Tag: Sandeep Reddy Vanga

  • ಇದು ನಿಮ್ಮ ಫೆಮಿನಿಸಂ?- ದೀಪಿಕಾ ಪಡುಕೋಣೆ ವಿರುದ್ಧ ಸಂದೀಪ್ ರೆಡ್ಡಿ ಆಕ್ರೋಶ

    ಇದು ನಿಮ್ಮ ಫೆಮಿನಿಸಂ?- ದೀಪಿಕಾ ಪಡುಕೋಣೆ ವಿರುದ್ಧ ಸಂದೀಪ್ ರೆಡ್ಡಿ ಆಕ್ರೋಶ

    ರ್ಜುನ್ ರೆಡ್ಡಿ, ಅನಿಮಲ್ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ. ‘ಸ್ಪಿರಿಟ್’ ಚಿತ್ರದ ಕಥೆ ಲೀಕ್ ಆಗಿರೋದ್ದಕ್ಕೆ ನಿರ್ದೇಶಕ ಸಿಟ್ಟಾಗಿದ್ದಾರೆ. ದೀಪಿಕಾ ಪಡುಕೋಣೆಗೆ (Deepika Padukone) ಪರೋಕ್ಷವಾಗಿ ನಿರ್ದೇಶಕ ಟಾಂಗ್ ಕೊಟ್ರಾ ಎಂಬ ಅನುಮಾನ ನೆಟ್ಟಿಗರಲ್ಲಿ ಮೂಡಿದೆ. ಇದನ್ನೂ ಓದಿ:ಫಸ್ಟ್‌ ಟೈಮ್‌ ಕನ್ನಡ ಚಿತ್ರರಂಗದಲ್ಲಿ ಪೋಸ್ಟರ್‌ ಬ್ಯಾನ್‌

    ನಿರ್ದೇಶಕನ ಪೋಸ್ಟ್‌ನಲ್ಲಿ ನಾನು ಕಲಾವಿದರಿಗೆ ಕಥೆ ಹೇಳುವಾಗ 100% ನಂಬಿಕೆ ಇಡುತ್ತೇನೆ. ಯಾರಿಗೂ ಕಥೆ ಹೇಳಬಾರದು ಅಂತ ನಮ್ಮ ನಡುವೆ ಒಪ್ಪಂದ ಆಗಿರುತ್ತದೆ. ಆ ನಿಯಮವನ್ನು ಮುರಿಯುವ ಮೂಲಕ ನೀವೇನು ಎಂಬುದನ್ನು ತೋರಿಸಿದ್ದೀರಿ. ಕಿರಿಯ ಕಲಾವಿದರನ್ನು ಕೆಳಗೆ ಹಾಕಿದ್ದಲ್ಲದೇ, ನನ್ನ ಸ್ಟೋರಿಯನ್ನು ಲೀಕ್ ಮಾಡಿದ್ದೀರಿ. ಇದೇನಾ ನಿಮ್ಮ ಸ್ತ್ರೀವಾದ ಎಂದು ಅವರು ಪ್ರಶ್ನಿಸಿದ್ದಾರೆ.

    ಒಬ್ಬ ಫಿಲ್ಮ್ ಮೇಕರ್ ಆಗಿ, ನಾನು ನನ್ನ ಚಿತ್ರಕ್ಕಾಗಿ ವರ್ಷಗಳ ಕಠಿಣ ಪರಿಶ್ರಮ ಹಾಕಿದ್ದೇನೆ. ಫಿಲ್ಮ್ ಮೇಕಿಂಗ್ ನನಗೆ ಎಲ್ಲವೂ ಆಗಿದೆ. ಅದಕ್ಕೆ ನಾವು ಸಂಪೂರ್ಣವಾಗಿ ಕೆಲಸ ಮಾಡಿರುತ್ತೇವೆ. ಒಂದು ಕೆಲಸ ಮಾಡಿ ಮುಂದಿನ ಬಾರಿ ಸಂಪೂರ್ಣ ಕಥೆ ಹೇಳಿಬಿಡಿ, ನನಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕೆಂಡಕಾರಿದ್ದಾರೆ.

    ಈ ಆಕ್ರೋಶದ ಪೋಸ್ಟ್ ಅನ್ನು ಸಂದೀಪ್ ರೆಡ್ಡಿ ದೀಪಿಕಾ ಕುರಿತಾಗಿಯೇ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಿನಿ ಪ್ರಿಯರು ಚರ್ಚೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ರಶ್ಮಿಕಾ ಐಟಂ ಡ್ಯಾನ್ಸ್?

     

    View this post on Instagram

     

    A post shared by Triptii Dimri (@tripti_dimri)

    ಪ್ರಭಾಸ್‌ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಆಯ್ಕೆ ಮಾಡಿದ್ದಾರೆ ಎನ್ನಲಾಗಿತ್ತು. ಏಕಾಏಕಿ ಅದು ಏನು ಆಯ್ತೋ ಏನೋ ದಿಢೀರ್ ಅಂತ ಮೊನ್ನೆ (ಮೇ 24) ತೃಪ್ತಿ ದಿಮ್ರಿ ಅವರನ್ನು ಸಿನಿಮಾಗೆ ನಾಯಕಿ ಅಂತ ಚಿತ್ರತಂಡ ಘೋಷಣೆ ಮಾಡಿತ್ತು. ಇದನ್ನು ಸಹಿಸದ ದೀಪಿಕಾ ಕಥೆ ಲೀಕ್ ಮಾಡಿದ್ದಾರೆ ಎಂಬುದನ್ನು ನಿರ್ದೇಶಕ ಪರೋಕ್ಷವಾಗಿ ಹೇಳಿದ್ರಾ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಪ್ರಭಾಸ್ ಮತ್ತು ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್ ಸಿನಿಮಾ ‘ಸ್ಪಿರಿಟ್’ ಈ ವರ್ಷದ ಅಂತ್ಯದಲ್ಲಿ ಶೂಟಿಂಗ್ ಶುರುವಾಗಲಿದೆ. ಇದಕ್ಕೆ ತೃಪ್ತಿ ದಿಮ್ರಿ ನಾಯಕಿ ಎಂದು ಚಿತ್ರತಂಡ ಅನೌನ್ಸ್ ಮಾಡಿದೆ.

  • ‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ

    ‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ

    ‘ಅನಿಮಲ್’ ಖ್ಯಾತಿಯ (Animal) ನಟಿ ತೃಪ್ತಿ ದಿಮ್ರಿಗೆ (Tripti Dimri) ಬಿಗ್ ಚಾನ್ಸ್‌ವೊಂದು ಸಿಕ್ಕಿದೆ. ಸೂಪರ್ ಸ್ಟಾರ್ ಪ್ರಭಾಸ್‌ಗೆ ನಾಯಕಿಯಾಗಿ ತೃಪ್ತಿ ದಿಮ್ರಿ ನಟಿಸಲಿದ್ದಾರೆ. ಈ ಕುರಿತು ಚಿತ್ರತಂಡವೇ ಅಧಿಕೃತ ಘೋಷಣೆ ಮಾಡಿದೆ. ಇದನ್ನೂ ಓದಿ:‘ಬಿಗ್ ಬಾಸ್’ ಬಳಿಕ ಬಿಗ್ ನ್ಯೂಸ್ ಕೊಟ್ರು ಮೋಕ್ಷಿತಾ ಪೈ!

    ಡಾರ್ಲಿಂಗ್ ಪ್ರಭಾಸ್ (Prabhas) ಜೊತೆ ತೃಪ್ತಿ ದಿಮ್ರಿ ರೊಮ್ಯಾನ್ಸ್ ಮಾಡಲಿದ್ದಾರೆ. ‘ಸ್ಪಿರಿಟ್‌’ಗೆ (Spirit) ತೃಪ್ತಿ ನಾಯಕಿ ಎಂದು 9 ಭಾಷೆಗಳಲ್ಲಿ ಪೋಸ್ಟರ್ ಮೂಲಕ ಚಿತ್ರತಂಡ ತಿಳಿಸಿದೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕೆ ಧನ್ಯವಾದಗಳು. ಈ ಚಿತ್ರದ ಭಾಗವಾಗಲು ಹೆಮ್ಮೆಯಾಗುತ್ತಿದೆ. ‘ಅನಿಮಲ್’ ಬಳಿಕ ಮತ್ತೆ ‘ಸ್ಪಿರಿಟ್’ ಅವಕಾಶ ಕೊಟ್ಟಿದ್ದಕ್ಕೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾಗೆ (Sandeep Reddy Vanga) ನಟಿ ಥ್ಯಾಂಕ್ಯೂ ಎಂದಿದ್ದಾರೆ.

     

    View this post on Instagram

     

    A post shared by Triptii Dimri (@tripti_dimri)

    ನಾಯಕಿ ತೃಪ್ತಿ ಹೆಸರನ್ನು 9 ಭಾಷೆಗಳಲ್ಲಿ ಉಲ್ಲೇಖಿಸಿ ಅನೌನ್ಸ್ ಮಾಡಿರೋದ್ದಕ್ಕೆ ‘ಸ್ಪಿರಿಟ್’ ಸಿನಿಮಾ 9 ಭಾಷೆಗಳಲ್ಲಿ ಮೂಡಿ ಬರಲಿದ್ಯಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಇದನ್ನೂ ಓದಿ:‘ಮಾರ್ನಮಿ’ಗೆ ಮೋಹಕ ತಾರೆ ರಮ್ಯಾ ಸಾಥ್ – ರಿವೀಲಾಯ್ತು ಚೈತ್ರಾ ಆಚಾರ್ ರೋಲ್

    ಈ ಚಿತ್ರದಲ್ಲಿ ಪ್ರಭಾಸ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ತಿದ್ದಾರೆ. ಹೀಗಾಗಿ ತೃಪ್ತಿ ಪಾತ್ರ ಈ ಚಿತ್ರದಲ್ಲಿ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

  • ಪ್ರಭಾಸ್ ನಟನೆಯ ‘ಸ್ಪಿರಿಟ್’ ಬಗ್ಗೆ ಹೊರಬಿತ್ತು ಇಂಟರೆಸ್ಟಿಂಗ್ ಅಪ್‌ಡೇಟ್

    ಪ್ರಭಾಸ್ ನಟನೆಯ ‘ಸ್ಪಿರಿಟ್’ ಬಗ್ಗೆ ಹೊರಬಿತ್ತು ಇಂಟರೆಸ್ಟಿಂಗ್ ಅಪ್‌ಡೇಟ್

    ಸಾಲು ಸಾಲು ಸಿನಿಮಾಗಳ ಸೋಲಿನಿಂದ ತತ್ತರಿಸಿದ್ದ ಪ್ರಭಾಸ್‌ಗೆ (Prabhas) ‘ಕಲ್ಕಿ 2898 ಎಡಿ’ ಚಿತ್ರದ ಯಶಸ್ಸಿನಿಂದ ವೃತ್ತಿರಂಗದಲ್ಲಿ ಟರ್ನಿಂಗ್ ಪಾಯಿಂಟ್ ಸಿಕ್ಕಿದೆ. ಸದ್ಯ ಸಂದೀಪ್ ರೆಡ್ಡಿ ವಂಗಾ ಜೊತೆ ‘ಸ್ಪಿರಿಟ್’ (Spirit) ಸಿನಿಮಾ ಮಾಡಲು ಪ್ರಭಾಸ್ ಸಜ್ಜಾಗಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಅಚ್ಚರಿಪಡುವಂತಹ ಇಂಟರೆಸ್ಟಿಂಗ್ ಅಪ್‌ಡೇಟ್‌ವೊಂದು ಸಿಕ್ಕಿದೆ.

    ಸ್ಟಾರ್ ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ಹೊಸ ಸಿನಿಮಾದಲ್ಲಿ ಪ್ರಭಾಸ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಲಿದ್ದಾರೆ. ತೆರೆಮರೆಯಲ್ಲಿ ಚಿತ್ರದ ತಯಾರಿ ನಡೆಯುತ್ತಿದೆ. ಕಲಾವಿದರ ಆಯ್ಕೆ ಕೂಡ ನಡೆಯುತ್ತಿದೆ. ಇನ್ನೂ ಈ ಚಿತ್ರದಲ್ಲಿ ವಿಜಯ್ ದೇವರಕೊಂಡ, ರಣಬೀರ್ ಕಪೂರ್ ಅತಿಥಿ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಈಗಾಗಲೇ ಬ್ಯಾಕ್ ಟು ಬ್ಯಾಕ್ 3 ಹಿಟ್ ಸಿನಿಮಾಗಳನ್ನು ಸಂದೀಪ್ ನೀಡಿದ್ದಾರೆ. ಅರ್ಜುನ್ ರೆಡ್ಡಿ, ಅನಿಮಲ್, ಕಬೀರ್ ಸಿಂಗ್ ಚಿತ್ರಗಳು ಯಶಸ್ಸು ಕಂಡಿದೆ. ಅದರಲ್ಲಿ ಅರ್ಜುನ್ ರೆಡ್ಡಿ ನಟ ವಿಜಯ್, ಅನಿಮಲ್ ಹೀರೋ ರಣಬೀರ್ ಕಪೂರ್‌ಗೆ ‘ಸ್ಪಿರಿಟ್’ ಚಿತ್ರದಲ್ಲಿ ನಟಿಸಲು ಸಂದೀಪ್‌ ಅಪ್ರೋಚ್‌ ಮಾಡಿದ್ದಾರೆ ಎನ್ನಲಾಗಿದೆ. ಇಬ್ಬರದ್ದು ಸಣ್ಣ ಅತಿಥಿಯ ಪಾತ್ರ ಆಗಿರಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ? ಕಾದುನೋಡಬೇಕಿದೆ.

    ಇನ್ನೂ ದಿ ರಾಜ ಸಾಬ್, ಸಲಾರ್‌ 2, ಹನು ರಾಘವಪುಡಿ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ಪ್ರಭಾಸ್ ಕೈಯಲ್ಲಿವೆ.

  • ಪ್ರಭಾಸ್‌ಗೆ ತ್ರಿಷಾ ನಾಯಕಿ- ‘ಅನಿಮಲ್’ ನಿರ್ದೇಶಕ ಆ್ಯಕ್ಷನ್ ಕಟ್

    ಪ್ರಭಾಸ್‌ಗೆ ತ್ರಿಷಾ ನಾಯಕಿ- ‘ಅನಿಮಲ್’ ನಿರ್ದೇಶಕ ಆ್ಯಕ್ಷನ್ ಕಟ್

    ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಯಶಸ್ಸಿನಲ್ಲಿರುವ ಪ್ರಭಾಸ್ ಇದೀಗ ‘ಸ್ಪಿರಿಟ್’ ಸಿನಿಮಾಗೆ ಸಿದ್ಧತೆ ನಡೆಸುತ್ತಿದ್ದಾರೆ. ಇದರ ನಡುವೆ ಈ ಸಿನಿಮಾ ಬಗ್ಗೆ ಲೇಟೆಸ್ಟ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಈ ಚಿತ್ರದಲ್ಲಿ ಡಾರ್ಲಿಂಗ್ ಪ್ರಭಾಸ್ ಜೊತೆ ತ್ರಿಷಾ ರೊಮ್ಯಾನ್ಸ್ ಮಾಡಲಿದ್ದಾರೆ. ಇದನ್ನೂ ಓದಿ:ಗೋವಾದಲ್ಲಿ ಕೊಡೆ ಹಿಡಿದು ನಿಂತ ‘ಬಿಗ್ ಬಾಸ್’ ಖ್ಯಾತಿಯ ಸೋನು

    ಕಳೆದ 20 ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟಿವ್ ಇರುವ ನಟಿ ತ್ರಿಷಾ (Trisha) ಇಂದಿಗೂ ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ. ವಿಜಯ ದಳಪತಿ, ಮೆಗಾಸ್ಟಾರ್ ಚಿರಂಜೀವಿ, ಅಜಿತ್ ಕುಮಾರ್‌ಗೆ ಪ್ರಸ್ತುತ ನಾಯಕಿಯಾಗಿ ಸದ್ದು ಮಾಡುತ್ತಿರುವ ತ್ರಿಷಾ ಇದೀಗ ಪ್ರಭಾಸ್ (Prabhas) ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ.

    ತ್ರಿಷಾರನ್ನು ಈಗಾಗಲೇ ಅನಿಮಲ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಭೇಟಿಯಾಗಿ ಸಿನಿಮಾದ ಕಥೆ ಹೇಳಿದ್ದಾರೆ. ಸಿನಿಮಾ ಕುರಿತು ಮಾತುಕತೆಯಾಗಿದ್ದು, ಸದ್ಯದಲ್ಲೇ ಚಿತ್ರತಂಡ ಈ ಕುರಿತು ಘೋಷಣೆ ಮಾಡಬೇಕಿದೆ. ಸದ್ಯ ‘ಸ್ಪಿರಿಟ್’ ಸಿನಿಮಾದ ಪ್ರೀ ಪ್ರೋಡಕ್ಷನ್ ಕೆಲಸಗಳು ನಡೆಯುತ್ತಿದೆ.

    ಪ್ರಭಾಸ್ ಮತ್ತು ತ್ರಿಷಾ ಇಬ್ಬರೂ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ದಿ ರಾಜಾ ಸಾಬ್ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಜೊತೆ ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಪ್ರಭಾಸ್. ಸದ್ಯ ಈ ಚಿತ್ರದ ಅಪ್‌ಡೇಟ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ‘ಅನಿಮಲ್ ಪಾರ್ಕ್’ ಸಿನಿಮಾ ಹೇಗಿರಲಿದೆ- ಪಾರ್ಟ್‌ 2 ಬಗ್ಗೆ ಸುಳಿವು ಕೊಟ್ಟ ನಿರ್ದೇಶಕ

    ‘ಅನಿಮಲ್ ಪಾರ್ಕ್’ ಸಿನಿಮಾ ಹೇಗಿರಲಿದೆ- ಪಾರ್ಟ್‌ 2 ಬಗ್ಗೆ ಸುಳಿವು ಕೊಟ್ಟ ನಿರ್ದೇಶಕ

    ಬಾಲಿವುಡ್ ನಟ ರಣ್‌ಬೀರ್ ಕಪೂರ್ (Ranbir Kapoor) ಮತ್ತು ರಶ್ಮಿಕಾ ಮಂದಣ್ಣಗೆ(Rashmika Mandanna) ‘ಅನಿಮಲ್’ (Animal Film) ಚಿತ್ರ ಬಿಗ್ ಬ್ರೇಕ್ ಕೊಟ್ಟಿತ್ತು. ಇದರ ಪಾರ್ಟ್ 2 ಯಾವಾಗ ಎಂದು ಕಾಯುತ್ತಿದ್ದ ಫ್ಯಾನ್ಸ್‌ಗೆ ಡೈರೆಕ್ಟರ್ ಬಿಗ್ ಅಪ್‌ಡೇಟ್‌ವೊಂದನ್ನು ನೀಡಿದ್ದಾರೆ. ಅನಿಮಲ್ ಪಾರ್ಕ್ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ ಸಂದೀಪ್ ರೆಡ್ಡಿ ವಂಗಾ. ಇದನ್ನೂ ಓದಿ:ಡಾ.ರಾಜ್‌ ಹುಟ್ಟುಹಬ್ಬ- ಸ್ಮಾರಕಕ್ಕೆ ಕುಟುಂಬಸ್ಥರಿಂದ ಪೂಜೆ

    ‘ಅನಿಮಲ್ ಪಾರ್ಕ್’ (Animal) ಸಿನಿಮಾದ ಕಥೆ ಸಿದ್ಧವಾಗಿದೆ. ಹಾಗಾದ್ರೆ ಶೂಟಿಂಗ್ ಯಾವಾಗ? ಚಿತ್ರ ಹೇಗಿರಲಿದೆ ಎಂಬುದನ್ನು ನಿರ್ದೇಶಕ ಸಂದೀಪ್ ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದಿನ ಅನಿಮಲ್ ಸಿನಿಮಾ ಹೋಲಿಸಿದರೆ ಪಾರ್ಟ್ 2 ಇನ್ನೂ ಹೆಚ್ಚು ವೈಲ್ಡ್ ಆಗಿರಲಿದೆ ಎಂದಿದ್ದಾರೆ. 2026ರಲ್ಲಿ ಶೂಟಿಂಗ್ ಆರಂಭವಾಗಲಿದೆ ಎಂದು ನಿರ್ದೇಶಕ ಮಾತನಾಡಿದ್ದಾರೆ.

    ಮುಂದಿನ ಭಾಗದಲ್ಲಿ ರಣ್‌ಬೀರ್ ಕಪೂರ್ ಪಾತ್ರದ ರಣವಿಜಯ್ ಮತ್ತು ಗೀತಾಂಜಲಿ ಪಾತ್ರಧಾರಿ ರಶ್ಮಿಕಾ ಸಂಬಂಧವನ್ನು ಪರೀಕ್ಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ರಣಬೀರ್ ಅಸಲಿ ಮತ್ತು ನಕಲಿ ಮಧ್ಯೆ ಭಾರೀ ಟ್ವಿಸ್ಟ್ ಇರಲಿದೆಯಂತೆ.

    ಮೊದಲ ಭಾಗದಲ್ಲಿ ಅನಿಲ್ ಕಪೂರ್ ಮತ್ತು ರಣ್‌ಬೀರ್ ಕಪೂರ್ ಅವರ ಅಪ್ಪ-ಮಗನ ಸಂಬಂಧವನ್ನು ಅದ್ಭುತವಾಗಿ ತೋರಿಸಿದ್ದರು. ರಶ್ಮಿಕಾ, ತೃಪ್ತಿ ದಿಮ್ರಿ ನಟನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ರಣ್‌ಬೀರ್ ಮಾಸ್ ಆ್ಯಕ್ಷನ್‌ಗೆ ಫ್ಯಾನ್ಸ್‌ಗೆ ಫಿದಾ ಆಗಿದ್ದರು. ಸಿನಿಮಾ ಕೋಟಿ ಕೋಟಿ ಕಲೆಕ್ಷನ್ ಮಾಡಿತ್ತು.

  • ಮೈಕಲ್ ಜಾಕ್ಸನ್ ಬಯೋಪಿಕ್ ನಿರ್ದೇಶನದ ಬಗ್ಗೆ ಕನಸು ಬಿಚ್ಚಿಟ್ಟ ಸಂದೀಪ್‌ ರೆಡ್ಡಿ ವಂಗಾ

    ಮೈಕಲ್ ಜಾಕ್ಸನ್ ಬಯೋಪಿಕ್ ನಿರ್ದೇಶನದ ಬಗ್ಗೆ ಕನಸು ಬಿಚ್ಚಿಟ್ಟ ಸಂದೀಪ್‌ ರೆಡ್ಡಿ ವಂಗಾ

    ರ್ಜುನ್ ರೆಡ್ಡಿ, ಅನಿಮಲ್ (Animal) ಸಿನಿಮಾಗಳ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸದ್ಯ ಪ್ರಭಾಸ್ (Prabhas) ನಟನೆಯ ‘ಸ್ಪಿರಿಟ್’ ಸಿನಿಮಾ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮೈಕಲ್ ಜಾಕ್ಸನ್ (Michael Jackson) ಜೀವನವನ್ನು ಸಿನಿಮಾ ರೂಪದಲ್ಲಿ ತೋರಿಸಲು ಆಸಕ್ತಿ ತೋರಿದ್ದಾರೆ. ಈ ಬಗ್ಗೆ ನಿರ್ದೇಶಕ ಓಪನ್ ಆಗಿ ಮಾತನಾಡಿದ್ದಾರೆ.

    ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರ ಕಥೆ ಮತ್ತು ನಿರ್ದೇಶನಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆದರೆ ಅವರ ಸಿನಿಮಾಗಳು ಕಾಂಟ್ರವರ್ಸಿ ಮೂಲಕ ಕೂಡ ಸದ್ದು ಮಾಡಿದೆ. ಈಗ ಸಂದರ್ಶನವೊಂದರಲ್ಲಿ ಮೈಕಲ್ ಜಾಕ್ಸನ್ ಬಯೋಪಿಕ್ ಸಿನಿಮಾ ಮಾಡಿ ತೋರಿಸಬೇಕು ಎಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಡಾಲಿ ಧನಂಜಯ್ ಈಗ ‘ಕೋಟಿ’ ಸರದಾರ

    ಮೈಕಲ್ ಜಾಕ್ಸನ್ ಪಾತ್ರವನ್ನು ಯಾರು ಮಾಡ್ತಾರೆ ಎಂಬುದೇ ಪ್ರಶ್ನೆ. ಸೂಕ್ತವಾದ ನಟ ಸಿಕ್ಕರೆ ಸಿನಿಮಾ ಮಾಡಬಹುದು. ಮೈಕಲ್ ಜಾಕ್ಸನ್ ಅವರ ಜೀವನ ತುಂಬಾ ರೋಚಕವಾಗಿದೆ. ಅವರ ಬಾಲ್ಯದ ದಿನಗಳು, ಮೈ ಬಣ್ಣ ಬದಲಾಯಿಸಿಕೊಂಡಿದ್ದು ಅದೆಲ್ಲವೂ ಒಂದು ದೊಡ್ಡ ಜರ್ನಿಯಾಗಿದೆ. ಆ ಸಿನಿಮಾ ಮಾಡಿದರೆ ಎಲ್ಲರೂ ಟಿಕೆಟ್ ಖರೀದಿಸುತ್ತಾರೆ. ಯಾರೇ ನಿರ್ದೇಶನ ಮಾಡಿದರೂ ನಾನು ಕೂಡ ಟಿಕೆಟ್ ಖರೀದಿಸಿ ಸಿನಿಮಾ ನೋಡುತ್ತೇನೆ. ಯಾಕೆಂದ್ರೆ ನಾನು ಕೂಡ ಅವರ ಬಗ್ಗೆ ಹೆಚ್ಚು ತಿಳಿದುಕೊಳ್ಳಬೇಕು ಎಂದು ಸಂದೀಪ್ ರೆಡ್ಡಿ ವಂಗಾ ಹೇಳಿದ್ದಾರೆ.

    ‘ಅನಿಮಲ್’ ಸಿನಿಮಾ ಯಶಸ್ವಿಯಾಗಿದೆ. ಅನಿಮಲ್ ಪಾರ್ಕ್ ಮತ್ತು ಸ್ಪಿರಿಟ್ 2 ಚಿತ್ರಗಳು ಅವರ ಕೈಯಲ್ಲಿದೆ. ಅದಕ್ಕಾಗಿ ತೆರೆಮರೆಯಲ್ಲಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಸದ್ಯದಲ್ಲೇ ಹೆಚ್ಚಿನ ಮಾಹಿತಿ ಸಿಗಲಿದೆ.

  • ಪ್ರಭಾಸ್ ಜೊತೆ ಕೀರ್ತಿ ಸುರೇಶ್ ಡ್ಯುಯೇಟ್‌

    ಪ್ರಭಾಸ್ ಜೊತೆ ಕೀರ್ತಿ ಸುರೇಶ್ ಡ್ಯುಯೇಟ್‌

    ಸೌತ್ ಬ್ಯೂಟಿ ಕೀರ್ತಿ ಸುರೇಶ್ (Keerthy Suresh) ಬಂಪರ್ ಚಾನ್ಸ್‌ವೊಂದನ್ನು ಗಿಟ್ಟಿಸಿಕೊಂಡಿದ್ದಾರೆ. ಸೌತ್ ಮತ್ತು ಬಾಲಿವುಡ್‌ನಲ್ಲಿ ಬ್ಯುಸಿಯಿರುವ ಮಹಾನಟಿ ಕೀರ್ತಿ ಸುರೇಶ್ ಈಗ ಡಾರ್ಲಿಂಗ್ ಪ್ರಭಾಸ್ (Prabhas)  ಜೊತೆ ರೊಮ್ಯಾನ್ಸ್ ಮಾಡುವ ಚಾನ್ಸ್ ಸಿಕ್ಕಿದೆ.

    ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಸದಾ ಗ್ರ್ಯಾಮರ್‌ಗಿಂತ ನಟನೆಯ ಗ್ರಾಮರ್‌ಗೆ ಬೆಲೆ ಕೊಡುವ ನಟಿ. ಪಾತ್ರ ಹೇಗೆ ಇರಲಿ, ಆ ಪಾತ್ರದಿಂದ ಜನರಿಗೆ ಏನು ಸಿಗುತ್ತೆ. ನಟನೆಗೆ ಸ್ಕೋಪ್ ಇದ್ಯಾ? ಎಂದು ನೋಡುತ್ತಾರೆ. ಅದಕ್ಕೆ ತಾಜಾ ಉದಾಹರಣೆ ಅಂದರೆ ‘ಮಹಾನಟಿ’ ಚಿತ್ರ. ಇದೀಗ ನಟನೆಗೆ ಹೆಚ್ಚು ಒತ್ತು ಇರುವ ಸ್ಪಿರಿಟ್ ಸಿನಿಮಾದಲ್ಲಿ ನಟಿಸುವ ಅವಕಾಶ ಬಾಚಿಕೊಂಡಿದ್ದಾರೆ. ಇದನ್ನೂ ಓದಿ:ಮುಂಬೈ ಕರಾವಳಿ ಸುರಂಗ ಮಾರ್ಗ ಮೆಚ್ಚಿದ ಬಿಗ್ ಬಿ

    ಅರ್ಜುನ್ ರೆಡ್ಡಿ, ಅನಿಮಲ್ (Animal) ಸಿನಿಮಾಗಳ ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ಸ್ಪಿರಿಟ್’ (Spirit Film) ಚಿತ್ರದಲ್ಲಿ ಪ್ರಭಾಸ್ ಜೊತೆ ಮುಖ್ಯಭೂಮಿಕೆಯಲ್ಲಿ ಕೀರ್ತಿ ಸುರೇಶ್ ಕೂಡ ನಟಿಸಲಿದ್ದಾರೆ.

    ಇದರ ಜೊತೆ ವರುಣ್ ಧವನ್ (Varun Dhawan) ನಟನೆಯ ‘ಬೇಬಿ ಜಾನ್’ ಸಿನಿಮಾದಲ್ಲಿಯೂ ಕೀರ್ತಿ ನಟಿಸುತ್ತಿದ್ದಾರೆ. ಈ ಮೂಲಕ ಬಾಲಿವುಡ್‌ಗೂ ಪಾದಾರ್ಪಣೆ ಮಾಡಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಬ್ಯೂಟಿಗೆ ಯಾವ ಚಿತ್ರ ಕೈಹಿಡಿಯಲಿದೆ ಕಾಯಬೇಕಿದೆ.

  • ಅಲ್ಲು ಅರ್ಜುನ್ ಜೊತೆ ಮೃಣಾಲ್ ಠಾಕೂರ್ ರೊಮ್ಯಾನ್ಸ್

    ಅಲ್ಲು ಅರ್ಜುನ್ ಜೊತೆ ಮೃಣಾಲ್ ಠಾಕೂರ್ ರೊಮ್ಯಾನ್ಸ್

    ‘ಸೀತಾರಾಮಂ’ (Seetharamam) ಬೆಡಗಿ ಮೃಣಾಲ್ ಠಾಕೂರ್ (Mrunal Thakur ಇದೀಗ ಬಂಪರ್ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ. ‘ಹಾಯ್ ನಾನ್ನಾ’ ಚಿತ್ರದ ಸಕ್ಸಸ್ ನಂತರ ಐಕಾನ್ ಸ್ಟಾರ್ ಜೊತೆ ಮೃಣಾಲ್ ರೊಮ್ಯಾನ್ಸ್ ಮಾಡಲು ಸಜ್ಜಾಗಿದ್ದಾರೆ.

    ‘ಪುಷ್ಪ’ ಚಿತ್ರದ ನಂತರ ಸೂಪರ್ ಸ್ಟಾರ್ ಆಗಿ ಮಿಂಚುತ್ತಿರುವ ಅಲ್ಲು ಅರ್ಜುನ್ ಜೊತೆ ನಟಿಸಬೇಕು ಎಂಬುದು ಎಲ್ಲಾ ನಟಿಮಣಿಯರ ಕನಸಾಗಿದೆ. ಹೀಗಿರುವಾಗ ಅಲ್ಲು ಅರ್ಜುನ್ ಜೊತೆ ನಟಿಸುವ ಗೋಲ್ಡನ್ ಚಾನ್ಸ್ ಮೃಣಾಲ್‌ಗೆ ಸಿಕ್ಕಿದೆ. ‘ಅನಿಮಲ್’ (Animal) ಚಿತ್ರದ ಸ್ಟಾರ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

    ಅರ್ಜುನ್ ರೆಡ್ಡಿ, ಕಬೀರ್ ಸಿಂಗ್, ಅನಿಮಲ್ ಸಕ್ಸಸ್ ನಂತರ ಸಂದೀಪ್ ರೆಡ್ಡಿ ವಂಗಾ ಈಗ ಪ್ರಭಾಸ್ (Prabhas) ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಇದರ ಜೊತೆ ಅಲ್ಲು ಅರ್ಜುನ್ (Allu Arjun) ಜೊತೆ ಹೊಸ ಸಿನಿಮಾ ಮಾಡಲು ಮಾತುಕತೆಯಾಗಿದೆ. ಈ ಚಿತ್ರಕ್ಕೆ ಮೃಣಾಲ್ ನಾಯಕಿ ಎಂದು ಸಂದೀಪ್ ಅಧಿಕೃತ ಮಾಹಿತಿ ನೀಡಿದ್ದಾರೆ.

    ‘ಅನಿಮಲ್ ಪಾರ್ಟ್ 2’ಗೆ ಕೂಡ ತೆರೆಮರೆಯಲ್ಲಿ ಭಾರೀ ಸಿದ್ಧತೆ ನಡೆಯುತ್ತಿದೆ. ಅಲ್ಲು ಅರ್ಜುನ್ ಜೊತೆ ಸಂದೀಪ್ ಕೈಜೋಡಿಸಿರೋದ್ರಿಂದ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆಯಿದೆ. ಮೊದಲ ಬಾರಿಗೆ ಅಲ್ಲು ಅರ್ಜುನ್ ಮತ್ತು ಮೃಣಾಲ್ ಜೋಡಿಯಾಗುತ್ತಿದ್ದಾರೆ. ಇದನ್ನೂ ಓದಿ:ಸಿನಿಮಾದಲ್ಲಿ ಅವಕಾಶ ಕೊಡಿಸೋದಾಗಿ ನಂಬಿಸಿ ಹುಡುಗಿಗೆ ಮೋಸ ಮಾಡಿದ ನಟ

    ಸಂದೀಪ್ ನಿರ್ದೇಶನ ಮಾಡ್ತಿದ್ದಾರೆ ಅಂದರೆ ಅಲ್ಲಿ ಆ್ಯಕ್ಷನ್ ಸೀನ್‌ಗಳಿಗೆ ಕೊರತೆ ಇರಲ್ಲ. ಅಲ್ಲು ಅರ್ಜುನ್ ಮತ್ತು ಮೃಣಾಲ್ ಕೆಮಿಸ್ಟ್ರಿ ಮತ್ತು ಕಥೆಯನ್ನು ಯಾವ ರೀತಿ ತೆರೆಯ ಮೇಲೆ ಸಂದೀಪ್ ಪ್ರಸೆಂಟ್ ಮಾಡ್ತಾರೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡಿಸಿದೆ.

    ‘ಪುಷ್ಪ 2’ ರಿಲೀಸ್ ಆದ್ಮೇಲೆ ಮೃಣಾಲ್ ಜೊತೆ ಅಲ್ಲು ಅರ್ಜುನ್ ರೊಮ್ಯಾನ್ಸ್ ಮಾಡುತ್ತಾರೆ. ಈ ವರ್ಷದ ಕೊನೆಯಲ್ಲಿ ಈ ಸಿನಿಮಾಗೆ ಚಾಲನೆ ಸಿಗಲಿದೆ ಎನ್ನಲಾಗುತ್ತಿದೆ. ಚಿತ್ರತಂಡದಿಂದ ಅಧಿಕೃತ ಅಪ್‌ಡೇಟ್ ಸಿಗುವವರೆಗೂ ಕಾಯಬೇಕಿದೆ.

  • ‘ಅನಿಮಲ್’ ನಿರ್ದೇಶಕನ ಸಿನಿಮಾ ಆಫರ್‌ಗೆ ನೋ ಎಂದ ಕಂಗನಾ

    ‘ಅನಿಮಲ್’ ನಿರ್ದೇಶಕನ ಸಿನಿಮಾ ಆಫರ್‌ಗೆ ನೋ ಎಂದ ಕಂಗನಾ

    ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ‘ಅರ್ಜುನ್ ರೆಡ್ಡಿ’, ಇತ್ತೀಚಿನ ‘ಅನಿಮಲ್’ (Animal) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡಿದೆ. 900 ಕೋಟಿ ರೂ.ಗಿಂತ ಅಧಿಕ ಕಲೆಕ್ಷನ್ ಮಾಡಿ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ಸಂದೀಪ್ ನಿರ್ದೇಶನದ ವೈಖರಿ ನೋಡಿ ನಮ್ಮಗೂ ಅವರ ಸಿನಿಮಾದಲ್ಲಿ ನಟಿಸಲು ಚಾನ್ಸ್ ಸಿಗಲಿ ಎಂದು ಕೆಲವು ನಟ-ನಟಿಯರು ಕಾಯ್ತಿದ್ದಾರೆ. ಇದರ ನಡುವೆ ಸಂದೀಪ್ ಕಡೆಯಿಂದ ಸಿಕ್ಕ ಆಫರ್‌ನ್ನು ಕಂಗನಾ ರಣಾವತ್ (Kangana Ranaut) ರಿಜೆಕ್ಟ್ ಮಾಡಿದ್ದಾರೆ.

    ಇತ್ತೀಚೆಗೆ ‘ಅನಿಮಲ್’ ಚಿತ್ರವನ್ನು ನೋಡಿದ ಬಳಿಕ ಕಂಗನಾ ಅವರು ತಮ್ಮ ಅನಿಸಿಕೆ ತಿಳಿಸಿದ್ದರು. ಈ ಸಿನಿಮಾ ಸ್ತ್ರಿ ವಿರೋಧಿಯಾಗಿದೆ ಎಂದು ಅವರು ಹೇಳಿದ್ದರು. ಕಂಗನಾ ಹೇಳಿಕೆಯನ್ನು ಸಂದೀಪ್ ಅವರು ಪಾಸಿಟಿವ್ ಆಗಿ ತೆಗೆದುಕೊಂಡಿದ್ದಾರೆ. ಕಂಗನಾ ಅವರ ಪ್ರತಿಭೆಯ ಬಗ್ಗೆ ಸಂದೀಪ್‌ಗೆ ಅಭಿಮಾನ ಇದೆ. ಇದನ್ನೂ ಓದಿ:‘ರಿಚರ್ಡ್ ಆಂಟನಿ’ ಕುರಿತು ಅಪ್ ಡೇಟ್ ನೀಡಿದ ರಕ್ಷಿತ್ ಶೆಟ್ಟಿ

    ಅವಕಾಶ ಸಿಕ್ಕರೆ, ಪಾತ್ರಕ್ಕೆ ಕಂಗನಾ ಸೂಕ್ತ ಎನಿಸಿದರೆ ಅವರ ಬಳಿ ಹೋಗಿ ಕಥೆ ಹೇಳುತ್ತೇನೆ. ‘ಕ್ವೀನ್’ ಮತ್ತು ಇತರೆ ಸಿನಿಮಾಗಳಲ್ಲಿ ಅವರ ನಟನೆಯನ್ನು ನಾನು ಇಷ್ಟಪಟ್ಟಿದ್ದೇನೆ. ನನ್ನ ಚಿತ್ರದ ಬಗ್ಗೆ ಅವರು ನೆಗೆಟಿವ್ ಕಾಮೆಂಟ್ ಮಾಡಿದ್ದರೂ ನನಗೆ ಕೋಪ ಬರುವುದಿಲ್ಲ. ಒಟ್ಟಿನಲ್ಲಿ ಅವರ ಪರ್ಫಾರ್ಮೆನ್ಸ್ ನನಗೆ ನಿಜಕ್ಕೂ ಇಷ್ಟವಾಗಿದೆ ಎಂದು ಸಂದೀಪ್ ರೆಡ್ಡಿ ವಂಗಾ ಹೇಳಿದ್ದಾರೆ.

    ಅನಿಸಿಕೆ ಮತ್ತು ಟೀಕೆ ಎರಡು ಬೇರೆ ಬೇರೆ ಆಗಿರುತ್ತವೆ. ಎಲ್ಲ ಬಗೆಯ ಕಲೆ ಕೂಡ ವಿಮರ್ಶೆಗೆ ಮತ್ತು ಚರ್ಚೆಗೆ ಒಳಪಡಬೇಕು. ಅದು ಸಹಜವಾದ ವಿಷಯ. ಸಂದೀಪ್ ಅವರು ನನ್ನ ವಿಮರ್ಶೆಗೆ ಗೌರವ ನೀಡಿದ್ದು ನೋಡಿದರೆ ತಿಳಿಯುತ್ತದೆ. ಅವರು ಕೇವಲ ಗಂಡಸುತನದ ಸಿನಿಮಾ ಮಾಡುವುದಷ್ಟೇ ಅಲ್ಲ, ಅವರ ಆ್ಯಟಿಟ್ಯೂಡ್ ಕೂಡ ಹಾಗೆಯೇ ಇದೆ. ಧನ್ಯವಾದಗಳು ಸರ್. ಆದರೆ ನೀವು ನನಗೆ ಯಾವುದೇ ಪಾತ್ರ ನೀಡಬೇಡಿ. ನೀಡಿದರೆ ನಿಮ್ಮ ಆಲ್ಫಾ ಮೇಲ್ ಪಾತ್ರಗಳು ಸ್ತ್ರಿವಾದಿ ಆಗಿಬಿಡುತ್ತವೆ. ಆಗ ನಿಮ್ಮ ಸಿನಿಮಾಗಳು ಸೋಲುತ್ತವೆ. ನೀವು ಉತ್ತಮ ಸಿನಿಮಾ ಮಾಡುವವರು. ಇಂಡಸ್ಟ್ರಿಗೆ ನಿಮ್ಮ ಅಗತ್ಯ ಇದೆ ಎಂದು ಕಂಗನಾ ರಣಾವತ್ ಹೇಳಿದ್ದಾರೆ.

    ಸಂದೀಪ್ ರೆಡ್ಡಿ ವಂಗಾ ‘ಅನಿಮಲ್’ ಪಾರ್ಟ್ 2 ಸಿನಿಮಾ ಮಾಡುವ ತಯಾರಿಯಲ್ಲಿದ್ದಾರೆ. ಅನಿಮಲ್ ಚಿತ್ರದಂತೆ ಪಾರ್ಟ್ 2 ಕೂಡ ಗೆಲ್ಲಲೇಬೇಕು ಎಂದು ಪಣ ತೊಟ್ಟಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಶುರುವಾಗಲಿದೆ.

  • ‘ಅನಿಮಲ್’ ನಿರ್ದೇಶಕ ಸಂದೀಪ್‌ರನ್ನು ಹಾಡಿ ಹೊಗಳಿದ ರಶ್ಮಿಕಾ ಮಂದಣ್ಣ

    ‘ಅನಿಮಲ್’ ನಿರ್ದೇಶಕ ಸಂದೀಪ್‌ರನ್ನು ಹಾಡಿ ಹೊಗಳಿದ ರಶ್ಮಿಕಾ ಮಂದಣ್ಣ

    ಣ್‌ಬೀರ್ ಕಪೂರ್, ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಅನಿಮಲ್’ (Animal) ಸಿನಿಮಾ 800 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಹಿಸ್ಟರಿ ಕ್ರಿಯೇಟ್ ಮಾಡಿದೆ. ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗಾ ಅವರ ಸಿನಿಮಾ ಮೇಲಿನ ಪ್ರೀತಿಗೆ ರಶ್ಮಿಕಾ ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಮತ್ತೊಂದು ದಾಖಲೆ ಬರೆದ ಕಾಟೇರ: 200 ಕೋಟಿ ರೂ. ಕ್ಲಬ್ ಸೇರಿದ ಸಂಭ್ರಮ

    ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಳ್ಳಲು ಕಾರಣವಾದ ‘ಅನಿಮಲ್’ ಸಿನಿಮಾ ಮತ್ತು ಡೈರೆಕ್ಟರ್ ಕುರಿತು ರಶ್ಮಿಕಾ ರಿಯಾಕ್ಟ್ ಮಾಡಿದ್ದಾರೆ. ಸಂದೀಪ್ ಅವರು (Sandeep Reddy Vanga) ಸಿನಿಮಾ ಮಾಡುವಾಗ ಭಿನ್ನವಾಗಿ ಯೋಚಿಸುತ್ತಾರೆ. ಆದರೆ ‘ಅನಿಮಲ್’ ಚಿತ್ರ ನೋಡಿದಾಗ ಈ ರೀತಿಯ ಸಿನಿಮಾ ಬೇಕು ಎನ್ನುವಂತೆ ಮಾಡಿದ್ದರು.

    ಈ ವೇಳೆ, ಅನಿಮಲ್ ಪಾರ್ಟ್ 2 ಬಗ್ಗೆ ನಟಿ ಮಾತನಾಡಿದ್ದರು. ‘ಅನಿಮಲ್ ಪಾರ್ಕ್’ ಚಿತ್ರದ ಕಥೆ ಹೇಗೆ ಬೇಕಾದರೂ ಇರಬಹುದು. ಈಗಾಗಲೇ ಚಿತ್ರದ ಸಣ್ಣ ಎಳೆಯನ್ನು ಸಂದೀಪ್ ಹೇಳಿದ್ದಾರೆ ಎಂದು ರಶ್ಮಿಕಾ ಮಾತನಾಡಿದ್ದಾರೆ. ‘ಅನಿಮಲ್’ ಪಾರ್ಟ್ 2 ಸಕ್ಸಸ್‌ ಕಾಣುವ ಭರವಸೆಯಲ್ಲಿದ್ದಾರೆ.

    ಸಂದೀಪ್ ರೆಡ್ಡಿ ವಂಗಾ, ಒಂದು ಕಥೆ ರೆಡಿ ಮಾಡಿದ್ರೆ ಅದಕ್ಕೆ ಕರೆಕ್ಟ್ ಆಗಿ ನಿಲ್ಲುತ್ತಾರೆ. ಜನಕ್ಕೆ ಹೇಗೆ ಬೇಕೋ ಕಥೆ ಬದಲಾಯಿಸುವುದಿಲ್ಲ ಎಂದು ರಶ್ಮಿಕಾ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:ಕೊನೆಗೂ ನಿಕ್ಕಿ ಆಯಿತು ಗುರು-ಜಗ್ಗೇಶ್ ಚಿತ್ರದ ರಿಲೀಸ್ ಡೇಟ್

    ‘ಅನಿಮಲ್ ಪಾರ್ಕ್’, ಪುಷ್ಪ 2, ದಿ ಗರ್ಲ್‌ಫ್ರೆಂಡ್, ರೈನ್‌ಬೋ ಸೇರಿದಂತೆ ಹಲವು ಸಿನಿಮಾಗಳು ರಶ್ಮಿಕಾ ಮಂದಣ್ಣ ಕೈಯಲ್ಲಿವೆ.