ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನನ ಸಮಾಧಿ ಕುರಿತಂತೆ ನಟ ದರ್ಶನ್ ನಿನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿದ್ದರು. ಸಮಾಧಿ ಸಲ್ಲಬೇಕಾದ ಗೌರವ ನೀಡಿ ಎಂದು ಬರೆದುಕೊಂಡಿದ್ದರು. ನಟನ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದರ್ಶನ್ ಅವರ ಪ್ರಾಣಿ ಪ್ರೀತಿಗೆ ಅಭಿಮಾನಿಗಳು ಮತ್ತು ಪ್ರಾಣಿ ಪ್ರಿಯರು ಜೈ ಹೋ ಎಂದಿದ್ದಾರೆ.
ದರ್ಶನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ (Samadhi) ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ನಟ ದರ್ಶನ್ (Darshan) ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಅರ್ಜುನ್ ಗೆ ಸಿಗಬೇಕಾದ ಗೌರವವನ್ನು ಕೂಡಲೇ ಸಲ್ಲಿಸಬೇಕು ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಅವರು ಪ್ರಾಣಿಗಳ ಮೇಲಿನ ಪ್ರೀತಿಯನ್ನು ತೋರಿಸಿದ್ದಾರೆ.
ಸ್ವತಃ ಪ್ರಾಣಿ ಪ್ರಿಯರೂ ಆಗಿರುವ ದರ್ಶನ್, ಮೈಸೂರು ಮೃಗಾಲಯ ಸೇರಿದಂತೆ ನಾನಾ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಅವರು ದತ್ತು ಪಡೆದಿದ್ದಾರೆ. ಜೊತೆಗೆ ಮನೆಯಲ್ಲೂ ಹಲವು ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಅದರಲ್ಲೂ ಆನೆಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಕಾಟೇರ ಸಿನಿಮಾವನ್ನು ಹುತಾತ್ಮ ಆನೆ (Elephant) ಅರ್ಜುನ್ (Arjun) ಗೆ ಅರ್ಪಿಸಿದ್ದಾರೆ.
ಸಿನಿಮಾ ಶುರುವಾಗುವ ಮುನ್ನ ‘ನಾಡ ದೇವಿ ಚಾಮುಂಡಿಯ ಅಂಬಾರಿಯನ್ನು ಹೊತ್ತು ದಸರೆಯ ವೈಭವವನ್ನು ಜಗತ್ತಿನಾದ್ಯಂತ ಕಣ್ತುಂಬಿಸಿ ಕಣ್ಮರೆಯಾದ ದೃತ್ಯ ಮತ್ತು ದೈವ ಜೀವ ಅರ್ಜುನ ಇದಕ್ಕೆ ನಮ್ಮ ಕಾಟೇರ ಚಿತ್ರ ಅರ್ಪಣೆ’ ಎಂದು ಬರೆಯಲಾಗಿದೆ. ಈ ಮೂಲಕ ಅರ್ಜುನ್ ಗೆ ಗೌರವ ನೀಡಲಾಗಿದೆ.
ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ (Samadhi) ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ನಟ ದರ್ಶನ್ (Darshan) ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಅರ್ಜುನ್ ಗೆ ಸಿಗಬೇಕಾದ ಗೌರವವನ್ನು ಕೂಡಲೇ ಸಲ್ಲಿಸಬೇಕು ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಅವರು ಪ್ರಾಣಿಗಳ ಮೇಲಿನ ಪ್ರೀತಿಯನ್ನು ತೋರಿಸಿದ್ದಾರೆ.
ಸ್ವತಃ ಪ್ರಾಣಿ ಪ್ರಿಯರೂ ಆಗಿರುವ ದರ್ಶನ್, ಮೈಸೂರು ಮೃಗಾಲಯ ಸೇರಿದಂತೆ ನಾನಾ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಅವರು ದತ್ತು ಪಡೆದಿದ್ದಾರೆ. ಜೊತೆಗೆ ಮನೆಯಲ್ಲೂ ಹಲವು ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಅದರಲ್ಲೂ ಆನೆಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಕಾಟೇರ ಸಿನಿಮಾವನ್ನು ಹುತಾತ್ಮ ಆನೆ (Elephant) ಅರ್ಜುನ್ (Arjun) ಗೆ ಅರ್ಪಿಸಿದ್ದಾರೆ.
ಸಿನಿಮಾ ಶುರುವಾಗುವ ಮುನ್ನ ‘ನಾಡ ದೇವಿ ಚಾಮುಂಡಿಯ ಅಂಬಾರಿಯನ್ನು ಹೊತ್ತು ದಸರೆಯ ವೈಭವವನ್ನು ಜಗತ್ತಿನಾದ್ಯಂತ ಕಣ್ತುಂಬಿಸಿ ಕಣ್ಮರೆಯಾದ ದೃತ್ಯ ಮತ್ತು ದೈವ ಜೀವ ಅರ್ಜುನ ಇದಕ್ಕೆ ನಮ್ಮ ಕಾಟೇರ ಚಿತ್ರ ಅರ್ಪಣೆ’ ಎಂದು ಬರೆಯಲಾಗಿದೆ. ಈ ಮೂಲಕ ಅರ್ಜುನ್ ಗೆ ಗೌರವ ನೀಡಲಾಗಿದೆ.
ಅಪ್ಪು (Appu) ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿ ಎರಡು ವರ್ಷವೇ ಸಮೀಪಿಸುತ್ತಿದೆ. ಈಗಂತೂ ಸಮಾಧಿ (Samadhi) ಸಾಕ್ಷಾತ್ ದೇವಸ್ಥಾನವೇ ಆಗಿಬಿಟ್ಟಿದೆ. ಜೀವಿತಾವಧಿಯಲ್ಲೊಮ್ಮೆ ಪರಮಾತ್ಮ ಚಿರನಿದ್ರೆಗೆ ಜಾರಿರುವ ಆ ಜಾಗವನ್ನ ಕಣ್ಣಾರೆ ನೋಡಬೇಕೆಂಬ ಹಂಬಲದಿಂದ ನಿತ್ಯವೂ ಕಂಠೀರವ ಸ್ಟುಡಿಯೋಗೆ ಆಗಮಿಸುವವರ ಸಂಖ್ಯೆ ಅಧಿಕವಾಗ್ತಿದೆ. ಆಶ್ಚರ್ಯ ಅನ್ನೋ ರೀತಿಯಲ್ಲಿ ಈ ಒಂದು ತಿಂಗಳಲ್ಲಿ ಅಪ್ಪು ಸಮಾಧಿಗೆ ಭೇಟಿ ಕೊಡುವ ಮಹಿಳೆಯರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕದ ಭಾಗದ ಮಹಿಳೆಯರು ತಂಡೋಪತಂಡವಾಗಿ ಅಪ್ಪು ಸಮಾಧಿ ದರ್ಶನಕ್ಕೆ ಬರುತ್ತಿದ್ದಾರೆ.
ಹೌದು, ಪರಮಾತ್ಮನ ಪೂಜೆಗೆ ಕೊನೆಯಿಲ್ಲ. ಹೃದಯದಲ್ಲಿ ಅಪ್ಪು ಜಪ ನಿಲ್ಲೋದಿಲ್ಲ. ಇದ್ದಾಗಲೂ ಉಪಕಾರಿ, ಹೋದಮೇಲೂ ಜನಹಿತಕ್ಕಾಗಿ ಹುಟ್ಟಿರುವ ಜೀವವೇ ಅಪ್ಪು. ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲಾ ಬಿಟ್ಟುಹೋಗಿ ಒಂದು ವರ್ಷ ಎಂಟು ತಿಂಗಳೇ ಉರುಳಿದೆ. ಅಪ್ಪುವನ್ನ ನೆನೆದರೆ ಸಾಕು ಅಂದಿನಿಂದ ಇಂದಿಗೂ ಕಣ್ಣಂಚಲಿ ಇಳಿಯುವ ಕಂಬನಿ ನಿಲ್ಲಿಸಲಾಗದು. ಜನತೆಗೆ ಜೀವಿತಾವಧಿಯಲ್ಲೊಮ್ಮೆ ಕಾಶಿಗೋ, ಧರ್ಮಸ್ಥಳಕ್ಕೋ, ಮಂತ್ರಾಲಯಕ್ಕೋ ಹೋಗಬೇಕೆನ್ನುವ ಆಸೆಯೊಂದಿಗೆ ಅಪ್ಪು ಸಮಾಧಿಗೂ ಒಮ್ಮೆ ಭೇಟಿಕೊಡಬೇಕೆಂಬ ಸಂಕಲ್ಪ ಸೇರಿಕೊಂಡಿದೆ. ಪರಿಣಾಮ ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸಮಾಧಿ ಪ್ರವಾಸಿ ತಾಣವಾಗಿದೆ. ನಿತ್ಯ ಜನಜಂಗುಳಿಯಿಂದ ಗಿಜಿಗುಡುತ್ತದೆ. ವೀಕೆಂಡ್ ಬಂದರೆ ಸಾಕು ಜಾತ್ರೆಯೇ ಶುರುವಾಗಿಬಿಡುತ್ತೆ.
ಅಪ್ಪು (Puneeth Rajkumar) ಸಮಾಧಿಗೆ ಭೇಟಿ ಕೊಡುವವರ ಸಂಖ್ಯೆ ಪ್ರತಿನಿತ್ಯ ಎರಡು ದಿಂದ ಐದು ಸಾವಿರದವರೆಗೂ ಇರುತ್ತೆ. ವೀಕೆಂಡ್ನಲ್ಲಿ ಇದು 25 ಸಾವಿರಕ್ಕೂ ಹೋಗುತ್ತದೆ. ಇದೇ ಕಾರಣಕ್ಕೆ ಕಂಠೀರವ ಸ್ಟುಡಿಯೋ ಯಾವ ಪ್ರವಾಸಿ ಸ್ಥಳಕ್ಕೂ ಕಮ್ಮಿ ಇಲ್ಲದಂತಾಗಿದೆ. ಎಷ್ಟೋ ಕುಟುಂಬಗಳು ಇದರಿಂದ ಜೀವನ ನಿರ್ವಹಿಸುತ್ತಿವೆ. ಕಾರಣ ಕಂಠೀರವ ಸುತ್ತಮುತ್ತ ವ್ಯಾಪಾರ ವಹಿವಾಟು ಹೆಚ್ಚಾಗುತ್ತಿದೆ. ಫುಡ್ ಸ್ಟ್ರೀಟ್, ಆಟಿಕೆಗಳು, ಹೂವುಹಣ್ಣು, ಜ್ಯೂಸ್, ಗಿಫ್ಟ್ ಐಟಮ್ಸ್ ಹೀಗೆ ದೊಡ್ಡ ಮಟ್ಟಿಗೆ ವ್ಯಾಪಾರ ನಡೆಯುವ ಸ್ಥಳವಾಗಿದೆ ಅಪ್ಪು ಸಮಾಧಿ ಸುತ್ತಲಿನ ಜಾಗ. ಇದನ್ನೂ ಓದಿ:ಕೊನೆಗೂ ಮದುವೆ ಬಗ್ಗೆ ಸುಳಿವು ಕೊಟ್ಟ ‘ಬಿಗ್ ಬಾಸ್’ ಅನುಪಮಾ ಗೌಡ
ಬದುಕಿ ಬಾಳಬೇಕಾದ ಕಾಲದಲ್ಲಿ ದಿಢೀರ್ ಕಣ್ಮರೆಯಾದವರು ಅಪ್ಪು. ಓರ್ವ ಮನುಷ್ಯ ಮಾಡಲಾಗದಷ್ಟು ಸರಳತೆ, ದಾನ, ಸುಸಂಸ್ಕೃತ ನಡತೆಗೆ ಹೆಸರು ವಾಸಿಯಾದ ಪುನೀತ್ ಈ ಶತಮಾನದ ಹೀರೋ. ಈಗಾಗಲೇ ಇಂತಹ ಪುಣ್ಯಾತ್ಮ ಇದ್ದಾಗಂತೂ ನೋಡಲಾಗಲಿಲ್ಲ, ಸಮಾಧಿಯನ್ನಾದರೂ ದರ್ಶನ ಮಾಡೋಣ. ಪಾದದ ಬಳಿಯೊಂದು ಹೂವಿಟ್ಟು ಕೈಮುಗಿದು ಬರೋಣ ಎಂಬ ಸಂಕಲ್ಪದ ಪರಿಣಾಮ ಕಂಠೀರವ ಸ್ಟುಡಿಯೋ ಎಷ್ಟೋ ಕುಟುಂಬಗಳಿಗೆ ಇಂದು ಅನ್ನ ನೀಡುತ್ತಿದೆ. ಇದೀಗ ಮುಖ್ಯವಾಗಿ ಸರ್ಕಾರದ ಶಕ್ತಿ ಯೋಜನೆ ಜಾರಿ ಮಾಡಿರುವ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಅಭಿಮಾನಿಗಳ ಜನದಟ್ಟಣೆ ಹಿಂದಿನದಕ್ಕಿಂತ ದುಪ್ಪಟ್ಟಾಗಿದೆ.
ಜೂನ್ ತಿಂಗಳಿಂದ ಶಕ್ತಿ ಯೋಜನೆ (Shakti Yojana) ಜಾರಿಯಾಗಿರುವ ಹಿನ್ನೆಲೆ, ಕೆಲ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆ ಅಧಿಕವಾಗಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿ ಹಲವು ದೇವಸ್ಥಾನಗಳಿಗೆ ಭಕ್ತರು ಹೆಚ್ಚಾಗಿ ಆಗಮಿಸುತ್ತಿದ್ದಾರೆ. ಬಸ್ನಲ್ಲಿ ಉಚಿತ ಪ್ರಯಾಣದ ಹಿನ್ನೆಲೆ ಮಹಿಳೆಯರು (Woman) ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸದಲ್ಲಿ ತೊಡಗಿದ್ದಾರೆ. ಕೆಲ ಬಡ ಕುಟುಂಬಗಳಿಗೆ ದೂರದ ಪ್ರಯಾಣಕ್ಕೆ ಬೇಕಾದಷ್ಟು ಹಣ ಇರೋದಿಲ್ಲ. ಹೀಗಾಗಿ ಇಷ್ಟು ದಿನ ನೋಡುವ ಮನಸ್ಸಿದ್ದ ಜಾಗಕ್ಕೆ ಈಗ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದ ಮಹಿಳೆಯರು ಗುಂಪುಗುಂಪಾಗಿ ಬಸ್ ಹತ್ತುತ್ತಿದ್ದಾರೆ. ಹೀಗೆ ಅವರು ಬಂದಿಳಿಯೋದು ಗುರುಗುಂಟೆಪಾಳ್ಯ ಸಿಗ್ನಲ್ನಲ್ಲಿ. ಅಲ್ಲಿಂದ ಅವರು ಹೊರಡುವುದೇ ಸಮೀಪದಲ್ಲೇ ಇರುವ ಅಪ್ಪು ಸಮಾಧಿಗೆ.
ವೀಕೆಂಡ್ನಲ್ಲಿ ಪುನೀತ್ ಸಮಾಧಿ ಭಾರಿ ಜನಜಾತ್ರೆಯಿಂದ ಕೂಡಿರುತ್ತದೆ. ಉಚಿತ ಬಸ್ ಪ್ರಯಾಣ ಘೋಷಣೆ ಆದ ಬಳಿಕವಂತೂ ಬೆಂಗಳೂರು ಹೊರವಲಯದ ಅಭಿಮಾನಿಗಳು ಹಾಗೂ ರಾಯಚೂರು, ಬಳ್ಳಾರಿ, ಬೀದರ್, ಕೊಪ್ಪಳ, ಗುಲ್ಬರ್ಗಾದಿಂದಲೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕಂಠೀರವಕ್ಕೆ ಕಾಲಿಟ್ಟು ಮೊದಲಿಗೆ ಅಪ್ಪು ಸಮಾಧಿಗೆ ನಮಸ್ಕರಿಸಿ ಅಲ್ಲಿಂದ ಪಾರ್ವತಮ್ಮ, ಕೊನೆಗೆ ಅಣ್ಣಾವ್ರ ಸಮಾಧಿಗೆ ಒಂದು ದೀರ್ಘದಂಡ ನಮಸ್ಕಾರ ಹಾಕಿ ಹೊರನಡೆಯುತ್ತಾರೆ. ಹೀಗೆ ಬಂದವರು ಹೊರಗಡೆ ಹೋಗಿ ನೆನಪಿಗೊಂದು ವ್ಯಾಪಾರ ಮಾಡಿಕೊಂಡು ತಣ್ಣಗೆ ಕುಳಿತು ತಿಂಡಿ-ತಿನಿಸು ತಂಪುಪಾನೀಯ ಕುಡಿದು ಮನೆ ದಾರಿ ಹಿಡಿಯುತ್ತಾರೆ.
ಕರುನಾಡಿಗೆ ಅಪ್ಪು ಎಂದರೆ ಸಾಕ್ಷಾತ್ ಕಣ್ಣೆದುರಿಗಿನ ದೈವ. ಆ ದೈವಕ್ಕೆ ಕಟ್ಟಿಸಲಾದ ಮಂದಿರವೇ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಎನ್ನುವ ಭಾವ ಜನರದ್ದು. ಇದೇ ಕಾರಣಕ್ಕೆ ಮಕ್ಕಳು, ವೃದ್ಧರು ಅಪ್ಪು ಸಮಾಧಿಗೆ ದರ್ಶನ ಕೊಡ್ತಾರೆ. ಹರಕೆ ಕಟ್ಟಿಕೊಳ್ತಾರೆ. ಹಸುಗೂಸುಗಳನ್ನು ಕರೆತಂದು ನಾಮಕರಣ ಮಾಡ್ತಾರೆ. ಹೊಸತೇನಾದರೂ ಕೆಲಸ ಪ್ರಾರಂಭಿಸಬೇಕಾದರೆ ಅಪ್ಪು ಸಮಾಧಿಗೆ ನಮಿಸಿ ಮುಂದಿನ ಹೆಜ್ಜೆ ಇಡ್ತಾರೆ. ಶಕ್ತಿ ಯೋಜನೆ ಜಾರಿಯಾದ್ಮೇಲೆ ಅಪ್ಪು ಅಭಿಮಾನಿಗಳಿಗೆ ತಮ್ಮ ಆಸೆ ಪೂರೈಸಿಕೊಳ್ಳುವ ದಾರಿ ಇನ್ನಷ್ಟು ಸುಲಭವಾಗಿದೆ.
ಅಪ್ಪು ಅಂತಿಮ ದರ್ಶನದ ವೇಳೆ 25 ಲಕ್ಷ ಜನರು ಸೇರಿ ಇತಿಹಾಸವೇ ನಿರ್ಮಾಣವಾಗಿತ್ತು. ಬಳಿಕ ಸುಮಾರು ಮೂರು ತಿಂಗಳವರೆಗೂ ಅಪ್ಪು ಸಮಾಧಿ ಯಾವ ಧಾರ್ಮಿಕ ಕ್ಷೇತ್ರಕ್ಕೂ ಕಮ್ಮಿ ಇಲ್ಲದಂತೆ ಜನಸ್ತೋಮದಿಂದ ಕೂಡಿತ್ತು. ಸುಮಾರು ಒಂದು ವರ್ಷದವರೆಗೂ ಇದೇ ನಡೆಯುತ್ತಾ ಬಂತು. ಇದೀಗ ಎರಡು ವರ್ಷ ಸಮೀಪಿಸುತ್ತಿದ್ದರೂ ಅಪ್ಪು ಸಮಾಧಿಗೆ ಆಗಮಿಸುವವರ ಸಂಖ್ಯೆ ಇಳಿಮುಖವಾಗಿಲ್ಲ. ಇದಕ್ಕೇ ಅನ್ನೋದು ಅಪ್ಪು ಅಮರ. ನಗುವಿಗೆ ಬರ ಇರದ ರಾಜಕುಮಾರ.
ಕನ್ನಡ ಸಿನಿಮಾ ರಂಗದ ಮೇರುನಟ ಡಾ.ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆಗುತ್ತಾ? ಇಂತಹ ಆತಂಕದ ಮಾಹಿತಿಯನ್ನು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಹೊರಹಾಕಿದ್ದಾರೆ. ಈ ಕುರಿತು ಅವರು ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಯಾವುದೇ ಕಾರಣಕ್ಕೂ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ಯಜಮಾನರ (ವಿಷ್ಣುವರ್ಧನ್) ಸಮಾಧಿಯನ್ನು ನೆಲಸಮ ಮಾಡುವುದಕ್ಕೆ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.
ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿಯ ಜಾಗದ ಕುರಿತು ಕಳೆದ ಹದಿಮೂರು ವರ್ಷಗಳಿಂದ ವಿವಾದ ಕೋರ್ಟ್ ನಲ್ಲಿದೆ. ಹಾಗಾಗಿ ಹಿರಿಯ ನಟ ಬಾಲಣ್ಣ ಕುಟುಂಬ ಹಾಗೂ ವಿಷ್ಣು ಅಭಿಮಾನಿಗಳ ನಡುವೆ ತಿಕ್ಕಾಟವೂ ಹಲವು ವರ್ಷಗಳಿಂದ ನಡೆಯುತ್ತಾ ಬಂದಿದೆ. ಕೋರ್ಟ್ ನಲ್ಲಿರುವ ಕೇಸ್ ಅಂತಿಮ ಹಂತಕ್ಕೆ ತಲುಪಿದ್ದು, ಬಾಲಣ್ಣ ಕುಟುಂಬದವರು ವಿಷ್ಣು ಸಮಾಧಿಯನ್ನು ನೆಲಸಮ ಮಾಡುವಂತೆ ಮಾನ್ಯ ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಷಯವನ್ನೇ ವೀರಕಪುತ್ರ ಶ್ರೀನಿವಾಸ್ ತಮ್ಮ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.
ವೀರಕಪುತ್ರ ಶ್ರೀನಿವಾಸ್ ವಿಡಿಯೋದಲ್ಲಿ ಹೇಳಿದಂತೆ, ‘ಬಾಲಣ್ಣ ಕುಟುಂಬದವರಾದ ಕಾರ್ತಿಕ್ ಯಜಮಾನರ ಪುಣ್ಯಭೂಮಿಗೆ ಸಾಕಷ್ಟು ತೊಂದರೆ ಕೊಡುತ್ತಿದ್ದಾರೆ. ವಿಷ್ಣುವರ್ಧನ್ ಕುಟುಂಬದವರಿಗೆ ಈ ಜಾಗವೇ ಇಷ್ಟವಿಲ್ಲವೆಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಅಭಿಮಾನಿಗಳು ಪುಣ್ಯಭೂಮಿಗೆ ಕಾಲಿಡದಂತೆ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಇಲ್ಲಿಗೆ ನೂರು ಜನರೂ ಬರುವುದಿಲ್ಲ ಎಂದು ಸುಳ್ಳುಗಳನ್ನು ಹರಡುತ್ತಿದ್ದಾರೆ. ಹೀಗೆಯೇ ಸುಳ್ಳು ಹೇಳಿದರೆ, ನಾವೂ ಕೂಡ ಅವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಹಾಗಂತ ಅಭಿಮಾನ ಸ್ಟುಡಿಯೋದ ಜಾಗ, ಅವರ ಪಿತ್ರಾರ್ಜಿತ ಆಸ್ತಿಲ್ಲ. ಸರಕಾರ ನೀಡಿದ್ದು. ಈ ಕುರಿತು ನಾವೂ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.
ಮುಂದುವರೆದು ಮಾತನಾಡಿರುವ ಶ್ರೀನಿವಾಸ್, ‘ವಿಷ್ಣುವರ್ಧನ್ ಪುಣ್ಯಭೂಮಿಗೆ ಕೇಳುತ್ತಿರುವುದು ಕೇವಲ ಹತ್ತು ಗುಂಟೆ ಜಾಗ. ಈ ಹಿಂದೆ ಬಾಲಣ್ಣ ಕುಟುಂಬದವರು ಜಿಲ್ಲಾಧಿಕಾರಿಗಳ ಎದುರು ಹತ್ತು ಗುಂಟೆ ಜಾಗ ಕೊಡುವುದಾಗಿ ಹೇಳಿದ್ದರು. ಪತ್ರವನ್ನೂ ಕೊಟ್ಟಿದ್ದರು. ಈಗ ಬೇರೆ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ನಾವು ಪುಣ್ಯಭೂಮಿಯನ್ನು ಉಳಿಸಿಕೊಳ್ಳಲು ಎಂತಹ ಹೋರಾಟಕ್ಕೂ ಸಿದ್ಧ. ಈ ಕುರಿತು ಬೃಹತ್ ಪ್ರತಿಭಟನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದ್ದಾರೆ.
ಇದೇ ವಿಷಯವಾಗಿ ವಿಷ್ಣುವರ್ಧನ್ ಅಳಿಯ ಅನಿರುದ್ಧ ಕೂಡ ವಿಡಿಯೋ ಸಂದೇಶವೊಂದನ್ನು ಕಳುಹಿಸಿದ್ದು, ‘ಅಭಿಮಾನ ಸ್ಟುಡಿಯೋದಲ್ಲೇ ಸಮಾಧಿ ಇರಬೇಕು ಎನ್ನುವುದು ನಮ್ಮ ಕುಟುಂಬದ ಆಸೆ. ಅಭಿಮಾನಿಗಳಿಗೆ ಪೂಜೆ ಸಲ್ಲಿಸಲು, ಅಲ್ಲಿಗೆ ಭೇಟಿ ನೀಡಲು ಬಾಲಣ್ಣ ಕುಟುಂಬ ಅನುಮತಿ ಕೊಡಬೇಕು. ಯಾವುದೇ ಕಾರಣಕ್ಕೂ ನೆಲಸಮ ಮಾಡುವಂತಹ ನಿರ್ಧಾರ ತಗೆದುಕೊಳ್ಳಬಾರದು. ನಮ್ಮ ಕುಟುಂಬ ಕೂಡ ಈ ವಿಷಯದಲ್ಲಿ ಅಭಿಮಾನಿಗಳ ಜೊತೆ ಇರುತ್ತದೆ’ ಎಂದು ಅವರು ಹೇಳಿದ್ದಾರೆ.
ಅಭಿಮಾನಿ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಉಳಿಸಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಮತ್ತು ವಿಷ್ಣುವರ್ಧನ್ ಕುಟುಂಬ ಪಣತೊಟ್ಟಿದೆ. ಆದರೆ, ಬಾಲಣ್ಣ ಕುಟುಂಬ ಇದಕ್ಕೆ ಅವಕಾಶ ಕೊಡುತ್ತಾ? ಮತ್ತು ಕೋರ್ಟ್ ಈ ಕುರಿತು ಯಾವ ರೀತಿಯ ತೀರ್ಪು ಕೊಡಬಹುದು ಎನ್ನುವ ಕುತೂಹಲ ಎಲ್ಲರದ್ದು.
Live Tv
[brid partner=56869869 player=32851 video=960834 autoplay=true]
ಇಂದು ಪುನೀತ್ ಪರ್ವ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ (Samadhi) ಬಳಿ ಅಭಿಮಾನಿಗಳ ದಂಡು ನೆರೆದಿದೆ. ಪುನೀತ್ ಪರ್ವಕ್ಕಾಗಿ ದೂರದ ಜಿಲ್ಲೆಗಳಿಂದ ಬಂದ ಅಭಿಮಾನಿಗಳು (Fans) ಮೊದಲು ಪುನೀತ್ ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ. ಕಂಠೀರವ ಸ್ಟೂಡಿಯೋ(Kantheerava Studio) ಸುತ್ತಲೂ ಅಭಿಮಾನಿಗಳು ತಂಡೋಪತಂಡವಾಗಿ ಸೇರಿದ್ದು, ಅಪ್ಪು ಸಮಾಧಿಯ ದರ್ಶನಕ್ಕೆ ಕಾಯುತ್ತಿದ್ದಾರೆ.
ಈ ಕುರಿತು ಅಭಿಮಾನಿಗಳು ಮಾತನಾಡಿ, ‘ಅಪ್ಪು ದರ್ಶನ ಪಡೆದು ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗ್ತೀವಿ. ನಮ್ಮ ದೇವರು ನಮ್ಮನ್ನ ಬಿಟ್ಟು ಹೋಗಿಲ್ಲ. ಅಪ್ಪು ನಮ್ಮ ಜೊತೆಯಲ್ಲೇ ಇದ್ದಾರೆ. ಅಪ್ಪು ಸಮಾಧಿಗೆ ಹೂವಿನ ಅಲಂಕಾರ ನಡೆಯುತ್ತಿದೆಯಂತೆ. ಅಲಂಕಾರ ಮುಗಿದ ಮೇಲೆ ದರ್ಶನಕ್ಕೆ ಬಿಡುವುದಾಗಿ ಹೇಳಿದ್ದಾರೆ. ಕಾಯುತ್ತಿದ್ದೇವೆ’ ಅಂತಾರೆ. ಬಳ್ಳಾರಿ, ಹೊಸಪೇಟೆ, ರಾಣೆಬೆನ್ನೂರು, ಹಾವೇರಿ ಸೇರಿ ಹಲವು ಕಡೆಯಿಂದ ಅಭಿಮಾನಿಗಳು ಇಲ್ಲಿಗೆ ಬಂದಿದ್ದಾರೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಸಕ್ಸಸ್ ಸೀಕ್ರೆಟ್ ಬಗ್ಗೆ ತಂದೆ ಭಾಸ್ಕರ್ ಶೆಟ್ಟಿ ಮಾತು
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ (Puneeth Rajkumar) ನೆನಪಿನಲ್ಲಿ ‘ಪುನೀತ್ ಪರ್ವ’ (Puneeth Parva) ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪುನೀತ್ ನಟನೆಯ ಕಟ್ಟಕಡೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.
ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಮಾತ್ರವಲ್ಲ, 40 ಸಾವಿರಕ್ಕೂ ಅಧಿಕ ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಕೂಡ ಮಾಡಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಬೆಂಗಳೂರು ಪೊಲೀಸರು ಭಾರೀ ಸಿದ್ದತೆಯನ್ನೇ ಮಾಡಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 10 ತಿಂಗಳು ಕಳೆದಿವೆ. ಹಾಗಾಗಿ ಪ್ರತಿ ತಿಂಗಳಿನಂತೆ ಈ ತಿಂಗಳವೂ ಅಪ್ಪು ಸಮಾಧಿಗೆ ತಿಂಗಳ ಪೂಜೆ ಸಲ್ಲಿಸಲಾಯಿತು. ಅಪ್ಪು ಸಮಾಧಿಗೆ ಎಡೆ ಇಟ್ಟು ಪೂಜೆ ಸಲ್ಲಿಸುವ ಮೂಲಕ ಅಗಲಿದ ಕುಟುಂಬದ ಸದಸ್ಯನನ್ನು ನೆನಪಿಸಿಕೊಂಡಿತು ಅಪ್ಪು ಕುಟುಂಬ.
ಈ ಬಾರಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅಮೆರಿಕಾಗೆ ತೆರಳಿರುವ ಕಾರಣದಿಂದಾಗಿ, ರಾಘವೇಂದ್ರ ರಾಜ್ ಕುಮಾರ್, ಪತ್ನಿ ಮಂಗಳಾ, ಪುತ್ರ ಯುವ ರಾಜ್ಕುಮಾರ್, ಪೂರ್ಣಿಮಾ ರಾಮ್ ಕುಮಾರ್, ಲಕ್ಷ್ಮೀ ಗೋವಿಂದರಾಜು ಸೇರಿದಂತೆ ಅಪ್ಪು ಕುಟುಂಬಸ್ಥರು ಕಂಠೀರ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದೆ. ತುಸು ಹೊತ್ತು ರಾಘವೇಂದ್ರ ರಾಜ್ ಕುಮಾರ್ ಭಾವುಕರಾಗಿದ್ದೂ ಕಂಡು ಬಂದಿತು. ಇದನ್ನೂ ಓದಿ: ಜಯಶ್ರೀ, ಚೈತ್ರಾ ಬೆಸ್ಟಿ ಅಂದ ರೂಪೇಶ್- ಸಾನ್ಯಾಗೆ ಶುರುವಾಯ್ತು ಹೊಟ್ಟೆಕಿಚ್ಚು..?
ಅಪ್ಪು ಕುಟುಂಬಸ್ಥರು ಮಾತ್ರವಲ್ಲ, ಪುನೀತ್ ಅಭಿಮಾನಿಗಳು ಕೂಡ ಇಂದು ಸಮಾಧಿ ಬಳಿ ಜಮಾಯಿಸಿದ್ದರು. ನೆಚ್ಚಿನ ನಟನ ಸಮಾಧಿಗೆ ಅವರು ಕೂಡ ಪೂಜೆ ಸಲ್ಲಿಸಿದ್ದರು. ರಾಜ್ಯದ ನಾನಾ ಭಾಗಗಳಿಂದ ಅಭಿಮಾನಿಗಳು ಇಂದು ಬಂದು ಅವರೂ ಎಡೆ ಇಟ್ಟು ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.
Live Tv
[brid partner=56869869 player=32851 video=960834 autoplay=true]
ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಲೈಗರ್ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲು ಉದ್ಯಾನ ನಗರಕ್ಕೆ ಆಗಮಿಸಿರುವ ಅವರು, ಮೊದಲಿಗೆ ಅಪ್ಪು ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಏರ್ ಪೋರ್ಟ್ ನಿಂದ ನೇರವಾಗಿಯೇ ಕಂಠೀರವ ಸ್ಟುಡಿಯೋಗೆ ಆಗಮಿಸಿದ ವಿಜಯ್ ದೇವರಕೊಂಡ, ಭಾವುಕರಾಗಿಯೇ ಅಪ್ಪು ಸಮಾಧಿಗೆ ನಮನ ಸಲ್ಲಿಸಿದರು.
ಆಗಸ್ಟ್ 25 ರಂದು ದೇಶಾದ್ಯಂತ ರಿಲೀಸ್ ಆಗುತ್ತಿರುವ ಲೈಗರ್ ಸಿನಿಮಾದ ಪತ್ರಿಕಾಗೋಷ್ಠಿ ಮತ್ತು ಪ್ರಿ ರಿಲೀಸ್ ಇವೆಂಟ್ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಜಯ್ ದೇವರಕೊಂಡ, ಅನನ್ಯಾ ಪಾಂಡೆ, ನಟ ವಿಶ್, ನಿರ್ದೇಶಕ ಜಗನ್ನಾಥ್ ಪೂರಿ ಸೇರಿದಂತೆ ಹಲವರು ಬೆಂಗಳೂರಿಗೆ ಆಗಮಿಸಿದ್ದಾರೆ. ಅದಕ್ಕೂ ಮುನ್ನ ಎಲ್ಲರೂ ಅಪ್ಪು ಸಮಾಧಿಗೆ ಬಂದು ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು
ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ದೇಶದ ನಾನಾ ಭಾಗಗಳಲ್ಲಿ ಸಿನಿಮಾದ ಪ್ರಮೋಷನ್ ಶುರು ಮಾಡಿದೆ ಚಿತ್ರತಂಡ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಬಾಕ್ಸರ್ ಪಾತ್ರವನ್ನು ನಿರ್ವಹಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕರುನಾಡ ರಾಜರತ್ನ ಡಾ. ಪುನೀತ್ ರಾಜ್ಕುಮಾರ್ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸದ್ಯ ಪುನೀತ್ ಹುಟ್ಟುಹಬ್ಬವಾಗಿರುವ ಈ ವಿಶೇಷ ದಿನದಂದು ವೃದ್ಧೆಯೊಬ್ಬರು ಕಡ್ಲೆಪುರಿ ಹಾರ ತಯಾರಿಸಿಕೊಂಡು ಅಪ್ಪು ಸಮಾಧಿಗೆ ಆಗಮಿಸಿದ್ದರು.
ಗುಬ್ಬಿತಾಲ್ಲೂಕು ಮರಾಠಿಪಾಳ್ಯದಿಂದ ಬೆಂಗಳೂರಿನ ಕಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಸುಮಿತ್ರಾಬಾಯಿ ಎಂಬ ವೃದ್ಧೆ 40 ಎಳೆ ದಾರದಿಂದ ಪೋಣಿಸಿರುವ ಕಡ್ಲೆಪುರಿ ಹಾರವನ್ನು ತಯಾರಿಸಿಕೊಂಡು ಬಂದಿದ್ದು ಎಲ್ಲರ ಗಮನ ಸೆಳೆಯಿತು. ಇದನ್ನೂ ಓದಿ: ಸೇನಾ ಸಮವಸ್ತ್ರದಲ್ಲೇ ಜೇಮ್ಸ್ ಚಿತ್ರ ನೋಡಲು ಬಂದ ನಿವೃತ್ತ ಯೋಧ
ಇದೇ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸುಮಾರು 15 ದಿನಗಳಿಂದ 40 ಎಳೆ ದಾರದಿಂದ ಕಡ್ಲೆಪುರಿಯ ಹಾರವನ್ನು ಪೋಣಿಸಲಾಗಿದೆ. ಕಡ್ಲೆಪುರಿ ಹಾಗೂ ಸಿಹಿ ಬತಾಸಿನ ಮೂಲಕ ಹಾರ ತಯಾರಿಸಿರುವುದಾಗಿ ತಿಳಿಸಿದ್ದಾರೆ. ಪ್ರತಿ ವರ್ಷ ರಾಜ್ಕುಮಾರ್ ಅವರ ಹುಟ್ಟುಹಬ್ಬದಂದು ಕಡ್ಲೆಪುರಿ ಹಾರವನ್ನು ಮಾಡಿಕೊಂಡು ಬರುತ್ತಿದ್ದೆ. ಅಂದಿನಿಂದಲೂ ಪುನೀತ್ ರಾಜ್ಕುಮಾರ್, ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಎಲ್ಲರೂ ನನಗೆ ಪರಿಚಯವಿದ್ದಾರೆ ಎಂದರು.
ಎರಡು ಕಡ್ಲೆಪುರಿ ಹಾರವನ್ನು ತಯಾರಿಸಿದ್ದು, ಒಂದನ್ನು ಸಮಾಧಿ ಬಳಿಗೆ ತೆಗೆದುಕೊಂಡು ಬಂದಿದ್ದೇನೆ ಮತ್ತೊಂದು ಗುಬ್ಬಿಯಲ್ಲಿ ರಿಲೀಸ್ ಆಗುತ್ತಿರುವ ಪುನೀತ್ ಜೇಮ್ಸ್ ಸಿನಿಮಾದ ಪೋಸ್ಟರ್ಗೆ ಹಾಕಲು ಇಟ್ಟುಬಂದಿದ್ದೇನೆ. ದುಡ್ಡನ್ನು ಸಂಪಾದನೆ ಮಾಡಬಹುದು, ಆದರೆ ಪ್ರೀತಿಯನ್ನು ಸಂಪಾದನೆ ಮಾಡುವುದು ಬಹಳ ಕಷ್ಟವಿದೆ ಎಂದು ಹೇಳುತ್ತಾ ಭಾವುಕರಾದರು. ಇದನ್ನೂ ಓದಿ: ಕಲಾವಿದ ದೇವಿಕಿರಣ್ ಕೈಚಳಕದಲ್ಲಿ ಪವರ್ ಸ್ಟಾರ್ ಪುನೀತ್
ಇದೇ ವೇಳೆ ಅವರು ಬದುಕಿದ್ದಾಗ ಮನೆಗೆ ಕರೆದುಕೊಂಡು ಹೋಗಿ ಊಟ ನೀಡಿದ್ದರು. ಅಶ್ವಿನಿ ಅವರು ನನಗೆ ಎರಡು ಜೊತೆ ಸೀರೆ ಕೊಟ್ಟಿದ್ದಾರೆ ಎಂದು ನೆನೆದು ಕಣ್ಣೀರು ಹಾಕಿದರು. ನಂತರ ಸಮಾಧಿ ಬಳಿ ಶಿವರಾಜ್ಕುಮಾರ್ ಅವರು ಬರುವವರೆಗೂ ಕಾದು ನಂತರ ತೆರಳುತ್ತೇನೆ ಎಂದು ತಿಳಿಸಿದರು.
ಬೆಂಗಳೂರು: ಸ್ಯಾಂಡಲ್ವುಡ್ ನಟ ಡಾ.ಪುನೀತ್ ರಾಜ್ಕುಮಾರ್ ಸಮಾಧಿಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಭೇಟಿ ನೀಡಿ ದರ್ಶನ ಪಡೆದರು.
ಇಂದು ಪುನೀತ್ ರಾಜ್ಕುಮಾರ್ 47ನೇ ಹುಟ್ಟುಹಬ್ಬದ ಹಿನ್ನೆಲೆ ನಗರದ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಭೇಟಿ ನೀಡಿ ಪ್ರದಕ್ಷಿಣೆ ಹಾಕಿ ನಮನ ಸಲ್ಲಿಸಿದರು. ಇದೇ ವೇಳೆ ವರನಟ ಡಾ. ರಾಜ್ಕುಮಾರ್ ಹಾಗೂ ಪಾರ್ವತಮ್ಮ ರಾಜ್ಕುಮಾರ್ ಅವರ ಸಮಾಧಿಯ ದರ್ಶನವನ್ನು ಸಹ ಪಡೆದರು. ಇದನ್ನೂ ಓದಿ: ರಾಜ್ಯದ 400 ಥಿಯೇಟರ್ಗಳಲ್ಲಿ ಜೇಮ್ಸ್ ರಿಲೀಸ್
ಅಪ್ಪು ಜನುಮ ದಿನದ ಪ್ರಯುಕ್ತ ಇಂದು ಪುನೀತ್ ಅಭಿನಯದ ಬಹುನಿರೀಕ್ಷಿತ ಜೇಮ್ಸ್ ಸಿನಿಮಾ ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಲು ಮುಂಜಾನೆಯಿಂದಲೇ ಚಿತ್ರಮಂದಿರದತ್ತ ಜನ ಸಾಗರವೇ ಹರಿದುಬರುತ್ತಿದೆ. ಒಟ್ಟಾರೆ ಅಪ್ಪು ಹುಟ್ಟುಹಬ್ಬವನ್ನು ಕರುನಾಡಿನ ಜನತೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನೂ ಓದಿ: ಡಾ.ಪುನೀತ್ ರಾಜ್ಕುಮಾರ್ 47ನೇ ಜನ್ಮದಿನ – ಸಮಾಧಿ ಬಳಿ ಕೇಕ್ ಕತ್ತರಿಸಿದ ದೊಡ್ಮನೆ ಕುಟುಂಬ
ಬೆಂಗಳೂರು: ಅಪ್ಪು ಸಮಾಧಿ ಇರುವ ಕಂಠೀರವ ಸ್ಟುಡಿಯೋಗೆ ಶಕ್ತಿಧಾಮದ ಮಕ್ಕಳು ಭೇಟಿಕೊಟ್ಟಿದ್ದಾರೆ. ಸಮಾಧಿ ಮುಂದೆ ಕಣ್ಣೀರಿಟ್ಟ ಮಕ್ಕಳು, ಶಕ್ತಿಧಾಮದ ಹೆಸರು ಎಷ್ಟು ಸುಂದರ ಎಂದು ಹಾಡುತ್ತಾ ಅಪ್ಪು ಸಮಾಧಿಗೆ ನಮನ ಸಲ್ಲಿಸಿದ್ದಾರೆ.
ನಟ ಶಿವರಾಜ್ ಕುಮಾರ್ ಅವರು ಶಕ್ತಿಧಾಮದ ಮಕ್ಕಳಿಗೆ ಪ್ರಪಂಚ ಜ್ಞಾನ ನೀಡುವ ಸಲುವಾಗಿ ಹಲವು ಕಡೆ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಶಿವರಾಜ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಶಕ್ತಿಧಾಮ ಎಂದರೆ ಮಕ್ಕಳಿಗೆ ಊಟಾ ಹಾಕುತ್ತಾರೆ, ಓದುತ್ತಾರೆ ಎಂದು ಅಷ್ಟೇ ಅಲ್ಲ. ಅವರಿಗೆ ಪ್ರಪಂಚ ಜ್ಞಾನ ಬರಬೇಕು. ಹೀಗಾಗಿ ಅವರಿಗೆ ಹೊರ ಪ್ರಪಂಚ ತಿಳಿಬೇಕು ಅಂತ ಕೆಲವು ಕಡೆ ಪ್ರವಾಸ ಮಾಡುತ್ತಿದ್ದೇವೆ. ಫಸ್ಟ್ ಟೈಂ ಮಕ್ಕಳು ಬೆಂಗಳೂರಿಗೆ ಬಂದರು, ವಿಧಾನಸೌಧ, ನಾಳೆ ನಂದಿ ಬೆಟ್ಟ ಹೀಗೆ ಅನೇಕ ಕಡೆ ಕರೆದುಕೊಂಡು ಹೋಗುತ್ತಾ ಇದ್ದೇವೆ ಎಂದು ಹೇಳಿದ್ದಾರೆ.
ಅಪ್ಪಾಜಿ ಬೆಳಕು ಕೊಟ್ಟರು, ಅಮ್ಮ ಶಕ್ತಿಕೊಟ್ಟಿದ್ದಾರೆ ಶಕ್ತಿದಾಮಕ್ಕೆ. ಗೀತಾ ಮಕ್ಕಳ ಜೊತೆಯಲ್ಲೇ ಇದ್ದು ಮಕ್ಕಳಾಗಿದ್ದರು. ಗೀತಾ ಅಮ್ಮನ ಸ್ಥಾನದಲ್ಲಿ ನಿಂತು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. 150ಕ್ಕೂ ಹೆಚ್ಚು ಮಕ್ಕಳಿದ್ದಾರೆ, ಇನ್ನೂ ಮಕ್ಕಳು ಸೇರುತ್ತಿದ್ದಾರೆ. ಶಕ್ತಿ ಧಾಮಕ್ಕೆ ಅನೇಕರು ಸಹಾಯ ಮಾಡುತ್ತಿದ್ದಾರೆ. ಈ ಮಕ್ಕಳಲ್ಲಿ ಟ್ಯಾಲೆಟ್ಸ್ ಇದೆ. ಮಕ್ಕಳ ಜೊತೆ ಮಕ್ಕಳಾಗಿ ಇರಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇನ್ನೊಂದು ಆಕ್ಟರ್ ಒಳಗೆ ಹೋಗಿ ಡಬ್ ಮಾಡೋದು ತುಂಬಾ ಕಷ್ಟ, ಒಬ್ಬ ನಾಯಕನಾಗಿ ಅವರ ವಾಯ್ಸ್ ಇಮಿಟೇಟ್ ಮಾಡೋದು ಕಷ್ಟವಾಗುತ್ತದೆ. ಏನೋ ಪ್ರಯತ್ನ ಮಾಡಿ ಜೆಮ್ಸ್ಗೆ ಇಡೀ ಸಿನಿಮಾಗೆ ವಾಯ್ಸ್ ಕೊಟ್ಟಿದ್ದೇನೆ. ಎರಡೂವರೆ ದಿನ ವಾಯ್ಸ್ ಡಬ್ ಮಾಡಿದ್ದೇನೆ. ಅಪ್ಪುಗೆ ವಾಯ್ಸ್ ಕೊಡೊದು ಬಹಳ ಕಷ್ಟವಾಗುತ್ತೆ ಎಂದು ಕೊಂಡಿದ್ದೇನೆ. ಎಲ್ಲರಿಗೂ ಇಷ್ಟ ಆಗುತ್ತೆ ಅಂತ ಅನ್ಸುತ್ತೆ. ಬಹಳ ಕಷ್ಟ ಅಪ್ಪು ಇಲ್ಲದೇ ವಾಯ್ಸ್ ಕೊಡೋದು ಎಂದು ಹೇಳುತ್ತಾ ಭಾವಿಕರಾಗಿದ್ದಾರೆ.