Tag: santhosh hegde

  • ಕಾಮುಕರಿಗೆ ಗಲ್ಲು ಶಿಕ್ಷೆ ಬಿಟ್ಟು ಬೇರೆ ಯಾವ ಶಿಕ್ಷೆಯೂ ಸರಿ ಅಲ್ಲ: ಸಂತೋಷ್ ಹೆಗಡೆ

    ಕಾಮುಕರಿಗೆ ಗಲ್ಲು ಶಿಕ್ಷೆ ಬಿಟ್ಟು ಬೇರೆ ಯಾವ ಶಿಕ್ಷೆಯೂ ಸರಿ ಅಲ್ಲ: ಸಂತೋಷ್ ಹೆಗಡೆ

    ಬಾಗಲಕೋಟೆ: ಹೈದರಾಬಾದ್ ಪಶುವೈದ್ಯೆಯ ಗ್ಯಾಂಗ್ ರೇಪ್ ಮತ್ತು ಹತ್ಯೆ ಮಾಡಿದ ಕಾಮುಕರಿಗೆ ಗಲ್ಲು ಶಿಕ್ಷೆ ಆಗಲೇಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಗ್ರಹಿಸಿದ್ದಾರೆ.

    ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ವಕೀಲರ ಸಂಘ ಆಯೋಜಿಸಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂತೋಷ್ ಹೆಗಡೆ, ಕಾಮುಕರಿಗೆ ಗಲ್ಲು ಶಿಕ್ಷೆ ಬಿಟ್ಟು ಬೇರೆ ಯಾವ ಶಿಕ್ಷೆಯೂ ಸರಿ ಅಲ್ಲ. ಆದರೂ ಕೆಲವು ಬಾರಿ ಮಾನವೀಯ ಹಕ್ಕಿನ ಮೇಲೆ ಗಲ್ಲು ಶಿಕ್ಷೆ ಬೇಡ ಎಂದು ವಾದ ಮಾಡುತ್ತಾರೆ. ಇದು ಮಾನವೀಯತೆ ಇಲ್ಲದ ಕ್ರೂರವಾದಂತಹ ಕೃತ್ಯ. ಆದ್ದರಿಂದ ಇಂತಹ ಘಟನೆಯಾದಾಗ ಗಲ್ಲು ಶಿಕ್ಷೆಯೇ ಆಗಬೇಕು. ಅದು ವಿಳಂಬವಾಗಬಾರದು ತೀವ್ರಗತಿಯಲ್ಲಿ ತೀರ್ಪು ಪ್ರಕಟವಾಗಬೇಕು. ತಡವಾದರೆ ಅದರ ಪ್ರಾಮುಖ್ಯತೆ ಹೋಗುತ್ತದೆ ಎಂದರು.

    ಡಿಕೆಶಿಗೆ ಪುನಃ ಇಡಿ ನೊಟೀಸ್ ನೀಡಿರುವ ವಿಚಾರದ ಬಗ್ಗೆ ಮಾತನಾಡಿ, ವಿಚಾರಣೆಗೆ ಕರೆದರೆ ಹೋಗಲೇಬೇಕು. ಅದಕ್ಕೆ ರಾಜಕೀಯ ಪಿತೂರಿ ಎಂದು ಹೇಳುವುದು ಸರಿಯಲ್ಲ. ಇಡಿ ಆದೇಶ ನೊಟೀಸ್ ಪ್ರಕಾರ ನಡೆಯಬೇಕು. ತಪ್ಪು ಮಾಡಿದ ಆರೋಪದ ಮೇಲೆ ಇವೆಲ್ಲ ಪ್ರಕ್ರಿಯೆಗಳು ನಡೆಯುತ್ತವೆ ಎಂದರು. ಇದೇ ವೇಳೆ ಬಿಜೆಪಿಯಿಂದ ಇಡಿ ಸ್ವಾಯತ್ತ ಸಂಸ್ಥೆ ದುರುಪಯೋಗ ಎಂಬ ಕಾಂಗ್ರೆಸ್ ಆರೋಪ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಇಬ್ಬರು ಒಂದೇ ತಾನೇ? ಇವರ ಬಗ್ಗೆ ಅವರು ಕೇಳಿದರೆ ನೀವು ಮಾಡಿಲ್ಲವೇನ್ರಿ ಎಂದು ಅವರು ಹೇಳುತ್ತಾರೆ ಎಂದು ತಿರುಗೇಟು ನೀಡಿದರು.

    ರಾಮಮಂದಿರ ಐತಿಹಾಸಿಕ ತೀರ್ಪಿನ ಬಗ್ಗೆ ಮಾತನಾಡಿ, ಅದು ಸರಿಯೋ ತಪ್ಪು ಎಂದು ನಾನು ಪರಾಮರ್ಶೆಗೆ ಇಳಿಯುವುದಿಲ್ಲ. ಇದು ದೇಶದ ಶಾಂತಿಗಾಗಿ ಕೊಟ್ಟ ತೀರ್ಪು. ಇದನ್ನು ನಾವು ಪಾಲಿಸಲೇಬೇಕು. ಪ್ರತಿಭಟನೆಯೂ ಬೇಡ, ಸಂಭ್ರಮವೂ ಬೇಡ ಎಂದು ಹೇಳಿದರು.

    ಸುಪ್ರೀಂ ತೀರ್ಪು ಮರುಪರಿಶೀಲನೆ ಹಾಕುತ್ತಾರೆ ಕೆಲವರಿಗೆ ಇಲ್ಲಿ ಶಾಂತಿ ಇರುವುದು ಬೇಕಾಗಿಲ್ಲ. ಮರುಪರಿಶೀಲನೆ ಅರ್ಜಿ ಹಾಕಿದ ಧರ್ಮದವರಲ್ಲೇ ಕೆಲವರು ನಾವು ಅರ್ಜಿ ಹಾಕುವುದಿಲ್ಲ ಎಂದು ಹೇಳುತ್ತಿದ್ದಾರೆ. ದೇಶದಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಅದನ್ನೆಲ್ಲ ಮರೆತುಬಿಡೋಣ. ಧರ್ಮದ ವಿಚಾರ ಕೋರ್ಟ್ ನವರು ತೀರ್ಪು ಕೊಡುವುದಕ್ಕೆ ಅರ್ಹರಲ್ಲ ಎಂಬುದು ನನ್ನ ಅನಿಸಿಕೆ. ಯಾರದೂ ಸ್ವಂತ ಜಮೀನು ಹೋಗಿಲ್ಲ. ತೀರ್ಪಿಗೆ ಮನ್ನಣೆ ಕೊಡೋಣ ಎಂದರು. ಅಲ್ಲದೆ ಜೈಲಿಗೆ ಹೋಗಿ ಜಾಮೀನು ಪಡೆದು ಬಂದವರಿಗೆ ಹಾರ ಹಾಕಿ ಸಂಭ್ರಮಿಸುವುದು ತಪ್ಪು ಎಂದು ಪುನರುಚ್ಚರಿಸಿದರು.

  • ಇಂದಿನ ರಾಜಕೀಯ ಪರಿಸ್ಥಿತಿಗೆ ಮತದಾರರೇ ಮೂಲ ಕಾರಣ – ಸಂತೋಷ್ ಹೆಗ್ಡೆ

    ಇಂದಿನ ರಾಜಕೀಯ ಪರಿಸ್ಥಿತಿಗೆ ಮತದಾರರೇ ಮೂಲ ಕಾರಣ – ಸಂತೋಷ್ ಹೆಗ್ಡೆ

    ಮೈಸೂರು: ರಾಜ್ಯಪಾಲರು ಕಾನೂನಾತ್ಮಕವಾಗಿನಡೆದುಕೊಂಡಿದ್ದಾರೆ. ಶಾಸಕರ ರೆಸಾರ್ಟ್ ರಾಜಕೀಯ ಮಾಡಿದರೆ ಮಾಡಲಿ. ರೆಸಾರ್ಟ್ ನವರಿಗೆ ಒಂದಷ್ಟು ದುಡ್ಡಾದರು ಆಗುತ್ತೆ ಅಂತ ನಿವೃತ್ತ ಲೋಕಯುಕ್ತ ಸಂತೋಷ್ ಹೆಗ್ಡೆ ಹೇಳಿದ್ದಾರೆ.

    ರಾಜ್ಯ ರಾಜಕಾರಣದ ಬೆಳವಣಿಗೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯೇ ಬಿಜೆಪಿಯವರು ಬಹುಮತ ಸಾಬೀತು ಮಾಡಬೇಕು ಎಂಬ ಸುಪ್ರಿಂ ಆದೇಶ ಸ್ವಾಗಾತಾರ್ಹವಾಗಿದೆ. ಕುದುರೆ ವ್ಯಾಪಾರವನ್ನು ತಪ್ಪಿಸಲು ಸಹಕಾರಿಯಾಗುತ್ತದೆ ಅಂದ್ರು.

    ರಾಜ್ಯಪಾಲರು ಬಿಜೆಪಿಯನ್ನು ಮೊದಲು ಸರ್ಕಾರ ರಚನೆಗೆ ಆಹ್ವಾನ ಮಾಡಿದ್ದು ಸರಿ. ಇದರಲ್ಲಿ ಯಾವ ತಪ್ಪಿಲ್ಲ. ಆದರೆ ಬಹುಮತ ಸಾಬೀತಿಗೆ 15 ದಿನ ಕಾಲಾವಕಾಶ ನೀಡಿದ್ದು ತಪ್ಪು. ಇದನ್ನು ಸುಪ್ರಿಂ ಕೋರ್ಟ್ ಸರಿಪಡಿಸಿದೆ. ರಾಜ್ಯಪಾಲರ ನಡೆಯನ್ನು ರಾಜಕೀಯವಾಗಿ ಟೀಕೆ ಮಾಡುವುದು ಸುಲಭ. ರಾಜ್ಯಪಾಲರು ಕಾನೂನಾತ್ಮಕವಾಗಿ ನಡೆದುಕೊಂಡಿದ್ದಾರೆ ಅಂತ ಅವರು ಹೇಳಿದ್ರು.

    ಇವತ್ತಿನ ರಾಜ್ಯದ ರಾಜಕೀಯ ಪರಿಸ್ಥಿತಿಗೆ ಮತದಾರರೆ ಮೂಲ ಕಾರಣ. ಜಾತಿಗಾಗಿ, ಹಣಕ್ಕಾಗಿ ಮತಹಾಕಿರುವ ಪರಿಣಾಮ ಈ ರೀತಿ ಅಂತ್ರತರ ಸೃಷ್ಟಿಯಾಗಿದೆ ಇದು ಬೇಸರದ ಸಂಗತಿಯಾಗಿದೆ ಅಂತ ಹೆಗ್ಡೆ ಹೇಳಿದೆ.

  • ಇದು ವಿಪರ್ಯಾಸವೇ ಸರಿ: ಸಂತೋಷ್ ಹೆಗ್ಡೆ

    ಇದು ವಿಪರ್ಯಾಸವೇ ಸರಿ: ಸಂತೋಷ್ ಹೆಗ್ಡೆ

    ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ.

    ಪ್ರಕರಣ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಲೋಕಾಯುಕ್ತ ಕಚೇರಿಗೆ ಒಬ್ಬ ವ್ಯಕ್ತಿ ಚಾಕು ಹಿಡಿದುಕೊಂಡು ಹೋಗಿದ್ದಾನೆಂದರೆ ಅಲ್ಲಿನ ಭದ್ರತಾ ವ್ಯವಸ್ಥೆ ಸರಿಯಲ್ಲ ಎಂದರ್ಥ ಅಂತ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆಗಳಲ್ಲೂ ತಪಾಸಣೆ ಮಾಡಿಯೇ ಮಾಡುತ್ತಾರೆ. ಅಂತದ್ದರಲ್ಲಿ ಒಂದು ಲೋಕಾಯುಕ್ತ ಕಚೇರಿಗೆ ಬರುವಾಗ ವ್ಯಕ್ತಿಯೋರ್ವ ಚಾಕು ಹಿಡಿದುಕೊಂಡು ಬರುತ್ತಾನೆ ಎಂದರೆ ಇದು ವಿಪರ್ಯಾಸವೇ ಸರಿ ಅಂತ ಅವರು ಹೇಳಿದ್ರು.  

    ಏನಿದು ಘಟನೆ?: ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ನ್ಯಾ. ವಿಶ್ವನಾಥ್ ಶೆಟ್ಟಿಯವರು ಊಟ ಮಾಡುತ್ತಿದ್ದ ಸಂದರ್ಭದಲ್ಲಿ ತೇಜ ರಾಜ ಶರ್ಮಾ ಎಂಬಾತ ಏಕಾಏಕಿ ಕಚೇರಿಗೆ ನುಗಿ ಲೋಕಾಯುಕ್ತರ ಕಿಬ್ಬೊಟ್ಟೆಗೆ ಮೂರು ಬಾರಿ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಲೋಕಾಯುಕ್ತ ಕೂಡಲೇ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

    ಹಲ್ಲೆಗೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಶ್ವನಾಥ್ ಶೆಟ್ಟಿ ಅವರನ್ನ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.

    ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾ ರೆಡ್ಡಿ ಆಸ್ಪತ್ರೆಗೆ ದೌಡಾಯಿಸಿದ್ದು, ಆರೋಗ್ಯ ವಿಚಾರಿಸುತ್ತಿದ್ದಾರೆ.