ಬೆಂಗಳೂರು: ವೇತನ ಹೆಚ್ಚಳ (Salary Hike) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು (Transport Staff) ಫ್ರೀಡಂಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ (Hunger Strike) ನಡೆಸಲು ಮುಂದಾಗಿದ್ದಾರೆ.
ಸರ್ಕಾರದ ವಿರುದ್ದ ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಬೆಳಗ್ಗೆ 10:30 ರಿಂದ 5 ಗಂಟೆಯವರೆಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದೆ.
ಸಾರಿಗೆ ನೌಕರರ ಬೇಡಿಕೆಗಳು?
– ಮೂಲ ವೇತನದ 25% ವೇತನ ಹೆಚ್ಚಿಸಬೇಕು.
– ಎಲೆಕ್ಟ್ರಿಕ್ ಬಸ್ಗಳಲ್ಲಿ ಸಾರಿಗೆ ನಿಗಮದ ನೌಕರರನ್ನೇ ಚಾಲಕರಾಗಿ ನೇಮಿಸಿಕೊಳ್ಳುವುದು.
– ನಿವೃತ್ತಿ ನೌಕರರಿಗೆ ಅಂತಿಮವಾಗಿ ಬರಬೇಕಾದ ಹಣ ಕೊಡಬೇಕು ಮತ್ತು 38 ತಿಂಗಳ ವೇತನ ಹೆಚ್ಚಳದ ಬಾಕಿ ನೌಕರರಿಗೆ ನೀಡಬೇಕು.
– ಎಲ್ಲಾ ನಿಗಮಗಳ ನೌಕರರ ಮುಂಬಡ್ತಿಗೆ ಕ್ರಮವಹಿಸುವುದು. ವಿವಿಧ ಭತ್ಯೆಗಳನ್ನ ಐದು ಪಟ್ಟು ಹೆಚ್ಚಿಸುವುದು.
– ಉಚಿತ ಔಷಧಿ ಸೇರಿದಂತೆ ವೈದ್ಯಕೀಯ ಸೌಲಭ್ಯ ನೀಡಬೇಕು.
ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ.
ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ.
ನೋಟಿಸ್ನಲ್ಲೇನಿದೆ..?: ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡುವಂತೆ ತಿಳಿಸಲಾಗಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಜಮೆಯಾಗುತ್ತಿತ್ತು. ಇದೀಗ 7,500 ರೂ. ಸಂಬಳದಲ್ಲಿ 4,500 ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!
ಕಣ್ಣನ್ ಅವರು ಕಳೆದ 50 ವರ್ಷಗಳಿಂದ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ಜಿಲ್ಲಾಡಳಿತ ತೆಡೆಹಿಡಿದಿದೆ. ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೀಡಿರುವ ನೋಟಿಸ್ ಕಂಡು ಕಣ್ಣನ್ ಅವರು ನೋಟಿಸ್ ನೋಡಿ ಆತಂಕಗೊಂಡಿದ್ದಾರೆ.
ಬೆಂಗಳೂರು: ಶಿಕ್ಷಣ ಕ್ಷೇತ್ರದ ಪ್ರಮುಖ ಸ್ಟಾರ್ಟಪ್ ಕಂಪನಿ ಬೈಜೂಸ್ ಭಾರೀ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ವಿವಾದ, ಸಂಕಷ್ಟಕ್ಕೆ ಸಿಲುಕಿರುವ ಈ ಕಂಪನಿ ತನ್ನ ಉದ್ಯೋಗಿಗಳಿಗೆ ವೇತನವನ್ನು ಪಾವತಿ ಮಾಡಿರಲಿಲ್ಲ. ಆದರೆ ಇದೀಗ ತಮ್ಮ ಮನೆಯನ್ನೇ ಅಡವಿಟ್ಟು ಸಂಬಳ ನೀಡುವ ಮೂಲಕ ಭಾರೀ ಸುದ್ದಿಯಾಗಿದೆ.
ಹೌದು. ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ (Byju’s Founder Byju Raveendran), ತಮ್ಮ ಬೆಂಗಳೂರಿನ ಮನೆಯನ್ನೇ ಅಡವಿಟ್ಟು ಸೋಮವಾರ ಒಂದು ಸಾವಿರ ಸಿಬ್ಬಂದಿಗೆ ಬಾಕಿ ವೇತನ ಪಾವತಿ ಮಾಡಿದ್ದಾರೆ ಎಂಬ ಸಂಗತಿಯೊಂದು ಇದೀಗ ಬಯಲಾಗಿದೆ.
ಬೈಜು ರವೀಂದ್ರನ್ ಅವರ ಕುಟುಂಬವು ಬೆಂಗಳೂರಿನಲ್ಲಿ ಎರಡು ಮನೆಗಳು ಹಾಗೂ ನಿರ್ಮಾಣ ಹಂತದಲ್ಲಿರುವ ವಿಲ್ಲಾ ಒಂದು ಇದೆ. ಇವುಗಳನ್ನು ಅಡವಿಟ್ಟು ಸುಮಾರು 100 ಕೋಟಿ ರೂ. ಸಾಲ ಪಡೆದಿದ್ದಾರೆ. ಈ ಸಾಲದಿಂದ ತಮ್ಮ ಉದ್ಯೋಗಿಗಳಿಗೆ ನವೆಂಬರ್ ತಿಂಗಳ ವೇತನವನ್ನು ನೀಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಸೋಮವಾರದಂದು ಮಾತೃ ಸಂಸ್ಥೆಯಾದ ಥಿಂಕ್ & ಲರ್ನ್ ಪ್ರೈವೇಟ್ನ 15,000 ಉದ್ಯೋಗಿಗಳಿಗೆ ಸಂಬಳ (Employees Salary) ಪಾವತಿಸಲು ಸ್ಟಾರ್ಟಪ್ ತನ್ನಲ್ಲಿರುವ ಹಣವನ್ನು ಬಳಸಿಕೊಂಡಿದ್ದಾರೆ. ಇನ್ನು ಕಡಿಮೆಯಾದ ಮೊತ್ತಕ್ಕೆ ಈ ಹಣವನ್ನು ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬೈಜೂಸ್ ಸಂಸ್ಥಾಪಕ ರವೀಂದ್ರನ್ ಮೇಲೆ ಇಡಿ ದಾಳಿ
ಸಿಬ್ಬಂದಿಯ ಸಂಬಳ ವಿಳಂಬಕ್ಕೆ ಏಕಾಏಕಿ ಉಂಟಾದ ತಾಂತ್ರಿಕ ದೋಷವೆಂದು ಬೈಜೂಸ್ ಕಾರಣ ನೀಡಿತ್ತು. ಅಲ್ಲದೆ ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದಾಗಿಯೂ ಸ್ಪಷ್ಟನೆ ನೀಡಿತ್ತು. ಡಿಸೆಂಬರ್ 4ರ ಸೋಮವಾರದೊಳಗೆ ಸಂತ್ರಸ್ತ ಉದ್ಯೋಗಿಗಳ ವೇತನವನ್ನು ಅವರ ಖಾತೆಗಳಿಗೆ ಜಮೆ ಮಾಡುವ ಭರವಸೆಯನ್ನು ನೀಡಿತ್ತು. ಅಂತೆಯೇ ಇದೀಗ ರವೀಂದ್ರನ್ ಅವರು ತಮ್ಮ ಮನೆಯನ್ನೇ ಅಡವಿಟ್ಟು ಉದ್ಯೋಗಿಗಳ ವೇತನ ಪಾವತಿ ಮಾಡಿದ್ದಾರೆ.
ಕೊಪ್ಪಳ: ರಾಜ್ಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ನಲ್ಲಿ ಇದೂ ಒಂದು. ವಾರ್ಷಿಕ ಬರೋಬ್ಬರಿ 6 ಕೋಟಿ ನಿವ್ವಳ ಲಾಭ ಹೊಂದಿರುವ ಹೆಗ್ಗಳಿಕೆಯೂ ಇದೆ. ಆದರೆ, ಬ್ಯಾಂಕ್ನಲ್ಲಿ ಕೆಲಸ ಮಾಡುವ ಸುಮಾರು 30ಕ್ಕೂ ಹೆಚ್ಚು ಸಿಬ್ಬಂದಿಗೆ ವರ್ಷಪೂರ್ತಿ ವೇತನ ನೀಡಿಲ್ಲ.
ರಾಯಚೂರು- ಕೊಪ್ಪಳ ಕೇಂದ್ರ ಸಹಕಾರಿ ಬ್ಯಾಂಕ್ (R-K DCC) ಆಡಳಿತ ಮಂಡಳಿ ಸರ್ವಾಧಿಕಾರಿ ಧೋರಣೆಗೆ ನೌಕರರು ಕಂಗಾಲಾಗಿದ್ದಾರೆ. ತಮ್ಮ ಅಣತಿಯಂತೆ ನಡೆಯದ ನೌಕರರನ್ನು ಇಲ್ಲ ಸಲ್ಲದ ನೆಪ ಮುಂದಿಟ್ಟು, ಮಾನಸಿಕ ಹಿಂಸೆ ನೀಡಲಾಗುತ್ತದೆ. ತಪ್ಪು ಮಾಡಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳುವ ಬದಲಿಗೆ ವರ್ಷಗಟ್ಟಲೆ ವೇತನ (Salary) ನೀಡದೇ ಕಿರುಕುಳ ನೀಡಲಾಗುತ್ತದೆ ಎಂಬ ಆರೋಪ ಕೇಳಿ ಬಂದಿದ್ದು, ಆಡಳಿತ ಮಂಡಳಿ ನಡೆಯಿಂದ ಬೇಸತ್ತ ನೌಕರನೊಬ್ಬ ನ್ಯಾಯ ಕೊಡಿಸಲು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದು ಮಾಡಿ ರೈತರ ಹಿತ ಕಾಪಾಡಬೇಕು: ರಾಜೂ ಗೌಡ
ವೇತನ ಸ್ಥಗಿತ:
ರಾಯಚೂರಿನಲ್ಲಿ (Raichur) ಕೇಂದ್ರ ಕಚೇರಿ ಹೊಂದಿರುವ ಆರ್-ಕೆ ಡಿಸಿಸಿ ಬ್ಯಾಂಕ್, ಕೊಪ್ಪಳ- ರಾಯಚೂರು ಜಿಲ್ಲೆಯ ವ್ಯಾಪ್ತಿ ಒಳಗೊಂಡಿದೆ. ಎರಡೂ ಜಿಲ್ಲೆ ಸೇರಿ ಒಟ್ಟು 27 ಶಾಖೆ ಹೊಂದಿದ್ದು, 168 ಖಾಯಂ ನೌಕರರು ಮತ್ತು 22 ತಾತ್ಕಾಲಿಕ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಶಾಖಾ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಶಿವಪುತ್ರಪ್ಪ ಹಡಪದ ಎಂಬವರಿಗೆ ಕಳೆದ 17 ತಿಂಗಳಿನಿಂದ ವೇತನ ನೀಡಿಲ್ಲ. ಶಿವಪುತ್ರಪ್ಪ ಏನು ತಪ್ಪು ಮಾಡಿದ್ದಾನೆ ಎಂಬುದನ್ನೂ ಆಡಳಿತ ಮಂಡಳಿ ಆತನಿಗೆ ಹೇಳಿಲ್ಲ. ಇದರಿಂದ ಬೇಸತ್ತ ಶಿವಪುತ್ರಪ್ಪ ನ್ಯಾಯಕ್ಕಾಗಿ ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಮನೆಯ ಎರಡನೇ ಮಹಡಿಯಿಂದ ಬಿದ್ದು ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಪರಾರಿ
ಶಿವಪುತ್ರಪ್ಪ ಅಷ್ಟೇ ಅಲ್ಲದೇ ಸುಮಾರು 8 ಮಹಿಳಾ ಸಿಬ್ಬಂದಿ ಸೇರಿ ಸುಮಾರು 30ಕ್ಕೂ ಹೆಚ್ಚು ಬ್ಯಾಂಕ್ ನೌಕರರಿಗೆ ಇದೇ ರೀತಿ ವೇತನ ಸ್ಥಗಿತ ಮಾಡಿದ್ದಾರೆ. ಅಧ್ಯಕ್ಷರು ಮತ್ತು ಸಿಇಒ (CEO) ಅಣತಿಯಂತೆ ನಡೆದುಕೊಂಡಿಲ್ಲ. ಅವರು ಹೇಳಿದವರಿಗೆ ಕೇಳಿದಷ್ಟು ಸಾಲ ಕೊಟ್ಟಿಲ್ಲ ಎಂಬ ಕಾರಣಕ್ಕೆ ಇಲ್ಲಸಲ್ಲದ ಕಾರಣ ಮುಂದಿಟ್ಟು, ವೇತನ ಸ್ಥಗಿತಗೊಳಿದ್ದಾರೆ ಎಂಬುದು ನೌಕರರ ಆರೋಪ. ಇದು ಮಾನವ ಹಕ್ಕುಗಳ ಉಲ್ಲಂಘನೆ ಆಗಿದ್ದು, ಸರ್ಕಾರ ಮಧ್ಯ ಪ್ರವೇಶಿಸಿ ನ್ಯಾಯ ಕೊಡಿಸಬೇಕು ಎಂದು ನೊಂದ ನೌಕರ ಶಿವಪುತ್ರಪ್ಪ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಾಲಶ್ರೀ ಮಠಕ್ಕೆ 54 ಲಕ್ಷ ಹಣ ತಂದಿಟ್ಟ ಮೈಸೂರಿನ ವಕೀಲ
ಏನು ಹೇಳುತ್ತೆ ನಿಯಮ?
ಸಾಮಾನ್ಯವಾಗಿ ಸರ್ಕಾರಿ- ಅರೆ ಸರ್ಕಾರಿ ಅಥವಾ ಖಾಸಗಿ ವಲಯದ ನೌಕರರು ಕರ್ತವ್ಯ ಲೋಪ ಎಸಗಿದಾಗ, ಕೂಡಲೇ ನೋಟಿಸ್ ನೀಡಬೇಕು. ಅಗತ್ಯ ಇದ್ದರೆ ಅಮಾನತು ಮಾಡಿ, ಅವರ ಮೇಲಿನ ಆರೋಪಗಳ ಬಗ್ಗೆ ತನಿಖೆ ಮಾಡಬೇಕು. ಮುಂದಿನ 6 ತಿಂಗಳಿನಲ್ಲಿ ವಿಚಾರಣೆ ಮುಗಿಸಿ, ತಕ್ಕ ಶಿಕ್ಷೆ ನೀಡಬೇಕು. ಇಲ್ಲವೇ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಆದರೆ, ಯಾವುದೇ ಕಾರಣಕ್ಕೂ ವರ್ಷಪೂರ್ತಿ ವೇತನ ಸ್ಥಗಿತಗೊಳಿಸಿ, ಕೆಲಸ ಮಾಡಿಸಿಕೊಳ್ಳಲು ಅವಕಾಶ ಇಲ್ಲ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಮೋದಿ ಮಧ್ಯಪ್ರವೇಶವಾಗಬೇಕು – ಸಿಎಂ ಮನವಿಗೆ ಬಿಜೆಪಿ ಸಂಸದರ ಆಕ್ಷೇಪ
ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗುರುವಾರ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಸಚಿವರು, ಕ್ಯಾಬಿಬೆಟ್ ಮಂತ್ರಿಗಳ ಮಾಸಿಕ ವೇತನವನ್ನು (Salary) ಬಂಪರ್ ಹೆಚ್ಚಳ ಮಾಡಿದ್ದಾರೆ. ಆದರೂ ಬ್ಯಾನರ್ಜಿ ತನಗೆ ಯಾವುದೇ ವೇತನ ಬೇಡ ಎಂದು ಹೇಳಿದ್ದಾರೆ.
ಬಂಗಾಳದ ಸಚಿವರು ಹಾಗೂ ಮಂತ್ರಿಗಳ ಮಾಸಿಕ ವೇತನವನ್ನು ಪ್ರತಿ ವರ್ಗಕ್ಕೆ 40,000 ರೂ.ನಷ್ಟು ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳದಿಂದ ಶಾಸಕರಿಗೆ ಮಾಸಿಕವಾಗಿ 10,000 ರೂ. ಬದಲು 50,000 ರೂ. ಆಗಿದೆ. ಅದೇ ರೀತಿ ಮಂತ್ರಿಗಳಿಗೆ 10,900 ರೂ. ಬದಲು 50,900 ರೂ. ನೀಡಲಾಗುತ್ತದೆ.
ಇದರರ್ಥ ಶಾಸಕರು ಪಡೆಯುವ ನಿಜವಾದ ಮಾಸಿಕ ಪಾವತಿಯೊಂದಿಗೆ ಸಂಬಳ, ಭತ್ಯೆಗಳು ಮತ್ತು ಸವಲತ್ತುಗಳು ಈಗ ಮಾಸಿಕವಾಗಿ 81,000 ರೂ.ಗಳಿಂದ 1.21 ಲಕ್ಷ ರೂ.ಗೆ ಹೆಚ್ಚಾಗುತ್ತದೆ ಎಂದು ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅದೇ ರೀತಿ ಇನ್ನು ಮುಂದೆ ಸಚಿವರು ಪಡೆಯುವ ನಿಜವಾದ ಮಾಸಿಕ ವೇತನವನ್ನು ತಿಂಗಳಿಗೆ 1.10 ಲಕ್ಷ ರೂ.ಗಳಿಂದ ತಿಂಗಳಿಗೆ ಸುಮಾರು 1.50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುತ್ತಿದೆ.
ಗುರುವಾರ ರಾಜ್ಯ ವಿಧಾನಸಭೆಯಲ್ಲಿ ವರ್ಧಿತ ವೇತನವನ್ನು ಘೋಷಿಸಿದ ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಶಾಸಕರ ವೇತನ ಭಾರತದ ಇತರ ರಾಜ್ಯಗಳ ಶಾಸಕರಿಗೆ ಹೋಲಿಸಿದರೆ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ವೇತನವನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಾಷಿಂಗ್ಟನ್: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯುವಕರು ಸಾಕಷು ಹಣವನ್ನು ಉಳಿತಾಯ ಮಾಡಲು ಹಾಗೂ ಹೂಡಿಕೆ (Investment) ಮಾಡಲು ಬಯಸುತ್ತಾರೆ. ಈ ಮೂಲಕ ಬೇಗನೆ ನಿವೃತ್ತರಾಗಲು ಬಯಸುತ್ತಾರೆ. ಇಲ್ಲೊಬ್ಬ ಗೂಗಲ್ನ ಸಾಫ್ಟ್ವೇರ್ ಎಂಜಿನಿಯರ್ (Google Software Engineer) ತನ್ನ 22 ವಯಸ್ಸಿನಲ್ಲಿ ವೃತ್ತಿಯನ್ನು ಪ್ರಾರಂಭಿಸುತ್ತಲೇ ತಮ್ಮ 35ನೇ ವಯಸ್ಸಿನೊಳಗೆ 5 ಮಿಲಿಯನ್ ಡಾಲರ್ (ಸುಮಾರು 41 ಕೋಟಿ ರೂ.) ಹೂಡಿಕೆ ಮಾಡಿ, ನಿವೃತ್ತಿ (Retirement) ಹೊಂದುವ ಗುರಿಯನ್ನು ಹೊಂಡಿದ್ದಾರೆ. ಅವರ ಫ್ಯೂಚರ್ ಪ್ಲ್ಯಾನ್ ಯುವಕರಿಗೆ ಸ್ಪೂರ್ತಿದಾಯಕವಾಗಿದೆ.
ಗೂಗಲ್ನ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ 22 ವರ್ಷದ ಎಥಾನ್ ನ್ಗುನ್ಲಿ (Ethan Nguonly) ಇಂತಹ ಒಂದು ಯೋಜನೆಯನ್ನು ಮಾಡಿದ್ದಾರೆ. ಕ್ಯಾಲಿಫೋರ್ನಿಯಾದ ಆರೆಂಜ್ ಕೌಂಟಿಯಲ್ಲಿ ವಾಸವಿರೋ ಟೆಕ್ಕಿ ತನ್ನ ಹಣವನ್ನು ಉಳಿತಾಯ ಮಾಡುವುದಕ್ಕಿಂತ ಹೆಚ್ಚಾಗಿ ಷೇರುಗಳಲ್ಲಿ ಹೂಡಿಕೆ ಮಾಡುವುದರ ಮಹತ್ವದ ಬಗ್ಗೆ ತನ್ನ ಹೆತ್ತವರು ಹೇಗೆ ಪ್ರೋತ್ಸಾಹ ನೀಡಿದರು ಎಂದು ವಿವರಿಸಿದ್ದಾರೆ.
ನೀವು ನಿಮ್ಮ ಹಣವನ್ನು ಉಳಿತಾಯ ಖಾತೆಯಲ್ಲಿ ಇಟ್ಟು ಬಿಟ್ಟರೆ ಅದು ಯಾವುದೇ ಕೆಲಸಕ್ಕೂ ಬರಲ್ಲ. ಕಾಲಾನಂತರ ಅದು ನಿಷ್ಪ್ರಯೋಜಕ ಆಗಿಬಿಡುತ್ತದೆ. ಆದರೆ ನಿಮ್ಮ ಹಣದಿಂದ ಏನಾದರೂ ಪ್ರಯೋಜನ ಆಗಬೇಕೆಂದರೆ ಅದನ್ನು ಹೂಡಿಕೆ ಮಾಡಿ ಎಂದು ಪೋಷಕರು ತನಗೆ ತಿಳಿಸಿದ್ದಾಗಿ ನ್ಗುನ್ಲಿ ಹೇಳಿದ್ದಾರೆ.
ನಾನು ಚಿಕ್ಕವನಿದ್ದಾಗಲೇ ಯೋಚಿಸುತ್ತಿದ್ದ ಮುಖ್ಯ ವಿಷಯವೆಂದರೆ, ಈ ಹಣ ಎಲ್ಲಾ ದೊಡ್ಡದಾಗುತ್ತಾ ಹೋಗುತ್ತದೆ, ಬೆಳೆಯುತ್ತಲೇ ಇರುತ್ತದೆ. ಆದರೆ ಇದಕ್ಕಾಗಿ ನಾವು ಯಾವುದೇ ಕೆಲಸ ಮಾಡುವ ಅಗತ್ಯವೇ ಇಲ್ಲ. ಇದು ನಿಜವಾಗಿಯೂ ನನ್ನ ಹಣವನ್ನು ಹೂಡಿಕೆಗಳಲ್ಲಿ ವಿನಿಯೋಗಿಸಬಹುದು ಎಂಬ ನನ್ನ ಕಲ್ಪನೆಯನ್ನು ಬಹಿರಂಗಪಡಿಸಿತು. ಅದಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡೋ ಬದಲು ಅದನ್ನು ಹೂಡಿಕೆ ಮಾಡುವುದೇ ಉತ್ತಮ ಎಂದು ಹೇಳಿದರು.
ನ್ಗುನ್ಲಿ ಇಂತಹ ಯೋಜನೆಯೊಂದಿಗೆಯೇ ಯುನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾದಲ್ಲಿ ಕಂಪ್ಯೂಟರ್ ಸೈನ್ಸ್ನಲ್ಲಿ ಪದವಿ ಪಡೆದಿದ್ದಾರೆ. ಇದಕ್ಕಾಗಿ ಅವರು ಯಾವುದೇ ಸಾಲ ಮಾಡುವ ಪರಿಸ್ಥಿತಿ ಎದುರಾಗಿಲ್ಲ. ನಂತರ ಅವರು ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡೇ ಮಾಹಿತಿ ಹಾಗೂ ಡೇಟಾ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪ್ರಾರಂಭಿಸಿದರು. 2022ರ ಆಗಸ್ಟ್ನಲ್ಲಿ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದಾರೆ. ಸ್ನಾತಕೋತ್ತರ ಪದವಿ ಪಡೆಯುವುದಕ್ಕೂ ಮೊದಲೇ ನ್ಗುನ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಗೂಗಲ್ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡರು.
ನ್ಗುನ್ಲಿ ವಾರ್ಷಿಕ ಆದಾಯ 194,000 ಡಾಲರ್ (ಸುಮಾರು 1.60 ಕೋಟಿ ರೂ.). ಪ್ರಸ್ತುತ ಅವರು ತಮ್ಮ ನಿವೃತ್ತಿ ಹಾಗೂ ಇತರ ಹೂಡಿಕೆ ಖಾತೆಗಳಲ್ಲಿ ಹಾಗೂ ಫ್ಲೋರಿಡಾ ಮತ್ತು ಕ್ಯಾಲಿಫೋರ್ನಿಯಾದ ಮನೆಗಳಲ್ಲಿ 135,000 ಡಾಲರ್ (ಸುಮಾರು 1.11 ಕೋಟಿ ರೂ.) ಹೂಡಿಕೆ ಮಾಡಿದ್ದಾರೆ. ತಮ್ಮ ವೇತನದಲ್ಲಿ ಅವರು 35% ರಷ್ಟು ಹೂಡಿಕೆಗಳಲ್ಲಿ ವಿನಿಯೋಗಿಸಲು ಮುಂದಾಗಿದ್ದಾರೆ. ಜೊತೆಗೆ ರಿಯಲ್ ಎಸ್ಟೇಟ್ನಲ್ಲೂ ವಿನಿಯೋಗಿಸಲು ಯೋಜಿಸಿದ್ದಾರೆ. ಇದನ್ನೂ ಓದಿ: ಪಾಕ್, ಚೀನಾಗೆ ಠಕ್ಕರ್ ಕೊಡಲು ʻಇಂದ್ರಜಾಲ್ʼ ಅಸ್ತ್ರ – ಅತ್ಯಾಧುನಿಕ ಆ್ಯಂಟಿ ಡ್ರೋನ್ ಅನಾವರಣ
ನ್ಗುನ್ಲಿ ಊಟಕ್ಕಾಗಿ ಹೆಚ್ಚೇನೂ ಖರ್ಚು ಮಾಡಲ್ಲ. ಏಕೆಂದರೆ ಗೂಗಲ್ ಉಚಿತ ಊಟ, ಉಪಹಾರ ನೀಡುತ್ತದೆ. ಬ್ರ್ಯಾಂಡೆಡ್ ಬಟ್ಟೆಗಳಿಗಾಗಿ ಹೆಚ್ಚಿನ ಖರ್ಚು ಮಾಡಲ್ಲ. ಬದಲಿಗೆ ಸರಳ ಹಾಗೂ ಕೈಗೆಟಕೋ ಬೆಲೆಯಲ್ಲಿ ಸಿಗುವ ಬಟ್ಟೆಗಳಲ್ಲಿ ಧರಿಸಲು ಇಷ್ಟ ಪಡುತ್ತಾರೆ. ಪ್ರಯಾಣವನ್ನು ಹೆಚ್ಚು ಇಷ್ಟಪಡೋ ಅವರು ವರ್ಷಕ್ಕೆ 3-4 ಬಾರಿ ಪ್ರವಾಸ ಹೋಗುತ್ತಾರೆ. ಐಷಾರಾಮಿ ವಸತಿಗೆ ಹಣ ವ್ಯಯಿಸುವ ಬದಲು ಕಡಿಮೆ ವೆಚ್ಚದ ಆಯ್ಕೆಗಳನ್ನು ಮಾಡುತ್ತಾರೆ.
5 ಮಿಲಿಯನ್ ಡಾಲರ್ನೊಂದಿಗೆ 35ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯೋ ಗುರಿಯನ್ನು ತಲುಪಲು ನ್ಗುನ್ಲಿ ತಮ್ಮ ನಿವೃತ್ತಿ ಖಾತೆಯಲ್ಲಿ ಹೂಡಿಕೆ ಮಾಡುವುದನ್ನು ಮುಂದುವರಿಸಲು ಯೋಜಿಸಿದ್ದಾರೆ. ಪ್ರತಿ 2 ವರ್ಷಗಳಿಗೊಮ್ಮೆ ಹೊಸ ಆಸ್ತಿಯನ್ನು ಖರೀದಿ ಮಾಡುವ ಮೂಲಕ ತಮ್ಮ ರಿಯಲ್ ಎಸ್ಟೇಟ್ ಪೋರ್ಟ್ಫೋಲಿಯೋಗೆ ಸೇರಿಸುತ್ತಾರೆ. ನಾನು 67ನೇ ವಯಸ್ಸಿನಲ್ಲಿ ಪರ್ವತ ಏರಲು ಬಯಸಲ್ಲ. ಬದಲಿಗೆ ಎಲ್ಲಿಯವರೆಗೆ ಯುವಕನಾಗಿ, ಆರೋಗ್ಯವಾಗಿರುತ್ತೇನೋ ಅಲ್ಲಿಯವರೆಗೆ ಪ್ರಯಾಣವನ್ನು ಮಾಡಿ ಅನುಭವ ಪಡೆಯುತ್ತೇನೆ ಎಂದು ನ್ಗುನ್ಲಿ ಹೇಳುತ್ತಾರೆ. ಇದನ್ನೂ ಓದಿ: ದೇಶದಲ್ಲಿ ಲ್ಯಾಪ್ಟಾಪ್ ತಯಾರಿಸಲು 32 ಕಂಪನಿಗಳಿಂದ ಅರ್ಜಿ – 75 ಸಾವಿರ ಉದ್ಯೋಗ ಸೃಷ್ಟಿ
ಬೆಂಗಳೂರು: ಸಾರಿಗೆ ಇಲಾಖೆ ನೌಕರರಿಗೆ ಯಾವುದೇ ಸಮಸ್ಯೆ ಆಗದಂತೆ ಸರಿಯಾದ ಸಮಯಕ್ಕೆ ಸಂಬಳ ಕೊಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಸ್ಪಷ್ಟಪಡಿಸಿದ್ದಾರೆ.
ಸರ್ಕಾರ ಹಣ ಕೊಡದೇ ಹೋದರೆ ಮುಂದಿನ ತಿಂಗಳು ಸಾರಿಗೆ ಇಲಾಖೆಯಲ್ಲಿ ಸಂಬಳ ಕೊಡಲು ಹಣವಿಲ್ಲ ಎಂಬ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು ಸಂಬಳ ಕೊಡದೇ ಇದ್ದಾಗ ಕೊಡೊಲ್ಲ ಅಂತ ಹೇಳಿ. ನಾವು ಸರಿಯಾದ ಸಮಯಕ್ಕೆ ಸಂಬಳ ಕೊಡುತ್ತೇವೆ ಎಂದು ತಿಳಿಸಿದರು.
ಸರ್ಕಾರದಿಂದ ನಮಗೆ ಹಣ ಕೊಡುತ್ತಾರೆ. ನಮ್ಮ ಸಂಪನ್ಮೂಲಗಳಿಂದಲೂ ಹಣ ಸಂಗ್ರಹ ಆಗುತ್ತಿದೆ. 4 ನಿಗಮಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ಸಂಬಳ ಕೊಡಲ್ಲ ಎಂದು ಊಹೆ ಮಾಡಿಕೊಂಡು ಹೇಳಲು ಆಗಲ್ಲ. ಸರಿಯಾದ ಸಮಯಕ್ಕೆ ಸಂಬಳ ಕೊಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ದುಬಾರಿಯಾಯ್ತು ಚಿಕನ್- ಒಂದು ಮೊಟ್ಟೆಗೆ ಬರೋಬ್ಬರಿ 7 ರೂ.
ಶಕ್ತಿ ಯೋಜನೆಯಿಂದ ನಿಗಮಕ್ಕೆ ಲಾಭ ಆಗುತ್ತಿದೆಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಲ್ಲಿ ಲಾಭ ನಷ್ಟದ ಪ್ರಶ್ನೆ ಬರಲ್ಲ. ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಾರೆ ಎಂಬುದೇ ಮುಖ್ಯ. ಸಾರಿಗೆ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ. ಸರ್ಕಾರ ಹಣ ಕೊಡುತ್ತದೆ. ನಮಗೆ ಯಾವುದೇ ಲಾಸ್ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಕನಿಷ್ಠ 15 ಸಾವಿರ ಸರ್ಕಾರಿ ನೌಕರರಿಗೆ ಇನ್ನೂ ಮಾಸಿಕ ವೇತನ (Monthly Salary) ಪಾವತಿಯಾಗಿಲ್ಲ ಎಂದು ವರದಿಯಾಗಿದೆ.
ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ಸಂಬಳ ಪಾವತಿಯಾಗುತ್ತಿತ್ತು. ಆದರೆ ಅರ್ಧ ತಿಂಗಳು ಕಳೆದರೂ ವೇತನ ಪಾವತಿಯಾಗಿಲ್ಲ ಎಂದು ಮಾಧ್ಯಮವೊಂದು ವರದಿ ಮಾಡಿದೆ.
हिमाचल की सुक्खू सरकार आर्थिक मोर्चे पर डगमगाने लगी है। आर्थिक बदहाली की वजह से प्रदेश के 15,000 से ज्यादा कर्मचारियों को मई महीने की सैलरी नहीं मिल पाई। आमतौर पर अधिकांश विभागों, बोर्ड व निगमों में सैलरी पहली तारीख को मिल जाती है।
ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಭರಪೂರ ಭರವಸೆಗಳನ್ನು ಪ್ರಕಟಿಸಿತ್ತು. ಈ ಭರವಸೆಗಳು ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಆರ್ಥಿಕ ಸಮಸ್ಯೆಯಲ್ಲಿರುವ ಸಿಎಂ ಸುಖವಿಂದರ್ ಸಿಂಗ್ ಸುಖು (Sukhvinder Singh Sukhu) ನೇತೃತ್ವದ ಸರ್ಕಾರ 1,000 ಕೋಟಿ ರೂಪಾಯಿಗಳ ಓವರ್ಡ್ರಾಫ್ಟ್ ಪಡೆಯಲು ಮುಂದಾಗಿದೆ. ಇದಕ್ಕಾಗಿ 800 ಕೋಟಿ ರೂಪಾಯಿ ಸಾಲಕ್ಕೆ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ.
ಬಿಜೆಪಿ ಕಿಡಿ: ಹಿಮಾಚಲದ ಸುಖು ಸರ್ಕಾರವು ಆರ್ಥಿಕವಾಗಿ ತತ್ತರಿಸಲಾರಂಭಿಸಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ, ರಾಜ್ಯದ 15,000 ಕ್ಕೂ ಹೆಚ್ಚು ಉದ್ಯೋಗಿಗಳು ಮೇ ತಿಂಗಳ ಸಂಬಳವನ್ನು ಪಡೆಯಲು ಸಾಧ್ಯವಾಗಲಿಲ್ಲ. ಸಾಮಾನ್ಯವಾಗಿ ಹೆಚ್ಚಿನ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಲ್ಲಿ ಮೊದಲ ದಿನವೇ ಸಂಬಳವನ್ನು ನೀಡಲಾಗುತ್ತದೆ. ಮುಂದೆ ಕರ್ನಾಟಕದಲ್ಲೂ ಇದೇ ರೀತಿ ಆಗಲಿದೆ ಎಂದು ಬರೆದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಹಿಂದಿಯಲ್ಲಿ ಟ್ವೀಟ್ ಮಾಡಿ ಸರ್ಕಾರವನ್ನು ಕುಟುಕಿದ್ದಾರೆ.
ತೆಲುಗು ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ (Pavitra Lokesh) ಕಾಂಬಿನೇಷನ್ ನ ಮಳ್ಳಿ ಪೆಳ್ಳಿ ಸಿನಿಮಾ ರಿಲೀಸ್ ಆಗಿದೆ. ತೆಲುಗು ಚಿತ್ರರಂಗದಲ್ಲಿ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ಈ ಸಿನಿಮಾಗಾಗಿ ಪವಿತ್ರಾ ಲೋಕೇಶ್ ಪಡೆದಿದ್ದಾರೆ ಎನ್ನಲಾದ ಸಂಭಾವನೆ ಮಾತ್ರ ಬಲು ಜೋರಾಗಿ ಸದ್ದು ಮಾಡುತ್ತಿದೆ. ಈ ಸಿನಿಮಾಗಾಗಿ ಅವರು ಈವರೆಗೂ ಪಡೆಯದೇ ಇರುವಂತಹ ದುಬಾರಿ ಸಂಭಾವನೆ (Salary) ಪಡೆದಿದ್ದಾರೆ ಎನ್ನಲಾಗುತ್ತಿದೆ.
ಸಾಮಾನ್ಯವಾಗಿ ಪವಿತ್ರಾ ಲೋಕೇಶ್ ಒಂದು ದಿನಕ್ಕೆ 50 ರಿಂದ 60 ಸಾವಿರ ರೂಪಾಯಿ ಸಂಭಾವನೆ ಪಡೆಯುತ್ತಾರಂತೆ. ಆದರೆ, ಮಳ್ಳಿ ಪೆಳ್ಳಿ ಚಿತ್ರಕ್ಕಾಗಿ ಅವರು ಬರೋಬ್ಬರಿ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರಂತೆ. ಇದು ನಿಜವೇ ಆಗಿದ್ದರೆ, ಈ ಚಿತ್ರಕ್ಕಾಗಿ ಅವರು ಎಷ್ಟು ದಿನ ಕೆಲಸ ಮಾಡಿರಬಹುದು ಮತ್ತು ದಿನಕ್ಕೆ ಎಷ್ಟು ಸಂಭಾವನೆ ಪಡೆದಿರಬಹುದು ಎನ್ನುವ ಲೆಕ್ಕಾಚಾರ ಶುರುವಾಗಿದೆ.
ಈಗಾಗಲೇ ಅವರೇ ಘೋಷಣೆ ಮಾಡಿಕೊಂಡಂತೆ ಇಬ್ಬರೂ ಸಹಜೀವನ ನಡೆಸುತ್ತಿದ್ದಾರಂತೆ. ಒಂದು ರೀತಿಯಲ್ಲಿ ಗಂಡ ಹೆಂಡತಿ ರೀತಿಯಲ್ಲೇ ಬದುಕುತ್ತಿದ್ದಾರಂತೆ. ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದು ಸ್ವತಃ ನರೇಶ್ (Naresh) ಅವರೆ. ಹಾಗಾಗಿ ಈ ಪ್ರಮಾಣದಲ್ಲಿ ಸಂಭಾವನೆ ಹರಿದು ಬಂತಾ ಎನ್ನುವುದಕ್ಕೆ ಯಾವುದೇ ಉತ್ತರವಿಲ್ಲ.
ರಿಲೇಷನ್ ಶಿಪ್, ಮದುವೆ, ಜೀವನ ಎಲ್ಲದರ ಬಗ್ಗೆಯೂ ಮಾಧ್ಯಮಗಳ ಮುಂದೆ ಇಬ್ಬರೂ ಮಾತನಾಡಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ತಮಗೆ ಮಕ್ಕಳನ್ನು ಮಾಡಿಕೊಳ್ಳುವಂತಹ ಯೋಚನೆ ಇಲ್ಲವೆಂದೂ ಮಾತನಾಡಿದ್ದಾರೆ. ಆದರೆ, ಸಂಭಾವನೆ ವಿಚಾರ ಈವರೆಗೂ ಇಬ್ಬರೂ ಹೇಳಿಕೆ ನೀಡಿಲ್ಲ. ಮುಂದಿನ ದಿನಗಳಲ್ಲಿ ನೀಡುತ್ತಾರಾ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಕೆಪಿಟಿಸಿಎಲ್ (KPTCL) ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ. 20ರಷ್ಟು ವೇತನ (Salary) ಪರಿಷ್ಕರಣೆಗೆ ಒಪ್ಪಿದ್ದು, ಇಂದು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಇದೇ ವೇಳೆ ಸಾರಿಗೆ ನೌಕರರಿಗೆ ಶೇ. 15ರಷ್ಟು ವೇತನ ಪರಿಷ್ಕರಣೆ ಬಗ್ಗೆಯೂ ಮಾತನಾಡಿದರು. ಸಾರಿಗೆ ಇಲಾಖೆ ನೌಕರರಿಗೆ ಶೇ. 15ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಈ ಎರಡೂ ಆಜ್ಞೆ ಇಂದು ಹೊರಡಿಸಲಾಗುವುದು ಎಂದರು. ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಸೋಮಣ್ಣ ಚಾರ್ಜ್ಶೀಟ್- ಇತ್ಯರ್ಥ ಮಾಡ್ತೀವಿ ಎಂದ ಶಾ
ಕಾಡ್ಗಿಚ್ಚು ನಿಯಂತ್ರಣಕ್ಕೆ ಕ್ರಮ: ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಆಗುತ್ತಿದೆ. ಸಾಧ್ಯತೆ ಇರುವೆಡೆಯಲ್ಲಿ ಪೂರ್ವಭಾವಿ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಸ್ತುತ ಕಾಡ್ಗಿಚ್ಚನ್ನು ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಚಿವ ಹಾಲಪ್ಪ ಆಚಾರ್ ಸೀರೆ ಹಂಚಿಕೆ – ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್