Tag: Sara Mahesh

  • ಬೊಮ್ಮಾಯಿ ಸರ್ಕಾರ Connecting People ಆಗಿದೆ: ಹೆಚ್. ವಿಶ್ವನಾಥ್

    ಬೊಮ್ಮಾಯಿ ಸರ್ಕಾರ Connecting People ಆಗಿದೆ: ಹೆಚ್. ವಿಶ್ವನಾಥ್

    – ಪ್ರತಾಪ್ ಸಿಂಹ ವಿರುದ್ಧ ಹಳ್ಳಿಹಕ್ಕಿ ಕಿಡಿ

    ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಕನೆಕ್ಟಿಂಗ್ ಫ್ಯಾಮಿಲಿಯಾಗಿತ್ತು. ಆದರೆ ಇದೀಗ ಬಸವರಾಜ ಬೊಮ್ಮಾಯಿ ಸರ್ಕಾರ ಕನೆಕ್ಟಿಂಗ್ ಪೀಪಲ್ ಆಗಿದೆ ಎಂದು ಎಂ.ಎಲ್.ಸಿ ಎಚ್.ವಿಶ್ವನಾಥ್ ಹೊಗಳಿದ್ದಾರೆ.

    BASAVARAJ BOMMAI

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ನೆರಳಲ್ಲ. ಅವರು ರಾಜ್ಯಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ. ಜನರ ಸುತ್ತ ಅಭಿವೃದ್ಧಿ ಸುತ್ತಬೇಕು, ಅಭಿವೃದ್ಧಿ ಸುತ್ತ ಜನ ಸುತ್ತಬಾರದು ಅನ್ನೋದನ್ನು ತೋರಿಸಿದ್ದಾರೆ. ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿದೆ ಎಂಬ ಅಮಿತ್ ಶಾ ಹೇಳಿಕೆಗೆ ವಿಶ್ವನಾಥ್ ಬೆಂಬಲ ಸೂಚಿಸಿದ್ದು, ಯಾರು ಸಿಎಂ ಪಕ್ಷದ ಅಧ್ಯಕ್ಷರಾಗಿರುತ್ತಾರೋ ಅವರದ್ದೇ ನಾಯಕತ್ವ ಇರುತ್ತದೆ. ಸಾಮೂಹಿಕ ನಾಯಕತ್ವ ಇದ್ದರೂ ಒಬ್ಬ ಮೇಟಿ ಬೇಕು. ಅದು ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ ಆಗಿದ್ದಾರೆ ಎಂದರು. ಇದನ್ನೂ ಓದಿ: ಮಗನ ಪ್ರಾಣ ಉಳಿಸಿಕೊಳ್ಳಲು ವೈದ್ಯರ ಕಾಲು ಹಿಡಿದ ತಾಯಿ

    ಇದೇ ವೇಳೆ ಸರ್ಕಾರಿ ಭೂ ಒತ್ತುವರಿಗೆ ಸರ್ವೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಶಾಸಕ ಸಾ.ರಾ ಮಹೇಶ್ ಹಾಗೂ ಸಚಿವ ಎಸ್.ಟಿ ಸೋಮಶೇಖರ್ ಹೇಳಿಕೆಗೆ ತಿರುಗೇಟು ನೀಡಿದರು. ಚಿನ್ನ ಉಜ್ಜಿದಷ್ಟು ಹೊಳಪು ಬರುತ್ತದೆ. ನಡೆಯಲಿ ಮರು ಸರ್ವೇ ಸತ್ಯ ಹೊರಬರಲಿ. ಸಾ.ರಾ ಮಹೇಶ್ ಒತ್ತುವರಿ ಮಾಡಿಲ್ಲವಾದರೆ ಭಯ ಏಕೆ..?, ಒತ್ತುವರಿ ಮಾಡಿಕೊಂಡವರಿಗೆ ಸರ್ವೆಯ ಭಯವಿರುತ್ತದೆ. ಹಿಂದಿನ ಸರ್ವೆ ವರದಿ ಪ್ರಾಮಾಣಿಕವಾಗಿರಲಿಲ್ಲ. ಇದನ್ನು ನಾನು ಮೊದಲೇ ಹೇಳಿದ್ದೆ. ವರದಿ ಹೇಗೆ ನೀಡಿದರು ಅನ್ನೋದು ಜನರಿಗೂ ಗೊತ್ತಿದೆ. ಎಸ್.ಟಿ ಸೋಮಶೇಖರ್ ಸರ್ಕಾರದ ಭಾಗ. ಅವರು ಈ ರೀತಿ ಹೇಳಿಕೆ ನೀಡಬಾರದು. ಅಧಿಕಾರಿಗೆ ಸರ್ಕಾರವೇ ಅಧಿಕಾರ ನೀಡಿದೆ. ಆ ಅಧಿಕಾರ ಬಳಸಿ ಅವರು ಆದೇಶ ಮಾಡಿದ್ದಾರೆ. ಇದನ್ನು ವಿರೋಧಿಸುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

    ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕ್ರೆಡಿಟ್ ವಿಚಾರದ ಕುರಿತು ಮಾತನಾಡಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಹಳ್ಳಿಹಕ್ಕಿ ವಿಶ್ವನಾಥ್ ಮತ್ತೆ ವಾಗ್ದಾಳಿ ನಡೆಸಿದರು. ಮುಂದೆ ಮೈಸೂರು ಕಟ್ಟಿಸಿದ್ದು ನಾನೇ ಅನ್ನುತ್ತಾರೆ. ಪ್ರತಾಪ್ ಸಿಂಹ ತಮ್ಮ ಸ್ಥಾನಕ್ಕೆ ಗೌರವವಿಟ್ಟು ಮಾತನಾಡಲಿ. ಅವರ ನೆನ್ನೆಯ ಪತ್ರವೂ ಸಂಸದರ ಸ್ಥಾನಕ್ಕೆ ಗೌರವ ತರುವ ಪತ್ರವಲ್ಲ. ಹಿಂದಿನ ಸರ್ಕಾರದಲ್ಲೇ ದಶಪಥ ರಸ್ತೆ ಯೋಜನೆಗೆ ದಾಖಲೆ ಇದೆ. ಹೀಗಾಗಿ ಯೋಜನೆ ತಮ್ಮದೇ ಅಂತಾ ಹೇಳಿಕೊಳ್ಳುವುದು ಸರಿಯಲ್ಲ ಎಮದು ಕಿಡಿಕಾರಿದರು. ಇದನ್ನೂ ಓದಿ: ಕಾಮಗಾರಿ ವೀಡಿಯೋ ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತೆ ಅಂತಾ ಗೊತ್ತಿರಲಿಲ್ಲ: ಪ್ರತಾಪ್ ಸಿಂಹ ತಿರುಗೇಟು

  • ಇದು ನನ್ನ ವಿರುದ್ಧದ ವ್ಯವಸ್ಥಿತ ಪಿತೂರಿಯ ಮುಂದುವರಿದ ಭಾಗ: ರೋಹಿಣಿ ಸಿಂಧೂರಿ

    ಇದು ನನ್ನ ವಿರುದ್ಧದ ವ್ಯವಸ್ಥಿತ ಪಿತೂರಿಯ ಮುಂದುವರಿದ ಭಾಗ: ರೋಹಿಣಿ ಸಿಂಧೂರಿ

    ಮೈಸೂರು: ಮೈಸೂರಿನ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಮಾಡಿದ್ದ ಕಿಕ್ ಬ್ಯಾಕ್ ಆರೋಪಕ್ಕೆ ರೋಹಿಣಿ ಸಿಂಧೂರಿ ಸ್ಪಷ್ಟೀಕರಣ ನೀಡಿದ್ದು, ನನ್ನ ಮೇಲೆ ಸತ್ಯಕ್ಕೆ ದೂರವಾದ ಆರೋಪ ಮಾಡಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತವಾದ ಪಿತೂರಿಯ ಮುಂದುವರಿದ ಭಾಗ ಎಂದು ತಿರುಗೇಟು ನೀಡಿದ್ದಾರೆ.

    ವಾಟ್ಸ್ ಅಪ್ ಗ್ರೂಪ್ ನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ರೋಹಿಣಿ ಸಿಂಧೂರಿ, ನನ್ನ ಮೇಲೆ ಸತ್ಯಕ್ಕೆ ದೂರವಾದ ಆರೋಪ ಮಾಡಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತವಾದ ಪಿತೂರಿಯ ಮುಂದುವರಿದ ದಾಳಿ. ತಾವು ಮಾಡಿರುವ ಅಕ್ರಮ ಮುಚ್ಚಿಕೊಳ್ಳಲು ಮತ್ತು ಮಾಡಿರುವ ಅಕ್ರಮಗಳ ಬಗ್ಗೆ ಯಾವ ಅಧಿಕಾರಿಯೂ ತನಿಖೆಗೆ ಮುಂದಾಗಬಾರದೆಂದು ಹೆದರಿಸುವ ತಂತ್ರದ ಭಾಗ ಇದು. ಇದಕ್ಕೆ ಯಾವ ಅಧಿಕಾರಿಗಳು ಹೆದರದೆ ಇರುವ ಸತ್ಯ ಬಹಿರಂಗಪಡಿಸಬೇಕೆಂದು ಗುಡುಗಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

    ಬಟ್ಟೆ ಬ್ಯಾಗ್ ಖರೀದಿ ಮಾಡಿರುವುದು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ಪ್ರಾಧಿಕಾರದಲ್ಲಿ. ಇದು ಸರ್ಕಾದ ಅಧೀನ ಸಂಸ್ಥೆ. ನನ್ನ ಅವಧಿಯಲ್ಲಿ ಒಂದೇ ಒಂದು ಪೈಸೆಯೂ ಹಣ ಬಿಡುಗಡೆಯಾಗಿಲ್ಲ. ಇದರಲ್ಲಿ ಅಕ್ರಮ ಹೇಗೆ ಬರುತ್ತೆ? ನನ್ನ ಮೇಲಿನ ಎಲ್ಲಾ ಆರೋಪಗಳು ಸುಳ್ಳು. ಇದರಲ್ಲಿ ಸತ್ಯದ ಒಂದಂಶವೂ ಇಲ್ಲ. ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳಿಗೆ ಉಚಿತವಾಗಿ ಬಟ್ಟೆ ಬ್ಯಾಗ್ ನೀಡಲು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ಪ್ರಾಧಿಕಾರಕ್ಕೆ ತಿಳಿಸಲಾಗಿತ್ತು. ಅವರೇ ದರ ನಿಗದಿ ಮಾಡಿ ಪತ್ರ ಕಳಿಸಿದ್ದರು. ಅದರಂತೆ ಅರ್ಡರ್ ನೀಡಲಾಗಿದೆ. ಹೇಳಿ ಕೇಳಿ ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮ ರಾಜ್ಯ ಸರ್ಕಾರದ ಅಧೀನ ಸಂಸ್ಥೆ. ಇಂತಹ ಸಂಸ್ಥೆ ಜೊತೆಗಿನ ಅಧಿಕೃತ ವ್ಯವಹಾರದಲ್ಲಿ ಕಿಕ್ ಬ್ಯಾಕ್ ಪ್ರಶ್ನೆ ಎಲ್ಲಿಂದ ಬರುತ್ತೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ಪ್ರಕರಣ – ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನ

  • ಅತ್ಯಾಚಾರ ಆರೋಪಿಗಳನ್ನು ಎನ್‍ಕೌಂಟರ್ ಮಾಡಬೇಕು: ಸಾ.ರಾ ಮಹೇಶ್

    ಅತ್ಯಾಚಾರ ಆರೋಪಿಗಳನ್ನು ಎನ್‍ಕೌಂಟರ್ ಮಾಡಬೇಕು: ಸಾ.ರಾ ಮಹೇಶ್

    ಮೈಸೂರು: ಸಾಮೂಹಿಕ ಅತ್ಯಾಚಾರದ ಆರೋಪಿಗಳನ್ನು ಬಂಧಿಸಿದ್ದು, ಇಂತವರನ್ನು ಎನ್ ಕೌಂಟರ್ ಮಾಡಬೇಕು ಎಂದು ಶಾಸಕ ಸಾ.ರಾ ಮಹೇಶ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಂಗ್ ರೇಪ್ ವಿಚಾರ ಇಡೀ ಮೈಸೂರು ತಲೆತಗ್ಗಿಸುವ ವಿಚಾರವಾಗಿದೆ. ಬೆಳಗ್ಗೆ ಐದು ಜನರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ಬಂದಿದೆ. ಇವರ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

    ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಬೇಕು. ಸರ್ಕಾರ ಎನ್‍ಕೌಂಟರ್ ಮಾಡಲು ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಇದೇ ವೇಳೆ ಸಾ.ರಾ ಮಹೇಶ್ ಸಲಹೆಯಿತ್ತರು. ಇತ್ತ ಆರೋಪಿಗಳ ಬಂಧನವಾದ ವಿಚಾರ ತಯಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಕೂಡ ಆರೋಪಿಗಳನ್ನು ಗಲ್ಲಿಗೇರಿಸಬೇಕು, ಎನ್ ಕೌಂಟರ್ ಮಾಡಬೇಕು ಎಂಬುದಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ದರೋಡೆ ಮಾಡಲು ಹೋಗಿ ಏನೂ ಸಿಗದಿದ್ದಾಗ ಯುವತಿಯ ಅತ್ಯಾಚಾರವೆಸಗಿದ ಕಾಮುಕರು!

    ಆಗಸ್ಟ್ 24ರಂದು ನಡೆದಿದ್ದ ಗ್ಯಾಂಗ್ ರೇಪ್ ಸಂಬಂಧ 80 ಮಂದಿಯಿದ್ದ ಪೊಲೀಸರ 5 ತಂಡ ವಿವಿಧೆಡೆಗಳಲ್ಲಿ ಆರೋಪಿಗಳಿಗಾಗಿ ಹುಡುಕಾಟ ನಡೆಸಿತ್ತು. ಇಂದು ಬೆಳಗ್ಗೆ ಆರೋಪಿಗಳು ತಮಿಳುನಾಡಿನ ಸತ್ಯಮಂಗಲದಲ್ಲಿ ಲಾಕ್ ಆದರು. ಸದ್ಯ ಐವರು ಆರೋಪಿಗಳನ್ನ ಮೈಸೂರಿಗೆ ಕರೆತಂದಿರುವ ಪೊಲೀಸರು, ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಧೀಶರ ಎದುರು ಹಾಜರು ಪಡಿಸಲಿದ್ದಾರೆ. ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದವರಾಗಿದ್ದು, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕ್ಯಾನ್ಸರ್ ರೋಗ 4ನೇ ಹಂತ ತಲುಪಿದಾಗ ಏನಾಗುತ್ತೋ ಹಾಗೆ ಅತ್ಯಾಚಾರಿಗಳಿಗೆ ಶಿಕ್ಷೆಯಾಗ್ಬೇಕು: ವಿನಯ್ ಗುರೂಜಿ

    ಪ್ರಕರಣ ನಡೆದ ಸಂದರ್ಭದಲ್ಲಿ ಈ ಸ್ಥಳಕ್ಕೆ ಅಪರಿಚಿತರು ಬರಲು ಸಾಧ್ಯವಿಲ್ಲ ಯಾರು ಪರಿಚಿತರು ಮಾತ್ರ ಬರಲು ಸಾಧ್ಯ ಎಂಬ ಮಾಹಿತಿ ಮೇರೆಗೆ ತನಿಖೆಗೆ ಪೊಲೀಸರು ಮುಂದಾಗಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

  • ಮೈಸೂರು ಮೇಯರ್ ಸ್ಥಾನ ಬಿಟ್ಕೊಡುವಂತೆ ಸಾ.ರಾ.ಮಹೇಶ್ ಜೊತೆ ಮಾತನಾಡಿದ್ದೇನೆ: ಸೋಮಶೇಖರ್

    ಮೈಸೂರು ಮೇಯರ್ ಸ್ಥಾನ ಬಿಟ್ಕೊಡುವಂತೆ ಸಾ.ರಾ.ಮಹೇಶ್ ಜೊತೆ ಮಾತನಾಡಿದ್ದೇನೆ: ಸೋಮಶೇಖರ್

    – ಮೈಸೂರು ಮೇಯರ್ ಪಟ್ಟಕ್ಕೆ ಜೆಡಿಎಸ್ ಜೊತೆ ಬಿಜೆಪಿ ‘ಷರತ್ತು’ ಒಪ್ಪಂದ!

    ಚಾಮರಾಜನಗರ: ಮೇಯರ್ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್ ನ ಮಾಜಿ ಸಚಿವ ಸಾ.ರಾ.ಮಹೇಶ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಯರ್ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟು ಕೊಡುವಂತೆ ಸಾ.ರಾ.ಮಹೇಶ್ ಅವರು ಕೇಳಿದ್ದಾರೆ. ನಾನು 3 ಷರತ್ತು ಹಾಕಿದ್ದೇನೆ, ಅವರು ಸಹ ಷರತ್ತು ಹಾಕಿದ್ದಾರೆ. ಸಾ.ರಾ. ಮಹೇಶ್ ಅವರು ಅವರ ಹೈಕಮಾಂಡ್ ಜೊತೆ ಮಾತನಾಡಲಿದ್ದಾರೆ. ಈ ವಿಚಾರವಾಗಿ ನಾನು ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಮಾತನಾಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಪಿಕ್ಚರ್ ಅಭೀ ಬಾಕಿ ಹೈ ಎಂದ ಆನಂದ್ ಸಿಂಗ್‍ಗೆ ಥಿಯೇಟರ್ ಬಂದ್ ಹೈ ಎಂದ ರಾಜೂ ಗೌಡ

    ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಹಾಗೂ ಮೈಸೂರು ಬಿಜೆಪಿ ನಗರಾಧ್ಯಕ್ಷ ಅವರು ಸಹ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡಲಿದ್ದಾರೆ. ನಾಳೆ ಸಂಜೆ ಅಥವಾ ನಾಳಿದ್ದು ಮೈಸೂರು ಮೇಯರ್ ಯಾರೆಂದು ತಿಳಿಯಲಿದೆ ಎಂದಿದ್ದಾರೆ. ಅಲ್ಲದೇ ಸಚಿವ ಆನಂದ್ ಸಿಂಗ್ ವಿಚಾರವಾಗಿ, ಅವರಿಗೆ ಸಿಎಂ ಅವರು ಏನೆಲ್ಲಾ ಹೇಳಬೇಕೊ ಅದೆಲ್ಲವನ್ನೂ ಎರಡು ದಿನಗಳ ಹಿಂದೆಯೇ ಹೇಳಿದ್ದಾರೆ. ಇನ್ನೊಂದು ವಾರದ ಒಳಗೆ ಎಲ್ಲವೂ ಸರಿಹೋಗಲಿದೆ ಎಂದು ಹೇಳಿದ್ದಾರೆ.

    ಮತ್ತೊಂದೆಡೆ ಕೇರಳ ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಕೆಲವು ಮಂದಿ ಕರ್ನಾಟಕ ರಾಜ್ಯದೊಳಗೆ ಪ್ರವೇಶಿಸಲು ನಕಲಿ ಆರ್‌ಟಿಪಿಸಿಆರ್ ವರದಿಗಳನ್ನು ತರುತ್ತಿರುವುದು ಚೆಕ್ ಪೋಸ್ಟ್ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಅವರನ್ನು ಹಿಂತಿರುಗಿಸಿ ಕಳುಹಿಸುತ್ತಿದ್ದಾರೆ. ಇದನ್ನು ರಾಜ್ಯ ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಇಂತಹ ನಕಲಿ ಆರ್‌ಟಿಪಿಸಿಆರ್ ವರದಿ ಹೊಂದಿರುವವರ ವಿರುದ್ಧ ಕೂಡಲೇ ಕ್ರಮ ಕೂಡಲೇ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸುವ ಜೊತೆಗೆ ಸ್ಥಳದಲ್ಲೇ ಜಪ್ತಿ ಮಾಡುವಂತೆ ಸ್ಥಳದಲ್ಲಿದ್ದ ಚೆಕ್ ಪೋಸ್ಟ್ ಅಧಿಕಾರಿಗಳು ಹಾಗೂ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ:ಅಕ್ಕೈ ಪದ್ಮಶಾಲಿ ಆಸೆ ನೆರವೇರಿಸಿದ ನಟ ಧನಂಜಯ್

  • ವಿಶ್ವನಾಥ್​ರನ್ನು ಪಕ್ಕದಲ್ಲಿ ಕೂರಿಸಿಕೊಳ್ಳಲು ಸಾರಾ ಹಿಂದೇಟು

    ವಿಶ್ವನಾಥ್​ರನ್ನು ಪಕ್ಕದಲ್ಲಿ ಕೂರಿಸಿಕೊಳ್ಳಲು ಸಾರಾ ಹಿಂದೇಟು

    – ಕುಳಿತ ಬಳಿಕ ಉಭಯ ಕುಶಲೋಪರಿ ನಡೆಸಿದ ನಾಯಕರು

    ಮೈಸೂರು: ಪರಸ್ಪರ ಟೀಕೆ, ಪ್ರತಿ ಟೀಕೆಯಲ್ಲಿ ಮುಳುಗಿರುವ ಕೆ.ಆರ್.ನಗರ ಶಾಸಕ ಸಾರಾ ಮಹೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಕ್ಕ ಪಕ್ಕದಲ್ಲಿ ಕೂರುವ ಪ್ರಸಂಗ ಬಂದಾಗ ಆದಷ್ಟು ಅವರನ್ನು ಬೇರೆ ಕಡೆ ಕೂರಿಸುವ ಪ್ರಯತ್ನವನ್ನು ಸಾರಾ ಮಹೇಶ್ ಮಾಡಿದ್ದು ಕ್ಯಾಮಾರ ಕಣ್ಣಲ್ಲಿ ಸೆರೆಯಾಯಿತು.

    ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಭೆಯಲ್ಲಿ ಸಾರಾ ಮಹೇಶ್ ಅವರ ಪಕ್ಕದ ಕುರ್ಚಿಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಕುಳಿತಿದ್ದರು. ಸಭೆಗೆ ಎಚ್.ವಿಶ್ವನಾಥ್ ತಡವಾಗಿ ಬಂದರು.ವಿಶ್ವನಾಥ್ ಸಭೆಯ ವೇದಿಕೆಗೆ ಬಂದ ತಕ್ಷಣ ಶಾಸಕ ಅನಿಲ್ ಚಿಕ್ಕಮಾದು ಕುರ್ಚಿ ಬಿಟ್ಟುಕೊಡಲು ಮುಂದಾದರು. ಆಗ ಕುರ್ಚಿ ಬಿಟ್ಟು ಕೊಡದಂತೆ ಸಾರಾ ಮಹೇಶ್, ಅನಿಲ್ ಚಿಕ್ಕಮಾದು ಕೈ ಹಿಡಿದುಕೊಂಡರು.

    ಸಾರಾ ಮಹೇಶ್ ಕೈ ಎಳೆದರೂ ಪಕ್ಕಕ್ಕೆ ಸರಿದ ಅನಿಲ್ ಚಿಕ್ಕಮಾದು, ವಿಶ್ವನಾಥ್ ಅವರಿಗೆ ತಮ್ಮ ಕುರ್ಚಿ ಬಿಟ್ಟು ಕೊಟ್ಟರು. ಆಗ ವಿಧಿ ಇಲ್ಲದೆ ವಿಶ್ವನಾಥ್ ಪಕ್ಕದಲ್ಲೇ ಸಾರಾ ಮಹೇಶ್ ಕುಳಿತುಕೊಳ್ಳಬೇಕಾಯಿತು. ಪಕ್ಕ ಕುಳಿತ ವಿಶ್ವನಾಥ್ ಜೊತೆ ಸಾರಾ ಮಹೇಶ್ ಉಭಯ ಕುಶಲೋಪರಿ ನಡೆಸಿದರು.

  • ರಾಜಕಾಲುವೆ ಮೇಲೆ ಕಲ್ಯಾಣ ಮಂಟಪವಿದ್ದರೆ ರಾಜಕೀಯ ನಿವೃತ್ತಿ: ಸಾರಾ ಮಹೇಶ್

    ರಾಜಕಾಲುವೆ ಮೇಲೆ ಕಲ್ಯಾಣ ಮಂಟಪವಿದ್ದರೆ ರಾಜಕೀಯ ನಿವೃತ್ತಿ: ಸಾರಾ ಮಹೇಶ್

    ಮೈಸೂರು: ನಾನು ರಾಜಕಾಲುವೆ ಮೇಲೆ ಕಲ್ಯಾಣ ಮಂಟಪ ನಿರ್ಮಿಸಿದ್ರೆ ಆ ಚೌಲ್ಟ್ರಿಯನ್ನು ಸಾರ್ವಜನಿಕ ಬಳಕೆಗೆ ನೀಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕ ಸಾರಾ ಮಹೇಶ್ ಹೇಳಿದ್ದಾರೆ.

    ಸಾರಾ ಮಹೇಶ್ ವರ್ಸಸ್ ರೋಹಿಣಿ ಸಿಂಧೂರಿ ನಡುವಿನ ಭೂ ಅವ್ಯವಹರ ಆರೋಪಗಳ ಸಮರ ಮುಂದುವರಿದಿದೆ. ಸಾರಾ ಮಹೇಶ್ ಒಡೆತನದ ಸಾರಾ ಕಲ್ಯಾಣ ಮಂಟಪ ರಾಜಕಾಲುವೆ ಮೇಲೆ ನಿರ್ಮಾಣವಾಗಿದೆ ಎಂದು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಆರೋಪಿಸಿದ್ದರು. ಹೀಗಾಗಿ ಇಂದು ಸಾರಾ ಮಹೇಶ್ ಏಕಾಂಗಿಯಾಗಿ ಮೈಸೂರಿನ ಪ್ರಾದೇಶಿಕ ಕಚೇರಿ ಮುಂಭಾಗ ಪ್ರತಿಭಟನೆ ಆರಂಭಿಸಿದ್ದರು. ಇದನ್ನೂ ಓದಿ: ರೋಹಿಣಿ ಸಿಂಧೂರಿಯನ್ನು ಮೈಸೂರಿನ ಭೂ ಅಕ್ರಮದ ವಿಶೇಷ ತನಿಖಾಧಿಕಾರಿಯಾಗಿ ನೇಮಿಸಿ: ವಿಶ್ವನಾಥ್ ಆಗ್ರಹ

    ನನ್ನ ಒಡೆತನದಲ್ಲಿರುವ ಸಾ.ರಾ. ಚೌಲ್ಟ್ರಿ ರಾಜಕಾಲುವೆ ಮೇಲೆ ನಿರ್ಮಾಣ ಆಗಿಲ್ಲ. ಆದ್ದರಿಂದಲೇ ಏಕಾಂಗಿ ಪ್ರತಿಭಟನೆ ಶುರು ಮಾಡಿದ್ದೇನೆ. ಉನ್ನತ ಮಟ್ಟದ ಅಧಿಕಾರಿಗಳು ಜಾಗದ ಸರ್ವೇ ಮಾಡಲಿ. ರಾಜಕಾಲುವೆ ಮೇಲೆ ನಿರ್ಮಾಣ ಆಗಿದ್ದರೆ ಅದನ್ನು ಸಾರ್ವಜನಿಕರ ಬಳಕೆಗಾಗಿ ರಾಜ್ಯಪಾಲರಿಗೆ ಹಸ್ತಾಂತರ ಮಾಡುತ್ತೇನೆ. ಮಾತ್ರವಲ್ಲ ನಾನು ಸಾರ್ವಜನಿಕ ಜೀವನದಿಂದಲೇ ನಿವೃತ್ತಿ ಹೊಂದುತ್ತೇನೆ ಎಂದರು. ಇದನ್ನೂ ಓದಿ: 12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

    ಒಂದು ವೇಳೆ ಅವರು ಮಾಡಿರುವ ಆರೋಪ ಸುಳ್ಳಾದರೆ ಐಎಎಸ್ ಹುದ್ದೆಯಿಂದ ಅಮಾನತು ಮಾಡಬೇಕು. ಮಕ್ಕಳನ್ನು ಆಡಿಸಿಕೊಂಡು, ಅಡುಗೆ ಮಾಡಿಕೊಂಡು ಇರಲು ಆಂಧ್ರಕ್ಕೆ ಕಳುಹಿಸಬೇಕು ಎಂದು ಕಿಡಿಕಾರಿದರು. ಈ ಬಗ್ಗೆ ಸೋಮವಾರ ತನಿಖೆ ನಡೆಸಿ ವರದಿ ನೀಡುವುದಾಗಿ ಪ್ರಾದೇಶಿಕ ಆಯುಕ್ತ ಪ್ರಕಾಶ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಸಾರಾ ಮಹೇಶ್ ಪ್ರತಿಭಟನೆ ಮುಂದೂಡಿದರು. ಇದನ್ನೂ ಓದಿ: ವರ್ಗಾವಣೆಗೂ ಎರಡು ದಿನ ಮುಂಚೆ ಒತ್ತುವರಿ ತೆರವು, ಭೂ ಅಕ್ರಮದ ತನಿಖೆಗೆ ಆದೇಶಿಸಿದ್ದ ರೋಹಿಣಿ ಸಿಂಧೂರಿ

    ಇತ್ತ ಇಂದು ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ರಾಜಕಾಲುವೆ ಮೇಲೆ ಸಾರಾ ಕಲ್ಯಾಣ ಮಂಟಪ ನಿರ್ಮಾಣ ಆಗಿದೆ. ಒಂದು ಗುಂಟೆ ಅಲ್ಲ ಸಾವಿರಾರು ಎಕರೆ ಈ ರೀತಿ ಒತ್ತುವರಿ ಆಗಿದೆ. ಎಲ್ಲಾ ಜನಪ್ರತಿನಿಧಿಗಳು ಒಟ್ಟಾಗಿ ಸೇರಿ ಕೊರೊನಾ ಓಡಿಸುವ ಬದಲು ಅಧಿಕಾರಿ ಓಡಿಸಿದರು. ರೋಹಿಣಿ ಸಿಂಧೂರಿ, ಶಿಲ್ಪಾನಾಗ್ ಇಬ್ಬರೂ ಒಳ್ಳೆಯ ಅಧಿಕಾರಿಗಳು. ಇಬ್ಬರು ಐಎಎಸ್ ಅಧಿಕಾರಿಗಳನ್ನು ಹೊರ ಹಾಕಿದ್ದು ರಾಜಕಾರಣಿಗಳ ಸ್ವಾರ್ಥ ಎಂದಿದ್ದರು. ಇದನ್ನೂ ಓದಿ: ಡಿಸಿ ಮನೆ ಕರೆಂಟ್ ಬಿಲ್ ತಿಂಗಳಿಗೆ 50 ಸಾವಿರ ರೂ.: ಸಾರಾ ಮಹೇಶ್ ಆರೋಪ

  • ಡಿಸಿ ಮನೆ ಕರೆಂಟ್ ಬಿಲ್ ತಿಂಗಳಿಗೆ 50 ಸಾವಿರ ರೂ.: ಸಾರಾ ಮಹೇಶ್ ಆರೋಪ

    ಡಿಸಿ ಮನೆ ಕರೆಂಟ್ ಬಿಲ್ ತಿಂಗಳಿಗೆ 50 ಸಾವಿರ ರೂ.: ಸಾರಾ ಮಹೇಶ್ ಆರೋಪ

    ಮೈಸೂರು: ಜಿಲ್ಲಾಧಿಕಾರಿ ಸ್ಥಾನದಿಂದ ರೋಹಿಣಿ ಸಿಂಧೂರಿ ನಿರ್ಗಮಿಸಿ ಮೂರು ದಿನವಾದರೂ ಇನ್ನೂ ಆರೋಪ – ಪ್ರತ್ಯಾರೋಪ ನಿಂತಿಲ್ಲ. ಇಂದು ಮೈಸೂರಿನಲ್ಲಿ ಮಾಜಿ ಸಚಿವ ಸಾರಾ ಮಹೇಶ್ ಸುದ್ದಿಗೋಷ್ಠಿ ನಡೆಸಿ, ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಮಾಡಿದರು.

    ನಿರ್ಗಮಿತ ಡಿಸಿ ಆರೋಪಿಸಿರುವಂತೆ ಮೈಸೂರಿನಲ್ಲಿ ನಡೆದಿರುವ ಭೂ ಹಗರಣಗಳ ಬಗ್ಗೆ ಸರ್ಕಾರ ತನಿಖೆ ಮಾಡಬೇಕು. ಅದಕ್ಕಾಗಿ ತನಿಖಾ ಸಮಿತಿ ರಚಿಸಿ. ರೋಹಿಣಿ ಸಿಂಧೂರಿ ಪ್ರಚಾರ ಪ್ರಿಯೆ ಸಂವೇದನಶೀಲತೆಯಿಲ್ಲದ ಅಧಿಕಾರಿ. ಒಬ್ಬ ಸಚಿವನಿಗೆ ಮನೆ ನವೀಕರಣಕ್ಕೆ 2 ಲಕ್ಷ ನೀಡಲಾಗುತ್ತದೆ. ಆದರೆ ಇವರು ಅಂದಾಜು 65 ಲಕ್ಷ ಖರ್ಚು ಮಾಡಿ ಡಿಸಿ ಸರ್ಕಾರಿ ನಿವಾಸ ನವೀಕರಣ ಮಾಡಿಸಿದ್ದಾರೆ. ಇದಕ್ಕೆ ಯಾರು ಅನುಮತಿ ನೀಡಿದರು ಎಂದು ಪ್ರಶ್ನಿಸಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದಂತೆ ಇದು. ಇವರು ಸೇವೆ ಮಾಡಲು ಅಲ್ಲ ಮೈಸೂರಿಗೆ ಬಂದಿದ್ದು ಎಂದರು.

    ಮೈಸೂರು ಜಿಲ್ಲಾಧಿಕಾರಿ ಅಧಿಕೃತ ನಿವಾಸದಲ್ಲಿ ಮೂರು ಕೆಇಬಿ ಮೀಟರ್ ಇವೆ. ಹಿಂದೆ ಇದರ ಒಟ್ಟಾರೆ ಬಿಲ್ ಐದಾರು ಸಾವಿರ ಬರುತ್ತಿತ್ತು. ರೋಹಿಣಿ ಸಿಂಧೂರಿ ಬಂದ ನಂತರ ಒಂದು ತಿಂಗಳಿಗೆ 50 ಸಾವಿರ ಕರೆಂಟ್ ಬಿಲ್ ಬಂದಿದೆ. ಗಾರ್ಡನ್ ಲೈಟಿಂಗ್ಸ್, ಜಿಮ್, ಸ್ವೀಮಿಂಗ್ ಫೂಲ್, ಮನೆಯೊಳಗಿನ ದೀಪಾಲಕದಿಂದ ವಿದ್ಯುತ್ ಬಿಲ್ ಹೆಚ್ಚಾಗಿದೆ ಎಂದು ಆರೋಪಿಸಿದರು. ಅಲ್ಲದೆ ಮೈಸೂರು ಭಾಗದಲ್ಲಿ ಜನರಿಗೆ ಕುಡಿಯುವ ನೀರಿಲ್ಲ. ಆದರೆ ಡಿಸಿ ಮನೆಯಲ್ಲಿನ ಈಜುಕೊಳಕ್ಕೆ ಬಳಸುತ್ತಿದ್ದದ್ದು ಕುಡಿಯುವ ನೀರು ಇಂತವರನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಸಿಂಗಂ ಅದೇನೋ ಸಿಂಗಳಿಕಾನೋ ಏನೋ ಕರೆಯುತ್ತಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ – ರೋಹಿಣಿ ಸಿಂಧೂರಿ

    ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಾ.ರಾ. ಮಹೇಶ್ ಕಾರಣ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಾ ರಾ ಸ್ಪಷ್ಟನೆ ನೀಡಿ, ನಾನು ರೋಹಿಣಿ ಸಿಂಧೂರಿ ವಿರುದ್ಧ ಹೋರಾಟ ಮಾಡಿದ್ದೇನೆ. ಆದರೆ ವರ್ಗಾವಣೆಗಾಗಿ ಹೋರಾಟ ಮಾಡಿಲ್ಲ. ಜಿಲ್ಲೆಯಲ್ಲಿ ಕೋವಿಡ್ ನಿಂದ 5 ಸಾವಿರ ಜನರು ಸಾವನಪ್ಪಿದ್ದಾರೆ. ಇದನ್ನು ಮುಚ್ಚಿಡಲಾಗಿದೆ. ನೀವು ವಿರೋಧ ಪಕ್ಷದ ನಾಯಕರು ನಮ್ಮ ಮಾರ್ಗದರ್ಶಕರು. ಈ ಬಗ್ಗೆ ನೀವೇ ಧ್ವನಿ ಎತ್ತಬಹುದಾಗಿತ್ತು. ಚಾಮರಾಜನಗರ ದುರಂತದ ಉಲ್ಲೇಖಿಸಿ, ಇಲ್ಲಿನವರದ್ದು ಏನು ತಪ್ಪಿಲ್ಲ ಅಂತಾ ವರದಿ ಇತ್ತು. ಈಗ ಆಡಿಯೋ ಬಿಡುಗಡೆಯಾಗಿದೆ. ಅದರಲ್ಲಿ ಅಧಿಕಾರಿಗೆ ಡಿಸ್‍ಮಿಸ್ ಮಾಡುವ ಬೆದರಿಕೆ ಹಾಕಲಾಗಿದೆ. ಇದಕ್ಕೆ ಏನೂ ಹೇಳುತ್ತೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಚಾಮರಾಜನಗರ ಆಮ್ಲಜನಕ ದುರಂತಕ್ಕೆ ರೋಹಿಣಿ ಸಿಂಧೂರಿ ಕಾರಣನಾ?

    ಭೂ ಒತ್ತುವರಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಾರೆ, ನೀವು 5 ವರ್ಷ ಸಿಎಂ ಆಗಿದ್ದಿರಿ. ಆಗ ಭ್ರಷ್ಟರು ದಕ್ಷತೆ ಇಲ್ಲದವರನ್ನು ಅಧಿಕಾರಿ ಮಾಡಿದ್ರಾ ಎಂದು ಪ್ರಶ್ನಿಸಿದ ಅವರು, ಸಿಎಂ ಬಿ ಎಸ್ ಯಡಿಯೂರಪ್ಪಗೆ ನಾನೇ ಪತ್ರ ಬರೆದಿದ್ದೇನೆ. ರೋಹಿಣಿ ಸಿಂಧೂರಿ ಬಳಿ ಇರುವ ಮಾಹಿತಿ ಪಡೆದು ತನಿಖೆ ಮಾಡಿ ಎಂದು ಆಗ್ರಹಿಸಿದರು.

  • ಜಿಲ್ಲೆಯ ಜನರ ಕ್ಷಮೆ ಕೇಳುವಂತೆ ಹೇಳಿರೋ ರೋಹಿಣಿ ಸಿಂಧೂರಿಗೆ ಸಾರಾ ಮಹೇಶ್ ಪ್ರಶ್ನೆಗಳ ಸುರಿಮಳೆ!

    ಜಿಲ್ಲೆಯ ಜನರ ಕ್ಷಮೆ ಕೇಳುವಂತೆ ಹೇಳಿರೋ ರೋಹಿಣಿ ಸಿಂಧೂರಿಗೆ ಸಾರಾ ಮಹೇಶ್ ಪ್ರಶ್ನೆಗಳ ಸುರಿಮಳೆ!

    ಮೈಸೂರು: ಜಿಲ್ಲೆಯ ಜನರ ಬಳಿ ಕ್ಷಮೆ ಕೇಳಬೇಕು ಎಂದ ಜಿಲಾಧಿಕಾರಿ ರೋಹಿಣಿ ಸಿಂಧೂರಿಗೆ ಮಾಜಿ ಸಚಿವ ಸಾರಾ ಮಹೇಶ್ ಅವರು ಪ್ರಶ್ನೆಗಳ ಸುಮಳೆಗೈದರು.

    ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕನ್ನಡಿಗ, ದಲಿತ ಅಧಿಕಾರಿಯನ್ನು ಒಂದೇ ತಿಂಗಳಲ್ಲಿ ಎತ್ತಂಗಡಿ ಮಾಡಿಸಿ ಆ ಸ್ಥಾನಕ್ಕೆ ಬಂದಿದ್ದು ಸತ್ಯ ಅಲ್ವಾ?, ಸಿಎಟಿ ಅನ್ನೇ ಮ್ಯಾನೇಜ್ ಮಾಡಿ ಇಲ್ಲಿ ಉಳಿದು ಕೊಂಡಿದ್ದು ಸತ್ಯ ಅಲ್ವಾ?, ಸ್ವಿಮಿಂಗ್ ಫ್ಹುಲ್ ಕಟ್ಟಿ ಕೊಂಡಿದ್ದು ಸತ್ಯ ಅಲ್ವಾ?, 200 ಕೋಟಿ ಸರಕಾರ ದ ಹಣನಾ ತಿರುಪತಿ ಕೊಟ್ಟಿದ್ದು ಸತ್ಯ ಅಲ್ವಾ?, ಇಬ್ಬರು ಐಎಎಸ್ ಅಧಿಕಾರಿಗಳ ಅವಿವೇಕದಿಂದ ಇಡೀ ರಾಜ್ಯ ಹೊತ್ತಿ ಉರಿಯಿತು. ಇಷ್ಟೆ ಅಲ್ಲ ಅದರೂ ನಮ್ಮ ಕೈಯಲ್ಲಿ ವ್ಯವಸ್ಥೆ ಬದಲಾಯಿಸಲು ಆಗಲಿಲ್ಲ ಅಂತಾ ನಾವು ಜನರ ಕ್ಷಮೆ ಕೇಳಬೇಕಿದೆ. ಆರೋಪ ಬಂದ ಅಧಿಕಾರಿಗಳನ್ನು ಇಟ್ಟುಕೊಂಡು ಸತ್ಯ ಹುಡುಕಿದರೆ ಸತ್ಯ ಹೊರಬರುತ್ತದಾ ಎಂದು ಪ್ರಶ್ನೆ ಮೇಲೆ ಪ್ರಶ್ನೆಗಳನ್ನು ಹಾಕಿದ್ದಾರೆ.

    ಲಾಕ್ ಡೌನ್ ಹಿನ್ನೆಲೆ ಬಡ ಶ್ರಮಿಕ ವರ್ಗದವರಿಗೆ ಆರ್ಥಿಕವಾಗಿ ಸಹಾಯ ಮಾಡಿ. ಶಾಸಕರ ಒಂದು ವರ್ಷದ ವೇತನ ಹಿಡಿದು ಕೊಂಡು ಶ್ರಮಿಕ ವರ್ಗದ ವರಿಗೆ ಆರ್ಥಿಕ ಸಹಾಯ ಮಾಡಿ. ಮೈಸೂರಿನಲ್ಲಿ ಟೆಸ್ಟಿಂಗ್ ಕಡಮೆ ಮಾಡಲಾಗಿದೆ. ಇದರಿಂದ ಪಾಸಿಟಿವ್ ಸಂಖ್ಯೆ ಕಡಮೆ ಆಗುತ್ತಿದೆ. ಕೊರೊನಾ ಇಳಿಮುಖ ಆಗುತ್ತಿದೆ ಎಂದು ತೋರಿಸಲು ಈ ರೀತಿ ಟೆಸ್ಟ್ ಕಡಮೆ ಮಾಡಲಾಗಿದೆ ಎಂದು ಇದೇ ವೇಳೆ ಮಾಜಿ ಸಚಿವರು ಗಂಭೀರ ಆರೋಪ ಮಾಡಿದರು.

    ರೋಹಿಣಿ ಸಿಂಧೂರಿ ಹೇಳಿದ್ದೇನು..?
    ಈ ಹಿಂದೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿಸಿ, ಚಾಮರಾಜನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪೋರ್ಟ್ ನೋಡಿದ್ದೀರಾ? ನಾವು ಬಂದ ದಿನದಿಂದ ಕೆಲವರು ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಿಲ್ಲ, ಅದು ನನ್ನ ಕೆಲಸವೂ ಅಲ್ಲ. ನಮ್ಮ ಮೇಲೆ ಆರೋಪ ಮಾಡಲು ಹೋಗಿ ಮೈಸೂರಿಗೆ ಕಳಂಕ ತರಲು ಪ್ರಯತ್ನಿಸಿದ್ದರು. ಅದರಿಂದ ನಾವು ಮುಕ್ತರಾಗಿದ್ದೇವೆ. ಆದರೆ ಕಳಂಕ ತರಲು ಪ್ರಯತ್ನಿಸಿದವರು ಮೈಸೂರು ಜನರ ಕ್ಷಮೆ ಕೇಳಬೇಕು. ನಮ್ಮ ಮೇಲೆ ಮಾಡಿದ ಆರೋಪ ಸುಳ್ಳು ಮತ್ತು ಆಧಾರ ರಹಿತ. ಸರ್ಕಾರ ಕೇಳಿದ ಎಲ್ಲ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದರು.

  • ಜಿಲ್ಲಾಡಳಿತದ ಒತ್ತಡದಿಂದ 24 ಜನ ಮೃತಪಟ್ಟಿದ್ದಾರೆ- ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಗಂಭೀರ ಆರೋಪ

    ಜಿಲ್ಲಾಡಳಿತದ ಒತ್ತಡದಿಂದ 24 ಜನ ಮೃತಪಟ್ಟಿದ್ದಾರೆ- ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಗಂಭೀರ ಆರೋಪ

    ಮೈಸೂರು: ಚಾಮರಾಜನಗರ ಆಮ್ಲಜನಕ ದುರಂತದಿಂದ 24 ಜನ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಒತ್ತಡಕ್ಕೆ ಈ ಜಿಲ್ಲಾಧಿಕಾರಿಯನ್ನು ಇಟ್ಟುಕೊಂಡಿದ್ದೀರೋ ಗೊತ್ತಿಲ್ಲ. ಚಾಮರಾಜನಗರ- ಮೈಸೂರು ಜಿಲ್ಲಾಡಳಿತಗಳ ವ್ಯತ್ಯಾಸದಿಂದ ಈ ದುರ್ಘಟನೆ ನಡೆದಿದೆ. ಮೈಸೂರಿನಿಂದ ಸಕಾಲಕ್ಕೆ ಸಿಲಿಂಡರ್ ಪೂರೈಕೆ ಆಗಿಲ್ಲ. ಸದರನ್ ಗ್ಯಾಸ್‍ನಿಂದ 2.30ಕ್ಕೆ 90 ಸಿಲಿಂಡರ್ ಹೋಗಿದೆ. ಆದರೆ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿರುವಂತೆ 220 ಆಮ್ಲಜನಕ ಸಿಲಿಂಡರ್ ಪೂರೈಕೆ ಆಗಿಲ್ಲ ಎಂದಿದ್ದಾರೆ. ಕಾಂಟ್ರ್ಯಾಕ್ಟ್ ಇರುವುದು ಚಾಮರಾಜನಗರ ಜಿಲ್ಲಾಸ್ಪತ್ರೆ, ಸದರನ್ ಮತ್ತು ಪದಕಿ ಗ್ಯಾಸ್ ಏಜೆನ್ಸಿಗಳ ನಡುವೆ. ಕಳುಹಿಸಿಕೊಡಲು ನೀವು ಯಾರು? 220 ಕಳುಹಿಸಿದ್ದೇವೆ ಅಂದರೆ ನಿಮ್ಮ ಕಂಟ್ರೋಲ್ ಇರುವುದನ್ನು ಒಪ್ಪಿಕೊಂಡಂತಾಯಿತು ಎಂದು ಆರೋಪಿಸಿದರು.

    ಪ್ರತಿ ದಿನ 300-350 ಸಿಲಿಂಡರ್ ನೀಡುವಂತೆ ಆಕ್ಸಿಜನ್ ಸಿಲಿಂಡರ್ ಕಂಪನಿಗಳ ಜೊತೆ ಕಾಂಟ್ರ್ಯಾಕ್ಟ್ ಮಾಡಿಕೊಂಡಿರುತ್ತದೆ. ಆದರೆ ಈಗ ಒಂದು ವಾರದ ಹಿಂದೆ ಮೈಸೂರು ಜಿಲ್ಲಾಡಳಿತದಿಂದ ಸಭೆ ಮಾಡಿ, ಅಲ್ಲಿನ ಡ್ರಗ್ ಕಂಟ್ರೋಲರ್‍ಗೆ ಸೂಚಿಸಿ, ಚಾಮರಾಜನಗರಕ್ಕೆ 150, ಮಂಡ್ಯ 100 ಸಿಲಿಂಡರ್ ನೀಡುವಂತೆ ತಿಳಿಸುತ್ತಾರೆ. ಅಲ್ಲದೆ ಆಕ್ಸಿಜನ್‍ಗಾಗಿ ಚಾಮರಾಜನಗರದ ವಾಹನ ಬಂದು ನಿಂತರೂ ದಿನಕ್ಕೆ 20, 30, 40 ಹೀಗೆ ಮೂರ್ನಾಲ್ಕು ಬಾರಿ ಅವರು ಬರಬೇಕಿದೆ.

    ನಿಮ್ಮ ಭೂ ವ್ಯವಹಾರಗಳಿದ್ದರೆ ಮಾಡಿಸಿಕೊಳ್ಳಿ. ಆದರೆ ಮೈಸೂರಿನಂತಹ ಪ್ರಮುಖ ಜಿಲ್ಲೆಗೆ ಪ್ರಾಮಾಣಿಕ, ಹಿರಿಯ ಅಧಿಕಾರಿಯನ್ನು ನೇಮಿಸಿ. ನಿನ್ನೆ ಚಾಮರಾಜನಗರದಲ್ಲಿ ದುರಂತ ಉಂಟಾಗಿದೆ. ಮೈಸೂರಿನಲ್ಲೂ ಅದ್ವಾನಗಳು ಶುರು ಆಗಿವೆ. ದಯವಿಟ್ಟು ಕೋವಿಡ್ ನಿರ್ವಹಣೆವಾಗಿ ಬೇರೊಬ್ಬ ಅಧಿಕಾರಿಯನ್ನು ನೇಮಿಸಿ ಎಂದು ಮನವಿ ಮಾಡಿದ್ದಾರೆ.

  • ಜೆಡಿಎಸ್ ಎಲ್ಲಿದೆ ಅಂದಿದ್ರಿ, ಗೊತ್ತಾಯಿತಾ ಸಿದ್ದರಾಮಯ್ಯನವರೇ ಪ್ರಾದೇಶಿಕ ಪಕ್ಷದ ಶಕ್ತಿ-ಸಾರಾ ಮಹೇಶ್ ಲೇವಡಿ

    ಜೆಡಿಎಸ್ ಎಲ್ಲಿದೆ ಅಂದಿದ್ರಿ, ಗೊತ್ತಾಯಿತಾ ಸಿದ್ದರಾಮಯ್ಯನವರೇ ಪ್ರಾದೇಶಿಕ ಪಕ್ಷದ ಶಕ್ತಿ-ಸಾರಾ ಮಹೇಶ್ ಲೇವಡಿ

    ಮಂಡ್ಯ: ಮೊನ್ನೆ ತನಕ ಜೆಡಿಎಸ್ ಎಲ್ಲಿದೆ, ಜೆಡಿಎಸ್ ಜೊತೆ ಹೋಗಲೇ ಬಾರದು ಎಂದು ಹೇಳುತ್ತಿದ್ದರು. ಈಗ ಗೊತ್ತಾಯಿತಾ ಸಿದ್ದರಾಮಯ್ಯನವರೇ ಜೆಡಿಎಸ್ ಶಕ್ತಿ ಎಂದು ಮಾಜಿ ಸಚಿವ ಸಾರಾ ಮಹೇಶ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಪಾಂಡವಪುರದ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಅಪಹಾಸ್ಯ ಮಾಡಿದ್ದಾರೆ. ಜೆಡಿಎಸ್ ಎಲ್ಲಿದೆ ಎಂದು ಮೊನ್ನೆ ತನಕ ಹೇಳುತ್ತಿದ್ದರು. ಜೆಡಿಎಸ್ ಜೊತೆ ಹೋಗಲೇ ಬಾರದು ಎನ್ನುತ್ತಿದ್ದರು. ಈಗ ನಾವು ಬೇಡ ಎಂದರೂ ಮೈಸೂರು ಪಾಲಿಕೆಯಲ್ಲಿ ಓಟ್ ಹಾಕಿದರು. ಈಗ ಗೊತ್ತಾಯಿತಾ ಸಿದ್ದರಾಮಯ್ಯನವರೇ ಜೆಡಿಎಸ್ ಶಕ್ತಿ ಏನು ಅಂತ. ಇದು ಪ್ರಾದೇಶಿಕ ಪಕ್ಷದ ಶಕ್ತಿ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದರು.

    ನೀವು ಇಲ್ಲಿಯವರೆಗೆ ಯಾವುದೇ ಅಧಿಕಾರ ಪಡೆದಿದ್ದರೂ ಜೆಡಿಎಸ್ ನಾಯಕರ ಮತ್ತು ಕಾರ್ಯಕರ್ತರ ಆಶೀರ್ವಾದದಿಂದ ಎನ್ನುವುದನ್ನು ಮರೆಯಬೇಡಿ. ಇವತ್ತಿನ ಮೈಸೂರು ನಗರ ಪಾಲಿಕೆಯ ಸಂದೇಶ 2023ರ ರಾಜ್ಯದ ಸಂದೇಶ. ಈ ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಎಷ್ಟೇ ಬಲಿಷ್ಠವಾಗಿ ಇದ್ದರೂ, ಇಂದಿನ ಮೈಸೂರು ನಗರ ಪಾಲಿಕೆಯ ಸಂದೇಶವೇ 2023ರ ಸಂದೇಶ. ಅಂದು ನಮ್ಮೆಲ್ಲರ ನಾಯಕ ಕುಮಾರಸ್ವಾಮಿಯವರೇ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.