Tag: saffron

  • ಅಖಂಡ ಭಾರತ ಕೇಸರಿಮಯ ಆಗಲಿದೆ – ವಿಶ್ವ ಹಿಂದೂ ಪರಿಷತ್‌ ಮುಖಂಡ ಗುಡುಗು

    ಅಖಂಡ ಭಾರತ ಕೇಸರಿಮಯ ಆಗಲಿದೆ – ವಿಶ್ವ ಹಿಂದೂ ಪರಿಷತ್‌ ಮುಖಂಡ ಗುಡುಗು

    – ಭಗವಾಧ್ವಜ ಅಳವಡಿಸಲು 20 ಲಕ್ಷದ ಬಾಂಡ್ ಬರೆಸಿಕೊಂಡರೆಂದು ದಿನೇಶ್ ಮೆಂಡನ್ ಅಸಮಾಧಾನ

    ಉಡುಪಿ: ಇಲ್ಲಿನ ಹಿಂದೂ ಸಮಾಜೋತ್ಸವಕ್ಕೆ ನಗರದಲ್ಲಿ ಕೇಸರಿ ಪತಾಕೆ ಮತ್ತು ಭಗವಾಧ್ವಜ (Bhagwa Flag) ಅಳವಡಿಸಲು ಪೊಲೀಸ್ ಇಲಾಖೆ (Udupi Police Department) 10 ಮತ್ತು 20 ಲಕ್ಷದ ಬಾಂಡ್ ಬರೆಸಿಕೊಂಡಿದ್ದಾರೆ ವಿಶ್ವ ಹಿಂದೂ ಪರಿಷತ್‌ ಪ್ರಧಾನ ಕಾರ್ಯದರ್ಶಿ ದಿನೇಶ್ ಮೆಂಡನ್ ಅಸಮಾಧಾನ ಹೊರಹಾಕಿದ್ದಾರೆ.

    ಉಡುಪಿ (Udupi) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2024ರಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಭಗವಾಧ್ವಜ ಹಾಕುತ್ತೇವೆ. ಆಗ ಎಷ್ಟು ಲಕ್ಷ ಬಾಂಡ್‌ ಬರೆಸಿಕೊಳ್ಳುತ್ತೀರಿ..? ಎಂದು ಪ್ರಶ್ನಿಸಿದರಲ್ಲದೇ, ನಾಉ ಒಂದು ಕೋಟಿ ರೂಪಾಯಿ ಬಾಂಡ್‌ ಕೊಡಲು ಸಿದ್ಧರಿದ್ದೇವೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಪ್ರತಿಭಟನಾ ನಿರತ ಕಾರ್ಯಕರ್ತರು ಪೊಲೀಸ್ ವಶಕ್ಕೆ – ಮುನಿರತ್ನ ಏಕಾಂಗಿಯಾಗಿ ಪ್ರತಿಭಟನೆ

    2024ಕ್ಕೆ ಶ್ರೀರಾಮಂದಿರ (Sri Rama Mandira) ಉದ್ಘಾಟನೆಗೊಳ್ಳಲಿದೆ. ಆಗ ನಗರ ಮಾತ್ರವಲ್ಲ, ಪ್ರತಿಯೊಬ್ಬರ ಮನೆಯಲ್ಲೂ ಭಗವಾಧ್ವಜ ಹಾರಾಡುತ್ತದೆ. ಆಗ ಪೊಲೀಸ್ ಇಲಾಖೆ ಹಿಂದೂಗಳ ಮನೆ-ಮನೆಗೆ ಭೇಟಿ ನೀಡಿ 10 ಲಕ್ಷ ಅಲ್ಲ, 10 ಕೋಟಿ ರೂ. ಬಾಂಡ್ ಬರೆಸಿಕೊಂಡರೂ ನಾವು ಸಹಿ ಹಾಕಲು ಸಿದ್ಧರಿದ್ದೇವೆ. ಮುಂದೊಂದು ದಿನ ಅಖಂಡ ಭಾರತ ಕೇಸರಿಮಯ ಆಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲಂಕಾ ವಿರುದ್ಧ ಮೋಸದಾಟವಾಡಿತಾ ಪಾಕ್‌? – ಮತ್ತೆ ಮತ್ತೆ ಟೀಕೆಗೆ ಗುರಿಯಾಗ್ತಿರೋದೇಕೆ?

    ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಪೊಲೀಸರ ಮೂಲಕ ಕಿರುಕುಳ ನೀಡುತ್ತಿದೆ. ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದೆ. ವಿಹೆಚ್‌ಪಿ ಮುಖಂಡ ಶರಣ್ ಪಂಪ್ ವೆಲ್‌ಗೂ ನಿರ್ಬಂಧ ಹಾಕಿದೆ. ಹಿಂದೂಗಳನ್ನು ಕೆಣಕಿದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಂದೇ ಭಾರತ್ ರೈಲಿಗೆ ಹೊಸ ಬಣ್ಣ – ಫೋಟೋ ಹಂಚಿಕೊಂಡ ಅಶ್ವಿನಿ ವೈಷ್ಣವ್

    ವಂದೇ ಭಾರತ್ ರೈಲಿಗೆ ಹೊಸ ಬಣ್ಣ – ಫೋಟೋ ಹಂಚಿಕೊಂಡ ಅಶ್ವಿನಿ ವೈಷ್ಣವ್

    ಚೆನ್ನೈ: ದೇಶೀಯ ನಿರ್ಮಿತ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್‌ನ (Vande Bharat Express Train) 28ನೇ ರೈಲು ಕೇಸರಿ ಬಣ್ಣದ್ದಾಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಹೊಸ ಬಣ್ಣದೊಂದಿಗೆ ಕಂಗೊಳಿಸುತ್ತಿರೋ ರೈಲಿನ ಫೋಟೋವನ್ನು ಕೇಂದ್ರ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಒಟ್ಟು 25 ರೈಲುಗಳು ಈಗಾಗಲೇ ದೇಶದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. 2 ರೇಕ್‌ಗಳನ್ನು ಸದ್ಯ ಕಾಯ್ದಿರಿಸಲಾಗಿದೆ. ಇದೀಗ 28ನೇ ರೈಲಿನ ಬಣ್ಣವನ್ನು ಪ್ರಾಯೊಗಿಕವಾಗಿ ಬದಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

    ಹೊಸ ಬಣ್ಣದ ವಂದೇ ಭಾರತ್ ರೈಲು ಪ್ರಸ್ತುತ ಚೆನ್ನೈನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿದೆ. ವಂದೇ ಭಾರತ್ ರೈಲುಗಳನ್ನು ತಯಾರಿಸುವ ಕೇಂದ್ರ ಇದಾಗಿದೆ. ಅಶ್ವಿನಿ ವೈಷ್ಣವ್ ಶನಿವಾರ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ, ಸುರಕ್ಷತಾ ಕ್ರಮ, ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿನ ಸುಧಾರಣೆಗಳನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಹಂಪಿಯಲ್ಲಿ ಇಂದಿನಿಂದ ಜಿ-20 ಶೃಂಗಸಭೆ

    ಪರಿಶೀಲನೆ ಬಳಿಕ ಅಶ್ವಿನಿ ವೈಷ್ಣವ್, ವಂದೇ ಭಾರತ್ 28ನೇ ರೇಕ್‌ನ ಹೊಸ ಬಣ್ಣ ಭಾರತೀಯ ತ್ರಿವರ್ಣ ಧ್ವಜದಿಂದ ಪ್ರೇರಿತವಾಗಿದೆ ಮಾತ್ರವಲ್ಲದೇ ವಂದೇ ಭಾರತ್ ರೈಲುಗಳಲ್ಲಿ 25 ಸುಧಾರಣೆಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಇದು ಮೇಕ್ ಇನ್ ಇಂಡಿಯಾದ ಪರಿಕಲ್ಪನೆಯಾಗಿದೆ, ಎಂದರೆ ನಮ್ಮದೇ ಎಂಜಿನಿಯರ್‌ಗಳು ಇದನ್ನು ಭಾರತದಲ್ಲಿ ವಿನ್ಯಾಸಗೊಳಿಸಿದ್ದಾರೆ. ರೈಲುಗಳ ಕಾರ್ಯಾಚರಣೆಯ ಸಮಯದಲ್ಲಿ ಎಸಿ, ಶೌಚಾಲಯ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಕ್ಷೇತ್ರ ಘಟಕಗಳಿಂದ ನಾವು ಪ್ರತಿಕ್ರಿಯೆಯನ್ನು ಸ್ವೀಕರಿಸುತ್ತಿದ್ದೇವೆ. ಆ ಎಲ್ಲಾ ಸುಧಾರಣೆಗಳನ್ನು ವಿನ್ಯಾಸದಲ್ಲಿ ಬದಲಾವಣೆಗಳನ್ನು ಮಾಡಲು ಬಳಸಲಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇದನ್ನೂ ಓದಿ: ಗುಡ್‌ನ್ಯೂಸ್‌ – 24 ಗಂಟೆಗಳಲ್ಲಿ KRSನಲ್ಲಿ 2.50 ಅಡಿ ನೀರು ಭರ್ತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಪಠಾಣ್’ ಕೇಸರಿ ವಿವಾದಕ್ಕೆ ಚೇತನ್ ಎಂಟ್ರಿ : ವಿರೋಧಿಸುವವರಿಗೆ ಪಾಠ ಮಾಡಿದ ನಟ

    ‘ಪಠಾಣ್’ ಕೇಸರಿ ವಿವಾದಕ್ಕೆ ಚೇತನ್ ಎಂಟ್ರಿ : ವಿರೋಧಿಸುವವರಿಗೆ ಪಾಠ ಮಾಡಿದ ನಟ

    ಶಾರುಖ್ ಖಾನ್ ನಟನೆಯ ‘ಪಠಾಣ್’ (Pathan) ಸಿನಿಮಾದ ಹಾಡೊಂದರಲ್ಲಿ ಕೇಸರಿ (Saffron) ಬಣ್ಣದ ಬಿಕಿನಿ (Bikini) ಧರಿಸಲಾಗಿದೆ ಎನ್ನುವ ಕಾರಣಕ್ಕಾಗಿ ಹಿಂದೂಪರ ಸಂಘಟನೆಗಳು ಚಿತ್ರವನ್ನು ಬಾಯ್ಕಾಟ್ ಮಾಡಬೇಕು ಎಂದು ಪಟ್ಟು ಹಿಡಿದಿದ್ದವು. ಅಲ್ಲದೇ ಈ ಹಾಡಿನಲ್ಲಿ ಕೇಸರಿ ಬಣ್ಣಕ್ಕೂ ಅಪಮಾನ ಮಾಡಲಾಗಿದೆ ಎಂದು ಆರೋಪ ಮಾಡಿದ್ದವು. ದೇಶದ ನಾನಾ ಭಾಗಗಳಲ್ಲಿ ಈ ಸಿನಿಮಾ ಕುರಿತು ವಿರೋಧ ವ್ಯಕ್ತವಾಗಿತ್ತು. ಹಿಂದೂಪರ ಸಂಘಟನೆಗಳು ಮಾತ್ರವಲ್ಲ, ರಾಜಕೀಯ ಮುಖಂಡರು ಮತ್ತು ಕಲಾವಿದರು ಕೂಡ ಈ ಕುರಿತು ತಮ್ಮ ಪ್ರತಿಕ್ರಿಯೆ ದಾಖಲಿಸಿದ್ದವು.

    ಇದೀಗ ಕನ್ನಡದ ನಟ, ಹೋರಾಟಗಾರ ಚೇತನ್ (Chetan) ಕೂಡ ಈ ವಿವಾದದ (Controversy) ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾವ ಬಣ್ಣವೂ ಯಾವುದರ ಸಂಕೇತ ಆಗಬಾರದು ಎಂದು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಕೇಸರಿ ಹಿಂದೂಗಳ ಸಂಕೇತವಲ್ಲ. ಹಿಂದೂಗಳ ಬಣ್ಣ ಆಗಬಾರದು. ಕೇಸರಿ ಬಣ್ಣ ತ್ಯಾಗದ ಸಂಕೇತ. ಅದು ಭಾರತದ ರಾಷ್ಟ್ರ ಧ್ವಜದಲ್ಲೂ ಇದೆ. ಹಸಿರು ಬಣ್ಣ ಕೂಡ ಅಷ್ಟೇ, ಅದು ಕೂಡ ಯಾರದೋ ಬಣ್ಣವಲ್ಲ. ಇದೊಂದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಷ್ಟೇ’ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಆದಿಲ್ ಖಾನ್ ಜೊತೆ ಮದುವೆಯಾದ ಬೆನ್ನಲ್ಲೇ ರಾಖಿ ಸಾವಂತ್ ಬಂಧನ

    ಪಠಾಣ್ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿದ್ದರು. ಆ ಹಾಡಿನ ಸಾಹಿತ್ಯದಲ್ಲೂ ಕೇಸರಿ ಬಣ್ಣಕ್ಕೆ ಅವಮಾನಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ಕೂಡ ಹಾಡಿನಲ್ಲಿಯ ಕೆಲವು ಚಿತ್ರಿಕೆಗಳಿಗೆ ಕತ್ತರಿ ಹಾಕುವಂತೆ ಹೇಳಿತ್ತು. ಕೆಲವು ಕಡೆ ಈ ಸಿನಿಮಾವನ್ನು ರಿಲೀಸ್ ಮಾಡದಂತೆ ಥಿಯೇಟರ್ ಗೂ ಮುತ್ತಿಗೆ ಹಾಕಲಾಯಿತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಜೆಪಿ ಕೇಸರಿ ಬಟ್ಟೆಯನ್ನಿಟ್ಟುಕೊಂಡು ಅದರ ಪಾವಿತ್ರ್ಯತೆ ಹಾಳು ಮಾಡುತ್ತಿದೆ: ಹೆಚ್‌ಡಿಕೆ

    ಬಿಜೆಪಿ ಕೇಸರಿ ಬಟ್ಟೆಯನ್ನಿಟ್ಟುಕೊಂಡು ಅದರ ಪಾವಿತ್ರ್ಯತೆ ಹಾಳು ಮಾಡುತ್ತಿದೆ: ಹೆಚ್‌ಡಿಕೆ

    – ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ
    – ರವಿ ಬಂಧನದ ಹೆಸರಲ್ಲಿ ಬಿಜೆಪಿ ಜನರಿಗೆ ಟೋಪಿ ಹಾಕ್ತಿದೆ

    ಕಲಬುರಗಿ: ಬಿಜೆಪಿ (BJP) ಪಕ್ಷದವರು ಪವಿತ್ರವಾದ ಕೇಸರಿ (Saffron) ಬಟ್ಟೆಯನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ವಿಷಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ಬುಧವಾರ ಜಿಲ್ಲೆಯ ಸೇಡಂ ತಾಲೂಕಿನ ನಿಡಗುಂದಾ ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್‌ಡಿಕೆ, ಬಿಜೆಪಿಯವರು ಪವಿತ್ರ ಕೇಸರಿ ಬಟ್ಟೆ ಹಾಕಿ, ಅದರ ಪಾವಿತ್ರ‍್ಯತೆಯನ್ನು ಹಾಳು ಮಾಡುತ್ತಿದ್ದಾರೆ. ಇಂತಹವರು ದೇಶಕ್ಕೆ ಉಪದೇಶ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಇದೇ ವೇಳೆ ಸ್ಯಾಂಟ್ರೋ ರವಿ (Santro Ravi) ವಿಚಾರವಾಗಿ ಮಾತನಾಡಿದ ಅವರು, ಜಗದೀಶ್ ಎಂಬ ವ್ಯಕ್ತಿ ಕಳೆದ ವರ್ಷ ಜನವರಿ 22 ರಂದು ಸ್ಯಾಂಟ್ರೋ ರವಿ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರದ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ವೇಳೆ ಸ್ಯಾಂಟ್ರೋ ರವಿ ನಾನು ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಬರೆದು ಕೊಟ್ಟಿದ್ದಾನೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ರಕ್ತನೇ ಕಾಂಗ್ರೆಸ್, ನಾನು ‘ಕೈ’ ಪಕ್ಷ ಸೇರುತ್ತೇನೆ: ಹೆಚ್‌. ವಿಶ್ವನಾಥ್

    ಆತ 3-4 ವರ್ಷಗಳಿಂದಲೂ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ಬಿಜೆಪಿಯ ಹಲವು ಶಾಸಕರು, ಸಚಿವರ ಜೊತೆಗೆ ಆತನ ಒಡನಾಟ ಇದ್ದು, ಹೀಗಾಗಿ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿದ್ದಾಗಿ ಆತ ಪೋಲಿಸರ ಮುಂದೆ ಹೇಳಿಕೆ ಕೊಟ್ಟಿದ್ದಾನೆ ಎಂದು ಕುಮಾರಸ್ವಾಮಿ ಹೇಳಿದರು.

    ಬಿಜೆಪಿಯವರು ಒಂದು ವರ್ಷದಿಂದ ಅವನನ್ನು ಬಿಟ್ಟು, ಈಗ ಅರೆಸ್ಟ್ ಮಾಡುತ್ತೇವೆ ಎಂದು ಹೇಳುವ ಮೂಲಕ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ರಸ್ತೆ ಸ್ವಚ್ಛಗೊಳಿಸಿದ ಡಿಕೆಶಿ, ಸಿದ್ದರಾಮಯ್ಯ!

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉರ್ಫಿ ಜಾವೇದ್ ಹುಚ್ಚಾಟ: ಕೇಸರಿ ತುಂಡುಡುಗೆ ತೊಟ್ಟು ‘ಬೇಷರಂ ರಂಗ್’ ಗೀತೆಗೆ ಕ್ಯಾಟ್ ವಾಕ್

    ಉರ್ಫಿ ಜಾವೇದ್ ಹುಚ್ಚಾಟ: ಕೇಸರಿ ತುಂಡುಡುಗೆ ತೊಟ್ಟು ‘ಬೇಷರಂ ರಂಗ್’ ಗೀತೆಗೆ ಕ್ಯಾಟ್ ವಾಕ್

    ಠಾಣ್ ಸಿನಿಮಾದ ‘ಬೇಷರಂ ರಂಗ್’ (Besharam Rang)  ಗೀತೆಯ ವಿವಾದ (controversy) ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದರೂ, ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್ (Urfi Javed) ಕೊಂಚವೂ ಭಯಗೊಂಡಂತೆ ಕಾಣುತ್ತಿಲ್ಲ. ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ (saffron) ಬಿಕಿನಿ (bikini) ತೊಟ್ಟು ಬಣ್ಣಕ್ಕೆ ಅವಮಾನಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಅಲ್ಲಲ್ಲಿ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಸೆನ್ಸಾರ್ ಮಂಡಳಿ ಕೂಡ ಅಶ್ಲೀಲ ಎನ್ನುವಂತಹ ಚಿತ್ರಿಕೆಗಳನ್ನು ಕಟ್ ಮಾಡಿಸಿದೆ. ಈ ನಡುವೆಯೂ ಉರ್ಫಿ ಜಾವೇದ್ ಹುಚ್ಚಾಟ ಮರೆದಿದ್ದಾರೆ.

    ಯಾವ ಬಣ್ಣ ಮತ್ತು ಹಾಡಿನಿಂದ ಪಠಾಣ್ ಸಿನಿಮಾ ವಿವಾದಕ್ಕೀಡಾಗಿತ್ತೋ, ಅದೇ ಬಣ್ಣದ ತುಂಡುಡುಗೆ ತೊಟ್ಟು, ಅದೇ ಹಾಡಿಗೆ ಕ್ಯಾಟ್ ವಾಕ್ ಮಾಡಿದ್ದಾರೆ ಉರ್ಫಿ. ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಕೆಲವರು ಎಚ್ಚರಿಕೆಯ ಸಂದೇಶಗಳನ್ನೂ ಕಳುಹಿಸಿದ್ದಾರೆ. ಪ್ರಚಾರಕ್ಕಾಗಿ ಈ ರೀತಿ ಮಾಡಿದರೆ ಕಾನೂನು ರೀತಿಯಲ್ಲಿ ಉತ್ತರ ಕೊಡಬೇಕಾಗುತ್ತದೆ ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಸೋನು ಗೌಡ ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಹೇಳೋದೇನು?

    ಉರ್ಫಿ ಹಾಕುವ ಕಾಸ್ಟ್ಯೂಮ್ ವಿವಾದ ಆಗುತ್ತಿರುವುದು ಇದೇ ಮೊದಲೇನೂ ಅಲ್ಲ. ಈಗಾಗಲೇ ಅವರ ವಿರುದ್ಧ ಅನೇಕ ದೂರುಗಳು ಸಲ್ಲಿಕೆಯಾಗಿವೆ. ಮೊನ್ನೆಯಷ್ಟೇ ದುಬೈನಲ್ಲಿ ಪೊಲೀಸರು ಉರ್ಫಿಯನ್ನು ವಶಕ್ಕೆ ಪಡೆದಿದ್ದರು. ಅಲ್ಲದೇ, ಬಿಜೆಪಿಯ ಮಹಿಳಾ ಸದಸ್ಯರೊಬ್ಬರು ಉರ್ಫಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಕೂಡ ಹತ್ತಿದ್ದಾರೆ. ಇಷ್ಟೊಂದು ಘಟನೆಗಳಾದರೂ, ಉರ್ಫಿ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ. ತಮ್ಮ ಪಾಡಿಗೆ ತಾವು ಏನು ಮಾಡಬೇಕೋ ಅದನ್ನು ಮಾಡುತ್ತಲೇ ಇದ್ದಾರೆ.

    ನಿನ್ನೆಯಷ್ಟೇ ಪಠಾಣ್ ಸಿನಿಮಾಗೆ ಸೆನ್ಸಾರ್ ಮಂಡಳಿಯು ಕೊನೆಗೂ ಪ್ರಮಾಣ ಪತ್ರವನ್ನು ಕೊಟ್ಟಿದ್ದು, ಕೆಲವು ಚಿತ್ರಿಕೆಗಳಿಗೆ ಕತ್ತರಿ ಪ್ರಯೋಗ ಮಾಡಿದೆ. ದೀಪಿಕಾ ಪಡುಕೋಣೆಯು ಕುಣಿದ ‘ಬೇಷರಂ ರಂಗ್’ ಹಾಡಿನ ಅಶ್ಲೀಲ ಭಂಗಿಗಳನ್ನು ತಗೆದು ಹಾಕುವಂತೆ ಸೂಚಿಸಿದೆ. ಈ ಹಾಡಿನಲ್ಲಿ ಅಶ್ಲೀಲವಾಗಿ, ಒಳ ಉಡುಪುಗಳು ಕಾಣುವಂತೆ ಮತ್ತು ಕೇಸರಿ ಬಣ್ಣಕ್ಕೆ ಅವಮಾನ ಮಾಡುವಂತಹ ಎಲ್ಲ ಸಂಗತಿಗಳನ್ನೂ ಕಟ್ ಮಾಡಿಸಿದೆ. ಇಷ್ಟೆಲ್ಲ ಮುಗಿದ ನಂತರವೇ ಈ ಚಿತ್ರಕ್ಕೆ ಯು/ ಎ ಸರ್ಟಿಫಿಕೇಟ್ ಪ್ರಮಾಣಪತ್ರವನ್ನು ನೀಡಿದೆ.

    ಅಲ್ಲದೇ, ಸಿನಿಮಾದ ಡೈಲಾಗ್ ಮೇಲೂ ಸೆನ್ಸಾರ್ ಮಂಡಳಿಯು ಅಧಿಕಾರ ಚಲಾಯಿಸಿದ್ದು, ಕೆಲವು ಪದಗಳನ್ನು ಮಾರ್ಪಾಡು ಮಾಡುವಂತೆ ಸೂಚಿಸಿದೆ. ಬಾಲಿವುಡ್ ಮಾಧ್ಯಮಗಳು ವರದಿ ಮಾಡಿದಂತೆ. ‘ಲಂಗ್ಡೆ ಲುಲ್ಲೆ’ ಪದದ ಬದಲು ‘ಟೂಟೆ ಪೂಟೆ’ ಎಂದು ಬದಲಾಯಿಸಲು, 13 ಕಡೆ ‘ಪಿಎಂಓ’ ಪದವನ್ನು ತಗೆದು ಹಾಕುವಂತೆ ಸೂಚಿಸಿದೆ. ‘ಮಿಸಸ್ ಭಾರತ್ ಮಾತಾ’ ಎನ್ನುವ ಮಾತಿನ ಬದಲಾಗಿ ‘ಹಮಾರಿ ಭಾರತ್ ಮಾತಾ’ ಎಂದು ಡಬ್ ಮಾಡುವಂತೆ ಸೂಚಿಸಿದೆ. ಹೀಗೆ ಸಾಕಷ್ಟು ಪದಗಳನ್ನು ಬದಲಿಸಿ, ಬೇರೆ ಪದವನ್ನು ಬಳಸುವಂತೆ ಸೆನ್ಸಾರ್ ಮಂಡಳಿಯು ಸೂಚಿಸಿತ್ತು ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೇಸರಿ ಬಿಕಿನಿಗೆ ನೆಟ್ಟಿಗರು ಗರಂ: ಬೈಕಾಟ್ ಪಠಾಣ್ ಟ್ರೆಂಡ್

    ಕೇಸರಿ ಬಿಕಿನಿಗೆ ನೆಟ್ಟಿಗರು ಗರಂ: ಬೈಕಾಟ್ ಪಠಾಣ್ ಟ್ರೆಂಡ್

    ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಹಾಡು ಎರಡು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿದೆ. ಈ ಹಾಡನ್ನು ಹದಿನೈದು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಆದರೆ, ಈ ಹಾಡಿನಲ್ಲಿ ದೀಪಿಕಾ ಹಾಕಿರುವ ಡ್ರೆಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಕೇಸರಿಯ ಬಿಕಿನಿಯಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಈ ಹಾಡಿನ ಸಾಲಿಗೆ ಹಾಕಿರುವ ಡ್ರೆಸ್ ಗೂ ಹೊಂದಾಣಿಕೆ ಮಾಡಿಕೊಂಡು ನೆಟ್ಟಿಗರು ಗರಂ ಆಗಿದ್ದಾರೆ. ಈ ಕಾರಣದಿಂದಾಗಿ ಚಿತ್ರಕ್ಕೆ ಬಹಿಷ್ಕಾರ ಹಾಕುವಂತೆ ಸೋಷಿಯಲ್ ಮೀಡಿಯಾದಲ್ಲಿ ಕರೆ ನೀಡುತ್ತಿದ್ದಾರೆ.

    ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ತುಂಡುಡುಗೆ ತೊಟ್ಟಿದ್ದಾರೆ. ‘ಬೇಷರಂ ರಂಗ್’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದಾರೆ. ಬೇಕು ಅಂತಾನೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ಹೀಗಾಗಿ ಬೈಕಾಟ್ ಪಠಾಣ್ ಟ್ರೆಂಡ್ ಹೆಚ್ಚಿದೆ.

    ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಮೂಲಕ ಸಾಕಷ್ಟು ಭರವಸೆ ಮೂಡಿಸಿರುವ ಈ ಸಿನಿಮಾ, ಮೊದಲ ಹಾಡಿನ ಮೂಲಕ ಪ್ರಚಾರ ಆರಂಭಿಸಲಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿಷೇನ್ ನ ಸಿನಿಮಾ ಇದಾಗಿದ್ದು, ಶುರುವಿನಿಂದ ಈವರೆಗೂ ಕುತೂಹಲವನ್ನು ಕಾಪಾಡಿಕೊಂಡೇ ಬರುತ್ತಿದೆ. ಶಾರುಖ್ ಈ ಸಿನಿಮಾದಲ್ಲಿ ಮತ್ತೆ ಸಿಕ್ಸ್ ಪ್ಯಾಕ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿದ್ದಾರೆ. ಇದನ್ನೂ ಓದಿ: `ಕಾಂತಾರ’ ನೋಡಿ ತುಂಬಾ ಕಲಿತೆ: ರಿಷಬ್ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ

    ಹಾಡು ರಿಲೀಸ್ ಆಗುತ್ತಿರುವ ವಿಷಯವನ್ನು ಸ್ವತಃ ಶಾರುಖ್ ಖಾನ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಈ ಹಾಡನ್ನು ನೋಡಲು ತಾವೂ ಕೂಡ ಕಾತರದಿಂದ ಕಾಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದರು. ಅಲ್ಲದೇ ಅಭಿಮಾನಿಗಳು ಕೂಡ  ಅಷ್ಟೇ ಕುತೂಹಲದಿಂದಲೇ ಹಾಡಿಗಾಗಿ ಕಾದಿದ್ದರು. ಬಿಡುಗಡೆಯಾದ ಹಾಡಿಗೆ ಅಭಿಮಾನಿಗಳು ಕೂಡ ಜೈಕಾರ ಹಾಕಿದ್ದಾರೆ.

    ಇದು ಶಾರುಖ್ ಖಾನ್ ವೃತ್ತಿ ಜೀವನದ ಮಹತ್ವದ ಸಿನಿಮಾ ಎನ್ನಲಾಗುತ್ತಿದ್ದು, ಸತತ ಸೋಲಿನ ಬಳಿಕೆ ಬಾಲಿವುಡ್ ಗೆ ಈ ಸಿನಿಮಾ ಶಕ್ತಿ ತುಂಬಲಿದೆ ಎಂದು ಹೇಳಲಾಗುತ್ತಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಕಾಂಬಿನೇಷನ್ ಇರುವುದರಿಂದ ಬಾಕ್ಸ್ ಆಫೀಸಿನಲ್ಲೂ ಈ ಸಿನಿಮಾ ಹಿಟ್ ಆಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಇಂದು ಬಿಡುಗಡೆ ಆಗಿರುವ ಹಾಡು ಅಂಥದ್ದೊಂದು ಭರವಸೆಯನ್ನೂ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೇಸರಿ ರಾಜಕೀಯ ಬಣ್ಣವಾಗೋದು ಬೇಡ – ಸರ್ಕಾರಕ್ಕೆ ಶ್ರೀನಿವಾಸ್ ಪ್ರಸಾದ್ ಸಲಹೆ

    ಕೇಸರಿ ರಾಜಕೀಯ ಬಣ್ಣವಾಗೋದು ಬೇಡ – ಸರ್ಕಾರಕ್ಕೆ ಶ್ರೀನಿವಾಸ್ ಪ್ರಸಾದ್ ಸಲಹೆ

    ಚಾಮರಾಜನಗರ: ಕೇಸರಿ ಬಣ್ಣ (Saffron Colour) ಬಳಿಯುವ ವಿಚಾರದಲ್ಲಿ ಸರ್ಕಾರಕ್ಕೆ ಸಂಸದ ಶ್ರೀನಿವಾಸ್ ಪ್ರಸಾದ್ (V Shrinivas Prasad) ಸಲಹೆ ನೀಡಿದ್ದಾರೆ.

    ಶಾಲೆಗಳಿಗೆ (Schools) ಕೇಸರಿ ಬಣ್ಣ ಬಳಿಯುವ ಸರ್ಕಾರದ (Government Of Karnataka) ಚಿಂತನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಈಗಾಗಲೇ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರ ಆತುರದ ನಿರ್ಧಾರ ಕೈಗೊಳ್ಳುವ ಅವಶ್ಯಕತೆ ಇರಲಿಲ್ಲ. ಕೇಸರಿ ಬಣ್ಣಕ್ಕೆ ಎಲ್ಲರೂ ಗೌರವ ಕೊಡುತ್ತಾರೆ. ಕೇಸರಿಬಣ್ಣ ತ್ಯಾಗದ ಪ್ರತೀಕವಾಗಿದೆ. ಈ ವಿಚಾರವನ್ನು ರಾಜಕೀಯವಾಗಿ (Politics) ಬಳಸಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿರೋಧ

    ಆಲೋಚನೆ ಮಾಡಲಿ: 
    ಟಿಪ್ಪು ಪ್ರತಿಮೆ (Tippu Statue) ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಟಿಪ್ಪು ಪ್ರತಿಮೆ ಅವರ ಸ್ವಂತಕ್ಕೆ ಮಾಡಿಕೊಳ್ಳಲಿ ಅದರಲ್ಲಿ ತಪ್ಪಿಲ್ಲ, ತೊಂದರೆಯೂ ಇಲ್ಲ. ಟಿಪ್ಪು ಜಯಂತಿಯನ್ನು ಸರ್ಕಾರದಿಂದ ಆಚರಣೆ ಮಾಡಬಾರದೆಂದು ಈಗಾಗಲೇ ತೀರ್ಮಾನವಾಗಿದೆ. ಮುಸ್ಲಿಂ ಸಮುದಾಯದವವರು (Muslim Community) ಟಿಪ್ಪು ಪ್ರತಿಮೆಯನ್ನಾಗಲಿ ಜಯಂತಿಯನ್ನಾಗಲಿ ಮಾಡಿಕೊಳ್ಳಲು ಯಾರ ಅಭ್ಯಂತರವೂ ಇಲ್ಲ. ಆದರೆ ಮುಸ್ಲಿಮರಲ್ಲಿ ಪ್ರತಿಮೆ ಸ್ಥಾಪಿಸುವ ಸಂಸ್ಕೃತಿ ಇಲ್ಲ, ವಿಗ್ರಹ ಆರಾಧಕರು ಅಲ್ಲ ಅವರು ಇನ್ನೊಮ್ಮೆ ಯೋಚನೆ ಮಾಡಲಿ ಎಂದು ತಿಳಿವಳಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್‌ನಿಂದ `ಸಿಎಂ ಅಂಕಲ್’ ಅಭಿಯಾನ – ಭುಗಿಲೆದ್ದ ಕೇಸರಿ ವಿವಾದ, ಸರ್ಕಾರಕ್ಕೆ ಹಲವು ಪ್ರಶ್ನೆ

    ಕಾಂಗ್ರೆಸ್‌ನಿಂದ `ಸಿಎಂ ಅಂಕಲ್’ ಅಭಿಯಾನ – ಭುಗಿಲೆದ್ದ ಕೇಸರಿ ವಿವಾದ, ಸರ್ಕಾರಕ್ಕೆ ಹಲವು ಪ್ರಶ್ನೆ

    ಬೆಂಗಳೂರು: ವಿವೇಕ ಶಾಲೆಗಳಿಗೆ ಕೇಸರಿ (Saffron) ಬಣ್ಣ ಹೊಡೆಸುವ ವಿಚಾರ ವಿವಾದಕ್ಕೆ ತಿರುಗುತ್ತಿದ್ದಂತೆ ಕಾಂಗ್ರೆಸ್ (Congress) `ಸಿಎಂ ಅಂಕಲ್’ (CM Uncle) ಅಭಿಯಾನ ಆರಂಭಿಸಿದ್ದು, ಬೊಮ್ಮಾಯಿ (Basavaraj Bommai) ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನಿಟ್ಟಿದೆ.

    ತನ್ನ ಆಧಿಕೃತ ಟ್ವಿಟ್ಟರ್ (Twitter) ಖಾತೆಯಲ್ಲಿ ಸಿಎಂ ಅಂಕಲ್ ಹ್ಯಾಶ್‌ಟ್ಯಾಗ್‌ನೊಂದಿಗೆ ಅಭಿಯಾನ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಎತ್ತಿದೆ. ಇದನ್ನೂ ಓದಿ: ದಲಿತರು, ಆದಿವಾಸಿ ಹಕ್ಕುಗಳ ಮೇಲೆ BJP, RSS ಆಕ್ರಮಣ – ರಾಹುಲ್ ಕಿಡಿ

    ಟ್ವೀಟ್‌ನಲ್ಲಿ ಏನಿದೆ?
    ಸಿಎಂ ಅಂಕಲ್ ಶಾಲೆಗೆ ಯಾವ ಬಣ್ಣನಾದ್ರೂ ಹೊಡಿರಿ, ನಮ್ಮ ಉಡುಪಿಯಲ್ಲಿ ಶಾಲೆಗೆ ಬರಲು ರಸ್ತೆಯೇ ಸರಿ ಇಲ್ಲ, ನಾವು ಶಾಲೆಗೆ ಬಂದರೆ ತಾನೆ ನಿಮ್ಮ ಬಣ್ಣ ನೋಡಲು ಸಾಧ್ಯವಾಗುವುದು? ನಾವೇ ನಮ್ ಕೈಲಾದಷ್ಟು ಸರಿಪಡಿಸಿದ್ದೇವೆ, ನೀವ್ ಯಾವಾಗ ನಿಮ್ಮ ಜವಾಬ್ದಾರಿ ನಿರ್ವಹಿಸುವುದು ಸಿಎಂ ಅಂಕಲ್? ಇದನ್ನೂ ಓದಿ: ದೊಡ್ಮನೆಯಲ್ಲಿ ರಂಪಾಟ: ಕೈ ಕೈ ಮಿಲಾಯಿಸಿದ ಸಂಬರ್ಗಿ-ಗೊಬ್ಬರಗಾಲ

    ಶಾಲೆಗಳಿಗೆ ಬಣ್ಣ ಬಳಿಯುವ ರಾಜಕೀಯಕ್ಕೆ (Politics) ಮುಂದಾದ ಬಿಜೆಪಿ (BJP) ನಾಯಕರು ಉತ್ತರಿಸಲಿ. ಏಕೆ ತಮ್ಮ ಕಾರುಗಳಿಗೆ ಕೇಸರಿ ಪೈಂಟ್ ಬಳಸಿಲ್ಲ? ಎಷ್ಟು ಬಿಜೆಪಿ ನಾಯಕರು ತಮ್ಮ ಮನೆಗೆ ಕೇಸರಿ ಬಣ್ಣ ಬಳಿದುಕೊಂಡಿದ್ದಾರೆ? ಮನೆ ಇರಲಿ ಕನಿಷ್ಠ ಕಂಪೌಂಡ್‌ಗೂ ಕೇಸರಿ ಬಣ್ಣ ಬಳಸಿಲ್ಲ ಏಕೆ? ಮೊದಲು ತಮ್ಮ ಮನೆಗೆ ಕೇಸರಿ ಬಳಿದುಕೊಳ್ಳಲಿ, ನಂತರ ಶಾಲೆಗಳತ್ತ ಬರಲಿ.

    ಸರ್ಕಾರಿ ಶಾಲೆಗಳಷ್ಟೇ (Government School) ಅಲ್ಲ, ಖಾಸಗಿ ಶಾಲೆಗಳಿಗೂ ಸಂಪೂರ್ಣ ಪಠ್ಯಪುಸ್ತಕ ಕೊಡಲಿಲ್ಲ ಏಕೆ? ನಾವು ಶಾಲೆಗಳಿಗೆ ಬಣ್ಣ ನೋಡಲು ಬರಬೇಕಾ, ಪಾಠ ಕಲಿಯಲು ಬರಬೇಕಾ ಅಂಕಲ್? ಅರ್ಧ ವರ್ಷ ಕಳೆದರೂ ಪುಸ್ತಕವನ್ನೇ ಕೊಟ್ಟಿಲ್ಲ ಅಂದ್ರೆ ನಾವು ಓದಿ ಎಕ್ಸಾಮ್ ಬರೆಯೋದು ಹೇಗೆ ಸಿಎಂ ಅಂಕಲ್?

    ಶಿಕ್ಷಣ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಕರ್ನಾಟಕ 14ನೇ ಸ್ಥಾನಕ್ಕೆ ಕುಸಿದಿದೆಯಂತೆ, ಹಾಗಂತ ಪೇಪರ್‌ನಲ್ಲಿ ಬಂದಿತ್ತು..ನಮಗೆ ಸೂಚ್ಯಂಕದ ಬಗ್ಗೆ ಗೊತ್ತಿಲ್ಲ, ಆದ್ರೆ ನಮಗೆ ಶಾಲೆಯಲ್ಲಿ ಯಾವ ಸೌಕರ್ಯವೂ ಸಿಗ್ತಿಲ್ಲ, ಶಾಲೆಗೆ ಬಂದರೆ ಯಾವುದೋ ಬಸ್ ಸ್ಟ್ಯಾಂಡ್‌ಗೆ ಬಂದಂತೆ ಆಗುತ್ತಿದೆ. ಯಾಕೆ ಈ ಅನ್ಯಾಯ ಮಾಡ್ತಿದೀರಿ ಸಿಎಂ ಅಂಕಲ್?

    ಕೋವಿಡ್ ಹೆಸರಲ್ಲಿ 2 ವರ್ಷ ನಮ್ಮ ವಿದ್ಯಾಭ್ಯಾಸ ಹಾಳು ಮಾಡಿದ್ರಿ, ಈಗ ಶೈಕ್ಷಣಿಕ ಸವಲತ್ತು, ಮೂಲಭೂತ ಸೌಕರ್ಯ ಕೊಡದೇ ನಮ್ಮ ವಿದ್ಯಾಭ್ಯಾಸ ಹಾಳು ಮಾಡ್ತಿದೀರಿ.. ನಿಮ್ ಮಕ್ಳು ಮಾತ್ರ ಓದಿ ದೊಡ್ಡ ದೊಡ್ಡ ಸಾಧನೆ ಮಾಡ್ಬೇಕು, ಉದ್ಯಮ ಕಟ್ಟಬೇಕು, ನಾವೂ ಆ ಸಾಧನೆ ಮಾಡೋದು ನಿಮಗೆ ಇಷ್ಟ ಇಲ್ವಾ ಸಿಎಂ ಅಂಕಲ್?

    ಹೆಣ್ಮಕ್ಕಳು ಶಾಲೆಗೆ ಬರೋದಾದ್ರೂ ಹೇಗೆ? ರಾಜ್ಯದ ಹಲವು ಶಾಲೆಗಳಲ್ಲಿ ಹೆಣ್ಮಕ್ಳಿಗೆ ಶೌಚಾಲಯ ಇಲ್ಲದೆ ತುಂಬಾ ಕಷ್ಟ ಆಗ್ತಿದೆ. ಬೇಟಿ ಬಚಾವೋ, ಬೇಟಿ ಪಡಾವೋ ಅಂತ ಪಿಎಂ ಅಂಕಲ್ ಹೇಳ್ತಿದ್ರು, ಆದರೆ ಇಲ್ಲಿ `ಬಚಾವೋ’ ಆಗ್ತಿಲ್ಲ, `ಪಡಾವೋ’ನೂ ಆಗ್ತಿಲ್ಲ ಏಕೆ ಸಿಎಂ ಅಂಕಲ್? ಕೇಸರಿ ಬಣ್ಣದ್ದದರೂ ಸರಿ ನಮಗೊಂದು ಶೌಚಾಲಯ ಕಟ್ಟಿಸಿಕೊಡಿ.

    ಕರ್ನಾಟಕದಲ್ಲಿ ದೊಡ್ಡವರಲ್ಲಿ ಇದ್ದ ತಾರತಮ್ಯ ಶಾಲೆಗಳಲ್ಲಿ ಮಕ್ಕಳ ವಿಚಾರದಲ್ಲೂ ಹೆಚ್ಚಾಗಿದೆ ಅಂತ ಪಿಎಂ ಅಂಕಲ್ ಅವರೇ ಹೇಳ್ತಿದಾರಲ್ಲ ಏಕೆ? ಅಂಬೇಡ್ಕರ್ ಅವರ ಪಾಠದಲ್ಲಿ ಸಮಾನತೆ ಅನ್ನೋ ಪದವನ್ನ ತುಂಬಾ ಓದಿದ್ದೇವೆ, ನಾವೆಲ್ಲ ಒಂದೇ ಆದರೂ ಪರಿಶಿಷ್ಟ ಜಾತಿ ಮಕ್ಕಳು ಇತರ ಸಮುದಾಯದ ಮಕ್ಕಳೊಂದಿಗೆ ಸಮವಾಗಿರಲು ಸಾಧ್ಯವಾಗ್ತಿಲ್ಲ ಏಕೆ ಅಂಕಲ್?

    ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೂ ಅಸಮಾನತೆ ಹೆಚ್ಚಿದೆ ಏಕೆ? ಸಬ್ ಕ ಸಾತ್ ಸಬ್ ಕ ವಿಕಾಸ್ ಅಂತ ಹೇಳ್ತಿದ್ರು ಪಿಎಂಅಂಕಲ್, ಆದರೆ ಪರಿಶಿಷ್ಟ ಜಾತಿ, ಪಂಗಡಗಳ ವಿದ್ಯಾರ್ಥಿವೇತನ ನೀಡದೆ ನಮ್ಮನ್ನು ಶೈಕ್ಷಣಿಕವಾಗಿ ಹಿಂದೆಯೇ ಉಳಿಸುತ್ತಿರುವುದೇಕೆ? ನಾವೂ ಎಲ್ಲರಂತೆ ಶಿಕ್ಷಿತರಾಗುವುದು ಬೇಡವೇ? ಸಿಎಂ ಅಂಕಲ್ ಎಂದು ಸರಣಿ ಪ್ರಶ್ನೆಗಳನ್ನ ಸರ್ಕಾರದ ಮುಂದಿಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇಸರಿ ಕಂಡರೆ ಕಾಂಗ್ರೆಸ್‌ಗೆ ಅಲರ್ಜಿ ಯಾಕೆ?- ವಿವೇಕ ಯೋಜನೆ ಸಮರ್ಥನೆ ಮಾಡಿಕೊಂಡ ಸಿಎಂ ಬೊಮ್ಮಾಯಿ

    ಕೇಸರಿ ಕಂಡರೆ ಕಾಂಗ್ರೆಸ್‌ಗೆ ಅಲರ್ಜಿ ಯಾಕೆ?- ವಿವೇಕ ಯೋಜನೆ ಸಮರ್ಥನೆ ಮಾಡಿಕೊಂಡ ಸಿಎಂ ಬೊಮ್ಮಾಯಿ

    ಬೆಂಗಳೂರು: ಶಾಲಾ ಕೊಠಡಿಗಳಿಗೆ ಕೇಸರಿ (Saffron) ಬಣ್ಣ ಹೊಡೆಯುವ ಸರ್ಕಾರದ ನಿರ್ಧಾರವನ್ನು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಮರ್ಥನೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ಗೆ (Congress) ಕೇಸರಿ ಬಣ್ಣ ಕಂಡರೆ ಯಾಕೆ ಅಲರ್ಜಿ ಎಂದು ಕಿಡಿಕಾರಿದ್ದಾರೆ.

    ವಿವೇಕ ಯೋಜನೆಯಡಿ (Viveka Yojana) ನಿರ್ಮಾಣವಾಗುತ್ತಿರುವ ಶಾಲೆಗಳ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯಲು ಸರ್ಕಾರ ಮುಂದಾಗಿದೆ. ಇದಕ್ಕೆ ಕಾಂಗ್ರೆಸ್ ಮತ್ತು ಮುಸ್ಲಿಂ ಸಂಘಟನೆಗಳು ವಿರೋಧ ಮಾಡಿವೆ. ವಿರೋಧ ಮಾಡಿದ ಕಾಂಗ್ರೆಸ್ ಮತ್ತು ಮುಸ್ಲಿಂ ಸಂಘಟನೆ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು.

    ಎಲ್ಲದರಲ್ಲೂ ರಾಜಕಾರಣ ಮಾಡುವುದು ಇಂದು ಬಹಳ ಕೆಳಹಂತಕ್ಕೆ ಹೋಗುತ್ತಿದೆ. ಕೇಸರಿ ಬಣ್ಣ ನಮ್ಮ ಭಾರತದ ಬಾವುಟದಲ್ಲೇ ಇದೆ. ಕೇಸರಿ ಕಂಡರೆ ಅವರಿಗೆ ಯಾಕೆ ಅಷ್ಟೊಂದು ಅಲರ್ಜಿ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಇನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ: ಪ್ರತಾಪ್ ಸಿಂಹ

    ಈ ಯೋಜನೆಯನ್ನು ಸ್ವಾಮಿ ವಿವೇಕಾನಂದ (Swami Vivekananda) ಅವರ ಹೆಸರಿನಲ್ಲಿ ಮಾಡುತ್ತಿದ್ದೇವೆ. ಸ್ವಾಮಿ ವಿವೇಕಾನಂದ ಒಬ್ಬ ಸನ್ಯಾಸಿ. ಅವರು ತೊಡುತ್ತಿದ್ದ ಎಲ್ಲಾ ವಸ್ತ್ರಗಳೂ ಕೇಸರಿ. ಹೀಗಾಗಿ ಅವರ ಹೆಸರಿನಲ್ಲಿ ಮಾಡುತ್ತಿರುವ ಯೋಜನೆಯಾದ್ದರಿಂದ ಶಾಲೆಗಳ ಕೊಠಡಿಗೆ ಕೇಸರಿ ಬಣ್ಣ ಹಚ್ಚಲಾಗುತ್ತಿದೆ. ಅದರಲ್ಲಿ ಬೇರೆ ಯಾವುದೇ ಅರ್ಥವಿಲ್ಲ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಇದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬೊಮ್ಮಾಯಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಮುಂದಿನ ವಾರದಿಂದ ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತೇನೆ: ಹೆಚ್‌.ಡಿ ದೇವೇಗೌಡ

    Live Tv
    [brid partner=56869869 player=32851 video=960834 autoplay=true]

  • ಡ್ರೈ ಫ್ರೂಟ್ಸ್ ಹಾಲಿನ ಶರಬತ್ತು ಮಾಡುವ ಟೇಸ್ಟಿ ವಿಧಾನ

    ಡ್ರೈ ಫ್ರೂಟ್ಸ್ ಹಾಲಿನ ಶರಬತ್ತು ಮಾಡುವ ಟೇಸ್ಟಿ ವಿಧಾನ

    ಹಾಲು ಮತ್ತು ಡ್ರೈ ಫ್ರೂಟ್ಸ್ ಮಕ್ಕಳಿಂದ ವೃದ್ಧರವರೆಗೂ ತುಂಬಾ ಅಗತ್ಯವಾದ ಪೌಷ್ಟಿಕ ಆಹಾರವಾಗಿದೆ. ಇವೆರೆಡನ್ನು ಸೇರಿಸಿ ನಿಮಗೆ ಇಂದು ಅದ್ಭುತ ಮತ್ತು ಆರೋಗ್ಯಕರವಾದ ರೆಸಿಪಿಯನ್ನು ಕೇಳಿಕೊಡುತ್ತಿದ್ದೇವೆ. ಇದನ್ನು ಎಲ್ಲರೂ ಇಷ್ಟಪಟ್ಟು ಸವಿಯುತ್ತಾರೆ. ಜೊತೆಗೆ ಎಲ್ಲರಿಗೂ ತುಂಬಾ ಅವಶ್ಯಕವಾದ ಪೋಷಕಾಂಶವನ್ನು ಈ ರೆಸಿಪಿ ಹೊಂದಿದೆ. ನಾವು ಇಂದು ಕೇಳಿಕೊಡುವ ‘ಡ್ರೈ ಫ್ರೂಟ್ಸ್ ಹಾಲಿನ ಶರಬತ್ತುನ್ನು ವಾರಕ್ಕೊಮ್ಮೆಯಾದರು ಮಾಡಿಕೊಂಡು ಕುಡಿದರೆ ದೇಹಕ್ಕೆ ತುಂಬಾ ಒಳ್ಳೆಯದು.

    ಡ್ರೈ ಫ್ರೂಟ್ ಪೇಸ್‍ಗಾಗಿ ಬೇಕಾಗಿರುವ ಪದಾರ್ಥಗಳು:
    * ಬಾದಾಮಿ – 2 ಟೇಬಲ್ಸ್ಪೂನ್
    * ಪಿಸ್ತಾ – 2 ಟೇಬಲ್ಸ್ಪೂನ್
    * ಗೋಡಂಬಿ – 2 ಟೇಬಲ್ಸ್ಪೂನ್
    * ಬಿಸಿನೀರು (ನೆನೆಸಲು)
    * ಹಾಲು – 2 ಟೇಬಲ್ಸ್ಪೂನ್

    ಶರಬತ್ತುಗೆ ಬೇಕಾಗಿರುವ ಪದಾರ್ಥಗಳು:
    * ಹಾಲು – ಒಂದುವರೆ ಲೀಟರ್
    * ಕೇಸರಿ – ಸ್ವಲ್ಪ
    * ಕಸ್ಟರ್ಡ್ ಪುಡಿ – 2 ಟೀಸ್ಪೂನ್
    * ಸಕ್ಕರೆ – ಅರ್ಧ ಕಪ್
    * ಪಿಸ್ತಾ(ಅಲಂಕರಿಸಲು)

    ಮಾಡುವ ವಿಧಾನ:
    * ಮೊದಲನೆಯದಾಗಿ, ಒಂದು ಬಟ್ಟಲಿನಲ್ಲಿ ಬಾದಾಮಿ, ಪಿಸ್ತಾ, ಗೋಡಂಬಿ ತೆಗೆದುಕೊಳ್ಳಿ. ಬಿಸಿನೀರಿನಲ್ಲಿ 10 ನಿಮಿಷಗಳ ಕಾಲ ನೆನೆಸಿ.
    * ಬಾದಾಮಿಯ ಸಿಪ್ಪೆಯನ್ನು ತೆಗೆದು ಡ್ರೈ ಫ್ರೂಟ್ಸ್‍ಗಳನ್ನು ಮಿಕ್ಸರ್ ಜಾರ್‌ಗೆ  ಹಾಕಿ ಹಾಲು ಸೇರಿಸಿ ರುಬ್ಬಿಕೊಳ್ಳಿ. ಇದನ್ನು ಪಕ್ಕಕ್ಕೆ ಇರಿಸಿ.
    * ದೊಡ್ಡ ಕಡಾಯಿಯಲ್ಲಿ ಹಾಲು ಹಾಕಿ ಅದಕ್ಕೆ ಕೇಸರಿ ಹಾಕಿ ಹಾಲನ್ನು ಕುದಿಸಿ.
    * ಈಗ ತಯಾರಾದ ನಟ್ಸ್ ಪೇಸ್ಟ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಹಾಲು ಸ್ವಲ್ಪ ಗಟ್ಟಿಯಾಗುವವರೆಗೂ ಕುದಿಸಿ.
    * ಸಣ್ಣ ಬಟ್ಟಲಿನಲ್ಲಿ ಕಸ್ಟರ್ಡ್ ಪುಡಿ ಮತ್ತು ಹಾಲು ತೆಗೆದುಕೊಳ್ಳಿ. ನಂತರ ಕಸ್ಟರ್ಡ್ ಪುಡಿಯನ್ನು ಹಾಲಿನೊಂದಿಗೆ ಚೆನ್ನಾಗಿ ಮಿಶ್ರಣ ಮಾಡಿ. ಕಸ್ಟರ್ಡ್ ಮಿಶ್ರಣವನ್ನು ಹಾಲಿನ ಮಿಶ್ರಣಕ್ಕೆ ಸುರಿದು ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಸಕ್ಕರೆಯನ್ನು ಸೇರಿಸಿ ಸರಿಯಾಗಿ ಸಂಯೋಜಿಸಿ. ಗ್ಯಾಸ್ ಆಫ್ ಮಾಡಿ.
    * ಹಾಲು ಸಂಪೂರ್ಣವಾಗಿ ತಣ್ಣಗಾದ ಮೇಲೆ ಅದನ್ನು ದೊಡ್ಡ ಬಟ್ಟಲಿಗೆ ವರ್ಗಾಯಿಸಿ ಮತ್ತು 4 ಗಂಟೆಗಳ ಕಾಲ ರೆಫ್ರಿಜೆರೇಟ್‍ನಲ್ಲಿ ಹಿಡಿ.
    * 4 ಗಂಟೆಗಳ ನಂತರ ಹಾಲಿನ ಶರ್ಬತ್‍ನ್ನು ಚೆನ್ನಾಗಿ ಮಿಕ್ಸ್ ಮಾಡಿ.

    – ಅಂತಿಮವಾಗಿ, ಹಾಲಿನ ಶರಬತ್ತನ್ನು ಐಸ್ ಕ್ಯೂಬ್, ಪಿಸ್ತಾ ಮತ್ತು ಕೇಸರಿ ಹಾಕಿ ಸರ್ವ್ ಮಾಡಿ.

    Live Tv