Tag: Sanjana Galrani

  • ಸಂಜನಾರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಲಾಗಿದೆ- ನಟಿ ಪರ ವಕೀಲ ದೂರು

    ಸಂಜನಾರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಲಾಗಿದೆ- ನಟಿ ಪರ ವಕೀಲ ದೂರು

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ನಟಿ ಸಂಜನಾ ಗಲ್ರಾನಿ ಸದ್ಯ ಪರಪ್ಪನ ಅಗ್ರಹಾರದಿಂದ ಜಾಮೀನು ಮೇಲೆ ಬಿಡುಗಡೆಗೊಂಡು ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಮಧ್ಯೆ ಇದೀಗ ಅವರ ಮತಾಂತರ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದೆ.

    ಹೌದು. ಸಂಜನಾ ಗಲ್ರಾನಿಯನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ವಕೀಲ ಎನ್.ಪಿ ಅಮೃತೇಶ್ ಗಂಭೀರವಾಗಿ ಆರೋಪಿಸಿದ್ದಾರೆ. ಅಲ್ಲದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಾಟನ್ ಪೇಟೆ ಪೊಲೀಸ್ ಠಾಣೆ, ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಳಿ ರಿಜಿಸ್ಟರ್ ಪೋಸ್ಟ್ ಮೂಲಕ ದೂರು ನೀಡಿದ್ದಾರೆ.

     

    ನಟಿ ಸಂಜನಾಳನ್ನು ಮತಾಂತರ ಮಾಡಿದ ಟ್ಯಾನರಿ ರಸ್ತೆಯಲ್ಲಿರುವ ದಾರುಲ್ ಉಲುಮ್ ಶಾವಲಿ ಯಲ್ಲಾ ಮಸೀದಿಯ ಮೌಲ್ವಿ ವಿರುದ್ಧ ದೂರು ನೀಡಲಾಗಿದೆ. ಆದರೆ ಈ ಬಗ್ಗೆ ದೂರು ಬಂದಿರುವ ಯಾವುದೇ ಮಾಹಿತಿ ಇಲ್ಲ ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಎಂ.ಪಾಟೀಲ್ ಹೇಳಿದ್ದಾರೆ.

    ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಂಜನಾ ಗಲ್ರಾನಿ ಮೂಲ ಹೆಸರು ಅರ್ಚನಾ ಮನೋಹರ್ ಗಲ್ರಾನಿ. ಈ ಮಧ್ಯೆ 2018ರಲ್ಲಿ ಮಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದು ಮಹಿರಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ ಎಂದು ವಕೀಲ ಅಮೃತೇಶ್ ಆರೋಪಿಸಿದ್ದಾರೆ.

  • ಮತಾಂತರ ಆಗಿದ್ದಾರಾ ಗಂಡ-ಹೆಂಡತಿ ನಟಿ ಸಂಜನಾ

    ಮತಾಂತರ ಆಗಿದ್ದಾರಾ ಗಂಡ-ಹೆಂಡತಿ ನಟಿ ಸಂಜನಾ

    ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಮತಾಂತರ ಆಗಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಅವರ ಹೆಸರು ಕೇಳಿ ಬಂದ ಸಮಯದಿಂದಲೂ ಅವರ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದೆ. ಬಂಧನದ ಮುನ್ನ 32 ವರ್ಷವಾದರೂ ಇನ್ನು ಮದುವೆಯೇ ಆಗಿಲ್ಲ. ನನ್ನ ಕಾರೆಕ್ಟರ್ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಂಜನಾ ಆರೋಪಿಸಿದ್ದರು. ಆದರೆ ಆ ಬಳಿಕ ಅವರು ವೈದ್ಯರೊಬ್ಬರನ್ನು ಕಳೆದ ವರ್ಷವೇ ಮದುವೆಯಾಗಿದ್ದರು ಎಂಬ ಫೋಟೋ ಸಾಕಷ್ಟು ವೈರಲ್ ಆಗಿತ್ತು.

    ಸದ್ಯ ಸಂಜನಾ ಗಲ್ರಾನಿ ಅವರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎನ್ನಲಾಗಿದೆ. ಡಾ. ಅಜೀವ್ ಪಾಷಾ ಅವರ ಪರಿಚಯವಾದ ಬಳಿಕ ಪ್ರೇಮ ಪಾಶಕ್ಕೆ ಸಿಲುಕಿದ್ದ ಸಂಜನಾ ಅವರು ಮತಾಂತರವಾದ ಆಗಿ ಅವರನ್ನು ಮದುವೆಯಾಗಿದ್ದರು ಎಂಬ ಮಾಹಿತಿ ಪೊಲೀಸ್ ಉನ್ನತ ಮೂಲಗಳಿಂದ ಲಭಿಸಿದೆ. ಮದುವೆಯಾದ ಬಳಿಕ ಕೆಲ ಸಮಯ ವೈದ್ಯರೊಂದಿಗೆ ವಾಸವಿದ್ದ ಅವರು 7 ತಿಂಗಳ ಹಿಂದೆಯಷ್ಟೇ ಇಬ್ಬರ ನಡುವೆ ವೈಮನಸ್ಸು ಮೂಡಿದ್ದ ಕಾರಣದಿಂದ ದೂರವಾಗಿದ್ದರು. ಚಿತ್ರರಂಗದಲ್ಲಿ ಇರುವ ಕಾರಣ ತಮ್ಮ ಮದುವೆ ಹಾಗೂ ಮತಾಂತರದ ಮಾಹಿತಿಯನ್ನು ಮುಚ್ಚಿಟ್ಟಿದ್ದರು ಎನ್ನಲಾಗಿದೆ. ಇದನ್ನೂ ಓದಿ: ನನಗೆ ಸಿಗರೇಟ್ ಕೊಡಿ- ಜೈಲಿನಲ್ಲಿ ಸಂಜನಾ ಮತ್ತೆ ಕಿರಿಕ್

    ಸಂಜನಾ ಮದುವೆಯಾಗಿರುವುದು ಅಧಿಕೃತ ಮಾಹಿತಿ ಲಭಿಸಿಲ್ಲ. ಆದರೆ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ರಾಹುಲ್ ತಂದೆ ರಾಮಚಂದ್ರ ಅವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡುವ ವೇಳೆ ಸಂಜನಾ ಪತಿಯ ವಿಚಾರವನ್ನು ಪ್ರಸ್ತಾಪಿಸಿದ್ದರು. ನನಗೆ ಹೃದಯ ಸಂಬಂಧಿ ಖಾಯಿಲೆ ಇದೆ. ಸಂಜನಾ ಪತಿಯೇ ನನಗೆ ಚಿಕಿತ್ಸೆ ನೀಡಿದ್ದರು. ಸಂಜನಾ ಪತಿ ಕೂಡ ನನ್ನ ಮಗ ರಾಹುಲ್‍ಗೆ ಪರಿಚಯವಿದ್ದು, ಸಂಜನಾ ಪತಿ ಡಾಕ್ಟರ್ ಆಗಿದ್ದು ನನಗೆ ಸಹಾಯ ಮಾಡಿದ್ರು ಎಂದು ಹೇಳಿದ್ದರು. ಇದನ್ನೂ ಓದಿ: ಡ್ರಗ್ಸ್ ಪ್ರಕರಣ – ಅಕುಲ್ ಬಾಲಾಜಿಗೆ ಸಿಸಿಬಿ ನೋಟಿಸ್

    ತೆಲುಗು ಕಾರ್ಯಕ್ರಮ ಸಂದರ್ಶನವೊಂದರಲ್ಲಿ 2018ರಲ್ಲಿ ಮಾತನಾಡಿದ್ದ ಸಂಜನಾ ತಮ್ಮ ಪ್ರೀತಿಯ ಬಗ್ಗೆ ಹೇಳಿದ್ದರು. ನಾನು ಪ್ರೀತಿಸುತ್ತಿರುವ ಹುಡುಗ ಡಾಕ್ಟರ್ ಆಗಿದ್ದು, ನನ್ನ ಕುಟುಂಬದವರಿಗೂ ಪರಿಚಯವಿದೆ. ಮನೆಗೂ ಬಂದು ಹೋಗುತ್ತಾರೆ. ಬೆಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಅವರನ್ನು ಪರಿಚಯವಾಗಿದ್ದರು. ನನ್ನ ವೃತ್ತಿ ಜೀವನದ ಆರಂಭದಲ್ಲಿ ಈವೆಂಟ್ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದ ವೇಳೆ ಅವರನ್ನು ನೋಡಿದ್ದೆ, ಮೊದಲ ನೋಟದಲ್ಲೇ ಅವರ ಮೇಲೆ ಪ್ರೀತಿ ಮೂಡಿತ್ತು ಎಂದು ಸಂಜನಾ ಹೇಳಿದ್ದರು. ಇದನ್ನೂ ಓದಿ: ಜೈಲಿನಲ್ಲಿ ಸೊಳ್ಳೆ ಕಚ್ತಿದೆಂದು ನಿದ್ರಿಸದೆ ಸಂಜನಾ ರಂಪಾಟ!

  • ಜೈಲಿನಲ್ಲಿ ಸೊಳ್ಳೆ ಕಚ್ತಿದೆಂದು ನಿದ್ರಿಸದೆ ಸಂಜನಾ ರಂಪಾಟ!

    ಜೈಲಿನಲ್ಲಿ ಸೊಳ್ಳೆ ಕಚ್ತಿದೆಂದು ನಿದ್ರಿಸದೆ ಸಂಜನಾ ರಂಪಾಟ!

    ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಪರಪ್ಪನ ಅಗ್ರಹಾರ ಜೈಲು ಸೇರಿರುವ ತುಪ್ಪದ ಬೆಡಗಿ ಏನು ಮಾಡಬೇಕೆಂದು ತಿಳಿಯದೇ ಒದ್ದಾಡುತ್ತಿದ್ದಾರೆ. ಈಗ ಸಂಜನಾ ಕೂಡ ಅವರಿಗೆ ಸಾಥ್ ಕೊಟ್ಟಿದ್ದಾರೆ. ಇಬ್ಬರೂ ಒಂದೇ ಕೋಣೆಯಲ್ಲಿ ವಾಸ ಮಾಡುತ್ತಿದ್ದಾರೆ.

    ಇಷ್ಟು ದಿನ ಸುಪ್ಪತ್ತಿಗೆಯಲ್ಲಿದ್ದ ನಟಿಮಣಿಯರು ಈಗ ಜೈಲು ಸೇರಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ರಾಗಿಣಿ ಜೈಲುವಾಸ 4ನೇ ದಿನಕ್ಕೆ ಕಾಲಿಟ್ಟಿದ್ದರೆ, ಸಂಜನಾ ಜೈಲುವಾಸ ಒಂದು ದಿನ ಪೂರೈಸಿದೆ. ಜೈಲು ಅಧಿಕಾರಿಗಳು ಸಂಜನಾ-ರಾಗಿಣಿಯನ್ನು ಕ್ವಾರಂಟೈನ್ ಕೇಂದ್ರದ ಒಂದೇ ಕೊಠಡಿಯಲ್ಲಿ ಇರಿಸಿದ್ದಾರೆ. ಕಳೆದ ರಾತ್ರಿ 2 ಗಂಟೆ ತನಕ ನಟಿ ಸಂಜನಾ ನಿದ್ದೆ ಮಾಡದೇ ಅರಚಿ ರಂಪಾಟ ನಡೆಸಿದ್ದಾರೆ. ಸೊಳ್ಳೆ ಕಚ್ಚುತ್ತಿದೆ, ನಿದ್ದೆ ಬರ್ತಿಲ್ಲ, ತಲೆ ನೋವು ಜಾಸ್ತಿ ಆಗಿದೆ, ಟ್ರೀಟ್ಮೆಂಟ್ ಕೊಡಿಸಿ ಎಂದು ಮಧ್ಯರಾತ್ರಿ ಕಿರುಚಾಡಿದ್ದಾರೆ. ಈ ವೇಳೆ, ನಟಿ ರಾಗಿಣಿ, ಸಂಜನಾರನ್ನು ಸಂತೈಸಿದ್ದಾರೆ ಎಂದು ತಿಳಿದುಬಂದಿದೆ.

    ಮೇಕಪ್ ಕಿಟ್ ತರಿಸಿಕೊಂಡ್ರಾ ತುಪ್ಪದ ಬೆಡಗಿ?
    ನಟಿ ರಾಗಿಣಿ ಬಾಕಿ ದಿನಗಳನ್ನು ಇದೇ ಕೋಣೆಯಲ್ಲಿ ಹೇಗೆ ಕಳೆಯಬೇಕೆಂದು ಚಿಂತಿಸುತ್ತಿದ್ದಾರೆ. ಲೈಫೇ ಸುಟ್ಟು ಹೋಯ್ತಲ್ಲ ಎನ್ನುತ್ತಾ ಅಳುತ್ತಿದ್ದಾರೆ. ಸಂಜನಾ ಕೂಡ ಈಗ ರಾಗಿಣಿಗೆ ಸಾಥ್ ಕೊಟ್ಟಿದ್ದಾರೆ. ಒಂದೇ ಕೋಣೆಯಲ್ಲಿ ಇಬ್ಬರೂ ನಟಿಯರು ಕಷ್ಟ ಸುಖ ಹಂಚಿಕೊಳ್ಳುತ್ತಿದ್ದಾರೆ. ಜೈಲಿನ ಕೋಣೆ ಹೊರಗೆ ಸುತ್ತಾಡಲು ಅವಕಾಶ ಇದ್ದರೂ ರಾಗಿಣಿ ನಾಲ್ಕು ದಿನಗಳಿಂದ ಹೊರಗೆ ಬಂದಿಲ್ವಂತೆ. ಜೈಲೂಟವನ್ನೇ ಮೃಷ್ಟಾನ್ನವೆಂದು ತಿನ್ನುತ್ತಿದ್ದಾರೆ. ಮನೆಯಿಂದ ತರಿಸಿಕೊಂಡ ಇಂಗ್ಲಿಷ್ ಪುಸ್ತಕಗಳನ್ನು ಓದುತ್ತಿದ್ದಾರೆ. ಅಪ್ಪ-ಅಮ್ಮ ನೋಡಲು ಬಂದರೂ ಅದಕ್ಕೆ ಪೊಲೀಸರು ಅವಕಾಶ ಕೊಟ್ಟಿಲ್ಲ. ಇದೆಲ್ಲದರ ನಡುವೆ ರಾಗಿಣಿ ಮನೆಯಿಂದ ಮೇಕಪ್ ಕಿಟ್ ತರಿಸಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಹಬ್ಬಿದೆ.

    ಜೈಲಲ್ಲಿರುವ ಸಂಜನಾಗೆ ಬಿಗ್ ಶಾಕ್!
    ಡ್ರಗ್ ಪೆಡ್ಲರ್ ಪ್ರಶಾಂತ್ ರಂಕಾ ಜೊತೆಗೆ ಡ್ರಗ್ಸ್ ಸರಬರಾಜಿನಲ್ಲಿ ನಟಿ ಸಂಜನಾ ಕೂಡ ಪಾಲುದಾರರಾಗಿದ್ದರು ಎಂಬ ಅಂಶ ಸಿಸಿಬಿ ತನಿಖೆಯಲ್ಲಿ ಬಯಲಾಗಿದೆ ಎನ್ನಲಾಗಿದೆ. ಖುದ್ದು ಡ್ರಗ್ ಪೆಡ್ಲರ್ ಪ್ರಶಾಂತ್ ರಂಕಾ ಈ ವಿಚಾರವನ್ನು ಸಿಸಿಬಿ ಅಧಿಕಾರಿಗಳ ಮುಂದೆ ಹೇಳ್ಕೊಂಡು ತಪ್ಪೊಪ್ಪಿಕೊಂಡಿದ್ದಾನೆ. ಕೇರಳ, ಪಂಜಾಬ್, ಗೋವಾ, ಮುಂಬೈ ಹೀಗೆ ಬೇರೆ ಬೇರೆ ಕಡೆಯಿಂದ ಡ್ರಗ್ಸ್ ತರಿಸಿಕೊಂಡು ತಾವು ಪಾಲ್ಗೊಳ್ಳುವ ಪಾರ್ಟಿಗಳಿಗೆ ಇಬ್ಬರು ಮಾದಕ ವಸ್ತು ಸರಬರಾಜು ಮಾಡ್ತಿದ್ರು. ಪಾರ್ಟಿಗೆ ಬರುವ ಉದ್ಯಮಿಗಳಿಗೆ, ರಾಜಕಾರಣಿಗಳು, ಚಿತ್ರನಟರಿಗೆ ಮಾದಕ ವಸ್ತುವನ್ನ ಮಾರಾಟ ಮಾಡಿದ್ರು. ಅಲ್ಲದೇ, ಪ್ರಶಾಂತ್ ರಂಕಾ ಕೂಡ ಸಂಜನಾ ಜೊತೆ ವಿದೇಶಗಳಲ್ಲೂ ಡ್ರಗ್ಸ್ ಪಾರ್ಟಿ ಮಾಡಿದ್ದಾನಂತೆ. ಇದೆಲ್ಲಾ ವಿಚಾರ ಸಿಸಿಬಿ ಕೋರ್ಟ್‍ಗೆ ಸಲ್ಲಿಸಿರುವ ರಿಮ್ಯಾಂಡ್ ಅರ್ಜಿಯಲ್ಲಿ ನಮೂದಾಗಿದೆ.

    ಸಂಜನಾ-ವಂದನಾ ಗಲಾಟೆ ಸೀಕ್ರೆಟ್ ರಿವೀಲ್!
    ಶೇಖ್ ಫಾಝಿಲ್‍ನ ಕ್ಯಾಸಿನೋ ಬೆಳವಣಿಗೆಗೆ ನಟಿ ಸಂಜನಾ ಮತ್ತು ವಂದನಾ ಜೈನ್ ಫುಲ್ ಸಪೋರ್ಟ್ ಮಾಡಿದ್ರು ಅನ್ನೋ ಮಾಹಿತಿ ಬಹಿರಂಗವಾಗಿದೆ. ಫಾಝಿಲ್‍ನ ಶ್ರೀಲಂಕಾದ ಬ್ಯಾಲ್ಲೆ ಕ್ಯಾಸಿನೋದಲ್ಲಿ ನಡೆಯುತ್ತಿದ್ದ ನೈಟ್ ಪಾರ್ಟಿಗಳು ಮುಂಬೈಗೂ ವಿಸ್ತರಣೆಯಾಗಿದ್ದವು. ಬಾಂಬೆಯಲ್ಲಿ ನಡೆಯುತ್ತಿದ್ದ ಕಲರ್‍ಫುಲ್ ಪಾರ್ಟಿಗಳಿಗೆ ಸಂಜನಾ-ವಂದನಾ ಫುಲ್ ಸಪೋರ್ಟ್ ಮಾಡಿದ್ರು ಅಂತ ತಿಳಿದುಬಂದಿದೆ. ಶೇಖ್ ಫಾಝಿಲ್ ಖುದ್ದಾಗಿ ಸಂಜನಾ ಹಾಗೂ ವಂದನಾಗೆ ಥ್ಯಾಂಕ್ಯೂ ಅಂತಾ ಸೋಷಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದ. ಇತ್ತ ಸಿಸಿಬಿ ವಿಚಾರಣೆಗೆ ಹಾಜರಾದ ಶೇಖ್ ಫಾಝಿಲ್ ಪತ್ನಿ, ನನ್ನ ಗಂಡನ ಪ್ರಾಣಕ್ಕೆ ಆಪತ್ತು ಇದೆ. ನನ್ನ ಗಂಡ ಏನಾದ್ರೂ ಸಿಕ್ಕಿದ್ರೆ ಕೊಂದೇ ಬಿಡ್ತಾರೆ. ದೊಡ್ಡವರು ಯಾರೋ ಕರೆದುಕೊಂಡು ಹೋಗಿರ್ತಾರೆ ಅಂತ ಸಿಸಿಬಿ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾರೆ.

    ನಾಳೆ ಸಂಜನಾ ನ್ಯಾಯಾಂಗ ಬಂಧನದ ಅವಧಿ ಮುಗಿಯಲಿದ್ದು, ಅವರನ್ನು 33ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಇದೇ ವೇಳೆ, ಸಂಜನಾ ಜಾಮೀನು ಅರ್ಜಿಯೂ ವಿಚಾರಣೆಗೆ ಬರಲಿದೆ. ಒಟ್ನಲ್ಲಿ ಇಬ್ಬರು ನಟಿಯರು ಈಗ ಜೈಲಲ್ಲಿ ಪಡಬಾರದ ಪಾಡು ಪಡ್ತಿದ್ದಾರೆ. ಇದರ ಮಧ್ಯೆ ಇಬ್ಬರ ಒಂದೊಂದೇ ಸೀಕ್ರೆಟ್ ಬಯಲಾಗ್ತಿದ್ದು, ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ.

  • ಸಂಜನಾಗೆ 2 ದಿನ, ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ಯಾಕೆ?

    ಸಂಜನಾಗೆ 2 ದಿನ, ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ಯಾಕೆ?

    ಬೆಂಗಳೂರು: ಡ್ರಗ್ಸ್ ಕೇಸಲ್ಲಿ ಸ್ಯಾಂಡಲ್‍ವುಡ್‍ನ ಮತ್ತೊಬ್ಬ ನಟಿ ಜೈಲು ಸೇರಿದ್ದಾರೆ. ರಾಗಿಣಿ ಪರಪ್ಪನ ಅಗ್ರಹಾರ ಸೇರಿದ ಬೆನ್ನಲ್ಲೇ, ಇಂದು ಪ್ರಕರಣದ 14ನೇ ಆರೋಪಿಯಾಗಿರುವ ನಟಿ ಸಂಜನಾ ಕೂಡ ಜೈಲು ಪಾಲಾಗಿದ್ದಾರೆ.

    ಸಿಸಿಬಿ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸಂಜನಾ, ವೀರೇನ್ ಖನ್ನಾ ಮತ್ತು ರವಿಶಂಕರ್‌ನನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ನಟಿ ಸಂಜನಾರನ್ನು 2 ದಿನ, ವೀರೇನ್ ಖನ್ನಾ ಮತ್ತು ರವಿಶಂಕರ್‌ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು. ಜೊತೆಗೆ ಸಂಜನಾ ಪ್ರಕರಣವನ್ನು 2 ದಿನಗಳ ಒಳಗಾಗಿ 33ನೇ ಸಿಸಿಹೆಚ್ ಕೋರ್ಟ್‍ಗೆ ವರ್ಗಾಯಿಸುವಂತೆ ಸೂಚನೆ ನೀಡಿತು.

    ಇಂದಿನ ವಿಚಾರಣೆಯಲ್ಲಿ ಸಂಜನಾ ಪರ ವಕೀಲ ಶ್ರೀನಿವಾಸ ರಾವ್‌ ಮಾತ್ರ ಹಾಜರಾಗಿದ್ದರು. ಪ್ರಬಲ ವಾದ ಮಂಡಿಸಿದ ಶ್ರೀನಿವಾಸ ರಾವ್‌, ನಮ್ಮ ಕಕ್ಷಿದಾರರಿಗೆ ಜಾಮೀನು ತಪ್ಪಿಸಲು ಬೇಕೆಂದೆ ಆರೋಪಿಗಳನ್ನು ಸಿಸಿಬಿ ಈ ಕೋರ್ಟ್‌ಗೆ ಹಾಜರುಪಡಿಸಿದೆ. ನಮಗೆ ಜಾಮೀನು ಕೇಳಲು ಇಲ್ಲಿ ಅವಕಾಶವಿತ್ತು. ಆದ್ರೆ ಈ ಕೋರ್ಟ್‍ಗೆ ಜಾಮೀನು ನೀಡುವ ಅಧಿಕಾರವಿಲ್ಲ. ಸಿಸಿಬಿ ನಮ್ಮ ಕಕ್ಷಿದಾರರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡ್ತಿದೆ ಎಂದು ಆಪಾದಿಸಿದರು.

    ವಾದ ಆಲಿಸಿದ ನ್ಯಾಯಾಧೀಶರು, ಕೇವಲ ಎರಡು ದಿನಗಳ ಮಟ್ಟಿಗೆ ನಟಿ ಸಂಜನಾರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು. ಹೀಗಾಗಿ, ಸೆಪ್ಟೆಂಬರ್ 18ರವರೆಗೆ ಸಂಜನಾ ಜೈಲಲ್ಲಿ ಇರಬೇಕಾಗುತ್ತದೆ.

     

    ಕೋರ್ಟ್ ಆದೇಶದ ಬೆನ್ನಲ್ಲೇ ಸಾಂತ್ವನ ಕೇಂದ್ರದಲ್ಲಿ ಸಂಜನಾ ಕಣ್ಣೀರಿಟ್ಟರು. ಸಂಜೆ 7 ಗಂಟೆ ವೇಳೆಗೆ ನಟಿ ಸಂಜನಾ ಸೇರಿ ಮೂವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಪೊಲೀಸರು ಶಿಫ್ಟ್ ಮಾಡಿದರು. ಇದರೊಂದಿಗೆ ಡ್ರಗ್ಸ್ ಪ್ರಕರಣದಲ್ಲಿ 8 ಆರೋಪಿಗಳು ಜೈಲು ಸೇರಿದಂತಾಗಿದೆ.

    ಸಂಜನಾ ಪರ ವಕೀಲರ ವಾದ ಏನಾಗಿತ್ತು?
    ಈ ಪ್ರಕರಣದ ವಿಚಾರಣೆ ಎನ್‍ಡಿಪಿಎಸ್ ಕೋರ್ಟ್‍ನಲ್ಲಿ ನಡೆಯಬೇಕಿತ್ತು. ಎನ್‍ಡಿಪಿಎಸ್ ಕೋರ್ಟ್‍ನಲ್ಲಿ ನಮಗೆ ಜಾಮೀನು ಕೇಳಲು ಅವಕಾಶವಿತ್ತು. ಆದರೆ ಸಿಸಿಬಿ ಬೇಕಂತಲೇ ಕಕ್ಷಿದಾರರನ್ನು ಈ ಕೋರ್ಟ್‍ಗೆ ಹಾಜರುಪಡಿಸಿದೆ. ಈ ಕೋರ್ಟ್‍ಗೆ ಜಾಮೀನು ನೀಡಲು ಅಧಿಕಾರವಿಲ್ಲ. ಇದು ಗೊತ್ತಿದ್ದೇ ಸಿಸಿಬಿ ಆರೋಪಿಗಳನ್ನು ಇಲ್ಲಿಗೆ ಹಾಜರುಪಡಿಸಿದೆ. ನಮ್ಮ ಕಕ್ಷಿದಾರರಿಗೆ ಜಾಮೀನು ಸಿಗದಂತೆ ಮಾಡಲು ಸಿಸಿಬಿ ಹೀಗೆ ಮಾಡಿದೆ. ಇದನ್ನೂ ಓದಿ: ವಿಚಾರಣೆ ಮುಗಿಸಿ ಹೊರಟ ದಿಗಂತ್, ಐಂದ್ರಿತಾಗೆ ಮುಗಿದಿಲ್ಲ ಸಂಕಷ್ಟ

    ನಮ್ಮ ಕಕ್ಷಿದಾರರ ಹಕ್ಕುಗಳನ್ನು ಸಿಸಿಬಿ ಕಿತ್ತುಕೊಳ್ಳುವ ಪ್ರಯತ್ನ ನಡೆಸಿದೆ. ಇಲ್ಲಿ ಸಿಸಿಬಿ ಲೋಪ ಎಸಗಿರುವುದು ಸ್ಪಷ್ಟವಾಗಿದೆ. ಡ್ರಗ್ಸ್ ಕೇಸ್‍ನಲ್ಲಿ ಸಂಜನಾ ಪಾತ್ರ ಏನು ಎನ್ನುವುದನ್ನು ಸಿಸಿಬಿ ಇಲ್ಲಿಯವರೆಗೆ ತಿಳಿಸಿಲ್ಲ. ಯಾವ ಉದ್ದೇಶಕ್ಕೆ ಸಂಜನಾರನ್ನು ವಶಕ್ಕೆ ಪಡೆಯಲಾಗಿತ್ತು ಎಂಬುದನ್ನು ತಿಳಿಸಿಲ್ಲ. ಯಾವುದೇ ಕಾರಣ ಇಲ್ಲದೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವುದು ಎಷ್ಟು ಸರಿ? ಸಿಸಿಬಿ ಮಾಡಿರುವ ತಪ್ಪಿಗೆ ಕಕ್ಷಿದಾರರಿಗೆ ತೊಂದರೆ ಆಗಬಾರದು ಎಂದು ಶ್ರೀನಿವಾಸ ರಾವ್‌ ಪ್ರಬಲ ವಾದ ಮಂಡಿಸಿದರು.

  • ಜೈಲುಪಾಲಾದ ರಾಗಿಣಿಗೆ ಕಣ್ಣೀರ ವಿದಾಯ ಹೇಳಿದ ಸಂಜನಾ

    ಜೈಲುಪಾಲಾದ ರಾಗಿಣಿಗೆ ಕಣ್ಣೀರ ವಿದಾಯ ಹೇಳಿದ ಸಂಜನಾ

    ಬೆಂಗಳೂರು: ಡ್ರಗ್ಸ್‌ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿಗೆ ಸಂಜನಾ ಕಣ್ಣೀರ ವಿದಾಯ ಹೇಳಿದ್ದಾರೆ.

    ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂಜನಾ, ರಾಗಿಣಿ ಜೊತೆ ಆರೋಪಿಗಳನ್ನು  1ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್‌ ರಾಗಿಣಿ 14  ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ನಟಿ ಸಂಜನಾರನ್ನು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಿತು.

    ವಿಧಿವಿಜ್ಞಾನ ಕೇಂದ್ರದಲ್ಲಿ ಒಬ್ಬರನ್ನೊಬ್ಬರು ಬಿಟ್ಟು ಹೋಗುವಾಗ ಇಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಸಂಜನಾ ಕಣ್ಣೀರು ಹಾಕಿ ರಾಗಿಣಿಗೆ ವಿದಾಯ ಹೇಳಿದ್ದಾರೆ.

    ಡ್ರಗ್ಸ್‌ ಪ್ರಕರಣಕ್ಕೂ ಮೊದಲು ಇಬ್ಬರ ಸಂಬಂಧ ಅಷ್ಟಕ್ಕಷ್ಟೇ ಇತ್ತು. ಆದರೆ ಕಳೆದ 8 ದಿನಗಳಿಂದ ರಾಗಿಣಿ ಮತ್ತು ಸಂಜನಾ ಒಂದಾಗಿದ್ದರು. ಮೊದ ಮೊದಲು ಇಬ್ಬರ ನಡುವೆ ಅಸಮಾಧಾನವಿದ್ದರೂ ನಂತರ ಇಬ್ಬರು ಜೊತೆಯಾಗಿದ್ದರು. ಇದನ್ನೂ ಓದಿ: ದಿನ ಬೆಳಗ್ಗೆ ಎದ್ದರೆ ದೇವರು ನೋಡುವುದು ಬಿಟ್ಟು ಅದು ನೋಡುವುದೇ ಆಗಿದೆ: ರೇವಣ್ಣ

    ರೀಲ್ ನಲ್ಲಿ ಪೊಲೀಸ್‌ ಆಗಿದ್ದ ರಾಗಿಣಿ ಇಂದು ರಿಯಲ್ಲಾಗಿ ಖೈದಿಯಾಗುತ್ತಿದ್ದಾರೆ. ರಾಗಿಣಿ ಐಪಿಎಸ್‌ ಚಿತ್ರದಲ್ಲಿ ಕಾಪ್ ರೋಲ್ ನಲ್ಲಿ‌ ರಾಗಿಣಿ ಮಿಂಚಿಸಿದ್ದಾರೆ.

    ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ವಾಹನದಲ್ಲಿ  ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ. ಈ ಮೂಲಕ ಡ್ರಗ್ಸ್‌ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲುಪಾಲದ ಮೊದಲ ನಟಿ ಎಂಬ ಕುಖ್ಯಾತಿಗೆ ರಾಗಿಣಿ ಪಾತ್ರವಾಗಿದ್ದಾರೆ.

  • ಮೆಸೇಜ್, ಫೋಟೋಸ್ ಡಿಲೀಟ್ – ಸಂಜನಾಳ ಖತರ್ನಾಕ್ ಐಡಿಯಾಗೆ ಪೊಲೀಸ್ರು ಸುಸ್ತು

    ಮೆಸೇಜ್, ಫೋಟೋಸ್ ಡಿಲೀಟ್ – ಸಂಜನಾಳ ಖತರ್ನಾಕ್ ಐಡಿಯಾಗೆ ಪೊಲೀಸ್ರು ಸುಸ್ತು

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ಸಂಜನಾ ಗಲ್ರಾನಿ ಮಾಡಿರುವ ಖತರ್ನಾಕ್ ಐಡಿಯಾಗೆ ಪೊಲೀಸರೇ ದಂಗಾಗಿ ಹೋಗಿದ್ದಾರೆ.

    ಚಂದನವನದಲ್ಲಿ ಡ್ರಗ್ ಘಾಟು ಬರಲಾರಂಭಿಸಿದ ಮೊದಲ ದಿನದಿಂದಲೂ ಸಂಜನಾ ಗಲ್ರಾನಿ ಮೇಲೆ ಸಿಸಿಬಿ ಪೊಲೀಸರು ಕಣ್ಣಿಟ್ಟಿದ್ದರು. ನಿನ್ನೆ ಯಾವುದೇ ನೋಟಿಸ್ ನೀಡದೇ ಏಕಾಏಕಿ ಸಂಜನಾಳ ಇಂದಿರಾನಗರದ ಮನೆ ಮೇಲೆ ಸಿಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಸಂಜನಾಳನ್ನು ವಶಕ್ಕೆ ಪಡೆದು ಅರೆಸ್ಟ್ ಮಾಡಿದ್ದಾರೆ.

    ವೇಳೆ ಸಂಜನಾ ಸಾಕ್ಷಿ ನಾಶ ಮಾಡಿದ್ದು, ತನ್ನ ಮೊಬೈಲ್‍ನಲ್ಲಿದ್ದ ಮೆಸೇಜ್, ಫೋಟೋಸ್ ಮತ್ತು ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಾಟ್ಸಪ್ ಗ್ರೂಪ್‍ಗಳನ್ನು ಡಿಲೀಟ್ ಮಾಡಿದ್ದಾರೆ. ಡಿಲೀಟ್ ಆದ ಮೆಸೇಜ್ ಗಳನ್ನು ಪೊಲೀಸರು ಸುಲಭವಾಗಿ ರಿಟ್ರೀವ್ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.

    ಸಂಜನಾ ಐಫೋನ್ 11 ಪ್ರೋ ಬಳಸುತ್ತಿರುವ ಕಾರಣ ಕಷ್ಟ ಎಂದು ಪೊಲೀಸರು ಹೇಳುತ್ತಿದ್ದರು. ಆದರೆ ಪೊಲೀಸರು ಟೆಲಿಕಾಂ ಕಂಪನಿ ಬಳಿ ಕೇಳಿದರೆ ಎಲ್ಲ ಸಂದೇಶಗಳನ್ನು ನೀಡಬೇಕಾಗುತ್ತದೆ. ಸಂಜನಾ ಒಂದು ವೇಳೆ ವಾಟ್ಸಪ್ ಬ್ಯಾಕಪ್ ಮಾಡಲು ಒಪ್ಪದೇ ಇದ್ದಾಗ ಪೊಲೀಸರು ವಾಟ್ಸಪ್ ಕಂಪನಿ ಪತ್ರ ಬರೆದು ಮಾಹಿತಿ ನೀಡುವಂತೆ ಕೇಳಬೇಕಾಗುತ್ತದೆ.

    ನಟಿ ಸಂಜನಾ ಆಪ್ತ ರಾಹುಲ್ ಹೇಳಿಕೆಯಿಂದಾಗಿ ಮಂಗಳವಾರ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಹಲವು ಗಂಟೆ ಶೋಧ ಕಾರ್ಯ ನಡೆಸಿ, ಸಂಜನಾರನ್ನು ಅರೆಸ್ಟ್ ಮಾಡಿದ್ದಾರೆ. ಎಫ್‍ಐಆರ್ ನಲ್ಲಿ ಸಂಜನಾರನ್ನು ಎ-14 ಎಂದು ಉಲ್ಲೇಖಿಸಲಾಗಿದೆ. ಡ್ರಗ್ ಮಾಫಿಯಾ ಜೊತೆ ನಂಟಿರುವ ಅನುಮಾನದ ಮೇಲೆ ತೀವ್ರ ವಿಚಾರಣೆ ನಡೆಸಲಾಗಿದೆ. ಮೆಡಿಕಲ್ ಚೆಕಪ್ ಬಳಿಕ ವಸಂತನಗರದ ಸ್ಪೆಷಲ್ ರಿಮ್ಯಾಂಡ್ ಕೋರ್ಟ್‍ಗೆ ಹಾಜರುಪಡಿಸಿ ಸಂಜನಾರನ್ನು ಐದು ದಿನ ಕಸ್ಟಡಿಗೆ ಪಡೆದುಕೊಂಡಿದೆ.

    ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ವಿರುದ್ಧ ಕಳೆದ ವಾರ ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಹೀಗಾಗಿ ಸೂಕ್ತ ಸಾಕ್ಷ್ಯಕ್ಕಾಗಿ ಕಾಯುತ್ತಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಹಲವು ಮಾಹಿತಿಗಳನ್ನು ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್‍ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಕಸ್ಟಡಿಯಲ್ಲಿರುವ ಸಂಜನಾ ಹೊಸ ವರೆಸೆಯನ್ನು ತೆಗೆದಿದ್ದು, ಸಿಸಿಬಿ ಪೊಲೀಸರ ಜೊತೆ ದಯವಿಟ್ಟು ಮಾಧ್ಯಮಗಳ ಜೊತೆ ಮಾತನಾಡಲು ಒಂದು ಬಾರಿ ಅವಕಾಶ ಕೊಡಿ ಎಂದು ಕಣ್ಣೀರು ಹಾಕಿದ್ದಾರೆ. ಒಂದು ಬಾರಿ ಅವಕಾಶ ನೀಡುವಂತೆ ಸಿಬ್ಬಂದಿ ಜೊತೆ ಸಂಜನಾ ರಾತ್ರಿಯೂ ಕೇಳಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಂಧನದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಲು ಸಂಜನಾ ಇಚ್ಛೆ ವ್ಯಕ್ತಪಡಿಸಿದ್ದರು.

  • ಹೊಸ ವರಸೆ ತೆಗೆದ ಸಂಜನಾ – ಪೊಲೀಸರ ಬಳಿ ಕಣ್ಣೀರು

    ಹೊಸ ವರಸೆ ತೆಗೆದ ಸಂಜನಾ – ಪೊಲೀಸರ ಬಳಿ ಕಣ್ಣೀರು

    ಬೆಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ ಪೊಲೀಸರಿಂದ ಬಂಧನಕ್ಕೆ ಒಳಗಾದ ನಟಿ ಸಂಜನಾ ಈಗ ಹೊಸ ವರಸೆ ತೆಗೆದಿದ್ದಾರೆ.

    ಸಿಸಿಬಿ ಪೊಲೀಸರ ಜೊತೆ, ದಯವಿಟ್ಟು ಮಾಧ್ಯಮಗಳ ಜೊತೆ ಮಾತನಾಡಲು ಒಂದು ಬಾರಿ ಅವಕಾಶ ಕೊಡಿ ಎಂದು ಕಣ್ಣೀರು ಹಾಕಿದ್ದಾರೆ.

    ಒಂದು ಬಾರಿ ಅವಕಾಶ ನೀಡುವಂತೆ ಸಿಬ್ಬಂದಿ ಜೊತೆ ಸಂಜನಾ ರಾತ್ರಿಯೂ ಕೇಳಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಂಧನದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಲು ಸಂಜನಾ ಇಚ್ಛೆ ವ್ಯಕ್ತಪಡಿಸಿದರು.

    ಕೆಲವರು ಭಯ ಪಡುವ ರೀತಿಯಲ್ಲೇ ಸಿಸಿಬಿ ವಿಚಾರಣೆ ಆರಂಭದಲ್ಲೇ ನಟಿ ಸಂಜನಾ, ಸ್ಫೋಟಕ ಮಾಹಿತಿಯೊಂದನ್ನು ಬಯಲು ಮಾಡಿದ್ದಾರೆ ಎನ್ನಲಾಗಿದೆ. ಒಟ್ಟು 24 ಮಂದಿ ದೊಡ್ಡ ದೊಡ್ಡವರ ಹೆಸರುಗಳನ್ನು ನಟಿ ಸಂಜನಾ ಗಲ್ರಾನಿ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. ಸಂಜನಾ ಹೇಳಿಕೆಯ ಸತ್ಯಾಸತ್ಯತೆಯನ್ನು ಸಿಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 5 ಹಾಸಿಗೆಯುಳ್ಳ ಒಂದೇ ಕೊಠಡಿಯಲ್ಲಿ ರಾತ್ರಿ ಕಳೆದ ಸಂಜನಾ, ರಾಗಿಣಿ

    ಆ 24 ಮಂದಿ ಯಾರು?
    ಬೆಂಗಳೂರಿನ ಮಾಜಿ ಶಾಸಕರೊಬ್ಬರ ಪುತ್ರ, ಚಂದನವನದ ಇಬ್ಬರು ಸ್ಟಾರ್ ನಟಿಯರು, ಕಿರುತೆರೆಯ ನಾಲ್ವರು ನಟ, ನಟಿಯರು, ಖ್ಯಾತ ಉದ್ಯಮಿಗಳ ಪುತ್ರರ ಜೊತೆ ಮಂಗಳೂರು, ಯಲಹಂಕ, ಕಮ್ಮನಹಳ್ಳಿಯಲ್ಲಿ ರೆಗ್ಯೂಲರ್ ಪಾರ್ಟಿಯಲ್ಲಿ ಭಾಗವಹಿಸುತ್ತಿದ್ದ ಗಣ್ಯ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    14ನೇ ಆರೋಪಿ:
    ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಇಂದಿರಾ ನಗರದ ಮನೆ ಮೇಲೆ ರೇಡ್ ಮಾಡಿದ ಸಿಸಿಬಿ ಅಧಿಕಾರಿಗಳು, ಹಲವು ಗಂಟೆ ಶೋಧ ಕಾರ್ಯ ನಡೆಸಿ, ಸಂಜನಾರನ್ನು ಅರೆಸ್ಟ್ ಮಾಡಿದ್ದಾರೆ. ಎಫ್‍ಐಆರ್‌ನಲ್ಲಿ ಸಂಜನಾರನ್ನು ಎ-14 ಎಂದು ಉಲ್ಲೇಖಿಸಲಾಗಿದೆ. ಡ್ರಗ್ ಮಾಫಿಯಾ ಜೊತೆ ನಂಟಿರುವ ಅನುಮಾನದ ಮೇಲೆ ತೀವ್ರ ವಿಚಾರಣೆ ನಡೆಸಲಾಗಿದೆ.

    ಮೆಡಿಕಲ್ ಚೆಕಪ್ ಬಳಿಕ ವಸಂತನಗರದ ಸ್ಪೆಷಲ್ ರಿಮ್ಯಾಂಡ್ ಕೋರ್ಟ್‍ಗೆ ಹಾಜರುಪಡಿಸಿ ಸಂಜನಾರನ್ನು ಐದು ದಿನ ಕಸ್ಟಡಿಗೆ ಪಡೆದುಕೊಂಡಿದೆ. ಈ ವೇಳೆ ಕುಸಿದುಬಿದ್ದು, ಕಣ್ಣೀರಿಟ್ಟಿದ್ದಾರೆ. ಸದ್ಯ ಸಂಜನಾರನ್ನು ರಾಗಿಣಿ ಇರುವ ಸಾಂತ್ವಾನ ಕೇಂದ್ರದ ಕೊಠಡಿಯಲ್ಲಿಯೇ ಇರಿಸಲಾಗಿದೆ. ರಾಗಿಣಿ ನಂತರ ಸಂಜನಾ ಅರೆಸ್ಟ್ ಆಗಿದ್ದಾಯ್ತು ಮುಂದೆ ಯಾರು ಅರೆಸ್ಟ್ ಆಗುತ್ತಾರೆ ಎಂಬ ಪ್ರಶ್ನೆ ಎದ್ದಿದೆ. ಸಂಜನಾ ಬಂಧನದೊಂದಿಗೆ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು, ಉದ್ಯಮಿಗಳು, ಹಲವು ಸಿನಿ ನಟರಲ್ಲಿ ಭಯ ಆತಂಕ ಮನೆ ಮಾಡಿದೆ.

  • ಪೃಥ್ವಿ ಶೆಟ್ಟಿ ಹೇಳಿಕೆಯ ಆಧಾರದ ಮೇಲೆ ಸಂಜನಾ ನಿವಾಸದ ಮೇಲೆ ದಾಳಿ?

    ಪೃಥ್ವಿ ಶೆಟ್ಟಿ ಹೇಳಿಕೆಯ ಆಧಾರದ ಮೇಲೆ ಸಂಜನಾ ನಿವಾಸದ ಮೇಲೆ ದಾಳಿ?

    ಬೆಂಗಳೂರು: ಇವೆಂಟ್‌ ಮ್ಯಾನೇಜ್ಮೆಂಟ್‌ ಕಂಪನಿ ನಡೆಸುತ್ತಿರುವ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಆಧಾರದ ಮೇಲೆ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ ನಡೆಸಿದೆ ಎನ್ನಲಾಗಿದೆ.

    ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಇಂದು ಬೆಳ್ಳಬೆಳಗ್ಗೆ ಇನ್ಸ್‌ಪೆಕ್ಟರ್‌ ಪುನೀತ್‌ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

    ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ ಸಿಸಿಬಿ ಬಂಧಿಸಿತ್ತು. ಕಳೆದ ವಾರವೇ ಸಂಜನಾ ಹೆಸರು ಕೇಳಿ ಬಂದಿತ್ತು. ಆದರೆ ಸಿಸಿಬಿ ಎಫ್‌ಐಆರ್‌ನಲ್ಲಿ ಸಂಜನಾ ಹೆಸರು ಉಲ್ಲೇಖವಾಗಿರಲಿಲ್ಲ. ಆದರೆ ಈಗ ಆಪ್ತೆ ಪೃಥ್ವಿ ಶೆಟ್ಟಿ ಮತ್ತು ಆಪ್ತ ರಾಹುಲ್‌ ನೀಡಿದ ಹೇಳಿಕೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

    ಆರೋಪ ಏನು?
    ಡ್ರಗ್ಸ್‌ ಪ್ರಕರಣದಲ್ಲಿ ಸಂಜನಾ ವಿರುದ್ಧ ಕಳೆದ ವಾರ ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಹೀಗಾಗಿ ಸೂಕ್ತ ಸಾಕ್ಷ್ಯಕ್ಕಾಗಿ ಕಾಯುತ್ತಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಹಲವು ಮಾಹಿತಿಗಳನ್ನು ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

    ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಮಾಹಿತಿ ಸಿಕ್ಕಿದೆ.

    ಇವರಿಬ್ಬರು ಬರೀ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದರೇ ಅಥವಾ ಬೇರೆ ಯಾವೆಲ್ಲಾ ವ್ಯವಹಾರಗಳನ್ನು ನಡೆಸುತ್ತಿದ್ದರು ಎಂಬುದರ ಬಗ್ಗೆ ಹಲವು ಪ್ರಶ್ನೆಗಳು ಎದ್ದಿದೆ. ಪಾರ್ಟಿಗಳಲ್ಲಿ ಏನು ಬಳಕೆ ಆಗುತ್ತಿತ್ತು? ಯಾರೆಲ್ಲ ಬರುತ್ತಿದ್ದರು ಎಂಬುದರ ಬಗ್ಗೆ ಪೃಥ್ವಿ ಶೆಟ್ಟಿ ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂಬ ಮಾಹಿತಿ ಸಿಕ್ಕಿದೆ.

    ಆಪ್ತನ ಮೇಲೆ ಎಫ್‌ಐಆರ್‌ :
    ಸಿಸಿಬಿಯ ನಾರ್ಕೊಟಿಕ್ಸ್ ಎಸಿಪಿ ಗೌತಮ್ ಸೆ.4 ರಂದು ನೀಡಿದ ಸ್ವಯಂಪ್ರೇರಿತ ದೂರಿನ ಆಧಾರದ ಮೇಲೆ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬಂಧಿತ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಸಾಕ್ಷಿ ಹಾಗೂ ಪುರಾವೆಗಳು ಸಿಕ್ಕಿರುವ ಹಿನ್ನೆಯಲ್ಲಿ ಗೌತಮ್‌ ಅವರು ದೂರು ನೀಡಿದ್ದರು. ವಾಟ್ಸಾಪ್ ಮೆಸೇಜ್‍ಗಳು ಹಾಗೂ ಪೆಡ್ಲರ್ ಗಳ ನೀಡಿರುವ ಮಾಹಿತಿ ಅನ್ವಯ ನಟಿ ರಾಗಿಣಿ ಅವರ ಕೈವಾಡದ ಬಗ್ಗೆ ಸಾಕ್ಷಿ ಲಭ್ಯವಾಗಿದ್ದು, ಡ್ರಗ್ ಡೀಲರ್ ಗಳ ಜೊತೆ ಒಡನಾಟವನ್ನು ಹೊಂದಿದ್ದಾರೆ. ಅನೇಕ ಬಾರಿ ಡ್ರಗ್ ಡೀಲ್ ಮಾಡಿರುವ ಬಗ್ಗೆ ಮಾಹಿತಿ ಖಚಿತವಾದ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

    ಈ ಎಫ್‌ಐಆರ್‌ನಲ್ಲಿ ಸಂಜನಾ ಆಪ್ತ ರಾಹುಲ್‌ ಹೆಸರು ಸಹ ಉಲ್ಲೇಖವಾಗಿತ್ತು. ಒಟ್ಟು 12 ಮಂದಿ ಆರೋಪಿಗಳ ಪೈಕಿ ರಾಹುಲ್‌ 11ನೇ ಆರೋಪಿಯಾಗಿದ್ದಾನೆ. ವಿಚಾರಣೆಯ ವೇಳೆ ಈತ ಸಂಜನಾ ಪಾಲ್ಗೊಳ್ಳುತ್ತಿದ್ದ ಹೈ ಎಂಡ್‌ ಪಾರ್ಟಿ ಬಗ್ಗೆ ಮಾಹಿತಿ ನೀಡಿದ್ದಾನೆ. ಮಹತ್ವದ ಸ್ಯಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಸಂಜನಾ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

  • ಡ್ರಗ್ಸ್‌ ಕೇಸ್‌ – ನಟಿ ಸಂಜನಾ ಮನೆ ಮೇಲೆ ಸಿಸಿಬಿ ದಾಳಿ

    ಡ್ರಗ್ಸ್‌ ಕೇಸ್‌ – ನಟಿ ಸಂಜನಾ ಮನೆ ಮೇಲೆ ಸಿಸಿಬಿ ದಾಳಿ

    ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ದಾಳಿ ಮಾಡಿದ್ದಾರೆ.

    ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಇನ್ಸ್‌ಪೆಕ್ಟರ್‌ ಪುನೀತ್‌ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

    ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ ಸಿಸಿಬಿ ಬಂಧಿಸಿತ್ತು. ಕಳೆದ ವಾರವೇ ಸಂಜನಾ ಹೆಸರು ಕೇಳಿ ಬಂದಿತ್ತು. ಆದರೆ ಸಿಸಿಬಿ ಎಫ್‌ಐಆರ್‌ನಲ್ಲಿ ಸಂಜನಾ ಹೆಸರು ಉಲ್ಲೇಖವಾಗಿರಲಿಲ್ಲ. ಆದರೆ ಈಗ ಆಪ್ತೆ ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

    ಸಿನಿ ವಿತರಕ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಅವರು ಡ್ರಗ್ಸ್‌ ಪ್ರಕರಣದ ಲ್ಲಿ ಸಂಜನಾ ಸಹ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು. ಈ ವಿಚಾರದ ಬಗ್ಗೆ ಸಂಜನಾ ಮತ್ತ ಸಂಬರಗಿ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿತ್ತು.

  • ಸ್ಯಾಂಡಲ್‌ವುಡ್‌ ಟು ಬಾಲಿವುಡ್‌ – ಆದಿತ್ಯ ಆಳ್ವ ನಾಪತ್ತೆ, ವಿವೇಕ್‌ ಒಬೆರಾಯ್‌ ಪಾರ್ಟಿ ವಿಡಿಯೋ ಔಟ್‌

    ಸ್ಯಾಂಡಲ್‌ವುಡ್‌ ಟು ಬಾಲಿವುಡ್‌ – ಆದಿತ್ಯ ಆಳ್ವ ನಾಪತ್ತೆ, ವಿವೇಕ್‌ ಒಬೆರಾಯ್‌ ಪಾರ್ಟಿ ವಿಡಿಯೋ ಔಟ್‌

    ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ದಂಧೆಯ ಒಂದೊಂದೆ ಮುಖಗಳು ಬಯಲಾಗುತ್ತಿವೆ. ಈ ಡ್ರಗ್ಸ್ ದಂಧೆಯನ್ನು ಬಗೆದಷ್ಟೂ ಮತ್ತಷ್ಟು ವಿಷಯಗಳು, ವ್ಯಕ್ತಿಗಳ ನಂಟು ಹೊರ ಬರುತ್ತಿದ್ದು, ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವ ಕೂಡ ಮಾಫಿಯಾದ ಸೂತ್ರಧಾರಿ.

    ಸಿಸಿಬಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸ್ಯಾಂಡಲ್‌ವುಡ್‌ ಡ್ರಗ್‌ ಪ್ರಕರಣದಲ್ಲಿ ರಾಗಿಣಿ ಎರಡನೇ ಆರೋಪಿಯಾಗಿದ್ದರೆ ಆದಿತ್ಯ ಆಳ್ವ ಆರನೇ ಆರೋಪಿಯಾಗಿದ್ದಾನೆ.

    ಎಫ್‍ಐಆರ್ ದಾಖಲಾದ ಬೆನ್ನಲ್ಲೇ ಸದಾಶಿವನಗರದ ಆಳ್ವ ನಿವಾಸ ಸಂಪೂರ್ಣ ಖಾಲಿಯಾಗಿದೆ ಆದಿತ್ಯ ಆಳ್ವ ನಾಪತ್ತೆಯಾಗಿದ್ದಾನೆ. ಸಿಸಿಬಿ ತಂಡ ಈಗ ಆದಿತ್ಯ ಆಳ್ವನನ್ನು ಬಂಧಿಸಲು ಶೋಧ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ಮಾಜಿ ಸಚಿವ ಜೀವರಾಜ್‌ ಆಳ್ವ ಪುತ್ರ ಸೇರಿದಂತೆ 12 ಮಂದಿ ವಿರುದ್ಧ ಕೇಸ್‌ – ಯಾವೆಲ್ಲ ಸೆಕ್ಷನ್‌? ಶಿಕ್ಷೆ ಏನು? ಇಲ್ಲಿದೆ ಪೂರ್ಣ ವಿವರ

    ಮತ್ತೊಂದು ಕಡೆ, ಜೀವರಾಜ್ ಆಳ್ವ ಅಳಿಯನಾಗಿರುವ ಬಾಲಿವುಡ್ ನಟ ವಿವೇಕ್ ಒಬೇರಾಯ್ ಹೆಸರು ಕೂಡ ಈಗ ಥಳಕು ಹಾಕಿಕೊಂಡಿದೆ. ಶ್ರೀಲಂಕಾದ ಕ್ಯಾಸಿನೋದಲ್ಲಿ ನಡೆದ ಪಾರ್ಟಿಯಲ್ಲಿ ನಟಿ ಸಂಜನಾ ಜೊತೆ ವಿವೇಕ್ ಒಬೇರಾಯ್ ಕಾಣಿಸಿಕೊಂಡಿದ್ದಾರೆ.

    ಈ ಎಲ್ಲ ಕಾರಣಕ್ಕೆ ಸ್ಯಾಂಡಲ್‍ವುಡ್‍ನಿಂದ ಬಾಲಿವುಡ್‍ವರೆಗೆ ಡ್ರಗ್ಸ್ ಜಾಲ ಹಬ್ಬಿದ್ಯಾ? ಇನ್ನಷ್ಟು ಸ್ಟಾರ್‌ಗಳ ಮುಖವಾಡ ಬಯಲಾಗುತ್ತಾ ಎನ್ನುವುದು ಕುತೂಹಲ ಕೆರಳಿಸಿದೆ.

    ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರ್ಗಿ ಈಗ ಕೇಳಿ ಬರುತ್ತಿರುವ ವ್ಯಕ್ತಿಗಳು ಈ ವ್ಯವಹಾರದಲ್ಲಿ ಬಹಳ ಸಣ್ಣವರು. ಸ್ಯಾಂಡಲ್‌ವುಡ್‌ ಮಾತ್ರವಲ್ಲ ಬಾಲಿವುಡ್‌ವರೆಗೂ ಈ ಲಿಂಕ್‌ ಹಬ್ಬಿದೆ. ಸಾಕ್ಷ್ಯಗಳು ಸರಿಯಾಗಿ ಸಿಕ್ಕಿದರೆ ದೊಡ್ಡ ದೊಡ್ಡ ವ್ಯಕ್ತಿಗಳು ಹೊರ ಬರುತ್ತಾರೆ. ಮುಂದಿನ ದಿನಗಳಲ್ಲಿ ಯಾರೆಲ್ಲ ಈ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಎಲ್ಲ ವಿವರಗಳು ಹೊರಬರಲಿದೆ ಎಂದು ತಿಳಿಸಿದ್ದರು.