Tag: safari

  • ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿ

    ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿ

    ಮೈಸೂರು: ಸಫಾರಿ ವಾಹನಗಳ‌ (Safari Vehicle) ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ (Nagarahole Forest ) ನಡೆದಿದೆ.

    ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದುಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಇದನ್ನೂ ಓದಿ: ಮಳೆಯಿಂದ ಭಾರತ ಮಂಟಪದಲ್ಲಿ ನಿಂತಿದ್ದ ನೀರನ್ನು ಕೂಡಲೇ ತೆರವುಗೊಳಿಸಲಾಗಿತ್ತು: PIB

    ಮೊದಲಿಗೆ ಖಾಸಗಿ ವಾಹನ ನೋಡಿ‌ ಓಡಿ ಬಂದ ಆನೆ ನಂತರ ಸಫಾರಿ ವಾಹನದ ಮೇಲೆ ದಾಳಿಗೆ ಮುಂದಾಗಿದೆ. ಬಳಿಕ ಎದುರಿನಲ್ಲಿ ಮತ್ತೊಂದು ಸಫಾರಿ ವಾಹನದ ಬಳಿಗೂ ಓಡಿ ಬಂದಿದೆ. ವಾಹನವನ್ನು ಹಿಮ್ಮುಖವಾಗಿ ಚಲಿಸಿದ ಬಳಿಕ ಆನೆ ವಾಪಸ್‌ ಹೋಗಿದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಗರಹೊಳೆ ಕಾಡಲ್ಲಿ ಸಫಾರಿ: ಹುಲಿ ಸಿಗಲಿಲ್ಲ, ಬೇಜಾರಾಯ್ತು ಎಂದ ಯಶ್

    ನಾಗರಹೊಳೆ ಕಾಡಲ್ಲಿ ಸಫಾರಿ: ಹುಲಿ ಸಿಗಲಿಲ್ಲ, ಬೇಜಾರಾಯ್ತು ಎಂದ ಯಶ್

    ಸಿನಿಮಾ ಕೆಲಸಗಳ ಬ್ಯುಸಿ ನಡುವೆಯೂ ರಾಕಿಂಗ್ ಸ್ಟಾರ್ ಯಶ್ (Yash) ಕಾಡಿಗೆ ನುಗ್ಗಿದ್ದಾರೆ. ಮಕ್ಕಳಿಗೆ ಲೈವ್ ಆಗಿ ಕಾಡು ಪ್ರಾಣಿಗಳನ್ನು ತೋರಿಸಲು ಕುಟುಂಬ ಸಮೇತ ನಾಗರಹೊಳೆ (Nagarhole) ಕಾಡಿಗೆ ಬಂದಿದ್ದ ಅವರು, ಸತತ ಮೂರು ದಿನಗಳ ಕಾಲ ಸಫಾರಿ (Safari) ಮಾಡಿದ್ದಾರೆ. ನಾನಾ ಪ್ರಾಣಿಗಳನ್ನು ಕಣ್ತುಂಬಿ ಕೊಂಡ ಯಶ್ ಕುಟುಂಬ, ಹುಲಿ (Tiger) ಸಿಗದೇ ಹೋದ ಕಾರಣಕ್ಕಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

    ಕೊರೋನಾದಿಂದಾಗಿ ಮೈಸೂರು ಕಡೆ ಪ್ರವಾಸ ಮಾಡಲು ಯಶ್ ಗೆ ಆಗಿರಲಿಲ್ಲವಂತೆ. ಹಾಗಾಗಿ ಇಬ್ಬರು ಮಕ್ಕಳು, ಪತ್ನಿ ರಾಧಿಕಾ ಪಂಡಿತ್ (Radhika Pandit) ಮತ್ತು ಅತ್ತೆ, ಮಾವನ ಜೊತೆ ಮೈಸೂರಿಗೆ ಆಗಮಿಸಿದ್ದರು. ಮೈಸೂರಿನ ಸುತ್ತ ಮುತ್ತಲಿನ ಸ್ಥಳಗಳನ್ನು ಮಕ್ಕಳಿಗೆ ತೋರಿಸಿದರು. ಅದರಲ್ಲೂ ಮಕ್ಕಳಿಗೆ ಇದು ಮೊದಲ ರಿಯಲ್ ಫಾರೆಸ್ಟ್ ಪ್ರವಾಸವಾಗಿದ್ದರಿಂದ ಆ ಸಂಭ್ರಮವನ್ನು ಹಂಚಿಕೊಂಡರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಯಶ್, ‘ನಾವು ಮತ್ತು ಮಕ್ಕಳು ಕೂಡ ಸಫಾರಿ ಎಂಜಾಯ್ ಮಾಡಿದ್ರು. ಸಫಾರಿಯಲ್ಲಿ ಜಿಂಕೆ, ಕರಡಿ, ಆನೆ ಎಲ್ಲೂ ಕಂಡವು. ಹುಲಿಯೊಂದು ಸಿಗಲಿಲ್ಲ, ಬೇಜಾರಾಯ್ತು.ಇವತ್ತೂ ಸಫಾರಿ ಮಾಡಬೇಕಿತ್ತು, ಮಳೆ ಕಾರಣಕ್ಕೆ ಹೋಗಲಿಲ್ಲ. ಮುಂದೆ ಮತ್ತೆ ಸಫಾರಿ ಮಾಡಿ ನೋಡಿದ್ರಾಯ್ತು ಅಂತ ಬಂದೆವು’ ಎಂದಿದ್ದಾರೆ. ಇದನ್ನೂ ಓದಿ:ಮಹೇಶ್ ಬಾಬು ಚಿತ್ರದಿಂದ ಪೂಜಾ ಹೆಗ್ಡೆ ಕಿಕ್ ಔಟ್- ತ್ರಿಷಾ ಇನ್?

    ಸಫಾರಿ ಮುಗಿಸಿಕೊಂಡು ಕುಟುಂಬ ಸಮೇತ ಇಂದು ಯಶ್ ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು ದೇವಸ್ಥಾನದಲ್ಲೇ ಇದ್ದು ನಂಜುಂಡೇಶ್ವರನ ದರ್ಶನ ಪಡೆದರು.

    ಸಿನಿಮಾ ಕೆಲಸಗಳ ಮಧ್ಯೆಯೇ ಬಿಡುವು ಮಾಡಿಕೊಂಡು ಫ್ಯಾಮಿಲಿಗೆ ಟೈಮ್ ಕೊಟ್ಟಿದ್ದಾರೆ ಯಶ್. ಕಳೆದ ಮೂರು ದಿನಗಳಿಂದ ಅವರು ಮೈಸೂರು ಭಾಗದಲ್ಲಿ ಪ್ರವಾಸದಲ್ಲಿದ್ದರು. ನಾಗರ ಹೊಳೆ, ಬಂಡೀಪುರ ಅರಣ್ಯದಲ್ಲಿ ಸಫಾರಿ ನಡುವೆ ಶ್ರೀಕಂಠೇಶ್ವರ ದೇವರಿಗೆ ಪೂಜೆ ನೆರವೇರಿಸಿದ್ದಾರೆ.

  • ಹಿಡಿದು ಮಾರಿಬಿಡಬಹುದೆಂಬ ಭಯಕ್ಕೆ ಹುಲಿ ಗುಹೆಯಲ್ಲಿ ಅಡಗಿರಬಹುದು: ಮೋದಿ ಸಫಾರಿಗೆ ಸಿದ್ದು ವ್ಯಂಗ್ಯ

    ಹಿಡಿದು ಮಾರಿಬಿಡಬಹುದೆಂಬ ಭಯಕ್ಕೆ ಹುಲಿ ಗುಹೆಯಲ್ಲಿ ಅಡಗಿರಬಹುದು: ಮೋದಿ ಸಫಾರಿಗೆ ಸಿದ್ದು ವ್ಯಂಗ್ಯ

    ಬೆಂಗಳೂರು: ಮೋದಿ ಸಫಾರಿ ಕುರಿತು ವರದಿಯೊಂದನ್ನು ಉಲ್ಲೇಖಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಗಿ ಟ್ವೀಟ್ (Tweet) ಮಾಡಿದ್ದಾರೆ.

    ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭಾನುವಾರ ಬಂಡೀಪುರಕ್ಕೆ (Bandipur) ಆಗಮಿಸಿದ್ದಾರೆ. ಈ ವೇಳೆ 22 ಕಿಲೋಮೀಟರ್ ಸಫಾರಿ (Safari) ನಡೆಸಿ ಬಂಡೀಪುರದ ಪ್ರಾಣಿ ಪಕ್ಷಿಗಳನ್ನು ವೀಕ್ಷಣೆ ಮಾಡಿದರು. ಇದನ್ನು ಓದಿ: ದೇಶದಲ್ಲಿ ಇದೆ 3167 ಹುಲಿಗಳು – ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗ: ಮೋದಿ 

    ಮೋದಿ ಸಫಾರಿ ವೇಳೆ ಹುಲಿ ಗೋಚರಿಸಲಿಲ್ಲ ಎಂದು ತಿಳಿಸುವ ಮಾಧ್ಯಮ ವರದಿಯನ್ನು ಸಿದ್ದರಾಮಯ್ಯ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದಾರೆ.

    ಹಿಡಿದು ಮಾರಿಬಿಡುತ್ತಾರೆ ಎನ್ನುವ ಭಯಕ್ಕೆ ಯಾವ ಗುಹೆಯೊಳಗೆ ಅಡಗಿ ಕುಳಿತಿದೆಯೋ ಅಯ್ಯೋ ಪಾಪ. ಇನ್ನು ಕೆಲವೇ ದಿನಗಳಲ್ಲಿ ಬಂಡೀಪುರ ಉಳಿಸಿ ಎಂಬ ಅಭಿಯಾನವನ್ನು ಕನ್ನಡಿಗರು ಶುರು ಮಾಡುವಂತೆ ಆಗದಿರಲಿ. ಅದೇ ನೀವು ಕರುನಾಡಿಗೆ ಮಾಡುವ ದೊಡ್ಡ ಉಪಕಾರ ಎಂದು ಬರೆದು ನರೇಂದ್ರ ಮೋದಿಯವರಿಗೆ ಟ್ಯಾಗ್ (Tag) ಮಾಡಿದ್ದಾರೆ. ಇದನ್ನು ಓದಿ: ಕಾಡಿಗೆ ಸಫಾರಿ ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು – ಹೆಚ್‌ಡಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು

  • ಕಾಡಿಗೆ ಸಫಾರಿ ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು – ಹೆಚ್‌ಡಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು

    ಕಾಡಿಗೆ ಸಫಾರಿ ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು – ಹೆಚ್‌ಡಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು

    ಬೆಂಗಳೂರು: ಕಾಡಿಗೆ ಸಫಾರಿಗೆಂದು (Safari) ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು. ನಾಡಿಗೆ ಬಂದಾಗ ನಾಡಿನ ಡ್ರೆಸ್‌ನಲ್ಲಿ ಇರಬೇಕು. ಆದರೆ ಕುಮಾರಸ್ವಾಮಿ (H.D.Kumaraswamy) ಅವರಿಗೆ ಅದು ಎರಡೂ ಹಾಕಲು ಬರುವುದಿಲ್ಲವಲ್ಲ, ಏನುಮಾಡುವುದು ಎಂದು ಮೋದಿ (Narendra Modi) ಬಂಡೀಪುರ (Bandipur) ಅರಣ್ಯ ಭೇಟಿಗೆ ಕುಮಾರಸ್ವಾಮಿ ವ್ಯಂಗ್ಯ ವಿಚಾರವಾಗಿ ಸಚಿವ ಅಶ್ವಥ್ ನಾರಾಯಣ್ (C.N.Ashwath Narayan) ತಿರುಗೇಟು ನೀಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಯಾವ ಯಾವ ಜಾಗಕ್ಕೆ ಯಾವ ಯಾವ ವೇಷಗಳನ್ನು ಹಾಕಬೇಕೋ ಅದಕ್ಕೆ ಸೂಕ್ತವಾದ ಬಟ್ಟೆಗಳನ್ನು ಹಾಕುತ್ತಾರೆ. ಇಡೀ ವಿಶ್ವವನ್ನೇ ನಾವು ಪ್ರತಿನಿಧಿಸುತ್ತಿದ್ದೇವೆ. 140 ಕೋಟಿ ಜನರಿಗೆ ನಾಯಕ ಅವರು. ಅಂತಹ ರೋಲ್ ಮಾಡೆಲ್‌ಗೆ (Roll Model) ರೋಲ್ ಮಾಡೆಲ್ ತರಹ ಇರಬೇಡಿ ಸ್ವಾಮಿ ಎಂದು ಹೇಳಲಾಗುವುದಿಲ್ಲ ಎಂದರು. ಇದನ್ನು ಓದಿ: ಮೋದಿ ಕಾಡು ಪ್ರಾಣಿಗಳನ್ನು ನೋಡಿದರೆ ಜನ ವೋಟು ಒತ್ತುತ್ತಾರಾ: ಹೆಚ್ಡಿಕೆ ವ್ಯಂಗ್ಯ 

    ಕೋವಿಡ್ (Covid) ಸಮಯದಲ್ಲಿ ಕುಮಾರಸ್ವಾಮಿ ಎಲ್ಲಿದ್ದರು? ಕಾಂಗ್ರೆಸ್‌ನವರು (Congress) ಲಸಿಕೆ ತೆಗೆದುಕೊಳ್ಳಬೇಡಿ ಎಂದಿದ್ದರು. ಇಡೀ ವಿಶ್ವದಲ್ಲಿ ಭಾರತ ಮಾದರಿಯಾಗಿ ಕೋವಿಡ್ ನಿರ್ವಹಣೆ ಮಾಡಿದೆ. ಸುಮ್ಮನೆ ಪಾಪ ಏನೋ ಹೇಳಬೇಕು ಎಂದು ಹೇಳುತ್ತಿದ್ದಾರೆ ಅಷ್ಟೇ. ಆದರೆ ಜನರು ಬುದ್ದಿವಂತರಿದ್ದಾರೆ ಎಂಬುದು ಗೊತ್ತಿರಲಿ. ಇಂತಹ ಹೇಳಿಕೆಗಳಿಂದ ಅವರು ಸೆಲ್ಫ್ ವಿಕೆಟ್ ಹೊಡೆದುಕೊಳ್ಳುತ್ತಿದ್ದಾರೆ. ಮೋದಿಯವರ ಬಗ್ಗೆ ಕಿಡಿಕಾರಿದರೆ ಅದು ಇವರಿಗೆ ರಿವರ್ಸ್ ಗೇರ್ ಆಗುತ್ತದೆ ಎಂದು ಹರಿಹಾಯ್ದರು. ಇದನ್ನು ಓದಿ: ಬಂಡೀಪುರದಲ್ಲಿ ಮೋದಿ ಸಫಾರಿ – ಪ್ರಕೃತಿ ಸೌಂದರ್ಯ ಸವಿದ ಪ್ರಧಾನಿ 

     

    ನಂದಿನಿ (Nandini) ಉಳಿಸಿ ಅಭಿಯಾನ ವಿಚಾರದ ಕುರಿತು ಮಾತನಾಡಿದ ಅವರು, ನಮ್ಮ ನಂದಿನಿಗೆ ಯಾರೂ ಸರಿಸಾಟಿಯಲ್ಲ. ನಂದಿನಿಯ ಗುಣಮಟ್ಟಕ್ಕಾಗಲಿ, ಬೆಲೆಯಲ್ಲಾಗಲಿ, ವ್ಯವಸ್ಥೆಯಲ್ಲಾಗಲಿ ಯಾವುದೂ ಸರಿಸಾಟಿಯಲ್ಲ. ಇದನ್ನು ರಾಜ್ಯಸರ್ಕಾರವೇ ಸಂಪೂರ್ಣವಾಗಿ ಕೈಗೆತ್ತಿಕೊಂಡು ನಂದಿನಿಗೆ ಎಲ್ಲಾ ರೀತಿಯಾದ ಸಹಕಾರವನ್ನು ನೀಡುತ್ತಿದೆ. ನಂದಿನಿಗೆ ಜಮೀನು ಹಾಗೂ ಹಣ ನೀಡುವ ವಿಚಾರದಲ್ಲಿ ರಾಜ್ಯಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಅಲ್ಲದೇ ಒಂದು ಲೀಟರ್ ಹಾಲಿಗೆ 5 ರೂ. ಸಬ್ಸಿಡಿಯನ್ನೂ ಕೊಟ್ಟಿದೆ. ಈ ರೀತಿಯಾಗಿ ನಮ್ಮ ರಾಜ್ಯದ ಹಾಲು ಉತ್ಪಾದಕರು ಮತ್ತು ರೈತರಿಗೆ ಸಂಪೂರ್ಣ ಸಹಕಾರವನ್ನು ನೀಡುತ್ತಿದ್ದೇವೆ. ನಮ್ಮ ಅಭಿಮಾನದ ಸಂಕೇತ ನಂದಿನಿ. ಆದ್ದರಿಂದ ನಂದಿನಿಗೆ ಸರ್ಕಾರದ ಸಂಪೂರ್ಣ ಬೆಂಬಲವಿದೆ. ಹೀಗಾಗಿ ಎಂತಹ ಸ್ಪರ್ಧೆ ಬಂದರೂ ನಮ್ಮ ಹತ್ತಿರ ಯಾರೂ ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನು ಓದಿ: ಗದಗ ಜಿಲ್ಲೆಯಲ್ಲಿ ಮಾಜಿ, ಹಾಲಿ ಶಾಸಕರ ಕೊನೆಯ ಕಸರತ್ತು  

    ಬಿಜೆಪಿ (BJP) ಪಟ್ಟಿ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದ ಅವರು, ನಾಳೆ ಬಿಜೆಪಿಯ ಟಿಕೆಟ್ ಪ್ರಕಟವಾಗುವ ಸಾಧ್ಯತೆಯಿದೆ. ನಾಳೆ ಮೊದಲ ಲಿಸ್ಟ್ ಬಿಡುಗಡೆಯಾಗಲಿದ್ದು, ಎರಡನೇ ಲಿಸ್ಟ್ 13ನೇ ದಿನಾಂಕದಂದು ಬಿಡುಗಡೆಯಾಗಲಿದೆ ಎಂದರು.

    ಹೊಸಬರಿಗೆ ಟಿಕೆಟ್ ಸಿಗಲಿದೆಯಾ ಎಂಬ ಪ್ರಶ್ನೆಗೆ ಕಾದು ನೋಡಿ ಎಂದು ಉತ್ತರಿಸಿದರು. ಇದನ್ನು ಓದಿ: ವಿಕಲಚೇತನ ಕಾರ್ಯಕರ್ತನೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಮೋದಿ

  • ಮೋದಿ ಕಾಡು ಪ್ರಾಣಿಗಳನ್ನು ನೋಡಿದರೆ ಜನ ವೋಟು ಒತ್ತುತ್ತಾರಾ: ಹೆಚ್ಡಿಕೆ ವ್ಯಂಗ್ಯ

    ಮೋದಿ ಕಾಡು ಪ್ರಾಣಿಗಳನ್ನು ನೋಡಿದರೆ ಜನ ವೋಟು ಒತ್ತುತ್ತಾರಾ: ಹೆಚ್ಡಿಕೆ ವ್ಯಂಗ್ಯ

    ಬೆಂಗಳೂರು: ಮೋದಿ (Narendra Modi) ಕಾಡು ಪ್ರಾಣಿಗಳನ್ನು ನೋಡಲು ಬಂದ ತಕ್ಷಣ ಜನ ವೋಟು ಒತ್ತಿ ಬಿಡ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (H.D.Kumaraswamy) ವ್ಯಂಗ್ಯವಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂಕಷ್ಟದಲ್ಲಿ, ಪ್ರವಾಹದಿಂದ ಜನ ಬೀದಿಗೆ ಬಂದಾಗ ಮೋದಿ ಬರಲಿಲ್ಲ. ಈಗ ಚುನಾವಣೆ ಹೊತ್ತಿನಲ್ಲಿ ಸಫಾರಿಗೆ (Safari) ಬಂದಿದ್ದಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡಬೇಕು. ಆದರೆ ವನ್ಯ ಜೀವಿಗಳಿಂದ ಎಷ್ಟು ದಾಳಿ ಆಗಿದೆ ಎಂಬ ಮಾಹಿತಿ ಮೋದಿಯವರಿಗೆ ಇದೆಯೇ? ದಾಳಿಗೊಳಗಾದ ಒಂದು ಕುಟುಂಬಕ್ಕಾದರೂ ಮೋದಿ ಭೇಟಿ ಕೊಟ್ಟಿದ್ದಾರಾ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವಿಕಲಚೇತನ ಕಾರ್ಯಕರ್ತನೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಮೋದಿ

    ಅರಣ್ಯ ಪ್ರದೇಶಗಳಲ್ಲಿ ಆಹಾರದ ಕೊರತೆ ಇದೆ ಎಂಬ ವರದಿಯಿದೆ. ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ವಿಚಾರವಾಗಿ ಚರ್ಚೆಯಾಗಿದೆ. ಈ ಬಗ್ಗೆ ಮೋದಿಯವರು ಗಮನ ಹರಿಸಿದ್ದಾರಾ? ಕೇವಲ ಸೂಟು ಬೂಟು ಹಾಕಿಕೊಂಡು ಬಂದರೆ ಆಗುತ್ತದೆಯೇ? ನಾಡಿನ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: ಕೋವಿಡ್ ಕೇಸ್ ತೀವ್ರ ಹೆಚ್ಚಳ – ಕೇರಳ, ಹರಿಯಾಣ, ಪುದುಚೇರಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

  • ಪ್ರಧಾನಿ ಮೋದಿ ಭೇಟಿ – ಏ.8, 9 ರಂದು ಸಾರ್ವಜನಿಕರಿಗೆ ಬಂಡೀಪುರ ಸಫಾರಿ ಬಂದ್

    ಪ್ರಧಾನಿ ಮೋದಿ ಭೇಟಿ – ಏ.8, 9 ರಂದು ಸಾರ್ವಜನಿಕರಿಗೆ ಬಂಡೀಪುರ ಸಫಾರಿ ಬಂದ್

    ಚಾಮರಾಜನಗರ: ಏಪ್ರಿಲ್ 9 ರಂದು ಬಂಡೀಪುರಕ್ಕೆ (Bandipura) ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಭದ್ರತಾ ಕಾರಣಗಳಿಂದ ಏಪ್ರಿಲ್ 8 ಮತ್ತು 9 ರಂದು ಪ್ರವಾಸಿಗರಿಗೆ ಸಫಾರಿ ಬಂದ್ ಮಾಡಲಾಗಿದೆ.

    ಏಪ್ರಿಲ್ 4 ರಿಂದ 9 ರ ವರೆಗೂ ಬಂಡೀಪುರದಲ್ಲಿ ಅರಣ್ಯ ಇಲಾಖೆಗೆ ಸೇರಿದ ಅತಿಥಿಗೃಹ, ಕಾಟೇಜ್‌‌ಗಳ ಬುಕಿಂಗ್ ಸಹ ಬಂದ್ ಮಾಡಲಾಗಿದೆ ಎಂದು ಬಂಡೀಪುರ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಏಪ್ರಿಲ್‌ 11ರ ವರೆಗೆ ಮಾಡಾಳ್‌ಗೆ ಜೈಲು – ಜೈಲಿನ ಪ್ರಕಾರವೇ ಊಟ

    ದೇಶದಲ್ಲಿ ಹುಲಿ ಯೋಜನೆಗೆ 50 ವರ್ಷ ಹಿನ್ನಲೆ ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಇತ್ತೀಚಿನ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ ಹಾಗೂ ನಾಣ್ಯ ಸ್ಮರಣಿಕೆಯನ್ನು ಅವರು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

    ಅಂದೇ ಬಂಡೀಪುರಕ್ಕೂ ಭೇಟಿ ನೀಡಲಿರುವ ಮೋದಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಸಫಾರಿ ಮಾರ್ಗಗಳನ್ನು ಅರಣ್ಯ ಇಲಾಖೆ ದುರಸ್ತಿ ಮಾಡಲು ಮುಂದಾಗಿದೆ. ಇದನ್ನೂ ಓದಿ: ಹಾಸನ ಟಿಕೆಟ್‌ಗೆ ಒತ್ತಡ ತರಬೇಡಿ, ನಾವು ಕೊಡುವ ಅಭ್ಯರ್ಥಿ ಪರ ಕೆಲಸ ಮಾಡಿ: ದೇವೇಗೌಡ ಕಿವಿಮಾತು

  • ಸಫಾರಿ ತೆರಳುತ್ತಿದ್ದ ವೇಳೆ ಘೇಂಡಾಮೃಗಗಳ ದಾಳಿ – 7 ಮಂದಿ ಪ್ರವಾಸಿಗರಿಗೆ ಗಾಯ

    ಸಫಾರಿ ತೆರಳುತ್ತಿದ್ದ ವೇಳೆ ಘೇಂಡಾಮೃಗಗಳ ದಾಳಿ – 7 ಮಂದಿ ಪ್ರವಾಸಿಗರಿಗೆ ಗಾಯ

    ಕೋಲ್ಕತ್ತಾ: ಸಫಾರಿ (Safari) ತೆರಳುತ್ತಿದ್ದ ವೇಳೆ ಪ್ರವಾಸಿಗರ (Tourists) ಮೇಲೆ ಘೇಂಡಾಮೃಗಗಳು (Rhino) ದಾಳಿ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಜಲ್ದಪರಾ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಘಟನೆಯಲ್ಲಿ 7 ಪ್ರವಾಸಿಗರು ಗಾಯಗೊಂಡಿದ್ದಾರೆ.

    ಸ್ಥಳೀಯರ ಪ್ರಕಾರ ಸಫಾರಿ ಜೀಪ್ ಅನ್ನು ನಿಲ್ಲಿಸಿದ್ದ ವೇಳೆ 2 ಘೇಂಡಾಮೃಗಗಳು ರಸ್ತೆಯ ಬಳಿ ಪೊದೆಯಲ್ಲಿ ಕಾಳಗದಲ್ಲಿ ತೊಡಗಿದ್ದವು. ಈ ಸಂದರ್ಭ ಪ್ರವಾಸಿಗರು ಪ್ರಾಣಿಗಳ ಕಾದಾಟದ ವೀಡಿಯೋವನ್ನು ಚಿತ್ರೀಕರಣ ಮಾಡಿದ್ದಾರೆ. ಇದರಿಂದ ವಿಚಲಿತವಾಗಿದ್ದ ಘೇಂಡಾಮೃಗಗಳು ಜೀಪಿನತ್ತ ಬಂದಿವೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ಹೆಚ್ಚುವರಿ ಸಮಯ ನಿರಾಕರಿಸಿದ್ದಕ್ಕೆ ಶಾಲಾ ಕಟ್ಟಡವನ್ನೇ ಧ್ವಂಸಗೊಳಿಸಿದ ವಿದ್ಯಾರ್ಥಿಗಳು

    ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪ್ರವಾಸಿಗರು ಸಫಾರಿ ವಾಹನವನ್ನು ನಿಲ್ಲಿಸಿ, ಘೇಂಡಾಮೃಗಗಳ ಕಾಳಗ ವೀಕ್ಷಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಅವು ಜೀಪಿನತ್ತ ನುಗ್ಗಿವೆ. ಈ ವೇಳೆ ಜೀಪಿನ ಚಾಲಕ ವಾಹನವನ್ನು ರಿವರ್ಸ್ ಕೊಂಡೊಯ್ದಿದ್ದಾನೆ. ಆದರೆ ಜೀಪ್ ಹಿಂದೆ ಹೋಗುತ್ತಲೇ ಮಾರ್ಗದಿಂದ ಬದಿಗೆ ಜಾರಿ, ಕಂದಕಕ್ಕೆ ಉರುಳಿದೆ. ಇದರಿಂದ ಜೀಪಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಇದನ್ನೂ ಓದಿ: PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

    ಗಾಯಗೊಂಡ ಎಲ್ಲಾ ಪ್ರವಾಸಿಗರನ್ನು ತಕ್ಷಣ ಸ್ಥಳೀಯ ಮದರಿಹತ್ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಘಟನೆಯಿಂದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಅಲಿಪುರ್ದೂರ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಇಲ್ಲಿಯವರೆಗೆ ಘೇಂಡಾಮೃಗಗಳು ಪ್ರವಾಸಿಗರ ವಾಹನಗಳ ಮೇಲೆ ದಾಳಿ ಮಾಡಿರುವುದು ಈ ಹಿಂದೆ ವರದಿಯಾಗಿರಲಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಮರಿಗಳೊಂದಿಗೆ ಪ್ರವಾಸಿಗರನ್ನು ಅಡ್ಡಹಾಕಿದ ಆನೆಗಳು – ಕೆ.ಗುಡಿ ಸಫಾರಿ ವೇಳೆ ಗಜ ಪಡೆ ಎಂಟ್ರಿ

    ಮರಿಗಳೊಂದಿಗೆ ಪ್ರವಾಸಿಗರನ್ನು ಅಡ್ಡಹಾಕಿದ ಆನೆಗಳು – ಕೆ.ಗುಡಿ ಸಫಾರಿ ವೇಳೆ ಗಜ ಪಡೆ ಎಂಟ್ರಿ

    ಚಾಮರಾಜನಗರ: ಏಕಾಏಕಿ ಕಾಡು ಹಾದಿಯಲ್ಲಿ ಮರಿ ಆನೆಗಳೊಂದಿಗೆ ಪ್ರತ್ಯಕ್ಷವಾದ ಆನೆಗಳ ಗುಂಪೊಂದು ಒಂದು ಗಂಟೆ ಸಫಾರಿ ಜೀಪನ್ನು ಅಡ್ಡಹಾಕಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ಸಫಾರಿ ವಲಯದಲ್ಲಿ ನಡೆದಿದೆ.

    ಸಫಾರಿಯಲ್ಲಿ “ಸುತ್ತುರೋಡ್” ಎಂಬ ಸಫಾರಿ ವಲಯದಲ್ಲಿ ಪ್ರವಾಸಿಗರಿದ್ದ ಜೀಪನ್ನು ಎರಡು ಮರಿಗಳೊಂದಿಗೆ ಮೂರು ಆನೆಗಳು ದಾರಿ ಕೊಡದೇ ಅಡ್ಡಹಾಕಿದೆ. ಸಫಾರಿ ಜೀಪ್ ಕೂಡ ಆನೆ ಪಕ್ಕ ಸುಮ್ಮನೆ ನಿಂತಿದೆ. ಆದರೆ ಆನೆಗಳ ಗುಂಪು ಮಾತ್ರ ಪಕ್ಕಕ್ಕೆ ತೆರಳದೇ ಒಂದು ಗಂಟೆ ರಸ್ತೆ ಮಧ್ಯದಲ್ಲೇ ನಿಂತು ಪ್ರವಾಸಿಗರಿಗೆ ದರ್ಶನ ಕೊಟ್ಟಿದೆ. ಇದನ್ನೂ ಓದಿ: ದೇವಸ್ಥಾನ ಕಳ್ಳತನಕ್ಕೆ 7 ಬೀದಿನಾಯಿಗಳನ್ನು ಕೊಂದ ಕಳ್ಳರು

    ಜನರನ್ನು ಕಂಡರೇ ಆನೆ ದಾಳಿ ಮಾಡಲು ಮಂದಾಗುವುದು, ಜೀಪನ್ನು ಅಟ್ಟಾಡಿಸುವುದು ಸಾಮಾನ್ಯ. ಆದರೆ ಇಲ್ಲಿ ಆರೀತಿ ಆಗಿಲ್ಲ. ಆನೆಗಳ ಗುಂಪು ಕಂಡು ಪ್ರವಾಸಿಗರಲ್ಲಿ ಆತಂಕದ ಸ್ಥಿತಿ ನಿರ್ಮಾಣಗೊಂಡಿದ್ದರೂ ಗಜ ಪರಿವಾರದ ಸೌಮ್ಯ ವರ್ತನೆಯಿಂದಾಗಿ ಮುದಗೊಂಡು ವೀಡಿಯೋ, ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.  ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ: ಹೈಕೋರ್ಟ್

  • ಸಫಾರಿಗರಿಗೆ ಒಟ್ಟಿಗೆ ದರ್ಶನ ನೀಡಿದ 3 ಚಿರತೆಗಳು: ಅಪರೂಪದ ದೃಶ್ಯ ಸೆರೆ!

    ಸಫಾರಿಗರಿಗೆ ಒಟ್ಟಿಗೆ ದರ್ಶನ ನೀಡಿದ 3 ಚಿರತೆಗಳು: ಅಪರೂಪದ ದೃಶ್ಯ ಸೆರೆ!

    ಚಾಮರಾಜನಗರ: ಚಿರತೆ ಎಂದಾಕ್ಷಣ ರಸ್ತೆ ದಾಟುವುದು, ಮರದ ಮೇಲೆ ಬೇಟೆಯಾಡಿದ ಆಹಾರವನ್ನು ತಿನ್ನುವ ದೃಶ್ಯ ಸಾಮಾನ್ಯ. ಆದರೆ ಒಟ್ಟಿಗೆ ಮೂರು ಚಿರತೆಗಳು ಕಾಣಿಸಿಕೊಂಡಿರುವ ರೋಮಾಂಚಕ ಘಟನೆಯೊಂದು ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿ ವೇಳೆ ಈ ಘಟನೆ ನಡೆದಿದೆ. ವನ್ಯಜೀವಿ ಛಾಯಾಗ್ರಾಹಕ ಅಬ್ದುಲ್ ಶೇಜ್ ಎಂಬವರ ಕ್ಯಾಮರಾ ಕಣ್ಣಿಗೆ ಅಪರೂಪದ ದೃಶ್ಯ ಸೆರೆಯಾಗಿದೆ. 14 ಸೆಕೆಂಡ್‌ಗಳ ಈ ವೀಡಿಯೋ ಇದಾಗಿದ್ದು, ಸಫಾರಿಗರನ್ನೇ ಚಿರತೆಗಳು ದಿಟ್ಟಿಸಿ ನೋಡುತ್ತಿರುವ ದೃಶ್ಯ ಸೆರೆಯಾಗಿದೆ.

    ವೀಡಿಯೋದಲ್ಲಿ ಏನಿದೆ?: ಮರವೊಂದರ ರೆಂಬೆಯ ಮೇಲೆ 3 ಚಿರತೆಗಳು ಒಟ್ಟಿಗೆ ಕುಳಿತುಕೊಂಡಿದೆ. ಸಫಾರಿಗರನ್ನೇ ಈ 3 ಚಿರತೆಗಳು ಕೆಲವು ಸೆಕೆಂಡ್‌ಗಳ ಕಾಲ ದಿಟ್ಟಿಸಿ ನೋಡುತ್ತಿದೆ. ನಂತರದಲ್ಲಿ ಒಂದು ಚಿರತೆ ರೆಂಬೆಯಿಂದ ಕೆಳಗೆ ಇಳಿಯುತ್ತದೆ. ಮತ್ತೆರಡು ಚಿರತೆಗಳು ಆ ಚಿರತೆಯನ್ನು ನೋಡುವ ದೃಶ್ಯ ಸೆರೆಯಾಗಿದೆ. ಇದನ್ನೂ ಓದಿ: ಮಾಧುಸ್ವಾಮಿ ವಿರುದ್ಧ ಮಾತಾಡಿಲ್ಲ, ಅಧಿಕಾರಿಗಳಿಗೆ ಛೀಮಾರಿ ಹಾಕಿ ಅಂದೆ ಅಷ್ಟೇ: ಬಸವರಾಜ್

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸಫಾರಿಗರಿಗೆ ವನ್ಯಪ್ರಾಣಿಗಳು ಸಖತ್ ದರ್ಶನ ಕೊಡುತ್ತಿದೆ. ಹುಲಿ, ಆನೆ ಹಿಂಡುಗಳು ಕೂಡ ಪ್ರವಾಸಿಗರ ಕಣ್ಣಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿವೆ. ಇದನ್ನೂ ಓದಿ: ಜಾರ್ಖಂಡ್‍ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

  • ವಿದ್ಯಾರ್ಥಿಗಳ ಸಫಾರಿ ವಾಹನದ ಮೇಲೆ ಆನೆ ದಾಳಿ- ವೈರಲ್ ವೀಡಿಯೋ

    ವಿದ್ಯಾರ್ಥಿಗಳ ಸಫಾರಿ ವಾಹನದ ಮೇಲೆ ಆನೆ ದಾಳಿ- ವೈರಲ್ ವೀಡಿಯೋ

    ಪ್ರಿಟೋರಿಯಾ: ವಿದ್ಯಾರ್ಥಿಗಳ ಸಫಾರಿ ವಾಹನದ ಮೇಲೆ ಆನೆ ದಾಳಿಮಾಡಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ವೈರಲ್ ವೀಡಿಯೋದಲ್ಲಿ ಏನಿದೆ?: ಸಫಾರಿಗೆ ತೆರಳಿದ ವಿದ್ಯಾರ್ಥಿಗಳ ಮೇಲೆ ಆನೆ ದಾಳಿ ಮಾಡಿದ್ದು, ಭಯಭೀತರಾದ ವಿದ್ಯಾರ್ಥಿಗಳು ಪ್ರಾಣ ರಕ್ಷಣೆಗಾಗಿ ಸಫಾರಿ ವಾಹನದಿಂದ ಇಳಿದು ಓಡುತ್ತಿರುವ ದೃಶ್ಯವನ್ನು ನಾವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ ನೋಡಬಹುದಾಗಿದೆ.

    ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದ ಗ್ಲೋವೆಲೆಟ್ ಮತ್ತು ಫಲಬೋರ್ವಾ ಪಟ್ಟಣಗಳ ನಡುವೆ ಇರುವ ವನ್ಯಜೀವಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆನೆಗಳ ಸಂತಾನೋತ್ಪತ್ತಿ ಪ್ರಕ್ರಿಯೆ ಬಗ್ಗೆ ತಿಳಿಯಲು ಬಂದ ವಿದ್ಯಾರ್ಥಿಗಳ ಮೇಲೆ ಆನೆ ದಾಳಿ ನಡೆಸಿದೆ. ಇದನ್ನೂ ಓದಿ: OMICRON ಭೀತಿ- 30,000 ಬೆಡ್ ಸಜ್ಜು ಮಾಡಿದ ದೆಹಲಿ ಸರ್ಕಾರ

    ಪರಿಸರ ತರಬೇತಿ ಬೋಧಕರು ಮತ್ತು ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಸಫಾರಿ ವಾಹನದ ಮೇಲೆ ಆನೆಯೊಂದು ದಾಳಿ ಮಾಡಿದೆ. ಈ ವಿಡಿಯೋದಲ್ಲಿ ಕೆಲವು ವಿದ್ಯಾರ್ಥಿಗಳು ತಮ್ಮ ಜೀವ ಉಳಿಸಿಕೊಳ್ಳಲು ತಮ್ಮ ಬಳಿ ಇದ್ದ ವಸ್ತುಗಳನ್ನು ಬಿಟ್ಟು ಓಡಿರುವುದು ಸೆರೆಯಾಗಿದೆ. ಸಫಾರಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಆನೆಯ ದಾಳಿಯಿಂದ ಯಾರಿಗೂ ಗಾಯಗಳಾಗಿಲ್ಲ.