Tag: Salute

  • ಮಲಯಾಳಂ ಸ್ಟಾರ್ ನಟ ದುಲ್ಕರ್ ಗೆ ನಿಷೇಧದ ಬೆದರಿಕೆ

    ಮಲಯಾಳಂ ಸ್ಟಾರ್ ನಟ ದುಲ್ಕರ್ ಗೆ ನಿಷೇಧದ ಬೆದರಿಕೆ

    ಲಯಾಳಂ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಚಿತ್ರಕ್ಕೆ ನಿಷೇಧದ ಆತಂಕ ಎದುರಾಗಿದೆ. ಅವರ ಅತೀ ನಿರೀಕ್ಷಿತ ಸಿನಿಮಾ ‘ಸೆಲ್ಯೂಟ್’ ಇನ್ನಷ್ಟೇ ರಿಲೀಸ್ ಆಗಬೇಕಿದೆ. ಈ ಸಿನಿಮಾವನ್ನು ಥಿಯೇಟರ್ ಗೆ ತರದೇ, ನೇರವಾಗಿ ಓಟಿಟಿಯಲ್ಲಿ ಬಿಡುಗಡೆ ಮಾಡಿದರೆ, ಮುಂದಿನ ಅವರ ಎಲ್ಲಾ ಚಿತ್ರಗಳನ್ನು ಥಿಯೇಟರ್ ಬಾರದಂತೆ ನಿಷೇಧ ಹೇರುವುದಾಗಿ ಫಿಲ್ಮ್ ಎಕ್ಸಿಬಿಟರ್ಸ್ ಯುನೈಟೆಡ್ ಆರ್ಗನೈಸೇಶನ್ ಆಫ್ ಕೇರಳ ಹೇಳಿದೆ.

    ಈ ಹಿಂದೆ ‘ಸೆಲ್ಯೂಟ್’ ಚಿತ್ರವನ್ನು ಚಿತ್ರಮಂದಿರಗಳಲ್ಲೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಇದೀಗ ನೇರವಾಗಿಯೇ ಓಟಿಟಿಯಲ್ಲಿ ಬಿಡುಗಡೆ ಮಾಡುವುದಾಗಿ ಒಪ್ಪಂದದಿಂದ ಹಿಂದೆ ಸರಿದಿದೆ. ಹೀಗಾಗಿ ಕೇರಳ ಚಿತ್ರ ಪ್ರದರ್ಶಕರ ಒಕ್ಕೂಟ ಚಿತ್ರತಂಡದ ವಿರುದ್ಧ ಗರಂ ಆಗಿದೆ. ಇದನ್ನೂ ಓದಿ : ಕೋವಿಡ್ ನಂತರ ನಿದ್ರಾ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ ಖ್ಯಾತ ನಟಿ ಶ್ರುತಿ ಹಾಸನ್

    “ಸೆಲ್ಯೂಟ್ ಸಿನಿಮಾ ನಮ್ಮ ಜತೆಗಿನ ಒಪ್ಪಂದಂತೆಯೇ ಥಿಯೇಟರ್ ಗಳಲ್ಲಿ ಬಿಡುಗಡೆ ಮಾಡಬೇಕು. ದುಲ್ಕರ್ ಸಲ್ಮಾನ್ ಮತ್ತು ನಿರ್ಮಾಣ ಸಂಸ್ಥೆಯು ನಿಯಮ ಪಾಲಿಸದೇ ಇದ್ದರೆ, ದೊಡ್ಡ ಪರಿಣಾಮವನ್ನೇ ಎದುರಿಸಬೇಕಾಗುತ್ತದೆ” ಎಂದು ನೇರವಾಗಿಯೇ ನಿಷೇಧದ ಮಾತು ಹೇಳಿದೆ ಫಿಲ್ಮ್ ಎಕ್ಸಿಬಿಟರ್ಸ್ ಯುನೈಟೆಡ್ ಆರ್ಗನೈಸೇಶನ್ ಆಫ್ ಕೇರಳ. ಇದನ್ನೂ ಓದಿ : ಪುನೀತ್ ಅಭಿಮಾನಿಗಳಿಗೆ ಭಾರೀ ನಿರಾಸೆ : ಮೆರವಣಿಗೆ ಇಲ್ಲ, ಹೆಲಿಕಾಪ್ಟರ್ ಗೆ ಅನುಮತಿ ಕೊಟ್ಟಿಲ್ಲ

    ಮಾಧ್ಯಮಗಳೊಂದಿಗೆ ಮಾತನಾಡಿರುವ ಒಕ್ಕೂಟದ ಪ್ರತಿನಿಧಿ ಕೆ.ವಿಜಯ ಕುಮಾರ್, “ಥಿಯೇಟರ್ ನಲ್ಲಿ ರಿಲೀಸ್ ಮಾಡುವುದಾಗಿ ಅವರೇ ಸಹಿ ಮಾಡಿಕೊಟ್ಟ ಒಪ್ಪಂದದ ಪತ್ರವಿದೆ. ಈಗ ಅದಕ್ಕೆ ಅವರು ಗೌರವ ಕೊಡುತ್ತಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ನಿಷೇಧದ ಮಾರ್ಗವನ್ನೇ ಹಿಡಿಯಬೇಕಾಗಿದೆ’ ಎಂದಿದ್ದಾರೆ. ಇದನ್ನೂ ಓದಿ : ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಈ ಕುರಿತು ಚಿತ್ರತಂಡವು ಕೂಡ ಪ್ರತಿಕ್ರಿಯಿಸಿದ್ದು, ‘ಅದ್ಧೂರಿಯಾಗಿ ಮೂಡಿ ಬಂದಿರುವ ಭಾರೀ ಬಜೆಟ್ ಸಿನಿಮಾವಿದು. ಕೋವಿಡ್ ಕಾರಣದಿಂದಾಗಿ ಅಂದುಕೊಂಡ ದಿನಾಂಕಗಳಂದು ಬಿಡುಗಡೆ ಮಾಡಲಿಲ್ಲ. ಇಂದಿಗೂ ಪರಿಸ್ಥಿತಿ ಚೆನ್ನಾಗಿಲ್ಲ. ಓಟಿಟಿಯಲ್ಲಿ ಬಿಡುಗಡೆ ಮಾಡುವುದು ಅನಿವಾರ್ಯವಾಗಿದೆ” ಎಂದಿದೆ. ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಸಿನಿಮಾ ಇದಾಗಿದ್ದು, ರೋಶನ್ ಆಂಡ್ರ್ಯೂಸ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ. ಸಿನಿಮಾ ಎಲ್ಲಿ ಬಿಡುಗಡೆ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

  • ಮಗಳಿಗೆ ಸೆಲ್ಯೂಟ್ ಹೊಡೆದ ತಂದೆಯ ಫೋಟೋ ವೈರಲ್

    ಮಗಳಿಗೆ ಸೆಲ್ಯೂಟ್ ಹೊಡೆದ ತಂದೆಯ ಫೋಟೋ ವೈರಲ್

    – ಮಗಳು ಡಿವೈಎಸ್‍ಪಿ, ತಂದೆ ಸರ್ಕಲ್ ಇನ್ಸ್ ಪೆಕ್ಟರ್
    – ಫೋಟೋ ನೋಡಿ ನೆಟ್ಟಿಗರು ಫಿದಾ
    – ನೆಟ್ಟಿಗರಿಂದ ಭಾವನಾತ್ಮಕ ಕಾಮೆಂಟ್

    ಹೈದರಾಬಾದ್: ಆಂಧ್ರಪ್ರದೇಶದ ಪೊಲೀಸ್ ಟ್ವಿಟ್ಟರ್ ಖಾತೆಯಲ್ಲಿ ಭಾವನಾತ್ಮಕವಾದ ಫೋಟೋವೊಂದನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

    ಹೌದು. ಕರ್ತವ್ಯದಲ್ಲಿದ್ದ ತಂದೆಯೊಬ್ಬರು ಕರ್ತವ್ಯದಲ್ಲಿದ್ದ ತನ್ನ ಮಗಳಿಗೆ ಸೆಲ್ಯೂಟ್ ಹೊಡೆದ ಫೋಟೋ ಇದಾಗಿದೆ. ಈ ಫೋಟೋವನ್ನು ಆಂಧ್ರಪ್ರದೇಶ್ ಪೊಲೀಸ್ ಟ್ವಿಟ್ಟರ್ ಖಾತೆಯಿಂದ ಭಾನುವಾರ ಶೇರ್ ಮಾಡಲಾಗಿತ್ತು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ನೆಟ್ಟಿಗರು ಕೂಡ ಭಾವನಾತ್ಮಕ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.

    ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ಯಾಮ್ ಸುಂದರ್ ಅವರ ಮಗಳು ಜೆಸ್ಸಿ ಪ್ರಶಾಂತಿ ಗುಂಟೂರು ಜಿಲ್ಲೆಯ ಡಿಎಸ್‍ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವೈರಲ್ ಆಗುತ್ತಿರುವ ಫೋಟೋದಲ್ಲಿ ಶ್ಯಾಮ್ ಸುಂದರ್ ಅವರು ತಮ್ಮ ಮಗಳಿಗೆ ಸೆಲ್ಯೂಟ್ ಹೊಡೆಯುತ್ತಿರುವುದನ್ನು ಕಾಣಬಹುದಾಗಿದೆ.

    ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿಯೇ ಶ್ಯಾಮ್ ಸುಂದರ್ ಅವರು ತನ್ನ ಮಗಳನ್ನು ಭೇಟಿಯಾಗಿದ್ದಾರೆ. ಜನವರಿ 3ರಂದು ರಾಜ್ಯ ಪೊಲೀಸರ ಸಭೆಯಲ್ಲಿ ಭಾಗವಹಿಸಿದಾಗ ತಿರುಪತಿಯಲ್ಲಿ ಶ್ಯಾಮ್ ಸುಂದರ್ ತಮ್ಮ ಮಗಳನ್ನು ಭೇಟಿಯಾಗಿದ್ದಾರೆ. ಈ ವೇಳೆ ತಂದೆಯೇ ಮಗಳಿಗೆ ಸೆಲ್ಯೂಟ್ ಹೊಡೆದಿರುವುದು ಭಾವನಾತ್ಮಕ ರೂಪ ಪಡೆದಿದೆ.

    ಆಂಧ್ರಪ್ರದೇಶ ಟ್ವಿಟ್ಟರ್ ಖಾತೆಯಲ್ಲಿ APPolice1stDutyMeet ಎಂದು ಬರೆದುಕೊಂಡು ಹ್ಯಾಶ್ ಟ್ಯಾಗ್ ಬಳಸಿ ಒಂದು ಕುಟುಂಬವನ್ನು ಒಟ್ಟುಗೂಡಿಸುತ್ತದೆ. ತಿರುಪತಿಯಲ್ಲಿ ನಡೆದ ಪೊಲೀಸ್ ಸಭೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಅವರು ತಮ್ಮ ಸ್ವಂತ ಮಗಳು ಜೆಸ್ಸಿ ಪ್ರಶಾಂತಿಗೆ ಹೆಮ್ಮೆಯಿಂದ ಸೆಲ್ಯೂಟ್ ಹೊಡೆದು ಗೌರವ ಸೂಚಿಸಿದ್ದಾರೆ. ನಿಜಕ್ಕೂ ಇದು ಒಂದು ಅಪರೂಪ ಹಾಗೂ ಮನಮುಟ್ಟುವಂತ ದೃಶ್ಯವಾಗಿದೆ ಎಂದು ಬರೆದುಕೊಳ್ಳಲಾಗಿದೆ.

    ಆಂಧ್ರ ಪೊಲಿಸ್ ಖಾತೆಯಲ್ಲಿ ಈ ಫೋಟೋ ಅಪ್ಲೋಡ್ ಆಗುತ್ತಿದ್ದಂತೆಯೇ ಸುಮಾರು 9 ಸಾವಿರಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ. ಅಲ್ಲದೆ 2 ಸಾವಿರಕ್ಕೂ ಅಧಿಕ ಮಂದಿ ರಿಟ್ವೀಟ್ ಮಾಡಿದ್ದಾರೆ. ಎಂತಹ ಅದ್ಭುತ ಕ್ಷಣ..! ಇಲ್ಲಿ ತಂದೆ ತನ್ನ ಮಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಅದು ಮಗಳ ನಗು ತಂದೆ- ಮಗಳ ಸಂಬಂಧವನ್ನು ವಿವರಿಸಿದೆ ಎಂದು ಒಬ್ಬರು ಕಾಮೆಂಟ್ ಮಾಡಿದರೆ, ಮತ್ತೊಬ್ಬರು ನಿಜಕ್ಕೂ ಎಂತಹ ಹೆಮ್ಮೆಹ ಕ್ಷಣ ಎಂದು ಬಣ್ಣಿಸಿದ್ದಾರೆ. ಹೀಗೆ ಹಲವಾರ ಕಾಮೆಂಟ್ ಗಳು ಬಂದಿವೆ.

  • ವೈರಲ್ ಆಗಿದೆ 5ರ ಪೋರನ ಸೆಲ್ಯೂಟ್ ಮಾಡುವ ವೀಡಿಯೋ

    ವೈರಲ್ ಆಗಿದೆ 5ರ ಪೋರನ ಸೆಲ್ಯೂಟ್ ಮಾಡುವ ವೀಡಿಯೋ

    ನವದೆಹಲಿ: ಇಂಡೋ-ಟಿಬೆಟನ್ ಗಡಿಯಲ್ಲಿ 5ರ ಪೋರ ಖಡಕ್ ಆಗಿ ಸೆಲ್ಯೂಟ್ ಮಾಡಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಪುಟ್ಟ ಪೋರ ಲಡಾಖ್‍ನಲ್ಲಿ ನಿಂತು ಖಡಕ್ ಆಗಿ ಸೆಲ್ಯೂಟ್ ಹೊಡೆದಿದ್ದು, ಇದೀಗ ನೆಟ್ಟಿಗರ ಮನ ಗೆದ್ದಿದೆ. ಸಾಕಷ್ಟು ಜನ ಶೇರ್ ಮಾಡಿ, ಕಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವೀಡಿಯೋವನ್ನು ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಸೈನಿಕರು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೀಗ ಸಖತ್ ವೈರಲ್ ಆಗಿದೆ.

    ಪುಟ್ಟ ಪೋರ ಉತ್ಸಾಹಭರಿತನಾಗಿ ಹಾಗೂ ಮುಗ್ದತೆಯಿಂದ ಸೆಲ್ಯೂಟ್ ಮಾಡಿದ್ದು, ಸಾಕಷ್ಟು ಜನರ ಮನ ಗೆದ್ದಿದೆ. ಈ ಬಾಲಕನಿಗೆ ಇಂದು ಪ್ಯಾರಾ ಮಿಲಿಟರಿ ಪಡೆ ಸನ್ಮಾನ ಮಾಡಿದೆ. ನವಾಂಗ್ ನಮ್‍ಗ್ಯಾಲ್(5) ಎಲ್‍ಕೆಜಿ ವಿದ್ಯಾರ್ಥಿಯಾಗಿದ್ದು, ಲಡಾಖ್‍ನ ಚುಶುಲ್ ಪ್ರದೇಶದ ನಿವಾಸಿಯಾಗಿದ್ದಾನೆ. ಬಾಲಕ ಸೈನಿಕರಿಗೆ ಸೆಲ್ಯೂಟ್ ಮಾಡುವ ಈ ವೀಡಿಯೋವನ್ನು ಐಟಿಬಿಪಿ ಅಕ್ಟೋಬರ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಾಗಿನಿಂದ ಜಾಲತಾಣಗಳಲ್ಲಿ ಸೆನ್ಸೇಶನ್ ಕ್ರಿಯೇಟ್ ಮಾಡಿದ್ದಾನೆ.

    ಬಾಲಕನ ಉತ್ಸಾಹ ಮುಗ್ದತೆಗೆ ಮನಸೋತ ಐಟಿಬಿಪಿ ಅಧಿಕಾರಿಗಳು ಇಂದು ಆತನಿಗೆ ಸೇನೆ ಸಮವಸ್ತ್ರ ಹಾಕಿ ಸನ್ಮಾನಿಸಿದ್ದಾರೆ. ಸಮವಸ್ತ್ರ ಧರಿಸಿ ಕ್ಯಾಂಪ್‍ನಲ್ಲಿ ಬಾಲಕ ಸೆಲ್ಯೂಟ್ ಮಾಡುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಐಟಿಬಿಪಿ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದ್ದು, ‘ಹ್ಯಾಪಿ ಆ್ಯಂಡ್ ಇನ್‍ಸ್ಪೈರಿಂಗ್ ಅಗೇನ್’ ಎಂದು ಬರೆದು ವೀಡಿಯೋ ಟ್ವೀಟ್ ಮಾಡಲಾಗಿದೆ.

    ಮೂಲ ವೀಡಿಯೋವನ್ನು ಐಟಿಬಿಪಿ ಅಧಿಕಾರಿ ಸೆರೆ ಹಿಡಿದಿದ್ದು, ಬಾಲಕ ಸೈನಿಕರಿಗೆ ಸೆಲ್ಯೂಟ್ ಮಾಡುವುದನ್ನು ತೋರಿಸಲಾಗಿದೆ. ಮೊಬೈಲ್ ಹಿಡಿದು ವೀಡಿಯೋ ಮಾಡುತ್ತಿದ್ದ ಅಧಿಕಾರಿ ಈ ರೀತಿ ಮಾಡು ಎಂದು ನಿರ್ದೇಶನ ನೀಡಿದಂತೆ ಬಾಲಕ ಉತ್ಸಾಹಭರಿತನಾಗಿ ಹೆಜ್ಜೆ ಹಾಕಿದ್ದಾನೆ.

  • ಸ್ವಾತಂತ್ರ್ಯೋತ್ಸವಕ್ಕೆ ಪರೇಡ್, ಸೆಲ್ಯೂಟ್ ಇರುವುದಿಲ್ಲ: ಬಸವರಾಜ ಬೊಮ್ಮಾಯಿ

    ಸ್ವಾತಂತ್ರ್ಯೋತ್ಸವಕ್ಕೆ ಪರೇಡ್, ಸೆಲ್ಯೂಟ್ ಇರುವುದಿಲ್ಲ: ಬಸವರಾಜ ಬೊಮ್ಮಾಯಿ

    ಉಡುಪಿ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಕೇಂದ್ರದಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

    ಉಡುಪಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದಂದು ಕಮಾಂಡರ್ಸ್ ಇರುತ್ತಾರೆ. ಆದರೆ ಪರೇಡ್ ಇರುವುದಿಲ್ಲ. ತಂಡ ತಂಡಗಳು ಬಂದು ಸೆಲ್ಯೂಟ್ ಮಾಡ ಇರುವುದಿಲ್ಲ. ಕೇಂದ್ರದ ನಿಯಮಾವಳಿ ಪ್ರಕಾರ ಹಬ್ಬ ಆಚರಣೆ ನಡೆಸಬೇಕು. ಎಲ್ಲರೆದುರಲ್ಲೇ ಧ್ವಜಾರೋಹಣ ಮಾಡಲಾಗುತ್ತದೆ. ಆದರೆ ಮೈದಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದರು.

    ಸ್ವಾತಂತ್ರ್ಯೋತ್ಸವ ವೀಕ್ಷಣೆಗೆ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಆಯಾಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಮಳೆ ಕೂಡ ಇರುವುದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸುವುದು ಕಷ್ಟ. ರಾಷ್ಟ್ರೀಯ ಆಚರಣೆಗೆ ಯಾವುದೇ ಕೊರತೆಯಾಗದಂತೆ ಗೌರವದ ಸ್ವಾತಂತ್ರ್ಯೋತ್ಸವ ನಡೆಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

  • ಕಾರವಾರ ಬಂದರಿನಲ್ಲಿ ಮಿಂಚಿದ ವಿಕ್ರಮಾದಿತ್ಯ- ಕೊರೊನಾ ವಾರಿಯರ್ಸ್‍ಗೆ ಸೆಲ್ಯೂಟ್

    ಕಾರವಾರ ಬಂದರಿನಲ್ಲಿ ಮಿಂಚಿದ ವಿಕ್ರಮಾದಿತ್ಯ- ಕೊರೊನಾ ವಾರಿಯರ್ಸ್‍ಗೆ ಸೆಲ್ಯೂಟ್

    – ಕೇರಳ, ಮುಂಬೈ ಬಂದರುಗಳಲ್ಲೂ ನಮನ

    ನವದೆಹಲಿ: ದೇಶಾದ್ಯಂತ ಭಾರತೀಯ ಮೂರು ಪಡೆಯ ಯೋಧರಿಂದ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸಲಾಗಿದ್ದು, ವಾಯು ಸೇನೆಯಿಂದ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿಗೈದರೆ, ಅತ್ತ ಇಂಡಿಯನ್ ನೇವಿ ಹಡಗುಗಳು ದೀಪಾಲಂಕಾರದಿಂದ ಕಂಗೊಳಿಸುವ ಮೂಲಕ ಗೌರವ ಸಲ್ಲಿಸಿದವು. ಕಾರವಾರದ ನೌಕಾ ನೆಲೆಯಲ್ಲಿ ವಿಕ್ರಮಾದಿತ್ಯ ಸಹ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು.

    ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸುವ ಸಲುವಾಗಿ ಇಂದು ಐಎನ್‍ಎಸ್ ವಿಕ್ರಮಾದಿತ್ಯ ಹಡಗಿನಲ್ಲಿ ಬಣ್ಣದ ಲೈಟುಗಳನ್ನು ಅಲಂಕಾರ ಮಾಡಿ ಪಟಾಕಿ ರಾಕೆಟ್ ಮೂಲಕ ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು. ಕಾರವಾರದ ಅರಗಾದ ಕದಂಬ ನೌಕಾ ನೆಲೆಯಲ್ಲಿ ದೇಶದ ಅತಿದೊಡ್ಡ ಯುದ್ಧ ನೌಕೆ ವಿಕ್ರಮಾದಿತ್ಯ ಹಡಗಿನಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಟಡುತ್ತಿರುವ ಕೊರೊನಾ ಯೋಧರಾದ ವೈದ್ಯರು, ಶುಶ್ರೂಷಕರು, ಪೊಲೀಸರು ಹಾಗೂ ನೈರ್ಮಲ್ಯ ಕೆಲಸಗಾರರಿಗೆ ಗೌರವ ಸಲ್ಲಿಸಲಾಯಿತು.

    ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು, ಶುಶ್ರೂಷಕರು, ಪೊಲೀಸರು ಹಾಗೂ ನೈರ್ಮಲ್ಯ ಕೆಲಸಗಾರರಿಗೆ ಗೌರವ ಸಲ್ಲಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಕಾರ್ಯವನ್ನು ಹಮ್ಮಿಕೊಂಡಿತ್ತು. ಬೆಳಗ್ಗೆ ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್‍ಗಳು ಪುಷ್ಪವೃಷ್ಠಿಗೈದರೆ, ಸಂಜೆ ಇಂಡಿಯನ್ ನೇವಿ ಹಡಗುಗಳಲ್ಲಿ ದೀಪಾಲಂಕಾರ ಮಾಡಲಾಗಿತ್ತು.

    ದೇಶದಲ್ಲೆಡೆ ಅಭಿನಂದನೆ ಸಲ್ಲಿಸಲಾಗಿದ್ದು, ಭಾರತೀಯ ಮೂರು ಪಡೆಯ ಯೋಧರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕೊರೊನಾ ವಾರಿಯರ್ಸ್ ಮೇಲೆ ಪುಷ್ಪವೃಷ್ಠಿ ಮಾಡಿದರು. ಚೆನ್ನೈ ರಾಜೀವ್ ಗಾಂಧಿ ಆಸ್ಪತ್ರೆ, ಬೆಂಗಳೂರಿನಲ್ಲಿ ಕಮಾಂಡ್, ವಿಕ್ಟೋರಿಯಾ ಆಸ್ಪತ್ರೆ, ದೆಹಲಿಯ ಏಮ್ಸ್, ರಾಜಸ್ಥಾನದ ಸಾವಾಯಿ ಮಾನ್‍ಸಿಂಗ್ ಆಸ್ಪತ್ರೆ, ಚಂಡೀಗಢ, ಗುವಾಹತಿ, ಪಾಟ್ನಾ, ಲೇಹ್‍ಗಳಲ್ಲಿ ಆಸ್ಪತೆಗಳ ಮೇಲೆ ಪುಷ್ಪವೃಷ್ಠಿ ಮಾಡಲಾಯಿತು.

    ಕಾರವಾರ, ಕೇರಳದ ಕೊಚ್ಚಿ ಬಂದರು, ಮುಂಬೈ ಹಾಗೂ ಇತರೆಡೆಗಳಲ್ಲಿ ಹಡಗುಗಳನ್ನು ದೀಪಾಲಂಕಾರದಿಂದ ಕಂಗೊಳಿಸುವಂತೆ ಮಾಡುವ ಮೂಲಕ ವಾರಿಯರ್ಸ್‍ಗೆ ಮನಮ ಸಲ್ಲಿಸಲಾಯಿತು.

  • ವಿಕೆಟ್ ಪಡೆದು ವಿರಾಟ್‍ಗೆ ಸೆಲ್ಯೂಟ್ ಹೊಡೆದ ಬಾಂಗ್ಲಾ ಬೌಲರ್

    ವಿಕೆಟ್ ಪಡೆದು ವಿರಾಟ್‍ಗೆ ಸೆಲ್ಯೂಟ್ ಹೊಡೆದ ಬಾಂಗ್ಲಾ ಬೌಲರ್

    ಕೋಲ್ಕತ್ತಾ: ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಪಡೆದ ಬಾಂಗ್ಲಾದೇಶ ಬೌಲರ್ ಸೆಲ್ಯೂಟ್ ಹೊಡೆದಿದ್ದಾರೆ.

    ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ ವಿರುದ್ಧದ ನಡೆಯುತ್ತಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿದ್ದು, ಗೆಲುವು ಸಾಧಿಸುವುದಕ್ಕೆ 4 ವಿಕೆಟ್ ಬೇಕಿದೆ. ವಿರಾಟ್ ಕೊಹ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು 300 ಗಡಿ ದಾಟಿಸಿದರು. ಚೇತೇಶ್ವರ ಪೂಜಾರ 55 ರನ್, ಅಜಿಂಕ್ಯಾ ರಹಾನೆ 51 ಹಾಗೂ ವಿರಾಟ್ ಕೊಹ್ಲಿ 136 ರನ್‍ಗಳ ಸಹಾಯದಿಂದ ಟೀಂ ಇಂಡಿಯಾ 9 ವಿಕೆಟ್ 347 ರನ್ ಸಿಡಿ ಡಿಕ್ಲೇರ್ ಘೋಷಿಸಿತು.

    ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಮೂಲಕ ಬಾಂಗ್ಲಾ ಬೌಲರ್‌ಗಳನ್ನು ಕಾಡಿದರು. ಇನ್ನಿಂಗ್ಸ್ ನ 80 ಓವರ್‌ನ ಎರಡನೇ ಎಸೆತವನ್ನು ಕೊಹ್ಲಿ ಬೌಂಡರಿಗೆ ಅಟ್ಟಲು ಹೋಗಿ ತೈಜುಲ್ ಇಸ್ಲಾಮ್‍ಗೆ ಕ್ಯಾಚ್ ಒಪ್ಪಿಸಿದರು. ವಿರಾಟ್ ಕೊಹ್ಲಿ 194 ಎಸೆತಗಳಲ್ಲಿ 18 ಬೌಂಡರಿ ಸೇರಿ 136 ರನ್ ಗಳಿಸಿ ಔಟಾದರು. ವಿರಾಟ್ ವಿಕೆಟ್ ಕಿತ್ತ ಸಂಭ್ರಮದಲ್ಲಿ ಬಾಂಗ್ಲಾ ತಂಡ ಇತ್ತು. ಈ ವೇಳೆ ನಗುತ್ತಲೇ ಪೆವಿಲಿಯನ್ ಕಡೆಗೆ ತೆರಳುತ್ತಿದ್ದ ಕೊಹ್ಲಿಗೆ ಬಾಂಗ್ಲಾದೇಶದ ಬೌಲರ್ ಇಬಾದತ್ ಹುಸೈನ್ ಸೆಲ್ಯೂಟ್ ಹೊಡೆದಿದ್ದಾರೆ.

    ಶನಿವಾರ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶವು ಎರಡನೇ ದಿನದಾಟದ ಅಂತ್ಯಕ್ಕೆ 32.3 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿ, ಭಾನುವಾರಕ್ಕ ಬ್ಯಾಟಿಂಗ್ ಮುಂದುವರಿಸಿದೆ.

    ವಿರಾಟ್ ದಾಖಲೆ:
    ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್‌ನಲ್ಲಿ ಶತಕ ಗಳಿಸಿದ ವಿಶ್ವದ 16ನೇ ಬ್ಯಾಟ್ಸ್‌ಮನ್ ಮತ್ತು ನಾಯಕನಾಗಿ 5ನೇ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು. ಪಾಕಿಸ್ತಾನದ ಅಜರ್ ಅಲಿ ಡೇ-ನೈಟ್ ಟೆಸ್ಟ್ ಇತಿಹಾಸದಲ್ಲಿ ಮೊದಲ ಶತಕವನ್ನು ಗಳಿಸಿದ್ದರು. ಅವರು ಅಕ್ಟೋಬರ್ 2016ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 302 ರನ್ ಗಳಿಸಿದ್ದರು. ಪಾಕಿಸ್ತಾನದ ಅಸಾದ್ ಶಫೀಕ್ ಮಾತ್ರ ಪಿಂಕ್ ಬಾಲ್ ಟೆಸ್ಟ್‍ನಲ್ಲಿ ಎರಡು ಶತಕಗಳನ್ನು ಗಳಿಸಿದ್ದಾರೆ.

    ಡೇ-ನೈಟ್ ಟೆಸ್ಟ್‌ನ ಮೊದಲ ದಿನದಾಟದ ಅಂತ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ತಮ್ಮ 32ನೇ ರನ್ ಪೂರ್ಣಗೊಳಿಸಿದ ಕೂಡಲೇ ಅವರು ಟೆಸ್ಟ್ ನಲ್ಲಿ ನಾಯಕನಾಗಿ 5,000 ರನ್‍ಗಳನ್ನು ಪೂರ್ಣಗೊಳಿಸಿದರು. ಈ ಸಾಧನೆ ಮಾಡಿದ ಮೊದಲ ಭಾರತೀಯ ಮತ್ತು ವಿಶ್ವದ ಆರನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್, ಅಲನ್ ಬಾರ್ಡರ್, ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್, ಕ್ಲೈವ್ ಲಾಯ್ಡ್, ವೆಸ್ಟ್ ಇಂಡೀಸ್‍ನ ಸ್ಟೀಫನ್ ಫ್ಲೆಮಿಂಗ್ ಇದ್ದಾರೆ. ಈ ಪಂದ್ಯಕ್ಕೂ ಮೊದಲು ವಿರಾಟ್ ಕೊಹ್ಲಿ ನಾಯಕನಾಗಿ 62.88 ಸರಾಸರಿಯಲ್ಲಿ 52 ಟೆಸ್ಟ್ ಪಂದ್ಯಗಳಲ್ಲಿ 4,968 ರನ್ ಗಳಿಸಿದ್ದರು. ಮಹೇಂದ್ರ ಸಿಂಗ್ ಧೋನಿ 60 ಪಂದ್ಯಗಳಲ್ಲಿ 3,454 ರನ್ ಗಳಿಸಿದ್ದು, ನಾಯಕನಾಗಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ.

    ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ 109 ಟೆಸ್ಟ್ ಪಂದ್ಯಗಳಲ್ಲಿ 8,659 ರನ್ ಗಳಿಸಿ ನಾಯಕನಾಗಿ ಅತಿ ಹೆಚ್ಚು ರನ್‍ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಲನ್ ಬಾರ್ಡರ್ 93 ಪಂದ್ಯಗಳಲ್ಲಿ 6,623 ರನ್ ಗಳಿಸಿ ಎರಡನೇ ಹಾಗೂ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ 77 ಪಂದ್ಯಗಳಲ್ಲಿ 6,542 ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

  • ಆರ್‌ಸಿಬಿಗೆ ಡೆಲ್ಲಿ ತಂಡದಿಂದ ಕನ್ನಡದಲ್ಲಿ ಸೆಲ್ಯೂಟ್

    ಆರ್‌ಸಿಬಿಗೆ ಡೆಲ್ಲಿ ತಂಡದಿಂದ ಕನ್ನಡದಲ್ಲಿ ಸೆಲ್ಯೂಟ್

    ಬೆಂಗಳೂರು: ಐಪಿಎಲ್ 2019ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ತಂಡ ಪ್ಲೇ ಆಫ್‍ಗೆ ಅರ್ಹತೆ ಪಡೆಯದೇ ಇದ್ದರೂ ಅಭಿಮಾನಿಗಳು ತಂಡಕ್ಕೆ ಬೆಂಬಲ ನೀಡಿದ್ದರು. ಈಗ ದೆಹಲಿ ಕ್ಯಾಪಿಟಲ್ಸ್ ತಂಡ ಕನ್ನಡದಲ್ಲೇ ಟ್ವೀಟ್ ಮಾಡಿ ಆರ್‌ಸಿಬಿಗೆ ಸೆಲ್ಯೂಟ್ ಮಾಡಿದೆ.

    ಈ ಬಾರಿ ಐಪಿಎಲ್‍ನಲ್ಲಿ ದೆಹಲಿ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಪ್ಲೇ ಆಫ್ ತಲುಪಿತು. ಬಳಿಕ ಎಲಿಮಿನೇಟರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲು ಕಂಡು ಟೂರ್ನಿಯಿಂದ ಹೊರ ನಡೆದಿತ್ತು.

    ಈಗ ಡೆಲ್ಲಿ ತಂಡದ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿಯ ಫೋಟೋ ಹಾಕಿ ಆರ್‌ಸಿಬಿ ತಂಡದ ಬಗ್ಗೆ ಕನ್ನಡದಲ್ಲಿ ಟ್ವೀಟ್ ಮಾಡಿದೆ. “ಈ ಸೀಸನ್‍ನಲ್ಲಿ, ಮೈದಾನದಲ್ಲಿ ನೀವು ನಮ್ಮೆದುರು ತೋರಿಸಿದ ಕೆಚ್ಚೆದೆಯ ಆಟಕ್ಕೆ ಮತ್ತು ದಿಟ್ಟ ಹೋರಾಟಕ್ಕೆ ಒಂದು ಸೆಲ್ಯೂಟ್ ಎಂದು ಕನ್ನಡದಲ್ಲಿ ಬರೆದಿದ್ದಾರೆ. ಅಲ್ಲದೆ 2 ಪಂದ್ಯ, ಲೆಕ್ಕವಿಲ್ಲದಷ್ಟು ನೆನಪುಗಳು. ಆರ್‌ಸಿಬಿ ತಂಡ ನಮ್ಮ ವಿರುದ್ಧ ಬೋಲ್ಡ್ ಹಾಗೂ ಚಾಲೆಂಜಿಂಗ್ ಪಂದ್ಯ ಆಡಿದೆ” ಎಂದು ಟ್ವೀಟ್ ಮಾಡಿದೆ.

    ದೆಹಲಿ ಕ್ಯಾಪಿಟಲ್ಸ್ ಮಾಡಿದ ಈ ಟ್ವೀಟ್‍ಗೆ ಕನ್ನಡಿಗರು ರೀ-ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಮುಂದಿನ ಐಪಿಎಲ್ ಸೀಸನ್‍ಗೆ ದೆಹಲಿ ತಂಡಕ್ಕೆ ಶುಭ ಕೋರಿದೆ. ಈ ಟ್ವೀಟ್‍ಗೆ ಇದುವರೆಗೂ 400ಕ್ಕೂ ಹೆಚ್ಚು ರೀ-ಟ್ವೀಟ್ ಹಾಗೂ 2,000ಕ್ಕೂ ಹೆಚ್ಚು ಲೈಕ್ಸ್ ಬಂದಿದೆ.

    ಆರ್‌ಸಿಬಿ 14 ಪಂದ್ಯದಲ್ಲಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ, 8 ಪಂದ್ಯದಲ್ಲಿ ಸೋಲು ಕಂಡಿತ್ತು. ಆರ್‌ಸಿಬಿ 11 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. ದೆಹಲಿ ತಂಡ 14 ಪಂದ್ಯದಲ್ಲಿ 9 ಪಂದ್ಯಗಳನ್ನು ಗೆದ್ದು, 5 ಪಂದ್ಯದಲ್ಲಿ ಸೋತಿತ್ತು.

  • ಶಾರೂಖ್ ಖಾನ್ ಜೊತೆ ನಟಿಸಲ್ಲ ಎಂದ ಬಾಲಿವುಡ್‍ ಸ್ಟಾರ್ ನಟಿ!

    ಶಾರೂಖ್ ಖಾನ್ ಜೊತೆ ನಟಿಸಲ್ಲ ಎಂದ ಬಾಲಿವುಡ್‍ ಸ್ಟಾರ್ ನಟಿ!

    ಮುಂಬೈ: ಬಾಲಿವುಡ್ ಬಾದಶಾ ಶಾರೂಖ್ ಖಾನ್ ಜೊತೆ ನಟಿಸಲು ಸಾಕಷ್ಟು ನಟಿಯರು ಕಾಯುತ್ತಿರುತ್ತಾರೆ. ಆದರೆ ಈಗ ಬಾಲಿವುಡ್ ಖ್ಯಾತ ನಟಿ ಶಾರೂಖ್ ಖಾನ್ ಜೊತೆ ನಟಿಸಲು ನಿರಾಕರಿಸಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತದೆ.

    ಶಾರೂಖ್ ಖಾನ್ ಈಗ ‘ಝೀರೋ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಮುಂದಿನ ಸಿನಿಮಾ ಗಗನಯಾತ್ರಿ ರಾಕೇಶ್ ಶರ್ಮಾ ಅವರ ಜೀವನಾಧರಿತ ಸಿನಿಮಾಗಿದ್ದು, ಆ ಸಿನಿಮಾಗೆ ‘ಸೆಲ್ಯೂಟ್’ ಹೆಸರನ್ನು ಇಡಲಾಗಿದೆ. ಈ ಚಿತ್ರಕ್ಕಾಗಿ ಬೆಬೋ ಕರೀನಾ ಕಪೂರ್ ಅವರನ್ನು ಅಪ್ರೋಚ್ ಮಾಡಲಾಗಿತ್ತು. ಆದರೆ ಕರೀನಾಗೆ ಶಾರೂಖ್ ಜೊತೆ ನಟಿಸಲು ಆಸಕ್ತಿಯಿಲ್ಲ ಎಂದು ಹೇಳಲಾಗುತ್ತಿದೆ.

    ಇತ್ತೀಚಿಗಷ್ಟೇ ‘ವೀರ್ ದಿ ವೆಡ್ಡಿಂಗ್’ ಪ್ರಚಾರದಲ್ಲಿ ಭಾಗಿಯಾಗಿದ್ದ ಕರೀನಾ ಕಪೂರ್ ಖಾನ್, “ನಾನು ಈಗ ಹೊಸದನ್ನು ಮಾಡಲು ಇಷ್ಟಪಡುತ್ತೇನೆ. ಬೇರೆ ಏನಾದರೂ ಮಾಡಬೇಕು ಎನ್ನಿಸುತ್ತದೆ. ನಾನು ಈಗ ದೊಡ್ಡ ಬಜೆಟ್ ಸಿನಿಮಾಗಳನ್ನು ಒಪ್ಪಿಕೊಳ್ಳುವುದ್ದಿಲ್ಲ. ನಾನು ಈಗ ಬೇರೆ ರೀತಿಯಲ್ಲೇ ಯೋಚಿಸುತ್ತಿದ್ದೇನೆ” ಎಂದು ಉತ್ತರಿಸಿದ್ದರು. ಕರೀನಾ ಅವರು ಶಾರೂಖ್ ಜೊತೆ ಸ್ಕ್ರೀನ್ ಶೇರ್ ಮಾಡದೇ ಇರುವ ವಿಚಾರ ಸೂಚ್ಯವಾಗಿ ಈ ರೀತಿ ಹೇಳಿದ್ದಾರೆ ಎನ್ನವ ಮಾತು ಈಗ ಬಾಲಿವುಡ್‍ನಲ್ಲಿ ಹರಿದಾಡುತ್ತಿದೆ.


    ಕರೀನಾ ಕಪೂರ್ ಈ ಚಿತ್ರದಲ್ಲಿ ನಟಿಸುತ್ತಿಲ್ಲ ಎಂಬ ಅನುಮಾನದ ಬೆನ್ನಲ್ಲೇ ಶಾರೂಖ್ ಚಿತ್ರಕ್ಕೆ ನಾಯಕಿಯಾಗಿ ಐಶ್ವರ್ಯ ರೈ ಬಚ್ಚನ್ ಹಾಗೂ ದೀಪಿಕಾ ಪಡುಕೋಣೆ ಹೆಸರು ಕೇಳಿಬರುತ್ತಿದೆ.

    ಸದ್ಯ ಐಶ್ವರ್ಯ ಈಗ ‘ಫನೇ ಖಾನ್’ ಚಿತ್ರದಲ್ಲಿ ನಟಿಸುತ್ತಿದ್ದು, ಜೊತೆಗೆ ‘ರಾತ್ ಔರ್ ದಿನ್’ ಹಾಗೂ ‘ವೋ ಕೋನ್ ತೀ’ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರಗಳಿಂದ ಬಿಡುವು ಸಿಕ್ಕರೆ ಅವರು ಶಾರೂಖ್ ಖಾನ್ ಜೊತೆ ನಟಿಸಲು ಒಪ್ಪಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.

    ಮತ್ತೊಂಡೆದೆ ದೀಪಿಕಾ ಪಡುಕೋಣೆ ಬೆನ್ನು ನೋವಿನಿಂದ ಬಳಲುತ್ತಿದ್ದು, ಚಿತ್ರದ ಸ್ಕ್ರಿಪ್ಟ್ ಗಳನ್ನು ನಿಧಾನವಾಗಿ ಪರಿಶೀಲಿಸಿ ಸಹಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಅವರು ‘ಸಪ್ನಾ ದೀದೀ’ ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಚಿತ್ರದ ನಟ ಇರ್ಫಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ.