Tag: Sandesh Shetty Ajri

  • ಸ್ನೇಹ-ಸಂಬಂಧಕ್ಕೆ ಸಾಕ್ಷಿಯಾದ ಇನಾಮ್ದಾರ್

    ಸ್ನೇಹ-ಸಂಬಂಧಕ್ಕೆ ಸಾಕ್ಷಿಯಾದ ಇನಾಮ್ದಾರ್

    ಸಿನಿ ದುನಿಯಾದಲ್ಲಿ ಸ್ನೇಹ- ಸಂಬಂಧಕ್ಕೆ ಸಾಕ್ಷಿಯಾಗಿ ಸಹಸ್ರಾರು ಸಿನಿಮಾಗಳು ನಿರ್ಮಾಣಗೊಂಡಿವೆ.  ಆ ಸಾಲಿಗೆ ಸಂದೇಶ್ ಶೆಟ್ಟಿ ಆಜ್ರಿ  (Sandesh Shetty Ajri) ನಿರ್ದೇಶನದ, ನಿರಂಜನ್ ಶೆಟ್ಟಿ ತಲ್ಲೂರು ನಿರ್ಮಾಣದ ‘ಇನಾಮ್ದಾರ್’ (Inamdar) ಚಿತ್ರ ಹೊಸದಾಗಿ ಸೇರ್ಪಡೆಗೊಳ್ಳಲು ರೆಡಿಯಾಗಿದೆ. ಇದೇ ಅಕ್ಟೋಬರ್ 27 ರಂದು ರಾಜ್ಯಾದ್ಯಂತ ಚಿತ್ರ  ತೆರೆಗಪ್ಪಳಿಸಲು ಸಜ್ಜಾಗಿದ್ದು ಚಿತ್ರದ ನಿರ್ಮಾಪಕರಾದ ನಿರಂಜನ್ ಶೆಟ್ಟಿ ತಲ್ಲೂರು ತಮ್ಮ ನಿರೀಕ್ಷೆಯನ್ನು ಹೊರಹಾಕಿದ್ದಾರೆ. ಇನಾಮ್ದಾರ್ ಗಾಗಿ ಖಜಾನೆ ತೆರೆದಿಟ್ಟಿದ್ದರ ಹಿಂದಿನ ಸ್ನೇಹದ ಕಥೆಯನ್ನು ಹಾಗೂ ಶ್ರಮದ ವ್ಯಥೆಯನ್ನು ಜಗಜ್ಜಾಹೀರು ಮಾಡಿದ್ದಾರೆ.

    ನಿರಂಜನ್ ಶೆಟ್ಟಿ ಕರಾವಳಿ ಭಾಗದವರು. ಮೂಲತಃ ಉದ್ಯಮಿಯಾಗಿರುವ ಇವರಿಗೆ ಸಿನಿಮಾರಂಗದ ನಂಟಿರಲಿಲ್ಲ. ಆದರೆ, ಸ್ನೇಹಕ್ಕೋಸ್ಕರ ಸಿನಿಮಾಲೋಕ ಪ್ರವೇಶಿಸಿದರು. ಅರ್ಧಕ್ಕೆ ನಿಂತು ಹೋಗಿದ್ದ ಸಿನಿಮಾಗೆ ಬಂಡವಾಳ ಸುರಿಯುವ ಮೂಲಕ ಕುಸಿದುಬಿದ್ದಿದ್ದ ಗೆಳೆಯ ಕಂ ನಿರ್ದೇಶಕ ಸಂದೇಶ್ ಶೆಟ್ಟಿನಾ ಕೈ ಹಿಡಿದರು. ಇವತ್ತು ಇನಾಮ್ದಾರ್ ಸಿನಿಮಾ ರಿಲೀಸ್ ಹಂತ ತಲುಪಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುವ ಗುಣಮಟ್ಟ ಕಾಯ್ದಿರಿಸಿಕೊಂಡಿದೆ ಅಂದರೆ ಅದಕ್ಕೆ ಮೊದಲ ಕಾರಣ ನಿರ್ದೇಶಕರಾದರೆ, ಮೂಲ ಕಾರಣ ನಿರ್ಮಾಪಕ ನಿರಂಜನ್ ಶೆಟ್ಟಿ ತಲ್ಲೂರ್ ಅವರು.

    ಇವರಿಗೆ ಸಿನಿಮಾದ ಮೇಲೆ ಅಪಾರವಾದ ಆಸಕ್ತಿ. ಅದರಲ್ಲೂ ತಾವು ಬಂಡವಾಳ ಸುರಿದು ತಯಾರಿಸಿರುವ ಇನಾಮ್ದಾರ್ ಮೇಲಂತೂ ಬೆಟ್ಟದ್ದಷ್ಟು ನಿರೀಕ್ಷೆಯಿದೆ.  ನಮ್ಮ ಸಿನಿಮಾ ನಮಗೆ ಹೇಗಿದ್ದರೂ ಚೆಂದಾನೆ ಎನ್ನುವ ನಿರಂಜನ್, ಫೈನಲೀ ಪ್ರೇಕ್ಷಕರು ಒಪ್ಪಿಕೊಳ್ಳಬೇಕು. ಅವರು ಇನಾಮ್ದಾರ್ ನ ಅಕ್ಸೆಪ್ಟ್ ಮಾಡೇ ಮಾಡ್ತಾರೆ, ನಮ್ಮ ಶ್ರಮಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತೆನ್ನುವ ಆತ್ಮವಿಶ್ವಾಸ ಹೊರಹಾಕಿದ್ದಾರೆ.

    ಅಂದ್ಹಾಗೇ, ಇನಾಮ್ದಾರ್ ಚಿತ್ರ ಶೀರ್ಷಿಕೆಯಿಂದಲೇ ಸುದ್ದಿಮನೆ ಬಾಗಿಲು ಬಡಿದಿತ್ತು. ಟೀಸರ್, ಹಾಡುಗಳ ಮೂಲಕಪ್ರೇಕ್ಷಕ ವಲಯದಲ್ಲಿ ಕುತೂಹಲ ಗರಿಗೆದರುವಂತೆ ಮಾಡಿತ್ತು. ಇತ್ತೀಚೆಗೆ ಇದರ  ಟ್ರೇಲರ್ ಹೊರಬಿದ್ದಿದ್ದು ಮತ್ತಷ್ಟು ನಿರೀಕ್ಷೆ ಹೆಚ್ಚಿದೆ. ಉತ್ತರ ಕರ್ನಾಟಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜನನ್ನು ಆರಾಧಿಸುವ ವಂಶ ಹಾಗೂ ಕರಾವಳಿಯಲ್ಲಿ ಪರಶಿವನನ್ನು ಆರಾಧಿಸುವ ಕಾಡು ಜನಾಂಗವನ್ನು ಮುಖ್ಯ ಭೂಮಿಕೆಗೆ ತಂದು ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ವರ್ಣ ಸಂಘರ್ಷದ ಕಥೆ ಎಣೆದಿದ್ದಾರೆ.

    ಚಿತ್ರದಲ್ಲಿ ಪ್ರತಿಭಾನ್ವಿತ ಕಲಾವಿದರ ದಂಡೇ ಇದೆ. ಶರತ್ ಲೋಹಿತಾಶ್ವ, ಅವಿನಾಶ್, ಥ್ರಿಲ್ಲರ್ ಮಂಜು, ಪ್ರಮೋದ್ ಶೆಟ್ಟಿ (Pramod Shetty), ಎಂಕೆ ಮಠ ಅವ್ರಂತ ಹಿರಿಕರ ಜೊತೆಗೆ ಚಿತ್ರಕಲಾ ರಾಜೇಶ್,ಕಾಂತಾರ ಖ್ಯಾತಿಯ ನಾಗರಾಜ್ ಬೈಂದೂರು, ಪ್ರಶಾಂತ್ ಸಿದ್ದಿ, ರಘು ಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ, ಸಂಜು ಬಸಯ್ಯ,  ಹಾಲಂಬಿಯಂತಹ ಪ್ರತಿಭೆಗಳು ಇದ್ದಾರೆ. ನಾಯಕ ರಂಜನ್ ಛತ್ರಪತಿ ಗೆ ಚಿರಶ್ರೀ ಅಂಚನ್ ಹಾಗೂ ಎಸ್ತರ್ ನರೋನಾ ನಾಯಕಿಯರಾಗಿ ಸಾಥ್ ಕೊಟ್ಟಿದ್ದಾರೆ.

     

    ಬೆಳಗಾವಿ, ನಿಪ್ಪಾಣಿ, ಧಾರವಾಡ, ಹುಬ್ಬಳಿ, ಚಿಕ್ಕಮಂಗಳೂರು, ಕರಾವಳಿ ಭಾಗ ಸುತ್ತಮುತ್ತ ಸುಮಾರು 65 ದಿನ ಶೂಟಿಂಗ್ ಮಾಡಿದ್ದು, ಮುರುಳಿ ಕ್ಯಾಮೆರಾ ಕೈಚಳಕ ಚಿತ್ರದ ಶ್ರೀಮಂತಿಕೆ ಹೆಚ್ಚಿಸಿದೆ. ಶಿವರಾಜ್ ಮೇಹು ಸಂಕಲನ, ರಾಕಿ ಸೋನು ಸಂಗೀತ, ನಕುಲ್ ಅಭಯಂಕರ್ ಹಿನ್ನಲೆ ಸಂಗೀತ `ಇನಾಮ್ದಾರ್’ಗೆ ಶಕ್ತಿತುಂಬಿದೆ.  ಶ್ರೀ ಕುಂತಿಯಮ್ಮ ಪ್ರೊಡಕ್ಷನ್ ನಿರ್ಮಾಣದಲ್ಲಿ  ಅದ್ದೂರಿಯಾಗಿ ಸಿನಿಮಾ ಮೂಡಿಬಂದಿದ್ದು, ವಿಜಯ್ ಫಿಲಂಸ್ ವಿತರಣೆ ಹೊಣೆ ಹೊತ್ತಿದ್ದಾರೆ. ಸುಮಾರು 150 ಥಿಯೇಟರ್ ನಲ್ಲಿ ರಾಜ್ಯಾದ್ಯಂತ ರಿಲೀಸ್ ಮಾಡುವ ಪ್ಲ್ಯಾನ್ ಹಾಕ್ಕೊಂಡಿದ್ದು, ಇದೇ ಅಕ್ಟೋಬರ್ 27ರಂದು ಬೆಳ್ಳಿಭೂಮಿಗೆ ತರುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇನಾಮ್ದಾರ್ ‘ಚೆಂದಾನೆ ಚೆಂದ’ ಗೀತೆಗೆ ಮನಸೋತರು ಸಿನಿಮಾ ಪ್ರೇಮಿಗಳು

    ಇನಾಮ್ದಾರ್ ‘ಚೆಂದಾನೆ ಚೆಂದ’ ಗೀತೆಗೆ ಮನಸೋತರು ಸಿನಿಮಾ ಪ್ರೇಮಿಗಳು

    ಚಂದನವನದಲ್ಲಿ ಇನಾಮ್ದಾರ್ (Inamdar) ಹವಾ ಹೇಗಿದೆ ಎಂಬುದು ನಿಮಗೀಗಾಗಲೇ ಗೊತ್ತಿದೆ. ಸೆಟ್ಟೇರಿದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಾ, ಸಿನಿದುನಿಯಾದಲ್ಲಿ ಸದ್ದು ಮಾಡುತ್ತಿರುವ ಸಂದೇಶ್ ಶೆಟ್ಟಿ ಆಜ್ರಿ  (Sandesh Shetty Aj) ನಿರ್ದೇಶನದ ಇನಾಮ್ದಾರ್ ಚಿತ್ರವೀಗ ‘ ಚೆಂದಾನೇ ಚೆಂದ’ ಹಾಡಿನ (Song) ಮೂಲಕ ಚಿತ್ರಪ್ರೇಮಿಗಳ ಮನಸೂರೆಗೊಳ್ಳುತ್ತಿದೆ. ವಿಶೇಷ ಅಂದರೆ ವೀರ ಬಾಲು (Veera Balu) ( ರಂಜನ್ ಛತ್ರಪತಿ)  ಹಾಗೂ ಭುವಿ (ಚಿರಶ್ರೀ ಅಂಚನ್) ಜೋಡಿ ಕಾಂತಾರ ಚಿತ್ರದ ಶಿವಲೀಲಾರನ್ನ ನೆನಪಿಸುವಂತಿದೆ.

    ಇಂಟ್ರೆಸ್ಟಿಂಗ್ ಅಂದರೆ  ‘ಸಿಂಗಾರ ಸಿರಿಯೇ’ ಸಾಂಗ್ ರಚಿಸಿ ಶಿವಲೀಲಾ ಜೋಡಿನಾ ಒಂದು ಮಾಡಿದ್ದ ಖ್ಯಾತ ಲಿರಿಸಿಸ್ಟ್ ಪ್ರಮೋದ್ ಮರವಂತೆ, ರಂಜನ್ ಹಾಗೂ ಚಿರಶ್ರೀ ಜೋಡಿಗೆ ‘ ಚೆಂದಾನೇ ಚೆಂದ’ ಹಾಡು ಕಟ್ಟಿದ್ದಾರೆ. ‘ ಜೀವಕ್ಕೆ ಜೀವ ಒಂದಾದ ಭಾವ…ಪ್ರೀತಿಯ ನೀಡೋ ಜೀವಾನೇ ದೈವ’ ಎಂದು ಸಾಗುವ ಈ ಸೊಗಸಾದ ಗೀತೆಗೆ ನಕುಲ್ ಅಭಯಂಕರ್ ಸಂಗೀತ ಸಂಯೋಜಿಸಿದ್ದಾರೆ.

    ರಮ್ಯಾ ಭಟ್ ಜೊತೆ ಸೇರಿ ಕಂಠ ಕುಣಿಸಿ ಕಲಾರಸಿಕರ ಹೃದಯ ತಟ್ಟುವಂತೆ ಮಾಡಿದ್ದಾರೆ. ನಿನ್ನೆಯಷ್ಟೇ ಕುಂದಾನಗರಿಯಲ್ಲಿ ಅದ್ದೂರಿಯಾಗಿ ಬಿಡುಗಡೆಗೊಂಡ ಈ ಸುಮಧುರ ಸಾಂಗ್, ಬೆಳಗಾವಿಯ ಕುಂದಾದಷ್ಟೇ ರುಚಿ ಎನಿಸಿದೆ. ಕಿವಿಗೆ ಅಷ್ಟೇ ಹಿತವಾಗಿ, ಕಣ್ಣಿಗೆ ಹಬ್ಬದಷ್ಟೇ ಮುದ ನೀಡಿದೆ.

    ಇನ್ನೂ ‘ಚೆಂದಾನೇ ಚೆಂದ’ ಗೀತೆ ಇಷ್ಟೊಂದು ಅಂದವಾಗಿ ಕಾಣುವುದಕ್ಕೆ ಎನ್ ಮುರುಳೀಧರ್ ಕ್ಯಾಮರಾ ಕೈಚಳಕವೂ ಕೂಡ ಕಾರಣವಾಗಿದೆ.ಗೀತಾ ಸಾಯಿ ನೃತ್ಯ ಸಂಯೋಜನೆ ಈ ಹಾಡಿಗಿದ್ದು ನ್ಯಾಚುರಲ್ ಆಗಿ ಮೂಡಿಬಂದಿದೆ. ಈ ಹಿಂದೆ ‘ ಸಿಲ್ಕು ಮಿಲ್ಕು’ ಹಾಡಿನ ಮೂಲಕ ಪಡ್ಡೆಹೈಕ್ಳ ಮೈ ಚಳಿ ಬಿಡಿಸಿದ್ದ ಇನಾಮ್ದಾರ್ ಚಿತ್ರ ಇದೀಗ ‘ ಚೆಂದಾನೇ ಚೆಂದ’ ಸಾಂಗ್ ಮೂಲಕ ಸಮಸ್ತ ಸಿನಿಮಾ ಪ್ರೇಮಿಗಳ ಗಮನ ಸೆಳೆಯುತ್ತಿದೆ.

    ಚಿತ್ರದಲ್ಲಿ ನಟಿ ಚಿರಶ್ರೀ ಅಂಚನ್ ಕರಾವಳಿ ಸೀಮೆಯ ಬುಡಕಟ್ಟು ಜನಾಂಗದ ಹೆಣ್ಣುಮಗಳಾಗಿ ಮಿಂಚಿದರೆ, ಉತ್ತರ ಕರ್ನಾಟಕದ ಪ್ರತಿಭೆ ರಂಜನ್ ಛತ್ರಪತಿ ‘ ಇನಾಮ್ದಾರ್’ ಕುಟುಂಬದ ಮಗನ ಪಾತ್ರ ನಿರ್ವಹಿಸಿದ್ದಾರೆ. ಹಿರಿಯ ನಟ ಅವಿನಾಶ್, ಶರತ್ ಲೋಹಿತಾಶ್ವ, ಥ್ರಿಲ್ಲರ್ ಮಂಜು, ಎಂ.ಕೆ. ಮಠ, ಪ್ರಮೋದ್ ಶೆಟ್ಟಿ, ಸಂದೇಶ್ ಶೆಟ್ಟಿ ಆಜ್ರಿ, ಪ್ರಶಾಂತ್ ಸಿದ್ದಿ, ಎಸ್ತರ್ ನರೋನ್ಹಾ ಸೇರಿದಂತೆ ಹಲವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

    ಕಪ್ಪು ಸುಂದರಿಯ ಸುತ್ತ ಎನ್ನುವ ಟ್ಯಾಗ್ ಲೈನ್ ಹೊತ್ತು ಬರುತ್ತಿರುವ ‘ ಇನಾಮ್ದಾರ್’ ಚಿತ್ರ,  ಶಿವಾಜಿ ಆರಾಧಕರು ಮತ್ತು ಶಿವನ ಆರಾಧಕರ ನಡುವೆ ಹೊತ್ತಿಕೊಳ್ಳುವ ವರ್ಣ ಸಂಘರ್ಷದ ಕಥನವನ್ನೊಳಗೊಂಡಿದೆ. ಈಗಾಗಲೇ ಹೊರಬಿದ್ದಿರುವ ಟೀಸರ್, ಟ್ರೇಲರ್, ಹಾಡುಗಳು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿವೆ. ನಿರಂಜನ್ ಶೆಟ್ಟಿ ತಲ್ಲೂರ್ ಬಂಡವಾಳದಲ್ಲಿ  ತಸ್ಮೈ ಪ್ರೊಡಕ್ಷನ್ ಅಂಡ್ ಶ್ರೀ ಕುಂತಿಯಮ್ಮ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಅದ್ದೂರಿಯಾಗಿ ಸಿನಿಮಾ ಮೂಡಿಬಂದಿದೆ. ಇದೇ ಅಕ್ಟೋಬರ್ 27 ರಂದು ಇನಾಮ್ದಾರ್ ಚಿತ್ರ ಬೆಳ್ಳಿತೆರೆಗೆ ಗ್ರ್ಯಾಂಡ್ ಎಂಟ್ರಿ ಕೊಡಲಿದೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]