Tag: Sangeetha

  • ದೊಡ್ಮನೆಯ ಹೀರೋ, ಹೀರೋಯಿನ್, ವಿಲನ್ ಇವರೇ ಎಂದ ತುಕಾಲಿ

    ದೊಡ್ಮನೆಯ ಹೀರೋ, ಹೀರೋಯಿನ್, ವಿಲನ್ ಇವರೇ ಎಂದ ತುಕಾಲಿ

    ‘ಬಿಗ್ ಬಾಸ್’ ಕನ್ನಡ ಸೀಸನ್ 10ನಲ್ಲಿ (Bigg Boss Kannada 10) ಎಲ್ಲ ಸ್ಪರ್ಧಿಗಳ ನಗುವಿನ ಮೊತ್ತ ತೆಗೆದರೆ ಅದರ ಬಹುಪಾಲು ತುಕಾಲಿ ಸಂತೋಷ್ ಅವರಿಗೆ ಹೋಗುತ್ತದೆ. ಅಷ್ಟೇ ಅಲ್ಲ, ಮನೆಯೊಳಗಿನ ಭಿನ್ನಾಭಿಪ್ರಾಯಗಳ ಮೂಲಗಳನ್ನು ಹುಡುಕಿಕೊಂಡು ಹೋದರೆ ಅದರಲ್ಲಿಯೂ ತುಕಾಲಿ ಸಂತೋಷ್ ಅವರ ಕೊಡುಗೆ ಸಣ್ಣದಲ್ಲ. ಹೀಗೆ ನಗುನಗಿಸುತ್ತಲೇ ಚಾಣಾಕ್ಷ ತಂತ್ರವನ್ನೂ ಹೆಣೆಯುವ ವ್ಯಕ್ತಿತ್ವ ತುಕಾಲಿ ಸಂತೋಷ್ ಅವರದ್ದು. ಬಿಗ್ ಬಾಸ್‌ನ 5ನೇ ರನ್ನರ್ ಅಪ್ ಆಗಿ ಹೊಮ್ಮಿರುವ ತುಕಾಲಿ (Tukali Santhosh) ಅವರು ಜಿಯೋ ಸಿನಿಮಾ ಜೊತೆಗೆ ನಡೆಸಿದ ಸಂದರ್ಶನ ಇಲ್ಲಿದೆ.

    ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ಸಂತೋಷ್ ಕುಮಾರ್ ಎಚ್.ಜಿ. ಅಲಿಯಾಸ್ ತುಕಾಲಿ ಸಂತೋಷ್ ಅವರೇ ನಿಮ್ಮ ಪ್ರೀತಿ ಪಾತ್ರ. ಈ ಸೀಸನ್‌ನಲ್ಲಿ ಟಾಪ್ 6 ಫಿನಾಲೆ ಸ್ಪರ್ಧಿಗಳಲ್ಲಿ ನಾನೂ ಒಬ್ಬ. 5ನೇ ರನ್ನರ್ ಅಪ್ ಆಗಿದ್ದೇನೆ. ನಿಮ್ಮೆಲ್ಲರ ಪ್ರೀತಿಯಿಂದ ನಾನು ಈ ಜಾಗದಲ್ಲಿದ್ದೀನಿ. ಇದನ್ನೂ ಓದಿ:ನಾನು ಫೇಕ್ ಅಲ್ಲ, ವಿಲನ್ ಅಂದ್ಕೊಂಡರೂ ಪರವಾಗಿಲ್ಲ: ವಿನಯ್ ಗೌಡ

    ಸಿಕ್ಕಾಪಟ್ಟೆ ಎಕ್ಸೈಟ್‌ಮೆಂಟ್ ಇದೆ. ನಾನು ಮನೆಗೆ ಹೋಗುವಾಗಲೇ ಅಂದುಕೊಂಡಿದ್ದೆ. ಶೋ ಮುಗಿಯುವ ದಿನವೇ ಮನೆಯಿಂದ ಹೊರಗೆ ಬರಬೇಕು ಅಂತ. ಹಾಗೇ ಆಗಿದೆ. ಗ್ರ‍್ಯಾಂಡ್ ಫಿನಾಲೆ ದಿನ ವೇದಿಕೆಯ ಮೇಲಿಂದ ಬೀಳ್ಕೊಟ್ಟು ಅಲ್ಲಿಂದ ಹೋಗಿದ್ದೇನೆ. ತುಂಬ ಖುಷಿಯಾಗುತ್ತಿದೆ.

    ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ಪ್ರತಿಯೊಂದೂ ವಿಷಯವೂ ಸವಾಲೇ. ಆ ಎಲ್ಲ ಸವಾಲುಗಳನ್ನು ಎದುರಿಸಿ ಫಿನಾಲೆಯವರೆಗೆ ಬಂದು ಕಾಮಿಡಿಯಲ್ಲಿ ನನ್ನದೇ ಆದ ಛಾಪು ಮೂಡಿಸಿದ್ದೀನಿ. ಫೇವರೇಟ್ ಮೊಮೆಂಟ್ ಅಂದ್ರೆ ಬಿಗ್ ಬಾಸ್ ಮನೆಯಲ್ಲಿ ಮಾತ್ರೆ ತಂದುಕೊಡುತ್ತಿದ್ದದ್ದು. ಇನ್ಮೇಲಿಂದ ಮಾತ್ರೆ ತಂದ್ಕೊಡೋರು ಯಾರೋ ಅಣ್ಣಾ? ತಿಂದ್ಯಾ ಮಲಗಿದ್ಯಾ ಏನು ಮಾಡ್ದೆ ಅಂತೆಲ್ಲ ಕೇಳೋರು ಯಾರೂ ಇಲ್ಲ ಇನ್ಮೇಲೆ ಎಂದು ತುಕಾಲಿ ಮಾತನಾಡಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ಅಲಾರ್ಮ್ ರೀತಿಯಲ್ಲಿ ಒಂದು ಹಾಡು ಬರುತ್ತಿತ್ತು. ನಿದ್ದೆಗಣ್ಣಲ್ಲಿದ್ರೂ ಆ ಹಾಡು ಕೇಳಿದ ತಕ್ಷಣ ರಪ್ ಅಂತ ಎಚ್ಚರ ಆಗಿಬಿಡುತ್ತದೆ. ಅದನ್ನು ತುಂಬ ಮಿಸ್ ಮಾಡ್ಕೋತೀನಿ. ಹಾಗೆಯೇ ಎಲ್ಲ ಸ್ಪರ್ಧಿಗಳನ್ನೂ ಮಿಸ್ ಮಾಡ್ಕೋತೀನಿ. ನನ್ನ ಹೆಂಡತಿ ಯಾವ್ದೋ ಲೆಟರ್ ಬರೆದಿದ್ದಾಳೆ ಅಂತ ಹೇಳಿ ತಲೆ ಮೇಲೆ ಡಬ್ಬ ಇಟ್ಕೊಂಡು ಟಾಸ್ಕ್ ಗೆದ್ದೆ. ಆ ಲೆಟರ್ ಬಂದ್ಮೇಲೆ ಗೊತ್ತಾಯ್ತು, ಏನೇನು ಬರ್ದವ್ಳೆ ಅಂತ.

    ಈ ನೂರಾ ಹನ್ನೊಂದು ದಿನಗಳಲ್ಲಿ ಮಿಸ್ ಮಾಡ್ಕೊಳ್ಳೋದು ತುಂಬ ಇದೆ. ಎಲ್ಲವನ್ನೂ ಮಿಸ್ ಮಾಡ್ಕೋತೀನಿ. ಆ ಮೆಮರಿ ಬರೀಬೇಕು ಅಂದ್ರೆ ನೂರಾಹನ್ನೊಂದು ಪಿಚ್ಚರ್ ಸ್ಟೋರಿ ಹೇಳ್ಬೇಕಾಗತ್ತೆ. ಈ ಸಲದ ಸೀಸನ್‌ನಲ್ಲಿ ಕಾರ್ತೀಕ್ (Karthik) ಹೀರೋ ಸಿನಿಮಾದಲ್ಲಿ ಹೀರೋ ಎಷ್ಟು ಮುಖ್ಯನೋ ಹಾಗೆ. ಪ್ರತಾಪ್ ಪೋಷಕ ನಟ. ಸಂಗೀತಾ ಶೃಂಗೇರಿ (Sangeetha Sringeri) ಆ ಸಿನಿಮಾದ ಹೀರೊಯಿನ್ ಇದ್ದ ಹಾಗೆ. ಹೀಯೋ- ಹೀರೋಯಿನ್ ಇದ್ದ ಮೇಲೆ ವಿನಯ್ ವಿಲನ್ ಆಗಿರಲೇಬೇಕಲ್ಲಾ ವರ್ತೂರು ಸಂತೋಷಣ್ಣ ನ್ಯಾಯ ಕೊಡುವ ದೇವರ ಥರ. ಕರ್ಣನ ಥರ ಅವರ ಬಗ್ಗೆ ಹೇಳೋಕೆ ಒಂದಾ ಎರಡಾ ಇರೋದು ತುಂಬ ಹೇಳಬಹುದು.

    ಈ ನೂರಾಹನ್ನೊಂದು ದಿನಗಳ ಮೆಮರಿಯನ್ನು ಒಂದೇ ಸಾಲಿನಲ್ಲಿ ಹೇಳಬೇಕು ಅಂದ್ರೆ, ನೆನಪುಗಳ ಮಾತು ಮಧುರ. ಬಿಗ್ ಬಾಸ್ ಐ ಮಿಸ್ ಯೂ, ಐ ಲವ್ ಯೂ ನಿಮ್ಮ ಧ್ವನಿ ನನ್ನನ್ನು ತುಂಬ ಎಚ್ಚರಗೊಳಿಸ್ತು. ಒಂದು ಅಶರೀರವಾಣಿ ನಮ್ಮನ್ನೆಲ್ಲ ಕಂಟ್ರೋಲ್ ಮಾಡಿತು ಅಂದ್ರೆ ನೀವು ಎಷ್ಟು ಸ್ಟ್ರಾಂಗ್ ಇರಬೇಕು. ನಿಮ್ಮ ಮೆಂಟಾಲಿಟಿ ಎಷ್ಟು ಸ್ಟ್ರಾಂಗ್ ಇರಬೇಕು. ನಿಮ್ಮ ಮನಸ್ಸು ಎಂಥದ್ದಿರಬೇಕು.

    ನನಗೆ ಸ್ಪಷ್ಟವಾಗಿ ಇದ್ದ ಆಸೆಗಳನ್ನು ಪೂರೈಸಿದ್ದಾರೆ. ನಾನು ಅಂದುಕೊಂಡಿದ್ದೆಲ್ಲ ಕೊಟ್ಟಿದೀರಾ. ಅದಕ್ಕಿಂತ ಹೆಚ್ಚು ಕೊಟ್ಟಿದೀರಾ. ನಾನು ನಕ್ಕಾಗ ನೀವೂ ನಕ್ಕಿದ್ದೀರಾ. ನೋವಲ್ಲಿ ನೋವು ಪಟ್ಕೊಂಡಿದ್ದೀರಾ. ನನ್ನ ಜೀವಮಾನದಲ್ಲಿ ಬಿಗ್ ಬಾಸ್ ಅನ್ನೋದು ಒಂದು ಇತಿಹಾಸ.

  • Bigg Boss Kannada: ಕಾರ್ತಿಕ್, ವಿನಯ್ ಬಗ್ಗೆ ಸಂಗೀತಾ ಹೇಳಿದ್ದೇನು?

    Bigg Boss Kannada: ಕಾರ್ತಿಕ್, ವಿನಯ್ ಬಗ್ಗೆ ಸಂಗೀತಾ ಹೇಳಿದ್ದೇನು?

    ಬಿಗ್ ಬಾಸ್ (Bigg Boss Kannada) ಮನೆಯ ಫ್ರೆಂಡ್ ಶಿಪ್ ಮತ್ತು ಜರ್ನಿಯ ಕುರಿತು ಸಂಗೀತಾ (Sangeetha) ಸಾಕಷ್ಟು ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅವರ ಮನದಾಳದ ಮಾತು ಇಲ್ಲಿದೆ. ನನಗೆ ಫ್ರೆಂಡ್‌ಷಿಪ್ ಆಗೋದು ತುಂಬ ಕಷ್ಟ. ಈ ಮನೆಯಲ್ಲಿ ಪ್ರಾರಂಭದಲ್ಲಿಯೇ ಕಾರ್ತಿಕ್ ಮತ್ತು ತನಿಷಾ ಜೊತೆಗೆ ಫ್ರೆಂಡ್‌ಷಿಪ್ ಆಯ್ತು. ಸಡನ್ ಆಗಿ ಆದ ಫ್ರೆಂಡ್‌ಷಿಪ್ ಅಷ್ಟೇ ಸಡನ್ ಆಗಿ ಹೋಗುವ ಸಾಧ್ಯತೆಯೂ ಸಾಕಷ್ಟು ಇರುತ್ತವೆ. ಹಾಗೇ ಆಯ್ತು. ನನ್ನದು ಮತ್ತು ಅವರದು ಕೆಲವು ಚಕಮಕಿ ನಡೆಯಿತು. ಅದು ಕೊನೆಯವರೆಗೂ ಮುಂದುವರಿಯಿತು.

    ಅವರ ಕಡೆಯಿಂದ ಸರಿಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಅದನ್ನು ಒಪ್ಪಿಕೊಳ್ಳಲು ನಾನು ಸಿದ್ಧಳಿಲ್ಲ. ಯಾಕೆಂದರೆ ನಾನು ಅಲ್ಲಿ ಬರೀ ಗೇಮ್ ಆಡ್ತಾ ಇರ್ಲಿಲ್ಲ. ನನಗೆ ಬೇಜಾರಾಯ್ತು, ಹರ್ಟ್‌ ಆಯ್ತು ಅಂದರೆ ಅವರನ್ನು ಮಾತಾಡಿಸಲು ತುಂಬ ಕಷ್ಟವಾಗುತ್ತದೆ. ಅದನ್ನೆಲ್ಲ ಬದಿಗಿಟ್ಟು ಅವರನ್ನು ವಿನ್ನರ್ ಅಂತ ನೋಡಿದಾಗ, ಖಂಡಿತ ಅವರು ಅವ್ರ ಗೇಮ್ ಅನ್ನು ತುಂಬ ಚೆನ್ನಾಗಿ ಆಡಿದಾರೆ. ಅವರಿಗೆ ಕಂಗ್ರಾಜುಲೇಷನ್ಸ್ ಹೇಳ್ತೀನಿ.

    ವಿನಯ್ (Vinay) ನಾನು ಈ ಮೊದಲು ಒಂದು ಧಾರಾವಾಹಿಯಲ್ಲಿ ನಟಿಸಿದ್ದೆವು. ಅಲ್ಲಿಯೂ ನನಗೂ ಅವರಿಗೂ ಸುಮಾರು ಗಲಾಟೆಗಳು ನಡೆದಿದಾವೆ. ಆದರೆ ಅವ್ರು ಸಹಜವಾಗಿ ಒಳ್ಳೆಯವರು. ಒಳ್ಳೆಯ ವ್ಯಕ್ತಿತ್ವದವರು. ಸ್ವಲ್ಪ ಗಲಾಟೆಗಳು ಆಗ್ತವೆ. ನಾನೂ ಸ್ವಲ್ಪ ನೇರ ವ್ಯಕ್ತಿತ್ವದವರು. ಮುಖದ ಮೇಲೇ ಹೇಳುತ್ತೇನೆ. ಹಾಗಾಗಿಯೇ ಸ್ವಲ್ಪ ಗಲಾಟೆಗಳು ನಡೆಯುತ್ತಿತ್ತು. ಅದೇ ರೀತಿ ಮನೆಯಲ್ಲಿಯೂ ಗಲಾಟೆಗಳು ಆಗಿವೆ. ಆದರೆ ಪ್ರಾಮಾಣಿಕವಾಗಿ ಹೇಳಬೇಕು ಅಂದರೆ, ಪರಸ್ಪರರ ಬಗ್ಗೆ ನಮಗೆ ಗೌರವ ಇದೆ. ಅದು ಯಾವತ್ತೂ ಇರುತ್ತದೆ ಎಂದು ಭಾವಿಸುತ್ತೇನೆ.

    ಮುಂದಿನ ದಿನಗಳಲ್ಲಿ ಫ್ರೆಂಡ್‌ಷಿಪ್‌ಗಳು ಹೇಗೆ ಮುಂದುವರಿಯುತ್ತದೆ ಎಂದು ಹೇಳುವುದು ಕಷ್ಟ. ಯಾಕೆಂದರೆ ನಾನು ಈಗಷ್ಟೇ ನೂರಹನ್ನೆರಡು ದಿನಗಳನ್ನು ಕಳೆದು ಹೊರಗೆ ಬರ್ತಿದೀನಿ. ಮನೆಯವರನ್ನು, ಸ್ನೇಹಿತರನ್ನು, ಜನರನ್ನು ಭೇಟಿಯಾಗಬೇಕು. ಹೊರಗೆ ಏನು ನಡೆಯತ್ತಿದೆ ಎಂದು ತಿಳಿದುಕೊಳ್ಳಬೇಕು. ಮನೆಯೊಳಗೆ ಒಂದು ಗೇಮ್ ಆಡ್ತಿದ್ವಿ ಅಂದುಕೊಂಡು, ಅಲ್ಲಿನ ಪ್ರೆಸ್ಟ್ರೇಷನ್, ಕೋಪ, ಸಿಟ್ಟು ಎಲ್ಲವನ್ನೂ ಅಲ್ಲೇ ಬಿಟ್ಟು ಹೊರಗೆ ಹೊಸ ಜೀವನ ಶುರುವಾಗಬಹುದು. ನೋಡಬೇಕು.

    ಜಿಯೊಸಿನಿಮಾ ಫನ್‌ಫ್ರೈಡೆ ಟಾಸ್ಕ್‌ಗಳು ನನಗೆ ಇಷ್ಟ. ಕೆಲವು ಇಟ್ಟಿಗೆಗಳನ್ನು ಇಟ್ಟುಕೊಂಡು ಪಾಸ್ ಮಾಡಿಕೊಂಡು ಹೋಗುವ ಟಾಸ್ಕ್‌ ನಂಗೆ ತುಂಬ ಇಷ್ಟವಾಗಿತ್ತು. ಅದರಲ್ಲಿ ನಾನು ಗೆದ್ದಿದ್ದೇನೆ ಕೂಡ. ಪ್ರತಿ ಸಲ ಜಿಯೊಸಿನಿಮಾ ಟಾಸ್ಕ್‌ಗೆ ಕಾಯುತ್ತಿದ್ದೆವು. ಮ್ಯೂಸಿಕಲ್ ಪಾಟ್‌ ಕೂಡ ಇಷ್ಟವಾಗಿತ್ತು. ಅದರಲ್ಲಿ ನಾನು ಪೌಲ್ ಮಾಡಿದೆ. ಆದರೆ ಹೇಳಲಿಲ್ಲ. ಆದರೂ ನಾನೇ ಒಪ್ಪಿಕೊಂಡು ಹೊರಗೆ ಬಂದಿದ್ದೆ.

    ಬಿಗ್‌ಬಾಸ್‌ ಮನೆ ನಾನು ತುಂಬ ಅಂದ್ರೆ ತುಂಬ ನೊಂದುಕೊಂಡಿದ್ದ ಜಾಗ. ಯಾವಾಗ ಹೊರಗಡೆ ಬರ್ತೀನೋ ಅಂತ ಕಾಯ್ತಿದ್ದೆ. ಯಾಕೆಂದರೆ ಕೊನೆಯ ಕೆಲವು ವಾರಗಳನ್ನು ಬಿಟ್ಟರೆ ಉಳಿದೆಲ್ಲ ದಿನಗಳಲ್ಲಿ ಇಡೀ ಮನೆಯೇ ನನ್ನ ವಿರುದ್ಧವಿತ್ತು. ಎಲ್ಲರ ಎದುರಿನಲ್ಲಿಯೂ ನಾನು ಪ್ರೂವ್ ಮಾಡಿಕೊಳ್ಳಬೇಕಾಗುತ್ತಿತ್ತು. ಆದರೆ, ಆ ಬಾತ್‌ರೂಮ್‌ ಏರಿಯಾ ಮತ್ತು ಟ್ರಿಯನ್ನು ಮಿಸ್ ಮಾಡ್ಕೋತೀನಿ. ಎಲ್ಲದಕ್ಕಿಂತ ಹೆಚ್ಚಾಗಿ ಮಿರರ್ ಅನ್ನು ಮಿಸ್ ಮಾಡ್ಕೋತೀನಿ. ನನ್ನ ಅರ್ಧ ಜರ್ನಿ ನಾನು ಅದರ ಜೊತೆಗೇ ಕಳೆದಿದ್ದೇನೆ. ಅಲ್ಲಿರುವ ದೇವಿ ವಿಗ್ರಹವನ್ನು ಮಿಸ್ ಮಾಡ್ಕೋತೀನಿ. ಅದರಿಂದ ತುಂಬ ಶಕ್ತಿ ಪಡೆದುಕೊಂಡಿದ್ದೇನೆ.

     

    ನನಗೆ ಬಿಗ್‌ಬಾಸ್‌ ಮನೆಯ ಧ್ವನಿಯ ಮೇಲೆ ಎಷ್ಟು ಕ್ರಶ್ ಇತ್ತು ಎಂದರೆ, ಕೊನೆಯ ಗಳಿಗೆಯಲ್ಲಿಯೂ ಅವರಿಗೆ ಏನಾದ್ರೂ ಮಾತಾಡಿಬಿಗ್‌ಬಾಸ್ ಎಂದು ಕೇಳಿಕೊಳ್ಳುತ್ತಿದ್ದೆ. ಅಲ್ಲದೆ ನಾನು ಯಾವಾಗ ಕುಗ್ಗಿದ್ದೆನೋ ಆಗೆಲ್ಲ ಬಿಗ್‌ಬಾಸ್ ನನಗೆ ಅಕ್ಷರಶಃ ತುಂಬ ಸಪೋರ್ಟ್‌ ಮಾಡಿದಾರೆ. ನನ್ನ ಇಡೀ ಜರ್ನಿಯಲ್ಲಿ ಅವರ ಸಪೋರ್ಟ ತುಂಬ ಇದೆ. ಅದನ್ನು ನಾನು ಎಂದೆಂದಿಗೂ ಮರೆಯಲ್ಲ.

  • ಪ್ರತಾಪ್ ಮತ್ತು ನನ್ನದು ಅಕ್ಕ ತಮ್ಮ ಸಂಬಂಧ: ಸಂದರ್ಶನದಲ್ಲಿ ಸಂಗೀತಾ ಮಾತು

    ಪ್ರತಾಪ್ ಮತ್ತು ನನ್ನದು ಅಕ್ಕ ತಮ್ಮ ಸಂಬಂಧ: ಸಂದರ್ಶನದಲ್ಲಿ ಸಂಗೀತಾ ಮಾತು

    ದಿಟ್ಟ ಹುಡುಗಿ, ಗಟ್ಟಿ ವ್ಯಕ್ತಿತ್ವದ ಸಂಗೀತಾ ಶೃಂಗೇರಿ (Sangeetha) ಬಿಗ್‌ಬಾಸ್‌ (Bigg Boss Kannada) ಈ ಸೀಸನ್‌ನ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಮನೆಯೊಳಗೆ ಕಾಣಿಸುತ್ತಿದ್ದ ಹಾಗೆಯೇ ಹೊರಗೂ ಅವರದ್ದು ನೇರ ಮಾತು, ದಿಟ್ಟ ವ್ಯಕ್ತಿತ್ವ. ಜಿಯೊಸಿನಿಮಾಗೆ ಅವರು ನೀಡಿದ ಸಂದರ್ಶನದಲ್ಲಿಯೂ ಆ ನೇರವಂತಿಕೆಯ ಕಿಡಿ ಕಾಣಿಸುತ್ತದೆ. ಅವರ ಜೊತೆಗಿನ ಸಂದರ್ಶನದ ಪೂರ್ಣಪಾಠ ಇಲ್ಲಿದೆ. ತುಂಬಾ ಅಂದ್ರೆ ತುಂಬ ಖುಷಿಯಾಗ್ತಿದೆ. ಬಿಗ್‌ಬಾಸ್ ಕನ್ನಡ 10ನೇ ಸೀಸನ್‌ ಸೆಕೆಂಡ್ ರನ್ನರ್ ಅಪ್ ನಾನು. ಇಲ್ಲಿವರೆಗೂ ನನ್ನನೋಡ್ತಾನೇ ಬಂದಿದೀರಾ… ಇನ್ಮುಂದೆ ನನ್ನ ಲೈವ್ ನೋಡಕ್ಕಾಗಲ್ಲ. ಹಾಗಾಗಿ ನನ್ನನ್ನು ನೂರ ಹನ್ನೆರಡು ದಿನಗಳವರೆಗೆ ನೇರವಾಗಿ ತೋರಿಸಿ, ಎಲ್ಲಜನರ ಜೊತೆಗೆ ಸಂಪರ್ಕದಲ್ಲಿ ಇರಿಸಿದ್ದಕ್ಕೆ ನಾನು ಜಿಯೊಸಿನಿಮಾಗೆ ಥ್ಯಾಂಕ್ಸ್ ಹೇಳಲೇಬೇಕು.

    ಈ ಸಲ ಒಂದು ಹೊಸ ಅನಭವ ಇತ್ತು. ಫಿನಾಲೆ ವಾರದಲ್ಲಿ ಆರು ಸ್ಪರ್ಧಿಗಳಿದ್ದರು, ಐದಲ್ಲ. ಆರರಿಂದ ಟಾಪ್‌ 5 ಸೆಲೆಕ್ಟ್ ಆದಾಗಲೂ ಸಾಕಷ್ಟು ಎಕ್ಸೈಟ್‌ಮೆಂಟ್ ಇತ್ತು. ನರ್ವಸ್‌ನೆಸ್ ಕೂಡ ಇತ್ತು. 4ರಿಂದ 3ಬಂದ ನಂತರ ಸುದೀಪ್ ಅವರೇ ಮನೆಯೊಳಗೆ ಬಂದು ನಮ್ಮನ್ನು ಕರೆದುಕೊಂಡು ಹೋದರು. ಇದು ನನ್ನ ಬದುಕಿನಲ್ಲಿಯೇ ಅತ್ಯುತ್ತಮ ಅನುಭವ. ವೇದಿಕೆಯ ಮೇಲೆ ಮೂರು ಬಾಕ್ಸ್‌ಗಳಿದ್ದವು. ಆ ಬಾಕ್ಸ್‌ನಲ್ಲಿ ಒಂದು ರೆಡ್ ಆಗತ್ತೆ ಅಂತ ಹೇಳಿದ್ರು. ಅದು ನನ್ನ ಎಕ್ಸಿಟ್‌, ಸೆಕೆಂಡ್ ರನ್ನರ್ ಅಪ್ ಆಗಿ.

    ವಿನ್ನರ್ ಆಗಕ್ಕೆ ಆಗ್ಲಿಲ್ಲಅಂತ ಬೇಜಾರಿದೆ. ಆದರೂ ನಾನು ಹ್ಯಾಪಿಯಾಗಿದ್ದೇನೆ. ಯಾಕೆಂದರೆ ಈ ಜರ್ನಿ ಎಷ್ಟು ಅದ್ಭುತವಾಗಿತ್ತು ಅಂದರೆ ನಾನು ತುಂಬ ತುಂಬ ಸ್ಟ್ರಾಂಗ್ ಆಗಿದ್ದೇನೆ. ಲೈಫ್‌ನಲ್ಲಿ ಸುಮಾರು ಸಮಸ್ಯೆಗಳು ಬರುತ್ತವೆ. ಓಡಿಹೋಗಬೇಕು ಅನಿಸುತ್ತದೆ. ನಾನು ಈ ಮನೆಯಲ್ಲಿ ಕಲಿತಿರುವ ಒಂದು ಸಂಗತಿ ಏನೆಂದರೆ ನೆವರ್ ಕ್ವಿಟ್; ಹ್ಯಾವ್ ಹೋಪ್‌! (ಬಿಟ್ಟುಕೊಡಬೇಡ; ಆಶಾವಾದಿಯಾಗಿರು). ಈ ಹೋಪ್ ಅನ್ನುವುದನ್ನು ನಾನು ಮುಂದೆಯೂ ಕ್ಯಾರಿ ಮಾಡ್ತೀನಿ. ಈ ಮನೆಯಲ್ಲಿ ಸಾಕಷ್ಟು ಕಲಿತಿದ್ದೀನಿ. ಬದುಕಿನಲ್ಲಿಯೂ ಸಾಕಷ್ಟು ಕಲಿಯುವುದಿದೆ. ನಾನು ಯಾವತ್ತೂ ಸಮಸ್ಯೆಗಳಿಂದ ಓಡಿಹೋಗುವುದಿಲ್ಲ. ಧೈರ್ಯದಿಂದ ಎದುರಿಸುತ್ತೇನೆ.

    ಮನೆಯೊಳಗೆ ಎಲ್ಲರೂ ಅವರವರ ಗೇಮ್‌ ಅನ್ನು ಜೆನ್ಯೂನ್ ಆಗಿಯೇ ಆಡಿದ್ದೇನೆ. ಅದರಲ್ಲಿ ಯಾವ ಅನುಮಾನವೂ ಇಲ್ಲ. ನಾನು ನನ್ನ ಗೇಮ್‌ ಅನ್ನು ಗೇಮ್‌ ಅಂತಷ್ಟೇ ಆಡಿಲ್ಲ, ಅದನ್ನು ಬದುಕಿದ್ದೀನಿ. ಬೇರೆಯವರ ಬಗ್ಗೆ ನಾನು ಕಮೆಂಟ್ ಮಾಡಲಿಕ್ಕೆ ಆಗುವುದಿಲ್ಲ. ನನ್ನ ಗೇಮ್ ಬಗ್ಗೆಯಷ್ಟೇ ನಾನು ಹೇಳಬಹುದು. ಯಾಕೆಂದರೆ ಅಲ್ಲಿ ಉಳಿದುಕೊಳ್ಳಬೇಕು ಅಂದರೆ ಎಲ್ಲರೂ ಅವರವರ ವ್ಯಕ್ತಿತ್ವವನ್ನು ತೋರಿಸಿಕೊಳ್ಳಬೇಕಾಗುತ್ತದೆ. ಯಾರಾದರೂ ಫೇಕ್ ಆಗಿರಲು ಸಾಧ್ಯ ಎಂದು ನನಗೆ ಅನಿಸುತ್ತಿಲ್ಲ. ಅದರಲ್ಲಿಯೂ ಓಪನ್ ನಾಮಿನೇಷನ್ ಎಂದು ಬಿಗ್‌ಬಾಸ್ ಮಾಡಿದ್ದು ತುಂಬ ಒಳ್ಳೆಯದು. ಈ ಸೀಸನ್‌ನಲ್ಲಿ ಯಾವಾಗಲೂ ಕನ್ಫೆಷನ್ ರೂಮಿಗೆ ಹೋಗಿ ಗೊತ್ತಾಗದೆ ಇರುವ ಹಾಗೆ ನಾಮಿನೇಷನ್ ನಡೆಯಲೇ ಇಲ್ಲ.

    ಎಲ್ಲಕ್ಕಿಂತ ಈ ಸಲದ ಸೀಸನ್‌ ಯಾಕೆ ಡಿಫರೆಂಟ್‌ ಆಗಿತ್ತು ಅಂದ್ರೆ ಯಾರೂ ಫೇಕ್ ಆಗಿ ಇರಲೇ ಇಲ್ಲ. ಕಳೆದ ಸೀಸನ್‌ನಲ್ಲಿ ಯಾರು ಯಾರಿಗೆ ವೋಟ್ ಮಾಡಿದ್ದಾರೆ ಎಂದು ಗೊತ್ತೇ ಆಗುತ್ತಿರಲಿಲ್ಲ. ಆದರೆ ಈ ಬಾರಿ ಮುಖದ ಮೇಲೇ ಹೇಳುವುದರಿಂದ ನಮಗೂ ಗೊತ್ತಿರುತ್ತಿತ್ತು, ಇವರಿಗೆ ನಾವು ಇಷ್ಟ, ಇವರಿಗೆ ಇಷ್ಟ ಇಲ್ಲ ಅಂತ. ಹಾಗಾಗಿ ಪ್ರೇಕ್ಷಕರಿಗೂ ಐಡಿಯಾ ಇರ್ತಿತ್ತು. ಅಲ್ಲದೆ ಪ್ರತಿ ಸಲ ಟಾಸ್ಕ್ ಕೊಡುವಾಗಲೂ ತುಂಬ ಕ್ರಿಯೇಟೀವ್ ಆಗಿ ವ್ಯಕ್ತಿತ್ವವನ್ನು ಹೈಲೈಟ್ ಮಾಡುವ ರೀತಿಯಲ್ಲಿ ಟಾಸ್ಕ್‌ ಕೊಡುತ್ತಿದ್ದರು. ಒಂದೊಂದು ವಾರ ಆಗುತ್ತಿರುವ ಹಾಗೆ ಎಲ್ಲರ ವ್ಯಕ್ತಿತ್ವದ ಒಂದೊಂದು ಛಾಯೆ ಎದ್ದು ಕಾಣಿಸುತ್ತಿತ್ತು. ಇದೇ ಕಾರಣಕ್ಕೆ ಈ ಸೀಸನ್ ತುಂಬ ವಿಭಿನ್ನವಾಗಿತ್ತು ಅನಿಸುತ್ತದೆ.

     

    ಪ್ರತಾಪ್ ಮತ್ತು ನನ್ನದು ಅಕ್ಕ ತಮ್ಮನ ಬಾಂಡ್‌ ಎಂದು ಎಲ್ಲರೂ ಹೇಳ್ತಾರೆ. ನಮ್ಮ ನಡುವೆ ತುಂಬ ಆಳವಾದ ಫ್ರೆಂಡ್‌ಷಿಪ್ ಮೊದಲಿನಿಂದಲೂ ಇತ್ತು ನಮ್ಮಲ್ಲಿ. ಮೊದಲಿನಿಂದಲೂ ಅವನ ನಾನು ಸಪೋರ್ಟ್ ಮಾಡ್ತಾ ಬಂದಿದ್ದೆ. ನಡುವೆ ಕೆಲವು ಕಾಲ ಮನಸ್ತಾಪ ಬಂದಿತ್ತು. ಆದರೆ ಕೊನೆಗೆ ಸರಿಹೋಯ್ತು. ಮನಸ್ತಾಪ ಬಂದರೂ ನಾವು ಸರಿಹೋದೆವು. ಯಾಕೆಂದರೆ ನಮ್ಮ ಬಾಂಡಿಂಗ್ ಹಾಗಿತ್ತು. ಆ ಪ್ರೀತಿ ಯಾವತ್ತೂ ಕಡಿಮೆ ಆಗಿಲ್ಲ.

  • Bigg Boss Kannada: ಬಿಗ್ ಬಾಸ್ ಮನೆಯಲ್ಲಿ ಸಂಗೀತಾ ಎಡವಿದ್ದು ಎಲ್ಲೆಲ್ಲಿ?

    Bigg Boss Kannada: ಬಿಗ್ ಬಾಸ್ ಮನೆಯಲ್ಲಿ ಸಂಗೀತಾ ಎಡವಿದ್ದು ಎಲ್ಲೆಲ್ಲಿ?

    ಬಿಗ್ ಬಾಸ್ (Bigg Boss Kannada) ಮನೆಯಲ್ಲಿ  ಹಳ್ಳಿ ಟಾಸ್ಕ್‌ ಈ ಸೀಸನ್‌ ಅತಿ ಹೆಚ್ಚು ಸದ್ದು ಮಾಡಿದ ಕೆಲವು ಗಳಿಗೆಳಲ್ಲಿ ಹಳ್ಳಿ ಟಾಸ್ಕ್‌ ಕೂಡ ಒಂದು. ಮನೆಯೊಳಗೆ ಹಳ್ಳಿಯ ವಾತಾವರಣವನ್ನು ಸೃಷ್ಟಿ ಮಾಡಿ ಎರಡು ಕುಟುಂಬಗಳಾಗಿ ಮನೆಯ ಸದಸ್ಯರನ್ನು ವಿಂಗಡಿಸಲಾಗಿತ್ತು. ಅವರ ನಡುವೆ ವಿವಿಧ ಟಾಸ್ಕ್‌ಗಳನ್ನು ನೀಡಲಾಗಿತ್ತು. ಈ ಸಂದರ್ಭದಲ್ಲಿ ವಿನಯ್ ಒಂದು ಕುಟುಂಬದ ಯಜಮಾನನಾಗಿದ್ದರೆ, ಇನ್ನೊಂದು ಕುಟುಂಬಕ್ಕೆ ಸಂಗೀತಾ (Sangeetha) ಯಜಮಾನ್ತಿಯಾಗಿದ್ದರು. ಈ ಸಂದರ್ಭದಲ್ಲಿ ವಿನಯ್ ಮತ್ತು ಕಾರ್ತಿಕ್ ನಡುವೆ ಜಗಳ ನಡೆದಿತ್ತು. ಆ ಸಂದರ್ಭದಲ್ಲಿ ವಿನಯ್, ‘ನಾವೇನು ಬಳೆ ತೊಟ್ಕೊಂಡು ಕೂತಿಲ್ಲ’ ಎಂದು ಮಾತಾಡಿದ್ದರು. ಇದರಿಂದ ಸಿಟ್ಟಿಗೆದ್ದ ಸಂಗೀತಾ ಅವರ ಮಾತನ್ನು ಪ್ರತಿಭಟಿಸಿದ್ದಲ್ಲದೇ ಉಳಿದ ಟಾಸ್ಕ್‌ಗಳನ್ನು ಕೈ ತುಂಬ ಬಳೆ ತೊಟ್ಟುಕೊಂಡೇ ಆಡಿದ್ದರು. ಹಾಗೂ ವಿನಯ್ ಅವರಿಗೆ ‘ಬಳೆ ತೊಟ್ಕೊಂಡಿದೀನಿ ಬಳೆ’ ಎಂದು ಕೈಯೆತ್ತಿ ತೋರಿಸಿದ್ದರು ಕೂಡ. ಬಳೆಯ ಕುರಿತ ತಪ್ಪು ಮಾತುಗಳಿಗೆ ಸಂಗೀತಾ ನೀಡಿದ ಉತ್ತರ ಮನೆಯೊಳಗಷ್ಟೇ ಅಲ್ಲ, ಮನೆಯ ಹೊರಗೂ ಸಾಕಷ್ಟು ಚರ್ಚೆಗೆ ಒಳಗಾಗಿತ್ತು. ವಿನಯ್ ಆಡಿದ ಮಾತಿನ ಬಗ್ಗೆ, ಅದಕ್ಕೆ ಸಂಗೀತಾ ಕೊಟ್ಟ ಉತ್ತರದ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿಬಂದಿದ್ದವು. ಇದು ಸಂಗೀತಾ ಅವರ ಗಟ್ಟಿ ಮತ್ತು ದಿಟ್ಟ ವ್ಯಕ್ತಿತ್ವವನ್ನು ತೆರೆದಿಟ್ಟಿತ್ತು.

    ಆ ವಾರಾಂತ್ಯದ ಪಂಚಾಯ್ತಿಯಲ್ಲಿ ಕಿಚ್ಚ ವಿನಯ್ ಮಾತುಗಳಿಗೆ ತರಾಟೆ ತೆಗೆದುಕೊಂಡಿದ್ದಲ್ಲದೆ, ಸಂಗೀತಾ ಅವರ ದಿಟ್ಟ ವರ್ತನೆಯನ್ನು ಪ್ರಶಂಸಿಸಿದ್ದರು. ಅಲ್ಲದೇ ಆ ವಾರದ ಕಿಚ್ಚನ ಚಪ್ಪಾಳೆಯನ್ನು ‘ಬಳೆ’ಗೇ ನೀಡಿದ್ದರು. ಸಂಗೀತಾ ಕೈಯಲ್ಲಿನ ಬಳೆಯ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಲ್ಲದೆ, ಹಲವು ಸೆಲೆಬ್ರಿಟಿಗಳ ಪೇಜುಗಳಲ್ಲಿ ಕಾಣಿಸಿಕೊಂಡಿತ್ತು. ಇದೊಂದೇ ಸಂದರ್ಭವಲ್ಲ. ತಮ್ಮ ಅಭಿಪ್ರಾಯಗಳನ್ನು ತಿಳಿಸುವ ಯಾವುದೇ ಸಂದರ್ಭಗಳಲ್ಲಿ ಸಂಗೀತಾ ಯಾವತ್ತೂ ಹಿಂಜರಿಕೆಗೆ ತೋರಿಸಿದ್ದಿಲ್ಲ. ರಿಸ್ಕ್‌ ತೆಗೆದುಕೊಳ್ಳಲು ಹಿಂದೆಮುಂದೆ ನೋಡಿದ್ದಿಲ್ಲ. ಹಾಗಾಗಿಯೇ ಸಂಗೀತಾ ಬಹುತೇಕ ಎಲ್ಲ ವಾರಗಳಲ್ಲಿಯೂ ನಾಮಿನೇಷನ್ ಲೀಸ್ಟ್‌ನಲ್ಲಿ ಇದ್ದೇ ಇರುತ್ತಿದ್ದರು. ಆದರೆ ಅದನ್ನೆಲ್ಲ ಗಣನೆಗೇ ತೆಗೆದುಕೊಳ್ಳದ ಅವರು, ತಮ್ಮ ಆಟವನ್ನು ಆಡುತ್ತ, ತಮಗೆ ಅನಿಸಿದ್ದನ್ನು ಹೇಳುತ್ತಲೇ ಇದ್ದರು.

    ಈ ಸೀಸನ್‌ನ ಇನ್ನೊಂದು ಬಹುದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಸಂದರ್ಭವೆಂದರೆ ರಕ್ಕಸ ಮತ್ತು ಗಂಧರ್ವರ ಟಾಸ್ಕ್‌. ಟಾಸ್ಕ್‌ ಎಂಬುದು ಸೇಡಿನ ರೀತಿ ಬದಲಾಗಿ ಮನೆಯ ವಾತಾವರಣವೂ ಪೂರ್ತಿ ಬದಲಾಗಿಬಿಟ್ಟ ವಾರವದು. ಆ ವಾರದಲ್ಲಿ ಇನ್ನೊಂದು ವಿಷಾದನೀಯ ಘಟನೆಯೂ ನಡೆಯಿತು. ಕುರ್ಚೆಯಲ್ಲಿ ಕೂರಿಸಿ ಮುಖಕ್ಕೆ ನೀರು ಸೋಕುವ ಟಾಸ್ಕ್‌ನಲ್ಲಿ, ಸಂಗೀತಾ ಮತ್ತು ಪ್ರತಾಪ್ ಇಬ್ಬರಿಗೂ ಕಣ್ಣಿಗೆ ಹಾನಿಯಾಗಿ ಆಸ್ಪತ್ರೆಗೆ ಸೇರುವಂತಾಗಿತ್ತು.  ಇದರಿಂದ ಹಲವು ದಿನಗಳ ಕಾಲ ಸಂಗೀತಾ ಮತ್ತು ಪ್ರತಾಪ್ ಇಬ್ಬರೂ ಆಸ್ಪತ್ರೆಯಲ್ಲಿ ಕಳೆಯುವಂತಾಗಿತ್ತು. ಹಾಗೆ ಹೊರಗೆ ಹೋದ ಸಂಗೀತಾ ವಾಪಸ್ ಬರುತ್ತಾರೋ ಇಲ್ಲವೋ ಎಂದು ಎಲ್ಲರೂ ಅಂದುಕೊಳ್ಳುತ್ತಿರುವಾಗಲೇ ಕಪ್ಪು ಕನ್ನಡಕ ತೊಟ್ಟ ಸಂಗೀತಾ ಮತ್ತು ಪ್ರತಾಪ್‌ ರೀ ಎಂಟ್ರಿ ಕೊಟ್ಟಿದ್ದರು. ಹಾಗೆಯೇ ಹಿಂದೆಂದಿಗಿಂತ ಹೆಚ್ಚಿನ ಉತ್ಸಾಹದೊಂದಿಗೆ, ಹಟದೊಂದಿಗೆ ಮನೆಗೆ ಬಂದಿದ್ದರು. ಅದನ್ನು ತಮ್ಮ ಆಟಗಳಲ್ಲಿ ತೋರಿಸಿಯೂ ಕೊಟ್ಟರು.

    ಹಲವು ಸಂದರ್ಭದಲ್ಲಿ ಇಡೀ ಮನೆಯ ಎಲ್ಲರನ್ನೂ ಎದುರುಹಾಕಿಕೊಂಡು ಒಬ್ಬಂಟಿಯಾಗಿದ್ದ ಸಂದರ್ಭವೂ ಸಾಕಷ್ಟಿವೆ. ಆ ಸಂದರ್ಭದಲ್ಲಿಯೂ ಸಂಗೀತಾ ಹಿಂಜರಿಕೆ ತೋರಿದ್ದಿಲ್ಲ. ಮೊದಲ ವಾರದಲ್ಲಿ ಅಸಮರ್ಥರ ಗುಂಪಿನಲ್ಲಿದ್ದ ಸಂಗೀತಾ, ತನಿಷಾ ಮತ್ತು ಕಾರ್ತಿಕ್ ಈ ಮೂವರೂ ಸಾಕಷ್ಟು ಆಪ್ತರಾದರು. ತ್ರಿಕೋನ ಸ್ನೇಹ ಹಲವು ವಾರಗಳ ಕಾಲ ಅಬಾಧಿತವಾಗಿ ಉಳಿದಿತ್ತು. ಈ ಸ್ನೇಹಸಂಬಂಧದಲ್ಲಿಯೂ ಸಂಗೀತಾ ಅವರ ವ್ಯಕ್ತಿತ್ವದ ಆಯಾಮಗಳು ಬಿಚ್ಚಿಕೊಂಡವು. ಲುಡೊ ಟಾಸ್ಕ್‌ನಲ್ಲಿ ಸಂಗೀತಾಳನ್ನು ಉಳಿಸುವ ಅವಕಾಶ ಇದ್ದಾಗಲೂ ಸೇವ್ ಮಾಡದಿರುವುದು ಸಂಗೀತಾ ಅವರಲ್ಲಿ ಅಸಮಧಾನ ಹುಟ್ಟಿಸಿತ್ತು. ಅದನ್ನು ಅವರು ನೇರವಾಗಿಯೇ ಹೇಳಿಕೊಂಡಿದ್ದರು ಕೂಡ. ಆ ಹಂತದಲ್ಲಿ ಕಾರ್ತೀಕ್ ಮತ್ತು ಸಂಗೀತಾ ಮಧ್ಯ ಸಣ್ಣ ಬಿರುಕು ಕಾಣಿಸಿಕೊಂಡಿತ್ತು. ‘ನಾನು ಯಾರನ್ನೂ ಅಷ್ಟಾಗಿ ನಂಬುವುದಿಲ್ಲ. ಯಾರನ್ನಾದರೂ ನಂಬಿದ್ದೇನೆ ಅಂದರೆ ಅವರಿಂದ ಬೆಂಬಲವನ್ನು ನಿರೀಕ್ಷಿಸುತ್ತೇನೆ’ ಎಂಬುದು ಸಂಗೀತಾ ನಿಲುವು. ಇದು ಕೆಲವೊಮ್ಮೆ ಕಿರಿಕಿರಿ ಹುಟ್ಟಿಸಿದ್ದೂ ಇದೆ. ಆದರೆ ಆ ಸ್ವಭಾವದಿಂದ ಬಹುಬೇಗ ಹೊರಬಂಧ ಸಂಗೀತಾ ಸ್ವತಂತ್ರವಾಗಿ ಆಡಲು, ಇರಲು ಪ್ರಾರಂಭಿಸಿದ್ದರು. ಹಾಗಾಗಿಯೇ ಎಲ್ಲರ ಜೊತೆಗೂ ಸ್ನೇಹದಿಂದಲೂ ಇರುತ್ತಲೂ, ಅಷ್ಟೇ ನೇರವಾಗಿ ಜಗಳವಾಡಲೂ ಅವರಿಗೆ ಸಾಧ್ಯವಾಗುತ್ತಿತ್ತು.

    ಕೊನೆಯ ವಾರದಲ್ಲಿ ವಾಲ್‌ ಆಫ್‌ ಮೆಮೊರಿ ನೋಡಿದರೆ ಸಂಗೀತಾ ಎಂಥ ನೆನಪುಗಳನ್ನು ಮನೆಯೊಳಗೆ ಕಟ್ಟಿಕೊಂಡಿದ್ದಾರೆ ಎಂಬುದು ಗೊತ್ತಾಗುವಂತಿತ್ತು. ಆರಂಭದ ದಿನಗಳಲ್ಲಿ ಸಂಗೀತಾ ಅವರನ್ನು ದ್ವೇಷಿಸುತ್ತಿದ್ದ ನಮೃತಾ ಕೊನೆಕೊನೆಯ ದಿನಗಳಲ್ಲಿ ಅವರ ಸ್ನೇಹಿತೆಯಾಗಿದ್ದು, ‘ನಾನು ನಿಮ್ಮನ್ನು ತಪ್ಪಾಗಿ ತಿಳಿದುಕೊಂಡಿದ್ದೆ’ ಎಂದು ಉದ್ಘರಿಸಿದ್ದೇ ಸಂಗೀತಾ ಅವರ ವ್ಯಕ್ತಿತ್ವಕ್ಕೆ ಸಾಕ್ಷಿ. ಸ್ನೇಹಕ್ಕೆ ಜೊತೆಯಾಗಿ ನಿಲ್ಲುತ್ತಿದ್ದ ಅವರು ನಂಬಿಕೆದ್ರೋಹವನ್ನು ಎಂದಿಗೂ ಸಹಿಸಿಕೊಂಡಿಲ್ಲ. ಹಿಂದೊಂದು ಮುಂದೊಂದು ಮಾತಾಡುವವರನ್ನು ದೂರವೇ ಇಟ್ಟುಕೊಂಡು ಬಂದರು. ಕಾರ್ತಿಕ್ ಜೊತೆಗೆ ಸ್ನೇಹ ಮುರಿದುಕೊಂಡ ನಂತರ ‘ನಾನೆಂದಿಗೂ ಅವರನ್ನು ಕ್ಷಮಿಸಲಾರೆ’ ಎಂದು ಒಂದಲ್ಲ ಹಲವು ಬಾರಿ ಹೇಳಿಯೂ ಅವರು ಕಾರ್ತಿಕ್ ಅವರನ್ನು ಕ್ಷಮಿಸಿದರು. ಫಿನಾಲೆ ವೀಕ್‌ನಲ್ಲಿ ಕಾರ್ತಿಕ್, ಸಂಗೀತಾಗೆ ಪತ್ರ ಬರೆದಾಗ, ಸಂಗೀತಾ ಮನಸಾರೆ ಮೆಚ್ಚಿಕೊಂಡು, ತಾನೂ ಪತ್ರ ಬರೆದಿದ್ದಲ್ಲದೇ ಜರ್ಕೀನ್ ಮತ್ತು ಲಿಪ್‌ಸ್ಟಿಕ್‌ ಅನ್ನು ಉಡುಗೊರೆಯಾಗಿ ಕೊಟ್ಟಿದ್ದರು. ವಿನಯ್ ಜೊತೆಗೂ ಮುನಿಸನ್ನು ಮರೆತು ಸ್ನೇಹದಿಂದ ಉಳಿದಿದ್ದರು.

    ‘ಪ್ರತಾಪ್ ಕಂಡರೆ ನನಗೆ ನನ್ನ ಅಣ್ಣನೇ ನೆನಪಾಗುತ್ತಾನೆ. ಸದಾ ಮನಸೊಳಗೆ ಮುಚ್ಚಿಟ್ಟುಕೊಂಡು ಕೊನೆಗೆ ಒಮ್ಮೆಲೇ ಸ್ಫೋಟಗೊಳ್ಳುತ್ತಾನೆ. ಬಿಗ್‌ಬಾಸ್‌ ಮನೆಯೊಳಗೆ ನನ್ನ ಜರ್ನಿಗೂ ಪ್ರತಾಪ್ ಜರ್ನಿಗೂ ಸಾಕಷ್ಟು ಸಾಮ್ಯತೆಗಳಿವೆ’ ಎಂದು ಸಂಗೀತಾ ಹಲವು ಬಾರಿ ಹೇಳಿದ್ದಾರೆ. ಪ್ರತಾಪ್‌ ರೂಪದಲ್ಲಿ ನನಗೊಬ್ಬ ತಮ್ಮ ಸಿಕ್ಕಿದ್ದಾನೆ ಎಂದು ಹೇಳಿದ್ದಷ್ಟೇ ಅಲ್ಲ, ಅವಕಾಶ ಸಿಕ್ಕಾಗೆಲ್ಲ ಪ್ರತಾಪ್‌ ಅವರಿಗೆ ಬೆಂಬಲ ನೀಡುತ್ತಲೇ ಬಂದಿದ್ದಾರೆ ಸಂಗೀತಾ. ಒಂದು ಹಂತದಲ್ಲಿ ಪ್ರತಾಪ್, ಸಂಗೀತಾ ಅವರನ್ನು ಆಟದಿಂದ ಹೊರಗೆ ಹಾಕಿದ್ದರೂ ಸಂಗೀತಾ, ಪ್ರತಾಪ್‌ಗೆ ನೀಡುವ ಬೆಂಬಲ ನಿಲ್ಲಿಸಲಿಲ್ಲ.

    ಹೀಗೆ ಹಲವು ಏರಿಳಿತಗಳುಳ್ಳ ಸಂಗೀತಾ, ಬಿಗ್‌ಬಾಸ್ ಜರ್ನಿಯಲ್ಲಿ ಸಾಕಷ್ಟು ಏರಿಳಿತಗಳು ಇದ್ದಿದ್ದಂತೂ ನಿಜ. ಆದರೆ ಈ ಏರಿಳಿತಗಳನ್ನು ಹಾದುಬಂದ ಅವರು ಇನ್ನಷ್ಟು ಗಟ್ಟಿಗೊಳ್ಳುತ್ತಲೇ ಬಂದರು. ಹಾಗಾಗಿಯೇ ಫಿನಾಲೆ ವೀಕ್‌ನ ಆರು ಸ್ಪರ್ಧಿಗಳಲ್ಲಿ ಎಲ್ಲರಿಗಿಂತ ಮೊದಲು ಕಾಲಿಡಲು ಅವರಿಗೆ ಸಾಧ್ಯವಾಗಿದ್ದು ಅವರನ್ನೂ ದ್ವೇಷಿಸುವವರೂ ಅವರ ಸಾಮರ್ಥ್ಯವನ್ನು ಮೆಚ್ಚಿಕೊಳ್ಳುವಂತೆ ಬೆಳೆದಿದ್ದು ಸಂಗೀತಾ ಅವರ ಶಕ್ತಿ.

  • ಅಸಮರ್ಥರಾಗಿದ್ದ ಕಾರ್ತಿಕ್- ಸಂಗೀತಾ- ತನಿಷಾ ಸಮರ್ಥರಾದ ರೋಚಕ ಕಥೆ

    ಅಸಮರ್ಥರಾಗಿದ್ದ ಕಾರ್ತಿಕ್- ಸಂಗೀತಾ- ತನಿಷಾ ಸಮರ್ಥರಾದ ರೋಚಕ ಕಥೆ

    ಬಿಗ್ ಬಾಸ್ (Bigg Boss Kannada)ಮನೆಯಲ್ಲಿ ಅಸಮರ್ಥರ ತಂಡದಲ್ಲಿ ಒಂದಾಗಿ ಮನೆಯೊಳಗೆ ಪ್ರವೇಶಿಸಿದ ಕಾರ್ತಿಕ್ (Karthik), ಸಂಗೀತಾ (Sangeetha) ಮತ್ತು ತನಿಷಾ (Tanisha Kuppanda)ಬಹುಬೇಗ ಆಪ್ತ ಸ್ನೇಹಿತರಾದರು. ಅದರಲ್ಲಿಯೂ ಸಂಗೀತಾ ಮತ್ತು ಕಾರ್ತಿಕ್ ಅವರ ಸಂಬಂಧಕ್ಕೆ ಕೆಲವು ಸಲ ರೊಮ್ಯಾಂಟಿಕ್ ಆಂಗಲ್ ಕೂಡ ದಕ್ಕಿತ್ತು. ಆದರೆ ಆರಂಭದಲ್ಲಿಯೇ, ‘ಲವ್‌ ಗಿವ್‌ ಎಲ್ಲ ಬೇಡ… ಫ್ರೆಂಡ್ ಆಗಿರೋಣ’ ಎಂದು ಸಂಗೀತ ಸ್ಪಷ್ಟವಾಗಿ ಹೇಳಿದ್ದರು. ಅದಕ್ಕೆ ಕಾರ್ತಿಕ್ ಕೂಡ ಒಪ್ಪಿದ್ದರು. ಈ ಮೂವರ ಫ್ರೆಂಡ್‌ಷಿಪ್ ಬಿಗ್‌ಬಾಸ್ ಮನೆಯಲ್ಲಿ ಸಾಕಷ್ಟು ದೂರ ಸಾಗಿತ್ತು.

    ಒಮ್ಮೆ ಸಂಗೀತಾ ಜೈಲಿಗೆ ಹೋದಾಗ ಕಾರ್ತಿಕ್ ನೇರವಾಗಿಯೇ, ‘ನಾವು ಮೊದಲ ದಿನದಿಂದಲೂ ಒಬ್ಬರಿಗೊಬ್ಬರು ನಿಂತಿದ್ದೇವೆ. ಮುಂದೆಯೂ ನಿಲ್ಲುತ್ತೇವೆ’ ಎಂದೇ ಹೇಳಿದ್ದರು. ಜೈಲು ಅವಧಿ ಮುಗಿದಾಗ, ಸಂಗೀತಾಳನ್ನು ಹೆಗಲ ಮೇಲೆ ಹೊತ್ತು ಮನೆಯೊಳಗೆ ತಂದ ಸನ್ನಿವೇಶ ಅವರಿಬ್ಬರ ಸ್ನೇಹಸಂಬಂಧದ ಬಗ್ಗೆ ಬಹಳಷ್ಟನ್ನು ಹೇಳುವಂತಿತ್ತು. ಹಲವು ಸಲ ಕಾರ್ತಿಕ್, ತನ್ನ ಸ್ನೇಹಿತರಾದ ಸಂಗೀತಾ ಮತ್ತು ತನಿಷಾ ಪರವಾಗಿ ನಿಂತಿದ್ದಾರೆ. ಅವರೊಟ್ಟಿಗೆ ಸೇರಿ ಆಡಿದ್ದಾರೆ. ಮನೆಯ ಉಳಿದ ಸಮಯದಲ್ಲಿಯೂ ಅವರ ನೋವುಗಳಿಗೆ ಜೊತೆಯಾಗಿದ್ದಾರೆ. ಕಣ್ಣೀರು ಒರೆಸಿದ್ದಾರೆ. ಹಾಗೆಯೇ ತಮ್ಮ ನೋವು ನಲಿವುಗಳನ್ನೂ ಅವರೊಟ್ಟಿಗೆ ಹಂಚಿಕೊಂಡಿದ್ದಾರೆ.

    ಆದರೆ ಸಂಗೀತಾ ಜೊತೆಗಿನ ಈ ಸ್ನೇಹ ಒಂದು ಹಂತದ ನಂತರ ಸಡಿಲಗೊಳ್ಳುತ್ತ ಬಂದಿತು. ಸಂಗೀತಾ ತಮ್ಮ ಕಂಪರ್ಟ್‌ ಝೋನ್ ಬಿಟ್ಟು ಹೊರಬರಲೆಂದು ವಿನಯ್ ಅವರಿದ್ದ ತಂಡದಲ್ಲಿ ಆಡಲು ನಿರ್ಧರಿಸಿದಾಗ ಆ ಸಂಬಂಧ ಇನ್ನಷ್ಟು ಸಡಿಲಾಗಿದ್ದು ನಿಜ. ಅಂಥ ಒಂದು ಸಂದರ್ಭದಲ್ಲಿ ಸಂಗೀತಾ ಎಸೆದ ಛಾಲೆಂಜ್ ಅನ್ನು ಸವಾಲಾಗಿ ಸ್ವೀಕರಿಸಿದ ಕಾರ್ತಿಕ್ ಮತ್ತು ತುಕಾಲಿ ಸಂತೋಷ್ ತಮ್ಮ ತಲೆಯನ್ನು ಬೋಳಿಸಿಕೊಂಡಿದ್ದರು. ನಂತರ ನಾಮಿನೇಷನ್‌ನಲ್ಲಿ, ಮನೆಯೊಳಗಿನ ಚಟುವಟಿಕೆಗಳ ಸಂದರ್ಭದಲ್ಲಿಯೆಲ್ಲ ಸಂಗೀತಾ ಮತ್ತು ಕಾರ್ತೀಕ್ ನಡುವಿನ ಗ್ಯಾಪ್ ಹೆಚ್ಚುತ್ತಲೇ ಹೋಯಿತು. ಒಂದು ಹಂತದಲ್ಲಿ ಈ ಸ್ನೇಹವನ್ನು ಬೇರ್ಪಡಿಸುವುದು ಸಾಧ್ಯವೇ ಇಲ್ಲ ಎಂಬಂತೆ ಕಾಣಿಸುತ್ತಿದ್ದ ಈ ಜೋಡಿ ಪರಸ್ಪರ ಕಿತ್ತಾಡುವ ಹೆಜ್ಜೆಹೆಜ್ಜೆಗೂ ಜಗಳವಾಡುವ ಎದುರಾಳಿಗಳಾಗಿ ಬದಲಾದರು.

    ಬೆರ್ಚುಗೊಂಬೆಯ ತಲೆಮೇಲಿನ ಮಡಕೆ ಒಡೆಯುವ ಸಂದರ್ಭದಲ್ಲಿ ಕಾರ್ತಿಕ್, ಸಂಗೀತಾ ಚಿತ್ರವಿರುವ ಮಡಕೆಯನ್ನು ಪುಡಿಗಟ್ಟಿ, ‘ಸಂಗೀತಾ ಅವರಲ್ಲಿ ನನ್ನನ್ನು ಕಳೆದರೆ ನಾನು ಜಿರೋ ಎಂದು ಕೆಲವರ ವಾದ. ಅದು ಸುಳ್ಳು ಅಂತ ನಾನು ಪ್ರೂವ್ ಮಾಡಿ ತೋರಿಸುತ್ತೇನೆ’ ಎಂದು ಹೇಳಿದ್ದರು.

     

    ಆದರೆ ಅದಾದ ನಂತರ ಕಾರ್ತಿಕ್ ಅವರ ಗ್ರಾಫ್‌ ನಿಧಾನಕ್ಕೆ ಇಳಿಯುತ್ತಲೇ ಬಂತು. ತನಿಷಾ ಅವರನ್ನು ನಾಮಿನೇಟ್ ಮಾಡುವುದರ ಮೂಲಕ ಅವರ ಅವರ ಸ್ನೇಹದಲ್ಲಿಯೂ ಒಡಕು ಬಂದಿತು. ಅವರ ನೆಚ್ಚಿನ ಅಕ್ಕ ಸಿರಿ ಎಲಿಮಿನೇಟ್ ಆಗಿ ಮನೆಯಿಂದ ಹೊರಗೆ ಹೋದರು. ನಮ್ರತಾ ಜೊತೆಗಿನ ಅವರ ಸಂಬಂಧ ಬೇರೆಯದೇ ಆಯಾಮ ಪಡೆದುಕೊಳ್ಳುವ ಸೂಚನೆ ಸಿಕ್ಕಿತ್ತು. ಈ ಎಲ್ಲದರಿಂದ ಕಾರ್ತಿಕ್ ಮಾನಸಿಕವಾಗಿ ಕುಗ್ಗಿದ್ದು ಸುಳ್ಳಲ್ಲ. ಮನೆಯೊಳಗೆ ಒಬ್ಬಂಟಿಯಾದರು ಕೂಡ.

  • ಬಿಗ್ ಬಾಸ್ ಗೆಲ್ಲೋದು ಯಾರು?: ಎಲಿಮಿನೇಟ್ ಆದ ಸ್ಪರ್ಧಿಗಳು ಹೇಳೋದೇನು?

    ಬಿಗ್ ಬಾಸ್ ಗೆಲ್ಲೋದು ಯಾರು?: ಎಲಿಮಿನೇಟ್ ಆದ ಸ್ಪರ್ಧಿಗಳು ಹೇಳೋದೇನು?

    ಹುನಿರೀಕ್ಷಿತ ಬಿಗ್‌ಬಾಸ್‌ (Bigg Boss Kannada) ಕನ್ನಡ ಸೀಸನ್‌ 10 ಬಹುದೊಡ್ಡ ಯಶಸ್ಸಿನೊಂದಿಗೆ ಅಂತಿಮ ಹಂತಕ್ಕೆ ಬಂದು ತಲುಪಿದೆ. ಇದೇ ವಾರಾಂತ್ಯದಲ್ಲಿ ಕಿಚ್ಚ ಸುದೀಪ್‌ ಒಬ್ಬರ ಕೈಯನ್ನು ಎತ್ತಿ ಹಿಡಿಯಲಿದ್ದಾರೆ. ಬಿಗ್‌ಬಾಸ್ ಮನೆಯೊಳಗೆ ರಾರಾಜಿಸುತ್ತಿರುವ ಕಪ್ ಅವರ ಕೈ ಸೇರಲಿದೆ. ಈ ಫಿನಾಲೆ ವಾರದಲ್ಲಿ ಬಿಗ್‌ಬಾಸ್ ಮನೆಯೊಳಗೆ ಸಂಗೀತಾ, ವಿನಯ್, ಕಾರ್ತಿಕ್, ಪ್ರತಾಪ್, ತುಕಾಲಿ ಸಂತೋಷ್, ವರ್ತೂರು ಸಂತೋಷ್ ಹೀಗೆ ಒಟ್ಟು ಆರು ಸದಸ್ಯರು ಇದ್ದಾರೆ. ಅಷ್ಟೇ ಅಲ್ಲ, ಮಿಡ್‌ ವೀಕ್ ಎಲಿಮಿನೇಷನ್  (Elimination)ಇರುವುದಿಲ್ಲ ಎಂದು ನಿನ್ನೆಯ ಎಪಿಸೋಡಿನಲ್ಲಿ ಬಿಗ್‌ಬಾಸ್ ಹೇಳಿದ್ದಾರೆ. ಹಾಗಾಗಿ ಕುತೂಹಲ ಇನ್ನಷ್ಟು ಗರಿಗೆದರಿದೆ.

    ಈ ಸಲ ಯಾರು ಬಿಗ್‌ಬಾಸ್ ಗೆಲ್ಲುತ್ತಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ವಾಗ್ವಾದಗಳು ನಡೆಯುತ್ತಿವೆ. ಪ್ರತಿಯೊಬ್ಬ ಸದಸ್ಯರ ಅಭಿಮಾನಿಗಳೂ ತಮ್ಮ ನೆಚ್ಚಿನ ಸ್ಪರ್ಧಿಯ ಪರವಾಗಿ ಜೋರಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದಾರೆ. ಪ್ರತಿ ವಾರ ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಸ್ಪರ್ಧಿಗಳು ಹೊರಗೆ ಬರುತ್ತಿದ್ದ ಹಾಗೆಯೇ ಜಿಯೊಸಿನಿಮಾ ಅವರೊಂದಿಗೆ ಎಕ್ಸ್‌ಕ್ಲೂಸೀವ್ “ಬಿಗ್‌ಬ್ಯಾಂಗ್‌’ ಸಂದರ್ಶನ ಮಾಡುತ್ತಿತ್ತು. ಆ ಎಲ್ಲ ಸಂದರ್ಶನಗಳು ಜಿಯೊಸಿನಿಮಾದಲ್ಲಿ ಈಗ ಉಚಿತವಾಗಿ ವೀಕ್ಷಣೆಗೆ ಲಭ್ಯ.

    ಪ್ರತಿಯೊಬ್ಬ ಸ್ಪರ್ಧಿಯ ಬಿಗ್‌ಬ್ಯಾಂಗ್ ಸಂದರ್ಶನದಲ್ಲಿಯೂ ಕೇಳಲಾಗಿದ್ದ ಒಂದು ಸಾಮಾನ್ಯ ಪ್ರಶ್ನೆ, ‘ಈ ಸಲ ಬಿಗ್‌ಬಾಸ್‌ ಷೋದ ಅಂತಿಮ ಹಂತದಲ್ಲಿ ಇರುವ ಐವರು ಸ್ಪರ್ಧಿಗಳು ಯಾರು?’ಎಂಬುದಾಗಿತ್ತು. ಹಾಗೆಯೇ ಯಾರು ಗೆಲ್ಲಬಹುದು ಎಂಬ ತಮ್ಮ ಊಹೆಯನ್ನೂ ಹಲವು ಸ್ಪರ್ಧಿಗಳು ಈ ಸಂದರ್ಶನಗಳಲ್ಲಿ ಮಾಡಿದ್ದಾರೆ. ಈ ಎಲ್ಲ ಸ್ಪರ್ಧಿಗಳ ಊಹೆಯ ಪ್ರಕಾರ ಈ ಸಲದ ಬಿಗ್‌ಬಾಸ್‌ ಅನ್ನು ಯಾರು ಗೆಲ್ಲುತ್ತಾರೆ? ಕಪ್ ಯಾರ ಕೈಯಲ್ಲಿ ಸೇರಲಿದೆ ಎಂಬುದರ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ. ಇದು ಪೂರ್ತಿಯಾಗಿ ಜಿಯೊಸಿನಿಮಾದಲ್ಲಿ ಎವಿಕ್ಟೆಡ್ ಸ್ಪರ್ಧಿಗಳ ಊಹೆಯ ಆಧಾರದ ಮೇಲೆ ರೂಪಿಸಲಾದ ವರದಿ.

    ಈ ಸಲದ ಬಿಗ್‌ಬಾಸ್‌ ಸೀಸನ್‌ನ ಟಾಪ್‌ 5ನಲ್ಲಿ ಯಾರು ಇರುತ್ತಾರೆ ಎಂದು ಎವಿಕ್ಟೆಡ್ ಕಂಟೆಸ್ಟೆಂಟ್ಸ್‌ಗೆ ಕೇಳಲಾದ ಪ್ರಶ್ನೆಗೆ ಅವರು ನೀಡಿದ ಉತ್ತರದಲ್ಲಿ ಅತಿ ಹೆಚ್ಚು ಬಾರಿ ಉಲ್ಲೇಖಿತರಾದವರು ಸಂಗೀತಾ ಶೃಂಗೇರಿ. ಒಟ್ಟೂ ಒಂಬತ್ತು ಜನ ಎಲಿಮಿನೇಟೆಡ್ ಸ್ಪರ್ಧಿಗಳು ಜಿಯೊ ಸಿನಿಮಾ ಸಂದರ್ಶನದಲ್ಲಿ ಸಂಗೀತಾ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. ಕಾರ್ತಿಕ್ ಮಹೇಶ್ ಅವರು ಆರು ಬಾರಿ ಉಲ್ಲೇಖಿತರಾಗಿದ್ದಾರೆ. ತುಕಾಲಿ ಸಂತೋಷ್ ಕೂಡ ಆರು ಸಲವೇ ಉಲ್ಲೇಖಿತರಾಗಿ ಕಾರ್ತಿಕ್ ಸಮಕ್ಕೆ ನಿಂತಿದ್ದಾರೆ. ವಿನಯ್ ಕೂಡ ಪದೇ ಪದೇ ಉಲ್ಲೇಖಿತಗೊಂಡಿರುವ ಸ್ಪರ್ಧಿಗಳಲ್ಲಿ ಒಬ್ಬರು. ನಮ್ರತಾ, ಮೈಕಲ್, ಪವಿ, ಸ್ನೇಹಿತ್‌ ಎಲ್ಲವೂ ವಿನಯ್ ಹೆಸರನ್ನು ಉಲ್ಲೇಖಿಸಿದ್ದಾರೆ.

    ಸಂಗೀತಾ ಶೃಂಗೇರಿ

    ಅಸಮರ್ಥರಾಗಿ ಒಳಗೆ ಹೋಗಿದ್ದರೂ, ಮೊದಲ ವಾರದಿಂದಲೇ ಮನೆಯ ಕೇಂದ್ರಬಿಂದುಗಳಲ್ಲಿ ಒಬ್ಬರಾಗಿದ್ದವರು ಸಂಗೀತಾ ಶೃಂಗೇರಿ. ನಂತರದ ದಿನಗಳಲ್ಲಿಯೂ ಟಾಸ್ಕ್‌ಗಳಲ್ಲಾಗಲಿ, ಮನೆಯ ಕೆಲಸಗಳಲ್ಲಾಗಲಿ, ಚಟುವಟಿಕೆಗಳಲ್ಲಾಗಲಿ, ನಾಮಿನೇಷನ್‌ ಪ್ರಕ್ರಿಯೆಯಲ್ಲಾಗಲಿ ಸಂಗೀತಾ ಹೆಸರು ಮುಂಚೂಣಿಯಲ್ಲಿ ಇದ್ದೇ ಇರುತ್ತಿತ್ತು. ಜಿದ್ದು, ಜಗಳ, ಸ್ಟ್ರಾಟಜಿ ಎಲ್ಲದರಲ್ಲಿಯೂ ಸಂಗೀತಾ ಮುಂದಿರುತ್ತಿದ್ದರು. ಹೀಗಾಗಿಯೇ ಅವರನ್ನು ಮನೆಯೊಳಗೆ ವಿರೋಧಿಸುತ್ತಿದ್ದವರೂ ಟಾಪ್‌ 5ನಲ್ಲಿ ಅವರು ಇರುತ್ತಾರೆ ಎಂದು ಊಹಿಸಿದ್ದರು. ಭಾಗ್ಯಶ್ರೀ, ನೀತು, ಸ್ನೇಹಿತ್, ಪವಿ ಪೂವಪ್ಪ, ಅವಿನಾಶ್, ಸಿರಿ, ತನಿಷಾ ನಮೃತಾ ಇವರೆಲ್ಲರೂ ಟಾಪ್‌ 5ನಲ್ಲಿ ಇರುತ್ತಾರೆ ಎಂದು ಊಹಿಸಿದ್ದರು. ಅದರಲ್ಲಿ ತನಿಷಾ ಮತ್ತು ನಮೃತಾ  ಅವರು ಈ ಸಲದ ಬಿಗ್‌ಬಾಸ್‌ ಅನ್ನು ಸಂಗೀತಾ ಅವರೇ ಗೆಲ್ಲಬಹುದು ಎಂದು ಊಹಿಸಿದ್ದಾರೆ.

    ತುಕಾಲಿ ಸಂತೋಷ್

    ರಂಜನೆ ಮತ್ತು ತಂತ್ರಗಾರಿಕೆ ಎರಡರ ಮಿಶ್ರಣದಂತಿರುವ ತುಕಾಲಿ ಸಂತೋಷ್ ತಮ್ಮ ಜಾಣತನದಿಂದಲೇ ಬಿಗ್‌ಬಾಸ್ ಮನೆಯೊಳಗೆ ಸ್ಥಾನವನ್ನು ಭದ್ರ ಮಾಡಿಕೊಳ್ಳುತ್ತ ಬಂದರು. ವರ್ತೂರು ಸಂತೋಷ್ ಜೊತೆಗಿನ ಅವರ ಸ್ನೇಹಸಂಬಂಧವಂತೂ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಮನೆಯೊಳಗೆ ಅವರ ವರ್ತನೆ, ತಂತ್ರಗಾರಿಕೆಯನ್ನು ಗಮನಿಸಿದ ಉಳಿದ ಸದಸ್ಯರು ತುಕಾಲಿ ಟಾಪ್‌ 5ನಲ್ಲಿ ಇರುತ್ತಾರೆ ಎಂದು ಊಹಿಸಿದ್ದರು. ನಮೃತಾ, ಮೈಕಲ್, ಸಿರಿ, ಸ್ನೇಹಿತ್, ಭಾಗ್ಯಶ್ರೀ  ಮತ್ತು ನೀತು ಅವರು ತುಕಾಲಿ ಅವರನ್ನು ಟಾಪ್‌ 5ನಲ್ಲಿ ನೋಡುತ್ತೇವೆ ಎಂದು ಹೇಳಿದ್ದರು. ಅವರ ಊಹೆಯಂತೆ ತುಕಾಲಿ ಟಾಪ್‌6ನಿಂದ ಟಾಪ್‌ 5ಗೆ ಜಿಗಿಯುತ್ತಾರೆ ಎಂದು ಕಾದುನೋಡಬೇಕಷ್ಟೆ.

    ಕಾರ್ತಿಕ್ ಮಹೇಶ್‌

    ಲವಲವಿಕೆಯ ವ್ಯಕ್ತಿತ್ವ, ಎಲ್ಲದರಲ್ಲಿಯೂ ಪಾಲ್ಗೊಳ್ಳುವ ಉತ್ಸಾಹ, ಸ್ನೆಹಪರ, ಭಾವುಕ ಮನಸ್ಸು ಈ ಎಲ್ಲವೂ ಕಾರ್ತಿಕ್ ಮಹೇಶ್ ಅವರನ್ನು ಮನೆಯ ಬಹುತೇಕ ಸದಸ್ಯರ ಮನಸಲ್ಲಿ ಸ್ಥಾನ ಪಡೆಯುವಂತೆ ಮಾಡಿದ್ದವು. ಕಾರ್ತಿಕ್ ಅವರನ್ನು ಫೇಕ್‌ ಎಂದು ಉಳಿದ ಸದಸ್ಯರು ಉಲ್ಲೇಖಿಸಿದ್ದು ತುಂಬವೇ ವಿರಳ. ಇದು ಅವರ ವ್ಯಕ್ತಿತ್ವದ ಇನ್ನೊಂದು ಆಯಾಮವನ್ನು ಸೂಚಿಸುವಂತಿದೆ. ತನಿಷಾ, ಮೈಕಲ್, ಪವಿ, ಸಿರಿ, ಸ್ನೇಹಿತ್, ಭಾಗ್ಯಶ್ರೀ, ನೀತು ಅವರುಕಾರ್ತಿಕ್ ಅವರನ್ನು ಟಾಪ್ 5ನಲ್ಲಿ ನೋಡುತ್ತೇವೆ ಎಂದು ಊಹಿಸಿದ್ದರು. ಅದರಲ್ಲಿಯೂ ಮನೆಯೊಳಗೆ ಆಪ್ತಸ್ನೇಹವನ್ನು ಕಾಪಾಡಿಕೊಂಡಿದ್ದ ತನಿಷಾ ಅವರು, ‘ಕಾರ್ತಿಕ್ ಗೆಲ್ಲಬೇಕು ಎಂಬ ಆಸೆ ಇದೆ.  ಆದರೆ ಸಂಗೀತಾ ಗೆಲ್ಲಬಹುದು ಅನಿಸುತ್ತಿದೆ’ ಎಂದು ಹೇಳಿದ್ದರು. ಸಿರಿ ಕೂಡ,  ‘ಕಾರ್ತಿಕ್ ಗೆಲ್ಲಬೇಕು’ ಎಂದು ಹೇಳಿದ್ದರು. ಅದಕ್ಕೆ ಕಾರಣ ಕಾರ್ತೀಕ್ ಜೆನ್ಯೂನ್‌ ಎಂಬುದು.


    ವಿನಯ್ ಗೌಡ

    ‘ಐ ಆಮ್ ವಿಲನ್’ ಎನ್ನುತ್ತಲೇ ಒಳಹೋದ ವಿನಯ್ ಗೌಡ ಮನೆಯೊಳಗಿನ ಹಲವರ ಪಾಲಿಗೆ ಹೀರೊ ಆಗಿದ್ದೂ ಸತ್ಯ. ಒಂದು ಹಂತದಲ್ಲಿಯಂತೂ ಸ್ವತಃ ಸುದೀಪ್‌ ಅವರೇ, ‘ನಮ್ಮ ಕಣ್ಣಿಗೆ ಒಬ್ಬರು ಮಾತ್ರ ಫಿನಾಲೆ ವೀಕ್‌ಗೆ ಹೋಗುವ ಕಂಟೆಸ್ಟೆಂಟ್ ಆಗಿ ಕಾಣಿಸುತ್ತಿದ್ದಾರೆ. ಉಳಿದವರು ಅವರನ್ನು ಗೆಲ್ಲಿಸಲು ಪ್ರಯತ್ನಿಸುತ್ತಿರುವ ಹಾಗೆ ಕಾಣಿಸುತ್ತಿದೆ’ ಎಂದೇ ನೇರವಾಗಿ ಹೇಳಿದ್ದರು. ಅವರು ಹೇಳಿದ್ದು ವಿನಯ್ ಅವರ ಬಗ್ಗೆಯೇ. ನಂತರದ ವಾರಗಳಲ್ಲಿಈ ಲೆಕ್ಕಾಚಾರ ಬದಲಾಯಿತಾದರೂ, ವಿನಯ್ ಅವರು ತಮ್ಮದೇ ದಾರಿಯಲ್ಲಿ ಮುಂದೆ ನಡೆಯುತ್ತಲೇ ಬಂದರು. ಜಿಯೊಸಿನಿಮಾ ಸಂದರ್ಶನಗಳಲ್ಲಿ ನಮ್ರತಾ, ಮೈಕಲ್, ಪವಿ, ಸ್ನೇಹಿತ್‌ ಎಲ್ಲವೂ ವಿನಯ್ ಹೆಸರನ್ನು ಉಲ್ಲೇಖಿಸಿದ್ದಾರೆ. ಮೈಕಲ್‌, ನಮೃತಾ ಮತ್ತು ಸ್ನೇಹಿತ್ ‘ವಿನಯ್ ಗೆಲ್ಲಬೇಕು ಎಂಬುದು ನನ್ನ ಆಸೆ’ ಎಂದು ಹೇಳಿಕೊಂಡಿದ್ದಾರೆ.  ಮನೆಯಿಂದ ಹೊರಬಂದ ಸ್ಪರ್ಧಿಗಳ ಊಹೆ ಏನೇ ಇದ್ದರೂ ಅದು ಊಹೆ ಮಾತ್ರವೇ. ಅದು ನಿರ್ಧಾರಾತ್ಮಕ ಅಲ್ಲವೇ ಅಲ್ಲ. ಯಾಕೆಂದರೆ ಕೊನೆಗೂ ಒಬ್ಬ ಸ್ಪರ್ಧಿ ಬಿಗ್‌ಬಾಸ್ ಗೆಲ್ಲಲು ಸಾಧ್ಯವಾಗುವುದು ಜನರ ವೋಟ್‌ನಿಂದ. ಮನೆಯಿಂದಾಚೆಗೆ ಜನರ ಕಣ್ಣಿಗೆ ಅವರ ವ್ಯಕ್ತಿತ್ವ ಹೇಗೆ ಕಾಣಿಸುತ್ತಿದೆ, ಅದನ್ನು ಅವರು ಎಷ್ಟು ಮೆಚ್ಚಿಕೊಳ್ಳುತ್ತಿದ್ದಾರೆ, ಆ ಮೆಚ್ಚುಗೆ ಎಷ್ಟರಮಟ್ಟಿಗೆ ಮತಗಳಾಗಿ ಬದಲಾಗುತ್ತಿವೆ ಎನ್ನುವುದೇ ಗೆಲುವಿನ ನಿರ್ಣಾಯಕ ಸಂಗತಿ. ಹಾಗೆ ನೋಡಿದಾಗ, ಮನೆಯೊಳಗೆ ಉಳಿದಿರುವ ಪ್ರತಾಪ್, ವರ್ತೂರು ಸಂತೋಷ್ ಅವರ ಜನಪ್ರಿಯತೆ ಏನೂ ಕಮ್ಮಿಯದಲ್ಲ. ಹಾಗಾಗಿ ಎಲಿಮಿನೇಟೆಡ್ ಸ್ಪರ್ಧಿಗಳ ಊಹೆಯನ್ನು ಸುಳ್ಳಾಗಿಸಿ ಇವರಿಬ್ಬರಲ್ಲಿ ಒಬ್ಬರು ‘ಈ ಸಲ ಕಪ್ ನಮ್ದೆ’ ಎಂದು ಗೆಲುವಿನ ನಗು ಬೀರಿದರೂ ಅಚ್ಚರಿಯಿಲ್ಲ.

     

    ಈ ಎಲ್ಲ ಊಹೆ, ನಿರೀಕ್ಷೆ, ಆತಂಕಗಳಿಗೆ ಉತ್ತರ ಸಿಗಲು ತುಂಬ ಕಾಯಬೇಕಾಗಿಲ್ಲ. ಈ ಭಾನುವಾರ ನಡೆಯಲಿರುವ ಫಿನಾಲೆಯಲ್ಲಿ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ. ಫಿನಾಲೆಯ ನೇರಪ್ರಸಾರ ಜಿಯೊಸಿನಿಮಾದಲ್ಲಿ ವೀಕ್ಷಿಸಬಹುದು.

  • ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಸಂಗೀತಾ

    ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಸಂಗೀತಾ

    ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ನಡೆದ ಟಾಸ್ಕ್ ನಲ್ಲಿ ಮನೆ ಮಂದಿ ಮನ ಬಿಚ್ಚಿ ಮಾತನಾಡಿದ್ದಾರೆ. ಮನಸುಗಳ ಜೊತೆ ಮಾತನಾಡಿದ್ದಾರೆ. ಜಗತ್ತಿನೆದುರು ಎಷ್ಟಾದರೂ ಸುಳ್ಳು ಹೇಳಬಹುದು, ತಮ್ಮನ್ನು ತಾವು ಬೇರೆ ಏನೋ ಆಗಿ ಪ್ರೊಜಕ್ಟ್ ಮಾಡಿಕೊಳ್ಳಬಹುದು. ಆಕ್ಟ್ ಮಾಡಬಹುದು, ಯಾಮಾರಿಸಬಹುದು. ಆದರೆ ಆತ್ಮಸಾಕ್ಷಿಯ ಕನ್ನಡಿಯ ಎದುರು ನಿಂತಾಗ ನಮಗೆ ಎದುರಾಗುವುದು ಸುತ್ತಲಿನ ಜಗತ್ತಲ್ಲ. ಅಲ್ಲಿನ ಜೈಕಾರ, ಹೀಗಳಿಕೆಗಳಲ್ಲ. ಹೊಗಳಿಕೆ ತೆಗಳಿಕೆಗಳಲ್ಲ… ಬದಲಾಗಿ ಆತ್ಮಸಾಕ್ಷಿಯ ಕನ್ನಡಿಯ ಎದುರು ಕಾಣಿಸುವುದು ನಮ್ಮ ಚಿತ್ರವೇ. ಅದು ನಮ್ಮೊಳಗಿನ ನಿಜದ ಚಿತ್ರ. ಅಲ್ಲಿ ನಮ್ಮ ಚಿತ್ರದ ಜೊತೆಗೆ ಕಾಣಿಸುವುದು ಹೊರಜಗತ್ತಿನೆದುರು ನಾವು ನಡೆದುಕೊಂಡ ರೀತಿ. ಅದು ಪ್ರಾಮಾಣಿಕವಾಗಿದ್ದರೆ ಹೂವಂತೆ ನೇವರಿಸುತ್ತದೆ. ಅಪ್ರಾಮಾಣಿಕವಾಗಿದ್ದರೆ ಮುಳ್ಳಂತೆ ಚುಚ್ಚುತ್ತದೆ. ಇಂಥದ್ದೊಂದು ಆತ್ಮಸಾಕ್ಷಿಯ ಕನ್ನಡಿ ಈಗ ಬಿಗ್‌ಬಾಸ್‌ ಮನೆಯ ಫಿನಾಲೆ ವಾರದ ಆರು ಸ್ಪರ್ಧಿಗಳ ಎದುರಿಗೆ ಇಡಲಾಗಿದೆ. ಆಗ ಅವರ ರಿಯಾಕ್ಷನ್ ಹೇಗಿತ್ತು ಎಂಬುದು ಬಿಡುಗಡೆ ಮಾಡಿದ ಪ್ರೋಮೊದಲ್ಲಿ ಸೆರೆಯಾಗಿದೆ.

    ಫಿನಾಲೆಗೆ ಇನ್ನೆರಡೇ ದಿನ ಬಾಕಿ ಇರುವಾಗ ಬಿಗ್‌ಬಾಸ್ ಸ್ಪರ್ಧಿಗಳು ತಮ್ಮ ದೇಹದೊಟ್ಟಿಗೆ ಮನಸ್ಸನ್ನೂ ಕಾಣಿಸುವ ಆಳೆತ್ತರದ ಕನ್ನಡಿಯೆದುರು ಕೂತಿದ್ದಾರೆ. ವಿನಯ್ ಗೌಡ ತಮ್ಮ ಬಿಂಬವನ್ನು ನೋಡಿಕೊಂಡು, ‘ಹಲೋ ಮಿಸ್ಟರ್ ವಿನಯ್ ಗೌಡ’ ಎಂದು ಕರೆದುಕೊಂಡಿದ್ದಾರೆ. ‘ಈ ಮನೆಯಲ್ಲಿ ಜಾಸ್ತಿ ಮಾತಾಡಿರುವುದು ನಿನ್ ಜೊತೆ. ಯಾರೂ ಜೊತೆಗಿಲ್ಲದಿರುವಾಗ ನೀನು ಇರ್ತೀಯಾ. ನನ್ನನ್ನು ನಾನು ಹುಡುಕಿಕೊಂಡಿದೀನಿ. ಐ ಆಮ್ ವೆರಿ ಪ್ರೌಢ್ ಆಫ್ ಯು’ ಎಂದು ಸಂಗೀತಾ ತಮ್ಮ ಬಿಂಬದ ಎದುರು ಸ್ವಗತವಾಡುತ್ತ ಕಣ್ಣೀರಾಗಿದ್ದಾರೆ.

    ಹೌದು, ಸಂಗೀತಾ (Sangeetha) ಕನ್ನಡ ಮುಂದೆ ಕುಂತಾಗ ತುಸು ಭಾವುಕರೇ ಆಗಿದ್ದರು. ಹಲವಾರು ಸಂಗತಿಗಳನ್ನು ಮೊದಲಿಗೆ ನೆನಪಿಸಿಕೊಂಡರು. ಬಿಗ್ ಬಾಸ್ ಮನೆಯಲ್ಲಿ ತಮ್ಮೊಂದಿಗೆ ಜೊತೆಯಾಗಿ ಇದ್ದವರು ಯಾರು ಎನ್ನುವುದನ್ನು ಮನನ ಮಾಡಿಕೊಂಡರು. ಕೊನೆಗೆ ತಮ್ಮ ಬಿಂಬಿದೊಂದಿಗೆ ತಾವೇ ಮಾತನಾಡಿದರು. ನಕ್ಕರು, ದುಃಖಿಸಿದರು, ತಮ್ಮನ್ನು ತಾವೇ ಹೊಗಳಿಕೊಂಡು ಬೆನ್ನು ಚಪ್ಪರಿಸಿಕೊಂಡರು.

     

    ‘ನನ್ನನ್ನು ನಾನೇ ನೋಡಿಕೊಂಡಾಗ ಕೆಲವು ಸಂಗತಿಗಳು ಮನಸಲ್ಲಿ ಚುಚ್ಚುತ್ತವೆ’ ಎಂದು ಪ್ರತಾಪ್ ಓಪನ್‌ಅಪ್ ಆಗಿದ್ದಾರೆ. ‘ಫ್ರೆಂಡ್‌ಷಿಪ್‌ನ ಯೂಸ್ ಮಾಡ್ಕೊತಾನೆ ಅಂತಾರೆ’ ಎಂದು ಇಲ್ಲ ಎನ್ನುವಂತೆ ತಲೆಯಾಡಿಸಿದ್ದಾರೆ ಕಾರ್ತಿಕ್. ಇಷ್ಟು ದಿನಗಳಲ್ಲಿ ಕಟ್ಟಿಕೊಂಡ ತಮ್ಮದೇ ವ್ಯಕ್ತಿಚಿತ್ರಗಳನ್ನು ಕನ್ನಡಿಯೆದುರು ಕಂಡ ವಿಶಿಷ್ಟ ಗಳಿಗೆಗೆ ಬಿಗ್‌ಬಾಸ್‌ ಸ್ಪರ್ಧಿಗಳು ಕರಗಿದ್ದಾರೆ. ತಮ್ಮನ್ನು ತಾವು ತೆರೆದುಕೊಂಡಿದ್ದಾರೆ. ಈ ಭಾವುಕ ಕ್ಷಣಗಳು ನಿಜಕ್ಕೂ ಭಾವುಕರನ್ನಾಗಿ ಮಾಡಿಸುತ್ತವೆ.

  • Bigg Boss: ಟೀಕಿಸಿದ ನಮ್ರತಾ, ಸಂಗೀತಾಗೆ ತಿರುಗೇಟು ಕೊಟ್ಟ ಕಾರ್ತಿಕ್

    Bigg Boss: ಟೀಕಿಸಿದ ನಮ್ರತಾ, ಸಂಗೀತಾಗೆ ತಿರುಗೇಟು ಕೊಟ್ಟ ಕಾರ್ತಿಕ್

    ದೊಡ್ಮನೆಯಲ್ಲಿ ಕಾರ್ತಿಕ್ ಮಹೇಶ್ (Karthik Mahesh) ಅವರು ಸ್ಟ್ರಾಂಗ್‌ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಕಾರ್ತಿಕ್ ಆಟದಲ್ಲಿ ಎಡವಿದ್ದಾರೆ. ಹಾಗಾಗಿಯೇ ವೀಕೆಂಡ್ ಪಂಚಾಯಿತಿಯಲ್ಲಿ ಕಾರ್ತಿಕ್ ಕುಗ್ಗಿದ್ದಾರಾ? ಎಂಬ ಪ್ರಶ್ನೆಯನ್ನು ಸುದೀಪ್ ಮನೆ ಮಂದಿಗೆ ಕೇಳಿದ್ದಾರೆ. ಕಾರ್ತಿಕ್‌ ಆಟಕ್ಕೆ ಸಂಗೀತಾ- ನಮ್ರತಾ (Namratha) ಹೌದು ಅವರು ಕುಗ್ಗಿದ್ದಾರೆ ಎಂದು ಟೀಕಿಸಿದ್ದಾರೆ. ಅದಕ್ಕೆ, ಕಾರ್ತಿಕ್ ಕೂಡ ಖಡಕ್ ಆಗಿ ಉತ್ತರಿಸಿದ್ದಾರೆ.

    ಬಿಗ್ ಬಾಸ್ (Bigg Boss Kannada 10) ಆಟ ಶುರುವಾದಾಗ ಸಂಗೀತಾ (Sangeetha Sringeri) ಜೊತೆ ಕಾರ್ತಿಕ್ ಅವರು ಆಪ್ತವಾಗಿದ್ದರು. ಅನೇಕ ಟಾಸ್ಕ್‌ಗಳಲ್ಲಿ ಸಂಗೀತಾ-ಕಾರ್ತಿಕ್ ಒಬ್ಬರಿಗೊಬ್ಬರು ಸಪೋರ್ಟ್ ಮಾಡುತ್ತಿದ್ದರು. ಇಬ್ಬರ ನಡುವೆ ಆದ ಮನಸ್ತಾಪದ ಬಳಿಕ ಕಾರ್ತಿಕ್ ಅವರು ನಮ್ರತಾ ಜೊತೆ ಸ್ನೇಹ ಬೆಳೆಸಿದರು. ಈಗ ಆ ಸ್ನೇಹ ಕೂಡ ಅಂತ್ಯವಾಗಿದೆ. ಈ ವಿಚಾರದಲ್ಲಿ ಕಾರ್ತಿಕ್ ಅವರನ್ನು ಸಂಗೀತಾ ಮತ್ತು ನಮ್ರತಾ ಟೀಕಿಸಿದ್ದಾರೆ. ಲಾಭಕ್ಕಾಗಿ ನನ್ನ ಸ್ನೇಹ ಬಳಸಿಕೊಂಡರು ಎಂದು ನಮ್ರತಾ ನೇರವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ನೀವಿಲ್ಲ ಅಂದ್ರೆ ಈ ಸೀಸನ್ ಅಪೂರ್ಣ- ಸಂಗೀತಾ, ವಿನಯ್‌ಗೆ ಕಿಚ್ಚನ ಚಪ್ಪಾಳೆ

    ದೊಡ್ಮನೆಯಲ್ಲಿ ಒಬ್ಬರ ಜೊತೆ ಸ್ನೇಹ ಮೂಡುವುದು, ಬಳಿಕ ಆ ಸ್ನೇಹ ಅಂತ್ಯವಾಗುವುದು ಸಹಜ. ಆದರೂ ಅವರ ವರ್ತನೆಯನ್ನು ಸಂಗೀತಾ, ನಮ್ರತಾ ಮಾತಿನ ಮೂಲಕ ತಿವಿದಿದ್ದಾರೆ. ಕಾರ್ತಿಕ್‌ಗೆ ಒಂಟಿಯಾಗಿ ಇರಲು ಸಾಧ್ಯವಿಲ್ಲ ಎಂದು ಸಂಗೀತಾ ಮತ್ತು ನಮ್ರತಾ ಹೇಳಿದ್ದಾರೆ. ಒಂದು ವೇಳೆ ಒಂಟಿಯಾಗಿದ್ದರೆ ಯಾರ ಜೊತೆಯೂ ಸೇರುವುದಿಲ್ಲ ಎಂಬ ಕಾರಣ ನೀಡಿ ನಾಮಿನೇಟ್ ಮಾಡುವ ಸಾಧ್ಯತೆಯೂ ಇರುತ್ತದೆ. ಹಾಗಾಗಿ ಜೊತೆಗೆ ಇದ್ದರೂ ಕಷ್ಟ, ಒಬ್ಬರೇ ಇದ್ದರೂ ಕಷ್ಟ ಎಂಬ ಪರಿಸ್ಥಿತಿ ಕಾರ್ತಿಕ್ ಅವರದ್ದಾಗಿದೆ ಎಂದಿದ್ದಾರೆ.

    ನಾನು ಕುಗ್ಗಿದ್ದು ನಿಜ. ಆದರೆ ದೈಹಿಕವಾಗಿ ಅಲ್ಲ, ಮಾನಸಿಕವಾಗಿ ಅಷ್ಟೇ. ಆಟದಿಂದ ನಾನು ಡೈವರ್ಟ್ ಆಗಿಲ್ಲ. ಆದರೆ ಅವರ ಆಟ ಕುಗ್ಗಿದಾಗ ನಾನು ನಾಮಿನೇಟ್ ಮಾಡೋದು ಸಹಜ ಎಂದು ಕಾರ್ತಿಕ್ ಖಡಕ್‌ ಆಗಿ ಮಾತನಾಡಿದ್ದಾರೆ. ಸಂಗೀತಾ, ನಮ್ರತಾ, ತನಿಷಾ ಜೊತೆಗಿನ ಸ್ನೇಹ ಅಂತ್ಯವಾದ ಬಳಿಕ ಕಾರ್ತಿಕ್ ಅವರು ತುಕಾಲಿ ಸಂತೋಷ್- ವರ್ತೂರು ಸಂತೋಷ್ ಜೊತೆ ಹೆಚ್ಚು ಕಾಲ ಕಳೆಯಲು ಆರಂಭಿಸಿದ್ದಾರೆ.

  • ‘ಬಿಗ್ ಬಾಸ್’ನಲ್ಲಿ ಭಾರೀ ಟ್ವಿಸ್ಟ್: ಫಿನಾಲೆಗೆ ಟಿಕೆಟ್ ಪಡೆದ ಸಂಗೀತ

    ‘ಬಿಗ್ ಬಾಸ್’ನಲ್ಲಿ ಭಾರೀ ಟ್ವಿಸ್ಟ್: ಫಿನಾಲೆಗೆ ಟಿಕೆಟ್ ಪಡೆದ ಸಂಗೀತ

    ವರೆಗೂ ಡೈರೆಕ್ಟ್ ಆಗಿ ಫಿನಾಲೆ (Finale) ಹೋಗುವಂತಹ ಅವಕಾಶವನ್ನು ಬಿಗ್ ಬಾಸ್ (Big Boss) ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಬಿಗ್ ಬಾಸ್ ಇನ್ನೂ ಎರಡು ವಾರಗಳ ಕಾಲ ಇರುವಾಗಲೇ ನೇರವಾಗಿ ಫಿನಾಲೆ ವೇದಿಕೆಗೆ ಒಬ್ಬ ಕಂಟೆಸ್ಟೆಂಟ್ ಹೋಗುವಂತಹ ಅವಕಾಶವನ್ನು ನೀಡಿದ್ದಾರೆ. ಅದಕ್ಕಾಗಿಯೇ ಟಿಕೆಟ್ ಟು ಫಿನಾಲೆ ಟಾಸ್ಕ್ ನೀಡಿದ್ದಾರೆ. ಈ ಟಾಸ್ಕ್ ನಲ್ಲಿ ಬಹುತೇಕರು ವೈಯಕ್ತಿಕವಾಗಿ ಆಡಬೇಕಾಗಿದ್ದರಿಂದ ಪ್ರತಿ ಟಾಸ್ಕ್ ಕೂಡ ರೋಚಕವಾಗಿದ್ದವು.

    ವಾರ ಪೂರ್ತಿ ನಡೆದ ಟಿಕೆಟ್ ಟು ಟಾಸ್ಕ್‌ನಲ್ಲಿ ಪ್ರತಿ ನಾಲ್ವರು ಆಡಬೇಕಿತ್ತು. ಸರದಿ ಬಂದಾಗ ಪ್ರತಿ ಆಟಗಾರ ಕೂಡ ತನ್ನೊಂದಿಗೆ ಆಡಲು ಮೂವರು ಎದುರಾಳಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಿತ್ತು. ಹೀಗೆ ಎಂಟು ರೌಂಡ್ಸ್‌ನಲ್ಲಿ ಆಟ ನಡೆದಿತ್ತು. ಎಂಟು ಸ್ಪರ್ಧಿಗಳಿಗೂ ಅಂಕಗಳನ್ನು ನೀಡಲಾಗಿತ್ತು. ಹೆಚ್ಚು ಯಾರು ಅಂಕ ಪಡೆಯುತ್ತಾರೋ ಅವರೇ ಫಿನಾಲೆಯ ಟಿಕೆಟ್ ಪಡೆಯುತ್ತಾರೆ ಎನ್ನುವುದು ಬಿಗ್ ಬಾಸ್ ನಿಯಮವಾಗಿತ್ತು.

    ಇಂದು ಬೆಳಗ್ಗೆ ವಾಹಿನಿಯು ಪ್ರೋಮೋವೊಂದನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಪ್ರತಾಪ್ ಅವರೇ ಟಾಪ್ ಎಂದು ತೋರಿಸಲಾಗಿದೆ. ಜೊತೆಗೆ ಆಟದಿಂದ ಸಂಗೀತಾ (Sangeetha) ಅವರನ್ನು ಪ್ರತಾಪ್ ಹೊರಗಿಟ್ಟ ಕಾರಣದಿಂದಾಗಿ ಸಂಗೀತಾ ಫಿನಾಲೆಗೆ ಬರುವುದಿಲ್ಲ ಎನ್ನುವಂತೆ ಬಿಂಬಿಸಲಾಗಿದೆ. ಆದರೆ, ಸಿಕ್ಕಿರುವ ಮಾಹಿತಿಯ ಪ್ರಕಾರ ಫಿನಾಲೆಗೆ ಹೋಗುವ ಟಿಕೆಟ್ ಅನ್ನು ಸಂಗೀತಾ ಪಡೆದಿದ್ದಾರೆ. ಪ್ರತಾಪ್ 280 ಅಂಕ ಪಡೆದಿರುವ ಮತ್ತು ಸಂಗೀತಾ 260 ಪಾಯಿಂಟ್ ಇರುವ ಬೋರ್ಡ್ ಅನ್ನು ತೋರಿಸಲಾಗಿದ್ದರೂ, ಕೊನೆಗೊಂದು ಟ್ವಿಸ್ಟ್ ನೀಡಲಾಗಿತ್ತಂತೆ.

    ಈ ವಾರ ಕ್ಯಾಪ್ಟನ್ಸಿಗಾಗಿ ಟಾಸ್ಕ್ ವೊಂದನ್ನು ಬಿಗ್ ಬಾಸ್ ನೀಡಿದ್ದರು. ಕ್ಯಾಪ್ಟನ್ಸಿ ಟಾಸ್ಕ್ ಜೊತೆ ಫಿನಾಲೆ ಟಿಕೆಟ್ ಟಾಸ್ಕ್ ಕೂಡ ಜೋಡಿಸಿದ್ದಾರೆ. ಈ ವೇಳೆಯಲ್ಲಿ ಅತೀ ಹೆಚ್ಚು ಅಂಕ ಪಡೆಯುವ ಮೂಲಕ ಸಂಗೀತಾ ಫಿನಾಲೆ ಟಿಕೆಟ್ ಪಡೆದಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಇದು ನಿಜವಾ? ಅಥವಾ ಸುಳ್ಳಾ? ಎಂದು ಖಾತರಿ ಆಗಲಿ ಇಂದು ರಾತ್ರಿವರೆಗೂ ಕಾಯಬೇಕಿದೆ.

  • ಡ್ರೋನ್ ಜೊತೆಗಿನ ಫ್ರೆಂಡ್ ಶಿಪ್ ಕಟ್ ಎಂದ ಸಂಗೀತಾ

    ಡ್ರೋನ್ ಜೊತೆಗಿನ ಫ್ರೆಂಡ್ ಶಿಪ್ ಕಟ್ ಎಂದ ಸಂಗೀತಾ

    ಬಿಗ್ ಬಾಸ್ (Big Boss Kannada) ಮನೆಯಲ್ಲಿ ಫಿನಾಲೆ ಸಮೀಪಿಸುತ್ತಿದ್ದಂತೆಯೇ ಬಿಗ್‌ಬಾಸ್ ಮನೆಯೊಳಗಿನ ಸಂಬಂಧಗಳ ಬಣ್ಣಗಳೆಲ್ಲ ಮಾಸುತ್ತಿವೆ. ಗೆಲುವಿನ ಗುರಿಯೊಂದೇ ಎಲ್ಲರ ಕಣ್ಣಮುಂದೆ ಹೊಳೆಯುತ್ತಿದೆ. ಹಿಂದಿನ ಎಪಿಸೋಡ್‌ನಲ್ಲಿ ನಮ್ರತಾ ಅವರು ವಿನಯ್ ಅವರನ್ನು ಆಟದಿಂದ ಕೈಬಿಟ್ಟಾಗಲೇ ಇಂಥದೊಂದು ಸೂಚನೆ ಕಾಣಿಸಿಕೊಂಡಿತ್ತು. ಈಗ ಅಂಥದ್ದೇ ಇನ್ನೊಂದು ಘಟನೆ ಬಿಗ್‌ಬಾಸ್ ಮನೆಯೊಳಗೆ ನಡೆದಿದೆ. ಅದರ ಸೂಚನೆ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಕಾಣಿಸಿಕೊಂಡಿದೆ.

    ಅತಿ ಹೆಚ್ಚು ಅಂಕ ಗಳಿಸಿಕೊಂಡವರಲ್ಲಿ ಸಂಗೀತಾ (Sangeetha) ಮತ್ತು ಪ್ರತಾಪ್ (Drone Pratap) ಮಧ್ಯೆ ಪೈಪೋಟಿ ಇತ್ತು. ನಿನ್ನೆ ಒಂದು ಟಾಸ್ಕ್ ನಲ್ಲಿ ಗೆಲುವು ಕಂಡು ನಮ್ರತಾ ಕೂಡ ರೇಸ್‌ಗೆ ಬಂದಿದ್ದರು. ಮೊದಲ ಕೆಲವು ಟಾಸ್ಕ್‌ಗಳಲ್ಲಿ ಉತ್ತಮವಾಗಿ ಆಡಿದ ವರ್ತೂರು ಸಂತೋಷ್ ಕೂಡ ಇನ್ನೂರರ ಗಡಿ ದಾಟಿದ್ದಾರೆ. ಈ ಹಂತದಲ್ಲಿ ಪ್ರತಾಪ್ ಅವರಿಗೆ ತಮ್ಮ ಎದುರಾಳಿಗಳನ್ನು ಆಯ್ದುಕೊಳ್ಳುವ ಅಧಿಕಾರವನ್ನು ಬಿಗ್‌ಬಾಸ್ ನೀಡಿದ್ದಾರೆ. ಪ್ರತಾಪ್ ಅವರು ಸಂಗೀತಾ ಅವರನ್ನೂ ಆರಿಸಿಕೊಂಡಿದ್ದಾರೆ. ಆದರೆ ಮೊದಲ ಹಂತದಲ್ಲಿ ಯಾರನ್ನಾದರೂ ಹೊರಗಿಡುವ ಸಂದರ್ಭದಲ್ಲಿ ಸಂಗೀತಾ ಅವರನ್ನೇ ಆಟದಿಂದ ಹೊರಗಿಟ್ಟಿದ್ದಾರೆ.

    ಸಂಗೀತಾ ದೀದಿ ಎಂದು ಯಾವಾಗಲೂ ಜೊತೆಗಿರುತ್ತಿದ್ದ ಪ್ರತಾಪ್ ಅವರೇ ಅವರನ್ನು ಹೊರಗಿಟ್ಟಿದ್ದು ಸಂಗೀತಾ ಅವರನ್ನು ದಿಗ್ಭ್ರಮೆಗೊಳಿಸಿದೆ. ‘ಇನ್ನೂ ಅವನನ್ನು ಬೆಂಬಲಿಸುತ್ತ ಬಂದೆನಲ್ಲ, ನಾನೆಂಥ ದಡ್ಡಿ’ ಎಂದು ಅವರು ತಮ್ಮನ್ನು ತಾವೇ ಹಳಿದುಕೊಂಡಿದ್ದಾರೆ. ಪ್ರತಾಪ್ ಹೀಗೆ ಮಾಡಬಾರದಿತ್ತು ಎಂದು ಶಪಿಸಿದ್ದಾರೆ. ಡ್ರೋನ್ ಹೀಗೆ ಮಾಡ್ತಾನೆ ಅಂತ ಕಂಡಿತಾ ಅಂದುಕೊಂಡಿರಲಿಲ್ಲ ಎಂದು ಕೋಪಿಸಿಕೊಂಡಿದ್ದಾರೆ.

     

    ಹೌದು, ಬಿಗ್ ಬಾಸ್ ಮನೆ ಫಿನಾಲೆಗೆ ಸಮೀಪಿಸುತ್ತಿದ್ದಂತೆಯೇ ಸಂಬಂಧಗಳು ಹಳಸ ತೊಡಗಿವೆ. ಗೆಲುವು ಒಂದೇ ಕಣ್ಮುಂದೆ ಕುಣಿಯುತ್ತಿದೆ. ಹಾಗಾಗಿ ಕೇವಲ ಸಂಗೀತ ಮತ್ತು ಡ್ರೋನ್ ಪ್ರತಾಪ್ ಬಾಂಧವ್ಯ ಮಾತ್ರವಲ್ಲ, ಕುಚಿಕು ಗೆಳೆಯರಂತಿದ್ದ ವರ್ತೂರು ಸಂತೋಷ್ ಮತ್ತು ತುಕಾಲಿ ಸಂತು ನಡುವೆಯೂ ಬಿರುಕು ಕಾಣಿಸಿಕೊಂಡಿದೆ. ಇಬ್ಬರ ಫ‍್ರೆಂಡ್ ಶಿಪ್ ಕಟ್ ಆಗಿದೆ. ಇದೆಲ್ಲ ಮುಂದಿನ ದಿನಗಳಲ್ಲಿ ಇನ್ನ್ಯಾವ ಹಂತಕ್ಕೆ ಹೋಗುತ್ತೋ ಕಾದು ನೋಡಬೇಕು.