Tag: Sara Mahesh

  • ಜೆಡಿಎಸ್‍ನಲ್ಲಿ ಹಣವೇ ಮುಖ್ಯ, ದುರಹಂಕಾರದಿಂದ್ಲೇ ಸೋಲು: ದಳ ನಾಯಕರಿಗೆ ವಿಶ್ವನಾಥ್ ಪರೋಕ್ಷ ಗುದ್ದು

    ಜೆಡಿಎಸ್‍ನಲ್ಲಿ ಹಣವೇ ಮುಖ್ಯ, ದುರಹಂಕಾರದಿಂದ್ಲೇ ಸೋಲು: ದಳ ನಾಯಕರಿಗೆ ವಿಶ್ವನಾಥ್ ಪರೋಕ್ಷ ಗುದ್ದು

    ಮೈಸೂರು: ಕೆ.ಆರ್.ನಗರ ಪುರಸಭೆ ಚುನಾವಣೆಯ ಸೋಲಿಗೆ ಸಚಿವ ಸಾ.ರಾ.ಮಹೇಶ್ ಅವರ ನಡೆಯೇ ಕಾರಣ. ಕುರುಬ ಸಮುದಾಯದವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಸೋಲಾಯ್ತು. ರಾಜ್ಯಧ್ಯಕ್ಷನಾಗಿದ್ದರೂ ಪಕ್ಷದ ನಾಯಕರು, ಸಚಿವರು ನಾನು ಹೇಳಿದವರಿಗೆ ಟಿಕೆಟ್ ನೀಡಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಕಿಡಿಕಾರಿದ್ದಾರೆ.

    ಕೆ.ಆರ್. ನಗರದಲ್ಲಿ ಕುರುಬ ಸಮುದಾಯಕ್ಕೆ ಟಿಕೆಟ್ ನೀಡದಿದ್ದರೂ ನಾಲ್ಕು ವಾರ್ಡ್ ಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ. ಆ ಗೆಲುವಿನ ರೂವಾರಿಗಳು ನನ್ನ ಜೊತೆ ಜೆಡಿಎಸ್ ಗೆ ಬಂದ ಕಾರ್ಯಕರ್ತರ ಪರಿಶ್ರಮವಿದೆ. ಎಲ್ಲವನ್ನು ಸಮುದಾಯಗಳನ್ನು ಧಿಕ್ಕರಿಸಿ ಈ ಬಾರಿ ಟಿಕೆಟ್ ನೀಡಿದ್ದರಿಂದ ಕೆ.ಆರ್.ನಗರದಲ್ಲಿ ಸೋಲು ಕಂಡಿದ್ದೇವೆ. ರಾಜ್ಯದ ಮಂತ್ರಿಗಳಾದವರು ಒಂದು ಸಮುದಾಯವನ್ನು ದ್ವೇಷ ಮಾಡಬಾರದು. ಚುನಾವಣೆಯಲ್ಲಿ ನಮಗೆ ಮತ ನೀಡಲಿ ಅಥವಾ ನೀಡದರಿಲಿ ಗೆದ್ದ ಮೇಲೆ ಎಲ್ಲರನ್ನು ಒಂದೇ ಭಾವನೆಯಿಂದ ಕಾಣಬೇಕು ಎಂದು ಸಚಿವ ಸಾ.ರಾ.ಮಹೇಶ್ ಅವರನ್ನು ಕುಟುಕಿದರು.

    ಚುನಾವಣೆಯಲ್ಲಿ ಜಯಶಾಲಿಯಾದ ನಾಯಕರು ಎಲ್ಲರನ್ನು ಒಂದೇ ಎಂಬ ಭಾವನೆಯಿಂದ ನೋಡಿಕೊಂಡು ಬಂದ ಇತಿಹಾಸವನ್ನು ಕೆ.ಆರ್.ನಗರ ಕ್ಷೇತ್ರ ಹೊಂದಿದೆ. ದ್ವೇಷ ರಾಜಕಾರಣ ಮಾಡಿ ಅಧಿಕಾರಕ್ಕೆ ಬಂದ ಉದಾಹರಣೆಗಳು ನಮ್ಮ ಮುಂದಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅರಿತು ಕೆಲಸ ಮಾಡಿ ಎಂದು ಸಚಿವರಲ್ಲಿ ಹೆಚ್.ವಿಶ್ವನಾಥ್ ಮನವಿ ಮಾಡಿಕೊಂಡರು.

    ಜೆಡಿಎಸ್ ನಾಯಕರ ಅತಿಯಾದ ಮಾತು ಮತ್ತು ಹಣದ ಮತ್ತಿನಿಂದ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದಾರೆ. ದುಡ್ಡು ಇಲ್ಲದೆ ಗುಡಿಸಲಲ್ಲಿ ವಾಸ ಮಾಡಿಕೊಂಡು, ರಸ್ತೆ ಬದಿಯ ಬೋರ್ ವೆಲ್ ನಲ್ಲಿ ಸ್ನಾನ ಮಾಡುತ್ತಿದ್ದ ಪ್ರತಾಪ್ ಚಂದ್ರ ಸಾರಂಗಿ ಮೋದಿ ಸಂಪುಟದಲ್ಲಿ ಸಚಿವರಾಗಿದ್ದಾರೆ. ಜನರನ್ನು ದುಡ್ಡಿನಿಂದ ಅಳೆಯಬಾರದು. ದುಡ್ಡಿನಿಂದ ಕೇವಲ ತಾತ್ಕಾಲಿಗೆ ಗೆಲುವು ನಮ್ಮದಾಗಿರುತ್ತದೆ ಎಂಬುದನ್ನು ಅರಿತು ಕೆಲಸ ಮಾಡಬೇಕಿದೆ. ದುಡ್ಡಿನಿಂದ ಎಲ್ಲವನ್ನು ಅಳೆದು, ಗೆಲ್ಲುತ್ತೇವೆ ಎಂಬ ದುರಂಹಕಾರ ಒಳ್ಳೆಯದಲ್ಲ ಎಂಬುದನ್ನು ಕೆಲವರು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಪಕ್ಷದ ಸಚಿವರ ಮೇಲೆಯೇ ಗುಡುಗಿದರು.

    ಕೇವಲ ಒಂದು ಜಾತಿಯ ಬೆಂಬಲ ಇದ್ದರೆ ಪಂಚಾಯ್ತಿ ಸದಸ್ಯ ಕೂಡ ಆಗಲ್ಲ. ಇದನ್ನು ಕೊನೆ ಮಾಡಿ ದ್ವೇಷ ಒಳ್ಳೆಯದಲ್ಲ. ದ್ವೇಷದಿಂದ ರಾಜಕಾರಣ ಮಾಡಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಎಲ್ಲಾ ಜಾತಿ ಜನಾಂಗದವರು ಸೇರಿದರೆ ಅಧಿಕಾರ ಬರಲು ಸಾಧ್ಯ ಎಂದು ಆಗ್ರಹಿಸುತ್ತಿಲ್ಲ. ಸಚಿವರಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.

  • ಎಚ್‍ಡಿಡಿ ಮನೆಗೆ ಬಂದ ಸಾರಾ ಮಹೇಶ್ ಮೇಲೆ ಸಿಎಂ ಗರಂ

    ಎಚ್‍ಡಿಡಿ ಮನೆಗೆ ಬಂದ ಸಾರಾ ಮಹೇಶ್ ಮೇಲೆ ಸಿಎಂ ಗರಂ

    ಬೆಂಗಳೂರು: ಮಂಡ್ಯ ಹಾಗೂ ತುಮಕೂರಿನಲ್ಲಿ ಸೋಲು ಕಂಡಿದ್ದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಭಾರೀ ತಲೆ ಕಡೆಸಿಕೊಂಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ದೇವೇಗೌಡರ ಮನೆಗೆ ಭೇಟಿ ನೀಡಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಸಚಿವ ಸಾ.ರಾ ಮಹೇಶ್ ವಿರುದ್ಧ ಕುಮಾರಸ್ವಾಮಿ ಗರಂ ಆಗಿದ್ದಾರೆ.

    ಮಂಡ್ಯ ಮತ್ತು ತುಮಕೂರಿನಲ್ಲಿ ಹಿನ್ನಡೆಯಾದ ಹಿನ್ನಲೆಯಲ್ಲಿ ಕುಮಾರಸ್ವಾಮಿ ಸುಮಾರು ಎರಡು ಗಂಟೆಯಿಂದ ತಾಜ್ ಹೋಟೆಲ್‍ನಲ್ಲಿಯೇ ಇದ್ದರು. ಬಳಿಕ ಮುಂದೇನು ಎಂದು ಚರ್ಚೆ ಮಾಡಲು ಸಿಎಂ ಪದ್ಮನಾಭನಗದಲ್ಲಿರುವ ದೇವೆಗೌಡರ ಮನೆಗೆ ಭೇಟಿ ನೀಡಿದ್ದರು.

    ಕುಮಾರಸ್ವಾಮಿ ಮನೆಗೆ ಭೇಟಿ ನೀಡಿದ್ದ ವೇಳೆ ವೈಎಸ್‍ವಿ ದತ್ತ ಹಾಗೂ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಫಾರೂಕ್, ಸಾ.ರಾ ಮಹೇಶ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಚುನಾವಣೆಯಲ್ಲಿ ಮಗ ನಿಖಿಲ್ ಸೋತಿದ್ದಕ್ಕೆ ಸಿಎಂ ಕುಮಾರಸ್ವಾಮಿ ಸಚಿವ ಸಾರಾ ಮಹೇಶ್ ವಿರುದ್ಧ ತಮ್ಮ ಸಿಟ್ಟನ್ನು ಹೊರ ಹಾಕಿದ್ದಾರೆ.

  • ಸಿಎಂ ರೆಸಾರ್ಟ್ ವಾಸ್ತವ್ಯ ಬಗ್ಗೆ ಸಾ.ರಾ ಮಹೇಶ್ ಸ್ಪಷ್ಟನೆ

    ಸಿಎಂ ರೆಸಾರ್ಟ್ ವಾಸ್ತವ್ಯ ಬಗ್ಗೆ ಸಾ.ರಾ ಮಹೇಶ್ ಸ್ಪಷ್ಟನೆ

    ಮಡಿಕೇರಿ: ಭೀಕರ ಬರಗಾಲದ ನಡುವೆಯೇ ಸಿಎಂ ಕುಮಾರಸ್ವಾಮಿ ಮಡಿಕೇರಿಯಲ್ಲಿರುವ ಇಬ್ಬನಿ ರೆಸಾರ್ಟ್ ಗೆ ಹೋಗಿದ್ಯಾಕೆ? ಈ ಬಗ್ಗೆ ಜೆಡಿಎಸ್ ಸಚಿವರು ತಮ್ಮದೇ ವ್ಯಾಖ್ಯಾನ ಕೊಡುತ್ತಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವ ಸಾರಾ ಮಹೇಶ್, ಮುಖ್ಯಮಂತ್ರಿ ಇರಬಹುದು, ಸಚಿವರೇ ಇರಬಹುದು. ಎಲ್ಲರಿಗೂ ತಮ್ಮದೇ ಆದ ಖಾಸಗಿ ಜೀವನ ಇರುತ್ತದೆ. ಒಮ್ಮೊಮ್ಮೆ ಯಂತ್ರಗಳು ಕೂಡಾ ಕೆಟ್ಟು ಹೋಗುತ್ತವೆ. ಅವಕ್ಕೂ ರೆಸ್ಟ್ ಬೇಕಾಗುತ್ತದೆ. ಹೀಗಾಗಿ ನಮಗೂ ವಿಶ್ರಾಂತಿ ಬೇಕಾಗುತ್ತದೆ. ಅದಕ್ಕಾಗಿ ಸಿಎಂ ಕುಮಾರಸ್ವಾಮಿ ಇಲ್ಲಿಗೆ ರೆಸ್ಟ್ ಗಾಗಿ ಬಂದಿದ್ದಾರೆ ಅಷ್ಟೆ ಎಂದರು.

    ಅವರ ಸೂಚನೆ ಮೇರೆಗೆ ಇಂದು ಮಡಿಕೇರಿಯಲ್ಲಿ ಸಭೆ ನಡೆಸುತ್ತಿದ್ದೇನೆ. ಮಡಿಕೇರಿ ವಾಸ್ತವ್ಯಕ್ಕೆ ಸುರಕ್ಷಿತ ಅಂತ ರಾಜ್ಯದ ಜನತೆಗೆ ತಿಳಿಸಲು ಮಾಜಿ ಸಿಎಂ ಮತ್ತು ಹಾಲಿ ಸಿಎಂ ಒಂದೇ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ನಾಳೆಯಿಂದ ಎಂದಿನಂತೆ ಸರ್ಕಾರಿ ಕಾರ್ಯಕ್ರಮಗಳು ಶುರುವಾಗುತ್ತವೆ ಎಂದು ಸಾರಾ ಮಹೇಶ್ ತಿಳಿಸಿದ್ದಾರೆ.

    23ರ ನಂತರ ರಾಜ್ಯದಲ್ಲಿ ಗೇಮ್‍ಪ್ಲಾನ್ ಆಗಲಿದೆ ಎನ್ನೊ ಬಿಎಸ್‍ವೈ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸರ್ಕಾರ ರಚಿಸಿದ ದಿನದಿಂದಲೂ ಸರ್ಕಾರ ಬೀಳುತ್ತದೆ ಎಂದು ಹೇಳುತ್ತಾ ಬರುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗಲ್ಲ ಎಂದು ಬಿಎಸ್‍ವೈ ಹೇಳಿಕೆಗೆ ತಿರುಗೇಟು ನೀಡಿದರು.

  • ಬೋಜೇಗೌಡರನ್ನು ಮರಳಲ್ಲಿ ಹೂತ ಸಾರಾ ಮಹೇಶ್!

    ಬೋಜೇಗೌಡರನ್ನು ಮರಳಲ್ಲಿ ಹೂತ ಸಾರಾ ಮಹೇಶ್!

    ಉಡುಪಿ: ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಅವರು ಮೂಳೂರು ಬೀಚ್‍ನಲ್ಲಿ ಸುಡು ಬಿಸಿಲಿನಲ್ಲಿ ಮರಳಿನಲ್ಲಿ ಶಾಸಕ ಬೋಜೇಗೌಡರನ್ನು ಸ್ಯಾಂಡ್ ಥೆರಪಿಗಾಗಿ ಹೂತುಹಾಕಿದ್ದಾರೆ.

    ಚುನಾವಣಾ ಪ್ರಚಾರದ ಬಳಿಕ ಸಿಎಂ, ಮಾಜಿ ಪಿಎಂ ಜೊತೆ ಸಚಿವರು ಜೆಡಿಎಸ್ ಶಾಸಕರು ಉಡುಪಿಯ ಸಾಯಿರಾಧ ಹೆಲ್ತ್ ರೆಸಾರ್ಟ್ ನಲ್ಲಿ ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಉಡುಪಿಯ ಕಾಪುವಿನ ಮೂಳೂರು ರೆಸಾರ್ಟಿ ನಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಇಬ್ಬರು ವರಿಷ್ಠರಿಗೆ ಜೆಡಿಎಸ್ ನಾಯಕರು, ಸಚಿವರು ಸಾಥ್ ಕೊಟ್ಟಿದ್ದಾರೆ.

    ಈ ಸಂದರ್ಭ ಸ್ಯಾಂಡ್ ಥೆರಪಿ ಪಡೆಯುತ್ತಿದ್ದ ಬೋಜೇಗೌಡರನ್ನು ಸಾರಾ ಮಹೇಶ್ ಅವರು ಮರಳಿನಲ್ಲಿ ಹೂತು ಹಾಕಿದ್ದರು. ಸ್ಯಾಂಡ್ ತೆರೆಪಿ ಬಳಿಕ ಸುಡುವ ಮರಳಿನಿಂದ ಪಾರಾಗಲು ಬೋಜೇಗೌಡರು ಸಮುದ್ರಕ್ಕೆ ಹಾರಿದರು.

    ಈ ವೇಳೆ ಸಾರಾ ಮಹೇಶ್ ಹಾರೆಯಿಂದ ಬೊಜೇಗೌಡರಿಗೆ ತಲೆಯವರೆಗೆ ಮರಳು ಹಾಕುತ್ತ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಸುಡು ಬಿಸಿಲಿಗೆ ಮರಳು ಬಿಸಿಯಾಗಿದ್ದು, ಮರಳಿನಲ್ಲಿದ್ದ ಬೋಜೇಗೌಡರು ಎದ್ದು ಬಿದ್ದು ಸಮುದ್ರದ ಕಡೆ ಓಡಿ ಸಮುದ್ರಸ್ನಾನ ಮಾಡಿದರು. ಈ ದೃಶ್ಯವು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

  • ಸಚಿವ ಸಾರಾ ಮಹೇಶ್ ಕಾರು ತಡೆದಿದ್ದ ಮುಖ್ಯಪೇದೆ ಅಮಾನತು

    ಸಚಿವ ಸಾರಾ ಮಹೇಶ್ ಕಾರು ತಡೆದಿದ್ದ ಮುಖ್ಯಪೇದೆ ಅಮಾನತು

    ಮೈಸೂರು: ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾರಾ ಮಹೇಶ್ ಅವರ ಕಾರನ್ನು ತಡೆದಿದ್ದ ಮುಖ್ಯ ಪೇದೆಯನ್ನು ಅಮಾನತುಗೊಳಿಸಲಾಗಿದೆ.

    ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಮುಖ್ಯ ಪೇದೆ ವೆಂಕಟೇಶ್ ಅಮಾನತುಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ವಿಜಯ್‍ಶಂಕರ್ ನಾಮಪತ್ರ ಸಲ್ಲಿಕೆ ವೇಳೆ ಮೂರು ಕಾರುಗಳಿಗೆ ಅವಕಾಶವಿದ್ದರೂ, ಸಚಿವರ ಕಾರಿಗೆ ಮುಖ್ಯಪೇದೆ ತಡೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿಯ ದೇವರಾಜು ಅರಸು ಜಂಕ್ಷನ್ ಬಳಿಯೇ ಕಾರು ತಡೆದಿದ್ದ ವೆಂಕಟೇಶ್ ಅವರನ್ನು ಇದೀಗ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

    ಸಾರಾಮಹೇಶ್ ಸ್ಪಷ್ಟನೆ:
    ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, ಮುಖ್ಯ ಪೇದೆಯೊಬ್ಬರು ಅನುಚಿತವಾಗಿ ವರ್ತಿಸಿದ್ದು ನಿಜ. ನಾಮಪತ್ರ ಸಲ್ಲಿಕೆ ವೇಳೆ ಜಿಲ್ಲಾಧಿಕಾರಿ ಕಚೇರಿ ಸುತ್ತ 100 ಮೀಟರ್ ನಿಷೇಧಾಜ್ಞೆ ಇತ್ತು. ಆದರೆ ಅವರು ನನ್ನ ಕಾರನ್ನು ಅರ್ಧ ಕಿಲೋ ಮೀಟರ್ ಹಿಂದೆ ತಡೆದಿದ್ದರು. ಮುಖ್ಯ ಪೇದೆಗೆ ಕಾನೂನಿನ ಅರಿವಿರಲಿಲ್ಲ. ಈ ಬಗ್ಗೆ ನನ್ನ ಜೊತೆಯಿದ್ದವರು ತಿಳಿಸಿದರೂ ಅದನ್ನು ಒಪ್ಪಲು ಸಿದ್ಧರಿರಲಿಲ್ಲ. ಇದಾದ ನಂತರ ಹಿರಿಯ ಅಧಿಕಾರಿಗಳು ಬಂದು ಅವರಿಗೆ ತಿಳಿ ಹೇಳಿ ಕಾರನ್ನು ಬಿಟ್ಟರು. ಈ ಬಗ್ಗೆ ಪರಿಶೀಲನೆ ನಡೆಸಿ ಕರ್ತವ್ಯ ಲೋಪವೆಸಗಿದ ಮುಖ್ಯಪೇದೆಯನ್ನು ಅಮಾನತುಗೊಳಿಸಿರಬಹುದು. ಈ ಬಗ್ಗೆ ನಾನು ಯಾವುದೇ ದೂರು ನೀಡಿಲ್ಲ ಎಂದು ಸಾ.ರಾ ಮಹೇಶ್ ಸ್ಪಷ್ಟನೆ ನೀಡಿದ್ದಾರೆ.

  • ಸುಮಲತಾ ವಿರುದ್ಧ ಸಾರಾ ಮಹೇಶ್ ವಾಗ್ದಾಳಿ

    ಸುಮಲತಾ ವಿರುದ್ಧ ಸಾರಾ ಮಹೇಶ್ ವಾಗ್ದಾಳಿ

    ಮೈಸೂರು: ಕಾಂಗ್ರೆಸ್‍ಗೆ ಎಚ್ಚರಿಕೆ ನೀಡಿದ ಸಚಿವ ಸಾರಾ ಮಹೇಶ್ ಸುಮಲತಾ ಅಂಬರೀಶ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ನಿಖೀಲ್ ಪರ ಪ್ರಚಾರ ಸಮಾರಂಭ ಉದ್ದೇಶಿಸಿ ಮಾತನಾಡಿದ ಸಚಿವರು, ಅಂಬರೀಶ್ ನನ್ನ ತಲೆಗೆ ರಾಜಕೀಯ ಸಾಕು ಎಂದಿದ್ದರು. ನಿಖಿಲ್ ಮತ್ತು ಅಭಿಷೇಕ್ ಆತ್ಮೀಯ ಸ್ನೇಹಿತರು ಎಂದರು.

    ನಿಖಿಲ್‍ರನ್ನು ಸುಮಲತಾ ತಮ್ಮ ಮಗ ಎಂದು ಹೇಳಿದ್ರು. ಮಗನಿಗೆ ಸುಮಲತಾ ಅವರು ಆಶೀರ್ವಾದ ಮಾಡಬೇಕಿತ್ತು. ಆದರೆ ಸುಮಲತಾ ಅವರು ನಿಖಿಲ್ ವಿರುದ್ಧ ಪ್ರಹಾರ ಮಾಡಲು ನಿಂತಿದ್ದಾರೆ. ಎಲ್ಲರೂ ಅಭಿಷೇಕ್ ಸಿನಿಮಾ ನೋಡಿ, ಬೇಕಾದ್ರೆ ಹೆಚ್ಚಿನ ಹಣ ಕೊಟ್ಟು ಬ್ಲಾಕ್ ಟಿಕೆಟ್ ಪಡೆದು ಸಿನಿಮಾ ನೋಡಿ. ಆದರೆ ಕುಮಾರಣ್ಣನ ಮಗ ರಾಜ್ಯದ ನೇತಾರನಾಗಬೇಕು ಎಂದಿದ್ದಾರೆ.

    ಕಾಂಗ್ರೆಸ್ ಗೆ ಎಚ್ಚರಿಕೆ:
    ಮೈತ್ರಿ ಧರ್ಮದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡಿಕೊಂಡಿರುವ ದೋಸ್ತಿ ಪಕ್ಷಗಳ ನಡುವೆ ಹೊಂದಾಣಿಕೆ ಕಷ್ಟವಾಗುತ್ತಿದ್ಯಾ ಎಂಬ ಅನುಮಾನ ಮೂಡಿದ್ದು, ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಕೂಡ ಪ್ರತಿಧ್ವನಿಸಲಿದೆ ಎಂದು ಸಾರಾ ಮಹೇಶ್ ಪರೋಕ್ಷವಾಗಿ ಕಾಂಗ್ರೆಸ್ಸಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

    ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ, ನಮ್ಮ ಅಂತರ ಇದ್ದೆ ಇರುತ್ತದೆ. ಮೈತ್ರಿಯಾಗಿ ಸರ್ಕಾರ ನಡೆಸುತ್ತಿದ್ದೇವೆ. ಆದರೆ ಕಾಂಗ್ರೆಸ್ ಸ್ನೇಹಿತರೇ ನೀವು ಮಂಡ್ಯದಲ್ಲಿ ನಮ್ಮನ್ನು ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ – ಸಾರಾ ಮಹೇಶ್ ಎಚ್ಚರಿಕೆ

    ಸುಮಲತಾ, ನಿಖಿಲ್ ಪ್ರಚಾರ:
    ಮಂಡ್ಯ ಕುರುಕ್ಷೇತ್ರದಲ್ಲಿ ನಾನಾ ನೀನಾ ಅಂತ ಜಿದ್ದಿಗೆ ಬಿದ್ದಿರುವ ಸುಮಲತಾ ಹಾಗೂ ನಿಖಿಲ್‍ರ ಅಬ್ಬರದ ಪ್ರಚಾರ ಇಂದು ಮುಂದುವರಿಯಲಿದೆ. ಸುಮಲತಾ ಅಂಬರೀಷ್ ಮೈಸೂರು ಜಿಲ್ಲೆ ಕೆಆರ್ ನಗರ ಭಾಗದಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ. ಹೀಗಾಗಿ ಬಿಎಸ್‍ವೈ ಭೇಟಿಯನ್ನು ಸುಮಲತಾ ಮುಂದೂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯಲ್ಲಿ ಸಂಚರಿಸಿ ಮತಬೇಟೆಯಾಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರ ಕೆಡವಲು ಯತ್ನಿಸುತ್ತಿರೋ ಬಿಎಸ್‍ವೈಗೆ ಎಚ್‍ಡಿಡಿ ಶಾಕ್

    ಸರ್ಕಾರ ಕೆಡವಲು ಯತ್ನಿಸುತ್ತಿರೋ ಬಿಎಸ್‍ವೈಗೆ ಎಚ್‍ಡಿಡಿ ಶಾಕ್

    ಮೈಸೂರು: `ಆಪರೇಷನ್ ಕಮಲ’ ಮೂಲಕ ತಮ್ಮ ಕಿರಿ ಮಗನ ಸರ್ಕಾರವನ್ನು ಕೆಡವಲು ಯತ್ನಿಸಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ ಮಾಜಿ ಪ್ರಧಾನಿ ದೇವೇಗೌಡರು ಶಾಕ್ ಕೊಟ್ಟಿದ್ದಾರೆ.

    ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಬಿಜೆಪಿ ಜೊತೆಗಿನ ಮೈತ್ರಿಗೆ ಇತಿಶ್ರೀ ಹಾಡಿರುವ ಗೌಡರು ಕಾಂಗ್ರೆಸ್ ಜೊತೆಗೆ ಹೊಂದಾಣಿಕೆಗೆ ನಿರ್ಧರಿಸಿದ್ದಾರೆ. ಈ ಮೂಲಕ ಕೈಗೆ ಬಂದ ಅಧಿಕಾರದ ತುತ್ತು ಬಿಜೆಪಿ ಬಾಯಿಯಿಂದ ತಪ್ಪಿದೆ. ಜೆಡಿಎಸ್‍ಗೆ ಅಧ್ಯಕ್ಷ ಸ್ಥಾನ, ಕಾಂಗ್ರೆಸ್‍ಗೆ ಉಪಾಧ್ಯಕ್ಷ ಸ್ಥಾನ ದಕ್ಕಲಿದ್ದು, ಇಂದು ಚುನಾವಣೆ ನಡೆಯಲಿದೆ.

    ವಿಧಾನಸೌಧದಲ್ಲಿರುವ ಮೈತ್ರಿ ಧರ್ಮವನ್ನು ಸಿದ್ದರಾಮಯ್ಯ ಊರಲ್ಲೂ ಪಾಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಮತ್ತು ಸಚಿವ ಸಾರಾ ಮಹೇಶ್‍ಗೆ ನಿರ್ದೇಶಿಸಿದ್ದಾರೆ. ಇದನ್ನೂ ಓದಿ: ಲೋಕಸಭೆಯಲ್ಲೂ ಜೊತೆಗೆ ಇರ್ತೀರಾ ಬಿಡಿ: ಸಾರಾ ಮಹೇಶ್ ಕಾಲೆಳೆದ ಪ್ರತಾಪ್ ಸಿಂಹ

    ಮೈಸೂರು ಜಿ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇವೆ. ಅದಕ್ಕಾಗಿ ನಾವು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಮೈಸೂರು ಜಿಲ್ಲಾಪಂಚಾಯ್ತಿ ಹೊಂದಾಣಿಕೆ ಬಗ್ಗೆ ಸಚಿವ ಸಾ.ರಾ.ಮಹೇಶ್ ಹೇಳಿಕೆ ನೀಡಿದ್ದರು.

    ನಾನು ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆ ಮಾತನಾಡಿದ್ದೇನೆ. ಸ್ಥಳೀಯ ಮಟ್ಟದ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾವು ಈ ಸಂದರ್ಭದಲ್ಲಿ ನಿರ್ಧಾರ ಬದಲಿಸಲು ಸಾಧ್ಯವಿಲ್ಲ. ಸದಸ್ಯರ ಮನಸ್ಥಿತಿಯನ್ನ ಅರ್ಥ ಮಾಡಿಕೊಂಡು ನಾವು ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇವೆ. ಅಂದು ಕಾಂಗ್ರೆಸ್ ಜೊತೆಗಿನ ಸಂಬಂಧ ಹಾಳಾಗಿದ್ದ ಸಂಧರ್ಬದಲ್ಲಿ ತೆಗೆದುಕೊಂಡ ನಿರ್ಧಾರ ಮಾಡಿರೋದು. ಯಾರು ಅಧ್ಯಕ್ಷ ಉಪಾಧ್ಯಕ್ಷ ಅದು ಸಹ ನಿರ್ಣಯ ಆಗಿದೆ ಎಂದು ಸಚಿವರು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಸಭೆಯಲ್ಲೂ ಜೊತೆಗೆ ಇರ್ತೀರಾ ಬಿಡಿ: ಸಾರಾ ಮಹೇಶ್ ಕಾಲೆಳೆದ ಪ್ರತಾಪ್ ಸಿಂಹ

    ಲೋಕಸಭೆಯಲ್ಲೂ ಜೊತೆಗೆ ಇರ್ತೀರಾ ಬಿಡಿ: ಸಾರಾ ಮಹೇಶ್ ಕಾಲೆಳೆದ ಪ್ರತಾಪ್ ಸಿಂಹ

    ಮೈಸೂರು: ಲೋಕಸಭಾ ಚುನಾವಣೆಯಲ್ಲೂ ನೀವು ಜೊತೆಗೆ ಇರ್ತೀರಾ ಬಿಡಿ ಎಂದು ಸಂಸದ ಪ್ರತಾಪ್ ಸಿಂಹ ಅವರು ಜೆಡಿಎಸ್ ಸಚಿವರ ಕಾಲೆಳೆದಿದ್ದಾರೆ.

    ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದರು, ಇದು ಹಳೇ ದೋಸ್ತಿ. ಈಗ ಮುಂದುವರಿಯುತ್ತಿದೆ ಅಷ್ಟೇ. ಈ ಹಿಂದೆ ಕಯಬಂಳಿ ನಟರಾಜ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಿ, 30 ತಿಂಗಳ ಬಳಿಕ ಅಧಿಕಾರ ಬಿಟ್ಟುಕೊಡುವಂತೆ ತಿಳಿಸಿದ್ದೇವು. ಹೀಗಾಗಿ ನಾಳೆ ಹೊಸಬರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನಾಗಿ ಮಾಡಲಾಗುತ್ತಿದೆ ಎಂದರು.

    ಬಿಜೆಪಿಯ ಅಭ್ಯರ್ಥಿ ಯಾರು ಎಂದು ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ, ನಾಳೆ… ನಾಳೆ ಬೆಳಗ್ಗೆ ಹೇಳುತ್ತೇವೆ ಎಂದು ಸಂಸದರು ನಗೆ ಹರಿಸಿದರು. ಇದನ್ನು ಓದಿ: ಬಿಜೆಪಿಗೆ ಮಾತು ಕೊಟ್ಟಿದ್ದೇವೆ, ದೋಸ್ತಿ ಕೈಬಿಡುವ ನಿರ್ಧಾರವಿಲ್ಲ: ಸಾರಾ ಮಹೇಶ್

    ಲೋಕಸಭೆಯಲ್ಲಿ ಮೈಸೂರಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಇರುತ್ತದೇಯೇ ಎಂದು ಮಾಧ್ಯಮದವರು ಸಚಿವ ಜಿ.ಟಿ.ದೇವೇಗೌಡ ಅವರಿಗೆ ಕೇಳಿದರು. ಈ ವೇಳೆ ಪಕ್ಕದಲ್ಲಿಯೇ ನಿಂತಿದ್ದ ಸಚಿವ ಸಾರಾ ಮಹೇಶ್ ಅವರು, ಈಗ ಜೊತೆಯಾಗಿ ಇರುತ್ತೇವೆ. ಆದರೆ ಲೋಕಸಭೆಯಲ್ಲಿ ವಿರುದ್ಧವಾಗಿಯೇ ಮತ ಕೇಳುತ್ತೇವೆ ಎಂದರು. ಇದಕ್ಕೆ ನಗುತ್ತಲೇ ಪ್ರತ್ಯುತರ ಕೊಟ್ಟ ಸಂಸದ ಲೋಕಸಭೆಯಲ್ಲೂ ಜೊತೆಯಾಗಿಯೇ ಇರ್ತೀರಾ ಬಿಡಿ ಸಚಿವರ ಕಾಲೆಳೆದರು. ಇಬ್ಬರ ಮಧ್ಯ ನಿಂತಿದ್ದ ಸಚಿವ ಜಿ.ಟಿ.ದೇವೇಗೌಡ ಅವರು ಮಾತ್ರ ನಗುತ್ತಲೇ ನಿಂತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿಗೆ ಮಾತು ಕೊಟ್ಟಿದ್ದೇವೆ, ದೋಸ್ತಿ ಕೈಬಿಡುವ ನಿರ್ಧಾರವಿಲ್ಲ: ಸಾರಾ ಮಹೇಶ್

    ಬಿಜೆಪಿಗೆ ಮಾತು ಕೊಟ್ಟಿದ್ದೇವೆ, ದೋಸ್ತಿ ಕೈಬಿಡುವ ನಿರ್ಧಾರವಿಲ್ಲ: ಸಾರಾ ಮಹೇಶ್

    – ಕಾಂಗ್ರೆಸ್ ಜೊತೆಗೆ ಸಂಬಂಧ ಹಾಳಾಗಿದ್ದಾಗ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧ
    – ದೋಸ್ತಿ ಶಾಸಕರ ವಿರುದ್ಧ ಹರಿಹಾಯ್ದ ಸಚಿವ

    ಮೈಸೂರು: ಜಿಲ್ಲಾ ಪಂಚಾಯತ್ ಮೈತ್ರಿ ವಿಚಾರದಲ್ಲಿ ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇವೆ. ಹೀಗಾಗಿ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ತಿಳಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜೊತೆ ಮಾತನಾಡಿದ್ದೇನೆ. ಸ್ಥಳೀಯ ಮಟ್ಟದ ಪರಿಸ್ಥಿತಿಗೆ ಅನುಗುಣವಾಗಿ ಹೊಂದಾಣಿಕೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ನಾವು ನಿರ್ಧಾರ ಬದಲಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಜಿಲ್ಲಾ ಪಂಚಾಯತ್ ಸದಸ್ಯರ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ನಾವು ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇವೆ. ಈ ಹಿಂದೆ ಕಾಂಗ್ರೆಸ್ ಜೊತೆಗಿನ ಸಂಬಂಧ ಹಾಳಾಗಿದ್ದಾಗ ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆಯ ನಿರ್ಧಾರ ಮಾಡಿಕೊಂಡಿದ್ದೇವು. ಮುಂದಿನ ಅವಧಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಯಾರು ಎನ್ನುವುದು ನಿರ್ಣಯವಾಗಿದೆ ಎಂದು ತಿಳಿಸಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂಬ ಶಾಸಕ ನಾರಾಯಣ ರಾವ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಸಾರಾ ಮಹೇಶ್ ಅವರು, ಸಿದ್ದರಾಮಯ್ಯ ಅವರನ್ನು ಓಲೈಸಲು ಹೇಳಿಕೆ ಕೊಟ್ಟಿದ್ದಾರೆ. ಇಲ್ಲವೇ ಸಚಿವ ಸ್ಥಾನ ಅಥವಾ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಲಿ ಎಂದು ಹೊಗಳಿದ್ದಾರೆ ಎಂದು ತಿರುಗೇಟು ಕೊಟ್ಟರು.

    ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಾವು ಶಾಸಕ ನಾರಾಯಣ ರಾವ್ ರೀತಿ ಮಾತನಾಡಬಹುದು. ಆದರೆ ನಮ್ಮ ರಾಜ್ಯದ, ರಾಷ್ಟ್ರದ ನಾಯಕರು ದೋಸ್ತಿ ಪಕ್ಷದ ವಿರುದ್ಧ ಮಾತನಾಡದಂತೆ ಸೂಚನೆ ಕೊಟ್ಟಿದ್ದಾರೆ. ಯಾವುದೇ ವಿಚಾರವಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ. ಬಹಿರಂಗವಾಗಿ ಯಾವುದೇ ಕಾರಣಕ್ಕೂ ಚರ್ಚೆ ಬೇಡವೆಂದು ತಿಳಿಸಿದ್ದಾರೆ. ನಾವು ಸಹ ಕಾದು ನೋಡುತ್ತೇವೆ. ಕಾಂಗ್ರೆಸ್ ನಾಯಕರು ತಮ್ಮ ಶಾಸಕರಿಗೆ ಈಗಲಾದರೂ ಎಚ್ಚರಿಕೆ ಕೊಡಲಿ ಎಂದು ಗುಡುಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 50 ಕೋಟಿ ಕೊಡ್ತೀವಿ ಬನ್ನಿ, ಕೈ ಶಾಸಕರಿಗೆ ಬಿಜೆಪಿ ಆಮಿಷ- ಮಾಜಿ ಸಿಎಂ ಹೊಸ ಬಾಂಬ್

    50 ಕೋಟಿ ಕೊಡ್ತೀವಿ ಬನ್ನಿ, ಕೈ ಶಾಸಕರಿಗೆ ಬಿಜೆಪಿ ಆಮಿಷ- ಮಾಜಿ ಸಿಎಂ ಹೊಸ ಬಾಂಬ್

    ಕೊಪ್ಪಳ/ಮೈಸೂರು: ಕೆಲವು ಜೆಡಿಎಸ್ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಅವರು ಭಾನುವಾರವೂ ಸಂಪರ್ಕಿಸಿದ್ದಾರೆ ಎಂದು ಮೈಸೂರಿನಲ್ಲಿ ಸಚಿವ ಸಾ.ರಾ ಮಹೇಶ್ ಆರೋಪಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಹೊಸ ಬಾಂಬ್ ಸಿಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಬಿಜೆಪಿಯವರಿಗೆ ಅಧಿಕಾರದ ಭ್ರಮೆ ಹಿಡಿದುಬಿಟ್ಟಿದೆ. ನಮ್ಮ ಶಾಸಕರಿಗೆ 50 ಕೋಟಿ ರೂ. ಆಫರ್ ಮಾಡುತ್ತಾರೆ. ಅವರಿಗೆ ಎಲ್ಲಿಂದ ಈ ಹಣ ಬರುತ್ತಿದೆ. ಅಲ್ಲದೆ ಒಂದು ವಾರ ಹರಿಯಾಣದ ಸ್ಟಾರ್ ಹೊಟೇಲಿನಲ್ಲಿ ಉಳಿದುಕೊಂಡಿದ್ದರಲ್ವ ಅದಕ್ಕೂ ಎಲ್ಲಿಂದ ಹಣ ಬಂದಿದೆ. 50 ಕೋಟಿ ರೂ.ನಂತೆ 20 ಶಾಸಕರಿಗೆ ಆಫರ್ ಮಾಡ್ತಾರೆ. ಈ ದುಡ್ಡು ಅವರಿಗೆ ಎಲ್ಲಿಂದ ಬರುತ್ತದೆ. ಸಾರ್ವಜನಿಕರ ಹಣವನ್ನು ಅವರು ಲೂಟಿ ಹೊಡೆದಿದ್ದಾರೆ. ಇದೀಗ ಮತ್ತೆ ಲೂಟಿ ಹೊಡೆಯಲು ಅವರಿಗೆ ಅಧಿಕಾರ ಬೇಕು ಎಂದು ಹೇಳಿದ್ರು.

    ಸಾರಾ ಮಹೇಶ್ ಆರೋಪವೇನು..?
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಾ.ರಾ ಮಹೇಶ್, ಕೆಲವರನ್ನು ಅಧಿವೇಶನಕ್ಕೆ ಬಾರದಂತೆ ತಡೆಯಲು ಬಿಜೆಪಿ ಮುಂದಾಗಿದೆ. ಬಿಜೆಪಿ ಅವರು ಕೆಲ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರಿಗೆ ಹಣ ಹಾಗೂ ಮಂತ್ರಿ ಸ್ಥಾನದ ಅಮಿಷವೊಡ್ಡಿದ್ದಾರೆ. ಬಿಜೆಪಿ ಅವರು ಹೇಗೆ ಶಾಸಕರನ್ನು ಮಂತ್ರಿ ಮಾಡುತ್ತಾರೋ ಗೊತ್ತಿಲ್ಲ. ಆಪರೇಷನ್ ಕಮಲದ ಬಗ್ಗೆ ನಾವು ಸಿಎಂ ಕುಮಾರಸ್ವಾಮಿ ಗಮನಕ್ಕೆ ತಂದಿದ್ದೇವೆ. ಖುದ್ದು ಶಾಸಕರೇ ಬಿಜೆಪಿ ಅವರು ತಮ್ಮನ್ನು ಸಂಪರ್ಕಿಸಿರುವ ಬಗ್ಗೆ ಸಿಎಂಗೆ ತಿಳಿಸಿದ್ದಾರೆ. ಬಿಜೆಪಿಯವರು ದಿನ ಒಂದೊಂದು ಸುಳ್ಳು ಹೇಳುತ್ತಾ ಸರ್ಕಾರ ಸ್ಥಿರವಾಗಿಲ್ಲ ಎಂದು ಬಿಂಬಿಸುವ ಪ್ರಯತ್ನ ನಡೆಸಿದೆ ಎಂದು ಟೀಕಿಸಿದರು.

    ರಾಜ್ಯ ಬಿಜೆಪಿ ನಾಯಕರಿಗೆ ಕೇಂದ್ರದ ನಾಯಕರು ತಿಳುವಳಿಕೆ ಹೇಳಬೇಕು. ನಾವು ಅಧಿಕಾರ ಸ್ವೀಕಾರ ಮಾಡಿದ ದಿನದಿಂದಲೂ ಬಿಜೆಪಿ ಅಧಿಕಾರದ ದಾಹದಿಂದ ನಮಗೆ ತೊಂದರೆ ಕೊಡುತ್ತಿದೆ. ಈಗ ಕೊನೆಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ರಾಜ್ಯದ ಜನರು ಇದೆಲ್ಲವನ್ನು ನೋಡುತ್ತಿದ್ದಾರೆ. ಬಿಜೆಪಿ ಇಂತಹ ಅಸಹ್ಯ ರಾಜಕಾರಣ ಮಾಡಬಾರದು ಎಂದ ಅವರು, ಹಿಂದೆ ಹೇಳಿದಂತೆ ಬಿಜೆಪಿಯ ಕೆಲ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲವೂ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನೀವೇ ಕಾದು ನೋಡಿ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv