Tag: Sambar deer

  • ಶಿವಮೊಗ್ಗ | ದಾನವಾಡಿ ಅರಣ್ಯದಲ್ಲಿ ಕಡವೆ ಬೇಟೆ – ಆರೋಪಿ ಅರೆಸ್ಟ್

    ಶಿವಮೊಗ್ಗ | ದಾನವಾಡಿ ಅರಣ್ಯದಲ್ಲಿ ಕಡವೆ ಬೇಟೆ – ಆರೋಪಿ ಅರೆಸ್ಟ್

    ಶಿವಮೊಗ್ಗ: ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆ (Sambar deer) ಬೇಟೆಯಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಐವರು ದುಷ್ಕರ್ಮಿಗಳು ಸೇರಿ ಭದ್ರಾವತಿ (Bhadravathi) ತಾಲೂಕಿನ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿದ್ದಾರೆ. ಈ ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ನಡೆಸಿದ ದಾಳಿ ವೇಳೆ ಉಳಿದ ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

    ಕಾರ್ಯಾಚರಣೆ ವೇಳೆ ಕಡವೆಯ ಮಾಂಸವನ್ನ ಅರಣ್ಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಭದ್ರಾವತಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳಿಂದ ಈ ದಾಳಿ ನಡೆದಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

    ಉಳಿದ ಆರೋಪಿಗಳ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ.

  • ನಿತ್ರಾಣವಾಗಿ ಬಿದ್ದಿದ್ದ ಕಡವೆಗೆ ಚಿಕಿತ್ಸೆ ನೀಡಿದ ಅರಣ್ಯಾಧಿಕಾರಿಗಳು

    ನಿತ್ರಾಣವಾಗಿ ಬಿದ್ದಿದ್ದ ಕಡವೆಗೆ ಚಿಕಿತ್ಸೆ ನೀಡಿದ ಅರಣ್ಯಾಧಿಕಾರಿಗಳು

    ಚಿಕ್ಕಮಗಳೂರು: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ನೀರು ಸಿಗದೆ ನಿತ್ರಾಣಗೊಂಡು ಬಿದ್ದಿದ್ದ ಕಡವೆಗೆ ಅರಣ್ಯಾಧಿಕಾರಿಗಳು ಚಿಕಿತ್ಸೆ ನೀಡಿ, ತಮ್ಮ ವಾಹನದಲ್ಲೇ ಕಾಡಿಗೆ ಬಿಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ನಂದಿಬಂಟ್ಲು ಗ್ರಾಮದಲ್ಲಿ ನಡೆದಿದೆ.

    ಭದ್ರಾ ಅಭಯಾರಣ್ಯದಿಂದ ಆಹಾರ ಹುಡುಕುತ್ತಾ ಗ್ರಾಮದ ಸಚಿನ್ ಎಂಬವರ ತೋಟಕ್ಕೆ ಬಂದಿದ್ದ ಕಡವೆ ಅಲ್ಲೇ ಸುಸ್ತಾಗಿ ಬಿದ್ದಿತ್ತು. ತೋಟಕ್ಕೆ ಬಂದ ಸಚಿನ್ ಕಡವೆಯನ್ನ ಕಂಡು ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಬಂದ ತಣಿಗೆಬೈಲು ಅರಣ್ಯಾಧಿಕಾರಿ ಉಲ್ಲಾಸ್ ಹಾಗೂ ಸಿಬ್ಬಂದಿಗಳು ಕಡವೆಗೆ ಚಿಕಿತ್ಸೆ ನೀಡಿ, ನೀರು ಕುಡಿಸಿ ತಮ್ಮ ಕಾರಿನಲ್ಲಿ ತೆಗೆದುಕೊಂಡು ಹೋಗಿ ಕಾಡಿಗೆ ಬಿಟ್ಟಿದ್ದಾರೆ.