Tag: Santosh Hegde

  • ವಿಧಾನಸೌಧದ ಬಳಿ ಹಣ ಸಿಕ್ಕಿದ್ದು ಭ್ರಷ್ಟರ ಧೈರ್ಯಕ್ಕೆ ಸಾಕ್ಷಿ: ಸಂತೋಷ್ ಹೆಗ್ಡೆ

    ವಿಧಾನಸೌಧದ ಬಳಿ ಹಣ ಸಿಕ್ಕಿದ್ದು ಭ್ರಷ್ಟರ ಧೈರ್ಯಕ್ಕೆ ಸಾಕ್ಷಿ: ಸಂತೋಷ್ ಹೆಗ್ಡೆ

    ಧಾರವಾಡ: ವಿಧಾನ ಸೌಧದ ವೆಸ್ಟ್ ಗೇಟ್ ಬಳಿಯ ರಕ್ಷಣಾ ಸಿಬ್ಬಂದಿಗೆ ತಪಾಸಣೆ ವೇಳೆ ಭಾರೀ ಮೊತ್ತದ ಹಣ ಸಿಕ್ಕಿರುವುದು ಭ್ರಷ್ಟಾಚಾರಿಗೆ ಎಷ್ಟು ಧೈರ್ಯವಿದೆ ಎನ್ನುವುದನ್ನು ತೋರಿಸುತ್ತದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.

    ನಗರದಲ್ಲಿ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸೌಧದ ಬಳಿ ಹಣ ಸಿಕ್ಕಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಇಂತಹ ಘಟನೆ ನಡೆದಿತ್ತು. ಆದರೆ ಇದು ಭ್ರಷ್ಟಾಚಾರದ ವಿಚಾರವಲ್ಲ. ಭ್ರಷ್ಟಾಚಾರಿಗಳಿಗೆ ಎಷ್ಟು ಧೈರ್ಯವಿದೆ ಎನ್ನುವುದು ತೋರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಮಂತ್ರಿಗಳ ಆಪ್ತ ಸಹಾಯಕರೇ ಘಟನೆಯಲ್ಲಿ ಸಿಕ್ಕಿಹಾಕಿಕೊಂಡಿದ್ದು. ಇದರಲ್ಲಿ ಮಂತ್ರಿಗಳದ್ದು ಎಷ್ಟಿದೆ ಎಂಬುವುದು ಹೇಳುವುದಕ್ಕೆ ಹೋಗುವುದಿಲ್ಲ. ಆದರೆ ಮಂತ್ರಿಗಳ ಪಿಎ ಗಳಿಗೆ ಅಷ್ಟು ಹಣ ಯಾರು ಕೊಡೋದಿಲ್ಲ. ಇದರಲ್ಲಿ ದೊಡ್ಡವರ ಕೈವಾಡವಿದೆ ಎಂದು ಅನ್ನಿಸುತ್ತದೆ. ಈ ಕುರಿತು ಸಮಗ್ರ ತನಿಖೆಯಾಗಬೇಕು. ಯಾರ ಕೈವಾಡವಿದೆ ಎನ್ನುವುದು ತಿಳಿಯಬೇಕಿದೆ ಆಗ್ರಹಿಸಿದರು. ಇದನ್ನು ಓದಿ: ವಿಧಾನಸೌಧದ ಗೇಟ್ ಬಳಿ ಹಣ ಸಿಕ್ಕ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್

    ಈ ಘಟನೆಯ ಮೂಲಕ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಾ ಎಂಬುವುದು ತಿಳಿಯುತ್ತದೆ. ವಿಚಾರಣೆ ಮಾಡದೇ ಇದ್ದರೆ, ಅದು ಬೇರೆ ಆರ್ಥ ಪಡೆದುಕೊಳ್ಳುತ್ತೆ ಎಂದರು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಾಯುಕ್ತ ಚರಿತ್ರೆಯಲ್ಲಿ ಒಬ್ಬ ದಕ್ಷ ಅಧಿಕಾರಿ ಮಧುಕರ್ ಶೆಟ್ಟಿ: ಸಂತೋಷ್ ಹೆಗ್ಡೆ

    ಲೋಕಾಯುಕ್ತ ಚರಿತ್ರೆಯಲ್ಲಿ ಒಬ್ಬ ದಕ್ಷ ಅಧಿಕಾರಿ ಮಧುಕರ್ ಶೆಟ್ಟಿ: ಸಂತೋಷ್ ಹೆಗ್ಡೆ

    ಬೆಂಗಳೂರು: ರಿಯಲ್ ಸಿಂಗಂ ಐಪಿಎಸ್ ದಕ್ಷ ಅಧಿಕಾರಿ ಮಧುಕರ್ ಶೆಟ್ಟಿ ಅವರು ಶುಕ್ರವಾರ ನಿಧನರಾಗಿದ್ದು, ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮಧುಕರ್ ಶೆಟ್ಟಿ ಅವರು ನಮ್ಮನ್ನೆಲ್ಲ ಅಗಲಿರೋದು ತುಂಬಾ ಬೇಸರವಾಗುತ್ತಿದೆ. ಲೋಕಾಯುಕ್ತ ಚರಿತ್ರೆಯಲ್ಲೇ ಮಧುಕರ್ ಅವರು ಒಬ್ಬ ಉತ್ತಮ ಪೊಲೀಸ್ ಅಧಿಕಾರಿ. ಲೋಕಾಯುಕ್ತದಲ್ಲಿ ಇರುವಾಗ ನಮ್ಮೊಂದಿಗೆ ಇದ್ದು ಸಹಕರಿಸಿದ್ದರು. ಅವರೊಬ್ಬರು ನಿಷ್ಠಾವಂತ, ದಕ್ಷ ಅಧಿಕಾರಿ. ಯಾವ ರಾಜಕಾರಣಿಗೂ ಅಥವಾ ಯಾವುದೇ ವ್ಯಕ್ತಿಗಳಿಗೂ ಅವರು ಹೆದರದೇ ಕೆಲಸ ಮಾಡ್ತಾ ಇದ್ರು. ದೇವರು ಅವರ ಕುಟುಂಬಕ್ಕೆ ಅವರ ಸಾವನ್ನ ಸಹಿಸಿಕೊಳ್ಳುವ ಶಕ್ತಿ ಕೊಡಲಿ. ಮಧುಕರ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು.

    ನಾನು ಲೋಕಾಯುಕ್ತಕ್ಕೆ ಬಂದ ನಂತರ ಮಧುಕರ್ ಶೆಟ್ಟಿ ಅವರು ರಾಜ್ಯಪಾಲರಿಗೆ ಡಿಸಿ ಆಗಿದ್ದರು. ಆಗ ನಾನು ಅವರನ್ನು ನೀವು ಲೋಕಾಯುಕ್ತಕ್ಕೆ ಬತ್ರ್ತಿರಾ ಅಂತ ಕೇಳಿದ್ದೆ. ನಂತರ ಅವರು ಲೋಕಾಯುಕ್ತಕ್ಕೆ ಎಸ್‍ಪಿ ಆಗಿ ಬಂದರು. ಬಹಳ ಉತ್ತಮವಾಗಿ ಕೆಲಸ ಮಾಡಿದ ದಕ್ಷ ಅಧಿಕಾರಿ. ಗಣಿ ವಿಚಾರದಲ್ಲಿ ಮಾತ್ರ ಅಲ್ಲ ಬೆಂಗಳೂರು ಏರ್ ಪೋರ್ಟ್ ಬಳಿಯ ಜಮೀನು ಕಬಳಿಕೆ ಮಾಡಿಕೊಂಡ ಹಿರಿಯಾ ರಾಜಕಾರಣಿಯನ್ನು ವಿಚಾರಣೆ ಮಾಡಿ ಅವರನ್ನು ಹಾಗೂ ಅವರ ಪುತ್ರಿಯನ್ನು ಜೈಲಿಗೆ ಕಳುಹಿಸಿದ್ದರು. ಯಾರಿಗೂ ಹೆದರುವ ವ್ಯಕ್ತಿಯಲ್ಲ, ರಾತ್ರಿ ಹಗಲು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಮಧುಕರ್ ಅವರನ್ನು ನೆನೆದರು.

    ಸುಮಾರು 750 ಕ್ಕೂ ಹೆಚ್ಚು ಭ್ರಷ್ಟರನ್ನು ವಿಚಾರಣೆ ಮಾಡಿ ಕೋರ್ಟ್ ಮೆಟ್ಟಿಲು ಏರಿಸಿದ ಅಧಿಕಾರಿಗಳಲ್ಲಿ ಮಧುಕರ್ ಅವರು ಒಬ್ಬರು. ಆಡಳಿತದಲ್ಲಿ ಇರುವ ನಾಯಕರು ತಮಗೆ ಬೇಕಾದ ಅಧಿಕಾರಿಗಳನ್ನು ಮಾತ್ರ ವಿಚಾರಣೆ ಹಾಗೂ ಇತರೇ ಹುದ್ದೆಯಲ್ಲಿ ಇಡುತ್ತಿದ್ದರು. ಮಧುಕರ್ ಅವರನ್ನು ಹಲವಾರು ಬಾರಿ ವರ್ಗಾವಣೆ ಮಾಡಿ ಅವರನ್ನು ವಿಚಾರಣೆ ವಿಭಾಗದಿಂದ ದೂರವಿಟ್ಟಿದ್ದರು. ಆದ್ರೆ ಇದ್ಯಾವುದಕ್ಕೂ ಮಧುಕರ್ ಅಂಜದೆ ತಮ್ಮ ಕೆಲಸವನ್ನು ಮಾಡುತ್ತಿದ್ದರು. ಒಬ್ಬ ವ್ಯಕ್ತಿಯಿಂದ ಭ್ರಷ್ಟರ ವಿರುದ್ಧ ಹೋರಾಡಲು ಆಗೋಲ್ಲ. ನಮ್ಮ ಜೊತೆ ಸರ್ಕಾರಿ ಅಧಿಕಾರಿಗಳು ಇರುತ್ತಾರೆ. ತಮ್ಮದೇ ಆದ ರೀತಿಯಲ್ಲಿ ವಿಚಾರಣೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ಸಿಗುವಂತೆ ಮಾಡಿರುವ ಉತ್ತಮ ಅಧಿಕಾರಿ ಮುಧುಕರ್ ಅವರು ಅಂತ ನಾನು ತಿಳಿದಿದ್ದೇನೆ ಅಂದ್ರು.

    ಮಧುಕರ್ ಶೆಟ್ಟಿ ಅವರಂತಹ ದಕ್ಷ ಅಧಿಕಾರಿಗಳು ನನ್ನ ಅವಧಿಯಲ್ಲಿ ಸಿಕ್ಕಿದ್ದು ನನ್ನ ಭಾಗ್ಯ. ಅವರು ಲೋಕಾಯುಕ್ತದಲ್ಲಿ ಇದ್ದಿದ್ದು ಕೇವಲ 2 ವರ್ಷ ಮಾತ್ರ. ಆದ್ರೆ ಈ ಇಲಾಖೆಯಲ್ಲಿ ಅವರ ಕೊಡುಗೆ ಅಪಾರ ಎಂದು ಮಧುಕರ್ ಅವರ ಸಾಧನೆಯನ್ನು ನೆನೆದುಕೊಂಡು ಅವರ ಅಗಲಿಕೆಗೆ ಬೇಸರ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಯೋಧ್ಯೆ ವಿವಾದವನ್ನು ಸುಪ್ರೀಂಕೋರ್ಟ್ ಬಗೆಹರಿಸಲು ಸಾಧ್ಯವೇ ಇಲ್ಲ: ಸಂತೋಷ್ ಹೆಗ್ಡೆ

    ಅಯೋಧ್ಯೆ ವಿವಾದವನ್ನು ಸುಪ್ರೀಂಕೋರ್ಟ್ ಬಗೆಹರಿಸಲು ಸಾಧ್ಯವೇ ಇಲ್ಲ: ಸಂತೋಷ್ ಹೆಗ್ಡೆ

    ಬೆಂಗಳೂರು: ಅಯೋಧ್ಯೆ ವಿವಾದವನ್ನು ಸುಪ್ರೀಂ ಕೋರ್ಟ್ ಬಗೆಹರಿಸಲು ಸಾಧ್ಯವೇ ಇಲ್ಲವೆಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ಪಟ್ಟಿದ್ದಾರೆ.

    ಭಾನುವಾರ ನಗರದ ಮೆಟ್ರೋ ರಂಗೋಲಿಯಲ್ಲಿ ಛಾಯಗ್ರಾಹಕ ಸುಧೀರ್ ಶೆಟ್ಟಿಯವರ ಕ್ಯಾಮೆರಾದಲ್ಲಿ ಕಂಡ ಅಯೋಧ್ಯೆ ಕುರಿತಾದ ಛಾವಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಯೋಧ್ಯೆ ವಿವಾದವನ್ನು ಸುಪ್ರೀಂ ಕೋರ್ಟ್‍ನಿಂದ ಬಗೆಹರಿಸಲು ಸಾಧ್ಯವೇ ಇಲ್ಲ. ಸರ್ವೋಚ್ಛ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿದ ನಂತರ ಕೋಮು ಸೌಹಾರ್ದ ಉಳಿಯುವುದು ಅನುಮಾನಸ್ಪದವಾಗಿದೆ. ಈ ಸಮಸ್ಯೆಯನ್ನು ಅಲ್ಲಿನ ಸ್ಥಳಿಯರು ಮಾತನಾಡಿ ಬಗೆಹರಿಸಿಕೊಳ್ಳಬೇಕು. ಅಯೋಧ್ಯೆ ವಿಚಾರಕ್ಕೆ ಹೊರಗಿನವರ ಹಸ್ತಕ್ಷೇಪ ಹೆಚ್ಚಾಗಿದೆ. ರಾಜಕೀಯ ಹಿತಾಸಕ್ತಿಯಿಂದಲೇ ಅದು ದೊಡ್ಡ ಮಟ್ಟದ ವಿವಾದವಾಗಿ ಬೆಳೆದಿದೆ. ಕೇವಲ ಸುಪ್ರೀಂ ತೀರ್ಪಿನ ಮೂಲಕವೇ ಎಲ್ಲವನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆಂದು ಅಭಿಪ್ರಾಯ ಪಟ್ಟಿದ್ದಾರೆ.

    ಸಂತೋಷ್ ಹೆಗ್ಡೆ ಅಲ್ಲದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಪ್ರತಿಕ್ರಿಯಿಸಿ, ಅಯೋಧ್ಯೆ ವಿವಾದವನ್ನು ಬಿಜೆಪಿಯವರು ರಾಜಕೀಯ ದಾಳವನ್ನಾಗಿಸಿಕೊಂಡಿದ್ದಾರೆ. ಅವರಿಗೆ ರಾಮ ಬೇಕಾಗಿಲ್ಲ. ಒಂದು ವೇಳೆ ದೇವರು ಬೇಕಾಗಿದ್ದರೆ ಈ ಹೊತ್ತಿಗೆ ಅಯೋಧ್ಯೆಯನ್ನು ಅಭಿವೃದ್ಧಿ ಮಾಡುತ್ತಿದ್ದರು. ಆದರೆ ಅವರಿಗೆ ಗಲಾಟೆಯಾಗೋದು ಅಷ್ಟೆ ಬೇಕಾಗಿದೆ. ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದ್ದು ದೊಡ್ಡ ತಪ್ಪು ಎಂದು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

    ಛಾಯಗ್ರಾಹಕ ಸುಧೀರ್ ಶೆಟ್ಟಿಯವರ ಕ್ಯಾಮೆರಾ ಕಣ್ಣಲ್ಲಿ ರಾಮಜನ್ಮ ಭೂಮಿಯ ಸತ್ಯ ಪ್ರದರ್ಶನವಾಗಿದ್ದು, ಅಯೋಧ್ಯ ಕುರಿತಾದ ಸ್ಫೋಟಕ ಮಾಹಿತಿಗಳು ಛಾಯಚಿತ್ರಗಳ ಮೂಲಕ ಹೊರ ಬಂದಿವೆ. ಛಾಯಚಿತ್ರ ಪ್ರದರ್ಶನದಲ್ಲಿ ರಾಮಜನ್ಮ ಭೂಮಿಯ ಸ್ಥಿತಿ-ಗತಿಗಳ ಛಾಯಚಿತ್ರ ಹಾಗೂ ವಿಡಿಯೋವನ್ನು ಅನಾವರಣಗೊಳಿಸಿದ್ದಾರೆ.

    ಅಯೋಧ್ಯಾ ನಗರಿಯಲ್ಲಿರುವ ಸ್ಥಳೀಯರಿಗೆ ಈ ವಿವಾದ ಬೇಕಾಗಿಲ್ಲ. ವಿವಾದದ ದಳ್ಳುರಿಯಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದೆ. ಅಲ್ಲಿನ ಮುಸ್ಲಿಮರು ಹಾಗೂ ಹಿಂದೂಗಳಿಗೆ ವಿವಾದವನ್ನು ಬಗೆಹರಿಸುವ ಆಸೆಯಿದೆ. ಆದರೆ ರಾಜಕೀಯ ನಾಯಕರಿಗೆ ವಿವಾದ ಜೀವಂತವಾಗಿದ್ದರೇ ಒಳ್ಳೆಯದು ಎನ್ನುವ ಭಾವನೆಯನ್ನು ಛಾಯಚಿತ್ರದ ಮೂಲಕ ಬಿಚ್ಚಿಟ್ಟಿದ್ದಾರೆ.

    ಆಯೋಧ್ಯೆ ವಿವಾದ ಸಂಬಂಧ ಸಲ್ಲಕೆಯಾಗಿರುವ ಅರ್ಜಿ ವಿಚಾರಣೆ ಅಕ್ಟೋಬರ್ 29 ರಿಂದ ಆರಂಭವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಸುದ್ದಿಗೋಷ್ಠಿಯಲ್ಲಿ ಶೆಣೈಗೆ ಸಿಟ್ಟು: ಅರ್ಧಕ್ಕೆ ಪ್ರೆಸ್‍ಮೀಟ್ ಮುಗಿಸಿ ಎದ್ದು ಹೋದ್ರು

    ಸುದ್ದಿಗೋಷ್ಠಿಯಲ್ಲಿ ಶೆಣೈಗೆ ಸಿಟ್ಟು: ಅರ್ಧಕ್ಕೆ ಪ್ರೆಸ್‍ಮೀಟ್ ಮುಗಿಸಿ ಎದ್ದು ಹೋದ್ರು

    ಬಳ್ಳಾರಿ: ಹೊಸ ರಾಜಕೀಯ ಪಕ್ಷ ಕಟ್ಟಿ ರಾಜಕೀಯ ನೆಲೆ ಕಂಡುಕೊಳ್ಳಲು ಹೊರಟಿರುವ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಪತ್ರಕರ್ತರ ಪ್ರಶ್ನೆಗೆ ಸಿಟ್ಟಾಗಿ ಸುದ್ದಿಗೋಷ್ಠಿಯಿಂದ ಕೈ ಮುಗಿದು ಹೊರ ನಡೆದ ಘಟನೆ ನಡೆದಿದೆ.

    ನವಂಬರ್ ಒಂದರಂದು ಉದ್ಘಾಟನೆ ಯಾಗಲಿರುವ ಹೊಸ ಪಕ್ಷದ ಬಗ್ಗೆ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಇಂದು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಪತ್ರಕರ್ತರೊಬ್ಬರು ಕೂಡ್ಲಿಗಿಯಲ್ಲೇ ಹೊಸ ಪಕ್ಷ ಉದ್ಘಾಟನೆ ಯಾಕೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ರು.

    ಇದಕ್ಕೆ ಸಿಟ್ಟಾದ ಅನುಪಮಾ ಶೆಣೈ ಮಾಧ್ಯಮವರು ಬಳ್ಳಾರಿಯನ್ನು ‘ರಿಪಬ್ಲಿಕ್ ಆಫ್ ಬಳ್ಳಾರಿ’ ಅಂತಾ ಕೆಟ್ಟದಾಗಿ ಬಿಂಬಿಸಿದ್ದೀರಿ. ಆದ್ರೆ ವಾಸ್ತವವಾಗಿ ಬಳ್ಳಾರಿ ಹಾಗಿಲ್ಲ. ಇಲ್ಲಿನ ಜನರು ಮುಗ್ದರು ಅಂತಾ ಪತ್ರಕರ್ತರಿಗೆ ಮರುಪ್ರಶ್ನೆ ಎಸೆದರು. ಇದಕ್ಕೆ ಪ್ರತಿ ಉತ್ತರ ನೀಡಿದ ಪತ್ರಕರ್ತರು ನಾವೂ ‘ರಿಪಬ್ಲಿಕ್ ಆಫ್ ಬಳ್ಳಾರಿ’ ಅಂದಿಲ್ಲ. ನ್ಯಾಯಮೂರ್ತಿ ಸಂತೋಷ ಹೆಗಡೆ ರಿಪಬ್ಲಿಕ್ ಆಫ್ ಬಳ್ಳಾರಿ ಅಂತಾ ಹೇಳಿದ್ದರು. ಈ ಹಿಂದೆ ನೀವೂ ಕೂಡಾ ಕೂಡ್ಲಿಗಿಯಲ್ಲಿ ‘ಲಿಕ್ಕರ್ ಲಾಬಿ’ ಎಂದು ಆರೋಪಿಸಿದ್ದು ಮರೆತುಬಿಟ್ಟರಾ ಎಂದು ಮರು ಪ್ರಶ್ನೆ ಎಸೆದರು.

    ಪತ್ರಕರ್ತರ ಉತ್ತರ, ಪ್ರತಿಯುತ್ತರಕ್ಕೆ ಏಕಾಎಕಿ ಸಿಟ್ಟಾದ ಅನುಪಮಾ ಶೆಣೈ, ಅರ್ಧಕ್ಕೆ ಮೊಟಕುಗೊಳಿಸಿ ಪತ್ರಕರ್ತರಿಗೆ ಕೈ ಮುಗಿದು ಸಿಟ್ಟಿನಿಂದಲೇ ಸುದ್ದಿಗೋಷ್ಠಿಯಿಂದ ಹೊರನಡೆದರು.

    ನವೆಂಬರ್ ಒಂದರಂದು ಹೊಸ ಪಕ್ಷ ಉದ್ಘಾಟನೆ ಮಾಡಲಿರುವ ಅನುಪಮಾ ಶೆಣೈ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಆದರೆ ಕ್ಷೇತ್ರ ಯಾವುದು ಎಂದು ಈಗಲೇ ಹೇಳವುದಿಲ್ಲವೆಂದು ಸ್ಪಷ್ಟಪಡಿಸಿದರು.

    224 ಕ್ಷೇತ್ರಗಳ ಪೈಕಿ 80 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಅನುಪಮಾ ಶೆಣೈ ಪ್ಲಾನ್ ರೂಪಿಸಿದ್ದಾರೆ. ಆದ್ರೆ ಅನುಪಮಾ ಹೊಸದಾಗಿ ರಾಜಕೀಯಕ್ಕೆ ಬರುವವರನ್ನೆ ಅಭ್ಯರ್ಥಿಗಳನ್ನಾಗಿ ಮಾಡಿ ಪಕ್ಷ ಕಟ್ಟಲು ಚಿಂತನೆ ನಡೆಸಿದ್ದಾರೆ.