Tag: Sahitya Akademi

  • ಇನ್ಫೋಸಿಸ್ ಸುಧಾಮೂರ್ತಿಗೆ ಬಾಲ ಸಾಹಿತ್ಯ ಪುರಸ್ಕಾರ

    ಇನ್ಫೋಸಿಸ್ ಸುಧಾಮೂರ್ತಿಗೆ ಬಾಲ ಸಾಹಿತ್ಯ ಪುರಸ್ಕಾರ

    ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿಯು (Sahitya Akademi) ಈ ವರ್ಷದ ಬಾಲ ಸಾಹಿತ್ಯ ಪುರಸ್ಕಾರ (Bal Sahitya Puraskar) ಹಾಗೂ ಯುವ ಪುರಸ್ಕಾರ ವಿಜೇತರ ಪಟ್ಟಿಯನ್ನು ಪ್ರಕಟಿಸಿದೆ.

    ಬಾಲ ಸಾಹಿತ್ಯ ಪುರಸ್ಕಾರಕ್ಕೆ ಕನ್ನಡದ ಪ್ರಸಿದ್ಧ ಲೇಖಕಿಯೂ ಆಗಿರುವ ಇನ್ಫೋಸಿಸ್ ಸಂಸ್ಥಾಪಕಿ ಸುಧಾ ಮೂರ್ತಿ (Sudha Murty) ಅವರನ್ನು ಆಯ್ಕೆ ಮಾಡಲಾಗಿದೆ. ಮಾತ್ರವಲ್ಲದೇ ವಿಜಯಶ್ರೀ ಹಾಲಾಡಿ ಸೇರಿ 22 ಜನರನ್ನು ಆಯ್ಕೆ ಮಾಡಲಾಗಿದೆ. ಯುವ ಪುರಸ್ಕಾರಕ್ಕೆ ಮಂಜುನಾಯಕ್ ಚಳ್ಳೂರು ಸೇರಿ 20 ಲೇಖಕರು ಭಾಜನರಾಗಿದ್ದಾರೆ.

    ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮಾಧವ್ ಕೌಶಿಕ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಸಿಇಟಿ ಸೀಟು ಹಂಚಿಕೆ – ಜೂ. 27ರಿಂದ ಜು. 15ರವರೆಗೆ ದಾಖಲೆಗಳ ಆನ್‌ಲೈನ್ ಪರಿಶೀಲನೆ

    ಬಾಲ ಸಾಹಿತ್ಯ ಪುರಸ್ಕಾರ ವಿಭಾಗದಲ್ಲಿ ಮಕ್ಕಳ ಲೇಖಕಿ ಸುಧಾ ಮೂರ್ತಿ ಅವರ ‘ಗ್ರ್ಯಾಂಡ್ ಪೇರೆಂಟ್ಸ್ ಬ್ಯಾಗ್ ಆಫ್ ಸ್ಟೋರೀಸ್’ ಎಂಬ ಕಥಾ ಸಂಕಲನಕ್ಕೆ ಪ್ರಶಸ್ತಿ ನೀಡಲಾಗಿದೆ. ಮತ್ತೊಬ್ಬ ಕನ್ನಡತಿ ವಿಜಯಶ್ರೀ ಹಾಲಾಡಿ ಅವರ ‘ಸೂರಕ್ಕಿ ಗೇಟ್’ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪುರಸ್ಕಾರ ಲಭಿಸಿದೆ.

    ಕನ್ನಡದ ಯುವ ಕತೆಗಾರ ಮಂಜುನಾಯಕ್ ಚಳ್ಳೂರು ಅವರ ‘ಫೂ ಮತ್ತು ಇತರ ಕತೆಗಳು’ ಕಥಾ ಸಂಕಲನಕ್ಕೆ ಯುವ ಪುರಸ್ಕಾರ ದೊರೆತಿದೆ. ಎರಡೂ ಪ್ರಶಸ್ತಿಗಳ ವಿಜೇತರಿಗೆ ತಾಮ್ರದ ಫಲಕ ಮತ್ತು ತಲಾ 50,000 ರೂ.ಗಳ ಬಹುಮಾನ ನೀಡಲಾಗುತ್ತದೆ. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ – ಜಗದೀಶ್‌ ಶೆಟ್ಟರ್‌ ಸೇರಿ ಕಾಂಗ್ರೆಸ್‌ನ ಮೂವರೂ ಅವಿರೋಧ ಆಯ್ಕೆ

  • ಮಮತಾ ಬ್ಯಾನರ್ಜಿಗೆ ಸಾಹಿತ್ಯ ಗೌರವ ಸಿಗುತ್ತಿರುವುದು ಅವಮಾನ: ಪ್ರಶಸ್ತಿ ಹಿಂದಿರುಗಿಸಿದ ಲೇಖಕಿ

    ಮಮತಾ ಬ್ಯಾನರ್ಜಿಗೆ ಸಾಹಿತ್ಯ ಗೌರವ ಸಿಗುತ್ತಿರುವುದು ಅವಮಾನ: ಪ್ರಶಸ್ತಿ ಹಿಂದಿರುಗಿಸಿದ ಲೇಖಕಿ

    ಕೋಲ್ಕತ್ತಾ: ಸಾಹಿತ್ಯದ ಕೊಡುಗೆಗಾಗಿ ವಿಶೇಷ ಪ್ರಶಸ್ತಿಯನ್ನು ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ನೀಡಲು ಸಾಹಿತ್ಯ ಅಕಾಡೆಮಿ ನಿರ್ಧರಿಸಿದೆ. ಆದರೆ ಬಂಗಾಳಿ ಲೇಖಕಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕಿ ಇದನ್ನು ವಿರೋಧಿಸಿ ತನಗೆ ಬಂದಿದ್ದ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

    2019 ರಲ್ಲಿ ‘ಪಶ್ಚಿಮಬಂಗಾ ಬಾಂಗ್ಲಾ ಅಕಾಡೆಮಿ’ ರತ್ನಾ ರಶೀದ್ ಬ್ಯಾನರ್ಜಿ ಅವರಿಗೆ ‘ಅನ್ನದ ಶಂಕರ್ ಸ್ಮಾರಕ ಸಮ್ಮಾನ್’ ಪ್ರಶಸ್ತಿ ಕೊಟ್ಟು ಗೌರವಿಸಿತ್ತು. ಆದರೆ ಇದನ್ನು ರತ್ನಾ ರಶೀದ್ ಬ್ಯಾನರ್ಜಿ ಹಿಂದಿರುಗಿಸಿದ್ದಾರೆ. ಈ ಕುರಿತು ರತ್ನಾ ರಶೀದ್ ಅವರು ಶಿಕ್ಷಣ ಸಚಿವೆ ಮತ್ತು ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರಿಗೆ ಪತ್ರ ಬರೆದಿದ್ದು, ರವೀಂದ್ರನಾಥ ಟ್ಯಾಗೋರ್ ಜನ್ಮದಿನದಂದು ಸಿಎಂಗೆ ಹೊಸ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಇದರಿಂದ ನನಗೆ ನೀಡಿರುವ ಪ್ರಶಸ್ತಿ ಮುಳ್ಳಿನ ಕಿರೀಟವಾಗಿ ಪರಿಣಮಿಸಿದೆ. ಅದಕ್ಕೆ ನಾನು ಈ ಪತ್ರವನ್ನು ಹಿಂದಿರುಗಿಸಲು ನಿರ್ಧರಿಸಿದ್ದೇನೆ ಎಂದು ಬರೆದಿದ್ದಾರೆ. ಇದನ್ನೂ ಓದಿ: 80ಕ್ಕೂ ಹೆಚ್ಚು ಮಕ್ಕಳನ್ನ ಕಾಡುತ್ತಿದೆ ಟೊಮೆಟೊ ಜ್ವರ – ಏನಿದರ ಲಕ್ಷಣ? 

    ಸಿಎಂಗೆ ಸಾಹಿತ್ಯ ಪ್ರಶಸ್ತಿ ನೀಡುವ ಕ್ರಮದಿಂದ ಬರಹಗಾರ್ತಿಯಾಗಿ ನನಗೆ ಅವಮಾನವಾಗಿದೆ. ಇದು ಕೆಟ್ಟ ನಿರ್ಧಾರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸೋಮವಾರ ಬಾಂಗ್ಲಾ ಅಕಾಡೆಮಿ ಟ್ಯಾಗೋರ್ ಅವರ ಜನ್ಮದಿನದ ಹಿನ್ನೆಲೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಅವರು ಆಗಮಸಿದ್ದರು. ಈ ವೇಳೆ ಅಕಾಡೆಮಿಯು ಮಮತಾ ಬ್ಯಾನರ್ಜಿ ಅವರ 900ಕ್ಕೂ ಹೆಚ್ಚು ಕವನ ಸಂಕಲನ ‘ಕಬಿತಾ ಬಿಟನ್’ ಪುಸ್ತಕ ಈ ವರ್ಷ ಅತ್ಯುತ್ತಮ ಪುಸ್ತಕ ಎಂದು ಹೇಳಿ ಪ್ರಶಸ್ತಿ  ಘೋಷಿಸಿತು. ಈ ಕಾರ್ಯಕ್ರಮದಲ್ಲಿ ಸಿಎಂ ಉಪಸ್ಥಿತರಿದ್ದರೂ ಬಸು ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

    Ratna Rashid Banerjee Returns Award As Mamata Banerjee Gets Literary Honour

    ರತ್ನಾ ರಶೀದ್ ಬ್ಯಾನರ್ಜಿ ಅವರು 30ಕ್ಕೂ ಹೆಚ್ಚು ಲೇಖನಗಳು ಮತ್ತು ಸಣ್ಣ ಕಥೆಗಳನ್ನು ಬರೆದಿದ್ದಾರೆ. ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಒಳಗೊಂಡಂತೆ ಜಾನಪದ ಸಂಸ್ಕೃತಿಯ ಕುರಿತು ಸಂಶೋಧನಾ ಕಾರ್ಯಗಳನ್ನು ಮಾಡಿದ್ದಾರೆ. ಇದನ್ನೂ ಓದಿ: ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ 

    2020ರ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಮಮತಾ ಬ್ಯಾನರ್ಜಿ ಅವರ ‘ಕಬಿತಾ ಬಿಟಾನ್’  ಕವನ ಸಂಕಲನ ಬಿಡುಗಡೆಯಾಗಿತ್ತು.

  • ಡಾ.ವಿಜಯಾರ ‘ಕುದಿ ಎಸರು’ ಆತ್ಮಚರಿತ್ರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಡಾ.ವಿಜಯಾರ ‘ಕುದಿ ಎಸರು’ ಆತ್ಮಚರಿತ್ರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಬೆಂಗಳೂರು: ಕನ್ನಡದ ಲೇಖಕಿ ಡಾ.ವಿಜಯಾ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

    ಡಾ.ವಿಜಯಾ ಅವರ ‘ಕುದಿ ಎಸರು- ತಿಟ್ಹತ್ತಿ ತಿರುಗಿ ನೋಡಿದಾಗ’ ಆತ್ಮಚರಿತ್ರೆಗೆ ಕನ್ನಡ ವಿಭಾಗದಲ್ಲಿ 2019ನೇ ಸಾಲಿನಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಇಂಗ್ಲಿಷ್ ಭಾಷೆಯ ‘ಆ್ಯನ್ ಇರಾ ಆಫರ್ ಡಾರ್ಕ್ ನೆಸ್(ನಾನ್-ಫಿಕ್ಷನ್)’ ಗೂ ಪ್ರಶಸ್ತಿ ಲಭಿಸಿದೆ. ಶಶಿ ತರೂರ್ ಅವರ ಪುಸ್ತಕ 2016ರಲ್ಲಿ ಬಿಡುಗಡೆ ಮಾಡಲಾಗಿತ್ತು. ಇದೇ ಕೃತಿ ಬ್ರಿಟನ್ ನಲ್ಲಿ Inglorious Empire: What the British Did to India ಹೆಸರಿನಲ್ಲಿ ಮುದ್ರಣಗೊಂಡು ಪ್ರಕಟವಾಗಿತ್ತು. ಬಿಡುಗಡೆಗೊಂಡ ಆರು ತಿಂಗಳಲ್ಲಿ 50 ಸಾವಿರ ಕೃತಿಗಳು ಮಾರಾಟವಾಗಿದ್ದವು.

    ಭಾರತೀಯ ಭಾಷೆಗಳ ಅಭಿವೃದ್ಧಿಯ ಗುರಿಯನ್ನು ಹೊಂದಿರುವ ಕೇಂದ್ರ ಸಾಹಿತ್ಯ ಅಕಾಡೆಮಿಯು ಕೇಂದ್ರ ಸರ್ಕಾರದ ಅನುದಾನದಲ್ಲಿ ನಡೆಯುವ ಸ್ವಾಯತ್ತ ಸಂಸ್ಥೆಯಾಗಿದೆ. 1954ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ ಭಾರತೀಯ ಭಾಷೆಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದೆ. ಮೊದಲ ಬಾರಿಗೆ ಕನ್ನಡದಲ್ಲಿ 1955ರಲ್ಲಿ ಮಹಾಕವಿ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಿಕ್ಕಿತ್ತು.

    ಭಾರತದ ಒಟ್ಟು 24 ಭಾಷೆಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ವಿಜೇತರಿಗೆ ಒಂದು ಲಕ್ಷ ರೂ. ನಗದು ಮತ್ತು ಫಲಕ ನೀಡಿ ಗೌರವಿಸಲಾಗುತ್ತದೆ. ಈ ಬಾರಿ ನೇಪಾಳಿ ಭಾಷೆ ಹೊರತು ಪಡಿಸಿ 23 ಭಾಷೆಗಳಿಗೆ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನೇಪಾಳಿ ಭಾಷೆಯ ವಿಜೇತರ ಹೆಸರನ್ನು ಶೀಘ್ರದಲ್ಲಿಯೇ ಘೋಷಿಸಲಾಗುವುದು ಅಕಾಡೆಮಿ ತಿಳಿಸಿದೆ.