Tag: Sankranti

  • ಮೈಸೂರಿನಲ್ಲಿ ಗೋಪೂಜೆ ಮಾಡಿ ಸಂಕ್ರಾಂತಿ ಆಚರಿಸಿದ ವಿದೇಶಿಗರು

    ಮೈಸೂರಿನಲ್ಲಿ ಗೋಪೂಜೆ ಮಾಡಿ ಸಂಕ್ರಾಂತಿ ಆಚರಿಸಿದ ವಿದೇಶಿಗರು

    ಮೈಸೂರು: ಇಂದು ರಾಜ್ಯದೆಲ್ಲೆಡೆ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದರಲ್ಲೂ ಸಾಂಸ್ಕೃತಿಕ ನಗರಿಯಲ್ಲಿ ನಡೆದ ಮಕರ ಸಂಕ್ರಾಂತಿ ಸಂಭ್ರಮದಲ್ಲಿ ವಿದೇಶಿಗರು ಭಾಗಿಯಾಗಿದ್ದು ವಿಶೇಷವಾಗಿತ್ತು.

    ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಗೋಪೂಜೆ ಮಾಡುವ ಮೂಲಕ ಸಂಕ್ರಾಂತಿ ಆಚರಿಸಲಾಯಿತು. ವಿದೇಶಿಗರು ಭಾರತೀಯ ಸಂಪ್ರದಾಯದಂತೆ ಗೋಪೂಜೆ ಮಾಡಿ ಗೋಮಾತೆ ನಮಿಸಿದ್ದು ವಿಶೇಷವಾಗಿತ್ತು. ಇದೇ ವೇಳೆ ಗೋವುಗಳಿಗೆ ಪೂಜೆ ಮಾಡಿ ಫಲತಾಂಬುಲ ಕೂಡ ನೀಡಿದರು. ಜೊತೆಗೆ ಭತ್ತದ ರಾಶಿ, ನೇಗಿಲು, ಎತ್ತಿನ ಗಾಡಿ ಪರಿಕರಗಳಿಗೂ ಪೂಜೆ ಸಲ್ಲಿಸಿದರು.

    ಭಾರತೀಯ ಗೋಪರಿವಾರ ಸಂಘ ಹಾಗೂ ಹನುಮ ಜಯಂತೋತ್ಸವ ಸಮಿತಿಯಿಂದ ಈ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿದೇಶಿಗರು ಸಂತಸ ವ್ಯಕ್ತಪಡಿಸಿದರು.

  • ಬೆಂಗ್ಳೂರಲ್ಲಿ ಅಮ್ಮಣ್ಣಿಯರ ಸಂಕ್ರಾಂತಿ ಸಂಭ್ರಮ

    ಬೆಂಗ್ಳೂರಲ್ಲಿ ಅಮ್ಮಣ್ಣಿಯರ ಸಂಕ್ರಾಂತಿ ಸಂಭ್ರಮ

    ಬೆಂಗಳೂರು: ಇಂದು ಅಮ್ಮಣ್ಣಿ ಕಾಲೇಜಿನಲ್ಲಿ ಸಂಕ್ರಾಂತಿ ಜಾನಪದ ಜಾತ್ರೆ ಆಯೋಜಿಸಲಾಗಿದ್ದು, ಹಳ್ಳಿ ಸೊಗಡು ಕಾಲೇಜಿನಲ್ಲಿ ಅಂದವನ್ನು ಹೆಚ್ಚಿಸಿತ್ತು.

    ತೆಂಗಿನ ಗರಿಗಳಿಂದ ಹೆಣೆಯಲಾದ ಚಪ್ಪರದಲ್ಲಿ ಜನಪದ ಮೇಳಕ್ಕೆ ಸ್ವಾಗತ ಎಂದು ಬರೆದಿದ್ದು, ಬಣ್ಣ ಬಣ್ಣದ ಮಡಿಕೆಗಳು, ಕಬ್ಬು, ಸಂಕ್ರಾಂತಿ ಹಬ್ಬದ ಮೆರಗು ಹೆಚ್ಚಿಸಿದವು. ಕಾಲೇಜು ಆವರಣವೆಲ್ಲವೂ ಜಾನಪದ ಲೋಕದಂತೆ ಕಂಡು ಬಂದಿದ್ದು, ಕೋಲೆ ಬಸವ, ಅಲಂಕಾರಿಕ ಎತ್ತಿನ ಗಾಡಿ, ಒಣ ಹುಲ್ಲಿನಿಂದ ಜಾನಪದ ಸಂಭ್ರಮ ಹೆಚ್ಚಿಸುತ್ತಿದ್ದ ಸ್ಟೇಜ್ ವಿದ್ಯಾರ್ಥಿಗಳನ್ನ ಆಕರ್ಷಿಸಿತು. ಅಲ್ಲದೆ ಡೊಳ್ಳು ಕುಣಿತದ ಸದ್ದಿಗೆ ಹುಡುಗಿಯರು ಹುಚ್ಚೆದ್ದು ಕುಣಿದರು.

    ಈ ಹಬ್ಬದ ಸಂಭ್ರಮದ ನಡುವೆ ಕಾಲೇಜಿನ ವಿದ್ಯಾರ್ಥಿನಿಯರು ಸೀರೆ, ಧಾವಣಿಯುಟ್ಟು ಸಂಪ್ರದಾಯಿಕ ಲುಕ್‍ನಲ್ಲಿ ಫುಲ್ ಮಿಂಚಿದರು. ಸಂಪ್ರದಾಯಿಕ ಲುಕ್‍ನಲ್ಲಿ ಕಾಲೇಜ್ ಕ್ಯಾಂಪಸ್‍ ನಲ್ಲಿ ಕ್ಯಾಟ್ ವಾಕ್ ಮಾಡಿ ಖುಷಿಪಟ್ಟರು. ಸ್ಥಳದಲ್ಲೇ ಹೋಳಿಗೆ, ರೊಟ್ಟಿ ಊಟ ಕೂಡ ತಯಾರಿಸಲಾಗಿತ್ತು. ಅದನ್ನ ವಿದ್ಯಾರ್ಥಿನಿಯರು ಬಾಯಿ ಚಪ್ಪರಿಸಿಕೊಂಡು ತಿಂದರು. ದಿನಾ ಅದೇ ಪಾಠ, ಅದೇ ಕ್ಲಾಸ್ ಅಂತಾ ಬೋರಾಗಿದ್ದ ವಿದ್ಯಾರ್ಥಿನಿಯರು ಸಂಭ್ರಮದಿಂದ ಜಾತ್ರೆಯಲ್ಲಿ ಭಾಗಿಯಾದರು.

  • ಖಾರ ಪೊಂಗಲ್ ಮಾಡುವ ಸರಳ ವಿಧಾನ

    ಖಾರ ಪೊಂಗಲ್ ಮಾಡುವ ಸರಳ ವಿಧಾನ

    ಹೊಸ ವರ್ಷದ ಮೊದಲ ಹಬ್ಬವನ್ನು ಜನರು ಸಂತೋಷದಿಂದ ಬರ ಮಾಡಿಕೊಳ್ಳುತ್ತಿದ್ದು, ಹಬ್ಬಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ. ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಅದಕ್ಕಾಗಿ ಖಾರ ಪೊಂಗಲ್ ಮಾಡುವ ಸುಲಭ ವಿಧಾನ ಇಲ್ಲಿದೆ… ಎಳ್ಳು ಬೆಲ್ಲದ ಜೊತೆಗೆ ಒಂದಿಷ್ಟು ಖಾರ ಪೊಂಗಲ್ ತಯಾರಿಸಿ ಹಬ್ಬವನ್ನು ಆಚರಿಸಿ.

    ಬೇಕಾಗುವ ಸಾಮಗ್ರಿಗಳು:
    1. ಹೆಸರುಬೇಳೆ- 1 ಕಪ್
    2. ಅಕ್ಕಿ- 1 ಕಪ್
    3. ಜೀರಿಗೆ – ಅರ್ಧ ಚಮಚ
    4 ಕಾಳುಮೆಣಸು – ಅರ್ಧ ಚಮಚ
    5. ಕರಿಬೇವಿನಸೊಪ್ಪು – ಸ್ವಲ್ಪ
    6. ಹಸಿಮೆಣಸಿನಕಾಯಿ – 2 ರಿಂದ 3
    7 ತುಪ್ಪ – 1 ಚಮಚ
    8. ಅರಿಶಿನ- ಒಂದು ಚಿಟಿಕೆ
    9. ಉಪ್ಪು – ರುಚಿಗೆ ತಕ್ಕಷ್ಟು
    10 ಗೋಡಂಬಿ – 10

    ಮಾಡುವ ವಿಧಾನ:
    * ಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು ಹಾಕಿ ಅದು ಕೆಂಪಾಗುವ ತನಕ ಕಡಿಮೆ ಉರಿಯಲ್ಲಿ ಹುರಿಯಿರಿ.
    * ಬಳಿಕ ಕುಕ್ಕರ್ ನಲ್ಲಿ ತೊಳೆದ ಅಕ್ಕಿ ಮತ್ತು ಹುರಿದ ಹೆಸರುಬೇಳೆ ಹಾಕಿ 4 ಕಪ್ ನೀರು ಹಾಕಿ ಒಂದು ವಿಷಲ್ ಬರುವ ತನಕ ಬೇಯಿಸಿ.
    * ಒಂದು ಬಾಣಲೆಯಲ್ಲಿ ಸ್ವಲ್ಪ ತುಪ್ಪ ಬಿಸಿ ಮಾಡಿ ಅದಕ್ಕೆ ಕರಿಬೇವಿನಸೊಪ್ಪು, ಜೀರಿಗೆ, ಕಾಳುಮೆಣಸು, ಅರಿಶಿನ, ಗೋಡಂಬಿ ಮತ್ತು ಕತ್ತರಿಸಿದ ಹಸಿಮೆಣಸಿನಕಾಯಿ ಹಾಕಿ ಬಾಡಿಸಿ.
    * ಇದನ್ನು ಬೇಯಿಸಿದ ಅಕ್ಕಿ ಮತ್ತು ಹೆಸರುಬೇಳೆಗೆ ಸೇರಿಸಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕಲಸಿ 5 ನಿಮಿಷ ಬೇಯಲು ಬಿಡಿ.
    * ಕೊನೆಗೆ ಒಂದು ಚಮಚ ತುಪ್ಪ ಸೇರಿಸಿ ಒಲೆಯಿಂದ ಕೆಳಗಿಳಿಸಿದರೆ ಖಾರ ಪೊಂಗಲ್ ಸವಿಯಲು ಸಿದ್ಧ.

    ಇದನ್ನೂ ಓದಿ: ಸಂಕ್ರಾಂತಿಗೆ ಸಿಹಿ ಪೊಂಗಲ್ ಮಾಡುವ ಸರಳ ವಿಧಾನ

    ಇದನ್ನೂ ಓದಿ: ಸಂಕ್ರಾಂತಿ ಸ್ಪೆಷಲ್ – ಎಳ್ಳು, ಬೆಲ್ಲ ಮಾಡುವ ವಿಧಾನ

    ಇದನ್ನೂ ಓದಿ: ಸಂಕ್ರಾಂತಿ ಯಾಕೆ ಮಾಡ್ತಾರೆ? ಈ ದಿನ ಎಳ್ಳಿಗೆ ಮಹತ್ವ ಯಾಕೆ?

    ಇದನ್ನೂ ಓದಿ: ಮಕರ ಸಂಕ್ರಾಂತಿಗೆ ಗಾಳಿಪಟ ಹಾರಿಸೋದೇಕೆ? ವಿಶೇಷತೆ ಏನು?

    ಇದನ್ನೂ ಓದಿ:  ಸಂಕ್ರಾಂತಿಗೆ ಚಟಾಪಟ್ ಅಂತಾ ಮಾಡಿ ಸಕ್ಕರೆ ಅಚ್ಚು

    ಇದನ್ನೂ ಓದಿ:  ಸಂಕ್ರಾಂತಿಗೆ ನಿಮ್ಮ ಮನೆಯಲ್ಲಿರಲಿ ಅವಲಕ್ಕಿ ಸಿಹಿ ಪೊಂಗಲ್

  • ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಸಂಭ್ರಮ

    ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಸಂಭ್ರಮ

    ಬೆಂಗಳೂರು : ಸುಗ್ಗಿ ಹಬ್ಬ ಸಂಕ್ರಾಂತಿಗೆ ಕೌಂಟ್ ಡೌನ್ ಸ್ಟಾರ್ಟ್ ಆಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಂಕ್ರಾಂತಿಯ ಸಂಭ್ರಮ ಈಗಾಗಲೇ ಆರಂಭಗೊಂಡಿದೆ. ನಗರದ ನಾಗಶೆಟ್ಟಿಹಳ್ಳಿಯ ರಾಧಾಕೃಷ್ಣ ಪಬ್ಲಿಕ್ ಶಾಲೆಯಲ್ಲಿ ಇವತ್ತು ಸಂಕ್ರಾಂತಿಯನ್ನ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಹಬ್ಬಕ್ಕೆ ಮುಖ್ಯ ಅತಿಥಿಯಾಗಿ ಗಟ್ಟಿಮೇಳ ಖ್ಯಾತಿಯ ನಟ ರಕ್ಷ್ ಆಗಮಿಸಿದ್ದರು.

    ವಿದ್ಯಾರ್ಥಿಗಳೆಲ್ಲಾ ಸೇರಿ ಶಾಲೆಯಲ್ಲಿ ಹಳ್ಳಿ ಸೊಗಡನ್ನ ನಿರ್ಮಿಸಿದ್ದರು. ಕಬ್ಬಿನ ಚಪ್ಪರವನ್ನು ಹಾಕಿ, ಧಾನ್ಯಗಳ ರಾಶಿಗೆ ಪೂಜಿಸಿದರು. ಜೊತೆಗೆ ಪುಟ್ಟ ಪುಟ್ಟ ಮಕ್ಕಳು, ಸೊಪ್ಪು ತರಕಾರಿಗಳ ವ್ಯಾಪಾರ ಮಾಡಿ ಸಂತೆ ನಿರ್ಮಿಸಿದ್ದರು. ಶಾಲೆಯ ಆವರಣದೊಳಗೆ ಗೋಪೂಜೆಯನ್ನು ಮಾಡಿ, ಬಣ್ಣ ಬಣ್ಣದ ರಂಗೋಲಿಗಳನ್ನು ಹಾಕಿ, ಗಾಳಿಪಟವನ್ನು ಸಾಮೂಹಿಕವಾಗಿ ಹಾರಿಸಿದರು. ವಿಶೇಷವಾಗಿ ಸಾಮೂಹಿಕವಾಗಿ ಪೊಂಗಲ್ ತಯಾರಿಸಲಾಯಿತು.

    ಮಕ್ಕಳು ಪೋಷಕರು, ಶಿಕ್ಷಕರು ಎಲ್ಲರೂ ಬಣ್ಣಬಣ್ಣದ ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದರು. ಒಟ್ಟಿನಲ್ಲಿ ಈ ರೀತಿಯ ಹಬ್ಬದ ಆಚರಣೆಯಿಂದ ವಿದ್ಯಾರ್ಥಿಗಳಿಗೆ ನಮ್ಮ ಸಂಪ್ರದಾಯ, ಸಂಸ್ಕೃತಿಯನನ್ನು ಪರಿಚಯಿಸಿತ್ತು.

  • ಕಿಚ್ಚು ಹಾಯಿಸುವಾಗ ದುರ್ಘಟನೆ – ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    ಕಿಚ್ಚು ಹಾಯಿಸುವಾಗ ದುರ್ಘಟನೆ – ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    ಮೈಸೂರು: ಸಂಕ್ರಾಂತಿ ಹಬ್ಬಕ್ಕೆ ದನಗಳಿಗೆ ಕಿಚ್ಚು ಹಾಯಿಸುವಾಗ ನಾಲ್ವರು ಗಾಯಗೊಂಡಿರುವ ದುರ್ಘಟನೆ ಜಿಲ್ಲೆಯ ಹೊರವಲಯದ ಸಿದ್ದಲಿಂಗಪುರದಲ್ಲಿ ನಡೆದಿದೆ.

    ಸಿದ್ದಲಿಂಗಪುರದ ನಿವಾಸಿಗಳಾದ ಪುರುಷೋತ್ತಮ್, ಸಂಜು, ಜೀವನ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುರುಷೋತ್ತಮ್(24) ಗಂಭೀರ ಗಾಯಗೊಂಡಿದ್ದು, ಜಿಲ್ಲೆಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಂಕ್ರಾಂತಿ ಹಬ್ಬದಲ್ಲಿ ಎತ್ತು, ದನಗಳಿಗೆ ಸಿಂಗರಿಸಿ ಕಿಚ್ಚು ಹಾಯಿಸಲಾಗುತ್ತದೆ. ಹೀಗೆ ಹಬ್ಬದ ಸಂಭ್ರಮದಲ್ಲಿ ಮೈಸೂರು-ಬೆಂಗಳೂರು ರಸ್ತೆಯಲ್ಲಿ ದನಗಳಿಗೆ ಕಿಚ್ಚು ಹಾಯಿಸುವಾಗ ಈ ದುರ್ಘಟನೆ ಸಂಭವಿಸಿದೆ. ಕಿಚ್ಚು ಹಾಯಿಸುವಾಗ ಎತ್ತು ತುಳಿದ ಪರಿಣಾಮ ಯುವಕನೋರ್ವ ಗಾಯಗೊಂಡಿದ್ದು, ಆತನನ್ನು ಕೂಡ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತನ್ನದೇ ಶೈಲಿಯಲ್ಲಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್‍ನಿಂದ ಸಂಕ್ರಾಂತಿಯ ವಿಶ್!

    ತನ್ನದೇ ಶೈಲಿಯಲ್ಲಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್‍ನಿಂದ ಸಂಕ್ರಾಂತಿಯ ವಿಶ್!

    ಬೆಂಗಳೂರು: ಗುರುಗ್ರಾಮದ ಪಂಚತಾರಾ ಹೋಟೆಲ್‍ನಲ್ಲಿರುವ ಬಿಜೆಪಿ ಶಾಸಕರಿಗೆ ಕರ್ನಾಟಕ ಕಾಂಗ್ರೆಸ್ ಮಂಗಳವಾರ ರಾತ್ರಿ ವಿಶೇಷವಾಗಿ ಶುಭಾಶಯ ತಿಳಿಸಿದೆ.

    ಕರ್ನಾಟಕ ಕಾಂಗ್ರೆಸ್‍ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ, ರೆಸಾರ್ಟ್ ಬಂಧನದಲ್ಲಿರುವ ಬಿಜೆಪಿಯ 104 ಶಾಸಕರಿಗೆ ಸಂಕ್ರಾಂತಿಯ ಶುಭಾಶಯಗಳು. ಗೋಮಾತೆ ಬಗ್ಗೆ ಅತಿ ಹೆಚ್ಚು ಮಾತನಾಡುವವರು ಇಂದು ಗೋವುಗಳನ್ನು ಕಿಚ್ಚು ಹಾಯಿಸದೆ, ಅವುಗಳ ಪೂಜೆ ಮಾಡದೇ ರೆಸಾರ್ಟ್ ನಲ್ಲಿ ಮೋಜು ಮಾಡುತ್ತಿದ್ದಾರೆ. ಕುಟುಂಬದವರೊಂದಿಗೆ ಸಂಕ್ರಾಂತಿ ಆಚರಣೆಯನ್ನೂ ಮಾಡಲಾಗದ ಹಕ್ಕುಗಳ ಹರಣ ಬಿಜೆಪಿಯಿಂದ ತಮ್ಮ ಶಾಸಕರ ಮೇಲೆಯೇ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

    ಈ ಟ್ವೀಟ್ ನೋಡಿದ ಕೆಲ ನೆಟ್ಟಿಗರು ಕಾಂಗ್ರೆಸ್ ಕಾಲೆಳೆದಿದ್ದಾರೆ. ರೆಸಾರ್ಟ್ ಹೊರಗಡೆ ಇದ್ದೂ ಕೂಡ ಹಬ್ಬ ಸೆಲೆಬ್ರೇಟ್ ಮಾಡದೆ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿರುವ ತಮಗೂ ಹಬ್ಬದ ಶುಭಾಶಯಗಳು. ವಿಧಾನಸಭಾ ಚುನಾವಣೆ ಮುಗಿದ ಮೇಲೆ ನಿಮ್ಮ ಶಾಸಕರನ್ನು ರೆಸಾರ್ಟ್ ನಲ್ಲಿ ಕೂಡಿ ಹಾಕಿ, ಅವರಿಗೆ ಹೆಚ್ಚು ಹಕ್ಕುಗಳನ್ನು ಕೊಟ್ಟಿದ್ರಿ ಅಲ್ವಾ ಎಂದು ಸೋಮು ಸಜ್ಜನ್ ಎಂಬವರು ಟಾಂಗ್ ಕೊಟ್ಟಿದ್ದಾರೆ.

    ಮೈತ್ರಿ ಸರ್ಕಾರ ರಚಿಸುವ ಮೊದಲು ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಶಾಸಕರನ್ನು ರೆಸಾರ್ಟ್ ನಲ್ಲಿ ಇರಿಸಿದ್ದೀರಿ ಅಲ್ಲವೇ? ಗುಜರಾತಿನಿಂದ ಕೆಲ ಶಾಸಕರನ್ನು ರಾಜ್ಯಕ್ಕೆ ಕರೆತಂದು ಬಿಡದಿಯಲ್ಲಿ ಇಟ್ಟವರು ನೀವಲ್ಲವೇ? ಬೆರಳು ತೋರಿಸಲು ನಾಚಿಕೆ ಇಲ್ಲವೇ ಎಂದು ಸಂತೋಷ್ ಪ್ರಭು ಎಂಬವರು ಪ್ರಶ್ನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಂಕ್ರಾಂತಿಗೆ ಪ್ರವಾಸಕ್ಕೆ ಬಂದವ ನೀರುಪಾಲಾದ!

    ಸಂಕ್ರಾಂತಿಗೆ ಪ್ರವಾಸಕ್ಕೆ ಬಂದವ ನೀರುಪಾಲಾದ!

    ಕೊಪ್ಪಳ: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ಬಂದಿದ್ದ ಯುವಕನೋರ್ವ ನೀರಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿದೆ.

    ಭರತ್ ಗೌಡ(24) ಮೃತ ದುರ್ದೈವಿ. ರಾಯಚೂರು ಜಿಲ್ಲೆಯ ಸಿಂಧನೂರ ತಾಲೂಕಿನ ರಾಗಲಪರ್ವಿ ನಿವಾಸಿಯಾದ ಭರತ್ ಸಂಕ್ರಾಂತಿ ಹಿನ್ನೆಲೆ ಸ್ನೇಹಿತರೊಡನೆ ಆನೆಗುಂದಿ ಬಳಿಯ ತುಂಗಭದ್ರಾ ನದಿ ಬಳಿ ಪ್ರವಾಸಕ್ಕೆ ಬಂದಿದ್ದನು. ಇಂದು ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಸ್ನೇಹಿತರೊಡನೆ ಭರತ್ ಹೋಗಿದ್ದಾನೆ. ಆದ್ರೆ ಭರತ್‍ಗೆ ಹರಿಯುತ್ತಿದ್ದ ನೀರಿನಲ್ಲಿ ಈಜುಬಾರದೇ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

    ಮುಳುಗುತ್ತಿದ್ದ ಭರತ್‍ಗೆ ಜೊತೆಗಿದ್ದವರು ಸಹಾಯ ಮಾಡುವಷ್ಟರಲ್ಲಿ ಆತ ಇಹಲೋಕ ತ್ಯಜಿಸಿದ್ದನು. ಯುವಕನ ಮೃತದೇಹವನ್ನು ಸ್ಥಳೀಯ ಮೀನುಗಾರರು ತೆಪ್ಪ ಬಳಸಿ ಹೊರತೆಗೆದಿದ್ದಾರೆ. ನಗುನಗುತ್ತ ಪ್ರವಾಸಕ್ಕೆ ಬಂದಿದ್ದ ಸ್ನೇಹಿತನ ಮೃತದೇಹವನ್ನು ಊರಿಗೆ ತೆಗೆದುಕೊಂಡು ಹೋಗುವ ಸ್ಥತಿ ಬಂತಲ್ಲ ಅಂತ ಯುವಕನ ಜೊತೆಗಿದ್ದವರು ಕಣ್ಣೀರಿಟ್ಟಿದ್ದಾರೆ.

    ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಾಳಿಪಟ ಹಾರಿಸಿ ಸಂಕ್ರಾಂತಿ ಆಚರಿಸಿದ ರಾಯಚೂರಿನ ಜನತೆ

    ಗಾಳಿಪಟ ಹಾರಿಸಿ ಸಂಕ್ರಾಂತಿ ಆಚರಿಸಿದ ರಾಯಚೂರಿನ ಜನತೆ

    ರಾಯಚೂರು: ಸಂಕ್ರಾಂತಿ ಹಬ್ಬವನ್ನ ರಾಯಚೂರಿನಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಾಳಿಪಟ ಹಾರಿಸಿ ಜನ ಸಂಭ್ರಮಿಸಿದ್ದಾರೆ.

    ಸಂಕ್ರಾಂತಿ ಹಬ್ಬದ ವಿಶೇಷ ಖಾದ್ಯಗಳಾದ ಎಳ್ಳುಹಚ್ಚಿದ ಸಜ್ಜೆ ರೊಟ್ಟಿ, ಭರ್ತಾ, ಎಳ್ಳು ಹೋಳಿಗೆ ಶೇಂಗಾ ಹೋಳಿಗೆಯ ಊಟವನ್ನ ಉಣಬಡಿಸಲಾಯಿತು. ನಗರದ ರೋಟರಿ ಕ್ಲಬ್ ಹಾಗೂ ಜೆಸಿಐ ವತಿಯಿಂದ ಸಂಕ್ರಾಂತಿ ಹಿನ್ನೆಲೆಯಲ್ಲಿ ಗಾಳಿಪಟ ಸಂಭ್ರಮ ಹಾಗೂ ಊಟದ ವ್ಯವಸ್ಥೆ ಆಯೋಜಿಸಲಾಯಿತು. ಅಲ್ಲದೆ ಈ ಸಡಗರದಲ್ಲಿ ಭಾಗಿಯಾಗಿರುವ ಜನರು ಎಳ್ಳು ಬೆಲ್ಲವನ್ನ ಪರಸ್ಪರ ವಿನಿಮಯ ಮಾಡಿಕೊಂಡು ಸಂಕ್ರಾಂತಿ ಹಬ್ಬವನ್ನು ಸವಿದಿದ್ದಾರೆ.

    ಕ್ರೀಡಾಂಗಣದಲ್ಲಿ ಚಿಣ್ಣರು ಗಾಳಿಪಟವನ್ನು ಹಾರಿಸುತ್ತ ಖುಷಿ ಪಡುತ್ತಿದ್ದಾರೆ. ವಯಸ್ಸಿನ ಬೇಧವಿಲ್ಲದೆ ಚಿಕ್ಕಮಕ್ಕಳಿಂದ ಹಿಡಿದು ಎಲ್ಲರೂ ಬಣ್ಣಬಣ್ಣದ ಪತಂಗಗಳನ್ನ ಹಾರಿಸಿ ಹಬ್ಬ ಆಚರಿಸಿದರು.

    ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅನೇಕ ಜನರು ನದಿ ದಡಗಳಿಗೆ ತೆರಳಿ ಪುಣ್ಯ ಸ್ನಾನವನ್ನು ಮಾಡುತ್ತಿದ್ದಾರೆ. ಕೃಷ್ಣಾ ಹಾಗೂ ತುಂಗಾಭದ್ರ ನದಿಯಲ್ಲಿ ನೀರಿನ ಕೊರತೆಯ ಮಧ್ಯೆಯೂ ಜನರು ಪುಣ್ಯ ಸ್ನಾನ ಮಾಡಿ ಸಂಕ್ರಾಂತಿಯನ್ನ ಆಚರಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಂಪಲ್ ಅವಲಕ್ಕಿ ಸಿಹಿ ಪೊಂಗಲ್ ಮಾಡುವ ವಿಧಾನ

    ಸಿಂಪಲ್ ಅವಲಕ್ಕಿ ಸಿಹಿ ಪೊಂಗಲ್ ಮಾಡುವ ವಿಧಾನ

    ಸಂಕ್ರಾಂತಿ ಹಬ್ಬ ಅಂದರೆ ಮನೆಯಲ್ಲಿ ಸಿಹಿ ಪೊಂಗಲ್ ಮಾಡಲೇಬೇಕು. ಪ್ರತಿವರ್ಷದಂತೆ ಅಕ್ಕಿ ಪೊಂಗಲ್ ಮಾಡಿ ಮಾಡಿ ಬೇಸರವಾಗಿರುತ್ತದೆ. ಹೊಸ ವರ್ಷದ ಮೊದಲ ಹಬ್ಬಕ್ಕಾಗಿ ಅಕ್ಕಿ ಪೊಂಗಲ್ ಮಾಡುವ ಬದಲು ಅವಲಕ್ಕಿ ಸಿಹಿ ಪೊಂಗಲ್‍ನ ಒಮ್ಮೆ ಟ್ರೈ ಮಾಡಿ ನೋಡಿ. ನಿಮಗಾಗಿ ಅವಲಕ್ಕಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ..

    ಬೇಕಾಗುವ ಸಾಮಾಗ್ರಿಗಳು
    1. ಗಟ್ಟಿ ಅವಲಕ್ಕಿ – ಕಾಲು ಕೆಜಿ
    2. ಹೆಸರು ಬೇಳೆ – 100 ಗ್ರಾಂ
    3. ಕೊಬ್ಬರಿ ತುರಿ – 1 ಬಟ್ಟಲು
    4. ಉದ್ದುದ್ದ ಹೆಚ್ಚಿದ ಕೊಬ್ಬರಿ ಸ್ಲೈಸ್ – 10-15
    5. ಬೆಲ್ಲ – ಸಿಹಿಗೆ ತಕ್ಕಷ್ಟು
    6. ಹಾಲು – ಅರ್ಧ ಕಪ್(ಬೇಕಾದಲ್ಲಿ)
    7. ಏಲಕ್ಕಿ ಪುಡಿ – ಚಿಟಿಕೆ
    8. ಒಣದ್ರಾಕ್ಷಿ, ಗೋಡಂಬಿ – ಸ್ವಲ್ಪ
    9. ತುಪ್ಪ – 2 ಚಮಚ

    ಮಾಡುವ ವಿಧಾನ
    * ಮೊದಲು ಗಟ್ಟಿ ಅವಲಕ್ಕಿಯನ್ನು ತೊಳೆದು ಸೋಸಿಟ್ಟುಕೊಳ್ಳಿ. ನೀರಿನಲ್ಲಿ ನೆನೆಸೋದು ಬೇಡ.
    * ಬೆಲ್ಲವನ್ನು ನೀರಿನಲ್ಲಿ ಕರಗಿಸಿ ಸೋಸಿಟ್ಟುಕೊಳ್ಳಿ.
    * ಈಗ ಕುಕ್ಕರ್ ಪ್ಯಾನ್‍ಗೆ ಸ್ವಲ್ಪ ತುಪ್ಪ ಹಾಕಿ ಹೆಸರು ಬೇಳೆ ಹಾಕಿ ಸ್ವಲ್ಪ ಹುರಿದು ನೀರು ಸೇರಿಸಿ 1-2 ವಿಸಿಲ್ ಕೂಗಿಸಿಕೊಳ್ಳಿ.
    * ವಿಸಿಲ್ ಇಳಿದ ಮೇಲೆ ಸ್ವಲ್ಪ ನೀರು ಸೇರಿಸಿ 1-2 ನಿಮಿಷ ಕುದಿಸಿ.
    * ಬಳಿಕ ತೊಳೆದಿಟ್ಟ ಗಟ್ಟಿ ಅವಲಕ್ಕಿ, ಕರಗಿಸಿ ಸೋಸಿಟ್ಟುಕೊಂಡಿದ್ದ ಬೆಲ್ಲ, ಕೊಬ್ಬರಿ ತುರಿ, ಹಾಲು (ಆಪ್ಷನಲ್) ಸೇರಿಸಿ ಕುದಿಸಿ.
    * ತುಪ್ಪ ಹಾಕಿ ಫ್ರೈ ಮಾಡಿಟ್ಟುಕೊಂಡಿದ್ದ ದ್ರಾಕ್ಷಿ ಗೋಡಂಬಿ, ಕೊಬ್ಬರಿಯ ಉದ್ದುದ್ದ ತುಂಡುಗಳನ್ನು ಸೇರಿಸಿ.
    * ಏಲಕ್ಕಿ ಪುಡಿ ಸೇರಿಸಿ ಬೇಕಾದ ಅಗತ್ಯವಿರುವಷ್ಟು ನೀರು ಸೇರಿಸಿ 5 ರಿಂದ 6 ನಿಮಿಷ ಕುದಿಸಿ ಸಾಕು.
    * ಆರಿದ ಬಳಿಕ ಸಿಹಿ ಪೊಂಗಲ್ ಗಟ್ಟಿ ಆಗುತ್ತದೆ. ತುಂಬಾ ಗಟ್ಟಿಯಾದಂತೆ ಅನ್ನಿಸಿದರೆ ಬಿಸಿ ನೀರು ಸೇರಿಸಿ ತೆಳ್ಳಗೆ ಮಾಡಿಕೊಳ್ಳಬಹುದು.
    * ನಿಮಗೆ ಬೇಕಾದ ರೀತಿಯಲ್ಲಿ (ಗಟ್ಟಿ ಅಥವಾ ತೆಳು) ಪೊಂಗಲ್ ಮಾಡಿಕೊಳ್ಳಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಗ್ಗಿ ಹಬ್ಬಕ್ಕಾಗಿ ಖಾರ ಪೊಂಗಲ್ ಮಾಡುವ ವಿಧಾನ

    ಸುಗ್ಗಿ ಹಬ್ಬಕ್ಕಾಗಿ ಖಾರ ಪೊಂಗಲ್ ಮಾಡುವ ವಿಧಾನ

    ಹೊಸ ವರ್ಷದ ಮೊದಲ ಹಬ್ಬವನ್ನು ಜನರು ಸಂತೋಷದಿಂದ ಬರ ಮಾಡಿಕೊಳ್ಳುತ್ತಿದ್ದು, ಹಬ್ಬಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ. ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಅದಕ್ಕಾಗಿ ಖಾರ ಪೊಂಗಲ್ ಮಾಡುವ ಸುಲಭ ವಿಧಾನ ಇಲ್ಲಿದೆ… ಎಳ್ಳು ಬೆಲ್ಲದ ಜೊತೆಗೆ ಒಂದಿಷ್ಟು ಖಾರ ಪೊಂಗಲ್ ತಯಾರಿಸಿ ಹಬ್ಬವನ್ನು ಆಚರಿಸಿ.

    ಬೇಕಾಗುವ ಸಾಮಗ್ರಿಗಳು:
    1. ಹೆಸರುಬೇಳೆ- 1 ಕಪ್
    2. ಅಕ್ಕಿ- 1 ಕಪ್
    3. ಜೀರಿಗೆ – ಅರ್ಧ ಚಮಚ
    4 ಕಾಳುಮೆಣಸು – ಅರ್ಧ ಚಮಚ
    5. ಕರಿಬೇವಿನಸೊಪ್ಪು – ಸ್ವಲ್ಪ
    6. ಹಸಿಮೆಣಸಿನಕಾಯಿ – 2 ರಿಂದ 3
    7 ತುಪ್ಪ – 1 ಚಮಚ
    8. ಅರಿಶಿನ- ಒಂದು ಚಿಟಿಕೆ
    9. ಉಪ್ಪು – ರುಚಿಗೆ ತಕ್ಕಷ್ಟು
    10 ಗೋಡಂಬಿ – 10

    ಮಾಡುವ ವಿಧಾನ:
    * ಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು ಹಾಕಿ ಅದು ಕೆಂಪಾಗುವ ತನಕ ಕಡಿಮೆ ಉರಿಯಲ್ಲಿ ಹುರಿಯಿರಿ.
    * ಬಳಿಕ ಕುಕ್ಕರ್ ನಲ್ಲಿ ತೊಳೆದ ಅಕ್ಕಿ ಮತ್ತು ಹುರಿದ ಹೆಸರುಬೇಳೆ ಹಾಕಿ 4 ಕಪ್ ನೀರು ಹಾಕಿ ಒಂದು ವಿಷಲ್ ಬರುವ ತನಕ ಬೇಯಿಸಿ.
    * ಒಂದು ಬಾಣಲೆಯಲ್ಲಿ ಸ್ವಲ್ಪ ತುಪ್ಪ ಬಿಸಿ ಮಾಡಿ ಅದಕ್ಕೆ ಕರಿಬೇವಿನಸೊಪ್ಪು, ಜೀರಿಗೆ, ಕಾಳುಮೆಣಸು, ಅರಿಶಿನ, ಗೋಡಂಬಿ ಮತ್ತು ಕತ್ತರಿಸಿದ ಹಸಿಮೆಣಸಿನಕಾಯಿ ಹಾಕಿ ಬಾಡಿಸಿ.
    * ಇದನ್ನು ಬೇಯಿಸಿದ ಅಕ್ಕಿ ಮತ್ತು ಹೆಸರುಬೇಳೆಗೆ ಸೇರಿಸಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕಲಸಿ 5 ನಿಮಿಷ ಬೇಯಲು ಬಿಡಿ.
    * ಕೊನೆಗೆ ಒಂದು ಚಮಚ ತುಪ್ಪ ಸೇರಿಸಿ ಒಲೆಯಿಂದ ಕೆಳಗಿಳಿಸಿದರೆ ಖಾರ ಪೊಂಗಲ್ ಸವಿಯಲು ಸಿದ್ಧ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv