Tag: Sai Pallavi

  • ಒಟಿಟಿಗೆ ಭಾರೀ ಮೊತ್ತಕ್ಕೆ ಸೇಲ್ ಆಯ್ತು ನಾಗಚೈತನ್ಯ, ಸಾಯಿ ಪಲ್ಲವಿ ಸಿನಿಮಾ

    ಒಟಿಟಿಗೆ ಭಾರೀ ಮೊತ್ತಕ್ಕೆ ಸೇಲ್ ಆಯ್ತು ನಾಗಚೈತನ್ಯ, ಸಾಯಿ ಪಲ್ಲವಿ ಸಿನಿಮಾ

    ತೆಲುಗಿನ ನಟ ನಾಗಚೈತನ್ಯ (Nagachaitanya) ಮತ್ತು ಸಾಯಿ ಪಲ್ಲವಿ (Sai Pallavi) ಜೋಡಿ ಲವ್ ಸ್ಟೋರಿ ಚಿತ್ರದ ನಂತರ ಮತ್ತೆ ಒಂದಾಗಿದ್ದಾರೆ. ‘ತಾಂಡೇಲ್’ (Thandel Film) ಚಿತ್ರದ ಮೂಲಕ ಮತ್ತೆ ಹೊಸ ಪ್ರೇಮ ಕಹಾನಿ ಹೇಳಲು ರೆಡಿಯಾಗಿದ್ದಾರೆ. ಈ ಸಿನಿಮಾ ರಿಲೀಸ್‌ಗೂ ಮುನ್ನವೇ ಭಾರೀ ಮೊತ್ತಕ್ಕೆ ಒಟಿಟಿಗೆ ಸೇಲ್ ಆಗಿದೆ.

    ನಾಗಚೈತನ್ಯ ಕೆರಿಯರ್‌ನಲ್ಲಿ ಮೊದಲ ಬಾರಿಗೆ ದುಬಾರಿ ಮೊತ್ತಕ್ಕೆ ಸಿನಿಮಾ ಒಟಿಟಿಗೆ ಮಾರಾಟವಾಗಿದೆ. ಬಹುಭಾಷೆಗಳಲ್ಲಿ ‘ತಾಂಡೇಲ್’ ಚಿತ್ರದ ಒಟಿಟಿ ರೈಟ್ಸ್ ಅನ್ನು ಖರೀದಿಸಿದೆ. 40 ಕೋಟಿ ರೂ.ಗೆ ಸಿನಿಮಾವನ್ನು ಖರೀದಿ ಮಾಡಲಾಗಿದೆ. ಚಿತ್ರತಂಡದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಇದನ್ನೂ ಓದಿ:ವಿಲನ್ ಆಗಿ ಮತ್ತೆ ಕಿರುತೆರೆಗೆ ಕಾವ್ಯಾ ಶಾಸ್ತ್ರಿ ಎಂಟ್ರಿ

    ನಿರ್ದೇಶಕ ಚಂದು ಮಾಂಡೇಟಿ ನಿರ್ದೇಶನದ ‘ತಾಂಡೇಲ್’ ಸಿನಿಮಾ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇದೇ ಡಿಸೆಂಬರ್‌ನಲ್ಲಿ ಕನ್ನಡ, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ರಿಲೀಸ್‌ ಆಗಲಿದೆ.

    ‘ತಾಂಡೇಲ್’ ಸಿನಿಮಾ ಆ್ಯಕ್ಷನ್ ಕಮ್ ಲವ್ ಸ್ಟೋರಿ ಸಿನಿಮಾವಾಗಿದ್ದು, ವಿಭಿನ್ನ ಕಥೆ ಮೂಲಕ ನಾಗಚೈತನ್ಯ, ಸಾಯಿ ಪಲ್ಲವಿ ಬರುತ್ತಿದ್ದಾರೆ. ಬನ್ನಿ ವಾಸು ನಿರ್ಮಾಣ ಮಾಡಿದ್ದಾರೆ.

  • ‘ರಾಮಾಯಣ’ದಲ್ಲಿ ಸಾಯಿ ಪಲ್ಲವಿ: ಸಿನಿಮಾ ನೋಡಲ್ಲ ಎಂದ ನೆಟ್ಟಿಗರು

    ‘ರಾಮಾಯಣ’ದಲ್ಲಿ ಸಾಯಿ ಪಲ್ಲವಿ: ಸಿನಿಮಾ ನೋಡಲ್ಲ ಎಂದ ನೆಟ್ಟಿಗರು

    ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ (Sai Pallavi) ಅವರು ಸೀತಾ ಪಾತ್ರ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿ ಸಾಕಷ್ಟು ನೆಟ್ಟಿಗರು ವಿರೋಧ ವ್ಯಕ್ತ ಪಡಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಂದಾಗ ಹಿಂದೂ ವಿರೋಧಿ ಹೇಳಿಕೆಯನ್ನು ಸಾಯಿ ಪಲ್ಲವಿ ನೀಡಿದ್ದರು. ಈ ಕಾರಣದಿಂದಾಗಿ ಭಾರೀ ವಿರೋಧವನ್ನು ಸೋಷಿಯಲ್ ಮೀಡಿಯಾದಲ್ಲಿ ಮಾಡಲಾಗುತ್ತಿದೆ.

    ರಾಮಾಯಣ ಸಿನಿಮಾದ ಬಜೆಟ್, ಸಂಭಾವನೆಯದ್ದೇ ಸುದ್ದಿ. ಮೂರು ಪಾರ್ಟ್ ನಲ್ಲಿ ಈ ರಾಮಾಯಣ ಸಿನಿಮಾ ಮೂಡಿ ಬರಲಿದ್ದು, ಒಟ್ಟು ಬಜೆಟ್ ಎಷ್ಟು, ಯಾರಿಗೆ ಎಷ್ಟು ಸಂಭಾವನೆ (Remuneration) ನೀಡಲಾಗಿದೆ, ಅತೀ ಹೆಚ್ಚು ಸಂಭಾವನೆ ಪಡೆದ ನಟ ಯಾರು ಹೀಗೆ ಸಿನಿ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಹೇಳಿಕೊಳ್ಳದೇ ಇದ್ದರೂ, ನಟ, ನಟಿಯರು ಭರ್ಜರಿ ಸಂಭಾವನೆಯನ್ನೇ ಪಡೆದಿದ್ದಾರೆ.

    ರಾಮನ ಪಾತ್ರದಲ್ಲಿ ಮಿಂಚಲಿರುವ ಬಾಲಿವುಡ್ ನಟ ರಣಬೀರ್ ಕಪೂರ್ ಬರೋಬ್ಬರಿ 75 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಪಾರ್ಟ್ ಸೇರಿ ಇವರಿಗೆ 225 ಕೋಟಿ ರೂಪಾಯಿ ಸಂದಾಯವಾಗಲಿದೆಯಂತೆ. ರಾವಣನ ಪಾತ್ರಧಾರಿ ಯಶ್ (Yash) ಮೂರೂ ಪಾರ್ಟ್ ಸೇರಿ 150 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರಂತೆ. ನಟಿ ಸಾಯಿ ಪಲ್ಲವಿ 18 ಕೋಟಿ ರೂಪಾಯಿ ನೀಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಾವುದೂ ಖಚಿತ ಮಾಹಿತಿ ಅಲ್ಲ ಎನ್ನುವುದು ನೆನಪಿನಲ್ಲಿಡಬೇಕಾದ ಸಂಗತಿ.

     

    ಈ ನಡುವೆ ಸಿನಿಮಾಗಾಗಿ ರಣ್‌ಬೀರ್ (Ranbir Kapoor) ಹಳ್ಳಿಯಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ರಾಮನ ಅವತಾರದಲ್ಲಿ ಬರಲು ‘ಅನಿಮಲ್‌’ ಹೀರೋ ಭಾರೀ ತಯಾರಿ ಮಾಡಿಕೊಳ್ತಿದ್ದಾರೆ. ‘ದಂಗಲ್’ ಸಿನಿಮಾ ನಂತರ ರಾಮಾಯಣ (Ramayana) ಚಿತ್ರಕ್ಕಾಗಿ ಡೈರೆಕ್ಟರ್ ಹ್ಯಾಟ್ ತೊಟ್ಟಿದ್ದಾರೆ ನಿತೇಶ್ ತಿವಾರಿ. ಚಿತ್ರತಂಡ ಕೂಡ ಪಾತ್ರಕ್ಕಾಗಿ ಏನೆಲ್ಲಾ ತಯಾರಿ ಮಾಡಲು ತಿಳಿಸಿದ್ದಾರೋ ಅದನ್ನು ಪ್ರಾಮಾಣಿಕವಾಗಿ ರಣ್‌ಬೀರ್ ಕಪೂರ್ ಮಾಡುತ್ತಿದ್ದಾರೆ. ‘ಆದಿಪುರುಷ್’ (Adipurush Film) ಸಿನಿಮಾದಂತೆ ತಮ್ಮ ಸಿನಿಮಾ ಆಗಬಾರದು ಎಂದು ಎಚ್ಚರಿಕೆಯಿಂದ ರಣ್‌ಬೀರ್ ಹೆಜ್ಜೆ ಇಡುತ್ತಿದ್ದಾರೆ.

  • ‘ರಾಮಾಯಣ’ ಚಿತ್ರದ ಲೆಕ್ಕಾಚಾರ ಕೇಳಿದರೆ ತಲೆ ತಿರುಗೋದು ಗ್ಯಾರಂಟಿ

    ‘ರಾಮಾಯಣ’ ಚಿತ್ರದ ಲೆಕ್ಕಾಚಾರ ಕೇಳಿದರೆ ತಲೆ ತಿರುಗೋದು ಗ್ಯಾರಂಟಿ

    ಬಾಲಿವುಡ್ ಸಿನಿಮಾ ರಂಗದಲ್ಲಿ ರಾಮಾಯಣ ಸಿನಿಮಾದ ಬಜೆಟ್, ಸಂಭಾವನೆಯದ್ದೇ ಸುದ್ದಿ. ಮೂರು ಪಾರ್ಟ್ ನಲ್ಲಿ ಈ ರಾಮಾಯಣ ಸಿನಿಮಾ ಮೂಡಿ ಬರಲಿದ್ದು, ಒಟ್ಟು ಬಜೆಟ್ ಎಷ್ಟು, ಯಾರಿಗೆ ಎಷ್ಟು ಸಂಭಾವನೆ (Remuneration) ನೀಡಲಾಗಿದೆ, ಅತೀ ಹೆಚ್ಚು ಸಂಭಾವನೆ ಪಡೆದ ನಟ ಯಾರು ಹೀಗೆ ಸಿನಿ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಹೇಳಿಕೊಳ್ಳದೇ ಇದ್ದರೂ, ನಟ, ನಟಿಯರು ಭರ್ಜರಿ ಸಂಭಾವನೆಯನ್ನೇ ಪಡೆದಿದ್ದಾರೆ.

    ರಾಮನ ಪಾತ್ರದಲ್ಲಿ ಮಿಂಚಲಿರುವ ಬಾಲಿವುಡ್ ನಟ ರಣಬೀರ್ ಕಪೂರ್ ಬರೋಬ್ಬರಿ 75 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಪಾರ್ಟ್ ಸೇರಿ ಇವರಿಗೆ 225 ಕೋಟಿ ರೂಪಾಯಿ ಸಂದಾಯವಾಗಲಿದೆಯಂತೆ. ರಾವಣನ ಪಾತ್ರಧಾರಿ ಯಶ್ (Yash) ಮೂರೂ ಪಾರ್ಟ್ ಸೇರಿ 150 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರಂತೆ. ನಟಿ ಸಾಯಿ ಪಲ್ಲವಿ 18 ಕೋಟಿ ರೂಪಾಯಿ ನೀಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಾವುದೂ ಖಚಿತ ಮಾಹಿತಿ ಅಲ್ಲ ಎನ್ನುವುದು ನೆನಪಿನಲ್ಲಿಡಬೇಕಾದ ಸಂಗತಿ.

    ಈ ನಡುವೆ ಸಿನಿಮಾಗಾಗಿ ರಣ್‌ಬೀರ್ (Ranbir Kapoor) ಹಳ್ಳಿಯಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ರಾಮನ ಅವತಾರದಲ್ಲಿ ಬರಲು ‘ಅನಿಮಲ್‌’ ಹೀರೋ ಭಾರೀ ತಯಾರಿ ಮಾಡಿಕೊಳ್ತಿದ್ದಾರೆ. ‘ದಂಗಲ್’ ಸಿನಿಮಾ ನಂತರ ರಾಮಾಯಣ (Ramayana) ಚಿತ್ರಕ್ಕಾಗಿ ಡೈರೆಕ್ಟರ್ ಹ್ಯಾಟ್ ತೊಟ್ಟಿದ್ದಾರೆ ನಿತೇಶ್ ತಿವಾರಿ. ಚಿತ್ರತಂಡ ಕೂಡ ಪಾತ್ರಕ್ಕಾಗಿ ಏನೆಲ್ಲಾ ತಯಾರಿ ಮಾಡಲು ತಿಳಿಸಿದ್ದಾರೋ ಅದನ್ನು ಪ್ರಾಮಾಣಿಕವಾಗಿ ರಣ್‌ಬೀರ್ ಕಪೂರ್ ಮಾಡುತ್ತಿದ್ದಾರೆ. ‘ಆದಿಪುರುಷ್’ (Adipurush Film) ಸಿನಿಮಾದಂತೆ ತಮ್ಮ ಸಿನಿಮಾ ಆಗಬಾರದು ಎಂದು ಎಚ್ಚರಿಕೆಯಿಂದ ರಣ್‌ಬೀರ್ ಹೆಜ್ಜೆ ಇಡುತ್ತಿದ್ದಾರೆ.

    ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದರೆ ಫಿಟ್ ಆಗಿರಬೇಕು. ಅಲ್ಲದೇ ಗೆಟಪ್ ಸಹ ಬದಲಾಯಿಸಿಕೊಳ್ಳಬೇಕು. ಅದಕ್ಕಾಗಿ ರಣಬೀರ್ ಕಪೂರ್ ಅವರು ತಮ್ಮ ಟ್ರೇನರ್ ಜೊತೆ ಹಳ್ಳಿಗೆ ಹೋಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ವಿವಿಧ ಬಗೆಯ ವ್ಯಾಯಾಮ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.

     

    ‘ಅನಿಮಲ್’ ಚಿತ್ರದ ಸಕ್ಸಸ್ ನಂತರ ರಾಮನಾಗಿ ಬರುತ್ತಿರುವ ರಣ್‌ಬೀರ್ ಕಪೂರ್ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ರಾಮನಾಗಿ ಕೂಡ ಆಲಿಯಾ ಪತಿ ಗೆದ್ದು ಬೀಗುತ್ತಾರಾ? ಕಾಯಬೇಕಿದೆ.

  • ಸಾಯಿ ಪಲ್ಲವಿ ನಟನೆ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ತೆಲುಗು ನಟ

    ಸಾಯಿ ಪಲ್ಲವಿ ನಟನೆ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ತೆಲುಗು ನಟ

    ಸೌತ್ ಸುಂದರಿ ಸಾಯಿ ಪಲ್ಲವಿ (Sai Pallavi) ನಟನೆಗೆ ಮತ್ತು ಡ್ಯಾನ್ಸ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ಅವರ ನ್ಯಾಚುರಲ್ ನಟನೆಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಹೀಗಿರುವಾಗ ಸಹಜ ನಟಿ ಸಾಯಿ ಪಲ್ಲವಿ ನಟನೆ ಬಗ್ಗೆ ತೆಲುಗು ನಟ ನಿಖಿಲ್ ಸಿದ್ಧಾರ್ಥ್ (Nikhil Siddarth) ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ.

    ಇತ್ತೀಚೆಗೆ ಸಿನಿಮಾವೊಂದರ ಸಂದರ್ಶನದಲ್ಲಿ ನಿಖಿಲ್‌ಗೆ ಪ್ರಶ್ನೆಯೊಂದು ಎದುರಾಗಿದೆ. ಯಾವ ನಟಿಯ ನಟನೆ ನೋಡಿ ನೀವು ಕಣ್ಣೀರು ಹಾಕಿದ್ರಿ ಎಂದು ನಿರೂಪಕಿ ಕೇಳಿದ್ದಾರೆ. ಅದಕ್ಕೆ ಥಟ್ ಅಂತ ಸಾಯಿ ಪಲ್ಲವಿ ಹೆಸರನ್ನು ನಟ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:ಸೀರೆಯಲ್ಲಿ ಸಖತ್ತಾಗಿ ಕಂಡ ನಟಿ ಪ್ರಿಯಾಮಣಿ

    ‘ವಿರಾಟ ಪರ್ವಂ’ (Viraat Parvam) ಸಿನಿಮಾದಲ್ಲಿ ಸಾಯಿ ಪಲ್ಲವಿ ನಟನೆ ನೋಡಿ ನಾನು ಕಣ್ಣೀರು ಹಾಕಿದ್ದೆ ಎಂದು ರಿವೀಲ್ ಮಾಡಿದ್ದಾರೆ. ಬಳಿಕ ಆ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ನಟಿಯ ಸಾವಿನ ದೃಶ್ಯ ಕಣ್ಣೀರು ತರಿಸಿತ್ತು. ಇದರ ಬಗ್ಗೆ ಸಾಯಿ ಪಲ್ಲವಿ ಜೊತೆ ಕೂಡ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

    ಅಂದಹಾಗೆ, ಸದ್ಯ ಸಾಯಿ ಪಲ್ಲವಿ ಅವರು ಬಾಲಿವುಡ್‌ಗೆ ಹಾರಿದ್ದಾರೆ. ಆಮೀರ್ ಖಾನ್ ಪುತ್ರನಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಜೊತೆ ನಾಗಚೈತನ್ಯ ಹೊಸ ಚಿತ್ರಕ್ಕೆ ನಟಿ ಹೀರೋಯಿನ್ ಆಗಿದ್ದಾರೆ.

  • ಸಾಯಿ ಪಲ್ಲವಿ ಬದಲು ಮೃಣಾಲ್‌ಗೆ ವಿಜಯ್ ಚಾನ್ಸ್ ಕೊಟ್ಟಿದ್ದೇಕೆ?

    ಸಾಯಿ ಪಲ್ಲವಿ ಬದಲು ಮೃಣಾಲ್‌ಗೆ ವಿಜಯ್ ಚಾನ್ಸ್ ಕೊಟ್ಟಿದ್ದೇಕೆ?

    ತೆಲುಗಿನ ಸ್ಟಾರ್ ನಟ ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಫ್ಯಾಮಿಲಿ ಸ್ಟಾರ್’ (Family Star) ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಇದರ ನಡುವೆ ಹೊಸ ವಿಚಾರವೊಂದು ಗಾಸಿಪ್ ಪ್ರಿಯರ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ಜೊತೆ ನಟಿಸಲು ಸಾಯಿ ಪಲ್ಲವಿ (Sai Pallavi) ಫೈನಲ್‌ ಆಗಿದ್ದರು. ಆದರೆ ಲೈಗರ್ ಹೀರೋ ಮೃಣಾಲ್ ಠಾಕೂರ್ (Mrunal) ಮಣೆ ಹಾಕಿದ್ದೇಕೆ ಎಂದು ಚರ್ಚೆಯಾಗುತ್ತಿದೆ.

    ವಿಜಯ್ ದೇವರಕೊಂಡ, ಮೃಣಾಲ್ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಇದೇ ಏಪ್ರಿಲ್ 5ಕ್ಕೆ ರಿಲೀಸ್‌ಗೆ ಸಿದ್ಧವಾಗಿದೆ. ವಿಜಯ್- ಮೃಣಾಲ್ ನಟಿಸಿರುವ ಚಿತ್ರದ ಹಾಡು, ಟ್ರೈಲರ್ ಮೂಲಕ ಪ್ರೇಕ್ಷಕರಿಗೆ ಮೋಡಿ ಮಾಡುತ್ತಿದೆ. ಈ ಚಿತ್ರದಲ್ಲಿ ಮೊದಲು ಹೀರೋ ಜೊತೆ ನಟಿಸಲು ಸೆಲೆಕ್ಟ್ ಆಗಿದ್ದು ಸಾಯಿ ಪಲ್ಲವಿ ಆದರೆ ಅವರ ಬದಲು ಮೃಣಾಲ್ ಯಾಕೆ ಅವಕಾಶ ಕೊಟ್ಟರು. ಏಕಾಏಕಿ ನಾಯಕಿ ಬದಲಾವಣೆ ಆಗಿದ್ದೇಕೆ? ಸಾಯಿ ಪಲ್ಲವಿಯಂತಹ ಪ್ರತಿಭಾನ್ವಿತ ನಟಿಯನ್ನು ಕೈಬಿಟ್ಟಿದ್ದೇಕೆ? ಎಂದು ಫ್ಯಾನ್ಸ್‌ ಪ್ರಶ್ನಿಸುತ್ತಿದ್ದಾರೆ.

    ಕೋಟಿ ಕೋಟಿ ದುಡ್ಡು ಕೊಡುತ್ತೀವಿ ಅಂದ್ರು ಲಿಪ್ ಲಾಕ್, ಹಸಿ ಬಿಸಿ ದೃಶ್ಯಗಳಲ್ಲಿ ಸಾಯಿ ಪಲ್ಲವಿ ನಟಿಸಲ್ಲ. ಸಿನಿಮಾಗಳಲ್ಲಿ ನಟಿಸಲು ತಮ್ಮದೇ ಕೆಲವು ರೂಲ್ಸ್‌ಗಳನ್ನು ಇಂದಿಗೂ ಸಾಯಿ ಪಲ್ಲವಿ ಫಾಲೋ ಮಾಡ್ತಾರೆ. ವಿಜಯ್ ದೇವರಕೊಂಡ ಚಿತ್ರ ಅಂದ್ಮೇಲೆ ಅಲ್ಲಿ ಲಿಪ್ ಲಾಕ್ ಸೀನ್, ಕೆಲವು ಹಸಿ ಬಿಸಿ ದೃಶ್ಯಗಳು ಇದ್ದೇ ಇರುತ್ತದೆ. ಸಾಯಿ ಪಲ್ಲವಿ ಒಪ್ಪಲ್ಲ ಎಂದೇ ವಿಜಯ್, ಮೃಣಾಲ್‌ಗೆ ಚಾನ್ಸ್ ಕೊಟ್ಟಿದ್ದಾರೆ ಎಂದೇ ಟಾಕ್ ಆಗುತ್ತಿದೆ. ಇದನ್ನೂ ಓದಿ:ಅಮ್ಮನ ಲಾಲಿ: ಕನ್ನಡದಲ್ಲಿ ಮತ್ತೊಂದು ಕಾದಂಬರಿ ಆಧಾರಿತ ಚಿತ್ರ

    ಸಿನಿಮಾ ಕಥೆಗೆ ಹಸಿ ಬಿಸಿ ದೃಶ್ಯಗಳು ಅವಶ್ಯಕತೆ ಇದ್ರೆ ಮೃಣಾಲ್ ನಟಿಸುತ್ತಾರೆ. ಹಾಗಾಗಿ ವಿಜಯ್ ದೇವರಕೊಂಡ ಅವರು ಮೃಣಾಲ್‌ಗೆ ಜೈ ಎಂದಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಕೂಡ ಡಿಯರ್ ಕಾಮ್ರೆಡ್ ಚಿತ್ರಕ್ಕೆ ಸಾಯಿ ಪಲ್ಲವಿ ಸೆಲೆಕ್ಟ್ ಆಗಿದ್ದರು. ಬೋಲ್ಡ್ ಆಗಿ ಸಾಯಿ ಪಲ್ಲವಿ ನಟಿಸಲ್ಲ ಎಂಬ ಕಾರಣಕ್ಕೆ ರಶ್ಮಿಕಾ ಮಂದಣ್ಣಗೆ ವಿಜಯ್ ಮಣೆ ಹಾಕಿದ್ದರು. ಈಗ ಮತ್ತೆ ಹಿಸ್ಟರಿ ರಿಪೀಟ್ ಆಗಿದೆ ಎಂಬ ಸುದ್ದಿ ಆಂಧ್ರದಲ್ಲಿ ಹರಿದಾಡುತ್ತಿದೆ.

    ‘ಲೈಗರ್’ (Liger) ಸಿನಿಮಾ ಮಕಾಡೆ ಮಲಗಿದ ಮೇಲೆ ಸಮಂತಾ (Samantha) ಜೊತೆ ‘ಖುಷಿ’ ಸಿನಿಮಾ ಮಾಡಿ ವಿಜಯ್‌ ದೇವರಕೊಂಡ ಗೆದ್ದರು. ಈಗ ಮತ್ತೆ ಫ್ಯಾಮಿಲಿ ಸ್ಟಾರ್ ಮೂಲಕ ನಟ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

  • ಆಮೀರ್ ಖಾನ್ ಮಗನ ಜೊತೆ ಕುಣಿದು ಕುಪ್ಪಳಿಸಿದ ಸಾಯಿ ಪಲ್ಲವಿ

    ಆಮೀರ್ ಖಾನ್ ಮಗನ ಜೊತೆ ಕುಣಿದು ಕುಪ್ಪಳಿಸಿದ ಸಾಯಿ ಪಲ್ಲವಿ

    ಹಜ ಸುಂದರಿ ಸಾಯಿ ಪಲ್ಲವಿ (Sai Pallavi) ‘ಗಾರ್ಗಿ’ ಚಿತ್ರದ ನಂತರ ಬಾಲಿವುಡ್‌ಗೆ ಹಾರಿದ್ದಾರೆ. ಆಮೀರ್ ಖಾನ್ (Aamir Khan) ಪುತ್ರ ಜುನೈದ್ ಖಾನ್ ನಾಯಕಿಯಾಗಿ ಬಿಟೌನ್‌ಗೆ ಪಾದಾರ್ಪಣೆ ಮಾಡ್ತಿದ್ದಾರೆ. ಶೂಟಿಂಗ್‌ಗೆ ಬ್ರೇಕ್ ಸಿಕ್ಕ ಬೆನ್ನಲ್ಲೇ ಸಾಯಿ ಪಲ್ಲವಿ ಆಮೀರ್ ಪುತ್ರನ ಜೊತೆ ಕುಣಿದು ಕುಪ್ಪಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:2 ಸಾವಿರ ಕೋಟಿ ರೂ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ: ಖ್ಯಾತ ನಿರ್ಮಾಪಕ ಜಾಫರ್ ಬಂಧನ

    ಜುನೈದ್- ಸಾಯಿ ಪಲ್ಲವಿ ನಟನೆಯ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ಚಿತ್ರೀಕರಣಕ್ಕೆ ಜಪಾನ್‌ಗೆ ತೆರಳಿತ್ತು. ಇತ್ತೀಚೆಗೆ ಜಪಾನ್ ಶೆಡ್ಯೂಲ್ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಪಬ್‌ನಲ್ಲಿ ಪಾರ್ಟಿ ಮಾಡಿತ್ತು. ಈ ಸಂದರ್ಭದಲ್ಲಿ ನಾಯಕಿ ಸಾಯಿ ಪಲ್ಲವಿ ಸಖತ್ ಡ್ಯಾನ್ಸ್ ಮಾಡಿದ್ದಾರೆ.

    ಮ್ಯೂಸಿಕ್ ಶುರುವಾಗ್ತಿದ್ದಂತೆ ನಟಿ ಡ್ಯಾನ್ಸ್ ಮಾಡಲು ಶುರು ಮಾಡಿದ್ದರು. ಚಿತ್ರತಂಡದ ಸದಸ್ಯರು ಸಾಯಿ ಪಲ್ಲವಿಯನ್ನು ಬೆಂಬಲಿಸಿದ್ದರು. ನಟಿ ಕೂಡ ಖುಷಿಯಿಂದ ನಗುತ್ತಾ ಕೂಗುತ್ತಾ ಹೆಜ್ಜೆ ಹಾಕಿದ್ದಾರೆ. ಡ್ಯಾನ್ಸ್ ಅಂದ್ರೆ ಸಾಯಿ ಪಲ್ಲವಿ ಸದಾ ಮುಂದಿರುತ್ತಾರೆ.

    ಸಾಯಿ ಪಲ್ಲವಿ ಡ್ಯಾನ್ಸ್ ನೋಡಿ ಅಭಿಮಾನಿಗಳು, ಆಕೆಯ ಎನರ್ಜಿ ಸೂಪರ್ ಎಂದಿದ್ದಾರೆ. ಫೀಲ್ ಮಾಡುತ್ತಾ ಡ್ಯಾನ್ಸ್ ಮಾಡುತ್ತಾ ಇರೋದು ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

  • ಮೊದಲ ಬಾರಿಗೆ ‘ನೋ ಲಿಪ್ ಕಿಸ್’ ಪಾಲಿಸಿ ಮುರಿದ ನಟಿ ಸಾಯಿ ಪಲ್ಲವಿ

    ಮೊದಲ ಬಾರಿಗೆ ‘ನೋ ಲಿಪ್ ಕಿಸ್’ ಪಾಲಿಸಿ ಮುರಿದ ನಟಿ ಸಾಯಿ ಪಲ್ಲವಿ

    ಯಾವುದೇ ಕಾರಣಕ್ಕೂ ತಾವು ಕಿಸ್ ಮಾಡುವ ಅದರಲ್ಲೂ ಲಿಪ್ ಕಿಸ್ ಮಾಡುವ ಪಾತ್ರಗಳನ್ನು ಮಾಡಲಾರೆ ಎಂದು ದಕ್ಷಿಣದ ಹೆಸರಾಂತ ನಟಿ ಸಾಯಿ ಪಲ್ಲವಿ (Sai Pallavi) ಹೇಳಿಕೊಂಡಿದ್ದರು. ಈವರೆಗೂ ಅದನ್ನು ಪಾಲಿಸಿಕೊಂಡೇ ಬಂದಿದ್ದರು. ಮೈ ತೋರಿಸುವಂತಹ ದೃಶ್ಯವಾಗಲಿ ಅಥವಾ ಕಾಮ ಉತ್ತೇಜಿಸುವಂತಹ ಭಂಗಿಯಾಗಲಿ, ಲಿಪ್ ಕಿಸ್ (Lip Kiss) ಆಗಲಿ ಅವರು ಮಾಡಲಿಲ್ಲ.

    ಇದೀಗ ಮೊದಲ ಬಾರಿಗೆ ಅವರು ತಮ್ಮ ನೋ ಪಿಲ್ ಕಿಸ್ ಪಾಲಿಸಿಯನ್ನು ಮುರಿದಿರುವ ವಿಚಾರ ತೆಲುಗು ಸಿನಿಮಾ ರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 2022ರಲ್ಲಿ ರಿಲೀಸ್ ಆಗಿದ್ದ ನಾಗಚೈತನ್ಯ (Naga Chaitanya) ಜೊತೆಗಿನ ಸಿನಿಮಾದಲ್ಲಿ ಸಾಯಿ ಪಲ್ಲವಿ ಲಿಪ್ ಕಿಸ್ ಮಾಡಿದ್ದರು ಎಂದು ಫೋಟೋವೊಂದನ್ನು ಹರಿಬಿಟ್ಟು ಟ್ರೋಲ್ ಮಾಡಲಾಗುತ್ತಿದೆ.

    ಕೆಲವರು ಈ ಫೋಟೋವನ್ನು ಅಸಲಿ ಎಂದರೆ, ಇನ್ನೂ ಕೆಲವರು ನಕಲಿ ಎಂದೂ ಹೇಳುತ್ತಿದ್ದಾರೆ. ನಿಜ ಏನಂದರೆ, ಲವ್ ಸ್ಟೋರಿ ಸಿನಿಮಾದ ಹಾಡೊಂದರಲ್ಲಿ ಸಾಯಿ ಪಲ್ಲವಿ ಮುತ್ತಿಡುವ ಸನ್ನಿವೇಶವೊಂದು ಇದೆ. ಆದರೆ, ಈ ದೃಶ್ಯದಲ್ಲಿ ಅವರು ಯಾವುದೇ ಕಾರಣಕ್ಕೂ ತುಟಿಗೆ ಮುತ್ತು ಕೊಟ್ಟಿಲ್ಲವೆಂದು ಹೇಳಲಾಗುತ್ತಿದೆ.

     

    ಕೆಲವು ದಿನಗಳ ಹಿಂದೆಯೂ ಈ ಕುರಿತಂತೆ ಸಾಯಿ ಪಲ್ಲವಿ ಮಾತನಾಡಿದ್ದರು. ನನಗೆ ಕಂಫರ್ಟ್ ಅನಿಸದ ದೃಶ್ಯಗಳಲ್ಲಿ ನಾನು ನಟಿಸಲ್ಲ ಎಂದು ಹೇಳಿದ್ದರು. ಅದರಲ್ಲೂ ಮುತ್ತಿನ ದೃಶ್ಯಗಳಿಂದ ದೂರ ಇರುವುದಾಗಿ ತಿಳಿಸಿದ್ದರು.

  • ಜಪಾನ್‌ನಲ್ಲಿ ಆಮೀರ್ ಖಾನ್ ಪುತ್ರನ ಜೊತೆ ಸಾಯಿ ಪಲ್ಲವಿ

    ಜಪಾನ್‌ನಲ್ಲಿ ಆಮೀರ್ ಖಾನ್ ಪುತ್ರನ ಜೊತೆ ಸಾಯಿ ಪಲ್ಲವಿ

    ಬಾಲಿವುಡ್ ಸ್ಟಾರ್ ನಟ ಆಮೀರ್ ಖಾನ್ (Aamir Khan) ಪುತ್ರ ಜುನೈದ್ ಖಾನ್ (Junaid Khan) ಜೊತೆ ಜಪಾನ್‌ನಲ್ಲಿ ಸಾಯಿ ಪಲ್ಲವಿ ಕಾಣಿಸಿಕೊಂಡಿದ್ದಾರೆ. ಒಟ್ಟಾಗಿರುವ ಜುನೈದ್- ಸಾಯಿ ಪಲ್ಲವಿ (Sai Pallavi)  ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ:ನಿಶ್ಚಿತಾರ್ಥದ ಸಂಭ್ರಮದಲ್ಲಿ ‘ಯುಗಳಗೀತೆ’ ನಟಿ ಸಿರಿ, ಮಧುಸೂದನ್

    ಸೌತ್‌ನ ಕೆಂಪು ಗಲ್ಲದ ಸುಂದರಿ ಸಾಯಿ ಪಲ್ಲವಿ ಅವರು ದೂರದ ಜಪಾನ್‌ನಲ್ಲಿ ಜುನೈದ್ ಜೊತೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಹೊಸ ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಜಪಾನ್‌ನಲ್ಲಿ ಸಾಯಿ ಪಲ್ಲವಿ ಟೀಮ್ ಬೀಡು ಬಿಟ್ಟಿದೆ. ಆಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ಅವರಲ್ಲಿ ಸೂಪರ್ ಮ್ಯಾನ್ ಚಾಯೆ ಕೂಡ ಕಂಡು ಬರುತ್ತಿದೆ. ಸಾಯಿ ಪಲ್ಲವಿ ಹಿಂದಿ ಚಿತ್ರರಂಗಕ್ಕೆ ನಾಯಕಿಯಾಗಿ ಅಧಿಕೃತವಾಗಿ ಕಾಲಿಡ್ತಿದ್ದಾರೆ.

    ಕೆಲವು ತಿಂಗಳುಗಳಿಂದ ಆಮೀರ್ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಬಗ್ಗೆ ಭಾರೀ ಸುದ್ದಿಯಾಗಿತ್ತು. ಆದರೆ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಈ ಹಿಂದೆಯೇ ಆಮೀರ್ ಪುತ್ರನಿಗೆ ಸಾಯಿ ಪಲ್ಲವಿ ನಾಯಕಿ ಎಂದು ಕೂಡ ಸಖತ್ ಸುದ್ದಿಯಾಗಿತ್ತು. ಇದೀಗ ವೈರಲ್ ಆಗಿರುವ ಫೋಟೋ ಮೂಲಕ ಗಾಸಿಪ್‌ಗೆ ತೆರೆಬಿದ್ದಿದೆ.

    ಜುನೈದ್ ಖಾನ್‌ಗೆ ನಾಯಕಿಯಾಗುವ ಮೂಲಕ ಬಾಲಿವುಡ್‌ಗೆ ಸಾಯಿ ಪಲ್ಲವಿ ಪಾದಾರ್ಪಣೆ ಮಾಡಿದ್ದಾರೆ. ಸೌತ್‌ನಲ್ಲಿ ಗೆದ್ದ ಹಾಗೇ ಬಾಲಿವುಡ್‌ನಲ್ಲಿಯೂ ಗೆದ್ದು ಬೀಗುತ್ತಾರಾ ಕಾದುನೋಡಬೇಕಿದೆ.

  • Ramayana: ಸಾಯಿ ಪಲ್ಲವಿ ಔಟ್, ಸೀತೆಯ ಪಾತ್ರದಲ್ಲಿ ಶ್ರೀದೇವಿ ಪುತ್ರಿ

    Ramayana: ಸಾಯಿ ಪಲ್ಲವಿ ಔಟ್, ಸೀತೆಯ ಪಾತ್ರದಲ್ಲಿ ಶ್ರೀದೇವಿ ಪುತ್ರಿ

    ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ (Nitesh Tiwari) ಇದೀಗ ರಾಮಾಯಣ (Ramayana) ಆಧರಿಸಿ ಸಿನಿಮಾ ಮಾಡಲು ಸಕಲ ತಯಾರಿ ಮಾಡುತ್ತಿದ್ದಾರೆ. ರಾಮನಾಗಿ ರಣ್‌ಬೀರ್ ಕಪೂರ್ (Ranbir Kapoor) ಸೆಲೆಕ್ಟ್ ಆಗಿದ್ರೆ, ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎನ್ನಲಾಗಿತ್ತು. ಈಗ ಸಾಯಿ ಪಲ್ಲವಿ ಬದಲು ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ (Janhvi Kapoor) ನಟಿಸಲಿದ್ದಾರೆ ಎನ್ನಲಾಗುತ್ತಿದೆ.

    ದಂಗಲ್, ಬಾವಲ್ ಚಿತ್ರಗಳ ನಿರ್ದೇಶಕ ನಿತೀಶ್ ತಿವಾರಿ ‘ರಾಮಾಯಣ’ ಕುರಿತು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಪ್ರೀ- ಪ್ರೊಡಕ್ಷನ್ ಹಂತದ ಕೆಲಸಗಳು ಕೂಡ ಭರದಿಂದ ಸಾಗುತ್ತಿದೆ. ತೆರೆಮರೆಯಲ್ಲಿ ಪಾತ್ರಗಳ ಆಯ್ಕೆ ಕೂಡ ನಡೆಯುತ್ತಿದೆ. ಸೀತೆಯ ಪಾತ್ರದ ಆಯ್ಕೆಯ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ:ಪೂನಂ ಪರವಾಗಿ ಕ್ಷಮೆ ಕೇಳಿದ ಡಿಜಿಟೆಲ್ ಟೀಮ್

    ‘ರಾಮಾಯಣ’ ಸಿನಿಮಾ ಬಗ್ಗೆ ಒಂದಲ್ಲ ಒಂದು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇದೆ. ಇದೀಗ ಮತ್ತೊಂದು ಸುದ್ದಿ ಹೊರಬಿದ್ದಿದೆ. ರಣಬೀರ್ ರಾಮನ ಪಾತ್ರ ಮಾಡ್ತಾರೆ ಎನ್ನುವ ಸುದ್ದಿ ಹೊರಬಂದ ಬಳಿಕ ಸೀತೆಯಾಗಿ ಆಲಿಯಾ ಭಟ್ ಕಾಣಿಸಿಕೊಳ್ತಾರೆ ಎನ್ನಲಾಯ್ತು. ಆದರೆ ಡೇಟ್ ಸಮಸ್ಯೆಯಿಂದ ಆಲಿಯಾ ಈ ಸಿನಿಮಾವನ್ನು ಒಪ್ಪಿಕೊಳ್ಳಲಿಲ್ಲ. ಬಳಿಕ ಸೌತ್ ಬ್ಯೂಟಿ ಸಾಯಿ ಪಲ್ಲವಿ (Sai Pallavi) ಸೀತೆಯ ಪಾತ್ರ ಮಾಡಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿತ್ತು. ಇದಾದ ಬಳಿಕ ಇದೀಗ ಶ್ರೀದೇವಿ ಮಗಳಿಗೆ ಸೀತೆಯಾಗುವ ಚಾನ್ಸ್ ಸಿಕ್ಕಿದೆ ಎನ್ನಲಾಗ್ತಿದೆ.

    ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ವಿ ಇದೀಗ ‘ರಾಮಾಯಣ’ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ರಾ ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಅಪ್‌ಡೇಟ್ ಹೊರಬೀಳಲಿದೆ.

  • ಮದುವೆ ಆಗುತ್ತಿರುವ ಹುಡುಗನ ಫೋಟೋ ಹಂಚಿಕೊಂಡ ಸಾಯಿ ಪಲ್ಲವಿ ತಂಗಿ

    ಮದುವೆ ಆಗುತ್ತಿರುವ ಹುಡುಗನ ಫೋಟೋ ಹಂಚಿಕೊಂಡ ಸಾಯಿ ಪಲ್ಲವಿ ತಂಗಿ

    ದೇ ಮೊದಲ ಬಾರಿಗೆ ತಾವು ಮದುವೆ ಆಗುತ್ತಿರುವ ಹುಡುಗನ ಫೋಟೋ ಹಂಚಿಕೊಂಡಿದ್ದಾರೆ ಖ್ಯಾತನಟಿ ಸಾಯಿ ಪಲ್ಲವಿ (Sai pallavi) ಸಹೋದರಿ ಪೂಜಾ. ಈ ಹುಡುಗನ ಕುರಿತಂತೆ ಕೆಲಸ ಸಾಲುಗಳನ್ನೂ ಅವರು ಬರೆದಿದ್ದಾರೆ.

    ಪೂಜಾ ಮದುವೆ (Marriage) ವಿಚಾರ ಹಲವು ತಿಂಗಳಿಂದ ಹರಿದಾಡುತ್ತಲೇ ಇದೆ. ಈ ಬಾರಿ ನಿಜವಾಗಿಯೂ ಸಾಯಿ ಪಲ್ಲವಿ ಮನೆಯಲ್ಲಿ ಮದುವೆ ಸಡಗರ ಮನೆ ಮಾಡಿದೆ. ಮದುವೆಯ ಪೂರ್ವಭಾವಿ ಕೆಲಸಗಳನ್ನು ಈಗಾಗಲೇ ಅವರ ತಂದೆ ತಾಯಿ ಶುರು ಮಾಡಿದ್ದಾರೆ.

    ಹಾಗಂತ ಸಾಯಿ ಪಲ್ಲವಿ ಮದುವೆ ಆಗುತ್ತಿಲ್ಲ. ಅವರ ತಂಗಿ, ನಟಿಯೂ ಆಗಿರುವ ಪೂಜಾ ಅವರ ಮದುವೆ ಸದ್ಯದಲ್ಲೇ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಪೂಜಾ (Pooja) ತನ್ನ ಎಂಗೇಜ್ ಮೆಂಟ್ ವಿಚಾರವನ್ನು ಬಹಿರಂಗವಾಗಿ ಹಂಚಿಕೊಂಡಿದ್ದರು. ಹುಡುಗನ ಫೋಟೋ ಶೇರ್ ಮಾಡಿದ್ದರು.

     

    ಹಲವು ಬಾರಿ ಸಾಯಿ ಪಲ್ಲವಿ ಮದುವೆ ವಿಚಾರ ಕೇಳಿ ಬಂದಿದ್ದರೂ, ಈ ಬಾರಿ ಮಾತ್ರ ಸಾಯಿ ಪಲ್ಲವಿ ಸ್ಥಾನದಲ್ಲಿ ಪೂಜಾ ಕಾಣಿಸಿಕೊಂಡಿದ್ದಾರೆ. ಮದುವೆ ವಿಚಾರವಾಗಿ ಅವರೇ ಒಂದಷ್ಟು ವಿಷಯವನ್ನು ಹಂಚಿಕೊಳ್ಳಬಹುದು.