Tag: Sai Sudharsan

  • RCB, ಗುಜರಾತ್‌, ಪಂಜಾಬ್‌ ಪ್ಲೇ-ಆಫ್‌ಗೆ ಎಂಟ್ರಿ – ಡೆಲ್ಲಿ ವಿರುದ್ಧ ನೋ ಲಾಸ್‌ನಲ್ಲಿ ಟೈಟಾನ್ಸ್‌ ಪಾಸ್‌

    RCB, ಗುಜರಾತ್‌, ಪಂಜಾಬ್‌ ಪ್ಲೇ-ಆಫ್‌ಗೆ ಎಂಟ್ರಿ – ಡೆಲ್ಲಿ ವಿರುದ್ಧ ನೋ ಲಾಸ್‌ನಲ್ಲಿ ಟೈಟಾನ್ಸ್‌ ಪಾಸ್‌

    ನವದೆಹಲಿ: 18ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಗುಜರಾತ್‌ ಟೈಟಾನ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಪ್ಲೇ ಆಫ್‌ಗೆ ಲಗ್ಗೆಯಿಟ್ಟಿವೆ. ಇಂದು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ 10 ವಿಕೆಟ್‌ಗಳ ಜಯ ಸಾಧಿಸಿದ ಬಳಿಕ ಮೂರು ತಂಡಗಳು ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿವೆ. ಗುಜರಾತ್‌ 12ರಲ್ಲಿ 9 ಪಂದ್ಯ ಗೆದ್ದು 18 ಅಂಕ, ಆರ್‌ಸಿಬಿ ಹಾಗೂ ಪಂಜಾಬ್‌ 12ರಲ್ಲಿ ತಲಾ 8 ಪಂದ್ಯ ಗೆದ್ದು 17 ಅಂಕಗಳೊಂದಿಗೆ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿವೆ.

    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 10ನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿದ್ರೆ, ಗುಜರಾತ್‌ ಟೈಟಾನ್ಸ್‌ 3ನೇ ಬಾರಿಗೆ ಹಾಗೂ ಪಂಜಾಬ್‌ ಕಿಂಗ್ಸ್‌ 11 ವರ್ಷಗಳ ಬಳಿಕ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ.

    2022ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಗುಜರಾತ್‌ ಟೈಟಾನ್ಸ್‌ ಆರಂಭಿಕ 2 ಆವೃತ್ತಿಗಳಲ್ಲಿ ಆವೃತ್ತಿಗಳಲ್ಲೂ ಹಾರ್ದಿಕ್‌ ಪಾಂಡ್ಯ ನಾಯಕತ್ವದಲ್ಲಿ ಪ್ಲೇ ಆಫ್‌ ಪ್ರವೇಶಿಸಿತ್ತು. ಆದ್ರೆ 2024ರ ಆವೃತ್ತಿಯಲ್ಲಿ ಶುಭಮನ್‌ ಗಿಲ್‌ ನಾಯಕತ್ವದಲ್ಲಿ ಟೈಟಾನ್ಸ್‌ ಪಡೆ ಲೀಗ್‌ ಸುತ್ತಿನಲ್ಲೇ ಹೊರಬಿದ್ದಿತ್ತು. ಇನ್ನೂ 2014ರಲ್ಲಿ ಕೊನೆಯ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿದ್ದ ಪಂಜಾಬ್‌ ಕಿಂಗ್ಸ್‌ ಇದೀಗ 11 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ.

    ಡೆಲ್ಲಿ ನೀಡಿದ 200 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ಒಂದೂ ವಿಕೆಟ್‌ ಕಳೆದುಕೊಳ್ಳದೇ 19 ಓವರ್‌ಗಳಲ್ಲಿ ಗುರಿ ತಲುಪುವಲ್ಲಿ ಯಶಸ್ವಿಯಾಯಿತು. ತಂಡದ ಪರ ಸಾಯಿ ಸುದರ್ಶನ್‌ 4 ಸಿಕ್ಸರ್‌ , 12 ಬೌಂಡರಿ ಸಿಡಿಸಿ 108 ರನ್‌, ಶುಭಮನ್‌ಗಿಲ್‌ 7 ಸಿಕ್ಸರ್‌ 3 ಬೌಂಡರಿ ನೆರವಿಂದ 93 ರನ್‌ ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್, ಕೆ.ಎಲ್. ರಾಹುಲ್ ಆಕರ್ಷಕ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್ ಕಲೆ ಹಾಕಿತು. ಆರಂಭದಿಂದಲೂ ಅಬ್ಬರದ ಆಟ ಆಡಿದ ಕೆ.ಎಲ್. ರಾಹುಲ್ 65 ಎಸೆತಗಳಲ್ಲಿ 4 ಸಿಕ್ಸರ್‌ 14 ಬೌಂಡರಿ ನೆರವಿನಿಂದ 112 ಚಚ್ಚಿ ಮಿಂಚಿದರು.

    ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಿರೀಕ್ಷೆ ತಲೆಕೆಳಗಾಗುವಂತೆ ಮಾಡಿದ್ದ ಕೆ.ಎಲ್ ರಾಹುಲ್. ಕೊನೆವರೆಗೂ ಅವರನ್ನು ಔಟ್ ಮಾಡಲು ಗುಜರಾತ್ ತಂಡದ ಶ್ರಮ ವ್ಯರ್ಥವಾಯಿತು. ತಂಡದ ಪರ ಅಭಿಷೇಕ್ ಪೋರೆಲ್ 30, ಅಕ್ಷರ್ ಪಟೇಲ್ 25 ರನ್ ಬಾರಿಸಿ ನಿರ್ಗಮಿಸಿದರು. ಟ್ರಿಸ್ಟನ್‌ ಸ್ಟಬ್ಸ್‌ 25 ರನ್‌ಗಳ ಕೊಡುಗೆ ನೀಡಿದರು. ಡುಪ್ಲೆಸಿಸ್ 5 ರನ್‌ಗಳಿಸಿ ಬೇಗ ನಿರ್ಗಮಿಸಿದರು.

    ಗುಜರಾತ್‌ ಪರ ಅರ್ಷದ್ ಖಾನ್, ಪ್ರಸಿದ್ಧ್ ಕೃಷ್ಣ, ರಶೀದ್ ಖಾನ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

  • IPL 2025 | ಗುಜರಾತ್‌ಗೆ ಮಾರ್ಕ್ರಮ್‌, ಪೂರನ್‌ ಪಂಚ್‌ – ಲಕ್ನೋಗೆ 6 ವಿಕೆಟ್‌ಗಳ ಸೂಪರ್‌ ಜಯ

    IPL 2025 | ಗುಜರಾತ್‌ಗೆ ಮಾರ್ಕ್ರಮ್‌, ಪೂರನ್‌ ಪಂಚ್‌ – ಲಕ್ನೋಗೆ 6 ವಿಕೆಟ್‌ಗಳ ಸೂಪರ್‌ ಜಯ

    – ಮತ್ತೆ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ 27 ಕೋಟಿ ಒಡೆಯ

    ಲಕ್ನೋ: ಏಡನ್‌ ಮಾಕ್ರಮ್‌ ಹಾಗೂ ನಿಕೋಲಸ್‌ ಪೂರನ್‌ (Nicholas Pooran) ಸ್ಫೋಟಕ ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ 6 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿದ್ದು, 0+.162 ನೆಟ್‌ ರನ್‌ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ. ಇನ್ನೂ 5 ಪಂದ್ಯಗಳಲ್ಲಿ 2 ಪಂದ್ಯ ಸೋತಿರುವ ಆರ್‌ಸಿಬಿ 5ನೇ ಸ್ಥಾನಕ್ಕೆ ಕುಸಿದರೆ, ಡೆಲ್ಲಿ ಕ್ಯಾಪಿಟಲ್ಸ್‌ ಎಲ್ಲರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

    ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 180 ರನ್‌ ಗಳಿಸಿತ್ತು. 181 ರನ್‌ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) 19.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 186 ರನ್‌ ಗಳಿಸಿ ಗೆಲುವು ಸಾಧಿಸಿತು.

    181 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಲಕ್ನೋ ಸೂಪರ್‌ ಜೈಂಟ್ಸ್‌ ಸಹ ಆರಂಭದಲ್ಲ ಸ್ಫೋಟಕ ಇನ್ನಿಂಗ್ಸ್‌ ಕಟ್ಟಲು ಶುರು ಮಾಡಿತು. ಮೊದಲ ವಿಕೆಟ್‌ಗೆ ರಿಷಭ್‌ ಪಂತ್‌, ಏಡನ್‌ ಮಾರ್ಕ್ರಮ್‌ ಜೋಡಿ 38 ಎಸೆತಗಳಲ್ಲಿ 65 ರನ್‌, 2ನೇ ವಿಕೆಟ್‌ಗೆ ಮಾರ್ಕ್ರಮ್‌ ಮತ್ತು ನಿಕೋಲಸ್‌ ಪೂರನ್‌ ಜೋಡಿ 29 ಎಸೆತಗಳಲ್ಲಿ ಸ್ಫೋಟಕ 58 ರನ್‌ ಹಾಗೂ 3ನೇ ವಿಕೆಟಿಗೆ ಆಯುಷ್‌ ಬದೋನಿ, ಪೂರನ್‌ ಜೋಡಿ 25 ಎಸೆತಗಳಲ್ಲಿ 32 ರನ್‌ ಸಣ್ಣ ಜೊತೆಯಾಟ ನೀಡಿದ ಪರಿಣಾಮ ಗೆಲುವು ಲಕ್ನೋ ತಂಡದತ್ತ ವಾಲಿತು.

    ಲಕ್ನೋ ಪರ ನಿಕೋಲಸ್‌ ಪೂರನ್‌ 61 ರನ್‌ (34 ಎಸೆತ, 7 ಸಿಕ್ಸರ್‌, 1 ಬೌಂಡರಿ), ಏಡನ್‌ ಮಾರ್ಕ್ರಮ್‌ 58 ರನ್‌ (31 ಎಸೆತ, 1 ಸಿಕ್ಸರ್‌, 9 ಬೌಂಡರಿ), ರಿಷಬ್‌ ಪಂತ್‌ 21 ರನ್‌, ಡೇವಿಡ್‌ ಮಿಲ್ಲರ್‌ 7 ರನ್‌, ಆಯುಷ್‌ ಬದೋನಿ ಅಜೇಯ 28 ರನ್‌, ಅಬ್ದುಲ್‌ ಸಮದ್‌ ಅಜೇಯ 2 ರನ್‌ ಗಳಿಸಿದರು. ಗುಜರಾತ್‌ ಪರ ಪ್ರಸಿದ್ಧ್‌ ಕೃಷ್ಣ 2 ವಿಕೆಟ್‌, ರಶೀದ್‌ ಖಾನ್‌, ವಾಷಿಂಗ್ಟನ್‌ ಸುಂದರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌, ನಾಯಕ ಶುಭಮನ್‌ ಗಿಲ್‌ – ಸಾಯಿ ಸುದರ್ಶನ್‌ ಅವರ ಶತಕದ ಜೊತೆಯಾಟ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 180 ರನ್‌ ಕಲೆಹಾಕಿತ್ತು.

    ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದ ಈ ಜೋಡಿ ಮೊದಲ ವಿಕೆಟ್‌ಗೆ 73 ಎಸೆತಗಳಲ್ಲಿ ಬರೋಬ್ಬರಿ 120 ರನ್‌ ಕಲೆಹಾಕಿತ್ತು. ಈ ವಿಕೆಟ್‌ ಬೀಳುತ್ತಿದ್ದಂತೆ ಉಳಿದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಪೆವಿಲಿಯನ್‌ ಪರೇಡ್‌ ನಡೆಸಿದರು, ಮಧ್ಯಮ ಕ್ರಮಾಂಕದಲ್ಲಿ ಶಾರೂಖ್‌ ಖಾನ್‌ – ರುದರ್ಫೋರ್ಡ್ ಅವರಿಂದ 31 ರನ್‌ಗಳ ಸಣ್ಣ ಜೊತೆಯಾಟ ಕಂಡುಬಂದಿತು.

    ಗುಜರಾತ್‌ ಟೈಟಾನ್ಸ್‌ ಪರ ನಾಯಕ ಶುಭಮನ್‌ ಗಿಲ್‌ 60 ರನ್‌ (38 ಎಸೆತ, 1 ಸಿಕ್ಸರ್‌, 6 ಬೌಂಡರಿ), ಸಾಯಿ ಸುದರ್ಶನ್‌ 56 ರನ್‌ (37 ಎಸೆತ, 7 ಬೌಂಡರಿ, 1 ಸಿಕ್ಸರ್‌), ಶಾರೂಖ್‌ ಖಾನ್‌ 11 ರನ್‌, ಜೋಸ್‌ ಬಟ್ಲರ್‌ 16 ರನ್‌, ರುದರ್ಫೋರ್ಡ್ 22 ರನ್‌, ರಶೀದ್‌ ಖಾನ್‌ ಅಜೇಯ 4 ರನ್‌ ಕೊಡುಗೆ ನೀಡಿದರು.

    ಲಕ್ನೋ ಸೂಪರ್‌ ಜೈಂಟ್ಸ್‌ ಪರ ಶಾರ್ದೂಲ್‌ ಠಾಕೂರ್‌, ರವಿ ಬಿಷ್ಣೋಯಿ ತಲಾ 2 ವಿಕೆಟ್‌ ಕಿತ್ತರೆ, ದಿಗ್ವೇಶ್‌ ರಾಥಿ, ಅವೇಶ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಸುದರ್ಶನ್‌ ಫಿಫ್ಟಿ ಆಟ; ಮುಂಬೈ ವಿರುದ್ಧ ಗುಜರಾತ್‌ಗೆ 36 ರನ್‌ಗಳ ಜಯ

    ಸುದರ್ಶನ್‌ ಫಿಫ್ಟಿ ಆಟ; ಮುಂಬೈ ವಿರುದ್ಧ ಗುಜರಾತ್‌ಗೆ 36 ರನ್‌ಗಳ ಜಯ

    ಅಹ್ಮದಾಬಾದ್: ಸಾಯಿ ಸುದರ್ಶನ್‌ ಅರ್ಧಶತಕ ಆಟ ಹಾಗೂ ಸಂಘಟಿತ ಬೌಲಿಂಗ್‌ ನೆರವಿನಿಂದ ಮುಂಬೈ ವಿರುದ್ಧ ಟೈಟನ್ಸ್‌ 36 ರನ್‌ಗಳ ಜಯ ಸಾಧಿಸಿದೆ. ಆ ಮೂಲಕ ಜಯದ ಹಳಿಗೆ ಗುಜರಾತ್ ಮರಳಿದೆ. ಆದರೆ, ಆಡಿದ ಎರಡೂ ಪಂದ್ಯಗಳಲ್ಲಿ ಸೋತು ಮುಂಬೈ ಮುಖಭಂಗ ಅನುಭವಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ 20 ಓವರ್‌ಗೆ 8 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿತು. ಗುರಿ ಬೆನ್ನತ್ತಿದ ಮುಂಬೈ 20 ಓವರ್‌ಗೆ 6 ವಿಕೆಟ್‌ ನಷ್ಟಕ್ಕೆ 140 ರನ್‌ ಅಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು.

    ಕಳೆದ ಪಂದ್ಯದಲ್ಲೂ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ರೋಹಿತ್‌ ಶರ್ಮಾ ಇಂದು ಕೂಡ ಮಂಕಾದರು. ಕೇವಲ 8 ರನ್‌ ಗಳಿಸಿ ಪೆವಿಲಿಯನ್‌ ಕಡೆ ಮುಖ ಮಾಡಿದರು. ರಯಾನ್ ರಿಕೆಲ್ಟನ್ ಕೂಡ 6 ರನ್‌ ಗಳಿಸಿ ಔಟಾದರು. ತಿಲಕ್‌ ವರ್ಮಾ 39 ರನ್‌ ಗಳಿಸಲಷ್ಟೇ ಶಕ್ತರಾದರು.

    ಈ ನಡುವೆ ಸೂರ್ಯಕುಮಾರ್‌ ಯಾದವ್‌ (48 ರನ್‌, 28 ಬಾಲ್‌, 1 ಫೋರ್‌, 4 ಸಿಕ್ಸರ್‌) ಜವಾಬ್ದಾರಿಯುತ ಆಟ ಗೆಲುವಿನ ಭರವಸೆ ಮೂಡಿಸಿತ್ತು. ಆದರೆ, ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚಿತ್ತು ಹೊರನಡೆದಿದ್ದು, ನಿರಾಸೆ ಮೂಡಿಸಿತು. ರಾಬಿನ್ ಮಿಂಜ್ 3, ಹಾರ್ದಿಕ್ ಪಾಂಡ್ಯ 11, ನಮನ್ ಧೀರ್ 18, ಮಿಚೆಲ್ ಸ್ಯಾಂಟ್ನರ್ 18 ರನ್‌ ಗಳಿಸಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು.

    ಗುಜರಾತ್‌ ಪರ ಮೊಹಮ್ಮದ್‌ ಸಿರಾಜ್‌, ಪ್ರಸಿದ್ಧ್‌ ಕೃಷ್ಣ ತಲಾ 2, ಕಗಿಸೊ ರಬಾಡ ಹಾಗೂ ಸಾಯಿ ಕಿಶೋರ್ ತಲಾ 1 ವಿಕೆಟ್‌ ಕಿತ್ತು ಗೆಲುವಿಗೆ ಸಹಕಾರಿಯಾದರು.

    ಇದಕ್ಕೂ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಉತ್ತಮ ಪ್ರದರ್ಶನ ನೀಡಿತು. ಸಾಯಿ ಸುದರ್ಶನ್‌ ಅರ್ಧಶತಕ (63 ರನ್‌, 41 ಬಾಲ್‌, 4 ಫೋರ್‌, 2 ಸಿಕ್ಸರ್‌) ಗಳಿಸಿ ಮಿಂಚಿದರು. ಶುಭಮನ್‌ ಗಿಲ್‌ 38, ಜೋಶ್‌ ಬಟ್ಲರ್‌ 39 ರನ್‌ ಗಳಿಸಿ ಸವಾಲಿನ ಮೊತ್ತ ಪೇರಿಸುವಲ್ಲಿ ನೆರವಾದರು.

  • ಬಾರ್ಬಡೋಸ್‌ನಲ್ಲೇ ಸಿಲುಕಿದ ಟೀಂ ಇಂಡಿಯಾ – ಜಿಂಬಾಬ್ವೆ ಸರಣಿಗೆ ಸುದರ್ಶನ್‌, ರಾಣಾ, ಜಿತೇಶ್‌ ಆಯ್ಕೆ!

    ಬಾರ್ಬಡೋಸ್‌ನಲ್ಲೇ ಸಿಲುಕಿದ ಟೀಂ ಇಂಡಿಯಾ – ಜಿಂಬಾಬ್ವೆ ಸರಣಿಗೆ ಸುದರ್ಶನ್‌, ರಾಣಾ, ಜಿತೇಶ್‌ ಆಯ್ಕೆ!

    ಹರಾರೆ: ಚಂಡಮಾರುತ ಅಪ್ಪಳಿಸಿದ್ದರಿಂದಾಗಿ ಜಿಂಬಾಬ್ವೆ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗಿದ್ದ ಯಶಸ್ವಿ ಜೈಸ್ವಾಲ್‌ (Yashasvi Jaiswal), ಶಿವಂ ದುಬೆ ಹಾಗೂ ಸಂಜು ಸ್ಯಾಮ್ಸನ್‌ ಬಾರ್ಬಡೋಸ್‌ನಲ್ಲೇ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಟಿ20 ಆಯ್ಕೆ ಸಮಿತಿ ಮೊದಲ 2 ಪಂದ್ಯಗಳಿಗೆ ಸಾಯಿ ಸುದರ್ಶನ್‌, ಹರ್ಷಿತ್‌ ರಾಣಾ (Harshit Rana) ಹಾಗೂ ಜಿತೇಶ್‌ ಶರ್ಮಾ ಅವರನ್ನ ಆಯ್ಕೆ ಮಾಡಿದೆ.

    ಜೈಸ್ವಾಲ್‌, ಶಿವಂ ದುಬೆ, ಸಂಜು ಸ್ಯಾಮ್ಸನ್‌ (Sanju Samson) ಭಾರತ ಟಿ20 ವಿಶ್ವಕಪ್‌ ತಂಡದ ಭಾಗವಾಗಿದ್ದರು. ಆದ್ರೆ ಚಂಡಮಾರುತದಿಂದಾಗಿ ಇಡೀ ತಂಡ ಬಾರ್ಬಡೋಸ್‌ನಲ್ಲೇ ಬೀಡುಬಿಟ್ಟಿದೆ. ಅವರು ಭಾರತಕ್ಕೆ ಬಂದ ನಂತರ ಜಿಂಬಾಬ್ವೆ ಸರಣಿಗೆ ಕಳುಹಿಸಲಾಗುತ್ತದೆ. ಹಾಗಾಗಿ 5 ಪಂದ್ಯಗಳ ಸರಣಿಯ ಮೊದಲ 2 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಗೆ ಸ್ಯಾಮ್ಸನ್‌, ದುಬೆ ಹಾಗೂ ಜೈಸ್ವಾಲ್‌ ಬದಲಿಗೆ ಸುದರ್ಶನ್‌, ರಾಣಾ ಹಾಗೂ ಜಿತೇಶ್‌ ಶರ್ಮಾ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

    ಇದೇ ಜುಲೈ 6 ರಿಂದ ಜುಲೈ 14ರ ವರೆಗೆ ಜಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ 4 ಪಂದ್ಯಗಳು ಸಂಜೆ 4:30ಕ್ಕೆ ಹಾಗೂ ಒಂದು ಪಂದ್ಯ ರಾತ್ರಿ 9:30ಕ್ಕೆ ಆರಂಭವಾಗಲಿದೆ. 5 ಪಂದ್ಯಗಳು ಜಿಂಬಾಬ್ವೆಯ ಹರಾರೆ ಸ್ಫೋರ್ಟ್‌ಕ್ಲಬ್‌ ಮೈದಾನದಲ್ಲಿ ನಡೆಯಲಿದೆ. ಇದನ್ನೂ ಓದಿ: ಭೀಕರ ಚಂಡಮಾರುತ – ಬಾರ್ಬಡೋಸ್‌ನಲ್ಲೇ ಬೀಡುಬಿಟ್ಟ ಟೀಂ ಇಂಡಿಯಾ!

    ಕೆರೀಬಿಯನ್ ದ್ವೀಪಗಳಲ್ಲಿ ಜುಲೈ 1ರ ಬೆಳಗ್ಗಿನ ಜಾವದಿಂದಲೇ ಚಂಡಮಾರುತ ಬೀಸುತ್ತಿರುವುದರಿಂದ ವಿಮಾನಯಾನವೂ ಸೇರಿದಂತೆ ಎಲ್ಲ ನಾಗರಿಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸದ್ಯಕ್ಕೆ ಸೇವೆ ಸ್ಥಗಿತಗೊಳಿಸಲಾಗಿದೆ .ಬಾರ್ಬಡೋಸ್ ಮತ್ತು ಸುತ್ತಮುತ್ತಲಿನ ದ್ವೀಪಗಳಲ್ಲಿ ಬಿರುಗಾಳಿಯ ತೀವ್ರತೆಯೂ ಹೆಚ್ಚಾಗಿದ್ದು, ಅಪಾಯಮಟ್ಟದಲ್ಲಿದೆ. ಹಾಗಾಗಿ ಟೀಂ ಇಂಡಿಯಾ ತವರಿಗೆ ಮರಳುವುದು ಇನ್ನೂ ಮೂರು ದಿನ ತಡವಾಗಲಿದೆ ಎಂದು ಬಿಸಿಸಿಐ ತಿಳಿಸಿದೆ.

    ಭಾರತ ತಂಡ:
    ಶುಭಮನ್‌ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಧ್ರುವ್ ಜುರೆಲ್ (ವಿಕೆಟ್‌ ಕೀಪರ್‌), ಶಿವಂ ದುಬೆ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಅವೇಶ್ ಖಾನ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ. ಬದಲಾದ ಆಟಗಾರರು ಸಾಯಿ ಸುದರ್ಶನ್‌, ಹರ್ಷಿತ್‌ ರಾಣಾ ಹಾಗೂ ಜಿತೇಶ್‌ ಶರ್ಮಾ. ಇದನ್ನೂ ಓದಿ: ಐಸಿಸಿ ಕನಸಿನ ತಂಡ ಪ್ರಕಟ – ಕೊಹ್ಲಿಗಿಲ್ಲ ಸ್ಥಾನ, ಪಟ್ಟಿಯಲ್ಲಿದ್ದಾರೆ 6 ಟೀಂ ಇಂಡಿಯಾ ಆಟಗಾರರು

    ಜಿಂಬಾಬ್ವೆ ತಂಡ:
    ಸಿಕಂದರ್‌ ರಾಝಾ (ಸಿ), ಅಕ್ರಮ್ ಫರಾಜ್, ಬೆನೆಟ್ ಬ್ರಿಯಾನ್, ಕ್ಯಾಂಪ್ಬೆಲ್ ಜೊನಾಥನ್, ಚತಾರಾ, ಜೊಂಗ್ವೆ, ಇನೋಸೆಂಟ್, ಮದಂಡೆ ಕ್ಲೈವ್, ಮಾಧೆವೆರೆ, ತಡಿವಾನಾಶೆ, ವೆಲ್ಲಿಂಗ್ಟನ್, ಮಾವುತಾ ಬ್ರಾಂಡನ್, ಮುಜರಾಬಾನಿ, ಮೈಯರ್ಸ್ ಡಿಯೋನ್, ನಖ್ವಿ ಅಂತುಮ್, ನ್ಗರವ ಮತ್ತು ಶುಂಬಾ ಮಿಲ್ಟನ್. ಇದನ್ನೂ ಓದಿ: ವಿಶ್ವಕಪ್‌ ಗೆಲ್ಲಲು ಕಾರಣವಾಗಿದ್ದು 3 ಮಹತ್ವದ ನಿರ್ಧಾರ – ಟೀಂ ಇಂಡಿಯಾ ಸಿದ್ಧಗೊಂಡಿದ್ದು ಹೇಗೆ?

  • ಕಿರಿಯ ವಯಸ್ಸಿನಲ್ಲೇ ಕ್ರಿಕೆಟ್ ದೇವರ ದಾಖಲೆ ಮುರಿದ ಸಾಯಿ ಸುದರ್ಶನ್!

    ಕಿರಿಯ ವಯಸ್ಸಿನಲ್ಲೇ ಕ್ರಿಕೆಟ್ ದೇವರ ದಾಖಲೆ ಮುರಿದ ಸಾಯಿ ಸುದರ್ಶನ್!

    ಅಹಮದಾಬಾದ್‌: 2024ರ ಐಪಿಎಲ್‌ ಆವೃತ್ತಿಯಲ್ಲಿ ಗುಜರಾತ್‌ ಟೈಟಾನ್ಸ್‌ (Gujarat Titans) ತಂಡದ ಯುವ ಆಟಗಾರ ಸಾಯಿ ಸುದರ್ಶನ್‌ (Sai Sudharsan), ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರ ಅಪರೂಪದ ದಾಖಲೆಯೊಂದನ್ನು ಮುರಿದಿದ್ದಾರೆ.

    ಶುಕ್ರವಾರ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ 22 ವರ್ಷದ ಸುದರ್ಶನ್‌, ಇದರೊಂದಿಗೆ ಐಪಿಎಲ್‌ ಆವೃತ್ತಿಯಲ್ಲಿ ವೇಗವಾಗಿ 1,000 ರನ್‌ ಪೂರೈಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ; ಹೃದಯ ಶ್ರೀಮಂತಿಕೆ ಮೆರೆದ ಧೋನಿ – ವೀಡಿಯೋ ವೈರಲ್‌!

    ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ 11ನೇ ಓವರ್‌ನಲ್ಲಿ ಸಿಮರ್ಜೀತ್ ಸಿಂಗ್ ಅವರ ಬೌಲಿಂಗ್‌ಗೆ ಸಿಕ್ಸರ್‌ ಸಿಡಿಸಿ, 71 ರನ್​ ಗಳಿಸುವ ಮೂಲಕ ಸುದರ್ಶನ್‌ 1,000 ರನ್‌ ಪೂರೈಸಿದ ಸಾಧನೆ ಮಾಡಿದ್ದಾರೆ. ಒಟ್ಟಾರೆ ಈ ಪಂದ್ಯದಲ್ಲಿ ಸಾಯಿ ಸುರ್ದಶನ್‌ 51 ಎಸೆತಗಳಲ್ಲಿ 7 ಸಿಕ್ಸರ್‌, 5 ಬೌಂಡರಿಯೊಂದಿಗೆ 103 ರನ್‌ ಬಾರಿಸಿದ್ದಾರೆ.

    ವೇಗದ 1000 ರನ್‌ ಸಿಡಿಸಿದ ಮೊದಲ ಭಾರತೀಯ:
    ಸಾಯಿ ಸುದರ್ಶನ್ ಕೇವಲ 25 ಇನ್ನಿಂಗ್ಸ್​ಗಳಲ್ಲಿ 1,000 ರನ್ ಪೂರೈಸಿದ ಮೊದಲ ಭಾರತೀಯನಾಗಿದ್ದಾರೆ. ಸಚಿನ್ ತೆಂಡೂಲ್ಕರ್ (Sachin Tendulkar) ಮತ್ತು ಗಾಯಕ್ವಾಡ್ ಇಬ್ಬರೂ 31 ಇನ್ನಿಂಗ್ಸ್​ಗಳಲ್ಲಿ 1000 ರನ್ ಪೂರೈಸಿದ್ದರು. 33 ಇನ್ನಿಂಗ್ಸ್‌ಗಳಲ್ಲಿ 1,000 ರನ್‌ ಬಾರಿಸಿದ್ದ ತಿಲಕ್‌ ವರ್ಮಾ 4ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಸಾಯಿ ಸುದರ್ಶನ್‌, ಗಿಲ್‌ ದ್ವಿಶತಕ ಜೊತೆಯಾಟ – ಚೆನ್ನೈ ವಿರುದ್ಧ ಗುಜರಾತ್‌ಗೆ 35 ರನ್‌ಗಳ ಜಯ

    ವೇಗವಾಗಿ 1,000 ರನ್‌ ಸಿಡಿಸಿದ ಟಾಪ್‌-5 ಸರದಾರರು:
    ಶಾನ್ ಮಾರ್ಷ್- 21 ಇನಿಂಗ್ಸ್​
    ಲೆಂಡ್ಲ್ ಸಿಮನ್ಸ್ – 23 ಇನಿಂಗ್ಸ್​
    ಮ್ಯಾಥ್ಯೂ ಹೇಡನ್- 25 ಇನಿಂಗ್ಸ್​
    ಸಾಯಿ ಸುದರ್ಶನ್- 25ಇನಿಂಗ್ಸ್​
    ಜಾನಿ ಬೈರ್​ಸ್ಟೋವ್​- 26 ಇನಿಂಗ್ಸ್

  • 10 ಸಿಕ್ಸರ್‌ನೊಂದಿಗೆ ಸ್ಫೋಟಕ ಶತಕ – ಆರ್‌ಸಿಬಿಗೆ ವಿಲ್‌ ಪವರ್‌; ಟೈಟಾನ್ಸ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

    10 ಸಿಕ್ಸರ್‌ನೊಂದಿಗೆ ಸ್ಫೋಟಕ ಶತಕ – ಆರ್‌ಸಿಬಿಗೆ ವಿಲ್‌ ಪವರ್‌; ಟೈಟಾನ್ಸ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

    – ವಿಲ್‌ ಜಾಕ್ಸ್‌ಗೆ ಕಿಂಗ್‌ ಕೊಹ್ಲಿ ಸಾಥ್‌
    – 500 ರನ್‌ ಪೂರೈಸಿ ವಿಶೇಷ ಸಾಧನೆ ಮಾಡಿದ ‌ವಿರಾಟ್‌

    ಅಹಮದಾಬಾದ್‌: ವಿಲ್‌ ಜಾಕ್ಸ್‌ (Will Jacks) ಸ್ಫೋಟಕ ಶತಕ ಹಾಗೂ ವಿರಾಟ್‌ ಕೊಹ್ಲಿ (Virat Kohli) ಅವರ ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಗುಜರಾತ್‌ ಟೈಟಾನ್ಸ್‌ (RCB vs GT) ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಆರ್‌ಸಿಬಿ ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಗುಜರಾತ್‌ ತಂಡಕ್ಕೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌, ಸಾಯಿ ಸುದರ್ಶನ್‌, ಎಂ. ಶಾರುಖ್‌ ಖಾನ್‌ (M Shahrukh Khan) ಅವರ ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 200 ರನ್‌ ಬಾರಿಸಿತ್ತು. 201 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಆರ್‌ಸಿಬಿ ಕೇವಲ 16 ಓವರ್‌ಗಳಲ್ಲೇ 206 ರನ್‌ ಚಚ್ಚಿ ಭರ್ಜರಿ ಗೆಲುವು ಸಾಧಿಸಿತು.

    ಚೇಸಿಂಗ್‌ ಆರಂಭಿಸಿದ್ದ ಆರ್‌ಸಿಬಿ 3.5 ಓವರ್‌ಗಳಲ್ಲಿ 40 ರನ್‌ಗಳಿದ್ದಾಗ ಮೊದಲ ವಿಕೆಟ್‌ ಕಳೆದುಕೊಂಡಿತ್ತು. ನಂತರ ಜೊತೆಗೂಡಿದ ಕಿಂಗ್‌ ಕೊಹ್ಲಿ ಹಾಗೂ ವಿಲ್‌ ಜಾಕ್ಸ್‌ ಜೋಡಿ ಅಬ್ಬರಕ್ಕೆ ಗುಜರಾತ್‌ ಭಸ್ಮವಾಯಿತು. 16ನೇ ಓವರ್‌ನಲ್ಲೇ ಬರೋಬ್ಬರಿ 4 ಸಿಕ್ಸರ್‌, 1 ಬೌಂಡರಿ ಸಿಡಿಸಿದ ವಿಲ್‌ ಜಾಕ್ಸ್‌ ಚೊಚ್ಚಲ ಐಪಿಎಲ್‌ ಶತಕ ಪೂರೈಸುವ ಜೊತೆಗೆ ಪಂದ್ಯವನ್ನೂ ಗೆಲ್ಲಿಸಿದರು. ಕೊನೆವರೆಗೂ ಕ್ರೀಸ್‌ನಲ್ಲಿ ಉಳಿದ ವಿಲ್‌ ಜಾಕ್ಸ್‌ 41 ಎಸೆತಗಳಲ್ಲಿ ಸ್ಪೋಟಕ 100 ರನ್‌ (10 ಸಿಕ್ಸರ್‌, 5 ಬೌಂಡರಿ) ಚಚ್ಚಿದರೆ, 44 ಎಸೆತ ಎದುರಿಸಿದ ವಿರಾಟ್‌ ಕೊಹ್ಲಿ 70 ರನ್‌ (3 ಸಿಕ್ಸರ್‌, 6 ಬೌಂಡರಿ) ಗಳಿದರು. ಇದರೊಂದಿಗೆ 17ನೇ ಆವೃತ್ತಿಯ ಐಪಿಎಲ್‌ನಲ್ಲಿ 500 ರನ್‌ ಪೂರೈಸಿದ ಸಾಧನೆಯನ್ನೂ ಕೊಹ್ಲಿ ಮಾಡಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಟೈಟಾನ್ಸ್‌ 6.4 ಓವರ್‌ಗಳಲ್ಲೇ 45 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ ಮಧ್ಯ ಕ್ರಮಾಂಕದಲ್ಲಿ 45 ಎಸೆತಗಳಲ್ಲಿ 86 ರನ್‌ಗಳ ಜೊತೆಯಾಟ ನೀಡುವ ಮೂಲಕ ಇನ್ನಿಂಗ್ಸ್‌ ಕಟ್ಟಿದ್ದರು. ಶಾರುಖ್‌ ಖಾನ್‌ ಔಟಾದ ಬೆನ್ನಲ್ಲೇ ಡೇವಿಡ್‌ ಮಿಲ್ಲರ್‌ ಮತ್ತು ಸುದರ್ಶನ್‌ ಜೋಡಿ ಮುರಿಯದ 4ನೇ ವಿಕೆಟ್‌ಗೆ 36 ಎಸೆತಗಳಲ್ಲಿ ಸ್ಫೋಟಕ 69 ರನ್‌ ಜೊತೆಯಾಟ ನೀಡಿತ್ತು. ಇದು ಗುಜರಾತ್‌ ತಂಡದಲ್ಲಿ ಉತ್ಸಾಹ ಹೆಚ್ಚಿಸಿತ್ತು.

    ಗುಜರಾತ್‌ ಪರ ಸಾಯಿ ಸುದರ್ಶನ್‌ 84 ರನ್‌ (49 ಎಸೆತ, 4 ಸಿಕ್ಸರ್‌, 8 ಬೌಂಡರಿ), ಶಾರುಖ್‌ ಖಾನ್‌ 58 ರನ್‌ (30 ಎಸೆತ, 5 ಸಿಕ್ಸರ್‌, 3 ಬೌಂಡರಿ), ಡೇವಿಡ್‌ ಮಿಲ್ಲರ್‌ 26 ರನ್‌ (19 ಎಸೆತ, 1 ಸಿಕ್ಸರ್‌, 2 ಬೌಂಡರಿ), ವೃದ್ಧಿಮಾನ್‌ ಸಾಹಾ 5 ರನ್‌, ಶುಭಮನ್‌ ಗಿಲ್‌ 16 ರನ್‌ ಗಳಿಸಿದರು.ಆರ್‌ಸಿಬಿ ಪರ ಗ್ಲೆನ್‌ ಮ್ಯಾಕ್ಸ್‌ವೆಲ್‌, ಸ್ವಪ್ನಿಲ್‌ ಸಿಂಗ್‌, ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

  • IPL 2024: ಕೊನೇ ಓವರ್ ಥ್ರಿಲ್ಲರ್ – ರೋಚಕ ಪಂದ್ಯದಲ್ಲಿ ಡೆಲ್ಲಿಗೆ 4 ರನ್‌ಗಳ ಜಯ; ಹೋರಾಡಿ ಸೋತ ಟೈಟಾನ್ಸ್!

    IPL 2024: ಕೊನೇ ಓವರ್ ಥ್ರಿಲ್ಲರ್ – ರೋಚಕ ಪಂದ್ಯದಲ್ಲಿ ಡೆಲ್ಲಿಗೆ 4 ರನ್‌ಗಳ ಜಯ; ಹೋರಾಡಿ ಸೋತ ಟೈಟಾನ್ಸ್!

    ನವದೆಹಲಿ: ರಶೀದ್ ಖಾನ್ ಅವರ ಸಿಕ್ಸರ್, ಬೌಂಡರಿ ಆಟದ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ 4 ರನ್‌ಗಳ ರೋಚಕ ಗೆಲುವು ಸಾಧಿಸಿದೆ.

    ಕೊನೇ ಓವರ್ ಥ್ರಿಲ್ಲಿಂಗ್?
    ಕೊನೇ ಓವರ್‌ನಲ್ಲಿ ಗುಜರಾತ್ ಗೆಲುವಿಗೆ 19 ರನ್‌ಗಳ ಅಗತ್ಯವಿತ್ತು. ಕ್ರೀಸ್‌ನಲ್ಲಿದ್ದ ರಶೀದ್ ಖಾನ್ ಮೊದಲ 2 ಎಸೆತಗಳಲ್ಲಿ ಭರ್ಜರಿ ಬೌಂಡರಿ ಬಾರಿಸಿದ್ದರು. 3-4ನೇ ಎಸೆತದಲ್ಲಿ ರನ್ ಕದಿಯುವಲ್ಲಿ ವಿಫಲರಾದರು. 2 ಎಸೆತಗಳಲ್ಲಿ 11 ರನ್ ಬೇಕಿದ್ದಾಗಲೇ 5ನೇ ಎಸೆತದಲ್ಲಿ ಭರ್ಜರಿ ಸಿಕ್ಸರ್ ಬಾರಿಸಿದ್ದರು, ಇದರಿಂದ ಕೊನೇ ಕ್ಷಣದವರೆಗೂ ಗುಜರಾತ್‌ಗೆ ಗೆಲುವಿನ ಆಸೆ ಜೀವಂತವಾಗಿತ್ತು. ಆದ್ರೆ ಕೊನೇ ಎಸೆತದಲ್ಲಿ ಬೌಂಡರಿಗೆ ಯತ್ನಿಸಿದ ರಶೀದ್ ಖಾನ್ ಒಂದು ರನ್ ಕದಿಯುವಲ್ಲಿ ಮಾತ್ರ ಸಫಲರಾದರು. ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್‌ಗೆ 4 ರನ್‌ಗಳ ರೋಚಕ ಗೆಲುವು ಸಿಕ್ಕಿತು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 224 ರನ್ ಬಾರಿಸಿತ್ತು. ಈ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಚೇಸಿಂಗ್ ಆರಂಭಿಸಿದ ಗುಜರಾತ್ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಉತ್ತಮ ರನ್ ಕಲೆಹಾಕಿತ್ತು. ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ತಂಡಕ್ಕೆ ನೆರವಾಗಿತ್ತು. ಇವರಿಬ್ಬರ ವಿಕೆಟ್ ಉರುಳುತ್ತಿದ್ದಂತೆ ರನ್ ವೇಗವೂ ಕಡಿಮೆಯಾಯಿತು.

    ಟೈಟಾನ್ಸ್ ಪರ ಸಾಯಿ ಸುದರ್ಶನ್ 65 ರನ್ (39 ಎಸೆತ, 2 ಸಿಕ್ಸರ್, 7 ಬೌಂಡರಿ), ಡೇವಿಡ್ ಮಿಲ್ಲರ್ 55 ರನ್ (23 ಎಸೆತ, 3 ಸಿಕ್ಸರ್, 6 ಬೌಂಡರಿ), ವೃದ್ಧಿಮಾನ್ ಸಾಹಾ 39 ರನ್, ಶುಭಮನ್ ಗಿಲ್ 6 ರನ್, ಅಜ್ಮತುಲ್ಲಾ ಒಮರ್ಜಾಯ್ 1 ರನ್, ಎಂ. ಶಾರೂಖ್ ಖಾನ್ 8 ರನ್, ರಾಹುಲ್ ತೆವಾಟಿಯಾ 8 ರನ್, ಸಾಯಿ ಕಿಶೋರ್ 13 ರನ್, ರಶೀದ್ ಖಾನ್ 21 ರನ್ ಗಳಿಸಿದರು.

    ಟಾಸ್ ಸೋತು ಮೊದಲು ಕ್ರೀಸ್‌ಗಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸ್ಫೋಟಕ ಆರಂಭ ಪಡೆದರೂ ಮಧ್ಯಮ ಕ್ರಮಾಂಕದಲ್ಲಿ ನಿಧಾನಗತಿಯ ಬ್ಯಾಟಿಂಗ್‌ನಿಂದ 200 ರನ್‌ಗಳ ಗಡಿ ತಲುಪುವುದೂ ಕಷ್ಟವಾಗಿತ್ತು. ಆದ್ರೆ ಕೊನೇ 2 ಓವರ್‌ಗಳಲ್ಲಿ ರಿಷಭ್ ಪಂತ್ ಹಾಗೂ ಟ್ರಿಸ್ಟಾನ್ ಸ್ಟಬ್ಸ್ ಅವರ ಸ್ಫೋಟಕ ಇನ್ನಿಂಗ್ಸ್‌ನಿಂದಾಗಿ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅದರಲ್ಲೂ ಕೊನೇ 10 ಎಸೆತಗಳಲ್ಲಿ ಸ್ಟಬ್ಸ್ ಮತ್ತು ಪಂತ್ ಜೋಡಿ ಬರೋಬ್ಬರಿ 51 ರನ್ ಚಚ್ಚಿತ್ತು. ಇದರಲ್ಲಿ ಬರೋಬ್ಬರಿ 6 ಸಿಕ್ಸರ್ ಹಾಗೂ 3 ಬೌಂಡರಿಗಳೂ ಸೇರಿದ್ದವು.

    ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ 88 ರನ್ (43 ಎಸೆತ, 8 ಸಿಕ್ಸರ್, 5 ಬೌಂಡರಿ), ಅಕ್ಷರ್ ಪಟೇಲ್ 66 ರನ್ (43 ಎಸೆತ, 4 ಸಿಕ್ಸರ್. 5 ಬೌಂಡರಿ), ಟ್ರಿಸ್ಟಾನ್ ಸ್ಟಬ್ಸ್ 26 ರನ್ (2 ಸಿಕ್ಸರ್, 3 ಬೌಂಡರಿ), ಜೇಕ್ ಫ್ರೇಸರ್-ಮ್ಯಾಕ್‌ಗಾರ್ಕ್ 23 ರನ್, ಪೃಥ್ವಿ ಶಾ 11 ರನ್, ಶಾಯ್ ಹೋಪ್ 5 ರನ್ ಗಳಿಸಿದರು. ಗುಜರಾತ್ ಟೈಟಾನ್ಸ್ ಪರ ಮಾರಕ ದಾಳಿ ನಡೆಸಿದ ಸಂದೀಪ್ ವಾರಿಯರ್ಸ್ 3 ವಿಕೆಟ್ ಕಿತ್ತರೆ, ನೂರ್ ಅಹ್ಮದ್ ಒಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

  • ಸಿಕ್ಸರ್‌ ಬೌಂಡರಿ ಆಟದಲ್ಲಿ ಪಂಜಾಬ್‌ಗೆ 3 ವಿಕೆಟ್‌ಗಳ ರೋಚಕ ಜಯ – ತವರಿನಲ್ಲೇ ಟೈಟಾನ್ಸ್‌ಗೆ ಸೋಲು!

    ಸಿಕ್ಸರ್‌ ಬೌಂಡರಿ ಆಟದಲ್ಲಿ ಪಂಜಾಬ್‌ಗೆ 3 ವಿಕೆಟ್‌ಗಳ ರೋಚಕ ಜಯ – ತವರಿನಲ್ಲೇ ಟೈಟಾನ್ಸ್‌ಗೆ ಸೋಲು!

    – ಕೊನೇ 17 ಎಸೆತಗಳಲ್ಲಿ 41 ರನ್‌ ಚಚ್ಚಿದ ಪಂಜಾಬ್‌ – ಗಿಲ್‌ ನಾಯಕನ ಆಟ ವ್ಯರ್ಥ,

    ಅಹಮದಾಬಾದ್‌: ಡೆತ್‌ ಓವರ್‌ನಲ್ಲಿ ಅಶುತೋಷ್ ಶರ್ಮಾ ಹಾಗೂ ಶಶಾಂಕ್‌ ಸಿಂಗ್‌ ಅವರ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನದಿಂದ ಪಂಜಾಬ್‌ ಕಿಂಗ್ಸ್‌ ತಂಡವು ಗುಜರಾತ್‌ ಟೈಟಾನ್ಸ್‌ ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

    ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಶುಭಮನ್‌ ಗಿಲ್‌ ನಾಯಕತ್ವದ ಗುಜರಾತ್‌ ಟೈಟಾನ್ಸ್‌ ತಂಡವು 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 199 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ ತಂಡವು 19.5 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 200 ರನ್‌ ಪೂರೈಸಿ ಗೆಲುವು ಸಾಧಿಸಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ ಪಂಜಾಬ್‌, ಐಪಿಎಲ್‌ನಲ್ಲಿ ಹೆಚ್ಚುಬಾರಿ 200 ರನ್‌ ಗುರಿ ಬೆನ್ನಟ್ಟಿದ ಯಶಸ್ವಿ ತಂಡ ಎಂಬ ಹೆಗ್ಗಳಿಕೆಯನ್ನೂ ಪಡೆದುಕೊಂಡಿತು.

    ಕೊನೇ ಓವರ್‌ ರೋಚಕತೆ ಹೇಗಿತ್ತು?
    ಕೊನೇ ಓವರ್‌ನಲ್ಲಿ ಪಂಜಾಬ್‌ ಗೆಲುವಿಗೆ 7 ರನ್‌ಗಳ ಅಗತ್ಯವಿತ್ತು. ದರ್ಶನ್‌ ನಾಲ್ಕಂಡೆ ಬೌಲಿಂಗ್‌ನಲ್ಲಿದ್ದರು. ನಾಲ್ಕಂಡೆ ಬೌಲಿಂಗ್‌ನ ಮೊದಲ ಎಸೆತದಲ್ಲೇ ಸಿಕ್ಸರ್‌ ಪ್ರಯತ್ನಿಸಿದ ಅಶುತೋಷ್‌ ಬೌಂಡರಿ ಲಾಂಗ್‌ಆನ್‌ನಲ್ಲಿ ಕ್ಯಾಚ್‌ ನೀಡಿ ಔಟಾದರು. 2ನೇ ಎಸೆತದಲ್ಲಿ ವೈಡ್‌ ಎಸೆದ ನಾಲ್ಕಂಡೆ 3ನೇ ಎಸೆತವನ್ನು ಬೀಟ್‌ ಮಾಡಿದ್ದರು. ಇದರಿಂದ ಪಂದ್ಯ ರೋಚಕತೆಗೆ ತಿರುಗಿತ್ತು. ಆದ್ರೆ ಕ್ರೀಸ್‌ನಲ್ಲಿದ್ದ ಹರ್ಪ್ರೀತ್‌ ಬ್ರಾರ್‌ 4ನೇ ಎಸೆತದಲ್ಲಿ 1 ರನ್‌ ತಂದುಕೊಡುತ್ತಿದ್ದಂತೆ ಬೌಂಡರಿ ಚಚ್ಚಿದ ಶಶಾಂಕ್‌ ಸಿಂಗ್‌ ಗೆಲುವನ್ನು ಪಂಜಾಬ್‌ ತಂಡದತ್ತ ವಾಲಿಸಿದರು. 5ನೇ ಎಸೆತ ಎದುರಿಸುವಲ್ಲಿ ಶಶಾಂಕ್‌ ವಿಫಲವಾದರೂ ಲೆಗ್‌ಬೈಸ್‌ ರನ್‌ ಕದಿಯುವಲ್ಲಿ ಯಶಸ್ವಿಯಾದರು. ಪರಿಣಾಮ ಪಂಜಾಬ್‌ ಕಿಂಗ್ಸ್‌ 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು.

    ಡೆತ್‌ ಓವರ್‌ನಲ್ಲಿ ರನ್‌ ಹೊಳೆ:
    200 ರನ್‌ಗಳ ಗುರಿ ಬೆನ್ನಟ್ಟಿದ್ದ ಪಂಜಾಬ್‌ ಕಿಂಗ್ಸ್‌ 15 ಓವರ್‌ಗಳಲ್ಲಿ 153 ರನ್‌ಗಳಿಗೆ ಪ್ರಮುಖ 6 ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ ಡೆತ್‌ ಓವರ್‌ನಲ್ಲಿ ಜೊತೆಗೂಡಿದ ಅಶುತೋಷ್‌ ಶರ್ಮಾ ಹಾಗೂ ಶಶಾಂಕ್‌ ಸಿಂಗ್‌ ಜೋಡಿ ರನ್‌ ಹೊಳೆ ಹರಿಸಿತು. ಕೊನೇ 5 ಓವರ್‌ಗಳಲ್ಲಿ ಕ್ರಮವಾಗಿ 15, 6, 16, 18, 7 ರನ್‌ ತಂಡಕ್ಕೆ ಸೇರ್ಪಡೆಯಾದ ಪರಿಣಾಮ ಪಂಜಾಬ್‌ ಗೆಲುವು ಸಾಧಿಸಿತು.

    ಪಂಜಾಬ್‌ ಕಿಂಗ್ಸ್‌ ಪರ ಶಶಾಂಕ್‌ ಸಿಂಗ್‌ ಅಜೇಯ 61 ರನ್‌ (29 ಎಸೆತ, 4 ಸಿಕ್ಸರ್‌, 6 ಬೌಂಡರಿ), ಅಶುತೋಷ್‌ ಶರ್ಮಾ 31 ರನ್‌ (17 ಎಸೆತ, 1 ಸಿಕ್ಸರ್‌, 3 ಬೌಂಡರಿ), ಪ್ರಭ್‌ಸಿಮ್ರಾನ್‌ ಸಿಂಗ್‌ 35 ರನ್‌, ಶಿಖರ್‌ ಧವನ್‌ 1, ಜಾನಿ ಬೈರ್‌ಸ್ಟೋವ್‌ 22 ರನ್‌, ಸ್ಯಾಮ್‌ ಕರ್ರನ್‌ 5 ರನ್‌, ಸಿಖಂದರ್‌ ರಾಜಾ 15 ರನ್‌, ಜಿತೇಶ್‌ ಶರ್ಮಾ 16 ರನ್‌ ಗಳಿಸಿದ್ರೆ, ಹರ್ಪ್ರೀತ್‌ ಬ್ರಾರ್‌ 1 ರನ್‌ ಕದ್ದರು.

    ಗುಜರಾತ್‌ ಟೈಟಾನ್ಸ್‌ ಪರ ವೃದ್ಧಿಮಾನ್‌ ಸಾಹಾ 11 ರನ್‌, ಶುಭಮನ್‌ ಗಿಲ್‌ 89 ರನ್‌ (48 ಎಸೆತ, 6 ಬೌಂಡರಿ, 4 ಸಿಕ್ಸರ್‌, ಕೇನ್‌ ವಿಲಿಯಮ್ಸನ್‌ 26 ರನ್‌, ಸಾಯಿ ಸುದರ್ಶನ್‌ 33 ರನ್‌, ವಿಜಯ್‌ ಶಂಕರ್‌ 8 ರನ್‌, ರಾವುಲ್‌ ತೆವಾಟಿಯಾ 23 ರನ್‌ (8 ಎಸೆತ, 3 ಬೌಂಡರಿ, 1 ಸಿಕ್ಸರ್‌) ಗಳಿಸಿದರು.

  • ಹೈದರಾಬಾದ್‌ ಪಾಲಿಗೆ ಕಿಲ್ಲರ್‌ ಆದ ಮಿಲ್ಲರ್‌ – ಗುಜರಾತ್‌ ಟೈಟಾನ್ಸ್‌ಗೆ 7 ವಿಕೆಟ್‌ಗಳ ಜಯ

    ಹೈದರಾಬಾದ್‌ ಪಾಲಿಗೆ ಕಿಲ್ಲರ್‌ ಆದ ಮಿಲ್ಲರ್‌ – ಗುಜರಾತ್‌ ಟೈಟಾನ್ಸ್‌ಗೆ 7 ವಿಕೆಟ್‌ಗಳ ಜಯ

    – ಮಿಂಚಿದ ಮಿಲ್ಲರ್‌, ಮೋಹಿತ್‌ ಶರ್ಮಾ – ಗಿಲ್‌ ನಾಯಕತ್ವದಲ್ಲಿ 2ನೇ ಜಯ

    ಅಹಮದಾಬಾದ್‌: ಡೇವಿಡ್‌ ಮಿಲ್ಲರ್‌, ಸಾಯಿ ಸುದರ್ಶನ್‌ ಹಾಗೂ ಶುಭಮನ್‌ ಗಿಲ್‌ (Shubman Gill) ಸಂಘಟಿತ ಬ್ಯಾಟಿಂಗ್‌ ಹಾಗೂ ಮೋಹಿತ್‌ ಶರ್ಮಾ ಬೌಲಿಂಗ್‌ ದಾಳಿ ನೆರವಿನಿಂದ ಗುಜರಾತ್‌ ಟೈಟಾನ್ಸ್‌ ತಂಡವು ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳಲ್ಲಿ 2ನೇ ಗೆಲುವು ದಾಖಲಿಸಿ, ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ.

    ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 162 ರನ್‌ ಗಳಿಸಿತ್ತು. 163 ರನ್‌ಗಳ ಗುರಿ ಬೆನ್ನತ್ತಿದ ಟೈಟಾನ್ಸ್‌ (Gujarat Titans) ಪಡೆ 19.1 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 168 ರನ್‌ ಗಳಿಸಿ ಗೆಲುವು ಸಾಧಿಸಿತು. ಸ್ಫೋಟಕ ಬ್ಯಾಟರ್‌ ಡೇವಿಡ್‌ ಮಿಲ್ಲರ್‌ ಕೊನೇ ಓವರ್‌ ಮೊದಲ ಎಸೆತದಲ್ಲೇ ಅದ್ಧೂರಿ ಸಿಕ್ಸರ್‌ ಬಾರಿಸುವ ಮೂಲಕ ಗೆಲುವಿನ ಕೇಕೆ ಹಾಕಿದರು.

    ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಎಚ್​ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಕಳೆದ ಪಂದ್ಯದಲ್ಲಿ ಮುಂವೈ ವಿರುದ್ಧ ದಾಖಲೆಯ 277 ರನ್​ ಬಾರಿಸಿದ್ದ ಎಸ್​ಆರ್​ಎಚ್ ಈ ಪಂದ್ಯದಲ್ಲಿ ಆರಂಭದಿಂದಲೇ ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮಯಾಂಕ್ ಅಗರ್ವಾಲ್​ 16 ರನ್​ಗೆ ಔಟಾದರೆ, ಟ್ರಾವಿಸ್​ ಹೆಡ್​ 19 ರನ್​ಗೆ ಬೌಲ್ಡ್ ಆದರು. ಅಭಿಷೇಕ್ ಶರ್ಮಾ 29 ರನ್, ಏಡೆನ್​ ಮಾರ್ಕ್ರಮ್​ 17 ರನ್​ಗೆ ಸೀಮಿತಗೊಂಡರು. ಹೆನ್ರಿಚ್ ಕ್ಲಾಸೆನ್​ 24 ಹಾಗೂ ಶಾಬಾಜ್‌ ಅಹಮದ್​ 22 ರನ್ ಬಾರಿಸಿದರು. ಕೊನೆಯಲ್ಲಿ ಅಬ್ದುಲ್​ ಸಮದ್ 29 ರನ್ ಬಾರಿಸುವ ಮೂಲಕ ಸ್ಪರ್ಧಾತ್ಮಕ ಗುರಿ ನೀಡುವಲ್ಲಿ ತಂಡಕ್ಕೆ ನೆರವಾದರು.

    ಗುಜರಾತ್‌ಗೆ ಸುಲಭ ತುತ್ತಾದ ಹೈದರಾಬಾದ್‌:
    ಸ್ಪರ್ಧಾತ್ಮಕ ಗುರಿ ಎದುರಿಸಲು ಕಣಕ್ಕಿಳಿದ ಗುಜರಾತ್​ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 36 ರನ್ ಬಾರಿಸಿತು. ವೃದ್ಧಿಮಾನ್​ ಸಾಹ 25 ರನ್ ಬಾರಿಸಿದರೆ ನಾಯಕ ಶುಭ್​ಮನ್​ ಗಿಲ್​ 36 ರನ್​ ಕೊಡುಗೆ ನೀಡಿದರು. 3ನೇ ಕ್ರಮಾಂಕದಲ್ಲಿ ಆಡಿದ ಸಾಯಿ ಸುದರ್ಶನ್​ 45 ರನ್ ಬಾರಿಸಿದರೆ ಡೇವಿಡ್ ಮಿಲ್ಲರ್​ ಅಜೇಯ 44 ರನ್​ ಬಾರಿಸುವ ಮೂಲಕ ಸುಲಭ ಗೆಲುವು ತಂದುಕೊಟ್ಟರು. ವಿಜಯ್ ಶಂಕರ್​ 14 ರನ್​ ಬಾರಿಸಿ ಕ್ರೀಸ್‌ನಲ್ಲಿ ಉಳಿದರು.

  • ಅರ್ಷ-ಆವೇಶ ಘಾತುಕ ಬೌಲಿಂಗ್‌ – ಶ್ರೇಯಸ್‌, ಸುದರ್ಶನ್‌ ಅರ್ಧಶತಕಗಳ ಮಿಂಚು – ಭಾರತಕ್ಕೆ 8 ವಿಕೆಟ್‌ಗಳ ಜಯ

    ಅರ್ಷ-ಆವೇಶ ಘಾತುಕ ಬೌಲಿಂಗ್‌ – ಶ್ರೇಯಸ್‌, ಸುದರ್ಶನ್‌ ಅರ್ಧಶತಕಗಳ ಮಿಂಚು – ಭಾರತಕ್ಕೆ 8 ವಿಕೆಟ್‌ಗಳ ಜಯ

    ಜೋಹಾನ್ಸ್‌ಬರ್ಗ್‌: ಅರ್ಷ್‌ದೀಪ್‌ ಸಿಂಗ್‌ (Arshdeep Singh) ಮತ್ತು ಅವೇಶ್​ ಖಾನ್​ ಅವರ ಘಾತಕ ಬೌಲಿಂಗ್​ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ತಂಡ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಹೀನಾಯ ಸೋಲಿಗೆ ತುತ್ತಾಗಿದೆ. ಯುವ ಆರಂಭಿಕ ಸಾಯಿ ಸುದರ್ಶನ್‌ ಹಾಗೂ ಶ್ರೇಯಸ್‌ ಅಯ್ಯರ್‌ (Shreyas Iyer) ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಭಾರತ (Team India) 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-0 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

    ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ಸೂಪರ್‌ ಸಂಡೇ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ದಕ್ಷಿಣ ಆಫ್ರಿಕಾ (South Africa) ತಂಡ 27.3 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್‌ ಆಯಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಭಾರತ 16.4 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 117 ರನ್‌ ಗಳಿಸಿ ಜಯ ಸಾಧಿಸಿತು.

    ಭಾರತದ ಪರ ತಾಳ್ಮೆಯ ಆಟವಾಡಿದ ಯುವ ಆರಂಭಿಕ ಸಾಯಿ ಸುದರ್ಶನ್‌ (Sai Sudharsan) ಹಾಗೂ ಶ್ರೇಯಸ್‌ ಅಯ್ಯರ್‌ ಅರ್ಧಶತಕಗಳ ಕೊಡುಗೆ ನೀಡಿದರು. ಶ್ರೇಯಸ್‌ ಅಯ್ಯರ್‌ 45 ಎಸೆತಗಳಲ್ಲಿ 52 ರನ್‌ (6 ಬೌಂಡರಿ, 1 ಸಿಕ್ಸರ್‌) ಗಳಿಸಿ ಔಟಾದರೆ, ಸಾಯಿ ಸುದರ್ಶನ್‌ 43 ಎಸೆತಗಳಲ್ಲಿ 55 ರನ್‌ (9 ಬೌಂಡರಿ, 43 ಎಸೆತ) ಬಾರಿಸಿ ಅಜೇಯರಾಗುಳಿದರು. ಇದರಿಂದ ಭಾರತ 16.4 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 117 ರನ್​ ಬಾರಿಸಿ ಗೆಲುವು ದಾಖಲಿಸಿತು. ಸರಣಿಯ ದ್ವಿತೀಯ ಪಂದ್ಯ ಡಿಸೆಂಬರ್​ 19 ಮಂಗಳವಾರ ನಡೆಯಲಿದೆ.

    ದಾಖಲೆ ಬರೆದ ಅರ್ಷ್‌ದೀಪ್‌:
    ವೇಗಿ ಅರ್ಷ್‌ದೀಪ್‌ ಸಿಂಗ್ ಹರಿಣರ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 5 ವಿಕೆಟ್​ ಪಡೆಯುವ ಮೂಲಕ ಭಾರತ ಪರ ಹೊಸ ದಾಖಲೆಯೊಂದನ್ನು ಬರೆದರು. ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಕಿತ್ತ ಮೊದಲ ಭಾರತೀಯ ಬೌಲರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆದ್ರೆ, ಒಟ್ಟಾರೆಯಾಗಿ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಪಡೆದ ಭಾರತೀಯ ಬೌಲರ್​ಗಳ ಪಟ್ಟಿಯಲ್ಲಿ ಅವರಿಗೆ 4ನೇ ಸ್ಥಾನವನ್ನೂ ಪಡೆದುಕೊಂಡರು. ಮಾಜಿ ಕ್ರಿಕೆಟಿಗ ಸುನೀಲ್​ ಜೋಶಿ ಮೊದಲಿಗರಾಗಿದ್ದಾರೆ. ಜೋಶಿ 1999ರಲ್ಲಿ ನಡೆದಿದ್ದ ಪಂದ್ಯದಲ್ಲಿ ಕೇವಲ 6 ರನ್​ಗೆ 5 ವಿಕೆಟ್​ ಕಿತ್ತು ಮಿಂಚಿದ್ದರು. ಯಜುವೇಂದ್ರ ಚಾಹಲ್​ (22 ರನ್​ಗೆ 5) ಮತ್ತು ರವೀಂದ್ರ ಜಡೇಜಾ (33 ರನ್​ಗೆ 5) ನಂತರದ ಸ್ಥಾನಗಳಲ್ಲಿದ್ದಾರೆ.

    ಅರ್ಷ-ಆವೇಶ ನಡುವೆ ಹಣಾ-ಹಣಿ:
    ಅರ್ಷ್‌ದೀಪ್‌ ಸಿಂಗ್‌ಗೆ ಜಿದ್ದಿಗೆ ಬಿದ್ದವರಂತೆ ಪೈಪೋಟಿ ನೀಡಿದ ಅವೇಶ್​ ಖಾನ್​ ತಮ್ಮ ಆವೇಶಭರಿತ ಬೌಲಿಂಗ್​ ದಾಳಿ ನಡೆಸುವ ಮೂಲಕ 27 ರನ್​ ನೀಡಿ 4 ವಿಕೆಟ್​ ಕಿತ್ತರು. ಕುಲ್ದೀಪ್‌ ಯಾದವ್‌ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು. ಉಭಯ ಬೌಲರ್​ಗಳ ಘಾತುಕ ಬೌಲಿಂಗ್​ ದಾಳಿಯನ್ನು ಎದುರಿಸಲು ವಿಫಲವಾದ ಡೇವಿಡ್​ ಮಿಲ್ಲರ್​ 2 ರನ್‌, ಹೆನ್ರಿಕ್ ಕ್ಲಾಸೆನ್ 6 ರನ್‌, ನಾಯಕ ಐಡೆನ್​ ಮಾರ್ಕ್ರಮ್ 12 ರನ್‌ ಗಳಿಸಿದ್ರೆ ವಿಯಾನ್ ಮುಲ್ಡರ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆಂಡ್ರಿಕ್ಸ್ ಶೂನ್ಯ ಸುತ್ತಿದರು.

    ಫೆಹ್ಲುಕ್ವಾಯೊ ಹೋರಾಟ ವ್ಯರ್ಥ:
    58ರನ್​ಗೆ 7 ವಿಕೆಟ್​ ಕಳೆದುಕೊಂಡಿದ್ದ ದಕ್ಷಿಣ ಆಫ್ರಿಕಾ ತಂಡ 100 ರನ್‌ ಗಳಿಸುವುದೂ ಕಷ್ಟವಾಗಿತ್ತು. ಆದ್ರೆ ಬೌಲರ್​ ಆಂಡಿಲೆ ಫೆಹ್ಲುಕ್ವಾಯೊ. ಭಾರತೀಯ ಬೌಲರ್​ಗಳ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ 2 ಸಿಕ್ಸರ್​ ಮತ್ತು 3 ಬೌಂಡರಿ ಬಾರಿಸಿ 33 ರನ್​ ಗಳಿಸಿದರು. ಇಂದು ಇದೇ ತಂಡದ ಪರ‌ ಗಳಿಸಿದ ಅಧಿಕ ರನ್‌ ಆಗಿತ್ತು. ಆದ್ರೆ ಭಾರತದ ಎದುರು ಈ ಆಟ ವ್ಯರ್ಥವಾಯಿತು.