Tag: Sandeshkhali

  • ಸಂದೇಶ್‌ಖಾಲಿ ಕೇಸಿಗೆ ಮತ್ತೆ ಬಿಗ್ ಟ್ವಿಸ್ಟ್- TMC ವಿರುದ್ಧ ದೂರಿದ್ದ ಮಹಿಳೆಯರು ಯೂಟರ್ನ್

    ಸಂದೇಶ್‌ಖಾಲಿ ಕೇಸಿಗೆ ಮತ್ತೆ ಬಿಗ್ ಟ್ವಿಸ್ಟ್- TMC ವಿರುದ್ಧ ದೂರಿದ್ದ ಮಹಿಳೆಯರು ಯೂಟರ್ನ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಸಂದೇಶ್‍ಖಾಲಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಮ್ಮ ಮೇಲೆ ಟಿಎಂಸಿ (TMC) ಮುಖಂಡರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದ ಮೂವರು ಮಹಿಳೆಯರ ಪೈಕಿ ಇಬ್ಬರು ಯೂಟರ್ನ್ ತೆಗೆದುಕೊಂಡಿದ್ದಾರೆ.

    ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯಗಳು ನಡೆದಿಲ್ಲ. ಸ್ಥಳೀಯ ಬಿಜೆಪಿ ಕಾರ್ಯಕರ್ತರು ಬಲವಂತವಾಗಿ ಬಿಳಿ ಹಾಳೆ ಮೇಲೆ ಸಹಿ ಹಾಕಿಸಿಕೊಂಡಿದ್ದರು ಎಂದು ಮಹಿಳೆ ಆರೋಪ ಮಾಡಿದ್ದಾರೆ. ನಾನೆಂದಿಗೂ ರಾತ್ರಿ ಹೊತ್ತಲ್ಲಿ ಪಾರ್ಟಿ ಆಫೀಸ್‍ಗೆ ಹೋಗಿಲ್ಲ. ನನಗೆ ಲೈಂಗಿಕ ಕಿರುಕುಳವನ್ನು ಯಾರು ನೀಡಿಲ್ಲ ಎಂದಿದ್ದಾರೆ. ತಮ್ಮಿಂದ ತಪ್ಪಾಗಿದೆ ಎಂಬುದನ್ನು ಅರಿತು ಈಗ ಕೇಸ್ ವಾಪಸ್ ಪಡೆಯುತ್ತಿದ್ದೇನೆ. ಈ ವಿಚಾರ ತಿಳಿದ ಬಿಜೆಪಿಯ (BJP) ಕೆಲ ನಾಯಕರು ತಮ್ಮನ್ನು ಬೆದರಿಸುತ್ತಿದ್ದಾರೆ. ತಮಗೆ ರಕ್ಷಣೆ ಬೇಕು ಎಂದು ಕೋರಿ ಪೊಲೀಸರಿಗೆ ಮತ್ತೊಂದು ದೂರು ನೀಡಿದ್ದಾರೆ. ಇದನ್ನೂ ಓದಿ: ಇನ್‍ಸ್ಟಾಗ್ರಾಂನಲ್ಲಿ ಮತದಾನದ ಲೈವ್ – ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

    ಇತ್ತ ಮಹಿಳೆಯರ ಈ ಆರೋಪವನ್ನು ಬಿಜೆಪಿ ತಳ್ಳಿಹಾಕಿದೆ. ಮಹಿಳೆಯರ ಯೂಟರ್ನ್ ಹೇಳಿಕೆಯನ್ನು ಖಂಡಿಸಿದೆ. ಇದರಲ್ಲಿ ಟಿಎಂಸಿ ಷಡ್ಯಂತ್ರವಿದೆ ಎಂದು ಬಿಜೆಪಿ ಕಿಡಿಕಾರಿದೆ. ಈ ಬೆನ್ನಲ್ಲೇ ಸಂದೇಶಖಲಿ ಪ್ರಕರಣ ಸಂಬಂಧ ಟಿಎಂಸಿ ಚುನಾವಣಾ ಆಯೋಗದ ಮೊರೆ ಹೋಗಿದೆ. ಇದು ಬಿಜೆಪಿ ರೂಪಿಸಿದ್ದ ಚುನಾವಣಾ ವ್ಯೂಹ, ಸುವೆಂದು ಸೇರಿ ಇತರರ ವಿರುದ್ಧ ಕ್ರಮ ತಗೋಬೇಕು ಎಂದು ಆಗ್ರಹಿಸಿದೆ.

  • ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ – ವಿದೇಶಿ ನಿರ್ಮಿತ ಗನ್‌, ಮದ್ದು-ಗುಂಡುಗಳು ಸೀಜ್‌

    ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ – ವಿದೇಶಿ ನಿರ್ಮಿತ ಗನ್‌, ಮದ್ದು-ಗುಂಡುಗಳು ಸೀಜ್‌

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ (Sandeshkhali) ಕೇಂದ್ರೀಯ ತನಿಖಾ ದಳ (CBI) ನಡೆಸಿದ ಮಹತ್ವದ ದಾಳಿಯಲ್ಲಿ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

    ಅಮಾನತುಗೊಂಡ ಟಿಎಂಸಿ ನಾಯಕ ಶೇಖ್‌ ಷಹಜಹಾನ್‌ (Sheikh Shahjahan) ಮತ್ತವರ ಸಹಚರರ ವಿರುದ್ಧ ಸುಲಿಗೆ, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಆರೋಪಗಳ ತನಿಖೆಯನ್ನು ಸಿಬಿಐಗೆ ವಹಿಸಿದ ನಂತರ ಈ ದಾಳಿ ನಡೆದಿದೆ. ಇದರೊಂದಿಗೆ ಕಳೆದ ಜನವರಿ 5 ರಂದು ಜಾರಿ ನಿರ್ದೇಶನಾಲಯದ (ED) ತಂಡದ ಮೇಲೆ ದಾಳಿ ನಡೆಸಿದವರಿಗೆ ಸಂಬಂಧಿಸಿದ ಅಡಗುತಾಣಗಳ ಮೇಲೂ ಸಿಬಿಐ ತಂಡ ದಾಳಿ ನಡೆಸಿದೆ.

    ಸಿಬಿಐ ದಾಳಿ ವೇಳೆ ವಿದೇಶಿ ನಿರ್ಮಿತವಾದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು (Foreign Made Guns) ಹಾಗೂ ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ: ಮಮತಾ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    ಸಂತ್ರಸ್ತರಿಗಾಗಿ ಸಹಾಯವಾಣಿ:
    ಈಗಾಗಲೇ ಶೇಖ್‌ ಷಹಜಹಾನ್‌ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಸಂದೇಶ್‌ಖಾಲಿಯಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಹಾಗೂ ಭೂಮಿದಾರರಿಗಾಗಿ ಪ್ರತ್ಯೇಕ ಸಹಾಯವಾಣಿ ಮತ್ತು ಇಮೇಲ್‌ ವಿಳಾಸ ತೆರೆದಿದೆ. ಸಂತ್ರಸ್ತರು ತಮಗಾದ ಅನ್ಯಾಯ ಹೇಳಿಕೊಳ್ಳಬಹುದು, ಅವರ ಮಾಹಿತಿಗಳನ್ನು ಗೌಪ್ತವಾಗಿ ಇಡಲಾಗುತ್ತದೆ ಎಂದು ಸಿಬಿಐ ಹೇಳಿದೆ. ಈ ಬೆನ್ನಲ್ಲೇ ಒಂದೇ ದಿನ ಸುಮಾರು 50 ದೂರುಗಳು ಬಂದಿವೆ. ಶೇಖ್‌ ಷಹಜಹಾನ್‌ ಅವರಿಂದ ಭೂಕಬಳಿಕೆ ಸಂಬಂಧ ಹೆಚ್ಚಿನ ದೂರುಗಳು ಹೇಳಿಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೋಟಾಗಿಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ನಿಷೇಧಿಸಿ, ಮರು ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ

    ಷೇಕ್‌ ಷಹಜಹಾನ್‌ ಸಿಕ್ಕಿಬಿದ್ದದ್ದು ಹೇಗೆ?
    ಜ.5 ರಂದು ಪಡಿತರ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂದೇಶ್‍ಖಾಲಿಯಲ್ಲಿರುವ ಶೇಖ್ ಷಹಜಹಾನ್‍ನ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ, ತಲೆಮರೆಸಿಕೊಂಡ 55 ದಿನಗಳ ಬಳಿಕ ಫೆ.29 ರಂದು ಆತನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: 2nd Phase Voting: ಹೇಮ ಮಾಲಿನಿಗಿಂತಲೂ ಸ್ಟಾರ್‌ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ!

  • ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ: ಮಮತಾ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ: ಮಮತಾ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    – ಸಂದೇಶ್‍ಖಾಲಿ ಪ್ರಕರಣ ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತ ಎಂದು ಹೇಳುತ್ತದೆಯೇ?

    ಕೋಲ್ಕತ್ತಾ: ಸಂದೇಶ್‍ಖಾಲಿ (Sandeshkhali) ಪ್ರಕರಣದ ವಿಚಾರವಾಗಿ ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರವನ್ನು ಕಲ್ಕತ್ತಾ ಹೈಕೋರ್ಟ್ (Calcutta High Court) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ 100% ಜವಾಬ್ದಾರಿ ಆಡಳಿತ ಪಕ್ಷದ ಮೇಲಿದೆ. 55 ದಿನಗಳು ನೀವು ಕಣ್ಣಾಮುಚ್ಚಾಲೆ ಆಡಿದ್ದೀರಿ. ಅಲ್ಲದೇ ಅಸ್ಪಷ್ಟ ನಿಲುವು ತೆಗೆದುಕೊಂಡಿದ್ದೀರಿ. ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ನೇತೃತ್ವದ ಪೀಠ ಸರ್ಕಾರದ ವಿರುದ್ಧ ಚಾಟಿ ಬೀಸಿದೆ.

    ಸಂದೇಶಖಾಲಿಯಲ್ಲಿ ನಡೆದ ಸುಲಿಗೆ, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಒಂದು ಅಫಿಡವಿಟ್ ಸರಿಯಾಗಿದ್ದರೂ ಅದು ನಾಚಿಕೆಗೇಡಿನ ಸಂಗತಿ. ಒಂದು ಪರ್ಸೆಂಟ್ ನಿಜವಾಗಿದ್ದರೂ ಅದು ಸಂಪೂರ್ಣ ನಾಚಿಕೆಗೇಡಿನ ಸಂಗತಿ. ಇದು ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತ ಎಂದು ಹೇಳುತ್ತದೆಯೇ? ಇಡೀ ಜಿಲ್ಲಾಡಳಿತ ಮತ್ತು ಆಡಳಿತ ಪಕ್ಷ ಇದರ ನೈತಿಕ ಹೊಣೆಗಾರಿಕೆಯನ್ನು ಹೊಂದಿರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಧರ್ಮಸ್ಥಳದ ಮಂಜುನಾಥನಂತೆ ಡಾ.ಮಂಜುನಾಥ್ – ಗುಣಗಾನ ಮಾಡಿದ ಮುನಿರತ್ನ

    ಇದೇ ವೇಳೆ ಶೇಖ್ ಷಹಜಹಾನ್‍ನನ್ನು (Shahjahan) ಪ್ರತಿನಿಧಿಸುವ ವಕೀಲರು ಹೈಕೋರ್ಟ್‍ನಿಂದ ಕಠಿಣ ವಾಗ್ದಂಡನೆಗೆ ಗುರಿಯಾದರು.

    ಜ.5 ರಂದು ಪಡಿತರ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂದೇಶ್‍ಖಾಲಿಯಲ್ಲಿರುವ ಶೇಖ್ ಷಹಜಹಾನ್‍ನ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ, ತಲೆಮರೆಸಿಕೊಂಡ 55 ದಿನಗಳ ಬಳಿಕ ಫೆ.29 ರಂದು ಆತನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ನಾನೇನು ತಪ್ಪು ಮಾಡಿಲ್ಲ, 10 ತಿಂಗ್ಳು ಅಜ್ಞಾತವಾಸ ಅನುಭವಿಸಿದ್ದೇನೆ: ಸುಧಾಕರ್ ಕಣ್ಣೀರು

  • ಸಂದೇಶ್‍ಖಾಲಿ ಹಿಂಸಾಚಾರ ಪ್ರಕರಣ – ಶೇಖ್ ಷಹಜಹಾನ್‍ಗೆ ಸಿಬಿಐ ಕಸ್ಟಡಿ ವಿಸ್ತರಣೆ

    ಸಂದೇಶ್‍ಖಾಲಿ ಹಿಂಸಾಚಾರ ಪ್ರಕರಣ – ಶೇಖ್ ಷಹಜಹಾನ್‍ಗೆ ಸಿಬಿಐ ಕಸ್ಟಡಿ ವಿಸ್ತರಣೆ

    ಕೋಲ್ಕತ್ತಾ: ಸಂದೇಶ್‍ಖಾಲಿಯಲ್ಲಿ (Sandeshkhali) ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ತೃಣಮೂಲ ಕಾಂಗ್ರೆಸ್‍ನಿಂದ (TMC) ಅಮಾನತಾಗಿರುವ ಆರೋಪಿ ಶೇಖ್ ಷಹಜಹಾನ್‍ನ (Sheikh Shahjahan) ಕೇಂದ್ರೀಯ ತನಿಖಾ ದಳದ (CBI) ಕಸ್ಟಡಿಯನ್ನು ಮತ್ತೆ ನಾಲ್ಕು ದಿನಗಳವರೆಗೆ ನ್ಯಾಯಾಲಯ (Court) ವಿಸ್ತರಿಸಿದೆ.

    ಪಶ್ಚಿಮ ಬಂಗಾಳದ (West Bengal) ಬಸಿರ್‍ಹತ್‍ನ ನ್ಯಾಯಾಲಯ ಕೇಂದ್ರೀಯ ಸಂಸ್ಥೆಯ ಅರ್ಜಿಯ ಆಧಾರದ ಮೇಲೆ ಈ ಆದೇಶ ನೀಡಿದೆ. ಕೋಲ್ಕತ್ತಾ ಹೈಕೋರ್ಟ್‍ನ ಆದೇಶದ ಮೇರೆಗೆ ತನಿಖೆಯ ವರ್ಗಾವಣೆಯೊಂದಿಗೆ ಮಾರ್ಚ್ 6 ರಂದು ಸಿಬಿಐ ಶೇಖ್ ಷಹಜಹಾನ್‍ನನ್ನು ಕಸ್ಟಡಿಗೆ ಪಡೆದುಕೊಂಡಿತ್ತು. ಇದೀಗ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ ನಾಲ್ಕು ದಿನಗಳ ಕಾಲ ಕಸ್ಟಡಿಯನ್ನು ವಿಸ್ತರಿಸಿದೆ. ಅಲ್ಲದೇ ಮಾ.14 ರಂದು ವಿಚಾರಣೆಗೆ ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿದೆ. ಇದನ್ನೂ ಓದಿ: ಮಸೀದಿ, ಮದರಸಾಗಳಲ್ಲಿ ಎನ್‍ಐಎ ದಾಳಿ ನಡೆಸಿದ್ರೆ ರಾಮೇಶ್ವರಂ ಕೆಫೆ ಸ್ಫೋಟ ಆರೋಪಿ ಪತ್ತೆಯಾಗಬಹುದು: ಶರಣ್ ಪಂಪ್‍ವೆಲ್

    ಜ.5 ರಂದು ಪಡಿತರ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂದೇಶ್‍ಖಾಲಿಯಲ್ಲಿರುವ ಶೇಖ್ ಷಹಜಹಾನ್‍ನ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ, ತಲೆಮರೆಸಿಕೊಂಡ 55 ದಿನಗಳ ಬಳಿಕ ಫೆ.29 ರಂದು ಆತನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಡೀಪ್‍ಫೇಕ್ ವೀಡಿಯೋ ವೈರಲ್

  • ಮತ್ತೆ ಸಿಬಿಐ ವಶಕ್ಕೆ ಶೇಖ್ ಶಹಜಹಾನ್ – ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗ!

    ಮತ್ತೆ ಸಿಬಿಐ ವಶಕ್ಕೆ ಶೇಖ್ ಶಹಜಹಾನ್ – ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗ!

    ಕೋಲ್ಕತ್ತಾ: ಸಂದೇಶ್‌ಖಾಲಿ (Sandeshkhali) ಪ್ರಕರಣ ಪ್ರಮುಖ ಆರೋಪಿ ಶೇಖ್ ಶಹಜಹಾನ್‌ನನ್ನು ಸಿಬಿಐಗೆ ಒಪ್ಪಿಸುವ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗ ಉಂಟಾಗಿದೆ. ಕೊಲ್ಕತ್ತಾ ಹೈಕೋರ್ಟ್ (Calcutta High Court) ಗರಂ ಆಗಿ ಗಡುವು ನೀಡಿದ ಹಿನ್ನೆಲೆಯಲ್ಲಿ ಶೇಖ್ ಶಹಜಹಾನ್‌ನನ್ನು ಪೊಲೀಸರು ಸಿಬಿಐ ವಶಕ್ಕೆ ಒಪ್ಪಿಸಿದ್ದಾರೆ.

    ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಇ.ಡಿ ಅಧಿಕಾರಿಗಳ ಮೇಲೆ ದಾಳಿ, ಬುಡಕಟ್ಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ರೈತರ ಕೃಷಿ ಜಮೀನು ಅತಿಕ್ರಮಣ ಸೇರಿ ಹಲವು ಪ್ರಕರಣಗಳಲ್ಲಿ ಬಂಧಿತನಾಗಿರುವ ಟಿಎಂಸಿ ಉಚ್ಚಾಟಿತ ನಾಯಕ ಶೇಖ್ ಶಹಜಹಾನ್‌ನನ್ನು (Sheikh Shahjahan) ಸಿಬಿಐ ಕಸ್ಟಡಿಗೆ ವಹಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್ ಮತ್ತೆ ಆದೇಶ ಹೊರಡಿಸಿತು. ನಂತರ ಸಿಬಿಐ (CBI) ಅಧಿಕಾರಿಗಳು ಕೋಲ್ಕತ್ತಾದಲ್ಲಿರುವ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶಹಜಹಾನ್‌ನನ್ನ ವಶಕ್ಕೆ ಪಡೆದರು.

    ಶೇಖ್ ಶಹಜಹಾನ್‌ನನ್ನು ಮಂಗಳವಾರವೇ (ಮಾರ್ಚ್ 5) ಸಿಬಿಐ ವಶಕ್ಕೆ ನೀಡಬೇಕು. ಇ.ಡಿ ಅಧಿಕಾರಿಗಳ ಮೇಲೆ ದಾಳಿ, ಲೈಂಗಿಕ ದೌರ್ಜನ್ಯ ಸೇರಿ ಎಲ್ಲ ಪ್ರಕರಣಗಳ ಕುರಿತ ದಾಖಲೆಗಳನ್ನು ಕೂಡ ಸಿಬಿಐ ಅಧಿಕಾರಿಗಳಿಗೆ ನೀಡಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿತ್ತು. ಆದರೆ, ಶೇಖ್ ಶಹಜಹಾನ್‌ನನ್ನು ಸಿಬಿಐಗೆ ವಹಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರಾಕರಿಸಿತ್ತು. ಅಷ್ಟೇ ಅಲ್ಲ, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ, ಕೋಲ್ಕೊತಾ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು, ಜೊತೆಗೆ ತುರ್ತು ವಿಚಾರಣೆಗೆ ನಿರಾಕರಿಸಿತು. ಆದ್ದರಿಂದಾಗಿ ಮತ್ತೆ ಹೈಕೋರ್ಟ್ ಸಿಬಿಐಗೆ ಒಪ್ಪಿಸುವಂತೆ ಆದೇಶಿಸಿತು.

    ಈ ನಡುವೆ ಶಹಜಹಾನ್ ಶೇಖ್‌ಗೆ ಸಂಬಂಧಿಸಿದ 12.78 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸಂದೇಶ್‌ಖಾಲಿಯಲ್ಲಿರುವ ಕೃಷಿ ಭೂಮಿ, ಕೋಲ್ಕತ್ತಾದಲ್ಲಿರುವ ಅಪಾರ್ಟ್ಮೆಂಟ್, ಬ್ಯಾಂಕ್ ಠೇವಣಿ ಸೇರಿ ಹಲವು ಆಸ್ತಿಗಳನ್ನು ಇ.ಡಿ ಜಪ್ತಿ ಮಾಡಿದೆ. ಇದರಿಂದಾಗಿ ಶಹಜಹಾನ್ ಶೇಖ್‌ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

  • ಶೇಖ್ ಷಹಜಹಾನ್‍ನ 43 ಪ್ರಕರಣಗಳು ನಿಮ್ಮನ್ನು 10 ವರ್ಷ ಬ್ಯುಸಿಯಾಗಿಡಲಿದೆ: ವಕೀಲರಿಗೆ ಕೋರ್ಟ್ ಚಾಟಿ

    ಶೇಖ್ ಷಹಜಹಾನ್‍ನ 43 ಪ್ರಕರಣಗಳು ನಿಮ್ಮನ್ನು 10 ವರ್ಷ ಬ್ಯುಸಿಯಾಗಿಡಲಿದೆ: ವಕೀಲರಿಗೆ ಕೋರ್ಟ್ ಚಾಟಿ

    ಕೋಲ್ಕತ್ತಾ: ಸಂದೇಶ್‍ಖಾಲಿ (Sandeshkhali) ಪ್ರಕರಣದ ಆರೋಪಿ ಶೇಖ್ ಷಹಜಹಾನ್ (Sheikh Shahjahan) ಪರ ವಕೀಲರಿಗೆ ಕೋಲ್ಕತ್ತಾ ಹೈಕೋರ್ಟ್ (Calcutta High Court) ಚಾಟಿ ಬೀಸಿದೆ. ಆರೋಪಿ ವಿರುದ್ಧದ ಜಾಮೀನು ಅರ್ಜಿ ವಿಚಾರಣೆ ವೇಳೆ, 43 ಪ್ರಕರಣಗಳು ನಿಮ್ಮನ್ನು 10 ವರ್ಷಗಳ ಕಾಲ ಬ್ಯುಸಿಯಾಗಿಡಲಿದೆ ಎಂದು ನ್ಯಾಯಾಲಯ ಹೇಳಿದೆ.

    ಆರೋಪಿ ಪರ ವಕೀಲ, ಜಾಮೀನು ಅರ್ಜಿ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು ಎಂದು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು. ಈ ವೇಳೆ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ, ಆರೋಪಿ ವಿರುದ್ಧ ಸುಮಾರು 43 ಪ್ರಕರಣಗಳಿವೆ. ಈಗ ಮುಂದಿನ 10 ವರ್ಷಗಳವರೆಗೆ ಈ ವ್ಯಕ್ತಿ ನಿಮ್ಮನ್ನು ಕಾರ್ಯನಿರತವಾಗಿರಿಸಿಕೊಳ್ಳುತ್ತಾನೆ. ಮುಂದಿನ 10 ವರ್ಷಗಳವರೆಗೆ ನೀವು ಆತನ ಎಲ್ಲಾ ಪ್ರಕರಣಗಳನ್ನು ನಿಭಾಯಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ನ್ಯಾಯಾಲಯ ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಆರೋಪಿ ಬಗ್ಗೆ ಯಾವುದೇ ಸಹಾನುಭೂತಿಯನ್ನು ಹೊಂದಿಲ್ಲ. ನೀವು ಸೋಮವಾರ ಬನ್ನಿ ಎಂದು ವಕೀಲರಿಗೆ ಸೂಚಿಸಿದೆ.

    ಪ್ರಕರಣದ ವಿಚಾರವಾಗಿ ಬುಧವಾರ ನ್ಯಾಯಾಲಯವು, 50 ದಿನಗಳಿಗಿಂತ ಹೆಚ್ಚು ಕಾಲ ಷಹಜಹಾನ್‍ನನ್ನು ಬಂಧಿಸಲು ವಿಫಲವಾಗಿದ್ದಕ್ಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇಷ್ಟು ದಿನ ಪರಾರಿಯಾಗಿರುವ ವ್ಯಕ್ತಿಯನ್ನು ಬಂಧಿಸದೇ ರಾಜ್ಯವು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಪೀಠ ಎಚ್ಚರಿಸಿತ್ತು.

    ಸಂದೇಶ್‍ಖಾಲಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪದ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ತೃಣಮೂಲ ಕಾಂಗ್ರೆಸ್ (Trinamool Congress) ನಾಯಕ ಶೇಖ್ ಷಹಜಹಾನ್‍ನನ್ನು ಬುಧವಾರ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು 10 ದಿನಗಳ ಕಸ್ಟಡಿಗೆ ನೀಡಲಾಗಿದೆ.

  • 55 ದಿನಗಳಿಂದ ತಲೆಮರೆಸಿಕೊಂಡಿದ್ದ ಟಿಎಂಸಿ ನಾಯಕ ಅರೆಸ್ಟ್‌

    55 ದಿನಗಳಿಂದ ತಲೆಮರೆಸಿಕೊಂಡಿದ್ದ ಟಿಎಂಸಿ ನಾಯಕ ಅರೆಸ್ಟ್‌

    – ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಭೂಕಬಳಿಕೆ ಆರೋಪಿ ಶೇಖ್‌ ಷಹಜಹಾನ್‌

    ಕೋಲ್ಕತ್ತಾ: ಸಂದೇಶ್‌ಖಾಲಿ (Sandeshkhali) ಪ್ರಕರಣದ ಪ್ರಮುಖ ಆರೋಪಿ, ತೃಣಮೂಲ ಕಾಂಗ್ರೆಸ್ (TMC) ಮುಖಂಡ ಶೇಖ್ ಷಹಜಹಾನ್‌ನನ್ನು (Sheikh Shahjahan) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಷಹಜಹಾನ್‌ ಮತ್ತು ಆತನ ಸಹಚರರು ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪ ಹೊತ್ತಿದ್ದಾರೆ. ಹೀಗಾಗಿ, ಉತ್ತರ 24 ಪರಗಣ ಜಿಲ್ಲೆಯಲ್ಲಿ ಶೇಖ್ ಷಹಜಹಾನ್‌ನನ್ನು ಬಂಗಾಳದ ವಿಶೇಷ ಪೊಲೀಸ್ ತಂಡವು ಮಧ್ಯರಾತ್ರಿ ಬಂಧಿಸಿದೆ. ಇದನ್ನೂ ಓದಿ: 2 ಕ್ಕಿಂತ ಹೆಚ್ಚು ಮಕ್ಕಳಿದ್ರೆ ಸರ್ಕಾರಿ ಉದ್ಯೋಗ ಇಲ್ಲ: ರಾಜಸ್ಥಾನ ಕಾನೂನಿಗೆ ಸುಪ್ರೀಂ ಅನುಮೋದನೆ

    ಈತ 55 ದಿನಗಳಿಂದ ಪರಾರಿಯಾಗಿದ್ದ. ಬಂಧನದ ನಂತರ ಆತನನ್ನು ಬಸಿರ್ಹತ್ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ಬಂಧನಕ್ಕೆ ಮುನ್ನ ಹಲವು ದಿನಗಳಿಂದ ಆತನ ಚಟುವಟಿಕೆಗಳ ಮೇಲೆ ತಂಡ ನಿಗಾ ಇರಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಂದೇಶ್‌ಖಾಲಿ ಪ್ರಕರಣದಲ್ಲಿ ಟಿಎಂಸಿ ನಾಯಕ ಹೆಸರನ್ನೂ ಸೇರಿಸುವಂತೆ ಕೋಲ್ಕತ್ತಾ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಆದೇಶಿಸಿದ ಮೂರು ದಿನಗಳ ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆತನಿಗೆ ನೋಟಿಸ್‌ ನೀಡಬೇಕು. ಬಂಧನ ವಿಚಾರವಾಗಿ ಯಾವುದೇ ಕಾರಣ ನೀಡುವಂತಿಲ್ಲ ಎಂದು ಪೊಲೀಸರಿಗೆ ಕೋರ್ಟ್‌ ಸೂಚನೆ ನೀಡಿತ್ತು. ಇದನ್ನೂ ಓದಿ: ಬಿಜೆಪಿಗೆ ಮತ ನೀಡಿ, ಇಲ್ಲದಿದ್ದರೆ ನರಕಕ್ಕೆ ಹೋಗ್ತೀರಿ: ಸಂಸದ ಡಿ.ಅರವಿಂದ್

    ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್‌ನ ಪ್ರಬಲ ವ್ಯಕ್ತಿ ಶಹಜಹಾನ್ ಶೇಖ್ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಟಿಎಂಸಿ ನಾಯಕ ಮಾಡಿದ ಆಪಾದಿತ ದೌರ್ಜನ್ಯದ ವಿರುದ್ಧ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ.

  • TMC ಪ್ರಭಾವಿ ಶೇಖ್ ಷಹಜಹಾನ್ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

    TMC ಪ್ರಭಾವಿ ಶೇಖ್ ಷಹಜಹಾನ್ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮುಗ್ಧ ಮತ್ತು ಬಡ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಹಾಗೂ ಭೂಕಬಳಿಕೆ ಆರೋಪ ಹೊತ್ತಿದ್ದ ತೃಣಮೂಲ ಕಾಂಗ್ರೆಸ್ ಪ್ರಭಾವಿ ನಾಯಕ ಶೇಖ್ ಷಹಜಹಾನ್‌ನನ್ನ ಬಂಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ (Calcutta High Court) ಆದೇಶಿಸಿದೆ.

    ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ (Abhishek Banerjee), ನ್ಯಾಯಾಲಯವು ಪೊಲೀಸರ ಕೈಗಳನ್ನು ಕಟ್ಟಿಹಾಕಿದ ಕಾರಣ ಬಂಗಾಳ ಸರ್ಕಾರವು ಷಹಜಹಾನ್‌ನನ್ನು ಬಂಧಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೆ ನೀಡಿದ ಒಂದು ದಿನದ ನಂತರ ಕೋಲ್ಕತ್ತಾ ಹೈಕೋರ್ಟ್ ಬಂಧನಕ್ಕೆ ಆದೇಶಿಸಿದೆ. ಇದನ್ನೂ ಓದಿ: ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼ ರದ್ದು – ಸಂಪುಟ ನಿರ್ಧಾರಕ್ಕೆ ಕಾಂಗ್ರೆಸ್‌ ಆಕ್ಷೇಪ; ಸಭಾತ್ಯಾಗ

    ಲೈಂಗಿಕ ಕಿರುಕುಳ ಹಾಗೂ ಭೂಕಬಳಿಕೆ ಆರೋಪ ಹೊತ್ತಿರುವ ಪ್ರಮುಖ ಆರೋಪಿ ಶೇಖ್ ಷಹಜಹಾನ್‌ನನ್ನು (Sheikh Shahjahan) ಬಂಧಿಸದಂತೆ ಬಂಗಾಳ ಪೊಲೀಸರಿಗೆ (Bengal Police) ಯಾರೂ ಹೇಳಿಲ್ಲ. ಯಾವುದೇ ಹಂತದಲ್ಲೂ ಬಂಧನಕ್ಕೆ ಅಡೆತಡೆ ಇಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸುತ್ತದೆ. ಷಹಜಹಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿ ಎಂದು ಹೆಸರಿಸಲಾಗಿದೆ. ಆದ್ದರಿಂದ ನಿಸ್ಸಂಶಯವಾಗಿ ಅವರನ್ನು ಬಂಧಿಸಬೇಕು ಎಂದು ಕೋರ್ಟ್ ಹೇಳಿದೆ.

    ಶಹಜಹಾನ್ ಮತ್ತು ಅವರ ಸಹಚರರಿಂದ ಬುಡಕಟ್ಟು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಮತ್ತು ಭೂಕಬಳಿಕೆ ಮಾಡಿದ್ದಾರೆ ಎಂದು ಟಿಎಂಸಿ ಪ್ರಭಾವಿ ವಿರುದ್ಧ ಆರೋಪಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಾನವ ಹಕ್ಕುಗಳ ಆಯೋಗ, ಸಂದೇಶ್‌ಖಾಲಿಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನೂ ಕಳುಹಿಸಿತ್ತು. ಇದಾದ ನಂತರ ಷಹಜಹಾನ್ ಬಂಧನ ವಿಳಂಭಕ್ಕೆ ನ್ಯಾಯಾಲಯವೇ ಕಾರಣ ಎಂದು ದೂರಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಬಂಧಿಸುವಂತೆ ತಿಳಿಸಿದೆ. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲೂ ಕಾಂಗ್ರೆಸ್‌ಗೆ ಶಾಕ್- ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ

    ಈ ಸಂಬಂಧ ಸೋಮವಾರ ವಿಚಾರಣೆ ನಡೆಸಿದ ಕೋರ್ಟ್, ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಡಿಸೆಂಬರ್ ವರೆಗೆ 43 ಎಫ್‌ಐಆರ್‌ಗಳು ದಾಖಲಾಗಿವೆ. 42 ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇನ್ನೂ ಬುಡಕಟ್ಟು ಜನರ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 8 ರಿಂದ 26ರ ವರೆಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 24 ಪ್ರಕರಣಗಳು ದಾಖಲಾಗಿದೆ ಎಂಬುದನ್ನು ಪರಿಗಣಿಸಿದೆ. ಅಲ್ಲದೇ ಈ ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸದೇ ಇರೋದಕ್ಕೆ ಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ.

    ಬಿಜೆಪಿಗೆ ಸೇರಿ ಪಾಪ ತೊಳೆದುಕೊಳ್ಳಿ: ಟಿಎಂಸಿ ಮುಖಂಡನ ಬಂಧನಕ್ಕೆ ಕೋರ್ಟ್ ಆದೇಶಿಸಿದ ನಂತರ ಬಿಜೆಪಿ ನಾಯಕರು ಮಮತಾ ಬ್ಯಾನರ್ಜಿ ಮತ್ತು ಅವರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಟಿಎಂಸಿ ನಾಯಕರ ಮೇಲೆ ನಡೆಸಿದ್ದ ಇಡಿ ದಾಳಿಗಳನ್ನು ಉಲ್ಲೇಖಿಸುತ್ತಾ, ಬಿಜೆಪಿಗೆ ಸೇರಿ ಪಾಪ ತೊಳೆದುಕೊಳ್ಳಬಹುದು ಎಂದು ಕುಟುಕಿದ್ದಾರೆ.

  • ಸಂದೇಶ್‌ಖಾಲಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ – ಸ್ಥಳ ಪರಿಶೀಲನೆಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ

    ಸಂದೇಶ್‌ಖಾಲಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ – ಸ್ಥಳ ಪರಿಶೀಲನೆಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ

    – NHRC ಯಿಂದ ಪ.ಬಂಗಾಳ ಡಿಜಿಪಿಗೆ ನೋಟಿಸ್

    ನವದೆಹಲಿ: ಪಶ್ಚಿಮ ಬಂಗಾಳದ (West Bengal) ಸಂದೇಶ್‌ಖಾಲಿಯಲ್ಲಿ (Sandeshkhali) ತೃಣಮೂಲ ಕಾಂಗ್ರೆಸ್‌ನ ಪ್ರಬಲ ವ್ಯಕ್ತಿಯಿಂದ ಮಹಿಳೆಯರ ಮೇಲಿನ ಶೋಷಣೆಯ ಬಗ್ಗೆ ಆರೋಪಗಳು ಕೇಳಿಬಂದ ಬೆನ್ನಲ್ಲೇ ಪರಿಸ್ಥಿತಿ ಉದ್ವಿಗ್ನ ರೂಪಕ್ಕೆ ತಿರುಗಿದೆ. ಈ ನಡುವೆ ‘ಮಾನವ ಹಕ್ಕುಗಳ ಉಲ್ಲಂಘನೆ’ (Violation Of Human Rights)  ಆರೋಪ ಕೇಳಿಬಂದಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಪಶ್ಚಿಮ ಬಂಗಾಳ ಸರ್ಕಾರ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ.

    ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಸಂದೇಶ್‌ಖಾಲಿಯಲ್ಲಿ ‘ಮಾನವ ಹಕ್ಕುಗಳ ಉಲ್ಲಂಘನೆ’ ಯಾಗಿದೆ ಎನ್ನಲಾಗಿದೆ. ಆದ್ದರಿಂದ ಪ್ರಕರಣದ ಸುತ್ತಲಿನ ಸತ್ಯಾಸತ್ಯತೆಗಳನ್ನು ಕಂಡುಹಿಡಿಯಲು ‘ಸ್ಥಳೀಯ ವಿಚಾರಣೆ’ ನಡೆಸಲು ಎನ್‌ಹೆಚ್‌ಆರ್‌ಸಿ ವಿಶೇಷ ತಂಡವನ್ನು ಕಳುಹಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

    ಎನ್‌ಎಚ್‌ಆರ್‌ಸಿ ಸದಸ್ಯರ ನೇತೃತ್ವ ಮತ್ತು ಪ್ಯಾನಲ್ ಅಧಿಕಾರಿಗಳ ಬೆಂಬಲದೊಂದಿಗೆ ತಂಡವು ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸುತ್ತದೆ. ತನಿಖೆಯ ಪ್ರಾಥಮಿಕ ಆಧಾರವಾಗಿ ಮಾಧ್ಯಮ ವರದಿಗಳನ್ನೂ ಪರಿಗಣಿಸಿದೆ.

    ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮುಗ್ಧ ಮತ್ತು ಬಡ ಮಹಿಳೆಯ ಮೇಲೆ ಸ್ಥಳೀಯ ರಾಜಕೀಯ ಪ್ರಭಾವಿಯ ಗ್ಯಾಂಗ್‌ನಿಂದ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಪತ್ರಿಕೆ ಮತ್ತು ಡಿಜಿಟಲ್ ಮಾಧ್ಯಮ ವರದಿಗಳನ್ನು ಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತವಾಗಿ ಸ್ವೀಕರಿಸಿದೆ. ಘೋರ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದ್ದಾರೆ. ಸ್ಥಳೀಯ ಆಡಳಿತವು ಅಪರಾಧ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಮಾನವ ಹಕ್ಕುಗಳ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

    1993ರ ಪಿಹೆಚ್‌ಆರ್ ಕಾಯ್ದೆಯ ಸೆಕ್ಷನ್ 12 (ಎ) ಅಡಿಯಲ್ಲಿ ತನ್ನ ನ್ಯಾಯವ್ಯಾಪ್ತಿಯನ್ನು ಚಲಾಯಿಸುವುದಾಗಿ ಎನ್‌ಹೆಚ್‌ಆರ್‌ಸಿ ಹೇಳಿದೆ. ಈ ನಿಬಂಧನೆಯು ಮಾನವ ಹಕ್ಕುಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಎನ್‌ಹೆಚ್‌ಆರ್‌ಸಿಗೆ ಅಧಿಕಾರ ನೀಡುತ್ತದೆ.

    ಸದ್ಯ ಇನ್ನೂ ನಾಲ್ಕು ವಾರಗಳಲ್ಲಿ ಘಟನೆಯ ಸಂಪೂರ್ಣ ವರದಿ ನೀಡುವಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೋಟಿಸ್ ನೀಡಲಾಗಿದೆ. ಜೊತೆಗೆ ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗಿದೆಯೇ ಅಥವಾ ಪರಿಹಾರ ಸೂಚಿಸಲು ಕ್ರಮ ಕೈಗೊಳ್ಳಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸುವಂತೆ ಎನ್‌ಹೆಚ್‌ಆರ್‌ಸಿ ಕೇಳಿದೆ.