Tag: Sanjay Leela Bhansali

  • ಆಲಿಯಾ ಭಟ್ ನಂತರ ಆದಿತ್ಯ- ಕೃತಿಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾದ ಬನ್ಸಾಲಿ

    ಆಲಿಯಾ ಭಟ್ ನಂತರ ಆದಿತ್ಯ- ಕೃತಿಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾದ ಬನ್ಸಾಲಿ

    `ಗಂಗೂಬಾಯಿ ಕಥಿಯಾವಾಡಿ’ ಭರ್ಜರಿ ಸಕ್ಸಸ್ ನಂತರ ಹೊಸ ಜೋಡಿಗೆ ಆ್ಯಕ್ಷನ್ ಕಟ್ ಹೇಳಲು ಸಂಜಯ್ ಲೀಲಾ ಬನ್ಸಾಲಿ ರೆಡಿಯಾಗಿದ್ದಾರೆ. ಬಿಗ್ ಸಕ್ಸಸ್ ನಂತರ ಡೈರೆಕ್ಷನ್ ಕ್ಯಾಪ್ ತೊಟ್ಟು ಆದಿತ್ಯ ಕಪೂರ್ ಮತ್ತು ಕೃತಿಗೆ ನಿರ್ದೇಶನ ಮಾಡಲು ರೆಡಿಯಾಗಿದ್ದಾರೆ.

    ಈ ವರ್ಷದ ಹಿಟ್ ಲಿಸ್ಟ್‌ನಲ್ಲಿ `ಗಂಗೂಬಾಯಿ ಕಥಿಯಾವಾಡಿ’ ಚಿತ್ರವು ಸೇರಿದೆ. ನೈಜ ಕಥೆಗೆ ಆಲಿಯಾ ಭಟ್ ಜೀವ ತುಂಬಿದ್ರು. ಬನ್ಸಾಲಿ ಮತ್ತು ಆಲಿಯಾ ಭಟ್ ಡೆಡ್ಲಿ ಕಾಂಬಿನೇಷನ್ ಸಿನಿಮಾಗೆ ಅಭಿಮಾನಿಗಳು ಫಿದಾ ಆದ್ರು. ಈಗಾಗಲೇ ಸಾಕಷ್ಟು ಹಿಟ್ ಚಿತ್ರಗಳನ್ನ ನೀಡಿರುವ ಸಂಜಯ್ ಲೀಲಾ ಬನ್ಸಾಲಿ ಈಗ ಹೊಸ ಪ್ರೇಮ ಕಥೆಯನ್ನ ತೆರೆಯ ಮೇಲೆ ತೋರಿಸಲು ರೆಡಿಯಾಗಿದ್ದಾರೆ. ಇದನ್ನೂ ಓದಿ: ವಿದೇಶಿ ಮೂಲದ ಗೆಳೆಯನೊಂದಿಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಪುತ್ರಿ ಡೇಟಿಂಗ್

    ಕ್ಯೂಟ್ ಲವ್‌ಸ್ಟೋರಿ ಹೊತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ರೆಡಿಯಾಗಿದ್ದಾರೆ. ಆದಿತ್ಯ ಕಪೂರ್ ಮತ್ತು ಬಿಟೌನ್ ಬ್ಯೂಟಿ ಕೃತಿ ಸನೂನ್ ಗೆ ಆ್ಯಕ್ಷನ್ ಕಟ್ ಹೇಳಲು ಈ ನಿರ್ದೇಶಕ ಸಜ್ಜಾಗಿದ್ದಾರೆ. ಎಂದೂ ತೆರೆಯ ಮೇಲೆ ನೋಡಿರದ ಭಿನ್ನ ಕಥೆಯನ್ನ ಬೆಳ್ಳಿಪರದೆಯಲ್ಲಿ ತೋರಿಸಲು ಸಜ್ಜಾಗಿದ್ದಾರೆ. ಇನ್ನು ಸಿಲ್ವರ್ ಸ್ಕ್ರೀನ್‌ನಲ್ಲಿ ಆದಿತ್ಯ ಮತ್ತು ಕೃತಿ ಜೋಡಿ ಮೋಡಿ ಮಾಡುತ್ತಾ ಅಂತಾ ಕಾದು ನೋಡಬೇಕಿದೆ.

    Live Tv

  • ಸಂಜಯ್ ಲೀಲಾ ಬನ್ಸಾಲಿ ಜೊತೆ ಅಲ್ಲು ಅರ್ಜುನ್ ಸಿನಿಮಾ

    ಸಂಜಯ್ ಲೀಲಾ ಬನ್ಸಾಲಿ ಜೊತೆ ಅಲ್ಲು ಅರ್ಜುನ್ ಸಿನಿಮಾ

    ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ದಕ್ಷಿಣ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ‘ಪುಷ್ಪ’ ಸಿನಿಮಾ ಮೂಲಕ ಬಾಲಿವುಡ್‍ಗೂ ಎಂಟ್ರಿ ಕೊಟ್ಟಿದ್ದು, ಸಿನಿಪ್ರಿಯರನ್ನು ರಂಜಿಸಿದ್ದಾರೆ. ಅಲ್ಲದೇ ಬಾಲಿವುಡ್ ಎಂಟ್ರಿಗೆ ಸಿದ್ಧರಾಗುತ್ತಿದ್ದಾರೆ ಎಂಬ ಸುದ್ದಿಯೂ ಬಾಲಿವುಡ್‍ನಲ್ಲಿ ಕೇಳಿಬರುತ್ತಿದೆ. ಅಲ್ಲದೇ ಇತ್ತೀಚೆಗೆ ಅಲ್ಲು ಅರ್ಜುನ್, ಬಾಲಿವುಡ್ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕಚೇರಿಗೆ ಭೇಟಿಕೊಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹೇಳಿದ್ದಾರೆ.

    ‘ಪುಷ್ಪ’ ಸಿನಿಮಾ ಮೂಲಕ ಹಿಂದಿ ಸಿನಿರಸಿಕರಿಗೂ ಹತ್ತಿರವಾಗಿರುವ ಅಲ್ಲು ಬಾಲಿವುಡ್ ಸಿನಿಮಾ ಮಾಡಲು ಸಿದ್ಧರಾಗಿದ್ದಾರೆ ಎಂಬ ಸುದ್ದಿ ಎಲ್ಲಕಡೆ ಹರಿದಾಡುತ್ತಿದೆ. ಈ ಸುದ್ದಿಗೆ ಒತ್ತುಕೊಂಡುವಂತೆ ಅಲ್ಲು, ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ಭೇಟಿಕೊಟ್ಟಿದ್ದಾರೆ. ಈ ವೇಳೆ ಅವರು ಸಿನಿಮಾ ಬಗ್ಗೆ ಮಾತನಾಡಿದ್ದಾರೆ ಎಂಬ ಸುದ್ದಿ ಓಡಾಡುತ್ತಿದೆ. ಆದರೆ ಈ ಕುರಿತು ಇಬ್ಬರು ಯಾವುದೇ ರೀತಿಯ ಮಾಹಿತಿಯನ್ನು ಕೊಟ್ಟಿಲ್ಲ. ಇದನ್ನೂ ಓದಿ: ಫ್ಯಾನ್ಸ್ ಒತ್ತಾಯದ ಮೇರೆಗೆ ವಿಷ್ಣುದಾದ ಇತಿಹಾಸ ಬರೆದ ಮೂವೀ ರೀ-ರಿಲೀಸ್ 

    ಪ್ರಸ್ತುತ ಇಬ್ಬರು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಬನ್ಸಾಲಿ ಅವರು ರಣವೀರ್ ಸಿಂಗ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದು, ಇದು ಇವರಿಬ್ಬರ ಕಾಂಬಿನೇಷನ್‍ನಲ್ಲಿ ಮೂಡಿಬರುತ್ತಿರುವ ನಾಲ್ಕನೇ ಸಿನಿಮಾ ಆಗಿದೆ. ಈ ಸಿನಿಮಾಗೆ ‘ಬೈಜು ಬವರಾ’ ಎಂದು ಹೆಸರಿಡಲಾಗಿದೆ. ಈ ಸಿನಿಮಾ ಮುಗಿದ ನಂತರ ಇವರು ಅಲ್ಲು ಜೊತೆ ಕೆಲಸ ಮಾಡಲು ಬನ್ಸಾಲಿ ಯೋಜನೆಯನ್ನು ಹಾಕುತ್ತಿದ್ದಾರೆ. ಒಂದು ವೇಳೆ ಇವರಿಬ್ಬರು ಒಟ್ಟಿಗೆ ನಟಿಸಿದರೆ ಅಭಿಮಾನಿಗಳು ಸಂತೋಷ ಪಡುವುದರಲ್ಲಿ ಸಂದೇಹವೇ ಇಲ್ಲ.

  • ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಮಾಯಿ ಮಾಡಿದ ಗಂಗೂಬಾಯಿ

    ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಮಾಯಿ ಮಾಡಿದ ಗಂಗೂಬಾಯಿ

    ಮುಂಬೈ: ಬಾಲಿವುಡ್ ತಾರೆ ಆಲಿಯಾ ಭಟ್ ನಟನೆಯ ಗಂಗೂಬಾಯಿ ಕಾಠಿಯಾವಾಡಿ ಇದೇ ಶುಕ್ರವಾರದಂದು ಬಿಡುಗಡೆ ಆಗಿದೆ. ಬಿಡುಗಡೆಗೊಂಡ ಮೊದಲ ದಿನವೇ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಈ ಚಿತ್ರವು ಅಂದಾಜು 7 ಕೋಟಿ ಗಳಿಸಬಹುದು ಎಂಬ ಲೆಕ್ಕಾಚಾರವಿತ್ತು. ಆದರೆ ಅಚ್ಚರಿ ಪಡುವಷ್ಟು ಗಂಗೂಬಾಯಿ ಗಲ್ಲಾಪೆಟ್ಟಿಗೆ ತುಂಬಿಸಿದ್ದಾಳೆ. ಮೊದಲ ದಿನವೇ ಬರೋಬ್ಬರಿ 10.50 ಕೋಟಿ ರೂ. ಈ ಸಿನಿಮಾ ಬಾಚಿಕೊಂಡಿದೆ.

    ರಿಲೀಸ್ ಆದ ಎರಡನೇ ದಿನ ಶನಿವಾರ 13.32 ಕೋಟಿ ರೂಪಾಯಿ, ಮೂರನೇ ದಿನ ಭಾನುವಾರ 15.30 ಕೋಟಿ ರೂಪಾಯಿ ಗಳಿಸಿತ್ತು. ಈ ಮೂಲಕ ಮೂರನೇ ದಿನಕ್ಕೆ ಈ ಚಿತ್ರದ ಕಲೆಕ್ಷನ್ 39.12 ಕೋಟಿ ರುಪಾಯಿ ದಾಟಿತ್ತು. ವೀಕೆಂಡ್ ಅಲ್ಲದೇ, ವೀಕ್ ಡೇಸ್ ನಲ್ಲೂ ಅದರ ಲೆಕ್ಕಾಚಾರ ಕೆಳಗಿಳಿಯಲಿಲ್ಲ. ಸೋಮವಾರವೂ ಚಿತ್ರದ ಕಲೆಕ್ಷನ್ ಕುಗ್ಗದೇ, ವಾರದ ಮೊದಲ ದಿನವಾದರೂ ಅಂದಾಜು 8.20 ಕೋಟಿ ರೂಪಾಯಿ ಸಿನಿಮಾ ಗಳಿಸಿದೆ. ಈ ಮೂಲಕ ಚಿತ್ರದ ಕಲೆಕ್ಷನ್ ಅಂದಾಜು 47 ಕೋಟಿ ರೂಪಾಯಿ ಎನ್ನಲಾಗುತ್ತಿದೆ. ಇದನ್ನೂ ಓದಿ : ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ಚಿತ್ರವು ತೆರೆಗೆ ಬಂದು ಇಂದಿಗೆ 4 ದಿನಗಳಾಗಿವೆ. ಅಲ್ಲದೇ, ಮಹಾ ಶಿವರಾತ್ರಿ ನಿಮಿತ್ಯ ದೇಶಾದ್ಯಂತ ಹಬ್ಬಕ್ಕೆ ಸರ್ಕಾರಿ ರಜೆ ಇದೆ. ಈ ಕಾರಣಕ್ಕೆ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರದತ್ತ ಧಾವಿಸಿದ್ದರು. ಹೀಗಾಗಿ, ಈ ಸಿನಿಮಾ ಮಂಗಳವಾರ ಮಧ್ಯಾಹ್ನದವರೆಗೆ 10 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಅಂದಾಜಿದೆ. ಹೀಗೆ ಗಂಗೂಬಾಯಿಯ ನಾಲ್ಕು ದಿನಗಳ ಒಟ್ಟು ಕಲೆಕ್ಷನ್ ಅಂದಾಜು 57 ಕೋಟಿ ದಾಟಬಹುದು ಅಂತಿದೆ ಬಿ ಟೌನ್ ಬಾಕ್ಸ್ ಆಫೀಸ್. ಸಿನಿಮಾದ ಕಲೆಕ್ಷನ್ ಹೀಗೆಯೇ ಮುಂದುವರಿದರೆ ಈ ವಾರಾಂತ್ಯಕ್ಕೆ ಗಂಗೂಬಾಯಿ 100 ಕೋಟಿ ಕ್ಲಬ್ ಗೆ ಸೇರಳಿದ್ದಾಳೆ. ಇದನ್ನೂ ಓದಿ : ಸಿಂಪಲ್ ಸುನಿ ನಿರ್ದೇಶನದ ಸಿನಿಮಾದಲ್ಲಿ ವಾಸ್ಕೋಡಿಗಾಮನ ಕಥೆ

  • ನಾಳೆ ಬಿಡುಗಡೆ ಆಗಲಿರುವ ಗಂಗೂಬಾಯಿ ಕಾಠಿಯಾವಾಡಿ ಟೈಟಲ್ ಬದಲಾಗತ್ತಾ? ಕೋರ್ಟ್ ಕೊಟ್ಟ ಸಲಹೆ ಏನು?

    ನಾಳೆ ಬಿಡುಗಡೆ ಆಗಲಿರುವ ಗಂಗೂಬಾಯಿ ಕಾಠಿಯಾವಾಡಿ ಟೈಟಲ್ ಬದಲಾಗತ್ತಾ? ಕೋರ್ಟ್ ಕೊಟ್ಟ ಸಲಹೆ ಏನು?

    ಮುಂಬೈ: ಬಾಲಿವುಡ್ ಬಹುನಿರೀಕ್ಷಿತ ಚಿತ್ರ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಬಿಡುಗಡೆಗೆ ಒಂದೇ ದಿನ ಬಾಕಿ. ಜಗತ್ತಿನಾದ್ಯಂತ ಸಿನಿಮಾ ಬಿಡುಗಡೆ ಮಾಡಲು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಬ್ಯುಸಿಯಾಗಿದ್ದರೆ, ಇತ್ತ ಕಡೆ ಸುಪ್ರೀಂ ಕೋರ್ಟ್ ಸಲಹೆಯೊಂದನ್ನು ನೀಡಿ ಇಕ್ಕಟ್ಟಿಗೆ ಸಿಲುಕಿಸಿದೆ. ಈ ಸಿನಿಮಾದ ಕುರಿತಾಗಿ ಸಾಕಷ್ಟು ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ಸಿನಿಮಾ ಹೆಸರನ್ನು ಬದಲಾಯಿಸಿಕೊಳ್ಳುವಂತೆ ಚಿತ್ರತಂಡಕ್ಕೆ ಸಲಹೆ ನೀಡಿದೆ.

    ಹೆಸರು ಬದಲಾಯಿಸುವುದರ ಜತೆಗೆ ಸಿನಿಮಾದ ಕಥೆಯೇ ಬಗ್ಗೆಯೇ ಆಕ್ಷೇಪ ವ್ಯಕ್ತ ಪಡಿಸಿ, ಗಂಗೂಬಾಯಿ ಅವರ ದತ್ತು ಪುತ್ರ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಅಲ್ಲದೇ, ಸಿನಿಮಾ ಬಿಡುಗಡೆಯನ್ನು ತಡೆಹಿಡಿಯಲು ಕೋರಿ ನ್ಯಾಯಾಲಯಗಳ ಮುಂದೆ ಹಲವಾರು ಅರ್ಜಿಗಳು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಸಲಹೆಯನ್ನು ನೀಡಿದೆ. ಬನ್ಸಾಲಿ ಪ್ರೊಡಕ್ಷನ್ಸ್‍ನ ವಕೀಲ ಸಿದ್ಧಾರ್ಥ ದವೆ ಅವರು ಸಲಹೆಯ ಬಗ್ಗೆ ತಮ್ಮ ಕಕ್ಷಿದಾರ ಜೊತೆ ಮಾತನಾಡಿ ಸೂಚನೆಗಳನ್ನು ಪಡೆಯುವುದಾಗಿ ಇಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು. ಈ ವಿಚಾರವಾಗಿ ನಾಳೆ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ಮುಂದುವರಿಯಲಿದೆ. ಇದನ್ನೂ ಓದಿ: ವಿವಾದ ಇಲ್ಲದೇ ಸಿನಿಮಾ ರಿಲೀಸ್ ಮಾಡಲ್ಲವಾ ಸಂಜಯ್ ಲೀಲಾ ಬನ್ಸಾಲಿ? : ಗಂಗೂಬಾಯಿ ಮೇಲೆ ಮತ್ತೊಂದು ಕೇಸ್

    ‘ಗಂಗೂಬಾಯಿ ಕಾಠಿಯಾವಾಡಿ’ ಮುಂಬೈನ ಕಾಮಾಠಿಪುರ ಲೈಂಗಿಕ ಕಾರ್ಯಕರ್ತೆಯಾಗಿ ನಂತರ ರಾಜಕೀಯ ಪ್ರವೇಶ ಮಾಡಿದ್ದರು. ಉತ್ತಮ ಜೀವನ ನಡೆಸುತ್ತಿದ್ದರು. ಈ ನಿಜವಾದ ಘಟನೆಯನ್ನು ತೆಗದುಕೊಂಡು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾವನ್ನು ಮಾಡಲಾಗಿದೆ. ಈ ಹಿನ್ನೆಲೆ ಗಂಗೂಬಾಯಿಯ ದತ್ತುಪುತ್ರ ಬಾಬು ರಾವ್ಜಿ ಶಾ ಸಹ ಸಿನಿಮಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ದೂರಿನಲ್ಲಿ ಅವರು, ನನ್ನ ತಾಯಿಯನ್ನು ಈ ಸಿನಿಮಾದಲ್ಲಿ ಮಾನಹಾನಿ ಮಾಡಲಾಗಿದೆ. ಅದಕ್ಕೆ ಈ ಸಿನಿಮಾವನ್ನು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿದ್ದರು.

    ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದ ವಿರುದ್ಧ ಇದೀಗ ಮಹಾರಾಷ್ಟ್ರದ ಶಾಸಕ ಅಮೀನ್ ಪಟೇಲ್ ಕೂಡ ಮತ್ತೊಂದು ದೂರು ಕೊಟ್ಟಿದ್ದಾರೆ. ಕಾಠಿಯಾವಾಡಿ ಎನ್ನುವುದು ಪ್ರದೇಶದ ಹೆಸರು. ಈ ಹೆಸರನ್ನು ಚಿತ್ರದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರು ದೂರಿನಲ್ಲಿ ದಾಖಲಿಸಿದ್ದಾರೆ. ಇದನ್ನೂ ಓದಿ: ‘ಡ್ಯಾಡಿಸ್ ಏಂಜೆಲ್’ – ಆಲಿಯಾ ವಿರುದ್ಧ ಸಿಡಿದೆದ್ದ ತಲೈವಿ

    ‘ಗಂಗೂಬಾಯಿ ಕಾಠಿಯಾವಾಡಿ’ ಕಥೆಯನ್ನು ಹುಸೇನ್ ಜೈದಿ ಅವರ ಪುಸ್ತಕ ‘ಮಾಫಿಯಾ ಕ್ವೀನ್ಸ್ ಆಫ್ ಮುಂಬೈ’ನಿಂದ ತೆಗೆದುಕೊಳ್ಳಲಾಗಿದೆ. ಅಲಿಯಾ ಭಟ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದಾರೆ.

  • ಯಾರೂ ನನ್ನನ್ನು ಕೈಹಿಡಿದಿಲ್ಲ: ರಣವೀರ್ ಸಿಂಗ್

    ಯಾರೂ ನನ್ನನ್ನು ಕೈಹಿಡಿದಿಲ್ಲ: ರಣವೀರ್ ಸಿಂಗ್

    ಮುಂಬೈ: ಯಾರೂ ನನ್ನನ್ನು ಕೈಹಿಡಿದಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದು ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಪೋಸ್ಟ್ ಮಾಡಿದ್ದಾರೆ.

    ಲೂಟೆರಾ, ಪದ್ಮಾವತ್, ಗಲ್ಲಿ ಬಾಯ್, ಬೆಲ್ಟ್ ಸಿನಿಮಾಗಳ ಮೂಲಕ ರಣವೀರ್ ಸಿಂಗ್ ಬಾಲಿವುಡ್ ನಲ್ಲಿ ಸ್ಟಾರ್ ನಟರಾಗಿದ್ದಾರೆ. ಈ ಸಿನಿಮಾಗಳ ನಂತರ ಅಭಿಮಾನಿಗಳನ್ನು ಇನ್ನೂ ರಂಜಿಸಲು ಸಿದ್ಧವಾಗುತ್ತಿರುವ ಈ ಗಲ್ಲಿಬಾಯ್ ಜಿಮ್‍ನಲ್ಲಿ ಬೆವರು ಸುರಿಸುತ್ತಿದ್ದಾರೆ. ರಣವೀರ್ ಸಿಂಗ್ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದ ಫೋಟೋವನ್ನು ಇನ್‍ಸ್ಟಾಗ್ರಾಮ್ ಗೆ ಹಾಕಿದ್ದು, ಯಾರೂ ನನ್ನನ್ನು ಕೈಹಿಡಿದಿಲ್ಲ, ಬ್ರಹ್ #grind #mondaymotivation ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಗೆ ನಟ ವರುಣ್ ಧವನ್ ‘ಹಾಟ್’ ಸಿಂಬಲ್ ಇರುವ ಎಮೋಜಿಯನ್ನು ಹಾಕಿ ಕಾಮೆಂಟ್ ಮಾಡಿದ್ದಾರೆ.  ಇದನ್ನೂ ಓದಿ:  ಪಕ್ಷಿಗಳಿಗೆ ಪುನರ್ಜನ್ಮ ನೀಡುತ್ತಿರುವ ರಾಯಚೂರಿನ ಪಕ್ಷಿಪ್ರೇಮಿ ಸಲ್ಲಾವುದ್ದೀನ್

     

    View this post on Instagram

     

    A post shared by Ranveer Singh (@ranveersingh)

    ಈ ದಿನಗಳಲ್ಲಿ ರಣವೀರ್ ಉತ್ತುಂಗದಲ್ಲಿದ್ದು, ಇತ್ತೀಚೆಗೆ ಭಾರತದ ನ್ಯಾಷನಲ್ ಬ್ಯಾಸ್ಕೆಟ್ಬಾಲ್ ಅಸೋಸಿಯೇಷನ್(ಎನ್‍ಬಿಎ)ಗೆ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಈ ಕುರಿತು ಎನ್‍ಬಿಎ ಅಧಿಕೃತವಾಗಿ ಫೋಷಣೆಯನ್ನು ಮಾಡಿದೆ. ಈ ಎಲ್ಲಾ ಯಶಸ್ಸು ಸುಲಭವಾಗಿ ಬರುವುದಿಲ್ಲ. ಅದಕ್ಕೆ ನನ್ನ ಪರಿಶ್ರಮ ಇರಬೇಕು ಎಂದು ಹೇಳುವ ರೀತಿ ಬರೆದು ಈ ಪೋಸ್ಟ್ ಮಾಡಿದ್ದಾರೆ.

    ಬ್ಯುಸಿಯಾಗಿರುವ ಈ ನಟ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ರಣವೀರ್ ನಟನೆಯ ’83’ ಚಿತ್ರ ಈ ವರ್ಷ ಕ್ರಿಸ್‍ಮಸ್‍ನಲ್ಲಿ ಬಿಡುಗಡೆಯಾಗಲಿದೆ. ತಮಿಳು ಬ್ಲಾಕ್‍ಬಸ್ಟರ್ ಹಿಟ್ ‘ಅನ್ನಿಯನ್ನ’ ಹಿಂದಿ ಸಿನಿಮಾಗೆ ರಿಮೇಕ್ ಆಗುತ್ತಿದ್ದು, ಆ ಚಿತ್ರದಲ್ಲಿ ರಣವೀರ್ ನಟಿಸುತ್ತಿದ್ದಾರೆ. ರಣವೀರ್, ಆಲಿಯಾ ಭಟ್ ಜೊತೆ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರಕ್ಕೆ ಸಂಜಯ್ ಲೀಲಾ ಬನ್ಸಾಲಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣ – ಐಷಾರಾಮಿ ಹಡಗಿನಲ್ಲಿ ತಗ್ಲಾಕ್ಕೊಂಡ ಬೆಂಗಳೂರಿಗರು..!

     

  • ಸುಶಾಂತ್ ಸೂಸೈಡ್ ಕೇಸ್- ವಿಚಾರಣೆಗೆ ಸಂಜಯ್ ಲೀಲಾ ಬನ್ಸಾಲಿ, ಕಂಗನಾ

    ಸುಶಾಂತ್ ಸೂಸೈಡ್ ಕೇಸ್- ವಿಚಾರಣೆಗೆ ಸಂಜಯ್ ಲೀಲಾ ಬನ್ಸಾಲಿ, ಕಂಗನಾ

    ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ನಟಿ ಕಂಗನಾ ರಣಾವತ್ ಅವರನ್ನು ವಿಚಾರಣೆಗೆ ಒಳಪಡಿಸಲು ಮುಂಬೈ ಪೊಲೀಸರು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

    ಸುಶಾಂತ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 27 ಜನರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸುಶಾಂತ್ ತಂದೆ ಕೆ.ಕೆ.ಸಿಂಗ್, ಬಾಲಿವುಡ್ ನಟಿ ರಿಯಾ ಚಕ್ರವರ್ತಿ, ಗೆಳೆಯ ಮಹೇಶ್ ಶೆಟ್ಟಿ ಅವರ ಹೇಳಿಕೆಯನ್ನ ಪಡೆದುಕೊಂಡಿದ್ದಾರೆ. ಇದೀಗ ಸಂಜಯ್ ಲೀಲಾ ಬನ್ಸಾಲಿ ಮತ್ತು ಕಂಗನಾ ರಣಾವತ್ ವಿಚಾರಣಗೆ ಹಾಜರಾಗುವಂತೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ.

    ಸಂಜಯ್ ಲೀಲಾ ಬನ್ಸಾಲಿ ಅವರ ಯಶಸ್ವಿ ಚಿತ್ರ ಬಾಜೀರಾವ್ ಮಸ್ತಾನಿಗೆ ಮೊದಲು ಸುಶಾಂತ್ ಆಯ್ಕೆಯಾಗಿದ್ದರಂತೆ. ಆದ್ರೆ ಡೇಟ್ ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಸುಶಾಂತ್ ಸಿನಿಮಾದಿಂದ ಹೊರ ಬಂದಿದ್ದರು ಎನ್ನಲಾಗಿದೆ. ಇದೇ ರೀತಿ ಸಂಜಯ್ ಲೀಲಾ ಬನ್ಸಾಲಿಯವರ ಒಟ್ಟು 4 ಸಿನಿಮಾಗಳು ಸುಶಾಂತ್ ಕೈ ತಪ್ಪಿದ್ದು ಎನ್ನಲಾಗಿದೆ. ಹೀಗಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ವರದಿಯಾಗಿದೆ.

    ಇನ್ನು ನಟಿ ಕಂಗನಾ ರಣಾವತ್ ಸೋಶಿಯಲ್ ಮೀಡಿಯಾದಲ್ಲಿ ಬಾಲಿವುಡ್ ನಲ್ಲಿರುವ ಸ್ವಜನಪಕ್ಷಪಾತದಿಂದಲೇ ಸುಶಾಂತ್ ಈ ನಿರ್ಧಾರ ತೆಗೆದುಕೊಳ್ಳುವಂತಾಗಿದೆ. ಇದು ಸೂಸೈಡ್ ಅಲ್ಲ ಕೊಲೆ ಎಂದು ಆರೋಪಿಸಿದ್ದರು. ವಿಡಿಯೋದಲ್ಲಿಯ ಹೇಳಿಕೆ ಕುರಿತು ಸ್ಪಷ್ಟನೆ ಪಡೆಯಲು ಕಂಗಾನರನ್ನು ವಿಚಾರಣಗೆ ಒಳಪಡಿಸಲಿದ್ದಾರೆ.

  • ಸುಶಾಂತ್ ಆತ್ಮಹತ್ಯೆ- ಎಂಟು ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲು

    ಸುಶಾಂತ್ ಆತ್ಮಹತ್ಯೆ- ಎಂಟು ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲು

    ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ.

    ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಜೊತೆಗೆ ಕೆಲ ಸಿನಿಮಾಗಳು ಬಿಡುಗಡೆ ಆಗಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ನಟ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ.

    ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ನಟ ಸಲ್ಮಾನ್ ಖಾನ್ ಸೇರಿದಂತೆ ಎಂಟು ಜನರ ವಿರುದ್ಧ ಐಪಿಸಿ ಸೆಕ್ಸನ್ 306, 109, 504 ಮತ್ತು 506 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

    ಭಾನುವಾರ ಬೆಳಗ್ಗೆ 9.30ಕ್ಕೆ ಜ್ಯೂಸ್ ಕುಡಿದು ತನ್ನ ಕೋಣೆ ಸೇರಿದ್ದ ಸುಶಾಂತ್ ಸಿಂಗ್ ರಜಪೂತ್, ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಮನೆಯಲ್ಲಿ ಅಡುಗೆ ಕೆಲಸದವ, ಮ್ಯಾನೇಜರ್ ಮತ್ತು ಓರ್ವ ಗೆಳೆಯನಿದ್ದ. ಸೋಮವಾರ ಸಂಜೆ ಸುಶಾಂತ್ ಅಂತ್ಯಕ್ರಿಯೆ ಮುಂಬೈನ ವಿಲೆ ಪಾರ್ಲೆಯ ಸೇವಾ ಸಮಾಜದಲ್ಲಿ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕುಟುಂಬ ಮತ್ತು ಆಪ್ತರಿಗೆ ಅಂತಿಮ ವಿಧಿ ವಿಧಾನಗಳಲ್ಲಿ ಅನುಮತಿ ನೀಡಲಾಗಿತ್ತು. ಮಾನಸಿಕ ಖಿನ್ನತೆಗೊಳಗಾಗಿದ್ದರಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಕೈ ಪೋ ಚೆ ಸಿನಿಮಾ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದ ಸುಶಾಂತ್‍ಗೆ ಧೋನಿ ಸಿನಿಮಾ ದೊಡ್ಡ ಬ್ರೇಕ್ ನೀಡಿತ್ತು. 10ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸುಶಾಂತ್ ಅವರನ್ನು ಬಾಲಿವುಡ್ ತಾರತಮ್ಯದಿಂದ ನೋಡಲಾಗುತ್ತಿತ್ತು ಎಂಬ ಸುದ್ದಿ ಹರಿದಾಡಿತ್ತು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್‍ನಲ್ಲಿ ತಾರತಮ್ಯದ ಜನರು ಪ್ರಶ್ನೆ ಎತ್ತುತ್ತಿದ್ದಾರೆ. ಸುಶಾಂತ್‍ನನ್ನು ಮಾನಸಿಕವಾಗು ಕುಗ್ಗಿಸಿ ಆತ ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದಿಸಲಾಯ್ತು. ಇದು ಸೂಸೈಡ್ ಅಲ್ಲ, ಪೂರ್ವ ನಿಯೋಜಿತ ಕೊಲೆ ಎಂದು ನಟ ಕಂಗನಾ ರಣಾವತ್ ಆರೋಪಿಸಿದ್ದರು.

  • ಮೋದಿ ಹುಟ್ಟುಹಬ್ಬಕ್ಕೆ ಸಿನಿಮಾ ಗಿಫ್ಟ್ ನೀಡಿದ ಬನ್ಸಾಲಿ

    ಮೋದಿ ಹುಟ್ಟುಹಬ್ಬಕ್ಕೆ ಸಿನಿಮಾ ಗಿಫ್ಟ್ ನೀಡಿದ ಬನ್ಸಾಲಿ

    -ತನ್ನನ್ನು ತಾನು ಹುಡುಕಿ ಹೊರಟ ವ್ಯಕ್ತಿಯ ಕಥೆ

    ಮುಂಬೈ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಾಲಿವುಡ್ ಸ್ಟಾರ್ ನಿರ್ದೇಶಕ, ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ‘ಮನ್ ಬೈರಾಗಿ’ ಸಿನಿಮಾವನ್ನು ಗಿಫ್ಟ್ ನೀಡಿದ್ದಾರೆ. ಇಂದು ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಚಿತ್ರ ಹೊಸ ಅಲೆಯ ಮುನ್ಸೂಚನೆ ನೀಡಿದೆ.

    ಬಾಲಿವುಡ್ ನಲ್ಲಿ ವಿಭಿನ್ನ ಸಿನಿಮಾಗಳ ಮೂಲಕವೇ ಗುರುತಿಸಿಕೊಂಡಿರುವ ಸಂಜಯ್ ಲೀಲಾ ಬನ್ಸಾಲಿ ‘ಮನ್ ಬೈರಾಗಿ’ ಸಿನಿಮಾ ಘೋಷಣೆ ಮಾಡಿದ್ದಾರೆ. ಮನ್ ಬೈರಾಗಿ ಚಿತ್ರದ ಶೀರ್ಷಿಕೆ ಜೊತೆ ‘ನನ್ನನ್ನು ನಾನು ಭೇಟಯಾದಾಗ’ ಸಬ್ ಟೈಟಲ್ ಹೊಂದಿದೆ. ಗುರಿ/ಸಾಧನೆಯ ಬೆನ್ನತ್ತಿದ್ದ ಯುವಕನೋರ್ವ ಒಂದು ಬ್ಯಾಗ್ ಹಾಕಿಕೊಂಡು ಮರಳುಗಾಡಿನ ರಸ್ತೆಯಲ್ಲಿ ಹೊರಟ್ಟಿದ್ದು, ಹಿಂದೆ ಬಸ್ ಬರೋದನ್ನು ಫಸ್ಟ್ ಲುಕ್ ನಲ್ಲಿ ನೋಡಬಹುದು.

    ಈ ವರ್ಷದ ಮೇನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧರಿತ ಸಿನಿಮಾ ತೆರೆಕಂಡಿತ್ತು. ಈ ಚಿತ್ರದಲ್ಲಿ ನಟ ವಿವೇಕ್ ಒಬೇರಾಯ್ ಪ್ರಧಾನಿಗಳ ಪಾತ್ರದಲ್ಲಿ ನಟಿಸಿದ್ದರು. ಆದ್ರೆ ಮನ್ ಬೈರಾಗಿ ಸಿನಿಮಾ ಮೋದಿಯವರ ಜೀವನ ತಿರುವು ಪಡೆದುಕೊಂಡು ಒಂದು ಘಟನೆಯ ಕಥೆಯನ್ನು ಹೊಂದಿದೆ. ಸಿನಿಮಾ ಸಹ ತಿರುವು ಪಡೆದ ಘಟನೆಯ ಸುತ್ತವೇ ನಡೆಯುತ್ತದೆ. ಸಿನಿಮಾಗಾಗಿ ಸಾಕಷ್ಟು ಸಂಶೋಧನೆ ಮತ್ತು ಅಧ್ಯಯನ ನಡೆಸಲಾಗಿದೆ. ಇದೂವರೆಗೂ ಯಾರು ಕೇಳದ ಮೋದಿಯವರ ಹೊಸ ಕಥೆ ಮನ್ ಬೈರಾಗಿ ಎಂದು ಸಂಜಯ್ ಲೀಲಾ ಬನ್ಸಾಲಿ ಹೇಳುತ್ತಾರೆ. ಇದನ್ನೂ ಓದಿ: ನಮೋ ಹುಟ್ಟುಹಬ್ಬಕ್ಕೆ ಹನುಮನಿಗೆ 1.25 ಕೆಜಿ ತೂಕದ ಚಿನ್ನದ ಕಿರೀಟ ನೀಡಿದ ಅಭಿಮಾನಿ

    ತನ್ನನ್ನು ತಾನು ಹುಡುಕಿ ಹೊರಟ ವ್ಯಕ್ತಿಯ ಬಗ್ಗೆ ಸಿನಿಮಾ ಮಾಡಲು ಸಂತಸವಾಗುತ್ತಿದೆ. ಅಂದು ತನ್ನನ್ನು ತಾನು ಹುಡುಕಿ ಹೊರಟ ವ್ಯಕ್ತಿ ಭಾರತದ ಪ್ರಧಾನಿಗಳಾಗಿದ್ದಾರೆ. ಮನ್ ಬೈರಾಗಿ ಸಿನಿಮಾ ಮೋದಿಯವರ ಜೀವನದ ಬಹುಮುಖ್ಯ ಬದಲಾವಣೆಯ ಕಥೆಯನ್ನು ಹೇಳುತ್ತದೆ. ಯುವಕರು ಈ ಕಥೆಯಿಂದ ಪ್ರೇರಣೆಗೊಳ್ಳಲಿದ್ದಾರೆ ಎಂದು ಸಿನಿಮಾದ ನಿರ್ಮಾಪಕ ಮಹಾವೀರ್ ಜೈನ್ ತಿಳಿಸಿದ್ದಾರೆ.

    https://www.instagram.com/p/B2gG9uWn-vJ/

    ಟಾಲಿವುಡ್ ನಟ ಪ್ರಭಾಸ್ ಮನ್ ಬೈರಾಗಿ ಫಸ್ಟ್ ಲುಕ್ ಶೇರ್ ಮಾಡಿಕೊಂಡು, ವಿಶೇಷ ವ್ಯಕ್ತಿಗಾಗಿ, ವಿಶೇಷ ನಿರ್ಮಾಪಕರಿಂದ ವಿಶೇಷ ಸಿನಿಮಾವನ್ನು ವಿಶೇಷ ದಿನದಂದು ಘೋಷಣೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

  • ದೀಪಿಕಾ ಪಡುಕೋಣೆ ಬಾಳಲ್ಲಿ ಹೊಸ ವ್ಯಕ್ತಿಯ ಪ್ರವೇಶ!

    ದೀಪಿಕಾ ಪಡುಕೋಣೆ ಬಾಳಲ್ಲಿ ಹೊಸ ವ್ಯಕ್ತಿಯ ಪ್ರವೇಶ!

    ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತ್ ಸಿನಿಮಾ ಬಿಡುಗಡೆಯಾಗಿದ್ದು, ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ಬಂದಿದೆ. ಹೀಗಿರುವಾಗ ದೀಪಿಕಾ ಬಾಳಲ್ಲಿ ಒಬ್ಬ ವ್ಯಕ್ತಿಯ ಪ್ರವೇಶವಾಗಿದೆ. ಅದು ಬೇರೆ ಯಾರೂ ಅಲ್ಲ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ.

    ಪದ್ಮಾವತ್ ಚಿತ್ರ ಬಿಡುಗಡೆಯಾಗುತ್ತಿದ್ದಂತೆ, ದೀಪಿಕಾ ಸಂಜಯ್ ಲೀಲಾ ಜೊತೆವಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ “ನನ್ನ ಜೀವನದ ಈಗೀನ ಹಾಗೂ ಮುಂದಿನ ಜೀವನದ್ದಕ್ಕೂ ಇವರು ನನ್ನ ಮುಖ್ಯ ವ್ಯಕ್ತಿ ಆಗಿರುತ್ತಾರೆ. ನಮ್ಮಿಬ್ಬರ ಕಡೆಯಿಂದ ನಾವು ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಹೇಳಲು ಇಷ್ಟಪಡುತ್ತೇನೆ. ನಿಮ್ಮನ್ನು ಚಿತ್ರಮಂದಿರಗಳಲ್ಲಿ ಭೇಟಿ ಮಾಡುತ್ತೇನೆ” ಎಂದು ಪದ್ಮಾವತ್ ಕ್ಯಾಪ್ಷನ್ ಹಾಕಿ ಪೋಸ್ಟ್ ಮಾಡಿದ್ದಾರೆ.

    ಒಂದು ನಟಿಯನ್ನು ತೆರೆಯ ಮೇಲೆ ಅದ್ಭುತವಾಗಿ ಕಾಣಿಸಿಕೊಳ್ಳುವಂತೆ ಮಾಡಿದ ನಿರ್ದೇಶಕನಿಗೆ ನನ್ನ ಕೃತಜ್ಞತೆಗಳು. ಬಾಜಿರಾವ್ ಮಸ್ತಾನಿನಂತಹ ಬ್ಲಾಕ್ ಬಸ್ಟರ್ ಚಿತ್ರದ ನಂತರ ಮತ್ತೆ ನನ್ನನ್ನು ರಾಣಿಯಾಗಿ ಪದ್ಮಾವತ್ ಚಿತ್ರದಲ್ಲಿ ಕಾಣಿಸಿಕೊಳ್ಳುವಂತೆ ಮಾಡಿದ್ದಾರೆ ಎಂದು ದೀಪಿಕಾ ತಿಳಿಸಿದ್ದಾರೆ.

    ಪದ್ಮಾವತಿ ಚಿತ್ರ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿ ಪದ್ಮಾವತ್ ಆಗಿ ಬದಲಾಗಿದ್ದು, ಯು/ಎ ಸರ್ಟಿಫಿಕೆಟ್ ದೊರೆತಿತ್ತು. ಈ ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ರಾಣಿ ಪದ್ಮಾವತ್ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಚಿತ್ರದಲ್ಲಿ ಇಬ್ಬರು ನಾಯಕರಿದ್ದು, ಶಾಹಿದ್ ಕಪೂರ್ ರಾಣಾ ರತನ್ ಸಿಂಗ್ ಆಗಿ ಕಾಣಿಸಿಕೊಂಡಿದ್ದಾರೆ. ಮತ್ತೊಬ್ಬ ನಟ ರಣ್‍ವೀರ್ ಸಿಂಗ್ ಅಲ್ಲಾವುದ್ದೀನ್ ಖಿಲ್ಜಿ ಆಗಿ ಬಣ್ಣ ಹಚ್ಚಿದ್ದಾರೆ.

  • ಪದ್ಮಾವತ್‍ಗೆ ವಿರೋಧ – ಜನವರಿ 25 ರಂದು ಭಾರತ ಬಂದ್‍ಗೆ ಕರೆ ನೀಡಿದ ಕರ್ಣಿಸೇನಾ

    ಪದ್ಮಾವತ್‍ಗೆ ವಿರೋಧ – ಜನವರಿ 25 ರಂದು ಭಾರತ ಬಂದ್‍ಗೆ ಕರೆ ನೀಡಿದ ಕರ್ಣಿಸೇನಾ

    ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹು ವಿವಾದಿತ ‘ಪದ್ಮಾವತ್’ ಚಿತ್ರ ಜನವರಿ 25 ರಂದು ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾ ಬಿಡುಗಡೆಗೆ ರಜಪೂತ ಕರ್ಣಿಸೇನಾ ವಿರೋಧ ವ್ಯಕ್ತಪಡಿಸಿ ಪದ್ಮಾವತ್ ಬಿಡುಗಡೆ ದಿನದಂದು ಭಾರತ್ ಬಂದ್ ಗೆ ಕರೆ ನೀಡಿದೆ.

    ಪ್ರಸ್ತುತ ಸಿನಿಮಾ ಬಿಡುಗಡೆಗೆ ನಿರ್ಧರಿಸಿದ್ದ ಜನವರಿ 25 ರಂದು ದೇಶವ್ಯಾಪ್ತಿ ಬಂದ್ ಗೆ ಕರೆ ನೀಡಲು ಕರ್ಣಿ ಸೇನಾ ನಿರ್ಧರಿಸದೆ. ಬಂದ್ ಯಶಸ್ವಿ ಮಾಡುವುದಾಗಿ ಕರ್ಣಿಸೇನಾ ಮುಖ್ಯಸ್ಥ ಲೋಕೇಂದ್ರ ಸಿಂಗ್ ಕಲ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ರಾಜಪೂತ ರಾಣಿ ಪದ್ಮಾವತಿ ಹಾಗೂ ಅಲ್ಲಾವುದ್ದೀನ್ ಖಿಲ್ಜಿ ನಡುವಿನ ಪ್ರೇಮ ಪ್ರಸಂಗವಿದ್ದು, ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿ ಚಿತ್ರದ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿವೆ.

    ಚಿತ್ರದ ನಿಷೇಧ ಕುರಿತು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದ್ದು, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯ ಸರ್ಕಾರಗಳ ನಿಷೇಧಕ್ಕೆ ತಡೆ ನೀಡಿತ್ತು. ಅಲ್ಲದೇ ಚಿತ್ರದ ಬಿಡುಗಡೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ತಿಳಿಸಿತ್ತು. ಕೋರ್ಟ್ ಆದೇಶ ನಂತರವೂ ಕರ್ಣಿಸೇನಾ ಮಾತ್ರ ಚಿತ್ರ ಬಿಡುಗಡೆಯಾದರೆ ಹಿಂಸಾತ್ಮಕ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

    ಚಿತ್ರವನ್ನು ಪ್ರದರ್ಶಿಸುವ ಚಿತ್ರ ಮಂದಿರ ಮಾಲೀಕರಿಗೂ ಸಿನಿಮಾವನ್ನು ಬಿಡುಗಡೆ ಮಾಡದಂತೆ ಕರ್ಣಿಸೇನಾ ಎಚ್ಚರಿಕೆ ನೀಡಿದೆ. ಇದರಿಂದ ಚಿತ್ರಮಂದಿರ ಮಾಲೀಕರು ಸಿನಿಮಾ ಬಿಡುಗಡೆ ಮಾಡಲು ಹೆದರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಎಎನ್‍ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಗುಜರಾತ್ ಚಿತ್ರಮಂದಿರ ಮಾಲೀಕ ಸಂಘದ ಅಧ್ಯಕ್ಷ ರಾಕೇಶ್ ಪಟೇಲ್, ಸಿನಿಮಾ ಬಿಡುಗಡೆ ಮಾಡದಿರಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ ಯಾವುದೇ ಮಾಲ್ಟಿಪ್ಲೆಕ್ಸ್ ಮಾಲೀಕರು ಚಿತ್ರದ ಪ್ರದರ್ಶನದ ವೇಳೆ ಉಂಟಾಗಬಹುದಾದ ನಷ್ಟವನ್ನು ಬರಿಸಲು ಸಿದ್ಧರಿಲ್ಲ ಎಂದು ತಿಳಿಸಿದ್ದಾರೆ.

    ಚಿತ್ರ ನಿರ್ದೇಶಕರು ಸಿನಿಮಾವನ್ನು ವಿರೋಧಿಸುತ್ತಿರುವ ಸಂಘಟನೆಗಳ ಆರೋಪಗಳನ್ನು ತಿರಸ್ಕರಿಸಿದ್ದು, ಚಿತ್ರದಲ್ಲಿ ಅಂತಹ ಯಾವುದೇ ದೃಶ್ಯಗಳು ಇಲ್ಲ ಎಂದು ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ಚಿತ್ರದಲ್ಲಿ ನಟಿಸಿರುವ ಹಲವು ನಟರಿಗೆ ಜೀವ ಬೆದರಿಕೆಗಳ ಬಂದಿರುವ ಪರಿಣಾಮ ಚಿತ್ರದ ಪ್ರಚಾರ ಕಾರ್ಯದಿಂದ ಎಲ್ಲಾ ನಟರು ದೂರವಿದ್ದಾರೆ.

    ಚಿತ್ರೀಕರಣ ಆರಂಭವಾದ ಸಮಯದಿಂದಲೂ ಸಾಕಷ್ಟು ವಿವಾದಗಳಿಗೆ `ಪದ್ಮಾವತ್’ ಚಿತ್ರ ಕಾರಣವಾಗಿತ್ತು. ಹಲವು ಬಾರಿ ಕತ್ತರಿ ಪ್ರಯೋಗಿಸಿ ಬಳಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ನಿದೇರ್ಶಕ ಸಂಜಯ್ ಲೀಲಾ ಭನ್ಸಾಲಿ ಚಿತ್ರವನ್ನು ಜನವರಿ 25 ರಂದು ಬಿಡುಗಡೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.