Tag: Sai Pallavi

  • ‘ಅಮರನ್‌’ ಚಿತ್ರದ ಅಬ್ಬರ- ಶಿವಕಾರ್ತಿಕೇಯನ್‌, ಸಾಯಿ ಪಲ್ಲವಿ ಸಿನಿಮಾಗೆ ಪ್ರೇಕ್ಷಕ ಜೈಕಾರ

    ‘ಅಮರನ್‌’ ಚಿತ್ರದ ಅಬ್ಬರ- ಶಿವಕಾರ್ತಿಕೇಯನ್‌, ಸಾಯಿ ಪಲ್ಲವಿ ಸಿನಿಮಾಗೆ ಪ್ರೇಕ್ಷಕ ಜೈಕಾರ

    ಮಿಳು ನಟ ಶಿವ ಕಾರ್ತಿಕೇಯನ್ (Sivakarthikeyan) ಹಾಗೂ ನಟಿ ಸಾಯಿ ಪಲ್ಲವಿ (Sai Pallavi) ನಟನೆಯ ‘ಅಮರನ್’ (Amaran) ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸಾಫೀಸ್ ನಲ್ಲೂ ಗಳಿಕೆಯಲ್ಲಿ ಸಖತ್ ಸದ್ದು ಮಾಡ್ತಿದೆ. ಹುತಾತ್ಮರಾದ ಭಾರತೀಯ ಸೇನಾ ಅಧಿಕಾರಿ ಮೇಜರ್ ಮುಕುಂದ್ ವರದರಾಜನ್ ಅವರ ಸ್ಪೂರ್ತಿದಾಯಕ ಕಥೆ ಹೇಳುವ ಬಹುನಿರೀಕ್ಷಿತ ಬಯೋಪಿಕ್‌ಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಅಕ್ಟೋಬರ್ 31ರಂದು ತೆರೆಕಂಡ ‘ಅಮರನ್ ಸಿನಿಮಾ’ ಎಲ್ಲಾ ಕಡೆಗಳಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.

    ಸೋನಿ ಪಿಕ್ಚರ್ಸ್ ಸಹಯೋಗದಲ್ಲಿ ನಟ ಕಮಲ್ ಹಾಸನ್ ಅವರ ರಾಜಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಈ ಚಿತ್ರವನ್ನು ನಿರ್ಮಿಸಿದೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಸಾಯಿ ಪಲ್ಲವಿ ಅದ್ಭುತವಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಮ್ಯೂಸಿಕ್ ಡೈರೆಕ್ಟರ್ ಜಿವಿ ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದಾರೆ.

    ಈ ಚಿತ್ರವು ದಿವಂಗತ ಸೇನಾ ಮೇಜರ್ ಮುಕುಂದ್ ವರದರಾಜನ್ ಅವರ ಜೀವನವನ್ನು ಆಧರಿಸಿದೆ. ಶಿವಕಾರ್ತಿಕೇಯನ್ ಅವರು ಮೇಜರ್ ಮುಕುಂದ್ ಪಾತ್ರದಲ್ಲಿ ಕಾಣಿಸಿಕೊಂಡ್ರೆ. ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಈ ಚಿತ್ರವನ್ನು ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನ ಮಾಡಿದ್ದಾರೆ. ದೀಪಾವಳಿ ಹಬ್ಬದ ದಿನದಂದು ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ‘ಅಮರನ್’ ಎಲ್ಲೆಡೆ ಅಬ್ಬರಿಸುತ್ತಿದ್ದು, ಇದೀಗ ಪ್ರೇಕ್ಷಕರು ಸಿನಿಮಾವನ್ನು ಮೆಚ್ಚಿಕೊಂಡಿದ್ದಕ್ಕೆ ಚಿತ್ರತಂಡದ ಖುಷಿಗೆ ಕಾರಣವಾಗಿದೆ.

  • Thandel: ಸಾಯಿ ಪಲ್ಲವಿ, ನಾಗಚೈತನ್ಯ ರೊಮ್ಯಾಂಟಿಕ್ ಪೋಸ್ಟರ್ ರಿಲೀಸ್

    Thandel: ಸಾಯಿ ಪಲ್ಲವಿ, ನಾಗಚೈತನ್ಯ ರೊಮ್ಯಾಂಟಿಕ್ ಪೋಸ್ಟರ್ ರಿಲೀಸ್

    ‘ಲವ್ ಸ್ಟೋರಿ’ (Love Story) ಸಿನಿಮಾದ ಸಕ್ಸಸ್ ನಂತರ ನಾಗಚೈತನ್ಯ (Naga Chaitanya) ಮತ್ತು ಸಾಯಿ ಪಲ್ಲವಿ ಮತ್ತೆ ಜೊತೆಯಾಗಿದ್ದಾರೆ. ‘ತಾಂಡೆಲ್’ (Thandel) ಚಿತ್ರಕ್ಕಾಗಿ ಕೈಜೋಡಿಸಿದ್ದು, ಇದರಲ್ಲೂ ರೊಮ್ಯಾಂಟಿಕ್ ಕಥೆ ಹೇಳಲು ಹೊರಟಿದ್ದಾರೆ. ಅದಷ್ಟೇ ಅಲ್ಲ, ತಾಂಡೆಲ್ ರಿಲೀಸ್‌ಗೆ ಮುಹೂರ್ತ ಕೂಡ ಫಿಕ್ಸ್ ಆಗಿದೆ. ಇದನ್ನೂ ಓದಿ:ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಕೊಡಿ: ಸಲ್ಮಾನ್‌ ಖಾನ್‌ಗೆ ಮತ್ತೊಂದು ಬೆದರಿಕೆ

    ‘ತಾಂಡೆಲ್’ (Thandel) ಸಿನಿಮಾದಲ್ಲಿನ ಸಾಯಿ ಪಲ್ಲವಿ ಜೊತೆಗಿನ ನಾಗಚೈತನ್ಯ ರೊಮ್ಯಾಂಟಿಕ್ ಪೋಸ್ಟರ್ ಅನ್ನು ಚಿತ್ರತಂಡ ರಿವೀಲ್ ಮಾಡಿದೆ. ಸಾಯಿ ಪಲ್ಲವಿ ಅವರನ್ನು ನಟ ತಬ್ಬಿಕೊಂಡಿರುವ ಫೋಟೋ ಅಭಿಮಾನಿಗಳ ಗಮನ ಸೆಳೆದಿದೆ. ಫೆ.14 ಪ್ರೇಮಿಗಳ ದಿನಾಚರಣೆಗೂ ಮುನ್ನ ಫೆ.7ರಂದು ‘ತಾಂಡೆಲ್’ ಸಿನಿಮಾ ರಿಲೀಸ್ ಆಗುತ್ತಿದೆ.

     

    View this post on Instagram

     

    A post shared by Geetha Arts (@geethaarts)

    ಈ ಹಿಂದಿನ ‘ಲವ್ ಸ್ಟೋರಿ’ ಚಿತ್ರಕ್ಕಿಂತ ವಿಭಿನ್ನ ಕಥೆಯನ್ನೇ ತೋರಿಸಲು ಚಿತ್ರತಂಡ ಸಜ್ಜಾಗಿದೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನೋಡಿ ಅಭಿಮಾನಿಗಳಿಗೆ ಸಿನಿಮಾ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ. ಇನ್ನೂ ಈ ಚಿತ್ರವನ್ನು ಗೀತಾ ಆರ್ಟ್ಸ್ ಮೂಲಕ ಅಲ್ಲು ಅರವಿಂದ್ ನಿರ್ಮಾಣ ಮಾಡಿದ್ದಾರೆ.

  • ‘ಅಮರನ್‌’ ಟ್ರೈಲರ್ ರಿಲೀಸ್- ಮೇಜರ್ ಮುಕುಂದ್ ವರದರಾಜನ್ ಜೀವನಗಾಥೆಯಲ್ಲಿ ಶಿವಕಾರ್ತಿಕೇಯನ್

    ‘ಅಮರನ್‌’ ಟ್ರೈಲರ್ ರಿಲೀಸ್- ಮೇಜರ್ ಮುಕುಂದ್ ವರದರಾಜನ್ ಜೀವನಗಾಥೆಯಲ್ಲಿ ಶಿವಕಾರ್ತಿಕೇಯನ್

    ಕಾಲಿವುಡ್ ನಟ ಶಿವಕಾರ್ತಿಕೇಯನ್ (Sivakarthikeyan) ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ‘ಅಮರನ್’ (Amaran) ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಅಮರನ್, ಭಯೋತ್ಪಾದಕ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮೇಜರ್ ಮುಕುಂದ್ ವರದರಾಜನ್ ಜೀವನ ಚರಿತ್ರೆಯಾಗಿದೆ. ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಎಮೋಷನ್ ಜೊತೆಗೆ ಆ್ಯಕ್ಷನ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೈಲರ್ ಕಟ್ ಮಾಡಲಾಗಿದೆ. ಇದನ್ನೂ ಓದಿ:ಜೈಲು ನಿಯಮ ಉಲ್ಲಂಘನೆ – ದರ್ಶನ್ ಒಳಿತಿಗೆ ಪತ್ನಿ ಕಟ್ಟಿದ್ದ ದಾರ ತೆಗೆಸುವ ಸಾಧ್ಯತೆ

     

    View this post on Instagram

     

    A post shared by Kamal Haasan (@ikamalhaasan)

    ಸೇನಾ ರಜೆಯಲ್ಲಿ ಮನೆಗೆ ಬಂದಿರುವ ಯೋಧ ತನ್ನ ಮಗಳೊಂದಿಗೆ ಇರುವ ಕ್ಷಣ, ಮಗಳಿಗೆ ಒಂದು ಪ್ರೀತಿಯ ಅಪ್ಪುಗೆ ಕೊಟ್ಟು ಮತ್ತೆ ದೇಶ ಸೇವೆಗೆ ಹೋಗುವ ದೃಶ್ಯ, ನಮ್ಮನ್ನು ಬಿಟ್ಟು ನೀನು ದೂರ ಆಗಿದ್ರೂ ಪರವಾಗಿಲ್ಲ, ಸೇಫ್ ಆಗಿರು ಎನ್ನುವ ಪತ್ನಿ ಡೈಲಾಗ್ ನೋಡುಗರಿಗೆ ಕಾಡುತ್ತದೆ. ಶಿವಕಾರ್ತಿಕೇಯನ್ ಮೇಜರ್ ಮುಕುಂದ್ ವರದರಾಜನ್ ಪಾತ್ರದಲ್ಲಿ ಜೀವಿಸಿದ್ದಾರೆ. ಸಾಯಿ ಪಲ್ಲವಿ (Sai Pallavi) ಅವರ ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಪ್ರೀತಿಸಿ ಮದುವೆಯಾಗೋಕೆ ನನಗೆ ಸಮಯವಿಲ್ಲ: ಸುನೈನಾ

    ಚಿತ್ರವನ್ನು ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶಿಸಿದ್ದಾರೆ. ಭುವನ್ ಅರೋರಾ, ರಾಹುಲ್ ಬೋಸ್ ಮುಂತಾದವರು ನಟಿಸಿದ್ದಾರೆ. ಇಂಡಿಯಾಸ್ ಮೋಸ್ಟ್ ಫಿಯರ್‌ಲೆಸ್ ಪುಸ್ತಕದಲ್ಲಿ ಶಿವ್ ಅರೂರ್ ಮತ್ತು ರಾಹುಲ್ ಸಿಂಗ್ ಅವರು ಮೇಜರ್ ವರದರಾಜನ್ ಬಗ್ಗೆ ಸಾಕಷ್ಟು ಬರೆದಿದ್ದಾರೆ. ಅದರಲ್ಲಿನ ಅಂಶಗಳನ್ನು ತೆಗೆದುಕೊಂಡು ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಕಥೆ ಬರೆದು, ನಿರ್ದೇಶಿಸಿದ್ದಾರೆ.

    ಜಿ.ವಿ.ಪ್ರಕಾಶ್ ಕುಮಾರ್ ಅವರ ಸಂಗೀತ ಸಂಯೋಜನೆ, ಸಿ.ಎಚ್.ಸಾಯಿ ಅವರ ಛಾಯಾಗ್ರಹಣ ಮತ್ತು ಆರ್. ಕಲೈವನನ್ ಅವರ ಸಂಕಲನವಿರುವ ಸಿನಿಮಾವನ್ನು ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ ಜಂಟಿಯಾಗಿ ನಿರ್ಮಾಣ ಮಾಡಿದೆ.

  • 2 ವರ್ಷಗಳ ನಂತರ ಬೆಳ್ಳಿಪರದೆಗೆ ಮರಳಿದ ಸಾಯಿ ಪಲ್ಲವಿ

    2 ವರ್ಷಗಳ ನಂತರ ಬೆಳ್ಳಿಪರದೆಗೆ ಮರಳಿದ ಸಾಯಿ ಪಲ್ಲವಿ

    ಟನೆ, ಡ್ಯಾನ್ಸಿಂಗ್‌ ಅಪಾರ ಅಭಿಮಾನಿಗಳ ಮನಗೆದ್ದಿರುವ ಸಾಯಿ ಪಲ್ಲವಿ (Sai Pallavi) ಇದೀಗ ಎರಡು ವರ್ಷಗಳ ನಂತರ ಬೆಳ್ಳಿಪರದೆಗೆ ಮರಳಿದ್ದಾರೆ. ‘ಅಮರನ್’ (Amaran) ಚಿತ್ರದ ಮೂಲಕ ಮತ್ತೆ ನಟಿ ಸದ್ದು ಮಾಡುತ್ತಿದ್ದಾರೆ. ನಟಿಯ ಕ್ಯಾರೆಕ್ಟರ್ ಟೀಸರ್ ರಿವೀಲ್ ಚಿತ್ರತಂಡ ಸರ್ಪ್ರೈಸ್ ನೀಡಿದೆ. ಇದನ್ನೂ ಓದಿ:10 ವರ್ಷ ಕಾಲ ಮ್ಯೂಸಿಕ್‌ ವಾಹಿನಿ ನಡೆದಿದ್ದೇ ಸಂತೋಷ, ಆಶ್ಚರ್ಯ: ಹೆಚ್‌ ಆರ್‌ ರಂಗನಾಥ್‌

    ಶಿವಕಾರ್ತಿಕೇಯನ್ ನಟನೆಯ ‘ಅಮರನ್’ ಚಿತ್ರದಲ್ಲಿ ಸಾಯಿ ಪಲ್ಲವಿ ಹೀರೋಯಿನ್ ಆಗಿ ನಟಿಸಿದ್ದಾರೆ. ವೀರಯೋಧ ಮೇಜರ್ ಮುಕುಂದ ವರದರಾಜನ್ ಬಯೋಪಿಕ್ ಆಗಿದೆ. ಇದರಲ್ಲಿ ವೀರಯೋಧನಾಗಿ ಶಿವಕಾರ್ತಿಕೇಯನ್ ನಟಿಸಿದ್ರೆ, ಅವರ ಪತ್ನಿ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ಜೀವ ತುಂಬಿದ್ದಾರೆ.

     

    View this post on Instagram

     

    A post shared by Sai Pallavi (@saipallavi.senthamarai)

    ಇನ್ನೂ ಚಿತ್ರದಲ್ಲಿ ನಟಿಯ ಕ್ಯಾರೆಕ್ಟರ್ ಟೀಸರ್ 1:22 ನಿಮಿಷವಿದ್ದು, ಸಾಯಿ ಪಲ್ಲವಿ ಗುಂಗುರು ಕೂದಲು ಬಿಟ್ಟು ನಯಾ ಲುಕ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

    ಇನ್ನೂ ‘ಅಮರನ್’ ಚಿತ್ರವನ್ನು ರಾಜಕುಮಾರ ಪೆರಿಯಸ್ವಾಮಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇದೇ ಅಕ್ಟೋಬರ್ 11ಕ್ಕೆ ರಿಲೀಸ್ ಆಗಲಿದೆ.

  • ಡಿಸೆಂಬರ್‌ನಲ್ಲಿ ‘ರಾವಣ’ನಾಗಿ ಘರ್ಜಿಸಲಿದ್ದಾರೆ ಯಶ್

    ಡಿಸೆಂಬರ್‌ನಲ್ಲಿ ‘ರಾವಣ’ನಾಗಿ ಘರ್ಜಿಸಲಿದ್ದಾರೆ ಯಶ್

    ನ್ಯಾಷನಲ್ ಸ್ಟಾರ್ ಯಶ್ ಪ್ರಸ್ತುತ ‘ಟಾಕ್ಸಿಕ್’ (Toxic) ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಅವರು ಒಪ್ಪಿಕೊಂಡಿರುವ ‘ರಾಮಾಯಣ’ ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಡಿಸೆಂಬರ್‌ನಲ್ಲಿ ಯಶ್ (Yash) ‘ರಾಮಾಯಣ’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ:ಕನ್ನಡತಿ ಸೀರಿಯಲ್‌ ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

    ಆ.8ಕ್ಕೆ ಟಾಕ್ಸಿಕ್ ಸಿನಿಮಾಗೆ ಚಿತ್ರಕ್ಕೆ ನೀಡಲಾಗಿತ್ತು. ಅಂದಿನಿಂದ ಈ ಪ್ರಾಜೆಕ್ಟ್‌ನಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಇನ್ನೂ ಹಲವು ಹಂತದಲ್ಲಿ ಶೂಟಿಂಗ್ ನಡೆಯಲಿದೆ. ಆದರೆ ರಣ್‌ಬೀರ್ ಕಪೂರ್ (Ranbir Kapoor) ‘ರಾಮಾಯಣ’ (Ramayana) ಚಿತ್ರದಲ್ಲಿ ಯಶ್ ‘ರಾವಣ’ನಾಗಿ ಬರೋಕೆ ಮುಹೂರ್ತ ಫಿಕ್ಸ್ ಆಗಿದೆ. ‘ಟಾಕ್ಸಿಕ್’ ಸಿನಿಮಾ ಜೊತೆಗೆಯೇ ಈ ಚಿತ್ರಕ್ಕೂ ಅವರು ಸಾಥ್ ನೀಡಲಿದ್ದಾರೆ.

    ರಣ್‌ಬೀರ್ ರಾಮನ ಪಾತ್ರ, ಸಾಯಿ ಪಲ್ಲವಿ (Sai Pallavi) ಸೀತೆ ಪಾತ್ರಕ್ಕೆ ಜೀವತುಂಬುತ್ತಿದ್ದಾರೆ. ಇವರ ಭಾಗದ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದೆ. ಡಿಸೆಂಬರ್‌ನಲ್ಲಿ ಚಿತ್ರದ ಸೆಟ್‌ಗೆ ಯಶ್ ಎಂಟ್ರಿ ಕೊಡಲಿದ್ದಾರೆ. ರಾವಣನಾಗಿ ಘರ್ಜಿಸೋಕೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಇನ್ನೂ ಸನ್ನಿ ಡಿಯೋಲ್ ಅವರು ಹನುಮಂತನ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.

    ಇನ್ನೂ ‘ರಾಮಾಯಣ’ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ಸಹ ನಿರ್ಮಾಪಕನಾಗಿಯೂ ಕನ್ನಡದ ನಟ ಯಶ್ ಕೈಜೋಡಿಸಿದ್ದಾರೆ. ಹಾಗಾಗಿ ಈ ಸಿನಿಮಾದ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

  • ಶೂಟಿಂಗ್ ಮುಗಿಸಿದ ಶಿವಕಾರ್ತಿಕೇಯನ್, ಸಾಯಿ ಪಲ್ಲವಿ ನಟನೆಯ ‘ಅಮರನ್’ ಸಿನಿಮಾ

    ಶೂಟಿಂಗ್ ಮುಗಿಸಿದ ಶಿವಕಾರ್ತಿಕೇಯನ್, ಸಾಯಿ ಪಲ್ಲವಿ ನಟನೆಯ ‘ಅಮರನ್’ ಸಿನಿಮಾ

    ‘ಪ್ರೇಮಂ’ ನಟಿ ಸಾಯಿ ಪಲ್ಲವಿ ಬಾಲಿವುಡ್ ಮತ್ತು ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಶಿವಕಾರ್ತಿಕೇಯನ್ (Sivakarthikeyan) ಜೊತೆ ಸಾಯಿ ಪಲ್ಲವಿ ನಟಿಸಿರುವ ‘ಅಮರನ್’ (Amaran Film) ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಸಿನಿಮಾ ರಿಲೀಸ್‌ಗೆ ಸಿದ್ಧತೆ ಕೂಡ ನಡೆಯುತ್ತಿದೆ. ಇದನ್ನೂ ಓದಿ:ಟ್ರೋಲ್‌ಗಳ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ನೇಹಾ ಶೆಟ್ಟಿ

    ‘ಅಮರನ್’ ಮೇಜರ್ ಮುಕುಂದ ವರದರಾಜನ್ ಜೀವನ ಚರಿತ್ರೆಯನ್ನು ಆಧರಿಸಿ ಸಿನಿಮಾ ಮಾಡಲಾಗಿದೆ. ಯೋಧನಾಗಿ ಲೀಡ್ ರೋಲ್‌ನಲ್ಲಿ ಶಿವಕಾರ್ತಿಕೇಯನ್ ನಟಿಸಿದ್ದು, ನಾಯಕಿಯಾಗಿ ಸಾಯಿ ಪಲ್ಲವಿ (Sai Pallavi)  ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಖ್ಯಾತ ನಟ ಕಮಲ್ ಹಾಸನ್ (Kamal Haasan), ಆರ್. ಮಹೇಂದ್ರನ್, ವಿವೇಕ್ ಸೇರಿ ನಿರ್ಮಾಣ ಮಾಡಿದ್ದಾರೆ.

    ರಾಜಕುಮಾರ್ ಪೆರಿಸ್ವಾಮಿ ನಿರ್ದೇಶನದ ಈ ಚಿತ್ರದ ಶೂಟಿಂಗ್ ಈಗ ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಿನಿಮಾದ ರಿಲೀಸ್ ಡೇಟ್ ಕೂಡ ಘೋಷಿಸಲಿದ್ದಾರೆ. ಇನ್ನೂ ಸಾಯಿ ಪಲ್ಲವಿ ಮತ್ತು ಶಿವಕಾರ್ತಿಕೇಯನ್‌ ಜೋಡಿಯನ್ನು ನೋಡಲು ಫ್ಯಾನ್ಸ್‌ ಕಾತರದಿಂದ ಕಾಯುತ್ತಿದ್ದಾರೆ.

    ಅಂದಹಾಗೆ, ರಾಮಾಯಣ, ತಾಂಡೇಲ್, ಆಮೀರ್ ಖಾನ್ ಪುತ್ರನ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ಸಾಯಿ ಪಲ್ಲವಿ ಕೈಯಲ್ಲಿವೆ. ಬಾಲಿವುಡ್‌ನಲ್ಲಿ ಕೂಡ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

  • ವಿಜಯ್ ದೇವರಕೊಂಡಗೆ ಸಾಯಿ ಪಲ್ಲವಿ ನಾಯಕಿ

    ವಿಜಯ್ ದೇವರಕೊಂಡಗೆ ಸಾಯಿ ಪಲ್ಲವಿ ನಾಯಕಿ

    ‘ಪ್ರೇಮಂ’ (Premam) ಬೆಡಗಿ ಸಾಯಿ ಪಲ್ಲವಿ (Sai Pallavi) ಇದೀಗ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಸಿನಿಮಾದ ಶೂಟಿಂಗ್ ತೊಡಗಿಸಿಕೊಂಡಿರುವ ಸಾಯಿ ಪಲ್ಲವಿ ಈಗ ತೆಲುಗಿನ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರೌಡಿ ಬಾಯ್‌ಗೆ ಸಾಯಿ ಪಲ್ಲವಿ ನಾಯಕಿಯಾಗಲು ಸಜ್ಜಾಗಿದ್ದಾರೆ.

    ಖುಷಿ, ಫ್ಯಾಮಿಲಿ ಸ್ಟಾರ್ ನಟ ವಿಜಯ್ ದೇವರಕೊಂಡ (Vijay Devarakonda) ನಟನೆಯ ಹೊಸ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿ ಎಂದು ಸುದ್ದಿ ಹರಿದಾಡುತ್ತಿದೆ. ವಿಜಯ್ ಜೊತೆ ಸಾಯಿ ಪಲ್ಲವಿ ಜೋಡಿಯಾಗಿ ತೋರಿಸಲು ಡೈರೆಕ್ಟರ್‌ ರವಿ ಕಿರಣ್‌ ಕೋಲಾ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗಿದೆ.

    ಒಂದು ವಿಭಿನ್ನ ಕಥೆಯನ್ನು ತೋರಿಸಲು ರವಿಕಿರಣ್ ಹೊರಟಿದ್ದಾರೆ. ವಿಜಯ್‌ಗೆ ಸಾಯಿ ಪಲ್ಲವಿ ಸೂಕ್ತ ನಾಯಕಿ ಎಂದು ಚಿತ್ರತಂಡ ಯೋಚಿಸಿ ನಟಿಯನ್ನು ಸಂಪರ್ಕಿಸಿದೆ. ಸಾಯಿ ಪಲ್ಲವಿ ಕೂಡ ಕಥೆ ಕೇಳಿ ಓಕೆ ಎಂದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ. ಇದನ್ನೂ ಓದಿ:ಸ್ವಪ್ನಮಂಟಪ: ಶೂಟಿಂಗ್ ಮುಗಿಸಿದ ಬರಗೂರು ರಾಮಚಂದ್ರಪ್ಪ

    ಇನ್ನೂ ಆಮೀರ್ ಖಾನ್ (Aamir Khan) ಪುತ್ರನಿಗೆ ನಾಯಕಿಯಾಗಿ ಬಾಲಿವುಡ್‌ಗೆ ಸಾಯಿ ಪಲ್ಲವಿ ಪಾದಾರ್ಪಣೆ ಮಾಡುತ್ತಿದ್ದಾರೆ. ಯಶ್ (Yash) ಸಹ-ನಿರ್ಮಾಣದ ‘ರಾಮಾಯಣ’ (Ramayana) ಚಿತ್ರದಲ್ಲಿ ಸೀತೆಯಾಗಿ ನಟಿಸುತ್ತಿದ್ದಾರೆ. ನಾಗಚೈತನ್ಯ (Nagachaitanya) ಜೊತೆ ತಾಂಡೇಲ್ ಸಿನಿಮಾ ಮಾಡಿ ಮುಗಿಸಿದ್ದಾರೆ. ಹೀಗೆ ಹಲವು ಪ್ರಾಜೆಕ್ಟ್‌ಗಳು ನಟಿಯ ಕೈಯಲ್ಲಿವೆ.

  • Ramayana: ಕೈಕೇಯಿ ಪಾತ್ರದಲ್ಲಿ ಲಾರಾ ದತ್ತಾ? ನಟಿ ಸ್ಪಷ್ಟನೆ

    Ramayana: ಕೈಕೇಯಿ ಪಾತ್ರದಲ್ಲಿ ಲಾರಾ ದತ್ತಾ? ನಟಿ ಸ್ಪಷ್ಟನೆ

    ಬಾಲಿವುಡ್‌ನ ‘ರಾಮಾಯಣ’ (Ramayana Film) ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ರಾಮನಾಗಿ ರಣ್‌ಬೀರ್ ಕಪೂರ್ (Ranbir Kapoor), ಸೀತೆಯಾಗಿ ಸಾಯಿ ಪಲ್ಲವಿ (Sai Pallavi) ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕೈಕೇಯಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿಗೆ ಲಾರಾ ದತ್ತಾ ಸ್ಪಷ್ಟನೆ ನೀಡಿದ್ದಾರೆ.

    ‘ರಾಮಾಯಣ’ ಚಿತ್ರದಲ್ಲಿ ಕೈಕೇಯಿ ಪಾತ್ರದಲ್ಲಿ ನಟಿಸುತ್ತಿದ್ದೀರಾ? ಎಂಬ ಪ್ರಶ್ನೆ ನಟಿಗೆ ಸಂದರ್ಶನವೊಂದರಲ್ಲಿ ಎದುರಾಗಿದೆ. ನಾನು ಕೂಡ ಈ ಬಗ್ಗೆ ತುಂಬಾ ಕೇಳುತ್ತಿದ್ದೇನೆ. ನಾನು ಆ ಬಗ್ಗೆ ಓದಲು, ಕೇಳಲು ಇಷ್ಟಪಡುತ್ತೇನೆ. ಆದ್ದರಿಂದ ದಯವಿಟ್ಟು ಮುಂದುವರಿಸಿ ಎಂದು ಲಾರಾ ಮಾತನಾಡಿದ್ದಾರೆ. ಇದನ್ನೂ ಓದಿ:ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಟೀಸರ್ ರಿಲೀಸ್

    ರಾಮಾಯಣದ (Ramayana Film) ಭಾಗವಾಗಲು ಯಾರು ತಾನೇ ಇಷ್ಟಪಡುವುದಿಲ್ಲ ಹೇಳಿ ಚಿತ್ರದಲ್ಲಿ ನನಗೆ ಆಫರ್ ಕೊಟ್ರರೆ ನಾನು ನಟಿಸಲು ಇಷ್ಟಪಡುವ ಅನೇಕ ಪಾತ್ರಗಳಿವೆ. ಶೂರ್ಪನಖಿ, ಮಂಡೋದರಿ, ನಾನು ಎಲ್ಲಾ ರೀತಿಯ ಪಾತ್ರಗಳನ್ನು ನಿರ್ವಹಿಸಲು ಇಷ್ಟಪಡುತ್ತೇನೆ ಎಂದು ಲಾರಾ ಹೇಳಿದ್ದಾರೆ. ಆ ಮೂಲಕ ‘ರಾಮಾಯಣ’ ಚಿತ್ರದಲ್ಲಿ ನಟಿಸುವ ಬಗ್ಗೆ ಲಾರಾ (Lara Dutta) ಯಾವುದೇ ಖಚಿತ ಮಾಹಿತಿ ನೀಡಿಲ್ಲ.

    ‘ರಾಮಾಯಣ’ ಚಿತ್ರ ಬಿಗ್ ಬಜೆಟ್‌ನಲ್ಲಿ ಮೂಡಿ ಬರುತ್ತಿದೆ. ಸಿನಿಮಾ ನಿರ್ಮಾಣಕ್ಕೆ ‘ಕೆಜಿಎಫ್‌ 2’ (KGF 2) ನಟ ಯಶ್ (Yash) ಕೂಡ ಸಾಥ್ ನೀಡುತ್ತಿದ್ದಾರೆ.

  • ಮೊಡವೆ ನಿವಾರಣೆಗಾಗಿ ಸರ್ಜರಿ ಮೊರೆ ಹೋದ್ರಾ ಸಾಯಿ ಪಲ್ಲವಿ?

    ಮೊಡವೆ ನಿವಾರಣೆಗಾಗಿ ಸರ್ಜರಿ ಮೊರೆ ಹೋದ್ರಾ ಸಾಯಿ ಪಲ್ಲವಿ?

    ಟಾಲಿವುಡ್ (Tollywood) ನಟಿ ಸಾಯಿ ಪಲ್ಲವಿ (Sai Pallavi) ಸದ್ಯ ಬಾಲಿವುಡ್ (Bollywood) ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಡ್ಯಾನ್ಸಿಂಗ್ ಕ್ವೀನ್ ಎಂದೇ ಹೆಸರು ಮಾಡಿರುವ ಸಾಯಿ ಪಲ್ಲವಿ ಬಗ್ಗೆ ಹೊಸ ವಿಚಾರವೊಂದು ಚರ್ಚೆಯಾಗುತ್ತಿದೆ. ಮೊಡವೆ ನಿವಾರಣೆಗಾಗಿ ನಟಿ ಸರ್ಜರಿ ಮೊರೆ ಹೋದ್ರಾ ಎಂಬ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ.

    ‘ಪ್ರೇಮಂ’ (Premam Film) ಚಿತ್ರದ ಮೂಲಕ ಸಾಯಿ ಪಲ್ಲವಿ ಮಾಲಿವುಡ್‌ಗೆ ಕಾಲಿಟ್ಟಾಗ ಮುಖ ತುಂಬಾ ಮೊಡವೆ ಇತ್ತು. ಬಹುತೇಕ ಸಿನಿಮಾದಲ್ಲಿ ಮೇಕಪ್ ಇಲ್ಲದೇ ಕೂಡ ನಟಿಸಿದ್ದರು. ಈಗ ಅವರ ಮುಖದಲ್ಲಿ ಮೊಡವೆಗಳು ಮಾಯವಾಗಿದೆ. ಅದಕ್ಕೆ ಸರ್ಜರಿ ಮಾಡಿಸಿದ್ರಾ ಎಂಬ ಪ್ರಶ್ನೆ ನಟಿಗೆ ಸಂದರ್ಶನವೊಂದರಲ್ಲಿ ಎದುರಾಗಿದೆ. ಇದನ್ನೂ ಓದಿ:ತಮಿಳಿನ ರಿಮೇಕ್ ಸಿನಿಮಾದಲ್ಲಿ ಪೂಜಾ ಹೆಗ್ಡೆ

    ಹದಿಹರೆಯದ ಹುಡುಗಿಯರಲ್ಲಿ ಮೊಡವೆಗಳು ಆಗೋದು ಸಾಮಾನ್ಯ ವಿಚಾರ. ನಂತರ ದಿನಗಳಲ್ಲಿ ಅವು ಕಡಿಮೆ ಆಗುತ್ತದೆ. ದಪ್ಪ ಕೂದಲಿಗಾಗಿ ನಾನು ಹೆಚ್ಚಾಗಿ ಪೋಷಕಾಂಶ ಆಹಾರವನ್ನು ಸೇವಿಸುತ್ತೇನೆ. ನಂತರ ಅಲೋವರಾ ಜೆಲ್ ಅನ್ನು ಹಚ್ಚಿಕೊಳ್ಳುತ್ತೇನೆ ಎಂದು ನಟಿ ವಿವರಿಸಿದ್ದಾರೆ. ಸರ್ಜರಿ ವಿಚಾರಕ್ಕೆ ನಟಿ ಸ್ಪಷ್ಟನೆ ನೀಡಿದ್ದಾರೆ.

    ಆಮೀರ್ ಖಾನ್‌ಗೆ ನಾಯಕಿಯಾಗಿ ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ರಣ್‌ಬೀರ್‌ಗೆ ಸೀತೆಯಾಗಿ ‘ರಾಮಾಯಣ’ (Ramayana Film) ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಾಗಚೈತನ್ಯಗೆ ನಾಯಕಿಯಾಗಿ ‘ತಾಂಡೇಲ್’ ಚಿತ್ರದಲ್ಲಿ ನಟಿಸಿದ್ದಾರೆ. ಸದ್ಯ ಬಿಗ್ ಪ್ರಾಜೆಕ್ಟ್ ಚಿತ್ರಗಳು ನಟಿಯ ಕೈಯಲ್ಲಿವೆ.

  • ಸಾಯಿಪಲ್ಲವಿ ಬೈಕಾಟ್: ಬಾಲಿವುಡ್ ಪಿತೂರಿ ಅಂತಿದ್ದಾರೆ ನಟಿಯ ಫ್ಯಾನ್ಸ್

    ಸಾಯಿಪಲ್ಲವಿ ಬೈಕಾಟ್: ಬಾಲಿವುಡ್ ಪಿತೂರಿ ಅಂತಿದ್ದಾರೆ ನಟಿಯ ಫ್ಯಾನ್ಸ್

    ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ (Sai Pallavi) ಅವರು ಸೀತಾ ಪಾತ್ರ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿ ಸಾಕಷ್ಟು ನೆಟ್ಟಿಗರು ವಿರೋಧ ವ್ಯಕ್ತ ಪಡಿಸಿದ್ದರು. ಇದೊಂದು ಬಾಲಿವುಡ್ ಮಾಡುತ್ತಿರುವ ಪಿತೂರಿ ಅಂತಿದ್ದಾರೆ ನಟಿಯ ಫ್ಯಾನ್ಸ್. ದಕ್ಷಿಣ ಹುಡುಗಿಯರನ್ನು ಬಾಲಿವುಡ್ ಬಿಟ್ಟುಕೊಳ್ಳುವುದಿಲ್ಲ. ಹಾಗಾಗಿ ಬೈಕಾಟ್ (Boycott) ಅಂತಿದ್ದಾರೆ ಎನ್ನುವ ಸಂದೇಶ ಹರಿದಾಡುತ್ತಿದೆ.

    ಈ ಹಿಂದೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಂದಾಗ ಹಿಂದೂ ವಿರೋಧಿ ಹೇಳಿಕೆಯನ್ನು ಸಾಯಿ ಪಲ್ಲವಿ ನೀಡಿದ್ದರು. ಈ ಕಾರಣದಿಂದಾಗಿ ಭಾರೀ ವಿರೋಧವನ್ನು ಸೋಷಿಯಲ್ ಮೀಡಿಯಾದಲ್ಲಿ ಮಾಡಲಾಗುತ್ತಿದೆ. ಇದನ್ನು ಬಾಲಿವುಡ್ ಮೇಲೆ ಎತ್ತಿ ಹಾಕುವಂತಹ ಪ್ರಯತ್ನವನ್ನು ನಟಿಯ ಅಭಿಮಾನಿಗಳು ಮಾಡುತ್ತಿದ್ದಾರೆ.

    ರಾಮಾಯಣ ಸಿನಿಮಾದ ಬಜೆಟ್, ಸಂಭಾವನೆಯದ್ದೇ ಸುದ್ದಿ. ಮೂರು ಪಾರ್ಟ್ ನಲ್ಲಿ ಈ ರಾಮಾಯಣ ಸಿನಿಮಾ ಮೂಡಿ ಬರಲಿದ್ದು, ಒಟ್ಟು ಬಜೆಟ್ ಎಷ್ಟು, ಯಾರಿಗೆ ಎಷ್ಟು ಸಂಭಾವನೆ (Remuneration) ನೀಡಲಾಗಿದೆ, ಅತೀ ಹೆಚ್ಚು ಸಂಭಾವನೆ ಪಡೆದ ನಟ ಯಾರು ಹೀಗೆ ಸಿನಿ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಹೇಳಿಕೊಳ್ಳದೇ ಇದ್ದರೂ, ನಟ, ನಟಿಯರು ಭರ್ಜರಿ ಸಂಭಾವನೆಯನ್ನೇ ಪಡೆದಿದ್ದಾರೆ.

    ರಾಮನ ಪಾತ್ರದಲ್ಲಿ ಮಿಂಚಲಿರುವ ಬಾಲಿವುಡ್ ನಟ ರಣಬೀರ್ ಕಪೂರ್ ಬರೋಬ್ಬರಿ 75 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಪಾರ್ಟ್ ಸೇರಿ ಇವರಿಗೆ 225 ಕೋಟಿ ರೂಪಾಯಿ ಸಂದಾಯವಾಗಲಿದೆಯಂತೆ. ರಾವಣನ ಪಾತ್ರಧಾರಿ ಯಶ್ (Yash) ಮೂರೂ ಪಾರ್ಟ್ ಸೇರಿ 150 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರಂತೆ. ನಟಿ ಸಾಯಿ ಪಲ್ಲವಿ 18 ಕೋಟಿ ರೂಪಾಯಿ ನೀಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಾವುದೂ ಖಚಿತ ಮಾಹಿತಿ ಅಲ್ಲ ಎನ್ನುವುದು ನೆನಪಿನಲ್ಲಿಡಬೇಕಾದ ಸಂಗತಿ.

     

    ಈ ನಡುವೆ ಸಿನಿಮಾಗಾಗಿ ರಣ್‌ಬೀರ್ (Ranbir Kapoor) ಹಳ್ಳಿಯಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ರಾಮನ ಅವತಾರದಲ್ಲಿ ಬರಲು ‘ಅನಿಮಲ್‌’ ಹೀರೋ ಭಾರೀ ತಯಾರಿ ಮಾಡಿಕೊಳ್ತಿದ್ದಾರೆ. ‘ದಂಗಲ್’ ಸಿನಿಮಾ ನಂತರ ರಾಮಾಯಣ (Ramayana) ಚಿತ್ರಕ್ಕಾಗಿ ಡೈರೆಕ್ಟರ್ ಹ್ಯಾಟ್ ತೊಟ್ಟಿದ್ದಾರೆ ನಿತೇಶ್ ತಿವಾರಿ. ಚಿತ್ರತಂಡ ಕೂಡ ಪಾತ್ರಕ್ಕಾಗಿ ಏನೆಲ್ಲಾ ತಯಾರಿ ಮಾಡಲು ತಿಳಿಸಿದ್ದಾರೋ ಅದನ್ನು ಪ್ರಾಮಾಣಿಕವಾಗಿ ರಣ್‌ಬೀರ್ ಕಪೂರ್ ಮಾಡುತ್ತಿದ್ದಾರೆ. ‘ಆದಿಪುರುಷ್’ (Adipurush Film) ಸಿನಿಮಾದಂತೆ ತಮ್ಮ ಸಿನಿಮಾ ಆಗಬಾರದು ಎಂದು ಎಚ್ಚರಿಕೆಯಿಂದ ರಣ್‌ಬೀರ್ ಹೆಜ್ಜೆ ಇಡುತ್ತಿದ್ದಾರೆ.