದರು.

    ದಕ್ಷಿಣ ರಾಜ್ಯಗಳ ಏಕೈಕ ಪ್ರತಿನಿಧಿಯಾಗಿ ತೆಲುಗು ನಿರ್ಮಾಪಕ ದಿಲ್ ರಾಜು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ರಾಮ್ ಚರಣ ಅವರ ಪತ್ನಿ ಹಾಗೂ ಉದ್ಯಮಿ ಉಪಾಸನಾ ಕಾಮಿನೇನಿ ಈ ಕುರಿತು ಧ್ವನಿ ಎತ್ತಿ ದಕ್ಷಿಣ ರಾಜ್ಯಗಳಿಗೆ ಮಾನ್ಯತೆ ನೀಡಿಲ್ಲ ಎಂದು ಪ್ರಶ್ನಿಸಿದ್ದರು. ಈ ಕುರಿತು ಚಿತ್ತ ಹರಿಸುವಂತೆ ಪ್ರಧಾನಿ ಮೋದಿ ಬಳಿ ಮನವಿ ಮಾಡಿದ್ದರು.

  • ಚಿನ್ನ, ಪ್ಲಾಟಿನಂಗಿಂತಲೂ ನೀರು ಅಮೂಲ್ಯ, ಅದನ್ನು ಉಳಿಸಿ: ಎಸ್‍ಪಿಬಿ ಮನವಿ

    ಚಿನ್ನ, ಪ್ಲಾಟಿನಂಗಿಂತಲೂ ನೀರು ಅಮೂಲ್ಯ, ಅದನ್ನು ಉಳಿಸಿ: ಎಸ್‍ಪಿಬಿ ಮನವಿ

    ಚೆನ್ನೈ: ದೇಶದಲ್ಲಿ ಹಲವೆಡೆ ಸರಿಯಾದ ಮಳೆಯಿಲ್ಲದೆ ಜನರು ಬರದಿಂದ ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಚಿನ್ನ, ಪ್ಲಾಟಿನಂಗಳಿಗಿಂತ ನೀರು ಅಮೂಲ್ಯವಾದದ್ದು, ಅದನ್ನು ಮಿತವಾಗಿ ಬಳಸಿ, ಉಳಿಸಿ ಎಂದು ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಮನವಿ ಮಾಡಿದ್ದಾರೆ.

    ತಮಿಳಿನ `ಗೂರ್ಖಾ’ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಸ್‍ಪಿಬಿ ನೀರಿನ ಮಹತ್ವದ ಬಗ್ಗೆ ಹಾಗೂ ನೀರನ್ನು ಮಿತವಾಗಿ ಬಳಸಬೇಕೆಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಬಳಿ ಮನವಿ ಮಾಡಿಕೊಂಡರು. ಹಾಗೆಯೇ ಚಿನ್ನ, ಪ್ಲಾಟಿನಂಗಿಂತಲೂ ನೀರು ಅತ್ಯಮೂಲ್ಯವಾದದ್ದು. ಜೀವಿಸಲು ನೀರು ಬೇಕು. ನೀರಿಗೆ ನಾವು ಬೆಲೆಕಟ್ಟಲು ಸಾಧ್ಯವಿಲ್ಲ. ಚೆನ್ನೈ ಅಂತಹ ಮಹಾನಗರಗಳಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ದೇಶದ ಹಲವೆಡೆ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ ಎಂದರು.

    ಹಾಗೆಯೇ ಇಂದು ನಾನು ಮನೆಯಲ್ಲಿ ಅರ್ಧ ಬಕೆಟ್ ನೀರಿಗಾಗಿ ಅರ್ಧ ಗಂಟೆ ಕಾಯುವಂತಾಯಿತು. ಕೊನೆಗೆ ಸ್ಥಾನಕ್ಕೆ ನೀರಿಲ್ಲದಂತಾಯಿತು ಎಂದು ತಾವು ನೀರಿಗಾಗಿ ಎದುರಿಸಿದ ಪರಿಸ್ಥಿತಿಯನ್ನು ಹಂಚಿಕೊಂಡರು.

    ಇಂದು ಹನಿ ನೀರಿಗಾಗಿ ಅದೆಷ್ಟೋ ಜನರು ಪರದಾಟುತ್ತಿದ್ದಾರೆ. ಇಂದು ನೀರಿನ ಸಮಸ್ಯೆ ಕಾಡುತ್ತಿರುವುದಕ್ಕೆ ನಾವುಗಳೇ ಕಾರಣ. ನೀರನ್ನು ಸುಮ್ಮನೆ ಪೋಲು ಮಾಡುವುದನ್ನು ಬಿಡಿ. ನೀರನ್ನು ಉಳಿಸಲು ಕೆಲವು ಸರಳ ವಿಧಾನಗಳು ನಮ್ಮೆಲ್ಲರಿಗೂ ಗೊತ್ತಿರುತ್ತದೆ. ಆದರೆ ನಾವು ಅದನ್ನು ಪಾಲಿಸುವುದಿಲ್ಲ. ಪ್ರತಿದಿನ ನಾನಾ ರೀತಿಯ ಬಟ್ಟೆಗಳನ್ನು ಧರಿಸುವುದನ್ನು ಬಿಟ್ಟು, ವಾರಕ್ಕೆ ಕೇವಲ ಎರಡು ಜೊತೆ ಬಟ್ಟೆ ಧರಿಸಿ. ಇದರಿಂದ ಬಟ್ಟೆ ತೊಳೆಯಲು ಖರ್ಚಾಗುವ ಅನಗತ್ಯ ನೀರು ಉಳಿಯುತ್ತದೆ. ನೀರನ್ನು ಮಿತವಾಗಿ ಬಳಿಸಿ ಎಂದು ಕಳವಳ ವ್ಯಕ್ತಪಡಿಸಿದರು.

    ಚೆನ್ನೈನಂತಹ ದೊಡ್ಡ ದೊಡ್ಡ ನಗರಗಳಲ್ಲಿ ನೀರಿನ ಸಮಸ್ಯೆಗೆ ಜನರು ತತ್ತರಿಸಿ ಹೋಗಿದ್ದಾರೆ. ಬೆಳೆಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದಾರೆ. ಅಲ್ಲದೆ ಕುಡುಯುವ ನೀರಿನ ಸಮಸ್ಯೆ ಕಾಡುತ್ತಿದ್ದು, ಎರಡು ದಿನಕೊಮ್ಮೆ ಅಥವಾ ವಾರಕ್ಕೊಮ್ಮೆ ಟ್ಯಾಂಕರ್ ಗಳಲ್ಲಿ ಎಲ್ಲೆಡೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ ಚೆನ್ನೈನ ದೊಡ್ಡ ದೊಡ್ಡ ಐಟಿ ಕಂಪನಿಗಳಿಗೂ ನೀರಿ ಅಭಾವದ ಬಿಸಿ ಮುಟ್ಟಿದ್ದು, ಹೊರರಾಜ್ಯಗಳಿಂದ ಕೆಲಸಕ್ಕೆ ಬಂದ ಸಿಬ್ಬಂದಿಗಳಿಗೆ ನೀರು ಪೂರೈಸಲಾಗದೆ ರಜೆ ನೀಡಲಾಗಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ನಟಿಯರ ಬಗ್ಗೆ ಗಾಯಕ ಎಸ್‍ಪಿಬಿ ಶಾಕಿಂಗ್ ಹೇಳಿಕೆ

    ನಟಿಯರ ಬಗ್ಗೆ ಗಾಯಕ ಎಸ್‍ಪಿಬಿ ಶಾಕಿಂಗ್ ಹೇಳಿಕೆ

    ಹೈದಾರಾಬಾದ್: ಬಹುಭಾಷಾ ಗಾಯಕ, ನಟ ಎಸ್‍ಪಿ ಬಾಲಸುಬ್ರಮಣ್ಯಂ ಅವರು ಕಾರ್ಯಕ್ರಮವೊಂದರಲ್ಲಿ ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

    ಇತ್ತೀಚೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಎಸ್‍ಪಿಬಿ ಅವರು ನಟಿಯರು ಧರಿಸುವ ಉಡುಪಿನ ಬಗ್ಗೆ ಪ್ರಶ್ನಿಸಿದ್ದಾರೆ. ನಟಿಯರು ತಾವು ಧರಿಸುವ ಉಡುಪಿನಿಂದ ಅವರಿಗೆ ಕೆಲಸ ಸಿಗುತ್ತದೆ ಎಂದು ತಿಳಿದುಕೊಂಡಿರುತ್ತಾರೆ ಎಂದು ನನಗೆ ಅನ್ನಿಸುತ್ತದೆ ಎಂದು ಹೇಳುವ ಮೂಲಕ ನಟಿಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಈಗಿನ ಕಾಲದಲ್ಲಿ ನಟಿಯರಿಗೆ ಸಿನಿಮಾ ಕಾರ್ಯಕ್ರಮಗಳಲ್ಲಿ ಯಾವ ರೀತಿಯ ಉಡುಪು ಧರಿಸಬೇಕು ಎಂದು ತಿಳಿದಿಲ್ಲ. ನಟಿಯರ ವರ್ತನೆ ನೋಡಿ ಇದು ಅವರ ಮುಗ್ಧತೆ ಎಂದು ತಿಳಿದುಕೊಳ್ಳಬೇಕೋ? ಅಥವಾ ಮೈ ಕಾಣುವಂತಹ ಬಟ್ಟೆ ಧರಿಸಿದ್ದರೆ ಮಾತ್ರ ನಾಯಕರು ಹಾಗೂ ನಿರ್ದೇಶಕರು ಸಿನಿಮಾಗಳಲ್ಲಿ ಅವಕಾಶ ನೀಡುತ್ತಾರೆ ಎಂದು ಅವರು ಭಾವಿಸುತ್ತಾರೋ? ಗೊತ್ತಿಲ್ಲ ಎಂದು ಎಸ್‍ಪಿಬಿ ಅವರು ಹೇಳಿದ್ದಾರೆ.

    ನನ್ನ ಈ ಹೇಳಿಕೆಗೆ ನಟಿಯರು ನನ್ನ ಮೇಲೆ ಕೋಪ ಮಾಡಿಕೊಂಡರು ಪರವಾಗಿಲ್ಲ. ಏಕೆಂದರೆ ಇಲ್ಲಿ ಸಾಕಷ್ಟು ಜನರಿಗೆ ತೆಲುಗು ತಿಳಿಯಲ್ಲ. ಹಾಗಾಗಿ ಅವರಿಗೆ ನನ್ನ ಹೇಳಿಕೆ ಅರ್ಥವಾಗಿರುವುದಿಲ್ಲ ಎಂದು ಹೇಳಿದ್ದಾರೆ.

    ಎಸ್‍ಪಿ ಬಾಲಸುಬ್ರಮಣ್ಯಂ ಅವರು ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ಅತಿ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಎಸ್‍ಪಿಬಿ ಒಟ್ಟು 16 ಭಾಷೆಯಲ್ಲಿ 40,000 ಹಾಡನ್ನು ಹಾಡಿದ್ದಾರೆ. ಎಸ್‍ಪಿಬಿ ಅವರಿಗೆ ಅತ್ಯುತ್ತಮ ಗಾಯಕನಾಗಿ ಒಟ್ಟು 6 ನ್ಯಾಷನಲ್ ಫಿಲ್ಮ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಬಾಲಿವುಡ್ ಹಾಡುಗಳಿಗೂ ಕೂಡ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv