Tag: Sanjay Dutt

  • ಕೆಜಿಎಫ್ ಚಾಪ್ಟರ್-2 ಟೀಸರ್ ರಿಲೀಸ್‍ಗೆ ಮುಹೂರ್ತ ಫಿಕ್ಸ್

    ಕೆಜಿಎಫ್ ಚಾಪ್ಟರ್-2 ಟೀಸರ್ ರಿಲೀಸ್‍ಗೆ ಮುಹೂರ್ತ ಫಿಕ್ಸ್

    ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಚಿತ್ರದ ಟೀಸರ್ ಜನವರಿ 8, 2021ರಂದು ಬೆಳಗ್ಗೆ 10.18ಕ್ಕೆ ಬಿಡುಗಡೆಯಾಗಲಿದೆ.

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ ಮೊದಲ ಭಾಗ ತೆರೆಕಂಡು ಇಂದಿಗೆ 2 ವರ್ಷ. ಆದ್ರೆ ಮೂರು ವರ್ಷವಾದ್ರು ಕಥೆಯ ತಾಜಾತನ ಅಭಿಮಾನಿಗಳ ಕಣ್ಮುಂದೆ ಇನ್ನು ಹಾಗೇ ಇದೆ. ಇನ್ನೂ ಎರಡನೇ ಭಾಗಕ್ಕಾಗಿ ಶಬರಿಯಂತೆ ಕಾಯುತ್ತಿರೋ ಅಭಿಮಾನಿಗಳಿಗೆ ಕೆಜಿಎಫ್ ಸೂತ್ರದಾರ ಪ್ರಶಾಂತ್ ನೀಲ್ ಸಿಹಿ ಸುದ್ದಿ ನೀಡಿದ್ದಾರೆ.

    ಭಾನುವಾರ ಕೆಜಿಎಫ್ ಚಾಪ್ಟರ್ -2 ಚಿತ್ರೀಕರಣ ಮುಗಿದಿದ್ದು, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಧಗಧಗಿಸುತ್ತಿವೆ. ಕ್ಲೈಮ್ಯಾಕ್ಸ್ ನಲ್ಲಿ ಅಧೀರ ಮತ್ತು ರಾಕಿಯ ಕಾಳಗ ಇರಲಿದೆ ಎಂಬುದನ್ನ ಪ್ರಶಾಂತ್ ನೀಲ್ ಟೀಂ ಕನ್ಫರ್ಮ್ ಮಾಡಿದೆ. ಕೆಜಿಎಫ್ ಕೊನೆ ಶೆಡ್ಯೂಲ್ ಮುಗಿಸಿದ ಟೀಂ ಜೊತೆಯಾಗಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನ ಡಿಓಪಿ ಭುವನ್ ಗೌಡ ಶೇರ್ ಮಾಡ್ಕೊಂಡಿದ್ರು.

    ಕೆಲ ದಿನಗಳ ಹಿಂದೆ ಅಧೀರ ಮತ್ತು ರಾಕಿಯ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ನಡೆಯುತ್ತಿರುವ ಬಗ್ಗೆ ಪ್ರಶಾಂತ್ ನೀಲ್ ಮಾಹಿತಿ ನೀಡಿದ್ದರು. ಇತ್ತೀಚೆಗೆ ಗುಣಮುಖರಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸಂಜಯ್ ದತ್ ಡೂಪ್ ಸಹ ಬಳಸದೇ ಸಾಹಸ ದೃಶ್ಯಗಳಲ್ಲಿ ನಟಿಸಿದ್ದಾರೆ ಎಂದು ವರದಿ ಆಗಿತ್ತು.

    ಅಂದುಕೊಂಡಂತೆ ಆಗಿದ್ರೆ ಈಗಾಗಲೇ ಕೆಜಿಎಫ್ ಇಡೀ ದೇಶದಾದ್ಯಂತ ಅಬ್ಬರಿಸುತ್ತಿತ್ತು. ಕೊರೊನಾದಿಂದ ಶೂಟಿಂಗ್ ಸ್ಥಗಿತಗೊಂಡ ಹಿನ್ನೆಲೆ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ ಹೋಗುತ್ತಾ ಬಂದಿತ್ತು. ಇನ್ನು ಅಭಿಮಾನಿಗಳು ಸಿನಿಮಾ ಟೀಸರ್ ಬಿಡುಗಡೆ ಮಾಡಿ ಅಂತಾ ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದರು. ಇದೀಗ ಡಿಸೆಂಬರ್ 21, 2020, ಬೆಳಗ್ಗೆ 10.08 ನಿಮಿಷಕ್ಕೆ ಚಿತ್ರತಂಡದಿಂದ ಮಹತ್ವದ ಘೋಷಣೆ ಹೊರ ಬಿದ್ದಿದೆ.

    https://twitter.com/prashanth_neel/status/1340879166258855936

  • ಕೆಜಿಎಫ್ ಚಾಪ್ಟರ್-2: ರಾಕಿ ಭಾಯ್ & ಅಧೀರನ ಯುದ್ಧಕ್ಕೆ ಫೈಟ್ ಮಾಸ್ಟರ್ಸ್ ರೆಡಿ!

    ಕೆಜಿಎಫ್ ಚಾಪ್ಟರ್-2: ರಾಕಿ ಭಾಯ್ & ಅಧೀರನ ಯುದ್ಧಕ್ಕೆ ಫೈಟ್ ಮಾಸ್ಟರ್ಸ್ ರೆಡಿ!

    ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿರುವ ಕೆಜಿಎಫ್ ಚಾಪ್ಟರ್-2 ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಈ ನಡುವೆ ನಿರ್ದೇಶಕ ಪ್ರಶಾಂತ್ ನೀಲ್ ಚಿತ್ರದ ಕುರಿತ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ.

    ಚಿತ್ರದ ಕುರಿತು ಟ್ವಿಟ್ ಮಾಡಿರುವ ಪ್ರಶಾಂತ್ ನೀಲ್, ರಾಕಿ – ಅಧಿರಾ ಎಂದು ಬರೆದು ನಡುವೆ ಜಗಳ ಸಿಂಬಲ್ ಹಾಕಿದ್ದಾರೆ. ಅಂದರೆ ಕ್ಲೈಮ್ಯಾಕ್ಸ್ ನಲ್ಲಿ ಯಶ್ ಹಾಗೂ ಸಂಜಯ್ ದತ್ ನಡುವೆ ಕದನ ನಡೆಯಲಿದೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಖ್ಯಾತ ಆ್ಯಕ್ಷನ್ ಡೈರೆಕ್ಟರ್‍ಗಳಾದ ಅನ್ಬರಿವ್ ಬ್ರದರ್ಸ್ ಫೋಟೋಗಳನ್ನು ಕೂಡ ಅಪ್ಲೋಡ್ ಮಾಡಿದ್ದಾರೆ.

    https://twitter.com/prashanth_neel/status/1335827495463968768

    ಈ ಮೂಲಕ ಕೆಜಿಎಫ್ ಚಾಪ್ಟರ್ 2 ಕ್ಲೈಮ್ಯಾಕ್ಸ್ ಶೂಟಿಂಗ್ ಅಡ್ಡಾಗೆ ಡೆಡ್ಲಿ ಬ್ರದರ್ಸ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ಅನ್ಬರಿವ್ ಎಂದೇ ಖ್ಯಾತರಾಗಿರುವ ಅನ್ಬುಮಣಿ ಹಾಗೂ ಅರಿವುಮಣಿ ನಿರ್ದೇಶಕ ಪ್ರಶಾಂತ್ ನೀಲ್‍ಗೆ ಜೊತೆಯಾಗಿದ್ದಾರೆ. ಈ ಜೋಡಿ ಮೊದಲು ಕಾಲಿವುಡ್ ಸಿನಿಮಾಗಳಲ್ಲಿ ಕೆಲಸ ಮಾಡುತ್ತಿತ್ತು. ಕ್ರಮೇಣ ಕನ್ನಡ, ತೆಲುಗು, ತಮಿಳು, ಹಿಂದಿ ಹೀಗೆ ಹಲವಾರು ಭಾಷೆಯ ಚಿತ್ರಗಳಲ್ಲಿ ತಮ್ಮ ಕರಾಮತ್ತು ತೋರಿದೆ.

    ಹೈದರಾಬಾದಿನಲ್ಲಿ ಆರಂಭವಾಗಿರುವ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ಕೆಜಿಎಫ್ ಚಾಪ್ಟರ್ 2 ಕನ್ನಡ ಮಾತ್ರವಲ್ಲದೆ ಇತರೆ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ಲಾಕ್‍ಡೌನ್ ತೆರವುಗೊಂಡ ಬಳಿಕ ಸಿನಿಮಾದ ಚಿತ್ರೀಕರಣ ಮಂಗಳೂರು, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ನಡೆಯಿತು. ಈಗ ಮತ್ತೆ ಕೆಜಿಎಫ್ ಚಾಪ್ಟರ್ 2 ಕ್ಲೈಮ್ಯಾಕ್ಸ್ ಚಿತ್ರೀಕರಣ ಹೈದರಾಬಾದಿನಲ್ಲಿ ನಡೆಯುತ್ತಿದೆ. ಈ ನಡುವೆ ನಿರ್ದೇಶಕರು ಕ್ಲೈಮ್ಯಾಕ್ಸ್ ವಿಚಾರವೊಂದನ್ನು ಹಂಚಿಕೊಂಡು ಸಿನಿರಸಿಕರಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

  • ಕೆಜಿಎಫ್ ಅಧೀರನ ಭೇಟಿಯಾದ ಕಂಗನಾ ರಣಾವತ್

    ಕೆಜಿಎಫ್ ಅಧೀರನ ಭೇಟಿಯಾದ ಕಂಗನಾ ರಣಾವತ್

    – ಭೇಟಿ ವೇಳೆ ನಡೆದ ಮಾತುಕತೆಯೇನು?

    ಹೈದರಾಬಾದ್: ಸದ್ಯ ಸುದ್ದಿಯಲ್ಲಿರುವ  ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಕೆಜಿಎಫ್ ಅಧೀರ ಸಂಜಯ್ ದತ್ ಅವರನ್ನು ಭೇಟಿಯಾಗಿದ್ದಾರೆ.

    ಹೌದು. ಇಂದು ಬೆಳಗ್ಗೆ ಭೇಟಿಯಾಗಿರುವ ಕಂಗನಾ ಸಂಜಯ್ ದತ್ ಅವರನ್ನು ನೋಡಿ ಅಚ್ಚರಿಯೊಂದಿಗೆ ಖುಷಿಯಾಗಿದ್ದಾರೆ. ಅಲ್ಲದೆ ಅವರ ಆರೋಗ್ಯ ಇನ್ನಷ್ಟು ವೃದ್ಧಿಸಲು ಪ್ರಾರ್ಥೊಸೋಣ ಎಂದು ತಿಳಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಕಂಗನಾ, ಹೈದರಾಬಾದ್‍ನ ಹೋಟೆಲಿನಲ್ಲಿ ತಂಗಿರುವ ಸುದ್ದಿ ತಿಳಿದು ನಾನು ಇಂದು ಬೆಳಗ್ಗೆ ಸಂಜು ಅವರನ್ನು ನೋಡಲು ತೆರಳಿದೆ. ಈ ವೇಳೆ ಅವರ ಆರೋಗ್ಯವನ್ನು ವಿಚಾರಿಸಿದೆ. ಅವರು ಇನ್ನಷ್ಟು ಸುಂದರ ಹಾಗೂ ಆರೋಗ್ಯವಂತರಾಗಿರುವುದನ್ನು ಕಂಡು ನಿಜಕ್ಕೂ ನನಗೆ ಅಚ್ಚರಿಯಾಯಿತು. ನಾವೆಲ್ಲರೂ ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸೋಣ ಎಂದು ಬರೆದುಕೊಂಡಿದ್ದಾರೆ.

    ಆಗಸ್ಟ್ 8ರಂದು ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡು ನಟ ಸಂಜಯ್ ಅವರು ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಇವರ ಕೊರೊನಾ ಪರೀಕ್ಷೆ ನಡೆಸಿದ್ದು, ವರದಿಯಲ್ಲಿ ನೆಗೆಟಿವ್ ಎಂದು ಬಂದಿತ್ತು. ಕೊರೊನಾ ಅಲ್ಲದ ಕಾರಣ ಅವರಿಗೆ ನಾನ್ ಕೋವಿಡ್ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

    ಆ ನಂತರ ನಟಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರ ಬಹಿರಂಗವಾಗಿತ್ತು. ಈ ಸಂಬಂಧ ಟ್ವೀಟ್ ಮಾಡಿದ್ದ ಅಧೀರ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ ತಿಳಿಸಿದ್ದರು. ನನಗೆ ಚಿಕಿತ್ಸೆ ಮಾಡಿಸಿಕೊಳ್ಳಬೇಕಿದ್ದು, ಸ್ನೇಹಿತರು ಕುಟುಂಬಸ್ಥರು ನನ್ನ ಜೊತೆಗಿದ್ದಾರೆ. ಹೀಗಾಗಿ ನನ್ನ ಆತ್ಮೀಯರು ಏನೂ ಯೋಚನೆ ಮಾಡಬೇಡಿ. ಅಲ್ಲದೆ ವದಂತಿಗಳನ್ನು ಕೂಡ ನಂಬಬೇಡಿ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಅತೀ ಶೀಘ್ರವೇ ಹುಷಾರಾಗಿ ನಿಮ್ಮ ಮುಂದೆ ಬರುತ್ತೇನೆ ಎಂದು ಬರೆದುಕೊಂಡಿದ್ದರು.

    ಕ್ಯಾನ್ಸರ್ ಚಿಕಿತ್ಸೆಯ ನಂತರ ಕೆಜಿಎಫ್-2ಗಾಗಿ ನಟ ಸಂಜಯ್ ದತ್ ಅವರು ತಯಾರಿ ಮಾಡಿಕೊಳ್ಳುತ್ತಿರುವ ಸಂದೇಶ ನೀಡಿದ್ದರು. ಸ್ಟೈಲಿಶ್ ಲುಕ್‍ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಂಜಯ್, ಮೂರು ಫೋಟೋಗಳು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಧೀರನಿಗಾಗಿ ತಯಾರಿ ಎಂದು ಬರೆದುಕೊಂಡಿದ್ದರು. ಈ ಮೂಲಕ ನವೆಂಬರ್ ನಲ್ಲಿ ಆರಂಭವಾಗಲಿರುವ ಕೆಜಿಎಫ್-2 ಅಧೀರನ ಶೂಟಿಂಗ್ ಸಿದ್ಧವಾಗಿದ್ದೇನೆ ಎಂಬ ಸಂದೇಶವನ್ನು ರವಾನೆ ಮಾಡಿದ್ದರು. ಈ ಸುದ್ದಿ ತಿಳಿದ ಅಧೀರನ ಅಭಿಮಾನಿಗಳು ಫುಲ್ ಖುಷ್ ಆಗಿದ್ದರು.

  • ಕ್ಯಾನ್ಸರ್ ಚಿಕಿತ್ಸೆಯ ಬಳಿಕ ಕೆಜಿಎಫ್-2 ಶೂಟಿಂಗ್‍ಗೆ ‘ಅಧೀರ’ ರೆಡಿ

    ಕ್ಯಾನ್ಸರ್ ಚಿಕಿತ್ಸೆಯ ಬಳಿಕ ಕೆಜಿಎಫ್-2 ಶೂಟಿಂಗ್‍ಗೆ ‘ಅಧೀರ’ ರೆಡಿ

    – ಹೈದರಾಬಾದ್‍ನಲ್ಲಿ ರಾಖಿ ಹವಾ

    ಮುಂಬೈ: ಕ್ಯಾನ್ಸರ್ ಚಿಕಿತ್ಸೆಯ ನಂತರ ಕೆಜಿಎಫ್-2ಗಾಗಿ ನಟ ಸಂಜಯ್ ದತ್ ಅವರು ತಯಾರಿ ಮಾಡಿಕೊಳ್ಳುತ್ತಿರುವ ಸಂದೇಶ ನೀಡಿದ್ದಾರೆ.

    ಬಾಲಿವುಡ್ ನಟ ಹಾಗೂ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಕ್ಯಾನ್ಸರ್ ನಿಂದ ಬಳಲುತ್ತಿರುವುದು ತಿಳಿದೇ ಇದೆ. ಇದಕ್ಕಾಗಿ ಅವರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇತ್ತೀಚೆಗೆ ಈ ಸಂಬಂಧ ವಿದೇಶಕ್ಕೂ ಹೋಗಿದ್ದರು. ಹೀಗಾಗಿ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಈಗ ವಾಪಸ್ ಆಗಿರುವ ಅಧೀರ ಫಿಟ್ ಆಗಿ ಕಾಣಿಸಿಕೊಂಡಿದ್ದಾರೆ.

    ಸ್ಟೈಲಿಶ್ ಲುಕ್‍ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿರುವ ಸಂಜಯ್ ದತ್ ಅವರು ಮೂರು ಫೋಟೋಗಳು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಧೀರನಿಗಾಗಿ ತಯಾರಿ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ನವೆಂಬರ್ ನಲ್ಲಿ ಆರಂಭವಾಗಲಿರುವ ಕೆಜಿಎಫ್-2 ಅಧೀರನ ಶೂಟಿಂಗ್ ಸಿದ್ಧವಾಗಿದ್ದೇನೆ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ. ಈ ಸುದ್ದಿ ತಿಳಿದ ಅಧೀರನ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

    ಕೊರೊನಾ ಲಾಕ್‍ಡೌನ್‍ಗೂ ಮುನ್ನ ಸಂಜಯ್ ದತ್ ಅವರು ಕೆಜಿಎಫ್-2 ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ನಂತರ ಅವರಿಗೆ ಕ್ಯಾನ್ಸರ್ ಸಮಸ್ಯೆ ಹೆಚ್ಚಾಗಿ ಆಸ್ಪತ್ರೆ ಸೇರಿದ್ದರು. ಇದರಿಂದ ಮತ್ತೆ ಅವರು ಬಂದು ಶೂಟಿಂಗ್‍ಗೆ ಸೇರಿಕೊಳ್ಳುತ್ತಾರಾ ಎಂಬ ಅನುಮಾನಗಳು ಮೂಡಿದ್ದವು. ಆದರೆ ಈಗ ಅವರು ಮುಂಬೈಗೆ ವಾಪಸ್ ಬಂದಿದ್ದು, ಸಲೂನ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ.

    ಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಸಂಜಯ್ ದತ್, ಚಿತ್ರೀಕರಣಕ್ಕೆ ಮರಳಲು ಸಿದ್ಧತೆ ನಡೆಸಿದ್ದಾರೆ. ನವೆಂಬರ್ ನಲ್ಲಿ ಕೆಜಿಎಫ್-2 ಚಿತ್ರೀಕರಣಕ್ಕೆ ಹಾಜರಾಗಲಿದ್ದಾರೆ ಎನ್ನಲಾಗಿದೆ. ವರ್ಕೌಟ್ ಸಹ ಮಾಡುತ್ತಿರುವ ಸಂಜಯ್ ದತ್, ಚಿತ್ರೀಕರಣಕ್ಕೆ ತಯಾರಾಗುತ್ತಿದ್ದಾರೆ. ಸದ್ಯ ಮಂಗಳೂರಿನಲ್ಲಿ ಕೆಜಿಎಫ್-2 ಸಿನಿಮಾದ ಶೂಟಿಂಗ್ ಮುಗಿದಿದೆ. ಯಶ್, ನಾಯಕಿ ಶ್ರೀನಿಧಿ ಶೆಟ್ಟಿ ಭಾಗದ ಚಿತ್ರೀಕರಣ ಮಂಗಳೂರಿನ ಕಡಲ ತೀರದಲ್ಲಿ ನಡೆದಿತ್ತು.

    ಹೈದರಾಬಾದಿನಲ್ಲಿ ರಾಖಿ ಹವಾ
    ಇದರ ಮಧ್ಯದಲ್ಲಿ ಮಂಗಳೂರಿನಲ್ಲಿ ನಡೆದ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದ ರಾಕಿಂಗ್ ಸ್ಟಾರ್ ಯಶ್ ಅವರು, ಮುಂದಿನ ಚಿತ್ರೀಕರಣಕ್ಕೆ ಹೈದರಾಬಾದಿಗೆ ಹಾರಿದ್ದಾರೆ. ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಜಾಕೆಟ್ ಧರಿಸಿ, ಕಣ್ಣಿಗೆ ಕಪ್ಪು ಕನ್ನಡಕ ತೊಟ್ಟು ರಾಖಿ ಭಾಯ್ ನಡೆದುಕೊಂಡು ಹೋಗುತ್ತಿರುವ ಖಡಕ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಈ ಫೋಟೋಗಳಲ್ಲಿ ರಾಖಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ.

  • ಕೆಜಿಎಫ್ ಅಧೀರ ಕಮ್ ಬ್ಯಾಕ್- ಸಲೂನ್ ವೀಡಿಯೋ ವೈರಲ್

    ಕೆಜಿಎಫ್ ಅಧೀರ ಕಮ್ ಬ್ಯಾಕ್- ಸಲೂನ್ ವೀಡಿಯೋ ವೈರಲ್

    ಮುಂಬೈ: ಬಾಲಿವುಡ್ ನಟ ಹಾಗೂ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಕ್ಯಾನ್ಸರ್ ನಿಂದ ಬಳಲುತ್ತಿರುವುದು ತಿಳಿದೇ ಇದೆ. ಇದಕ್ಕಾಗಿ ಅವರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇತ್ತೀಚೆಗೆ ಈ ಸಂಬಂಧ ವಿದೇಶಕ್ಕೂ ಹೋಗಿದ್ದರು. ಹೀಗಾಗಿ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಇದೀಗ ಕಟಿಂಗ್ ಶಾಪ್‍ನಲ್ಲಿ ಕಾಣಿಸಿಕೊಳ್ಳುವ ಮೂಲಕ ಸಂಜು ಬಾಬಾ ಫಿಟ್ ಆ್ಯಂಡ್ ಫೈನ್ ಆಗಿರುವ ಕುರಿತು ತಿಳಿಸಿದ್ದಾರೆ.

    ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್ ಅವರ ಸಲೂನ್‍ಗೆ ಹೋಗಿ ಸಂಜುಯ್ ದತ್ ಕಟಿಂಗ್ ಮಾಡಿಸಿಕೊಂಡಿದ್ದಾರೆ. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗ ನನಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ, ಆ ರೀತಿ ಬರೆಯಬೇಡಿ ಎಂದು ಕೇಳಿಕೊಂಡಿದ್ದಾರೆ. ಈ ಮೂಲಕ ಎಲ್ಲರೂ ನಗುವಂತೆ ಮಾಡಿದ್ದಾರೆ. ಈ ವೀಡಿಯೋ ಇದೀಗ ಸಖತ್ ವೈರಲ್ ಆಗಿದೆ.

    ಆಲಿಮ್ ಹಕೀಮ್ ಸಹ ಕಟಿಂಗ್ ಮಾಡುತ್ತಿದ್ದ ವೀಡಿಯೋ ಹಂಚಿಕೊಂಡಿದ್ದು, ಇದರಲ್ಲಿ ಸಂಜು ಬಾಬಾ ಮಾತನಾಡಿದ್ದಾರೆ. ಸಲೂನ್‍ಗೆ ಮರಳಿ ಬಂದಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ಕ್ಯಾನ್ಸರ್ ನ್ನು ಬಹುಬೇಗ ಮಣಿಸುತ್ತೇನೆ. ಆಲಿಮ್ ಹಾಗೂ ನಾನು ತುಂಬಾ ಹಳೆಯ ಸ್ನೇಹಿತರು ಎಂದಿದ್ದಾರೆ. ಸಂಜಯ್ ದತ್ ಅವರ ರಾಕಿ ಸಿನಿಮಾಗೂ ಅವರೇ ಕೇಶ ವಿನ್ಯಾಸ ಮಾಡಿದ್ದರು.

    ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿದ್ದ ದತ್ ದೈಹಿಕವಾಗಿ ಕುಗ್ಗಿದ್ದಾರೆ ಎನ್ನಿಸುತ್ತದೆ. ಆದರೆ ಅವರು ಮಾತ್ರ ಇದನ್ನು ಒಪ್ಪುವುದಿಲ್ಲ ನಾನು ಗಟ್ಟಿಮುಟ್ಟಾಗಿದ್ದೇನೆ ಎನ್ನುತ್ತಾರೆ. ಆಸ್ಪತ್ರೆ ಸೇರಿದ ಬೆನ್ನಲ್ಲೇ ಕೆಜಿಎಫ್ ಅಭಿಮಾನಿಗಳಲ್ಲಿ ಆತಂಕ ಶುರುವಾಗಿತ್ತು ಆದರೆ ಇದೀಗ ಸಂಜಯ್ ದತ್ ಮುಂಬೈಗೆ ಬಂದಿಳಿದಿದ್ದರಿಂದ ಸಂತಸಗೊಂಡಿದ್ದಾರೆ.

     

    View this post on Instagram

     

    A Beautiful Day With Our Rockstar Sanjay Dutt At Salon Hakim’s Aalim ❤️ My day just got better with @duttsanjay entering our Salon HA… It’s always such a delight to see him but today was something else…. A whole lot of emotions caught up as we go a long way and share such beautiful memories together.❤️ Sanjay Dutt at Salon Hakim’s Aalim after getting a haircut done with all the necessary precautions Instructed by the government and the experts. #SanjayDutt #AalimHakim #Rockstar #SalonHakimsAalim #TeamHA #SafetyFirst #Precautions #Hygiene #SocialDistancing #NewNorms #TeamHakimsAalim #SalonLife #Viral #Trending #MovieLife #ActorsLife #fighter #warrior #babarocks #friends @duttsanjay @aalimhakim

    A post shared by Aalim Hakim (@aalimhakim) on

    ನವೆಂಬರ್ ನಲ್ಲಿ ಕೆಜಿಎಫ್-2 ಚಿತ್ರೀಕರಣಕ್ಕೆ ಹಾಜರ್
    ಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಸಂಜಯ್ ದತ್, ಚಿತ್ರೀಕರಣಕ್ಕೆ ಮರಳಲು ಸಿದ್ಧತೆ ನಡೆಸಿದ್ದಾರೆ. ನವೆಂಬರ್ ನಲ್ಲಿ ಕೆಜಿಎಫ್-2 ಚಿತ್ರೀಕರಣಕ್ಕೆ ಹಾಜರಾಗಲಿದ್ದಾರೆ ಎನ್ನಲಾಗಿದೆ. ವರ್ಕೌಟ್ ಸಹ ಮಾಡುತ್ತಿರುವ ಸಂಜಯ್ ದತ್, ಚಿತ್ರೀಕರಣಕ್ಕೆ ತಯಾರಾಗುತ್ತಿದ್ದಾರೆ. ಸದ್ಯ ಮಂಗಳೂರಿನಲ್ಲಿ ಕೆಜಿಎಫ್-2 ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಯಶ್, ನಾಯಕಿ ಶ್ರೀನಿಧಿ ಶೆಟ್ಟಿ ಭಾಗದ ಚಿತ್ರೀಕರಣ ನಡೆಯುತ್ತಿದೆ.

  • ಜೈಲು ವಾಸ ಅನುಭವಿಸಿದ ಬಾಲಿವುಡ್ ಸ್ಟಾರ್​​​​ಗಳು

    ಜೈಲು ವಾಸ ಅನುಭವಿಸಿದ ಬಾಲಿವುಡ್ ಸ್ಟಾರ್​​​​ಗಳು

    ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧಿತವಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಬೈಖಲಾ ಜೈಲಿನಲ್ಲಿದ್ದಾರೆ. ಬಂಧಿತರನ್ನು ಸೆಪ್ಟೆಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ಇತ್ತ ಚಂದವನದ ಇತಿಹಾಸದಲ್ಲಿ ಮೊದಲ ಬಾರಿಗೆ ಡ್ರಗ್ಸ್ ಕೇಸ್‍ನಲ್ಲಿ ಇಬ್ಬರು ನಟಿಯರು ಅರೆಸ್ಟ್ ಆಗಿ, ವಿಚಾರಣೆ ಎದುರಿಸುತ್ತಿದ್ದಾರೆ. ಬಾಲಿವುಡ್ ನಲ್ಲಿ ಈ ಹಿಂದೆ ಹಲವು ನಟರು ಜೈಲುವಾಸ ಅನುಭವಿಸಿದ್ದಾರೆ.

    1. ಸಂಜಯ್ ದತ್: 90ರ ದಶಕದ ವೇಳೆ ಮುಂಬೈನಲ್ಲಿ ನಡೆದ ಸರಣಿ ಸ್ಫೋಟದ ಸಮಯದಲ್ಲಿ ಕಾನೂನು ಬಾಹಿರವಾಗಿ ಶಸ್ತಾಸ್ತ್ರ ಸಂಗ್ರಹಿಸಿದ ಆರೋಪ ಸಾಬೀತಾದ ಹಿನ್ನೆಲೆ ಬಾಲಿವುಡ್ ಹಿರಿಯ ನಟ ಸಂಜಯ್ ದತ್ ಐದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಜೈಲು ಶಿಕ್ಷೆ ಅನುಭವಿಸಿದ ಸಂಜಯ್ ದತ್ ಫೆಬ್ರವರಿ 2016ರಂದು ರಿಲೀಸ್ ಆಗಿದ್ರು. ಜೈಲಿನಿಂದ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ಶಮ್‍ಶೇರ್, ಬ್ರಹ್ಮಾಸ್ತ್ರ, ಕೆಜಿಎಫ್-ಚಾಪ್ಟರ್ 2, ಪೃಥ್ವಿರಾಜ್, ಭುಜ್ ಮತ್ತು ತೋರ್‍ಬಾಜ್ ಸೇರಿದಂತೆ ಹಲವು ಸಿನಿಮಾಗಳು ಸಂಜು ಬಾಬಾ ಕೈಯಲ್ಲಿವೆ. ಇನ್ನು ಸಂಜಯ್ ದತ್ ಜೀವನಾಧರಿತ ಚಿತ್ರ ಬಾಕ್ಸ್ ಆಫಿಸ್ ನಲ್ಲಿ ದಾಖಲೆ ಬರೆದಿತ್ತು.

    2. ಫರ್ದಿನ್ ಖಾನ್: ಲೆಜೆಂಡರಿ ಆ್ಯಕ್ಟರ್ ಫಿರೋಜ್ ಖಾನ್ ಪುತ್ರ ಫರ್ದಿನ್ ಖಾನ್ 1998ರಲ್ಲಿ ‘ಪ್ರೇಮ್ ಅಗನ್’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಚಿತ್ರರಂಗಕ್ಕೆ ಬಂದ ಫರ್ದಿನ್ ಖಾನ್ ವಿರುದ್ಧ ಕೋಕೆನ್ ಸರಬರಾಜು ಮಾಡಿರೋ ಆರೋಪಗಳು ಕೇಳಿ ಬಂದಿದ್ದವು. ಆರೋಪ ಸಾಬೀತಾದ ಹಿನ್ನೆಲೆ ಜೈಲುವಾಸ ಅನುಭವಿಸಿದ್ದಾರೆ. ಜೈಲಿನಿಂದ ಬಂದ ಫರ್ದಿನ್ ಖಾನ್‍ನಿಂದ ಸಿನಿಮಾ ಲೋಕ ಅಂತರ ಕಾಯ್ದುಕೊಂಡಿದ್ದರಿಂದ ಬಣ್ಣದ ಬದುಕು ಅಂತ್ಯವಾಗಬೇಕಾಯ್ತು. 2010ರಲ್ಲಿ ಬಿಡುಗಡೆಗೊಂಡಿದ್ದ ‘ದುಲ್ಹಾ ಮಿಲ್ ಗಯಾ’ ಕೊನೆಯ ಚಿತ್ರವಾಗಿದ್ದು, ಅಂದಿನಿಂದ ರಂಗೀನ್ ದುನಿಯಾದಿಂದ ಫರ್ದಿನ್ ದೂರ ಉಳಿದುಕೊಂಡಿದ್ದಾರೆ.

    3. ಜಾನ್ ಅಬ್ರಾಹಂ: ಬಿಟೌನ್ ಲೋಕದ ಮೋಸ್ಟ್ ಹ್ಯಾಂಡ್‍ಸಮ್ ನಟ ಜಾನ್ ಅಬ್ರಾಹಂ ಸೆರೆಮನೆ ವಾಸದ ಅನುಭವ ಹೊಂದಿದ್ದಾರೆ. 2006ರಲ್ಲಿ ಜಾನ್ ಬೈಕ್ ನಲ್ಲಿ ಹೋಗ್ತಿರುವಾಗ ಸೈಕಲ್‍ಗೆ ಡಿಕ್ಕಿ ಹೊಡೆದಿದ್ರು. ಸೈಕಲ್ ಸವಾರರಿಬ್ಬರು ಗಾಯಗೊಂಡಿದ್ದರು. ಅಜಾಗರೂಕತೆ ಚಾಲನೆ ಹಿನ್ನೆಲೆ ಜಾನ್‍ಅಬ್ರಾಹಂ 15 ದಿನ ಜೈಲಿನಲ್ಲಿದ್ರು. ಈ ಘಟನೆ ಜಾನ್ ಅಬ್ರಾಹಂ ವೃತ್ತಿ ಬದುಕಿನ ಮೇಲೆ ಪರಿಣಾಮ ಬೀರಿಲ್ಲ. ಇಂದಿಗೂ ಸಿನಿಮಾ ಅಂಗಳದಲ್ಲಿ ಜಾನ್ ಅಬ್ರಾಹಂ ಆ್ಯಕ್ಟೀವ್ ಆಗಿದ್ದಾರೆ.

    4. ಸಲ್ಮಾನ್ ಖಾನ್: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಹಿಟ್ ಆ್ಯಂಡ್ ರನ್ ಮತ್ತು ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಕೆಲ ಸಮಯ ಜೈಲಿನಲ್ಲಿ ಕಳೆದಿದ್ದಾರೆ. ವೈಯಕ್ತಿಯ ಬದುಕಿನ ಅವಾಂತರಗಳು ಸಲ್ಮಾನ್ ಖಾನ್ ಪ್ರೊಫೆಷನ್ ಮೇಲೆ ಎಫೆಕ್ಟ್ ಆಗಿಲ್ಲ. ಸಲ್ಮಾನ್ ಖಾನ್ ಸಿನಿಮಾ ರಿಲೀಸ್ ಆದ್ರೆ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ.

    5. ಶಾಹಿನ್ ಅಹುಜಾ: 2005ರಲ್ಲಿ ‘ಹಜಾರೋ ಕ್ವಾಹಿಶ್’ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದ ಶಾಹಿನ್ ಅಹುಜಾ ಬಣ್ಣದ ಲೋಕದಲ್ಲಿ ಗುರುತಿಸಿಕೊಳ್ಳಲು ಸಾಧ್ಯವೇ ಆಗಲಿಲ್ಲ. 2009ರಲ್ಲಿ ಮನೆಯ ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಆಗಿದೆ. ಆರಂಭದಲ್ಲಿಯೇ ಜೈಲು ಸೇರಿದ ಪರಿಣಾಮ ಶಾಹಿನ್ ಸಿನಿಮಾ ಜೀವನ ಅಂತ್ಯವಾಗಿದೆ.

    6. ಸೂರಜ್ ಪಾಂಚೋಲಿ: ಹಿರಿಯ ನಟ ಆದಿತ್ಯಾ ಪಾಂಚೋಲಿ ಪುತ್ರ ಸೂರಜ್ ಪಾಂಚೋಲಿ ಸಿನಿಮಾಗಳಿಗಿಂದ ವಿವಾದಗಳಿಂದಲೇ ಸುದ್ದಿಯಾದ ನಟ. ಜಿಯಾ ಖಾನ್ ಸೂಸೈಡ್ ಕೇಸ್‍ನಲ್ಲಿ ಸೂರಜ್ ವಿರುದ್ಧ ಅನುಮಾನಗಳು ಹುಟ್ಟಿಕೊಂಡಿದ್ದವು. ಸೂರಜ್ 2015ರಲ್ಲಿ ಫಿಲಂ ಕೆರಿಯರ್ ಆರಂಭಿಸಿದ್ದು, ಸದ್ಯ ಕೆಲ ಚಿತ್ರಗಳನ್ನ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

    ಒಟ್ಟಿನಲ್ಲಿ ಕೆಲವರು ಜೈಲಿನಿಂದ ಬಂದ ಬಳಿಕವೂ ತಮ್ಮ ಫೇಮ್ ಉಳಿಸಿಕೊಂಡಿದ್ದು, ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮತ್ತವರು ಬಣ್ಣದ ಲೋಕಕ್ಕೆ ಗುಡ್ ಬೈ ಹೇಳಿದ್ರೆ, ಉಳಿದವರು ಒಂದು ಕ್ಲಿಕ್ ಗಾಗಿ ಪ್ರಯತ್ನ ಪಡುತ್ತಿದ್ದಾರೆ. ಇನ್ನು 28 ವರ್ಷದ ರಿಯಾ ಚಕ್ರವರ್ತಿ ವೃತ್ತಿ ಬದುಕಿನಲ್ಲಿ ಸುಶಾಂತ್ ಸಿಂಗ್ ಮತ್ತು ಡ್ರಗ್ಸ್ ಕೇಸ್ ಕಪ್ಪು ಚುಕ್ಕೆಯಾಗಿ ಉಳಿಯದಂತೋ ಸತ್ಯ.

  • ಅಧೀರಾನ ‘ಘರ್ಜನೆ’ಗೆ ಹೈಕೋರ್ಟ್‌ ಅನುಮತಿ

    ಅಧೀರಾನ ‘ಘರ್ಜನೆ’ಗೆ ಹೈಕೋರ್ಟ್‌ ಅನುಮತಿ

    ಬೆಂಗಳೂರು: ಬಾಲಿವುಡ್‌ ನಟ ಸಂಜಯ್‌ ದತ್‌ ನಟಿಸುತ್ತಿರುವ ಕೆಜಿಎಫ್‌-2 ಚಿತ್ರದ ಚಿತ್ರೀಕರಣಕ್ಕೆ ನೀಡಿರುವ ಅನುಮತಿಯನ್ನು ರದ್ದುಪಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌)ಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

    ಹುಬ್ಬಳ್ಳಿಯ ವಕೀಲ ಜಿ. ಶಿವಶಂಕರ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು. ಈ ವೇಳೆ ಶಿಕ್ಷೆಗೊಳಗಾದವರು ನಟನೆ ಮಾಡಬಾರದು ಎಂದು ಯಾವ ಕಾನೂನಿನಲ್ಲಿ ಹೇಳಿದೆ? ಅರ್ಜಿದಾರರೊಬ್ಬರ ನಿಲುವೇ ಇಡೀ ಕರ್ನಾಟಕದ ಜನತೆಯ ನಿಲುವು ಎಂದು ಹೇಗೆ ಸಾಬೀತುಪಡಿಸುತ್ತೀರಿ ಎಂದು ಅರ್ಜಿದಾರರ ಪರ ವಕೀಲರನ್ನು ಕೋರ್ಟ್‌ ಪ್ರಶ್ನಿಸಿತು.

    ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ಸಿಗದ ಕಾರಣ ಈ ಅರ್ಜಿಗೆ ಕಾನೂನಾತ್ಮಕ ಆಧಾರವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತು.

    ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೆಜಿಎಫ್‌-2 ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌ ಮತ್ತು ನಟ ಸಂಜಯ್‌ ದತ್‌ ಅವರನ್ನು ಪ್ರತಿವಾದಿ ಮಾಡಲಾಗಿತ್ತು.

    ಅರ್ಜಿಯಲ್ಲಿ ಏನಿತ್ತು?
    ಕೆಜಿಎಫ್‌-2 ಚಿತ್ರದಲ್ಲಿ ಟಾಡಾ ಅಪರಾಧಿಯಾದ ಬಾಲಿವುಡ್‌ ನಟ ಸಂಜಯ್‌ ದತ್‌ ನಟಿಸುತ್ತಿದ್ದಾರೆ. ಸಂಜಯ್‌ ದತ್‌ಗೆ 10 ವರ್ಷ ಜೈಲು ಶಿಕ್ಷೆಯಾಗಿತ್ತು. ಈ ವಿಚಾರ ತಿಳಿದಿದ್ದರೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಂಜಯ್‌ ದತ್‌ ನಟನೆಯ ಕೆಜಿಎಫ್‌-2 ಚಿತ್ರದ ಚಿತ್ರೀಕರಣಕ್ಕೆ ಹಾಗೂ ಬಿಡುಗಡೆಗೆ ಅನುಮತಿ ನೀಡಿದ್ದಾರೆ.

    ಜನರಿಂದ ಹೆಚ್ಚು ಹಣ ಗಳಿಸಬೇಕೆಂಬ ಉದ್ದೇಶದಿಂದ ಸಂಜಯ್‌ ದತ್‌ ಅವರನ್ನು ಹಾಕಿಕೊಂಡು ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಇದು ಜನತೆಯ ಘನತೆಗೆ ಧಕ್ಕೆಯಾಗಿದೆ. ಕೆಜಿಎಫ್‌-2 ಚಿತ್ರೀಕರಿಸಲು ಹೊಂಬಾಳೆ ಫಿಲಿಂಸ್‌ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು. ಈ ಅರ್ಜಿ ಇತ್ಯರ್ಥವಾಗುವರೆಗೂ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

  • ಕೆಜಿಎಫ್ ಅಧೀರನಿಗೆ ಕ್ಯಾನ್ಸರ್- ಶೀಘ್ರ ಚಿಕಿತ್ಸೆಗೆ ಅಮೆರಿಕಕ್ಕೆ ಹಾರಿದ ಸಂಜಯ್ ದತ್

    ಕೆಜಿಎಫ್ ಅಧೀರನಿಗೆ ಕ್ಯಾನ್ಸರ್- ಶೀಘ್ರ ಚಿಕಿತ್ಸೆಗೆ ಅಮೆರಿಕಕ್ಕೆ ಹಾರಿದ ಸಂಜಯ್ ದತ್

    ಮುಂಬೈ: ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಇದೀಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.

    ಈ ಸಂಬಂಧ ಪತ್ರಕರ್ತ ಕೋಮಲ್ ನಹ್ತಾ ಅವರು ಟ್ವೀಟ್ ಮಾಡಿ, ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ ಅಂತ ತಿಳಿಸಿದ್ದಾರೆ.

    ಇತ್ತ ಸಂಜಯ್ ದತ್ ಟ್ವೀಟ್ ಮಾಡಿ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ ತಿಳಿಸಿದ್ದರು. ನನಗೆ ಚಿಕಿತ್ಸೆ ಮಾಡಿಸಿಕೊಳ್ಳಬೇಕಿದ್ದು, ಸ್ನೇಹಿತರು ಕುಟುಂಬಸ್ಥರು ನನ್ನ ಜೊತೆಗಿದ್ದಾರೆ. ಹೀಗಾಗಿ ನನ್ನ ಆತ್ಮೀಯರು ಏನೂ ಯೋಚನೆ ಮಾಡಬೇಡಿ. ಅಲ್ಲದೆ ವದಂತಿಗಳನ್ನು ಕೂಡ ನಂಬಬೇಡಿ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಅತೀ ಶೀಘ್ರವೇ ಹುಷಾರಾಗಿ ನಿಮ್ಮ ಮುಂದೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ನಟನ ಆಪ್ತರೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ನಟರಿಗೆ ಕ್ಯಾನ್ಸರ್ ತುಂಬಾನೇ ಜೋರಾಗಿದೆ. ಪತ್ನಿ ಹಾಗೂ ಪುಟ್ಟ ಮಕ್ಕಳು ದುಬೈನಲ್ಲಿದ್ದು, ಮಕ್ಕಳ ಬಗ್ಗೆ ನಟ ಚಿಂತೆಗೀಡಾಗಿದ್ದಾರೆ. ಸದ್ಯ ಸಂಜಯ್ ಅವರಿಗೆ ತಕ್ಷಣವೇ ಚಿಕಿತ್ಸೆಯ ಅಗತ್ಯತೆ ಇದೆ. ಹೀಗಾಗಿ ಅವರು ಅಮೆರಿಕಕ್ಕೆ ತೆರಳುತ್ತಾರೆ ಎಂದು ತಿಳಿಸಿದರು.

    ಆಗಸ್ಟ್ 8ರಂದು ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡು ನಟ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಇವರ ಕೊರೊನಾ ಪರೀಕ್ಷೆ ನಡೆಸಿದ್ದು, ವರದಿಯಲ್ಲಿ ನೆಗೆಟಿವ್ ಎಂದು ಬಂದಿತ್ತು. ಕೊರೊನಾ ಅಲ್ಲದ ಕಾರಣ ಅವರಿಗೆ ನಾನ್ ಕೋವಿಡ್ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

    ಪ್ರಸ್ತುತ ಸಂಜಯ್ ದತ್ ಅವರು ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್: ಚಾಪ್ಟರ್ 2 ನಲ್ಲಿ ಅಧೀರನಾಗಿ ಅಭಿನಯಿಸುತ್ತಿದ್ದು, ಇತ್ತೀಚೆಗಷ್ಟೇ ಇದರ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು.

  • ಕೆಜಿಎಫ್‍ನ ಅಧೀರ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕೆಜಿಎಫ್‍ನ ಅಧೀರ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮುಂಬೈ: ಬಾಲಿವುಡ್ ನಟ ಹಾಗೂ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಆಗಸ್ಟ್ 8ರಂದು ಸಂಜಯ್ ದತ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಭಾನುವಾರವಷ್ಟೇ ಸಂಜಯ್ ದತ್ ಆರಾಮಾಗಿದ್ದಾರೆ, ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಆಸ್ಪತ್ರೆ ತಿಳಿಸಿತ್ತು.

    ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ನೆಗೆಟಿವ್ ವರದಿ ಬಂದಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಈ ಕುರಿತು ತಮ್ಮ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದರು. ನಾನು ಆರಾಗಿದ್ದೇನೆ, ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇನೆ. ವೈದ್ಯಕೀಯ ನಿಗಾ ವಹಿಸಲಾಗಿದೆ. ಕೊರೊನಾ ಪರೀಕ್ಷಾ ವರದಿ ಸಹ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದರು.

    ಲೀಲಾವತಿ ಆಸ್ಪತ್ರೆ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಮನೆಗೆ ಮರಳುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಎಲ್ಲರೂ ಸುರಕ್ಷಿತವಾಗಿರಿ ಎಂದು ಈ ಹಿಂದೆ ಮಾಡಿದ್ದ ಟ್ವೀಟ್‍ನಲ್ಲಿ ತಿಳಿಸಿದ್ದರು.

    ಸಂಜಯ್ ದತ್ ಮಾನ್ಯತಾ ದತ್ ಅವರನ್ನು ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೆ ಮೊದಲ ಪತ್ನಿಯ ಒಬ್ಬ ಮಗಳಿದ್ದಾಳೆ. ಸಂಜಯ್ ದತ್ ಕನ್ನಡದ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಬಾಲಿವುಡ್‍ನ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

  • ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು- ಐಸಿಯುನಲ್ಲಿ ಚಿಕಿತ್ಸೆ

    ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು- ಐಸಿಯುನಲ್ಲಿ ಚಿಕಿತ್ಸೆ

    ಮುಂಬೈ: ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಸಂಜಯ್ ದತ್ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಸಂಜಯ್ ದತ್ ಅವರನ್ನು ತೀವ್ರನಿಘಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸಂಜಯ್ ದತ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಅವರನ್ನು ಆಂಟಿಜಿನ್ ಕಿಟ್ ಬಳಸಿ ಕೊರೊನಾ ಪೆರೀಕ್ಷೆಗೆ ಒಳಪಡಿಸಲಾಗಿತ್ತು. ವರದಿ ನೆಗೆಟಿವ್ ಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

    ಜುಲೈ 29ರಂದು ಸಂಜಯ್ ದತ್ ತಮ್ಮ 61ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಸಂಜಯ್ ದತ್ತ ಬರ್ತ್ ಡೇ ದಿನ ಅಧೀರನ ಲುಕ್ ಬಿಡುಗಡೆ ಮಾಡುವ ಮೂಲಕ ಕೆಜಿಎಫ್ ತಂಡ ಗಿಫ್ಟ್ ನೀಡಿತ್ತು.