Tag: Samajwadi Party

  • ಅಧಿಕಾರಕ್ಕೆ ಬಂದ್ರೆ ಟ್ರಿಪಲ್‌ ರೈಡಿಂಗ್‌ಗೆ ಅವಕಾಶ: SBSP ಭರವಸೆ

    ಅಧಿಕಾರಕ್ಕೆ ಬಂದ್ರೆ ಟ್ರಿಪಲ್‌ ರೈಡಿಂಗ್‌ಗೆ ಅವಕಾಶ: SBSP ಭರವಸೆ

    ಲಕ್ನೋ: ಪಂಚರಾಜ್ಯಗಳ ಚುನಾವಣೆಯ ಕೇಂದ್ರಬಿಂದುವಾಗಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ತಮ್ಮ ಪ್ರಣಾಳಿಕೆಗಳಲ್ಲಿ ಭರವಸೆಗಳ ಮಹಾಪೂರವನ್ನೇ ಹರಿಸಿವೆ. ಈ ನಡುವೆ ಸಮಾಜವಾದಿ ಪಕ್ಷದೊಂದಿಗೆ (ಎಸ್‌ಪಿ) ಮೈತ್ರಿ ಸಾಧಿಸಿರುವ ಸುಹೆಲ್‌ದೇವ್‌ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಅಚ್ಚರಿ ಮೂಡಿಸುವಂತಹ ಭರವಸೆಯೊಂದನ್ನು ನೀಡಿದೆ.

    ನಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಬೈಕ್‌ಗಳಲ್ಲಿ ಟ್ರಿಪಲ್‌ ರೈಡ್‌ಗೆ ಅನುಮತಿ ನೀಡಲಾಗುವುದು ಎಂದು ಎಸ್‌ಬಿಎಸ್‌ಪಿ ಅಧ್ಯಕ್ಷ ಹಾಗೂ ಯುಪಿ ಮಾಜಿ ಸಚಿವ ಓಂ ಪ್ರಕಾಶ್‌ ರಾಜ್‌ಭರ್‌ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬ್ರಿಟಿಷರು ಬಿಜೆಪಿ ರೂಪದಲ್ಲಿ ಮತ್ತೆ ಭಾರತಕ್ಕೆ ಬಂದಿದ್ದಾರೆ: ಲಾಲೂ ಪ್ರಸಾದ್ ಯಾದವ್

    ಬೈಕ್‌ಗಳಲ್ಲಿ ಟ್ರಪಲ್‌ ರೈಡ್‌ಗೆ ಅನುಮತಿ ನೀಡುತ್ತೇವೆ. ಅಂತಹವರಿಗೆ ಯಾವುದೇ ದಂಡ ವಿಧಿಸುವುದಿಲ್ಲ ಎಂದು ರಾಜ್‌ಭರ್‌ ತಿಳಿಸಿದ್ದಾರೆ.

    ಸೀಮಿತ ಆಸನ ಸಾಮರ್ಥ್ಯವಿರುವ ರೈಲುಗಳ ಕೋಚ್‌ಗಳಲ್ಲಿ ನೂರಾರು ಜನರು ಪ್ರಯಾಣಿಸುತ್ತಾರೆ. ಅವರಿಗೆ ಸರ್ಕಾರವಾಗಲಿ ಅಥವಾ ರೈಲ್ವೆ ವಿಭಾಗದವರಾಗಲಿ ದಂಡ ಹಾಕುತ್ತಾರೆಯೇ ಎಂದು ರಾಜ್‌ಭರ್‌ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಿಜಬ್‌ ವಿವಾದ ಇಲ್ಲ, ನಿಷೇಧ ಪ್ರಸ್ತಾಪವೂ ಇಲ್ಲ: ಗೃಹ ಸಚಿವ

    ಫೆ.10ರಿಂದ ವಿವಿಧ ಹಂತಗಳಲ್ಲಿ ಉತ್ತರ ಪ್ರದೇಶ ಚುನಾವಣೆ ನಡೆಯಲಿದೆ. ಮಾರ್ಚ್‌ 10ಕ್ಕೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

  • ನಕಲಿ ಸಮಾಜವಾದ: ಅಖಿಲೇಶ್‌ ಯಾದವ್‌ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ

    ನಕಲಿ ಸಮಾಜವಾದ: ಅಖಿಲೇಶ್‌ ಯಾದವ್‌ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ

    ಲಕ್ನೋ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದು, ಪ್ರಬಲ ಪ್ರತಿಸ್ಪರ್ಧಿಯಾಗಿರುವ ಸಮಾಜವಾದಿ ಪಕ್ಷವನ್ನು ಗುರಿಯಾಗಿಸಿ ಬಿಜೆಪಿ ಟೀಕಾಪ್ರಹಾರ ನಡೆಸುತ್ತಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸಮಾಜವಾದಿ ಪಕ್ಷ ಮತದಾರರನ್ನು ಪ್ರೇರೇಪಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಸಿದ್ದಾರೆ.

    ಇದು ನಕಲಿ ಸರ್ಕಾರ ವರ್ಸಸ್‌ ಗರೀಬ್‌ ಕ ಸರ್ಕಾರ (ಬಡವರ ಸರ್ಕಾರ) ನಡುವಿನ ಹೋರಾಟ. ಯುಪಿ ರಾಜ್ಯ ಸರ್ಕಾರ, ಬಡವರಿಗೆ ಮನೆ, ಹಿಂದುಳಿದ ವರ್ಗಗಳಿಗಾಗಿ ಯೋಜನೆಗಳು, ವೈದ್ಯಕೀಯ ಕಾಲೇಜುಗಳ ಸ್ಥಾಪನೆ, ಎಕ್ಸ್‌ಪ್ರೆಸ್‌ವೇಗಳು, ಹೆಣ್ಣುಮಕ್ಕಳ ವಿವಾಹಕ್ಕೆ ನೆರವು ಮುಂತಾದ ಸೇವಾಕಾರ್ಯಗಳನ್ನು ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್ ಖಾತೆಯಲ್ಲಿ ರಾಜ್ಯಪಾಲರನ್ನು ಬ್ಲಾಕ್ ಮಾಡಿದ ಮಮತಾ ಬ್ಯಾನರ್ಜಿ

    ಈಚಿನ ದಿನಗಳಲ್ಲಿ ಜನರು ಬಹಳಷ್ಟು ಕನಸು ಕಾಣುತ್ತಿದ್ದಾರೆ. ಕೆಲವರು ಮಾತ್ರ ನಿದ್ರೆ ಮಾಡುತ್ತಲೇ ಕನಸು ಕಾಣುತ್ತಿದ್ದಾರೆ. ಆದರೆ ಯೋಗಿ ಆದಿತ್ಯನಾಥ್‌ ಅವರು ಎಚ್ಚರವಾಗಿದ್ದಾರೆ. ಯುಪಿ ಅಭಿವೃದ್ಧಿಗಾಗಿ ಬದ್ಧರಾಗಿದ್ದಾರೆ ಎಂದು ಮೋದಿ ಬಣ್ಣಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಸವಾಲಾಗಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ರಾಜ್ಯದಲ್ಲಿ ಸರ್ಕಾರ ರಚಿಸುವುದಾಗಿ ಹೇಳಲು ಭಗವಾನ್‌ ಕೃಷ್ಣ ಪ್ರತಿದಿನ ರಾತ್ರಿ ಕನಸಿನಲ್ಲಿ ಬರುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು ಟಾಂಗ್‌ ನೀಡಿದ್ದಾರೆ. ಇದನ್ನೂ ಓದಿ: ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರ: ಅಣ್ಣಾ ಹಜಾರೆ

  • ಸಮಾಜವಾದಿ ಪಕ್ಷದವರು ಜಿನ್ನಾನ ಆರಾಧಕರು: ಯೋಗಿ ಆದಿತ್ಯನಾಥ್‌ ಟೀಕೆ

    ಸಮಾಜವಾದಿ ಪಕ್ಷದವರು ಜಿನ್ನಾನ ಆರಾಧಕರು: ಯೋಗಿ ಆದಿತ್ಯನಾಥ್‌ ಟೀಕೆ

    ಲಕ್ನೋ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಡಳಿತ ಪಕ್ಷ ಬಿಜೆಪಿ ಹಾಗೂ ಪ್ರತಿಪಕ್ಷಗಳು ಪರಸ್ಪರ ಟೀಕಾಪ್ರಹಾರ ನಡೆಸುತ್ತಿವೆ. ಸಮಾಜದವಾದಿ ಪಕ್ಷದವರು ಜಿನ್ನಾನ ಆರಾಧಕರು ಎಂದು ಟ್ವೀಟ್‌ ಮಾಡಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಾಗ್ದಾಳಿ ನಡೆಸಿದ್ದಾರೆ.

    ಅವರು (ಎಸ್‌ಪಿ) ಜಿನ್ನಾ ಆರಾಧಕರು, ಆದರೆ ನಾವು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಆರಾಧಕರು. ಪಾಕಿಸ್ತಾನ ಅವರಿಗೆ ಪ್ರಿಯವಾಗಿದೆ. ನಾವು ಭಾರತ ಮಾತೆಗಾಗಿ ನಮ್ಮ ಜೀವನವನ್ನು ತ್ಯಾಗ ಮಾಡುತ್ತೇವೆ ಎಂದು ಪಾಕಿಸ್ತಾನ ನಿರ್ಮಾತೃ ಮೊಹಮ್ಮದ್‌ ಆಲಿ ಜಿನ್ನಾರನ್ನು ಉಲ್ಲೇಖಿಸಿ ಯೋಗಿ ಆದಿತ್ಯನಾಥ್‌ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಅಮಾನತು ಆದೇಶ ರದ್ದು – ಮಹಾರಾಷ್ಟ್ರದ 12 ಬಿಜೆಪಿ ಶಾಸಕರಿಗೆ ಗೆಲುವು

    ಉತ್ತರ ಪ್ರದೇಶದಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬರಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ಅವರು ಧ್ರುವೀಕರಣದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲ ದಿನಗಳ 80 ವರ್ಸಸ್‌ 20 ಅಂದರೆ ಹಿಂದೂ ಮತ್ತು ಮುಸ್ಲಿಂ ಮತದಾರರು ಎಂದು ಯೋಗಿ ಹೇಳಿಕೆ ನೀಡಿದ್ದರು. ಶೇ.80 ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದಿದ್ದರು.

    ಹಿಂದೆ ಗಾಜಿಯಾಬಾದ್‌ನಲ್ಲಿ ಹಜ್‌ ಗೃಹಗಳನ್ನು ನಿರ್ಮಿಸಲಾಗುತ್ತಿತ್ತು. ನಮ್ಮ ಸರ್ಕಾರ ಕೈಲಾಸ ಮಾನಸ ಸರೋವರ ಭವನವನ್ನು ನಿರ್ಮಿಸಿದೆ ಎಂದು ಕೂಡ ಯೋಗಿ ಧ್ರುವೀಕರಣದ ಮಾತುಗಳನ್ನಾಡಿದ್ದರು. ಇದನ್ನೂ ಓದಿ: ಸ್ಟೂಡೆಂಟ್ ಪೊಲೀಸ್ ಕೆಡೆಟ್‌ನಲ್ಲಿ ಹಿಜಬ್‌ ಧರಿಸಲು ಅವಕಾಶವಿಲ್ಲ: ಕೇರಳ ಸರ್ಕಾರ

    ಫೆ.10ರಿಂದ ವಿವಿಧ ಹಂತಗಳಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾ.10ರಂದು ಫಲಿತಾಂಶ ಹೊರಬೀಳಲಿದೆ.

  • ಎಸ್‌ಪಿ ಗೆದ್ದರೆ ಯುಪಿ ಗೂಂಡಾಗಳ ರಾಜ್ಯವಾಗುತ್ತೆ: ಅಮಿತ್‌ ಶಾ ವಾಗ್ದಾಳಿ

    ಎಸ್‌ಪಿ ಗೆದ್ದರೆ ಯುಪಿ ಗೂಂಡಾಗಳ ರಾಜ್ಯವಾಗುತ್ತೆ: ಅಮಿತ್‌ ಶಾ ವಾಗ್ದಾಳಿ

    ಲಕ್ನೋ: ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ವಿರುದ್ಧ ಹರಿಹಾಯ್ದಿದ್ದಾರೆ. ಚುನಾವಣೆಯಲ್ಲಿ ಸಮಾಜವಾದಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, ರಾಜ್ಯದಲ್ಲಿ ಗೂಂಡಾಗಳ ರಾಜ್ಯ ಮರುಕಳಿಸುತ್ತದೆ ಎಂದು ಎಚ್ಚರಿಸಿದ್ದಾರೆ.

    ಸಮಾಜವಾದಿ ಪಕ್ಷದ ಮುಖಂಡ ಅಜಮ್‌ ಖಾನ್‌ ಬಂಧನಕ್ಕೊಳಗಾಗಿದ್ದಾರೆ. ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಇಂತಹ ಸಂದರ್ಭದಲ್ಲಿ ಅಖಿಲೇಶ್‌ ಯಾದವ್‌ ಕಾನೂನಿನ ಬಗ್ಗೆ ಮಾತನಾಡುತ್ತಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಅಮಿತ್‌ ಶಾ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ – ಇದು ನಾಚಿಗೇಡಿನ ಸಂಗತಿ ಎಂದ ಕೇಜ್ರಿವಾಲ್

    ರಾಜ್ಯ ಪೊಲೀಸರು ಭಯಪಡುವಷ್ಟು ಪ್ರಾಬಲ್ಯವನ್ನು ದರೋಡೆಕೋರರು, ಕ್ರಿಮನಲ್‌ಗಳು ಹೊಂದಿದ್ದರು. ಮಹಿಳೆಯರು ಮತ್ತು ಯುವತಿಯರು ಹೊರಗಡೆ ಓಡಾಡಲು ಹೆದರುತ್ತಿದ್ದರು. ಆದರೆ ಅದು ಈಗ ಬದಲಾಗಿದೆ. ದರೋಡೆಕೋರರು, ಅಪರಾಧಿಗಳು ಭಯ ಪಡುತ್ತಿದ್ದಾರೆಂದರೆ, ಸ್ವಯಂಪ್ರೇರಣೆಯಿಂದ ಎಲ್ಲರೂ ಶರಣಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ನಾವು ಕ್ರಿಮಿನಲ್‌ಗಳು ಮತ್ತು ದರೋಡೆಕೋರರನ್ನು ತರಾಟೆಗೆ ತೆಗೆದುಕೊಂಡಿದ್ದೇವೆ. ಅವರನ್ನು ಕಂಬಿ ಹಿಂದೆ ಕಳುಹಸಿದ್ದೇವೆ. ಉತ್ತರ ಪ್ರದೇಶ ಪ್ರಗತಿಯಾಗದ ಹೊರತು ಭಾರತದ ಪ್ರಗತಿ ಸಾಧ್ಯವಿಲ್ಲ. ಯುಪಿ ಇಂದು ಪ್ರಗತಿಯಲ್ಲಿದೆ ಇದು ಭಾರತದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಕೊರೊನಾ ಬಂದಿದೆ – ಇಬ್ರಾಹಿಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ

    ಉತ್ತರ ಪ್ರದೇಶ ಚುನಾವಣೆ ಇದೇ ಫೆ.10ರಿಂದ ವಿವಿಧ ಹಂತಗಳಲ್ಲಿ ನಡೆಯಲಿದೆ. ಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು, ಎಸ್‌ಪಿ ವಿರುದ್ಧ ಹರಿಹಾಯ್ದಿದ್ದಾರೆ.

  • UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ

    UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ

    ನವದೆಹಲಿ: ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲಿ, ಭಾರತದ ಅತಿ ಎತ್ತರದ ಮನುಷ್ಯ ಧರ್ಮೇಂದ್ರ ಪ್ರತಾಪ್‌ ಸಿಂಗ್‌ ಅವರು ಶನಿವಾರ ಸಮಾಜವಾದಿ ಪಕ್ಷವನ್ನು ಸೇರಿದ್ದಾರೆ.

    ಉತ್ತರ ಪ್ರದೇಶದ ಪ್ರತಾಪಗಢದವರಾದ ಧರ್ಮೇಂದ್ರ ಸಿಂಗ್‌ ಅವರು 8.1 ಅಡಿ (2.4 ಮೀ.) ಎತ್ತರ ಇದ್ದಾರೆ. ಭಾರತದ ಅತಿ ಎತ್ತರದ ಮನುಷ್ಯರಾಗಿರುವ ಇವರು ವಿಶ್ವ ದಾಖಲೆಗೆ ಕೇವಲ 11 ಸೆ.ಮೀ.ನಿಂದ ವಂಚಿತರಾಗಿದ್ದರು. ಇದನ್ನೂ ಓದಿ: ಬಿಜೆಪಿಗೆ ಮತ್ತೊಂದು ಶಾಕ್‌ – ಗೋವಾ ಮಾಜಿ ಸಿಎಂ ಪರ್ಸೇಕರ್‌ ರಾಜೀನಾಮೆ

    ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ನರೇಶ್‌ ಉತ್ತಮ್‌ ಪಟೇಲ್‌ ಈ ಕುರಿತು ಮಾತನಾಡಿ, ಸಿಂಗ್‌ ಅವರು ನಮ್ಮ ಪಕ್ಷಕ್ಕೆ ಸೇರಿದ್ದಾರೆ. ಅವರ ಆಗಮನದಿಂದ ಸದ್ಯದಲ್ಲೇ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಗೆ ಪಕ್ಷಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಸಮಾಜವಾದಿ ಪಕ್ಷದ ನೀತಿಗಳು ಮತ್ತು ಅಖಿಲೇಶ್‌ ಯಾದವ್‌ ಅವರ ನಾಯಕತ್ವದಲ್ಲಿ ನಂಬಿಕೆಯಿಟ್ಟು ಪ್ರತಾಪಗಢದ ಧರ್ಮೇಂದ್ರ ಪ್ರತಾಪ್‌ ಸಿಂಗ್‌ ಪಕ್ಷವನ್ನು ಸೇರಿದ್ದಾರೆ. ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರಮವಹಿಸುವುದಾಗಿಯೂ ಅವರು ತಿಳಿಸಿದ್ದಾರೆ. ಸಿಂಗ್‌ ಅವರಿಗೆ ಅಭಿನಂದನೆಗಳು ಎಂದು ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ. ಇದನ್ನೂ ಓದಿ: ಪಂಚರಾಜ್ಯಗಳಲ್ಲಿ ಚುನಾವಣಾ ರ‍್ಯಾಲಿ, ರೋಡ್ ಶೋ ಗಳಿಗೆ ಜ.31ರ ವರೆಗೆ ನಿರ್ಬಂಧ

    ಎತ್ತರ ಇರುವ ಕಾರಣದಿಂದಾಗಿಯೇ ಸಿಂಗ್‌ ಅವರು ಸಾಕಷ್ಟು ತೊಂದರೆಗಳನ್ನು ಎದುರಿಸಿದ್ದಾರೆ. ಹೊರಗಡೆ ಓಡಾಡುತ್ತಿದ್ದರೆ ಜನರ ಗಮನ ಅವರ ಕಡೆಗೆ ಇರುತ್ತದೆ. ಎಷ್ಟೋ ಕಡೆ ಜನ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬೀಳುತ್ತಿರುತ್ತಾರಂತೆ.

    ನನ್ನ ಎತ್ತರದ ಕಾರಣಕ್ಕೆ ನಾನು ಜನಪ್ರಿಯನಾಗಿದ್ದೇನೆ. ಜನ ನನ್ನೊಟ್ಟಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಎಷ್ಟೋ ಸಂದರ್ಭಗಳುಂಟು. ಅದನ್ನು ನಾನು ಸೆಲೆಬ್ರಿಟಿಯಂತೆ ಸ್ವೀಕರಿಸಿದ್ದೇನೆ ಎಂದು ಸಿಂಗ್ ಹೇಳಿಕೊಂಡಿದ್ದಾರೆ.‌ ಫೆ.10ರಿಂದ ಮಾರ್ಚ್‌ 7ರವರೆಗೆ ವಿವಿಧ ಹಂತಗಳಲ್ಲಿ ಉತ್ತರ ಪ್ರದೇಶ ಚುನಾವಣೆ ನಡೆಯಲಿದೆ. ಮಾ.10 ರಂದು ಫಲಿತಾಂಶ ಹೊರಬೀಳಲಿದೆ.

  • ಉತ್ತರ ಪ್ರದೇಶದ ಬಿಜೆಪಿ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಎಸ್‍ಪಿಗೆ ಸೇರ್ಪಡೆ

    ಉತ್ತರ ಪ್ರದೇಶದ ಬಿಜೆಪಿ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಎಸ್‍ಪಿಗೆ ಸೇರ್ಪಡೆ

    ಲಕ್ನೋ: ಬಿಜೆಪಿಗೆ ರಾಜೀನಾಮೆ ನೀಡಿದ್ದ ಉತ್ತರ ಪ್ರದೇಶದ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಇಂದು ಸಮಾಜವಾದಿ ಪಕ್ಷಕ್ಕೆ (ಎಸ್‍ಪಿ) ಸೇರ್ಪಡೆಯಾಗಿದ್ದಾರೆ.

    ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ದಾರಾ ಸಿಂಗ್ ಚೌಹಾಣ್ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಳೆದ ಒಂದು ವಾರದಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಉತ್ತರ ಪ್ರದೇಶದ ಮೂರನೇ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಆಗಿದ್ದು, ಈ ಮುನ್ನ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ:  ಬಿಜೆಪಿಯ ದ್ವೇಷದ ರಾಜಕಾರಣ ಭಾರತಕ್ಕೆ ಹಾನಿಕಾರಕ: ರಾಹುಲ್ ಗಾಂಧಿ

    2017ರಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗ ಸಬ್‍ಕಾ ಸಾಥ್, ಸಬ್‍ಕಾ ವಿಕಾಸ್ ಎಂಬ ಘೋಷಣೆ ನೀಡಲಾಗಿತ್ತು. ಆದರೆ ಅಭಿವೃದ್ಧಿಯಾಗುತ್ತಿರುವುದು ಕೇವಲ ಕೆಲವರು ಮಾತ್ರ. ಉಳಿದವರು ಇದ್ದ ಹಾಗೆಯೇ ಉಳಿದುಕೊಂಡಿದ್ದಾರೆ. ಈಗ ಪಡಿತರ ನೀಡಿ ಗುಲಾಮರನ್ನಾಗಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ದಾರಾ ಸಿಂಗ್ ಚೌಹಾಣ್ ಕಿಡಿಕಾರಿದರು.

    Dara Singh Chauhan

    ಬಿಜೆಪಿಯನ್ನು ಬೆಂಬಲಿಸಿದ ನಂತರವೂ ಹಿಂದುಳಿದ ವರ್ಗದವರಿಗೆ ಬಿಜೆಪಿಯಲ್ಲಿ ಸರಿಯಾದ ಸ್ಥಾನ ಸಿಕ್ಕಿಲ್ಲ. ಐದು ವರ್ಷಗಳಿಂದ ನೀವು ಏನು ಮಾಡಿದ್ದೀರಾ ಎಂದು ಜನರು ಕೇಳುತ್ತಿದ್ದಾರೆ. ನಾವು ಸಮಯಕ್ಕಾಗಿ ಕಾಯುತ್ತಿದ್ದೇವು, ಹಿಂದುಳಿದ ಸಮುದಾಯದವರು ತಾಳ್ಮೆಯಿಂದ ಇದ್ದರು. ಆದರೆ ಹಿಂದುಳಿದ ಸಮಾಜದವರ ಹಿತಾಸಕ್ತಿಗಳನ್ನು ನಿರ್ಲಕ್ಷಿಸುತ್ತಿರುವುದನ್ನು ಕಂಡು ನಾವು ಇದೀಗ ಸಮಾಜವಾದಿ ಪಕ್ಷಕ್ಕೆ ಸೇರಲು ನಿರ್ಧರಿಸಿದೇವು ಎಂದು ಹೇಳಿದರು. ಇದನ್ನೂ ಓದಿ: ಉನ್ನತ ಶಿಕ್ಷಣ ಸಚಿವರು ನಮಗೆ ಕೊಟ್ಟಿದ್ದು ಸಿಹಿಯಲ್ಲ, ಕಹಿ: ಅತಿಥಿ ಉಪನ್ಯಾಸಕರ ಆಕ್ರೋಶ

    ಉತ್ತರಪ್ರದೇಶದಲ್ಲಿ 15-18 ವಯಸ್ಸಿನ 51,37,909 ಮಕ್ಕಳಿಗೆ ಕೋವಿಡ್ ಲಸಿಕೆ ಡೋಸ್‍ಗಳನ್ನು ನೀಡಲಾಗಿದೆ. ಆದರೆ, ಹಿಂದುಳಿದ ಸಮುದಾಯಗಳ ಮಕ್ಕಳಿಗೆ ನೀಡಲಾಗಿಲ್ಲ. ಆದರೆ ಸಮಾಜವಾದಿ ಪಕ್ಷ ಆಡಳಿತಕ್ಕೆ ಬಂದರೆ ಪ್ರಾತಿನಿಧ್ಯದ ವಿಷಯದಲ್ಲಿ ರಾಜ್ಯದ ಜನರಿಗೆ ಸಮಾನ ಪಾಲು ನೀಡುತ್ತದೆ ಎಂದರು. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಕ್ಯಾಬಿನೆಟ್‍ನಲ್ಲಿ ದಾರಾ ಸಿಂಗ್ ಚೌಹಾಣ್ ಅರಣ್ಯ, ಪರಿಸರ ಮತ್ತು ಪ್ರಾಣಿ ಉದ್ಯಾನ ಸಚಿವರಾಗಿದ್ದರು.

  • ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ

    ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ

    ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಹಿಂದುಳಿದ ಸಮುದಾಯದ ನಾಯಕರು ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರುತ್ತಿದ್ದಾರೆ. ಇದರ ನಡುವೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದಲಿತರ ಮನೆಯಲ್ಲಿ ಊಟ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.

    ಬಿಜೆಪಿ ವಿರುದ್ಧ ಬಂಡಾಯ ಎದ್ದ ಇಬ್ಬರು ಮಾಜಿ ಸಚಿವ ಪಕ್ಷಕ್ಕೆ ರಾಜೀನಾಮೆ ನೀಡಿ ಅಖಿಲೇಶ್‌ ಯಾದವ್‌ ಅವರ ಎಸ್‌ಪಿ ಪಕ್ಷ ಸೇರಿದ್ದಾರೆ. ಹಿಂದುಳಿದ ನಾಯಕರೆಲ್ಲ ಬಿಜೆಪಿ ತೊರೆಯುತ್ತಿರುವುದರಿಂದ ಒಬಿಸಿ ಮತದಾರರ ವೋಟುಗಳು ಕೈತಪ್ಪಬಹುದು ಎಂಬ ಆತಂಕ ಬಿಜೆಪಿಯಲ್ಲಿ ಮೂಡಿದೆ. ಈ ಮಧ್ಯೆಯೇ ಯೋಗಿ ಆದಿತ್ಯನಾಥ್‌ ಅವರು ಗೋರಖ್‌ಪುರದಲ್ಲಿ ದಲಿತರ ಮನೆಯಲ್ಲಿ ಊಟ ಮಾಡಿದ್ದಾರೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಮತ್ತೊಂದು ದಿಕ್ಕಿನ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಹೂವಿನ ಮಾರುಕಟ್ಟೆಯಲ್ಲಿ ಇಟ್ಟಿದ್ದ ಬ್ಯಾಗ್‌ನಲ್ಲಿ ಬಾಂಬ್ ಪತ್ತೆ – ಜನರಲ್ಲಿ ಆತಂಕ

    ಈ ಕುರಿತು ಸಿಎಂ ಯೋಗಿ ಆದಿತ್ಯನಾಥ್‌ ಟ್ವಿಟರ್‌ನಲ್ಲಿ, ಸಾಮಾಜಿಕ ಸೌಹಾರ್ದತೆಯ ಗುರಿಯು ಬೆಳೆಯುತ್ತಲೇ ಇದೆ. ಇಂದು ಗೋರಖ್‌ಪುರದ ಜುಂಗಿಯಾದಲ್ಲಿರುವ ಅಮೃತ್‌ ಲಾಲ್‌ ಭಾರತೀಜಿಯವರ ಮನೆಯಲ್ಲಿ ಕಿಚಡಿ ಮತ್ತು ಪ್ರಸಾದ ಸ್ವೀಕರಿಸುವ ಸೌಭಾಗ್ಯ ನನಗೆ ಸಿಕ್ಕಿತು. ತುಂಬಾ ಧನ್ಯವಾದಗಳು ಭಾರತೀಜಿ ಎಂದು ತಿಳಿಸಿದ್ದಾರೆ.

    ಬಿಜೆಪಿ ಸರ್ಕಾರ ಯಾವುದೇ ತಾರತಮ್ಯವಿಲ್ಲದೇ ಸಮಾಜದ ಪ್ರತಿಯೊಂದು ವರ್ಗದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅಖಿಲೇಶ್‌ ಯಾದವ್‌ ಅವರ ಐದು ವರ್ಷದ ಆಡಳಿತದಲ್ಲಿ ಪಿಎಂ ಆವಾಸ್‌ ಯೋಜನೆಯಡಿ ಕೇವಲ 18,000 ಮನೆಗಳನ್ನು ಮಾತ್ರ ನಿರ್ಮಿಸಿಕೊಟ್ಟಿದ್ದರು. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 45 ಲಕ್ಷ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಎಸ್‌ಪಿ ಅವಧಿಯಲ್ಲಿ ಸಾಮಾಜಿಕ ಶೋಷಣೆಯಾಗಿದೆ, ಸಾಮಾಜಿಕ ನ್ಯಾಯ ಸಿಕ್ಕಿಲ್ಲ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನೊವಾಕ್ ಜೊಕೊವಿಕ್ ವೀಸಾ 2ನೇ ಬಾರಿ ರದ್ದು – 3 ವರ್ಷ ಆಸ್ಟ್ರೇಲಿಯಾಗೆ ಪ್ರವೇಶವಿಲ್ಲ

    ಸ್ವಾಮಿ ಪ್ರಸಾದ್‌ ಮೌರ್ಯ, ಧರಮ್‌ ಸಿಂಗ್‌ ಸೈನಿ ಅವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರಿದ್ದಾರೆ. ಬಿಜೆಪಿ ತೊರೆದ ನಾಯಕರು, ಯೋಗಿ ಆದಿತ್ಯನಾಥ್‌ ನೇತೃತ್ವದ ಆಡಳಿತವು ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಆಲಿಸದೇ ಕಿವುಡಾಗಿದೆ. ಈ ಹಿನ್ನೆಲೆಯಲ್ಲಿ ನಾವು ಪಕ್ಷವನ್ನು ತೊರೆದಿದ್ದೇವೆ ಎಂದು ದೂರಿದ್ದರು.

  • ಬಿಜೆಪಿಯಲ್ಲಿ ಪ್ರತಿದಿನ ಒಬ್ಬೊಬ್ಬರು ರಾಜೀನಾಮೆ ನೀಡುತ್ತಾ ಹೋಗ್ತಾರೆ: ಧರಂ ಸಿಂಗ್ ಸೈನಿ

    ಬಿಜೆಪಿಯಲ್ಲಿ ಪ್ರತಿದಿನ ಒಬ್ಬೊಬ್ಬರು ರಾಜೀನಾಮೆ ನೀಡುತ್ತಾ ಹೋಗ್ತಾರೆ: ಧರಂ ಸಿಂಗ್ ಸೈನಿ

    ಲಕ್ನೋ: ಬಿಜೆಪಿ ನೇತೃತ್ವದ ಉತ್ತರ ಪ್ರದೇಶದಲ್ಲಿ ಪ್ರತಿದಿನ ಒಬ್ಬ ಸಚಿವ, 2 ಅಥವಾ 3 ಬಿಜೆಪಿ ಶಾಸಕರು ಜನವರಿ 20 ರವರೆಗೆ ರಾಜೀನಾಮೆ ನೀಡುತ್ತಾರೆ ಎಂದು ಧರಂ ಸಿಂಗ್ ಸೈನಿ ಹೇಳಿದರು.

    ಬಿಜೆಪಿ ತೊರೆದ ವಿಚಾರವನ್ನು ಮಾಧ್ಯಮಗಳೊಂದಿಗೆ ಬಹಿರಂಗಪಡಿಸಿದ ಅವರು, ಬಿಜೆಪಿಯಲ್ಲಿ ನಾನು ಹೇಳುವುದನ್ನು ಕೇಳುವವರು ಯಾರೂ ಇರಲಿಲ್ಲ. ಹೀಗಾಗಿ ಒಂದು ದಿನ ಸರ್ಕಾರದ ವಿರುದ್ಧ ರಾಜ್ಯದ 140 ಶಾಸಕರು ಧರಣಿ ಕುಳಿತು ಬೆದರಿಕೆ ಹಾಕುವ ಸಮಯ ಬಂದಿದೆ ಎಂದು ಸಿಡಿದರು. ಇದನ್ನೂ ಓದಿ: ಖಾಸಗಿ ಲ್ಯಾಬ್‍ಗಳಲ್ಲೂ ಉಚಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಎಎಪಿ ಆಗ್ರಹ

    ಇದೇ ವೇಳೆ ಸಮಾಜವಾದಿ ಪಕ್ಷವನ್ನು ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ್ದು, ಶುಕ್ರವಾರ ಹೆಚ್ಚಿನ ಚರ್ಚೆ ನಡೆಸುವುದಾಗಿ ತಿಳಿಸಿದರು. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ

    ಯುಪಿಯಲ್ಲಿ ಮೊದಲ ಹಂತದ ಅಸೆಂಬ್ಲಿ ಚುನಾವಣೆಗೆ ಇನ್ನೂ 1 ತಿಂಗಳು ಬಾಕಿ ಉಳಿದಿದೆ. ಆದರೆ ಬಿಜೆಪಿಯಿಂದ ಜಿಗಿದ 9ನೇ ಶಾಸಕ ಸೈನಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.

  • ಯುಪಿಯಲ್ಲಿ ಯೋಗಿ ಸರ್ಕಾರ ಅಪರಾಧಿಗಳೊಂದಿಗೆ ʼಜೈಲು-ಜೈಲುʼ ಆಟವಾಡ್ತಿದೆ: ಮೋದಿ

    ಯುಪಿಯಲ್ಲಿ ಯೋಗಿ ಸರ್ಕಾರ ಅಪರಾಧಿಗಳೊಂದಿಗೆ ʼಜೈಲು-ಜೈಲುʼ ಆಟವಾಡ್ತಿದೆ: ಮೋದಿ

    ಲಕ್ನೋ: ಉತ್ತರ ಪ್ರದೇಶದಲ್ಲಿ ಅಪರಾಧಿಗಳು ಲಂಗು ಲಗಾಮಿಲ್ಲದಂತೆ ವರ್ತಿಸುತ್ತಿದ್ದರು. ಅವರೊಂದಿಗೆ ಯೋಗಿ ಸರ್ಕಾರ ಜೈಲು-ಜೈಲು ಆಟವಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಮಥುರಾದಲ್ಲಿ ಮೇಜರ್‌ ಧ್ಯಾನ್‌ ಚಂದ್‌ ಕ್ರೀಡಾ ವಿಶ್ವಿವಿದ್ಯಾಲಯ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕ್ರಿಮಿನಲ್‌ಗಳು, ಮಾಫಿಯಾದಲ್ಲಿದ್ದವರು ಯಾವುದೇ ನಿಯಂತ್ರಣವಿಲ್ಲದೇ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದರು. ಅವರನ್ನು ಜೈಲಿಗಟ್ಟುವ ಆಟವನ್ನು ಯೋಗಿ ಆದಿತ್ಯನಾಥ್‌ ಅವರ ಸರ್ಕಾರ ಆಡುತ್ತಿದೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಕೊರೊನಾ 3ನೇ ಅಲೆ ಭೀತಿ – ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ ಶಾಲಾ, ಕಾಲೇಜ್ ಬಂದ್

    ಹಿಂದಿನ ಸರ್ಕಾರ ಅಪರಾಧಿಗಳು ಮತ್ತು ಮಾಫಿಯಾಗಳ ಆಟಗಳಲ್ಲಿ ತೊಡಗಿಸಿಕೊಂಡಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಮೀರತ್‌ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಸಿಸುವ ಜನರ ಮನೆಗಳಿಗೆ ಹಿಂದೆ ಬೆಂಕಿ ಹಚ್ಚಲಾಗುತ್ತಿತ್ತು. ಇದರಿಂದ ಬೇಸತ್ತು ಜನ ಬೇರೆಡೆಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಾಗಿತ್ತು. ಆದರೆ ಯೋಗಿ ಆದಿತ್ಯನಾಥ್‌ ಅವರ ಸರ್ಕಾರ ಈಗ ಅಪರಾಧಿಗಳನ್ನು ಜೈಲಿಗಟ್ಟುತ್ತಿದೆ. ಈಗ ಇಲ್ಲಿನ ಹೆಣ್ಣುಮಕ್ಕಳು ಯಾವುದೇ ಭಯವಿಲ್ಲದೇ ಜೀವನ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಸರ್ಕಾರದ ಪಾತ್ರ ರಕ್ಷಕನದ್ದಾಗಿರಬೇಕು. ಸಾಮರ್ಥ್ಯವನ್ನು ಪ್ರೋತ್ಸಾಹಿಸಬೇಕು. ಯುವಕರು ತಪ್ಪು ಮಾಡಿದರೆ ಅದನ್ನು ನಿರ್ಲಕ್ಷಿಸಬಾರದು ಎಂದಿದ್ದಾರೆ. ಇದೇ ವೇಳೆ ಸಮಾಜವಾದಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ದೇವಸ್ಥಾನದ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡಿ ದೇಶವನ್ನು ಅದಾನಿ, ಅಂಬಾನಿಗೆ ಒತ್ತೆ ಇಡುತ್ತಿದೆ: ಸಿದ್ದರಾಮಯ್ಯ

  • ಜೈನ್ ಮೇಲಿನ ಐಟಿ ದಾಳಿ ಹಿಂದೆ ಬಿಜೆಪಿ ಕೈವಾಡ ಇದೆ: ಅಖಿಲೇಶ್ ಯಾದವ್

    ಜೈನ್ ಮೇಲಿನ ಐಟಿ ದಾಳಿ ಹಿಂದೆ ಬಿಜೆಪಿ ಕೈವಾಡ ಇದೆ: ಅಖಿಲೇಶ್ ಯಾದವ್

    ಲಕ್ನೋ: ಸುಗಂಧ ದ್ರವ್ಯದ ಉದ್ಯಮಿ ಪುಷ್ಪರಾಜ್ ಜೈನ್ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷವನ್ನು ಗುರಿಯಾಗಿ ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆಢಳಿತ ಪಕ್ಷದ ವಿರುದ್ಧವಾಗಿ ಆರೋಪ ಮಾಡಿದ್ದಾರೆ.

    ಪುಷ್ಪರಾಜ್ ಜೈನ್‍ಗೆ ಸಂಬಂಧಿಸಿದ ಒಟ್ಟು 50 ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಸುಗಂಧ ದ್ರವ್ಯದ ಉದ್ಯಮಿಯಾಗಿರುವ ಪುಷ್ಪರಾಜ್ ಜೈನ್ ಸಮಾಜವಾದಿ ಪಕ್ಷದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಈ ಕುರಿತಾಗಿ ಮಾತನಾಡಿ ಅಖಿಲೇಶ್ ಯಾದವ್ ಅವರು, ಬಿಜೆಪಿ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ

    ಈ ಮೊದಲು ಪಿಯೂಷ್ ಜೈನ್ ಮನೆ ಮೇಲೆ ಐಟಿ ದಾಳಿ ನಡೆಸಲು ಬಿಜೆಪಿ ಮುಂದಾಗಿತ್ತು. ಆದರೆ ಆ ವ್ಯಕ್ತಿ ಬಿಜೆಪಿಯವರೇ ಎಂದು ಗೊತ್ತಾದ ಬಳಿಕ ಬಿಜೆಪಿಗೆ ನಿರಾಸೆಯಾಯಿತು. ತಮ್ಮ ಪಕ್ಷದ ವಿಧಾನ ಪರಿಷತ್ ಸದಸ್ಯರೂ ಆಗಿರುವ ಸುಗಂಧ ದ್ರವ್ಯ ವ್ಯಾಪಾರಿ ಪುಷ್ಪರಾಜ್ ಜೈನ್ ಅವರಿಗೆ ಸೇರಿದ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿ ಮಾಡಿದ್ದಾರೆ. ಪಿಯೂಷ್ ಜೈನ್ ಬಂಧನಕ್ಕೆ ಕಾರಣವಾದ ಶಿಕಾರ್ ಪಾನ್ ಮಸಾಲಾ ಸಾಗಣೆಗೂ ಪ್ರಧಾನಿ ಮೋದಿಗೂ ಸಂಬಂಧವಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಬೇಡಿಕೆ

    Akhilesh Yadav

    ಕಾನ್ಪುರ ಮೂಲದ ಸುಗಂಧ ದ್ರವ್ಯದ ಉದ್ಯಮಿ ಪಿಯೂಷ್ ಜೈನ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು 197 ಕೋಟಿ ರೂ.ಗೂ ಹೆಚ್ಚು ನಗದು, 20 ಕೆಜಿಗೂ ಹೆಚ್ಚು ಚಿನ್ನ ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಪುಷ್ಪರಾಜ್ ಜೈನ್ ಮತ್ತು ಪಿಯೂಷ್ ಜೈನ್ ನೆರೆಹೊರೆಯವರಾಗಿದ್ದು, ಒಂದೇ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.