Tag: Santosh Kumar

  • ಡ್ರಗ್ಸ್ ಕೇಸ್ – ನಟ ಸಂತೋಷ್, ಐಂದ್ರಿತಾ ಕಾಲೆಳೆದ ಪ್ರಶಾಂತ್ ಸಂಬರಗಿ

    ಡ್ರಗ್ಸ್ ಕೇಸ್ – ನಟ ಸಂತೋಷ್, ಐಂದ್ರಿತಾ ಕಾಲೆಳೆದ ಪ್ರಶಾಂತ್ ಸಂಬರಗಿ

    ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಫೇಸ್‍ಬುಕ್ ಪೋಸ್ಟ್ ಹಾಕುವ ಮೂಲಕ ಡ್ರಗ್ಸ್ ಜಾಲಕ್ಕೆ ಸಂಬಂಧಿಸದಂತೆ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ನಟಿ ಐಂದ್ರಿತಾ ರೈ ಮತ್ತು ನಟ ಸಂತೋಷ್ ಕುಮಾರ್ ಅವರ ಕಾಲೆಳೆದಿದ್ದಾರೆ.

    ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ವಿಚಾರದಲ್ಲಿ ಕನ್ನಡದ ಸ್ಟಾರ್ ನಟ-ನಟಿಯರು ಸಿಲುಕಿ ಹಾಕಿಕೊಂಡಿದ್ದಾರೆ. ಇಂದು ನಿರೂಪಕ ಅಕುಲ್ ಬಾಲಾಜಿ ಮತ್ತು ನಟ ಸಂತೋಷ್ ಕುಮಾರ್ ಅವರನ್ನು ಸಿಸಿಬಿ ವಿಚಾರಣೆ ಮಾಡಿದೆ. ಈಗಾಗಲೇ ಈ ಪ್ರಕರಣದಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದಾರೆ.

    https://www.facebook.com/VS.Prashanth.Sambargi/posts/10159025108850712

    ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿಯವರು ಒಂದು ಫೇಸ್‍ಬುಕ್ ಪೋಸ್ಟ್ ಹಾಕಿದ್ದು, ನೂರೂ ಜನ್ಮಕು ಚಿತ್ರದ ನಾಯಕ ಹಾಗೂ ನಾಯಕಿ, ಇಬ್ಬರೂ ಡ್ರಗ್ಸ್ ಜಾಲದಲ್ಲಿ ಆರೋಪ ಎದುರಿಸುತ್ತಿರುವುದು ಏಳೇಳು ಜನುಮದ ವಿಪರ್ಯಾಸ. ಮಾನವ ಜನ್ಮ ದೊಡ್ಡದು, ಇದನ್ನು ಹಾನಿ ಮಾಡಿಕೊಳ್ಳಬೇಡಿ ಹುಚ್ಚಪ್ಪಗಳಿರಾ, ಕಣ್ಣು ಕೈ ಕಾಲ್, ಕಿವಿ, ನಾಲಿಗೆ ಇರಲಿಕ್ಕೆ ಮಣ್ಣು ಮುಕ್ಕಿ ಹುಚ್ಚರಾಗುವಿರಾ ಎಂದು ವ್ಯಂಗ್ಯವಾಡಿದ್ದಾರೆ.

    ಇದಕ್ಕೂ ಮುನ್ನ ಮಾತನಾಡಿದ್ದ ಸಂಬರಗಿ, ಸೋಮವಾರ ಮತ್ತಿಬ್ಬರ ಸ್ಟಾರ್ ನಟರ ಹೆಸರು ಬಹಿರಂಗ ಮಾಡುತ್ತೇನೆ. ಸದ್ಯ ಆ ಬಗ್ಗೆ ಯಾವೂದೇ ಕ್ಲೂ ಕೊಡಲ್ಲ. 48 ಗಂಟೆ ಕಾದರೇ ಎಲ್ಲ ಮಾಧ್ಯಮಗಳ ಮುಂದೆ ಬಹಿರಂಗ ಪಡಿಸುತ್ತೇನೆ. ಇದು ಊಹಾಪೋಹಾದ ಕತೆಯಲ್ಲ ದಾಖಲೆ ಸಮೇತ ಹೆಸರು ಹೇಳುತ್ತೇನೆ. ನಾನು ಹೇಳುವ ಹೆಸರು ವಿಧಾನಸೌಧದ ಪಡಸಾಲೆಯಲ್ಲಿ ಸದ್ದು ಮಾಡುತ್ತೆ. ಈ ಹೋರಾಟಕ್ಕೆ ಹಲವರು ನನ್ನ ಬೆನ್ನುತಟ್ಟಿದ್ದಾರೆ. ಈ ಹೋರಾಟದಲ್ಲಿ ನನಗೆ ಯಾವುದೇ ಭಯ ಇಲ್ಲ ಎಂದು ಹೇಳಿದ್ದರು.

  • `ಒಂಬತ್ತನೇ ಅದ್ಭುತ’ ಹಾಡುಗಳ ಅನಾವರಣ

    `ಒಂಬತ್ತನೇ ಅದ್ಭುತ’ ಹಾಡುಗಳ ಅನಾವರಣ

    ಬೆಂಗಳೂರು: ಕಳೆದ 13 ವರ್ಷಗಳಿಂದ ದೇವರಾಣೆ, 90, ಹುಡುಗಾಟ, ಕಂದ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಸಂತೋಷ್ ಕುಮಾರ್ ಬೆಟಗೇರಿ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಒಂಬತ್ತನೇ ಅದ್ಭುತ’. ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಸಂತೋಷ್ ಕುಮಾರ್ ಅವರೇ ಈ ಚಿತ್ರದ ನಿರ್ಮಾಪಕರಾಗಿದ್ದು, ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಸಂತೋಷ್ ಕುಮಾರ್ ಒಂದು ಶವವನ್ನಿಟ್ಟುಕೊಂಡು ಅದರ ಸುತ್ತ ನಡೆಯುವ ಘಟನೆಗಳನ್ನು ಕಾಮಿಡಿಯಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ರೆಗ್ಯುಲರ್ ಪ್ಯಾಟರ್ನ್ ಬಿಟ್ಟು ಬೇರೆಯದೇ ಸ್ಟೈಲ್‍ನಲ್ಲಿ ನರೇಷನ್ ಮಾಡಿದ್ದೇವೆ. ನಿರ್ಮಾಣ ಕಾರ್ಯದಲ್ಲಿ ನಮ್ಮ ಸಹೋದರರ ಸಹಕಾರ ಕೂಡ ಇದೆ. ಮಂಡ್ಯದಲ್ಲಿ ನಡೆಯುವ ಕಥೆ ಇದಾಗಿದ್ದು, ಮಂಗಳೂರು, ಉತ್ತರ ಕರ್ನಾಟಕ, ಮಂಡ್ಯ ಸೇರಿ 3 ಥರದ ಭಾಷೆ ಈ ಚಿತ್ರದಲ್ಲಿದೆ ಎಂದು ಹೇಳಿದರು.

    ಈ ಚಿತ್ರದ ನಾಯಕಿಯಾಗಿ ನಯನ ಸಾಯಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ತಿಥಿ ಖ್ಯಾತಿಯ ಸೆಂಚುರಿಗೌಡ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ತನ್ನ ಪಾತ್ರದ ಕುರಿತಂತೆ ಮಾತನಾಡಿದ ನಯನ ಸಾಯಿ ನಾನು ಮೂಲತಃ ಮಾಡೆಲ್ ಮಿಸ್ ಇಂಡಿಯಾ ಸೌತ್‍ನಲ್ಲಿ ಭಾಗವಹಿಸಿದ್ದೆ. ನನ್ನ ಪ್ರೊಫೈಲ್ ನೋಡಿ ನಿರ್ದೇಶಕರು ನನಗೆ ಚಾನ್ಸ್ ಕೊಟ್ಟಿದ್ದಾರೆ. ಒಬ್ಬ ಕಾಲೇಜು ಹುಡುಗಿಯ ಪಾತ್ರ ಮಾಡಿದ್ದೇನೆ. ಚಿತ್ರದಲ್ಲಿ ಕಾಮಿಡಿ, ಸಸ್ಪೆನ್ಸ್ ಕಥೆಯಿದೆ. ಟೀಮ್ ಸಪೋರ್ಟ್‌ ತುಂಬಾ ಚೆನ್ನಾಗಿತ್ತು ಎಂದು ಹೇಳಿಕೊಂಡರು. ಚಿತ್ರಕ್ಕೆ ಸುನಿಲ್ ಕೋಶಿ ಸಂಗೀತ ಸಂಯೋಜನೆ ಮಾಡಿದ್ದಾರೆ. ರಾಘವೇಂದ್ರ ಬಿ.ಕೋಲಾರ್ ಕ್ಯಾಮರಾ ವರ್ಕ್ ಮಾಡಿದ್ದಾರೆ. ನಾಗರಾಜ್ ಆರ್ ಕುಂತೂರ್, ಗೋಪಾಲಕೃಷ್ಣ ಗೌಡ ಹಾಗೂ ಮಂಜಣ್ಣ ಬೆಟ್ಟಹಳ್ಳಿ ಈ ಚಿತ್ರದ ಸಹನಿರ್ಮಾಪಕರಾಗಿದ್ದಾರೆ.

  • ಪಾರ್ವತಮ್ಮನ ತಂಗಿ ಮಗನ ಹಾರರ್ ಗೂಗ್ಲಿ!

    ಪಾರ್ವತಮ್ಮನ ತಂಗಿ ಮಗನ ಹಾರರ್ ಗೂಗ್ಲಿ!

    ಬೆಂಗಳೂರು: ಈ ಹಿಂದೆ ಬಿಂದಾಸ್ ಗೂಗ್ಲಿ ಎಂಬ ಚಿತ್ರ ನಿರ್ದೇಶನ ಮಾಡಿದ್ದವರು ಸಂತೋಷ್ ಕುಮಾರ್. ಕಾಲೇಜ್ ಕಾರಿಡಾರಿನಲ್ಲಿ ನಡೆಯುವ ಯೂಥ್‍ಫುಲ್ ಕಥೆ ಹೇಳಿದ್ದ ಅವರೀಗ ಪಕ್ಕಾ ಹಾರರ್ ಥ್ರಿಲ್ಲರ್ ಕಥೆಯೊಂದನ್ನು ಎರಡೆರಡು ಭಾಷೆಗಳಲ್ಲಿ ನಿರ್ದೇಶನ ಮಾಡಲು ಮುಂದಾಗಿದ್ದಾರೆ.

    ಪಾರ್ವತಮ್ಮನವರ ತಂಗಿ ಮಗ ಈ ಸಂತೋಷ್ ಕುಮಾರ್. ಏಕಕಾಲದಲ್ಲಿಯೇ ಹಿಂದಿ ಮತ್ತು ಕನ್ನಡದಲ್ಲಿ ನಿರ್ದೇಶನ ಮಾಡಲು ಮುಂದಾಗಿರೋ ಹೊಸ ಚಿತ್ರಕ್ಕೆ ಮೃತ್ಯುಲಿಪಿ ಪುರಾಣಂ ಎಂಬ ಶೀರ್ಷಿಕೆಯನ್ನಿಟ್ಟಿದ್ದಾರೆ.

    ಈ ಚಿತ್ರದಲ್ಲಿ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಸದ್ದು ಮಾಡಿರೋ ತಂತ್ರಜ್ಞರೇ ಕಾರ್ಯ ನಿರ್ವಹಿಸಲಿದ್ದಾರಂತೆ. ಬಾಲಿವುಡ್ ನ ನಟ ನಟಿಯರೇ ಮುಖ್ಯ ಪಾತ್ರವನ್ನೂ ನಿರ್ವಹಿಸಲಿದ್ದಾರಂತೆ. ಇದೀಗ ತಾರಾಗಣದ ಆಯ್ಕೆ ಕಾರ್ಯ ಭರದಿಂದ ಸಾಗುತ್ತಿದೆ.

    ಇದು ಇಡೀ ವಿಶ್ವವನ್ನು ಬೆಚ್ಚಿಬೀಳಿಸುತ್ತಲೇ ಕಗ್ಗಂಟಾಗುಳಿದಿರುವ ಬರ್ಮುಡಾ ಟ್ರಯಾಂಗಲ್ ನಿಂದ ಸ್ಫೂರ್ತಿಗೊಂಡು ರಚಿಸಲ್ಪಟ್ಟಿರೋ ಕಥೆಯನ್ನು ಹೊಂದಿದೆ. ಮೀಡಿಯಾದಲ್ಲಿ ಕೆಲಸ ಮಾಡೋ ಹುಡುಗರು ಅಸೈನ್‍ಮೆಂಟ್ ಕಾರಣದಿಂದ ಒಂದು ಪ್ರದೇಶಕ್ಕೆ ತೆರಳುತ್ತಾರೆ. ಅದು ಹೋದವರನ್ನೆಲ್ಲ ಕಣ್ಮರೆ ಮಾಡುವ ವಿಚಿತ್ರ ಪ್ರದೇಶ. ಇಂಥಲ್ಲಿಗೆ ಈ ಹುಡುಗರ ಟೀಮು ಹೋದ ನಂತರ ಆಗೋ ಕಥನ ಹಾರರ್ ಮತ್ತು ಥ್ರಿಲ್ಲರ್ ಶೈಲಿಯಲ್ಲಿ ಬಿಚ್ಚಿಕೊಳ್ಳುತ್ತದೆಯಂತೆ.

    ಇದೀಗ ಈ ಚಿತ್ರಕ್ಕಾಗಿ ತಯಾರಿ ನಡೆಸಿಕೊಳ್ಳುತ್ತಿರೋ ಸಂತೋಷ್ ಬೇಗನೆ ಚಿತ್ರೀಕರಣ ಮುಗಿಸಿಕೊಂಡು ವಿಶ್ವಾಧ್ಯಂತ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv