‘ಪುಷ್ಪ 2′ (Pushpa 2) ವಿವಾದದ ನಡುವೆ ಹೊಸ ಪ್ರಾಜೆಕ್ಟ್ನತ್ತ ಅಲ್ಲು ಅರ್ಜುನ್ ಮುಖ ಮಾಡಿದ್ದಾರೆ. ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ಕಚೇರಿಯಲ್ಲಿ ಅಲ್ಲು ಅರ್ಜುನ್ (Allu Arjun) ಕಾಣಿಸಿಕೊಂಡಿದ್ದಾರೆ. ಅವರೊಂದಿಗೆ ನಟ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಈಗ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಕೋರ್ಟ್ನಲ್ಲಿ ಪವಿತ್ರಾ ಭಾವುಕ – ಬೆನ್ನುತಟ್ಟಿ ಸಂತೈಸಿದ ದರ್ಶನ್

‘ಪುಷ್ಪ 2’ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ರೆಗ್ಯೂಲರ್ ಬೇಲ್ ಸಿಕ್ಕಿದೆ. ಇದರ ವಿವಾದದ ನಡುವೆ ಹೊಸ ಸಿನಿಮಾ ಮಾಡಲು ಅವರು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ಸಂಜಯ್ ಲೀಲಾ ಬನ್ಸಾಲಿ ಜೊತೆ ಅಲ್ಲು ಅರ್ಜುನ್ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಇಬ್ಬರ ಕಡೆಯಿಂದಲೂ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿರಲಿಲ್ಲ.
View this post on Instagram
ನಿನ್ನೆ (ಜ.9) ಅಲ್ಲು ಅರ್ಜುನ್ ಮುಂಬೈಗೆ ಆಗಮಿಸಿದ್ದರು. ಈ ವೇಳೆ, ಅವರು ಬನ್ಸಾಲಿ ಕಚೇರಿಯಲ್ಲಿ ನಟ ಕಾಣಿಸಿಕೊಂಡಿದ್ದಾರೆ. ಮುಂದಿನ ಸಿನಿಮಾ ಬಗ್ಗೆ ಮಾತುಕತೆ ನಡೆದಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಈ ಹಿಂದೆ ಹರಿದಾಡುತ್ತಿದ್ದ ಸಿನಿಮಾ ಸುದ್ದಿಗೆ ಇದೀಗ ಪುಷ್ಠಿ ಸಿಕ್ಕಿದೆ. ಸದ್ಯ ಹರಿದಾಡುತ್ತಿರುವ ಸುದ್ದಿ ನಿಜನಾ? ಇಬ್ಬರ ಕಡೆಯಿಂದ ಸಿನಿಮಾ ಕುರಿತು ಗುಡ್ ನ್ಯೂಸ್ ಸಿಗುತ್ತಾ ಎಂದು ಕಾಯಬೇಕಿದೆ.
View this post on Instagram
ಇನ್ನೂ ಡಿ.5ರಂದು ರಿಲೀಸ್ ಆದ ‘ಪುಷ್ಪ 2’ ಸಿನಿಮಾ ಗೆಲ್ಲಾಪೆಟ್ಟಿಗೆಯಲ್ಲಿ 1800 ಕೋಟಿ ರೂ. ಕಲೆಕ್ಷನ್ ಮಾಡಿ ಮುನ್ನಗ್ಗುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಶ್ರೀಲೀಲಾ, ಡಾಲಿ, ತಾರಕ್ ಪೊನ್ನಪ್ಪ ಸೇರಿದಂತೆ ಅನೇಕರು ನಟಿಸಿದ್ದಾರೆ.







ಬಾಲಿವುಡ್ನ ಹಾಟ್ ಹೀರೋ ಸಿದ್ಧಾಂತ್ ಚತುರ್ವೇದಿಗೆ (Siddhant Chaturvedi) ಮೃಣಾಲ್ ನಾಯಕಿಯಾಗಿದ್ದಾರೆ. ಮುಂದಿನ ವಾರದಿಂದ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ. ಸದ್ಯ ಸಿನಿಮಾ ವರ್ಕ್ಶಾಪ್ನಲ್ಲಿ ನಟಿ ಭಾಗಿಯಾಗುತ್ತಿದ್ದಾರೆ. ಪಾತ್ರದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ ಮೃಣಾಲ್. ಇದನ್ನೂ ಓದಿ:

ಮೃಣಾಲ್ ಠಾಕೂರ್ (Mrunal Thakur) ಸದ್ಯ ಬಾಲಿವುಡ್ ಮತ್ತು ಟಾಲಿವುಡ್ (Tollywood) ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೀತಾ ರಾಮಂ, ಹಲೋ ನಾನ್ನಾ ಚಿತ್ರದ ಸಕ್ಸಸ್ ನಂತರ ನಟಿಗೆ ಬೇಡಿಕೆ ಜಾಸ್ತಿ ಆಗಿದೆ. ಯಾವುದೇ ಪಾತ್ರ ಕೊಟ್ಟರೂ ಸಹಜವಾಗಿ ನಟಿಸುವ ಮೃಣಾಲ್ ಇದೀಗ ಸಂಜಯ್ ಲೀಲಾ ಬನ್ಸಾಲಿ ಕಣ್ಣಿಗೆ ಬಿದ್ದಿದ್ದಾರೆ. ಇದನ್ನೂ ಓದಿ:

ಮದುವೆಯಾದ್ಮೇಲೆ ನಟಿಯರಿಗೆ ಡಿಮ್ಯಾಂಡ್ ಕಮ್ಮಿ ಎಂಬ ಮಾತಿದೆ. ಆದರೆ ಆಲಿಯಾ ಭಟ್ ಆ ಮಾತನ್ನು ಸುಳ್ಳು ಮಾಡಿದ್ದಾರೆ. ಮಗು ಆದ್ಮೇಲೆಯೂ ಫಿಟ್ನೆಸ್ ಕಡೆ ಹೆಚ್ಚು ಗಮನ ಕೊಡುತ್ತಿರುವ ಆಲಿಯಾ ಈಗ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ.







ಬಾಲಿವುಡ್ಗೆ (Bollywood) ಎಂಟ್ರಿ ಕೊಟ್ಟ ಮೇಲೆ ಬನ್ಸಾಲಿ ಅವರ ಸಿನಿಮಾದಲ್ಲಿ ಹೀರೋಯಿನ್ ಆಗಬೇಕು ಎಂಬುದು ಪ್ರತಿಯೊಬ್ಬರ ನಾಯಕಿಯರ ಕನಸು. ದೀಪಿಕಾ ಪಡುಕೋಣೆ, ಐಶ್ವರ್ಯ ರೈ, ಆಲಿಯಾ ಭಟ್ ಅವರಂತಹ ನಟಿಯರು ಬನ್ಸಾಲಿ ಗರಡಿಯಲ್ಲಿ ಪಳಗಿ ಗೆದ್ದಿದ್ದಾರೆ. ಗಂಗೂಬಾಯಿ ಕಾಥಿಯಾವಾಡಿ ಚಿತ್ರದ ಸಕ್ಸಸ್ ನಂತರ ಯಾವ ಸಿನಿಮಾ ಮಾಡುತ್ತಾರೆ ಎಂದು ಕಾಯ್ತಿದ್ದವರಿಗೆ ಈಗ ಸಿಹಿಸುದ್ದಿ ಸಿಕ್ಕಿದೆ. ಇದನ್ನೂ ಓದಿ:
ಸದ್ಯ ಅವರು ‘ಹೀರಾಮಂಡಿ’ ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ನವೆಂಬರ್ನಲ್ಲಿ ಸಿನಿಮಾ ಚಿತ್ರೀಕರಣ ಅಂತ್ಯವಾಗಲಿದೆ. ಬಳಿಕ ಮೃಣಾಲ್ ಠಾಕೂಲ್ಗೆ ಸಂಜಯ್ ಲೀಲಾ ಬನ್ಸಾಲಿ(Sanjay Leela Bansali) ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಸಿದ್ಧಾಂತ್ ಚತುರ್ವೇದಿಗೆ ನಾಯಕಿಯಾಗಿ ‘ಸೀತಾರಾಮಂ’ (Seetha Ramam) ನಟಿ ಸಾಥ್ ನೀಡುತ್ತಿದ್ದಾರೆ. ಈ ಚಿತ್ರಕ್ಕೆ ರವಿ ಉದ್ಯಾವರ್ ನಿರ್ದೇಶನ ಮಾಡುತ್ತಿದ್ದಾರೆ.

