Tag: Sadashiva Commission

  • ಸದಾಶಿವ ಆಯೋಗದ ವರದಿ ಜಾರಿ ವಿರೋಧಿಸುವವರು ಅವಿವೇಕಿಗಳು: ಹುಲ್ಲೂರು ಕುಮಾರಸ್ವಾಮಿ

    ಸದಾಶಿವ ಆಯೋಗದ ವರದಿ ಜಾರಿ ವಿರೋಧಿಸುವವರು ಅವಿವೇಕಿಗಳು: ಹುಲ್ಲೂರು ಕುಮಾರಸ್ವಾಮಿ

    ಚಿತ್ರದುರ್ಗ: ಸದಾಶಿವ ಆಯೋಗದ ವರದಿ ಜಾರಿಯಾಗುವುದನ್ನು ವಿರೋಧಿಸುವವರು ಅವಿವೇಕಿಗಳು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಹುಲ್ಲೂರು ಕುಮಾರಸ್ವಾಮಿ ಹೇಳಿದ್ದಾರೆ.

    ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಜನಾಶೀರ್ವಾದ ಯಾತ್ರೆ ವೇಳೆ ಹೊತ್ತಿಕೊಂಡಿದ್ದ ಮೀಸಲಾತಿಯ ಬೆಂಕಿ ಇದೀಗ ಚಿತ್ರದುರ್ಗದಲ್ಲಿ ಭೋವಿ ಹಾಗೂ ಮಾದಿಗ ಸಮುದಾಯಗಳ ನಡುವೆ ವಾಕ್ಸಮರಕ್ಕೆ ದಾರಿಯಾಗಿದೆ. ಹೀಗಾಗಿ ಇಂದು ಚಿತ್ರದುರ್ಗದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸದಾಶಿವ ಆಯೋಗದ ವರದಿ ಜಾರಿಗೆ ವಿರೋಧಿಸುವ ಬೋವಿ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಸಚಿವ ಪ್ರಭು ಚೌಹಣ್ ಅವರಿಗೆ ತಾಕತ್ತಿದ್ದರೆ ಸದಾಶಿವ ಆಯೋಗದ ವರದಿಯನ್ನು ಸರ್ಕಾರದಿಂದ ವಜಾಗೊಳಿಸಲಿ ಎಂದು ಸವಾಲು ಹಾಕಿದ್ದಾರೆ.ಇದನ್ನೂ ಓದಿ:ಗಣೇಶೋತ್ಸವಕ್ಕೆ ಅವಕಾಶ ನೀಡದೇ ಇದ್ದರೆ ಚುನಾವಣೆ ಬಹಿಷ್ಕಾರ: ಶ್ರೀರಾಮ ಸೇನೆ

    ಈ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ನಮ್ಮ ಸಮುದಾಯ ಆಗ್ರಹಿಸಲಿದೆ. ಇದರ ಜಾರಿ ವಿಚಾರವಾಗಿ, ಕೇಂದ್ರ ಸಚಿವ ನಾರಾಯಣಸ್ವಾಮಿ ಅವರನ್ನು ಬೋವಿ ಸ್ವಾಮೀಜಿ ಚರ್ಚೆಗೆ ಅಹ್ವಾನಿಸಿದ್ದಾರೆ. ಹೀಗಾಗಿ ಅವರ ಪರವಾಗಿ ಚರ್ಚೆಗೆ ನಾವು ಬರಲು ಸಿದ್ಧರಿದ್ದೇವೆ. ಸರ್ಕಾರದ ಕಾರ್ಯನಿಮಿತ್ತ ಸಚಿವರು, ಬ್ಯುಸಿಯಾಗಿದ್ದಾರೆ. ಹೀಗಾಗಿ ಸದಾಶಿವ ಆಯೋಗದ ವರದಿ ಪರ ಚರ್ಚೆಗೆ ನಮ್ಮನ್ನು ಆಹ್ವಾನಿಸುವಂತೆ ಸಿದ್ದರಾಮೇಶ್ವರ ಸ್ವಾಮೀಜಿಗೆ ಹೇಳಿದ್ದಾರೆ.

    ಪದೇ ಪದೇ ಈ ವರದಿ ಜಾರಿಗೆ ಕೆಲವರು ಅಡ್ಡಗಾಲು ಹಾಕುತಿದ್ದು, ವರದಿ ಜಾರಿಯಿಂದಾಗಿ ಪಟ್ಟಿಯಲ್ಲಿರುವ ಯಾವ ಜಾತಿಗೂ ಅನ್ಯಾಯವಾಗುವುದಿಲ್ಲ ಎಂಬ ಭರವಸೆ ಇದೆ. ಆದರೂ ಸಹ ಕೆಲವರು ಸದಾಶಿವ ಆಯೋಗದ ವರದಿ ವಿರೋಧಿಸುತ್ತಿದ್ದು, ಅವರೆಲ್ಲಾ ಅವಿವೇಕಿಗಳು ಎಂದರು.ಇದನ್ನೂ ಓದಿ:ಒಂದು ವರ್ಷದಿಂದ ಇವರು ಬಾಯಿ ಮುಚ್ಚಿದ್ರು: ಡಿಕೆಶಿ ವಿರುದ್ಧ ಅನಿಲ್ ಬೆನಕೆ ವಾಗ್ದಾಳಿ

    ಜೊತೆಗೆ ಪಶುಸಂಗೋಪನ ಸಚಿವ ಪ್ರಭುಚೌಹಾಣ್ ಕೂಡ ಸದಾಶಿವ ಆಯೋಗದ ವರದಿಯನ್ನು ವಿರೋಧಿಸಿದ್ದಾರೆ. ಈ ವೇಳೆ ನಮ್ಮ ಸಮುದಾಯ ಅವರಿಗೆ ಸವಾಲು ಹಾಕಲಿದೆ. ಚೌಹಾಣ್ ಅವರಿಗೆ ತಾಕತ್ತಿದ್ರೆ ಅವರ ಸರ್ಕಾರದಿಂದ ಸದಾಶಿವ ಆಯೋಗದ ವರದಿಯನ್ನು ವಜಾಗೊಳಿಸುತ್ತೇವೆಂದು ಆದೇಶ ಹೊರಡಿಸಲಿ ನೋಡೋಣ ಎಂದು ಹೇಳಿದರು.ಇದನ್ನೂ ಓದಿ:ಬಹಳ ಕಡಿಮೆ ಸಮಯದಲ್ಲಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ: ಹಾಲಪ್ಪ ಆಚಾರ್

    ಈ ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ಸದಸ್ಯರಾದ ಜಗದೀಶ್, ರಾಜಣ್ಣ, ಮಹಲಿಂಗಪ್ಪ ಹಾಗೂ ಮಂಜು ಇದ್ದರು.

  • ಭಿನ್ನಮತದ ಬೆಂಕಿಯಲ್ಲಿರುವ ಕಾಂಗ್ರೆಸ್‍ಗೆ ಮತ್ತೊಂದು ತಲೆನೋವು

    ಭಿನ್ನಮತದ ಬೆಂಕಿಯಲ್ಲಿರುವ ಕಾಂಗ್ರೆಸ್‍ಗೆ ಮತ್ತೊಂದು ತಲೆನೋವು

    ಬೆಂಗಳೂರು: ಸಚಿವ ಸ್ಥಾನ ಹಂಚಿಕೆಯಲ್ಲಿ ಕಾಂಗ್ರೆಸ್ ಶಾಸಕರಲ್ಲಿ ಭಿನ್ನಮತದ ಉಂಟಾಗಿದ್ದು, ಇದರ ಬೆನ್ನಲೇ ಮತ್ತೊಂದು ತಲೆನೋವು ಕಾಂಗ್ರೆಸ್ಸನ್ನು ಆವರಿಸಿಕೊಂಡಿದೆ.

    ಸದ್ಯ ಕಾಂಗ್ರೆಸ್ಸಿನಲ್ಲಿ ದಲಿತ ಎಡಗೈ-ಬಲಗೈ ಗಲಾಟೆ ಸ್ಫೋಟಗೊಂಡಿದ್ದು, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ದಲಿತ ಎಡಗೈ ಸಮುದಾಯದವರು ಕಾಂಗ್ರೆಸ್ಸಿಗೆ ಮತ ಹಾಕಿಲ್ಲವಂತೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾ.ಸದಾಶಿವ ಆಯೋಗ ಜಾರಿಗೆ ಮುಂದಾಗಿದ್ದರು. ಹೀಗಾಗಿ ದಲಿತ ಎಡಗೈ ಸಮುದಾಯದವರು ಕಾಂಗ್ರೆಸ್ಸನ್ನು ಕೈ ಬಿಟ್ಟು ಬಿಜೆಪಿಯನ್ನು ಬೆಂಬಲಿಸಿದ್ದರು ಎಂದು ಕಾಂಗ್ರೆಸ್ ಹೈಕಮಾಂಡ್‍ಗೆ ದಲಿತ ಬಲಗೈ ಮುಖಂಡರು ದೂರು ನೀಡಿದ್ದರು.

    ದಲಿತ ಬಲಗೈ ದೂರು ಕೇಳಿ ಬಂದ ಬೆನ್ನಲ್ಲೆ ಮಾಜಿ ಸಚಿವ ಎಚ್.ಆಂಜನೇಯ, ಸಂಸದರಾದ ಕೆ.ಎಚ್.ಮುನಿಯಪ್ಪ ಹಾಗೂ ಬಿ.ಎನ್.ಚಂದ್ರಪ್ಪ ಅವರು ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಜೊತೆ ಮಾತುಕತೆಗೆ ಮುಂದಾಗಿದ್ದು, ಹೀಗೆ ಮಾತನಾಡಿದರೆ ನಮ್ಮ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತದೆ. ದಲಿತ ಎಡಗೈ ಸಮುದಾಯದ ಪ್ರಾಬಲ್ಯ ಇರುವ ಕ್ಷೇತ್ರಗಳ ಮತ ಹಂಚಿಕೆಯನ್ನು ತರಿಸಿಕೊಂಡು ನೋಡಿ ಎಂದು ವೇಣುಗೋಪಾಲ್ ಅವರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.