Tag: safari

  • ಪ್ರವಾಸಿಗರಿಗೆ ಸಿಹಿ ಸುದ್ದಿ- ಮೈಸೂರು ಮೃಗಾಲಯ, ಬಂಡೀಪುರ ಸಫಾರಿಗೆ ಅನುಮತಿ

    ಪ್ರವಾಸಿಗರಿಗೆ ಸಿಹಿ ಸುದ್ದಿ- ಮೈಸೂರು ಮೃಗಾಲಯ, ಬಂಡೀಪುರ ಸಫಾರಿಗೆ ಅನುಮತಿ

    – ಮಕ್ಕಳಿಗೆ, ವೃದ್ಧರಿಗಿಲ್ಲ ಪ್ರವೇಶ

    ಮೈಸೂರು/ಚಾಮರಾಜನಗರ: ದೇವಸ್ಥಾನಗಳು ತೆರೆಯುತ್ತಿರುವ ಬೆನ್ನಲ್ಲೇ ಪ್ರವಾಸಿಗರಿಗೆ ಮತ್ತೊಂದು ಸಿಹಿ ಸುದ್ದಿ ಲಭ್ಯವಾಗಿದೆ. ಜೂನ್ 8ರಿಂದ ಮೈಸೂರು ಮೃಗಾಲಯ ಹಾಗೂ ಬಂಡೀಪುರ ಸಫಾರಿಯನ್ನು ಆರಂಭಿಸಲು ಅನುಮತಿ ನೀಡಿದ್ದು, ಈ ಕುರಿತು ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

    ರಾಜ್ಯ ಸರ್ಕಾರ ಅನುಮತಿ ಸೂಚಿಸಿದ್ದು, ಇದಕ್ಕಾಗಿ ಮಾರ್ಗಸೂಚಿಗಳನ್ನೂ ಪ್ರಕಟಿಸಿದೆ. ಈ ಹಿನ್ನೆಲೆ ಮೈಸೂರು ಮೃಗಾಲಯ ಹಾಗೂ ಬಂಡೀಪುರ ಸಫಾರಿ ಪುನರಾರಂಭಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಎರಡೂ ಪ್ರವಾಸಿ ತಾಣಗಳಲ್ಲಿ ಸಿದ್ಧತೆ ಮಾಡಲಾಗುತ್ತಿದೆ. ಮೃಗಾಲಯದ ಒಳಭಾಗದಲ್ಲಿ ಸಾಮಾಜಿಕ ಅಂತರ, ಪ್ರತಿ ಕೀ ಪಾಯಿಂಟ್‍ನಲ್ಲಿ ಸ್ಯಾನಿಟೈಸ್, ಪ್ರವಾಸಿಗರ ಮಧ್ಯೆ 6 ಅಡಿ ಅಂತರ ಕಾಪಾಡುವುದು ಕಡ್ಡಾಯವಾಗಿದೆ.

    ಗಂಟೆಗೆ ಒಂದು ಸಾವಿರ ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಒಂದು ಸಾವಿರಕ್ಕಿಂತ ಹೆಚ್ಚು ಜನರಿದ್ದರೆ, ಒಂದು ಗಂಟೆ ಬಳಿಕ ಮೃಗಾಲಯಕ್ಕೆ ಪ್ರವೇಶ ಮಾಡಬೇಕು. ಮೃಗಾಲಯದ ಒಳ ಬರುವಾಗ ಥರ್ಮಲ್ ಸ್ಕ್ರೀನಿಂಗ್‍ಗೆ ವ್ಯವಸ್ಥೆ ಮಾಡಲಾಗಿದೆ. ಆದರೆ 10 ವರ್ಷದೋಳಿನ ಮಕ್ಕಳು, 65 ವರ್ಷ ವೃದ್ಧರಿಗೆ ಮೃಗಾಲಯ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಿತ್ಯ 8 ಗಂಟೆಗಳ ಕಾಲ ಮೃಗಾಲಯ ವಿಕ್ಷಣೆಗೆ ಲಭ್ಯವಿರಲಿದೆ.

    ಸೋಮವಾರ ಬೆಳಗ್ಗೆ 10ಕ್ಕೆ ಮೃಗಾಲಯ ತೆರೆಯಲಿದ್ದು, ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಮೃಗಾಲಯ ಪುನರಾರಂಭವಾಗಲಿದೆ. ಮಂಗಳವಾರದಿಂದ ಎಂದಿನಂತೆ ಬೆಳಗ್ಗೆ 8.30ಕ್ಕೆ ಆರಂಭವಾಗಲಿದೆ.

    ಬಂಡೀಪುರ ಸಫಾರಿ ಆರಂಭ
    ಕಳೆದ 85 ದಿನಗಳಿಂದ ಬಂದ್ ಆಗಿದ್ದ ಬಂಡೀಪುರ ಸಫಾರಿ ಸಹ ಪುರಾರಂಭವಾಗುತ್ತಿದೆ. ಜೂನ್ 8ರಿಂದ ಬಂಡೀಪುರ ಸಫಾರಿ ಆರಂಭವಾಗುವ ಸಾಧ್ಯತೆ ಇದೆ. ಈ ಮೂಲಕ ಪ್ರವಾಸಿಗರಿಗೆ ವನ್ಯಜೀವಿ ದರ್ಶನ ಭಾಗ್ಯ ಸಿಗಲಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್‍ಟಿಸಿಎ) ಹಾಗೂ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಡ್ಡಾಯವಾಗಿದ್ದು, ಶೇ.50ರಷ್ಟು ಸೀಟುಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಎಂಟು ಬಸ್, ಐದು ಜಿಪ್ಸಿ ವಾಹನ ಸಂಚಾರಕ್ಕೆ ಅನುಮತಿ ದೊರೆತಿದ್ದು, ಬಸ್ ಟಿಕೆಟ್ ದರ ಒಬ್ಬರಿಗೆ 350 ರೂ., ಒಂದು ಜಿಪ್ಸಿ ವಾಹನಕ್ಕೆ 3,500 ರೂ. ನಿಗದಿ ಮಾಡಲಾಗಿದೆ. ಲಾಕ್‍ಡೌನ್ ನಿಂದಾಗಿ ಸಫಾರಿ ಬಂದ್ ಆಗಿದ್ದಕ್ಕೆ ಮೂರುವರೆ ಕೋಟಿ ರೂ. ನಷ್ಟ ಸಂಭವಿಸಿದೆಯಂತೆ. ಇದೀಗ ಪುರಾರಂಭವಾಗುತ್ತಿದ್ದು, ಪ್ರವಾಸಿಗರು ಪ್ರಾಣಿಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ.

  • ಕೊರೊನಾ ಎಫೆಕ್ಟ್- ಬಂಡೀಪುರ ಸಫಾರಿ, ಪಣಂಬೂರು ಬೀಚ್ ಬಂದ್

    ಕೊರೊನಾ ಎಫೆಕ್ಟ್- ಬಂಡೀಪುರ ಸಫಾರಿ, ಪಣಂಬೂರು ಬೀಚ್ ಬಂದ್

    ಚಾಮರಾಜನಗರ/ಮಂಗಳೂರು: ರಾಜ್ಯದ ಪ್ರಮುಖ ಹುಲಿ ಸಂರಕ್ಷಿತಾರಣ್ಯ ಪ್ರವಾಸಿಗರಿಲ್ಲದೆ ಬಣಗುಡುತ್ತಿರುವ ದೃಶ್ಯ ಸಾಮಾನ್ಯವಾಗಿದ್ದು, ಇದೀಗ ಪ್ರವಾಸಿಗರಿಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ. ಇತ್ತ ಮಂಗಳೂರಿನ ಪಣಂಬೂರು ಬೀಚ್ ಸಹ ಜನರಿಲ್ಲದೆ ಬಿಕೋ ಎನ್ನುತ್ತಿದೆ.

    ಕೊರೊನಾ ಎಮರ್ಜೆನ್ಸಿ ಹಿನ್ನೆಲೆಯಲ್ಲಿ ಬಂಡೀಪುರಕ್ಕೆ ಆಗಮಿಸುವ ಪ್ರವಾಸಿಗರಿಗೆ ನಿಷೇಧ ಹೇರಿ ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ. ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬಂಡೀಪುರದಲ್ಲಿ ಜನರಿಲ್ಲದೇ ಖಾಲಿ ಹೊಡೆಯುತ್ತಿದೆ.

    ಬಂಡೀಪುರವಷ್ಟೇ ಅಲ್ಲದೆ ಕೆ.ಗುಡಿ ಸಫಾರಿ ಕೂಡ ಬಂದ್ ಮಾಡಲಾಗಿದೆ. ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಮೇಲುಕಾಮನಹಳ್ಳಿ ಬಳಿಯ ಸಫಾರಿ ಕೇಂದ್ರ ಬಂದ್ ಮಾಡಲಾಗಿದೆ. ಬಂಡೀಪುರ ವ್ಯಾಪ್ತಿಯಲ್ಲಿ ಬರುವ ರೆಸಾರ್ಟ್, ಹೋಟೆಲ್‍ಗಳು ಕೂಡ ಬಂದ್ ಆಗಿದ್ದು ದೇಶ, ವಿದೇಶದಿಂದ ಬರುವ ಪ್ರವಾಸಿಗರ ಮೇಲೆ ಹದ್ದಿನ ಕಣ್ಣೀಡಲಾಗಿದೆ.

    ಬೀಕೋ ಎನ್ನುತ್ತಿವೆ ಬೀಚ್‍ಗಳು

    ರಾಜ್ಯದ ಕರಾವಳಿಯ ಪ್ರಮುಖ ಪ್ರವಾಸಿ ಕೇಂದ್ರಗಳಿಗೂ ಕೊರೊನಾ ಭೀತಿ ಎದುರಾಗಿದ್ದು, ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ. ಭಾನುವಾರ ಪ್ರವಾಸಿಗರಿಂದ ತುಂಬಿರುತ್ತಿದ್ದ ಬೀಚ್ ಇಂದು ಬಿಕೋ ಎನ್ನುತ್ತಿದೆ. ಬೀಚ್ ಪಕ್ಕದ ಹೋಟೆಲ್ ಗಳೂ ಪ್ರವಾಸಿಗರಿಲ್ಲದೆ ಖಾಲಿ ಹೊಡೆಯುತ್ತಿವೆ. ಪಣಂಬೂರು ಬೀಚ್ ಮಾತ್ರವಲ್ಲದೆ ಕಡಲ ತೀರದ ಸೋಮೇಶ್ವರ ಬೀಚ್, ಉಳ್ಳಾಲ ಬೀಚ್, ತಣ್ಣೀರು ಬಾವಿ ಬೀಚ್, ಸುರತ್ಕಲ್ ಬೀಚ್, ಸಸಿಹಿತ್ಲು ಬೀಚ್ ಸೇರಿದಂತೆ ಎಲ್ಲ ಬೀಚ್‍ಗಳು ಪ್ರವಾಸಿಗರಿಲ್ಲದೆ ಬೀಕೋ ಎನ್ನುತ್ತಿವೆ.

  • ಸಫಾರಿಗೆ ಮುಗಿಬಿದ್ದ ಪ್ರವಾಸಿಗರು – ಜಿಪ್ಸಿಗೆ ಎಲ್ಲಿಲ್ಲದ ಬೇಡಿಕೆ

    ಸಫಾರಿಗೆ ಮುಗಿಬಿದ್ದ ಪ್ರವಾಸಿಗರು – ಜಿಪ್ಸಿಗೆ ಎಲ್ಲಿಲ್ಲದ ಬೇಡಿಕೆ

    ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಬಂಡೀಪುರ, ಕೆ ಗುಡಿಯಲ್ಲಿ ಸಫಾರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಅದರಲ್ಲೂ ಜಿಪ್ಸಿಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ.

    ಬಂಡೀಪುರ, ಕೆ ಗುಡಿಯಲ್ಲಿ ಸಫಾರಿ ವೀಕ್ಷಣೆಗೆ ಬೆಳಗ್ಗೆಯಿಂದಲೆ ಜನರು ಮುಗಿಬಿದ್ದಿದ್ದಾರೆ. ಅದರಲ್ಲೂ ಮಿನಿ ಬಸ್‍ನಲ್ಲಿ ಸಫಾರಿ ವೀಕ್ಷಣೆಗೆ ತೆರಳುವ ಬದಲೂ ಜಿಪ್ಸಿ ವಾಹನಗಳಿಗೆ ಬೇಡಿಕೆ ಇಡುತ್ತಿದ್ದಾರೆ. ಜಿಪ್ಸಿ ವಾಹನಗಳ ಸಂಖ್ಯೆ ಕಡಿಮೆ ಇರುವುದರಿಂದ ಬೇಡಿಕೆಗೆ ಸ್ಪಂದಿಸಲು ಅರಣ್ಯ ಇಲಾಖೆಯಿಂದ ಸಾಧ್ಯವಾಗುತ್ತಿಲ್ಲ.

    ಅಲ್ಲದೆ ಮುಂದಿನ ವರ್ಷದ ಜನವರಿ 5ರವರೆಗೆ ಕೂಡ ಮುಂಗಡವಾಗಿ ಜಿಪ್ಸಿಯನ್ನು ಬುಕ್ ಮಾಡಲಾಗಿದೆ. ಇದರಿಂದ ಕೆಲವರು ನಿರಾಸೆಗೆ ಒಳಗಾಗಿದ್ದು, ಹೇಗದರೂ ಮಾಡಿ ಜಿಪ್ಸಿ ಸಿಕ್ಕಿದರೆ ಸಾಕಪ್ಪಾ ಎಂದು ಹೇಳುತ್ತಿದ್ದಾರೆ.

    ಇತ್ತ ಜಿಲ್ಲೆಯಲ್ಲಿ ಮೂರು ಹುಲಿ ಸಂರಕ್ಷಿತಾರಣ್ಯ ಪ್ರದೇಶವಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯ, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ, ಮಲೆ ಮಹದೇಶ್ವರ ಸಂರಕ್ಷಿತಾರಣ್ಯವನ್ನು ಒಳಗೊಂಡಿದೆ. ಈ ಮೂರು ಕೂಡ ಹುಲಿ ಸಂರಕ್ಷಿತಾರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದೆ.

  • ಬಂಡೀಪುರ, ಬಿಆರ್‌ಟಿ ಕಾಟೇಜ್ ಹೌಸ್‍ಫುಲ್ – ವನ್ಯಜೀವಿಗಳ ನಡ್ವೆ ವರ್ಷಾಚರಣೆಗೆ ಬ್ರೇಕ್

    ಬಂಡೀಪುರ, ಬಿಆರ್‌ಟಿ ಕಾಟೇಜ್ ಹೌಸ್‍ಫುಲ್ – ವನ್ಯಜೀವಿಗಳ ನಡ್ವೆ ವರ್ಷಾಚರಣೆಗೆ ಬ್ರೇಕ್

    ಚಾಮರಾಜನಗರ: ದೇಶದಲ್ಲಿಯೇ ಅತೀ ಹೆಚ್ಚು ಹುಲಿಗಳನ್ನು ಹೊಂದಿರುವ ಜಿಲ್ಲೆಯಾಗಿ ಪೂರ್ವ ಮತ್ತು ಪಶ್ಚಿಮ ಘಟ್ಟವನ್ನ ಬೆಸೆಯುವ ಸೇತುವೆಯಂತಿರುವ, ವನ್ಯಜೀವಿ ಪ್ರಿಯರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಬಂಡೀಪುರದಲ್ಲಿ ವರ್ಚಾಚರಣೆಗೆ ಬ್ರೇಕ್ ಬಿದ್ದಿದೆ.

    ವರ್ಷಾಂತ್ಯದಲ್ಲಿ ಬಂಡೀಪುರ ಅರಣ್ಯದಲ್ಲಿ ಸಮಯ ಕಳೆಯುವ ಕಾರಣ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಇರುವ ಕಾಟೇಜ್ಸ್ ಬುಕ್ ಮಾಡುತ್ತಿದ್ದು, ಈಗಾಗಲೇ ಎಲ್ಲಾ ಕಾಟೇಜ್ ಬುಕ್ ಆಗಿದೆ. ಅರಣ್ಯದ ಮಧ್ಯೆ ಹೊಸ ವರ್ಷಾಚರಣೆ ಮಾಡಲು ಆಗಮಿಸುವವರಿಗೆ ಕಠಿಣ ಕಾನೂನು ಎದುರಿಸಬೇಕಾಗದ ಎಚ್ಚರಿಕೆಯನ್ನು ಅರಣ್ಯ ಇಲಾಖೆ ಪ್ರವಾಸಿಗರಿಗೆ ಹೇಳಿದೆ.

    ಹೊಸ ವರ್ಷಾಚರಣೆಗೆ ಇನ್ನೂ 1 ವಾರ ಇರುವಾಗಲೇ ಬಂಡೀಪುರ ಮತ್ತು ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇರುವ ವಸತಿಗೃಹಗಳು ಹೌಸ್ ಫುಲ್ ಆಗಿವೆ. ಇಡೀ ದೇಶದಲ್ಲಿಯೇ ಒಂದೇ ಜಿಲ್ಲೆಯಲ್ಲಿ 2 ಹುಲಿ ಸಂರಕ್ಷಿತ ಪ್ರದೇಶ, 2 ವನ್ಯಜೀವಿ ವಿಭಾಗಗಳಿದ್ದು, ಹೀಗಾಗಿ ಚಾಮರಾಜನಗರ ಜಿಲ್ಲೆಯ ದೇಶದಲ್ಲಿಯೇ ವನ್ಯಜೀವಿ ಪ್ರಿಯರ ಗಮನ ಸೆಳೆದಿದೆ.

    ಬಂಡೀಪುರದಲ್ಲಿ ಇರುವ ಕೋಕಿಲ, ವನಸುಮ, ವನಸಿರಿ, ವನ ರಂಜಿನಿ ಮತ್ತು ಅತಿಗಣ್ಯ ವ್ಯಕ್ತಿಗಳಿಗೆ ಮೀಸಲಾಗಿರುವ ಗಜೇಂದ್ರ ವಸತಿಗೃಹ ಕೂಡ ಬುಕ್ಕಿಂಗ್ ಆಗಿದೆ. ಹಸಿರು ಕಾನನದ ಮಧ್ಯೆ ಇರುವ ಕಾಟೇಜ್ಸ್ ಆಕರ್ಷಣೀಯವಾಗಿರುವುದು ಒಂದು ಕಡೆಯಾದರೆ, ಬೆಳಗ್ಗೆ ಮತ್ತು ಸಂಜೆ ವೇಳೆ ವನ್ಯಜೀವಿಗಳನ್ನ ನೋಡುವ ಭಾಗ್ಯ ಪ್ರವಾಸಿಗರಿಗೆ ಸಿಗಲಿದೆ. ಹೀಗಾಗಿ ಕಳೆದ ವರ್ಷ ಕಾಟೇಜ್ ಬುಕ್ ಮಾಡಲು ಹೋಗಿ ಸಿಗದೇ ಇದ್ದವರು ಈ ಬಾರಿ ಒಂದು ತಿಂಗಳ ಮುಂಚೆಯೇ ಬುಕ್ ಮಾಡಿದ್ದಾರೆ.

    ನವೆಂಬರ್ ತಿಂಗಳ ಅಂತ್ಯದವರೆಗೂ ಸುರಿದ ಮಳೆ ಇಡೀ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದವನ್ನು ಹಸಿರಿನಿಂದ ಕಂಗೊಳಿಸುವಂತೆ ಮಾಡಿದೆ. ಅಲ್ಲದೇ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಗಡಿಯಲ್ಲಿಯೇ ಬಂಡೀಪುರ ಇರುವುದರಿಂದ ತಮಿಳುನಾಡಿನ ಊಟಿ, ಕೇರಳ ಸೇರಿದಂತೆ ಇತರೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಸಾಗರೋಪಾದಿ ಬರುತ್ತಿದ್ದಾರೆ. ನೂತನ ವರ್ಷಾಚರಣೆಗೆ ಮಹಾರಾಷ್ಟ್ರ, ಒರಿಸ್ಸಾ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸಲಿದ್ದಾರೆ. ಬರುವ ಪ್ರವಾಸಿಗರಿಗೆ ಸಫಾರಿಗೆ ನಿರಾಸೆಯಾಗಂತೆ ಅರಣ್ಯ ಇಲಾಖೆ ವ್ಯವಸ್ಥೆ ಮಾಡಿದೆ.

    ವರ್ಷಾಂತ್ಯದ ವೇಳೆ ಬರುವ ಪ್ರವಾಸಿಗರನ್ನ ಸ್ವಾಗತಿಸಲು ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿಗಳು ಸಿದ್ಧರಾಗಿದ್ದಾರೆ. ಅದೇ ರೀತಿ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. ಬಿಳಿರಿಗಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶ ಅತೀ ಸೂಕ್ಷ್ಮವಾದ ಪ್ರದೇಶ. ಬಿಆರ್ ಟಿ ಹುಲಿ ಸಂರಕ್ಷಿತ ಮಧ್ಯೆ ಕ್ಯಾತೇ ದೇವರ ಗುಡಿ ಮತ್ತು ಬಿಳಿಗಿರಿ ರಂಗನಾಥ ಬೆಟ್ಟದಲ್ಲಿ ಅರಣ್ಯ ಇಲಾಖೆ ಸೇರಿದ ವಸತಿ ಗೃಹಗಳಿವೆ. ಒಟ್ಟು 8 ಕಾಟೇಜ್ಸ್ ಇದ್ದು, ಎಲ್ಲವೂ ಕೂಡ ಸಂಪೂರ್ಣವಾಗಿ ಭರ್ತಿಯಾಗಿವೆ. ಬರುವ ಪ್ರವಾಸಿಗರು ಹೊಸ ವರ್ಷ ಸ್ವಾಗತ ಮಾಡುತ್ತೇವೆ. ಬರುವ ಪ್ರವಾಸಿಗರು ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ ಕೈಗೊಳ್ಳುವುದು ಖಚಿತ. ವಸತಿಗೃಹ ಪಡೆದ ಪ್ರವಾಸಿಗರು ಇತಿಮಿತಿಯಲ್ಲಿ ಇರಬೇಕು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

  • ಸಫಾರಿ ವೇಳೆ ಪ್ರವಾಸಿಗರನ್ನು ಬೆನ್ನಟ್ಟಿದ ಹುಲಿ – ವಿಡಿಯೋ ವೈರಲ್

    ಸಫಾರಿ ವೇಳೆ ಪ್ರವಾಸಿಗರನ್ನು ಬೆನ್ನಟ್ಟಿದ ಹುಲಿ – ವಿಡಿಯೋ ವೈರಲ್

    – ವಾಹನದಲ್ಲಿದ್ದ ಮಹಿಳೆ ಕಕ್ಕಾಬಿಕ್ಕಿ

    ಜೈಪುರ: ಹುಲಿಯೊಂದು ಪ್ರವಾಸಿಗರನ್ನು ಬೆನ್ನಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಘಟನೆ ನಡೆದಿದ್ದು, ಸುಲ್ತಾನ ಎಂಬ ಹುಲಿ ಪ್ರವಾಸಿಗರ ವಾಹನವನ್ನು ಬೆನ್ನಟ್ಟಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಆದರೆ ಪ್ರಾಣಿ ಪ್ರಿಯರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಹುಲಿ ವಾಹನವನ್ನು ಬೆನ್ನಟ್ಟಿಲ್ಲ ಬದಲಿಗೆ ಆಟವಾಡುತ್ತಿದೆ ಎಂದು ಹೇಳಿದ್ದಾರೆ.

    ಕಾಡು ಪ್ರಾಣಿಗಳು ತಮ್ಮ ವಾಸಸ್ಥಾನವನ್ನು ಕಳೆದುಕೊಂಡಿರುವುದರಿಂದ ಈ ರೀತಿ ಮಾಡುತ್ತಿವೆ ಎಂದು ಕೆಲವರು ಹೇಳಿದ್ದಾರೆ. ಆದರೆ ವರದಿಯ ಪ್ರಕಾರ ರಾಷ್ಟ್ರೀಯ ಉದ್ಯಾನ ಹೆಚ್ಚು ಹುಲಿಗಳ ತಾಣವಾಗಿದೆ. ತನ್ನ ಸಾಮರ್ಥ್ಯಕ್ಕಿಂತಲೂ ಹೆಚ್ಚು ಹುಲಿಗಳನ್ನು ಹೊಂದಿದೆ ಎಂದು ವರದಿಯಾಗಿದೆ.

    ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕಿನಲ್ಲಿ ಸಹ ಈ ಹಿಂದೆ ಸಿಂಹವೊಂದು ಸಫಾರಿಗೆ ಹೋದವರನ್ನು ಅಟ್ಟಾಡಿಸಿಕೊಂಡು ಬಂದಿತ್ತು. ಇದನ್ನು ಕಂಡ ಯುವಕರು ನಮಗೆ ಸಫಾರಿ ಸಾಕು ನಮ್ಮನ್ನು ಬಿಟ್ಟು ಬಿಡಿ ಎಂದು ಚಾಲಕನಲ್ಲಿ ಗೋಗರೆದಿದ್ದರು. ಈ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

    ಅಲ್ಲದೆ ಇತ್ತೀಚೆಗೆ ಮಹಾರಾಷ್ಟ್ರದ ಚಂದ್ರಾಪುರದ ಅಂಧೇರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಪ್ರವಾಸಿಗರ ವಾಹನವನ್ನು ಬೆನ್ನಟ್ಟಿತ್ತು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಚಂದ್ರಾಪುರದ ಸಂರಕ್ಷಿತ ಪ್ರದೇಶದಲ್ಲಿ ಇದೇ ಮೊದಲಲ್ಲ. ಹಲವು ಬಾರಿ ಹುಲಿಗಳು ಪ್ರವಾಸಿ ವಾಹನವನ್ನು ಬೆನ್ನಟ್ಟಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

  • ಸಫಾರಿಗೆ ಹೋದವರನ್ನು ಅಟ್ಟಾಡಿಸಿಕೊಂಡು ಬಂದ ಸಿಂಹ

    ಸಫಾರಿಗೆ ಹೋದವರನ್ನು ಅಟ್ಟಾಡಿಸಿಕೊಂಡು ಬಂದ ಸಿಂಹ

    ಬಳ್ಳಾರಿ: ಸಫಾರಿಗೆ ಹೋದವರನ್ನು ಸಿಂಹವೊಂದು ಅಟ್ಟಾಡಿಸಿಕೊಂಡು ಬಂದಿರುವ ಘಟನೆ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕಿನಲ್ಲಿ ನಡೆದಿದೆ.

    ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕ್‍ಗೆ ಕೆಲ ಯುವಕರು ಸಫಾರಿಗೆಂದು ಹೋಗಿದ್ದಾರೆ. ಈ ವೇಳೆ ಸಿಂಹವೊಂದು ಸಫಾರಿ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದೆ.

    ಈ ಸಮಯದಲ್ಲಿ ಸಿಂಹ ಹಿಂಬಾಲಿಸಿಕೊಂಡು ಬಂದಿದ್ದರಿಂದ ಕಕ್ಕಾಬಿಕ್ಕಿಯಾದ ಪ್ರವಾಸಿಗರು ಸಫಾರಿ ಸಾಕು ನಮ್ಮನ್ನು ಬಿಟ್ಟುಬಿಡಿ ಎಂದು ವಾಹನ ಚಾಲಕನ ಬಳಿ ಕೇಳಿಕೊಂಡಿದ್ದಾರೆ. ಸಿಂಹ ವಾಹನವನ್ನು ಹಿಂಬಾಲಿಸಿ ಬಂದ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್‍ನಲ್ಲಿ ವಿಡಿಯೋ ಮಾಡಿದ್ದಾರೆ.

    https://www.youtube.com/watch?v=kIZdh15Kzs4

  • ಪ್ರವಾಸಿಗರ ವಾಹನವನ್ನು ಅಟ್ಟಾಡಿಸಿದ ಆನೆ

    ಪ್ರವಾಸಿಗರ ವಾಹನವನ್ನು ಅಟ್ಟಾಡಿಸಿದ ಆನೆ

    ಚಾಮರಾಜನಗರ: ತನ್ನ ಮರಿಯನ್ನು ಕರೆದುಕೊಂಡು ಹೋಗಲು ಬಂದಿದ್ದಾರೆ ಎಂದು ಕೋಪಗೊಂಡು ಆನೆಯೊಂದು ಪ್ರವಾಸಿಗರ ವಾಹನದ ಮೇಲೆ ದಾಳಿ ನಡೆಸಲು ಮುಂದಾದ ಘಟನೆ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ.

    ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ತನ್ನ ಮರಿ ಆನೆಯೊಂದಿಗೆ ಎರಡು ಆನೆಗಳು ಕೆರೆಯಲ್ಲಿ ನೀರು ಕುಡಿದು ಸ್ವಸ್ಥಾನಕ್ಕೆ ಹಿಂದಿರುಗುತ್ತಿದ್ದವು. ಬಳಿಕ ರಸ್ತೆ ದಾಟುತ್ತಿದ್ದ ವೇಳೆ ತವೇರಾ ವಾಹನದಲ್ಲಿ ಅರಣ್ಯದೊಳಗೆ ಬಂದಂತಹ ಪ್ರವಾಸಿಗರು ಆನೆಗಳ ಫೋಟೋ ತೆಗೆಯಲು ವಾಹನವನ್ನು ನಿಲುಗಡೆ ಮಾಡಿದರು ಎನ್ನಲಾಗಿದೆ.

    ಪ್ರವಾಸಿಗರು ಫೋಟೋ ಕ್ಲಿಕ್ಕಿಸುತ್ತಿರುವುದನ್ನು ನೋಡಿ ಕೋಪಗೊಂಡ ಆನೆಗಳು ತನ್ನ ಮರಿಯನ್ನು ಕರೆದುಕೊಂಡು ಹೋಗಲು ಬಂದಿದ್ದಾರೆ ಎಂದು ತಿಳಿಯಿತು. ಬಳಿಕ ಪ್ರವಾಸಿಗರ ವಾಹನವನ್ನು ಅಟ್ಟಾಡಿಸಿಕೊಂಡು ಹೋಗಿದೆ. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ.

    ಈ ದೃಶ್ಯ ಸಫಾರಿ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

    https://www.youtube.com/watch?v=6C5_3jlZq7U

  • ಒಂದೇ ಬಾರಿಗೆ ನಾಲ್ಕು ಹುಲಿಗಳ ದರ್ಶನ

    ಒಂದೇ ಬಾರಿಗೆ ನಾಲ್ಕು ಹುಲಿಗಳ ದರ್ಶನ

    ಮೈಸೂರು: ನಗರದ ನಾಗರಹೊಳೆಯಲ್ಲಿ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿಗಳ ಹಿಂಡಿನ ದರ್ಶನವಾಗಿದೆ.

    ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ಕು ಹುಲಿಗಳು ಒಂದೇ ಬಾರಿಗೆ ಪ್ರವಾಸಿಗರಿಗೆ ಎದುರಾಗಿವೆ. ಮೈಸೂರು ಜಿಲ್ಲೆಯ ಎಚ್.ಡಿ ಕೋಟೆಯ ನಾಗರಹೊಳೆ ವ್ಯಾಪ್ತಿಯ ದಮ್ಮನಕಟ್ಟೆ ಸಫಾರಿ ರೇಂಜ್‍ನಲ್ಲಿ ಹೀಗೆ ಹುಲಿಗಳ ಹಿಂಡು ಕಾಣಿಸಿದೆ.

    4 ಹುಲಿಗಳನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ಇತ್ತೀಚೆಗೆ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹುಲಿಗಳು ಕಂಡು ಬರುತ್ತಿದ್ದು ಹುಲಿಗಳನ್ನು ಕಾಣಲೆಂದು ಸಫಾರಿಗೆ ಹೆಚ್ಚು ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದಾರೆ.

    ಈ ಹಿಂದೆ ಚಾಮರಾಜನಗರದ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಪ್ರವಾಸಿಗರಿಗೆ ಒಂದೇ ಕಡೆ ಮೂರು ಹುಲಿಗಳ ದರ್ಶನವಾಗಿತ್ತು. ಎರಡು ಮರಿ ಹುಲಿಗಳೊಂದಿಗೆ ತಾಯಿ ಹುಲಿ ದರ್ಶನವಾಗಿದ್ದು, ಸಫಾರಿಗೆ ಹೋದ ಪ್ರವಾಸಿಗರಿಗೆ ಸಖತ್ ಪೋಸ್ ನೀಡಿತ್ತು. ಹುಲಿಗಳು ಫೋಟೋಗೆ ಪೋಸ್ ಕೊಟ್ಟ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

  • ದೇವೇಗೌಡರ ಆಶೀರ್ವಾದದಿಂದ ಸರ್ಕಾರ 4 ವರ್ಷ ಇರುತ್ತೆ: ಸತೀಶ್ ಜಾರಕಿಹೊಳಿ

    ದೇವೇಗೌಡರ ಆಶೀರ್ವಾದದಿಂದ ಸರ್ಕಾರ 4 ವರ್ಷ ಇರುತ್ತೆ: ಸತೀಶ್ ಜಾರಕಿಹೊಳಿ

    ಬಳ್ಳಾರಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದದರಿಂದ ಸಮ್ಮಿಶ್ರ ಸರ್ಕಾರ ಇರುತ್ತದೆ. ದೇವೇಗೌಡರು ಪ್ರತಿಯೊಂದು ವಿಷಯವನ್ನು ಅರ್ಥಗರ್ಭಿತವಾಗಿ, ತಳಮಟ್ಟದಲ್ಲಿಯಿಂದಲೂ ಮಾಹಿತಿ ಪಡೆದು, ಪ್ರತಿಯೊಂದನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾತನಾಡುತ್ತಾರೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಲುನ ಸಾಧ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

    ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿ ಹುಲಿ ಮತ್ತು ಸಿಂಹಗಳ ಸಫಾರಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವರು, ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆ ನೆರೆವೇರಿದೆ. ಸದ್ಯಕ್ಕೆ ನಾಲ್ಕು ಹುಲಿ ಮತ್ತು ಸಿಂಹಗಳನ್ನು ತಂದು ಸಫಾರಿಯಲ್ಲಿ ಬಿಡಲಾಗಿದೆ. ಪ್ರತಿ ಜಿಲ್ಲೆಯಲ್ಲಿಯೂ ಜಿಯೋಲಾಜಿಕಲ್ ಪಾರ್ಕ್ ನಿರ್ಮಾಣ ಮಾಡಲು ಚಿಂತಿಸಲಾಗಿದೆ. ಈ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಶೀಘ್ರದಲ್ಲಿಯೇ ಬಳ್ಳಾರಿಯ ಕಿರು ಮೃಗಾಲಯವನ್ನು ಕಮಲಾಪುರಕ್ಕೆ ಶಿಫ್ಟ್ ಮಾಡಲಾಗುತ್ತದೆ ಎಂದು ತಿಳಿಸಿದರು.

    ಜಿಂದಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿದೆ. ಉಪಸಮಿತಿ ನೀಡುವ ವರದಿಯನ್ನಾಧರಿಸಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಇನ್ನು ಅನಿಲ್ ಲಾಡ್ ಮತ್ತು ಆನಂದ್ ಸಿಂಗ್ ಜಿಂದಾಲ್ ಕುರಿತ ಹೇಳಿಕೆಗಳು ವೈಯಕ್ತಿಕ. ಅವರಿಬ್ಬರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಹೇಳಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಸಫಾರಿ ಸೇವೆ ಸ್ಥಳಾಂತರ

    ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಸಫಾರಿ ಸೇವೆ ಸ್ಥಳಾಂತರ

    ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಫಾರಿ ಸೇವೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.

    ಮುಂದಿನ ತಿಂಗಳು ಜೂನ್ 2 ರಿಂದ ಸಫಾರಿ ಜಾಗ ಬದಲಾವಣೆ ಆಗಲಿದೆ. ಬಂಡಿಪುರದಿಂದ ಮೇಲುಕಾಮನಹಳ್ಳಿಗೆ ಸ್ಥಳಾಂತರ ಮಾಡಲಾಗುತ್ತಿದ್ದು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ಮೇಲುಕಾಮನಹಳ್ಳಿ ಬರುತ್ತದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಬೇರೆಡೆಗೆ ಸ್ಥಳಾಂತರ ಮಾಡಲಾಗುತ್ತಿದೆ.

    ಬಂಡೀಪುರದ ಕಾಡಿನ ಮಧ್ಯದಲ್ಲಿ ಹುಲಿಸಂರಕ್ಷಿತ ಪ್ರದೇಶದ ಸಫಾರಿ ಸೇವೆ ಇತ್ತು. ಇದರಿಂದ ಸಫಾರಿ ಮಾಡುವ ನೆಪದಲ್ಲಿ ಪ್ರವಾಸಿಗರು ಬಂದು ವಾಹನಗಳನ್ನು ಅತೀ ಹೆಚ್ಚಾಗಿ ಪಾರ್ಕಿಂಗ್ ಮಾಡುತ್ತಿದ್ದರು. ಇದರಿಂದ ಟ್ರಾಫಿಕ್ ಸಮಸ್ಯೆಯಾಗುತ್ತಿತ್ತು. ಇನ್ನೊಂದೆಡೆ ಪ್ರವಾಸಿಗರು ತಾವು ತಂದಿದ್ದ ಆಹಾರವನ್ನು ಪ್ರಾಣಿಗಳಿಗೆ ಎಸೆಯುವ ಮೂಲಕ ತೊಂದರೆ ಕೊಡುತ್ತಿದ್ದರು.

    ಅಷ್ಟೇ ಅಲ್ಲದೇ ಬಂಡೀಪುರದಲ್ಲಿ ಪ್ರಸ್ತುತ ಖಾಸಗಿ ವ್ಯಕ್ತಿಗಳು ಪರಿಸರ ಪ್ರವಾಸೋದ್ಯಮದ ಹೆಸರಿನಲ್ಲಿ ಸಫಾರಿ ಮಾಡುತ್ತಿದ್ದರು. ಇದಕ್ಕೆಲ್ಲ ನಿರ್ಬಂಧ ಹಾಕಲು ರಾಷ್ಟ್ರೀಯ ಹೆದ್ದಾರಿ 181ರ ಮಾರ್ಗದಲ್ಲಿರುವ ವಿಶೇಷ ಹುಲಿ ಸಂರಕ್ಷಣಾದಳ ಕ್ಯಾಂಪಸ್‍ಗೆ ಸ್ಥಳಾಂತರ ಮಾಡಲಾಗುತ್ತಿದೆ.