Tag: Sai Kumar

  • ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್

    ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್

    ಥಾವರ ಸಿನಿಮಾ ಖ್ಯಾತಿಯ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಈಗ ‘ಚೌಕಿದಾರ್’ ಚಿತ್ರದ (Chowkidar Movie) ಜೊತೆ ಮತ್ತೆ ಬರುತ್ತಿದ್ದಾರೆ. ಈಗಾಗಲೇ ಚಿತ್ರದ ಟೀಸರ್ ಮತ್ತು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರೇಕ್ಷಕರ ವಲಯದಲ್ಲಿ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗುವಂತೆ ಮಾಡಿದೆ. ಇದೀಗ ಚೌಕಿದಾರ್ ಅಂಗಳದಿಂದ ಮತ್ತೊಂದು ಗೀತೆ ಬಿಡುಗಡೆಯಾಗಿದೆ.

    ಚೌಕಿದಾರ್ ಸಿನಿಮಾದ ಜಾಲಿ ಹಾಡು ರಿಲೀಸ್ ಆಗಿದೆ. ನಾಯಕ ಓ ಮೈ ಬ್ರೋ ಎಂದು ಕುಣಿಯುವ ಹಾಡು ಇದಾಗಿದೆ. ಇದೇ ಸಮಯದಲ್ಲಿ ಅವನಿಗೆ ಅವನ ತಂದೆ ಸಾಥ್ ಕೊಟ್ಟಿದ್ದಾರೆ. ತಂದೆ ಪಾತ್ರ ನಿರ್ವಹಿಸಿರುವ ಸಾಯಿ ಕುಮಾರ್ ಭರ್ಜರಿಯಾಗಿ ಹೆಜ್ಜೆ ಹಾಕಿರುವುದು ವಿಶೇಷ. ಮುರುಳಿ ಮಾಸ್ಟರ್ ಹಾಡನ್ನು ಕೋರಿಯೋಗ್ರಫಿ ಮಾಡಿದ್ದಾರೆ. ನಾಯಕ ಪೃಥ್ವಿ ಅಂಬಾರ್ (Prithvi Ambar) ಹಾಗೂ ಸಾಯಿಕುಮಾರ್ (Sai Kumar) ಡ್ಯಾನ್ಸ್ ಜುಗಲ್ ಬಂದಿ ಹವಾ ಕ್ರಿಯೇಟ್ ಮಾಡುತ್ತಿದೆ. ಇದನ್ನೂ ಓದಿ: ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌

    ಚಿತ್ರರಂಗದಲ್ಲಿ ಐವತ್ತು ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ಚೌಕಿದಾರ್ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಹಾಡಿನಲ್ಲಿ ಅವರ ಮುಗ್ದತೆ ಪ್ರೇಕ್ಷಕರನ್ನು ಸೆಳೆಯುತ್ತಿದೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಓ ಮೈ ಬ್ರೋ ಪ್ಯಾಥೋ ಗೀತೆಗೆ ಖ್ಯಾತ ಗಾಯಕ ಕೈಲಾಸ್ ಖೇರ್ ಕಂಠ ಕುಣಿಸಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಹಾಡಿನ ಕಿಕ್ ಹೆಚ್ಚಿಸಿದೆ.

    ಚಿತ್ರದಲ್ಲಿ ದೊಡ್ಮನೆಯ ಮೊಮ್ಮಗಳು ಧನ್ಯಾ ರಾಮ್‌ಕುಮಾರ್ ನಾಯಕ ನಟಿಯಾಗಿ ಅಭಿನಯಿಸಿದ್ದಾರೆ. ದಿಯಾ ಚಿತ್ರ ಖ್ಯಾತಿಯ ನಟ ಪೃಥ್ವಿ ಅಂಬಾರ್ ಇಲ್ಲಿ ವಿಭಿನ್ನವಾಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ರಗಡ್ ರೋಲ್ ಮೂಲಕ ಪ್ರೇಕ್ಷಕರಿಗೆ ಎಂಟರ್ಟೈನ್ಮೆಂಟ್ ಕೊಡಲು ಸಜ್ಜಾಗಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಡೈಲಾಗ್ ಕಿಂಗ್ ಸಾಯಿ ಕುಮಾರ್ ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸುಧಾರಾಣಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸಿದ್ದಾರೆ.

    ಚೌಕಿದಾರ್ ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದು, ವಿದ್ಯಾದೇವಿ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಸಚಿನ್ ಬಸ್ರೂರು ಸಂಗೀತ, ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿದೆ. ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯವಿದೆ. ‘ಚೌಕಿದಾರ್’ ಬಹು ಭಾಷೆಗಳಲ್ಲಿ ಮೂಡಿ ಬರುತ್ತಿದೆ. ಇದನ್ನೂ ಓದಿ: `ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್

  • ತಲೈವ ಪಾತ್ರಕ್ಕೆ ಧ್ವನಿ ಕೊಟ್ಟ ಸಾಯಿಕುಮಾರ್

    ತಲೈವ ಪಾತ್ರಕ್ಕೆ ಧ್ವನಿ ಕೊಟ್ಟ ಸಾಯಿಕುಮಾರ್

    ಶ್ವರ್ಯ ರಜನಿಕಾಂತ್ ನಿರ್ದೇಶನದ ‘ಲಾಲ್ ಸಲಾಮ್’ (Lal Salaam) ಸಿನಿಮಾ ಇದೇ ಫೆ.9ರಂದು ರಿಲೀಸ್ ಆಗಲಿದೆ. ಮಗಳ ಸಿನಿಮಾದಲ್ಲಿ ತಲೈವ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದಾರೆ. ಇದೀಗ ರಿಲೀಸ್‌ಗೆ ಸಜ್ಜಾಗಿರೋ ವೇಳೆ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಕನ್ನಡದ ನಟ ಸಾಯಿಕುಮಾರ್ (Saikumar) ಅವರು ರಜನಿಕಾಂತ್ (Rajanikanth) ಪಾತ್ರಕ್ಕೆ ಧ್ವನಿ ನೀಡಿದ್ದಾರೆ.

    ‘ಲಾಲ್ ಸಲಾಮ್’ ಅಪ್ಪಟ ತಮಿಳು ಸಿನಿಮಾ. ತಮಿಳಿನ ಜೊತೆಗೆ ತೆಲುಗಿನಲ್ಲೂ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದ ತೆಲುಗು ಟ್ರೈಲರ್ ಇತ್ತೀಚೆಗೆ ರಿಲೀಸ್ ಆಗಿದೆ. ತೆಲುಗು ವರ್ಷನ್‌ನಲ್ಲಿ ರಜನಿಕಾಂತ್ (Rajanikanth) ಪಾತ್ರಕ್ಕೆ ಸಾಯಿಕುಮಾರ್ ಧ್ವನಿ ನೀಡಿದ್ದಾರೆ. ಅವರ ಖಡಕ್ ವಾಯ್ಸ್ ಪಾತ್ರದ ತೂಕವನ್ನು ಹೆಚ್ಚಿಸಿದೆ. ಇದನ್ನೂ ಓದಿ:‘ಮಂಡ್ಯ ಹೈದ’ನ ಜೊತೆ ಪ್ರತಿಭಾನ್ವಿತ ನಿರ್ದೇಶಕ ವಿ. ಶ್ರೀಕಾಂತ್ ಆಗಮನ

    ಇಷ್ಟು ವರ್ಷಗಳ ಕಾಲ ರಜನಿಕಾಂತ್ (Rajanikanth) ಸಿನಿಮಾಗಳು ತೆಲುಗಿಗೆ ಡಬ್ ಆದಾಗ ಅವರ ಪಾತ್ರಕ್ಕೆ ಗಾಯಕ ಮನೋ ಅವರು ಧ್ವನಿ ನೀಡುತ್ತಿದ್ದರು. ಅವರ ವಾಯ್ಸ್‌ಗೆ ಅಲ್ಲಿನ ಫ್ಯಾನ್ಸ್ ಅಡ್ಜಸ್ಟ್ ಆಗಿದ್ದರು. ಈಗ ಆ ಜಾಗಕ್ಕೆ ಸಾಯಿಕುಮಾರ್ ಅವರನ್ನು ತಂದಿದ್ದು ಕೆಲವರಿಗೆ ಬೇಸರ ಇದೆ. ಆದರೆ ಇನ್ನೂ ಕೆಲವರಿಗೆ ಸಾಯಿ ಕುಮಾರ್ ಅವರ ಖಡಕ್ ವಾಯ್ಸ್‌ನಲ್ಲಿ ಡೈಲಾಗ್ ಕೇಳಿ ಖುಷಿ ಆಗಿದೆ. ಸಿನಿಮಾ ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ.

    ‘ಲಾಲ್ ಸಲಾಮ್‌’ ಸಿನಿಮಾ ಹಿಂದೂ ಹಾಗೂ ಮುಸ್ಲಿಂ ಧರ್ಮಗಳ ನಡುವೆ ನಡೆಯುವ ಘರ್ಷಣೆ ಮತ್ತು ಸಾಮರಸ್ಯದ ಕಥೆಯನ್ನು ಹೇಳಲಿದೆ. ಈ ಬಗ್ಗೆ ಟ್ರೈಲರ್‌ನಲ್ಲಿ ಸುಳಿವು ನೀಡಲಾಗಿದೆ. ಎಲ್ಲ ದೇವರೂ ಒಂದೇ ಎನ್ನುವ ಡೈಲಾಗ್ ಹೈಲೈಟ್ ಆಗಿದೆ. ಈ ಸಿನಿಮಾದಲ್ಲಿ ಆ್ಯಕ್ಷನ್ ಕೂಡ ಇದೆ. ತಲೈವ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

    ‘ಲಾಲ್ ಸಲಾಮ್‌’ ಚಿತ್ರದಲ್ಲಿ ತಲೈವಾ ಅತಿಥಿಯಾಗಿ ಖಡಕ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಷ್ಣು ವಿಶಾಲ್, ವಿಕ್ರಾಂತ್, ಧನ್ಯಾ ಬಾಲಕೃಷ್ಣನ್ ಸೇರಿದಂತೆ ಹಲವರು ನಟಿಸಿದ್ದಾರೆ. ಈ ಚಿತ್ರಕ್ಕೆ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಮಾಡಿದ್ದಾರೆ.

  • ಸತ್ಯ ಸನ್ ಆಫ್ ಹರಿಶ್ಚಂದ್ರ: ಇದು ನಿರೂಪ್ ಸಿನಿಮಾದ ಟೈಟಲ್

    ಸತ್ಯ ಸನ್ ಆಫ್ ಹರಿಶ್ಚಂದ್ರ: ಇದು ನಿರೂಪ್ ಸಿನಿಮಾದ ಟೈಟಲ್

    ‘ರಂಗಿತರಂಗ’ ಸಿನಿಮಾದ ಯಶಸ್ವಿ ಜೋಡಿ  ನಿರೂಪ್ ಭಂಡಾರಿ ಮತ್ತು ಸಾಯಿ ಕುಮಾರ್ ವಿಬಿನ್ನ ಕಥಾವಸ್ತುವನ್ನು ಹೊಂದಿದ ಸಿನಿಮಾದಲ್ಲಿ ಮತ್ತೆ ಒಂದಾಗಿದ್ದಾರೆ.‘ಅಂಕಿತ್ ಸಿನಿಮಾಸ್’ ನಿರ್ಮಾಣದ ಈ ಚಿತ್ರದ ಟೈಟಲ್ ಮತ್ತು ಮೊದಲ ಲುಕ್ ಇಂದು ಬಿಡುಗಡೆಯಾಗಿದೆ.  ‘ಸತ್ಯ ಸನ್ ಆಫ್ ಹರಿಶ್ಚಂದ್ರ’ (Satya Son of Harishchandra) ಈ ಚಿತ್ರದ ಶೀರ್ಷಿಕೆ. ಇಂದು ಬಿಡುಗಡೆಯಾದ ಫಸ್ಟ್ ಲುಕ್ ಪೋಸ್ಟರ್ ಹಿತವಾದ ವರ್ಣ ಸಂಯೋಜನೆಯೊಂದಿಗೆ ಸುಂದರವಾಗಿ ಮೂಡಿ ಬಂದಿದೆ.

    ಮಗನಾಗಿ ನಿರೂಪ್ ಭಂಡಾರಿ (Nirup Bhandari) ಫಸ್ಟ್ ಲುಕ್ ಆಕರ್ಷಕವಾಗಿದೆ. ಅಪ್ಪನಾಗಿ ಸಾಯಿ ಕುಮಾರ್ (Sai Kumar) ಅವರ ಗತ್ತು ರಾಜಗಾಂಭೀರ್ಯದಿಂದ  ಕೂಡಿದೆ.ಈ ಫಸ್ಟ್ ಲುಕ್ ನಲ್ಲಿರುವ “ನನ್ನ ತಂದೆಯೇ ನನ್ನ ವಿಲನ್” ಘೋಷವಾಕ್ಯ ದೊಂದಿಗೆ ನಿರ್ದೇಶಕ ಸಚಿನ್ ವೀಕ್ಷಕರಲ್ಲಿ ಕುತೂಹಲ ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ತಂದೆ ಮತ್ತು ಮಗನ ಕಥಾ ಹಂದರವನ್ನು ಹೊಂದಿರುವುದರಿಂದ ಈ ಚಿತ್ರದ ಫಸ್ಟ್ ಲುಕ್ಕನ್ನು ನಾಯಕ ಮತ್ತು ನಿರ್ಮಾಪಕರ ತಂದೆಯರು ಜಂಟಿಯಾಗಿ ಬಿಡುಗಡೆ ಮಾಡಿದ್ದು ಔಚಿತ್ಯಪೂರ್ಣವಾಗಿತ್ತು. ಸತ್ಯ ಮತ್ತು ಸುಳ್ಳಿನ ಮಧ್ಯ ನಡೆಯುವ ಸಂಘರ್ಷದ ಕಥಾ ಹಂದರ ಹೊಂದಿರುವ ಸತ್ಯ ಸನ್ ಆಫ್ ಹರಿಶ್ಚಂದ್ರ ಸಿನಿಮಾ ಹಾಸ್ಯ ಹಾಗೂ ಸಾಂಸಾರಿಕ ಕಥಾವಸ್ತುವನ್ನು ಹೊಂದಿದ್ದು ಇದರ ಚಿತ್ರಣ ತೀರ್ಥಹಳ್ಳಿ ಮತ್ತು ಚೆನ್ನಗಿರಿಯಆಸುಪಾಸಿನ ಸುಂದರ ತಾಣದಲ್ಲಿ ಭರದಿಂದ ಸಾಗಿದೆ. ತಾರಾಗಣದಲ್ಲಿ ಬೃಂದಾ ಆಚಾರ್ಯ, ಅಂಕಿತಾ ಅಮರ್, ಸ್ವಾತಿ ಗುರುದತ್, ಎಂ ಕೆ ಮಠ, ಚೇತನ್ ದುರ್ಗಾ,ಮುಂತಾದವರು ನಿರೂಪ್ ಮತ್ತು ಸಾಯಿ ಕುಮಾರ್ ಅವರ ಮೇಲಾಟಕ್ಕೆ ಸಾಥ್ ಕೊಡಲಿದ್ದಾರೆ

    “ಸತ್ಯ ಸನ್ ಆಫ್ ಹರಿಶ್ಚಂದ್ರ” ಚಿತ್ರವನ್ನು ಸಚಿನ್ ವಾಲಿ ನಿರ್ದೇಶಿಸುತ್ತಿದ್ದು “ಅಂಕಿತ್ ಸಿನಿಮಾಸ್” ಬ್ಯಾನರ್ ನಡಿಯಲ್ಲಿ ಅಂಕಿತ್ ಸೋನಿಗಾರ ನಿರ್ಮಿಸುತ್ತಿದ್ದಾರೆ. ಮೂಲತಃ ಪೂಣೆಯವರಾದ ಅಂಕಿತ್ ಅವರು ಕನ್ನಡದ ಮೇಲಿನ ಅಭಿಮಾನದಿಂದ ಕನ್ನಡ ಚಿತ್ರವನ್ನು ನಿರ್ಮಿಸುತ್ತಿರುವುದು ಪ್ರಶಂಸನೀಯ.

     

    ಪ್ರಶಾಂತ್ ಮುಲಗೆ ಸಹ ನಿರ್ಮಾಪಕರಾಗಿದ್ದಾರೆ. ಈ ಚಿತ್ರಕ್ಕೆ ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸಚಿನ್ ಬಸ್ರೂರು  ಸಂಗೀತ, ಉಜ್ವಲ್ ಚಂದ್ರ ಸಂಕಲನ,  ಜೋ಼ಹ ಕಬೀರ್ ವಸ್ತ್ರ ವಿನ್ಯಾಸ ಹಾಗೂ ಉಲ್ಲಾಸ್ ಹೈದೂರ್ ಕಲಾ ನಿರ್ದೇಶನವಿದೆ.  “ಸತ್ಯಸನ್ ಆಫ್ ಹರಿಶ್ಚಂದ್ರ” ಚಿತ್ರವನ್ನು ಅಮೃತ್ ಸೋನೀಗಾರ ಪ್ರಸ್ತುತ ಪಡಿಸುತ್ತಿದ್ದಾರೆ.

  • ಕುಪ್ಪಳ್ಳಿಯ ಕವಿಮನೆಯಲ್ಲಿ ಖ್ಯಾತ ನಟ ಸಾಯಿಕುಮಾರ್

    ಕುಪ್ಪಳ್ಳಿಯ ಕವಿಮನೆಯಲ್ಲಿ ಖ್ಯಾತ ನಟ ಸಾಯಿಕುಮಾರ್

    ಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನಗೆದ್ದಿರುವ ದಕ್ಷಿಣ ಭಾರತದ ಖ್ಯಾತ ನಟ ಸಾಯಿಕುಮಾರ್ (Sai Kumar) ಇತ್ತೀಚಿಗೆ ರಾಷ್ಟ್ರಕವಿ ಕುವೆಂಪು (Kuvempu) ಅವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ (Kavishaila) ಭೇಟಿ ನೀಡಿದ್ದಾರೆ. ಆ ಸುಂದರ ಸ್ಥಳಕ್ಕೆ  ಭೇಟಿ ನೀಡಿ ತಮ್ಮ ಸುಂದರ ಅನುಭವಗಳನ್ನು ಸಾಯಿಕುಮಾರ್ ಹಂಚಿಕೊಂಡಿದ್ದಾರೆ.

    ನಾನು ಹಾಗೂ ನನ್ನ ಕೆಲವು ಸ್ನೇಹಿತರು ಇತ್ತೀಚಿಗೆ ತೀರ್ಥಹಳ್ಳಿಯಿಂದ  ರಾಷ್ಟ್ರಕವಿ ಕುವೆಂಪು ಅವರ ಮನೆ ಹಾಗು ಕವಿಶೈಲಕ್ಕೆ ಭೇಟಿ ನೀಡಿದ್ದೆ. ಅಬ್ಬಾ ಆ ಸ್ಥಳವನ್ನು ಬಣಿಸಲು ಪದಗಳೆ ಸಿಗುತ್ತಿಲ್ಲ ಎಂದಿದ್ದಾರೆ.

    ಈ ಕುರಿತು ಮಾತನಾಡಿರು ಅವರು ನಾನು ನನ್ನ ಸಿನಿಮಾಗಳಲ್ಲಿ ಕುವೆಂಪು ಅವರ ‘ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು’, ‘ಕನ್ನಡಕ್ಕೆ ಹೋರಾಡು ಕನ್ನಡದ ಕಂದ’, ‘ಬಾರಿಸು ಕನ್ನಡ ಡಿಂಡಿಮವ’ ಮುಂತಾದ ಕವನಗಳನ್ನು ಹಾಗೂ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯನ್ನು ಹಾಡುತ್ತಿರುತ್ತೇನೆ.  ಆದರೆ ಈವರೆಗೂ ಕುಪ್ಳಳ್ಳಿಗೆ ಹೋಗಿರಲಿಲ್ಲ. ಇತ್ತೀಚಿಗೆ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಹೋಗಿದ್ದೆ. ಪ್ರಕೃತಿಯ ಮಡಿಲಲ್ಲಿರುವ ಆ ಪುಣ್ಯಸ್ಥಳವನ್ನು ನೋಡಿ ಪುಳಕಿತನಾದೆ. ಅವರು ಬಳಸುತ್ತಿದ್ದ ಲೇಖನಿ ಹಾಗೂ ಪುಸ್ತಕ ಮುಂತಾದವುಗಳನ್ನು ಕಂಡು ಧನ್ಯನಾದೆ’ ಎಂದಿದ್ದಾರೆ.

     

    ನಾನು ಸುಮಾರು ಮೂವತ್ತು ವರ್ಷಗಳಿಂದ ಕರ್ನಾಟಕದಲ್ಲಿ ಕನ್ನಡ ಚಿತ್ರಗಳನ್ನು ಮಾಡುತ್ತಾ ಬಂದಿದ್ದರೂ ಕುಪ್ಪಳ್ಳಿಯನ್ನು ನೋಡುವ ಯೋಗ ಬಂದಿರಲಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಹಾಗೂ ಯುವಕರು ಕುಪ್ಪಳ್ಳಿಗೆ ಭೇಟಿ ನೀಡಿ. ಅಲ್ಲಿನ ಸೊಬಗನ್ನ ಕಣ್ತುಂಬಿಕೊಂಡೆ ಎನ್ನುತ್ತಾರೆ ನಟ ಸಾಯಿಕುಮಾರ್.

  • 10 ವರ್ಷಗಳ ನಂತರ ಮತ್ತೆ ಕೈಜೋಡಿಸಿದ ‘ರಂಗಿತರಂಗ’ ಜೋಡಿ

    10 ವರ್ಷಗಳ ನಂತರ ಮತ್ತೆ ಕೈಜೋಡಿಸಿದ ‘ರಂಗಿತರಂಗ’ ಜೋಡಿ

    ನ್ನಡ ಚಿತ್ರರಂಗದಲ್ಲಿ ‘ರಂಗಿತರಂಗ’ (Rangitaranga) ಚಿತ್ರ ಮಾಡಿದ ಸಾಧನೆ ದೊಡ್ಡದು. ಈ ಸಿನಿಮಾ ಬಿಡುಗಡೆಯಾಗಿ ಹೆಚ್ಚು ಕಮ್ಮಿ 10 ವರ್ಷವಾಗಿದೆ. ಬಾಹುಬಲಿಯಂತಹ ದೊಡ್ಡ ಸಿನಿಮಾದ ಎದುರು ಗೆದ್ದು ಬೀಗಿದ್ದ ಈ ಸಿನಿಮಾದಲ್ಲಿ, ನಾಯಕನಾಗಿ ಅಮೋಘವಾಗಿ ನಟಿಸಿದ್ದ ನಿರೂಪ್ ಭಂಡಾರಿ (Nirup Bhandari) ಎದುರು ಖಳನಾಯಕನಾಗಿ ಸಾಯಿ ಕುಮಾರ್ (Sai Kumar) ಅತ್ಯದ್ಭುತ ಪ್ರದರ್ಶನ ತೋರಿಸಿದ್ದರು. ಪೋಸ್ಟ್‌ಮ್ಯಾನ್ ಕಾಳಿಂಗನಾಗಿ ಅಬ್ಬರಿಸಿದ್ದ ಸಾಯಿ ಕುಮಾರ್ ಅವರು ನಿರೂಪ್ ಮತ್ತೆ ಕೈ ಜೋಡಿಸಿದ್ದಾರೆ.

    ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಯುವ ಪ್ರತಿಭೆ ಸಚಿನ್ ವಾಲಿ ಸಾರಥ್ಯದ ಹೊಸ ಸಿನಿಮಾದಲ್ಲಿ ನಿರೂಪ್ ಭಂಡಾರಿ ಹಾಗೂ ಸಾಯಿಕುಮಾರ್ ಒಟ್ಟಿಗೆ ನಟಿಸುತ್ತಿದ್ದಾರೆ. ಈಗಾಗಲೇ ಸಾಯಿ ಕುಮಾರ್ ಚಿತ್ರತಂಡ ಸೇರಿದ್ದು, ಬಹಳ ವರ್ಷಗಳ ನಂತರ ಈ ಕಾಂಬೋ ಮತ್ತೆ ಒಂದಾಗಿರುವುದು ಕುತೂಹಲ ಹೆಚ್ಚಿಸಿದೆ. ಈ ಚಿತ್ರದಲ್ಲಿ ಸಾಯಿ ಕುಮಾರ್ ಅವರು ನಿರೂಪ್ ಅವರ ತಂದೆ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ಫೆಬ್ರವರಿ 6ಕ್ಕೆ ಅನಾವರಣಗೊಳ್ಳುತ್ತಿದೆ. ಇದನ್ನೂ ಓದಿ: ಮತ್ತೆ ಗುಡ್ ನ್ಯೂಸ್ ಕೊಟ್ಟ ‘ಜೋಡಿಹಕ್ಕಿ’ ನಟಿ ಮಧುಶ್ರೀ ಅಯ್ಯರ್

    ಸತ್ಯ ಮತ್ತು ಸುಳ್ಳಿನ ನಡುವೆ ಇರುವ ಸಾಮಾಜಿಕ ಬದ್ಧತೆ ಸುತ್ತ ಸಾಗುವ ಕಾಮಿಡಿ ಮತ್ತು ಫ್ಯಾಮಿಲಿ ಮನರಂಜನೆಯ ಕಥಾಹಂದರ ಹೊಂದಿರುವ ಚಿತ್ರ ಇದಾಗಿದೆ. ಅಂಕಿತ್ ಸೋನಿಗಾರ ಅವರು ನಿರ್ಮಾಣ ಮಾಡುವ ಮೂಲಕ ಈ ಸಿನಿಮಾಗೆ ಸಾಥ್‌ ನೀಡಿದ್ದಾರೆ. ಪ್ರಶಾಂತ್ ಮುಲಗೆ ಸಹ ನಿರ್ಮಾಪಕರಾಗಿದ್ದಾರೆ.

    ಸಚಿನ್ ಬಸ್ರೂರ್ ಸಂಗೀತ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಉಜ್ವಲ್ ಚಂದ್ರ ಸಂಕಲನ, ಉಲ್ಲಾಸ್ ಹೈದೂರು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

  • ನಾಳೆ ರಾಜ್ಯಾದ್ಯಂತ ಪ್ರಥಮ್ ಅಭಿನಯದ ‘ನಟ ಭಯಂಕರ’ ಸಿನಿಮಾ ರಿಲೀಸ್

    ನಾಳೆ ರಾಜ್ಯಾದ್ಯಂತ ಪ್ರಥಮ್ ಅಭಿನಯದ ‘ನಟ ಭಯಂಕರ’ ಸಿನಿಮಾ ರಿಲೀಸ್

    ಬಿಗ್ ಬಾಸ್ ಖ್ಯಾತಿಯ ಪ್ರಥಮ್ (Pratham) ನಟಿಸಿ, ನಿರ್ದೇಶನ ಮಾಡಿರುವ ‘ನಟ ಭಯಂಕರ’ (Nata Bhayankar) ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈವರೆಗೂ ಕೇವಲ ನಟನಾಗಿ ಪ್ರೇಕ್ಷಕರ ಮುಂದೆ ನಿಂತಿದ್ದ ಪ್ರಥಮ್, ಈ ಬಾರಿ ನಿರ್ದೇಶಕನಾಗಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸಿನಿಮಾ (Movie) ಪೂರ್ತಿ ನಗಿಸುತ್ತಲೇ ಒಂದು ಹಾರರ್ ಕಥೆಯನ್ನು ಅವರು ಈ ಚಿತ್ರದ ಮೂಲಕ ಹೇಳಲು ಹೊರಟಿದ್ದಾರೆ. ನಗುವುದಕ್ಕಾಗಿ ಥಿಯೇಟರ್ ಗೆ ಬನ್ನಿ ಎಂದು ಅವರು ಅಭಿಮಾನಿಗಳಿಗೆ ಆಹ್ವಾನ ನೀಡಿದ್ದಾರೆ.

    ಇದೊಂದು ಪಕ್ಕಾ ಹಾರರ್ ಹಾಗೂ ಥ್ರಿಲ್ಲರ್ ಮಿಶ್ರಿತ ಸಿನಿಮಾವಾಗಿದ್ದರೂ, ಭರ್ಜರಿ ಮನರಂಜನೆಯೂ ಇದೆಯಂತೆ. ನಗಿಸುವುದಕ್ಕಾಗಿ ಪ್ರಥಮ್ ಜೊತೆ ಓಂ ಪ್ರಕಾಶ್ ರಾವ್ (Om Prakash Rao), ಕುರಿ ಪ್ರತಾಪ್, ಮಜಾ ಟಾಕೀಸ್ ಪವನ್, ಬಿರಾದಾರ ಹಾಗೂ ರಾಕ್ ಲೈನ್ ಸುಧಾಕರ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿ ಇದ್ದಾರೆ. ಸಾಯಿ ಕುಮಾರ್ (Sai Kumar) ಕೂಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಹಾಗಾಗಿ ಇದೊಂದು ಪಕ್ಕಾ ಮನರಂಜನೆಯ ಸಿನಿಮಾ ಎನ್ನುವುದು ಪ್ರಥಮ್ ಮಾತು. ಇದನ್ನೂ ಓದಿ: ರಾಕಿಂಗ್ ಸ್ಟಾರ್ ಮನೆ ಮುಂದೆ ಜನಸಾಗರ: ಯಶ್‌ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

    ಪ್ರಥಮ್ ಈ ಚಿತ್ರದಲ್ಲಿ ಸಿನಿಮಾ ಕಲಾವಿದನ ಪಾತ್ರವನ್ನು ಮಾಡಿದ್ದಾರಂತೆ. ಕಲಾವಿದ ಮತ್ತು ಭಯಂಕರ ದೆವ್ವದ ನಡುವೆ ನಡೆಯುವ ರೋಚಕ ಕಥೆಯೇ ಈ ಸಿನಿಮಾವಂತೆ. ಓಂ ಪ್ರಕಾಶ್ ರಾವ್ ಈ ಸಿನಿಮಾದಲ್ಲಿ ನಿರ್ದೇಶಕನ ಪಾತ್ರವಂತೆ. ನಟ ಮತ್ತು ನಿರ್ದೇಶಕನ ನಡುವೆ ಇರುವ ಬಾಂಧವ್ಯವನ್ನೂ ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರಂತೆ. ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಿನಿಮಾ ಕೂಡ ನೋಡುಗರ ನಿರೀಕ್ಷೆಯನ್ನು ಹುಸಿಗೊಳಿಸಲಾರದು ಎನ್ನುತ್ತಾರೆ ಪ್ರಥಮ್.

    ಈ ಸಿನಿಮಾದಲ್ಲಿ ಎರಡು ಬಗೆಯ ಕತೆಗಳಿವೆಯಂತೆ. ದೃಷ್ಟಿ ಇಲ್ಲದ ದೆವ್ವದ ನಡುವೆ ನಡೆಯುವಂತಹ ಪ್ರೇಮಕಥೆಯು ಥ್ರಿಲ್ ನೀಡಲಿದೆ ಎನ್ನುವುದು ಪ್ರಥಮ್ ಮಾತು. ಅಹಂಕಾರ ಇರುವ ಒಬ್ಬ ವ್ಯಕ್ತಿ ಮಾತು ಕೊಟ್ಟ ಮೇಲೆ ಹೇಗೆಲ್ಲ ಬದಲಾಗುತ್ತಾನೆ ಎನ್ನುವುದು ಕೂಡ ಸಿನಿಮಾದಲ್ಲಿ ಕತೆಯಾಗಿ ಬರಲಿದೆ. ಹಾರರ್ ಸಿನಿಮಾ ಇದಾದರೂ, ಮನರಂಜಿಸುವಂತಹ ಎಲ್ಲ ಅಂಶಗಳು ಚಿತ್ರದಲ್ಲಿ ಇವೆಯಂತೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ದಸರಾ’ ಸಿನಿಮಾದಲ್ಲಿ ಹಳ್ಳಿ ಹುಡುಗಿಯಾಗಿ ಮಿಂಚಿದ ಮಹಾ ನಟಿ ಕೀರ್ತಿ ಸುರೇಶ್

    ‘ದಸರಾ’ ಸಿನಿಮಾದಲ್ಲಿ ಹಳ್ಳಿ ಹುಡುಗಿಯಾಗಿ ಮಿಂಚಿದ ಮಹಾ ನಟಿ ಕೀರ್ತಿ ಸುರೇಶ್

    ನ್ಯಾಚುರಲ್ ಸ್ಟಾರ್ ನಾನಿ (Nani) ಅಭಿನಯದ ಮೆಗಾ ಪ್ರಾಜೆಕ್ಟ್ ‘ದಸರಾ’ (Dasara) ಸಿನಿಮಾ ಈಗಾಗಲೇ ಸಿನಿ ಪ್ರಿಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಮೂಲಕ ನಾನಿ ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ತಲುಪಲಿದ್ದು, ಮಾಸ್ ಅವತಾರದಲ್ಲಿ ರಂಜಿಸಲಿದ್ದಾರೆ. ಖಡಕ್ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ನಾನಿಗೆ ರಾಷ್ಟ್ರ ಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ನಾಯಕ ನಟಿಯಾಗಿ ಅಭಿನಯಿಸುತ್ತಿದ್ದಾರೆ.

    ಮಾಸ್ ಸಿನಿಮಾ ‘ದಸರಾ’ದಲ್ಲಿ ಕೀರ್ತಿ ಸುರೇಶ್ (Keerthi Suresh) ಯಾವ ರೀತಿ ಕಾಣಸಿಗುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿ ಬಳಗದಲ್ಲಿತ್ತು. ಆ ಕುತೂಹಲವನ್ನು ಹಾಗೆ ಕಾಪಾಡಿಕೊಂಡು ಬಂದಿದ್ದ ಚಿತ್ರತಂಡ ಕೀರ್ತಿ ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ರಿವೀಲ್ ಮಾಡಿದೆ. ನಾನಿ ಹೊಸ ಅವತಾರ ಖಡಕ್ ಲುಕ್ ಕಂಡು ಫಿದಾ ಆಗಿದ್ದ ಸಿನಿರಸಿಕರಿಗೆ, ಕೀರ್ತಿ ಸುರೇಶ್ ಲುಕ್ ಕೂಡ ಅಷ್ಟೇ ಮನಸೆಳೆದಿದೆ. ಚಿತ್ರದಲ್ಲಿ ವೆನ್ನಲ ಪಾತ್ರವನ್ನು ನಿಭಾಯಿಸುತ್ತಿದ್ದು, ಹಳ್ಳಿ ಹುಡುಗಿಯಾಗಿ ಹಳದಿ ಸೀರೆಯಲ್ಲಿ ಮಿಂಚುತ್ತಿರುವ ಕೀರ್ತಿ ಅವತಾರಕ್ಕೆ ಎಲ್ಲರೂ ಕ್ಲೀನ್ ಬೋಲ್ಡ್ ಆಗಿದ್ದಾರೆ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಈಗಾಗಲೇ ಬಿಡುಗಡೆಯಾಗಿರುವ ನಾನಿ ಫಸ್ಟ್ ಲುಕ್, ಧೂಮ್ ದಾಮ್ ದೊಸ್ತಾನ ಹಾಡು ಸಿನಿ ಪ್ರಿಯರಿಂದ ಅದ್ಭುತ ರೆಸ್ಪಾನ್ ಪಡೆದುಕೊಂಡಿದೆ. ಇದೀಗ ಕೀರ್ತಿ ಸುರೇಶ್ ಲುಕ್ ಕೂಡ ಎಲ್ಲರ ಗಮನ ಸೆಳೆದಿದೆ. ಇವೆಲ್ಲವೂ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.  ಶ್ರೀಕಾಂತ್ ಒಡೆಲಾ ನಿರ್ದೇಶಿಸುತ್ತಿರುವ ಈ ಚಿತ್ರ ಮಾಸ್ ಅಂಡ್ ಆಕ್ಷನ್ ಕಥಾಹಂದರ ಒಳಗೊಂಡಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸಮುದ್ರಕನಿ, ಸಾಯಿಕುಮಾರ್ (Sai Kumar), ಜರೀನಾ ವಹಾಬ್  ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ. 2023 ಮಾರ್ಚ್ 30ರಂದು ಸಿನಿಮಾ ಬಿಡುಗಡೆಯಾಗಲಿದೆ.

    ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ, ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • `ಲೈಗರ್’ ಚಿತ್ರದ ಸೋಲಿನ ಬೆನ್ನಲ್ಲೇ ನಿರ್ದೇಶಕ ಪುರಿ ಜಗನ್ನಾಥ್ ಆಪ್ತ ಆತ್ಮಹತ್ಯೆ

    `ಲೈಗರ್’ ಚಿತ್ರದ ಸೋಲಿನ ಬೆನ್ನಲ್ಲೇ ನಿರ್ದೇಶಕ ಪುರಿ ಜಗನ್ನಾಥ್ ಆಪ್ತ ಆತ್ಮಹತ್ಯೆ

    `ಲೈಗರ್’ (Liger Film) ಚಿತ್ರದ ಸೋಲಿನ ಬಳಿಕ ನಿರ್ದೇಶಕ ಪುರಿ ಜಗನ್ನಾಥ್‌ಗೆ (Puri Jagannadh)  ಇದೀಗ ಮತ್ತೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಪುರಿ ಜಗನ್ನಾಥ್ ಅವರ ಆಪ್ತ ಸಾಯಿ ಕುಮಾರ್ ದುರ್ಗಂ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಟಾಲಿವುಡ್ (Tollywood) ಸ್ಟಾರ್ ನಿರ್ದೇಶಕನಾಗಿ ಗುರುತಿಸಿಕೊಂಡ ಪುರಿ ಜಗನ್ನಾಥ್‌ಗೆ ಅದೃಷ್ಟ ಕೈ ಕೊಟ್ಟಿದೆ. `ಲೈಗರ್’ (Liger Film) ಚಿತ್ರದ ಸೋಲಿನ ನಂತರ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ನಿರ್ದೇಶಕ ಪುರಿ ಬಳಿ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಸಾಯಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುರಿ ಅವರ ಬಳಿ ಸಾಕಷ್ಟು ಸಿನಿಮಾಗಳಲ್ಲಿ ಕೆಲಸ ಮಾಡಿ, ಸಾಯಿ ಕುಮಾರ್ ಸೈ ಎನಿಸಿಕೊಂಡಿದ್ದರು.

    ಸಾಯಿಕುಮಾರ್ ಸಾವಿಗೆ ಅವರು ಮಾಡಿಕೊಂಡಿದ್ದ ಸಾಲವೇ ಕಾರಣ ಎನ್ನಲಾಗುತ್ತಿದೆ. ಮಾಡಿರುವ ಸಾಲ ತೀರಿಸಲಾಗದೇ ಅಸಿಸ್ಟೆಂಟ್ ಸಾಯಿ ಸಾವಿಗೆ ಶರಣಾಗಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಇನ್ನು ಸಹಾಯಕನ ಸಾವಿನ ಸುದ್ದಿ ಕೇಳಿ ಪುರಿ ಜಗನ್ನಾಥ್ ಶಾಕ್ ಆಗಿದ್ದಾರೆ. ಇದನ್ನೂ ಓದಿ:ರಕ್ತದಿಂದ ತನ್ನ ಪೇಂಟಿಂಗ್ ಮಾಡಿದ ಅಭಿಮಾನಿಗೆ ಖಡಕ್ ವಾರ್ನಿಂಗ್ ಕೊಟ್ಟ ಸೋನು ಸೂದ್

    ಇನ್ನು `ಲೈಗರ್’ ನಂತರ ವಿಜಯ್ ದೇವರಕೊಂಡ (Vijay Devarakonda) ಮತ್ತು ಪುರಿ ಜಗನ್ನಾಥ್ ಕಾಂಬಿನೇಷನ್‌ನ  `ಜನಗಣಮನ’ ಹೊಸ ಚಿತ್ರವಾಗಿದ್ದು, ಈ ಸಿನಿಮಾ ಬಜೆಟ್ ಕೊರತೆಯಿಂದ ನಿಂತು ಹೋಗಿದೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ರಾಕ್ಷಸರ ರೂಪದಲ್ಲಿ ಬರುತ್ತಿದ್ದಾರೆ ಡೈಲಾಂಗ್ ಕಿಂಗ್ ಸಾಯಿಕುಮಾರ್

    ರಾಕ್ಷಸರ ರೂಪದಲ್ಲಿ ಬರುತ್ತಿದ್ದಾರೆ ಡೈಲಾಂಗ್ ಕಿಂಗ್ ಸಾಯಿಕುಮಾರ್

    ನ್ನಡ ಚಿತ್ರರಂಗದಲ್ಲಿ ಸಿಂಹಾದ್ರಿ ಪ್ರೊಡಕ್ಷನ್ಸ್ ಮೂಲಕ ಉತ್ತಮ ಚಿತ್ರಗಳನ್ನು ನೀಡಿರುವ ರಮೇಶ್ ಕಶ್ಯಪ್ ಮತ್ತೊಂದು ಸಿನಿಮಾ ನಿರ್ಮಾಣ ಮಾಡಿದ್ದು, ಈ ಚಿತ್ರಕ್ಕೆ ರಾಕ್ಷಸರು ಎಂದು ಹೆಸರಿಡಲಾಗಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

    ಇದೊಂದು ಸಖತ್ ಕ್ರೈಮ್ ಥ್ರಿಲ್ಲರ್ ಚಿತ್ರ. ಐದು ಜನ ಕ್ರಮಿನಲ್ ಗಳು  ಮಾಡಬಾರದ ದುಷ್ಕೃತ್ಯಗಳನ್ನು ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಕಥಾಹಂದರ. ದಂಡುಪಾಳ್ಯದ ಕ್ರಿಮಿನಲ್ ಗಳನ್ನು ಮೀರಿಸುವ ಕ್ರಿಮಿನಲ್ ಗಳು ಈ “ರಾಕ್ಷಸರು”. ರಜತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ಚಿತ್ರ. ಇದನ್ನೂ ಓದಿ:ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ-ಅರವಿಂದ ಪಾಲಿಗೆ ಈ ದಿನ ಯಾಕೆ ಸ್ಪೆಷಲ್ ಗೊತ್ತಾ?

    ಚಿತ್ರ ಸಿದ್ದವಾಗಿ ಬಹಳ ದಿನಗಳಾಗಿದೆ. ಆದರೆ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಿ, ಕ್ರೈಂ ಹೆಚ್ಚಾಗಿರುವುದರಿಂದ ಬಿಡುಗಡೆಗೆ ಒಪ್ಪಿಗೆ ನೀಡಲು ನಿರಾಕರಿಸಿದರು. ಆ ನಂತರ ನಿರ್ಮಾಪಕರ ಮನವಿ ಮೇರೆಗೆ ಕೆಲವು ಕಟ್ ಗಳ ಜೊತೆಗೆ A ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಸೆನ್ಸಾರ್ ಮಂಡಳಿ ಒಪ್ಪಿಗೆ ನೀಡಿದೆ.

    ಆಗಸ್ಟ್‌ ಎರಡನೇ ವಾರ ಚಿತ್ರ ಭಾರತದಾದ್ಯಂತ ತೆರೆ ಕಾಣುತ್ತಿದೆ ಎಂದು ತಿಳಿಸಿರುವ ನಿರ್ಮಾಪಕರು, ಈ ಚಿತ್ರವನ್ನು ಆರಕ್ಷಕರಿಗೆ ಅರ್ಪಿಸಲು ನಿರ್ಧರಿಸಿದ್ದಾರೆ. ಎರಡು ಹಾಡುಗಳಿರುವ ಈ‌ ಚಿತ್ರಕ್ಕೆ ಎಮಿಲ್ ಸಂಗೀತ ನೀಡಿದ್ದಾರೆ. ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ಜನಾರ್ದನ ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮನು ಅವರ ನೃತ್ಯ ನಿರ್ದೇಶನ ಈ  ಚಿತ್ರಕ್ಕಿದೆ.

    ಡೈಲಾಗ್ ಕಿಂಗ್ ಸಾಯಿಕುಮಾರ್, ರಾಜಶೇಖರ್, ನಾಜರ್, ಸುಮನ್, ಕಿರಣ್ ಸುನೀಲ್, ತ್ರಿವೇಣಿ, ಅವಿನಾಶ್ ನೀರಜ್ ಯಾದವ್, ಹರ್ಷಿತ್, ಚೈತ್ರ, ಮಾನಸ, ಆಶಾ, ಮಂಜುಳ, ಸುರೇಖ, ರಚನ, ಕಮಲ, ಚಂದ್ರಕಲಾ ರಾಧ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಗವಂತನ ಮೇಲೆ ಕೋಪ ಬರುತ್ತಿದೆ: ಸಾಯಿ ಕುಮಾರ್

    ಭಗವಂತನ ಮೇಲೆ ಕೋಪ ಬರುತ್ತಿದೆ: ಸಾಯಿ ಕುಮಾರ್

    ಬೆಂಗಳೂರು: ಭಗವಂತನ ಮೇಲೆ ಕೋಪ ಬರುತ್ತಿದೆ ಎಂದು ನಟ ಸಾಯಿ ಕುಮಾರ್ ಸಿಟ್ಟು ಹೊರ ಹಾಕಿದ್ದಾರೆ.

    ಕಂಠೀರವ ಸ್ಟುಡಿಯೋಗೆ ಬಂದು ಅಪ್ಪು ಸಮಾಧಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಠೀರವ ಸ್ಟುಡಿಯೋಗೆ ಶೂಟಿಂಗ್ ಗಾಗಿ ನಾವು ಬಂದಿದ್ದೇವೆ. ನಾವು ಇಲ್ಲಿ ನಟಿಸುತ್ತಿದ್ದೇವೆ ಎನಿಸುತ್ತಿದೆ. ಇದು ನಿಜ ಎಂದು ನನಗೆ ಅನಿಸುತ್ತಿಲ್ಲ. ಏಕೆಂದರೆ  ನಾವು ಎಷ್ಟೋ ಸಿನಿಮಾಗಳನ್ನು ಇಲ್ಲಿ ಶೂಟಂಗ್ ಮಾಡಿದ್ದೆವು. ಆದರೆ ಇಂದು ಇವರ ದರ್ಶನಕ್ಕೆ ಬಂದಿರುವುದು ನೋವುತರುತ್ತಿದೆ ಎಂದರು. ಇದನ್ನೂ ಓದಿ: ಅಪ್ಪು ಭಾವಚಿತ್ರಕ್ಕೆ ಮುತ್ತಿಟ್ಟು ಅಜ್ಜಿ ಭಾವುಕ – ವೀಡಿಯೋ ವೈರಲ್

    ನಾನು ಭಗವಂತನನ್ನು ತುಂಬಾ ನಂಬುತ್ತೇನೆ. ಆದರೆ ಈ ವಿಚಾರ ಕೇಳಿ ಭಗವಂತನ ಮೇಲೆಯೇ ಕೋಪ ಬರುತ್ತಿದೆ. ಒಳ್ಳೆಯ ನಟನಿಗೆ ಈ ರೀತಿಯಾಗಿರುವುದು ತುಂಬಾ ನೋವು ತರುತ್ತಿದೆ. ಅವರು ಒಳ್ಳೆಯ ನಟನೂ ಹೌದು. ಅದೇ ರೀತಿ ಒಳ್ಳೆಯ ಮನುಷ್ಯ. ಏಕೆಂದರೆ ನಾನು ಅವರ ಜೊತೆ ನಟಿಸಿದ್ದೇನೆ. ಸೆಟ್ ನಲ್ಲಿ ಅವರು ಇದ್ದ ರೀತಿ ನೋಡಿದರೆ ಖುಷಿಯಾಗುತ್ತಿತ್ತು ಎಂದು ನೆನೆದರು.

    ಒಳ್ಳೆಯ ಮನುಷ್ಯ

    ಡಾ.ರಾಜ್‍ಕುಮಾರ್ ಕುಟುಂಬದವರ ಜೊತೆ ನಾವು ನಟಿಸುತ್ತಿದ್ದೇವೆ. ನಮ್ಮ ಅಪ್ಪ-ಅಮ್ಮನ ಕಾಲದಿಂದಲ್ಲೂ ನಟಿಸುತ್ತಾ ಬಂದಿದ್ದೇವೆ. ಅಪ್ಪ ತೆಲುಗಿನಲ್ಲಿ ರಾಜ್ ಅವರಿಗೆ ಧ್ವನಿ ಕೊಟ್ಟಿದ್ದರು. ಅಮ್ಮ ಅವರ ಜೊತೆ ಅಭಿನಯಿಸಿದ್ದರು. ನಾನು ಡಾ.ರಾಜ್ ಅವರನ್ನು ಭೇಟಿಯಾಗಿ ಬಭ್ರುವಾಹನ ಡೈಲಾಗ್ ಅನ್ನು ಅವರ ಹತ್ತಿರ ಹೇಳಿ ಆರ್ಶೀವಾದ ಪಡೆದು ಇಲ್ಲಿಯವರೆಗೂ ಬಂದಿದ್ದೇನೆ. ಶಿವಣ್ಣನ ಜೊತೆ, ರಾಘಣ್ಣನ ಮಗನ ಜೊತೆ ನಟಿಸಿದ್ದೆ. ಅಪ್ಪು ಜೊತೆ ಸಿನಿಮಾ ಮಾಡಬೇಕು ಎಂದು ಇತ್ತೀಚೆಗೆ ‘ಯುವರತ್ನ’ ಸಿನಿಮಾದಲ್ಲಿ ಅವರ ಜೊತೆಗೆ ನಟಿಸಿದ್ದೆ ಎಂದರು.

    ಆ ವೇಳೆ ನಾವು ಪೊಲೀಸ್ ಸ್ಟೋರಿಯಿಂದ ಇಲ್ಲಿವರೆಗೂ ಮಾಡಿದ ಸಿನಿಮಾಗಳ ಬಗ್ಗೆ ಮಾತನಾಡಿದ್ದೆವು. ನಿಜವಾಗಲು ಆ ರೀತಿಯ ಮನುಷ್ಯನನ್ನು ನಾನು ನೋಡಿಲ್ಲ. ಒಳ್ಳೆಯ ಮನುಷ್ಯ. ಎಲ್ಲರ ಜೊತೆ ಚೆನ್ನಾಗಿ ಮಾತನಾಡುತ್ತಾರೆ. ಅವರು ಬೆಳಗ್ಗೆ ಬಂದು ಶುಭೋದಯ ಹೇಳುವುದರಿಂದ ಹಿಡಿದು ಸಂಜೆ ಹೋಗುವವರೆಗೂ ಅವರ ನಡವಳಿಕೆ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ಹೇಳಿ ಮೌನಿಯಾದರು.

    ಅಪ್ಪು ನಮ್ಮ ಜೊತೆಯಲ್ಲಿಯೇ ಇದ್ದರೆ ಎಂಬ ಭಾವನೆ ಇದೆಯೇ ಹೊರತು, ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ ಎಂಬ ಭಾವನೆಯೇ ಬರುತ್ತಿಲ್ಲ. ಈ ರೀತಿ ಆಗುತ್ತೆ ಎಂದು ಯಾರು ಸಹ ಊಹಿಸಿಕೊಂಡಿರಲ್ಲ ಎಂದರು.

    ಹೆಮ್ಮೆ ಪಟ್ಟುಕೊಂಡಿದ್ದರು:

    ನನ್ನ ಮಗನನ್ನು ಅವರೇ ಇಂಡಸ್ಟ್ರಿಗೆ ಪರಿಚಯಿಸುತ್ತೇನೆ ಎಂದಿದ್ದರು. ನನ್ನ ಮಗಳು ಡಾಕ್ಟರ್. ಮಗಳು ಮತ್ತೆ ಅಳಿಯ ಸೇರಿ ಒಂದು ಫುಡ್ ಪ್ರಾಡಕ್ಟ್ ಲಾಂಚ್ ಮಾಡಲು ಕರೆದಾಗ ಅವರೇ ಸ್ವತಃ ಫೋನ್ ಮಾಡಿ ಡೇಟ್ ಕೇಳಿ ಲಾಂಚ್ ಮಾಡಿಕೊಟ್ಟಿದ್ದರು. ಪ್ರಾಡಕ್ಟ್ ಲಾಂಚ್ ಗೆ ಅವರು ಕುಟುಂಬದವರ ಜೊತೆ ಬಂದಿದ್ದು, ತುಂಬಾ ಹೆಮ್ಮೆ ಪಟ್ಟುಕೊಂಡಿದ್ದರು. ನಮ್ಮ ಕುಟುಂಬದವರ ಜೊತೆ ಸಂತೋಷವಾಗಿದ್ದರು ಎಂದರು. ಇದನ್ನೂ ಓದಿ: ತಾಂತ್ರಿಕ ಕಾರಣದಿಂದ ಎಡವಟ್ಟು ಆಗಿದೆ: ಅಕುಲ್ ಬಾಲಾಜಿ

    ಜೀವನ ಕ್ಷಣಿಕ:

    ಅಶ್ವಿನಿ ಮೇಡಂ ಜೊತೆಗೂ ಇವತ್ತು ಮಾತನಾಡಿಕೊಂಡು ಬರಬೇಕಾದರೆ ಪ್ರಾಡಕ್ಟ್ ಲಾಂಚ್ ದಿನದ ಬಗ್ಗೆ ನೆನೆಸಿಕೊಂಡರು. ಇದಕ್ಕೆ ಒಂದು ನುಡಿ ಇದೆ, ಕಣ್ಣು ತೆಗೆದರೆ ಜನನ, ಕಣ್ಣು ಮುಚ್ಚಿದರೆ ಮರಣ. ಈ ರೆಪ್ಪೆ ಆಡಿಸುವ ಕಾಲವೇ ನಮ್ಮ ಜೀವನ ಎನ್ನುತ್ತಾರೆ. ಅದೇ ರೀತಿ ನಮ್ಮ ಜೀವನ ಕ್ಷಣಿಕವಾಗಿದೆ. ಈ ಕ್ಷಣಿಕ ಜೀವನದಲ್ಲಿ ದೇಶ ನಮಗೇನು ಮಾಡಿದೆ ಎನ್ನುವುದಕ್ಕಿಂತ ದೇಶಕ್ಕೆ ನಾವು ಏನನ್ನು ಕೊಟ್ಟೆವು ಎಂಬುದು ತುಂಬಾ ಮುಖ್ಯ. ಅದೇ ರೀತಿ ಇಡೀ ಪ್ರಪಂಚವೇ ಇಂದು ಅಪ್ಪು ಬಗ್ಗೆ ತಿಳಿದುಕೊಳ್ಳುತ್ತೆ ಎಂದು ಹೇಳಿದರು.

    ಕರ್ನಾಟಕದವರಿಗೆ ಅಪ್ಪು ಬಗ್ಗೆ ಗೊತ್ತು. ಆದರೆ ಹೊರಗಿನ ಜನರು ಅಪ್ಪು ಬಗ್ಗೆ ಅವರು ಇಷ್ಟು ಒಳ್ಳೆಯ ಕೆಲಸ ಮಾಡಿದ್ರ ಎಂದು ನನಗೆ ಕರೆ ಮಾಡಿ ಕೇಳುತ್ತಿದ್ದಾರೆ. ಇಂದು ಅಪ್ಪು ಮಾಡಿರುವ ಸಮಾಜ ಕಾರ್ಯಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳುತ್ತಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು.

    ಇಡೀ ಭಾರತದಲ್ಲಿಯೇ ಜನರು ಅಪ್ಪುಗೆ ಭಗವಂತ ಏಕೆ ಈ ರೀತಿ ಮಾಡಿದ ಎಂದು ಮರುಗುತ್ತಿದ್ದಾರೆ. ಇದು ನಿಜವಾಗಲು ದೊಡ್ಡ ನಷ್ಟವಾಗಿದೆ. ವಿ ಮಿಸ್ ಯೂ ಎಂದರು.