Tag: sanjana burli

  • ಸ್ಟೈಲೀಶ್ ಆದ ಸಂಜನಾ ಬುರ್ಲಿ ಲುಕ್‌ಗೆ ಪಡ್ಡೆಹುಡುಗರು ಫಿದಾ

    ಸ್ಟೈಲೀಶ್ ಆದ ಸಂಜನಾ ಬುರ್ಲಿ ಲುಕ್‌ಗೆ ಪಡ್ಡೆಹುಡುಗರು ಫಿದಾ

    ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಸೀರಿಯಲ್ ಖ್ಯಾತಿಯ ಸಂಜನಾ ಬುರ್ಲಿ (Sanjana Burli) ಅವರು ಬೋಲ್ಡ್ ಅವತಾರದಲ್ಲಿ ಕಾಣಿಕೊಂಡಿದ್ದಾರೆ. ನಟಿಯ ನಯಾ ಲುಕ್ ನೋಡಿ ಪಡ್ಡೆಹುಡುಗರು ಫಿದಾ ಆಗಿದ್ದಾರೆ.  ಇದನ್ನೂ ಓದಿ:ತಂದೆಯ ಮೊದಲ ಬೈಕ್ ಏರಿ ಸಲ್ಮಾನ್ ಖಾನ್ ಫೋಟೋಶೂಟ್

    ಕಂಠಿ ಮನದರಸಿ ಸ್ನೇಹಾ ಪಾತ್ರಕ್ಕೆ ಗುಡ್ ಬೈ ಹೇಳಿದ್ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಸಂಜನಾ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸದಾ ಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯೋ ಸಂಜನಾ ಇದೀಗ ಪಿಂಕ್ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣ ಸ್ಕರ್ಟ್ ಧರಿಸಿ ಮಿಂಚಿದ್ದಾರೆ. ನಟಿಯ ಬೋಲ್ಡ್ ಪೋಸ್‌ಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

    ಇತ್ತೀಚೆಗೆ ಸಂಜನಾ ಅವರು ಡಿಸಿ ಸ್ನೇಹಾ ಪಾತ್ರಕ್ಕೆ ಗುಡ್ ಬೈ ಹೇಳಿರೋದು ಫ್ಯಾನ್ಸ್‌ಗೆ ಬೇಸರ ಮೂಡಿಸಿದೆ. ಆದರೆ ಸೀರಿಯಲ್‌ನಲ್ಲಿ ಅವರ ಪಾತ್ರದ ಸಾವಿನ ಮೂಲಕ ಅಂತ್ಯವಾಗಿದೆ. ಸಂಜನಾ ಮತ್ತೆ ಸ್ನೇಹಾ ಪಾತ್ರದಲ್ಲಿ ನಟಿಸಬೇಕು ಎಂದು ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಅಷ್ಟರ ಮಟ್ಟಿಗೆ ಸ್ನೇಹಾ ಪಾತ್ರದಲ್ಲಿ ಸಂಜನಾ ಜೀವಿಸಿದ್ದರು. ಅವರ ಪಾತ್ರ ಅಂತ್ಯವಾದ್ಮೇಲೆ ನಟಿಯ ಭಾವನ್ಮಾತಕ ಪೋಸ್ಟ್ ನೋಡಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ:BBK 11: ಮತ್ತೆ ವರಸೆ ಬದಲಿಸಿದ ರಜತ್‌- ಸುಸ್ತಾದ ಮನೆ ಮಂದಿ

    ನಮಸ್ತೆ ಪ್ರಿಯರೇ, ಎಲ್ಲಾ ಫ್ಯಾನ್ಸ್‌ಗೆ ನಾನು ಒಂದು ಸುದ್ದಿಯನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಪ್ರತಿಯೊಂದು ದೊಡ್ಡ ವಿಷಯವೂ ಕೊನೆಗೊಳ್ಳುತ್ತದೆ. ಅದರಂತೆ ಈ ಮಹತ್ವದ ಪಾತ್ರದೊಂದಿಗೆ ನನ್ನ ಪ್ರಯಾಣವೂ ಕೊನೆಗೊಂಡಿದೆ. ‘ಪುಟ್ಟಕ್ಕನ ಮಕ್ಕಳು’ ಸೀರಿಯಲ್‌ನ ಸ್ನೇಹಾ ಪಾತ್ರವು ಕೊನೆಯಾಗುತ್ತಿದೆ. ಕಳೆದ 3 ವರ್ಷಗಳಿಂದ ಸ್ನೇಹಾ ಪಾತ್ರವನ್ನು ನಿರ್ವಹಿಸುವುದು ನನ್ನ ನಟನಾ ವೃತ್ತಿಜೀವನದ ಅವಿಭಾಜ್ಯ ಅಂಗವಾಗಿತ್ತು. ಈ ಸಮಯ ಎಷ್ಟು ವೇಗವಾಗಿ ಮುಗಿಯಿತು ಅನ್ನೋದೇ ಗೊತ್ತಾಗಲಿಲ್ಲ. ಈ ಸೀರಿಯಲ್‌ನಲ್ಲಿ ನಾನು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದೆ. ಅದಕ್ಕಾಗಿ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ. ನನಗೆ ಈ ಉತ್ತಮ ಪಾತ್ರವನ್ನು ನೀಡಿದ್ದಕ್ಕಾಗಿ ಮತ್ತು ನನ್ನನ್ನು ಸ್ನೇಹಾ ಆಗಿ ಆಯ್ಕೆ ಮಾಡಿದ್ದಕ್ಕಾಗಿ ವಾಹಿನಿ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಹೇಳುತ್ತೇನೆ ಎಂದು ತಿಳಿಸಿದರು.

    ಆದರೆ ಈಗ ನಾನು ಮುಂದುವರಿಯುವ ಸಮಯ ಬಂದಿದೆ. ಕೆಲವು ಅನಿವಾರ್ಯ ಸಂದರ್ಭಗಳು ಮತ್ತು ನನ್ನ ವೈಯಕ್ತಿಕ ಕಾರಣಗಳಿಂದಾಗಿ ನಾನು ಭಾರವಾದ ಹೃದಯದಿಂದ ಈ ಸೀರಿಯಲ್ ಅನ್ನು ತೊರೆಯುವ ಸ್ಥಿತಿ ನಿರ್ಮಾಣವಾಯಿತು. ನನ್ನ ಜೀವನದಲ್ಲಿ ಈ ಸಮಯದಲ್ಲಿ ಸಾಧಿಸಲು ನನಗೆ ಇತರ ಸವಾಲುಗಳಿವೆ. ಈ ಪ್ರಾಜೆಕ್ಟ್‌ನಲ್ಲಿನ ಈ ಪಾತ್ರಕ್ಕಾಗಿ ನಾನು ನಟಿನಾಗಿ ಪಡೆದ ಅಪಾರ ಪ್ರೀತಿ ಮತ್ತು ಮನ್ನಣೆಯು ನನ್ನ ದೊಡ್ಡ ಪ್ರಶಸ್ತಿ. ಅದು ನನ್ನೊಂದಿಗೆ ಶಾಶ್ವತವಾಗಿ ಉಳಿಯುತ್ತದೆ. ನಿಮ್ಮಲ್ಲಿ ಹೆಚ್ಚಿನವರು ಪಾತ್ರವು ಸಾಯುವುದನ್ನು ನೋಡಿ ದುಃಖಿತರಾಗಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ, ನಾಯಕಿಯಾಗಿ ನಾನು ನಟಿಸಿದ್ದ ಪಾತ್ರವನ್ನು ಯಾರು ಬದಲಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಅದನ್ನು ನಾವು ಪಾಸಿಟಿವ್ ಆಗಿ ತೆಗೆದುಕೊಳ್ಳೋಣ ಎಂದಿದ್ದರು.

    ಸ್ವಲ್ಪ ಸಮಯದ ನಂತರ ವಿಭಿನ್ನ ಪಾತ್ರಗಳಲ್ಲಿ ನನ್ನ ಅಭಿಮಾನಿಗಳನ್ನು ಭೇಟಿಯಾಗಲು ಆಶಿಸುತ್ತಿದ್ದೇನೆ, ಆದರೆ, ಸದ್ಯದ ಮಟ್ಟಿಗೆ ನನ್ನ ಪಾತ್ರ ಅಂತ್ಯವಾಗಿದೆ. ಕಳೆದ 3 ವರ್ಷಗಳಲ್ಲಿ ಇಡೀ ಕರ್ನಾಟಕ ನನ್ನ ಮೇಲೆ ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನನ್ನ ವೈಯಕ್ತಿಕ ಮತ್ತು ವೃತ್ತಿಪರ ಪ್ರಗತಿಗೆ ಸಂಬಂಧಿಸಿದಂತೆ ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ನನ್ನ ಸೋಶಿಯಲ್ ಮೀಡಿಯಾ ಫ್ಲಾಟ್‌ಫಾರ್ಮ್ ಅನ್ನು ನೋಡ್ತಾ ಇರಿ. ಈಗ ಪಾಸಿಟಿವ್ ನೋಟ್‌ನೊಂದಿಗೆ ಮುಂದುವರಿಯೋಣ. ಏನಾಗಲಿ ಮುಂದೆ ಸಾಗು ನೀ.. ಮತ್ತೊಮ್ಮೆ ತೆರೆ ಮೇಲೆ ಭೇಟಿ ಆಗೋಣ ಬೇರೆ ವಿಭಿನ್ನ ಪಾತ್ರ ಜೊತೆಗೆ, ಶೀಘ್ರದಲ್ಲಿ ನನ್ನ ಅಭಿಮಾನಿಗಳೇ ನನ್ನ ಸ್ಪೂರ್ತಿ, ಶಕ್ತಿ. ಚಿಯರ್ಸ್ ಸಂಜನಾ ಬುರ್ಲಿ ಎಂದು ಅವರು ಬರೆದುಕೊಂಡಿದ್ದರು.

    ಇನ್ನೂ ಸಿನಿಮಾ, ಸೀರಿಯಲ್ ಯಾವುದೇ ಆಗಿರಲಿ ಆದಷ್ಟು ಬೇಗ ಸಂಜನಾ ತೆರೆಯ ಮೇಲೆ ಅಬ್ಬರಿಸಲಿ ಎಂಬುದೇ ಅಭಿಮಾನಿಗಳು ಆಶಯ.

  • ‘ಪುಟ್ಟಕ್ಕನ ಮಕ್ಕಳು’ ಸ್ನೇಹಾ ಪಾತ್ರ ಅಂತ್ಯ- ಫ್ಯಾನ್ಸ್‌ಗೆ ಸಂದೇಶ ನೀಡಿದ ಸಂಜನಾ

    ‘ಪುಟ್ಟಕ್ಕನ ಮಕ್ಕಳು’ ಸ್ನೇಹಾ ಪಾತ್ರ ಅಂತ್ಯ- ಫ್ಯಾನ್ಸ್‌ಗೆ ಸಂದೇಶ ನೀಡಿದ ಸಂಜನಾ

    ಕಿರುತೆರೆಯ ಜನಪ್ರಿಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (Puttakkana Makkalu) ಸ್ನೇಹಾ (Sneha) ಪಾತ್ರ ಅಂತ್ಯವಾಗಿದೆ. ಸ್ನೇಹಾ ಪಾತ್ರದಲ್ಲಿ ಸಂಜನಾ ಬುರ್ಲಿ (Sanjana Burli) ಸೀರಿಯಲ್‌ಗೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ. ಸ್ನೇಹಾ ಪಾತ್ರದ ಸಾವಿನ ದೃಶ್ಯ ನೋಡಿ ಪ್ರೇಕ್ಷಕರು ಕಣ್ಣೀರಿಟ್ಟಿದ್ದಾರೆ. ತಮ್ಮ ಪಾತ್ರ ಅಂತ್ಯವಾದ ಬೆನ್ನಲ್ಲೇ ಅಭಿಮಾನಿಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಸ್ವೀಟಿ ಫ್ಯಾನ್ಸ್‌ಗೆ ಬಿಗ್ ಅಪ್‌ಡೇಟ್- 2 ಸಿನಿಮಾಗಳ ಶೂಟಿಂಗ್ ಮುಗಿಸಿದ ನಟಿ

    ನಮಸ್ತೆ ಪ್ರಿಯರೇ, ಎಲ್ಲಾ ಫ್ಯಾನ್ಸ್ಗೆ ನಾನು ಒಂದು ಸುದ್ದಿಯನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಪ್ರತಿಯೊಂದು ದೊಡ್ಡ ವಿಷಯವೂ ಕೊನೆಗೊಳ್ಳುತ್ತದೆ. ಅದರಂತೆ ಈ ಮಹತ್ವದ ಪಾತ್ರದೊಂದಿಗೆ ನನ್ನ ಪ್ರಯಾಣವೂ ಕೊನೆಗೊಂಡಿದೆ. ‘ಪುಟ್ಟಕ್ಕನ ಮಕ್ಕಳು’ ಸೀರಿಯಲ್‌ನ ಸ್ನೇಹಾ ಪಾತ್ರವು ಕೊನೆಯಾಗುತ್ತಿದೆ. ಕಳೆದ 3 ವರ್ಷಗಳಿಂದ ಸ್ನೇಹಾ ಪಾತ್ರವನ್ನು ನಿರ್ವಹಿಸುವುದು ನನ್ನ ನಟನಾ ವೃತ್ತಿಜೀವನದ ಅವಿಭಾಜ್ಯ ಅಂಗವಾಗಿತ್ತು. ಈ ಸಮಯ ಎಷ್ಟು ವೇಗವಾಗಿ ಮುಗಿಯಿತು ಅನ್ನೋದೇ ಗೊತ್ತಾಗಲಿಲ್ಲ. ಈ ಸೀರಿಯಲ್‌ನಲ್ಲಿ ನಾನು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದೆ. ಅದಕ್ಕಾಗಿ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ. ನನಗೆ ಈ ಉತ್ತಮ ಪಾತ್ರವನ್ನು ನೀಡಿದ್ದಕ್ಕಾಗಿ ಮತ್ತು ನನ್ನನ್ನು ಸ್ನೇಹಾ ಆಗಿ ಆಯ್ಕೆ ಮಾಡಿದ್ದಕ್ಕಾಗಿ ವಾಹಿನಿ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಹೇಳುತ್ತೇನೆ.

    ಆದರೆ ಈಗ ನಾನು ಮುಂದುವರಿಯುವ ಸಮಯ ಬಂದಿದೆ. ಕೆಲವು ಅನಿವಾರ್ಯ ಸಂದರ್ಭಗಳು ಮತ್ತು ನನ್ನ ವೈಯಕ್ತಿಕ ಕಾರಣಗಳಿಂದಾಗಿ ನಾನು ಭಾರವಾದ ಹೃದಯದಿಂದ ಈ ಸೀರಿಯಲ್ ಅನ್ನು ತೊರೆಯುವ ಸ್ಥಿತಿ ನಿರ್ಮಾಣವಾಯಿತು. ನನ್ನ ಜೀವನದಲ್ಲಿ ಈ ಸಮಯದಲ್ಲಿ ಸಾಧಿಸಲು ನನಗೆ ಇತರ ಸವಾಲುಗಳಿವೆ. ಈ ಪ್ರಾಜೆಕ್ಟ್ನಲ್ಲಿನ ಈ ಪಾತ್ರಕ್ಕಾಗಿ ನಾನು ನಟಿನಾಗಿ ಪಡೆದ ಅಪಾರ ಪ್ರೀತಿ ಮತ್ತು ಮನ್ನಣೆಯು ನನ್ನ ದೊಡ್ಡ ಪ್ರಶಸ್ತಿ. ಅದು ನನ್ನೊಂದಿಗೆ ಶಾಶ್ವತವಾಗಿ ಉಳಿಯುತ್ತದೆ. ನಿಮ್ಮಲ್ಲಿ ಹೆಚ್ಚಿನವರು ಪಾತ್ರವು ಸಾಯುವುದನ್ನು ನೋಡಿ ದುಃಖಿತರಾಗಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ, ನಾಯಕಿಯಾಗಿ ನಾನು ನಟಿಸಿದ್ದ ಪಾತ್ರವನ್ನು ಯಾರು ಬದಲಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಅದನ್ನು ನಾವು ಪಾಸಿಟಿವ್ ಆಗಿ ತೆಗೆದುಕೊಳ್ಳೋಣ ಎಂದಿದ್ದಾರೆ ಸಂಜನಾ.

    ಸ್ವಲ್ಪ ಸಮಯದ ನಂತರ ವಿಭಿನ್ನ ಪಾತ್ರಗಳಲ್ಲಿ ನನ್ನ ಅಭಿಮಾನಿಗಳನ್ನು ಭೇಟಿಯಾಗಲು ಆಶಿಸುತ್ತಿದ್ದೇನೆ, ಆದರೆ, ಸದ್ಯದ ಮಟ್ಟಿಗೆ ನನ್ನ ಪಾತ್ರ ಅಂತ್ಯವಾಗಿದೆ. ಕಳೆದ 3 ವರ್ಷಗಳಲ್ಲಿ ಇಡೀ ಕರ್ನಾಟಕ ನನ್ನ ಮೇಲೆ ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನನ್ನ ವೈಯಕ್ತಿಕ ಮತ್ತು ವೃತ್ತಿಪರ ಪ್ರಗತಿಗೆ ಸಂಬಂಧಿಸಿದಂತೆ ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ನನ್ನ ಸೋಶಿಯಲ್ ಮೀಡಿಯಾ ಫ್ಲಾಟ್‌ಫಾರ್ಮ್ ಅನ್ನು ನೋಡ್ತಾ ಇರಿ. ಈಗ ಪಾಸಿಟಿವ್ ನೋಟ್‌ನೊಂದಿಗೆ ಮುಂದುವರಿಯೋಣ. ಏನಾಗಲಿ ಮುಂದೆ ಸಾಗು ನೀ.. ಮತ್ತೊಮ್ಮೆ ತೆರೆ ಮೇಲೆ ಭೇಟಿ ಆಗೋಣ ಬೇರೆ ವಿಭಿನ್ನ ಪಾತ್ರ ಜೊತೆಗೆ, ಶೀಘ್ರದಲ್ಲಿ ನನ್ನ ಅಭಿಮಾನಿಗಳೇ ನನ್ನ ಸ್ಪೂರ್ತಿ, ಶಕ್ತಿ. ಚಿಯರ್ಸ್ ಸಂಜನಾ ಬುರ್ಲಿ ಎಂದು ಅವರು ಬರೆದುಕೊಂಡಿದ್ದಾರೆ.

    ಇನ್ನೂ ಕಳೆದ ಮೂರು ವರ್ಷಗಳಿಂದ ಸಂಜನಾ ಬುರ್ಲಿ ಅವರು ಸ್ನೇಹಾ ಪಾತ್ರಕ್ಕೆ ಜೀವ ತುಂಬಿದ್ದರು. ಹಿರಿಯ ನಟಿ ಉಮಾಶ್ರೀ (Umashree) ಮಗಳಾಗಿ, ಕಂಠಿ ಪತ್ನಿಯ ಪಾತ್ರದಲ್ಲಿ ಉತ್ತಮವಾಗಿ ನಟಿಸಿದ್ದರು. ಈಗ ಅವರ ಪಾತ್ರ ಅಂತ್ಯವಾಗಿರೋದು ಸಹಜವಾಗಿ ಪ್ರೇಕ್ಷಕರಿಗೆ ಬೇಸರವುಂಟು ಮಾಡಿದೆ.

  • ‘ಲವ್ ರೀಸೆಟ್’ ಅಂತಿದ್ದಾರೆ ನಟಿ ಸಂಜನಾ ಬುರ್ಲಿ

    ‘ಲವ್ ರೀಸೆಟ್’ ಅಂತಿದ್ದಾರೆ ನಟಿ ಸಂಜನಾ ಬುರ್ಲಿ

    ಹಿರಿತೆರೆಯಲ್ಲಿ ಮೊದಲ ಚಿತ್ರ ನಿರ್ದೇಶಿಸುವವರು ಮೊದಲು ಕಿರುಚಿತ್ರದ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸುತ್ತಾರೆ. ಎಷ್ಟೋ ಕಿರುಚಿತ್ರಗಳು ಜನರ ಮನಸ್ಸಿಗೆ ಹತ್ತಿರವಾಗಿರುವುದು ಹೌದು. ಅಂತಹ ವಿಭಿನ್ನ ಕಿರುಚಿತ್ರ ಲವ್ ರೀಸೆಟ್ (Love Reset) ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಗಣೇಶ್ ನಿರ್ದೇಶಿಸಿ, ಪುಟ್ಟಕ್ಕನ ಮಕ್ಕಳು ಖ್ಯಾತಿಯ ಪವನ್ ಕುಮಾರ್ (Pawan Kumar) ಹಾಗೂ ಸಂಜನಾ ಬುರ್ಲಿ (Sanjana Burli) ನಾಯಕ, ನಾಯಕಿಯಾಗಿ ನಟಿಸಿರುವ ಈ ಕಿರುಚಿತ್ರದ ಪ್ರೀಮಿಯರ್ ಹಾಗೂ ಪತ್ರಿಕಾಗೋಷ್ಠಿ ಇತ್ತೀಚಿಗೆ ನಡೆಯಿತು. ಪುಟ್ಟಕ್ಕನ ಮಕ್ಕಳು ಧಾರಾವಾಹಿ ತಂಡದವರು, ಬಿಗ್ ಬಾಸ್ ಖ್ಯಾತಿಯ ಸ್ನೇಹಿತ್, ಭೂಮಿ ಶೆಟ್ಟಿ, ರಮೇಶ್ ಪಂಡಿತ್, ಕಲಾಗಂಗೋತ್ರಿ ಮಂಜು, ಪದ್ಮಕಲಾ ಸೇರಿದಂತೆ ಅನೇಕ ಗಣ್ಯರು ಪ್ರೀಮಿಯರ್ ಗೆ ಆಗಮಿಸಿ ತಂಡಕ್ಕೆ ಶುಭ ಕೋರಿದರು.

    ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ಶ್ರೀಗಣೇಶ್,  ನಾನು ಮೂಲತಃ ಐಟಿ ಉದ್ಯೋಗಿ.  ಸಿನಿಮಾ ಮಾಡಬೇಕೆಂಬ ಆಸೆಯಿದೆ. ಅದರ ಪೂರ್ವಭಾವಿಯಾಗಿ ಈ ಕಿರುಚಿತ್ರ ಮಾಡಿದ್ದೇನೆ. ಇದೊಂದು ಪ್ರೇಮ ಕಥಾನಕ. ಈಗಿನ ಪ್ರೇಮಿಗಳ ಮನಸ್ಥಿತಿಯನ್ನು 25 ನಿಮಿಷಗಳಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇನೆ. ಈ ಕಿರುಚಿತ್ರದಲ್ಲಿ ವಿ. ನಾಗೇಂದ್ರ ಪ್ರಸಾದ್ ಬರೆದಿರುವ “ಅನುರಾಗದ ನೆನಪೀಗ ಕೊನೆಯಾಗಲಿ’ ಎಂಬ ಸುಂದರವಾದ ಹಾಡೊಂದಿದೆ. ಸರಿಗಮಪ ಖ್ಯಾತಿಯ ಸುನೀಲ್, ಅನನ್ಯ ಪ್ರಕಾಶ್ ದನಿಯಾಗಿರುವ ಈ ಹಾಡಿಗೆ ಜೋಯಲ್ ಹಾಗೂ ಅಭಿಲಾಶ್ ಸಂಗೀತ ನೀಡಿದ್ದಾರೆ ಎಂದು ತಿಳಿಸಿದರು.

    ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮುರಳಿ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲೂ ನಟಿಸುವ ಆಸಯಿದೆ. ಈ ಕಿರುಚಿತ್ರದಲ್ಲಿ ಅಮರ್ ನನ್ನ ಪಾತ್ರದ ಹೆಸರು. ಪ್ರೀತಿ ಹಾಗೂ ಕೆರಿಯರ್ ವಿಷಯ ಬಂದಾಗ ಹುಡುಗ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾನೆ ಎಂಬುದನ್ನು ನಿರ್ದೇಶಕರು ಇದರಲ್ಲಿ ತೋರಿಸಿದ್ದಾರೆ ಎಂದು ನಾಯಕ ಪವನ್ ಕುಮಾರ್ ತಿಳಿಸಿದರು.  ಕಥೆ ಬಹಳ ಡಿಫರೆಂಟ್ ಆಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ನೋಡಿ ಹಾರೈಸಿ ಎಂದರು ನಾಯಕಿ ಸಂಜನ ಬುರ್ಲಿ.

     

    ಛಾಯಾಗ್ರಾಹಕ ಪ್ರಜ್ವಲ್ ಭಾರದ್ವಾಜ್ ಸೇರಿದಂತೆ ಅನೇಕ ತಂತ್ರಜ್ಞರು ಕಿರುಚಿತ್ರದ ಬಗ್ಗೆ ಮಾತನಾಡಿದರು. ರಂಜಿತ್ ಶಂಕರೇಗೌಡ ಸಹ ನಿರ್ದೇಶಕರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

  • ‘ಲವ್ ರೀಸೆಟ್’ ಅಂತ ಕಥೆ ಹೇಳಲು ಸಜ್ಜಾದ ನಟಿ ಸಂಜನಾ ಬುರ್ಲಿ

    ‘ಲವ್ ರೀಸೆಟ್’ ಅಂತ ಕಥೆ ಹೇಳಲು ಸಜ್ಜಾದ ನಟಿ ಸಂಜನಾ ಬುರ್ಲಿ

    ಕಿರುತೆರೆ ಜನಪ್ರಿಯ ‘ಪುಟ್ಟಕ್ಕನ ಮಕ್ಕಳು’ (Puttakana Makkalu) ಸೀರಿಯಲ್ ನಾಯಕಿ ಸಂಜನಾ ಬುರ್ಲಿ (Sanjana Burli) ಇದೀಗ ಲವ್ ರೀಸೆಟ್ ಅಂತ ಹೊಸ ಲವ್ ಸ್ಟೋರಿ ಹೇಳಲು ಸಜ್ಜಾಗಿದ್ದಾರೆ. ಸದ್ಯ ಸಂಕ್ರಾಂತಿ ಹಬ್ಬದಂದು (ಜ.15) ‘ಲವ್ ರೀಸೆಟ್’ (Love Reset) ಚಿತ್ರದ ಟ್ರೈಲರ್ ಮೂಲಕ ನಟಿ ಸದ್ದು ಮಾಡುತ್ತಿದ್ದಾರೆ.

    ಸಂಜನಾ ಬುರ್ಲಿ ಮತ್ತು ಪವನ್ ಕುಮಾರ್ (Pavan Kumar) ನಟಿಸಿರುವ ‘ಲವ್ ರೀಸೆಟ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಪುಟ್ಟಕ್ಕನ ಮಕ್ಕಳು ಸೀರಿಯಲ್‌ನ ಸ್ನೇಹ ಪಾತ್ರ ಮರೆಸುವಷ್ಟು ಡಿಫರೆಂಟ್ ರೋಲ್‌ನಲ್ಲಿ ಸಂಜನಾ ನಟಿಸಿದ್ದು, ಟ್ರೈಲರ್ ಝಲಕ್‌ಗೆ ಅಭಿಮಾನಿಗಳಿಂದ ಉತ್ತಮ ಪ್ರಶಂಸೆ ಸಿಗುತ್ತಿದೆ. ಇದೀಗ ಬಿಟ್ಟಿರುವ ಟ್ರೈಲರ್ ತುಣುಕಿನಲ್ಲಿ ಚಿತ್ರದ ಬಗ್ಗೆ ಯಾವುದೇ ಸುಳಿವು ನೀಡಿಲ್ಲ.

    ಕಿರುತೆರೆ ಮತ್ತು ಹಿರಿತೆರೆ ಎರಡಲ್ಲೂ ಆ್ಯಕ್ಟೀವ್ ಇರುವ ನಟಿ ಸಂಜನಾಗೆ ‘ಲವ್ ರೀಸೆಟ್’ ಚಿತ್ರದ ಕಥೆ ಹೇಳಿದಾಗ, ಸ್ಟೋರಿ ಲೈನ್ ವಿಭಿನ್ನ ಎಂದೆನಿಸಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹೊಸ ಬಗೆಯ ಪ್ರೇಮ ಕಥೆ ಹೇಳಲು ನಟಿ ರೆಡಿಯಾಗಿದ್ದಾರೆ.

    ‘ಲವ್ ರೀಸೆಟ್’ ಎಂಬ ಈ ಕಿರುಚಿತ್ರದಲ್ಲಿ ಸಂಜನಾ ಬುರ್ಲಿ, ಪುಟ್ಟಕ್ಕನ ಮಕ್ಕಳು, ಕಿನ್ನರಿ ಸೀರಿಯಲ್ ನಟ ಪವನ್ ಕುಮಾರ್, ನಿಖಿಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಶ್ರೀ ಗಣೇಶ್ ನಿರ್ದೇಶನ ಮಾಡಿದ್ದಾರೆ. ಇದನ್ನೂ ಓದಿ:ವಿನಯ್‌, ನಿಧಿ ಹೆಗಡೆ ನಟನೆಯ ‘ಶಾಖಾಹಾರಿ’ ಚಿತ್ರದ ಮೆಲೋಡಿ ಸಾಂಗ್‌ ರಿಲೀಸ್

    ‘ಪುಟ್ಟಕ್ಕನ ಮಕ್ಕಳು’ ಸೀರಿಯಲ್‌ನಲ್ಲಿ ನಾದಿನಿ, ಭಾವ ಕ್ಯಾರೆಕ್ಟರ್‌ ನಟಿಸುತ್ತಿರೋ ಸಂಜನಾ-ಪವನ್‌ ಈ ಚಿತ್ರ ರೊಮ್ಯಾಂಟಿಕ್‌ ಕಪಲ್‌ ಆಗಿ ಕಾಣಿಸಿಕೊಂಡಿರೋದ್ರಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಸದ್ಯ ಟ್ರೈಲರ್‌ನಿಂದ ಮೋಡಿ ಮಾಡುತ್ತಿರುವ ‘ಲವ್ ರೀಸೆಟ್’ ಚಿತ್ರ ಇದೇ ಜ.22ರಂದು ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಆಗಲಿದೆ.

  • ಹೊಸ ಮುಖಗಳ ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್

    ಹೊಸ ಮುಖಗಳ ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್

    ನ್ನಡ ಸಿನಿಮಾ ರಂಗಕ್ಕೆ ‘ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್’ ಸಿನಿಮಾದಿಂದ ಹೊಸ ಕಲಾವಿದರ ಮತ್ತು ತಂತ್ರಜ್ಞರ ಆಗಮನವಾಗಿದೆ. ಎಂ.ಎನ್. ಶ್ರೀಕಾಂತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಮೂಲಕ ರಾಘವ್ ಎಂಬ ಹೊಸ ಪ್ರತಿಭೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಇದನ್ನೂ ಓದಿ: ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್

    ಮೊನ್ನೆಯಷ್ಟೇ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಭಾಸ್ಕರ್ ರಾವ್ ಮತ್ತು ವಸಿಷ್ಠ ಸಿಂಹ ಈ ಚಿತ್ರದ ಟ್ರೇಲರ್ ರಿಲೀಸ್ ಮಾಡಿ ಶುಭ ಹಾರೈಸಿದ್ದಾರೆ. ಪ್ರೀತಿ, ಸಾಹಸ, ಸಸ್ಪೆನ್ಸ್ ಕಥಾ ಹಂದರ ಹೊಂದಿರುವ ಚಿತ್ರ ಇದಾಗಿದ್ದು, ಈ ಹೊತ್ತಿನ ಯುವಕ ಯುವತಿಯರ ತಲ್ಲಣಗಳನ್ನು ಸೂಕ್ಷ್ಮವಾಗಿ ಹೇಳುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು. ಇದನ್ನೂ ಓದಿ : ಮೇಡ್ ಇನ್ ಚೈನಾ ಅಂತಿದ್ದಾರೆ ನಾಗಭೂಷಣ್

    ಈ ಕುರಿತು ನಿರ್ದೇಶಕರು ಹೇಳಿದ್ದು ಹೀಗೆ, “ಮೈಸೂರು ಮೂಲದವರಾದ ಅಮೆರಿಕನ್‌ ಪ್ರಜೆ ಯಶಸ್ವಿ ಶಂಕರ್ ಅವರಿಗೆ ಕಥೆ ಹೇಳಿದಾಗ ತುಂಬಾನೇ ಖುಷಿ ಪಟ್ಟರು. ಇದೊಂದು ಹೊಸ ಮಾದರಿಯ ಸಿನಿಮಾವಾಗಲಿದೆ ಎಂದು ಬೆನ್ನುತಟ್ಟಿದರು. ಕೊನೆಗೆ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದರು. ಇದೊಂದು ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಸಿನಿಮಾವಾಗಿದ್ದು, ಪ್ರತಿ ದೃಶ್ಯವೂ ನೋಡುಗನನ್ನು ಹಿಡಿದಿಟ್ಟುಕೊಳ್ಳಲಿದೆ’ ಎಂದರು. ಇದನ್ನೂ ಓದಿ :ಎಂತವರಿಗೂ ಮರುಕ ಹುಟ್ಟಿಸುತ್ತೆ ಕನ್ನೇರಿ ಚಿತ್ರದ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡು

    ರಾಘವ್ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದರೆ, ಸಂಜನಾ ಬುರ್ಲಿ ನಾಯಕಿ. ರಾಘವ್ ಕಾಲೇಜ್ ಹುಡುಗನಾಗಿ ಕಾಣಿಸಿಕೊಂಡಿದ್ದು, ಪಾತ್ರಕ್ಕಾಗಿ ಸಾಕಷ್ಟು ರೀತಿಯಲ್ಲಿ ತಯಾರಿ ಮಾಡಿಕೊಂಡಿದ್ದಾರೆ.

  • ರೋಚಕ ಕಥೆಯೊಂದಿಗೆ ಮೋಹಕ ಅನುಭವ ನೀಡೋ `ವೀಕೆಂಡ್’!

    ರೋಚಕ ಕಥೆಯೊಂದಿಗೆ ಮೋಹಕ ಅನುಭವ ನೀಡೋ `ವೀಕೆಂಡ್’!

    ಬೆಂಗಳೂರು: ಶೃಂಗೇರಿ ಸುರೇಶ್ ನಿರ್ದೇಶನದ ವೀಕೆಂಡ್ ಚಿತ್ರ ತೆರೆ ಕಂಡಿದೆ. ಬಿಡುಗಡೆಯ ಕಡೆಯ ಕ್ಷಣದಲ್ಲಿ ಈ ಸಿನಿಮಾ ಬಗ್ಗೆ ಗಾಢವಾದೊಂದು ಕುತೂಹಲ ಹುಟ್ಟಿಕೊಂಡಿತ್ತಲ್ಲಾ? ಅದನ್ನು ಎಲ್ಲ ದಿಕ್ಕುಗಳಿಂದಲೂ ತಣಿಸುವಂಥಾ ಎಲಿಮೆಂಟುಗಳೊಂದಿಗೆ, ಆರಂಭದಿಂದ ಕ್ಲೈಮ್ಯಾಕ್ಸ್ ವರೆಗೂ ನೋಡುಗರನ್ನು ಸೆಳೆದಿಟ್ಟುಕೊಂಡು ಸಾಗುವ ವೀಕೆಂಡ್ ಒಂದೊಳ್ಳೆ ಚಿತ್ರವಾಗಿ ಎಲ್ಲರನ್ನೂ ತಾಕಿದೆ. ಸಾಮಾನ್ಯವಾಗಿ ಸಾಮಾಜಿಕ ಸಂದೇಶವನ್ನು ಕಮರ್ಶಿಯಲ್ ಜಾಡಿನಲ್ಲಿಯೇ ಹೇಳೋದು ಅಪರೂಪ. ಆದರೆ ಭರ್ಜರಿ ಕಾಮಿಡಿ, ಆಕ್ಷನ್, ಲವ್ ಸೇರಿದಂತೆ ಎಲ್ಲ ಅಂಶಗಳನ್ನೂ ಒಳಗೊಂಡಿರೋ ವೀಕೆಂಡಿನಲ್ಲಿ ನಮ್ಮ ನಡುವಿದ್ದೂ ನಾವ್ಯಾರೂ ಹೆಚ್ಚಾಗಿ ತಲೆ ಕೆಡಿಸಿಕೊಳ್ಳದ ವಿಚಾರಗಳನ್ನು ಪರಿಣಾಮಕಾರಿಯಾಗಿಯೇ ದೃಷ್ಯೀಕರಿಸಲಾಗಿದೆ.

    ಹೊರ ಜಗತ್ತಿನಲ್ಲಿ ಇವರಿಗೇನೂ ಕಮ್ಮಿ ಇಲ್ಲ ಎಂಬಂಥಾ ಇಮೇಜು, ಅದಕ್ಕೆ ಸರಿಯಾಗಿ ರೂಢಿಸಿಕೊಂಡ ಥಳುಕು ಬಳುಕಿನ ಲೈಫ್ ಸ್ಟೈಲ್… ಆದರೆ ಬದುಕಿನ ನೆತ್ತಿಯ ಮೇಲೆ ಸದಾ ನೇತಾಡುತ್ತಲೇ ಇರುವ ಅನಿಶ್ಚಿತತೆಯ ತೂಗುಗತ್ತಿ. ಯಾವುದೇ ಕ್ಷಣದಲ್ಲಿಯಾದರೂ ನೆಚ್ಚಿಕೊಂಡ ಕೆಲಸವನ್ನು ಬಿಟ್ಟು ಬೀದಿಯಲ್ಲಿ ನಿಲ್ಲಬಹುದಾದ ಬದುಕು… ಇದು ಐಟಿ ಬಿಟ ವಲಯದಲ್ಲಿ ಕೆಲಸ ಮಾಡೋರ ಸಾಮಾನ್ಯ ಗೋಳು. ಇಂಥಾ ಅಕ್ಷರಸ್ಥರೇ ಬದುಕಿನ ಅನಿವಾರ್ಯತೆಗೆ ಸಿಕ್ಕಿ ಅಡ್ಡ ದಾರಿ ಹಿಡಿದರೆ, ಕ್ರಿಮಿನಲ್ಲುಗಳಾದರೆ ಅದರ ಪರಿಣಾಮ ಘೋರ. ಇಂಥಾ ವಾಸ್ತವವನ್ನು ಸವರಿಕೊಂಡು ಹೋದಂತೆ ಭಾಸವಾಗುವ ರೋಚಕ ಕಥೆಯನ್ನು ವೀಕೆಂಡ್ ಚಿತ್ರ ಹೊಂದಿದೆ.

    ನಾಯಕ ಅಜೆಯ್ ಸಾಫ್ಟ್‍ವೇರ್ ಕ್ಷೇತ್ರದಲ್ಲಿಯೇ ಕಾರ್ಯ ನಿರ್ವಹಿಸುವಾತ. ಈತನ ಮೇಲೆ ಸಹೋದ್ಯೋಗಿಯೊಬ್ಬಳು ಮೋಹಗೊಂಡಿದ್ದರೆ ಈತ ಮಾತ್ರ ನಾಯಕಿಯ ಹಿಂದೆ ಬಿದ್ದಿರುತ್ತಾನೆ. ಈ ಪ್ರೇಮದ ಹಿನ್ನೆಲೆಯಲ್ಲಿಯೇ ನಿರ್ದೇಶಕರು ಐಟಿ ಬಿಟಿ ಕ್ಷೇತ್ರದ ಅಷ್ಟೂ ವಿಚಾರಗಳನ್ನು ಪರಿಣಾಮಕಾರಿಯಾಗಿ ಚಿತ್ರಿಸುವ ಜಾಣ್ಮೆ ತೋರಿದ್ದಾರೆ. ಅಲ್ಲಿನ ಕೆಲಸದೊತ್ತಡ, ಸಂಬಳ ಪಡೆಯಲು ಮಾಡಬೇಕಾದ ಅನಿವಾರ್ಯ ಸರ್ಕಸ್ಸುಗಳೆಲ್ಲವನ್ನು ಕೂಡಾ ಮನ ಮುಟ್ಟುವಂತೆ ದೃಷ್ಯದ ಚೌಕಟ್ಟಿಗೆ ಒಗ್ಗಿಸಲಾಗಿದೆ.

    ಇಂಥಾ ಎಲ್ಲ ಸರ್ಕಸ್ಸುಗಳಾಚೆಗೂ ಕೆಲಸ ಕಳೆದುಕೊಂಡಾಗ ಈ ಐಟಿ ಉದ್ಯೋಗಿಗಳ ಬದುಕು ಹೇಗಿರುತ್ತೆ? ಎಂಥೆಂಥಾ ಅವಘಡಗಳು ಸಂಭವಿಸಬಹುದೆಂಬುದನ್ನು ನಿರ್ದೇಶಕರು ರುಚಿಕಟ್ಟಾಗಿಯೇ ನಿರೂಪಿಸಿದ್ದಾರೆ. ಹಾಗಂತ ಈ ಸಿನಿಮಾ ಇಂಥಾ ಒಳತೋಟಿ, ತಲ್ಲಣಗಳಲ್ಲಿಯೇ ಕಳೆದು ಹೋಗಿದೆ ಅಂದುಕೊಳ್ಳಬೇಕಿಲ್ಲ. ಕಾಮಿಡಿ, ಪ್ರೀತಿ ಸೇರಿದಂತೆ ಎಲ್ಲೆಲ್ಲಿ ಯಾವುದನ್ನು ಬೆರೆಸಬೇಕೋ ಅದನ್ನು ಅಚ್ಚುಕಟ್ಟಾಗಿಯೇ ಮಾಡಲಾಗಿದೆ. ಆದ್ದರಿಂದಲೇ ವೀಕೆಂಡ್ ಎಂಬುದು ಸಂಪೂರ್ಣ ಎಂಟರ್‍ಟೈನ್ಮೆಂಟ್ ಪ್ಯಾಕೇಜಿನಂತೆ ಮೂಡಿ ಬಂದಿದೆ. ಒಂದಿಡೀ ಚಿತ್ರ ಇಷ್ಟೊಂದು ಪರಿಣಾಮಕಾರಿಯಾಗಿ ಮೂಡಿ ಬರಲು ಬೇರೇನೇ ಕಾರಣಗಳಿದ್ದರೂ ಅನಂತ್ ನಾಗ್ ಎಂಬ ಮೇರು ನಟ ಈ ಚಿತ್ರದ ಪ್ರಧಾನ ಆಕರ್ಷಣೆ. ಅವರಿಲ್ಲಿ ಸಾಫ್ಟ್‍ವೇರ್ ಮೊಮ್ಮಗನ ತಾತನಾಗಿ, ತಪ್ಪಾದಾಗ ತಿದ್ದುವ ಹಿರಿಯನ ಪಾತ್ರವನ್ನು ಎಂದಿನಂತೆಯೇ ಮನಸೂರೆಗೊಳ್ಳುವಂತೆ ನಿರ್ವಹಿಸಿದ್ದಾರೆ.

    ವಿಶೇಷವೆಂದರೆ ಈ ಚಿತ್ರವನ್ನು ನಿರ್ಮಾಣ ಮಾಡಿರುವ ಮಂಜುನಾಥ್ ಡಿ ಅವರೇ ಪೊಲೀಸ್ ಅಧಿಕಾರಿಯಾಗಿಯೂ ಅಬ್ಬರಿಸಿದ್ದಾರೆ. ಈ ಪಾತ್ರವೂ ಸೇರಿದಂತೆ ಗೋಪಿನಾಥ್ ಭಟ್, ರಘು ನೀನಾಸಂ ಸೇರಿದಂತೆ ಎಲ್ಲ ಪಾತ್ರಗಳೂ ಮನಮುಟ್ಟುವಂತಿವೆ. ಮಿಲಿಂದ್ ಮತ್ತು ಸಂಜನಾ ಬುರ್ಲಿ ಕೂಡಾ ತಂತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಶಶಿಧರ್ ಅವರ ಛಾಯಾಗ್ರಹಣ ಕಥೆಗೆ ಹೊಸಾ ಓಘವನ್ನೇ ನೀಡಿದೆ. ಹೀಗೆ ಕಮರ್ಶಿಯಲ್ ವೇನಲ್ಲಿ ರೋಚಕವಾದ ಕಥೆ ಹೇಳೋ ಈ ಚಿತ್ರ ಮನಮಿಡಿಯುವಂಥಾ ಒಂದು ಸಂದೇಶವನ್ನೂ ರವಾನಿಸುತ್ತದೆ. ಇಡೀ ಸಿನಿಮಾ, ಶ್ರಮ ಸಾರ್ಥಕ ಅನ್ನಿಸೋದು ಈ ಕಾರಣದಿಂದಲೇ. ಒಟ್ಟಾರೆಯಾಗಿ ವೀಕೆಂಡ್ ಒಂದೊಳ್ಳೆ ಚಿತ್ರ ನೋಡಿದ ಖುಷಿಯನ್ನು ನೋಡುಗರೆಲ್ಲರ ಮನಸಿಗಿಳಿಯುವಂತೆ ಮಾಡುತ್ತದೆ.

    ರೇಟಿಂಗ್: 3.5/5 

  • ಟೆಕ್ಕಿಗಳ ಮನೋಲೋಕ ಅನಾವರಣಗೊಳಿಸಲಿರೋ ವೀಕೆಂಡ್!

    ಟೆಕ್ಕಿಗಳ ಮನೋಲೋಕ ಅನಾವರಣಗೊಳಿಸಲಿರೋ ವೀಕೆಂಡ್!

    ಸುರೇಶ್ ಶೃಂಗೇರಿ ನಿರ್ದೇಶನ ಮಾಡಿರುವ ವೀಕೆಂಡ್ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಮಿಲಿಂದ್ ಮತ್ತು ಸಂಜನಾ ಬುರ್ಲಿ ನಾಯಕ ನಾಯಕಿಯರಾಗಿ ನಟಿಸುತ್ತಿರೋ ಈ ಚಿತ್ರದಲ್ಲಿ ಅನಂತ್ ನಾಗ್ ಪ್ರಧಾನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಸಿನಿಮಾ ಬಗ್ಗೆ ಈ ಪಾಟಿ ಕ್ರೇಜ್ ಹುಟ್ಟಿಕೊಂಡಿರೋದರ ಹಿಂದೆ ಅನಂತ್ ಪಾತ್ರದ ವೈಶಿಷ್ಟ್ಯವೂ ಸೇರಿಕೊಂಡಿದೆ.

    ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ಡಿ ಅವರು ನಿರ್ಮಾಣ ಮಾಡಿರೋ ಚಿತ್ರ ವೀಕೆಂಡ್. ಇದೊಂದು ಯುವ ಆವೇಗವನ್ನು ಒಳಗೊಂಡಿರುವ, ಈ ಮೂಲಕವೇ ಸಾಮಾಜಿಕ ಕಾಳಜಿಯನ್ನೂ ಕೂಡಾ ಪ್ರಚುರಪಡಿಸೋ ಪಕ್ಕಾ ಕಮರ್ಶಿಯಲ್ ಚಿತ್ರ. ಹೊಸ ತಂತ್ರಜ್ಞಾನ, ಹೊಸ ಬಗೆಯ ನಿರೂಪಣೆಯೊಂದಿಗೆ ವೀಕೆಂಡ್ ಬೇರೆಯದ್ದೇ ರೀತಿಯಲ್ಲಿ ಪ್ರೇಕ್ಷಕರಿಗೆಲ್ಲ ಮಜಾ ಕೊಡುವಂತೆ ಮೂಡಿ ಬಂದಿದೆಯಂತೆ.

    ಇಲ್ಲಿ ಸಾಫ್ಟ್‍ವೇರ್ ಉದ್ಯೋಗಿಗಳ ಜಗತ್ತನ್ನು ಕಣ್ಣಿಗೆ ಕಟ್ಟಿದಂತೆ ಅನಾವರಣಗೊಳಿಸಲಾಗಿದೆಯಂತೆ. ಹೇಳಿ ಕೇಳಿ ಐಟಿ ವಲಯದ ಮಂದಿಗೆ ಈ ವೀಕೆಂಡ್ ಮೋಜು ಮಸ್ತಿ ಅನ್ನೋದು ಫೇವರಿಟ್ ಅಂಶ. ಆದರೆ ಅಳತೆ ಮೀರಿದರೆ ವೀಕೆಂಡ್ ಮಸ್ತಿ ಎಂಬುದು ಭೀಕರ ಅನಾಹುತಗಳಿಗೂ ಕಾರಣವಾಗಿ ಬಿಡುತ್ತದೆ. ಅಂಥಾ ಅಂಶಗಳನ್ನು ಫ್ಯಾಮಿಲಿ ಸೆಂಟಿಮೆಂಟಿನ ಸುತ್ತ ಬೆಸೆದು ರೋಚಕವಾದ ಕಥೆಯ ಮೂಲಕ ಈ ಚಿತ್ರವನ್ನು ಅಣಿಗೊಳಿಸಲಾಗಿದೆ.

    ಈ ಚಿತ್ರದಲ್ಲಿ ಅನಂತ್ ನಾಗ್ ನಾಯಕನ ತಾತನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅವರದ್ದು ಯುವ ಸಮೂಹವನ್ನು ಸರಿ ದಾರಿಗೆ ತರುವ, ತನ್ನ ಮೊಮ್ಮಗನನ್ನು ಎಲ್ಲ ಎಡವಟ್ಟುಗಳಿಂದ ಪಾರುಗಾಣಿಸೋ ಪಾತ್ರ. ಮಿಲಿಂದ್ ಮತ್ತು ಸಂಜನಾ ಬುರ್ಲಿ ಈ ಚಿತ್ರದಲ್ಲಿ ನಾಯಕ ನಾಯಕಿಯರಾಗಿ ನಟಿಸಿದ್ದಾರೆ.

  • ವೀಕೆಂಡ್ ಹಾಡುಗಳ ಹಂಗಾಮಾ!

    ವೀಕೆಂಡ್ ಹಾಡುಗಳ ಹಂಗಾಮಾ!

    ಬೆಂಗಳೂರು: ಹಾಡುಗಳೇ ಚಿತ್ರವೊಂದರ ಆಹ್ವಾನ ಪತ್ರಿಕೆ ಇದ್ದಂತೆ ಎಂಬ ಮಾತಿದೆ. ಆದ್ದರಿಂದಲೇ ಹಾಡುಗಳು ಗೆದ್ದರೆ ಚಿತ್ರಕ್ಕೂ ಗೆಲುವು ಗ್ಯಾರೆಂಟಿ ಎಂಬ ನಂಬಿಕೆ. ಇದಕ್ಕೆ ತಕ್ಕುದಾಗಿಯೇ ಹಾಡುಗಳು ಹಿಟ್ ಆದರೆ ಆ ಸಿನಿಮಾ ಕೂಡಾ ಹಿಟ್ ಆಗುತ್ತದೆ ಎಂಬ ನಂಬಿಕೆಯೂ ಗಾಂಧಿನಗರದಲ್ಲಿದೆ. ಇದು ಬಹುತೇಕ ಸತ್ಯವೂ ಹೌದು. ಈ ನಿಟ್ಟಿನಲ್ಲಿ ನೋಡ ಹೋದರೆ ಈ ವಾರ ಬಿಡುಗಡೆಗೆ ರೆಡಿಯಾಗಿರೋ ವೀಕೆಂಡ್ ಚಿತ್ರದ ಗೆಲುವು ನಿಚ್ಚಳವಾಗಿದೆ.

    ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ಡಿ ಅವರು ನಿರ್ಮಾಣ ಮಾಡಿರೋ ಈ ಚಿತ್ರವನ್ನು ಶೃಂಗೇರಿ ಸುರೇಶ್ ನಿರ್ದೇಶನ ಮಾಡಿದ್ದಾರೆ. ಈಗ್ಗೆ ಮೂರು ದಶಕಗಳಿಂದೀಚೆಗೆ ಚಿತ್ರರಂಗದಲ್ಲಿ ಸಕ್ರಿಯರಾಗಿರೋ ಸುರೇಶ್ ಅವರು ಈಗಿನ ಯುವ ಸಮುದಾಯದ ತಲ್ಲಣಗಳನ್ನು ಸಾಮಾಜಿಕ ಕಾಳಜಿಯೊಂದಿಗೆ ಕಮರ್ಷಿಯಲ್ ವೇನಲ್ಲಿ ಈ ಮೂಲಕ ದೃಷ್ಯೀಕರಿಸಿದ್ದಾರೆ.

    ಈ ಚಿತ್ರ ಹಾಡುಗಳು ಮತ್ತು ಟ್ರೈಲರ್ ಮೂಲಕವೇ ಜನಮಾನಸಕ್ಕೆ ಹತ್ತಿರಾಗಿದೆ. ಅದರಲ್ಲಿಯೂ ಹಾಡುಗಳಂತೂ ನವೀನ ರೀತಿಯಲ್ಲಿ ಪ್ರೇಕ್ಷಕರನ್ನು ತಲುಪಿಕೊಂಡಿವೆ. ಶ್ರೀಲಂಕಾ ಮೂಲದ ಮನೋಜ್ ಸಂಗೀತ ನಿರ್ದೇಶನದಲ್ಲಿ ಈ ಸಿನಿಮಾದ ಮೂರು ಹಾಡುಗಳು ಮೂಡಿ ಬಂದಿವೆ. ಅನನ್ಯಾ ಭಟ್ ಹಾಡಿರೋ ಐಲಾ ಐಲಾ ಎಂಬ ಪಾರ್ಟಿ ಸಾಂಗ್ ಅಂತೂ ಹೊಸಾ ಕ್ರೇಜ್ ಸೃಷ್ಟಿಸಿ ಬಿಟ್ಟಿದೆ.

    ಈ ಚಿತ್ರದಲ್ಲಿ ಮಿಲಿಂದ್ ಮತ್ತು ಸಂಜನಾ ಬುರ್ಲಿ ನಾಯಕ ನಾಯಕಿಯರಾಗಿ ಅಭಿನಯಿಸಿದ್ದಾರೆ. ಶಶಿಧರ್ ಛಾಯಾಗ್ರಹಣ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ, ಮನೋಜ್ ಸಂಗೀತ ಹಾಗೂ ಅನಂತ್ ನಾಗ್, ಮಂಜುನಾಥ್, ನೀನಾಸಂ ರಘು, ಬ್ಯಾಂಕ್ ಸತೀಶ್, ನೀತು ಬಾಲಾ, ವೀಣಾ ಜಯಶಂಕರ್, ಸಂಜಯ್ ನಾಗೇಶ್, ಮಂಜುನಾಥ ಶಾಸ್ತ್ರಿ, ಗೋಪಿನಾಥ್ ಭಟ್, ನಾಗಭೂಷಣ್ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.

  • ವೀಕೆಂಡ್ ಬಗ್ಗೆ ಅನಂತ್ ನಾಗ್ ಹೇಳಿದ್ದೇನು?

    ವೀಕೆಂಡ್ ಬಗ್ಗೆ ಅನಂತ್ ನಾಗ್ ಹೇಳಿದ್ದೇನು?

    ಹಿರಿಯ ನಟ ಅನಂತ್ ನಾಗ್ ಒಂದು ಸಿನಿಮಾವನ್ನು ಒಪ್ಪಿಕೊಳ್ಳಲು ಅನುಸರಿಸೋ ರೀತಿ ರಿವಾಜುಗಳ ಬಗ್ಗೆ ಚಿತ್ರರಂಗದ ಮಂದಿಗೆ ಸ್ಪಷ್ಟವಾದ ಅಂದಾಜಿರುತ್ತದೆ. ತಮ್ಮ ಪಾತ್ರ ಮಾತ್ರವಲ್ಲ, ಇಡೀ ಕಥೆಯ ಇಂಚಿಂಚನ್ನೂ ಅಳೆದೂ ತೂಗಿದ ನಂತರವಷ್ಟೇ ಅವರು ಒಪ್ಪಿಗೆ ಸೂಚಿಸುತ್ತಾರೆ. ಆದರೆ ಅದು ತುಂಬಾ ಕಷ್ಟದ ಕೆಲಸ. ಅಂಥಾದ್ದರಲ್ಲಿ ಸ್ಕ್ರಿಪ್ಟ್ ನೋಡಿಯೇ ಅನಂತ್ ನಾಗ್ ಮೆಚ್ಚಿಕೊಳ್ಳುತ್ತಾರೆಂದರೆ ಅದು ಯಾವ ಚಿತ್ರಕ್ಕಾದರೂ ಗೆಲುವಿನ ಸ್ಪಷ್ಟ ಸೂಚನೆ. ಈ ವಾರ ಬಿಡುಗಡೆಗೆ ಅಣಿಯಾಗಿರುವ ವೀಕೆಂಡ್ ಚಿತ್ರ ಖುದ್ದು ಅನಂತ್ ನಾಗ್ ಅವರಿಂದಲೇ ಮೆಚ್ಚಿಗೆ ಗಳಿಸಿಕೊಂಡಿತ್ತೆಂಬುದು ನಿಜವಾದ ವಿಶೇಷ.

    ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ಡಿ ನಿರ್ಮಾಣ ಮಾಡಿರೋ, ಶೃಂಗೇರಿ ಸುರೇಶ್ ನಿರ್ದೇಶನದ ವೀಕೆಂಡ್ ಟೆಕ್ಕಿಗಳ ಜಗತ್ತಿನ ಸುತ್ತ ನಡೆಯೋ ಕಥಾ ಹಂದರ ಹೊಂದಿರೋ ಚಿತ್ರ. ಇದರಲ್ಲಿ ಅನಂತ್ ನಾಗ್ ಟೆಕ್ಕಿಯ ತಾತನಾಗಿ ನಟಿಸಿದ್ದಾರೆ. ಸಾಮಾನ್ಯವಾಗಿ ಎಲ್ಲವನ್ನೂ ನೇರ ನಿಷ್ಠುರವಾಗಿಯೇ ಹೇಳಿ ಬಿಡುವ ಸ್ವಭಾವದ ಅನಂತ್, ವೀಕೆಂಡ್ ಬಗ್ಗೆ ಮಾತ್ರ ಮೆಚ್ಚಿಕೊಂಡು ಭೇಷ್ ಅಂದಿದ್ದಾರೆಂದರೆ ಈ ಚಿತ್ರದ ಬಗ್ಗೆ ಯಾರಿಗಾದರೂ ಒಲವು ಮೂಡದಿರಲು ಸಾಧ್ಯವಿಲ್ಲ.

    ಆರಂಭದಲ್ಲಿ ಈ ಚಿತ್ರದ ಸ್ಕ್ರಿಪ್ಟ್ ಪಡೆದು ಎರಡೆರಡು ಸಲ ಓದಿಕೊಂಡಿದ್ದ ಅನಂತ್ ನಾಗ್ ಖುಷಿಯಿಂದಲೇ ಡೇಟ್ಸ್ ಕೊಟ್ಟಿದ್ದರಂತೆ. ಜೊತೆಗೆ ಕಥೆ ತುಂಬಾ ಚೆನ್ನಾಗಿದೆ ಎಂಬ ಮೆಚ್ಚುಗೆಯ ಮಾತುಗಳನ್ನೂ ಆಡಿದ್ದರಂತೆ. ಬಳಿಕ ಹಿರಿಯರಾಗಿ ಚಿತ್ರತಂಡಕ್ಕೆ ಹುರುಪು ತುಂಬುತ್ತಲೇ ಚಿತ್ರೀಕರಣ ಮುಗಿಸಿಕೊಂಡ ಕ್ಷಣದಲ್ಲಿ ಸ್ಕ್ರಿಪ್ಟ್‍ಗಿಂತಲೂ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ ಅಂತ ನಿರ್ದೇಶಕರ ಬೆನ್ತಟ್ಟಿದ್ದರಂತೆ. ಅನಂತ್ ನಾಗ್ ಅವರ ಮೆಚ್ಚುಗೆಯ ಮಾತುಗಳೇ ಈ ಚಿತ್ರದ ಗೆಲುವಿನ ಮುನ್ಸೂಚನೆಯಂತೆ ಕಾಣಿಸುತ್ತಿದೆ.

    ಹೀಗೆ ಆರಂಭಿಕವಾಗಿಯೇ ಅನಂತ್ ನಾಗ್ ಅವರಿಂದ ಮೆಚ್ಚಿಗೆ ಗಳಿಸಿಕೊಂಡಿದ್ದ ವೀಕೆಂಡ್ ಈ ವಾರ ಬಿಡುಗಡೆಗೊಳ್ಳುತ್ತಿದೆ. ಯುವ ಮನಸುಗಳ ವೀಕೆಂಡ್ ಎಂಬ ಆವೇಗದ ಸುತ್ತಾ ಹೊಸೆದಿರೋ ಚೆಂದದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಇದುವರೆಗೂ ಈ ಚಿತ್ರದ ಬಗ್ಗೆ ಹಬ್ಬಿಕೊಂಡಿರೋ ಕುತೂಹಲಗಳಿಗೆಲ್ಲ ಈ ವಾರವೇ ಸ್ಪಷ್ಟ ಉತ್ತರ ಸಿಗಲಿದೆ.