Tag: salary

  • ವಿದ್ಯಾರ್ಥಿಗೆ 1.44 ಕೋಟಿ ರೂ. ಸಂಬಳದ ಗೂಗಲ್ ಜಾಬ್ ಸುತ್ತ ಅನುಮಾನದ ಹುತ್ತ!

    ವಿದ್ಯಾರ್ಥಿಗೆ 1.44 ಕೋಟಿ ರೂ. ಸಂಬಳದ ಗೂಗಲ್ ಜಾಬ್ ಸುತ್ತ ಅನುಮಾನದ ಹುತ್ತ!

    ಚಂಡೀಘಡ್: ವಿಶ್ವದ ದೊಡ್ಡ ಐಟಿ ಕಂಪನಿ ಗೂಗಲ್ ಹರ್ಯಾಣದ 16 ವರ್ಷದ ಬಾಲಕನಿಗೆ ವಾರ್ಷಿಕ 1.44 ಕೋಟಿ ರೂ.ಗೆ ಸಂಬಳದಂತೆ ಉದ್ಯೋಗ ನೀಡಿದೆ ಎಂದು ಪ್ರಕಟವಾಗುತ್ತಿರುವ ಸುದ್ದಿಯ ಸುತ್ತ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

    ಹರ್ಷಿತ್ ಶರ್ಮಾ ಎಂಬಾತನಿಗೆ ಉದ್ಯೋಗ ದೊರೆತಿದೆ ಎಂದು ಹೇಳಲಾಗುತ್ತಿದ್ದರೂ ಇದೂವರೆಗೂ ಗೂಗಲ್ ಸಂಸ್ಥೆಯಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ಈಗ ಚಂಡೀಘಡ್ ಶಿಕ್ಷಣ ಇಲಾಖೆ ಉದ್ಯೋಗ ಸಿಕ್ಕಿದೆಯೋ ಇಲ್ಲವೋ ಎನ್ನುವುದರ ಬಗ್ಗೆ ತನಿಖೆ ಆರಂಭಿಸಿದೆ.

    ಏನಿದು ಉದ್ಯೋಗ ಸುದ್ದಿ?
    ಕುರುಕ್ಷೇತ್ರದ ಮಾತನ ಪ್ರದೇಶದ 16 ವರ್ಷದ ಬಾಲಕನಿಗೆ ಗೂಗಲ್ ಉದ್ಯೋಗ ನೀಡಲು ಮುಂದಾಗಿದ್ದು, ವಾರ್ಷಿಕ 1.44 ಕೋಟಿ ರೂ. ಸಂಭಾವನೆಯನ್ನು ನಿಗದಿ ಮಾಡಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.

    ಹರ್ಷಿತ್ ಚಂಡಿಗಢನ ಸರ್ಕಾರಿ ಮಾಡೆಲ್ ಸೀನಿಯರ್ ಸೆಕೆಂಡರಿ ಸ್ಕೂಲ್ (ಜಿಎಂಎಸ್‍ಎಸ್‍ಎಸ್) ನಲ್ಲಿ ಇದೇ ವರ್ಷ 12ನೇ ತರಗತಿಯನ್ನು ಪೂರ್ಣಗೊಳಿಸಿದ್ದಾನೆ. ಹರ್ಷಿತ್ ಎರಡು ಮೊಬೈಲ್ ಫೋನ್‍ಗಳನ್ನು ಬಳಸುತ್ತಿದ್ದು, ಎರಡು ನಂಬರ್ ಸ್ವಿಚ್ ಆಫ್ ಆಗಿವೆ. ಫೇಸ್‍ಬುಕ್ ನಲ್ಲಿ ಮಾತ್ರ ಹರ್ಷಿತ್ `ಗೂಗಲ್‍ನಲ್ಲಿ ಕೆಲಸ ಮಾಡುತ್ತಿದ್ದು, ಕ್ಯಾಲಿಫೋರ್ನಿಯಾದಲ್ಲಿ ವಾಸ’ ಎಂದು ಬರೆದುಕೊಂಡಿದ್ದಾನೆ.

    ಹರ್ಷಿತ್ ತನಗೆ ಗೂಗಲ್ ಸಂಸ್ಥೆಯಲ್ಲಿ ಉದ್ಯೋಗ ಸಿಕ್ಕಿರುವ ಬಗ್ಗೆ ನಮಗೆ ಮಾಹಿತಿ ನೀಡಿದ್ದಾನೆ. ಸದ್ಯ ಹರ್ಷಿತ್ ಪ್ರಯಾಣ ಮಾಡುತ್ತಿರುವದರಿಂದ ನಮಗೆ ಸಂಸ್ಥೆಯ ಆಫರ್ ಲೆಟರ್ ಕಳುಹಿಸಿಲ್ಲ ಎಂದು ಹರ್ಷಿತ್ ಕಾಲೇಜಿನ ಪ್ರಾಂಶುಪಾಲರಾದ ಇಂದ್ರಾ ಬೆನ್ವಾಲ್ ತಿಳಿಸಿದ್ದಾರೆ.

    ಗೂಗಲ್ ಸಂಸ್ಥೆ ನಡೆಸಿದ್ದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಹರ್ಷಿತ್ ಗ್ರಾಫಿಕ್ ಡಿಸೈನರ್ ಆಗಿ ನೇಮಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆರಂಭದಲ್ಲಿ ಒಂದು ವರ್ಷಗಳ ಕಾಲ ಹರ್ಷಿತ್ ತರಬೇತಿ ಪಡೆಯಲಿದ್ದು, ಈ ವೇಳೆ ತಿಂಗಳಿಗೆ 4 ಲಕ್ಷ ರೂ. ವಿದ್ಯಾರ್ಥಿ ವೇತನವನ್ನು ಪಡೆಯಲಿದ್ದಾನೆ. ಒಂದು ವರ್ಷದ ಬಳಿಕ ತಿಂಗಳಿಗೆ 12 ಲಕ್ಷ ರೂ. ಸಂಬಳ ಪಡೆಯಲಿದ್ದಾನೆ ಎಂದು ಜಿಎಂಎಸ್‍ಎಸ್‍ಎಸ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

    ಹರ್ಷಿತ್ ಹೇಳಿದ್ದೇನು?
    ನಾನು ಆನ್ ಲೈನ್‍ನಲ್ಲಿ ಉದ್ಯೋಗ ಹುಡುಕುತ್ತಿದ್ದೆ, ಮೇ ತಿಂಗಳಲ್ಲಿ ನಾನು ಗೂಗಲ್‍ನಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ರಿಂದ ಕಂಪನಿಯು ಆನ್‍ಲೈನ್ ನಲ್ಲಿ ನನ್ನನ್ನು ಸಂದರ್ಶನ ಮಾಡಿತ್ತು. ನಾನು ಕಳೆದ 10 ವರ್ಷಗಳಿಂದ ಗ್ರಾಫಿಕ್ ಡಿಸೈನಿಂಗ್ ನಲ್ಲಿ ಆಸಕ್ತಿಯನ್ನು ಹೊಂದಿದ್ದೇನೆ. ನಾನು ಪೋಸ್ಟರ್ ಡಿಸೈನಿಂಗ್ ವಿಭಾಗದಲ್ಲಿ ಆಯ್ಕೆಯಾಗಿದ್ದೇನೆ ಎಂದು ಹರ್ಷಿತ್ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿದ್ದಾನೆ.

    ಹರ್ಷಿತ್ ತಂದೆ-ತಾಯಿ ಶಿಕ್ಷಕರಾಗಿದ್ದಾರೆ. ಸದ್ಯ ಹರ್ಷಿತ್ ಸೋದರ ದೇರ್ ಬಾಸಿಯ ಆತನ ಸಂಬಂಧಿಯ ಮನೆಯಲ್ಲಿ ವಾಸವಾಗಿದ್ದಾನೆ.

    ಗೂಗಲ್ ಹೇಳಿದ್ದೇನು?
    ಮಾಧ್ಯಮಗಳು ಈ ವಿಚಾರಕ್ಕೆ ಸಂಬಂಧಿಸಿದಂತೆ ಗೂಗಲ್ ವಕ್ತಾರರನ್ನು ಸಂಪರ್ಕಿಸಿದಾಗ ಅವರು, ಸದ್ಯ ಹರ್ಷಿತ್ ನೇಮಕವಾದ ಬಗ್ಗೆ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

     

    https://twitter.com/Timesolizer/status/892634927207993346

  • ಬರ ಇದ್ರೂ ಡಬಲ್ ಆಯ್ತು ತಮಿಳುನಾಡು ಶಾಸಕರ ಸಂಬಳ

    ಬರ ಇದ್ರೂ ಡಬಲ್ ಆಯ್ತು ತಮಿಳುನಾಡು ಶಾಸಕರ ಸಂಬಳ

    ಚೆನ್ನೈ: ತಮಿಳುನಾಡಿನಲ್ಲಿ ಬರವಿದ್ದರೂ ಅಲ್ಲಿನ ಸರ್ಕಾರ ಶಾಸಕರಿಗೆ ಮಾತ್ರ ಭರಪೂರ ವೇತನವನ್ನು ಪ್ರಕಟಿಸಿದೆ. ಶಾಸಕರ ವೇತನವನ್ನು 1,05,000 ರೂಪಾಯಿಗೆ ಏರಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಪ್ರಕಟಿಸಿದ್ದಾರೆ.

    ಶಾಸಕರ ಮಾಸಿಕ ಸಂಬಳವನ್ನು 55 ಸಾವಿರ ರೂ. ನಿಂದ 1.05 ಲಕ್ಷ ರೂ. ಏರಿಸಲಾಗುವುದು ಎಂದು ಅವರು ಸದನಲ್ಲಿ ಪ್ರಕಟಿಸಿದರು.

    ಅಷ್ಟೇ ಅಲ್ಲದೇ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಗೆ ನೀಡಲಾಗುತ್ತಿದ್ದ ಅನುದಾನವನ್ನು 2 ಕೋಟಿ ರೂ. ನಿಂದ 2.5 ಕೋಟಿ ರೂ. ಏರಿಸಲಾಗಿದೆ. ಪರಿಷ್ಕೃತ ವೇತನವು ಜುಲೈ 1ರಿಂದಲೇ ಜಾರಿಯಾಗಲಿದೆ

    ತಮಿಳುನಾಡು ಸರ್ಕಾರ ಈ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಹಲವು ರಾಜ್ಯಗಳು ಶಾಸಕರ ಸಂಬಳವನ್ನು ಏರಿಸುವ ಸಾಧ್ಯತೆಯಿದೆ.

    ಕರ್ನಾಟಕದಲ್ಲಿ ಶಾಸಕರಿಗೆ ಸಂಬಳ ಎಷ್ಟಿದೆ?
    ರಾಜ್ಯಸರ್ಕಾರ 2015ರ ಮಾರ್ಚ್ ನಲ್ಲಿ ಶಾಸಕರ ಸಂಬಳವನ್ನು ಏರಿಕೆ ಮಾಡಿತ್ತು. ವೇತನ 25 ಸಾವಿರ ರೂ., ಆಪ್ತ ಸಹಾಯಕರ ವೇತನ 10 ಸಾವಿರ ರೂ., ಅಂಚೆ ವೆಚ್ಚ 5 ಸಾವಿರ ರೂ., ದೂರವಾಣಿ ವೆಚ್ಚ 20 ಸಾವಿರ ರೂ., ಕ್ಷೇತ್ರ ಭತ್ಯೆ 40 ಸಾವಿರ ರೂ., ಕ್ಷೇತ್ರ ಪ್ರಯಾಣ ಭತ್ಯೆ 45 ಸಾವಿರ ರೂ., ಒಟ್ಟು ಮೊತ್ತ1.40 ಲಕ್ಷ ರೂ. ಸಿಗುತ್ತದೆ.

    ಇದನ್ನೂ ಓದಿ: ನಮ್ಮ ಸಂಸದರಿಗೆ ಈಗ ಎಷ್ಟು ಸಂಬಳ? ಭತ್ಯೆ ಎಷ್ಟು ಸಿಗುತ್ತೆ?

    ಇದನ್ನೂ ಓದಿ: ಭಾರತೀಯ ಮೂಲದ ಸಿಇಒ ಸುಂದರ್ ಪಿಚೈಗೆ ಗೂಗಲ್ 2016ರಲ್ಲಿ ನೀಡಿದ ಸಂಬಳ ಎಷ್ಟು ಗೊತ್ತೆ?

  • ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

    ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

    ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ.

    ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ ವಾರ್ಷಿಕವಾಗಿ ಸಂಬಳವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ.

    ಅನಿಲ್ ಕುಂಬ್ಳೆ ಮೇ ತಿಂಗಳಿನಲ್ಲಿ ಬಿಸಿಸಿಐ ಸಭೆಯಲ್ಲಿ ಎಷ್ಟು ಬೇಡಿಕೆ ಇಟ್ಟಿದ್ದರೋ ಅಷ್ಟು ಸಂಬಳವನ್ನು ರವಿಶಾಸ್ತ್ರಿ ಅವರು ಪಡೆಯಲಿದ್ದಾರೆ. ಆದರೆ ಈ ಸಂಬಳ 7.5 ಕೋಟಿ ರೂ. ಜಾಸ್ತಿ ಇರಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ರವಿಶಾಸ್ತ್ರಿ ಈ ಹಿಂದೆ ಮಾರ್ಗದರ್ಶಕರಾಗಿದ್ದಾಗಲೂ ಅವರಿಗೆ ಸಂಬಳ 7.5 ಕೋಟಿ ರೂ. ಒಳಗಡೆ ಇತ್ತು. ಭಾರತ ಎ ತಂಡ ಮತ್ತು 19 ವರ್ಷದ ಒಳಗಿನ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರಿಗೆ ಮೊದಲ ವರ್ಷ 4.5 ಕೋಟಿ ರೂ. ಸಂಭಾವನೆ ನೀಡಿದ್ದರೆ ಎರಡನೇ ವರ್ಷ 4.5 ಕೋಟಿ ರೂ. ಸಂಭಾವನೆ ನೀಡಲಾಗಿತ್ತು. ಈಗ ವಿದೇಶದಲ್ಲಿ ನಡೆಯುವ ಪಂದ್ಯಗಳಿಗೆ ದ್ರಾವಿಡ್ ಅವರನ್ನು ಬ್ಯಾಟಿಂಗ್ ಸಲಹೆಗಾರನ್ನಾಗಿ ನೇಮಿಸಲಾಗಿದೆ.

    ಬೌಲಿಂಗ್ ಕೋಚ್ ಆಗಿ ನೇಮಕವಾಗಿರುವ ಜಹೀರ್ ಖಾನ್ ಅವರಿಗೆ ಎಷ್ಟು ಸಂಭಾವನೆ ಎನ್ನುವುದು ನಿಗದಿಯಾಗಿಲ್ಲ. ಅವರು ಎಷ್ಟು ದಿನ ತಂಡದ ಜೊತೆ ಇರುತ್ತಾರೆ ಆ ಅವಧಿಗೆ ಸಂಬಳ ನೀಡಲು ಬಿಸಿಸಿಐ ಮುಂದಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ವರ್ಷ ಜಹೀರ್ ಖಾನ್ ಅವರು 100 ದಿನಕ್ಕೆ ವಾರ್ಷಿಕವಾಗಿ 4 ಕೋಟಿ ರೂ. ಸಂಭಾವನೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯನ್ನು ಬಿಸಿಸಿಐ ತಿರಸ್ಕರಿಸಿತ್ತು.

    ಬ್ಯಾಟಿಂಗ್ ಕೋಚ್, ಆಟಗಾರರಿಗೆ ಸಂಬಳ ಎಷ್ಟು?
    ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರು ಅವರಿಗೆ ಪ್ರತಿ ತಿಂಗಳು 15 ಲಕ್ಷ ರೂ. ಸಂಬಳವನ್ನು ಬಿಸಿಸಿಐ ನಿಗದಿ ಮಾಡಿದೆ. ಎರಡು ವರ್ಷಗಳ ಕಾಲ ಹಿರಿಯರ ತಂಡದ ಜೊತೆ ಇದ್ದ ಇವರು ಸಂಬಳವನ್ನು ಹೆಚ್ಚಳ ಮಾಡುವಂತೆ ಈ ಹಿಂದೆಯೇ ಮನವಿ ಸಲ್ಲಿಸಿದ್ದರು. ಮಾರ್ಚ್ ನಲ್ಲಿ ಇವರ ಮನವಿ ಪುರಸ್ಕೃತವಾಗಿದ್ದು ಶೇ.50 ರಷ್ಟು ಸಂಬಳ ಏರಿಕೆಯಾಗಿತ್ತು.

    ಈ ಹಿಂದೆ ಇದ್ದ ಬಿಸಿಸಿಐ ಆಡಳಿತ ಮಂಡಳಿ ಶೇ.100 ರಷ್ಟು ಸಂಬಳ ಏರಿಕೆಯ ಪ್ರಸ್ತಾಪನ್ನು ಒಪ್ಪಿತ್ತು. ಆದರೆ ಕಳೆದ ತಿಂಗಳು ಶೇ.25ರಷ್ಟು ಸಂಬಳ ಏರಿಸಲು ಬಿಸಿಸಿಐ ನಿರ್ಧರಿಸಿತ್ತು. ಬಿಸಿಸಿಐ ಈ ನಿರ್ಧಾರಕ್ಕೆ ಸಿಬ್ಬಂದಿಯಿಂದ ವಿರೋಧ ವ್ಯಕ್ತವಾಗಿತ್ತು. ಈಗ ಕೋಚ್ ಅನಿಲ್ ಕುಂಬ್ಳೆ ಸುಪ್ರೀಂ ನೇಮಿಸಿದ್ದ ಆಡಳಿತ ಸಮಿತಿಯ ಜೊತೆ ಸಭೆ ನಡೆಸಿ ಶೇ.50ರಷ್ಟು ಸಂಬಳವನ್ನು ಏರಿಸಿದ್ದರು.

    ಮಾರ್ಚ್ ತಿಂಗಳಿನಲ್ಲಿ ಆಟಗಾರರ ಸಂಭಾವನೆ ಮತ್ತು ಪಂದ್ಯದ ಶುಲ್ಕವನ್ನು ಆಡಳಿತ ಮಂಡಳಿ ದುಪ್ಟಟ್ಟು ಮಾಡಿತ್ತು. 2016ರ ಅಕ್ಟೋಬರ್ 1ರಿಂದ ಪರಿಷ್ಕೃತ ಸಂಭಾವನೆ ಮತ್ತು ಶುಲ್ಕ ಜಾರಿಗೆ ಬರಲಿದೆ.

    ಎಷ್ಟಿತ್ತು? ಈಗ ಎಷ್ಟು ಆಗಿದೆ?
    `ಎ’ ದರ್ಜೆಯಲ್ಲಿರುವ ಆಟಗಾರರು ಈ ಮೊದಲು ಕೋಟಿ ರೂ. ಪಡೆಯುತ್ತಿದ್ದರೆ ಈಗ ಆ ಮೊತ್ತವು 2 ಕೋಟಿ ರೂ.ಗೆ ಏರಿಕೆಯಾಗಿದೆ. ಬಿ ದರ್ಜೆ ಮತ್ತು ಸಿ ದರ್ಜೆಗಳ ಆಟಗಾರರು ಕ್ರಮವಾಗಿ 50 ಲಕ್ಷ ರೂ. ಮತ್ತು 25 ಲಕ್ಷ ರೂ. ಪಡೆಯುತ್ತಿದ್ದರು. ಅವರು ಇನ್ನು ಮುಂದೆ ಕ್ರಮವಾಗಿ 1 ಕೋಟಿ ರೂ. ಮತ್ತು 50 ಲಕ್ಷ ರೂ. ಹಣವನ್ನು ಪಡೆಯಲಿದ್ದಾರೆ.

    ಟೆಸ್ಟ್ ಪಂದ್ಯದಲ್ಲಿ ಆಡುವ ಆಟಗಾರರು ಶುಲ್ಕವನ್ನು 7.50 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಿಸಲಾಗಿದ್ದರೆ, ಏಕದಿನ ಮತ್ತು ಟ್ವೆಂಟಿ 20 ಪಂದ್ಯಗಳಲ್ಲಿ ಆಡುವವರ ಶುಲ್ಕವನ್ನು ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

    ಎ ದರ್ಜೆ:
    ವಿರಾಟ್ ಕೊಹ್ಲಿ, ಮಹೇಂದ್ರಸಿಂಗ್ ಧೋನಿ, ಆರ್. ಆಶ್ವಿನ್, ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ರವೀಂದ್ರ ಜಡೇಜ, ಮುರಳಿ ವಿಜಯ್.

    ಬಿ ದರ್ಜೆ:
    ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ವೃದ್ಧಿಮಾನ್ ಸಹಾ, ಜಸ್‍ಪ್ರೀತ್ ಬೂಮ್ರಾ, ಯುವರಾಜ್ ಸಿಂಗ್.

    ಸಿ ದರ್ಜೆ:
    ಶಿಖರ್ ಧವನ್, ಅಂಬಟಿ ರಾಯುಡು, ಅಮಿತ್ ಮಿಶ್ರಾ, ಕೇದಾರ್ ಜಾಧವ್, ಯಜುವೇಂದ್ರ ಚಾಹಲ್, ಪಾರ್ಥಿವ್ ಪಟೇಲ್, ಜಯಂತ್ ಯಾದವ್, ಮನೀಷ್ ಪಾಂಡೆ, ಅಕ್ಷರ್ ಪಟೇಲ್, ಕರುಣ್ ನಾಯರ್, ಹಾರ್ದಿಕ್ ಪಾಂಡ್ಯ, ಆಶಿಶ್ ನೆಹ್ರಾ, ಮನದೀಪ್ ಸಿಂಗ್, ಧವಳ್ ಕುಲಕರ್ಣಿ, ಶಾರ್ದೂಲ್ ಠಾಕೂರ್, ರಿಷಭ್ ಪಂತ್.

     

  • ಉತ್ತರಪ್ರದೇಶದಲ್ಲಿ ಶಿಕ್ಷಕರಿಗೆ ಆಧಾರ್ ಇಲ್ಲದೇ ಇದ್ರೆ ಸಂಬಳ ಜಮೆ ಆಗಲ್ಲ!

    ಉತ್ತರಪ್ರದೇಶದಲ್ಲಿ ಶಿಕ್ಷಕರಿಗೆ ಆಧಾರ್ ಇಲ್ಲದೇ ಇದ್ರೆ ಸಂಬಳ ಜಮೆ ಆಗಲ್ಲ!

    ಲಕ್ನೋ: ಉತ್ತರಪ್ರದೇಶದದಲ್ಲಿ ಸರ್ಕಾರಿ ಶಿಕ್ಷಕರು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದದೇ ಇದ್ದರೆ ಮುಂದೆ ಅವರ ಖಾತೆಗೆ ಸಂಬಳ ಜಮೆ ಮಾಡದೇ ಇರಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ.

    ಆಧಾರ್ ಕಡ್ಡಾಯಗೊಳಿಸುವ ಸಂಬಂಧ ಪ್ರಾಥಮಿಕ ಶಿಕ್ಷಣ ಸಚಿವ ಅನುಪಮ್ ಜೈಸ್ವಾಲ್ ಭಾನುವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

    ಪಾರದರ್ಶಕತೆಯನ್ನು ತರಲು ಶಿಕ್ಷಕರು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಿಸಬೇಕು. ಅಷ್ಟೇ ಅಲ್ಲದೇ ಗುರುತಿನ ಪತ್ರವಾಗಿಯೂ ಆಧಾರ್ ಬಳಸಲು ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಪ್ರಸ್ತುತ ಪ್ರಾಥಮಿಕ ಶಾಲೆಯ ಮತ್ತು ಪ್ರೌಢ ಶಾಲೆಯ ಸೇರಿ ಒಟ್ಟು 4.95 ಲಕ್ಷ ಜನ ಶಿಕ್ಷಕರಿದ್ದಾರೆ. ಈಗಾಗಲೇ ಬಹಳಷ್ಟು ಶಿಕ್ಷಕರು ಆಧಾರ್ ಕಾರ್ಡ್ ಹೊಂದಿದ್ದಾರೆ. ಆಧಾರ್ ಕಾರ್ಡ್ ಹೊಂದಲು ಶಿಕ್ಷಕರಿಗೆ ಜುಲೈ ತಿಂಗಳ ಡೆಡ್‍ಲೈನ್ ನೀಡಲಾಗಿದ್ದು, ಈ ಡೆಡ್‍ಲೈನ್ ಒಳಗಡೆ ಆಧಾರ್ ಪಡೆಯದೇ ಇದ್ದರೆ ಮುಂದೆ ಸಂಬಳವನ್ನು ಖಾತೆಗೆ ಜಮೆ ಮಾಡದೇ ಇರುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದರು.

    ಆಧಾರ್ ಕಾರ್ಡ್ ಇಲ್ಲದೇ ಇದ್ದಲ್ಲಿ ಶಾಲೆಗಳಲ್ಲಿ ಆಧಾರ್ ನೋಂದಣಿ ಕಾರ್ಯಕ್ರಮ ನಡೆಸಲಾಗುವುದು. ಶಿಕ್ಷಕರ ಜೊತೆ 1 ರಿಂದ 7 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಆಧಾರ್ ಅನ್ನು ಕಡ್ಡಾಯವಾಗಿ ಹೊಂದಬೇಕು ಎಂದು ಸಚಿವ ಅನುಪಮ್ ಜೈಸ್ವಾಲ್ ತಿಳಿಸಿದ್ದಾರೆ.

    ಈಗಾಗಲೇ ಶೇ.30 ರಷ್ಟು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಆಧಾರ್ ಹೊಂದಿದ್ದಾರೆ. ಆದರೆ ದೂರದಪ್ರದೇಶದಲ್ಲಿ ನೆಲೆಸಿರುವ ವಿದ್ಯಾರ್ಥಿಗಳಿಗೆ ಆಧಾರ್ ಕಡ್ಡಾಯ ಮಾಡಿಲ್ಲ. ಕೆಲ ಶಾಲೆಗಳಲ್ಲಿ ನಕಲಿ ಟೀಚರ್ ಗಳಿದ್ದು, ಈ ಸಮಸ್ಯೆ ಆಧಾರ್‍ನಿಂದ ಪರಿಹಾರವಾಗಲಾರದು ಎಂದು ಅಧಿಕಾರಿ ತಿಳಿಸಿದ್ದಾರೆ.

    ಜುಲೈ ಒಂದರಿಂದ ಐಟಿ ರಿಟರ್ನ್ ಮತ್ತು ಪ್ಯಾನ್ ಕಾರ್ಡ್‍ಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸುವ ಕಾನೂನಿನ ಸಿಂಧುತ್ವವನ್ನು ಶುಕ್ರವಾರ ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಸುಪ್ರೀಂ ಕೋರ್ಟ್ ನಿರ್ಧಾರ ಪ್ರಕಟವಾದ ಬಳಿಕ ಯೋಗಿ ಸರ್ಕಾರ ಶಿಕ್ಷಕರಿಗೆ ಆಧಾರ್ ಕಡ್ಡಾಯ ಮಾಡಿದೆ.

    ಇದನ್ನೂ ಓದಿ: 15 ಸರ್ಕಾರಿ ರಜೆಗಳನ್ನ ರದ್ದು ಮಾಡಿದ ಯೋಗಿ ಆದಿತ್ಯನಾಥ್

  • ಐಟಿ ಕಂಪೆನಿಗಳ ಹೊಸ ಜಾಬ್ ಆಫರ್‍ಗೆ ಟೆಕ್ಕಿಗಳು ಶಾಕ್!

    ಐಟಿ ಕಂಪೆನಿಗಳ ಹೊಸ ಜಾಬ್ ಆಫರ್‍ಗೆ ಟೆಕ್ಕಿಗಳು ಶಾಕ್!

    ಬೆಂಗಳೂರು: “ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ” ಇದು ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್.

    ಐಟಿ ಕಂಪೆನಿಗಳು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಕೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

    ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ ಎಂದು ಮಾಧ್ಯಮವೊಂದು ಉದ್ಯೋಗಿಗಳ ಹೇಳಿಕೆಯನ್ನು ಆಧಾರಿಸಿ ವರದಿ ಮಾಡಿದೆ.

    ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್‍ಆರ್‍ಗೆ ಆದೇಶಿಸಿದ್ದಾರೆ. ಇದರಂತೆ ಕೆಲ ಕಂಪೆನಿಗಳ ಎಚ್‍ಆರ್‍ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.

    ಎಚ್‍ಆರ್‍ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.

    ಕಂಪೆನಿಗಳ ಆಟ ಹೀಗಿರುತ್ತೆ:
    ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್‍ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್‍ನಲ್ಲಿರುವ ಎಚ್‍ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.

    ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.

    ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.

    ಇದನ್ನೂ ಓದಿ:ಟೆಕ್ಕಿಗಳನ್ನು ಮನೆಗೆ ಕಳುಹಿಸಬೇಡಿ, ಸಮಸ್ಯೆಗೆ ಪರಿಹಾರವಿದೆ: ಕಂಪೆನಿಗಳಿಗೆ ಇನ್ಫಿ ಮೂರ್ತಿ ಸಲಹೆ

    ಇದನ್ನೂ ಓದಿ: ಎಂಜಿನಿಯರಿಂಗ್ ಓದುತ್ತಿರುವ ಮತ್ತು ಮುಂದೆ ಓದಲಿರುವ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್

  • ಟೆಕ್ಕಿಗಳನ್ನು ಮನೆಗೆ ಕಳುಹಿಸಬೇಡಿ, ಸಮಸ್ಯೆಗೆ ಪರಿಹಾರವಿದೆ: ಕಂಪೆನಿಗಳಿಗೆ ಇನ್ಫಿ ಮೂರ್ತಿ ಸಲಹೆ

    ಟೆಕ್ಕಿಗಳನ್ನು ಮನೆಗೆ ಕಳುಹಿಸಬೇಡಿ, ಸಮಸ್ಯೆಗೆ ಪರಿಹಾರವಿದೆ: ಕಂಪೆನಿಗಳಿಗೆ ಇನ್ಫಿ ಮೂರ್ತಿ ಸಲಹೆ

    ಬೆಂಗಳೂರು: ಲಕ್ಷಾಂತರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಐಟಿ ಕಂಪೆನಿಗಳು ಮುಂದಾಗುತ್ತಿದ್ದಂತೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಹಿರಿಯ ಅಧಿಕಾರಿಗಳ ಸಂಬಳವನ್ನು ಕಡಿತಗೊಳಿಸಿ ಈ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.

    ಹೊಸದಾಗಿ ಸೇರ್ಪಡೆಯಾಗಿರುವ ಯುವ ಉದ್ಯೋಗಿಗಳನ್ನು ಮನೆಗೆ ಕಳುಹಿಸುವುದು ಸರಿಯಾದ ನಿರ್ಧಾರ ಅಲ್ಲ. ಇದರ ಬದಲಾಗಿ ಹಿರಿಯ ಮ್ಯಾನೇಜ್‍ಮೆಂಟ್ ಹಂತದಲ್ಲಿರುವ ಉದ್ಯೋಗಿಗಳ ಸಂಬಳವನ್ನು ಕಡಿತಗೊಳಿಸುವುದು ಉತ್ತಮ ಎಂದಿದ್ದಾರೆ.

    ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ನಮ್ಮ ಇನ್ಫೋಸಿಸ್ ಉದಾಹರಣೆ ತೆಗೆದುಕೊಳ್ಳಿ. 2011ರ ವೇಳೆ ಸಾಫ್ಟ್ ವೇರ್ ಉದ್ಯಮಕ್ಕೆ ಸಂಕಷ್ಟ ಎದುರಾಗಿತ್ತು. ಈ ವೇಳೆ ಹಿರಿಯ ಹಂತದ ಮ್ಯಾನೇಜ್‍ಮೆಂಟ್ ನಲ್ಲಿರುವ ವ್ಯಕ್ತಿಗಳೆಲ್ಲ ಸಭೆ ನಡೆಸಿದೆವು. ಸಭೆಯಲ್ಲಿ ಸಂಬಳವನ್ನು ಕಡಿತಗೊಳಿಸುವ ತೀರ್ಮಾನವನ್ನು ಮಾಡಿದೆವು. ಯುವ ಟೆಕ್ಕಿಗಳಿಗೆ ಜಾಬ್ ನೀಡಲು ಮತ್ತು ಅವರನ್ನು ರಕ್ಷಿಸಲು ಹಿರಿಯ ಸಿಬ್ಬಂದಿ ಈ ತ್ಯಾಗದ ನಿರ್ಧಾರವನ್ನು ಈಗ ತೆಗೆದುಕೊಳ್ಳಬೇಕು ಎಂದು ಹೇಳಿದರು.

    ಸುಮ್ಮನೆ ಉದ್ಯೋಗಿಯನ್ನು ಮನೆಗೆ ಕಳುಹಿಸುವುದು ಸರಿಯಾದ ನಿರ್ಧಾರ ಅಲ್ಲ. ಯಾಕೆಂದರೆ ಅವರನ್ನು ನಂಬಿಕೊಂಡ ಕುಟುಂಬವು ಇದೆ ಎಂದು ಎಂದು ತಿಳಿಸಿದರು.

    2008, 2011ರಲ್ಲಿ ಇದೇ ರೀತಿಯ ಸಮಸ್ಯೆ ಎದುರಾಗಿತ್ತು. ಹೀಗಾಗಿ ಸಮಸ್ಯೆ ನಮಗೆ ಹೊಸದೆನಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸಮಸ್ಯೆ ಸೃಷ್ಟಿಯಾಗದೇ ಇರಲು ಪರಿಹಾರವನ್ನು ಕಂಡುಕೊಳ್ಳಬೇಕಿದೆ ಎಂದು ನಾರಾಯಣ ಮೂರ್ತಿ ಹೇಳಿದರು.

    ಎಷ್ಟು ಜನ ಮನೆಗೆ?
    ಮುಂದಿನ ಮೂರು ವರ್ಷದಲ್ಲಿ ಐಟಿ ವಲಯದಲ್ಲಿ 1.75 ಲಕ್ಷದಿಂದ 2 ಲಕ್ಷ ಎಂಜಿನಿಯರ್‍ಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಉದ್ಯೋಗ ವಲಯದ ಪ್ರಮುಖ ಸಂಸ್ಥೆಯಾದ ಹೆಡ್ ಹಂಟರ್ಸ್ ಇಂಡಿಯಾ ಹೇಳಿದೆ. ಮ್ಯಾಕ್‍ಕಿನ್ಸ್ ಆಂಡ್ ಕಂಪೆನಿ ಮುಂದಿನ ಮೂರು ವರ್ಷದಲ್ಲಿ 3-4 ವರ್ಷದಲ್ಲಿ ಐಟಿ ವಲಯದ ಅರ್ಧದಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ತಿಳಿಸಿದೆ.

    ಮನೆಗೆ ಕಳುಹಿಸುತ್ತಿರುವುದು ಯಾಕೆ?
    ಕೌಶಲ್ಯ ಹೊಂದಿರುವ ಎಂಜಿನಿಯರ್‍ಗಳ ಸಂಖ್ಯೆ ಕಡಿಮೆಯಾಗಿದ್ದು, ಅಟೋಮೇಶನ್ ಹೆಚ್ಚಾಗುತ್ತಿರುವುದರಿಂದ ಕಂಪೆನಿಗಳು ಈಗ ಐಟಿ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗುತ್ತಿವೆ. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ನೇಮಕವಾದ ಬಳಿಕ ವೀಸಾ ನಿಯಮವನ್ನು ಬಿಗಿಗೊಳಿಸಿದ್ದಾರೆ. ಅಷ್ಟೇ ಅಲ್ಲದೇ ಅಮೆರಿಕದ ಜನರಿಗೆ ಕಂಪೆನಿಗಳು ಉದ್ಯೋಗ ನೀಡಬೇಕು ಎಂದು ಹೇಳಿರುವುದರಿಂದ ಭಾರತೀಯ ಐಟಿ ಕಂಪೆನಿಗಳ ಮಾರುಕಟ್ಟೆಯ ಮೇಲೆ ಭಾರೀ ಹೊಡೆತ ಬಿದ್ದಿದೆ.

    ಇದನ್ನೂ ಓದಿ:ಇನ್ಫಿ ಸಿಒಒಗೆ ಭಾರೀ ಪ್ರಮಾಣದ ಸಂಬಳ ಏರಿಸಿದ್ದಕ್ಕೆ ನಾರಾಯಣ ಮೂರ್ತಿ ಆಕ್ಷೇಪ

    ಇದನ್ನೂ ಓದಿ: ಸ್ಟಾರ್ಟ್‌ಅಪ್‌ ಕಂಪೆನಿಗಳಲ್ಲಿ ಟೆಕ್ಕಿಗಳಿಗೆ ವಿಶ್ವದಲ್ಲೇ ಬೆಂಗಳೂರಿನಲ್ಲಿ ಕಡಿಮೆ ಸಂಬಳ: ಯಾವ ನಗರದಲ್ಲಿ ಎಷ್ಟು ಸಂಬಳ?

     

  • ವೇತನ ಹೆಚ್ಚಳಕ್ಕಾಗಿ ಟೆಕ್ಸ್ಪೋಟರ್ ಕಂಪೆನಿಯ ಸಾವಿರಾರು ಮಹಿಳಾ ಕಾರ್ಮಿಕರಿಂದ ಪ್ರತಿಭಟನೆ

    ವೇತನ ಹೆಚ್ಚಳಕ್ಕಾಗಿ ಟೆಕ್ಸ್ಪೋಟರ್ ಕಂಪೆನಿಯ ಸಾವಿರಾರು ಮಹಿಳಾ ಕಾರ್ಮಿಕರಿಂದ ಪ್ರತಿಭಟನೆ

    ಬೆಂಗಳೂರು: ನಗರದ ಹೊರವಲಯ ನೆಲಮಂಗಲದ ಟೆಕ್ಸ್ಪೋಟರ್ ಇಂಡಸ್ಟ್ರೀಸ್ ಕಂಪನಿಯ ಸಾವಿರಾರು ಮಹಿಳಾ ಕಾರ್ಮಿಕರು ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಕಂಪನಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ರು.

    ಪ್ರತಿ ವರ್ಷದಂತೆ ಕಾರ್ಮಿಕರ ವೇತನ ಹೆಚ್ಚಿಸಬೇಕು. ಆಡಳಿತ ಮಂಡಳಿ ಕಾರ್ಮಿಕರಿಗೆ ನೀಡಬೇಕಿದ್ದ ಸಾರಿಗೆ ವ್ಯವಸ್ಥೆ ಇನ್ನಿತರ ಮೂಲಭೂತ ಸೌಕರ್ಯವನ್ನ ನೀಡುವಲ್ಲಿ ವಿಫಲವಾಗಿದೆ. ಕೂಡಲೇ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಎಂದು ಆಗ್ರಹಿಸಿದ್ದಾರೆ.

    ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆಡಳಿತ ಮಂಡಳಿ ಹಾಗೂ ಕಾರ್ಮಿಕರು ಜೊತೆಯ ಸಂಧಾನ ಮಾತುಕತೆ ನಡೆಸಿದ್ದಾರೆ. ಆಡಳಿತ ಮಂಡಳಿ ಶೀಘ್ರವೇ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ ನಂತರ ಕಾರ್ಮಿಕರು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

     

  • ಮಿರ್ಚಿಗೆ 5 ಕೋಟಿ, ಬಾಹುಬಲಿಗೆ 25 ಕೋಟಿ: ಈಗ ಪ್ರಭಾಸ್ ಕಾಲ್ ಶೀಟ್ ಬೇಕಾದ್ರೆ ನೀವು ಇಷ್ಟು ಕೊಡ್ಬೇಕು

    ಮಿರ್ಚಿಗೆ 5 ಕೋಟಿ, ಬಾಹುಬಲಿಗೆ 25 ಕೋಟಿ: ಈಗ ಪ್ರಭಾಸ್ ಕಾಲ್ ಶೀಟ್ ಬೇಕಾದ್ರೆ ನೀವು ಇಷ್ಟು ಕೊಡ್ಬೇಕು

    ಹೈದರಾಬಾದ್: ಬಾಹುಬಲಿ ಹೀರೋ ಪ್ರಭಾಸ್ ತನ್ನ ಸಂಭಾವನೆಯನ್ನು ಭಾರೀ ಏರಿಸಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    2013ರಲ್ಲಿ ಬಿಡುಗಡೆಯಾದ ಮಿರ್ಚಿ ಸಿನಿಮಾಕ್ಕೆ ಪ್ರಭಾಸ್ 5 ಕೋಟಿ ರೂ. ತೆಗೆದುಕೊಂಡಿದ್ದರೆ, ಬಾಹುಬಲಿ ಚಿತ್ರಕ್ಕೆ 25 ಕೋಟಿ ರೂ. ತೆಗೆದುಕೊಂಡಿದ್ದಾರೆ.

    ಬಾಹುಬಲಿ ಚಿತ್ರಕ್ಕಾಗಿ 5 ವರ್ಷ ಮುಡುಪಿಟ್ಟ ಹಿನ್ನೆಲೆಯಲ್ಲಿ ಇಷ್ಟೊಂದು ಸಂಭಾವನೆಯನ್ನು ಪ್ರಭಾಸ್ ಏರಿಸಿಕೊಂಡಿದ್ದು, ಈಗ ತನ್ನ ಮುಂದಿನ ಸಿನಿಮಾಗಳಿಗೆ 30 ಕೋಟಿ ರೂ. ಹಣವನ್ನು ಡಿಮ್ಯಾಂಡ್ ಮಾಡಿದ್ದಾರೆ ಎಂದು ಟಾಲಿವುಡ್ ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿವೆ.

    ಬಾಹುಬಲಿ ಮೊದಲ ಭಾಗದಲ್ಲಿ ಶಿವುಡು ಪಾತ್ರದಲ್ಲಿ ಮಿಂಚಿದ್ದ 37 ವರ್ಷದ ಪ್ರಭಾಸ್ ಎರಡನೇ ಭಾಗದಲ್ಲಿ ಅಮರೇಂದ್ರ ಬಾಹುಬಲಿಯಾಗಿ ಅಭಿನಯಿಸಿದ್ದಾರೆ.

    ಇದನ್ನೂ ಓದಿ: ವೈರಲ್ ಆಗಿದೆ ಶಿವಗಾಮಿ, ಕಟ್ಟಪ್ಪ ನಡುವಿನ ರೊಮ್ಯಾನ್ಸ್ ವಿಡಿಯೋ!

    ಇದನ್ನೂ ಓದಿ: ಕನ್ನಡ ಸಿನಿಮಾಗಳಲ್ಲಿ ನಟಿಸುತ್ತೀರಾ? ಅಭಿಮಾನಿಯ ಪ್ರಶ್ನೆಗೆ ಅನುಷ್ಕಾ ಶೆಟ್ಟಿ ಕನ್ನಡದಲ್ಲಿ ಉತ್ತರಿಸಿದ್ದು ಹೀಗೆ

    ಇದನ್ನೂ ಓದಿ: ಪ್ರಭಾಸ್, ರಾಣಾ, ಅನುಷ್ಕಾ, ತಮನ್ನಾ, ರಮ್ಯಕೃಷ್ಣಗೆ ಎಷ್ಟು ಸಂಭಾವನೆ ಸಿಕ್ಕಿದೆ?

  • ಭಾರತೀಯ ಮೂಲದ ಸಿಇಒ ಸುಂದರ್ ಪಿಚೈಗೆ ಗೂಗಲ್ 2016ರಲ್ಲಿ ನೀಡಿದ ಸಂಬಳ ಎಷ್ಟು ಗೊತ್ತೆ?

    ಭಾರತೀಯ ಮೂಲದ ಸಿಇಒ ಸುಂದರ್ ಪಿಚೈಗೆ ಗೂಗಲ್ 2016ರಲ್ಲಿ ನೀಡಿದ ಸಂಬಳ ಎಷ್ಟು ಗೊತ್ತೆ?

    ಕ್ಯಾಲಿಫೋರ್ನಿಯಾ: ಗೂಗಲ್ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಮೂಲದ 44 ವರ್ಷದ ಸುಂದರ್ ಪಿಚೈ ಅವರಿಗೆ 200 ದಶಲಕ್ಷ ಡಾಲರ್(ಅಂದಾಜು 1,285 ಕೋಟಿ ರೂ.) ಸಂಭಾವನೆ ನೀಡಿದೆ.

    2015ರ ಸಂಬಳಕ್ಕೆ ಹೋಲಿಸಿದರೆ ಸಂಬಳ ಡಬಲ್ ಆಗಿದೆ. 2015ರಲ್ಲಿ ವಾರ್ಷಿಕ ಪರಿಹಾರ ಮೊತ್ತ ಸೇರಿದಂತೆ 6,50,000 ಡಾಲರ್ ಸಂಬಳ ಸಿಕ್ಕಿತ್ತು. 2015ರಲ್ಲಿ ಷೇರು ರೂಪದಲ್ಲಿ 99.8 ದಶಲಕ್ಷ ಡಾಲರ್ ಪಡೆದಿದ್ದ ಸುಂದರ್ ಪಿಚೈ ಅವರು 2016ರಲ್ಲಿ 198.7 ದಶಲಕ್ಷ ಡಾಲರ್ ಹಣವನ್ನು ಪಡೆದಿದ್ದಾರೆ.

    ಕಂಪೆನಿಯ ಪರವಾಗಿ ಉತ್ತಮ ಉತ್ಪನ್ನವನ್ನು ಹೊರ ತಂದಿದ್ದಕ್ಕೆ ಗೂಗಲ್ ಸಂಬಳವನ್ನು ಏರಿಕೆ ಮಾಡಿದೆ ಎಂದು ಸಿಎನ್‍ಎನ್ ವರದಿ ಮಾಡಿದೆ.

    2016ರಲ್ಲಿ ಗೂಗಲ್ ಹೊಸ ಸ್ಮಾರ್ಟ್ ಫೋನ್, ವರ್ಚುವಲ್ ರಿಯಾಲಿಟಿ ಹೆಡ್ ಸೆಟ್, ರೂಟರ್, ವಾಯ್ಸ್ ಆಧಾರಿತ ಸ್ಪೀಕರ್ ಬಿಡುಗಡೆ ಮಾಡಿತ್ತು. ಈ ಎಲ್ಲ ಕೆಲಸಕ್ಕೆ ಗೂಗಲ್ ಪಿಚೈ ಸಂಬಳವನ್ನು ಭಾರೀ ಏರಿಕೆ ಮಾಡಿದೆ.

    ಯಾರು ಸುಂದರ್ ಪಿಚೈ:
    ಸುಂದರ್ ಪಿಚೈ ಭಾರತೀಯ ಮೂಲದ ಅಮೆರಿಕದ ಕಂಪ್ಯೂಟರ್ ಎಂಜಿನಿಯರ್. ಮೂಲತಃ ಚೆನ್ನೈರವರಾದ ಸುಂದರ್ ಇಲ್ಲಿಯವರಗೆ ಗೂಗಲ್ ಕ್ರೋಮ್,ಆಂಡ್ರಾಯ್ಡ್ ಅಪ್ಲಿಕೇಶನ್, ಮತ್ತು ಗೂಗಲ್ ಡ್ರೈವ್ ವಿಭಾಗದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದರು. 2004ರಲ್ಲಿ ಗೂಗಲ್‍ಗೆ ಸೇರಿದ ಸುಂದರ್, ಖರಗ್‍ಪುರ್ ಐಐಟಿಯಿಂದ ಬಿ.ಟೆಕ್ ಪದವಿ,ಸ್ಟಾನ್‍ಫೋರ್ಡ್ ವಿಶ್ವವಿದ್ಯಾಲಯದಿಂದ ಎಂಎಸ್ ಪದವಿಗಳಿಸಿದ್ದಾರೆ. ಮೈಕ್ರೋ ಸಾಫ್ಟ್ ಸಿಇಒ ಆಗಿ ಸತ್ಯ ನಾಡೆಲ್ಲಾ ನೇಮಕವಾದ ಬಳಿಕ ಆಗಸ್ಟ್ 10, 2015ರಂದು ಪಿಚೈ ಅವರನ್ನು ಗೂಗಲ್ ಸಿಇಒ ಆಗಿ ನೇಮಕಗೊಳಿಸಿತ್ತು.

  • ಮೇ 1 ರಿಂದ ಈ 5 ನಗರಗಳಲ್ಲಿ ಪ್ರತಿದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಆಗುತ್ತೆ

    ಮೇ 1 ರಿಂದ ಈ 5 ನಗರಗಳಲ್ಲಿ ಪ್ರತಿದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಆಗುತ್ತೆ

    ನವದೆಹಲಿ: 15 ದಿನಗಳಿಗೊಮ್ಮೆ ಪರಿಷ್ಕರಣೆ ಆಗುತ್ತಿದ್ದ ಪೆಟ್ರೋಲ್, ಡೀಸೆಲ್ ದರ ಇನ್ನು ಮುಂದೆ ಪ್ರತಿದಿನ ಪರಿಷ್ಕರಣೆಯಾಗಲಿದ್ದು, ಪ್ರಾಯೋಗಿಕವಾಗಿ ಮೇ 1ರಿಂದ ದೇಶದ ಐದು ಮಹಾನಗರಗಳಲ್ಲಿ ಜಾರಿಗೆ ಬರಲಿದೆ.

    ಪಾಂಡಿಚೇರಿ, ಆಂಧ್ರಪ್ರದೇಶದ ವೈಝಾಗ್, ರಾಜಸ್ಥಾನದ ಉದಯ್ ಪುರ್, ಜಾರ್ಖಂಡ್‍ನ ಜಮ್ಶೆಡ್‌ಪುರ ಚಂಡೀಗಢದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ಬರಲಿದ್ದು, ಮುಂದಿನ ಹಂತದಲ್ಲಿ ದೇಶಾದ್ಯಂತ ಜಾರಿ ಮಾಡಲು ಭಾರತೀಯ ತೈಲ ಕಂಪೆನಿಗಳು ತೀರ್ಮಾನಿಸಿದೆ.

    ಪ್ರಮುಖ 5 ಮಹಾನಗರಗಳಲ್ಲಿ ಈ ಯೋಜನೆಯನ್ನು ಜಾರಿಗೆ ತಂದ ಬಳಿಕ, ದೇಶದ ಉಳಿದ ಭಾಗದಲ್ಲಿ ಜಾರಿಗೊಳಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

    ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರಸ್ತುತ ದೇಶದಲ್ಲಿ ಶೇ.95ರಷ್ಟು ಮಾರುಕಟ್ಟೆಯನ್ನು ಹೊಂದಿದ್ದು, ಈ ಎಲ್ಲ ತೈಲ ಕಂಪೆನಿಗಳ ಅಧಿಕಾರಿಗಳು ಏಪ್ರಿಲ್ 5ರಂದು ಧರ್ಮೇಂದ್ರ ಪ್ರಧಾನ್ ಜೊತೆ ಮಾತುಕತೆ ನಡೆಸಿದ್ದರು.

    ಪ್ರತಿದಿನ ತೈಲ ಬೆಲೆಯನ್ನು ಪರಿಷ್ಕರಿಸಬೇಕು ಎನ್ನುವ ಪ್ರಸ್ತಾಪ ಈ ಹಿಂದೆಯೇ ಇತ್ತು. ಆದರೆ ಇಲ್ಲಿಯವರೆಗೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ಈಗ ದೇಶದಲ್ಲಿ ಸುಮಾರು 58 ಸಾವಿರ ಬಂಕ್‍ಗಳನ್ನು ಹೊಂದಿರುವ ಈ ತೈಲ ಕಂಪೆನಿಗಳು ಕಾರ್ಯರೂಪಕ್ಕೆ ತರಲು ಮುಂದಾಗಿದೆ.

    ಗ್ರಾಹಕರಿಗೆ ಲಾಭವೇ?
    ಪ್ರಸ್ತುತ ಈಗ ಪ್ರತಿ 15ದಿನಗಳಿಗೊಮ್ಮೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ನೋಡಿಕೊಂಡು ಭಾರತೀಯ ತೈಲ ಕಂಪೆನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸುತ್ತಿರುತ್ತವೆ. ಇದರಿಂದಾಗಿ ಕೆಲವೊಮ್ಮೆ ಭಾರೀ ಬೆಲೆ ಏರಿಕೆಯಾದರೆ, ಕೆಲವೊಮ್ಮೆ ಭಾರೀ ಇಳಿಕೆಯಾಗುತ್ತದೆ. ಏರಿಕೆಯಾದರೆ ಗ್ರಾಹಕರಿಗೆ ಹೊರೆಯಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ಪ್ರತಿ ದಿನ ದರವನ್ನು ಪರಿಷ್ಕರಿಸಿದರೆ ಪ್ರತಿದಿನ ಕೆಲ ಪೈಸೆ ಏರಿಕೆಯಾಗಬಹುದು ಇಲ್ಲವೇ ಕೆಲ ದಿನ ಕೆಲ ಪೈಸೆ ಇಳಿಕೆಯಾಗಬಹುದು. ಇದರಿಂದಾಗಿ ಗ್ರಾಹಕರಿಗೆ ಅಷ್ಟೇನು ಹೊರೆ ಬೀಳುವುದಿಲ್ಲ.

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಇಳಿಕೆ ಅಥವಾ ಏರಿಕೆಯಾದರೂ ವಿಶೇಷವಾಗಿ ಚುನಾವಣೆಯ ಸಂದರ್ಭದಲ್ಲಿ ಸರ್ಕಾರದ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇರುವುದರಿಂದ ತೈಲ ಕಂಪೆನಿಗಳು ಈ ಅವಧಿಯಲ್ಲಿ ದರ ಪರಿಷ್ಕರಣೆಗೆ ಮುಂದಾಗುವುದಿಲ್ಲ. ಒಂದು ವೇಳೆ ಪ್ರತಿದಿನ ದರವನ್ನು ಪರಿಷ್ಕರಿಸುವ ವ್ಯವಸ್ಥೆ ಬಂದರೆ ಚುನಾವಣೆಯ ಅವಧಿಯಲ್ಲೂ ದರವನ್ನು ಏರಿಕೆ, ಇಳಿಕೆ ಮಾಡುವ ಸ್ವಾಂತಂತ್ರ್ಯ ಇವುಗಳಿಗೆ ಸಿಗಲಿದೆ.

    ಸತತ ಏರಿಕೆಯಾಗುತ್ತಿದ್ದ ಪೆಟ್ರೋಲ್ ಡೀಸೆಲ್ ಬೆಲೆ ಬಹಳ ದಿನಗಳ ಬಳಿಕ ಮಾರ್ಚ್ 31ರಂದು ಭಾರೀ ಇಳಿಕೆಯಾಗಿತ್ತು. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 3.77 ರೂ. ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆ 2.91 ರೂ. ಇಳಿಕೆಯಾಗಿತ್ತು. ಪ್ರತಿ 15 ದಿನಗಳಿಗೊಮ್ಮೆ ದರವನ್ನು ಪರಿಷ್ಕರಿಸುತ್ತಿದ್ದ ತೈಲ ಕಂಪೆನಿಗಳು ಪಂಚರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಬೆಲೆ ಪರಿಷ್ಕರಣೆ ಮಾಡಿರಲಿಲ್ಲ. ಆದರೆ, ಈ ಅವಧಿಯಲ್ಲಿ ಅಡುಗೆ ಅನಿಲ ದರವನ್ನು ಮಾತ್ರ ಪರಿಷ್ಕರಿಸಲಾಗಿತ್ತು.

    ಭಾರತ ಸರ್ಕಾರ 2010 ರಲ್ಲಿ ಪೆಟ್ರೋಲ್ ನಿಯಂತ್ರಣ ಮುಕ್ತಗೊಳಿಸಿದರೆ, 2014ರಲ್ಲಿ ಡೀಸೆಲ್ ಅನ್ನು ತನ್ನ ನಿಯಂತ್ರಣದಿಂದ ಮುಕ್ತಗೊಳಿಸಿತ್ತು.