Tag: Sajid Khan

  • ‘ಬಿಗ್ ಬಾಸ್’ ಸ್ಪರ್ಧಿಯಿಂದ ಜೀವ ಬೆದರಿಕೆಯಿದೆ: ಮಹಿಳಾ ಆಯೋಗದ ಮುಖ್ಯಸ್ಥೆ ಆರೋಪ

    ‘ಬಿಗ್ ಬಾಸ್’ ಸ್ಪರ್ಧಿಯಿಂದ ಜೀವ ಬೆದರಿಕೆಯಿದೆ: ಮಹಿಳಾ ಆಯೋಗದ ಮುಖ್ಯಸ್ಥೆ ಆರೋಪ

    ಬಾಲಿವುಡ್ ನಿರ್ದೇಶಕ ಸಾಜಿದ್ ಖಾನ್ ಸದ್ಯ ಬಿಗ್ ಬಾಸ್ ಮನೆಯಲ್ಲಿದ್ದಾರೆ. ನಿನ್ನೆಯಷ್ಟೇ ಸಾಜಿದ್ ಬಿಗ್ ಬಾಸ್ ಮನೆ ಪ್ರವೇಶ ಪ್ರವೇಶಿಸಿದ್ದನ್ನು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ (Swati Maliwal) ಪ್ರಶ್ನೆ ಮಾಡಿದ್ದರು. ಇದರ ವಿರುದ್ಧ ಕೇಂದ್ರ ಸಚಿವರಿಗೆ ಪತ್ರ ಬರೆಯುವುದಾಗಿಯೂ ತಿಳಿಸಿದ್ದರು. ಈ ವಿವಾದ ಇದೀಗ ದೊಡ್ಡದಾಗಿದ್ದು, ಸ್ವಾತಿ ಅವರಿಗೆ ಜೀವ ಬೆದರಿಕೆ (Life Threat) ಕರೆಗಳು ಬರುತ್ತಿವೆಯಂತೆ. ಈ ವಿಷಯವನ್ನು ಸ್ವತಃ ಅವರೇ ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

    ಹಿಂದಿ ಬಿಗ್ ಬಾಸ್ (Bigg Boss) ಮನೆಯಲ್ಲಿ ನೆಮ್ಮದಿಯಾಗಿ ಆಟ ಆಡುತ್ತಿರುವ ಬಾಲಿವುಡ್ ನಿರ್ದೇಶಕ ಸಾಜಿದ್ ಖಾನ್ (Sajid Khan) ಅವರನ್ನು ಬಿಗ್ ಬಾಸ್ ಮನೆ ಒಳಗೆ ಕಳುಹಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಇವರ ಮೇಲೆ ಹತ್ತಕ್ಕೂ ಹೆಚ್ಚು ನಟಿಯರು ಲೈಂಗಿಕ ದೌರ್ಜನ್ಯದ ಆರೋಪ (Allegation) ಹೊರಿಸಿದ್ದಾರೆ. ಇಂತಹ ವ್ಯಕ್ತಿಯನ್ನು ಕೂಡ ಬಿಗ್ ಬಾಸ್ ಮನೆಯಿಂದ ಹೊರಗಿಡಬೇಕು ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ:‘ಗಂಧದ ಗುಡಿ’ ಪ್ರಿ ರಿಲೀಸ್ ಇವೆಂಟ್ : ಅಮಿತಾಭ್, ರಜನಿ ಸೇರಿ ಗಣ್ಯರಿಗೆ ಆಹ್ವಾನ

    ಬಾಲಿವುಡ್ ನಿರ್ದೇಶಕ ಸಾಜಿದ್ ಖಾನ್ ವಿರುದ್ಧ ಈಗಾಗಲೇ ಅನೇಕ ನಟಿಯರು ಲೈಂಗಿಕ ಆರೋಪ ಮಾಡಿದ್ದಾರೆ. ಮೀಟೂ ಅಭಿಯಾನದಲ್ಲಿ ಅತೀ ಹೆಚ್ಚು ಕೇಳಿ ಬಂದ ಹೆಸರು ಇವರದ್ದೆ. ಅಲ್ಲದೇ, ನಾನಾ ನಟಿಯರು ತಮಗಾದ ನೋವುಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ ಮತ್ತು ಕೆಲವರು ದೂರು ಕೂಡ ನೀಡಿದ್ದಾರೆ. ಇಂತಹ ವ್ಯಕ್ತಿಯನ್ನು ಬಿಗ್ ಬಾಸ್ ಮನೆ ಒಳಗೆ ಕಳುಹಿಸುವುದು ಸರಿಯಲ್ಲ. ಅವರನ್ನು ಮನೆಯಿಂದ ಆಚೆ ಕಳುಹಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಸ್ವಾತಿ ಮಲಿವಾಲ್ ಪತ್ರ ಬರೆದಿದ್ದಾರೆ.

    ಮಾಧ್ಯಮಗಳ ಜೊತೆಯೂ ಮಾತನಾಡಿರುವ ಮಹಿಳಾ ಆಯೋಗದೆ ಮುಖ್ಯಸ್ಥೆ ಸ್ವಾತಿ ಮಲಿವಾಲ್, ಹೌಸ್ ಫುಲ್ 4 ಸಿನಿಮಾ ಆಡಿಷನ್ ವೇಳೆ 17 ವರ್ಷದ ನಟಿಗೆ ಪೂರ್ಣ ಬಟ್ಟೆ ಬಿಚ್ಚಿದರೆ ಮಾತ್ರ ಅವಕಾಶ ಕೊಡುವುದಾಗಿ ಸಾಜಿಸ್ ಹೇಳಿದ್ದರಂತೆ. ಅಲ್ಲದೇ, ಹಮ್ ಶಕಲ್ ಸಿನಿಮಾದ ವೇಳೆಯೂ ಮತ್ತೋರ್ವ ನಟಿಗೆ ಇಂತಹದ್ದೇ ಬೇಡಿಕೆಯನ್ನು ಇಟ್ಟಿದ್ದರಂತೆ. ಈ ರೀತಿಯಾಗಿ ಹಲವು ನಟಿಯರು ಈಗಾಗಲೇ ಹೇಳಿಕೊಂಡಿದ್ದಾರೆ. ಅವರಿಗೆ ನ್ಯಾಯವೂ ಸಿಕ್ಕಿಲ್ಲ. ಇಂತಹ ವ್ಯಕ್ತಿಗಳನ್ನು ಬಿಗ್ ಬಾಸ್ ಮನೆಗೆ ಕಳುಹಿಸುವ ಮೂಲಕ ಯಾವ ಸಂದೇಶವನ್ನು ಸಾರುತ್ತಿದ್ದೀರಿ ಎಂದು ಚಾನೆಲ್ ನವರಿಗೂ ಅವರು ಪ್ರಶ್ನೆ ಮಾಡಿದ್ದಾರೆ.

    ಕೇಂದ್ರ ಸಚಿವರಿಗೆ ಸ್ವಾತಿ ಅವರು ಪತ್ರ ಬರೆಯುತ್ತಿದ್ದಂತೆಯೇ ಅವರಿಗೂ ಕೂಡ ಬೆದರಿಕೆ ಪತ್ರಗಳು ಬಂದಿವೆಯಂತೆ. ಸಾಜಿದ್ ಕುರಿತು ಮಾತನಾಡಿದ್ದಕ್ಕಾಗಿ ತಮಗೆ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾಗಿ ತಿಳಿಸಿದ್ದಾರೆ. ಈ ಕುರಿತು ಅವರು ದೆಹಲಿ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ. ಸಾಜಿದ್ ವಿರುದ್ಧದ ಹೋರಾಟದಲ್ಲಿ ಏನೇ ಕಷ್ಟ ಬಂದರೂ ಎದುರಿಸುವುದಾಗಿ ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಬಿಗ್ ಬಾಸ್’ ಮನೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಿ : ಕೇಂದ್ರ ಸಚಿವರಿಗೆ ಪತ್ರ ಬರೆದ ಮಹಿಳಾ ಆಯೋಗ

    ‘ಬಿಗ್ ಬಾಸ್’ ಮನೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಿ : ಕೇಂದ್ರ ಸಚಿವರಿಗೆ ಪತ್ರ ಬರೆದ ಮಹಿಳಾ ಆಯೋಗ

    ಹಿಂದಿ ಬಿಗ್ ಬಾಸ್ (Bigg Boss) ಮನೆಯಲ್ಲಿ ನೆಮ್ಮದಿಯಾಗಿ ಆಟ ಆಡುತ್ತಿರುವ ಬಾಲಿವುಡ್ ನಿರ್ದೇಶಕ ಸಾಜಿದ್ ಖಾನ್ (Sajid Khan) ಅವರನ್ನು ಬಿಗ್ ಬಾಸ್ ಮನೆ ಒಳಗೆ ಕಳುಹಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಬಿಗ್ ಬಾಸ್ ಸೀಸನ್ 16  ಶುರುವಾಗಿದ್ದು, ಈ ಬಾರಿ ದೊಡ್ಮನೆ ಸೇರಿರುವವರ ಪಟ್ಟಿಯಲ್ಲಿ ಸಾಜಿದ್ ಖಾನ್ ಕೂಡ ಇದ್ದಾರೆ. ಇವರ ಮೇಲೆ ಹತ್ತಕ್ಕೂ ಹೆಚ್ಚು ನಟಿಯರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದಾರೆ. ಇಂತಹ ವ್ಯಕ್ತಿಯನ್ನು ಕೂಡ ಬಿಗ್ ಬಾಸ್ ಮನೆಯಿಂದ ಹೊರಗಿಡಬೇಕು ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ (Swati Maliwal) ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

    ಬಾಲಿವುಡ್ ನಿರ್ದೇಶಕ ಸಾಜಿದ್ ಖಾನ್ ವಿರುದ್ಧ ಈಗಾಗಲೇ ಅನೇಕ ನಟಿಯರು ಲೈಂಗಿಕ ಆರೋಪ (Sexual Assault) ಮಾಡಿದ್ದಾರೆ. ಮೀಟೂ ಅಭಿಯಾನದಲ್ಲಿ ಅತೀ ಹೆಚ್ಚು ಕೇಳಿ ಬಂದ ಹೆಸರು ಇವರದ್ದೆ. ಅಲ್ಲದೇ, ನಾನಾ ನಟಿಯರು ತಮಗಾದ ನೋವುಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ ಮತ್ತು ಕೆಲವರು ದೂರು ಕೂಡ ನೀಡಿದ್ದಾರೆ. ಇಂತಹ ವ್ಯಕ್ತಿಯನ್ನು ಬಿಗ್ ಬಾಸ್ ಮನೆ ಒಳಗೆ ಕಳುಹಿಸುವುದು ಸರಿಯಲ್ಲ. ಅವರನ್ನು ಮನೆಯಿಂದ ಆಚೆ ಕಳುಹಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) ಅವರಿಗೆ ಸ್ವಾತಿ ಮಲಿವಾಲ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

    ಮಾಧ್ಯಮಗಳ ಜೊತೆಯೂ ಮಾತನಾಡಿರುವ ಮಹಿಳಾ ಆಯೋಗದೆ ಮುಖ್ಯಸ್ಥೆ ಸ್ವಾತಿ ಮಲಿವಾಲ್, ಹೌಸ್ ಫುಲ್ 4 ಸಿನಿಮಾ ಆಡಿಷನ್ ವೇಳೆ 17 ವರ್ಷದ ನಟಿಗೆ ಪೂರ್ಣ ಬಟ್ಟೆ ಬಿಚ್ಚಿದರೆ ಮಾತ್ರ ಅವಕಾಶ ಕೊಡುವುದಾಗಿ ಸಾಜಿಸ್ ಹೇಳಿದ್ದರಂತೆ. ಅಲ್ಲದೇ, ಹಮ್ ಶಕಲ್ ಸಿನಿಮಾದ ವೇಳೆಯೂ ಮತ್ತೋರ್ವ ನಟಿಗೆ ಇಂತಹದ್ದೇ ಬೇಡಿಕೆಯನ್ನು ಇಟ್ಟಿದ್ದರಂತೆ. ಈ ರೀತಿಯಾಗಿ ಹಲವು ನಟಿಯರು ಈಗಾಗಲೇ ಹೇಳಿಕೊಂಡಿದ್ದಾರೆ. ಅವರಿಗೆ ನ್ಯಾಯವೂ ಸಿಕ್ಕಿಲ್ಲ. ಇಂತಹ ವ್ಯಕ್ತಿಗಳನ್ನು ಬಿಗ್ ಬಾಸ್ ಮನೆಗೆ ಕಳುಹಿಸುವ ಮೂಲಕ ಯಾವ ಸಂದೇಶವನ್ನು ಸಾರುತ್ತಿದ್ದೀರಿ ಎಂದು ಚಾನೆಲ್ ನವರಿಗೂ ಅವರು ಪ್ರಶ್ನೆ ಮಾಡಿದ್ದಾರೆ.

    ಕೇಂದ್ರ ಸಚಿವರಿಗೆ ಸ್ವಾತಿ ಅವರು ಪತ್ರ ಬರೆಯುತ್ತಿದ್ದಂತೆಯೇ ಅವರಿಗೂ ಕೂಡ ಬೆದರಿಕೆ ಪತ್ರಗಳು ಬಂದಿವೆಯಂತೆ. ಸಾಜಿದ್ ಕುರಿತು ಮಾತನಾಡಿದ್ದಕ್ಕಾಗಿ ತಮಗೆ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾಗಿ ತಿಳಿಸಿದ್ದಾರೆ. ಈ ಕುರಿತು ಅವರು ದೆಹಲಿ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ. ಸಾಜಿದ್ ವಿರುದ್ಧದ ಹೋರಾಟದಲ್ಲಿ ಏನೇ ಕಷ್ಟ ಬಂದರೂ ಎದುರಿಸುವುದಾಗಿ ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • TRS ನಾಯಕನಿಂದ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ

    TRS ನಾಯಕನಿಂದ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ

    ಹೈದರಾಬಾದ್: 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಮುನ್ಸಿಪಲ್ ಕೌನ್ಸಿಲ್‍ನ ಉಪಾಧ್ಯಕ್ಷ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕ ಅತ್ಯಾಚಾರವೆಸಗಿದ್ದಾರೆ.

    ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಸಾಜಿದ್ ಖಾನ್ ಎಂದು ಗುರುತಿಸಲಾಗಿದೆ. ಇದೀಗ ಆರೋಪಿ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೈಬರ್ ಮೋಸದ ಜಾಲದಕ್ಕೆ ಸಿಕ್ಕಿ 1.48 ಲಕ್ಷ ಕಳೆದುಕೊಂಡ ನಟಿ!

    ಫೆಬ್ರವರಿ 26 ರಂದು ಮಕ್ಕಳ ಕಲ್ಯಾಣ ಸಮಿತಿಗೆ ಅತ್ಯಾಚಾರ ಘಟನೆ ಕುರಿತಂತೆ ಮಾಹಿತಿ ದೊರೆತಿದ್ದು, ಬಳಿಕ ಪೊಲೀಸರಿಗೆ ವಿಚಾರ ತಿಳಿಸಿದರು. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಲಕಿಯಿಂದ ಹೇಳಿಕೆ ಪಡೆದರು. ಅಲ್ಲದೇ ಪ್ರಕರಣದಲ್ಲಿ ಭಾಗಿಯಾಗಿರುವ ಮಹಿಳೆ, ಕಾರು ಚಾಲಕ ಮತ್ತು ಸಾಜಿದ್ ಖಾನ್ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯ ಆರೋಪಿ ಸಾಜಿದ್ ಖಾನ್ ತಲೆ ಮರೆಸಿಕೊಂಡಿದ್ದು, ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ಮಹಿಳೆ ಬಾಲಕಿಯನ್ನು ಹೈದರಾಬಾದ್ ಕರೆದುಕೊಂಡು ಹೋಗಿದ್ದಳು. ಈ ವೇಳೆ ಮೂವರು ಆರೋಪಿಗಳು ಒಂದೇ ಹೋಟೆಲ್‍ನಲ್ಲಿ ತಂಗಿದ್ದರು. ಈ ನಡುವೆ ಸಾಜಿದ್ ಖಾನ್ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಆಹಾರ ಇಲ್ಲದೇ ಚಾಕೊಲೇಟ್ ತಿನ್ನುತ್ತ ದಿನ ಕಳೆಯುತ್ತಿದ್ದೇವೆ: ವಿದ್ಯಾರ್ಥಿಗಳ ಅಳಲು

    ತನ್ನ ಆರೋಗ್ಯ ಸ್ಥಿತಿಯ ಬಗ್ಗೆ ಬಾಲಕಿ ಪೋಷಕರಿಗೆ ತಿಳಿಸಿದ ಬಳಿಕ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ಬೆಳಕಿಗೆ ಬಂದಿದ್ದು, ನಂತರ ಈ ವಿಚಾರವಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

  • ನನ್ನ ಮುಂದೆ ಬೆತ್ತಲಾದ್ರೆ ಚಿತ್ರದಲ್ಲಿ ಅವಕಾಶ- 17ನೇ ವಯಸ್ಸಿನಲ್ಲಿ ನಡೆದಿದ್ದ ಘಟನೆ ಬಿಚ್ಚಿಟ್ಟ ಮಾಡೆಲ್

    ನನ್ನ ಮುಂದೆ ಬೆತ್ತಲಾದ್ರೆ ಚಿತ್ರದಲ್ಲಿ ಅವಕಾಶ- 17ನೇ ವಯಸ್ಸಿನಲ್ಲಿ ನಡೆದಿದ್ದ ಘಟನೆ ಬಿಚ್ಚಿಟ್ಟ ಮಾಡೆಲ್

    – ಅಸಭ್ಯವಾಗಿ ನನ್ನನ್ನು ಮುಟ್ಟಲು ಪ್ರಯತ್ನಿಸಿದ್ರು

    ಮುಂಬೈ: ಚಿತ್ರರಂಗದಲ್ಲಿ ಮೀಟೂ ಅಭಿಯಾನ ನಡೆಯುತ್ತಿದ್ದ ಸಂದರ್ಭದಲ್ಲಿ ಅನೇಕ ನಟಿಯರು ಚಿತ್ರರಂಗದಲ್ಲಿ ತಾವು ಅನುಭವಿಸಿದ್ದ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದರು. ಇದೀಗ ಬಾಲಿವುಡ್‍ನ ಖ್ಯಾತ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಮಾಡೆಲ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

    ಭಾರತೀಯ ಮಾಡೆಲ್ ಪೌಲಾ ತನಗೆ 17ನೇ ವಯಸ್ಸಿನಲ್ಲಿದ್ದಾಗಲೇ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ನಟಿ ಪೌಲಾ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಮೂಲಕ ಸಾಜಿದ್ ಖಾನ್ ನೀಡಿದ ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.

    “ಮೀಟೂ ಅಭಿಯಾನ ಶುರುವಾದ ಸಂದರ್ಭದಲ್ಲಿ ಸಾಜಿದ್ ಖಾನ್ ಮೇಲೆ ಅನೇಕರು ಮಾತನಾಡಿದ್ದರು. ಆದರೆ ನಾನು ಆಗ ಸಾಜಿದ್ ಖಾನ್ ವಿರುದ್ಧ ಮಾತನಾಡಲು ಧೈರ್ಯ ಮಾಡಲಿಲ್ಲ. ಯಾಕೆಂದರೆ ಚಿತ್ರರಂಗದಲ್ಲಿ ಗಾಡ್ ಫಾದರ್ ಇಲ್ಲದ ನಾನು ಕುಟುಂಬಕ್ಕಾಗಿ ಸಂಪಾದನೆ ಮಾಡುತ್ತಿದ್ದೆ. ಆದ್ದರಿಂದ ಮಾತನಾಡದೆ ಸುಮ್ಮನಿದ್ದೆ” ಎಂದು ಬರೆದುಕೊಂಡಿದ್ದಾರೆ.

    “ಈಗ ನನ್ನೊಂದಿಗೆ ನನ್ನ ಪೋಷಕರು ಇಲ್ಲ. ನನಗಾಗಿ ಸಂಪಾದಿಸುತ್ತಿದ್ದೇನೆ. ಆದ್ದರಿಂದ ಈಗ ನಾನು 17ನೇ ವಯಸ್ಸಿನಲ್ಲಿ ಸಾಜಿದ್ ಖಾನ್‍ನಿಂದ ಕಿರುಕುಳಕ್ಕೊಳಗಾಗಿದ್ದೇನೆ ಎಂದು ಹೇಳಲು ನನಗೆ ಧೈರ್ಯವಿದೆ ಎಂದರು. ಅಷ್ಟೇ ಅಲ್ಲದೇ, ಅವರು ನನ್ನೊಂದಿಗೆ ಅಸಭ್ಯವಾಗಿ ಮಾತನಾಡಿದರು. ನನ್ನನ್ನು ಮುಟ್ಟಲು ಪ್ರಯತ್ನಿಸಿದರು. ಅವರ ಮುಂಬರುವ ‘ಹೌಸ್‍ಫುಲ್’ ಸಿನಿಮಾದಲ್ಲಿ ಅವಕಾಶ ಬೇಕು ಎಂದರೆ ನನ್ನ ಮುಂದೆ ಬೆತ್ತಲಾಗುವಂತೆ ಹೇಳಿದರು” ಎಂದು ಹೌಸ್‍ಫುಲ್ ಚಿತ್ರದ ವೇಳೆ ನಡೆದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ.

    ಇದೇ ರೀತಿ ಎಷ್ಟು ಹುಡುಗಿಯರೊಂದಿಗೆ ಮಾಡಿದ್ದಾರೆಂದು ದೇವರಿಗೆ ತಿಳಿದಿದೆ. ನಾನು ಈಗ ಹೇಳುತ್ತಿರುವುದು ನನ್ನ ಮೇಲೆ ಕರುಣೆ ತೋರಲಿ ಅಂತಲ್ಲ. ನಾನು ಬಾಲ್ಯದಲ್ಲಿದ್ದಾಗ ಈ ಘಟನೆ ನನ್ನ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರಿದೆ. ಹೀಗಾಗಿ ಈ ಬಗ್ಗೆ ಮಾತನಾಡಲು ನಿರ್ಧರಿಸಿದ್ದೇನೆ. ಇವರು ಕನಸುಗಳನ್ನು ನುಚ್ಚುನೂರು ಮಾಡುತ್ತಾರೆ. ಹೀಗಾಗಿ ಇಂತಹವರನ್ನು ಜೈಲಿಗೆ ಕಳುಹಿಸಬೇಕು. ಆದರೆ ನಾನು ಸುಮ್ಮನಿರಲ್ಲ. ಇದರ ಬಗ್ಗೆ ಮಾತನಾಡದೆ ಇರುವುದು ತಪ್ಪು ಎಂದು ಮಾಡೆಲ್ ಪೌಲಾ ಸುದೀರ್ಘವಾಗಿ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

    2018ರಲ್ಲಿ ಸಾಜಿದ್ ಖಾನ್ ಮೇಲೆ ನಟಿ ರೇಚಲ್ ವೈಟ್, ಸಲೋನಿ ಚೋಪ್ರಾ ಮತ್ತು ಪತ್ರಕರ್ತೆ ಮೂವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ನಂತರ ‘ಹೌಸ್‍ಫುಲ್ 4’ ಸಿನಿಮಾ ನಿರ್ದೇಶನದಿಂದ ಸಾಜಿದ್ ಖಾನ್‍ನನ್ನು ದೂರ ಇಡಲಾಗಿತ್ತು. ಇದೀಗ ಮಾಡೆಲ್ ಕೂಡ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದಾರೆ.

    https://www.instagram.com/p/CE6l9OyD4SP/?utm_source=ig_embed

  • ಸೋದರ ಸಾಜಿದ್‍ಗಾಗಿ ಕೊನೆ ಹಾಡು ಹೇಳಿದ್ದ ವಾಜಿದ್

    ಸೋದರ ಸಾಜಿದ್‍ಗಾಗಿ ಕೊನೆ ಹಾಡು ಹೇಳಿದ್ದ ವಾಜಿದ್

    -ಆಸ್ಪತ್ರೆಯ ಬೆಡ್ ಮೇಲೆ ಕುಳಿತು ಹಾಡು

    ಮುಂಬೈ: ಬಾಲಿವುಡ್ ಸಂಗೀತ ನಿರ್ದೇಶಕ ವಾಜಿದ್ ಖಾನ್ ಇಂದು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ಸೋದರ ವಾಜಿದ್ ಗಾಗಿ ಆಸ್ಪತ್ರೆಯಲ್ಲಿ ಹಾಡು ಹೇಳಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಬಾಲಿವುಡ್ ಸಂಗೀತ ಸಂಯೋಜನೆಯ ಪ್ರಸಿದ್ಧ ಜೋಡಿಗಳಲ್ಲಿ ಸಾಜಿದ್-ವಾಜಿದ್ ಸಹ ಒಬ್ಬರು. 43 ವರ್ಷದ ವಾಜಿದ್ ಇಂದು ಸಾವನ್ನಪ್ಪಿದ್ದು, ಬಾಲಿವುಡ್ ಅಂಗಳದಲ್ಲಿ ಸೂತಕ ಛಾಯೆ ಮೂಡಿದೆ. ಅಮಿತಾಬ್ ಬಚ್ಚನ್, ಪ್ರಿಯಾಂಕಾ ಚೋಪ್ರಾ, ಅಕ್ಷಯ್ ಕುಮಾರ್, ವರುಣ್ ಧವನ್ ಸೇರಿದಂತೆ ಬಹುತೇಕರು ಸಂತಾಪ ಸೂಚಿಸಿದ್ದಾರೆ.

    https://www.instagram.com/p/CA4egx5Hmgk/

    ವೈರಲ್ ಆಗಿರೋ ವಿಡಿಯೋದಲ್ಲಿ, ನಾನು ಸಾಜಿದ್ ಆಗಿ ಸಲ್ಮಾನ್ ಖಾನ್ ಅಭಿನಯದ ದಬಂಗ್ ಚಿತ್ರದ ಶೀರ್ಷಿಕೆ ಹಾಡು ಹೇಳಲು ಇಷ್ಟಪಡುತ್ತೇನೆ ಎಂದು ಹಾಡಿದ್ದರು. ಸಾಜಿದ್-ವಾಜಿದ್ ಸಂಗೀತ ಇದ್ರೆ ಸಾಕು ಸಿನಿಮಾ ಹಿಟ್ ಅಗುತ್ತೆ ಅನ್ನೋ ಭರವಸೆಯನ್ನು ಸೋದರಿಬ್ಬರು ಮೂಡಿಸಿದ್ದರು. 1998ರಲ್ಲಿ ಸಲ್ಮಾನ್ ಖಾನ್ ಅಭಿನಯದ ‘ಪ್ಯಾರ್ ಕಿಯಾ ತೋ ಡರನಾ ಕ್ಯಾ’ ಚಿತ್ರಕ್ಕೆ ಸಂಗೀತ ನೀಡಿದ್ದರು. 1999ರಲ್ಲಿ ಸೋನು ನಿಗಮ್ ಅಲ್ಬಂ ‘ದಿವಾನ್’ಗೂ ಸಂಗೀತ ಸಂಯೋಜನೆ ಮಾಡಿದ್ದರು. ಅದೇ ವರ್ಷ ಸಾಜಿದ್-ವಾಜಿದ್ ಸಂಗೀತ ಸಂಯೋಜನೆ ಹೆಲೋ ಬ್ರದರ್ ಸಿನಿಮಾದ ಎಲ್ಲ ಹಾಡುಗಳು ಇಂದಿಗೂ ಎವರ್ ಗ್ರೀನ್.

    https://www.instagram.com/p/BYSWkghg89L/

    ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಈ ಬಗ್ಗೆ ಪ್ರತಿಕ್ರಿಯಿಸಿ, ವಾಜೀದ್ ಖಾನ್ ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಸಿ ಮಾಡಿದ ಬಳಿಕ ಕಿಡ್ನಿ ಸಮಸ್ಯೆ ಕಾಡುತ್ತಿತ್ತು. ಕೆಲ ದಿನಗಳ ಹಿಂದೆ ಕಿಡ್ನಿ ಸೋಂಕು ಕಾಣಿಸಿಕೊಂಡಿತ್ತು. ಕಳೆದ 4 ದಿನಗಳಿಂದ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿರಲಿಲ್ಲ. ದಿನದಿಂದ ದಿನಕ್ಕೆ ಸಮಸ್ಯೆ ಹೆಚ್ಚಾಗುತ್ತಾ ಹೋಗಿತ್ತು ಎಂದು ತಿಳಿಸಿದರು.

    https://www.instagram.com/p/CA4oOmSnEnj/