Tag: Saiprakash

  • ‘ಪಾರ್ಟ್ನರ್’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಸಾಯಿಪ್ರಕಾಶ್

    ‘ಪಾರ್ಟ್ನರ್’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಸಾಯಿಪ್ರಕಾಶ್

    ನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ  ಸಹ, ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿ ಅನುಭವ ಇರುವ  ಟಿ.ಆರ್.ಗೌತಂಗೌಡ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಚಿತ್ರ ‘ಪಾರ್ಟ್ನರ್’  (Partner) .  ನವಿಲು ವಾಯುಪುತ್ರ ಕಂಬೈನ್ಸ್  ಬ್ಯಾನರ್ ಅಡಿ ಈ ಚಿತ್ರವನ್ನು  ನಾಗರಾಜ.ಆರ್. ಹಾಗೂ ಟಿ.ಕೆ.ರವಿ ಸೇರಿ ನಿರ್ಮಾಣ ಮಾಡಿದ್ದಾರೆ.  ಚೇತಸ್ ಆರ್. ಮತ್ತು ಸತೀಶ್ ಕೃಷ್ಣಶೆಟ್ಟಿ ಚಿತ್ರದ  ನಾಯಕರಾಗಿ ನಟಿಸಿದ್ದು, ಅಗ್ನಿಸಾಕ್ಷಿ  ಖ್ಯಾತಿಯ ಸುಕೃತಾನಾಗ್ ಹಾಗೂ ಪ್ರೀತಿ ಮಿರಾಜ್ಕರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

    ಈ ಚಿತ್ರದ ಟ್ರೈಲರ್ (Trailer),  ಆಡಿಯೋ  ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಮಾರಂಭದಲ್ಲಿ  ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ (Saiprakash) ಅವರು  ಟ್ರೈಲರ್‌ಗೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಈ ಚಿತ್ರದಲ್ಲಿ 5 ಹಾಡುಗಳಿದ್ದು ಈಗಾಗಲೇ 2 ಹಾಡುಗಳು ಮತ್ತು ಟೀಸರ್ ಪ್ರೇಕ್ಷಕರ ಗಮನ ಸೆಳೆದಿದೆ. ಮೆಹಬೂಬ್‌ಸಾಬ್ ಹಾಡಿರುವ ‘ಓ ಗೆಳೆಯಾ ಓ ಗೆಳೆಯ..’ ಹಾಡು ಈಗಾಗಲೇ ಯೂ ಟ್ಯೂಬ್‌ನಲ್ಲಿ  ವೈರಲ್ ಆಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಗೌತಮ್ ಗೌಡ ನಾನು ಮೂಲತ: ಆಂಧ್ರದವನು. ಮೊದಲಬಾರಿಗೆ ನಿರ್ದೇಶನ ಮಾಡಿದ್ದೇನೆ. ಇಬ್ಬರು ಸ್ನೇಹಿತರ, ಸ್ನೇಹದ ಸುತ್ತ ನಡೆಯುವ ಕಥೆ ಇದಾಗಿದ್ದು, ಫ್ಯಾಮಿಲಿ ಎಮೋಷನ್ಸ್, ಲವ್‌ ಸ್ಟೋರಿ, ಮದರ್ ಸೆಂಟಿಮೆಂಟ್‌ನಂಥ ಎಲ್ಲ ಎಲಿಮೆಂಟ್ ಈ ಚಿತ್ರದಲ್ಲಿದೆ. ಯಾವುದನ್ನೂ ಅನವಶ್ಯಕವಾಗಿ ಸೇರಿಸಿಲ್ಲ,  ಚಿತ್ರವನ್ನು ಕೋವಿಡ್ ಟೈಮ್‌ನಲ್ಲೇ ಶುರು ಮಾಡಿದ್ದೆವು. 15 ದಿನ ಶೂಟಿಂಗ್ ನಂತರ ಸ್ಟಾಪ್ ಮಾಡಬೇಕಾಯಿತು, ಆಮೇಲೆ ಸ್ವಲ್ಪ ತಡವಾಯಿತು. ಚಿತ್ರದಲ್ಲಿ ಎಣ್ಣೆ ಸಾಂಗ್ ತುಂಬಾ ಚೆನ್ನಾಗಿ ಬಂದಿದೆ. ಜೆ.ಡಿ. ಹರೀಶ್, ಆನಂದ್ ಕೊರಿಯೋಗ್ರಾಫ್ ಮಾಡಿದ್ದು,  ನರಸಿಂಹ, ವಿನೋದ್ ಆಕ್ಷನ್ ಕಂಪೋಜ್ ಮಾಡಿದ್ದಾರೆ. ಮುಂಜಾನೆ ಮಂಜು ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಚೇತಸ್ ಹಾಗೂ ಸತೀಶ್‌ಕೃಷ್ಣಶೆಟ್ಟಿ ಇವರಿಬ್ಬರ ಪಾತ್ರಗಳನ್ನು ಲೀಡ್ ಆಗಿಟ್ಟುಕೊಂಡು ಸ್ಕ್ರಿಪ್ಟ್ ಪ್ರಾರಂಭಿಸಿದೆವು. ನಂತರ ಉಳಿದ ಪಾತ್ರಗಳನ್ನು ಡೆವಲಪ್ ಮಾಡಿದೆವು. ಬ.ಲ. ರಾಜವಾಡಿ, ಶಿವರಾಜ್ ಕೆ.ಆರ್.ಪೇಟೆ, ರಾಬರ್ಟ್ ಲೂಯಿಸ್ ಪ್ರಮುಖ ಪಾತ್ರಗಳಲ್ಲಿದ್ದಾರೆ ಎಂದರು. ನಾಯಕ ಹಾಗೂ ನಿರ್ಮಾಪಕರೂ ಆದ ಚೇತಸ್ ಮಾತನಾಡಿ ನಮ್ಮ ಚಿತ್ರ ಇಲ್ಲಿಯವರೆಗೆ ಬಂದಿದೆ ಎಂದರೆ, ಚಿತ್ರತಂಡ ನೀಡಿದ ಸಹಕಾರವೇ ಕಾರಣ, ನಾನು ಅರ್ಜುನ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು.

    ಮತ್ತೊಬ್ಬ ನಾಯಕ ಸತೀಶ್ ಕೃಷ್ಣ ಮಾತನಾಡುತ್ತ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ.  ಕೃಷ್ಣ, ಅರ್ಜುನರ ನಡುವಿನ ಸ್ನೇಹಸಂಬಂಧ  ಹೇಗಿತ್ತು ಅಂತ ಚಿತ್ರದಲ್ಲಿ ತೋರಿಸಿದ್ದೇವೆ ಎಂದರು, ಪೋಷಕ ನಟಿ ರಾಧಿಕಾ ಮಾತನಾಡಿ ತಾನು ನಾಯಕನ ತಾಯಿಯಾಗಿ ನಟಿಸಿರುವುದಾಗಿ ಹೇಳಿದರು.

     

    ವಿಲನ್ ಪಾತ್ರ ನಿರ್ವಹಿಸಿರುವ ರಾಬರ್ಟ್ ಮಾತನಾಡಿ ನಾನು ಸುಮಾರು ಸಿನಿಮಾಗಳಲ್ಲಿ ವಿಲನ್ ಆಗಿ ನಟಿಸಿದ್ದೇನೆ, ಈ ಚಿತ್ರದಲ್ಲೂ ಒಂದು ನೆಗೆಟಿವ್ ಶೇಡ್ ಪಾತ್ರ ಮಾಡಿದ್ದೇನೆ ಎಂದರು.  ನಾಯಕಿ ಸುಕೃತಾ ಮಾತನಾಡಿ ಕಿರುತೆರೆಯಲ್ಲಿ ಅಭಿನಯಿಸಿದ್ದ ನನಗೂ ಇದು ಮೊದಲ ಚಿತ್ರ,  ಬಜಾರಿ ಥರದ, ರಾಬರಿ  ಮಾಡುತ್ತ ಓಡಾಡಿಕೊಂಡಿರೋ ಹುಡುಗಿ ಪಾತ್ರ ತನ್ನದು ಎಂದು ಹೇಳಿದರು. ಉಳಿದಂತೆ ಚಿತ್ರದ ಆಡಿಯೋ ಹೊರತಂದಿರುವ ಸಿರಿ ಮ್ಯೂಸಿಕ್‌ನ ಸುರೇಶ್ ಚಿಕ್ಕಣ್ಣ, ವಿತರಣೆ ಮಾಡುತ್ತಿರುವ ಸುನಿಲ್ ಕುಂಬಾರ್  ಸಿನಿಮಾ ಕುರಿತಂತೆ ಮಾತನಾಡಿದರು.

  • ಹಿರಿಯ ನಟ ಶ್ರೀನಿವಾಸ್ ಮೂರ್ತಿ ಸೇರಿದಂತೆ ಹಲವರಿಗೆ ‘ಶ್ರೀ ರಾಘವೇಂದ್ರ ಚಿತ್ರವಾಣಿ’ ಪ್ರಶಸ್ತಿ

    ಹಿರಿಯ ನಟ ಶ್ರೀನಿವಾಸ್ ಮೂರ್ತಿ ಸೇರಿದಂತೆ ಹಲವರಿಗೆ ‘ಶ್ರೀ ರಾಘವೇಂದ್ರ ಚಿತ್ರವಾಣಿ’ ಪ್ರಶಸ್ತಿ

    ಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿರುವುದು ಶ್ರೀ ರಾಘವೇಂದ್ರ ಚಿತ್ರವಾಣಿ (Raghavendra Chitravani) ಸಂಸ್ಥೆ. ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಈ ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ, ಈ ಸುಧೀರ್ಘ ಯಾನಕ್ಕೆ ಕಾರಣಕರ್ತರಾಗಿದ್ದ ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠವನ್ನು ಆರಂಭಿಸಿದ್ದರು. ಕೇವಲ ಎರಡು ಪ್ರಶಸ್ತಿಗಳಿಂದ ಪ್ರಾರಂಭವಾದ ಈ ಸಮಾರಂಭಕ್ಕೆ ಆಗಮಿಸಿದ ಗಣ್ಯರು, ನಮ್ಮ ಸಂಸ್ಥೆಯ ಮೂಲಕ ಪ್ರಶಸ್ತಿ ಪ್ರದಾನ ಮಾಡಲು ಮುಂದಾಗಿದ್ದರು. ಹೀಗೆ ಆರಂಭವಾದ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲೀಗ 11 ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಮಾತ್ರವಲ್ಲದೆ ಕನ್ನಡ ಚಿತ್ರರಂಗಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಿರುವ ಕಲಾವಿದರು ಮತ್ತು ತಂತ್ರಜ್ನರಿಗೆ ಪ್ರಶಸ್ತಿ ನೀಡಲಾಗುತ್ತಿದೆ.

    ಕಳೆದ ವರ್ಷ ಕೋವಿಡ್​ ಕಾರಣದಿಂದ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿರಲಿಲ್ಲ. ಹಾಗಾಗಿ,  ಕಳೆದ ವರ್ಷದ ಶ್ರೀ ರಾಘವೇಂದ್ರ ಚಿತ್ತವಾಣಿ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತಿದೆ. ಸಂಸ್ಥೆಯ ಸ್ಥಾಪಕರಾದ ಶ್ರೀ ಡಿ.ವಿ, ಸುಧೀಂದ್ರ ಅವರ ಜನ್ಮದಿನದಂದು (ಜನವರಿ 25), ಈ ಸಮಾರಂಭವನ್ನು ಚಾಮರಾಜಪೇಟೆಯ ಕನ್ನಡ ಚಲನಚಿತ್ರ ಕಲಾವಿದರ ಸಂಘದಲ್ಲಿ ಸಂಜೆ 5ಕ್ಕೆ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಸಂಸ್ಥೆಯ 47ನೇ ವಾರ್ಷಿಕೋತ್ಸವ ಹಾಗೂ 21 ಮತ್ತು 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್​ ಬಣಕಾರ್​, ನಟಿಯರಾದ ರಾಗಿಣಿ, ‘ಎ’ ಖ್ಯಾತಿಯ ಚಾಂದಿನಿ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಮುಖ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ತಂದೆಯ ಹುಟ್ಟುಹಬ್ಬಕ್ಕೆ ವಿಶೇಷ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್

    21 ಮತ್ತು 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ

    2021 ನೇ ಸಾಲಿನ ಪ್ರಶಸ್ತಿ :

     ಪಿ. ಧನರಾಜ್, ಹಿರಿಯ ಚಲನಚಿತ್ರ ನಿರ್ಮಾಪಕರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)

     ಈಶ್ಚರ ದೈತೋಟ, ಹಿರಿಯ ಪತ್ರಕರ್ತರು, (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)

    2022 ನೇ ಸಾಲಿನ ಪ್ರಶಸ್ತಿ :

    ಕುಮಾರ್ ಗೋವಿಂದ್, ಹಿರಿಯ ನಟ-ನಿರ್ಮಾಪಕರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)

    ಸದಾಶಿವ ಶೆಣೈ, ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)

    ರಾಜೇಶ್ ಕೃಷ್ಣನ್,  ಖ್ಯಾತ ಹಿನ್ನೆಲೆ ಗಾಯಕರು (ಡಾ. ರಾಜಕುಮಾರ್ ಪ್ರಶಸ್ತಿ, ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ)

    ಸಾಯಿಪ್ರಕಾಶ್, ಹಿರಿಯ ನಿರ್ದೇಶಕರು-ನಿರ್ಮಾಪಕರು (‘ಯಜಮಾನ’ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ ವಿಷ್ಣುವರ್ಧನ್​ ಅವರಿಂದ)

    ತುಳಸಿ, ಹಿರಿಯ ನಟಿ (ಖ್ಯಾತ ಅಭಿನೇತ್ರಿ ಡಾ. ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ)

    ನೋಬಿನ್ ಪಾಲ್, ಅತ್ಯುತ್ತಮ ಸಂಗೀತ ನಿರ್ದೇಶನ, ‘777 ಚಾರ್ಲಿ’ ಚಿತ್ರಕ್ಕಾಗಿ (ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್​ಟೈನ್​ಮೆಂಟ್​ ಪ್ರೈ ಲಿ ಪ್ರಶಸ್ತಿ)

    ಮಧುಚಂದ್ರ, ಅತ್ಯುತ್ತಮ ಕಥಾಲೇಖಕರು, ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರಕ್ಕಾಗಿ (ಖ್ಯಾತ ನಿರ್ದೇಶಕ-ನಿರ್ಮಾಪಕ ಶ್ರೀ ಕೆ.ವಿ. ಜಯರಾಂ ಪ್ರಶಸ್ತಿ, ಶ್ರೀಮತಿ ಮೀನಾಕ್ಷಿ ಜಯರಾಂ ಅವರಿಂದ)

    ಎಂ.ಜಿ. ಶ್ರೀನಿವಾಸ್ (ಶ್ರೀನಿ) ಅತ್ಯುತ್ತಮ ಸಂಭಾಷಣೆ, ‘ಓಲ್ಡ್ ಮಾಂಕ್’ ಚಿತ್ರಕ್ಕಾಗಿ (ಖ್ಯಾತ ಚಿತ್ರಸಾಹಿತಿ ಶ್ರೀ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ ಡಾ.ಎಚ್​.ಕೆ. ನರಹರಿ ಅವರಿಂದ)

    ಕಿರಣ್ ರಾಜ್ (‘777 ಚಾರ್ಲಿ’) ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ (ಹಿರಿತೆರೆ-ಕಿರುತೆರೆ ನಿರ್ದೇಶಕ ಶ್ರೀ ಬಿ. ಸುರೇಶ ಪ್ರಶಸ್ತಿ)

    ಪ್ರಮೋದ್ ಮರವಂತೆ, ‘ಕಾಂತಾರ’ ಚಿತ್ರದ ‘ಸಿಂಗಾರ ಸಿರಿಯೇ …’ ಗೀತರಚನೆಗಾಗಿ (ಹಿರಿಯ ಪತ್ರಕರ್ತರಾದ ಶ್ರೀ.ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಶ್ರೀ ವಿನಾಯಕರಾಮ್ ಕಲಗಾರು ಅವರಿಂದ)

    ಶ್ರೀನಿವಾಸಮೂರ್ತಿ, ಹಿರಿಯ ಪೋಷಕ ಕಲಾವಿದರು (ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ, ಶ್ರೀಮತಿ ನಾಗಮಣಿ ಸೀತಾರಾಮ ಕುಟುಂಬದವರಿಂದ)

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k