Tag: Salaga

  • ‘ಸಲಗ’ ಕ್ರೇಜ್ ಭಲೇ ಜೋರು- ಭಕ್ತಗಣಕ್ಕೆ ಶರಣೆಂದ ಬ್ಲ್ಯಾಕ್ ಕೋಬ್ರಾ

    ‘ಸಲಗ’ ಕ್ರೇಜ್ ಭಲೇ ಜೋರು- ಭಕ್ತಗಣಕ್ಕೆ ಶರಣೆಂದ ಬ್ಲ್ಯಾಕ್ ಕೋಬ್ರಾ

    ಬೆಂಗಳೂರು: ಗಾಂದೀನಗರದ ಗಲ್ಲಿ ಗಲ್ಲಿಗಳಲ್ಲಿ, ವಿಜಿ ಅಭಿಮಾನಿ ದೇವರುಗಳಲ್ಲೀಗ ಸಲಗ ಜಪ ಶುರುವಾಗಿದೆ. ಅದೆಷ್ಟರ ಮಟ್ಟಿಗೆ ಅಂದ್ರೆ ಕುಂತ್ರು, ನಿಂತ್ರು ಸಲಗ ಸಲಗ ಅಂತಿದ್ದಾರೆ. ಸೆಟ್ಟೇರಿದ ದಿನವೇ ಒಂದು ಬಝ್ ಕ್ರಿಯೇಟ್ ಮಾಡಿದ್ದ ಸಿನಿಮಾ ಈಗ ವಿಜಿ ಭಕ್ತಗಣದಲ್ಲಿ ಹೈವೋಲ್ಟೇಜ್ ಕ್ರೇಜ್ ಕ್ರಿಯೇಟ್ ಮಾಡಿದೆ. ಒಂಟಿ ಸಲಗದಂತೆ ಎಲ್ಲಾ ಅಡೆತಡೆಗಳನ್ನು ದಾಟಿ ಫೈನಲಿ ನಾಡ ಹಬ್ಬಕ್ಕೆ ಚಿತ್ರಮಂದಿರಕ್ಕೆ ಭರ್ಜರಿ ಎಂಟ್ರಿ ಕೊಡೋಕೆ ‘ಸಲಗ’ ಸಕಲ ಸಜ್ಜಾಗಿದೆ.

    ವಿಜಿ ನಿರ್ದೇಶನದ ಸಲಗ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇದೆ. ಅದಕ್ಕೆ ತಕ್ಕಂತೆ ಟೀಸರ್, ಹಾಡುಗಳು ಸೋಶಿಯಲ್ ಮೀಡಿಯಾಗಳಲ್ಲಿ ಧೂಳ್ ಎಬ್ಬಿಸಿ ಸಿನಿರಸಿಕರ ಕಿಕ್ಕೇರಿಸಿವೆ. ಒಂದು ಕಡೆ ವಿಜಿ ಚೊಚ್ಚಲ ನಿರ್ದೇಶನ, ಇನ್ನೊಂದು ಕಡೆ ಮಾಸ್ ಸಬ್ಜೆಕ್ಟ್, ಇದಕ್ಕೂ ಮೀರಿ ದುನಿಯಾ ವಿಜಿ ಡಾಲಿಯ ಹೈವೋಲ್ಟೇಜ್ ಕಾಂಬಿನೇಷನ್, ಇವೆಲ್ಲವೂ ಚಿತ್ರದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ದುಪ್ಟಟ್ಟು ಮಾಡಿದ್ದು, ಬ್ಲ್ಯಾಕ್ ಕೋಬ್ರಾ ಚಿತ್ರಮಂದಿರದಲ್ಲಿ ಗೆದ್ದು ಬೀಗೋದೊಂದೇ ಬಾಕಿ ಇದೆ.ಇದನ್ನೂ ಓದಿ: ನಟ ದುನಿಯಾ ವಿಜಯ್ ನೋಡಲು ಮುಗಿಬಿದ್ದ ಅಭಿಮಾನಿಗಳು!

    ‘ಸಲಗ’ ಮೇಲೆ ವಿಜಿ ಭಕ್ತಗಣ ತೋರುತ್ತಿರುವ ಪ್ರೀತಿ ಮತ್ತೊಂದು ದುನಿಯಾ ವಿಜಿ ಮುಂದೆ ಸೃಷ್ಟಿಯಾಗುವ ಮಟ್ಟಿಗಿದೆ. ಅಭಿಮಾನಿಗಳ ಪ್ರೀತಿ ಕಂಡು ಸ್ವತಃ ವಿಜಿಯೇ ಮೂಕವಿಸ್ಮಿತರಾಗಿದ್ದಾರೆ. ಸಾಮಾಜಿಕ ಜಾಲತಾಣದ ಅಂಗಳದಲ್ಲಂತೂ ಸಲಗ ಹವಾ ಜೋರಾಗಿದೆ. ಚಿತ್ರದ ಪ್ರತಿ ಅಪ್ಡೇಟ್‍ನ್ನೂ ಅಭಿಮಾನಿಗಳು ತೇರು ಹೊತ್ತು ಸಂಭ್ರಮಿಸುವ ರೀತಿ ಸಂಭ್ರಮಿಸುತ್ತಿದ್ದಾರೆ. ಇಷ್ಟಕ್ಕೆ ಈ ಅಭಿಮಾನ ಮುಗಿಯಲಿಲ್ಲ, ವಿಜಿ ಡೈ ಹಾರ್ಡ್ ಫ್ಯಾನ್ಸ್ ಅಂತೂ ಕೇಳೋದೇ ಬೇಡ, ಕೈ ಮೇಲೆ, ಎದೆ ಮೇಲೆ ಸಲಗ ಟ್ಯಾಟೂ ಹಾಕಿಸಿಕೊಂಡು ಆರಾಧಿಸುತ್ತಿದ್ದಾರೆ. ಕೆಲವರಂತೂ ಹೇರ್ ಸ್ಟೈಲ್ ನಲ್ಲೂ ಸಲಗ ಎಂದು ಡಿಸೈನ್ ಮಾಡಿಸಿಕೊಂಡಿದ್ದಾರೆ. ಈ ಪ್ರೀತಿ, ಅಭಿಮಾನ ಕಂಡು ಖುದ್ದು ವಿಜಿಯೇ ಶರಣು ಶರಣೆಂದಿದ್ದಾರೆ. ಈ ಕ್ರೇಜ್ ಕೇವಲ ಗಾಂದೀನಗರದ ಗಲ್ಲಿಗಳಲ್ಲಿ ಮಾತ್ರವಲ್ಲ, ಕರುನಾಡಿನ ಮನೆ ಮನದಲ್ಲೂ ಶುರುವಾಗಿದೆ ಅನ್ನೋದೇ ಬಲು ವಿಶೇಷ.

    ‘ಸಲಗ’ ಚಿತ್ರಮಂದಿರಕ್ಕೆ ಬರೋದನ್ನೇ ಕಾದು ಕುಳಿತಿರುವ ಭಕ್ತಗಣಕ್ಕೆ ಹೈವೋಲ್ಟೇಜ್ ಟ್ರೇಲರ್ ಸದ್ಯದಲ್ಲೇ ಉಡುಗೊರೆಯಾಗಿ ನೀಡಲಿದೆ ಚಿತ್ರತಂಡ. ರೌಡಿಸಂ ಕಥಾನಕ, ಚರಣ್ ರಾಜ್ ಸಂಗೀತ ನಿರ್ದೇಶನ, ಮಾಸ್ತಿ ಸಂಭಾಷಣೆ, ವಿಜಿ ಮಾಸ್ ಅವತಾರ, ಡಾಲಿಯ ಖಾಕಿ ಖದರ್ ಎಲ್ಲವೂ ಮೇಳೈಸಿರುವ ಸಲಗ ನಾಡಹಬ್ಬಕ್ಕೆ ಥಿಯೇಟರ್ ನಲ್ಲಿ ದರ್ಬಾರ್ ಶುರುಮಾಡಲಿದೆ. ಇದನ್ನೂ ಓದಿ: 10 ವರ್ಷದ ಹಿಂದಿನ ಫೋಟೋ ಹಂಚಿಕೊಂಡು ಪತಿಗೆ ಪ್ರೇರಣಾ ವಿಶ್

  • ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

    ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

    – ಸಲಗ, ಕೋಟಿಗೊಬ್ಬ3 ನಡುವೆ ಪೈಟ್

    ಬೆಂಗಳೂರು: ಚಂದನವನದಲ್ಲಿ ಈಗ ಸ್ಟಾರ್‌ವಾರ್‌ ಶುರುವಾಗಿದೆ. ಒಂದೇ ದಿನ ತೆರೆ ಮೇಲೆ ಬರಲು ಬಿಗ್ ಬಜೆಟ್ ಸಿನಿಮಾಗಳಾದ ಸಲಗ, ಕೋಟಿಗೊಬ್ಬ-3 ಬಿಡುಗಡೆ ಸಿದ್ಧವಾಗಿದೆ.

    ದಸಾರ ಹಬ್ಬದ ದಿನ ಸಲಗ ಸವಾರಿ ಆರಂಭವಾಗಲಿದೆ. ದುನಿಯ ವಿಜಿ ನಿರ್ದೇಶಿಸಿ ನಟಿಸಿರುವ ಸಲಗ ಆ.14ಕ್ಕೆ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಅದೇ ದಿನ ತೆರೆಗೆ ಬರೋದು ಪಕ್ಕಾ ಅಂತಿದೆ ಸುದೀಪ್ ನಟನೆಯ ಸೂರಪ್ಪ ಬಾಬು ನಿರ್ಮಾಣದ ಚಿತ್ರ ಕೋಟಿಗೊಬ್ಬ 3 ಸಿನಿಮಾ. ವಿಜಯ ದಶಮಿಯಂದು ವಿಜಯದ ಮಾಲೆ ಯಾರಿಗೆ ಹಾಕಲಿದ್ದಾರೆ ಸಿನಿ ಪ್ರೇಕ್ಷಕರು ಎಂಬುದನ್ನು ಕಾದುನೋಡಬೇಕಾಗಿದೆ.

    ಇದು  ಸ್ಟಾರ್‌ವಾರ್‌ ಅಲ್ಲ, ಇಬ್ಬರೂ ಒಟ್ಟಿಗೆ ಬರ್ತಿದ್ದೀವಿ ಅಷ್ಟೇ. ಎರಡೂ ಸಿನಿಮಾಗಳಿಗೂ ಕನ್ನಡಿಗರು ಆರ್ಶೀವಾದ ಮಾಡುತ್ತಾರೆ. ಎರಡೂ ಸಿನಿಮಾಗಳ ನಿರ್ಮಾಪಕರ ನಡುವೆ ಸಮಸ್ಯೆ ಇಲ್ಲ. ಒಟ್ಟಿಗೆ ರಿಲೀಸ್ ಆಗ್ತಿರುವುದರಿಂದ ಎಲ್ಲಾ ಕಡೆ ಕನ್ನಡ ಸಿನಿಮಾಗಳು ನೋಡಲು ಸಿಗುತ್ತದೆ. ಪರಭಾಷ ಸಿನಿಮಾಗಳ ಸಮಸ್ಯೆಗೆ ಅವಕಾಶ ಇರೋದಿಲ್ಲ ಎಂದು ಪಬ್ಲಿಕ್ ಟಿವಿಗೆ ಸಲಗ ನಿರ್ಮಾಪಕ ಕೆ ಪಿ ಶ್ರೀಕಾಂತ್ ಹೇಳಿದ್ದಾರೆ. ಇದನ್ನೂ ಓದಿ:  ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಉಪಾಧ್ಯಕ್ಷರಾದ ಕನ್ನಡತಿ

    ನಮಗೊಂದು ಒಳ್ಳೆಯ ದಿನ ಸಿಕ್ಕಿದೆ. ದಸರಾ ಹಬ್ಬ, ಚಾಮುಂಡೇಶ್ವರಿ ದಯೆ ಎಲ್ಲವೂ ಇದೆ ಎಂದು ಪಬ್ಲಿಕ್ ಟಿವಿಗೆ ನಟ ದುನಿಯಾ ವಿಜಯ್ ಹೇಳಿಕೆ ನೀಡಿದ್ದಾರೆ.

    ಅಕ್ಟೋಬರ್ 14ರಂದೇ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯಾಗಲಿದೆ. ಮಾತುಕತೆ ಆಡಿದ್ದು ನಿಜ, ಶ್ರೀಕಾಂತ್ ಅವರದ್ದು ತಪ್ಪಿಲ್ಲ. ಅಕ್ಟೋಬರ್ 1, 14, 29 ಅಂತ ಇತ್ತು. ಅಕ್ಟೋಬರ್ 14ರಂದು ಬಿಟ್ಟುಕೊಡಲು ರೆಡಿ ಇದ್ದೇನೆ ಎಂದು ಹೇಳಿದ್ದೇನೆ. ಅಕ್ಟೋಬರ್ 29ರಂದು ಡೇಟ್ ಸಿಗೋದಾದರೆ ಬಿಟ್ಟುಕೊಡಲು ಒಪ್ಪಿದೆ. ಆದರೆ ಅಕ್ಟೋಬರ್ 29ರಂದು ಜಯಣ್ಣ ಅವರು ಭಜರಂಗಿ-2 ಸಿನಿಮಾ ಬಿಡುಗಡೆ ಆಗುತ್ತಿದೆ ಎಂದು ಪಬ್ಲಿಕ್ ಟಿವಿಗೆ ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ.

  • ಸರ್ಕಾರದ ಕ್ರಮಕ್ಕೆ ‘ಸಲಗ’ ಚಿತ್ರತಂಡ ಅಸಮಾಧಾನ- ಚಿತ್ರ ಬಿಡುಗಡೆ ಮುಂದೂಡಿಕೆ

    ಸರ್ಕಾರದ ಕ್ರಮಕ್ಕೆ ‘ಸಲಗ’ ಚಿತ್ರತಂಡ ಅಸಮಾಧಾನ- ಚಿತ್ರ ಬಿಡುಗಡೆ ಮುಂದೂಡಿಕೆ

    – ಶೇ.100 ಆಸನದ ವ್ಯವಸ್ಥೆ ಜಾರಿಯಾದ ಮೇಲೆ ಸಲಗ ಬಿಡುಗಡೆ

    ಹುಬ್ಬಳ್ಳಿ: ಕೋವಿಡ್ 2ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿತ್ರ ಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಿತ್ತು. ಬಳಿಕ ಏ.6ರ ವರೆಗೆ ಮಾತ್ರ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಸಲಗ ಚಿತ್ರತಂಡ ಅಸಮಾಧಾನ ವ್ಯಕ್ತಪಡಿಸಿದ್ದು, ಶೇ.100ರಷ್ಟು ಭರ್ತಿಗೆ ಅವಕಾಶ ನೀಡಿದ ನಂತರ ನಂತರ ಸಲಗ ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ.

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಸಲಗ ಚಿತ್ರದ ನಾಯಕ ನಟ ದುನಿಯಾ ವಿಜಯ್, ಖಳನಟ ಡಾಲಿ ಧನಂಜಯ್, ನಿರ್ಮಾಪಕ ಕೆಪಿ ಶ್ರೀಕಾಂತ್ ಮಾತನಾಡಿದರು. ಸರ್ಕಾರದ ಈ ಆದೇಶ ಚಿತ್ರರಂಗಕ್ಕೆ ಮಾಡಿದ ಅನ್ಯಾಯವಾಗಿದೆ. ಸರ್ಕಾರದ ನಿರ್ಧಾರವನ್ನು ಒಪ್ಪಲಾಗದು, ಆದರೂ ಸ್ವಾಗತಿಸುತ್ತೇವೆ. ಚುನಾವಣೆಯ ಪ್ರಚಾರ, ರ್ಯಾಲಿಗೆ ಇಲ್ಲದ ನಿಯಮಗಳನ್ನು ಜಿಮ್ ಹಾಗೂ ಸಿನಿಮಾರಂಗದ ಮೇಲೆ ಹೇರುವುದು ಸರಿಯಲ್ಲ ಎಂದು ದುನಿಯಾ ವಿಜಯ್ ಆಕ್ರೋಶ ವ್ಯಕ್ತಪಡಿಸಿದರು.

    ಇತ್ತೀಚಿಗೆ ಬಿಡಿಗಡೆಯಾದ 2 ಸ್ಟಾರ್ ನಟರ ಚಿತ್ರಗಳು ಹಿಟ್ ಆಗಿವೆ. ಆ ವೇಳೆ ಚಿತ್ರ ವೀಕ್ಷಿಸಿದ ಯಾವ ಪೇಕ್ಷಕರಿಗೂ ಕೋವಿಡ್ ಬಂದ ಉದಾಹರಣೆಗಳಿಲ್ಲ. ಚಿತ್ರ ಮಂದಿರ ಹಾಗೂ ಜಿಮ್ ಗಳ ಮೇಲೆ ನಿರ್ಬಂಧ ಹೇರುವುದು ತರವಲ್ಲ ಎಂದು ನಟ ದುನಿಯಾ ವಿಜಯ ಕಿಡಿಕಾರಿದರು.

    ನಟ ಡಾಲಿ ಧನಂಜಯ ಸಹ ಸರ್ಕಾರ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಕೊರೊನಾಗೆ ವ್ಯಾಕ್ಸಿನ್ ಇದೆ, ಹಸಿವಿನಿಂದ ಸಾಯುವವರಿಗೆ ಔಷಧಿ ಇಲ್ಲ. ಸರ್ಕಾರ ಅವರಿಗೆ ಬೇಕಾದ ಹಾಗೆ ನಿಯಮಗಳ ಮಾಡುವುದನ್ನು ಬಿಡಬೇಕು, ಸಿನಿಮಾ ರಂಗಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಕಿಡಿಕಾರಿದರು.

    ಚಿತ್ರ ಮಂದಿರಗಳಲ್ಲಿ ಸಿನಿಮಾ ನೋಡಿ ಬಂದವರಿಗೆ ಕೊರೊನಾ ಬಂದ ಉದಾಹರಣೆಗಳಿಲ್ಲ. ಸರ್ಕಾರ ಚಿತ್ರಮಂದಿರಗಳ ಮೇಲೆ ನಿರ್ಬಂಧ ವಿಧಿಸುವುದರಿಂದ ಸಾವಿರಾರು ಬಡ ಕಾರ್ಮಿಕರು ಕಷ್ಟ ಅನುಭವಿಸಬೇಕಾಗುತ್ತದೆ. ಪ್ರೇಕ್ಷಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಚಿತ್ರ ವೀಕ್ಷಣೆ ಮಾಡಲಿದ್ದಾರೆ. ಸರ್ಕಾರ ನಿಯಮ ಹೇರಿ ಚಿತ್ರರಂಗವನ್ನು ಸಂಕಷ್ಟಕ್ಕೆ ತಳ್ಳಬಾರದೆಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

  • ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

    ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

    ಟ ದುನಿಯಾ ವಿಜಯ್ ‘ಸಲಗ’ ಚಿತ್ರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ನಟನೆ ಜೊತೆ ‘ಸಲಗ’ ಮೂಲಕ ಡೈರೆಕ್ಟರ್ ಕ್ಯಾಪ್ ಕೂಡ ತೊಟ್ಟಿದ್ದಾರೆ ಬ್ಲ್ಯಾಕ್ ಕೋಬ್ರಾ. ಸದ್ಯ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸ ಹಾಗೂ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇರುವ ದುನಿಯಾ ವಿಜಿ ತಮ್ಮ ಬ್ಯುಸಿ ಶೆಡ್ಯೂಲ್ ನಡುವೆಯೂ ಮಾಲೂರಿನ ತಮ್ಮ ಅಭಿಮಾನಿಗಳು ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಭಾಗಿಯಾಗಿದ್ದಾರೆ.

    ಮಾಲೂರಿನ ಹೋಂಡಾ ಕ್ರೀಡಾಂಗಣದಲ್ಲಿ ವಿಜಯ್ ಅಭಿಮಾನಿಗಳ ಸೇವಾ ಸಮಿತಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಸಲಗ’ ಚಿತ್ರತಂಡ ಕ್ರಿಕೆಟ್ ಪಂದ್ಯವನ್ನಾಡಿ ವಿಜಯ ಸಾಧಿಸಿದೆ. ದುನಿಯಾ ವಿಜಿ ಮಾಲೂರಿಗೆ ಬರುವ ವಿಚಾರ ತಿಳಿದ ವಿಜಯ್ ಅಭಿಮಾನಿಗಳು ಹೋಂಡಾ ಕ್ರೀಡಾಂಗಣಕ್ಕೆ ಜಮಾಯಿಸಿದ್ದರು. ಕೋಲಾರದ ಸುತ್ತಮುತ್ತಲಿನ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿ ನೆಚ್ಚಿನ ನಟ ದುನಿಯಾ ವಿಜಿಯನ್ನು ಕಣ್ತುಂಬಿಕೊಂಡಿದ್ದಾರೆ.

    ಅಭಿಮಾನಿಗಳ ಜೊತೆ ಸಮಯ ಕಳೆದ ದುನಿಯಾ ವಿಜಿ ನಂತರ ಮಾಲೂರಿನಲ್ಲಿರುವ ಡಾ.ರಾಜ್‍ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಪುತ್ಥಳಿಗೆ ಹೂವಿನ ಮಾಲೆ ಅರ್ಪಿಸಿ ಗೌರವ ಸಲ್ಲಿಸಿದ್ದಾರೆ. ದುನಿಯಾ ವಿಜಯ್ ಹಾಗೂ ಚಿತ್ರತಂಡದ ಜೊತೆ ಚಿತ್ರದ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಕೂಡ ಮಾಲೂರಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದರು.

    ದುನಿಯಾ ವಿಜಯ್ ನಿರ್ದೇಶನದ ‘ಸಲಗ’ ಸಿನಿಮಾ ಸ್ಯಾಂಡಲ್‍ವುಡ್ ಅಂಗಳದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಎಲ್ಲರೂ ಕಾತರದಿಂದ ಸಿನಿಮಾಗಾಗಿ ಎದುರು ನೋಡುತ್ತಿದ್ದಾರೆ. ಚಿತ್ರದಲ್ಲಿ ದುನಿಯಾ ವಿಜಿಗೆ ಜೋಡಿಯಾಗಿ ಸಂಜನಾ ಆನಂದ್ ಸ್ಕ್ರೀನ್ ಶೇರ್ ಮಾಡಿದ್ದಾರೆ. ಟಗರು ಖ್ಯಾತಿಯ ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೂಡಿಬಂದಿದ್ದು, ಚಿತ್ರದ ಟೈಟಲ್ ಟ್ರ್ಯಾಕ್ ಸೂಪರ್ ಹಿಟ್ ಆಗಿದೆ. ಶಿವಸೇನಾ ಛಾಯಾಗ್ರಹಣ ‘ಸಲಗ’ ಚಿತ್ರಕ್ಕಿದೆ. ಡಾಲಿ ಧನಂಜಯ್ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದು, ಅಚ್ಯುತ್ ಕುಮಾರ್, ರಂಗಾಯಣ ರಘು, ಯಶ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಸಲಗ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ದುನಿಯಾ ವಿಜಿ ಕರೆ

    ಸಲಗ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ದುನಿಯಾ ವಿಜಿ ಕರೆ

    – ನೆಚ್ಚಿನ ನಟನ ಕರೆಯಿಂದ ಅಭಿಮಾನಿಗೆ ಆನಂದಭಾಷ್ಪ

    ಬೆಂಗಳೂರು: ಸಲಗ ಟ್ಯಾಟೂ ಹಾಕಿಸಿಕೊಂಡ ತನ್ನ ಅಭಿಮಾನಿಯ ಜೊತೆ ನಟ ದುನಿಯಾ ವಿಜಯ್ ಅವರು ವೀಡಿಯೋ ಕಾಲ್ ಮಾಡಿ ಮಾತನಾಡಿಸಿದ್ದಾರೆ.

    ಉತ್ತರ ಕರ್ನಾಟಕ ಮೂಲದ ಹನುಮಂತ ಸದ್ಯ ಗೋವಾದ ಕಿರಾಣಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ ದುನಿಯಾ ವಿಜಿಯ ಅಪ್ಪಟ ಅಭಿಮಾನಿಯಾಗಿದ್ದಾನೆ. ವಿಜಯ್ ರಂತೆ ತಂದೆ-ತಾಯಿಯನ್ನ ಆರಾಧಿಸೋಧ್ಯೇಯವನ್ನ ಹೊಂದಿರೋ ಈ ಅಭಿಮಾನಿ, ನೆಚ್ಚಿನ ನಟನ ಸಿನಿಮಾ ಯಶಸ್ವಿಯಾಗಲೆಂದು ಸಲಗ ಟೈಟಲ್ ನ ತನ್ನ ಕೈ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ.

    ಈ ವಿಷಯ ತಿಳಿದು ಅಭಿಮಾನಿಗೆ ವಿಜಯ್ ವೀಡಿಯೋ ಕಾಲ್ ಮಾಡಿದ್ದಾರೆ. ತನ್ನ ಆರಾಧ್ಯ ದೈವನ ಕರೆಯಿಂದ ಖುಷಿಗೊಂಡ ಹನುಮಂತ ಆನಂದಭಾಷ್ಪ ಸುರಿಸಿದ್ದಾನೆ.

    ಇತ್ತ ಟ್ಯಾಟೂ ಕಂಡು ಭಾವುಕರಾದ ವಿಜಯ್, ಹನುಂತನಿಗೆ ವೀಡಿಯೋ ಕರೆ ಮಾಡಿ, ತಮ್ಮ ಅಭಿಮಾನಕ್ಕೆ ಮೂಕನಾಗಿದ್ದೇನೆ ಅಂತ ಕೃತಜ್ಞತೆ ಸಲ್ಲಿದ್ದಾರೆ. ಜೊತೆಗೆ ತಂದೆ-ತಾಯಿಯನ್ನ ಚೆನ್ನಾಗಿ ನೋಡಿಕೊಳ್ಳಿ, ನಿಮಗೆ ಒಳ್ಳೆಯದಾಗುತ್ತೆ ಅಂತ ಹನುಮಂತನಿಗೆ ಶುಭ ಹಾರೈಸಿದ್ದಾರೆ.

  • ಮತ್ತೆ ಥೀಯೇಟರ್‌ಗೆ ಬಂದ ಟಗರನ್ನು ನೋಡಲು ಸಿದ್ಧವಾದ ಸಲಗ

    ಮತ್ತೆ ಥೀಯೇಟರ್‌ಗೆ ಬಂದ ಟಗರನ್ನು ನೋಡಲು ಸಿದ್ಧವಾದ ಸಲಗ

    ಬೆಂಗಳೂರು: ಮತ್ತೆ ಮರು ಬಿಡುಗಡೆಯಾಗಿರುವ ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿನಯದ ಟಗರು ಸಿನಿಮಾ ನೋಡಲು ಭಾನುವಾರ ಸಲಗ ಚಿತ್ರದ ನಾಯಕ ದುನಿಯ ವಿಜಯ್ ಅವರು ಚಿತ್ರಮಂದಿರಕ್ಕೆ ಹೋಗುತ್ತಿದ್ದಾರೆ.

    ಕೊರೊನಾ ಕಾರಣದಿಂದ ಪ್ರದರ್ಶನಗಳನ್ನು ನಿಲ್ಲಿಸಿದ್ದ ಚಿತ್ರಮಂದಿರಗಳು ಸರ್ಕಾರದ ಆದೇಶದಂತೆ ಮತ್ತೆ ಚಿತ್ರಪ್ರದರ್ಶನ ಶುರು ಮಾಡಿವೆ. ಈ ಹಿಂದೆ ಹಿಟ್ ಆಗಿದ್ದ ಕೆಲ ಸಿನಿಮಾಗಳು ಮತ್ತೆ ಮರು ಬಿಡುಗಡೆಯಾಗುತ್ತೀವೆ. ಅಂತೆಯೇ 2018ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿದ್ದ ಸೂರಿ ನಿರ್ದೇಶನದ ಟಗರು ಚಿತ್ರ ಹಿಂದಿನಿಂದ ಮತ್ತೆ ತೆರೆಮೇಲೆ ಬರುತ್ತಿದೆ.

    https://www.instagram.com/p/CGr3lotgb6T/

    ಈ ವಿಚಾರವಾಗಿ  ಪೋಸ್ಟ್ ಹಾಕಿರುವ ದುನಿಯಾ ವಿಜಯ್ ಅವರು, ಕಳೆದ ಆರೇಳು ತಿಂಗಳಿನಿಂದ ಕೊರೊನಾ, ಐಸೋಲೇಶನ್, ಕ್ವಾರಂಟೈನ್, ಸೀಲ್‍ಡೌನ್ ಇದೇ ರೀತಿಯ ಪದಗಳನ್ನು ಕೇಳುತ್ತಿದ್ದ ನಮಗೆ ಈಗ ಮಾರ್ನಿಂಗ್ ಶೋ, ಮ್ಯಾಟ್ನಿ, ಲೇಟ್ ನೈಟ್ ಶೋ ಎಂಬ ಪದಗಳನ್ನು ಕೇಳುವ ಸಮಯ ಬಂದಿದೆ. ಕೊರೊನಾಗೆ ವ್ಯಾಕ್ಸಿನ್ ಇನ್ನೂ ಬಂದಿಲ್ಲ. ಆದರೆ ಜೀವನವೂ ನಡೆಯಬೇಕಿರುವುದರಿಂದ ಎಲ್ಲ ಉದ್ಯಮಗಳಂತೆ, ಕಳೆದೊಂದು ವಾರದಿಂದ ಸರ್ಕಾರದ ನಿಯಮಗಳನ್ನು ಪಾಲಿಸುತ್ತಲೇ ನಮ್ಮ ಕನಸಿನ ಮನೆಗಳಾದ ಚಿತ್ರಮಂದಿರಗಳು ಪ್ರದರ್ಶನ ಆರಂಭಿಸಿವೆ ಎಂದಿದ್ದಾರೆ.

    ಜೊತೆಗೆ ಭಯ ಆತಂಕ ಎಲ್ಲದರ ನಡುವೆಯೂ ಒಂದಷ್ಟು ಸಿನಿಮಾ ಪ್ರೇಮಿಗಳು ಥೀಯೇಟರ್‍ಗೆ ಬಂದು ಸಿನಿಮಾ ನೋಡಿದ್ದಾರೆ. ಅವರೆಲ್ಲರಿಗೂ ನನ್ನ ಮನಃಪೂರ್ವಕ ವಂದನೆಗಳು. ನನ್ನ `ಸಲಗ’ ಸಿನಿಮಾದ ನಿರ್ಮಾಪಕರಾದ ಕೆಪಿ ಶ್ರೀಕಾಂತ್ ನಿರ್ಮಾಣದ ಗೆಳೆಯ ಸೂರಿ ನಿರ್ದೇಶನದ ಚಿತ್ರರಂಗದ ನಾಯಕ, ನನ್ನ ಪಾಲಿಗೆ ಅಣ್ಣನ ಸಮಾನರಾದ ಶಿವರಾಜ್‍ಕುಮಾರ್ ಗೆಳೆಯ ಡಾಲಿ ಧನಂಜಯ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ `ಟಗರು’ ಇಂದಿನಿಂದ ಮರು ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

    ಚಿತ್ರ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯನ್ನು ದೋಚಲಿ ಎಂದು ಹಾರೈಸುತ್ತಾ ಭಾನುವಾರ ಅಂದರೆ ಅಕ್ಟೋಬರ್ 25ರ ಮಧ್ಯಾಹ್ನ 1.15ರ ಪ್ರದರ್ಶನಕ್ಕೆ ಅಭಿಮಾನಿಗಳ ಜತೆ ಸಿನಿಮಾ ನೋಡಲು ಮೈಸೂರು ರಸ್ತೆಯಲ್ಲಿರುವ ಸಿರ್ಸಿ ಸರ್ಕಲ್ ಬಳಿಯ ಗೋಪಾಲನ್ ಸಿನಿಮಾಸ್‍ಗೆ ಬರುತ್ತಿದ್ದೇನೆ. ಸಾಮಾಜಿಕ ಅಂತರ ಕಾಯ್ದುಕೊಂಡು ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ದುಕೊಂಡು ಸಿನಿಮಾ ನೋಡಲು ಆರಂಭಿಸೋಣ. ಚಿತ್ರಮಂದಿರದಲ್ಲಿ ಸಿನಿಮಾ ನೋಡುವ ಖುಷಿ ಮತ್ತು ಸಂತೋಷವನ್ನು ಅನುಭವಿಸೋಣ ಎಂದು ಹೇಳಿದ್ದಾರೆ.

  • ಸಲಗ ದೊಡ್ಡ ಬಜೆಟ್ ಸಿನಿಮಾ, ಅರ್ಧ ಪ್ರೇಕ್ಷಕರಿಗಾಗಿ ಬಿಡುಗಡೆ ಮಾಡಲ್ಲ: ನಿರ್ಮಾಪಕ

    ಸಲಗ ದೊಡ್ಡ ಬಜೆಟ್ ಸಿನಿಮಾ, ಅರ್ಧ ಪ್ರೇಕ್ಷಕರಿಗಾಗಿ ಬಿಡುಗಡೆ ಮಾಡಲ್ಲ: ನಿರ್ಮಾಪಕ

    ಮೈಸೂರು: ನಮ್ಮದು ದೊಡ್ಡ ಬಜೆಟ್ ಸಿನಿಮಾವಾಗಿದ್ದು, ಅರ್ಧ ಪ್ರೇಕ್ಷಕರಿಗೆ ಚಿತ್ರ ನೋಡಲು ಅವಕಾಶ ನೀಡಿದ್ರೆ ನಷ್ಟವಾಗುತ್ತೆ. ಹೀಗಾಗಿ ಸದ್ಯ ಚಿತ್ರ ಬಿಡುಗಡೆ ಮಾಡಲ್ಲ ಎಂದು ‘ಸಲಗ’ ಚಿತ್ರದ ನಿರ್ಮಾಪಕ ಕೆ.ಪಿ ಶ್ರೀಕಾಂತ್ ಹೇಳಿದ್ದಾರೆ.

    ಚಿತ್ರಮಂದಿರ ತೆರೆಯಲು ಸರ್ಕಾರದಿಂದ ಅನುಮತಿ ಹಿನ್ನೆಲೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅರ್ಧ ಪ್ರೇಕ್ಷಕರರಿಗಾಗಿ ಸಲಗ ಚಿತ್ರ ಬಿಡುಗಡೆ ಮಾಡಲ್ಲ. ಚಿತ್ರಮಂದಿರ ತೆರೆಯಲು ಅವಕಾಶ ನೀಡಿದ್ದಾರೆ ಸರಿ. ಆದರೆ ಅರ್ಧ ಪ್ರೇಕ್ಷಕರಿಗೆ ಅವಕಾಶ ನೀಡಿರೋದಕ್ಕೆ ನಮಗೆ ಅಸಮಾಧಾನ ಇದೆ. ನಮ್ಮ ಸಿನಿಮಾ ದೊಡ್ಡ ಬಜೆಟ್ ಸಿನಿಮಾ ಆಗಿದೆ. ಇದಕ್ಕೆ ಅರ್ಧ ಪ್ರೇಕ್ಷಕರಿಗೆ ಚಿತ್ರ ನೋಡಲು ಅವಕಾಶ ನೀಡಿದ್ರೆ ನಷ್ಟವಾಗುತ್ತೆ. ಈ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್ ಆದ ಮೇಲೆಯೇ ಸಲಗ ಚಿತ್ರ ತೆರೆಗೆ ಬರಲಿದೆ ಎಂದು ಹೇಳಿದರು.

    ಆಕ್ಟಿವ್ ಪ್ರೋಡ್ಯೂಸರ್ ಟೀಂನಿಂದ ಸೋಮವಾರ ಸಭೆ ಕರೆದಿದ್ದೇವೆ. ಆ ಟೀಂನಲ್ಲಿ ರಾಬರ್ಟ್, ಕೋಟಿಗೊಬ್ಬ, ಕೆಜಿಎಫ್ ಹಾಗೂ ಯುವರತ್ನ ಮೊದಲಾದ ಚಿತ್ರಗಳ ನಿರ್ಮಾಪಕರಿದ್ದಾರೆ. ಎಲ್ಲರು ಒಟ್ಟಾಗಿ ಕುಳಿತು ನಿರ್ಧಾರ ಮಾಡ್ತೀವಿ. ಯಾವ ಚಿತ್ರ ಬಿಡುಗಡೆ ಮಾಡಬೇಕು ಅನ್ನೋ ಬಗ್ಗೆಯೂ ನಿರ್ಧಾರ ಮಾಡ್ತೀವಿ. ಆದರೆ ದೊಡ್ಡ ಬಜೆಟ್‍ನ ಸಿನಿಮಾಗಳಿಗೆ ಅರ್ಧ ಪ್ರೇಕ್ಷಕರು ಸಾಕಗೋದಿಲ್ಲ. ನಮಗೆ ಪೂರ್ತಿ ಅನುಮತಿ ಸಿಕ್ಕರಷ್ಟೇ ನಾವು ಚಿತ್ರ ಬಿಡುಗಡೆ ಮಾಡಲು ಆಗೋದು. ಆನ್‍ಲೈನ್ ಫ್ಲಾಟ್‍ಫಾರ್ಮ್(ಓಟಿಟಿ) ವೇದಿಕೆಗಳು ದೊಡ್ಡ ಬಜೆಟ್ ಸಿನಿಮಾಗಳಿಗೆ ಸರಿ ಹೊಂದುವುದಿಲ್ಲ ಎಂದು ತಿಳಿಸಿದರು.

    ಕೇಂದ್ರ ಸರ್ಕಾರ ಅನ್‍ಲಾಕ್ 5ರ ಮಾರ್ಗಸೂಚಿಯನ್ನು ಬುಧವಾರ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ. ಹಾಗೇ ಸರ್ಕಾರ ಮೈಕ್ರೋ ಲೆವಲ್ ಕಂಟೈನ್‍ಮೆಂಟ್ ಝೋನ್ ಮಾಡಲು ಜಿಲ್ಲಾಡಳಿತಗಳಿಗೆ ಅವಕಾಶ ನೀಡಿದೆ.

    ಈ ಲಾಕ್‍ಡೌನ್ 2020 ಅಕ್ಟೋಬರ್ 31ರವರೆಗೆ ಮುಂದುವರಿಯಲಿದೆ. ರಾಜ್ಯ/ಕೇಂದ್ರ ಸರ್ಕಾರ ಯಾವುದೇ ಲೋಕಲ್ ಲಾಕ್‍ಡೌನ್ ಮಾಡುತ್ತಿಲ್ಲ. ಜಲ್ಲಾಡಳಿತಗಳು ಕಂಟೈನ್‍ಮೆಂಟ್ ಪ್ರದೇಶಗಳಲ್ಲಿ ಮೈಕ್ರೋ ಲೆವಲ್ ಝೋನ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕಂಟೈನ್‍ಮೆಂಟ್ ಝೋನ್ ಗಳಲ್ಲಿ ಅವಶ್ಯಕ ಸೇವೆಗಳನ್ನು ಹೊರತುಪಡಿಸಿದ ಇನ್ನುಳಿದ ಎಲ್ಲ ಚಟುವಟಿಕೆಗಳ ಮೇಲೆ ನಿರ್ಬಂಧವಿದೆ. ಅಂತರಾಜ್ಯ ಮತ್ತು ಅಂತರ್ ಜಿಲ್ಲೆ ಪ್ರಯಾಣದ ಮೇಲೆ ಯಾವುದೇ ನಿಬಂಧನೆಗಳಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

  • ನನ್ನ ಗಮನಕ್ಕೆ ಬಾರದೇ ಎಡವಟ್ಟಾಗಿದೆ ಕ್ಷಮಿಸಿ: ವಿಜಯ್

    ನನ್ನ ಗಮನಕ್ಕೆ ಬಾರದೇ ಎಡವಟ್ಟಾಗಿದೆ ಕ್ಷಮಿಸಿ: ವಿಜಯ್

    ಬೆಂಗಳೂರು: ನಟ ದುನಿಯಾ ವಿಜಯ್ ತಮ್ಮ ಹುಟ್ಟುಹಬ್ಬದ ಸಂಭ್ರಮದ ವೇಳೆ ಕತ್ತಿಯಲ್ಲಿ ಕೇಕ್ ಕಟ್ ಮಾಡುವ ಮೂಲಕ ಹೊಸ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದರು. ಇದೀಗ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ, ತಮ್ಮ ತಪ್ಪಿನ ಬಗ್ಗೆ ನಟ ವಿಜಯ್ ಒಪ್ಪಿಕೊಂಡಿದ್ದು, ಕ್ಷಮೆ ಕೇಳಿದ್ದಾರೆ.

    ಈ ಬಗ್ಗೆ ಮಾತನಾಡಿದ ದುನಿಯಾ ವಿಜಯ್, ಗುಂಪಿನಲ್ಲಿ ಸಾಕಷ್ಟು ಅಭಿಮಾನಿಗಳು ಬಂದಿದ್ದರು. ಈ ವೇಳೆ ನನ್ನ ಕೈಗೆ ಯಾರು ತಲ್ವಾರ್ ಕೊಟ್ರೋ ಗೊತ್ತಾಗಲಿಲ್ಲ. ಈ ವೇಳೆ ನನ್ನ ಗಮನಕ್ಕೆ ಬಾರದೇ ಎಡವಟ್ಟಾಗಿದೆ ಎಂದು ಕ್ಷಮೆ ಕೇಳಿದರು. ಇದನ್ನೂ ಓದಿ: ದುನಿಯಾ ವಿಜಿ 46ನೇ ಬರ್ತ್ ಡೇಯಲ್ಲಿ ಅವಾಂತರ- ತಲ್ವಾರ್‌ನಲ್ಲಿ ಕೇಕ್ ಕಟ್ ಮಾಡಿದ ನಟ

    ಭಾನುವಾರ ರಾತ್ರಿ ಕೇಕ್ ಕಟ್ ಮಾಡಿರುವ ವಿಡಿಯೋವನ್ನು ಗಿರಿನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 5 ಇಂಚಿಗೂ ಉದ್ದದ ಕತ್ತಿ ಇದ್ದದ್ದು ಸಾಬೀತಾದರೆ ನಟ ದುನಿಯಾ ವಿಜಯ್ ಮೇಲೆ, ಆರ್ಮ್ಸ್ ಆ್ಯಕ್ಟ್ ಅಡಿ ಪೊಲೀಸರು ಕೇಸ್ ದಾಖಲಿಸಿಕೊಳ್ಳುವ ಸಾಧ್ಯತೆಯಿದೆ.

    ಇಂದು ದುನಿಯಾ ವಿಜಯ್ ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಕತ್ತಿಯಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸೆಲಬ್ರೇಟ್ ಮಾಡಿಕೊಂಡರು. ಈ ವೇಳೆ ತಮ್ಮ ‘ಸಲಗ’ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡಲು ರಾಜ್ಯದ ಹಲವೆಡೆಯಿಂದ ಅಭಿಮಾನಿಗಳು ಬಂದಿದ್ದರು.

     

  • ಸ್ನೇಹದಲ್ಲಿ ಬದುಕೋದು ನನಗಿಷ್ಟ, ಇದು ಸಲಗದ ಬರ್ತ್ ಡೇ: ದುನಿಯಾ ವಿಜಿ

    ಸ್ನೇಹದಲ್ಲಿ ಬದುಕೋದು ನನಗಿಷ್ಟ, ಇದು ಸಲಗದ ಬರ್ತ್ ಡೇ: ದುನಿಯಾ ವಿಜಿ

    ಬೆಂಗಳೂರು: ಸ್ನೇಹದಲ್ಲಿ ಬದುಕೋದು ನನಗೆ ಇಷ್ಟ, ಇದು ಸಲಗದ ಹುಟ್ಟುಹಬ್ಬ ಎಂದು ನಟ ದುನಿಯಾ ವಿಜಯ್ ತಮ್ಮ ಹುಟ್ಟುಹಬ್ಬದ ಸಂಭ್ರಮದ ವೇಳೆ ಹೇಳಿದರು.

    ಇಂದು ದುನಿಯಾ ವಿಜಯ್ ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಕತ್ತಿಯಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸೆಲಬ್ರೇಟ್ ಮಾಡಿಕೊಂಡರು. ಈ ವೇಳೆ ತಮ್ಮ ‘ಸಲಗ’ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡಲು ರಾಜ್ಯದ ಹಲವಡೆಯಿಂದ ಅಭಿಮಾನಿಗಳು ಬಂದಿದ್ದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದುನಿಯಾ ವಿಜಯ್, ತುಂಬಾ ಖುಷಿಯಾಗುತ್ತಿದೆ. ಇದು ನನ್ನ ಬರ್ತ್ ಡೇ ಅನ್ನೋದಕ್ಕಿಂತ ಸಲಗ ಚಿತ್ರ ತಂಡದ ಹುಟ್ಟುಹಬ್ಬ. ಸ್ನೇಹದಲ್ಲಿ ಬದುಕುವುದು ನನಗೆ ಇಷ್ಟ. ಇದು ಸಲಗದ ಹುಟ್ಟುಹಬ್ಬ. ಚಿತ್ರದ ನಿರ್ದೇಶಕನಾದ ಮೇಲೆ ಮೊದಲ ಹುಟ್ಟುಹಬ್ಬ ಇದು. ಹೀಗಾಗಿ ಸಲಗದ ಹುಟ್ಟುಹಬ್ಬವಿದು ಎಂದರು.

    ಫೆಬ್ರವರಿ 14ಕ್ಕೆ ಮತ್ತೊಂದು ಸಾಂಗ್ ಟ್ರೈಲರ್ ಬಿಡುತ್ತೇವೆ. ನಮ್ಮ ಚಿತ್ರ ತಂಡವೇ ನನಗೆ ಬಲ ತಂದು ಕೊಟ್ಟಿದೆ. ಆ್ಯಕ್ಟಿಂಗ್, ಡೈರಕ್ಷನ್ ನಲ್ಲಿ ಎಂಜಾಯ್ ಮಾಡುತ್ತೇನೆ. ಹೀಗಾಗಿ ಈ ಬರ್ತ್ ಡೇ ತುಂಬಾ ಖುಷಿಯಾಗುತ್ತಿದೆ ಎಂದು ಸಂತಸದಿಂದ ಹೇಳಿದರು.

    ಈ ಬಾರಿ ತಲ್ವಾರ್ ನಲ್ಲಿ ಕೇಕ್ ಕತ್ತರಿಸೋ ಮೂಲಕ ದುನಿಯಾ ವಿಜಿ ಬರ್ತ್ ಡೇಯನ್ನ ವಿಶೇಷವಾಗಿ ಆಚರಿಸಿಕೊಂಡಿದ್ದು, ಈ ಮೂಲಕ ತಮ್ಮ ಬರ್ತ್ ಡೇ ಸೆಲಬ್ರೇಷನ್ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ. ಯಾವುದೇ ಆಯುಧಗಳನ್ನು ಸಾರ್ವಜನಿಕವಾಗಿ ಬಳಸುವಂತಿಲ್ಲ, ಪ್ರದರ್ಶಿಸುವಂತಿಲ್ಲ. ಇದು ಆರ್ಮ್ಸ್ ಆ್ಯಕ್ಟ್ ಅಡಿ ಅಪರಾಧವಾಗುತ್ತದೆ. ಆದರೆ ಹುಟ್ಟುಹಬ್ಬದ ಸಂಭ್ರಮದ ವೇಳೆ ಈ ಎಡವಟ್ಟು ನಡೆದಿದ್ದು, ಹೊಸ ವಿವಾದವನ್ನು ತನ್ನ ಮೈಮೇಲೆ ಎಳೆದುಕೊಂಡಿದ್ದಾರೆ.

  • ಘೀಳಿಡಲು ಸಜ್ಜಾದ ಸಲಗ ಗೆಲ್ಲುವ ಸೂಚನೆ!

    ಘೀಳಿಡಲು ಸಜ್ಜಾದ ಸಲಗ ಗೆಲ್ಲುವ ಸೂಚನೆ!

    ಬೆಂಗಳೂರು: ದುನಿಯಾ ವಿಜಯ್ ಅಭಿನಯಿಸಿ ನಿರ್ದೇಶನವನ್ನೂ ಮಾಡುತ್ತಿರೋ ಚಿತ್ರ ಸಲಗ. ಬಂಡಿಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯೋ ಮೂಲಕ ಈ ಸಿನಿಮಾಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಸಲಗ ಎಂಬುದೇ ಪಕ್ಕಾ ಮಾಸ್ ಟೈಟಲ್. ದುನಿಯಾ ವಿಜಯ್ ಮೊದಲ ಹೆಜ್ಜೆಯಲ್ಲಿ ನಿರ್ದೇಶಕರಾಗಿ ಈ ಚಿತ್ರವನ್ನ ಹೇಗೆ ಸಂಭಾಳಿಸಲಿದ್ದಾರೆ, ಇದರ ಕಥೆ ಎಂಥಾದ್ದೆಂಬುದೂ ಸೇರಿದಂತೆ ಪ್ರೇಕ್ಷಕರಲ್ಲಿರೋ ಕುತೂಹಲ ಒಂದೆರಡಲ್ಲ. ಸಲಗ ಪ್ರೇಕ್ಷಕರ ನಡುವೆ ಈ ಪಾಟಿ ಘೀಳಿಟ್ಟು ಸದ್ದು ಮಾಡುತ್ತಿರೋದಕ್ಕೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರೋದು ಕೆ.ಪಿ ಶ್ರೀಕಾಂತ್ ಅನ್ನೋದೂ ಕೂಡಾ ಕಾರಣ!

    ಕೆಪಿ ಶ್ರೀಕಾಂತ್ ಹಿಟ್ ಸಿನಿಮಾ ನಿರ್ಮಾಪಕರೆಂದೇ ಖ್ಯಾತರಾಗಿರುವವರು. ಸಿನಿಮಾವನ್ನು ವ್ಯವಹಾರದಾಚೆಗೆ ಪ್ರೀತಿಸುವ ಅವರು ಕಥೆಗೆ ಎಲ್ಲ ಕೋನದಿಂದಲೂ ಕಸುವಿದೆ ಅಂತ ಗೊತ್ತಾಗದೆ ಯಾವ ಚಿತ್ರವನ್ನೂ ನಿರ್ಮಾಣ ಮಾಡಲು ಮುಂದಾಗುವವರಲ್ಲ. ಹೆಚ್ಚೂಕಮ್ಮಿ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಚಿತ್ರರಂಗದ ಭಾಗವಾಗಿರುವ ಶ್ರೀಕಾಂತ್ ಬತ್ತಳಿಕೆಯಲ್ಲಿ ಈ ಮಾತಿಗೆ ಪೂರಕವಾದ ವಿಚಾರಗಳೇ ಇವೆ. ಇಂಥಾ ಶ್ರೀಕಾಂತ್ ಮತ್ತು ದುನಿಯಾ ವಿಜಯ್ ಸಲಗದ ಮೂಲಕ ಭಾರೀ ಯಶಸ್ಸೊಂದನ್ನು ತಮ್ಮದಾಗಿಸಿಕೊಳ್ಳಲಿದ್ದಾರೆಂಬ ಸೂಚನೆಗಳೇ ಎಲ್ಲ ದಿಕ್ಕಿನಿಂದಲೂ ಕಾಣಿಸುತ್ತಿವೆ.

    ಸಲಗ ಆರಂಭದಲ್ಲಿಯೇ ಎಂಥಾ ಸೆನ್ಸೇಷನ್ ಕ್ರಿಯೇಟ್ ಮಾಡಿದೆ ಅನ್ನೋದಕ್ಕೆ ಚಿತ್ರರಂಗದ ಗಣ್ಯರ ಪ್ರತಿಕ್ರಿಯೆಗಳಿಗಿಂತಲೂ ಬೇರೆ ಉದಾಹರಣೆ ಬೇಕಿಲ್ಲ. ಯುವ ನಿರ್ದೇಶಕ ಸಂತೋಷ್ ಆನಂದ್‍ರಾಮ್ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿರೋ ವಿಜಯ್ ಸೇರಿದಂತೆ ಇಡೀ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ತರುಣ್ ಸುಧೀರ್ ಕೂಡಾ ತಮ್ಮ ಬಹುಕಾಲದ ಗೆಳೆಯನ ಈ ಸಾಹಸಕ್ಕೆ ಶುಭ ಕೋರಿದ್ದಾರೆ. ಕಾರ್ತಿಕ್ ಗೌಡ, ರಿಯಲ್ ಸ್ಟಾರ್ ಉಪೇಂದ್ರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಸಲಗಕ್ಕೆ ಶುಭ ಕೋರಿದ್ದಾರೆ.

    ಇದು ಸಲಗ ಚಿತ್ರದ ಬಗ್ಗೆ ತಾನೇ ತಾನಾಗಿ ಹುಟ್ಟಿಕೊಂಡಿರೋ ಪಾಸಿಟಿವ್ ವಾತಾವರಣ. ದುನಿಯಾ ವಿಜಯ್ ಅವರೇನು ಏಕಾಏಕಿ ನಿರ್ದೇಶಕರಾಗಿ ಅವತರಿಸಿಲ್ಲ. ನಿರ್ದೇಶನಕ್ಕೆ ಬೇಕಾಗುವಂಥಾ ಎಲ್ಲ ಪಟ್ಟುಗಳನ್ನೂ ಕರಗತ ಮಾಡಿಕೊಂಡು ಎಲ್ಲದರಲ್ಲಿಯೂ ಪಕ್ಕಾ ಅನ್ನಿಸಿದ ನಂತರವಷ್ಟೇ ಅಖಾಡಕ್ಕಿಳಿದಿದ್ದಾರೆ. ವಿಜಯ್ ಅವರ ಇಂಥಾ ಶ್ರದ್ಧೆಯ ಯಾನಕ್ಕೆ ನಿರ್ಮಾಪಕ ಕೆ ಪಿ ಶ್ರೀಕಾಂತ್ ಕೂಡಾ ಸಾಥ್ ನೀಡಿದ್ದಾರೆ. ಇವರಿಬ್ಬರ ಕಾಂಬಿನೇಷನ್ನಿನಲ್ಲಿ ಕನ್ನಡ ಚಿತ್ರರಂಗದಲ್ಲೊಂದು ಮೈಲಿಗಲ್ಲೆನ್ನಬಹುದಾದ ಕಮಾಲ್ ನಡೆಯೋ ಲಕ್ಷಣಗಳೇ ಎಲ್ಲೆಡೆ ದಟ್ಟೈಸಿದೆ.