Tag: Sandlawood

  • ಕನ್ನಡತಿ ಶ್ರದ್ಧಾ ಶ್ರೀನಾಥ್‌ಗೆ ಬಾಲಿವುಡ್‌ನಿಂದ ಬಂತು ಬಿಗ್ ಆಫರ್

    ಕನ್ನಡತಿ ಶ್ರದ್ಧಾ ಶ್ರೀನಾಥ್‌ಗೆ ಬಾಲಿವುಡ್‌ನಿಂದ ಬಂತು ಬಿಗ್ ಆಫರ್

    ಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಶ್ರದ್ಧಾ ಶ್ರೀನಾಥ್ ಇದೀಗ ಮತ್ತೊಂದು ಬಾಲಿವುಡ್ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈಗಾಗಲೇ ಹಿಂದಿ ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಶ್ರದ್ಧಾ ಇದೀಗ ಮತ್ತೆ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ.

    ಯೂ ಟರ್ನ್, ಆಪರೇಷನ್ ಅಲಮೇಲಮ್ಮ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟಿ ಶ್ರದ್ಧಾ ಇದೀಗ ಬಹುಭಾಷಾ ನಟಿಯಾಗಿ ಮಿಂಚ್ತಿದ್ದಾರೆ. ಬಾಲಿವುಡ್‌ನ `ಮಿಲನ್ ಟಾಕೀಸ್’ ಚಿತ್ರದಲ್ಲಿ ಶ್ರದ್ಧಾ ಈ ಹಿಂದೆ ನಟಿಸಿದ್ದರು. ಮಿಲಿಂದ್ ಧೈಮಡೆ ನಿರ್ದೇಶನದ `ಲೆಟರ್ಸ್ ಟು ಮಿಸ್ಟರ್ ಖನ್ನಾ’ ರಣ್‌ಬೀರ್‌ ಕಪೂರ್‌ ತಾಯಿ ನೀತು ಕಪೂರ್, ಸನ್ನಿ ಕೌಶಲ್ ಜೊತೆ ಶ್ರದ್ಧಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯ ಚಿತ್ರೀಕರಣದ ವೇಳೆ ತೆಗೆದ ಫೋಟೋ ಸಖತ್ ವೈರಲ್ ಆಗುತ್ತಿದೆ.

    ತಾಯಿ ಮತ್ತು ಮಗನ ಬಂಧ ಸಾರುವಂತಹ ಕಥೆಯಲ್ಲಿ ನೀತು ಕಪೂರ್ ಜೊತೆ ಶ್ರದ್ಧಾ ಮೇಜರ್ ರೋಲ್ ಪ್ಲೇ ಮಾಡ್ತಿದ್ದಾರೆ. ಎಂದೂ ಕಾಣಿಸಿಕೊಂಡಿರದ ಡಿಫರೆಂಟ್ ರೋಲ್‌ನಲ್ಲಿ ಯೂ ಟರ್ನ್ ಬೆಡಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಲಯನ್ಸ್‌ಗೇಟ್‌ ಇಂಡಿಯಾ ಸ್ಟುಡಿಯೋ ಸಾಥ್ ನೀಡುತ್ತಿದೆ. ಇದನ್ನೂ ಓದಿ:ತಮಗಿಂತ 33 ವರ್ಷ ಕಿರಿಯವಳ ಜೊತೆ ಪ್ರೀತಿಯಲ್ಲಿ ಬಿದ್ದ ನಟ ಪೃಥ್ವಿರಾಜ್

    ಈ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸದ್ಯದಲ್ಲೇ ಈ ಚಿತ್ರದ ಮತ್ತಷ್ಟು ಅಪ್‌ಡೇಟ್ ಅನ್ನ ಚಿತ್ರತಂಡ ಕೊಡಲಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರತಿಭಾವಂತ ಯುವ ಕಲಾವಿದ ಬಹಳ ಬಹಳ ಬೇಗ ಅಗಲಿದ್ದಾನೆ – ಕುಂಬ್ಳೆ

    ಪ್ರತಿಭಾವಂತ ಯುವ ಕಲಾವಿದ ಬಹಳ ಬಹಳ ಬೇಗ ಅಗಲಿದ್ದಾನೆ – ಕುಂಬ್ಳೆ

    ಬೆಂಗಳೂರು: ಪ್ರತಿಭಾವಂತ ಯುವ ಕಲಾವಿದ ಬಹಳ ಬಹಳ ಬೇಗ ಅಗಲಿದ್ದಾನೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ, ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಕಂಬನಿ ಮಿಡಿದಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಚಿರಂಜೀವಿ ಸರ್ಜಾ ಮೃತಪಟ್ಟ ಸುದ್ದಿ ಕೇಳಿ ಶಾಕ್ ಆಯ್ತು ಮತ್ತು ಬೇಸರವಾಯ್ತು. ಬಹಳ ಬೇಗ ಪ್ರತಿಭಾವಂತ ಯುವ ಕಲಾವಿದ ಅಗಲಿದ್ದಾನೆ. ಅವರ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ದು:ಖ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.

    ಟೀಂ ಇಂಡಿಯಾ ಆಟಗಾರ್ತಿ ವೇದ ಕೃಷ್ಣಮೂರ್ತಿ ಟ್ವಿಟ್ಟರ್ ನಲ್ಲಿ ಕಂಬನಿ ಮಿಡಿದಿದ್ದಾರೆ. ಚಿರಂಜೀವ್ ಮೃತಪಟ್ಟಿರುವ ಸುದ್ದಿ ಕೇಳಿ ಶಾಕ್ ಆದೆ. ಬಹಳ ಉತ್ತಮ ವ್ಯಕ್ತಿಯಾಗಿದ್ದರು. ಕುಟುಂಬಸ್ಥರಿಗೆ ಮತ್ತು ಸ್ನೇಹಿತರಿಗೆ ದು:ಖ ಬರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

    ಇಂದು ಮಧ್ಯಾಹ್ನದ ವೇಳೆ ಚೆನ್ನಾಗಿದ್ದ ನಟ ಚಿರಂಜೀವಿ ಸರ್ಜಾ, ತಮ್ಮ ನಿವಾಸದ ರಸ್ತೆಯಲ್ಲಿರುವ ನಿವಾಸಿಗಳ ಜೊತೆ ಮಾತನಾಡಿದ್ದರು. ಇದಾದ ನಂತರ ಚಿರು ದೇಹ ದಿಢೀರ್ ಬೆವರಲು ಆರಂಭಿಸಿದೆ. ಈ ವೇಳೆ ಉಸಿರಾಡಲು ತೊಂದರೆ ಆಗುತ್ತಿದೆ ಎಂದು ಸರ್ಜಾ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಾರೆ. ನಂತರ ಅವರನ್ನು ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಚಿರು ಕೊನೆಯುಸಿರೆಳೆದಿದ್ದಾರೆ.

    ಚಿರು ಅವರ ಸಾವಿನ ಸುದ್ದಿ ಕೇಳಿ ಇಡೀ ಚಿತ್ರರಂಗವೇ ಶಾಕ್ ಆಗಿದೆ. ಜೊತೆಗೆ ನಟರಾದ ದರ್ಶನ್, ಪುನೀತ್ ರಾಜ್‍ಕುಮಾರ್, ಗಣೇಶ್, ನಟಿ ಅಮೂಲ್ಯ ಮುಂತಾದ ಕಲಾವಿದರ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಇನ್ನೂ ನಟಿ ತರಾ, ಸೃಜನ್ ಲೋಕೇಶ್, ಕಿಚ್ಚ ಸುದೀಪ್ ಅವರು ಆಸ್ಪತ್ರೆಗೆ ಬಂದು ಚಿರುವಿನ ಅಂತಿಮ ದರ್ಶನ ಪಡೆದಿದ್ದಾರೆ. ಚಿರು ಅವರ ಹುಟ್ಟೂರು ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.