Tag: salary

  • ನಮ್ಮ ಸಂಸದರಿಗೆ ಈಗ ಎಷ್ಟು ಸಂಬಳ? ಭತ್ಯೆ ಎಷ್ಟು ಸಿಗುತ್ತೆ?

    ನಮ್ಮ ಸಂಸದರಿಗೆ ಈಗ ಎಷ್ಟು ಸಂಬಳ? ಭತ್ಯೆ ಎಷ್ಟು ಸಿಗುತ್ತೆ?

    ಕಂಪೆನಿಗಳಲ್ಲಿ ಹೇಗೆ ಸಿಬ್ಬಂದಿಗೆ ಸಂಬಳವನ್ನು ಹೆಚ್ಚಳ ಮಾಡಲಾಗುತ್ತದೋ ಅದೇ ರೀತಿಯಾಗಿ ಸಂಸದರ ವೇತನವೂ ಕೂಡ ಕಾಲ ಕಾಲಕ್ಕೆ ಪರಿಷ್ಕರಣೆ ಆಗುತ್ತದೆ. ರಾಜ್ಯಸಭೆ ಮತ್ತು ಲೋಕಸಭೆ ಸದಸ್ಯರ ಇರುವ ಜಂಟಿ ಸಮಿತಿ ಅಧ್ಯಯನ ನಡೆಸಿ ಸಂಸದರ ಸಂಬಳವನ್ನು ಪರಿಷ್ಕರಿಸುತ್ತದೆ. ಹೀಗಾಗಿ ಇಲ್ಲಿ 2010ರಲ್ಲಿ ವೇತನ ಪರಿಷ್ಕರಣೆಯಂತೆ ಪ್ರಸ್ತುತ ಲೋಕಸಭಾ ಸದಸ್ಯರು ಪಡೆಯುತ್ತಿರುವ ಸಂಬಳ ಮತ್ತು ಭತ್ಯೆಯ ವಿವರಗಳನ್ನು ನೀಡಲಾಗಿದೆ.

    ಸಂಬಳ ಮತ್ತು ಭತ್ಯೆ
    #ತಿಂಗಳ ಸಂಬಳ: ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಿಗೆ ಪ್ರಸ್ತುತ ಒಂದು ತಿಂಗಳಿಗೆ 50 ಸಾವಿರ ರೂ. ಸಂಬಳ ಸಿಗುತ್ತದೆ. ದಿನ ಭತ್ಯೆ ಯಾಗಿ 2 ಸಾವಿರ ರೂ. ಸಿಕ್ಕಿದರೆ, ಕ್ಷೇತ್ರ ಭತ್ಯೆಯಾಗಿ ತಿಂಗಳಿಗೆ 45 ಸಾವಿರ ರೂ. ಸಿಗುತ್ತದೆ.

    #ಕಚೇರಿ ಭತ್ಯೆ: ಪ್ರತಿ ತಿಂಗಳು 45 ಸಾವಿರ ರೂ. ಸಿಗುತ್ತದೆ. ಇದರಲ್ಲಿ 15 ಸಾವಿರ ರೂ. ಸಭೆ, ಪೋಸ್ಟ್ ಖರ್ಚುಗಳನ್ನು ಮಾಡಬಹುದು.

    ಪ್ರವಾಸ ಭತ್ಯೆ:
    ಕ್ಷೇತ್ರ ಮತ್ತು ಸಂಸತ್ ಕಲಾಪದಲ್ಲಿ ಭಾಗವಹಿಸಲು ಮನೆಯಿಂದ ಪ್ರಯಾಣಿಸಿದರೆ ಅವರಿಗೆ ರೈಲ್ವೇ ಮತ್ತು ವಿಮಾನದಲ್ಲಿ ರಿಯಾಯಿಯಿತಿ ಇದೆ.

    #ರೈಲು: ಸಂಸದರಿಗೆ ರೈಲು ಪ್ರಯಾಣಕ್ಕೆ ಉಚಿತ ಪಾಸ್ ನೀಡಲಾಗುತ್ತದೆ. ಈ ಪಾಸನ್ನು ಬೇರೆಯವರಿಗೆ ವರ್ಗಾಯಿಸುವಂತಿಲ್ಲ. ಹವಾನಿಯಂತ್ರಿತ ಬೋಗಿ ಅಥವಾ ಎಕ್ಸ್‍ಕ್ಯುಟಿವ್ ದರ್ಜೆಯಲ್ಲಿ ಉಚಿತವಾಗಿ ಯಾವ ಸಮಯದಲ್ಲಿ ಎಲ್ಲಿಂದ ಎಲ್ಲಿಗೆ ಬೇಕಾದರೂ ಪ್ರಯಾಣಿಸಬಹುದು. ಸಂಸದರ ಜೊತೆ ಅವರ ಪತಿ/ಪತ್ನಿಯರಿಗೂ ಉಚಿತ ಪ್ರಯಾಣಿಸಲು ಪಾಸ್ ನೀಡಲಾಗುತ್ತದೆ.

    #ವಿಮಾನ ಪ್ರಯಾಣ: ಒಂದು ವರ್ಷದಲ್ಲಿ ಗರಿಷ್ಟ 34 ಬಾರಿ ಸಿಂಗಲ್ ಟಿಕೆಟ್ ಮೂಲಕ ವಿಮಾನ ಪ್ರಯಾಣಿಸಬಹುದು. 8 ಬಾರಿ ಪತಿ/ ಪತ್ನಿ ಜೊತೆಯಾಗಿ ಪ್ರಯಾಣ ಬೆಳೆಸಬಹುದು. ಈ ಗರಿಷ್ಟ ಮಿತಿಯನ್ನು ಬಳಸದೇ ಇದ್ದರೆ ಉಳಿಕೆಯಾಗಿರುವ ಪ್ರಯಾಣದ ಟಿಕೆಟ್ ಮುಂದಿನ ವರ್ಷಕ್ಕೆ ವರ್ಗವಾಗುತ್ತದೆ.

    #ರಸ್ತೆ: 1 ಕಿ.ಮಿ.ಗೆ 16 ರೂ. ನೀಡಲಾಗುತ್ತದೆ.

    ವಸತಿ:
    ಹೊಸದಾಗಿ ಆಯ್ಕೆಯಾಗಿರುವ ಸಂಸದ್ ಸದಸ್ಯರಿಗೆ ಆರಂಭದಲ್ಲಿ ತಾತ್ಕಾಲಿಕವಾಗಿ ಉಳಿದುಕೊಳ್ಳಲು ಆಯಾ ರಾಜ್ಯಗಳು ಹೋಟೆಲ್, ಗೆಸ್ಟ್ ಹೌಸ್‍ಗಳನ್ನು ನೀಡಬೇಕಾಗುತ್ತದೆ. ಶಾಶ್ವತವಾಗಿ ನೆಲೆ ಕಲ್ಪಿಸುವವರೆಗೂ ಅವರು ಈ ಜಾಗದಲ್ಲಿ ತಂಗಬಹುದು.

    ಅವಧಿ ಪೂರ್ಣ ಆಗುವವರೆಗೂ ಸಂಸತ್ ಸದಸ್ಯರಿಗೆ ಉಚಿತ ಮನೆಯನ್ನು ನೀಡಲಾಗುತ್ತದೆ. ಒಂದು ವೇಳೆ ರಾಜೀನಾಮೆ ನೀಡಿದರೆ ಅಥವಾ ಉಚ್ಚಾಟನೆ ಮಾಡಿದರೆ ಗರಿಷ್ಟ ಒಂದು ತಿಂಗಳವರೆಗೆ ಆ ಮನೆಯಲ್ಲಿ ಉಳಿದುಕೊಳ್ಳಬಹುದು. ಒಂದು ವೇಳೆ ಸಂಸತ್ ಸದಸ್ಯರು ಅಕಾಲಿಕವಾಗಿ ಮೃತಪಟ್ಟರೆ ಅವರ ಕುಟುಂಬ ಸದಸ್ಯರು 6 ತಿಂಗಳ ಕಾಲ ಆ ಮನೆಯಲ್ಲಿ ಉಳಿದುಕೊಳ್ಳಬಹುದು.

    ಇತರೆ:ಸೋಫಾ ಕವರ್, ಕರ್ಟನ್ ಗಳನ್ನು ಮೂರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಿದರೆ ಅದಕ್ಕೆ ತಗಲುವ ವೆಚ್ಚ, ವರ್ಷಕ್ಕೆ 60 ಸಾವಿರ ರೂ. ಮೌಲ್ಯದ ಪೀಠೋಪಕರಣ ಖರೀದಿ ಮಾಡಬಹುದು.

    ದೂರವಾಣಿ:
    ಮೂರು ದೂರವಾಣಿ ಸಂಖ್ಯೆಗಳನ್ನು ನೀಡಲಾಗುತ್ತದೆ. ಒಂದು ದೂರವಾಣಿ ಸಂಖ್ಯೆ ಸಂಸದರ ನಿವಾಸ ಅಥವಾ ದೆಹಲಿಯಲ್ಲಿರುವ ಕಚೇರಿಯಲ್ಲಿ ಇನ್‍ಸ್ಟಾಲ್ ಮಾಡಬೇಕು. ಎರಡನೇಯದು ತನ್ನ ಕ್ಷೇತ್ರ ಅಥವಾ ರಾಜ್ಯದಲ್ಲಿರುವ ನಿವಾಸದಲ್ಲಿ ಇರಬೇಕು, ಮೂರನೇ ಸಂಖ್ಯೆಯನ್ನು ಎಲ್ಲಿ ಹಾಕಬೇಕು ಎನ್ನುವುದನ್ನು ಸಂಸದರ ವಿವೇಚನೆಗೆ ಬಿಡಲಾಗಿದೆ.

    # 50 ಸಾವಿರ ಸ್ಥಳೀಯ ಕರೆಗಳು ವರ್ಷದಲ್ಲಿ ಉಚಿತವಾಗಿ ಸಿಗಲಿದೆ. ಮೂರು ದೂರವಾಣಿಗಳಿಂದ ವರ್ಷಕ್ಕೆ 1.50 ಲಕ್ಷ ಸ್ಥಳೀಯ ಕರೆಗಳು ಮಾಡಬಹುದಾಗಿದೆ.

    #ಪ್ರತಿಯೊಬ್ಬ ಸಂಸದನಿಗೆ ಎಂಟಿಎನ್‍ಎಲ್ ಮೊಬೈಲ್ ಸಂಪರ್ಕ ನೀಡಲಾಗುತ್ತದೆ. ಇದರ ಜೊತೆ ಬಿಎಸ್‍ಎನ್‍ಎಲ್ ಅಥವಾ ಖಾಸಗಿ ಟೆಲಿಕಾಂ ಕಂಪೆನಿಗಳ ಮೊಬೈಲ್ ಸಂಪರ್ಕ ಸಿಗುತ್ತದೆ. ಈ ಮೊಬೈಲ್ ಮತ್ತು ಮೂರು ದೂರವಾಣಿಗಳ ಮೂಲಕ ವರ್ಷಕ್ಕೆ 1.50 ಲಕ್ಷ ಕರೆಗಳನ್ನು ಮಾಡಬಹುದು.

    ವಿದ್ಯುತ್: 50 ಸಾವಿರ ಯೂನಿಟ್ ವಿದ್ಯುತ್ ವಾರ್ಷಿಕವಾಗಿ ಬಳಸಬಹುದು.

    ವೈದ್ಯಕೀಯ: ಪ್ರಸ್ತುತ ನಾಗರಿಕ ಸೇವೆಯಲ್ಲಿರುವ ಕ್ಲಾಸ್ -1 ಅಧಿಕಾರಿಗಳಿಗೆ ಸಿಗುವ ಎಲ್ಲ ವೈದ್ಯಕೀಯ ಭತ್ಯೆಗಳು ಸಂಸದರಿಗೆ ಸಿಗುತ್ತದೆ.

    ಆದಾಯ ತೆರಿಗೆ: ಪ್ರಸ್ತುತ ಸರ್ಕಾರ ನೀಡುವ ಸಂಬಳ, ದಿನ ಭತ್ಯೆ, ಕ್ಷೇತ್ರ ಭತ್ಯೆಗಳಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

    ಇತರೆ ಲಾಭ: ಸಂಬಳ ಮತ್ತು ಭತ್ಯೆ ಹೊರತು ಪಡಿಸಿ ಸದಸ್ಯನಿಗೆ ಕಂಪ್ಯೂರ್ ಖರೀದಿಗೆ ಹಣ ಸಿಗುತ್ತದೆ. ಗರಿಷ್ಟ 1.50 ಲಕ್ಷ ರೂ. ಒಳಗಿನ ಡೆಸ್ಕ್ ಟಾಪ್, ಲ್ಯಾಪ್‍ಟಾಪ್, ಪ್ರಿಂಟರ್, ಸ್ಕ್ಯಾನರ್ ಖರೀದಿ ಮಾಡಬಹುದು.

    ಯೋಗಿ ಶಿಫಾರಸ್ಸಿನಲ್ಲಿ ಏನಿತ್ತು?
    ಪ್ರಸ್ತುತ ಉತ್ತರಪ್ರದೇಶದ ಸಿಎಂ ಆಗಿರುವ, ಬಿಜೆಪಿ ಸಂಸದರಾಗಿದ್ದ ಯೋಗಿ ಆದಿತ್ಯನಾಥ ನೇತೃತ್ವದ ಸಂಸದರ ವೇತನ ಮತ್ತು ಭತ್ಯೆಗಳ ಜಂಟಿ ಸಮಿತಿ ಈಗ ತಿಂಗಳಿಗೆ 50 ಸಾವಿರ ರೂ. ಇರುವ ಮೂಲ ವೇತನವನ್ನು 1 ಲಕ್ಷಕ್ಕೆ ರೂ.ಗಳಿಗೆ ಏರಿಸಬೇಕೆಂದು 2016ರಲ್ಲಿ ಶಿಫಾರಸು ಮಾಡಿತ್ತು.

    ಸಂಸದರ ಕ್ಷೇತ್ರ ಭತ್ಯೆಯು 45 ಸಾವಿರ ರೂ.ನಿಂದ 90 ಸಾವಿರ ರೂ.ಗೆ. ಸಹಾಯಕರು ಮತ್ತು ಕಚೇರಿ ಭತ್ಯೆಯು 45 ಸಾವಿರ ರೂ.ನಿಂದ 90 ಸಾವಿರ ರೂ.ಗಳಿಗೆ ಹೆಚ್ಚಳ ಮಾಡುಬೇಕು. ಮಾಜಿ ಸಂಸದರ ಮಾಸಿಕ ಪಿಂಚಣಿ 20 ಸಾವಿರ ರೂ. ನಿಂದ 35 ಸಾವಿರ ರೂ.ಗಳಿಗೆ ಏರಿಸುವಂತೆ ಸಮಿತಿ ಶಿಫಾರಸು ಮಾಡಿತ್ತು.

     

  • ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಜಯ: ಬೇಡಿಕೆಗೆ ಮಣಿದ ಸರ್ಕಾರ

    ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಜಯ: ಬೇಡಿಕೆಗೆ ಮಣಿದ ಸರ್ಕಾರ

    ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನ ರಸ್ತೆಗಳಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದ ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.

    ಬಜೆಟ್‍ನಲ್ಲಿ ಕಾರ್ಯಕರ್ತೆಯರಿಗೆ 1 ಸಾವಿರ ಗೌರವ ಧನ ಹೆಚ್ಚಿಸಿದ್ದ ಸರ್ಕಾರ, ಇದೀಗ ಮತ್ತೆ 1 ಸಾವಿರ ರೂ ಗೌರವ ಧನ ಹೆಚ್ಚಳ ಮಾಡಿದೆ. ಅಂಗನವಾಡಿ ಸಹಾಯಕಿಯರಿಗೆ ಮತ್ತೆ 500 ಗೌರವಧನ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 8000 ಸಾವಿರ ಗೌರವಧನ ಸಿಕ್ಕಿದರೆ, ಸಹಾಯಕಿಯರಿಗೆ 4 ಸಾವಿರ ರೂ. ಸಿಗಲಿದೆ.

    ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ನಿರ್ಧಾರಕ್ಕೆ ಸಂಘಟನೆಗಳು ಒಪ್ಪಿಕೊಂಡಿದೆ. ಹತ್ತು ಸಾವಿರಕ್ಕೆ ಅವ್ರು ಬೇಡಿಕೆ ಇಟ್ಟಿದ್ರು. ಆದ್ರೆ ಅಷ್ಟೊಂದು ಆಗಲ್ಲ ಎಂದು ಸಭೆಯಲ್ಲಿ ಹೇಳಿದ್ದೇವೆ. ಮುಂದಿನ ಬಜೆಟ್ ನಲ್ಲಿ ಮತ್ತೆ ಗೌರವ ಧನ ಹೆಚ್ಚಳ ಮಾಡಬೇಕು ಎಂದು ಕೇಳಬಾರದು ಎಂದು ಹೇಳಿದ್ದೇವೆ. ಸರ್ಕಾರದ ತೀರ್ಮಾನವನ್ನ ಅವ್ರು ಸ್ವಾಗತಿಸಿದ್ದಾರೆ ಎಂದರು.

    ಇದೇ ವೇಳೆ ಮಾತನಾಡಿದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ, ಸರ್ಕಾರ ಸಕಾರಾತ್ಮಕ ನಿರ್ಧಾರ ಕೈಗೊಂಡಿದೆ. ಅಂಗನವಾಡಿಯಲ್ಲಿ ಎಲ್‍ಕೆಜಿ, ಯುಕೆಜಿ ಪ್ರಾರಂಭದ ಬೇಡಿಕೆಯನ್ನು ಇಟ್ಟಿದ್ವಿ, ಸರ್ವಿಸ್ ರೂಲ್ಸ್ ಗೆ  ಸಮಿತಿ ರಚನೆಗೆ ಒಪ್ಪಿಗೆ ನೀಡಲಾಗಿದೆ. ಹೋರಾಟದಲ್ಲಿ ಶೇ. 50 ರಷ್ಟು ಸಫಲರಾಗಿದ್ದೀವಿ ಎಂದು ತಿಳಿಸಿದರು.

    ಕೇಂದ್ರ ಮಾಡಲಿ:
    ಸಂಬಳ ಹೆಚ್ಚಳ ಮಾಡಿದ ಬಳಿಕ ಟ್ವಿಟ್ಟರ್‍ನಲ್ಲಿ ರಾಜ್ಯ ಸರ್ಕಾರ ಈ ಬಾರಿ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ರೂ. ಸಹಾಯಕಿಯರಿಗೆ 1 ಸಾವಿರ ರೂ. ಸಂಬಳವನ್ನು ಹೆಚ್ಚಳ ಮಾಡಿದ್ದೇವೆ. ಇದೇ ರೀತಿ ನೀವು ಸಂಬಳವನ್ನು ಏರಿಸಿ ಎಂದು ಪ್ರಧಾನಿ ಮೋದಿ ಅವರಲ್ಲಿ  ಮನವಿ ಮಾಡಿದ್ದಾರೆ.

    ಮಾರ್ಚ್ 20ರಂದು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 4 ದಿನಗಳ ಕಾಲ ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಕಾರ್ಯಕರ್ತೆಯರ ಜೊತೆ ಮಾತುಕತೆ ನಡೆಸಿದ್ದ ಸರ್ಕಾರ, ಈಗ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಚುನಾವಣೆ ಮುಗಿದ ಬಳಿಕ ಏಪ್ರಿಲ್ 10 ರಂದು ಸಭೆ ನಡೆಸಿ ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿತ್ತು.

    ಕಾರ್ಯಕರ್ತೆಯರ ಬೇಡಿಕೆ ಏನಿತ್ತು?
    ರಾಜ್ಯದಲ್ಲಿ ಒಟ್ಟು 1.25 ಲಕ್ಷ ಅಂಗನವಾಡಿ ಸಿಬ್ಬಂದಿ ಇದ್ದು, ವೇತನ 7 ಸಾವಿರದಿಂದ 10 ಸಾವಿರ ರೂ. ಹೆಚ್ಚಳ ಮಾಡಬೇಕು. ಸಹಾಯಕಿಯರ ವೇತನ 3,500 ರಿಂದ 7,500 ರೂ. ಹೆಚ್ಚಳ ವಾಗಬೇಕು. ಸಹಾಯಕಿಯರಿಗೆ ಮುಂಬಡ್ತಿ, ಪಿಂಚಣಿ, ಪಿಎಫ್ ಸೌಲಭ್ಯ ನೀಡಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು.

    ಯಾರ ಪಾಲು ಎಷ್ಟು?
    ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಸಚಿವೆ ಉಮಾಶ್ರೀ ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

    ಪ್ರತಿಭಟನೆ ಯಾಕೆ?
    ಇಲ್ಲಿಯವರೆಗೆ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 6 ಸಾವಿರ ಮತ್ತು ಸಹಾಯಕಿಯರಿಗೆ 3 ಸಾವಿರ ರೂ. ಸಂಬಳ ಸಿಗುತಿತ್ತು. ಈ ವರ್ಷದ ಬಜೆಟ್‍ನಲ್ಲಿ ಸರ್ಕಾರ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಮತ್ತು ಸಹಾಯಕಿಯರಿಗೆ 500 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಈ ಹೆಚ್ಚಳ ನಮಗೆ ಸಾಲುವುದಿಲ್ಲ. ಹತ್ತಿರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸರ್ಕಾರಗಳು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಸಹಾಯಕಿಯರಿಗೆ 7,500 ರೂ. ನೀಡುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರವೂ ನಮಗೆ ಇಷ್ಟೇ ಸಂಬಳ ನೀಡಬೇಕೆಂದು ಆಗ್ರಹಿಸಿ ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

    width=”800″ height=”650″ />

  • ಐಪಿಎಲ್ ಮ್ಯಾಚ್‍ಗಳಲ್ಲಿ ಅಂಪೈರ್‍ಗಳಿಗೆ ಎಷ್ಟು ಸಂಬಳ ಸಿಗುತ್ತೆ? ಇಲ್ಲಿದೆ ಮಾಹಿತಿ

    ಐಪಿಎಲ್ ಮ್ಯಾಚ್‍ಗಳಲ್ಲಿ ಅಂಪೈರ್‍ಗಳಿಗೆ ಎಷ್ಟು ಸಂಬಳ ಸಿಗುತ್ತೆ? ಇಲ್ಲಿದೆ ಮಾಹಿತಿ

    ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ (ಐಪಿಎಲ್) ಹಣದ ಹೊಳೆ ಹರಿಯುವುದು ನಿಮಗೆ ಗೊತ್ತೆ ಇರುವ ವಿಚಾರ. ಆಟಗಾರರು ಕೋಟಿಗಟ್ಟಲೇ ಹಣಕ್ಕೆ ಸೇಲ್ ಆದರೆ ಅಂಪೈರ್‍ಗಳಿಗೂ ಲಕ್ಷಗಟ್ಟಲೇ ಹಣ ಸಂಬಳ ರೂಪದಲ್ಲಿ ಸಿಗುತ್ತಿದೆ.

    2016ರಲ್ಲಿ ಸಿ.ಕೆ.ನಂದನ್, ಅನಿಲ್ ಚೌಧರಿ ಮತ್ತು ಸಿ.ಸಂಶುದ್ದೀನ್ ಐಪಿಎಲ್ ಪಂದ್ಯಗಳ ಅಂಪೈರ್‍ಗಳಾಗಿ ಕಾರ್ಯನಿರ್ವಹಿಸಿದ್ದು ಇವರು ಹತ್ತಿರ ಹತ್ತಿರ ಒಟ್ಟು 40 ಲಕ್ಷ ರೂ. ಸಂಬಳವನ್ನು ಪಡೆದಿದ್ದಾರೆ.

    2016 ರಲ್ಲಿ ಅನಿಲ್ ಚೌಧರಿ ಅವರು ಸರಿಸುಮಾರು 39.63 ಲಕ್ಷ ಸಂಭಾವನೆಯನ್ನು ಪಡೆದಿದ್ದರೆ, ನಂದನ್ ಸಂಶುದ್ದೀನ್ ಕೂಡ ಸರಿ ಸುಮಾರು 40.83 ಲಕ್ಷ ರೂ. ಸಂಬಳವನ್ನು ಐಪಿಎಲ್‍ನಿಂದ ಪಡೆದಿದ್ದರು.

    ರೆಫ್ರಿಗಳಿಗೂ ಐಪಿಎಲ್ ಒಳ್ಳೆಯ ಸಂಭಾವನೆಯನ್ನ ನೀಡುತ್ತಿದೆ. ಜಾವಗಲ್ ಶ್ರೀನಾಥ್ ಹಲವು ವರ್ಷಗಳಿಂದ ಮ್ಯಾಚ್ ರೆಫ್ರಿಯಾಗಿದ್ದು, ಐಪಿಎಲ್ ನಿಂದ ಬರೋಬ್ಬರಿ 26.42 ಲಕ್ಷ ರೂ. ಸಂಬಳವನ್ನು ಪಡೆದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಶ್ರೀನಾಥ್ ಅವರನ್ನು ಹತ್ತು ವರ್ಷಗಳ ಹಿಂದೆ ಮ್ಯಾಚ್ ರೆಫ್ರಿಯಾಗಿ ನೇಮಕ ಮಾಡಿಕೊಂಡಿತ್ತು. ಇದೂವರೆಗೂ 24 ಟೆಸ್ಟ್, 122 ಅಂತರಾಷ್ಟ್ರೀಯ ಏಕದಿನ ಮತ್ತು 25 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ಶ್ರೀನಾಥ್ ಮ್ಯಾಚ್ ರೆಫ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮತ್ತೊಬ್ಬ ಅಂಪೈರ್ ಕೆ.ಎನ್. ಅನಂತಪದ್ಮನಾಭನ್ ಅವರಿಗೆ 26.65 ಲಕ್ಷ ರೂ.ಸಂಬಳವನ್ನು ಬಿಸಿಸಿಐ ನೀಡಿದೆ.

    ಇದನ್ನೂ ಓದಿ: ಟೀಂ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‍ಗೆ 15 ಲಕ್ಷ ರೂ. ಸಂಬಳ!

    ದೆಹಲಿ ಮೂಲದವರಾದ ಅನಿಲ್ ಚೌಧರಿ ವಿಶ್ವ ಕ್ರಿಕೆಟ್‍ನ ಅಂಪೈರ್‍ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅನಿಲ್ ಈಗಾಗಲೇ 39 ಐಪಿಎಲ್ ಮ್ಯಾಚ್‍ಗಳಿಗೆ ನಿರ್ಣಾಯಕರಾಗಿ ಕೆಲಸ ಮಾಡಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 17 ಏಕದಿನ ಪಂದ್ಯಗಳು ಮತ್ತು 16 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ಅಂಪೈರಾಗಿ ಕೆಲಸ ಮಾಡಿದ್ದಾರೆ.

    ಸಿ.ಕೆ.ನಂದನ್ ಇವರು ಹುಟ್ಟಿದ್ದು ದೆಹಲಿ ಆದರೆ ರಣಜಿ ಕ್ರಿಕೆಟ್‍ನಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಆಡಿದ್ದಾರೆ. ನಂದನ್ 6 ಅಂತರಾಷ್ಟ್ರೀಯ ಏಕದಿನ ಪಂದ್ಯಗಳು ಮತ್ತು 7 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ನಿರ್ಣಾಯಕರಾಗಿದ್ದರು.

    ಹೈದರಾಬಾದ್ ನಿವಾಸಿಯಾಗಿರುವ ಸಿ.ಸಂಶುದ್ದೀನ್ ಇದೂವರೆಗೂ 17 ಅಂತರಾಷ್ಟ್ರೀಯ ಏಕದಿನ ಪಂದ್ಯ ಮತ್ತು 11 ಟಿ-20 ಪಂದ್ಯಗಳಿಗೆ ನಿರ್ಣಾಯಕರಾಗಿ ಕೆಲಸ ಮಾಡಿರುವ ಅನುಭವವಿದೆ.

    ಇದನ್ನೂ ಓದಿ: ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?

  • ಸ್ಟಾರ್ಟ್‌ಅಪ್‌ ಕಂಪೆನಿಗಳಲ್ಲಿ ಟೆಕ್ಕಿಗಳಿಗೆ ವಿಶ್ವದಲ್ಲೇ ಬೆಂಗಳೂರಿನಲ್ಲಿ ಕಡಿಮೆ ಸಂಬಳ: ಯಾವ ನಗರದಲ್ಲಿ ಎಷ್ಟು ಸಂಬಳ?

    ಸ್ಟಾರ್ಟ್‌ಅಪ್‌ ಕಂಪೆನಿಗಳಲ್ಲಿ ಟೆಕ್ಕಿಗಳಿಗೆ ವಿಶ್ವದಲ್ಲೇ ಬೆಂಗಳೂರಿನಲ್ಲಿ ಕಡಿಮೆ ಸಂಬಳ: ಯಾವ ನಗರದಲ್ಲಿ ಎಷ್ಟು ಸಂಬಳ?

    ಬೆಂಗಳೂರು:ಸ್ಟಾರ್ಟ್‌ಅಪ್‌ ಕಂಪೆನಿಗಳಲ್ಲಿ ವಾರ್ಷಿಕವಾಗಿ ವಿಶ್ವದಲ್ಲೇ ಅತಿ ಕಡಿಮೆ ಸಂಬಳವನ್ನು ಬೆಂಗಳೂರಿನ ಸಾಫ್ಟ್ ವೇರ್ ಎಂಜಿನಿಯರ್‍ಗಳು ಪಡೆಯುತ್ತಿದ್ದಾರೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.

    2017ರ ಜಾಗತಿಕ ಸ್ಟಾರ್ಟ್‌ಅಪ್‌ ಎಕೋಸಿಸ್ಟಮ್ ವರದಿಯನ್ನು  startupgenome.com ಬಿಡುಗಡೆ ಮಾಡಿದ್ದು ಟಾಪ್ 20 ನಗರಗಳ ಪಟ್ಟಿಯಲ್ಲಿ 20ನೇ ಸ್ಥಾನವನ್ನು ಬೆಂಗಳೂರು ಪಡೆದುಕೊಂಡಿದೆ. ಬೆಂಗಳೂರಿನ ಸಂಸ್ಥೆಗಳಲ್ಲಿ ಸಾಫ್ಟ್ ವೇರ್ ಎಂಜಿನಿಯರ್‍ಗಳು ವಾರ್ಷಿಕ 8600 ಡಾಲರ್(ಅಂದಾಜು 5.6 ಲಕ್ಷ) ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.

    ಕ್ಯಾಲಿಫೋರ್ನಿಯಾದ  ಸಿಲಿಕಾನ್ ವ್ಯಾಲಿಯಲ್ಲಿ ಅತಿ ಹೆಚ್ಚು ಸಂಬಳ ಸಿಗುತ್ತಿದ್ದು, ಅಲ್ಲಿ 1,12,000 ಡಾಲರ್( ಅಂದಾಜು 72.9 ಲಕ್ಷ ರೂ.) ಸಂಬಳವನ್ನು ಟೆಕ್ಕಿಗಳು ಪಡೆಯುತ್ತಿದ್ದಾರೆ. ಬೆಂಗಳೂರಿನ ಸಂಬಳಕ್ಕೆ ಹೋಲಿಸಿದರೆ 13 ಪಟ್ಟು ಹೆಚ್ಚು ಸಂಬಳ ಇಲ್ಲಿ ಉದ್ಯೋಗ ಮಾಡುತ್ತಿರುವ ಟೆಕ್ಕಿಗಳಿಗೆ ಸಿಗುತ್ತಿದೆ.

    ಬೆಂಗಳೂರಿನಲ್ಲಿ ಕಡಿಮೆ ಸಂಬಳಕ್ಕೆ ಸಾಫ್ಟ್ ವೇರ್ ಎಂಜಿನಿಯರ್‍ಗಳು ಸಿಗುವ ಕಾರಣ ಇಲ್ಲಿ ಬಹುತೇಕ ಸ್ಟಾರ್ಟ್‌ಅಪ್‌ಗಳು ಕಾರ್ಯನಿರ್ವಹಿಸುತ್ತದೆ ಎಂದು ಅಧ್ಯಯನ ತಿಳಿಸಿದೆ. ಮಾರುಕಟ್ಟೆ ವ್ಯಾಪ್ತಿ, ಪ್ರತಿಭೆ, ಸ್ಟಾರ್ಟ್‌ಅಪ್‌ ಅನುಭವ, ಕಾರ್ಯನಿರ್ವಹಣೆ, ಬಂಡವಾಳ ಆಧಾರದ ಮೇಲೆ ಈ ಸ್ಟಾರ್ಟ್ ಅಪ್ ವರದಿಯನ್ನು ತಯಾರಿಸಲಾಗಿದೆ.

    ಪ್ರಸ್ತುತ ಬೆಂಗಳೂರಿನಲ್ಲಿ ಅಂದಾಜು 1,800 ರಿಂದ 2,300 ಸ್ಟಾರ್ಟ್ ಅಪ್‍ಗಳು ಕಾರ್ಯನಿರ್ವಹಿಸುತ್ತಿದೆ ಎಂದು ಅಧ್ಯಯನ ತಿಳಿಸಿದೆ.

    ಇದನ್ನೂ ಓದಿ: ಟೀಂ ಇಂಡಿಯಾದಲ್ಲಿ ಯಾರಿಗೆ ಎಷ್ಟು ಸಂಬಳ? ಕೋಚ್ ಗಳಿಗೆ ಎಷ್ಟು ಸಿಗುತ್ತೆ?

    ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ 7 ಸಾವಿರ ಸಂಬಳ: ಯಾರ ಪಾಲು ಎಷ್ಟು? ಬೇರೆ ರಾಜ್ಯದಲ್ಲಿ ಎಷ್ಟಿದೆ?

    ಬೆಂಗಳೂರಿನ ವರದಿ

    ಅಧ್ಯಯನ ವರದಿಯ ಸಂಪೂರ್ಣ ಕಾಪಿಯನ್ನು ಓದಲು ಕ್ಲಿಕ್ ಮಾಡಿ: startupgenome.com

     

  • ಟೀಂ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‍ಗೆ 15 ಲಕ್ಷ ರೂ. ಸಂಬಳ!

    ಟೀಂ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‍ಗೆ 15 ಲಕ್ಷ ರೂ. ಸಂಬಳ!

    ಮುಂಬೈ: ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರು ಮತ್ತು ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರಿಗೆ ಪ್ರತಿ ತಿಂಗಳು 15 ಲಕ್ಷ ರೂ. ಸಂಬಳವನ್ನು ಬಿಸಿಸಿಐ ನಿಗದಿ ಮಾಡಿದೆ.

    ಇಲ್ಲಿಯವರೆಗೆ ಬಂಗಾರು ಮತ್ತು ಶ್ರೀಧರ್ ಅವರಿಗೆ ಪ್ರತಿ ತಿಂಗಳು 10 ಲಕ್ಷ(ಇಂಡಿಯನ್ ಪ್ರೀಮಿಯರ್ ಲೀಗ್‍ನ 2 ತಿಂಗಳು ಹೊರತು ಪಡಿಸಿ 10 ತಿಂಗಳ ಕಾಲ, ಒಂದು ವರ್ಷಕ್ಕೆ 1 ಕೋಟಿ)ರೂ. ಸಂಬಳವನ್ನು ಪಡೆಯುತ್ತಿದ್ದರು.

    ಎರಡು ವರ್ಷಗಳ ಕಾಲ ಹಿರಿಯರ ತಂಡದ ಜೊತೆ ಇದ್ದ ಇವರು ಸಂಬಳವನ್ನು ಹೆಚ್ಚಳ ಮಾಡುವಂತೆ ಈ ಹಿಂದೆಯೇ ಮನವಿ ಸಲ್ಲಿಸಿದ್ದರು. ಆದರೆ ಈಗ ಈ ಮನವಿ ಪುರಸ್ಕೃತವಾಗಿದ್ದು ಶೇ.50 ರಷ್ಟು ಸಂಬಳ ಏರಿಕೆಯಾಗಿದೆ.

    ಈ ಹಿಂದೆ ಇದ್ದ ಬಿಸಿಸಿಐ ಆಡಳಿತ ಮಂಡಳಿ ಶೇ.100 ರಷ್ಟು ಸಂಬಳ ಏರಿಕೆಯ ಪ್ರಸ್ತಾಪನ್ನು ಒಪ್ಪಿತ್ತು. ಆದರೆ ಕಳೆದ ತಿಂಗಳು ಶೇ.25ರಷ್ಟು ಸಂಬಳ ಏರಿಸಲು ಬಿಸಿಸಿಐ ನಿರ್ಧರಿಸಿತ್ತು. ಬಿಸಿಸಿಐ ಈ ನಿರ್ಧಾರಕ್ಕೆ ಸಿಬ್ಬಂದಿಯಿಂದ ವಿರೋಧ ವ್ಯಕ್ತವಾಗಿತ್ತು. ಈಗ ಕೋಚ್ ಅನಿಲ್ ಕುಂಬ್ಳೆ ಸುಪ್ರೀಂ ನೇಮಿಸಿದ್ದ ಆಡಳಿತ ಸಮಿತಿಯ ಜೊತೆ ಸಭೆ ನಡೆಸಿ ಶೇ.50ರಷ್ಟು ಸಂಬಳವನ್ನು ಏರಿಸಿದ್ದಾರೆ.

    ಬುಧವಾರ ಆಟಗಾರರ ಸಂಭಾವನೆ ಮತ್ತು ಪಂದ್ಯದ ಶುಲ್ಕವನ್ನು ಆಡಳಿತ ಮಂಡಳಿ ದುಪ್ಟಟ್ಟು ಮಾಡಿತ್ತು. 2016ರ ಅಕ್ಟೋಬರ್ 1ರಿಂದ ಪರಿಷ್ಕೃತ ಸಂಭಾವನೆ ಮತ್ತು ಶುಲ್ಕ ಜಾರಿಗೆ ಬರಲಿದೆ.

    ಎಷ್ಟಿತ್ತು? ಈಗ ಎಷ್ಟು ಆಗಿದೆ?
    `ಎ’ ದರ್ಜೆಯಲ್ಲಿರುವ ಆಟಗಾರರು ಈ ಮೊದಲು ಕೋಟಿ ರೂ. ಪಡೆಯುತ್ತಿದ್ದರೆ ಈU ಆ ಮೊತ್ತವು 2 ಕೋಟಿ ರೂ.ಗೆ ಏರಿಕೆಯಾಗಿದೆ. ಬಿ ದರ್ಜೆ ಮತ್ತು ಸಿ ದರ್ಜೆಗಳ ಆಟಗಾರರು ಕ್ರಮವಾಗಿ 50 ಲಕ್ಷ ರೂ. ಮತ್ತು 25 ಲಕ್ಷ ರೂ. ಪಡೆಯುತ್ತಿದ್ದರು. ಅವರು ಇನ್ನು ಮುಂದೆ ಕ್ರಮವಾಗಿ 1 ಕೋಟಿ ರೂ. ಮತ್ತು 50 ಲಕ್ಷ ರೂ. ಹಣವನ್ನು ಪಡೆಯಲಿದ್ದಾರೆ.

    ಟೆಸ್ಟ್ ಪಂದ್ಯದಲ್ಲಿ ಆಡುವ ಆಟಗಾರರು ಶುಲ್ಕವನ್ನು 7.50 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಿಸಲಾಗಿದ್ದರೆ, ಏಕದಿನ ಮತ್ತು ಟ್ವೆಂಟಿ 20 ಪಂದ್ಯಗಳಲ್ಲಿ ಆಡುವವರ ಶುಲ್ಕವನ್ನು ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

    ಎ ದರ್ಜೆ:
    ವಿರಾಟ್ ಕೊಹ್ಲಿ, ಮಹೇಂದ್ರಸಿಂಗ್ ಧೋನಿ, ಆರ್. ಆಶ್ವಿನ್, ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ರವೀಂದ್ರ ಜಡೇಜ, ಮುರಳಿ ವಿಜಯ್.

    ಬಿ ದರ್ಜೆ:
    ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ವೃದ್ಧಿಮಾನ್ ಸಹಾ, ಜಸ್‍ಪ್ರೀತ್ ಬೂಮ್ರಾ, ಯುವರಾಜ್ ಸಿಂಗ್.

    ಸಿ ದರ್ಜೆ :
    ಶಿಖರ್ ಧವನ್, ಅಂಬಟಿ ರಾಯುಡು, ಅಮಿತ್ ಮಿಶ್ರಾ, ಕೇದಾರ್ ಜಾಧವ್, ಯಜುವೇಂದ್ರ ಚಾಹಲ್, ಪಾರ್ಥಿವ್ ಪಟೇಲ್, ಜಯಂತ್ ಯಾದವ್, ಮನೀಷ್ ಪಾಂಡೆ, ಅಕ್ಷರ್ ಪಟೇಲ್, ಕರುಣ್ ನಾಯರ್, ಹಾರ್ದಿಕ್ ಪಾಂಡ್ಯ, ಆಶಿಶ್ ನೆಹ್ರಾ, ಮನದೀಪ್ ಸಿಂಗ್, ಧವಳ್ ಕುಲಕರ್ಣಿ, ಶಾರ್ದೂಲ್ ಠಾಕೂರ್, ರಿಷಭ್ ಪಂತ್.

  • ಸಂಧಾನ ಸಕ್ಸಸ್: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್

    ಸಂಧಾನ ಸಕ್ಸಸ್: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್

    ಬೆಂಗಳೂರು: ಕಳೆದ 4 ದಿನಗಳಿಂದ ನಗರದ ಫ್ರೀಡಂ ಪಾರ್ಕಿನಲ್ಲಿ ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಸರ್ಕಾರದ ಭರವಸೆಯ ಮೇರೆಗೆ ಅಂಗನವಾಡಿ ಕಾರ್ಯಕರ್ತೆಯರು ವಾಪಸ್ ಪಡೆದುಕೊಂಡಿದ್ದಾರೆ.

    ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಪ್ರತಿಭಟನಾ ನಿರತರು ಹೋರಾಟವನ್ನು ಕೈಬಿಟ್ಟಿದ್ದಾರೆ. ಸ್ಥಳದಲ್ಲಿ ಮಾತನಾಡಿದ ಉಮಾಶ್ರೀ, ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಏಪ್ರಿಲ್ ರಂದು 10 ರಂದು ಸಭೆ ನಡೆಸಲಾಗುವುದು. ವೇತನ ಸೇರಿದಂತೆ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಹೇಳಿದ್ದಾರೆ. ನಾವು ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಸರ್ಕಾರದ ಮೇಲೆ ವಿಶ್ವಾಸವಿಡಿ ಎಂದು ಹೇಳಿದರು.

    ಗೌರವಧನ ಹೆಚ್ಚಳಕ್ಕಾಗಿ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ತೀವ್ರಗೊಳಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಹಾಗೂ ಇತರ ಮುಖಂಡರನ್ನು ಸಿಎಂ ಗೃಹ ಕಚೇರಿಗೆ ಕರೆದೊಯ್ದಿದ್ದರು.

    ಅಂಗನವಾಡಿ ನೌಕರರ ಪರವಾಗಿ ಗೀತಸಾಹಿತಿ ವಿ.ನಾಗೇಂದ್ರ ಪ್ರಸಾದ್ ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಹಾಕಿ ಬೆಂಬಲ ವ್ಯಕ್ತಪಡಿಸಿದ್ದರು.

    ನರ ಹರಿಯೆಕೂಗಿದರೂ ಮೊರೆ ಕೇಳದೇ ನರಹರಿಯೇ?
    ಬಾಲವಾಡಿಯ ತಾಯಿ ಬಾಗಿಲು ಬಡಿದು ಹೈರಾಣಾಗಿ ಬೀದಿಯಲ್ಲಿ ಮಲಗಿದ್ದಾಳೆ.
    ಅವಳಿಗೆ ಗೊತ್ತಿಲ್ಲ ನಿಮ್ಮ ಬಜೆಟ್ಟು…ಲೆಕ್ಕಾಚಾರ
    ಗೊತ್ತಿರುವುದು ಸ್ಲೇಟು ಮತ್ತು ಅಕ್ಷರ
    ಅವರು ಕೇಳುತ್ತಿರುವುದು ದಿನಕ್ಕೆ 500ರೂಪಾಯಿ.

    ಇಡೀ ಮಂತ್ರಿ ಮಂಡಲ ಒಂದುದಿನ ಗೂಟದ ಕಾರು ನಿಲ್ಲಿಸಿದರೆ ಉಳಿಯುವ ಹಣದಲ್ಲಿ ಒಂದುವರ್ಷ ಆ ತಾಯಂದಿರ ಸಂಬಳ ಕೊಡಬಹುದು.

    ಸಂಯಮದ ಸಮಯ ಮೀರಿ ಹೋಗಿದೆ.. “ಹೆಣ್ಣು ಅಬಲೆ ಎಷ್ಟು ದಿನ ಧರಣಿ ಕೂರುತ್ತಾಳೆ ಬಿಡು” ಎಂಬ ನಿಮ್ಮ ಹಳೇ ಥಿಯರಿಗಳನ್ನು ಬಿಡಿ.
    ಜನ ಅವರ ಜೊತೆ ಇದ್ದಾರೆ. ಜನರ ಜೊತೆ ನೀವೂ ಇದ್ದರೆ ಕ್ಷೇಮ.

    ಕಾರ್ಯಕರ್ತೆಯರ ಬೇಡಿಕೆ ಏನಿತ್ತು?
    ರಾಜ್ಯದಲ್ಲಿ ಒಟ್ಟು 1.25 ಲಕ್ಷ ಅಂಗನವಾಡಿ ಸಿಬ್ಬಂದಿ ಇದ್ದು, ವೇತನ 7 ಸಾವಿರದಿಂದ 10 ಸಾವಿರ ರೂ. ಹೆಚ್ಚಳ ಮಾಡಬೇಕು. ಸಹಾಯಕಿಯರ ವೇತನ 3,500 ರಿಂದ 7,500 ರೂ. ಹೆಚ್ಚಳ ವಾಗಬೇಕು. ಸಹಾಯಕಿಯರಿಗೆ ಮುಂಬಡ್ತಿ, ಪಿಂಚಣಿ, ಪಿಎಫ್ ಸೌಲಭ್ಯ ನೀಡಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು.

    ಯಾರ ಪಾಲು ಎಷ್ಟು?
    ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಸಚಿವೆ ಉಮಾಶ್ರೀ ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

    ಪ್ರತಿಭಟನೆ ಯಾಕೆ?
    ಇಲ್ಲಿಯವರೆಗೆ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 6 ಸಾವಿರ ಮತ್ತು ಸಹಾಯಕಿಯರಿಗೆ 3 ಸಾವಿರ ರೂ. ಸಂಬಳ ಸಿಗುತಿತ್ತು. ಈ ವರ್ಷದ ಬಜೆಟ್‍ನಲ್ಲಿ ಸರ್ಕಾರ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಮತ್ತು ಸಹಾಯಕಿಯರಿಗೆ 500 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಈ ಹೆಚ್ಚಳ ನಮಗೆ ಸಾಲುವುದಿಲ್ಲ. ಹತ್ತಿರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸರ್ಕಾರಗಳು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಸಹಾಯಕಿಯರಿಗೆ 7,500 ರೂ. ನೀಡುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರವೂ ನಮಗೆ ಇಷ್ಟೇ ಸಂಬಳ ನೀಡಬೇಕೆಂದು ಆಗ್ರಹಿಸಿ ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

  • ಅಂಗನವಾಡಿ ಕಾರ್ಯಕರ್ತೆಯರಿಗೆ 7 ಸಾವಿರ ಸಂಬಳ: ಯಾರ ಪಾಲು ಎಷ್ಟು? ಬೇರೆ ರಾಜ್ಯದಲ್ಲಿ ಎಷ್ಟಿದೆ?

    ಅಂಗನವಾಡಿ ಕಾರ್ಯಕರ್ತೆಯರಿಗೆ 7 ಸಾವಿರ ಸಂಬಳ: ಯಾರ ಪಾಲು ಎಷ್ಟು? ಬೇರೆ ರಾಜ್ಯದಲ್ಲಿ ಎಷ್ಟಿದೆ?

    ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಸಂಬಳ ಏರಿಕೆಗೆ ಆಗ್ರಹಿಸಿ ಬೀದಿಯಲ್ಲಿ ನಿಂತು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೆ, ಸರ್ಕಾರ ಸಮಸ್ಯೆಯನ್ನು ಬಗೆ ಹರಿಸುವ ಬದಲು ಕೇಂದ್ರ ಸರ್ಕಾರ ಅನುದಾನ ಕೊಡುತ್ತಿಲ್ಲ ಎನ್ನುವ ವಾದವನ್ನು ಮುಂದಿಟ್ಟಿದೆ.

    ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ನಿಯಮ 69ರ ಅಡಿ ಚರ್ಚೆ ಆರಂಭವಾಯಿತು. ಪ್ರತಿಪಕ್ಷದ ನಾಯಕರು ಸರ್ಕಾರ ನಡೆಯನ್ನು ಟೀಕಿಸಿ ವಾಗ್ದಾಳಿ ನಡೆಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಮಾತನಾಡಿ ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಸಚಿವೆ ಉಮಾಶ್ರೀ ಅಸಮಾಧಾನ ವ್ಯಕ್ತಪಡಿಸಿದರು.

    ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದಿರಾಗಾಂಧಿ ಕಾಲದಲ್ಲಿ ಗೌರವ ಧನ ಕೊಡಲು ಆರಂಭವಾಗಿದ್ದು, ಅಂದಿನಿಂದಲೂ ಕೇಂದ್ರ ಸರ್ಕಾರ ಶೇ.90 ರಷ್ಟು ಗೌರವಧನ ನೀಡುತ್ತಿದೆ. ಆದರೆ ಕೇಂದ್ರ ಸರ್ಕಾರ ಪಾಲು ಕಡಿತಗೊಳಿಸಿದ ಕಾರಣ ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಪ್ರತಿ ವರ್ಷ ನಾವು 500 ರೂ ಹೆಚ್ಚಳ ಮಾಡಿದ್ದೇವೆ. ಆದ್ರೆ 2016-17ರಲ್ಲಿ ಹೆಚ್ಚಳ ಮಾಡಿಲ್ಲ, ಅದು ಕೇಂದ್ರ ಸರ್ಕಾರದ ಕ್ರಮದಿಂದ ಆಗಿಲ್ಲ. ಬರೀ ಮಾತನಾಡಬಹುದು, ಕಾಳಜಿ ತೋರಿಸಬಹುದು.ಆದ್ರೆ ಕೇಂದ್ರ ಸರ್ಕಾರ ಪಾಲು ಕಡಿಮೆ ಮಾಡಿದ್ದು ಯಾಕೆ? ಇದು ಮಹಿಳಾ ಪರ ಕಾಳಜಿನಾ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು

    ಸಿಎಂ ಈ ರೀತಿ ಮಾತನ್ನು ಆಡಿದಾಗ ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಶಾಸಕ ಸಿಟಿ ರವಿ ಮಾತನಾಡಿ, ಹೆಚ್ಚಿನ ಹಣ ನೀಡಲು ನಿಮಗೇನು ಬಂದಿದೆ? ಗೋವಾ, ತಮಿಳುನಾಡಿನಲ್ಲಿ ಕೊಟ್ಟಿಲ್ವಾ ಎಂದು ಮರು ಪ್ರಶ್ನೆ ಹಾಕಿದರು.

    ಈ ವೇಳೇ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕಾಂಗ್ರೆಸ್ ಶಾಸಕರು ‘ಶೇಮ್ ಶೇಮ್’ ಎಂದು ಘೋಷಣೆ ಕೂಗಿದರೆ, ಸದನದ ಬಾವಿಗಿಳಿದು ಬಿಜೆಪಿ, ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಬಿಜೆಪಿ ಅವರದ್ದು ಭಂಡತನದ ಪರಮಾವಧಿ ಎಂದು ಸಿಎಂ ಹೇಳುತ್ತಿದ್ದಂತೆ ಪ್ರತಿಭಟನೆ ಜೋರಾಗಿ ಕೊನೆಗೆ ಸ್ಪೀಕರ್ ಸದನವನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

    ಹೊರೆಯಾಗಲ್ಲ: ಜಗದೀಶ್ ಶೆಟ್ಟರ್ ಮಾತನಾಡಿ, ಹಿಂದೆ ನಾನು ಸಿಎಂ ಆಗಿದ್ದಾಗ ದಿನಗೂಲಿ ನೌಕರರ ಖಾಯಂ ಮಾಡಿದ್ದೇನೆ. ಕೆಳಹಂತದ ನೌಕರರ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಪೌರ ಕಾರ್ಮಿಕರನ್ನು ಖಾಯಂ ಮಾಡಿ. ಅದಕ್ಕೆ ಸಂಬಂಧಿಸಿದ ಯಾವುದೇ ಬಿಲ್ ತಂದ್ರೂ ಬೆಂಬಲಿಸುತ್ತೇವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಟ 10,000 ರೂ ವೇತನ ನಿಗದಿ ಪಡಿಸಿ. ಹೆಣ್ಣುಮಕ್ಕಳು ಕಣ್ಣೀರು ಹಾಕಿ ಶಾಪ ಹಾಕಿದ್ರೆ ಸರ್ಕಾರಕ್ಕೆ ಒಳ್ಳೆಯದಾಗುವುದಿಲ್ಲ. ನಿನ್ನೆ ಇಡೀ ರಾತ್ರಿ ಬೀದಿಯಲ್ಲಿ ಮಹಿಳೆಯರು ಮಲಗಿದ್ದಾರೆ. ಸಂಬಳ ಏರಿಕೆ ಮಾಡಿದರೆ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುವುದಿಲ್ಲ ಎಂದರು.

    ಶೀಘ್ರವೇ ಸ್ಪಂದಿಸಿ: ಯಾವುದೇ ಒಂದು ಸಮುದಾಯದವರು ಮಾತ್ರ ಕಾರ್ಯ ನಿರ್ವಹಿಸುತ್ತಿಲ್ಲ. ಎಲ್ಲ ಸಮುದಾಯಕ್ಕೆ ಸೇರಿದವರು ಅಂಗನವಾಡಿ ಕಾರ್ಯಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತರ ಮನವಿಗೆ ಸರ್ಕಾರ ಸ್ಪಂದಿಸಲೇಬೇಕು. ಕನಿಷ್ಠ ವೇತನ ಹತ್ತು ಸಾವಿರ ಕೇಳ್ತಿದ್ದಾರೆ ಇದ್ರಲ್ಲಿ ನ್ಯಾಯ ಇದೆ ಎಂದು ಎಚ್‍ಡಿ ಕುಮಾರಸ್ವಾಮಿ ಹೇಳಿದರು.

    ಕಾರ್ಯಕರ್ತೆಯರ ಬೇಡಿಕೆ ಏನು?
    ರಾಜ್ಯದಲ್ಲಿ ಒಟ್ಟು 1.25 ಲಕ್ಷ ಅಂಗನವಾಡಿ ಸಿಬ್ಬಂದಿ ಇದ್ದು, ವೇತನ 7 ಸಾವಿರದಿಂದ 10 ಸಾವಿರ ರೂ. ಹೆಚ್ಚಳ ಮಾಡಬೇಕು. ಸಹಾಯಕಿಯರ ವೇತನ 3,500 ರಿಂದ 7,500 ರೂ. ಹೆಚ್ಚಳ ವಾಗಬೇಕು. ಸಹಾಯಕಿಯರಿಗೆ ಮುಂಬಡ್ತಿ, ಪಿಂಚಣಿ, ಪಿಎಫ್ ಸೌಲಭ್ಯ ನೀಡಬೇಕೆಂಬ ಬೇಡಿಕೆಯನ್ನು ಇಟ್ಟಿದ್ದಾರೆ.

    ಪ್ರತಿಭಟನೆ ಯಾಕೆ?
    ಇಲ್ಲಿಯವರೆಗೆ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 6 ಸಾವಿರ ಮತ್ತು ಸಹಾಯಕಿಯರಿಗೆ 3 ಸಾವಿರ ರೂ. ಸಂಬಳ ಸಿಗುತಿತ್ತು. ಈ ವರ್ಷದ ಬಜೆಟ್‍ನಲ್ಲಿ ಸರ್ಕಾರ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಮತ್ತು ಸಹಾಯಕಿಯರಿಗೆ 500 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಈ ಹೆಚ್ಚಳ ನಮಗೆ ಸಾಲುವುದಿಲ್ಲ. ಹತ್ತಿರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸರ್ಕಾರಗಳು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಸಹಾಯಕಿಯರಿಗೆ 7,500 ರೂ. ನೀಡುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರವೂ ನಮಗೆ ಇಷ್ಟೇ ಸಂಬಳ ನೀಡಬೇಕೆಂದು ಆಗ್ರಹಿಸಿ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.