Tag: Sagarmala

  • ಕರ್ನಾಟಕ-ಲಕ್ಷದ್ವೀಪ ವ್ಯಾಪಾರ ಮಾರ್ಗ ಪುನರುಜ್ಜೀವನಗೊಳಿಸಲು ಕೆಎಂಬಿ ಪೂರ್ವ ಭಾವಿಯಾಗಿ ಕೆಲಸ ಮಾಡಲಿದೆ: ಸಚಿವ ವೈದ್ಯ

    ಕರ್ನಾಟಕ-ಲಕ್ಷದ್ವೀಪ ವ್ಯಾಪಾರ ಮಾರ್ಗ ಪುನರುಜ್ಜೀವನಗೊಳಿಸಲು ಕೆಎಂಬಿ ಪೂರ್ವ ಭಾವಿಯಾಗಿ ಕೆಲಸ ಮಾಡಲಿದೆ: ಸಚಿವ ವೈದ್ಯ

    ಬೆಂಗಳೂರು : ಕರ್ನಾಟಕ (Karnataka) ಮತ್ತು ಲಕ್ಷದ್ವೀಪ (Lakshadweepa) ನಡುವಿನ ಐತಿಹಾಸಿಕ ವ್ಯಾಪಾರ ಮಾರ್ಗಗಳನ್ನು ಪುನರುಜ್ಜೀವನಗೊಳಿಸಲು ಕರ್ನಾಟಕ ಜಲಸಾರಿಗೆ ಮಂಡಳಿ (KMB) ಪೂರ್ವಭಾವಿಯಾಗಿ ಕೆಲಸ ಮಾಡುತ್ತದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ್ ಎಸ್. ವೈದ್ಯ (Mankal Vaidya) ತಿಳಿಸಿದರು.

    ಲಕ್ಷದ್ವೀಪದ ಕವರತ್ತಿಗೆ (Kavaratti) ಭೇಟಿ ನೀಡಿದ ಸಚಿವ ಮಂಕಾಳ್ ಎಸ್. ವೈದ್ಯ ಅವರು, ಕಡಲ ವಲಯದಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಮೂಲಸೌಕರ್ಯ ಯೋಜನೆಗಳ ಬಗ್ಗೆ ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುದೀರ್ಘವಾಗಿ ಚರ್ಚಿಸಿ, ಮಾತನಾಡಿದರು.

    ಮಂಗಳೂರಿನಲ್ಲಿ ಲಕ್ಷದ್ವೀಪಕ್ಕೆ ಮೀಸಲಾದ ಜೆಟ್ಟಿಯನ್ನು ಅಭಿವೃದ್ಧಿಪಡಿಸುವ ಯೋಜನೆಯ ಪ್ರಗತಿಯನ್ನು ವೇಗಗೊಳಿಸಲಾಗುತ್ತಿದ್ದು, ಈ ಯೋಜನೆಯನ್ನು ಕೇಂದ್ರ ಸರ್ಕಾರದ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಸಾಗರಮಾಲಾ ಯೋಜನೆಯಡಿ ಕೈಗೊಳ್ಳಲಾಗುತ್ತದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜಕೀಯ ಬಿಡುವ ಮಾತೇ ಇಲ್ಲ: ಎಸ್ಎನ್ ನಾರಾಯಣಸ್ವಾಮಿ

    ಸಾಗಾರಮಾಲಾ ಯೋಜನೆಯಿಂದ ಲಕ್ಷದ್ವೀಪ ದ್ವೀಪಗಳ ಮುಖ್ಯ ಭೂಭಾಗಕ್ಕೆ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು ಅಭಿಪ್ರಾಯ ತಿಳಿಸಿದ್ದಾರೆ.

    ತರುವಾಯ, ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಎದುರಿಸುತ್ತಿರುವ ಪ್ರಸ್ತುತ ನಿರ್ಬಂಧಗಳು ಮತ್ತು ಸವಾಲುಗಳನ್ನು ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು. ಈ ಸವಾಲುಗಳನ್ನು ಪರಿಹರಿಸಲು, ರಾಜ್ಯ ಸಚಿವರಾದ ಮಂಕಾಳ್ ಎಸ್. ವೈದ್ಯ ಅವರು ಮಾತನಾಡಿ, ಕರ್ನಾಟಕ ರಾಜ್ಯದಿಂದ ಲಕ್ಷದ್ವೀಪ ದ್ವೀಪಗಳಿಗೆ ಹಾಲು ಉತ್ಪನ್ನಗಳು, ಔಷಧಿಗಳು ಮತ್ತು ತಾಜಾ ಉತ್ಪನ್ನಗಳಂತಹ ಅಗತ್ಯ ಸರಕುಗಳ ಸಾಗಣೆಯನ್ನು ಹೆಚ್ಚಿಸಲು ಕರ್ನಾಟಕ ಪ್ರಬಲ್ಯವಾಗಿದೆ ಎಂದು ತಿಳಿಸಿದರು.

    ಹೆಚ್ಚುವರಿಯಾಗಿ, ವ್ಯಾಪಾರ ಮಾರ್ಗಗಳನ್ನು ಮತ್ತಷ್ಟು ಸುಗಮಗೊಳಿಸಲು ಹಳೆಯ ಮಂಗಳೂರು ಬಂದರು ಸಮೀಪದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸ್ಥಾಪಿಸಲು ಯುಟಿಎಲ್ಎಗೆ ನೆರವು ನೀಡುವಂತೆ ಸಚಿವ ಮಂಕಾಳ್ ಎಸ್‌ ವೈದ್ಯ ಅವರು ಮನವಿ ಮಾಡಿಕೊಂಡರು.

    ಈ ಸಭೆಯಲ್ಲಿ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯ್‌ ಪುರ ಹಾಗೂ ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು, ರಾಜ್ಯ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

  • ಕಾಂಗ್ರೆಸ್ ತೊರೆಯುವ ಸುಳಿವು ನೀಡಿದ ಮಾಜಿ ಶಾಸಕ ಸತೀಶ್ ಸೈಲ್

    ಕಾಂಗ್ರೆಸ್ ತೊರೆಯುವ ಸುಳಿವು ನೀಡಿದ ಮಾಜಿ ಶಾಸಕ ಸತೀಶ್ ಸೈಲ್

    ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಮಾಜಿ ಶಾಸಕ ಸತೀಶ್ ಸೈಲ್ ಕಾಂಗ್ರೆಸ್ ಪಕ್ಷ ತೊರೆಯುವ ಕುರಿತು ಮಾತನಾಡಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿಲ್ಲ. ಪಕ್ಷೇತರನಾಗಿ ರಿಕ್ಷಾ ಚಿಹ್ನೆಯಲ್ಲಿ ಗೆದ್ದಿದ್ದೇನೆ. ರಾಜಕೀಯ ಮಾಡುವಷ್ಟು ದಿನ ಮಾಡಬೇಕು. ಉಳಿದ ಸಮಯದಲ್ಲಿ ಬೇರೆಯವರನ್ನು ಮುಂದೆ ತರಬೇಕು. ನಮ್ಮ ತೀರ್ಮಾನವನ್ನು ಜನರ ಮುಂದೆ ಹೇಳಬೇಕು. ಆ ಬಳಿಕವೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

    ಸಾಗರಮಾಲಾ ಯೋಜನೆ ವಿರೋಧಿ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದು ಹೇಳಿದ ಅವರು, ನಾನು ಕಾರವಾರದ ಸಲುವಾಗಿ ಸಮಸ್ತ ಜೀವವನ್ನು ಮುಡಿಪಾಗಿಟ್ಟಿದ್ದೇನೆ. ಪಕ್ಷ ತೊರೆಯುವ ಕುರಿತು ನಾನು ನನ್ನ ನಿರ್ಣಯ ನಾನು ತೆಗೆದುಕೊಳ್ಳುತ್ತೇನೆ. ಪಕ್ಷದಲ್ಲಿ ಇರಲಿ ಹೊರಗಿರಲಿ ನನ್ನ ಕೆಲಸ ಮಾಡುತ್ತೇನೆ. ನಾನು ಪಕ್ಷದಲ್ಲೇ ಇರಬೇಕು ಎಂದೇನೂ ಇಲ್ಲ ಎಂದರು. ಇದನ್ನು ಓದಿ: ಸಾಗರಮಾಲಾ ಯೋಜನೆಗೆ ಮೀನುಗಾರರ ವಿರೋಧ – ಜನಪ್ರತಿನಿಧಿಗಳ ಭಾವಚಿತ್ರಕ್ಕೆ ಸಗಣಿ, ಚಪ್ಪಲಿ

    ಸದ್ಯ ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ. ಮುಂದಿನ ನನ್ನ ಅಭಿಪ್ರಾಯವನ್ನು ಜನರ ಮುಂದೆ ಹೇಳಬೇಕು. ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ. ಆದರೆ ಮಾಧ್ಯಮಗಳಲ್ಲಿ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ವರದಿಯಾಗಿದೆ. ನಾನು ಯಾವುದೇ ಕಾರಣಕ್ಕೂ ರಾಜಕೀಯದಿಂದ ದೂರ ಸರಿಯುವುದಿಲ್ಲ. ಗಡಿ ಜಿಲ್ಲೆಯಾಗಿರುವ ಕಾರಣ ಇಲ್ಲಿ ಸಾಕಷ್ಟು ಅಭಿವೃದ್ಧಿಯಾಗಬೇಕಿದೆ. ಕಾರವಾರಕ್ಕೆ ಆಸ್ಪತ್ರೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೆ. ಮೆಡಿಕಲ್ ಕಾಲೇಜು ತರುವುದಕ್ಕೂ ಪ್ರಯತ್ನ ಮಾಡಿದ್ದೆ. ಆದರೆ ಅದು ಸಾಧ್ಯವಾಗಲಿಲ್ಲ. ನಾನು ರಾಜಕೀಯದಲ್ಲಿ ಇಲ್ಲಿದ್ದರೂ ಕ್ಷೇತ್ರಕ್ಕಾಗಿ ಕೆಲಸ ಮಾಡುತ್ತೇನೆ ಎಂದರು.