Tag: Sanju Samson

  • IPL 2024: ಸಂಜು-ಪರಾಗ್‌ ಬಹುಪರಾಕ್‌ -‌ ರಾಜಸ್ಥಾನ್‌ ರಾಯಲ್ಸ್‌ಗೆ 20 ರನ್‌ಗಳ ಅಮೋಘ ಜಯ

    IPL 2024: ಸಂಜು-ಪರಾಗ್‌ ಬಹುಪರಾಕ್‌ -‌ ರಾಜಸ್ಥಾನ್‌ ರಾಯಲ್ಸ್‌ಗೆ 20 ರನ್‌ಗಳ ಅಮೋಘ ಜಯ

    – ನಿಕೋಲಸ್‌ ಪೂರನ್‌, ಕೆ.ಎಲ್‌ ರಾಹುಲ್‌ ಅರ್ಧಶತಕಗಳ ಹೋರಾಟ ವ್ಯರ್ಥ

    ಜೈಪುರ: ನಿಕೋಲಸ್‌ ಪೂರನ್‌, ಕೆ.ಎಲ್‌ ರಾಹುಲ್‌ (KL Rahul and Nicholas Pooran) ಅವರ ಅರ್ಧಶತಕಗಳ ಹೋರಾಟದ ಹೊರತಾಗಿಯೂ ರಾಜಸ್ಥಾನ್‌ ರಾಯಲ್ಸ್‌ ತಂಡ (Rajasthan Royals), ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 20 ರನ್‌ಗಳ ಅಮೋಘ ಜಯ ಸಾಧಿಸಿದೆ.

    ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 193 ರನ್‌ ಗಳಿಸಿತ್ತು. 194 ರನ್‌ಗಳ ಗುರಿ ಬೆನ್ನತ್ತಿದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 173 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಕೊನೇ ಓವರ್‌ನಲ್ಲಿ ಲಕ್ನೋ ತಂಡದ ಗೆಲುವಿಗೆ 27 ರನ್‌ ಅಗತ್ಯವಿತ್ತು. ಬೌಲಿಂಗ್‌ನಲ್ಲಿದ್ದ ಅವೇಶ್‌ ಖಾನ್‌ ಮೊದಲೇ 2 ವೈಟ್‌ ಬಿಟ್ಟುಕೊಟ್ಟರು. ಉಳಿದ ನಾಲ್ಕು ಎಸೆತಗಳಲ್ಲಿ ಕ್ರೀಸ್‌ನಲ್ಲಿದ್ದ ಕೃನಾಲ್‌ ಪಾಂಡ್ಯ ಹಾಗೂ ನಿಕೋಲಸ್‌ ಪೂರನ್‌ ಕೇವಲ ಒಂದೊಂದು ರನ್‌ ಗಳಿಸುವಲ್ಲಿ ಸಮರ್ಥರಾದರು. ಇದರಿಂದ ಗೆಲುವು ರಾಜಸ್ಥಾನ್‌ ಪಾಲಾಯಿತು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಲಕ್ನೋ ತಂಡ ಮೊದಲ ಮೂರು ಓವರ್‌ಗಳಲ್ಲೇ 11 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ಕಂಗಾಲಾಗಿತ್ತು. ಇದರಿಂದ ತಂಡ ಅಲ್ಪ ಮೊತ್ತಕ್ಕೆ ಆಲೌಟ್‌ ಆಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದ್ರೆ ದೀಪಕ್‌ ಹೂಡಾ ಮತ್ತು ಕೆ.ಎಲ್‌ ರಾಹುಲ್‌ ನಡುವಿನ 49 ರನ್‌ಗಳ ಸಣ್ಣ ಜೊತೆಯಾಟ ತಂಡಕ್ಕೆ ಚೇತರಿಕೆ ನೀಡಿತ್ತು. ಆದ್ರೆ ಹೂಡಾ 26 ರನ್‌ ಗಳಿಸುತ್ತಿದ್ದಂತೆ ವಿಕೆಟ್‌ ಒಪ್ಪಿಸಿದರು.

    ಬಳಿಕ 5ನೇ ವಿಕೆಟ್‌ಗೆ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಕೆ.ಎಲ್‌ ರಾಹುಲ್‌ ಹಾಗೂ ನಿಕೋಲಸ್‌ ಪೂರನ್‌ ಜೋಡಿ 52 ಎಸೆತಗಳಲ್ಲಿ 85 ರನ್‌ಗಳ ಜೊತೆಯಾಟ ನೀಡಿತ್ತು. ಇದರಿಂದ ತಂಡ ಗೆಲುವಿನ ಸನಿಹ ತಲುಪಿತ್ತು. ಕೊನೇ ಕ್ಷಣದಲ್ಲಿ ನಿಧಾನಗತಿಯ ಬ್ಯಾಟಿಂಗ್‌ ತಂಡದ ದಿಕ್ಕನ್ನೇ ಬದಲಿಸಿತು.

    ಲಕ್ನೋ ಪರ ನಿಕೋಲಸ್‌ ಪೂರನ್‌ 64 ರನ್‌ (41 ಎಸೆತ, 4 ಸಿಕ್ಸರ್‌, 4 ಬೌಂಡರಿ), ಕೆ.ಎಲ್‌ ರಾಹುಲ್‌ 58 ರನ್‌ (44 ಎಸೆತ, 4 ಬೌಂಡರಿ, 2 ಸಿಕ್ಸರ್‌), ಕ್ವಿಂಟನ್‌ ಡಿ ಕಾಕ್‌ 4 ರನ್‌, ಆಯುಷ್‌ ಬದೋನಿ 1 ರನ್‌, ದೀಪಕ್‌ ಹೂಡಾ 26 ರನ್‌, ಮಾರ್ಕಸ್‌ ಸ್ಟೋಯ್ನಿಸ್‌ 3 ರನ್‌ ಗಳಿಸಿದ್ರೆ, ಕೃನಾಲ್‌ ಪಾಂಡ್ಯ 3 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು. ದೇವದತ್‌ ಪಡಿಕಲ್‌ ಶೂನ್ಯ ಸುತ್ತಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ ರಾಯಲ್ಸ್ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಕೇವಲ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಬೆನ್ನಲ್ಲೇ ಸ್ಫೋಟಕ ಪ್ರದರ್ಶನಕ್ಕಿಳಿದಿದ್ದ ಯಶಸ್ವಿ ಜೈಸ್ವಾಲ್‌ ಸಹ 12 ಎಸೆತಗಳಲ್ಲಿ 24 ರನ್‌ ಬಾರಿಸಿ ಔಟಾದರು.

    ಸಂಜು-ಪರಾಗ್‌ ಬಹುಪರಾಕ್‌:
    5 ಓವರ್‌ಗಳಲ್ಲಿ 49 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ನಾಯಕ ಸಂಜು ಸ್ಯಾಮ್ಸನ್ (Sanju Samson) ಹಾಗೂ ರಿಯಾನ್ ಪರಾಗ್ (Riyan Parag)  ಬ್ಯಾಟಿಂಗ್‌ ಬಲ ತುಂಬಿದರು. 59 ಎಸೆತಗಳಲ್ಲಿ ಈ ಜೋಡಿ 93 ರನ್‌ಗಳ ಜತೆಯಾಟ ನೀಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಸ್ಫೋಟಕ ಬ್ಯಾಟಿಂಗ್‌ ಮಾಡಿದ ರಿಯಾನ್ ಪರಾಗ್ 29 ಎಸೆತಗಳಲ್ಲಿ 43 ರನ್ (3 ಸಿಕ್ಸರ್‌, 1 ಬೌಂಡರಿ) ಬಾರಿಸಿ ವಿಕೆಟ್ ಒಪ್ಪಿಸಿದರು.

    ಕೊನೆಯವರೆಗೂ ಹೋರಾಡಿದ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಸಂಜು ಸ್ಯಾಮ್ಸನ್ ಕೇವಲ 33 ಎಸೆತಗಳನ್ನು ಎದುರಿಸಿ 21ನೇ ಐಪಿಎಲ್ ಶತಕ ಸಿಡಿಸಿದರು. ಅಂತಿಮವಾಗಿ ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ ಅಜೇಯ 82 ರನ್ (3 ಬೌಂಡರಿ, 6 ಸಿಕ್ಸರ್) ಸಿಡಿಸಿದರು. ಕೊನೆಯಲ್ಲಿ ಧ್ರುವ್‌ ಜುರೆಲ್‌ ಕೇವಲ 12 ಎಸೆತಗಳಲ್ಲಿ ತಲಾ 1 ಸಿಕ್ಸರ್, ಬೌಂಡರಿ ಸಹಿತ 20 ರನ್ ಬಾರಿಸಿದರು.

    ಲಖನೌ ಸೂಪರ್ ಜೈಂಟ್ಸ್ ಪರ ನವೀನ್ ಉಲ್ ಹಕ್ ಎರಡು ವಿಕೆಟ್ ಪಡೆದರೆ, ರವಿ ಬಿಷ್ಣೋಯಿ ಹಾಗೂ ಮೊಯ್ಸಿನ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.

     

  • ಅಫ್ಘಾನ್‌ ವಿರುದ್ಧ T20 ಸರಣಿಗೆ‌ ಬಲಿಷ್ಠ ತಂಡ ಪ್ರಕಟ – ಟೀಂ ಇಂಡಿಯಾಕ್ಕೆ ರೋಹಿತ್‌ ಸಾರಥಿ, ಕೊಹ್ಲಿ ಕಂಬ್ಯಾಕ್‌

    ಅಫ್ಘಾನ್‌ ವಿರುದ್ಧ T20 ಸರಣಿಗೆ‌ ಬಲಿಷ್ಠ ತಂಡ ಪ್ರಕಟ – ಟೀಂ ಇಂಡಿಯಾಕ್ಕೆ ರೋಹಿತ್‌ ಸಾರಥಿ, ಕೊಹ್ಲಿ ಕಂಬ್ಯಾಕ್‌

    ಮುಂಬೈ: ಅಫ್ಘಾನಿಸ್ತಾನ (Afghanistan) ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ (T20 Series) ಭಾರತ ತಂಡವನ್ನು ಬಿಸಿಸಿಐ ಭಾನುವಾರ (ಜ.7) ಪ್ರಕಟಿಸಿದೆ. ವಿಶೇಷವೆಂದರೆ 2023ರ ಏಕದಿನ ವಿಶ್ವಕಪ್‌ ಬಳಿಕ ಟಿ20 ಪಂದ್ಯಗಳಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದ ನಾಯಕ ರೋಹಿತ್‌ ಶರ್ಮಾ ಅವರಿಗೆ ಮತ್ತೆ ಟಿ20 ಪಂದ್ಯಗಳಿಗೆ ನಾಯಕತ್ವದ ಹೊಣೆ ನೀಡಲಾಗಿದೆ.

    ರೋಹಿತ್‌ (Rohit Sharma) ಮತ್ತು ವಿರಾಟ್‌ ಕೊಹ್ಲಿ (Virat Kohli) ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ನಿರಂತರವಾಗಿ ಆಡುತ್ತಿದ್ದರು. ಹಲವು ತಿಂಗಳಿನಿಂದ ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ವರ್ಷದ ಜೂನ್‌ನಲ್ಲಿ ಟಿ20 ವಿಶ್ವಕಪ್‌ (T20 WorldCup) ಟೂರ್ನಿ ಆಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಚುಟುಕು ಸ್ವರೂಪದ ಟೂರ್ನಿಗೆ ಇಬ್ಬರು ಎಂಟ್ರಿಕೊಟ್ಟಿದ್ದಾರೆ. ಇದನ್ನೂ ಓದಿ: ಸೇರ್ಪಡೆಯಾದ 10 ದಿನದಲ್ಲೇ ವೈಎಸ್‌ಆರ್‌ ಕಾಂಗ್ರೆಸ್‌ಗೆ ಅಂಬಟಿ ರಾಯಡು ಗುಡ್‌ಬೈ

    ಚುಟುಕು ಸ್ವರೂಪಕ್ಕೆ ಇವರಿಬ್ಬರನ್ನು ಆಯ್ಕೆ ಮಾಡುವ ಕುರಿತು ಸಾಕಷ್ಟು ಊಹಾಪೋಹಗಳು ಇದ್ದವು. ಈ ನಡುವೆ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಇಬ್ಬರೂ ಗಾಯದಿಂದಾಗಿ ಆಯ್ಕೆಗೆ ಲಭ್ಯರಿಲ್ಲ. ಹೀಗಾಗಿ ರೋಹಿತ್ ಮತ್ತು ಕೊಹ್ಲಿಯನ್ನು ತಂಡದಲ್ಲಿ ಹಿರಿಯ ಬ್ಯಾಟರ್‌ಗಳಾಗಿ ಬಿಸಿಸಿಐ (BCCI) ತಂಡಕ್ಕೆ ವಾಪಸ್ ಕರೆಸಿಕೊಂಡಿದೆ. ಇದನ್ನೂ ಓದಿ: T20 World Cup 2024 ವೇಳಾಪಟ್ಟಿ ಬಿಡುಗಡೆ; ಜೂ.9ಕ್ಕೆ ನ್ಯೂಯಾರ್ಕ್‌ನಲ್ಲಿ ಇಂಡೋ-ಪಾಕ್‌ ಕದನ

    ಸಂಜುಗೆ ಮತ್ತೆ ಚಾನ್ಸ್‌: 
    ಯುವ ಆರಂಭಿಕರಾದ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಸಾಮರ್ಥ್ಯ ತೋರಿ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ. ಆದರೆ ಇಶಾನ್ ಕಿಶನ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಸಂಜು ಸ್ಯಾಮ್ಸನ್ ತಮ್ಮ ಸ್ಥಾನಕ್ಕೆ ಮರಳಿದ್ದು, ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ 3ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ವಿಕೆಟ್‌ ಕೀಪರ್ ಹಾಗೂ ಬ್ಯಾಟರ್ ಚುಟುಕು ಸ್ವರೂಪದಲ್ಲೂ ಅಬ್ಬರಿಸುವ ನಿರೀಕ್ಷೆ ಇದೆ. ಮತ್ತೋರ್ವ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಕೂಡ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.

    ಅಫ್ಘಾನ್‌ ವಿರುದ್ಧ ಭಾರತ ತಂಡ ಹೀಗಿದೆ:
    ರೋಹಿತ್ ಶರ್ಮಾ (ನಾಯಕ), ಶುಭಮನ್‌ ಗಿಲ್‌, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಶಿವಂ ದುಬೆ, ವಾಷಿಂಗ್ಟನ್‌ ಸುಂದರ್‌, ಅಕ್ಷರ್‌ ಪಟೇಲ್, ರವಿ ಬಿಷ್ಣೋಯಿ, ಕುಲ್ದೀಪ್‌ ಯಾದವ್, ಅರ್ಷ್‌ದೀಪ್‌ ಸಿಂಗ್‌, ಅವೇಶ್‌ ಖಾನ್‌, ಮುಕೇಶ್‌ ಕುಮಾರ್‌. ಇದನ್ನೂ ಓದಿ: ಭಾರತವನ್ನು ನಂ.1 ಪಟ್ಟದಿಂದ ಕೆಳಗಿಳಿಸಿದ ಆಸ್ಟ್ರೇಲಿಯಾ – ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವಕ್ಕೆ ಮೆಚ್ಚುಗೆ!

    ಸರಣಿ ಯಾವಾಗ?
    ಇದೇ ಜನವರಿ 11 ರಿಂದ ಸರಣಿ ಪ್ರಾರಂಭವಾಗಲಿದ್ದು, ಮೊದಲ ಟಿ20 ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಜ.14 ರಂದು ಇಂದೋರ್‌ನ ಹೋಳ್ಕರ್‌ ಮೈದಾನದಲ್ಲಿ 2ನೇ ಪಂದ್ಯ ನಡೆಯಲಿದೆ. ಜನವರಿ 17 ರಂದು ಅಂತಿಮ‌ ಟಿ20 ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಇದು ಭಾರತ ತಂಡಕ್ಕೆ ಕೊನೆಯ ಚುಟುಕು ಅಂತಾರಾಷ್ಟ್ರೀಯ ಸರಣಿಯಾಗಿರಲಿದೆ.‌ ಹಾಗಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಧೋನಿಗೆ 15 ಕೋಟಿ ರೂ. ದೋಖಾ – ಮಾಜಿ ಪಾಲುದಾರರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಮಹಿ

    ಅಫ್ಘಾನ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷರ ಸಂಸತ:
    ಮೂರು‌‌ ಪಂದ್ಯಗಳ‌ ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಳ್ಳುತ್ತಿರುವುದು ಅತೀವ ಖುಷಿ ನೀಡುತ್ತಿದೆ. ಭಾರತ ತಂಡದ ವಿಶ್ವದ ಅಗ್ರಮಾನ್ಯ ತಂಡ. ಅಂತಹ ತಂಡದ ವಿರುದ್ಧ ಸ್ಫರ್ಧಿಸುವುದು ಕಷ್ಟದ ವಿಷಯ. ಅಫ್ಘಾನಿಸ್ತಾನ ತಂಡವೂ ಇತ್ತೀಚೆಗೆ ‌ಉತ್ತಮ ಸಾಧನೆ ಮಾಡುತ್ತಿದೆ ಎಂದು ನಾ‌ನು ನಂಬುತ್ತೇನೆ. ಭಾರತದ ವಿರುದ್ಧ ಹೆಚ್ಚು ಸ್ಪರ್ಧಾತ್ಮಕ ಸರಣಿಯನ್ನು ನೋಡುತ್ತಿದ್ದೇವೆ ಎಂದು ಅಫ್ಘಾನ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಮಿರ್ಮೈಸ್ ಅಶ್ರಫ್ ಹೇಳಿದ್ದಾರೆ.

  • ಹರಿಣರ ಬೇಟೆಯಾಡಿ ಸರಣಿ ಗೆದ್ದ ಭಾರತ – ಧೋನಿ ಟ್ರೆಂಡ್‌ ಮುಂದುವರಿಸಿದ ಕೆ.ಎಲ್‌ ರಾಹುಲ್‌

    ಹರಿಣರ ಬೇಟೆಯಾಡಿ ಸರಣಿ ಗೆದ್ದ ಭಾರತ – ಧೋನಿ ಟ್ರೆಂಡ್‌ ಮುಂದುವರಿಸಿದ ಕೆ.ಎಲ್‌ ರಾಹುಲ್‌

    – ಕಿಂಗ್‌ ಕೊಹ್ಲಿ ಬಳಿಕ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆದ್ದ ಟೀಂ‌ ಭಾರತದ 2ನೇ ನಾಯಕ ರಾಹುಲ್

    ಪರ್ಲ್‌: ಸಂಜು ಸ್ಯಾಮ್ಸನ್‌ ಅವರ ಚೊಚ್ಚಲ ಶತಕ ಹಾಗೂ ಅರ್ಷ್‌ದೀಪ್‌ ಸಿಂಗ್‌ ಶಿಸ್ತುಬದ್ಧ ಬೌಲಿಂಗ್‌ ದಾಳಿಯ ನೆರವಿನಿಂದ ಭಾರತ ತಂಡ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 78 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಮುಡಿಗೇರಿಸಿಕೊಂಡಿದೆ. ಈ ಸರಣಿ ಗೆಲುವು ಕೆ.ಎಲ್‌ ರಾಹುಲ್‌ ನಾಯಕತ್ವಕ್ಕೆ ಮತ್ತಷ್ಟು ಬಲ ನೀಡಿದೆ.

    ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರ ಬಳಿಕ ದಕ್ಷಿಣ ಆಫ್ರಿಕಾದಲ್ಲಿ ಹರಿಣರ ವಿರುದ್ಧ ಸರಣಿ ಗೆದ್ದ ಟೀಂ ಇಂಡಿಯಾದ 2ನೇ ನಾಯಕ ಎಂಬ ಖ್ಯಾತಿಯನ್ನೂ ರಾಹುಲ್‌ ಗಳಿಸಿದ್ದಾರೆ. ಇದರೊಂದಿಗೆ ಲೆಜೆಂಡ್‌ ಎಂ.ಎಸ್‌ ಧೋನಿ ಅವರ ಟ್ರೆಂಡನ್ನೇ ಮುಂದುವರಿಸಿ ಅಭಿಮಾನಿಗಳ ಮೆಚ್ಚುಗೆಗೂ ಪಾತ್ರರಾಗಿದ್ದಾರೆ. ಗಣ್ಯರಿಂದ ಸರಣಿ ಟ್ರೋಫಿ ಪಡೆಯುತ್ತಿದ್ದಂತೆ ಅದನ್ನು ಸಹ ಆಟಗಾರ ರಿಂಕು ಸಿಂಗ್‌ಗೆ ನೀಡಿದ್ದಾರೆ. ಗ್ರೂಪ್‌ ಫೋಟೋ ತೆಗೆಸಿಕೊಳ್ಳುವಾಗಲು ಕೆ.ಎಲ್‌ ರಾಹುಲ್‌ ಕೊನೆಯಲ್ಲಿ ನಿಂತು ಸಹ ಆಟಗಾರರೊಂದಿಗೆ ಸಂಭ್ರಮಿಸಿದ್ದಾರೆ. ಇದು ಧೋನಿ ಅಭಿಮಾನಿಗಳಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.

    ಪರ್ಲ್‌ನ ಬೋಲೆಂಡ್‌ ಪಾರ್ಕ್‌ನಲ್ಲಿ ನಡೆದ ಏಕದಿನ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ್ದ 297 ರನ್‌ಗಳ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಉತ್ತಮ ಆರಂಭ ಪಡೆದುಕೊಂಡಿತ್ತಾದರೂ ಬಳಿಕ ಭಾರತದ ಸಂಘಟಿತ ಬೌಲಿಂಗ್‌ ದಾಳಿ ಎದುರಿಸುವಲ್ಲಿ ವಿಫಲವಾಯಿತು. ಅಂತಿಮವಾಗಿ 45.5 ಓವರ್‌ಗಳಲ್ಲಿ 218 ರನ್‌ಗಳಿಗೆ ಆಲೌಟ್‌ ಆಯಿತು. ಇದರಿಂದ ಭಾರತ 78 ರನ್‌ಗಳ ಭರ್ಜರಿ ಜಯ ಸಾಧಿಸಿ, ಸರಣಿ ಕೈವಶ ಮಾಡಿಕೊಂಡಿತು.

    ಟೋನಿ ಡಿ ಜಾರ್ಜಿ ಅರ್ಧಶತಕ:
    2ನೇ ಪಂದ್ಯದಲ್ಲಿ ಹರಿಣರ ಪರ ಶತಕ ಸಿಡಿಸಿದ್ದ ಟೋನಿ ಡಿ ಜಾರ್ಜಿ ಅವರು 3ನೇ ಪಂದ್ಯದಲ್ಲಿಯೂ ಅತ್ಯುತ್ತಮ ಫಾರ್ಮ್‌ ಮುಂದುವರಿಸಿದರು. ಅಕ್ಷರ್‌ ಪಟೇಲ್‌ ಅವರ ಬೌಲಿಂಗ್‌ನಲ್ಲಿ ಒಂದು ಜೀವ ದಾನ ಪಡೆದಿದ್ದ ಟೋನಿ ಡಿ ಜಾರ್ಜಿ 87 ಎಸೆತಗಳಲ್ಲಿ 81 ರನ್ (3 ಸಿಕ್ಸರ್‌, 6 ಬೌಂಡರಿ) ಗಳಿಸಿ ಸತತ 2ನೇ ಶತಕ ಪೂರೈಸುವ ಮುನ್ಸೂಚನೆ ನೀಡಿದ್ದರು. ಆದ್ರೆ, ಇದಕ್ಕೆ ಅರ್ಷ್‌ದೀಪ್‌ ಸಿಂಗ್‌ ಬ್ರೇಕ್‌ ಹಾಕಿದರು. ನಾಯಕ ಏಡೆನ್‌ ಮಾರ್ಕ್ರಮ್‌ ಅನಗತ್ಯವಾಗಿ ರಿವರ್ಸ್‌ ಸ್ವೀಪ್‌ ತೆಗೆದುಕೊಳ್ಳಲು ಯತ್ನಿಸಿ ಸುಲಭ ಕೀಪರ್‌ ಕ್ಯಾಚ್‌ಗೆ ತುತ್ತಾದರು. ಇನ್ನುಳಿದ ಬ್ಯಾಟ್ಸ್‌ಮನ್‌ಗಳು ಭಾರತೀರ ದಾಳಿ ಎದುರಿಸುವಲ್ಲಿ ವಿಫಲರಾದರು.

    ಇನ್ನುಳಿದಂತೆ ರೀಜಾ ಹೆಂಡ್ರಿಕ್ಸ್ 19 ರನ್‌, ರಾಸ್ಸಿ ವಾನ್‌ ಡೇರ್‌ ಡುಸ್ಸೆನ್‌ 2 ರನ್‌, ಹೆನ್ರಿಚ್‌ ಕ್ಲಾಸೆನ್‌ 21 ರನ್‌, ಡೇವಿಡ್‌ ಮಿಲ್ಲರ್‌ 10 ರನ್‌, ವಿಯಾನ್ ಮುಲ್ಡರ್ 1 ರನ್‌, ಕೇಶವ್‌ ಮಹಾರಾಜ್‌ 14 ರನ್‌, ಬ್ಯೂರಾನ್ ಹೆಂಡ್ರಿಕ್ಸ್ 18 ರನ್‌, ಲಿಜಾಡ್ ವಿಲಿಯಮ್ಸ್ 2 ರನ್‌ ಗಳಿಸಿದ್ರೆ ನಾಂದ್ರೆ ಬರ್ಗರ್ 1 ರನ್‌ ಗಳಿಸಿ ಅಜೇಯರಾಗುಳಿದರು.

    ಭಾರತದ ಪರ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರಿದ ಅರ್ಷ್‌ದೀಪ್‌ ಸಿಂಗ್‌ 4 ವಿಕೆಟ್‌ ಕಿತ್ತ ಸಾಧನೆ ಮಾಡಿದರೆ, ವಾಷಿಂಗ್ಟನ್‌ ಸುಂದರ್ ಹಾಗೂ ಅವೇಶ್‌ ಖಾನ್ ತಲಾ 2 ವಿಕೆಟ್‌ ಕಿತ್ತರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 296 ರನ್‌ ಕಲೆಹಾಕಿತ್ತು. ಸ್ಫೋಟಕ ಇನ್ನಿಂಗ್ಸ್‌ ಆರಂಭಿಸುವ ನಿರೀಕ್ಷೆ ಹುಟ್ಟಿಸಿದ್ದ ರಜತ್‌ ಪಾಟಿದಾರ್‌ 22 ರನ್‌ ಗಳಿಸಿ ಔಟಾಗುತ್ತಿದ್ದಂತೆ, ಸತತ 2 ಅರ್ಧಶತಕ ಗಳಿಸಿದ್ದ ಸಾಯಿ ಸುದರ್ಶನ್‌ 10 ರನ್‌ಗೆ ಔಟಾದರು. 3ನೇ ವಿಕೆಟ್‌ಗೆ ಕೆ.ಎಲ್‌ ರಾಹುಲ್‌ ಹಾಗೂ ಸಂಜು ಸ್ಯಾಮ್ಸನ್‌ ಜೋಡಿ ಅರ್ಧಶತಕದ ಜೊತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 100ರ ಗಡಿ ದಾಟಿಸಿತು. ಅಷ್ಟರಲ್ಲಿ 35 ಎಸೆತಗಳಲ್ಲಿ 21 ರನ್‌ ಗಳಿಸಿದ್ದ ರಾಹುಲ್‌ ಔಟಾಗಿ ಪೆವಿಲಿಯನ್‌ಗೆ ಮರಳಿದರು.

    ಸಂಜು ಶತಕ-ತಿಲಕ್‌ ಅರ್ಧಶತಕ:
    4ನೇ ವಿಕೆಟ್‌ಗೆ ಜೊತೆಯಾದ ಸಂಜು ಸ್ಯಾಮ್ಸನ್‌ ಹಾಗೂ ತಿಲಕ್‌ ವರ್ಮಾ ಎಡಗೈ-ಬಲಗೈ ಕಾಂಬಿನೇಷನ್‌ನಲ್ಲಿ ಹರಿಣ ಪಡೆಯ ಬೌಲರ್‌ಗಳನ್ನು ಕಾಡಿದರು. ಈ ಇಬ್ಬರು ಮಧ್ಯಮ ಓವರ್‌ಗಳಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶಿಸಿ 4ನೇ ವಿಕೆಟ್‌ಗೆ 116 ರನ್‌ಗಳ ಜೊತೆಯಾಟದ ಕೊಡುಗೆ ನೀಡಿದರು. ಸಮಯಕ್ಕೆ ತಕ್ಕಂತೆ ಬ್ಯಾಟ್‌ ಮಾಡಿದ ತಿಲಕ್‌ ವರ್ಮಾ ಅವರು 77 ಎಸೆತಗಳಲ್ಲಿ 52 ರನ್‌ ಕಲೆ ಹಾಕಿ, ಕೇಶವ್‌ ಮಹಾರಾಜ್‌ ಸ್ಪಿನ್‌ ದಾಳಿಗೆ ಔಟಾದರು. ಕೊನೆಯಲ್ಲಿ ರಿಂಕು ಸಿಂಗ್‌ 38 ರನ್‌ಗಳ ನಿರ್ಣಾಯಕ ಕೊಡುಗೆ ನೀಡಿದರು.

    2015ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಸಂಜು ಸ್ಯಾಮ್ಸನ್‌ಗೆ ಇಲ್ಲಿಯವರೆಗೂ ನಿಯಮಿತವಾಗಿ ಅವಕಾಶಗಳು ಸಿಕ್ಕಿರಲಿಲ್ಲ. ಈ ಕಾರಣದಿಂದಾಗಿ ಶತಕ ಸಿಡಿಸಲು ಸಾಧ್ಯವಾಗಿರಲಿಲ್ಲ. ಆದ್ರೆ, ಇತ್ತೀಚಿನ ದಿನಗಳಲ್ಲಿ ಏಕದಿನ ಸ್ವರೂಪದಲ್ಲಿ ಅತ್ಯುತ್ತಮ ಲಯ ಹೊಂದಿರುವ ಸಂಜು ಸ್ಯಾಮ್ಸನ್‌ ಅವರು ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಅದೇ ರೀತಿ ಗುರುವಾರ 3ನೇ ಏಕದಿನ ಪಂದ್ಯದಲ್ಲಿಯೂ ಎದುರಿಸಿದ 114 ಎಸೆತಗಳಲ್ಲಿ 3 ಸಿಕ್ಸರ್‌ ಹಾಗೂ 6 ಬೌಂಡರಿಗಳೊಂದಿಗೆ 108 ರನ್‌ ಗಳಿಸಿದರು.

  • ಸಂಜು ಸ್ಯಾಮ್ಸನ್ ಚೊಚ್ಚಲ ಶತಕ – ಸಂಭ್ರಮದಲ್ಲಿ ತೋಳ್ಬಲ ಪ್ರದರ್ಶನ!

    ಸಂಜು ಸ್ಯಾಮ್ಸನ್ ಚೊಚ್ಚಲ ಶತಕ – ಸಂಭ್ರಮದಲ್ಲಿ ತೋಳ್ಬಲ ಪ್ರದರ್ಶನ!

    ಪಾರ್ಲ್ (ದಕ್ಷಿಣ ಆಫ್ರಿಕಾ): ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ (Sanju Samson) ಇಂದು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಚೊಚ್ಚಲ ಶತಕ ಬಾರಿಸಿದರು. ಸಂಜು ಸ್ಯಾಮ್ಸನ್‌ಗೆ ಉತ್ತಮ ಸಾಥ್ ನೀಡಿದ ತಿಲಕ್ ವರ್ಮಾ ಏಕದಿನ ಪಂದ್ಯಗಳಲ್ಲಿ ಮೊದಲ ಅರ್ಧಶತಕ ಬಾರಿಸಿದರು.

    ಪಾರ್ಲ್‌ನ ಬೊಲ್ಯಾಂಡ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಶತಕ ಬಾರಿಸಿದರು. 114 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 108 ರನ್ ಗಳಿಸಿದರು. ಇದನ್ನೂ ಓದಿ: IND vs SA: ಸಂಜು ಸ್ಯಾಮ್ಸನ್ ಮೊದಲ ಶತಕ; ಆಫ್ರಿಕಾಗೆ 297 ರನ್‌ಗಳ ಗುರಿ

    ಪದೇ ಪದೇ ಕ್ರೀಡಾಂಗಣಕ್ಕಿಳಿಯುವ ಅವಕಾಶ ವಂಚಿತರಾಗಿದ್ದ ಸಂಜು ಇಂದು ಸೆಂಚುರಿ ಬಾರಿಸುತ್ತಿದ್ದಂತೆ ತಮ್ಮ ತೋಳ್ಬಲ ಪ್ರದರ್ಶಿಸಿದರು. ಸೆಂಚುರಿ ಸಿಡಿಸಿದ ಸಂಭ್ರಮದಲ್ಲಿ ಹೆಲ್ಮೆಟ್ ಕೆಳಗೆಸೆದ ಸಂಜು ಟೀ ಶರ್ಟ್ ಮೇಲೆ ಸರಿಸಿ ತೋಳ್ಬಲ ಪ್ರದರ್ಶಿಸಿದರು.

    ಇನ್ನಿಂಗ್ಸ್ ಬ್ರೇಕ್ ಮಧ್ಯೆ ಮಾತನಾಡಿದ ಸಂಜು, ಕಳೆದ ಕೆಲ ವರ್ಷಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಉತ್ತಮ ಆಟವಾಡಲು ಸಿದ್ಧವಾಗಿದ್ದೆ. ಸೆಂಚುರಿ ಬಾರಿಸಿರುವ ಈ ಕ್ಷಣ ಭಾವುಕನಾಗಿದ್ದೇನೆ. ಖುಷಿಯಾಗಿದೆ ಎಂದರು. ಇದನ್ನೂ ಓದಿ: RCB ಕಪ್‌ ಗೆಲ್ಲುವಂತೆ ಬೆಂಬಲಿಸಿ ಎಂದ ‌ಅಭಿಮಾನಿ – ಲೆಜೆಂಡ್‌ ಮಹಿ ಕೊಟ್ಟ ಉತ್ತರ ಏನು?

    ಸಂಜು ಸೆಂಚುರಿ ಸಹಾಯದಿಂದ ಟೀಂ ಇಂಡಿಯಾ ನಿಗದಿತ 50 ಓವರ್ ನಲ್ಲಿ 296 ರನ್ ಗಳಿಸಿತು. ಸಂಜು ಹಾಗೂ ತಿಲಕ್ ವರ್ಮಾ ಮೂರನೇ ವಿಕೆಟ್‌ಗೆ ಗಳಿಸಿದ 116 ರನ್ ಜೊತೆಯಾಟ ಭಾರತ ಉತ್ತಮ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿತು. ಕೊನೆಯ 10 ಓವರ್‌ಗಳಲ್ಲಿ ಭಾರತ 93 ರನ್ ಗಳಿಸಿ, ತಂಡದ ಮೊತ್ತ 296 ರನ್ ತಲುಪಲು ಸಹಕಾರಿಯಾಯಿತು.

  • IPL 2024 Retention: ‌ಪಂತ್ ಮತ್ತೆ ಅಖಾಡಕ್ಕೆ – ಕನ್ನಡಿಗನನ್ನು ಕೈಬಿಟ್ಟು ಮಿಚೆಲ್‌ ಮಾರ್ಷ್‌ ಉಳಿಸಿಕೊಂಡ ಕ್ಯಾಪಿಟಲ್ಸ್‌

    IPL 2024 Retention: ‌ಪಂತ್ ಮತ್ತೆ ಅಖಾಡಕ್ಕೆ – ಕನ್ನಡಿಗನನ್ನು ಕೈಬಿಟ್ಟು ಮಿಚೆಲ್‌ ಮಾರ್ಷ್‌ ಉಳಿಸಿಕೊಂಡ ಕ್ಯಾಪಿಟಲ್ಸ್‌

    ಮುಂಬೈ: ಡಿಸೆಂಬರ್‌ನಲ್ಲಿ ನಡೆಯಲಿರುವ ಐಪಿಎಲ್‌ ಮಿನಿ ಹರಾಜಿಗೂ (IPL 2024 Auction) ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬರೋಬ್ಬರಿ 11 ಆಟಗಾರರನ್ನ ಬಿಡುಗಡೆ ಮಾಡಿದ್ದು, 16 ಆಟಗಾರರನ್ನ ಉಳಿಸಿಕೊಂಡಿದೆ.

    ವಿಶೇಷವೆಂದರೆ ಕಳೆದ ಡಿಸೆಂಬರ್‌ 30 ರಂದು ಕಾರು ಅಪಘಾತದಲ್ಲಿ ಗಾಯಗೊಂಡು 2022ರ ಐಪಿಎಲ್‌ನಿಂದ (IPL 2022) ಹೊರಗುಳಿದಿದ್ದ ರಿಷಬ್‌ ಪಂತ್‌ 2024ರ ಐಪಿಎಲ್‌ನಲ್ಲಿ (IPL 2024) ಮತ್ತೆ ಪ್ಯಾಡ್‌ ಕಟ್ಟಲಿದ್ದಾರೆ. ರಿಷಬ್‌ ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಕ್ಯಾಂಪನ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದು, 17ನೇ ಆವೃತ್ತಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

    ಇನ್ನೂ ಕನ್ನಡಿಗ ಮನಿಷ್‌ ಪಾಂಡೆ ಅವರನ್ನು ತಂಡದಿಂದ ಬಿಡುಗಡೆ ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್‌ ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟು ವಿವಾದಕ್ಕೆ ಗುರಿಯಾಗಿದ್ದ ಮಿಚೆಲ್‌ ಮಾರ್ಷ್‌ ಅವರನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇದನ್ನೂ ಓದಿ: IPL 2024 Retention: ಮುಂಬೈ ಫ್ಯಾನ್ಸ್‌ಗೆ ಬಿಗ್ ಶಾಕ್ – ಟೈಟಾನ್ಸ್‌ನಲ್ಲೇ ಉಳಿದ ಪಾಂಡ್ಯ

    2023ರ ಐಪಿಎಲ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 14ರಲ್ಲಿ ಕೇವಲ 5 ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿತ್ತು. -0.808 ರನ್‌ರೇಟ್‌ ಹಾಗೂ 10 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿ ಉಳಿದುಕೊಂಡಿತ್ತು.

    ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡ ಆಟಗಾರರು:
    ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ಅಕ್ಷರ್ ಪಟೇಲ್, ಮಿಚೆಲ್ ಮಾರ್ಷ್, ಅಭಿಷೇಕ್‌ ಪೊರೆಲ್‌, ಅಕ್ಷರ್‌ ಪಟೇಲ್‌, ಲಲಿತ್‌ ಯಾದವ್‌, ಯಶ್‌ ಧುಲ್‌, ಪ್ರವೀಣ್ ದುಬೆ, ವಿಕ್ಕಿ, ಅನ್ರಿಚ್ ನಾರ್ಟ್ಜೆ, ಕುಲ್ದೀಪ್‌ ಯಾದವ್‌, ಲುಂಗಿ ಎನ್‌ಗಿಡಿ, ಖಲೀಲ್ ಅಹಮದ್, ಇಶಾತ್‌ ಶರ್ಮಾ, ಮುಕೇಶ್‌ ಕುಮಾರ್‌. ಇದನ್ನೂ ಓದಿ: IPL 2024 Auction: ಹ್ಯಾಜಲ್‌ವುಡ್, ಹಸರಂಗ ಸೇರಿ 11 ಆಟಗಾರರಿಗೆ RCB ಕೊಕ್‌

    ಡೆಲ್ಲಿ ಕ್ಯಾಪಿಟಲ್ಸ್‌ ಬಿಡುಗಡೆ ಮಾಡಿದ ಆಟಗಾರರು:
    ರಿಲೀ ರೊಸ್ಸೌ, ಚೇತನ್ ಸಕರಿಯಾ, ರೋವ್ಮನ್ ಪೊವೆಲ್, ಮನೀಷ್ ಪಾಂಡೆ, ಫಿಲ್ ಸಾಲ್ಟ್, ಮುಸ್ತಾಫಿಜುರ್ ರೆಹಮಾನ್, ಕಮಲೇಶ್ ನಾಗರಕೋಟಿ, ರಿಪಾಲ್ ಪಟೇಲ್, ಸರ್ಫರಾಜ್ ಖಾನ್, ಅಮನ್ ಖಾನ್, ಪ್ರಿಯಮ್ ಗಾರ್ಗ್.

    ಪಂತ್‌ಗೆ ಏನಾಗಿತ್ತು?
    2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಹೊಸ ವರ್ಷಕ್ಕೆ ತನ್ನ ತಾಯಿಗೆ ಸರ್ಪ್ರೈಸ್ ಕೊಡಬೇಕು, ತಾಯಿಯೊಂದಿಗೆ ಹೊಸ ವರ್ಷದ ಸಂಭ್ರಮ ಕಳೆಯಬೇಕು ಎಂದು ಮರ್ಸಿಡೀಸ್ ಎಎಂಜಿ ಜಿಎಲ್‌ಇ-43 ಕೂಪೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ಇದರಿಂದ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

  • ಏಕದಿನ ವಿಶ್ವಕಪ್‌ ಟೂರ್ನಿಯಿಂದಲೂ ಸಂಜು ಸ್ಯಾಮ್ಸನ್‌ ಔಟ್‌?

    ಏಕದಿನ ವಿಶ್ವಕಪ್‌ ಟೂರ್ನಿಯಿಂದಲೂ ಸಂಜು ಸ್ಯಾಮ್ಸನ್‌ ಔಟ್‌?

    ಮುಂಬೈ: ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ (Sanju Samson), ಮುಂಬರುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಪರ ಆಡಲು ಕಂಡಿದ್ದ ಕನಸು ಭಗ್ನವಾದಂತೆ ಕಾಣ್ತಿದೆ.

    ಈಗಾಗಲೇ ಆರಂಭಗೊಂಡಿರುವ ಏಷ್ಯಾಕಪ್‌ ಟೂರ್ನಿಯಲ್ಲೂ ಸಂಜು ಸ್ಯಾಮ್ಸನ್‌ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಳ್ಳದೇ ಬ್ಯಾಕಪ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದೀಗ ಕೆ.ಎಲ್‌ ರಾಹುಲ್‌ ಆಗಮನದಿಂದ ಸಂಜು ಸ್ಯಾಮ್ಸನ್‌ಗೆ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಸ್ಥಾನ ಕೈತಪ್ಪಿದೆ ಎಂದು ತಿಳಿದುಬಂದಿದೆ.

    ಅಕ್ಟೋಬರ್‌ 5 ರಿಂದ ಸೆಪ್ಟೆಂಬರ್‌ 30ರ ವರೆಗೆ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾನುವಾರ (ಇಂದು) ಬಿಸಿಸಿಐ ಟೀಂ ಇಂಡಿಯಾ ಬಲಿಷ್ಠ ತಂಡ ಪ್ರಕಟಿಸುವ ಸಾಧ್ಯತೆಗಳಿವೆ. ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಈಗಾಗಲೇ ಶ್ರೀಲಂಕಾಕ್ಕೆ ತೆರಳಿ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ತಂಡವನ್ನ ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬ್ಯಾಕಪ್‌ ಪಟ್ಟಿ ಸೇರಿದ ಟೀಂ ಇಂಡಿಯಾ ಸ್ಟಾರ್‌ – ವಿಶ್ವಕಪ್‌ ಆಡುವ ಸಂಜು ಸ್ಯಾಮ್ಸನ್‌ ಕನಸು ಭಗ್ನ?

    ಏಷ್ಯಾಕಪ್‌ ಟೂರ್ನಿಯಲ್ಲಿ ಒಂದು ತಂಡ 17 ಜನರನ್ನು ಒಳಗೊಳ್ಳುವುದರಿಂದ ಸಂಜು ಸ್ಯಾಮ್ಸನ್‌ಗೆ ಬ್ಯಾಕಪ್‌ ಪಟ್ಟಿಯಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ವಿಶ್ವಕಪ್‌ ಟೂರ್ನಿಯಲ್ಲಿ 15 ಜನರಿಗೆ ಮಾತ್ರ ಅವಕಾಶ ಇರುವುದರಿಂದ ಇಬ್ಬರನ್ನು ತೆಗೆದುಹಾಕಬೇಕಾಗುತ್ತದೆ. ಕೆ.ಎಲ್‌ ರಾಹುಲ್‌ ಸಂಪೂರ್ಣ ಫಿಟ್‌ ಆಗಿರುವುದರಿಂದ ಸಂಜು ಸ್ಯಾಮ್ಸನ್‌ಗೆ ವಿಶ್ವಕಪ್‌ ತಂಡದಲ್ಲಿ ಸ್ಥಾನ ಕೈತಪ್ಪಲಿದೆ ಎಂದು ತಿಳಿದುಬಂದಿದೆ. ಅಲ್ಲದೇ ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಹಾಗೂ ಇತ್ತೀಚೆಗಷ್ಟೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಯುವ ಆಟಗಾರ ತಿಲಕ್‌ ವರ್ಮಾ ಅವರು ಹೊರಗುಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Hockey 5s Asia Cup 2023- ಪೆನಾಲ್ಟಿ ಶೂಟೌಟ್‌ನಲ್ಲಿ ಪಾಕಿಸ್ತಾನ ಮಣಿಸಿ ಭಾರತ ಚಾಂಪಿಯನ್

    ವಿಶ್ವಕಪ್‌ಗೆ ಟೀಂ ಇಂಡಿಯಾ ಸಂಭಾವ್ಯ ಪಟ್ಟಿ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್‌ ರಾಹುಲ್ (ವಿಕೆಟ್‌ ಕೀಪರ್‌), ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್‌ ಕೀಪರ್‌), ಶಾರ್ದೂಲ್ ಠಾಕೂರ್, ಕುಲ್‌ದೀಪ್‌ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯಾಕಪ್‌ ಪಟ್ಟಿ ಸೇರಿದ ಟೀಂ ಇಂಡಿಯಾ ಸ್ಟಾರ್‌ – ವಿಶ್ವಕಪ್‌ ಆಡುವ ಸಂಜು ಸ್ಯಾಮ್ಸನ್‌ ಕನಸು ಭಗ್ನ?

    ಬ್ಯಾಕಪ್‌ ಪಟ್ಟಿ ಸೇರಿದ ಟೀಂ ಇಂಡಿಯಾ ಸ್ಟಾರ್‌ – ವಿಶ್ವಕಪ್‌ ಆಡುವ ಸಂಜು ಸ್ಯಾಮ್ಸನ್‌ ಕನಸು ಭಗ್ನ?

    ಮುಂಬೈ: ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ (28) (Sanju Samson), ಮುಂಬರುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಪರ ಆಡಲು ಕಂಡಿದ್ದ ಕನಸು ಬಹುತೇಕ ಭಗ್ನವಾದಂತೆ ಕಾಣ್ತಿದೆ.

    ಇದೇ ಆಗಸ್ಟ್‌ 30ರಿಂದ ಶುರುವಾಗಲಿರುವ ಏಕದಿನ ಏಷ್ಯಾ ಕಪ್‌ (Asia Cup 2023) ಕ್ರಿಕೆಟ್‌ ಟೂರ್ನಿ ಸಲುವಾಗಿ ಆಗಸ್ಟ್‌ 21ರಂದು (ಸೋಮವಾರ) ಟೀಂ ಇಂಡಿಯಾ ಆಯ್ಕೆ ಸಮಿತಿ, 17 ಆಟಗಾರರ ಬಲಿಷ್ಠ ತಂಡವನ್ನ ಪ್ರಕಟ ಮಾಡಿದೆ. ಆದ್ರೆ ಸಂಜು ಸ್ಯಾಮ್ಸನ್‌ ಇದರಲ್ಲಿ ಸ್ಥಾನ ಪಡೆಯದೇ ಬ್ಯಾಕಪ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ರಿಂಕು, ಸಂಜು ಸ್ಫೋಟಕ ಬ್ಯಾಟಿಂಗ್‌ – 33 ರನ್‌ಗಳ ಜಯ, ಸರಣಿ ಗೆದ್ದ ಟೀಂ ಇಂಡಿಯಾ

    ತಂಡ ಪ್ರಕಟ ಮಾಡಿದ ಬೆನ್ನಲ್ಲೇ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌, ಮುಂಬರುವ ಐಸಿಸಿ ಒಡಿಐ ವಿಶ್ವಕಪ್‌ ಟೂರ್ನಿಗೂ ಈ ಆಟಗಾರರ ಸುತ್ತಿನ ತಂಡವನ್ನ ಆಯ್ಕೆ ಮಾಡಲಾಗುತ್ತದೆ ಅಂತ ಹೇಳಿದ್ದಾರೆ. ಹಾಗಾಗಿ ಏಷ್ಯಾಕಪ್‌ಗೆ ಏಕೈಕ ಬ್ಯಾಕಪ್‌ ಆಟಗಾರನಾಗಿ ಆಯ್ಕೆ ಆಗಿರುವ ಸಂಜು ಸ್ಯಾಮ್ಸನ್‌ಗೆ, ಒಡಿಐ ವಿಶ್ವಕಪ್‌ಗೆ ತೆಗೆದುಕೊಳ್ಳುವ 15 ಆಟಗಾರರ ಪಟ್ಟಿಯಲ್ಲಿ ಸ್ಥಾನ ಸಿಗುವುದು ಬಹುತೇಕ ಕಷ್ಟವಾಗಿದೆ.

    ಇಬ್ಬರು ಕನ್ನಡಿಗರಿಗೆ ಸ್ಥಾನ:
    ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ ನೀಡಲಾಗಿದೆ. ಕೆ.ಎಲ್‌ ರಾಹುಲ್‌ ಜೊತೆಗೆ ಯುವ ವೇಗಿ ಪ್ರಸಿದ್ಧ್‌ ಕೃಷ್ಣ ಅವರಿಗೂ ಸ್ಥಾನ ಕಲ್ಪಿಸಲಾಗಿದೆ. ಗಾಯದಿಂದ ಸಂಪೂರ್ಣ ಫಿಟ್‌ ಆಗಿರುವ ಪ್ರಸಿಧ್‌ ಪ್ರಸ್ತುತ ಐರ್ಲೆಂಡ್‌ ವಿರುದ್ಧ 3 ಪಂದ್ಯಗಳ ಟಿ20 ಸರಣಿ ಆಡುತ್ತಿದ್ದು, ಉತ್ತಮ ಪ್ರದರ್ಶನ ತೋರಿದ್ದಾರೆ. ಇದರ ಫಲವಾಗಿ ಅವರನ್ನ ಏಷ್ಯಾ ಕಪ್‌ ಟೂರ್ನಿಗೆ ಆಯ್ಕೆ ಮಾಡಲಾಗಿದೆ.

    ಸೂರ್ಯನ ಮೇಲೆ ಭರವಸೆ:
    ಕೆ.ಎಲ್‌ ರಾಹುಲ್ ಮತ್ತು ಶ್ರೇಯಸ್‌ ಅಯ್ಯರ್‌ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿರುವ ಕಾರಣ ಸಂಜು ಸ್ಯಾಮ್ಸನ್‌ಗೆ ಅವಕಾಶ ಕೈತಪ್ಪಿದೆ. ಜೊತೆಗೆ ಸುರ್ಯಕುಮಾರ್‌ ಯಾದವ್‌ ಮೇಲೆ ಸೆಲೆಕ್ಟರ್ಸ್‌ ಭರವಸೆ ಮುಂದುವರಿಸಿದ್ದು, ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಯಲ್ಲಿ ಅಲ್ಲಿನ ಸ್ಪಿನ್ ಸ್ನೇಹಿ ಪಿಚ್‌ಗಳಲ್ಲಿಯೂ ಅಬ್ಬರಿಸಿದ ಯುವ ಆಟಗಾರ ತಿಲಕ್‌ ವರ್ಮಾಗೆ ಸೆಲೆಕ್ಟರ್ಸ್‌ ಮಣೆಹಾಕಿ ಸ್ಯಾಮ್ಸನ್‌ ಕೈಬಿಟ್ಟಿದ್ದಾರೆ. ಇದನ್ನೂ ಓದಿ: WorldCup 2023: ಬಿಸಿಸಿಐಗೆ ಹೊಸ ತಲೆನೋವು – ವೇಳಾಪಟ್ಟಿ ಬದಲಾವಣೆಗೆ ಹೈದರಾಬಾದ್‌ ಅಧಿಕಾರಿಗಳಿಂದ ಮನವಿ

    ಐಪಿಎಲ್‌ ಟೂರ್ನಿಯಲ್ಲಿ ರಾಜಸ್ಥಾನ್‌ ರಾಯಲ್ಸ್‌ ಕ್ಯಾಪ್ಟನ್‌ ಆಗಿರುವ ಸಂಜು ಸ್ಯಾಮ್ಸನ್‌, ಏಕದಿನ ಕ್ರಿಕೆಟ್‌ನಲ್ಲಿ ಸಿಕ್ಕಿರುವ ಕೆಲವೇ ಅವಕಾಶಗಳಲ್ಲಿ ಮಿಂಚಿ 55ಕ್ಕೂ ಹೆಚ್ಚಿನ ಬ್ಯಾಟಿಂಗ್‌ ಸರಾಸರಿ ಕಾಯ್ದುಕೊಂಡಿದ್ದಾರೆ. ವೆಸ್ಟ್ ಇಂಡೀಸ್‌ ವಿರುದ್ಧದ ಒಡಿಐ ಸರಣಿಯ ಕೊನೇ ಪಂದ್ಯದಲ್ಲಿ ಸಂಜು 40 ಎಸೆತಗಳಲ್ಲಿ 51 ರನ್‌ ಸಿಡಿಸಿದ್ದರು. ಆದರೂ ಒಡಿಐನಲ್ಲಿ ಸತತ ವೈಫಲ್ಯ ಕಂಡಿರುವ ಸೂರ್ಯಕುಮಾರ್‌ ಯಾದವ್‌ ಮತ್ತು ತಿಲಕ್‌ ವರ್ಮಾ ಮೇಲೆ ಸೆಲೆಕ್ಟರ್ಸ್‌ ಭರವಸೆ ಇಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • AsiaCup 2023: ಟೀಂ ಇಂಡಿಯಾದಿಂದ ಸಂಜು ಸ್ಯಾಮ್ಸನ್‌ ಔಟ್‌?

    AsiaCup 2023: ಟೀಂ ಇಂಡಿಯಾದಿಂದ ಸಂಜು ಸ್ಯಾಮ್ಸನ್‌ ಔಟ್‌?

    ಮುಂಬೈ: ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಎಡವಿದ ಟೀಂ ಇಂಡಿಯಾ ಆಟಗಾರ ಸಂಜು ಸ್ಯಾಮ್ಸನ್‌ (Sanju Samson) ಅವರನ್ನ ಏಕದಿನ ಏಷ್ಯಾಕಪ್‌ ಟೂರ್ನಿಗೆ (Asia Cup 2023) ತಂಡದಿಂದ ಕೈಬಿಡಲು ಮುಂದಾಗಿದೆ.

    ಇದೇ ಆಗಸ್ಟ್‌ 30 ರಿಂದ ಸೆಪ್ಟೆಂಬರ್‌ 17ರ ವರೆಗೆ ಏಕದಿನ ಏಷ್ಯಾಕಪ್‌ ಟೂರ್ನಿ ನಡೆಯಲಿದ್ದು, ಈ ಸಲುವಾಗಿ ಬಿಸಿಸಿಐ (BCCI) ಟೀಂ ಇಂಡಿಯಾಕ್ಕೆ ಆಯ್ಕೆ ಕಸರತ್ತು ನಡೆಸಿದೆ. ಈ ಬಾರಿ ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ (Pakistan) ಬಳಿಯೇ ಇದ್ದರೂ ಬಿಸಿಸಿಐ ಪಾಕಿಸ್ತಾನಕ್ಕೆ ಭಾರತ ತಂಡವನ್ನ ಕಳುಹಿಸಲು ನಿರಾಕರಿಸಿದ ನಂತರ ಹೈಬ್ರಿಡ್‌ ಮಾದರಿಯಲ್ಲಿ ನಡೆಸಲು ಏಷ್ಯನ್‌ ಕ್ರಿಕೆಟ್‌ ಸಮಿತಿ ನಿರ್ಧರಿಸಿದೆ. ಆದ್ದರಿಂದ ಪಾಕಿಸ್ತಾನ ಮತ್ತು ಶ್ರೀಲಂಕಾ (SriLanka) ಎರಡೂ ದೇಶಗಳಲ್ಲಿ ಪಂದ್ಯ ನಡೆಯುತ್ತಿದೆ.

    ಸೆಪ್ಟೆಂಬರ್‌ 2ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಎದುರು ಪೈಪೋಟಿ ನಡೆಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಟೂರ್ನಿಯು ಸೆಪ್ಟೆಂಬರ್‌ 17ರಂದು ಕೊಲಂಬೊದಲ್ಲಿ ಅಂತ್ಯಗೊಳ್ಳಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಪಾಕಿಸ್ತಾನ ಮತ್ತು ಭಾರತ ತಂಡಗಳು ಮೂರು ಬಾರಿ ಏಷ್ಯಾಕಪ್‌ ಟೂರ್ನಿಯಲ್ಲಿ ಮುಖಾಮುಖಿಯಾಗಲಿವೆ. ಇದನ್ನೂ ಓದಿ: 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    ಕೊಟ್ಟ ಅವಕಾಶ ಕೈಚೆಲ್ಲಿದ ಸಂಜು:
    2021ರಲ್ಲಿ ಟೀಂ ಇಂಡಿಯಾಕ್ಕೆ (Team India) ಎಂಟ್ರಿ ಕೊಟ್ಟಿದ್ದ ಸಂಜು ಸ್ಯಾಮ್ಸನ್‌ ಕೇವಲ 12 ಇನ್ನಿಂಗ್ಸ್‌ಗಳಲ್ಲಿ ಮಾತ್ರವೇ ಅವಕಾಶ ಪಡೆದುಕೊಂಡಿದ್ದರು. 2022ರಿಂದ ದೀರ್ಘಕಾಲದ ವರೆಗೆ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. 2023ರ ವರ್ಷಾರಂಭದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಅವಕಾಶ ನೀಡಲಾಗಿತ್ತಾದರೂ ಮಂಡಿ ನೋವಿನಿಂದ ಮೊದಲ ಪಂದ್ಯದ ನಂತರ ಹೊರಗುಳಿಯಬೇಕಾಯಿತು. ಆದ್ರೆ 2023ರ ಐಪಿಎಲ್‌ನಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರಿಂದಾಗಿ ಸೂರ್ಯಕುಮಾರ್‌ ಯಾದವ್‌ ಬದಲಿಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು.

    ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಯ 3 ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದ ಸಂಜು ಸ್ಯಾಮ್ಸನ್‌ ಕ್ರಮವಾಗಿ 12, 7 ಮತ್ತು 13 ರನ್‌ಗಳನ್ನ ಮಾತ್ರವೇ ಗಳಿಸಿದರು. ಏಕದಿನ ಕ್ರಿಕೆಟ್‌ ಸರಣಿಯ 2 ಪಂದ್ಯಗಳಲ್ಲಿ ಅವಕಾಶ ಪಡೆದು 9 ಮತ್ತು 51 ರನ್‌ ಕೊಡುಗೆ ಕೊಟ್ಟರು. ಅಂತಿಮ ಒಡಿಐನಲ್ಲಿ ಅರ್ಧಶತಕ ಬಾರಿಸಿದ್ದು ಬಿಟ್ಟರೆ ಉಳಿದ ಅವರ ಬ್ಯಾಟಿಂಗ್‌ ಬಹಳ ನಿರಾಸೆ ಮೂಡಿಸಿತು. ಅಲ್ಲದೇ ವಿಂಡೀಸ್‌ ವಿರುದ್ಧ ನಿರ್ಣಾಯಕ ಪಂದ್ಯದಲ್ಲೂ ರನ್‌ ಗಳಿಸುವಲ್ಲಿ ವಿಫಲರಾದರು. ಹೀಗಾಗಿ ಏಷ್ಯಾ ಕಪ್‌ ಟೂರ್ನಿಗೆ ಆಯ್ಕೆ ಮಾಡಲಾಗುವ 15 ಆಟಗಾರರ ತಂಡದಲ್ಲಿ ಸ್ಥಾನ ಪಡೆಯಲು ಸಂಜು ವಿಫಲರಾಗಿದ್ದಾರೆ ಎಂದು ವರದಿಯಾಗಿದೆ.

    ಸದ್ಯ ಏಷ್ಯಾ ಕಪ್‌ ಟೂರ್ನಿಯನ್ನು ಗಮನಿಸಿ ಮಾತ್ರ ಆಯ್ಕೆ ಸಮಿತಿ ತಂಡವನ್ನು ರಚನೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಸಮಯ ತೆಗೆದುಕೊಂಡು ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ತಂಡ ರಚಣೆ ಮಾಡಲಾಗುವುದು ಎಂದು ಬೆಳವಣಿಗೆಗೆ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್‌ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ

    ಕಿಶನ್‌ ಪೈಪೋಟಿಯೇ ಮುಳುವಾಯ್ತಾ?

    ಏಕದಿನ ಕ್ರಿಕೆಟ್‌ನಲ್ಲಿ ಈಗಾಗಲೇ ದ್ವಿಶತಕ ಬಾರಿಸಿ ದಿಗ್ಗಜರೊಂದಿಗೆ ವಿಶ್ವ ದಾಖಲೆಯ ಪಟ್ಟಿ ಸೇರಿರುವ ಇಶಾನ್‌ ಕಿಶನ್‌, ವೆಸ್ಟ್‌ ಇಂಡೀಸ್‌ ವಿರುದ್ಧದ ಒಡಿಐ ಸರಣಿಯ ಮೂರೂ ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದರು. ಹೀಗಾಗಿ ಏಷ್ಯಾ ಕಪ್‌ಗೆ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಆಗಿ ಇಶಾನ್‌ ಕಿಶನ್‌ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಸಂಜು ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ ಆಡಿರುವ 13 ಪಂದ್ಯಗಳಲ್ಲಿ 55.71ರ ಗಮನಾರ್ಹ ಸರಾಸರಿ ಹೊಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • IND vs WI T20: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಹಾರ್ದಿಕ್‌ ಪಡೆ – ವಿಂಡೀಸ್‌ ಗೆಲುವಿಗೆ ಟರ್ನಿಂಗ್‌ ಪಾಯಿಂಟ್‌ ಸಿಕ್ಕಿದ್ದೆಲ್ಲಿ?

    IND vs WI T20: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಹಾರ್ದಿಕ್‌ ಪಡೆ – ವಿಂಡೀಸ್‌ ಗೆಲುವಿಗೆ ಟರ್ನಿಂಗ್‌ ಪಾಯಿಂಟ್‌ ಸಿಕ್ಕಿದ್ದೆಲ್ಲಿ?

    ಟ್ರಿನಿಡಾಡ್‌: ವೆಸ್ಟ್‌ ಇಂಡೀಸ್‌ (West Indies) ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಭಾರತ (Team India) ವಿರೋಚಿತ ಸೋಲನುಭವಿಸಿದೆ. ಬೌಲಿಂಗ್‌ನಲ್ಲಿ ಹಿಡಿತ ಸಾಧಿಸಿದ್ರೂ, ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 4 ರನ್‌ಗಳ ವಿರೋಚಿತ ಸೋಲನುಭವಿಸಿದೆ.

    ಸುಲಭ ಗೆಲುವಿನ ಅತ್ಯುತ್ಸಾಹದಲ್ಲಿದ್ದ ಟೀಂ ಇಂಡಿಯಾಕ್ಕೆ (Team India) ವಿರೋಚಿತ ಸೋಲು ಭಾರೀ ನಿರಾಸೆ ಮೂಡಿಸಿದೆ. ಈ ನಡುವೆ ವಿಂಡೀಸ್‌ ತಂಡದ ಗೆಲುವಿಗೆ ಟರ್ನಿಂಗ್‌ ಪಾಯಿಂಟ್‌ ಸಿಕ್ಕಿದ್ದೆಲ್ಲಿ ಅಂತಾ ವೇಗಿ ಜೇಸನ್‌ ಹೋಲ್ಡರ್‌ ತಿಳಿಸಿದ್ದಾರೆ. ಇದನ್ನೂ ಓದಿ: IND vs WI: ಹ್ಯಾಟ್ರಿಕ್‌ ಅರ್ಧ ಶತಕ ಸಿಡಿಸಿ ಮಹಿ ದಾಖಲೆ ಸರಿಗಟ್ಟಿದ ಇಶಾನ್‌ ಕಿಶನ್‌

    ಮೊದಲ 10 ಓವರ್‌ಗಳ ನಂತರ ಪಂದ್ಯ ರೋಚಕ ಹಂತಕ್ಕೆ ತಲುಪಿತ್ತು. ನಮ್ಮ ತಂಡ ಫೀಲ್ಡಿಂಗ್‌ ಬಿಗಿಗೊಳಿಸಿತ್ತು. ಆದ್ರೆ 16ನೇ ಓವರ್‌ನಲ್ಲಿ ಬೌಲಿಂಗ್‌ಗೆ ಇಳಿದಾಗ ಮೊದಲ ಎಸೆತದಲ್ಲೇ ಹಾರ್ದಿಕ್‌ ಪಾಂಡ್ಯ (Hardik Pandya) ಬೌಲ್ಡ್‌ ಆದರು. ಮರು ಎಸೆತದಲ್ಲಿ ಅಕ್ಷರ್‌ ಪಟೇಲ್‌ (Axar Patel) ಬೇಡದ ರನ್‌ ಕದಿಯಲು ಯತ್ನಿಸಿ ಸಂಜು ಸ್ಯಾಮ್ಸನ್‌ರನ್ನ (Sanju Samson) ರನೌಟ್‌ ಆಗುವಂತೆ ಮಾಡಿದ್ರು. ಇದು ಟೀಂ ಇಂಡಿಯಾ ಗೆಲುವಿನ ಮೇಲೆ ಪರಿಣಾಮ ಬೀರಿತ್ತು. ಆ ನಂತರದಲ್ಲಿ ಅಕ್ಷರ್‌ ಪಟೇಲ್‌ ಸಹ ಸಿಕ್ಸರ್‌ ಸಿಡಿಸುವ ಬರದಲ್ಲಿ ಕ್ಯಾಚ್‌ ನೀಡಿ ಪೆವಿಲಿಯನ್‌ ಸೇರಿಕೊಂಡರು. ಇದು ವಿಂಡೀಸ್‌ ರೋಚಕ ಗೆಲುವಿಗೆ ಕಾರಣವಾಯ್ತು ಅಂತಾ ಜೇಸನ್‌ ಹೋಲ್ಡರ್‌ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಹೇಳಿದ್ದಾರೆ.

    ನಿವೃತ್ತಿ ಸುಳಿವು ನೀಡಿದ ಜೇಸನ್‌ ಹೋಲ್ಡರ್‌: ಮುಂದುವರಿದು ಮಾತನಾಡುತ್ತಾ, ಜೇಸನ್‌ ಹೋಲ್ಡರ್‌ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವ ಸುಳಿವು ನೀಡಿದರು. ನಾನು ಸ್ವಲ್ಪ ವಿರಾಮ ಬಯಸುತ್ತಿದ್ದೇನೆ ಅಂತಾ ಹೇಳಿದ್ದಾರೆ.  ಇದನ್ನೂ ಓದಿ: ಹೊಸ ಕೋಚ್ ನೇಮಿಸಿದ RCB – ಮುಂದಿನ ಸಲ ಕಪ್ ನಮ್ದೆ ಅಂತಿದ್ದಾರೆ ಫ್ಯಾನ್ಸ್

    ಗುರುವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್‌ ಇಂಡೀಸ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 149 ರನ್‌ ಕಲೆಹಾಕಿತ್ತು. ಈ ರನ್‌ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 145 ರನ್‌ ಗಳಿಸಲಷ್ಟೇ ಸಾಧ್ಯವಾಗಿ 4 ರನ್‌ಗಳ ವಿರೋಚಿತ ಸೋಲನುಭವಿಸಿತು. ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಭಾರತ 2ನೇ ಟಿ20 ಪಂದ್ಯವನ್ನಾಡಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೂಜಾರ ಔಟ್‌, ಯಶಸ್ವಿ ಇನ್‌ – ವಿಂಡೀಸ್‌ ಸರಣಿಗೆ ಭಾರತ ಟೆಸ್ಟ್‌, ಏಕದಿನ ತಂಡ ಪ್ರಕಟ

    ಪೂಜಾರ ಔಟ್‌, ಯಶಸ್ವಿ ಇನ್‌ – ವಿಂಡೀಸ್‌ ಸರಣಿಗೆ ಭಾರತ ಟೆಸ್ಟ್‌, ಏಕದಿನ ತಂಡ ಪ್ರಕಟ

    – ಏಕದಿನ ಕ್ರಿಕೆಟ್‌ ತಂಡದಲ್ಲಿ ಸಂಜು ಸ್ಯಾಮ್ಸನ್‌ಗೆ ಚಾನ್ಸ್‌

    ಮುಂಬೈ: ಜುಲೈನಲ್ಲಿ ವೆಸ್ಟ್ ಇಂಡೀಸ್‌ (West Indies) ವಿರುದ್ಧ ನಡೆಯಲಿರುವ 2 ಪಂದ್ಯಗಳ ಟೆಸ್ಟ್‌ ಸರಣಿಗೆ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ತಲಾ 16 ಸದಸ್ಯರ ಭಾರತ ತಂಡವನ್ನ (Team India) ಬಿಸಿಸಿಐ (BCCI) ಪ್ರಕಟಿಸಿದೆ.

    ವಿಂಡೀಸ್‌ ವಿರುದ್ಧ ಟೆಸ್ಟ್‌ ಕ್ರಿಕೆಟ್‌ನಲ್ಲಿ ಐಪಿಎಲ್‌ನಲ್ಲಿ (IPL 2023) ರಾಜಸ್ಥಾನ್‌ ರಾಯಲ್ಸ್‌ ತಂಡದಲ್ಲಿ ಮಿಂಚಿದ ಯಶಸ್ವಿ ಜೈಸ್ವಾಲ್‌ (Yashasvi Jaiswal) ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ ಆಸ್ಟ್ರೇಲಿಯಾ (Australia) ವಿರುದ್ಧದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಸರಣಿಯಿಂದಲೂ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಚೇತೇಶ್ವರ್‌ ಪೂಜಾರ ಸ್ಥಾನ ಕಳೆದುಕೊಂಡಿದ್ದಾರೆ. ಒಂದು ಕಾಲದಲ್ಲಿ ಪಾನಿಪುರಿ ಮಾರಾಟ ಮಾಡುತ್ತಿದ್ದ ಹುಡುಗ ಕೊನೆಗೂ ಸತತ ಶ್ರಮದಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ʻಯಶಸ್ವಿʼಯಾಗಿದ್ದಾರೆ.

    ಇನ್ನೂ ದೀರ್ಘಕಾಲದಿಂದ ಟೀಂ ಇಂಡಿಯಾ ಸೇರಲು ವಿಫಲವಾಗಿದ್ದ ಸಂಜು ಸ್ಯಾಮ್ಸನ್‌ (Sanju Samson) ವಿಂಡೀಸ್‌ ವಿರುದ್ಧ ಏಕದಿನ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಯುವ ವೇಗಿ ಆಕಾಶ್‌ ದೀಪ್‌ ಅವರಿಗೂ ಟೆಸ್ಟ್ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.

    2023ರ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಗೇಮ್‌ ಚೇಂಜರ್‌ ಪಾತ್ರ ವಹಿಸಿದ ಹಾಗೂ 2ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಅರ್ಧಶತಕ ಸೇರಿದಂತೆ ಭಾರತದ ಪರ ಅತಿ ಹೆಚ್ಚು ರನ್‌ ಗಳಿಸಿದ ಅಜಿಂಕ್ಯ ರಹಾನೆ ಉಪನಾಯಕನ ಪಟ್ಟ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: T20 ಕ್ರಿಕೆಟ್‌ನಲ್ಲಿ ಸಿಕ್ಸರ್‌ ಬ್ಲಾಸ್ಟ್‌ – ಒಂದೇ ಓವರ್‌ನಲ್ಲಿ 6,6,6,6,6 ಚಚ್ಚಿದ RCB ಸ್ಟಾರ್‌

    ರಣಜಿ ಟ್ರೋಫಿ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ರನ್‌ ಹೊಳೆ ಹರಿಸಿರುವ ಐಪಿಎಲ್‌ ಹೀರೋ ಯಶಸ್ವಿ ಜೈಸ್ವಾಲ್‌, ಇತ್ತೀಚೆಗೆ ಮುಕ್ತಾಯವಾಗಿದ್ದ 2023ರ ಐಪಿಎಲ್‌ ಟೂರ್ನಿಯಲ್ಲಿಯೂ ರಾಜಸ್ಥಾನ್‌ ರಾಯಲ್ಸ್ ಪರ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ತಂಡದಲ್ಲಿ ಚೇತೇಶ್ವರ್ ಪೂಜಾರ ಅವರ ಸ್ಥಾನಕ್ಕೆ ಜೈಸ್ವಾಲ್‌ ಅವರನ್ನು ಆಯ್ಕೆ ಮಾಡಲಾಗಿದೆ. ಆ ಮೂಲಕ 21ರ ಪ್ರಾಯದ ಯುವ ಆಟಗಾರನಿಗೆ ದೀರ್ಘಾವಧಿ ಅವಕಾಶ ನೀಡಲು ಬಿಸಿಸಿಐ ತೀರ್ಮಾನಿಸಿದೆ.

    ಸಿಎಸ್‌ಕೆ ತಂಡದಲ್ಲಿ ಐಪಿಎಲ್‌ ಹೀರೋ ಆಗಿದ್ದ ಋತುರಾಜ್‌ ಗಾಯಕ್ವಾಡ್‌, ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ಗಳಾಗಿ ಕೆ.ಎಸ್‌ ಭರತ್‌ ಹಾಗೂ ಇಶಾನ್‌ ಕಿಶನ್‌ ಸ್ಥಾನ ಪಡೆದುಕೊಂಡಿದ್ದಾರೆ. ಜೊತೆಗೆ ರವೀಂದ್ರ ಜಡೇಜಾ, ಆರ್‌. ಅಶ್ವಿನ್‌ ಹಾಗೂ ಅಕ್ಷರ್‌ ಪಟೇಲ್‌ ಅವರು ಸ್ಪಿನ್‌ ಆಲ್‌ರೌಂಡರ್‌ಗಳಾಗಿ ಸ್ಥಾನ ಉಳಿಸಿಕೊಂಡಿದ್ದಾರೆ. ಯುವ ವೇಗಿ ಮುಖೇಶ್‌ ಕುಮಾರ್‌ ಅವರು ಟೆಸ್ಟ್‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ವೇಗದ ಬೌಲಿಂಗ್‌ನಲ್ಲಿ ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್‌, ಜಯದೇವ್‌ ಉನಾದ್ಕಟ್‌ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ. ಶಾರ್ದುಲ್‌ ಠಾಕೂರ್‌ ವೇಗದ ಬೌಲಿಂಗ್‌ ಆಲ್‌ರೌಂಡರ್‌ ಆಗಿ ತಂಡದಲ್ಲಿ ಉಳಿದಿದ್ದಾರೆ. ಏಕದಿನ ಸರಣಿಯಲ್ಲಿ ಹಾರ್ದಿಕ್‌ ಪಾಂಡ್ಯ ಉಪನಾಯಕನಾಗಿ ಸ್ಥಾನ ಉಳಿಸಿಕೊಂಡಿದ್ದಾರೆ.

    ಭಾರತ ಟೆಸ್ಟ್‌ ತಂಡ:
    ರೋಹಿತ್ ಶರ್ಮಾ (ನಾಯಕ) (Rohit Sharma), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್‌ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ. ಇದನ್ನೂ ಓದಿ:  ICC ಟೂರ್ನಿಗಳಲ್ಲಿ ಟೀಂ ಇಂಡಿಯಾ ಫೇಲ್ ಆಗ್ತಿರೋದೇಕೆ? – ಕಾರಣ ತಿಳಿಸಿದ ChatGPT

    ಭಾರತ ಏಕದಿನ ತಂಡ:
    ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್‌, ಕುಲ್ದೀಪ್‌ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.