Tag: Sanjay Leela Bhansali

  • “ಪ್ರತಿಕೃತಿಯನ್ನು ದಹಿಸೋದು ಮಾತ್ರವಲ್ಲ, ನೇಣು ಹಾಕ್ತೀವಿ” ಎಂಬ ಬರಹದ ಪಕ್ಕ ವ್ಯಕ್ತಿಯ ಶವ ಪತ್ತೆ

    “ಪ್ರತಿಕೃತಿಯನ್ನು ದಹಿಸೋದು ಮಾತ್ರವಲ್ಲ, ನೇಣು ಹಾಕ್ತೀವಿ” ಎಂಬ ಬರಹದ ಪಕ್ಕ ವ್ಯಕ್ತಿಯ ಶವ ಪತ್ತೆ

    ಜೈಪುರ: ಬಾಲಿವುಡ್‍ನ ಪದ್ಮಾವತಿ ಚಿತ್ರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ಯಾ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ನಡೆದಿದೆ.

    ಜೈಪುರದ ನಹಾರ್ ಘರ್ ಕೋಟೆಯ ಬಳಿ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಬಳಿ ಇರುವ ಕಲ್ಲುಗಳ ಮೇಲೆ ನಾವು ಪ್ರತಿಕೃತಿಯನ್ನು ದಹಿಸುವುದು ಮಾತ್ರವಲ್ಲ, ನೇಣು ಹಾಕ್ತೀವಿ” ಎಂದು ಬರೆಯಲಾಗಿದೆ. ಮತ್ತೊಂದು ಕಲ್ಲಿನ ಮೇಲೆ “ಪದ್ಮಾವತಿಗೆ ವಿರೋಧ” ಎಂದು ಬರೆದಿರುವುದು ಪತ್ತೆಯಾಗಿದೆ.

    ವರದಿಯ ಪ್ರಕಾರ ಮೃತ ವ್ಯಕ್ತಿಯನ್ನು 40 ವರ್ಷದ ಚೇತನ್ ಕುಮಾರ್ ಸೈನಿ ಎಂದು ಗುರುತಿಸಲಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಸದ್ಯಕ್ಕೆ ಸ್ಪಷ್ಟವಾಗಿಲ್ಲ. ರಾಜಸ್ಥಾನ ಪೊಲೀಸರು ಇದನ್ನ ಕೊಲೆ ಎಂದು ಪರಿಗಣಿಸಿದ್ದಾರಾದ್ರೂ, ಪದ್ಮಾವತಿ ಚಿತ್ರಕ್ಕೂ ಇದಕ್ಕೂ ಸಂಬಂಧವಿದ್ಯಾ ಎಂಬ ಬಗ್ಗೆ ಹೇಳಿಲ್ಲ.

    ಪದ್ಮಾವತಿ ಚಿತ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರೋ ಶ್ರೀ ರಜಪೂತ್ ಕಾರ್ಣಿ ಸೇನಾ, ಈ ಘಟನೆಯಲ್ಲಿ ನಾವು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಇದೇ ತಿಂಗಳ ಆರಂಭದಲ್ಲಿ ಕರ್ಣಿ ಸೇನಾ ಕಾರ್ಯಕರ್ತರು ರಾಜಸ್ಥಾನದ ಕೋಟಾದಲ್ಲಿ ಪದ್ಮಾವತಿ ಚಿತ್ರದ ಟ್ರೇಲರ್ ಪ್ರದರ್ಶಿಸುತ್ತಿದೆ ಎಂಬ ವರದಿಯ ಮೇಲೆ ಚಿತ್ರಮಂದಿರವನ್ನ ಧ್ವಂಸಗೊಳಿಸಿದ್ದರು.

    ಇಂದು ಕೂಡ ದೆಹಲಿಯ ಆಜಾದ್‍ಪುರ್ ಮೆಟ್ರೋ ನಿಲ್ದಾಣದ ಬಳಿ ಜನರ ಗುಂಪು ಚಿತ್ರದ ವಿರುದ್ಧ ಪ್ರತಿಭಟನೆ ನಡೆಸಿದೆ. ರಾಷ್ಟ್ರೀಯ ಚೇತನ ಮಂಚ್ ಎಂಬ ಸಂಘಟನೆಯವರು ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿಯ ಪ್ರತಿಕೃತಿ ದಹಿಸಿದ್ದಾರೆ.

    ಡಿಸೆಂಬರ್ 1ಕ್ಕೆ ಪದ್ಮಾವತಿ ಚಿತ್ರ ಬಿಡುಗಡೆಯಾಗಬೇಕಿತ್ತು. ಆದ್ರೆ ಸದ್ಯ ಬಿಡುಗಡೆ ದಿನಾಂಕವನ್ನ ಮುಂದೂಡಲಾಗಿದೆ.

    ಏನಿದು ವಿವಾದ?: ಪದ್ಮಾವತಿ ಸಿನಿಮಾ ಸೆಟ್ಟೇರಿದಾಗಿನಿಂದಲೂ ವಿವಾದವು ಹುಟ್ಟಿಕೊಂಡಿದೆ. ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮಾತ್ರ ಪದ್ಮಾವತಿ ನಡುವೆ ರೊಮ್ಯಾಂಟಿಕ್ ಸೀನ್ ಗಳಿವೆ. ಇನ್ನೂ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ರಾಣಿ ಪದ್ಮಾವತಿ ಕುರಿತಾಗಿ ಸಿನಿಮಾ ಮಾಡಲಿದ್ದೇನೆಂದು ಬನ್ಸಾಲಿ ಹೇಳಿಕೊಂಡಾಗ ಹಲವು ಟೀಕೆಗಳು ವ್ಯಕ್ತವಾಗಿದ್ದವು. ಆರಂಭದಲ್ಲಿ ಚಿತ್ರೀಕರಣದ ವೇಳೆ ರಜಪೂತ್ ಕರ್ಣಿ ಸೇನಾದ ಸದಸ್ಯನೋರ್ವ ಬನ್ಸಾಲಿ ಅವರ ಕಪಾಳಕ್ಕೆ ಹೊಡೆದಿದ್ದನು. ಇನ್ನೂ ಮಹಾರಾಷ್ಟ್ರದ ಕೋಲಾಪುರದಲ್ಲಿ ಚಿತ್ರೀಕರಣದ ಸೆಟ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ವೇಳೆ ಯಾರಿಗೂ ಯಾವುದೇ ಅಪಾಯವಾಗಿರಲಿಲ್ಲ.

    ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಯಾವುದೇ ರೊಮ್ಯಾಂಟಿಕ್ ಸೀನ್ ಗಳಿಲ್ಲ ಎಂದು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾದಲ್ಲಿ ಪದ್ಮಾವತಿಯಾಗಿ ದೀಪಿಕಾ ಪಡುಕೋಣೆ. ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ರಣ್‍ವೀರ್ ಸಿಂಗ್ ಮತ್ತು ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್ ನಟಿಸಿದ್ದಾರೆ.

  • ವಿವಾದಗಳ ನಡುವೆ ಪದ್ಮಾವತಿ ರಿಲೀಸ್ ದಿನಾಂಕ ಬದಲಾಯ್ತು-ಸೆನ್ಸಾರ್ ಮಂಡಳಿಯಲ್ಲಿ ಅರ್ಜಿ ರಿಜೆಕ್ಟ್

    ವಿವಾದಗಳ ನಡುವೆ ಪದ್ಮಾವತಿ ರಿಲೀಸ್ ದಿನಾಂಕ ಬದಲಾಯ್ತು-ಸೆನ್ಸಾರ್ ಮಂಡಳಿಯಲ್ಲಿ ಅರ್ಜಿ ರಿಜೆಕ್ಟ್

    ಮುಂಬೈ: ವಿವಾದಗಳಿಂದ ಸುದ್ದಿಯಾಗಿದ್ದ ಬಾಲಿವುಡ್‍ನ ಪದ್ಮಾವತಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸೆನ್ಸಾರ್ ಬೋರ್ಡ್ ನಲ್ಲಿ ಪದ್ಮಾವತಿ ಸಿನಿಮಾದ ಅರ್ಜಿ ತಿರಸ್ಕೃತವಾಗಿದ್ದು, ಚಿತ್ರತಂಡ ಅನಿವಾರ್ಯ ಕಾರಣಗಳಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಆದರೆ ಯಾವ ದಿನದಂದು ಸಿನಿಮಾ ತೆರೆಕಾಣಲಿದೆ ಎಂಬುದನ್ನು ಚಿತ್ರತಂಡ ಸ್ಪಷ್ಟಪಡಿಸಿಲ್ಲ.

    ಕಳೆದ ಮೂರು ದಿನಗಳಿಂದ ಸಿನಿಮಾದ ರಿಲೀಸ್ ದಿನವನ್ನು ಮುಂದೂಡಲಾಗಿದೆ ಎಂದು ಹೇಳಲಾಗಿತ್ತಿತ್ತು. ಆದರೆ ಅಧಿಕೃತವಾಗಿ ದೃಢಪಟ್ಟಿರಲಿಲ್ಲ. ಇಂದು ಬಾಲಿವುಡ್ ಸಿನಿ ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ.

    ಸೆನ್ಸಾರ್ ಬೋರ್ಡ್ ಹೇಳಿದ್ದೇನು?:
    ಸೆನ್ಸಾರ್ ಬೋರ್ಡ್ ಸಿನಿಮಾಗೆ ಅನುಮತಿ ಕೋರಿ ಚಿತ್ರತಂಡ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಚಿತ್ರತಂಡ ಅವಶ್ಯಕ ಮಾಹಿತಿಯನ್ನು ಅರ್ಜಿಯಲ್ಲಿ ದಾಖಲಿಸದೇ ಅಪೂರ್ಣವಾದ ಮಾಹಿತಿಯನ್ನು ಸಲ್ಲಿಸಿದೆ. ಇನ್ನೂ ಸಿನಿಮಾ ರಜಪೂತ ನಾಡಿದ ಧೀರ ಮಹಿಳೆ ರಾಣಿ ಪದ್ಮಾವತಿ ಐತಿಹಾಸಿಕ ಕಥೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಬಳಸಲಾಗಿರುವ ದೃಶ್ಯಗಳಿಗೆ ಸೂಕ್ತ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ಸೆನ್ಸಾರ್ ಬೋರ್ಡ್ (ಸಿಬಿಎಫ್‍ಸಿ) ತಿಳಿಸಿ ಅರ್ಜಿಯನ್ನು ತಿರಸ್ಕರಿಸಿದೆ.

    ಪದ್ಮಾವತಿ ಸಿನಿಮಾ ನಿರ್ಮಾಣ ಸಂಸ್ಥೆ ವೈಕಾಮ್ 18ಮೋಷನ್ ದಿನಾಂಕ ಮೂಂದೂಡಿರುವ ಬಗ್ಗೆ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಹಾಗಾದರೆ ನಿರ್ಮಾಣ ಸಂಸ್ಥೆ ಮಾಧ್ಯಮಗಳಿಗೆ ತಿಳಿಸಿದ್ದು ಹೀಗೆ

    “ಪದ್ಮಾವತಿ ಸಿನಿಮಾವನ್ನು ಡಿಸೆಂಬರ್ 1ರಂದು ತೆರೆಕಾಣಲು ಸಕಲ ತಯಾರಿಗಳನ್ನು ಮಾಡಿಕೊಂಡಿತ್ತು. ರಜಪೂತ ಸಂಸ್ಥಾನದ ಶೌರ್ಯ, ಘನತೆ ಮತ್ತು ಸಂಪ್ರದಾಯಿಕ ಎಲ್ಲ ವೈಭವವನ್ನು ಚಿತ್ರಕಥೆಯನ್ನು ಸಿನಿಮಾ ಒಳಗೊಂಡಿದೆ. ಚಿತ್ರಕಥೆ ನೋಡುಗರಿಗೆ ಹೆಮ್ಮೆಯನ್ನುಂಟು ಮಾಡಲಿದ್ದು, ಭಾರತೀಯರ ಸಾಹಸ ಪರಾಕ್ರಮವನ್ನು ಚಿತ್ರ ಒಳಗೊಂಡಿದೆ. ನಾವು ದೇಶದ ನಾಗರಿಕರಾಗಿದ್ದು, ದೇಶದ ಶಾಸನಬದ್ಧ ಕಾನೂನುಗಳನ್ನು ಪಾಲನೆ ಮಾಡುವುದರ ಜೊತೆಗೆ ಗೌರವ ನೀಡಬೇಕು. ಸೆನ್ಸಾರ್ ಬೋರ್ಡ್ ಸಿನಿಮಾಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಒದಗಿಸುವಂತೆ ತಿಳಿಸಿದೆ. ಹಾಗಾಗಿ ಬೋರ್ಡ್ ಕೇಳಿರುವ ದಾಖಲಾತಿಗಳನ್ನು ಒದಗಿಸಲು ಕಾಲಾವಕಾಶ ಬೇಕಾಗುತ್ತದೆ. ಹಾಗಾಗಿ ಸಿನಿಮಾ ತೆರೆಕಾಣುವ ದಿನಾಂಕವನ್ನು ಮುಂದೂಡಲಾಗಿದೆ. ಆದಷ್ಟು ಬೇಗ ಸಿನಿಮಾ ರಿಲೀಸ್ ದಿನಾಂಕವನ್ನು ಅಭಿಮಾನಿಗಳಿಗೆ ತಿಳಿಸಲಾಗುತ್ತದೆ. ನಮ್ಮ ಬ್ಯಾನರ್ ಅಡಿಯಲ್ಲಿ `ಟಾಯ್ಲೆಟ್ ಏಕ್ ಪ್ರೇಮ್ ಕಥಾ’, ಭಾಗ್ ಮಿಲ್ಕಾ ಭಾಗ್, ಕ್ವೀನ್ ಸೇರಿದಂತೆ ಯಶಸ್ವಿ ಸಿನಿಮಾಗಳು ತೆರೆಕಂಡಿವೆ.” ಎಂದು ತಿಳಿಸಿದೆ.


    ಏನಿದು ವಿವಾದ?: ಪದ್ಮಾವತಿ ಸಿನಿಮಾ ಸೆಟ್ಟೇರಿದಾಗಿನಿಂದಲೂ ವಿವಾದವು ಹುಟ್ಟಿಕೊಂಡಿದೆ. ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮಾತ್ರ ಪದ್ಮಾವತಿ ನಡುವೆ ರೊಮ್ಯಾಂಟಿಕ್ ಸೀನ್ ಗಳಿವೆ. ಇನ್ನೂ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ರಾಣಿ ಪದ್ಮಾವತಿ ಕುರಿತಾಗಿ ಸಿನಿಮಾ ಮಾಡಲಿದ್ದೇನೆಂದು ಬನ್ಸಾಲಿ ಹೇಳಿಕೊಂಡಾಗ ಹಲವು ಟೀಕೆಗಳು ವ್ಯಕ್ತವಾಗಿದ್ದವು. ಆರಂಭದಲ್ಲಿ ಚಿತ್ರೀಕರಣದ ವೇಳೆ ರಜಪೂತ್ ಕರ್ಣಿ ಸೇನಾದ ಸದಸ್ಯನೋರ್ವ ಬನ್ಸಾಲಿ ಅವರ ಕಪಾಳಕ್ಕೆ ಹೊಡೆದಿದ್ದನು. ಇನ್ನೂ ಮಹಾರಾಷ್ಟ್ರದ ಕೋಲಾಪುರದಲ್ಲಿ ಚಿತ್ರೀಕರಣದ ಸೆಟ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ವೇಳೆ ಯಾರಿಗೂ ಯಾವುದೇ ಅಪಾಯವಾಗಿರಲಿಲ್ಲ.

    ಬಿಜೆಪಿ, ಕಾಂಗ್ರೆಸ್ಸಿನಿಂದ ವಿರೋಧ: ಪದ್ಮಾವತಿ ಸಿನಿಮಾವನ್ನು ಗುಜರಾತಿನಲ್ಲಿ ಚುನಾವಣೆ ಬಳಿಕ ರಿಲೀಸ್ ಮಾಡಬೇಕು ಇಲ್ಲವೇ ಸಿನಿಮಾವನ್ನು ರಾಜ್ಯದಲ್ಲಿ ಬ್ಯಾನ್ ಮಾಡೋದು ಒಳ್ಳೆಯದು. ಸದ್ಯ ರಾಜ್ಯದಲ್ಲಿ ಚುನಾವಣೆಯ ಕಾವು ಹೆಚ್ಚಾಗಿರುವುದರಿಂದ ಸಿನಿಮಾದಿಂದಾಗಿ ಗಲಾಟೆಗಳು ಉಂಟಾಗಬಹುದು. ಒಂದು ವೇಳೆ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದ್ದರೆ ರಜಪೂತ ಮತ್ತು ಕ್ಷತ್ರೀಯ ಸಮುದಾಯದ ಜನತೆಯ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಂದು ಬಿಜೆಪಿ ವಕ್ತಾರ ಜಡೇಜಾ ತಿಳಿಸಿದ್ದಾರೆ. ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ. ಹೀಗಾಗಿ ಜನರ ಭಾವನೆಗೆ ಧಕ್ಕೆ ಬಂದಿರುವ ವಿಚಾರವನ್ನು ತೆಗೆದು ಹಾಕಬೇಕೆಂದು ರಾಜಸ್ಥಾನದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

    ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯ ಸರ್ಕಾರಗಳು ಈಗಾಗಲೇ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವೆ ಸ್ಮೃತಿ ಇರಾನಿ ಅವರಿಗೆ ಸಿನಿಮಾ ಬಿಡುಗಡೆ ಕುರಿತು ಸ್ಪಷ್ಟಣೆ ಕೇಳಿ ಪತ್ರವನ್ನು ಬರೆದಿವೆ. ಸಿನಿಮಾ ಬಿಡುಗಡೆ ಆಗುವುದರಿಂದ ಯಾವುದೇ ಸಮುದಾಯದ ಜನರಿಗೆ ನೋವುಂಟು ಆಗಬಾರದು. ಈ ಹಿನ್ನೆಲೆಯಲ್ಲಿ ಪದ್ಮಾವತಿ ಸಿನಿಮಾ ಒಳಗೊಂಡಿರುವ ಕಥಾ ಹಂದರವನ್ನು ಪರಿಶೀಲಿಸಲು ಹಿರಿಯ ಇತಹಾಸ ತಜ್ಞರು, ಸಿನಿಮಾ ನಿರ್ಮಾಪಕರು ಒಳಗೊಂಡಿರುವ ಸಮಿತಿ ರಚಿಸಲಾಗುತ್ತಿದೆ ಎಂದು ಮಾಧ್ಯಮಗಳು ಪ್ರಕಟಿಸಿವೆ.

    ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಯಾವುದೇ ರೊಮ್ಯಾಂಟಿಕ್ ಸೀನ್ ಗಳಿಲ್ಲ ಎಂದು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾದಲ್ಲಿ ಪದ್ಮಾವತಿಯಾಗಿ ದೀಪಿಕಾ ಪಡುಕೋಣೆ. ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ರಣ್‍ವೀರ್ ಸಿಂಗ್ ಮತ್ತು ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್ ನಟಿಸಿದ್ದಾರೆ.

     

     

    https://twitter.com/deepikapadukone/status/917215585942904832

    https://twitter.com/deepikapadukone/status/910668862336544768

    https://twitter.com/deepikapadukone/status/910673498376364033

  • ಪದ್ಮಾವತಿ ರಿಲೀಸ್ ಆಗುವ ಥಿಯೇಟರ್‍ಗೆ ಬೆಂಕಿ ಹಾಕ್ತೀವಿ: ಬಿಜೆಪಿ ಶಾಸಕ

    ಪದ್ಮಾವತಿ ರಿಲೀಸ್ ಆಗುವ ಥಿಯೇಟರ್‍ಗೆ ಬೆಂಕಿ ಹಾಕ್ತೀವಿ: ಬಿಜೆಪಿ ಶಾಸಕ

    ಹೈದರಾಬಾದ್: ಬಾಲಿವುಡ್ ನ `ಪದ್ಮಾವತಿ’ ಸಿನಿಮಾ ಯಾವ ಚಿತ್ರಮಂದಿರಗಳಲ್ಲಿ ತೆರೆಕಾಣುವುದೋ ಅಲ್ಲಿ ಬೆಂಕಿ ಹಚ್ಚುತ್ತೇವೆ ಎಂದು ಬಿಜೆಪಿ ಎಂಎಲ್‍ಎ ಟಿ.ರಾಜಾ ಸಿಂಗ್ ಸಿಕಂದರಾಬಾದ್ ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

    ಪ್ರತಿಯೊಬ್ಬ ರಜಪೂತ ವ್ಯಕ್ತಿ ಪದ್ಮಾವತಿ ಸಿನಿಮಾವನ್ನು ವಿರೋಧ ಮಾಡುತ್ತಿದ್ದಾರೆ. ಒಂದು ವೇಳೆ ಸಿನಿಮಾ ಬಿಡುಗಡೆಯಾದರೆ ಚಿತ್ರದಲ್ಲಿನ ಅಂಶಗಳಿಂದ ರಜಪೂತ ಭಾವನೆಗಳಿಗೆ ಧಕ್ಕೆಯುಂಟಾಗುತ್ತದೆ. ಈಗಾಗಲೇ ಗುಜರಾತಿನಲ್ಲಿ ಕ್ಷತ್ರೀಯ ಹಾಗು ರಜಪೂತ ಸಮುದಾಯದ ಮುಖಂಡರು ಚಿತ್ರ ಬಿಡುಗಡೆಗೂ ಮುನ್ನ ಖಾಸಗಿಯಾಗಿ ತೋರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಸಿನಿಮಾದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಈ ಬಗ್ಗೆ ಯಾವುದೇ ಪ್ರತಿಕ್ರಿಯನ್ನು ನೀಡಿಲ್ಲ. ಹಾಗಾಗಿ ತೆಲಂಗಾಣ ರಾಜ್ಯದಲ್ಲಿ ಸಿನಿಮಾ ಪ್ರದರ್ಶನಕ್ಕೆ ನಮ್ಮ ವಿರೋಧವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಚಿತ್ರದ ನಿರ್ದೇಶಕರು ರಜಪೂತ ಮಹಿಳೆಯರಿಗೆ ಅಗೌರವ ತೋರಿಸುವ ಮೂಲಕ ಹಣ ಸಂಪಾದನೆಯಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾದಲ್ಲಿ ಭಾರತೀಯ ಇತಿಹಾಸವನ್ನು ಸಂಪೂರ್ಣವಾಗಿ ತಿರುಚಲಾಗಿದ್ದು, ಇದರಿಂದಾಗಿ ಭಾರತೀಯ ಹಿಂದೂ ಸಂಸ್ಕೃತಿಗೆ ಧಕ್ಕೆ ತರಲಾಗುತ್ತಿದೆ. ಚಿತ್ರ ಬಿಡುಗಡೆಗೆ ಭಯವಿದ್ದ ಕಾರಣ ಬನ್ಸಾಲಿ ಈ ಮೊದಲೇ ತಮ್ಮ ಸಿನಿಮಾ ಮೇಲೆ ವಿಮೆ ಮಾಡಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: ಪದ್ಮಾವತಿ ರಂಗೋಲಿ ವಿವಾದ- 48 ಗಂಟೆ ಸಮಯದಲ್ಲಿ ಬಿಡಿಸಿದ್ದ ರಂಗೋಲಿಯನ್ನು ಅಳಿಸಿದ್ದ ಆರೋಪಿಗಳ ಅರೆಸ್ಟ್ 

    ಏನಿದು ವಿವಾದ?: ಪದ್ಮಾವತಿ ಸಿನಿಮಾ ಸೆಟ್ಟೇರಿದಾಗಿನಿಂದಲೂ ವಿವಾದವು ಹುಟ್ಟಿಕೊಂಡಿದೆ. ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮಾತ್ರ ಪದ್ಮಾವತಿ ನಡುವೆ ರೊಮ್ಯಾಂಟಿಕ್ ಸೀನ್ ಗಳಿವೆ. ಇನ್ನೂ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಸಿನಿಮಾದಲ್ಲಿ ಯಾವುದೇ ರೀತಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಸೀನ್ ಗಳಿಲ್ಲ ಎಂದು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸ್ಪಷ್ಟನೆ ನೀಡಿದ್ದಾರೆ.

    ಸಿನಿಮಾದಲ್ಲಿ ಪದ್ಮಾವತಿಯಾಗಿ ದೀಪಿಕಾ ಪಡುಕೋಣೆ ಎಲ್ಲರನ್ನು ಸೆಳೆಯಲಿದ್ದಾರೆ. ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ರಣ್‍ವೀರ್ ಸಿಂಗ್ ಮತ್ತು ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್ ನಟಿಸಿದ್ದಾರೆ. ಪದ್ಮಾವತಿ ಡಿಸೆಂಬರ್ 1ರಂದು ದೇಶಾದ್ಯಂತ ತೆರೆಕಾಣಲಿದೆ.

    ಇದನ್ನೂ ಓದಿ: ಪದ್ಮಾವತಿ ಸಿನಿಮಾ ಬ್ಯಾನ್ ಮಾಡೋದು ಸೂಕ್ತ ಎಂದ ಬಿಜೆಪಿ 

     

  • ದೀಪಿಕಾ ನೆಕ್ಸ್ಟ್ ಫಿಲ್ಮ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸಂಜಯ್ ಲೀಲಾ ಬನ್ಸಾಲಿ!

    ದೀಪಿಕಾ ನೆಕ್ಸ್ಟ್ ಫಿಲ್ಮ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸಂಜಯ್ ಲೀಲಾ ಬನ್ಸಾಲಿ!

    ಮುಂಬೈ: ಬಾಲಿವುಡ್ ಬಹು ನಿರೀಕ್ಷಿತ ‘ಪದ್ಮಾವತಿ’ ಚಿತ್ರ ಡಿಸೆಂಬರ್ 1 ರಂದು ದೇಶಾದ್ಯಂತ ಬಿಡುಗಡೆ ಆಗಲಿದೆ. ಈಗ ದೀಪಿಕಾ ತಮ್ಮ ಮುಂದಿನ ಚಿತ್ರವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲೇ ನಟಿಸಲಿದ್ದಾರೆ.

    ಹೌದು. ದೀಪಿಕಾ ತಮ್ಮ ಮುಂದಿನ ಚಿತ್ರವನ್ನು ಬನ್ಸಾಲಿ ಅವರ ನಿರ್ದೇಶನದಲ್ಲಿ ನಟಿಸುತ್ತಿದ್ದು, ಅಭಿಷೇಕ್ ಬಚ್ಚನ್ ಚಿತ್ರದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. “ದೀಪಿಕಾ ಮತ್ತು ಅಭಿಷೇಕ್ ಸಂಜಯ್ ಲೀಲಾ ಬನ್ಸಾಲಿ ಅವರ ಮುಂದಿನ ಚಿತ್ರವನ್ನು ಒಪ್ಪಿಕೊಂಡು ಸಹಿ ಮಾಡಿದ್ದಾರೆ. ಈ ಚಿತ್ರ ಕವಿ ಹಾಗೂ ಸಾಹಿತಿ ಸಾಹೀರ್ ಲೂದಿಯನ್ವಿ ಅವರ ಜೀವನಚರಿತ್ರೆಯ ಕಥೆ ಈ ಚಿತ್ರದ್ದು” ಎಂದು ಸಿನಿ ಮಾರುಕಟ್ಟೆ ವಿಶ್ಲೇಷಕ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ.

    ಸಾಹೀರ್ ಲೂದಿಯನ್ವಿ ಹಿರಿಯ ಕವಿ ಹಾಗೂ ಬಾಲಿವುಡ್ ಚಿತ್ರಗಳಿಗೆ ಹಾಡು ಬರೆಯುತ್ತಿದ್ದರು. ಇವರು ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ಹಿಂದಿ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಈ ಚಿತ್ರದಲ್ಲಿ ಮೊದಲು ಶಾರೂಖ್ ಖಾನ್ ಹಾಗೂ ಪ್ರಿಯಾಂಕಾ ಚೋಪ್ರಾ ನಟಿಸಬೇಕಿತ್ತು ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತಿತ್ತು. ಆದರೆ ಈಗ ಈ ಚಿತ್ರದಲ್ಲಿ ದೀಪಿಕಾ ಮತ್ತು ಅಭಿಷೇಕ್ ನಟಿಸುವುದು ಫೈನಲ್ ಆಗಿದೆ.

    ಈ ಚಿತ್ರದ ಬಗ್ಗೆ ಸಂಜಯ್ ಲೀಲಾ ಬನ್ಸಾಲಿ, ದೀಪಿಕಾ ಪಡುಕೋಣೆ, ಅಭಿಷೇಕ್ ಬಚ್ಚನ್ ಹಾಗೂ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಒಂದು ವೇಳೆ ದೀಪಿಕಾ ಈ ಸಿನಿಮಾದಲ್ಲಿ ನಟಿಸಿದರೆ ಬನ್ಸಾಲಿ ಅವರ ನಾಲ್ಕನೇಯ ಚಿತ್ರ ಇದಾಗಲಿದೆ.

  • ಪದ್ಮಾವತಿ ಸಿನಿಮಾ ಬ್ಯಾನ್ ಮಾಡೋದು ಸೂಕ್ತ ಎಂದ ಬಿಜೆಪಿ

    ಪದ್ಮಾವತಿ ಸಿನಿಮಾ ಬ್ಯಾನ್ ಮಾಡೋದು ಸೂಕ್ತ ಎಂದ ಬಿಜೆಪಿ

    ಗಾಂಧಿನಗರ: ಭಾರತೀಯ ಸಿನಿಮಾ ಲೋಕದ ಬಹು ನಿರೀಕ್ಷಿತ ಚಿತ್ರ ಎಂದು ಹೇಳಲಾಗುವ `ಪದ್ಮಾವತಿ’ಯ ವಿವಾದ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇತ್ತೀಚೆಗೆ ಕಾಂಗ್ರೆಸ್ ತೊರೆದಿದ್ದ ಗುಜರಾತಿನ ಹಿರಿಯ ನಾಯಕ ಶಂಕರ್ ಸಿನ್ಹ ವಾಘೇಲಾ ಸಿನಿಮಾದ ವಿರುದ್ಧ ಹರಿಹಾಯ್ದಿದ್ದರು. ಆದರೆ ಇದೀಗ ಸ್ಥಳೀಯ ಬಿಜೆಪಿ ಸಿನಿಮಾವನ್ನು ಚುನಾವಣೆ ಬಳಿಕ ರಿಲೀಸ್ ಮಾಡಬೇಕು ಅಥವಾ ಬ್ಯಾನ್ ಮಾಡವುದು ಸೂಕ್ತ ಎಂದು ತಿಳಿಸಿದೆ.

    ಬಿಡುಗಡೆಗೂ ಮುನ್ನ ನಮಗೆ ನಮಗೆ ಪ್ರತ್ಯೇಕವಾಗಿ ಸಿನಿಮಾ ತೋರಿಸಬೇಕು. ಇದರಿಂದ ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಯಾವುದೇ ದೃಶ್ಯಗಳಿಲ್ಲ ಎಂಬುವುದು ಖಚಿತವಾಗುತ್ತದೆ. ಇದರಿಂದ ವಿಧಾನಸಭೆ ಕ್ಷೇತ್ರದ ಚುನಾವಣೆ ಸಮಯದಲ್ಲಿ ರಾಜ್ಯದಲ್ಲಿ ಶಾಂತಿ ನೆಲಸುವಂತೆ ಆಗುತ್ತದೆ ಎಂದು ಸ್ಥಳೀಯ ರಜಪೂತ ನಾಯಕರು ಚುನಾವಣಾ ಆಯೋಗ ಮತ್ತು ಗುಜರಾತ ಚುನಾವಣಾ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ.

    ಪದ್ಮಾವತಿ ಸಿನಿಮಾವನ್ನು ಗುಜರಾತಿನಲ್ಲಿ ಚುನಾವಣೆ ಬಳಿಕ ರಿಲೀಸ್ ಮಾಡಬೇಕು ಇಲ್ಲವೇ ಸಿನಿಮಾವನ್ನು ರಾಜ್ಯದಲ್ಲಿ ಬ್ಯಾನ್ ಮಾಡೋದು ಒಳ್ಳೆಯದು. ರಜಪೂತ ಮತ್ತು ಕ್ಷತ್ರೀಯ ಸಮುದಾಯದ ಮುಖಂಡರು ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಚುನಾವಣೆಯ ಕಾವು ಹೆಚ್ಚಾಗಿರುವುದರಿಂದ ಸಿನಿಮಾದಿಂದಾಗಿ ಗಲಾಟೆಗಳು ಉಂಟಾಗಬಹುದು. ಒಂದು ವೇಳೆ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದ್ದರೆ ರಜಪೂತ ಮತ್ತು ಕ್ಷತ್ರೀಯ ಸಮುದಾಯದ ಜನತೆಯ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಂದು ಬಿಜೆಪಿ ವಕ್ತಾರ ಜಡೇಜಾ ತಿಳಿಸಿದ್ದಾರೆ.

    ಇದನ್ನೂ ಓದಿ: ಪದ್ಮಾವತಿ ರಂಗೋಲಿ ವಿವಾದ- 48 ಗಂಟೆ ಸಮಯದಲ್ಲಿ ಬಿಡಿಸಿದ್ದ ರಂಗೋಲಿಯನ್ನು ಅಳಿಸಿದ್ದ ಆರೋಪಿಗಳ ಅರೆಸ್ಟ್

    ರಾಣಿ ಪದ್ಮಾವತಿ ಕುರಿತಾಗಿ ಸಿನಿಮಾ ಮಾಡಲಿದ್ದೇನೆಂದು ಬನ್ಸಾಲಿ ಹೇಳಿಕೊಂಡಾಗ ಹಲವು ಟೀಕೆಗಳು ವ್ಯಕ್ತವಾಗಿದ್ದವು. ಆರಂಭದಲ್ಲಿ ಚಿತ್ರೀಕರಣದ ವೇಳೆ ರಜಪೂತ್ ಕರ್ಣಿ ಸೇನಾದ ಸದಸ್ಯನೋರ್ವ ಬನ್ಸಾಲಿ ಅವರ ಕಪಾಳಕ್ಕೆ ಹೊಡೆದಿದ್ದನು. ಇನ್ನೂ ಮಹಾರಾಷ್ಟ್ರದ ಕೋಲಾಪುರದಲ್ಲಿ ಚಿತ್ರೀಕರಣದ ಸೆಟ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ವೇಳೆ ಯಾರಿಗೂ ಯಾವುದೇ ಅಪಾಯವಾಗಿರಲಿಲ್ಲ.

    ಸಿನಿಮಾದಲ್ಲಿ ಯವುದೇ ರೀತಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಸೀನ್ ಗಳಿಲ್ಲ ಎಂದು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸ್ಪಷ್ಟಣೆ ನೀಡಿದ್ದಾರೆ. ಸಿನಿಮಾದಲ್ಲಿ ಪದ್ಮಾವತಿಯಾಗಿ ದೀಪಿಕಾ ಪಡುಕೋಣೆ ಎಲ್ಲರನ್ನು ಸೆಳೆಯಲಿದ್ದಾರೆ. ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ರಣ್‍ವೀರ್ ಸಿಂಗ್ ಮತ್ತು ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್ ನಟಿಸಿದ್ದಾರೆ. ಪದ್ಮಾವತಿ ಡಿಸೆಂಬರ್ 1ರಂದು ದೇಶಾದ್ಯಂತ ತೆರೆಕಾಣಲಿದೆ.

    ಗುಜರಾತ್ ನಲ್ಲಿ ಡಿಸೆಂಬರ್ 9ರಂದು ಮೊದಲ ಹಂತದ ಚುನಾವಣೆ ನಡೆದರೆ, ಡಿಸೆಂಬರ್ 18 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.

  • ಈ ಆರು ಕಾರಣಗಳಿಗಾಗಿ ನೀವು ಪದ್ಮಾವತಿ ಸಿನಿಮಾವನ್ನು ನೋಡ್ಲೇಬೇಕು!

    ಈ ಆರು ಕಾರಣಗಳಿಗಾಗಿ ನೀವು ಪದ್ಮಾವತಿ ಸಿನಿಮಾವನ್ನು ನೋಡ್ಲೇಬೇಕು!

    ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ `ಪದ್ಮಾವತಿ’ ಸಿನಿಮಾದ ಮೇನಿಯಾ ದೇಶಾದ್ಯಂತ ಶುರುವಾಗಿದೆ. ಸಿನಿಮಾದ ಮೂರು ಫಸ್ಟ್ ಲುಕ್ ಮತ್ತು ಟ್ರೇಲರ್ ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪದ್ಮಾವತಿಯ ಟ್ರೆಂಡ್ ಆರಂಭವಾಗಿದೆ.

    ಸಿನಿಮಾದ ಟ್ರೇಲರ್ ಮಧ್ಯಾಹ್ನ 13.03 ಗಂಟೆಗೆ ಬಿಡುಗಡೆ ಮಾಡುವ ಮೂಲಕ ತಾವು ಬೇರೆಯವರಿಗಿಂತ ಭಿನ್ನ ಎಂಬುದನ್ನು ಸಂಜಯ್ ಲೀಲಾ ಬನ್ಸಾಲಿ ತೋರಿಸಿದ್ದಾರೆ. ಬನ್ಸಾಲಿ ಪ್ರತಿಬಾರಿಯೂ ವಿಭಿನ್ನ ಕಥಾ ಹಂದರವುಳ್ಳ ಸಿನಿಮಾವನ್ನು ತೆರೆಯ ಮೇಲೆ ತಮ್ಮದೇ ಶೈಲಿಯಲ್ಲಿ ತರುತ್ತಾರೆ.

    1. ಬನ್ಸಾಲಿಯ ಕಥೆ ಹೇಳುವ ಶೈಲಿ:
    ಯಾವುದೇ ಒಂದು ಕಥೆಯನ್ನು ನೋಡುಗರಿಗೆ ತಲುಪಿಸುವ ಸಾಮರ್ಥ್ಯವನ್ನು ಬನ್ಸಾಲಿ ಹೊಂದಿದ್ದಾರೆ. ಬನ್ಸಾಲಿ ಅವರು ಹಿಂದೆ ನಿರ್ದೇಶನ ಮಾಡಿದ್ದ ಹಮ್ ದಿಲ್ ದೇ ಚುಕೇ ಸನಮ್, ದೇವ್‍ದಾಸ್, ರಾಮ್‍ಲೀಲಾ ಮತ್ತು ಬಾಜೀರಾವ್ ಮಸ್ತಾನಿ ಸಿನಿಮಾಗಳು ಅವರ ಚಾಕಚಕ್ಯತೆಗೆ ಉದಾಹರಣೆಯಾಗಿವೆ. ಹೀಗಾಗಿ `ಪದ್ಮಾವತಿ’ ಸಿನಿಮಾ ಹೇಗೆ ಮೂಡಿ ಬಂದಿದೆ ಎಂಬ ಕುತೂಹಲ ಉಂಟಾಗಿದೆ.

    2. ಚಾಲೆಂಜಿಂಗ್ ಪಾತ್ರದಲ್ಲಿ ಕಲಾವಿದರು:
    ಇದೊಂದು ವಿಭಿನ್ನ ಮತ್ತು ಐತಿಹಾಸಿಕ ಕಥೆಯನ್ನು ಸಿನಿಮಾ ಹೊಂದಿದೆ. ಸಿನಿಮಾದಲ್ಲಿ ನಟಿಸಿರುವ ಎಲ್ಲ ಕಲಾವಿದರಿಗೂ ಇದೊಂದು ಚಾಲೆಂಜಿಂಗ್ ಸಿನಿಮಾವಾಗಿದೆ. ದೀಪಿಕಾ, ರಣ್‍ವೀರ್ ಸಿಂಗ್ ಮತ್ತು ಶಾಹಿದ್ ಇದೂವರೆಗೂ ಈ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿಲ್ಲ. ಈ ಹಿಂದೆ ದೀಪಿಕಾ ಮತ್ತು ರಣ್‍ವೀರ್ ಇಬ್ಬರೂ `ಬಾಜೀರಾವ್ ಮಸ್ತಾನಿ’ ಸಿನಿಮಾ ರಾಜಾ ಮತ್ತು ರಾಣಿ ನಟಿಸಿ ಸೈ ಅನ್ನಿಸಿಕೊಂಡಿದ್ದರು. ಆದರೆ ಪದ್ಮಾವತಿ ಕಥೆ ಸಂಪೂರ್ಣ ಭಿನ್ನವಾಗಿದ್ದು ಕಲಾವಿದರ ಕೆರಿಯರ್ ಬದಲಾಯಿಸುವ ಸಾಧ್ಯತೆಗಳಿವೆ.

    3. ಚಿತ್ರಕಥೆ ಮತ್ತು ಯುದ್ಧ:
    ಭಾರತೀಯ ಸಿನಿಮಾದಲ್ಲಿ ಇದೂವರೆಗೂ ಯುದ್ಧ ಸನ್ನಿವೇಶಗಳನ್ನು ಹೊಂದಿರುವ ಚಿತ್ರಗಳು ಸಾಕಷ್ಟು ತೆರೆಕಂಡಿವೆ. ರಾಜಸ್ಥಾನ ರಾಜರ ಯುದ್ಧದ ವಿಧಾನ ತಂತ್ರಗಳು ಮತ್ತು ಅಲ್ಲಾವುದ್ದೀನ್ ಖಿಲ್ಜಿ ಯುದ್ಧದ ಪ್ರತಿತಂತ್ರಗಳನ್ನು ಸಿನಿಮಾದಲ್ಲಿ ಕಾಣಬಹುದಾಗಿದೆ. ಕಲಾವಿದರೆಲ್ಲರೂ ತಮಗೆ ನೀಡಿರುವ ಪಾತ್ರಗಳಿಗೆ ಜೀವ ತುಂಬಿರುವುದನ್ನು ಟ್ರೇಲರ್ ನಲ್ಲಿ ನೋಡಬಹುದಾಗಿದೆ.

    4. ಸಂಗೀತ:
    ಬನ್ಸಾಲಿ ತಮ್ಮ ಸಿನಿಮಾದಲ್ಲಿ ಹಿತವಾದ ಸಂಗೀತಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾರೆ. ಟ್ರೇಲರ್ ನಲ್ಲಿ ಇಂಪಾದ ಹಿನ್ನೆಲೆ ಸಂಗೀತವಿದ್ದು, ಇನ್ನೂ ಹಾಡುಗಳು ಹೇಗೆ ಮೂಡಿ ಬರಲಿವೆ ಎಂಬ ಕಾತುರ ಸಂಗೀತಾಭಿಮಾನಿಗಳಲ್ಲಿ ಹುಟ್ಟು ಹಾಕಿದೆ.

    5. ಭಾರತೀಯ ಸಂಸ್ಕೃತಿ ಮತ್ತು ವೈಭವ:
    ನಿದೇಶಕ ಬನ್ಸಾಲಿ ಕಳೆದ ರಾಜಾಡಳಿತವನ್ನು ತೆರೆಯ ಮೇಲೆ ತರಲು ನಿಸ್ಸೀಮರು. 1303ರಲ್ಲಿ ಅಲ್ಲಾವುದ್ದೀನ್ ಖಲ್ಜಿ ಭಾರತದ ಮೇಲೆ ದಂಡೆತ್ತಿ ಬಂದಿದ್ದು, ಅಂದಿನ ಭಾರತದ ಕಲ್ಪನೆ ಸಿನಿಮಾದಲ್ಲಿ ಮೂಡಿಬರಲಿದೆ. ಭಾರತೀಯ ಸಂಸ್ಕೃತಿ, ಕಲೆ, ವಾಸ್ತು ಶಿಲ್ಪ, ರಾಜಾಡಳಿತ ಮತ್ತು ವಸ್ತ್ರ ವಿನ್ಯಾಸವನ್ನು ಸಿನಿಮಾ ಒಳಗೊಂಡಿದೆ.

    6. ಗ್ರಾಫಿಕ್ಸ್:
    ಕಲಾವಿದರ ಜೊತೆ ಟ್ರೇಲರ್ ಸೂಪರ್ ಹಿಟ್ ಆಗಲು ಕಾರಣವಾಗಿದ್ದು, ಚಿತ್ರದಲ್ಲಿ ಬಳಸಿದ್ದ ಗ್ರಾಫಿಕ್ಸ್. ಬಾಹುಬಲಿ ನಿರ್ದೇಶಕ ರಾಜಮೌಳಿ ಗ್ರಾಫಿಕ್ಸ್ ವೈಭವವನ್ನು ಮೆಚ್ಚಿ ಟ್ವೀಟ್ ಮಾಡಿದ್ದು ಇದಕ್ಕೆ ಉದಾಹರಣೆ. ಹೀಗಾಗಿ ಚಿತ್ರದಲ್ಲಿ ಗ್ರಾಫಿಕ್ಸ್ ಬಳಕೆ ಹೇಗಿರಲಿದೆ ಎನ್ನುವ ಕುತೂಹಲಕ್ಕಾಗಿಯಾದರೆ ಚಿತ್ರ ವೀಕ್ಷಣೆ ಮಾಡಬೇಕಿದೆ.

    ಹೀಗೆ ಹತ್ತು ಹಲವು ಕಾರಣಗಳಿಂದ ಪದ್ಮಾವತಿ ಎಲ್ಲರನ್ನು ಆಕರ್ಷಿಸಲು ಯಶಸ್ವಿಯಾಗಿದೆ. ಫಸ್ಟ್ ಲುಕ್ ಮತ್ತು ಟ್ರೇಲರ್ ಬಿಡುಗಡೆಗೊಂಡ ಕೆಲವೇ ಗಂಟೆಗಳಲ್ಲಿ ನಂಬರ್ 01 ಟ್ರೆಂಡಿಂಗ್ ಸ್ಥಾನವನ್ನು ಪಡೆದಿತ್ತು. ಸಿನಿಮಾ ಡಿಸೆಂಬರ್ 1 ರಂದು ದೇಶಾದ್ಯಂತ ಬಿಡುಗಡೆ ಆಗಲಿದೆ.

    https://twitter.com/deepikapadukone/status/915017791274496001

    https://twitter.com/deepikapadukone/status/915017522033733634

    https://twitter.com/deepikapadukone/status/912123492979564544

    https://twitter.com/deepikapadukone/status/912118818012512256