Tag: sand art

  • ಉಡುಪಿ ಕಾಪು ಬೀಚ್ ನಲ್ಲಿ ಅರಳಿನಿಂತ ‘ಕಾಂತಾರ’ ಗೆಲುವಿನ ಮರಳುಶಿಲ್ಪ

    ಉಡುಪಿ ಕಾಪು ಬೀಚ್ ನಲ್ಲಿ ಅರಳಿನಿಂತ ‘ಕಾಂತಾರ’ ಗೆಲುವಿನ ಮರಳುಶಿಲ್ಪ

    ನಿನ್ನೆಯಷ್ಟೇ ಕಾಂತಾರ (Kantara) ಸಿನಿಮಾ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಉಡುಪಿಯ ಕಾಪು ಬೀಚ್ ನಲ್ಲಿ ಕಾಂತಾರ 50ರ (Fifty Days) ಸಂಭ್ರಮದ ಮರಳುಶಿಲ್ಪವನ್ನು ರೆಡಿ ಮಾಡಿದ್ದಾರೆ ಸ್ಯಾಂಡ್ ಆರ್ಟ್ ಕಲಾವಿದರು. ಅದರಲ್ಲೂ ಪಂಜುರ್ಲಿ ಕಲಾಕೃತಿಯನ್ನೇ ಮರಳು ಶಿಲ್ಪ ಮಾಡಲು ಕಲಾವಿದರು ಆಯ್ಕೆ ಮಾಡಿಕೊಂಡಿದ್ದಾರೆ. ನಿನ್ನೆಯಿಂದ ಉಡುಪಿಯ ಕಾಪು ಬೀಚ್ ನಲ್ಲಿ ಕಾಂತಾರ ಮರಳು ಶಿಲ್ಪ (Sand Sculpture) ಆಸಕ್ತರನ್ನು ಕೈ ಬೀಸಿ ಕರೆಯುತ್ತಿದೆ.

    ಮುನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಾಂತಾರ ಸಿನಿಮಾ ಐವತ್ತು ದಿನಗಳ ಪ್ರದರ್ಶನ ಕಂಡಿದ್ದು, ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಪ್ರದರ್ಶನಕ್ಕೆ ಇನ್ನೂ ಸಾಕ್ಷಿ ಆಗುತ್ತಿವೆ. ದೇಶ ವಿದೇಶದಲ್ಲೂ 50ನೇ ದಿನದ ಸಂಭ್ರಮವನ್ನು ಅನೇಕ ಚಿತ್ರಮಂದಿರಗಳು ಆಚರಿಸಿವೆ. ಇದೇ ಹೊತ್ತಿನಲ್ಲೇ ಮಣಿಪಾಲದ ಸ್ಯಾಂಡ್ ಆರ್ಟ್ ಕಲಾವಿದರು ಕಾಪು ಬೀಚ್ ನಲ್ಲಿ ಇಂಥದ್ದೊಂದು ಕಲಾಕೃತಿಯನ್ನು ಮಾಡುವ ಮೂಲಕ ಶುಭ ಹಾರೈಸಿದ್ದಾರೆ.  ಇದನ್ನೂ ಓದಿ:`ಬನಾರಸ್’ ಚಿತ್ರದ ಬೆನ್ನಲ್ಲೇ ಝೈದ್ ಖಾನ್‌ಗೆ ಬಂತು ಬಿಗ್ ಆಫರ್

    ಪಂಜುರ್ಲಿ ದೈವದ ಮುಖವರ್ಣಿಕೆಯ ಕಲರ್ ಫುಲ್ ಕಲಾಕೃತಿಯನ್ನು ಸ್ಯಾಂಡ್ ಆರ್ಟ್ ಹೆಸರಿನಲ್ಲಿ ತಂಡ ಕಟ್ಟಿರುವ ಶ್ರೀನಾಥ್ ಮಣಿಪಾಲ್, ರವಿ ಹಿರೇಬೆಟ್ಟು ಮತ್ತು ವೆಂಕಿ ಪಲಿಮಾರು ಮೂವರು ಒಂದು ದಿನ ಟೈಮ್ ತಗೆದುಕೊಂಡು ರಚಿಸಿದ್ದು, ಇದೀಗ ಕಾಪು ಬೀಚ್ ಗೆ ಸಾವಿರಾರು ಜನರು ಈ ಕಲಾಕೃತಿಯನ್ನು ನೋಡುವುದಕ್ಕೆ ಬರುತ್ತಿದ್ದಾರಂತೆ. ಕಾಂತರ ಸಿನಿಮಾದ ಬಗ್ಗೆ ಅನೇಕರು ಗುಣಗಾನ ಕೂಡ ಮಾಡುತ್ತಿದ್ದಾರೆ.

    ಒಂದು ಕಡೆ ಮರುಳುಶಿಲ್ಪದ ಸಂಭ್ರಮವಾದರೆ, ಮತ್ತೊಂದು ಕಡೆ ಸೂಪರ್ ಸ್ಟಾರ್ ರಜನಿಕಾಂತ್ ಎರಡು ಮೂರು ವಾರಗಳ ಹಿಂದೆಯಷ್ಟೇ ಕಾಂತಾರ ಸಿನಿಮಾ ನೋಡಿ, ರಿಷಬ್ ಶೆಟ್ಟಿ ಅವರನ್ನು ತಮ್ಮ ಮನೆಗೆ ಕರೆಯಿಸಿಕೊಂಡಿದ್ದರು. ತಮ್ಮ ಮನೆಯ ಗೇಟ್ ವರೆಗೂ ಬಂದು, ರಿಷಬ್ (Rishabh Shetty) ಅವರನ್ನು ಬರಮಾಡಿಕೊಂಡಿದ್ದರು. ಬರೋಬ್ಬರಿ ಒಂದು ಗಂಟೆಗೂ ಹೆಚ್ಚು ಕಾಲ ರಿಷಬ್ ಜೊತೆ ಮಾತನಾಡಿ, ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಈ ನಡುವೆ ರಿಷಬ್ ಅವರನ್ನು ಬೀಳ್ಕೊಡುವಾಗ ಚಿನ್ನದ ಸರ ಮತ್ತು ಬಾಬಾ ಇರುವಂತಹ ಲಾಕೆಟ್ ಕೊಟ್ಟಿದ್ದಾರೆ.

    ರಜನಿ ತಮ್ಮ ಗುರುಗಳಾದ ಬಾಬಾ ಅವರನ್ನು ಅತೀ ಹೆಚ್ಚು ಪೂಜಿಸುತ್ತಾರೆ. ಬಾಬಾ ಅವರ ಕೈ ಬೆರಳಿನ ಸಿಂಬಲ್ ಇರುವಂತಹ ಲಾಕೆಟ್ ಗಳನ್ನು ರೆಡಿ ಮಾಡಿಸಿಕೊಂಡು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಯಾರಾದರೂ ಮೆಚ್ಚುವಂತಹ ಕೆಲಸ ಮಾಡಿದಾಗ, ಅವರನ್ನು ಕರೆದು ಲಾಕೆಟ್ ನೀಡುತ್ತಾರೆ. ಈಗ  ಲಾಕೆಟ್ ಪಡೆಯುವಂತಹ ಅದೃಷ್ಟ ರಿಷಬ್ ಪಾಲಾಗಿದೆ. ಬಾಬಾ ಇರುವಂತಹ ಚಿನ್ನದ ಲಾಕೆಟ್ ರಿಷಬ್ ಕೊರಳನ್ನು  ಅಲಂಕರಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಪುರಿ ಬೀಚ್‍ನಲ್ಲಿ ಅರಳಿತು ‘ದಿ ಕಾಶ್ಮೀರ್ ಫೈಲ್ಸ್’

    ಪುರಿ ಬೀಚ್‍ನಲ್ಲಿ ಅರಳಿತು ‘ದಿ ಕಾಶ್ಮೀರ್ ಫೈಲ್ಸ್’

    ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಚಿತ್ರಮಂದಿರಕ್ಕೆ ಬಂದಾಗಿನಿಂದ ಇದರ ಬಗ್ಗೆ ಒಂದಲ್ಲ ಒಂದು ವಿವಾದ, ಸುದ್ದಿ ಕೇಳಿ ಬರುತ್ತಲೇ ಇದೆ. ಕಾಶ್ಮೀರದಲ್ಲಿ 1990ರ ಅವಧಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಖ್ಯಾತ ಸ್ಯಾಂಡ್ ಆರ್ಟಿಸ್ಟ್ ಸುದರ್ಶನ್ ಪಟ್ನಾಯಕ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.

    ಸುದರ್ಶನ್ ಟ್ವಿಟ್ಟರ್‌ನಲ್ಲಿ, ಪುರಿ ಬೀಚ್‍ನಲ್ಲಿ ನನ್ನ ಸ್ಯಾಂಡ್ಆರ್ಟ್ ಎಂದು ಬರೆದು ‘ದಿ ಕಾಶ್ಮೀರ್ ಫೈಲ್ಸ್’ 30 ವರ್ಷಗಳ ನಂತರ ಎಂದು ಟ್ವೀಟ್ ಮಾಡಿದ್ದಾರೆ. ಸುದರ್ಶನ್ ಶೇರ್ ಮಾಡಿಕೊಂಡಿರುವ ಫೋಟೋದಲ್ಲಿ, ಕಾಶ್ಮೀರ ಮ್ಯಾಪ್‌ಗೆ ಕೆಂಪು ಬಣ್ಣ ಹಾಕಿದ್ದು, ‘ದಿ ಕಾಶ್ಮೀರ್ ಫೈಲ್ಸ್’ 30 ವರ್ಷಗಳ ನಂತರ ಎಂದು ಬರೆದಿದ್ದಾರೆ. ಅಲ್ಲದೇ ಮ್ಯಾಪ್ ಅಕ್ಕ-ಪಕ್ಕದಲ್ಲಿ ಕಾಶ್ಮೀರಿ ಹೋರಾಟದಲ್ಲಿ ಪ್ರಾಣ ಕೊಟ್ಟವರ ಭಾವಚಿತ್ರವನ್ನು ಬಿಡಿಸಿದ್ದಾರೆ. ಇದನ್ನೂ ಓದಿ: ಹೆಂಡತಿ, ಮೊಮ್ಮಗನ ಮುತ್ತಿಗೆ ಉಬ್ಬಿಹೋದ ಜಗ್ಗೇಶ್

    ಈ ಸ್ಯಾಂಡ್ ಆರ್ಟ್ ಮೂಲಕ ಸುದರ್ಶನ್ 30 ವರ್ಷಗಳ ಹಿಂದೆ ಗತಿಸಿದ್ದ ಕರಾಳದಿನವನ್ನು ನೆನಪಿಸಲು ಪ್ರಯತ್ನಿಸಿದ್ದಾರೆ. ಈ ಮೂಲಕ ‘ದಿ ಕಾಶ್ಮೀರ್ ಫೈಲ್ಸ್’ ಮೂವೀ ಜನರಲ್ಲಿ ಎಷ್ಟುರ ಮಟ್ಟಿಗೆ ಪರಿಣಾಮ ಬೀರಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು. ಸಿನಿಮಾವನ್ನು ಭಾರತೀಯರು ಕಡ್ಡಾಯವಾಗಿ ನೋಡಬೇಕು ಎಂದು ಸೆಲೆಬ್ರಿಟಿಗಳು ಸೇರಿ ರಾಜಕೀಯ ಮುಖಂಡರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕಾಶ್ಮೀರಿ ಪಂಡಿತರು ಹೇಗೆ ತಮ್ಮ ತನವನ್ನು ಉಳಿಸಿಕೊಳ್ಳಲು ಹೋರಾಡಿದರು. ಸಮುದಾಯವೊಂದು ಕಾಶ್ಮೀರಿ ಪಂಡಿತರನ್ನು ಹೇಗೆ ಅಮಾನೀಯವಾಗಿ ಕೊಲ್ಲುತ್ತಿದ್ದರು ಎಂಬುದನ್ನು ಸೂಕ್ಷ್ಮವಾಗಿ ಸಿನಿಮಾದಲ್ಲಿ ತೋರಿಸಲಾಗಿದೆ. ಕೆಲವರು ಈ ಸಿನಿಮಾ ನೋಡಿ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದು ನಿಜವೆಂಬುದನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ – ಎಲ್ಲ ಮುಸಲ್ಮಾನರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ: ಸೋಮಣ್ಣ

  • ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

    ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

    ಭುವನೇಶ್ವರ: ವಿಶ್ವದೆಲ್ಲೆಡೆ ಇಂದು ಕ್ರಿಸ್‌ಮಸ್‌ ಸಂಭ್ರಮ ಮನೆಮಾಡಿದೆ. ಈ ನಡುವೆ ಕಲಾವಿದರೊಬ್ಬರು ತಮ್ಮ ವಿಶಿಷ್ಟ ಕಲೆಯ ಮೂಲಕ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಶುಭಾಶಯ ತಿಳಿಸಿದ್ದಾರೆ.

    ಹೌದು, ಅಂತಾರಾಷ್ಟ್ರೀಯ ಮರಳು ಶಿಲ್ಪ ಕಲಾವಿದ ಸುದರ್ಶನ್‌ ಪಾಟ್ನಾಯಕ್‌ ಅವರು, ಪುರಿ ಕಡಲ ತೀರದಲ್ಲಿ ಸುಮಾರು 5,400 ಗುಲಾಬಿಗಳನ್ನು ಬಳಸಿ ಸಂತಾ ಕ್ಲಾಸ್‌ ಅವರ ಕಲಾಕೃತಿ ರೂಪಿಸಿ ಗಮನ ಸೆಳೆದಿದ್ದಾರೆ. ಆ ಮೂಲಕ ಕ್ರೈಸ್ತ ಬಾಂಧವರಿಗೆ ವಿಶಿಷ್ಟ ರೀತಿಯಲ್ಲಿ ಕ್ರಿಸ್‌ಮಸ್‌ ಶುಭಕೋರಿದ್ದಾರೆ. ಇದನ್ನೂ ಓದಿ: ಕೊರೊನಾ ಟೈಮ್ ನಲ್ಲಿ ನೀವು ಮಾಡಿದ ಕೆಲಸಕ್ಕೆ ಹ್ಯಾಂಡ್ ಸಾಫ್ ಎಂದ ರಚಿತಾ

    ಕೆಂಪು ಹಾಗೂ ಬಿಳಿ ಗುಲಾಬಿ ಹೂಗಳನ್ನು ಬಳಸಿಕೊಂಡು ಸಮುದ್ರ ತೀರದ ಮರಳಿನಲ್ಲಿ ಸಂತಾ ಕ್ಲಾಸ್‌ ಕಲಾಕೃತಿ ಮೂಡಿಸಿದ್ದಾರೆ. ಜೊತೆಗೆ ʼಕ್ರಿಸ್‌ಮಸ್‌ ಶುಭಾಶಯಗಳು, ಕೋವಿಡ್‌ ನಿಯಮಗಳನ್ನು ಪಾಲಿಸಿ ಕ್ರಿಸ್‌ಮಸ್‌ ಆಚರಿಸಿʼ ಎಂಬ ಸಾಲುಗಳನ್ನು ಬರೆದು ವಿಶ್‌ ಮಾಡಿದ್ದಾರೆ.

    ಸುಮಾರು 28 ಅಡಿ ಅಗಲ ಮತ್ತು 50 ಅಡಿ ಉದ್ದದಲ್ಲಿ ಸಂತಾ ಕ್ಲಾಸ್‌ ಅವರ ಕಲಾಕೃತಿ ಮೂಡಿಬಂದಿದೆ. ಈ ಕಲಾಕೃತಿಯನ್ನು ರೂಪಿಸಲು ಸುದರ್ಶನ್‌ ಅವರು ಸುಮಾರು 8 ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಮರಳು ಶಿಲ್ಪ ಕಲಾಸಂಸ್ಥೆಯ ಸಹಕಾರವನ್ನೂ ಪಡೆದಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಮಿಗ್-21 ವಿಮಾನ ಪತನ – ಪೈಲಟ್‍ ಹುತಾತ್ಮ

    ಕೊರೊನಾ ಸಾಂಕ್ರಾಮಿಕ ಇಡೀ ವಿಶ್ವವನ್ನು ವ್ಯಾಪಿಸಿ ಸಂಕಷ್ಟ ಉಂಟುಮಾಡಿರುವುದು ನಮಗೆಲ್ಲರಿಗೂ ತಿಳಿದಿದೆ. ಆದರೂ ನಾವು ಹಬ್ಬ ಆಚರಣೆಗಳನ್ನು ಮಾಡುತ್ತಿದ್ದೇವೆ. ಕೋವಿಡ್‌ ನಿಯಮಗಳನ್ನು ಪಾಲಿಸಿ ಕ್ರಿಸ್‌ಮಸ್‌ ಆಚರಿಸುವಂತೆ ಕಲಾಕೃತಿ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದೇವೆ. ಈ ಕಲಾಕೃತಿಯು ದಾಖಲೆ ಪುಸ್ತಕದಲ್ಲಿ ಹೆಸರಾಗುತ್ತದೆ ಎಂದು ಕಲಾವಿದ ಸುದರ್ಶನ್‌ ಪ್ರತಿಕ್ರಿಯಿಸಿದ್ದಾರೆ.

  • ತಮ್ಮ ಕಲೆಯೊಂದಿಗೆ ರಫೇಲ್ ಸ್ವಾಗತಿಸಿದ ಧಾರವಾಡದ ಕಲಾವಿದ

    ತಮ್ಮ ಕಲೆಯೊಂದಿಗೆ ರಫೇಲ್ ಸ್ವಾಗತಿಸಿದ ಧಾರವಾಡದ ಕಲಾವಿದ

    ಧಾರವಾಡ: ಅತ್ಯಾಧುನಿಕ ಗೇಮ್ ಚೇಂಜರ್ ಯುದ್ಧ ವಿಮಾನ ರಫೇಲ್ ಭಾರತದಲ್ಲಿ ಲ್ಯಾಂಡ್ ಆಗಿದೆ. 5 ರಫೇಲ್ ವಿಮಾನಗಳು ಹರ್ಯಾಣದ ಅಂಬಾಲ ವಾಯುನೆಲೆಯಲ್ಲಿ ಮಧ್ಯಾಹ್ನ 3.10ರ ವೇಳೆಗೆ ಲ್ಯಾಂಡ್ ಆಯ್ತು. ಈ ಹಿನ್ನೆಲೆಯಲ್ಲಿ ಧಾರವಾಡ ಕಲಾವಿದ ಮಂಜುನಾಥ್ ವಿಭಿನ್ನವಾಗಿ ಸ್ವಾಗತ ಕೋರಿದ್ದಾರೆ.

    ಹೌದು. ದೇಶದ ಯಾವುದೇ ಮೂಲೆಯಲ್ಲಿ ಏನೇ ಒಳ್ಳೆಯ ಕೆಲಸ ನಡೆಯಲಿ, ಅದರ ಬಗ್ಗೆ ತನ್ನ ಕಲೆಯ ಮೂಲಕ ಗೌರವ ಸಲ್ಲಿಸುವ ಧಾರವಾಡದ ಕಲಾವಿದ ಮಂಜುನಾಥ್ ಈ ಬಾರಿ ರಫೇಲ್ ವಿಮಾನ ದೇಶಕ್ಕೆ ಆಗಮಿಸಿದ ಬಗ್ಗೆ ತನ್ನ ಕಲೆಯನ್ನ ಪ್ರದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಕನಸು ನನಸು.. ಗೇಮ್‌ ಚೇಂಜರ್‌ ರಫೇಲ್‌ ಭಾರತದಲ್ಲಿ ಲ್ಯಾಂಡ್‌

    ಫ್ರಾನ್ಸ್ ದೇಶದಿಂದ ಭಾರತಕ್ಕೆ ರಫೇಲ್ ಯುದ್ಧ ವಿಮಾನಗಳು ಬಂದಿಳಿಯುತ್ತಿದ್ದಂತೆ ಧಾರವಾಡ ಕೆಲಗೇರಿಯ ಪರಿಸರ ಸ್ನೇಹಿ ಕಲಾವಿದ ಮಂಜುನಾಥ್ ಹಿರೇಮಠ ಅವರು ಧಾರವಾಡದಿಂದಲೇ ಆ ವಿಮಾನಗಳಿಗೆ ಕಲಾ ಸ್ವಾಗತ ಕೋರಿದ್ದಾರೆ. ಇದನ್ನೂ ಓದಿ: ರಫೇಲ್‌ ಭಾರತಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಕಾಶ್ಮೀರದ ಹಿಲಾಲ್‌ ಅಹ್ಮದ್

    ಮರಳಿನಲ್ಲಿ (ಸ್ಯಾಂಡ್ ಆರ್ಟ್) ರಫೇಲ್ ಯುದ್ಧ ವಿಮಾನಗಳ ಚಿತ್ರ ಬಿಡಿಸಿ ‘ವೆಲ್ ಕಮ್ ರಫೇಲ್’ ಎಂದು ಬರೆದು ಆ ವಿಮಾನಗಳಿಗೆ ತಮ್ಮ ಕಲೆಯ ಮೂಲಕ ಸ್ವಾಗತ ಕೋರಿದರು. ಇದನ್ನೂ ಓದಿ: ವಿಜಯಪುರ ಸೈನಿಕ ಶಾಲೆಯ ಹಳೆ ವಿದ್ಯಾರ್ಥಿ ರಫೇಲ್ ಸಾರಥಿ

  • ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.2

    ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.2

    – 2 ಹುಲಿಗಳ ಅಂತರದಲ್ಲಿ ಮೊದಲ ಸ್ಥಾನ ತಪ್ಪಿಸಿಕೊಂಡ ಕರ್ನಾಟಕ
    – ಮಧ್ಯಪ್ರದೇಶದಲ್ಲಿವೆ ಹೆಚ್ಚು ಹುಲಿಗಳು

    ನವದೆಹಲಿ: ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕೆಲವೇ ಸಂಖ್ಯೆಗಳ ಅಂತರದಲ್ಲಿ ಕರ್ನಾಟಕ ನಂ.1 ಪಟ್ಟ ಕೈತಪ್ಪುತ್ತಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಎರಡನೇ ಸ್ಥಾನದಲ್ಲಿಯೇ ಮುಂದುವರಿದಿದೆ.

    ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಮಧ್ಯ ಪ್ರದೇಶ 526 ಹುಲಿಗಳನ್ನು ಹೊಂದುವ ಮೂಲಕ ಮೊದಲ ಸ್ಥಾನ ಪಡೆದಿದೆ. ಕರ್ನಾಟಕ 524 ಹುಲಿಗಳನ್ನು ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದೆ. ಇನ್ನು 442 ಹುಲಿಗಳನ್ನು ಹೊಂದಿರುವ ಉತ್ತರಾಖಂಡ್ ಮೂರನೇ ಸ್ಥಾನದಲ್ಲಿದೆ. ಅಂತರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹುಲಿಗಳ ಅಂಕಿ ಸಂಖ್ಯೆಗಳ ವರದಿಯನ್ನು ಬಿಡುಗಡೆ ಮಾಡಿದ್ದಾರೆ.

    ಉತ್ತರಾಖಂಡ್‍ನ ಜಿಮ್ ಕಾರ್ಬೆಟ್‍ನಲ್ಲಿ 231 ಹುಲಿಗಳಿಗಳಿದ್ದು, ನಾಗರಹೊಳೆ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 127 ಹಾಗೂ 126 ಹುಲಿಗಳಿವೆ. ದೇಶದಲ್ಲಿ ಒಟ್ಟು 50 ಸಂರಕ್ಷಿತ ಪ್ರದೇಶಗಳಲ್ಲಿ 2,967 ಹುಲಿಗಳಿವೆ ಎಂದು ಜಾವಡೇಕರ್ ಅವರು ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಲಾಗಿದೆ.

    ರಾಜ್ಯದಲ್ಲಿ ಪ್ರಸ್ತುತ ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿಳಿಗಿರಿ ರಂಗನ ಬೆಟ್ಟ ಸಂರಕ್ಷಿತ ಧಾಮಗಳಿವೆ. ರಾಜ್ಯದಲ್ಲಿ ಒಟ್ಟು 524 ಹುಲಿಗಳಿವೆ. ಪ್ರಕಾಶ್ ಜಾವಡೇಕರ್ ಹುಲಿಗಳ ಅಂಕಿ ಸಂಖ್ಯೆಗಳ ವರದಿ ಬಿಡುಗಡೆ ಮಾಡಿದರೆ, ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಅಂತಾರಾಷ್ಟ್ರೀಯ ಹುಲಿ ದಿನಕ್ಕೆ ವಿಶೇಷ ಕಲೆ ಮೂಲಕ ಜಾಗೃತಿ ಮೂಡಿಸಿದ್ದಾರೆ.

    ಪೂರಿ ಬೀಚ್‍ನಲ್ಲಿ ಮರಳಿನಲ್ಲಿ ಹುಲಿಯ ಚಿತ್ರ ಬಿಡುಸುವ ಮೂಲಕ ಗಮನ ಸೆಳೆದಿದ್ದಾರೆ. ಈ ಕುರಿತು ಚಿತ್ರವನ್ನು ಟ್ವೀಟ್ ಮಾಡಿ ಸಾಲುಗಳನ್ನು ಬರೆದಿರುವ ಅವರು, ಹುಲಿಗಳ ಆವಾಸಸ್ಥಾನಗಳನ್ನು ರಕ್ಷಿಸುವ ಮೂಲಕ ಅವುಗಳ ಸಂರಕ್ಷಣೆಗಾಗಿ ಎಲ್ಲರೂ ಒಟ್ಟಾಗೋಣ. ಪೂರಿ ಬೀಚ್‍ನಲ್ಲಿ ಬಿಡಿಸಿದಿ ಚಿತ್ರವೊಂದನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

  • ಕಿಮ್ಸ್ ಆವರಣದಲ್ಲಿ ಮರಳು ಶಿಲ್ಪದ ಮೂಲಕ ಕೊರೊನಾ ಸೇನಾನಿಗಳಿಗೆ ಗೌರವ

    ಕಿಮ್ಸ್ ಆವರಣದಲ್ಲಿ ಮರಳು ಶಿಲ್ಪದ ಮೂಲಕ ಕೊರೊನಾ ಸೇನಾನಿಗಳಿಗೆ ಗೌರವ

    ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ ಸಲ್ಲಿಸಲಾಗಿದೆ.

    ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಈ ವಿಶೇಷ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ವೀಕ್ಷಿಸಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೊಂಕಿತರು ಹಾಗೂ ಪ್ರಾಥಮಿಕ ಹಂತದಕ್ಕೆ ಸಂಪರ್ಕಕ್ಕೆ ಬಂದವರ ವಿವರವನ್ನು ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ವೈದ್ಯರು ಜೀವದ ಹಂಗು ತೋರದು ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕಿಮ್ಸ್ ವೈದ್ಯರ ಪರಿಶ್ರಮದಿಂದಾಗಿ ಜಿಲ್ಲೆಯ ಇಬ್ಬರು ಕೋವಿಡ್-19 ರೋಗಿಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಧಾರವಾಡ ಜಿಲ್ಲಾಡಳಿತ, ಪೊಲೀಸರು, ಪಾಲಿಕೆ ಪೌರಕಾರ್ಮಿಕರು ಸಹ ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಕಾರ್ಯಕ್ಕೆ ಇತರೆ ಸರ್ಕಾರೇತರ ಸಂಘ ಸಂಸ್ಥೆಗಳು ಕೈ ಜೋಡಿಸಿದ್ದಾರೆ. ಮಾಧ್ಯಮದವರು ಕೊರೊನಾ ವಿರುದ್ದ ಹೋರಾಟದಲ್ಲಿ ಸಕ್ರಿಯವಾಗಿವ ಭಾಗವಹಿಸಿ ಜನರಲ್ಲಿ ತಿಳಿವಳಿಕೆ ಮೂಡಿಸುತ್ತಿದ್ದಾರೆ. ಇವರೆಲ್ಲರಿಗೂ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಕಲಾವಿದ ಮಂಜುನಾಥ ಹಿರೇಮಠ ಮರಳು ಶಿಲ್ಪ ರಚನೆ ಮಾಡಿದ್ದಾರೆ. ಕಲಾಕೃತಿ ಸುಂದರವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಹಂತ ಹಂತವಾಗಿ ಉದ್ದಿಮೆಗಳನ್ನು ತೆರೆಯಲು ಅವಕಾಶ
    ಕೇಂದ್ರ ಸರ್ಕಾರದ ನಿಯಮಗಳಂತೆ ಮೊದಲ ಹಂತದಲ್ಲಿ ಗ್ರಾಮೀಣ ಭಾಗದ ಹಾಗೂ ಅಗತ್ಯ ವಸ್ತುಗಳು ನಿರ್ಮಿಸುವ ಕೈಗಾರಿಕೆ ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರಿಣಾಮಗಳನ್ನು ಅವಲೋಕಿಸಿ ಹಂತ ಹಂತವಾಗಿ ಉದ್ದಿಮೆಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದರು.

    ಹುಬ್ಬಳ್ಳಿ ಕಂಟ್ಯಾಮಿನೇಟೆಡ್ ಜೋನ್ ಹೊರತು ಪಡಿಸಿ ಬೇರೆ ಸ್ಥಳ ಹಾಗೂ ಧಾರವಾಡ ಬೇಲೂರಿನಲ್ಲಿ ಕೈಗಾರಿಕೆಗಳನ್ನು ತೆರೆದು ಆರ್ಥಿಕ ಚಟುವಟಿಕೆಗಳು ಪಾರಂಭವಾಗಲಿ ಎಂಬ ಆಶಯ ಸರ್ಕಾರಕ್ಕೆ ಇದೆ. ಕಂಟ್ಯಾಮಿನೇಟೆಡ್ ಜೋನ್‍ನ ಕೊವೀಡ್-19 ರೋಗಿಯ ವರದಿ ನೆಗೆಟಿವ್ ಬಂದರೆ ಅಲ್ಲಿಯೂ ಉದ್ಯಮೆಗಳನ್ನು ತೆರೆಯಬಹುದು ಎಂಬ ಆಶಯ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಶಾಸಕರಾದ ಅಬ್ಬಯ್ಯ ಪ್ರಸಾದ್, ಶ್ರೀನಿವಾಸ ಮಾನೆ, ಎಸ್.ವಿ ಸಂಕನೂರ, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್, ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ, ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ್ ಮಾಡ್ಯಾಳ, ಕಲಾವಿದ ಮಂಜುನಾಥ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

  • ಇಂದು ವಿಶ್ವ ತಂಬಾಕು ದಿನ – ಸ್ಯಾಂಡ್ ಆರ್ಟ್ ಮೂಲಕ ಸಂದೇಶ ಕೊಟ್ಟ ಕಲಾವಿದ

    ಇಂದು ವಿಶ್ವ ತಂಬಾಕು ದಿನ – ಸ್ಯಾಂಡ್ ಆರ್ಟ್ ಮೂಲಕ ಸಂದೇಶ ಕೊಟ್ಟ ಕಲಾವಿದ

    ನವದೆಹಲಿ: ಮೇ 31 ರಂದು ವಿಶ್ವ ತಂಬಾಕು ದಿನ ಎಂದು ಆಚರಣೆ ಮಾಡುತ್ತೇವೆ. ಈ ದಿನ ತಂಬಾಕು ಸೇವನೆ ಮಾಡುವವರಿಗೆ ತನ್ನ ಮರಳು ಶಿಲ್ಪ ಕಲೆಯ ಮೂಲಕ ಕಲಾವಿದ ಸುದರ್ಶನ್ ಪಾಟ್ನಾಯಕ್ ಅವರು ಒಳ್ಳೆಯ ಸಂದೇಶ ನೀಡಿದ್ದಾರೆ.

    ಒಡಿಶಾದ ಜನಪ್ರಿಯ ಮರಳು ಶಿಲ್ಪ ಕಲಾವಿದ ಸುದರ್ಶನ್ ಪಾಟ್ನಾಯಕ್ ಅವರು ಮರಳಿನಲ್ಲಿ ಮೇರುಕೃತಿಗಳನ್ನು ತಯಾರು ಮಾಡುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಇಂದು ವಿಶ್ವ ತಂಬಾಕು ದಿನ ಇರುವ ಕಾರಣ ತಮ್ಮ ಮರಳು ಶಿಲ್ಪ ಕಲೆಯ ಮೂಲಕ “ತಂಬಾಕು ಸೇವನೆ ಬಿಡಿ ಜೀವ ಉಳಿಸಿಕೊಳ್ಳಿ” ಎಂಬ ಸಂದೇಶವನ್ನು ನೀಡಿದ್ದಾರೆ.

    ತಂಬಾಕು ಸೇವನೆಯಿಂದ ಪ್ರಾಣಕ್ಕೆ ಹಾನಿಯಾಗುತ್ತದೆ ಎಂದು ಅರಿವು ಮೂಡಿಸುವ ಸಲುವಾಗಿ ವಿಶ್ವ ಆರೋಗ್ಯ ಸಂಸ್ಥೆ (WHO) ವತಿಯಿಂದ ಮೇ 31 ರಂದು ಪ್ರತಿ ವರ್ಷ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ.

    ತಂಬಾಕು ಸೇವನೆಯಿಂದ ಶ್ವಾಸಕೋಶದ ಕ್ಯಾನ್ಸರ್ ಮತ್ತು ಇತರ ಉಸಿರಾಟದ ಕಾಯಿಲೆಗಳು ಬರುತ್ತವೆ. ಈ ರೀತಿಯ ಆಚರಣೆಯಿಂದ ತಂಬಾಕು ಸೇವನೆ ಮಾಡುವವರಿಗೆ ಒಳ್ಳೆಯ ಸಂದೇಶ ನೀಡಬೇಕು ಮತ್ತು ಜನರಲ್ಲಿ ತಂಬಾಕು ಸೇವನೆಯನ್ನು ಕಡಿಮೆ ಮಾಡಬೇಕು ಎಂಬುದು ಇದರ ಉದ್ದೇಶವಾಗಿದೆ.

  • ಮಲ್ಪೆ ಕಡಲ ತೀರದಲ್ಲಿ ಮೋದಿ ಸ್ಯಾಂಡ್ ಆರ್ಟ್- ಯುವ ಕಲಾವಿದರಿಂದ ಪ್ರಧಾನಿಗೆ ಶುಭಾಶಯ

    ಮಲ್ಪೆ ಕಡಲ ತೀರದಲ್ಲಿ ಮೋದಿ ಸ್ಯಾಂಡ್ ಆರ್ಟ್- ಯುವ ಕಲಾವಿದರಿಂದ ಪ್ರಧಾನಿಗೆ ಶುಭಾಶಯ

    ಉಡುಪಿ: ಎರಡನೇ ಬಾರಿಗೆ ನರೇಂದ್ರ ಮೋದಿ ಅವರು ದೇಶದ ಆಡಳಿತ ಚುಕ್ಕಾಣಿ ಹಿಡಿದಿದ್ದು, ಈ ನಡುವೆ ಉಡುಪಿ ಜಿಲ್ಲೆಯ ಕುಂದಾಪುರದ ಮರಳು ಶಿಲ್ಪ ಕಲಾವಿದ ಹರೀಶ್ ಸಾಗಾ ಅವರ ತಂಡ ಪ್ರಧಾನಿ ಮೋದಿಗೆ ವಿಭಿನ್ನವಾಗಿ ವಿಶ್ ಮಾಡಿದ್ದಾರೆ.

    ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸ್ಲೋಗನ್ ಅಡಿಯಲ್ಲಿ ರಚಿಸಿದ ಮರಳು ಶಿಲ್ಪ ಮಲ್ಪೆ ಕಡಲ ತೀರದ ಪ್ರವಾಸಿಗರನ್ನು ಆಕರ್ಷಿಸಿತು. ಅನೇಕ ಪ್ರವಾಸಿಗರು ಮೋದಿ ಅಭಿಮಾನಿಗಳು ಮರಳು ಶಿಲ್ಪದ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡರು. ಮರಳ ಶಿಲ್ಪದಲ್ಲಿ ಸಂಸದ್ ಭವನ, ಪ್ರಧಾನಿ ಮೋದಿಯನ್ನು ರಚಿಸಲಾಗಿದ್ದು ಬಹಳ ಆಕರ್ಷಕವಾಗಿದೆ.

    ಸಂಜೆ ಸೂರ್ಯಾಸ್ತ ನೋಡಲು ಬಂದ ಪ್ರವಾಸಿಗರಿಗೆ ಮರಳುಶಿಲ್ಪ ನೋಡುವ ಅವಕಾಶ ಸಿಕ್ಕಿದೆ. ಕಲಾವಿದ ಹರೀಶ್ ಸಾಗಾ ಮಾತನಾಡಿ, ನರೇಂದ್ರ ಮೋದಿ ಬಹುಮತದಿಂದ ಗೆದ್ದಿದ್ದಾರೆ. ಮೊದಲ ಭಾಷಣದಲ್ಲಿ ಎಲ್ಲರ ಜೊತೆಯಾಗಿದ್ದು, ಎಲ್ಲರ ಅಭಿವೃದ್ಧಿ ಮಾಡುತ್ತಾ, ಎಲ್ಲರ ವಿಶ್ವಾಸ ಗಳಿಸುವ ಘೋಷಣೆ ಮಾಡಿದ್ದಾರೆ. ಇದು ಉತ್ತಮ ಬೆಳವಣಿಗೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮುಂಚೂಣಿಗೆ ಬರಲಿ. ಪ್ರಬಲ ದೇಶವಾಗಿ ಬೆಳೆಯಲಿ ಎಂಬ ಉದ್ದೇಶದಿಂದ ಈ ಆರ್ಟ್ ಮಾಡಿರುವುದಾಗಿ ಹೇಳಿದರು.

  • ಮರಳಿನಲ್ಲಿ ಮೂಡಿಬಂತು ಶತಾಯುಷಿಯ ಕಲಾಕೃತಿ

    ಮರಳಿನಲ್ಲಿ ಮೂಡಿಬಂತು ಶತಾಯುಷಿಯ ಕಲಾಕೃತಿ

    ಧಾರವಾಡ: ಕಲಾವಿದರೊಬ್ಬರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಮರಳಿನ ಕಲಾಕೃತಿಯನ್ನು ರಚಸಿ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದಾರೆ.

    ನಗರದ ಕೆಲಗೇರಿ ನಿವಾಸಿಯಾದ ಮಂಜುನಾಥ ಹಿರೇಮಠ ಸಿದ್ದಗಂಗಾ ಶ್ರೀಗಳ ಕಲಾಕೃತಿಯನ್ನ ರಚನೆ ಮಾಡಿದ್ದಾರೆ. ಇಂದು ಬೆಳಗ್ಗೆಯಿಂದಲೇ ಮಂಜುನಾಥ ಅವರು ಮರಳಿನಲ್ಲಿ ಸಿದ್ದಗಂಗಾ ಶ್ರೀಗಳ ಕಲಾಕೃತಿಯನ್ನು ಮಾಡಿ ಪೂರ್ಣಗೊಳಿಸಿದ್ದು, ಕಲಾಕೃತಿಗೆ ಪೂಜೆ ಸಹ ಸಲ್ಲಿಸಿದ್ದಾರೆ. ಹಾಗೆಯೇ ಮಂಜುನಾಥ್ ಅವರ ಕೆಲಸ ಸ್ಥಳೀಯರ ಮನ ಗೆದ್ದಿದ್ದು, ಸಾರ್ವಜನಿಕರು ಕೂಡ ಶ್ರೀಗಳ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಗದ್ದುಗೆ ಪ್ರವೇಶಿಸಲು ಶಲ್ಯ, ಪಂಚೆ ತೊಟ್ಟ 8 ಜನ ಪೊಲೀಸರು

    ಈ ಕುರಿತು ಕಲಾವಿದ ಮಂಜುನಾಥ ಹಿರೇಮಠ ಅವರು ಮಾತನಾಡಿ, ಶ್ರೀಗಳ ಅಂತಿಮ ದರ್ಶನ ಪಡೆಯಲು ನಮಗೆ ಸಾಧ್ಯವಾಗಲಿಲ್ಲ. ಸಿದ್ದಗಂಗಾ ಮಠಕ್ಕೆ ತೆರಳಲು ತುಂಬಾ ದೂರ ಪ್ರಯಾಣಿಸಬೇಕು ಹಾಗೆಯೇ ಅಲ್ಲಿ ಈಗಾಗಲೇ ಇರುವ ಜನರ ನಡುವೆ ಸರಿಯಾಗಿ ನಡೆದಾಡುವ ದೇವರ ದರ್ಶನ ಸಿಗುವುದು ಕಷ್ಟ. ಆದರಿಂದ ಈ ಭಾಗದ ಜನರಿಗೆ ಇಲ್ಲಿಂದಲೇ ಶ್ರೀಗಳ ದರ್ಶನ ಭಾಗ್ಯ ಸಿಗಲಿ ಅಂತ ಈ ಮರಳಿನ ಕಲಾಕೃತಿಯನ್ನು ಮಾಡಿದ್ದೇನೆ. ಶ್ರೀಗಳ ಕಲಾಕೃತಿಗೆ ನಮಿಸಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದೇನೆ ಎಂದು ಹೇಳಿದರು.

    https://www.youtube.com/watch?v=VeSYe14zzhk

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv