Tag: Sanjay Kumar Verma

  • ಖಲಿಸ್ತಾನಿಗಳಿಗೆ ಟ್ರೂಡೋ ಸರ್ಕಾರದ್ದೇ ಬೆಂಬಲ – ಭಾರತೀಯ ಹೈಕಮೀಷನರ್ ಸಂಜಯ್ ವರ್ಮಾ

    ಖಲಿಸ್ತಾನಿಗಳಿಗೆ ಟ್ರೂಡೋ ಸರ್ಕಾರದ್ದೇ ಬೆಂಬಲ – ಭಾರತೀಯ ಹೈಕಮೀಷನರ್ ಸಂಜಯ್ ವರ್ಮಾ

    – ಖಲಿಸ್ತಾನಿಗಳು ನನ್ನ ಹತ್ಯೆಗೂ ಯತ್ನಿಸಿದ್ದರು; ರೋಚಕ ಸತ್ಯ ಬಿಚ್ಚಿಟ್ಟ ವರ್ಮಾ

    ನವದೆದಹಲಿ/ಒಟ್ಟಾವಾ: ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪಿನ ನಾಯಕ ಹರ್ದೀಪ್‌ ಸಿಂಗ್‌ ನಿಜ್ಜರ್‌ (Hardeep Singh Nijjar) ಹತ್ಯೆ ವಿಚಾರದಲ್ಲಿ ಭಾರತ ಮತ್ತು ಕೆನಡಾ (India – Canada) ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮುಂದುವರಿದಿದೆ. ಈ ನಡುವೆ ಕೆನಡಾದಲ್ಲಿರುವ ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಶುಕ್ರವಾರ ಖಲಿಸ್ತಾನಿ ಕಾರ್ಯಕರ್ತರ ದಾಳಿಯ ಕುರಿತು ಮಾತನಾಡಿದ್ದಾರೆ.

    ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿರುವ ಸಂಜಯ್‌ ಕುಮಾರ್‌ ವರ್ಮಾ, ನಮ್ಮ ಮೇಲೆ ಹಲ್ಲೆ ನಡೆಸಲು ಹಲವು ಬಾರಿ ಪ್ರಯತ್ನ ನಡೆದಿತ್ತು. ಅವರು (ಖಾಲಿಸ್ತಾನಿ ಬೆಂಬಲಿಗರು) ಕತ್ತಿ ಹಿಡಿದಿರುತ್ತಿದ್ದರು. ಅದು ಕಿರ್ಪಾನ್ (ಸಿಖ್ ಧರ್ಮದಲ್ಲಿ ವಿಶೇಷ ಮಾನ್ಯತೆ ಹೊಂದಿರುವ ಅಸ್ತ್ರ) ಆಗಿರಲಿಲ್ಲ. ಅಲ್ಬರ್ಟಾದಲ್ಲಿ ಇದ್ದಾಗ ಅವರು ಬೀಸಿದ್ದ ಕತ್ತಿ ನನ್ನ ದೇಹದಿಂದ ಕೇವಲ 2- 2.5 ಇಂಚಿನಷ್ಟು ಹತ್ತಿರದವರೆಗೂ ಬಂದಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ಯಾನ್‌ ಇಂಡಿಯಾ ರೇಡ್‌ – 4 ರಾಜ್ಯಗಳಲ್ಲಿ ಬಿಷ್ಣೋಯ್‌ ಗ್ಯಾಂಗ್‌ನ 7 ಶೂಟರ್ಸ್‌ ಅರೆಸ್ಟ್‌

    ಖಲಿಸ್ತಾನಿಗಳು ಕೆನಡಾದಲ್ಲಿ ಉದ್ಯಮಗಳನ್ನು ನಡೆಸುತ್ತಿದ್ದಾರೆ. ಖಲಿಸ್ತಾನ ಹೆಸರಿನಲ್ಲಿ ಮಾನವ ಕಳ್ಳಸಾಗಣೆ, ಮಾದಕವಸ್ತು ಶಸ್ತ್ರಾಸ್ತ್ರ ಸಾಗಣೆ ಹಾಗೂ ಇತರ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಕೃತ್ಯಗಳಿಂದ ಹಾಗೂ ಗುರುದ್ವಾರಗಳಿಂದ ಸಾಕಷ್ಟು ಹಣ ಗಳಿಸುತ್ತಿದ್ದಾರೆ. ಆ ಹಣವನ್ನು ದುಷ್ಕೃತ್ಯಗಳಿಗೆ ಬಳಸುತ್ತಿದ್ದಾರೆ. ಖಾಲಿಸ್ತಾನಿಗಳು ಬೆರಳೆಣಿಕೆಯಷ್ಟಿದ್ದರೂ, ಗಮನ ಸೆಳೆಯುವುದಕ್ಕಾಗಿ ಮತ್ತು ಕೆನಡಾ ರಾಜಕೀಯ ಬೆಂಬಲಕ್ಕಾಗಿ ಹೆಚ್ಚು ಕೂಗಾಡುತ್ತಾರೆ ಎಂದು ಬಾಂಬ್‌ ಸಿಡಿಸಿದ್ದಾರೆ.

    ಖಲಿಸ್ತಾನಿಗಳಿಗೆ ಟ್ರೂಡೋ ಸರ್ಕಾರದ್ದೇ ಬೆಂಬಲ:
    ಕೆನಡಾ ಪ್ರಧಾನಿ ಜಸ್ಟಿನ್ ಟೂಡೊ ವಿರುದ್ಧ ನೇರ ವಾಗ್ದಾಳಿ ನಡೆಸಿ, ಖಾಲಿಸ್ತಾನಿ ಪ್ರತ್ಯೇಕತಾವಾದಿ ಕ್ರಿಮಿನಲ್‌ಗಳ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಅವರನ್ನು ಪ್ರೋತ್ಸಾಹಿಸುವುದಕ್ಕೆ ಸಮ. ಟ್ಯೂಡೊ ಅವರು ರಾಜಕೀಯ ಲಾಭಕ್ಕಾಗಿ ಖಾಲಿಸ್ತಾನಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ವಿದೇಶಿ ಪ್ರವಾಸದ ಮಾಹಿತಿ ಕೊಟ್ಟವರಿಗೆ 10 ಲಕ್ಷ ಬಹುಮಾನ: ಉಗ್ರ ಪನ್ನುನ್‌ ಘೋಷಣೆ

    ಭಾರತೀಯರಿಗೆ ಎಚ್ಚರಿಕೆ:
    ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಪ್ರಸ್ತುತ, ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳು ಕೆನಡಾದಲ್ಲಿ ವಾಸಿಸುವ ಸುಮಾರು 3,19,000 ವಿದ್ಯಾರ್ಥಿಗಳು ಸೇರಿದಂತೆ ವಿಶಾಲ ಭಾರತೀಯ ಸಮುದಾಯಕ್ಕೆ ಅಪಾಯವನ್ನುಂಟುಮಾಡುವ ಸಂಚು ರೂಪಿಸಿದ್ದಾರೆ. ಹಾಗಾಗಿ ಅಲ್ಲಿನ ಭಾರತೀಯ ವಿದ್ಯಾರ್ಥಿಗಳು ಜಾಗೃತಿ ವಹಿಸುವಂತೆ ಸಲಹೆ ನೀಡಿದ್ದಾರೆ.

    ಭಾರತ ಖಲಿಸ್ತಾನಿ ಭಯೋತ್ಪಾದಕ ಎಂದು ಘೋಷಿಸಿರುವ ಕೆನಡಾ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ 2023ರ ಜೂನ್‌ನಲ್ಲಿ ಹತ್ಯೆಯಾಗಿದ್ದ. ಭಾರತದ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕ ಅಧಿಕಾರಿಗಳನ್ನು ಆ ಪ್ರಕರಣದ ವಿಚಾರಣೆಗೆ ಒಳಪಡಿಸುವುದಾಗಿ ಕೆನಡಾ ಸರ್ಕಾರ ಇತ್ತೀಚೆಗೆ ಹೇಳಿಕೆ ನೀಡಿತ್ತು. ಅದರ ಬೆನ್ನಲ್ಲೇ ಭಾರತವು ತನ್ನ ಹೈಕಮಿಷನರ್‌ ವರ್ಮಾ ಹಾಗೂ ಇತರ ಐವರು ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

  • ಖಲಿಸ್ತಾನಿ ಉಗ್ರರು ಕೆನಡಾ ಗುಪ್ತಚರ ಸಂಸ್ಥೆಯ ಆಸ್ತಿ: ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ

    ಖಲಿಸ್ತಾನಿ ಉಗ್ರರು ಕೆನಡಾ ಗುಪ್ತಚರ ಸಂಸ್ಥೆಯ ಆಸ್ತಿ: ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ

    ಒಟ್ಟಾವಾ: ಖಲಿಸ್ತಾನಿ ಭಯೋತ್ಪಾದಕರು ಕೆನಡಾ ಭದ್ರತಾ ಗುಪ್ತಚರ ಸೇವೆಯ (CSIS) ಆಸ್ತಿ ಎಂದು ಕೆನಡಾದಲ್ಲಿರುವ (Canada) ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ (Sanjay Kumar Verma) ಸ್ಫೋಟಕ ಆರೋಪ ಮಾಡಿದ್ದಾರೆ.

    ತನ್ನ ವಿರುದ್ಧ ಟ್ರುಡೋ ಸರ್ಕಾರ (Justin Trudeau Govt) ಆರೋಪ ಮಾಡಿದ ಒಂದು ವಾರದ ನಂತರ ಸಂಜಯ್ ಕುಮಾರ್ ವರ್ಮಾ ಅವರು ಕೆನಡಾ ಮೂಲದ ಸಿಟಿವಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಕೆನಡಾ ಸರ್ಕಾರವು ಖಲಿಸ್ತಾನಿ ಉಗ್ರರನ್ನು ಪ್ರೋತ್ಸಾಹಿಸುತ್ತಿದೆ ಎಂದು ನೇರವಾಗಿಯೇ ಹೇಳಿದರು.

    ಭಾರತೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಸವಾಲೆಸೆಯಲು ಪ್ರಯತ್ನಿಸುತ್ತಿರುವವರೊಂದಿಗೆ ಸ್ನೇಹಯುತವಾಗಿ ನಡೆದುಕೊಳ್ಳುವ ಮೊದಲು ಕೆನಡಾ ಸರ್ಕಾರ ನಮ್ಮ ಮೂಲ ಕಾಳಜಿಯನ್ನು ಪ್ರಾಮಾಣಿಕವಾಗಿ ಅರ್ಥಮಾಡಿಕೊಳ್ಳಬೇಕೆಂದು ತಿಳಿಸಿದರು.

     


    ಈ ಖಲಿಸ್ತಾನಿ ಉಗ್ರಗಾಮಿಗಳು ಭಾರತೀಯ ಪ್ರಜೆಗಳಲ್ಲ, ಅವರು ಕೆನಡಾದ ಪ್ರಜೆಗಳು ಮತ್ತು ಯಾವುದೇ ದೇಶವು ತನ್ನ ನಾಗರಿಕರಿಗೆ ಮತ್ತೊಂದು ರಾಷ್ಟ್ರದ ಸಾರ್ವಭೌಮತ್ವವನ್ನು ಪ್ರಶ್ನಿಸಲು ಅವಕಾಶ ನೀಡಬಾರದು ಎಂದು ಅವರು ಹೇಳಿದರು. ಇದನ್ನೂ ಓದಿ: ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಅಧಿಕೃತ ಪ್ರಕಟಣೆ ಸಾಧ್ಯತೆ

    ಖಾಲಿಸ್ತಾನಿ ಭಯೋತ್ಪಾದಕರ ಹತ್ಯೆಗೆ ಸಂಬಂಧಿಸಿದಂತೆ ತನ್ನ ಮೇಲೆ ಹೊರಿಸಲಾದ ಎಲ್ಲಾ ಆರೋಪಗಳನ್ನು ನಿರಾಕರಿಸಿದ ಅವರು, ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ ಎಂದರು.

    ಭಾತದ ಹೈಕಮಿಷನರ್ ಆಗಿರುವ ನಾನು ಅಂತಹ ಯಾವುದೇ ಕೆಲಸ ಮಾಡಿಲ್ಲ. ಕೆನಡಾದಲ್ಲಿ ಖಲಿಸ್ತಾನಿ ಪರ ಅಂಶಗಳನ್ನು ಮೇಲ್ವಿಚಾರಣೆ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಯ ವಿಷಯವಾಗಿದೆ. ನಮ್ಮ ತಂಡವು ಮುಕ್ತ ಮೂಲಗಳ ಮೂಲಕ ಮಾಹಿತಿಯನ್ನು ಸಂಗ್ರಹಿಸುತ್ತದೆ. ನಾವು ಪತ್ರಿಕೆಗಳನ್ನು ಓದುತ್ತೇವೆ, ಅವರ ಹೇಳಿಕೆಗಳನ್ನು ನಾವು ಗಮನಿಸುತ್ತೇವೆ ಎಂದು ವಿವರಿಸಿದರು.

    ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಸರ್ರೆ ನಗರದ ಗುರುದ್ವಾರದ ಬಳಿ ಖಲಿಸ್ತಾನಿ ಉಗ್ರ ನಿಜ್ಜಾರ್‌ ಆಗುಂತಕರ ಗುಂಡೇಟಿಗೆ ಬಲಿಯಾಗಿದ್ದ. ಈತನ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂದು ಆರೋಪಿಸಿದ ಬೆನ್ನಲ್ಲೇ ಎರಡು ದೇಶಗಳ ಮಧ್ಯೆ ರಾಜತಾಂತ್ರಿಕ ಸಮಸ್ಯೆ ಸೃಷ್ಟಿಯಾಗಿತ್ತು. ನಂತರ ಮಾತುಕತೆಯ ಮೂಲಕ ಎರಡು ದೇಶಗಳ ನಡುವಿನ ಬಿಕ್ಕಟ್ಟು ಬಗೆ ಹರಿದಿತ್ತು.

    ಘಟನೆ ನಡೆದು ಒಂದು ವರ್ಷ ಕಳೆದ ಬಳಿಕ ಈ ವಿಚಾರವನ್ನು ಮತ್ತೊಮ್ಮೆ ಪ್ರಸ್ತಾಪಿಸಿ ಕೆನಡಾ ಭಾರತದ ಕೆಂಗಣ್ಣಿದೆ ಗುರಿಯಾಗಿದೆ. ಹತ್ಯೆಯ ಹಿಂದೆ ಭಾರತೀಯ ರಾಯಭಾರಿ ಸಂಜಯ್‌ಕುಮಾರ್‌ ವರ್ಮಾ ಅವರ ಪಾತ್ರವಿದ್ದು, ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಹೇಳುವ ಮೂಲಕ ಜಸ್ಟಿನ್‌ ಟ್ರುಡೋ ಸರ್ಕಾರ ಚೇಷ್ಟೆ ಮುಂದುವರಿಸಿದೆ.