Tag: Santhosh Patil

  • ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ- ಈಶ್ವರಪ್ಪಗೆ ಮತ್ತೆ ಸಂಕಷ್ಟ

    ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ- ಈಶ್ವರಪ್ಪಗೆ ಮತ್ತೆ ಸಂಕಷ್ಟ

    ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ (Santhosh Patil) ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.

    ಈ ಪ್ರಕರಣದಲ್ಲಿ ಸಲ್ಲಿಸಿರುವ ಬಿ ರಿಪೋರ್ಟ್‍ನ ಸಂಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯದ ಸುಪರ್ದಿಗೆ ನೀಡುವಂತೆ 42ನೇ ವಿಶೇಷ ನ್ಯಾಯಾಲಯ ಆದೇಶಿಸಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಜನವರಿ 31ರೊಳಗೆ ಎಲ್ಲಾ ಸಾಕ್ಷ್ಯಗಳನ್ನು ಕೋರ್ಟ್‍ಗೆ ಸಲ್ಲಿಸಿ ಎಂದು ಸೂಚಿಸಿದೆ. ಇದನ್ನೂ ಓದಿ: ಸಂತೋಷ್‌ ಪಾಟೀಲ್‌ ಕೇಸ್‌ಗೆ ಟ್ವಿಸ್ಟ್‌ – 2021ರಲ್ಲಿ ಬೆಳಗಾವಿ ZP ಅಧ್ಯಕ್ಷೆ ಬರೆದ ಪತ್ರ ಔಟ್‌

    ಈ ಹಿಂದೆ ಕುಟುಂಬಸ್ಥರು ಬಿ ರಿಪೋರ್ಟ್ ಪ್ರಶ್ನಿಸಿ, ಕೋರ್ಟ್ ಮೊರೆ ಹೋಗಿದ್ದರು. ಆ ಸಂದರ್ಭದಲ್ಲಿ ದಾಖಲಾತಿ ನೀಡಿದ್ದ ಉಡುಪಿ ಪೊಲೀಸರು (Udupi Police) ಸಂಪೂರ್ಣ ದಾಖಲಾತಿ ಸಲ್ಲಿಕೆಗೆ ಹಿಂದೇಟು ಹಾಕಿದ್ದರು. ಇದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ನ್ಯಾಯಾಲಯದ ಹೊಸ ಆದೇಶ ಮಾಡಿದೆ. ಇದನ್ನೂ ಓದಿ: ವರ್ಕ್‌ ಆರ್ಡರ್‌ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್‌ – ಆತ್ಮಹತ್ಯೆಗೆ ಕಾರಣ ಏನು?

    ಕೆಲವೊಂದು ಸಾಕ್ಷ್ಯಗಳಲ್ಲಿ ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪ (KS Eshwarappa) ಪಿಎಗೆ ಹಣ ನೀಡಿರುವುದು ವಾಟ್ಸಪ್ ಚಾಟ್‍ನಲ್ಲಿ ಬಹಿರಂಗವಾಗಿದೆ. ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪ ಪಿಎ ಜೊತೆ ನಡೆಸಿರುವ ವಾಟ್ಸಪ್ ಚಾಟ್ (Whatsapp Chat) ಪ್ರತಿ ಕೂಡ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ಮೂಲಕ ಈಶ್ವರಪ್ಪಗೆ ಸಂತೋಷ್ ಆತ್ಮಹತ್ಯೆ ಪ್ರಕರಣ ಇನ್ನೂ ಸಂಕಷ್ಟ ತಂದಿಟ್ಟಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಈಶ್ವರಪ್ಪಗೆ ಕ್ಲೀನ್ ಚಿಟ್ ಕೊಡಿಸಿದೆ: ಎಎಪಿ

    ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಈಶ್ವರಪ್ಪಗೆ ಕ್ಲೀನ್ ಚಿಟ್ ಕೊಡಿಸಿದೆ: ಎಎಪಿ

    ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಿರುವ ಪೊಲೀಸರ ನಡೆಯನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯು ಬೃಹತ್ ಪ್ರತಿಭಟನೆ ನಡೆಸಿದೆ.

    ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಎಪಿಯ ಬೆಂಗಳೂರು ನಗರ ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಚನ್ನಪ್ಪ ಗೌಡ ನೆಲ್ಲೂರು, ಕಳಂಕಿತ ಸಚಿವ ಈಶ್ವರಪ್ಪರನ್ನು ಪುನಃ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರ ಹುನ್ನಾರ ಮಾಡಿದ್ದು, ಇದಕ್ಕಾಗಿಯೇ ಪೊಲೀಸರ ಮೇಲೆ ಒತ್ತಡ ಹೇರಿ ಕ್ಲೀನ್ ಚಿಟ್ ಕೊಡಿಸಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ಸಂತೋಷ್‍ರವರು ಈಶ್ವರಪ್ಪ ವಿರುದ್ಧ ವಾಟ್ಸಪ್‍ನಲ್ಲಿ ಡೆತ್‍ನೋಟ್ ಕಳುಹಿಸಿರುವುದನ್ನು ಪೊಲೀಸರೇ ದೃಢಪಡಿಸಿದ್ದಾರೆ. ಆದರೂ ಕೂಡ ಈಶ್ವರಪ್ಪನವರ ವಿಚಾರಣೆಯನ್ನೂ ನಡೆಸದೇ ಕ್ಲೀನ್ ಚಿಟ್ ನೀಡಿರುವುದು ಖಂಡನೀಯ. ಅಕ್ರಮ ಎಸಗುವವರ ಪರವಾಗಿದ್ದೇವೆ ಎಂಬ ಕೆಟ್ಟ ಸಂದೇಶವನ್ನು ರಾಜ್ಯ ಬಿಜೆಪಿ ಸರ್ಕಾರ ಈ ಮೂಲಕ ರವಾನಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ – ಕೋರ್ಟ್‌ಗೆ ಬಿ ರಿಪೋರ್ಟ್‌ ಸಲ್ಲಿಕೆ; ಈಶ್ವರಪ್ಪಗೆ ಕ್ಲೀನ್‌ ಚಿಟ್‌

    ಘಟನೆ ನಡೆದಾಗಲೇ ಈಶ್ವರಪ್ಪನವರ ಬೆನ್ನಿಗೆ ನಿಂತಿದ್ದ ಬಿಜೆಪಿ ಸರ್ಕಾರವು, ತನಿಖೆಗೂ ಮುನ್ನವೇ ಈಶ್ವರಪ್ಪನವರನ್ನು ನಿರಪರಾಧಿ ಎಂದು ಘೋಷಿಸಿತ್ತು. ನಂತರ ಆಮ್ ಆದ್ಮಿ ಪಾರ್ಟಿಯು ಸಿಎಂ ಮನೆಗೆ ಮುತ್ತಿಗೆ ಹಾಕಲು ಮುಂದಾದಾಗ ಈಶ್ವರಪ್ಪನವರ ರಾಜೀನಾಮೆ ಪಡೆದಿತ್ತು. ಆದರೆ ಕೇವಲ ಕಾಟಾಚಾರಕ್ಕೆ ತನಿಖೆ ನಡೆಸಿ ಸಂತೋಷ್ ಪಾಟೀಲ್‍ರವರ ಕುಟುಂಬಕ್ಕೆ ಅನ್ಯಾಯವೆಸಗಿದೆ. ರಾಜಕೀಯ ಒತ್ತಡಕ್ಕೆ ಮಣಿದ ಉಡುಪಿ ಪೊಲೀಸರು ಈಶ್ವರಪ್ಪನವರ ವಿಚಾರಣೆ ನಡೆಸದೇ ಕೇವಲ ಮೂರು ತಿಂಗಳಲ್ಲಿ ವರದಿ ಸಿದ್ಧಪಡಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯು ಈ ದೋಷಪೂರಿತ ವರದಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ತ್ಯಾಗ ಮಾಡಿಲ್ಲ, ಅವರನ್ನ ಪಕ್ಷದಿಂದ ದಬ್ಬಿದ್ರು: ಸಿಎಂ ಇಬ್ರಾಹಿಂ

    ಡೆತ್‍ನೋಟ್ ಆಧಾರವಾಗಿಟ್ಟುಕೊಂಡು ಈಶ್ವರಪ್ಪನವರನ್ನು ಬಂಧಿಸಬೇಕು. ಸರ್ಕಾರ ಕೈಕೆಳಗೆ ಕಾರ್ಯನಿರ್ವಹಿಸುವ ಸಿಐಡಿ ಬದಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಈಶ್ವರಪ್ಪನವರು ಸಂತೋಷ್ ಪಾಟೀಲ್‍ರವರಿಗೆ ನೀಡಿದ ಕಿರುಕುಳ ಹಾಗೂ ವಂಚನೆಯು ರಾಜ್ಯದ ಜನತೆಗೆ ತಿಳಿಯಬೇಕು. ಈಶ್ವರಪ್ಪನವರ ನೇತೃತ್ವದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿದ್ದು, ಈ ಬಗ್ಗೆ ಆಮ್ ಆದ್ಮಿ ಪಾರ್ಟಿ ಹೋರಾಟ ಮಾಡಿದ್ದರೂ ಯಾವುದೇ ಸೂಕ್ತ ತನಿಖೆ ನಡೆದಿಲ್ಲ. ಕೆ.ಜೆ.ಜಾರ್ಜ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆದಿದ್ದರೂ ಟೀಕಿಸುತ್ತಿದ್ದ ಬಿಜೆಪಿಯು ಈಗ ಈಶ್ವರಪ್ಪನವರ ವಿರುದ್ಧ ಪೊಲೀಸ್ ತನಿಖೆಯನ್ನೂ ಸರಿಯಾಗಿ ನಡೆಸದಿರುವುದು ದುರಂತ. ಆರ್‌ಡಿಪಿಆರ್‌ ಹಗರಣಗಳು ಹಾಗೂ ಸಂತೋಷ್ ಪ್ರಕರಣದ ಕುರಿತು ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಚನ್ನಪ್ಪಗೌಡ ನೆಲ್ಲೂರು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಿ – ಅಧಿಕಾರಿಗಳಿಗೆ ಕಾರಜೋಳ ವಾರ್ನಿಂಗ್

    ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಿ – ಅಧಿಕಾರಿಗಳಿಗೆ ಕಾರಜೋಳ ವಾರ್ನಿಂಗ್

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚೆತ್ತುಕೊಂಡಿದ್ದು ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದಾರೆ.

    ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಯಾರಾದರೂ ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಬೇಕು. ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡಲು ಬಿಡಬಾರದು. ಸರ್ಕಾರದ ಯೋಜನೆ ಮಂಜೂರಾಗದೇ ಯಾರಾದರೂ ಕಾಮಗಾರಿ ಮಾಡುವುದು ಗಮನಕ್ಕೆ ಬಂದರೆ ಪಿಡಿಒಗಳು, ಇಒಗಳು, ಇಂಜಿನಿಯರ್‌ಗಳೇ ಹೊಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕರೇ ಅಮಿತ್‌ ಶಾ ಗುಲಾಮರಾಗಬೇಡಿ, ಕನ್ನಡ ತಾಯಿ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದು

    ನಿಮ್ಮ ಮನೆಯಲ್ಲಿ ಯಾರಾದರೂ ಹೇಳದೇ ಕೆಲಸ ಮಾಡುವುದಕ್ಕೆ ಬಂದರೆ ಸುಮ್ಮನೇ ಇರುತ್ತೀರಾ? ಹೀಗಾಗಿ ಬಹಳ ಬಿಗಿಯಾಗಿ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅನಧಿಕೃತ ವ್ಯಕ್ತಿಗಳು ನಮ್ಮ ಪ್ರಿಮೈಸಿಸ್‍ನಲ್ಲಿ ಬರಬಾರದು. ಗ್ರಾಮ ಪಂಚಾಯತ್‍ನಲ್ಲಿ ಯಾರಾದರೂ ಬಂದು ಕೆಲಸ ಮಾಡುತ್ತಾರೆ ಅಂದರೆ ಬಿಡಬಾರದು. ಒಂದು ವೇಳೆ ಬಿಟ್ಟಿದ್ದೆ ಆದರೆ, ಸುಮ್ಮನೇ ಅಧಿಕಾರಿಗಳಿಗೂ ಕೆಟ್ಟ ಹೆಸರು, ಸರ್ಕಾರಕ್ಕೂ ಕೆಟ್ಟ ಹೆಸರು ವಿನಾ ಕಾರಣ ಅಪಪ್ರಚಾರ ಆಗುತ್ತದೆ. ಒಂದು ವೇಳೆ ಯಾರಾದರೂ ಪುಂಡಾಟಿಕೆ ಮಾಡಿದರೆ ಪೊಲೀಸರಿಗೆ ದೂರು ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನೂತನ ಮನೆಗೆ ಮೋದಿ ಹೆಸರಿಟ್ಟ ಚನ್ನಗಿರಿಯ ಅಭಿಮಾನಿ

     

    ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಅಂತ ಅಲ್ಲ. ಈಗಾಗಲೇ ತನಿಖೆ ಆಗುತ್ತಿದೆ ತನಿಖೆ ವರದಿ ಬರಬೇಕು. ತನಿಖೆ ಆಗದೇ ನಾನು ಮಂತ್ರಿಯಾಗಿ ಹೇಳಿದರೆ ಸರ್ಕಾರವೇ ಹೇಳಿದ ಹಾಗೇ ಆಗುತ್ತದೆ. ತನಿಖೆಗೆ ಅಡ್ಡಿಪಡಿಸುವಂತೆ ಆಗಬಾರದು. ಹೀಗಾಗಿ ನಾನು ಮಾತನಾಡುವುದಿಲ್ಲ. ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುವಂತಿಲ್ಲ. ನಮ್ಮ ಕಾನೂನಿನಲ್ಲಿ ಇದಕ್ಕೆ ಅವಕಾಶ ಇಲ್ಲ. ಯಾವುದೇ ಕಾಮಗಾರಿ ಮಾಡಬೇಕಾದರೆ ವರ್ಕ್ ಎಸ್ಟಿಮೇಟ್ ಮಾಡಬೇಕಾಗುತ್ತದೆ. ಮಂಜೂರಾತಿ, ಗ್ರ್ಯಾಂಟ್ ಪಡೆಯಬೇಕು ಹೇಳಿದ್ದಾರೆ.

  • ಹಿಂಡಲಗಾ ಗ್ರಾ.ಪಂ. ಅಧ್ಯಕ್ಷರಿಗೆ, ಸದಸ್ಯರಿಗೆ ಲೆಟರ್ ಕೊಟ್ಟಿದ್ದು ನಿಜ: ಆಶಾ ಐಹೊಳೆ

    ಹಿಂಡಲಗಾ ಗ್ರಾ.ಪಂ. ಅಧ್ಯಕ್ಷರಿಗೆ, ಸದಸ್ಯರಿಗೆ ಲೆಟರ್ ಕೊಟ್ಟಿದ್ದು ನಿಜ: ಆಶಾ ಐಹೊಳೆ

    ಬೆಳಗಾವಿ: ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ, ಸದಸ್ಯರಿಗೆ ನಾನು ಲೇಟರ್ ಕೊಟ್ಟಿದ್ದು ನಿಜ ಎಂದು ಮಾಜಿ ಬೆಳಗಾವಿ ಜಿ.ಪಂ. ಅಧ್ಯಕ್ಷೆ ಆಶಾ ಐಹೊಳೆ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2021ರಲ್ಲಿ ಹಿಂಡಲಗಾ ಗ್ರಾಮದ ಲಕ್ಷ್ಮಿದೇವಿ ಜಾತ್ರೆ ಇತ್ತು. ಜಾತ್ರೆಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರು ನನ್ನ ಬಳಿ ಬಂದಿದ್ದರು. ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಲೆಟರ್ ನೀಡುವಂತೆ ಕೋರಿದ್ದರು. ಆ ಪ್ರಕಾರ ಗ್ರಾಪಂ ಅಧ್ಯಕ್ಷರಿಗೆ, ಸದಸ್ಯರಿಗೆ ನಾನು ಲೇಟರ್ ಕೊಟ್ಟಿದ್ದು ನಿಜ. ಆದರೆ ನಾನು ಕೊಟ್ಟ ಲೆಟರ್‍ಗೆ ಏನು ಆಕ್ಷನ್ ಆಗಿದೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ತಮ್ಮದೇ ಪಕ್ಷದ ಸಂಸದರ ವಿರುದ್ಧವೇ ಕಿಡಿಕಾರಿದ ಸಚಿವ ಎಂಟಿಬಿ

    ಆರ್ ಡಿಪಿಆರ್ ಇಲಾಖೆ ಅನುಮೋದನೆ ನೀಡಿರುವ ವಿಷಯ ನನಗೆ ಇವತ್ತಷ್ಟೇ ಗೊತ್ತಾಗಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್, ನಾನು ಮುಖಾಮುಖಿಯಾಗಿ ಎಂದೂ ಭೇಟಿಯಾಗಿಲ್ಲ. ಅವರ ಆತ್ಮಹತ್ಯೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಆದರೆ ಸಂತೋಷ್ ಆತ್ಮಹತ್ಯೆಯ ದುರಂತ ಮಾಡಿಕೊಳ್ಳಬಾರದಿತ್ತು. ಆರ್ಡಿಪಿಆರ್ ಇಲಾಖೆಯಿಂದ ಬಂದಿರುವ ರಿಸೀವ್ ಕಾಪಿನೂ ನನಗೆ ಸಿಕ್ಕಿಲ್ಲ ಎಂದರು. ಇದನ್ನೂ ಓದಿ: ಸಂತೋಷ್‌ ಪಾಟೀಲ್‌ ಕೇಸ್‌ಗೆ ಟ್ವಿಸ್ಟ್‌ – 2021ರಲ್ಲಿ ಬೆಳಗಾವಿ ZP ಅಧ್ಯಕ್ಷೆ ಬರೆದ ಪತ್ರ ಔಟ್‌

    ಜಿ.ಪಂ. ಅಧಿಕಾರಿಗಳು ಅದನ್ನು ಕಡತದಲ್ಲಿ ಇಟ್ಟಿರುತ್ತಾರೆ. ಕಾಮಗಾರಿಗಳ ಮಂಜೂರಾತಿಗೆ ನನ್ನ ಬಳಿ ಹಿಂಡಲಗಾ ಗ್ರಾ.ಪಂ. ಸದಸ್ಯರು ಬಂದಿದ್ದರು. ಕೆಲಸ ಆದ ಬಗ್ಗೆ ನನಗೇನೂ ಮಾಹಿತಿ ನೀಡಿಲ್ಲ. ಆ ಬಗ್ಗೆ ಗೊತ್ತೂ ಇಲ್ಲ. ನನ್ನ ಪತ್ರಕ್ಕೆ ಅನುಮೋದನೆ ನೀಡಿರುವ ಪತ್ರವೂ ಇವತ್ತಷ್ಟೇ ಸಿಕ್ಕಿದೆ. 17.ಫೆ.2021ಕ್ಕೆ ಅನುಮೋದನೆ ಆಗಿರುವುದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಶಾಲ್‌, ನನ್ನ ಮದ್ವೆ ಫಿಕ್ಸ್ ಆಗಿದೆ ಓಡೋಗೋಣ ಬಾ- 10 ರೂ. ನೋಟಲ್ಲಿನ ಲವ್ವರ್ ಸಂದೇಶ ವೈರಲ್

    ಸಂತೋಷ್ ಪಾಟೀಲ್ ನನಗೆ ಗೊತ್ತೇ ಎಂಬ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ, ಈ ಬಗ್ಗೆ ತನಿಖಾಧಿಕಾರಿಗಳು ಡೀಪ್ ಸ್ಟಡಿ ಮಾಡಬೇಕು. ನಾನು ಕೊಟ್ಟಿರುವ ಲೆಟರ್ ಬಗ್ಗೆ ಮೇಲಾಧಿಕಾರಿಗಳಿಗೆ ಎಷ್ಟು ಮಾಹಿತಿ ಇದೆ ಎಂಬುದು ನನಗೆ ಗೊತ್ತಿಲ್ಲ. ಆದರೆ ನಾನು ಪತ್ರ ಬರೆದಿದ್ದು ನಿಜ ಎಂದು ಬೆಳಗಾವಿಯಲ್ಲಿ ನಿಕಟಪೂರ್ವ ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮಾಹಿತಿ ನೀಡಿದ್ದಾರೆ.

  • ಮಿಸ್ಟರ್ ಈಶ್ವರಪ್ಪ, ಮಾನನಷ್ಟ ಮೊಕದ್ದಮೆ ಯಾರ ಮೇಲೆ ಹಾಕಿದಪ್ಪಾ: ಸಿದ್ದು ಪ್ರಶ್ನೆ

    ಮಿಸ್ಟರ್ ಈಶ್ವರಪ್ಪ, ಮಾನನಷ್ಟ ಮೊಕದ್ದಮೆ ಯಾರ ಮೇಲೆ ಹಾಕಿದಪ್ಪಾ: ಸಿದ್ದು ಪ್ರಶ್ನೆ

    ಚಿಕ್ಕಮಗಳೂರು: ಮಿಸ್ಟರ್ ಈಶ್ವರಪ್ಪ ಸಂತೋಷ್ ಪಾಟೀಲ್ ಯಾರೆಂದು ಗೊತ್ತಿಲ್ಲ ಅಂದ ಮೇಲೆ ಮಾನನಷ್ಟ ಮೊಕದ್ದಮೆ ಯಾರ ಮೇಲೆ ಹಾಕಿದ್ದಪ್ಪಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಚಿವ ಈಶ್ವರಪ್ಪನವರನ್ನ ಪ್ರಶ್ನಿಸಿದ್ದಾರೆ.

    ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ಕಂಟ್ರಾಕ್ಟರ್ ಸಂತೋಷ್ ಪಾಟೀಲ್ ಯಾರೆಂದು ನನಗೆ ಗೊತ್ತೇ ಇಲ್ಲ ಎಂದರು. ಹಾಗಾದರೆ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಲ್ಲ ಯಾರ ಮೇಲೆ ಹಾಕಿದಪ್ಪಾ? ಹೇಗೆ ಹಾಕಿದಪ್ಪಾ ಎಂದು ಈಶ್ವರಪ್ಪ ವಿರುದ್ಧ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರಿಂದ ದಾಂಧಲೆ

    ಸಂತೋಷ್ ಪಾಟೀಲ್ ಯಾರೆಂದು ನನಗೆ ಗೊತ್ತೆ ಇಲ್ಲ ಎಂದಿದ್ದರು. ಆಗ ಮಾಧ್ಯಮ ಮಿತ್ರರು ಅವರ ಫೋಟೋವನ್ನು ಹಾಕಿ-ಹಾಕಿ ತೋರಿಸಿದ್ದರು. ಸಂತೋಷ್ ಪಾಟೀಲ್ ಯಾರೆಂದು ಗೊತ್ತೆ ಇಲ್ಲ ಎಂದ ಮೇಲೆ ಅವರ ಮೇಲೆ ಡಿಫಾರ್ಮೇಷನ್ ಕೇಸ್ ಹೇಗೆ ಹಾಕಿದ್ದಪ್ಪಾ ಎಂದು ಪ್ರಶ್ನಿಸಿದ್ದಾರೆ.

    ಇದೇ ವೇಳೆ ಭ್ರಷ್ಟರನ್ನು ಭ್ರಷ್ಟರು ರಕ್ಷಣೆ ಮಾಡುತ್ತಿದ್ದಾರೆ. ಈ ಸಿ.ಟಿ. ರವಿ, ಆ ಈಶ್ವರಪ್ಪನನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು. ಜೊತೆಗೆ ನಾನು ಜಿಲ್ಲೆಯಲ್ಲಿ ಕೇಳಿದ್ದೇನೆ. ಅವನ್ಯಾರೋ ಸುದರ್ಶನ್ ಅಂತೆ. ಅಧಿಕಾರಿಗಳು ಅವನ ಮನೆ ಬಾಗಿಲಿಗೆ ಹೋಗಬೇಕಂತೆ ಎಂದು ಶಾಸಕ ಸಿ.ಟಿ. ರವಿ ಸಂಬಂಧಿ ಹಾಗೂ ಕಂಟ್ರಾಕ್ಟರ್ ಸುದರ್ಶನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ವಿಜಯನಗರ ಕಾರ್ಯಕಾರಿಣಿಯಲ್ಲಿ ಹಿಂದುತ್ವ ಅಜೆಂಡಾ ಜಪ

    ಸಭೆಯಲ್ಲಿ ಇಂದು ಕಂಟ್ರಾಕ್ಟರ್ ಸಾವನ್ನಪ್ಪಿರುವುದಕ್ಕೆ ಸರ್ಕಾರವೇ ಕಾರಣ. ಇಂತಹ ಭ್ರಷ್ಟ ಹಾಗೂ ಪರ್ಸೆಂಟೇಜ್ ಸರ್ಕಾರ ಬೇಕಾ ಎಂದು ಪ್ರಶ್ನಿಸಿ, ಮುಂದಿನ ಚುನಾವಣೆಯಲ್ಲಿ ಇಂತಹ ಭ್ರಷ್ಟ ಹಾಗೂ ಪರ್ಸೆಂಟೇಜ್ ಸರ್ಕಾರವನ್ನು ಕಿತ್ತೊಗೆಯುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

  • ನಾವೆಲ್ಲಾ ಬಾರ್‌ನಲ್ಲಿ ಕುಡಿದಿದ್ವಿ, ಸಂತೋಷ್ ಫ್ರೂಟ್ ಜ್ಯೂಸ್ ತಗೊಂಡು ರೂಮ್‍ಗೆ ಹೋಗಿದ್ದರು – ಸ್ನೇಹಿತರು ಹೇಳಿದ್ದೇನು?

    ನಾವೆಲ್ಲಾ ಬಾರ್‌ನಲ್ಲಿ ಕುಡಿದಿದ್ವಿ, ಸಂತೋಷ್ ಫ್ರೂಟ್ ಜ್ಯೂಸ್ ತಗೊಂಡು ರೂಮ್‍ಗೆ ಹೋಗಿದ್ದರು – ಸ್ನೇಹಿತರು ಹೇಳಿದ್ದೇನು?

    ಉಡುಪಿ: ನಾವೆಲ್ಲಾ ಬಾರ್ ನಲ್ಲಿ ಕುಡಿದಿದ್ದೆವು. ಸಂತೋಷ್ ಪಾಟೀಲ್ ಫ್ರೂಟ್ ಜ್ಯೂಸ್ ತಗೊಂಡು ರೂಮ್‍ಗೆ ಹೋಗಿದ್ದರು ಎಂದು ಸ್ನೇಹಿತರಾದ ಪ್ರಶಾಂತ್ ಶೆಟ್ಟಿ ಹಾಗೂ ಸಂತೋಷ್ ಮೇದಪ್ಪ ಹೇಳಿದ್ದಾರೆ.

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಈ ಇಬ್ಬರು ಸದ್ಯ ಪೊಲೀಸರ ವಶದಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಿರುವ ಅವರು, ಶಾಂಭವಿ ಲಾಡ್ಜ್ ನಲ್ಲಿ ನಡೆದ ಘಟನೆಯನ್ನು ಹಂತಹಂತವಾಗಿ ವಿವರಿಸಿದ್ದಾರೆ. ಇದನ್ನೂ ಓದಿ: ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉಡುಪಿ ಹೋಟೆಲ್‍ನಲ್ಲಿ ಪಂಚನಾಮೆ

    ಅಂದು ನಡೆದಿದ್ದೇನು..?: ಏಪ್ರಿಲ್ 7ರಂದು ಧಾರವಾಡದಿಂದ ಮೂವರು ಕಾರಿನಲ್ಲಿ ಪಯಣ ಮಾಡಿದೆವು. ಏಪ್ರಿಲ್ 8 ಚಿಕ್ಕಮಗಳೂರಿಗೆ ತಲುಪಿದೆವು. 4 ದಿನ ಚಿಕ್ಕಮಗಳೂರಿನ ಬಾನ್ ಆಫ್ ಬೆರ್ರಿ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದೆವು. ಏಪ್ರಿಲ್ 11ರ ಸಂಜೆ 4 ಗಂಟೆಗೆ ಉಡುಪಿಗೆ ತಲುಪಿದೆವು. ಅಲ್ಲಿ ಶಾಂಭವಿ ಲಾಡ್ಜ್‍ನಲ್ಲಿ ಸಂಜೆ 5 ಗಂಟೆಗೆ ರೂಮ್ ಪಡೆದೆವು.

    ಸಂತೋಷ್ ರೂಂ. ನಂಬರ್ 207ರಲ್ಲಿ ಇದ್ದರೆ, ನಾವಿಬ್ಬರು ರೂಂ ನಂಬರ್ 209ರಲ್ಲಿ ತಂಗಿದ್ದೆವು. ಸಂತೋಷ್ ಪಾಟೀಲ್ ಹೆಸರಲ್ಲೇ 2 ರೂಮ್ ಬುಕ್ ಆಗಿತ್ತು. ಸಂಜೆ 7 ಗಂಟೆ ನಂತರ ಡ್ರಿಂಕ್ಸ್ ಮಾಡಲು ಬಾರ್‍ಗೆ ಹೋಗಿವು. ಬಾರ್‍ನಿಂದ ಬರಬೇಕಾದರೆ ಸಂತೋಷ್ ಫ್ರೂಟ್ ಜ್ಯೂಸ್ ತಗೊಂಡಿದ್ದರು. ನಾವಿಬ್ಬರೂ ಊಟಕ್ಕೆ ಹೋದೆವು. ಆದರೆ ಸಂತೋಷ್ ಮಾತ್ರ ಲಾಡ್ಜ್‍ಗೆ ಹೋದ. ರಾತ್ರಿ 9:45 ಸುಮಾರಿಗೆ ಡ್ರಿಂಕ್ಸ್ ಮಾಡಿ 209ರಲ್ಲಿ ನಾವಿಬ್ಬರೂ ಮಲಗಿದೆವು. ಇದನ್ನೂ ಓದಿ: ಎಫ್‌ಎಸ್‌ಎಲ್‌ ವರದಿಯ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ: ಉಡುಪಿ ಎಸ್‌ಪಿ

    ಇತ್ತ ಏಪ್ರಿಲ್ 11ರ ರಾತ್ರಿ ಸಂತೋಷ್ ತನ್ನ ಗೆಳೆಯರಿಗೆ ಗುಡ್ ನೈಟ್ ಹೇಳಿದ್ದರು. ಬೆಳಗ್ಗೆ ಎಬ್ಬಿಸಬೇಡಿ ಎಂದಿದ್ದರು. ರಾತ್ರಿ ಮಲಗಿದ್ದ ಸಂತೋಷ್ ಏಪ್ರಿಲ್ 12 ರಂದು ಬೆಳಗ್ಗೆ ಎದ್ದಿರಲಿಲ್ಲ. ನಾವು ಕೊಠಡಿ ಸಂಖ್ಯೆ 209 ರಲ್ಲಿ ಇದ್ದೆವು. ಪಾಟೀಲ್ ಎದ್ದಿಲ್ಲ, ತಿಂಡಿಗೆ ಅಂತ ನಾವು ಇಬ್ಬರು ಹೊರಗೆ ಹೋಟೆಲ್ ಗೆ ಹೋಗಿ ಬಂದೆವು. ಬೆಳಗ್ಗೆ 9:30- 10 ಗಂಟೆ ಸುಮಾರಿಗೆ ಬೆಳಗಾವಿಯಿಂದ ಗೆಳೆಯ ಸುನಿಲ್ ಪವಾರ್ ಅವರಿಂದ ಫೋನ್ ಬಂದಿದೆ. ಕರೆ ಮಾಡಿ ಸಂತೋಷ್ ಪಾಟೀಲ್ ಕಾಣೆಯಾದ ಬಗ್ಗೆ ಮೀಡಿಯಾಗಳಲ್ಲಿ ಬರುತ್ತಿದೆ ಎಂದು ಹೇಳಿದ್ದಾರೆ ಅಷ್ಟರವರೆಗೆ ನಾವಿಬ್ಬರೂ ಮೊಬೈಲ್ ನೋಡಿರಲಿಲ್ಲ.

    ತಕ್ಷಣ ಕೊಠಡಿ ಸಂಖ್ಯೆ 207ಕ್ಕೆ ತೆರಳಿ ಬಾಗಿಲು ಬಡಿದಿದ್ದೇವೆ. ಫೋನ್ ಮಾಡಿದ್ದೇವೆ. ಆದರೆ ಎರಡಕ್ಕೂ ಸಂತೋಷ್ ರೆಸ್ಪಾನ್ಸ್ ಮಾಡದೆ ಇದ್ದಾಗ ರಿಸೆಪ್ಷನ್ ಗೆ ಓಡಿ ಹೋದೆವು. ರೂಮ್ ನಂಬರ್ 207 ರ ಗೆಳೆಯ ಎಲ್ಲಾದರೂ ಹೋಗಿದ್ದಾರಾ ಎಂದು ಕೇಳಿದೆವು. ಇಲ್ಲ. ಕೀ ಕೊಟ್ಟು ಹೋಗಿಲ್ಲ ಎಂದು ರಿಸೆಪ್ಷನಿಸ್ಟ್ ಹೇಳಿದ್ರು. ಇದರಿಂದ ಗಾಬರಿಗೊಂಡ ನಾವು ಮತ್ತೆ ಸಂತೋಷ್ ನಂಬರಿಗೆ ಫೋನ್ ಮಾಡಿದೆವು. ಇದನ್ನೂ ಓದಿ: ಸಂತೋಷ್‌ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಕಾಂಗ್ರೆಸ್‌ ನಾಯಕರ ಸಾಂತ್ವನ

    ಮತ್ತೆ ಕೊಠಡಿಯತ್ತ ಬಂದು ಬಾಗಿಲು ಬಡಿದ್ದೇವೆ. ಸುಮಾರು ಹತ್ತರಿಂದ ಹದಿನೈದು ನಿಮಿಷ ಬಿಟ್ಟು ಮತ್ತೆ ರಿಸೆಪ್ಷನ್ ಗೆ ಬಂದು ಡುಬ್ಲಿಕೇಟ್ ಕೀ ಯಲ್ಲಿ ಓಪನ್ ಮಾಡುವಂತೆ ಕೇಳಿಕೊಂಡೆವು. ಡೂಪ್ಲಿಕೇಟ್ ಕೀ ಬಳಸಿ ಹೋಟೆಲ್ ಸಿಬ್ಬಂದಿಯೊಂದಿಗೆ 207 ಕೋಣೆಯ ಬಾಗಿಲನ್ನು ಬೆಳಗ್ಗೆ 11 ಗಂಟೆ ಸುಮಾರಿಗೆ ಬಾಗಿಲು ತೆಗೆದು ನೋಡಿದಾಗ ಸಂತೋಷ್ ಪಾಟೀಲ್ ಮೃತದೇಹ ಪತ್ತೆಯಾಗಿದೆ ಎಂದು ವಿವರಿಸಿರುವ ಮಾಹಿತಿ ಪಬ್ಲಿಕ್ ಟಿವಿಗೆ ದೊರೆತಿದೆ.

  • ದಾಖಲೆಗಳಿದ್ರೆ ಇವತ್ತೆ ಬಿಡುಗಡೆ ಮಾಡಬೇಕು – ರಮೇಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲ್

    ದಾಖಲೆಗಳಿದ್ರೆ ಇವತ್ತೆ ಬಿಡುಗಡೆ ಮಾಡಬೇಕು – ರಮೇಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲ್

    ಬೆಳಗಾವಿ: ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಹೃದಯದಿಂದ ಸ್ವಾಗತ ಮಾಡುತ್ತೇನೆ. ಸೋವಾರದವರೆಗೆ ಕಾಯುವುದು ಬೇಡ ದಾಖಲೆಗಳಿದ್ದರೆ, ಇಂದೇ ಬಿಡುಗಡೆ ಮಾಡಲಿ ಎಂದು ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.

    ನಗರದಲ್ಲಿ ಸಿಡಿ ಹಿಂದೆ ಇರುವ ಮಹಾನಾಯಕ ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಕಾರಣ, ಅವರ ದಾಖಲೆ ಬಿಡುಗಡೆ ಮಾಡುವುದರ ಬಗ್ಗೆ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಹೃದಯದಿಂದ ಸ್ವಾಗತ ಮಾಡುತ್ತೇನೆ. ಸೋವಾರದವರೆಗೆ ಕಾಯುವುದು ಬೇಡ. ಧಾರವಾಹಿಯಲ್ಲಿ ಕುತೂಹಲ ಕ್ರಿಯೇಟ್ ಮಾಡುವ ರೀತಿ ಮಾಡಬೇಡಿ. ದಾಖಲೆಗಳಿದ್ದರೆ, ಇವತ್ತೆ ಬಿಡುಗಡೆ ಮಾಡಬೇಕು. ಈ ಘಳಿಗೆಯಲ್ಲಿ ಬಿಡುಗಡೆ ಮಾಡಬೇಕು. ಬೇಜವಾಬ್ದಾರಿ ಹೇಳಿಕೆಯಿಂದ ಗೊಂದಲ ಸೃಷ್ಟಿ ಆಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

    ಸಂತೋಷ್ ಪಾಟೀಲ್ ಮನೆಗೆ ನಿರಾಣಿ ಹೋಗಿ ಬಂದಿದ್ದಾರೆ. ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೊಳ್ಕರ್ ಎರಡು ಸಲ ಈಶ್ವರಪ್ಪ ಬಳಿ ಕರೆದುಕೊಂಡು ಹೋಗಿದ್ದೆ ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಕೆಲಸ ಆಗಿದೆ ಎಂದಿದ್ದಾರೆ. ಬಿಜೆಪಿ ಪದಾಧಿಕಾರಿಗಳು ಸಂತೋಷ್ ನಮ್ಮ ಕಾರ್ಯಕರ್ಯ ಅಲ್ಲ ಎಂದಿದ್ದಾರೆ. ಎಲ್ಲಾ ಗೊಂದಲ ಬಿಜೆಪಿ ಪಕ್ಷದಲ್ಲಿ ಇದೆ. ಇದನ್ನು ಮೊದಲು ಸರಿ ಮಾಡಲಿ ಎಂದಿದ್ದಾರೆ.

     

    ಸಂತೋಷ್ ಪಾಟೀಲ್ ಕೆಲಸ ಮಾಡುವಾಗ ರಮೇಶ್ ಜಿಲ್ಲಾ ಉಸ್ತುವಾರಿ ಮಂತ್ರಿ ಆಗಿದ್ದರು. ನಾನು ಹತ್ತು ಸಾರಿ ಅವರನ್ನು ಕರೆಸುವ ಯತ್ನ ಮಾಡಿದೆ. ತಾಲೂಕು ಪಂಚಾಯತ್ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡಿದೆ. ಆದರೆ ಅವನು ಬರಲೇ ಇಲ್ಲ. ನಾನು ಬಿಜೆಪಿ, ಬಿಜೆಪಿ ಎನ್ನುತ್ತಲೇ ಇದ್ದ. ನಾನು ರಮೇಶ್ ಜಾರಕಿಹೊಳಿ ಫಾಲೋವರ್ ಎನ್ನುತ್ತಿದ್ದ. ಯಾರು ಕೆಲಸ ಮಾಡಿಸಿದರು, ಯಾರು ಪ್ರಚೋದನೆ ಮಾಡಿದರು. ಯಾರ ಕುಮ್ಮಕ್ಕು, ಆಶ್ವಾಸನೆ ಮೇಲೆ ಸಂತೋಷ್ ಪಾಟೀಲ್ ಮಾಡಿದ್ದರು. ಬಿಜೆಪಿ ಸಂಘಟನೆ ಆಗಲಿ ಅಂತ ಕೆಲಸ ಮಾಡಿರಬಹುದು ಎಂದು ಹೇಳಿದ್ದಾರೆ.

    108 ಕಾಮಗಾರಿ ಕಳಪೆ ಎಂಬ ಹೇಳಿಕೆ ವಿಚಾರ: ಟ್ರೋಲ್ ಮಾಡಲಿ ನಾನು ಸ್ವಾಗತ ಮಾಡುತ್ತೇನೆ. ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ. ಇಲಾಖೆ ಅಧಿಕಾರಿಗಳ ಜವಾಬ್ದಾರಿ ಇದೆಯಲ್ಲ. ಜಿಲ್ಲಾ ಪಂಚಾಯತಿ ಸಿಇಓ ಅವರನ್ನು ಮೂರು ಸಲ ಭೇಟಿಯಾಗಿದ್ದೇನೆ. ನನ್ನ ಗಮನಕ್ಕೆ ಬಂದಿದ್ದರಿಂದಲೇ ನಾನು ಓಡಾಡಿದ್ದೇನೆ. ಯಾವ ಇಲಾಖೆಯಿಂದ ಕೆಲಸ ಆಗಿದೆ, ಕಾಮಗಾರಿ ಆಗಿದೆ. ಅದು ಕಳಪೆನಾ ಏನು ಅಂತ ಎಂಬುವುದು ಅವರ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈಶ್ವರಪ್ಪ ಭರವಸೆ ಮೇಲೆ ಸಂತೋಷ್ ಪಾಟೀಲ್ ಕೆಲಸ ಮಾಡಿದ್ದಾನೆ. ಈ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧವು ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

  • ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉಡುಪಿ ಹೋಟೆಲ್‍ನಲ್ಲಿ ಪಂಚನಾಮೆ

    ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉಡುಪಿ ಹೋಟೆಲ್‍ನಲ್ಲಿ ಪಂಚನಾಮೆ

    ಉಡುಪಿ: ಸಂತೋಷ್ ಪಾಟೀಲ್ ಇದ್ದ ಶಾಂಭವಿ ಲಾಡ್ಜ್‌ನ 207ರ ಕೊಠಡಿಯಲ್ಲಿ ಉಡುಪಿ ಪೊಲೀಸರು ಪಂಚನಾಮೆ ಮಾಡಿದ್ದಾರೆ.

    ಸಂತೋಷ್ ಸ್ನೇಹಿತರಾದ ಪ್ರಶಾಂತ್ ಶೆಟ್ಟಿ, ಸಂತೋಷ್ ಮೇದಪ್ಪ ಸೇರಿ ಕುಟುಂಬದ 7 ಜನರ ಸಮ್ಮುಖದಲ್ಲಿ ಎಫ್‍ಎಸ್‍ಎಲ್, ಶ್ವಾನದಳ, ಬೆರಳಚ್ಚು ತಜ್ಞರು ಸುಮಾರು 2 ಗಂಟೆಗಳ ಕಾಲ ಪರಿಶೀಲನೆ ನಡೆಸಿ ಸ್ಥಳ ಮಹಜರು ನಡೆಸಿದರು.

    ಕೊಠಡಿಯ ಬೆಡ್‍ಮೇಲೆ ಸಂತೋಷ್ ಅಂಗಾತ ಮಲಗಿದ್ದ ಸ್ಥಿತ್ತಿಯಲ್ಲಿದ್ದರು. ಬಾಯಿಯಲ್ಲಿ ನೊರೆ ತುಂಬಿಕೊಂಡಿತ್ತು. ಕಸದ ಬುಟ್ಟಿಯಲ್ಲಿ ಜ್ಯೂಸ್ ಬಾಟಲ್ ಪತ್ತೆಯಾಗಿದ್ದು, ಜ್ಯೂಸ್‍ಗೆ ವಿಷ ಬೆರೆಸಿ ಸೇವಿಸಿರಬಹುದು ಅಂತ ಶಂಕಿಸಲಾಗಿದೆ.

    ಬಾಟಲ್, ಪ್ಯಾಕೆಟ್, ಬ್ಯಾಗ್, ಚಪ್ಪಲಿ, ವಾಟರ್ ಬಾಟಲ್ ಅನ್ನು ಸೀಜ್ ಮಾಡಲಾಗಿದೆ. ಲಾಡ್ಜ್ ಆವರಣದಲ್ಲಿದ್ದ ಕಾರನ್ನು ಪೊಲೀಸರು ಪರಿಶೀಲಿಸಿ, ಕಾರಿನಲ್ಲಿದ್ದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಸಂತೋಷ್ ಕುಟುಂಬಸ್ಥರು ಈಶ್ವರಪ್ಪ ಮತ್ತವರ ಆಪ್ತರ ಬಂಧನ ಆಗುವರೆಗೂ ದೇಹ ಮುಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಕೊನೆಗೆ ಪೊಲೀಸರು ಮನವೊಲಿಸಿದರು.  ಇದನ್ನೂ ಓದಿ: ವರ್ಕ್‌ ಆರ್ಡರ್‌ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್‌ – ಆತ್ಮಹತ್ಯೆಗೆ ಕಾರಣ ಏನು?

    ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಐಜಿಪಿ ದೇವಜ್ಯೋತಿ ರೇ ಮಾತಾಡಿ, ಅಸಹಜ ಸಾವು, ಆತ್ಮಹತ್ಯೆ ಎರಡು ಕೇಸ್ ದಾಖಲಿಸಿದ್ದೇವೆ. ದೂರಿನ ಅನ್ವಯ ಈಶ್ವರಪ್ಪ ಮತ್ತಿಬ್ಬರು ಆಪ್ತರ ಮೇಲೆ ಎಫ್‍ಐಆರ್ ದಾಖಲಿಸಿದ್ದೇವೆ ಎಂದು ತಿಳಿಸಿದರು. ಆಘಾತಗೊಂಡಿರುವ ಪತ್ನಿ ಜಯಶ್ರೀ, ತಾಯಿ ಪಾರ್ವತಿ ಎಲ್ಲರೂ ನ್ಯಾಯ ಸಿಗಬೇಕು ಅಂತ ಆಗ್ರಹಿಸಿದ್ದಾರೆ.

  • ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ

    ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ

    ಬೆಂಗಳೂರು: ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಿದೆ.

    ಹೈಕಮಾಂಡ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅಲ್ಲದೆ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವರು ಮೈಸೂರು ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡುವ ಸಾಧ್ಯತೆಗಳಿವೆ. ಇತ್ತ ಮಂಗಳೂರು ಪ್ರವಾಸದಲ್ಲಿರುವ ಸಿಎಂ ಮಧ್ಯಾಹ್ನ ರಾಜಧಾನಿಗೆ ವಾಪಸ್ಸಾಗಲಿದ್ದಾರೆ.

    ಕಳೆದ ರಾತ್ರಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ದೆಹಲಿಯಲ್ಲಿ ಅಮಿತ್ ಶಾ ಜೊತೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಕರಣ ರಾಜ್ಯದಲ್ಲಿ ಸರ್ಕಾರ ಮತ್ತು ಪಕ್ಷದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಮಾಹಿತಿ ಪಡೆದುಕೊಂಡ ಬಳಿಕ ಹೈಕಮಾಂಡ್ ಈಶ್ವರಪ್ಪ ರಾಜೀನಾಮೆಗೆ ಸೂಚನೆ ಕೊಟ್ಟಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.  ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲು

    ಇಂದು ಬೆಳಗ್ಗೆ ಹೈಕಮಾಂಡ್ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮೂಲಕ ಹೈಕಮಾಂಡ್ ಗೆ ವಿವರಣೆ ನೀಡಲಾಗಿದೆ. ಈಶ್ವರಪ್ಪ ಅವರಿಂದ ವಿವರಣೆ ಪಡೆದು ಹೈಕಮಾಂಡ್ ಗೆ ರವಾನೆ ಮಾಡಲಾಗಿದೆ. ಈಶ್ವರಪ್ಪ ವಿವರಣೆಗೆ ಹೈಕಮಾಂಡ್ ಗರಂ ಆಗಿದೆ. ಇದನ್ನೂ ಓದಿ: ವರ್ಕ್‌ ಆರ್ಡರ್‌ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್‌ – ಆತ್ಮಹತ್ಯೆಗೆ ಕಾರಣ ಏನು?

    ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರಾಗಿದ್ದ ಸಂತೋಷ್ ಪಾಟೀಲ್ ಮಾಧ್ಯಮ ಪತ್ರಿನಿಧಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೋಮವಾರ ತಡರಾತ್ರಿ ವಾಟ್ಸಪ್ ಮೆಸೇಜ್ ಮಾಡಿದ್ದರು. ತಮ್ಮ ವಾಟ್ಸಪ್ ಸಂದೇಶದ್ಲಿ, ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ್ದರು. ಈಶ್ವರಪ್ಪ ಅವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

    ಪತ್ರದ ಸಾರಾಂಶ:
    ನನ್ನ ಸಾವಿಗೆ ನೇರ ಕಾರಣ ಗ್ರಾಮೀಣ ಅಭಿವೃದ್ಧಿ ಪಂಚಾಯಿತ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ. ಕರ್ನಾಟಕ ಸರ್ಕಾರ ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೋತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್.ಯಡಿಯೂರಪ್ಪನವರು ಹಾಗೆ ಅವರಿವರೆನ್ನದೇ ಎಲ್ಲರು ಸಹಾಯಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ್ ಮತ್ತು ಪ್ರಶಾಂತ್‍ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದಿದ್ದರು.

  • ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲು

    ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲು

    ಉಡುಪಿ: ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಉಡುಪಿ ನಗರ ಠಾಣೆಯಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ ಎಫ್‍ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್, ಎ-2 ಈಶ್ವರಪ್ಪ ಆಪ್ತ ರಮೇಶ್ ಆಗಿದ್ದು, ಇವರುಗಳ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ರಡಿ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ.

    ಸಂತೋಷ್ ಆತ್ಮಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಈಶ್ವರಪ್ಪ ವಿರುದ್ಧ ಸಂತೋಷ್ ಸಹೋದರ ಪ್ರಶಾಂತ್ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಸಂತೋಷ್ ಸಾವಿಗೆ ಕಮಿಷನ್ ಕಾಟವೇ ಕಾರಣ ಎಂದು ಉಲ್ಲೇಖಿಸಿದ್ದಾರೆ. ಸಂತೋಷ್ ಅವರು ಹಿಂಡಲಗಾ ದೇವಿ ಜಾತ್ರೆ ಕಾಮಗಾರಿ ವಹಿಸಿಕೊಂಡಿದ್ದರು. ಕಾಮಗಾರಿಯ 4 ಕೋಟಿ ಬಿಲ್ ಮಂಜೂರು ಮಾಡಲು ಸಂತೋಷ್ ಕೇಳಿದ್ದರು. ಆದರೆ ಈ ಬಿಲ್ ಮಂಜೂರು ಮಾಡಲು 40% ಕಮಿಷನ್ ಬೇಡಿಕೆಯಿಟ್ಟಿದ್ದರು. ಇದೀಗ ಕಮಿಷನ್ ಆರೋಪಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಸಂತೋಷ್ ಸಹೋದರ ಉಲ್ಲೇಖಿಸಿದ್ದಾರೆ.

    ಬಿಲ್ ಮಂಜೂರು ಮಾಡಲು 40% ಕಮಿಷನ್ ಕೇಳಿದ್ದಾಗಿ ದೂರು ನೀಡಿದ್ದು, ಈಶ್ವರಪ್ಪ, ಬಸವರಾಜ್, ರಮೇಶ್ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು- ಇಂದು ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

    ಇತ್ತ ರಾತ್ರಿಯೇ ಲಾಡ್ಜ್‍ಗೆ 8 ಮಂದಿ ಸಂತೋಷ್ ಕುಟುಂಬಸ್ಥರು ಆಗಮಿಸಿದ್ದರು. ಲಾಡ್ಜ್ ನ ಕೊಠಡಿ ಬಳಿ ತೆರಳಿ ಮೃತದೇಹ ವೀಕ್ಷಿಸಿದ್ದರು. ಎಫ್‍ಎಸ್‍ಎಲ್ ಟೀಂ ಕೂಡ ಉಡುಪಿ ಲಾಡ್ಜ್‍ಗೆ ಆಗಮಿಸಿದೆ. ವಿಧಿ ವಿಜ್ಞಾನ ತಜ್ಞರು 3 ಜೀಪ್‍ಗಳಲ್ಲಿ ಆಗಮಿಸಿದ್ದಾರೆ. 24 ಗಂಟೆಗೂ ಹೆಚ್ಚು ಕಾಲ ಲಾಡ್ಜ್‍ನಲ್ಲೇ ಮೃತದೇಹ ಇದ್ದು, ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲೇ ಸಂತೋಷ್ ಮೃತದೇಹವಿತ್ತು.