Tag: SA Ramadas

  • ಟಿಕೆಟ್ ವಂಚಿತ ಶಾಸಕ ರಾಮದಾಸ್‌ರನ್ನು ತಬ್ಬಿ ಬೆನ್ನು ತಟ್ಟಿದ ಅಮಿತ್ ಶಾ

    ಟಿಕೆಟ್ ವಂಚಿತ ಶಾಸಕ ರಾಮದಾಸ್‌ರನ್ನು ತಬ್ಬಿ ಬೆನ್ನು ತಟ್ಟಿದ ಅಮಿತ್ ಶಾ

    ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮೈಸೂರಿಗೆ (Mysuru) ಆಗಮಿಸಿದ್ದಾರೆ. ಈ ವೇಳೆ ಕೃಷ್ಣರಾಜೇಂದ್ರ ಕ್ಷೇತ್ರದ ಟಿಕೆಟ್ ವಂಚಿತರಾಗಿರುವ ಎಸ್‌ಎ ರಾಮದಾಸ್ (SA Ramadas) ಅವರನ್ನು ಅಮಿತ್ ಶಾ ಬಾಚಿ ತಬ್ಬಿ, ಬೆನ್ನು ತಟ್ಟಿದ್ದಾರೆ.

     

    ಅಮಿತ್ ಶಾ ಆಗಮಿಸುತ್ತಲೇ ಅವರ ಕಾಲಿಗೆ ನಮಸ್ಕರಿಸಿ ರಾಮದಾಸ್ ಸ್ವಾಗತಿಸಿದರು. ಈ ವೇಳೆ ಅಮಿತ್ ಶಾ ಅವರನ್ನು ಬಾಚಿ ತಬ್ಬಿ, ಬೆನ್ನು ತಟ್ಟಿದ್ದಾರೆ. ಈ ಬಗ್ಗೆ ತಿಳಿಸಿರುವ ರಾಮದಾಸ್, ನಾನು ಆರೋಗ್ಯದ ಸಮಸ್ಯೆಯ ಹಿನ್ನೆಲೆ ಆಸ್ಪತ್ರೆಯಲ್ಲಿದ್ದೆ. ರಾಷ್ಟ್ರೀಯ ನಾಯಕರು ಬಂದಾಗ ನಾನು ಸ್ವಾಗತ ಕೋರುವುದು ನನ್ನ ಜವಾಬ್ದಾರಿ. ಏರ್‌ಪೋರ್ಟ್‌ನಲ್ಲಿ ಇಳಿದಾಗ ಅಮಿತ್ ಶಾ ಅವರು ಬಹಳ ಆತ್ಮೀಯವಾಗಿ ಅಪ್ಪುಗೆ ನೀಡಿ ಮಾತನಾಡಿಸಿದರು. ರಾಮದಾಸ್ ಜಿ ಬಹುತ್ ಅಚ್ಚಾ ನಿರ್ಲಿಯಾ ಅಂತಾ ತಬ್ಬಿ ನಗು ಸೂಸಿದರು. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಮದಾಸ್ ಸಂತಸ ವ್ಯಕ್ತಪಡಿಸಿದರು.

    ನಾನು ಯಾವತ್ತೂ ಭರವಸೆ ಬೇಕು ಎಂದು ಕೇಳಿದವನಲ್ಲ. ಇದು ಇವತ್ತಿನ ಸಂಬಂಧ ಅಲ್ಲ. 25 ವರ್ಷ ಹಳೆಯ ಸಂಬಂಧ. ಅದನ್ನು ಮಾತಿನಲ್ಲಿ ಹೇಳುವ ಅವಶ್ಯಕತೆ ಇಲ್ಲ. ಅವರು ನನ್ನ ನಿರ್ಣಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನನಗೆ ಅಷ್ಟೇ ಸಾಕು. ನಾನು ಕೂಡ ಇಷ್ಟು ಆತ್ಮೀಯತೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಮೋದಿಯವರು ಬೆನ್ನು ತಟ್ಟಿದಾಗಲೂ ನಾನು ನಿರೀಕ್ಷೆ ಮಾಡಿರಲಿಲ್ಲ. ಮೋದಿಯವರು ಆತ್ಮೀಯವಾಗಿ ಮಾತನಾಡಿಸಿದಾಗಲೂ ಕೂಡ ನಮ್ಮ 25 ವರ್ಷದ ಸಂಬಂಧವನ್ನು ಎಲ್ಲೂ ಹೊರಗೆ ಬಾರದಂತೆ ನೋಡಿಕೊಂಡಿದ್ದೆ. ಇಂದು ನನ್ನ ನಿರ್ಧಾರಕ್ಕೆ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಟಿಕೆಟ್ ಕೈ ತಪ್ಪಿದ ವೇಳೆ ನನ್ನ ಮುಂದೆ 2 ಆಯ್ಕೆಗಳಿತ್ತು. ಸ್ವಾತಂತ್ರವಾಗಿ ನಿಂತು ಗೆಲ್ಲುವ ಅವಕಾಶ ಇದ್ದ ಸಂದರ್ಭದಲ್ಲಿ ನಾನು ಎಂಎಲ್‌ಎ ಆಗಬೇಕಾ? ಅಥವಾ ವಿಶ್ವಾನಾಯಕರ ಸಂಬಂಧ ಉಳಿಸಿಕೊಳ್ಳಬೇಕ? ಎಂಬ ಆಯ್ಕೆಗಳಿತ್ತು. ಕೇವಲ ಎಂಎಲ್‌ಎಗಾಗಿ ಆ ಬಾಂಧವ್ಯ ಕಳೆದುಕೊಳ್ಳೋದು ಬೇಡ ಎಂದು ನಾನು ಕಾರ್ಯಕರ್ತರ ಮನವೊಲಿಸಿ ಉಳಿಯುವ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಯಾಕೆ ಕೈ ತಪ್ಪಿದೆ ಎನ್ನುವುದು ಈಗಲೂ ಗೊತ್ತಿಲ್ಲ. ಇದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ ಎಂದು ರಾಮದಾಸ್ ವಿಷಾದ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿಯಿಂದ ಜನರ ಭಾವನೆ ಕೆರಳಿಸುವ ಯತ್ನ: ಸಿದ್ದು ಪರ ಬ್ಯಾಟ್ ಬೀಸಿದ ಸವದಿ

    ಅಮಿತ್ ಶಾ ಸೋಮವಾರ ಮೈಸೂರು ಏರ್‌ಪೋರ್ಟ್‌ನಿಂದ ನೇರವಾಗಿ ರಸ್ತೆ ಮೂಲಕ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ಅರ್ಧ ಗಂಟೆಗಳ ಕಾಲ ಚಾಮುಂಡಿ ಬೆಟ್ಟದಲ್ಲಿ ಮಹಾಮಂಗಳಾರತಿ ಸೇರಿದಂತೆ ದೇವಿಯ ಪೂಜೆಯಲ್ಲಿ ಭಾಗಿಯಾದರು. ಅಮಿತ್ ಶಾಗೆ ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.

    ಕೆಆರ್ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬಳಿಕ ರಾಮದಾಸ್ ಫುಲ್ ಸೈಲೆಂಟ್ ಆಗಿದ್ದರು. ಶ್ರೀವತ್ಸ ಪರವಾಗಿ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿ ಬಳಿಕ ತಣ್ಣಗಾಗಿದ್ದ ರಾಮದಾಸ್ 2 ದಿನದ ಹಿಂದೆ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಕೆಆರ್ ಕ್ಷೇತ್ರದ ಕಾರ್ಯಕರ್ತರ ಸಭೆಗೂ ಗೈರಾಗಿದ್ದರು. ಬಳಿಕ ಪಕ್ಷದ ಪ್ರಚಾರ ಕಾರ್ಯದಲ್ಲೂ ಹೆಚ್ಚಾಗಿ ರಾಮದಾಸ್ ಕಾಣಿಸಿಕೊಂಡಿರಲಿಲ್ಲ. ಇದೀಗ ಅಮಿತ್ ಶಾ ಮೈಸೂರಿಗೆ ಬಂದಿರುವ ಹಿನ್ನೆಲೆ ಅವರು ಖುದ್ದು ಹಾಜರಾಗಿ ಏರ್‌ಪೋರ್ಟ್ನಲ್ಲೇ ಶಾ ಅವರನ್ನು ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಈ ಸಲ ಕಪ್ ನಮ್ದೆ: ಶೆಟ್ಟರ್‌ಗೆ ಪ್ರಹ್ಲಾದ್ ಜೋಶಿ ಟಾಂಗ್

  • ಮೋದಿ ಬೆನ್ನಮೇಲೆ ಗುದ್ದಿದ ಭಾರ ನನ್ನ ಮೇಲಿದೆ; ಶಾಸಕನಾಗುವುದಕ್ಕಿಂತ ಪ್ರಧಾನಿ ಪ್ರೀತಿ ಮುಖ್ಯ – ರಾಮದಾಸ್

    ಮೋದಿ ಬೆನ್ನಮೇಲೆ ಗುದ್ದಿದ ಭಾರ ನನ್ನ ಮೇಲಿದೆ; ಶಾಸಕನಾಗುವುದಕ್ಕಿಂತ ಪ್ರಧಾನಿ ಪ್ರೀತಿ ಮುಖ್ಯ – ರಾಮದಾಸ್

    – ಟಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದ ಶಾಸಕ

    ಮೈಸೂರು: ಮೋದಿ (Narendra Modi) ಅವರು ಬೆನ್ನ ಮೇಲೆ ಗುದ್ದಿದ ಭಾರ ನನ್ನ ಮೇಲಿದೆ. ಶಾಸಕನಾಗುವುದಕ್ಕಿಂತ ಮೋದಿ ಅಂತಹವರ ಪ್ರೀತಿ ನನಗೆ ಮುಖ್ಯ ಎಂದು ಶಾಸಕ ಎಸ್.ಎ ರಾಮದಾಸ್ (SA Ramadas) ಹೇಳಿದ್ದಾರೆ.

    2023ರ ವಿಧಾನಸಭಾ ಚುನಾವಣೆಗೆ ಕೆ.ಆರ್ ಕ್ಷೇತ್ರದಿಂದ (Krishnaraja Constituency) ಬಿಜೆಪಿ ಟಿಕೆಟ್ (BJP Ticket) ಕೈತಪ್ಪಿದ ಹಿನ್ನೆಲೆಯಲ್ಲಿ ತಮ್ಮ ನಿವಾಸದ ಎದುರು ಬೆಂಬಲಿಗರೊಂದಿಗೆ ನಿರ್ಣಾಯಕ ಸಭೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ರಾಮ್‍ದಾಸ್ ಹತ್ತಿರ ಕರೆದು ಬಾಗಿಸಿ ಬೆನ್ನಿಗೆ ಗುದ್ದಿದ ಮೋದಿ- ಪ್ರಧಾನಿಯಿಂದ ಶಾಸಕರಿಗೆ ಆಪ್ತ ಹಾರೈಕೆ 

    ಶಾಸಕನಾಗುವುದಕ್ಕಿಂತ ಮೋದಿ ಅಂತಹವರ ಪ್ರೀತಿ ನನಗೆ ಮುಖ್ಯ. ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ರೆ 10 ರಿಂದ 12 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ. ಆದ್ರೆ ನನಗೆ ಮಹಾನ್ ನಾಯಕನ ಜವಾಬ್ದಾರಿಯಿದೆ. ನಿಮ್ಮ ಶಾಸಕ ಇದುವರೆಗೂ ಯಾವುದೇ ತಪ್ಪು ಮಾಡಿಲ್ಲ. ಆದ್ರೂ ನನ್ನ ಮೇಲೆ ಹಲವು ಆಪಾದನೆ ಬಂದವು. ಅದಕ್ಕೆ ಕಾಲವೇ ಉತ್ತರ ಕೊಡುತ್ತೆ. ಯಾವತ್ತು ಹುಟ್ಟುತ್ತೀವೊ, ಯಾವತ್ತು ಸಾಯುತ್ತೀವೊ ಗೊತ್ತಿಲ್ಲ. ನನಗೆ ತಾಯಿ ಭಾರತಾಂಬೆ ಮುಖ್ಯ. ಇಡೀ ದೇಶ ನಮ್ಮ ರಾಜ್ಯದ ಕಡೆ ನೋಡುತ್ತಿದೆ. ನಿಮ್ಮ ಶಾಸಕನಾಗಿ ನಿಮ್ಮ ಜೊತೆಯೇ ಇರುತ್ತೇನೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕೆ.ಆರ್ ಕ್ಷೇತ್ರ ಉಳಿಸಿಕೊಳ್ಳುವುದು ನಮ್ಮ ಉದ್ದೇಶ ಅಷ್ಟೇ ಎಂದು ರಾಮದಾಸ್ ಸ್ಪಷ್ಟಪಡಿಸಿದ್ದಾರೆ.

    ಮೋದಿ ಅವರು ಬೆನ್ನಮೇಲೆ ಗುದ್ದಿದ ಭಾರ ನನ್ನ ಮೇಲಿದೆ. ಮಂತ್ರಿ ಮಾಡದಿದ್ದರೂ ನಾನು ಪಕ್ಷದ ವಿರುದ್ಧ ಮಾತನಾಡಲಿಲ್ಲ. ನೋವಿನಲ್ಲೂ ಬಿಜೆಪಿಗಾಗಿ ಕೆಲಸ ಮಾಡಿದೆ. ಟಿಕೆಟ್ ಸಿಗಲಿಲ್ಲ ಅಂತಾ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಟಿಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ದುಡಿಯುತ್ತೇನೆ. ದ್ರೋಹ ಮಾಡುವುದನ್ನು ನಾನು ಕಲಿತಿಲ್ಲ. ಏಕೆಂದರೆ ಪಕ್ಷ ನನಗೆ ತಾಯಿ ಸಮಾನ. ನೋವುಂಟಾಗದಂತೆ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂತೋಷ್ ಹೆಸರು ತಂದಿದ್ದು ಶೆಟ್ಟರ್‌ಗೆ ಶೋಭೆ ತರಲ್ಲ – ಇನ್ನು ಅವ್ರ ದಾರಿ ಅವರಿಗೆ ನಮ್ಮ ದಾರಿ ನಮಗೆ: ಬಿಎಸ್‌ವೈ

    ನಾನು ಯಾವುದೇ ಪೋಸ್ಟ್ ಮಾಟಮ್ ಕೆಲಸ ಮಾಡುವುದಿಲ್ಲ. ಏನಾಗಿದೆ ಎಲ್ಲವನ್ನೂ ಚಾಮುಂಡಿ ದೇವರ ಮುಂದೆ ಹೇಳಿದ್ದೇನೆ. ತಾಯಿಗೆ ಎಲ್ಲವನ್ನೂ ಬಿಟ್ಟಿದ್ದೇನೆ. ತಾಯಿ ಚಾಮುಂಡಿ ಮುಂದೆ ಯಾವ ಅವಕಾಶ ಕೊಡುತ್ತಾಳೋ ಅದು ತಾಯಿಗೆ ಬಿಟ್ಟಿದ್ದು. ಒಟ್ಟಿನಲ್ಲಿ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗುತ್ತೇನೆ. ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚಿಸುತ್ತೇನೆ. ನನಗೆ ಶಾಸಕ ಸ್ಥಾನ ಮುಖ್ಯವಲ್ಲ. ದೇಶದ ಪ್ರಧಾನಿ ಮುಖ್ಯ ಎಂದು ನುಡಿದಿದ್ದಾರೆ.

    ಸಚಿವ ಸ್ಥಾನಕ್ಕೆ ಪೇಮೆಂಟ್ ಸೀಟ್ ಇತ್ತು: ಬಿಜೆಪಿ ಸರ್ಕಾರದಲ್ಲಿ (BJP Government) ಸಚಿವ ಸ್ಥಾನಕ್ಕೆ ಮೆರಿಟ್ ಸೀಟ್, ಪೇಮೆಂಟ್ ಸೀಟ್ ಎರಡೂ ಇತ್ತು. ನೀವೆಲ್ಲಾ ನಿಮ್ಮ ರಾಮದಾಸ್ ಮಂತ್ರಿ ಆಗುತ್ತಾನೆ ಎಂದುಕೊಂಡಿದ್ರಿ. ನಾನು ಮೆರಿಟ್ ಸ್ಟೂಡೆಂಟ್ ಆಗಿದ್ದರಿಂದ ಮಂತ್ರಿ ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  • 30 ವರ್ಷದಿಂದ ಇದ್ದ ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ: ರಾಮದಾಸ್ ಕಿಡಿ

    30 ವರ್ಷದಿಂದ ಇದ್ದ ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ: ರಾಮದಾಸ್ ಕಿಡಿ

    ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ (BJP) ತನ್ನ 3ನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಈ ಬಾರಿ ಬಿಡುಗಡೆ ಮಾಡಲಾದ ಪಟ್ಟಿಯಲ್ಲಿ ಕೃಷ್ಣರಾಜ ಕ್ಷೇತ್ರದಿಂದ ಎಸ್‌ಎ ರಾಮದಾಸ್‌ಗೆ (SA Ramadas) ಟಿಕೆಟ್ ಕೈತಪ್ಪಿದ್ದು, ಶ್ರೀವತ್ಸ (TS Srivatsa) ಅವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆ ಅಸಮಾಧಾನ ಹೊರಹಾಕಿರುವ ರಾಮದಾಸ್, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ (Pratap Simha) ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೇ ಕಳುಹಿಸಿದ್ದಾರೆ.

    30 ವರ್ಷದಿಂದ ಇದ್ದ ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ನಾನು ಇರಬೇಕಾ ಅಥವಾ ಬೇಡವಾ ಎಂಬುದುನ್ನು ಮಂಗಳವಾರ ಸಂಜೆ ತಿಳಿಸುತ್ತೇನೆ. ನಾನು ಸದ್ಯ ಯಾರನ್ನೂ ಭೇಟಿ ಮಾಡಲ್ಲ ಎಂದ ರಾಮದಾಸ್ ಮನೆಗೆ ಬಂದಿದ್ದ ಶ್ರೀವತ್ಸ ಹಾಗೂ ಪ್ರತಾಪ್ ಸಿಂಹ ಅವರನ್ನು ಭೇಟಿ ಮಾಡದೇ ಮನೆಯ ಮತ್ತೊಂದು ಬಾಗಿಲಿನಿಂದ ಹೊರನಡೆದಿದ್ದಾರೆ.

     

    ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ನಾವು ರಾಮದಾಸ್ ಅವರ ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ. ಅವರು ನಾಳೆ ನಿಮ್ಮನ್ನು ಭೇಟಿ ಮಾಡುತ್ತೇನೆ, ಪಕ್ಷದ ಜೊತೆ ಇರುತ್ತೇನೆ ಎಂದು ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ. ಪಕ್ಷವನ್ನು ತಾಯಿ ಎಂದು ಭಾವಿಸಿರುವ ಅವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಭಾರೀ ಸಂಖ್ಯೆಯಲ್ಲಿ ಹೊಸಬರಿಗೆ ಮಣೆ – ಕರ್ನಾಟಕ ಬಿಜೆಪಿಯಿಂದ ಗುಜರಾತ್‌ ದಾಖಲೆ ಬ್ರೇಕ್‌

    30 ವರ್ಷದಿಂದ ನಾವು ಅವರ ಜೊತೆಗೆ ಇದ್ದೆವು. ಅವರು ನನ್ನ ವಿರುದ್ಧ ಕೆಲಸ ಮಾಡಲ್ಲ. ಆ ವಿಶ್ವಾಸ ನನಗೆ ಇದೆ ಎಂದು ಶ್ರೀವತ್ಸ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್‌ ಮಿಸ್‌- ಬಿಜೆಪಿಯ10 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

  • ಗುಂಬಜ್ ಗುದ್ದಾಟಕ್ಕೆ ಟ್ವಿಸ್ಟ್ – ಬಸ್‌ನಿಲ್ದಾಣದ ಜಾಗ ನಮ್ಮದು, ತೆರವು ಮಾಡಿ ಎಂದ NHAI

    ಗುಂಬಜ್ ಗುದ್ದಾಟಕ್ಕೆ ಟ್ವಿಸ್ಟ್ – ಬಸ್‌ನಿಲ್ದಾಣದ ಜಾಗ ನಮ್ಮದು, ತೆರವು ಮಾಡಿ ಎಂದ NHAI

    ಮೈಸೂರು: ಮೈಸೂರಿನ ಗುಂಬಜ್ ಶೈಲಿಯ ಬಸ್ ನಿಲ್ದಾಣ ವಿವಾದ (Mysuru Bus Stand Controversy) ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೂಡ ಎಂಟ್ರಿ ಕೊಟ್ಟಿದೆ.

    ನಿಯಮ ಪ್ರಕಾರವೇ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ತಾವುಗಳು ಬಸ್ ನಿಲ್ದಾಣದ ಪರಿಶೀಲನೆಗೆ ಸಮಿತಿ ಕಳಿಸಿಕೊಡಬೇಕು ಎಂದು ರಾಮದಾಸ್ (SA Ramadas) ಮನವಿ ಮಾಡಿದ್ದಾರೆ. ಆದರೆ ವಿವಾದಿತ ಬಸ್ ನಿಲ್ದಾಣ ನಮ್ಮ ಜಾಗದಲ್ಲಿದೆ. ಇದಕ್ಕೆ ನಮ್ಮ ಅನುಮತಿಯನ್ನೇ ಪಡೆದಿಲ್ಲ. ಹೀಗಾಗಿ ಇದು ಅನಧಿಕೃತ. ಹೀಗಾಗಿ ಏಳು ದಿನದಲ್ಲಿ ತೆರವು ಮಾಡಿ ಎಂದು ಕೆಆರ್‌ಐಡಿಎಲ್‌ (KRIDL) ಗೆ ನೋಟಿಸ್ ನೀಡಿದೆ. ಇದನ್ನೂ ಓದಿ: ಪೊಲೀಸ್ ವಿಚಾರಣೆಗೆ ಹೆದರಿ 3 ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ

    ಗುಂಬಜ್ ತೆರವು ಮಾಡುವಂತೆ ಸಂಸದ ಪ್ರತಾಪ್ ಸಿಂಹ (Pratap Simha) ನೀಡಿದ್ದ ಡೆಡ್‌ಲೈನ್ ನಾಳೆಗೆ ಮುಗಿಯಲಿದೆ. ಈ ಹೊತ್ತಲ್ಲೇ ಕಳೆದ ರಾತ್ರಿ, ಗುಂಬಜ್ ಶೈಲಿಯ ಬಸ್ ನಿಲ್ದಾಣದಲ್ಲಿ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ (Basavaraj Bommai), ಸುತ್ತೂರು ಶ್ರೀಗಳ (Shivaratri Deshikendra Swamiji) ಫೋಟೋ ಅಳವಡಿಸಲಾಗಿದೆ. ಇದಕ್ಕೆ ಜೆಎಸ್‌ಎಸ್ (JSS) ಬಸ್ ನಿಲ್ದಾಣ ಅಂತಲೂ ಹೆಸರಿಡಲಾಗಿದೆ. ಇದನ್ನೂ ಓದಿ: ಮೋರ್ಬಿ ದುರಂತ: 1 ಲಕ್ಷ ರೂ. ದಂಡ ಪಾವತಿಸಿ – ಪುರಸಭೆ ವಿರುದ್ಧ ಹೈಕೋರ್ಟ್ ಗರಂ

    ಈ ಮೂಲಕ ಪಕ್ಷ, ಧರ್ಮ ಮುಂದೆ ಬಿಟ್ಟು ಬಸ್ ನಿಲ್ದಾಣದ ಗುಂಬಜ್ ರಕ್ಷಿಸುವುದರ ಜೊತೆಗೆ ಸವಾಲು ಹಾಕಿದ್ದ ಸಂಸದರನ್ನು ಪೇಚಿಗೆ ಸಿಲುಕಿಸುವ ಪ್ರಯತ್ನಗಳು ನಡೆದಿವೆ. ಈ ಚರ್ಚೆಗಳ ಮಧ್ಯೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ ರಾಮದಾಸ್ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿವಾದದ ಕುರಿತಾಗಿ ವಿವರಣೆ ನೀಡಿದ್ದಾರೆ. ಅಂದ ಹಾಗೇ, ಈ ಗುಂಬಜ್ ಗುದ್ದಾಟಕ್ಕೆ ಎಸ್.ಎ ರಾಮದಾಸ್ ಮತ್ತು ಸಂಸದ ಪ್ರತಾಪ್ ಸಿಂಹ ನಡುವಿನ ತಿಕ್ಕಾಟವೇ ಕಾರಣ ಎನ್ನಲಾಗುತ್ತಿದೆ. ಧರ್ಮದ ನೆಪದಲ್ಲಿ ಇಬ್ಬರ ನಡುವೆ ಪ್ರತಿಷ್ಠೆಯ ಕಾಳಗ ಏರ್ಪಟ್ಟಿದೆ.

    ಗುಂಬಜ್ ಗುದ್ದಾಟ.. ರಾಮ್‌ದಾಸ್ ವಾದ ಏನು?
    ಅರಮನೆ ವಿನ್ಯಾಸದಲ್ಲಿ ಈ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ, ಶೇ.60 ಕಾಮಗಾರಿ ಮಾತ್ರ ಮುಗಿದಿದೆ. ಶೇ.40ರಷ್ಟು ಕಾಮಗಾರಿ ಬಾಕಿ ಇದೆ. ಆದರೆ, ಇದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಮಸೀದಿ ಶೈಲಿ, ಮುಸ್ಲಿಂ ಗುತ್ತಿಗೆದಾರ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಪೊಲೀಸ್ ಆಯುಕ್ತರಿಗೆ ಪತ್ರ ಮುಖೇನ ದೂರು ನೀಡಿದ್ದೇನೆ. ಮೈಸೂರಿನಲ್ಲಿ ಇದೇ ಶೈಲಿಯಲ್ಲಿ ಹಲವು ನಿಲ್ದಾಣಗಳಿವೆ. ಇದರ ಗುತ್ತಿಗೆದಾರ ಮಹದೇವ್, ದಂತಿ ಕನ್ಸ್ಟ್ರಕ್ಷನ್ಸ್ ಹೆಸರಿನಲ್ಲಿ ನಿರ್ಮಾಣ ಮಾಡಲಾಗಿದೆ. ಸಂಸದರ ಹೇಳಿಕೆ ನಂತರ ಕಳಶ ಅಳವಡಿಕೆ ಎನ್ನುವುದು ಸುಳ್ಳು. ಒಂದು ವಾರದ ಹಿಂದೆಯೇ ಇದನ್ನು ಅಳವಡಿಸಲಾಗಿದೆ. ಈ ನಿಲ್ದಾಣವನ್ನು ಪಾರಂಪರಿಕ ದೃಷ್ಟಿಯಿಂದ ನಿರ್ಮಿಸಲಾಗುತ್ತಿದೆ. ಇದನ್ನು ಯಾವುದೇ ಧರ್ಮದ ಆಧಾರದ ಮೇಲೆ ನಿರ್ಮಿಸುತ್ತಿಲ್ಲ. ಈ ವಿನ್ಯಾಸವನ್ನು ವಿವಾದ ಎಂದು ಪರಿಗಣಿಸಿದಲ್ಲಿ ತಜ್ಞರ ಸಮಿತಿ ರಚನೆ ಆಗಲಿ, ತಜ್ಞರ ವರದಿಯಲ್ಲಿ ತಪ್ಪಿದೆ ಎಂದು ತಿಳಿದಲ್ಲಿ ಬದಲಾಯಿಸಿ.. ನಮ್ಮ ಅಭ್ಯಂತರವೇನಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ-ರಾಮದಾಸ್ ಇಬ್ರೂ ಬ್ಯಾಚುಲರ್ಸು, ತಬ್ಬಾಡಿದ್ರು: KPCC ವಕ್ತಾರ ಎಂ.ಲಕ್ಷ್ಮಣ್‌ ವ್ಯಂಗ್ಯ

    ಮೋದಿ-ರಾಮದಾಸ್ ಇಬ್ರೂ ಬ್ಯಾಚುಲರ್ಸು, ತಬ್ಬಾಡಿದ್ರು: KPCC ವಕ್ತಾರ ಎಂ.ಲಕ್ಷ್ಮಣ್‌ ವ್ಯಂಗ್ಯ

    ಮೈಸೂರು: ಪ್ರಧಾನಿ ನರೇಂದ್ರ ಮೋದಿ, ಎಸ್.ಎ.ರಾಮದಾಸ್ ಇಬ್ಬರೂ ಬ್ಯಾಚುಲರ್ಸು ವೇದಿಕೆಯಲ್ಲಿ ತಬ್ಬಾಡಿದ್ರು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ವ್ಯಂಗ್ಯವಾಡಿದ್ದಾರೆ.

    ಮೈಸೂರಿನ ಇಂದಿರಾಗಾಧಿ ಕಾಂಗ್ರೆಸ್ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ, ಶಾಸಕ ಎಸ್.ಎ.ರಾಮದಾಸ್ ಇಬ್ಬರೂ ಬ್ಯಾಚೂಲರ್ಸ್. ವೇದಿಕೆ ಮೇಲೆ ಮೋದಿ ಅವರು ರಾಮದಾಸ್ ಅವರನ್ನು ತಬ್ಬಾಡಿದ್ರು. ವೇದಿಕೆಯಲ್ಲಿ ಯಾರೂ ಇಲ್ಲದಿದ್ರೆ ಇನ್ನೂ ಏನೇನೂ ಆಗ್ತಿತ್ತೋ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ದೇವೇಗೌಡ ಬಗ್ಗೆ ಮಾತಾಡಿದ್ರೆ ಹುಷಾರ್ – ಅವರ ಮಗ ನಾನು ಬದುಕಿದ್ದೇನೆ: ರಾಜಣ್ಣ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

    ಈಚೆಗಷ್ಟೇ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಮೈಸೂರಿಗೆ ತೆರಳಿದ್ದ ವೇಳೆ, ಅಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ರಾಮದಾಸ್ ಅವರನ್ನು ಹತ್ತಿರ ಕರೆದು ಆಪ್ತತೆಯಿಂದ ಬೆನ್ನಿಗೆ ಗುದ್ದನ್ನು ನೀಡಿದ್ದರು. ಇದನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ವ್ಯಂಗ್ಯವಾಡಿದರು. ಇದನ್ನೂ ಓದಿ: ತೆಲುಗಿನ ಪ್ರಭಾಸ್ ನಟನೆಯ ಸಲಾರ್ ಚಿತ್ರದಲ್ಲಿ ಯಶ್ ಅತಿಥಿ ಪಾತ್ರ?

    ಸ್ಟೇ ಹಿಂಪಡೀರಿ-ಸಿಡಿ ರಿಲೀಸ್ ಮಾಡ್ತೀನಿ: ನಿಮ್ಮ ಅನಾಚಾರಗಳು 17 ಎಪಿಸೋಡ್‌ಗೆ ಆಗುವಷ್ಟು ಸಿಡಿಗಳು ನನ್ನ ಬಳಿಯಿವೆ. ನೀವು ಪ್ರಾಮಾಣಿಕರಾದ್ರೆ ತಡೆಯಾಜ್ಞೆ ರದ್ದುಗೊಳಿಸಿ. ಆ ಮೇಲೆ ನಿಮ್ಮ ಬಂಡವಾಳ ಬಯಲಾಗುತ್ತೆ ಎಂದು ಎಂ.ಲಕ್ಷ್ಮಣ್‌ ಸಂಸದ ಪ್ರತಾಪ್‌ಸಿಂಹಗೆ ಕುಟುಕಿದ್ದಾರೆ.

    ಮೈಸೂರು ಜಿಲ್ಲೆಯಲ್ಲಿ ಕ್ರೆಡಿಟ್ ಜಗಳ ತಾರಕಕ್ಕೇರಿದ್ದು ಬಹಿರಂಗ ಚರ್ಚೆಗೆ ಮತ್ತೆ ದಿನಾಂಕ ನಿಗದಿ ಮಾಡಿ ಮಾತನಾಡಿದ ಎಂ. ಲಕ್ಷ್ಮಣ್‌, ಪ್ರತಾಪ್ ಸಿಂಹ ನನ್ನನ್ನ ಹಂದಿ, ಕತ್ತೆಗೆ ಹೋಲಿಸಿದ್ದೀರಿ. ಜುಲೈ 5 ರಂದು ಎರಡು ಹಂದಿ ಹಾಗೂ ಎರಡು ಕತ್ತೆಗಳ ಜೊತೆಗೆ ಬರುತ್ತೇವೆ. ಕಾಂಗ್ರೆಸ್ ಕಚೇರಿಯಿಂದ ಸಂಸದರ ಕಚೇರಿವರೆಗೆ ಮೆರವಣಿಗೆ ಬರುತ್ತೇವೆ. ಚರ್ಚೆಗೆ ಹಂದಿ ಹೊಡೆಯೋರು ಬೇಡ. ತಿಳುವಳಿಕೆ ಇರುವವರನ್ನು ಕಳುಹಿಸಿ. ಸಾಯುವವರೆಗೂ ನಾನೇ ಗೆಲ್ಲುತ್ತೇನೆ ಎನ್ನುವಂತೆ ನಡೆದುಕೊಳ್ಳುತ್ತೀರಿ. 2023ರಲ್ಲಿ ನೀವು ಹೇಗೆ ಗೆಲ್ಲುತ್ತೀರಾ? ನೋಡುತ್ತೇವೆ ಎಂದು ಸವಾಲು ಹಾಕಿದ್ದಾರೆ.

    ನಮ್ಮ ಚರ್ಚೆಗೆ ಪೊಲೀಸರು ಅವಕಾಶ ಕೊಡಬೇಕು. ಪ್ರತಾಪ್ ಸಿಂಹ ರೀತಿ ನಾನು ಒಂದು ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಿಸಿಕೊಂಡಿಲ್ಲ. ನಿಮ್ಮ ರೀತಿ ಹೆಂಡತಿಯನ್ನ ತಂಗಿ ಎಂದು ಮೂಡಾ ಸೈಟ್ ಪಡೆದಿಲ್ಲ. ಮೆಗಾ ಗ್ಯಾಸ್ ಯೋಜನೆಯಡಿ 50 ಕೋಟಿ ಲಂಚ ಪಡೆದಿದ್ದೀರಿ ಎಂಬ ಆರೋಪವಿದೆ. ನಿಮ್ಮ ಪಕ್ಷದ ಶಾಸಕರೇ ಇದನ್ನ ಹೇಳ್ತಿದ್ದಾರೆ ಎಂದು ಕುಟುಕಿದ್ದಾರೆ.

    Live Tv

  • ಆರೋಗ್ಯ ಕರ್ನಾಟಕ ಬೊಮ್ಮಾಯಿ ಸರ್ಕಾರದ ಗುರಿ: ಸುಧಾಕರ್

    ಆರೋಗ್ಯ ಕರ್ನಾಟಕ ಬೊಮ್ಮಾಯಿ ಸರ್ಕಾರದ ಗುರಿ: ಸುಧಾಕರ್

    ಮೈಸೂರು: ಆರೋಗ್ಯ ಕರ್ನಾಟಕ ಕಟ್ಟಬೇಕು ಎಂಬುದು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸರ್ಕಾರದ ಗುರಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನೋತ್ಸವದ ಅಂಗವಾಗಿ ನಗರದ ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ದೇವಸ್ಥಾನದ ಉದ್ಯಾನವನದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮೋದಿ ಯುಗ್ ಉತ್ಸವ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇದನ್ನೂ ಓದಿ: ಪಾದಯಾತ್ರೆ ಶಾಪದಿಂದ ಬಿಎಸ್‍ವೈ ಅಧಿಕಾರ ಕಳೆದುಕೊಂಡರು: ಕಾಶಪ್ಪನವರ್

    ಕೋವಿಡ್ ಬಂದಂತಹ ಸಂದರ್ಭದಲ್ಲಿ ಲಸಿಕೆ ಬರುವುದಿಲ್ಲ. ಈ ಸರ್ಕಾರ ಮಾರ್ಗಸೂಚಿಗಳನ್ನಾಗಲಿ ಅಥವಾ ಕೆಲಸವನ್ನಾಗಲಿ ಸರಿಯಾದ ರೀತಿಯಲ್ಲಿ ಮಾಡುತ್ತಿಲ್ಲ ಎಂದು ಪ್ರಾರಂಭದಿಂದ ಟೀಕೆಗಳನ್ನು ಮಾಡಲಾಗುತ್ತಿತ್ತು. ಲಸಿಕೆ ಬಂದಂತಹ ಸಂದರ್ಭದಲ್ಲಿ ಬಿಜೆಪಿ ಲಸಿಕೆ, ಮೋದಿ ಲಸಿಕೆ ಎಂದೂ ಸಹ ಟೀಕಿಸಲಾಗಿತ್ತು. ಈ ಲಸಿಕೆಯ ಬಗ್ಗೆ ಸಾಕಷ್ಟು ತಪ್ಪು ಸಂದೇಶ ಹಾಗೂ ಮಾಹಿತಿಗಳು ಹೋದವು. ಇದರಿಂದ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂಜರಿದರು ಎಂದರು.

    ದೇಶದ ಕಂಪನಿಗಳೇ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ತಯಾರಿಸಿದವು. ವಿಶ್ವದ ಇತರೆ ಲಸಿಕೆಗಳ ಜೊತೆಗೆ ಸರಿಸಮಾನವಾಗಿ ನಮ್ಮ ಲಸಿಕೆಗಳು ಹೊರಬಂದಿರುವುದು ಐತಿಹಾಸಿಕವಾದದ್ದು. ಇದರಿಂದ ಮೋದಿ ಅವರ ಆತ್ಮನಿರ್ಬರ ಭಾರತ ಕನಸು ನನಸಾಗಿದೆ ಎಂದರು. ಇದನ್ನೂ ಓದಿ: ಎರಡು ಉಪಚುನಾವಣೆಯಲ್ಲಿ ಬಿಜೆಪಿ ಧೂಳಿಪಟ ಖಚಿತ: ಎಸ್‍ಆರ್ ಪಾಟೀಲ್

    ಕೋವಿಡ್ 3ನೇ ಅಲೆ ಕಡಿಮೆ ಪ್ರಮಾಣದಲ್ಲಿಯೇ ಇದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ. ಒಂದುವೇಳೆ 3ನೇ ಅಲೆ ಬಂದರೂ ಅದನ್ನು ನಿಯಂತ್ರಿಸುವ ಕಾರ್ಯ ಮಾಡಲಾಗುವುದು. ಈಗಾಗಲೇ ಮಕ್ಕಳಿಗೆ ಲಸಿಕೆ ನೀಡಲು ಟ್ರಯಲ್ ನಡೆಯುತ್ತಿದೆ. ಶೀಘ್ರವಾಗಿ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ ಎಂದರು. ವಿಶ್ವದಲ್ಲೇ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ ಇದ್ದರೆ ಅದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಂದಂತಹ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ. ಇದರಿಂದ ಬಡಜನರಿಗೆ ಲಕ್ಷಾಂತರ ರೂಪಾಯಿ ಉಳಿತಾಯವಾಗಲಿದೆ ಎಂದು ಹೇಳಿದರು.

    ಶಾಸಕರಾದವರು ರಸ್ತೆಗಳನ್ನು, ಕಟ್ಟಡಗಳನ್ನು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಾರೆ. ಆದರೆ ಶಾಸಕ ರಾಮದಾಸ್ ಅವರು ಕ್ಷೇತ್ರದ ಮನೆಯ ಸದಸ್ಯರಾಗಿ ಪ್ರತಿಯೊಬ್ಬರ ಆರೋಗ್ಯವನ್ನು ವಿಚಾರಿಸುತ್ತಿರುವುದು ವಿನೂತನವಾದ ಕಾರ್ಯಕ್ರಮವಾಗಿದೆ ಅವರ ಕಾರ್ಯ ಮೆಚ್ಚುವಂತದ್ದು ಎಂದರು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ನಡೆಸುತ್ತಿದ್ದಾರೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ರಕ್ತದಾನ ಮಾಡುವ ದಾನಿಗಳು ಕಡಿಮೆಯಾಗಿದ್ದು, ಕೋವಿಡ್ ಮಾತ್ರ ಕಡಿಮೆಯಾಗಿಲ್ಲ. ರಕ್ತದ ಅವಶ್ಯಕತೆ ಹಾಗೆ ಇದೆ. ನಮ್ಮಲ್ಲಿನ ಸಂಶೋಧನಕಾರರು ಎಲ್ಲವನ್ನೂ ಕಂಡುಹಿಡಿದಿದ್ದರೂ ಕೃತಕ ರಕ್ತವನ್ನು ತಯಾರು ಮಾಡುವುದನ್ನು ಸಾಧ್ಯವಾಗಿಲ್ಲ. ಹೀಗಾಗಿ ರಕ್ತಕ್ಕೆ ಪರ್ಯಾವಾಗಿ ವವ್ಯಸ್ಥೆ ಇಲ್ಲ. ಹೀಗಾಗಿ ರಕ್ತದಾನ ಒಂದು ಪುಣ್ಯವಾದ ಕಾರ್ಯವಾಗಿದೆ ಎಂದು ಹೇಳಿದರು.

    ಕಾರ್ಯಕ್ರದಲ್ಲಿ ಎಸ್.ಎ.ರಾಮದಾಸ್, ಎಂ.ಎಂ.ಸಿ.ಆರ್.ಐ ನಿರ್ದೇಶಕ ಡಾ.ಸಿ.ಪಿ.ನಂಜರಾಜ್, ಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀ ವಿಜಯಾನಂದ ತೀರ್ಥಸ್ವಾಮೀಜಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್, ತಾಲೂಕು ವೈದ್ಯಾಧಿಕಾರಿ ಡಾ.ಮಹದೇವ ಪ್ರಸಾದ್ ಸೇರಿದಂತೆ ಇತರರು ಹಾಜರಿದ್ದರು.

  • ಶಿಲ್ಪಾ ನಾಗ್‍ರಂತಹ ದಕ್ಷ ಅಧಿಕಾರಿಗಳ ಸೇವೆ ಅಗತ್ಯ, ಸಿಎಂ ಗಮನಕ್ಕೆ ತರುತ್ತೇನೆ: ರಾಮ್‍ದಾಸ್

    ಶಿಲ್ಪಾ ನಾಗ್‍ರಂತಹ ದಕ್ಷ ಅಧಿಕಾರಿಗಳ ಸೇವೆ ಅಗತ್ಯ, ಸಿಎಂ ಗಮನಕ್ಕೆ ತರುತ್ತೇನೆ: ರಾಮ್‍ದಾಸ್

    – ಶಿಲ್ಪಾ ನಾಗ್ ರಾಜೀನಾಮೆ ನೀಡಿರುವುದು ಆಶ್ಚರ್ಯ, ಬೇಸರ ತಂದಿದೆ

    ಮೈಸೂರು: ಮಹಾನಗರ ಪಾಲಿಕೆ ಅಯುಕ್ತೆ ಶಿಲ್ಪಾ ನಾಗ್ ಮುಖ್ಯಕಾರ್ಯದರ್ಶಿ ಹುದ್ದೆಗೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದಕ್ಕೆ ಶಾಸಕ ಎಸ್.ಎ.ರಾಮ್‍ದಾಸ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಇಂತಹ ದಕ್ಷ ಅಧಿಕಾರಿಗಳ ಸೇವೆ ಜನರಿಗೆ ನಿಜಕ್ಕೂ ಬೇಕಾಗಿದೆ. ಇಂಥವರು ಅಧಿಕಾರದಲ್ಲಿ ಮುಂದುವರಿಯಬೇಕು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಗಮನಕ್ಕೂ ತರುತ್ತೇನೆ ಎಂದು ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ರಾಜೀನಾಮೆ ಕೊಟ್ಟಿದ್ದಾರೆ ಎನ್ನುವ ವಿಷಯ ಕೇಳಿ ನಿಜಕ್ಕೂ ಆಶ್ಚರ್ಯ ಹಾಗೂ ಬೇಸರವಾಯಿತು ಎಂದರು. ಇದನ್ನೂ ಓದಿ: ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

    ಮೈಸೂರಿನಲ್ಲಿ ಕೋವಿಡ್ ಮಿತ್ರ, ಮನೆ ಮನೆ ಸರ್ವೇ, ಟೆಲಿ ಮೆಡಿಸಿನ್ ನಂತಹ ಎಲ್ಲ ಮಹತ್ತರವಾದ ಕೋವಿಡ್ ಗೆ ಸಂಬಂಧಿಸಿದ ಯೋಜನೆಗಳನ್ನು ತಂದವರು ಇವರು. ಇಂತಹ ದಕ್ಷ ಅಧಿಕಾರಿಗಳ ಸೇವೆ ಜನರಿಗೆ ನಿಜಕ್ಕೂ ಬೇಕಾಗಿದೆ. ಇಂಥವರು ಅಧಿಕಾರದಲ್ಲಿ ಮುಂದುವರಿಯಬೇಕು ಎಂದು ತಿಳಿಸಿದ್ದೇನೆ. ಅಲ್ಲದೇ ಮುಖ್ಯಮಂತ್ರಿಗಳ ಗಮನಕ್ಕೂ ತರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

    ಜನಪ್ರತಿನಿಧಿಗಳೊಡನೆ, ಅಧಿಕಾರಿಗಳೊಡನೆ ಚರ್ಚಿಸಿ ನಿರ್ಧಾರಗಳನ್ನು, ಯೋಜನೆಗಳನ್ನು ರೂಪಿಸುತ್ತಿದ್ದರು. ಅವರಿಗೆ ಕೆಲವು ವಿಷಯಗಳಲ್ಲಿ ಬೇಸರವಾಗಿದ್ದರಿಂದ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿರುವುದು ನಿಜಕ್ಕೂ ದುಃಖಕರ. ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಕಾರಣಕ್ಕೂ ಇವರ ರಾಜೀನಾಮೆಯನ್ನು ಅಂಗೀಕಾರ ಮಾಡಬಾರದು ಎಂದು ಮನವಿ ಮಾಡಿದ್ದಾರೆ, ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಿಎಂ ಕಾರ್ಯಾಲಯಕ್ಕೆ ಟ್ಯಾಗ್ ಮಾಡಿದ್ದಾರೆ.

  • ನಾವು ಹಸಿದುಕೊಂಡಿದ್ದರು ಪರವಾಗಿಲ್ಲ, ಅನರ್ಹರಿಗೆ ಊಟ ಹಾಕ್ತೀವಿ: ರಾಮದಾಸ್

    ನಾವು ಹಸಿದುಕೊಂಡಿದ್ದರು ಪರವಾಗಿಲ್ಲ, ಅನರ್ಹರಿಗೆ ಊಟ ಹಾಕ್ತೀವಿ: ರಾಮದಾಸ್

    ಮೈಸೂರು: ಮೊದಲು ಮನೆಗೆ ಬಂದವರಿಗೆ ಊಟ ಹಾಕಬೇಕು. ನಾವು ಹಸಿದುಕೊಂಡಿದ್ದರು ಪರವಾಗಿಲ್ಲ ಅವರಿಗೆ ಊಟ ಹಾಕುತ್ತೇವೆ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅನರ್ಹ ಶಾಸಕರ ಪರ ಬ್ಯಾಟ್ ಮಾಡಿದ್ದಾರೆ.

    ಇಂದು ದಸರಾ ಪ್ರಯುಕ್ತ ನಡೆದ ರಂಗೋಲಿ ಸ್ಪರ್ಧೆಯನ್ನು ಉದ್ಘಾಟನೆ ಮಾಡಿ ಸುದ್ದಿಗಾರರೊಂದಿಗೆ ಅನರ್ಹರ ಶಾಸಕರ ಕುರಿತ ಶಾಸಕ ಉಮೇಶ್ ಕತ್ತಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅವರ ಅಭಿಪ್ರಾಯ ಅವರಿಗೆ, ನನ್ನ ಅಭಿಪ್ರಾಯ ನನಗೆ. ಮೊದಲು ಮನೆಗೆ ಬಂದವರಿಗೆ ಊಟ ಹಾಕಬೇಕು ಎಂದು ಹೇಳಿದರು.

    ಈ ವೇಳೆ ಸಚಿವ ಸಂಪುಟ ರಚನೆಯಲ್ಲಿ ನಿಮ್ಮನ್ನು ಕಡೆಗಣಿಸಲಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅರ್ಹತೆ ವಿಚಾರದಲ್ಲಿ ಈ ಭಾಗದಲ್ಲಿ ನಾನೋಬ್ಬನೆ ಬಿಜೆಪಿಯಲ್ಲಿ ತುಂಬಾ ಹಿರಿಯ ವ್ಯಕ್ತಿ. ಆದರೆ ಈಗ ಪರಿಸ್ಥಿತಿ ಆ ರೀತಿ ಇಲ್ಲ. ನಾನು ಒಬ್ಬ ಸ್ವಯಂಸೇವಕ, ಸಂಘ ನನಗೆ ಒಂದು ಶಿಸ್ತು ಕಲಿಸಿದೆ. ಇಂತಹ ಪರಿಸ್ಥಿತಿಯಲ್ಲಿ ನಾನು ಹೇಗೆ ವರ್ತಿಸಬೇಕು ಅನ್ನೋದನ್ನು ನಾನು ಕಲಿತಿದ್ದೇನೆ. ನನಗೆ ಪಕ್ಷ, ರಾಜ್ಯ ಮತ್ತು ದೇಶ ಮುಖ್ಯ ಎಂದು ತಿಳಿಸಿದರು.

    ಯಡಿಯೂರಪ್ಪ ಅವರ ತಂತಿ ಮೇಲಿನ ನಡಿಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ಮಾತನಾಡೋಕೆ ನಾನು ಚಿಕ್ಕವನು. ಸಿಎಂ ಜೊತೆ ನಾವೆಲ್ಲ ಇದ್ದೇವೆ. ಅವರು ಯಾವುದಕ್ಕೂ ಚಿಂತಿಸುವ ಅಗತ್ಯವಿಲ್ಲ. ಸಿಎಂ ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಸಿಎಂಗೆ ಒತ್ತಡ ಇದ್ದೆ ಇರುತ್ತದೆ. ಅವರು ನಮ್ಮ ಟೀಂ ಕ್ಯಾಪ್ಟನ್. ಅವರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಸಹಕಾರ ಇದ್ದೆ ಇರುತ್ತೆ ಎಂದು ಹೇಳಿದರು.

    https://www.youtube.com/watch?v=LwXO4sOBHTs