Tag: safari

  • ರಿಲ್ಯಾಕ್ಸ್ ಮೂಡ್‍ನಲ್ಲಿ ಚಾಲೆಂಜಿಂಗ್ ಸ್ಟಾರ್ – ಮೈಸೂರಿನ ಬ್ಯಾಕ್‌ವಾಟರ್‌ನಲ್ಲಿ ಫುಲ್ ರೌಂಡ್ಸ್

    ರಿಲ್ಯಾಕ್ಸ್ ಮೂಡ್‍ನಲ್ಲಿ ಚಾಲೆಂಜಿಂಗ್ ಸ್ಟಾರ್ – ಮೈಸೂರಿನ ಬ್ಯಾಕ್‌ವಾಟರ್‌ನಲ್ಲಿ ಫುಲ್ ರೌಂಡ್ಸ್

    ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಅರಣ್ಯ ಇಲಾಖೆ ರಾಯಭಾರಿಯಾಗಿರುವ ದರ್ಶನ್ ಮೈಸೂರು ಬ್ಯಾಕ್ ವಾಟರ್ ಫಾರೆಸ್ಟ್ ನಲ್ಲಿ ಸಫಾರಿಯಲ್ಲಿ ತೊಡಗಿದ್ದಾರೆ.

    ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಿರಂತರ ಪ್ರಚಾರ ನಡೆಸಿದ್ದ ದರ್ಶನ್ ಆ ಬಳಿಕ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಸಾಮಾನ್ಯವಾಗಿ ದರ್ಶನ್ ಬಿಡುವಿದ್ದಾಗೆಲ್ಲಾ ಕಾಡಿನಲ್ಲಿ ಕಾಲ ಕಳೆಯುತ್ತಾರೆ. ಇದೀಗ ಕೆಲ ದಿನ ಶೂಟಿಂಗ್‍ನಿಂದ ಬ್ರೇಕ್ ಪಡೆದಿರುವ ಅವರು, ಕೆಲ ಆಪ್ತರು ಮತ್ತು ಫಾರೆಸ್ಟ್ ಇಲಾಖೆ ಅಧಿಕಾರಿಗಳ ಜೊತೆ ಮತ್ತೆ ಪ್ರಕೃತಿಯ ಮಡಿಲಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ವನ್ಯಜೀವಿ ಹಾಗೂ ಪ್ರಕೃತಿ ಫೋಟೋಗ್ರಾಫಿ ಬಗ್ಗೆ ದರ್ಶನ್ ಹೆಚ್ಚು ಆಸಕ್ತರಾಗಿದ್ದು, ಪ್ರಾಣಿ ಪಕ್ಷಿಗಳ ಅಂದವನ್ನ ಕ್ಯಾಮೆರಾದಲ್ಲಿ ಸೆರೆಹಿಡಿಯುವ ಹವ್ಯಾಸ ಹೊಂದಿದ್ದಾರೆ. ಈ ಹಿಂದೆ ತಾವು ಸೆರೆ ಹಿಡಿದ್ದ ಪ್ರಕೃತಿಯ ಅದ್ಭುತ ದೃಶ್ಯಗಳ ಫೋಟೋಗಳನ್ನು ಹರಾಜು ಹಾಕಿದ್ದರು. ಮಾರ್ಚ್ 3 ರಂದು ನಡೆದ ಈ ಹರಾಜಿನಲ್ಲಿ 3.75 ಲಕ್ಷ ರೂ. ಸಂಗ್ರಹಣೆಯಾಗಿತ್ತು. ಇದರಲ್ಲಿ ಬಂದ ಹಣವನ್ನು ದರ್ಶನ್ ಅರಣ್ಯ ಸಂರಕ್ಷಣೆಗೆ ಖರ್ಚು ಮಾಡುತ್ತೇನೆ ಎಂದು ತಿಳಿಸಿದ್ದರು.

  • ಕಳೆದ 8 ದಿನಗಳಿಂದ ಸ್ಥಗಿತಗೊಂಡಿದ್ದ ಬಂಡೀಪುರ ಸಫಾರಿ ಇಂದಿನಿಂದ ಆರಂಭ

    ಕಳೆದ 8 ದಿನಗಳಿಂದ ಸ್ಥಗಿತಗೊಂಡಿದ್ದ ಬಂಡೀಪುರ ಸಫಾರಿ ಇಂದಿನಿಂದ ಆರಂಭ

    ಚಾಮರಾಜನಗರ: ಕಾಡಿಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಬಂಡೀಪುರರ ಹುಲಿರಕ್ಷಿತಾರಣ್ಯದಲ್ಲಿ ಕಳೆದ ಎಂಟು ದಿನಗಳಿಂದ ಸ್ಥಗಿತಗೊಳಿಸಲಾಗಿದ್ದ ಸಫಾರಿ ಇಂದಿನಿಂದ ಪುನರಾರಂಭಗೊಂಡಿದೆ.

    ಒಂದು ವಾರ ಕಾಲ ಧಗಧಗನೆ ಹೊತ್ತಿ ಉರಿದ ಬೆಂಕಿ ಸತತ ಕಾರ್ಯಚರಣೆಯ ಫಲವಾಗಿ ಸಂಪೂರ್ಣವಾಗಿ ನಂದಿದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯಿಂದ ಸಫಾರಿ ಮತ್ತೆ ಆರಂಭಿಸಲಾಗಿದೆ. ಇನ್ನೊಂದೆಡೆ ಬಂಡೀಪುರದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಟ್ಟದ ತಪ್ಪಲಿನಿಂದ ಎಂದಿನಂತೆ ಕೆಎಸ್‍ಆರ್ ಟಿಸಿ ಬಸ್ ಗಳು ಸಂಚಾರ ಆರಂಭಿಸಿವೆ.

    ಬಂಡೀಪುರ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳೇ ಬೆಂಕಿ ಹಾಕಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಕೆಲ ಸಂಘಟನೆಗಳು ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕಿ ವಿದೇಶಗಳಿಂದ ಹಣ ಪಡೆಯಲು ಮುಂದಾಗಿದ್ರು ಎಂಬ ಶಂಕೆ ವ್ಯಕ್ತವಾಗಿದೆ.

    ಬಿದ್ದ ಜಾಗದ ಸ್ಯಾಟಲೈಟ್ ಪಿಕ್ಚರ್ ನಲ್ಲೂ ಕೂಡ ಇದು ಮಾನವನಿರ್ಮಿತ ಎಂದು ಬಯಲಾಗಿದೆ. ಗುಂಪು ಗುಂಪುಗಳಾಗಿ ಅಲ್ಲಲ್ಲಿ ಬೆಂಕಿ ಬಿದ್ದಿರೋದು ನೋಡಿದ್ರೆ ಇದು ಮಾನವ ನಿರ್ಮಿತ, ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರೋದು ಎಂದು ಅರಣ್ಯ ಇಲಾಖೆಯಿಂದ ಶಂಕೆ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಬಂಡೀಪುರ ಬೆಂಕಿ ಪ್ರಕರಣವನ್ನು ಉನ್ನತ ತನಿಖೆಗಾಗಿ ಆದೇಶಿಸುವ ಸಾಧ್ಯತೆಗಳಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಂದು ವಾರ ಬಂಡಿಪುರದಲ್ಲಿ ಸಫಾರಿ ಬಂದ್!

    ಒಂದು ವಾರ ಬಂಡಿಪುರದಲ್ಲಿ ಸಫಾರಿ ಬಂದ್!

    ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬೆಂಕಿ ಬಿದ್ದಿರುವ ಹಿನ್ನೆಲೆ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದ್ದು, ಪ್ರವಾಸಿಗರಿಗೆ ಈ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಬೆಂಕಿಯಿಂದ ಬಂಡಿಪುರ ಕಾಡಿನ ಸಫಾರಿ ಝೋನ್ ನಾಶವಾಗಿದೆ. ಆದರಿಂದ ಸಫಾರಿ ಝೋನ್‍ನಲ್ಲಿ ಸಫಾರಿ ಬಂದ್ ಮಾಡಲಾಗಿದೆ. ನೂರಾರು ಪ್ರವಾಸಿಗರು ಸಫಾರಿಗಾಗಿ ಪ್ರತಿ ನಿತ್ಯ ಬಂಡಿಪುರಕ್ಕೆ ಬರುತ್ತಿದ್ದರು. ಸಫಾರಿಯಿಂದ ತಿಂಗಳಿಗೆ ಬಂಡಿಪುರದಲ್ಲಿ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿತ್ತು. ಆದ್ರೆ ಕಳೆದ ನಾಲ್ಕೈದು ದಿನಗಳಿಂದ ಅರಣ್ಯದಲ್ಲಿ ಹೊತ್ತಿಕೊಂಡಿರುವ ಕಾಡ್ಗಿಚ್ಚಿನಿಂದ ಪ್ರವಾಸಿಗರಿಲ್ಲದೆ ಬಂಡಿಪುರ ಬಿಕೋ ಎನ್ನುತ್ತಿದೆ.

    ಕಾಡ್ಗಿಚ್ಚಿನಿಂದ ಬಂಡಿಪುರದ ಸುಮಾರು 5 ಸಾವಿರ ಎಕರೆಗೂ ಅಧಿಕ ಅರಣ್ಯ ಪ್ರದೇಶ ನಾಶವಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ಹರಸಾಹಸ ಪಟ್ಟಿದ್ದು, ಸದ್ಯ ಬೆಂಕಿ ಹತೋಟಿಗೆ ಬಂದಿದೆ ಎನ್ನಲಾಗುತ್ತಿದೆ.

    ಅಲ್ಲದೆ ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಹಿನ್ನೆಲೆ ಊಟಿ- ಗುಡ್ಲುಪೇಟೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೇ ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಊಟಿ- ಗುಡ್ಲುಪೇಟೆ ಸಂಚಾರಕ್ಕೆ ಅಣುವು ಮಾಡಿಕೊಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಸಕರ ಬಳಿಕ ರೆಸಾರ್ಟಿನಲ್ಲಿ ಸರ್ಕಾರಿ ಅಧಿಕಾರಿಗಳ ಮೋಜು ಮಸ್ತಿ

    ಶಾಸಕರ ಬಳಿಕ ರೆಸಾರ್ಟಿನಲ್ಲಿ ಸರ್ಕಾರಿ ಅಧಿಕಾರಿಗಳ ಮೋಜು ಮಸ್ತಿ

    – ಬರ ಸಭೆಗೆ ಬಂದ ಜಿಲ್ಲಾ ಪಂಚಾಯತ್ ಸಿಇಓಗಳ ಸಫಾರಿ

    ಮೈಸೂರು: ಇಷ್ಟು ದಿನ ಶಾಸಕರು ಮತದಾರರನ್ನು ಮರೆತು ರೆಸಾರ್ಟ್ ಸೇರಿಕೊಂಡು ಎಂಜಾಯ್ ಮಾಡಿ ಬಂದರು. ಇದೀಗ ಬರ ಸಭೆಗೆ ಬಂದಿದ್ದ ಸರ್ಕಾರಿ ಅಧಿಕಾರಿಗಳು ನಾವೇನು ಕಡಿಮೆ ಇಲ್ಲ ಎಂಬಂತೆ ಸಮಸ್ಯೆಗೆ ಪರಿಹಾರ ಹುಡುಕುವ ಬದಲು ಸಫಾರಿಯಲ್ಲಿ ಬ್ಯೂಸಿಯಾಗಿದ್ದಾರೆ. ಬರ ಸಭೆ ಹೆಸರಿನಲ್ಲಿ ಮೈಸೂರಿಗೆ ಬಂದಿದ್ದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಸಿಇಓಗಳು ಈಗ ನಾಗರಹೊಳೆ ಐಷಾರಾಮಿ ರೆಸಾರ್ಟ್ ನಲ್ಲಿ ತಂಗಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿದ್ದಾರೆ.

    ಹೆಚ್.ಡಿ.ಕೋಟೆ ತಾಲೂಕಿನ ಖಾರಪುರ ಸಮೀಪ ಇರುವ ಐಷಾರಾಮಿ ರೆಸಾರ್ಟ್ ನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಗಳು ತಂಗಿದ್ದು, ಸರ್ಕಾರಿ ಸ್ವಾಮ್ಯದ ಜಂಗಲ್ ಲಾಡ್ಜ್ ರೆಸಾರ್ಟ್ ನಲ್ಲಿ ಕಾರ್ಯಾಗಾರ ನಡೆಯುತ್ತಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ. ಅಧಿಕಾರಿಗಳು ಕಾರ್ಯಾಗಾರಕ್ಕೆ ಬಂದಿದ್ದಾರಾ ಅಥವಾ ಐಷಾರಾಮಿ ರೆಸಾರ್ಟ್‍ನಲ್ಲಿ ಉಳಿದು ಸಫಾರಿ ಮಾಡಲು ಬಂದಿದ್ದಾರಾ? ಎಂಬ ಪ್ರಶ್ನೆ ಮೂಡಿಸಿದೆ.

    ಬುಧವಾರ ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಸಭೆ ನಡೆಸಿದ್ದ ಸಿಇಓಗಳು ಇಂದು ಸಹ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲೇ ಕಾರ್ಯಾಗಾರ ಮುಂದುವರಿಸಬಹುದಿತ್ತು. ಆದ್ರೆ ಐಷಾರಾಮಿ ರೆಸಾರ್ಟ್ ವಾಸ್ತವ್ಯ ಯಾಕೆ ಬೇಕಾಗಿತ್ತು ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಫಿನಾಡಲ್ಲಿ ಸಂಸಾರ ಸಮೇತ ಕಾಣಿಸಿಕೊಂಡ ಗಜಪಡೆ- ವಿಡಿಯೋ ನೋಡಿ

    ಕಾಫಿನಾಡಲ್ಲಿ ಸಂಸಾರ ಸಮೇತ ಕಾಣಿಸಿಕೊಂಡ ಗಜಪಡೆ- ವಿಡಿಯೋ ನೋಡಿ

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗಜಪಡೆ ತನ್ನ ಸಂಸಾರ ಸಮೇತ ಕಾಣಿಸಿಕೊಂಡಿದೆ.

    ಚಿಕ್ಕಮಗಳೂರಿನ ಭದ್ರಾ ಅರಣ್ಯ ವ್ಯಾಪ್ತಿಯ ಮುತ್ತೋಡಿ ಅರಣ್ಯದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿದೆ. ಒಂದೇ ಜಾಗದಲ್ಲಿ ಸಲಗ, ಹೆಣ್ಣಾನೆ ಹಾಗೂ ಮರಿಗಳು ಗೋಚರವಾಗಿದೆ. ಪ್ರವಾಸಿಗರು ಸಫಾರಿಗೆ ಹೋದ ವೇಳೆ 10ಕ್ಕೂ ಹೆಚ್ಚು ಆನೆಗಳು ಕಾಣಿಸಿಕೊಂಡಿದೆ.

    ಆನೆಗಳ ಹಿಂಡು ಕಾಣಿಸುತ್ತಿದ್ದಂತೆ ಸ್ಥಳೀಯರೊಬ್ಬರು ತಮ್ಮ ಕ್ಯಾಮೆರಾದಲ್ಲಿ ಸಂಸಾರ ಸಮೇತ ಬಂದ ಗಜಪಡೆಯನ್ನು ಸೆರೆ ಹಿಡಿದಿದ್ದಾರೆ. ಈ ವೇಳೆ ಕಾಡೆಮ್ಮೆಯೂ ಆನೆಗಳ ಹಿಂಡಿನಲ್ಲಿ ಪ್ರತ್ಯಕ್ಷವಾಗಿದೆ.

    ಗಜಪಡೆಯ ಗಾಂಭೀರ್ಯ ಕಂಡು ಪ್ರವಾಸಿಗರು ಖುಷಿಯಾಗಿದ್ದಾರೆ. ಮುತ್ತೋಡಿ ಅರಣ್ಯದಲ್ಲಿ ಇತ್ತೀಚೆಗೆ ಆನೆಗಳ ಸಂಖ್ಯೆಯಲ್ಲಿ ಹೆಚ್ಚಳ ಹೆಚ್ಚಾಗುತ್ತಿದೆ. ಆನೆಗಳ ಹಿಂಡು ಕಾಣಿಸಿಕೊಂಡ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    https://www.youtube.com/watch?v=TlPr-RWDBDI

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಂಡೀಪುರದಲ್ಲಿ ಸಫಾರಿಗೆ ಹೋದಾಗ ದಾಳಿಗೆ ಮುಂದಾದ ಮರಿಯಾನೆ!

    ಬಂಡೀಪುರದಲ್ಲಿ ಸಫಾರಿಗೆ ಹೋದಾಗ ದಾಳಿಗೆ ಮುಂದಾದ ಮರಿಯಾನೆ!

    ಚಾಮರಾಜನಗರ: ಸಫಾರಿಗೆ ತೆರಳಿದ್ದ ವೇಳೆ ಕಾಡಾನೆ ದಾಳಿಯಿಂದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

    ಭಾನುವಾರ ಸಂಜೆ ಪ್ರವಾಸಿಗರು ಬಂಡೀಪುರಕ್ಕೆ ಬಂದಿದ್ದರು. ಹೀಗೆ ಬಂದವರು ಸಫಾರಿ ಹೋಗುತ್ತಿದ್ದ ವೇಳೆ ನಾಲ್ಕು ಆನೆಗಳಿದ್ದ ಗುಂಪೊಂದನ್ನು ನೋಡಿದ್ದಾರೆ. ಆದ್ರೆ ಪ್ರವಾಸಿಗರು ತಮ್ಮ ಪಾಡಿಗೆ ತಾವು ಹೋಗುತ್ತಿದ್ದರು. ಇದೇ ಸಂದರ್ಭದಲ್ಲಿ ಗುಂಪಿನಲ್ಲಿದ್ದ ಆನೆಗಳ ಪೈಕಿ ಮರಿಯಾನೆಯೊಂದು ಏಕಾಏಕಿ ದಾಳಿ ಮಾಡಲು ಮುಂದಾಗಿದೆ.

    ಅದೃಷ್ಟವಶಾತ್ ವಾಹನದ ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪಾರಾಗಿದ್ದಾರೆ. ಮರಿಯಾನೆಗೆ ಪ್ರವಾಸಿಗರು ತೊಂದರೆ ಮಾಡಬಹುದು ಎಂದು ಭಾವಿಸಿ ಈ ದಾಳಿ ಮಾಡಲು ಮುಂದಾಗಿರಬಹುದು ಎಂದು ಅಂದಾಜಿಸಲಾಗಿದೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=o9_ovJwjnIY

  • ಅರಣ್ಯದಲ್ಲಿ ಆನೆಗಳ ಜೊತೆ ಚಾಲೆಂಜಿಂಗ್ ಸ್ಟಾರ್ ರಿಲ್ಯಾಕ್ಸ್ ಮೂಡ್!

    ಅರಣ್ಯದಲ್ಲಿ ಆನೆಗಳ ಜೊತೆ ಚಾಲೆಂಜಿಂಗ್ ಸ್ಟಾರ್ ರಿಲ್ಯಾಕ್ಸ್ ಮೂಡ್!

    ಬೆಂಗಳೂರು: ಅರಣ್ಯ ಇಲಾಖೆಯ ಪ್ರಚಾರ ರಾಯಭಾರಿ ಆಗಿರುವ ನಟ ದರ್ಶನ್ ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿ ಕಾಲ ಕಳೆಯುತ್ತಿದ್ದಾರೆ.

    ಮೈಸೂರಿನ ಕಬಿನಿ ಹಿನ್ನೀರಿನ ಅರಣ್ಯದಲ್ಲಿ ಆನೆ ಜೊತೆ ಹಾಗೂ ಕಾಡಿನ ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದಾರೆ. ಇಂದು ಬೆಳಗ್ಗೆ ಸಫಾರಿಗೆ ಹೋದ ದರ್ಶನ್, ಕೈಯಲ್ಲಿ ಕ್ಯಾಮೆರಾ ಹಿಡಿದು ಪ್ರಕೃತಿ ಸೌಂದರ್ಯ ಹಾಗೂ ತಮಗೆ ಎದುರಾಗುವ ಕಾಡು ಪ್ರಾಣಿಗಳ ಫೋಟೋ ಕ್ಲಿಕ್ಕಿಸಿದರು.

    ಸದ್ಯ ಚಿತ್ರೀಕರಣದಿಂದ ದರ್ಶನ್ ಬ್ರೇಕ್ ತೆಗೆದುಕೊಂಡಿದ್ದಾರೆ. ದರ್ಶನ್ ಬಿಡುವಿನ ಸಮಯದಲ್ಲಿ ಮೈಸೂರಿನಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದು, ಕಳೆದ ಎರಡು ದಿನಗಳಿಂದ ಮೈಸೂರಿನಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

    ಪ್ರಾಣಿ ಪಕ್ಷಿಗಳನ್ನು ತುಂಬಾನೇ ಇಷ್ಟಪಡುವ ಅವರು, ಮೈಸೂರಿನ ತನ್ನ ಫಾರ್ಮ್ ಹೌಸ್‍ನಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿದ್ದಾರೆ. ಪ್ರಾಣಿ ಹಾಗೂ ಪರಿಸರ ಮೇಲಿರುವ ಪ್ರೀತಿಯನ್ನು ಕಂಡು ದರ್ಶನ್ ಅವರನ್ನು ಮೈಸೂರು ಮೃಗಾಲಯದ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಲಾಗಿದೆ.

    ದರ್ಶನ್ ತಮ್ಮದೇ ಫಾರ್ಮ್‍ನಲ್ಲಿ ಹಲವಾರು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಅಲ್ಲದೇ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹುಲಿ ಮತ್ತು ಆನೆ ಪ್ರಾಣಿಗಳನ್ನು ದತ್ತು ಪಡೆದು ಆ ಪ್ರಾಣಿಗಳ ಪಾಲನೆಗೆ ಸಹಾಯ ಮಾಡುತ್ತಿದ್ದಾರೆ.

    https://twitter.com/DarshanTrends/status/1011628239977000960

     

  • ವಿಂಡೋ ಗ್ಲಾಸ್ ಒಡೆದು ಕಾರಿನೊಳಗೆ ತಲೆದೂರಿಸಿ ಆಹಾರ ಪಾಕೆಟ್ ಕಿತ್ತುಕೊಂಡ ಜಿರಾಫೆ-ವಿಡಿಯೋ ನೋಡಿ

    ವಿಂಡೋ ಗ್ಲಾಸ್ ಒಡೆದು ಕಾರಿನೊಳಗೆ ತಲೆದೂರಿಸಿ ಆಹಾರ ಪಾಕೆಟ್ ಕಿತ್ತುಕೊಂಡ ಜಿರಾಫೆ-ವಿಡಿಯೋ ನೋಡಿ

    ಲಂಡನ್: ಸಫಾರಿ ಕಾರಿನ ಗ್ಲಾಸ್ ಒಡೆದ ಜಿರಾಫೆಯೊಂದು ಆಹಾರದ ಪೊಟ್ಟಣವನ್ನು ಎತ್ತಿಕೊಂಡಿರುವ ವಿಚಿತ್ರ ಘಟನೆ ಇಂಗ್ಲೆಂಡಿನ ವೆಸ್ಟ್ ಮಿಡ್‍ಲ್ಯಾಂಡ್ ನ ವರ್ಸೆಸ್ಟಶೈರ್ ನಲ್ಲಿ ಸೋಮವಾರ ನಡೆದಿದೆ.

    ಕಾರಿನಲ್ಲಿ ಸಫಾರಿ ಮಾಡುವ ವೇಳೆ ಎದುರಿಗೆ ಬಂದ ಜಿರಾಫೆಗೆ ಆಹಾರ ನೀಡಲು ದಂಪತಿ ಮುಂದಾಗಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಆಹಾರದ ಪೊಟ್ಟಣಗಳನ್ನು ನೋಡಿದ ಜಿರಾಫೆ ಕಾರಿನೊಳಗೆ ತನ್ನ ತಲೆಯನ್ನು ತೂರಿಸಿದೆ. ಇದ್ರಿಂದ ಭಯಗೊಂಡ ಕಾರಿನಲ್ಲಿದ್ದ ಮಹಿಳೆ ಕಾರಿನ ಕಿಟಕಿಯ ಗ್ಲಾಸ್ ಮೇಲೆರಿಸಲು ಪ್ರಯತ್ನಿಸಿದ್ದಾರೆ. ಜಿರಾಫೆಗೆ ತಗುಲಿದ ಗ್ಲಾಸ್ ಒಡೆದು ಚೂರು ಚೂರಾಗಿದೆ.

    ಈ ಎಲ್ಲ ದೃಶ್ಯಗಳನ್ನು ಪಕ್ಕದ ಸಫಾರಿ ಕಾರಿನಲ್ಲಿದ್ದ ಕೆಲವರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ಈ ಸಂಬಂಧ ಸಫಾರಿ ಉದ್ಯಾನದ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದ್ದು ಮತ್ತು ಜಿರಾಫೆಗೆ ಯಾವುದೇ ರೀತಿಯಲ್ಲಿ ಅಪಾಯಗಳಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

    ಪಾರ್ಕ್ ನಿಯಮವೇನು?: ವರ್ಸೆಸ್ಟಶೈರ್ ಪಾರ್ಕ್ ನಲ್ಲಿ ಸಫಾರಿ ಮಾಡುವ ಜನರು ಕಾರಿನ ಕಿಟಕಿಯ ಅರ್ಧ ಗ್ಲಾಸ್ ಮಾತ್ರ ತೆಗೆಯಬೇಕು. ಇದರ ಮೂಲಕವೇ ಸಫಾರಿಯಲ್ಲಿ ಎದುರಾಗುವ ಜಿರಾಫೆಗಳಿಗೆ ಆಹಾರವನ್ನು ನೀಡಬಹುದು ಎನ್ನುವ ನಿಯಮವಿದೆ.

    ದಂಪತಿ ಕಾರಿನ ವಿಂಡೋ ಪೂರ್ಣ ಪ್ರಮಾಣದಲ್ಲಿ ತೆರೆದು ಆಹಾರವನ್ನು ತೋರಿಸಿ ಜಿರಾಫೆಯನ್ನು ತಮ್ಮತ್ತ ಸೆಳೆದುಕೊಂಡಿದ್ದಾರೆ. ಜಿರಾಫೆ ತಮ್ಮ ಹತ್ರ ಬರುತ್ತಿದ್ದಂತೆ ದಂಪತಿ ನಗುತ್ತಾ ಅದಕ್ಕೆ ಆಹಾರ ನೀಡಲು ಮುಂದಾಗಿದ್ದಾರೆ. ಆಹಾರದ ಪೊಟ್ಟಣಕ್ಕೆ ಕಣ್ಣು ಹಾಕಿದ ಜಿರಾಫೆ ಕಾರಿನ ಒಳಗೆಯೇ ತಲೆಯನ್ನ ತೂರಿಸಿದ್ದರಿಂದ ಈ ಅವಘಡ ನಡೆದಿದೆ.

    ನಾನು ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಾ ಜಿರಾಫೆಯನ್ನ ನನ್ನ ಹತ್ತಿರ ಸೆಳೆಯುವ ಪ್ರಯತ್ನ ಮಾಡಿದೆ. ಆದರೆ ಜಿರಾಫೆ ಪಕ್ಕದ ಕಾರಿನತ್ತ ಹೋಯಿತು. ಕಾರಿನಲ್ಲಿದ್ದ ದಂಪತಿ ಜಿರಾಫೆ ತಮ್ಮತ್ತ ಬರುತ್ತಿದ್ದಂತೆ ಖುಷಿಯಿಂದ ನಗಲಾರಂಭಿಸಿದ್ರು. ಯಾವಾಗ ಜಿರಾಫೆ ತನ್ನ ಕತ್ತನ್ನ ಕಾರಿನೊಳಗೆ ಸೇರಿಸಿತೋ ಭಯಗೊಂಡ ದಂಪತಿ ಗ್ಲಾಸ್ ಮೇಲೆ ಮಾಡಿದ್ದರಿಂದ ಅದು ಚೂರು ಚೂರಾಯಿತು. ಗ್ಲಾಸ್ ಒಡೆದಿದ್ದರಿಂದ ಜಿರಾಫೆಗೆ ಯಾವುದೇ ಅಪಾಯವಾಗಿಲ್ಲ. ಆದ್ರೆ ಕಾರಿನಲ್ಲಿದ್ದವರಿಗೆ ತರಚಿದ ಗಾಯಗಳಾಗಿವೆ. ಕಾರಿನ ಗ್ಲಾಸ್ ತೆಗೆಯಬಾರದು ಎಂಬ ನಿಯಮವಿದ್ದರೂ ದಂಪತಿ ವಿಂಡೋ ಓಪನ್ ಮಾಡಿದ್ದು ಯಾಕೆ ಅಂತಾ ಗೊತ್ತಿಲ್ಲ ಎಂದು ವಿಡಿಯೋ ಮಾಡಿದ ವ್ಯಕ್ತಿ ಹೇಳಿದ್ದಾನೆ.

  • ಆಹಾರಕ್ಕಾಗಿ ಪ್ರವಾಸಿಗರ ಜೀಪ್ ಒಳಗಡೆ ಸೊಂಡಿಲು ಹಾಕಿದ ಆನೆ!- ಫೋಟೋಗಳಲ್ಲಿ ನೋಡಿ

    ಆಹಾರಕ್ಕಾಗಿ ಪ್ರವಾಸಿಗರ ಜೀಪ್ ಒಳಗಡೆ ಸೊಂಡಿಲು ಹಾಕಿದ ಆನೆ!- ಫೋಟೋಗಳಲ್ಲಿ ನೋಡಿ

    ಕೊಲಂಬೊ: ಆಹಾರಕ್ಕಾಗಿ ಆನೆಯೊಂದು ಸಫಾರಿಗೆ ಬಂದಿದ್ದ ಜೀಪನ್ನೇ ಅಡ್ಡಹಾಕಿ ಅದರೊಳಗೆ ಸೊಂಡಿಲು ಹಾಕುವ ಮೂಲಕ ಪ್ರವಾಸಿಗರನ್ನು ಭಯಭೀತಗೊಳಿಸಿದ ಅಚ್ಚರಿಯ ಘಟನೆಯೊಂದು ಶ್ರೀಲಂಕಾದಲ್ಲಿ ನಡೆದಿದೆ.

    ಯಲಾ ರಾಷ್ಟ್ರೀಯ ಉದ್ಯಾನವನದಲ್ಲಿ ಆನೆ ರಸ್ತೆಯ ಸಮೀಪ ಮರಗಳಿಂದ ಎಲೆ ಮತ್ತು ಹುಲ್ಲು ತಿನ್ನುತ್ತಿತ್ತು. ಈ ವೇಳೆ ಎದುರುಗಡೆಯಿಂದ ಜೀಪ್ ಬರುತ್ತಿರುವುದನ್ನು ನೋಡಿದೆ. ಅಲ್ಲದೇ ಜೀಪೊಳಗಡೆ ಆಹಾರವಿರುವುದು ಆನೆಯ ಕಣ್ಣಿಗೆ ಬಿದ್ದಿದೆ. ತಕ್ಷಣವೇ ಆನೆ ಜೀಪ್ ಬಳಿ ತೆರಳಿ ಅಡ್ಡಹಾಕಿ, ಅದರೊಳಗೆ ತನ್ನ ಸೊಂಡಿಲನ್ನು ಹಾಕಿದೆ. ಇದರಿಂದ ಭಯಗೊಂಡ ಚಾಲಕ ಆನೆಯಿಂದ ತಪ್ಪಿಸಿಕೊಳ್ಳಲೆಂದು ಜೀಪನ್ನು ವೇಗವಾಗಿ ಚಲಾಯಿಸಲು ಯತ್ನಿಸಿದ್ದಾನೆ. ಆದರೆ ಜೀಪಿನಲ್ಲಿ ಕುಳಿತಿದ್ದ ಕೆಲ ಪ್ರಯಾಣಿಕರು ಭಯದಿಂದಲೇ ಆನೆಯನ್ನು ಕಂಡು ಅದರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದರಿಂದ ಆನೆಗೆ ಮತ್ತಷ್ಟು ಕೋಪ ಬಂದಿದೆ. ಪರಿಣಾಮ ಓರ್ವ ಪ್ರವಾಸಿಗ ಆನೆಯಿಂದ ರಕ್ಷಿಸಿಕೊಳ್ಳಲೆಂದು ಜೀಪ್ ನಿಂದ ಹಾರಲು ರೆಡಿಯಾಗಿದ್ದಾನೆ.

    ಈ ಭಯಾನಕ ದೃಶ್ಯಗಳನ್ನು ರಷ್ಯಾದ ವನ್ಯಜೀವಿ ಫೋಟೋಗ್ರಾಫರ್ ಸರ್ಗಿ ಅವರು ತನ್ನ ಪತ್ನಿ ಜೊತೆ ಸಫಾರಿ ಹೋಗುತ್ತಿದ್ದ ಸೆರೆಹಿಡಿದಿದ್ದಾರೆ. ಆ ಘಟನೆ ಅದ್ಭುತ ಮತ್ತು ಭಯಹುಟ್ಟಿಸುವಂತಿತ್ತು ಅಂತ ಅವರು ಹೇಳಿದ್ದಾರೆ.

    ಆನೆ ಜೋರಾಗಿ ಘೀಳಿಡುತ್ತಿತ್ತು. ಅಲ್ಲದೇ ತನ್ನ ಕಾಲಿನಿಂದ ಜೀಪನ್ನು ಉರುಳಿಸಲು ಯತ್ನಿಸುತ್ತಿತ್ತು. ತನ್ನ ಕಾಲನ್ನು ಸಿಟ್ಟಿನಿಂದ ನೆಲಕ್ಕಿಡುವಾಗ ಧೂಳು ಬರುತಿತ್ತು. ಆದ್ರೆ ಜೀಪ್ ತುಂಬಾ ಪ್ರವಾಸಿಗರು ಇದ್ದುದರಿಂದ ಆನೆಗೆ ಜೀಪನ್ನು ಉರುಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಜೀಪನ್ನು ಆನೆ ತಿರುಗಿಸಲು ಆರಂಭಿಸಿತು. ಆಗ ಜೀಪಿನಲ್ಲಿದ್ದ ಪ್ರಯಾಣಿಕರು ಕಿರಿಚಾಡಲು ಶುರುಮಾಡಿದ್ದು, ಅವರ ಕಿರಿಚೋದು, ಅಳುವುದನ್ನು ಕೇಳಿದ ಸ್ಥಳೀಯ ನಿವಾಸಿಗಳ ಗುಂಪು ಸ್ಥಳಕ್ಕೆ ದೌಡಾಯಿಸಿತ್ತು. ನಂತರ ಆನೆಯನ್ನು ಓಡಿಸಿ ಅವರನ್ನು ರಕ್ಷಿಸಿದ್ದಾರೆ.

    ಈ ಆನೆ ಏಷ್ಯಾದ ಆನೆಯಾಗಿದ್ದು, ಇದು ಖಂಡದ ದೊಡ್ಡ ಸಸ್ತನಿಗಳಾಗಿವೆ. ಇದು 9 ಅಡಿ ಎತ್ತರವಾಗಿದ್ದು, ಐದು ಟನ್‍ಗಳಷ್ಟು ತೂಕವಿರುತ್ತದೆ.

  • ತಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಹೊಸ ಕಳೆ- ಬನ್ನೇರುಘಟ್ಟದಿಂದ ಬಂದ್ವು 2 ಸಿಂಹಗಳು

    ತಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಹೊಸ ಕಳೆ- ಬನ್ನೇರುಘಟ್ಟದಿಂದ ಬಂದ್ವು 2 ಸಿಂಹಗಳು

    ಶಿವಮೊಗ್ಗ: ಸಿಂಹಗಳು ಇಲ್ಲದೆ ಸೊರಗಿದ್ದ ಶಿವಮೊಗ್ಗದ ತಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಈಗ ಹೊಸ ಕಳೆ ಬಂದಿದೆ.

    ಈ ಕಳೆ ನೀಡಿರುವುದು ಬನ್ನೆರುಘಟ್ಟ ಸಫಾರಿಯಿಂದ ಬಂದಿರುವ ನಾಲ್ಕು ವರ್ಷದ ಸರ್ವೇಶ, ನಾಲ್ಕೂವರೆ ವರ್ಷದ ಸುಶ್ಮಿತ ಎಂಬ ಎರಡು ಸಿಂಹಗಳು. ಒಂದು ಕಾಲದಲ್ಲಿ ಎಂಟು ಸಿಂಹಗಳಿದ್ದ ಇಲ್ಲಿ ಈಗ ಕೇವಲ ಮುದಿಯಾಗಿರುವ ಆರ್ಯ ಹಾಗೂ ಮಾನ್ಯ ಎಂಬ ಎರಡೇ ಸಿಂಹಗಳಿವೆ.

    ಈ ಸಿಂಹಗಳ ಕೊರತೆ ನೀಗಲು ಮೃಗಾಲಯ ಪ್ರಾಧಿಕಾರ ಇಲ್ಲಿಗೆ ಬನ್ನೇರುಘಟ್ಟದಿಂದ ಸಿಂಹಗಳನ್ನು ಕಳುಹಿಸಿದೆ. ಈ ಸಿಂಹಗಳು ಇಲ್ಲಿ ವಂಶೋದ್ಧಾರ ಮಾಡಿ, ಸಿಂಹಗಳ ಸಂಖ್ಯೆ ಹೆಚ್ಚಿಸಲಿವೆ ಎಂಬ ವಿಶ್ವಾಸ ಅರಣ್ಯ ಇಲಾಖೆ ಅಧಿಕಾರಿಗಳಿದ್ದಾಗಿದೆ. ಇಲ್ಲಿರುವ ಸಿಂಹಗಳ ಜೊತೆ ಹೊಂದಿಕೊಳ್ಳಲಿ ಎಂಬ ಕಾರಣಕ್ಕೆ ಹೊಸ ಸಿಂಹಗಳನ್ನು ಇನ್ನೂ ಕೇಜ್ ನಲ್ಲೇ ಇಡಲಾಗಿದೆ. ಇನ್ನೊಂದು ವಾರದಲ್ಲಿ ಮುಕ್ತವಾಗಿ ಬಿಡುವ ಸಾಧ್ಯತೆ ಇದ್ದು ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.